Tag: Pavitra Gowda

  • ತನ್ನ ಸ್ವಾರ್ಥಕ್ಕಾಗಿ ನಮ್ಮನ್ನಿಲ್ಲಿ ಕೊಳೆಯುವಂತೆ ಮಾಡಿದ್ದಾನೆ – ದರ್ಶನ್‌ ವಿರುದ್ಧವೇ ಗ್ಯಾಂಗ್‌ ಸದಸ್ಯರ ಅಸಮಾಧಾನ?

    ತನ್ನ ಸ್ವಾರ್ಥಕ್ಕಾಗಿ ನಮ್ಮನ್ನಿಲ್ಲಿ ಕೊಳೆಯುವಂತೆ ಮಾಡಿದ್ದಾನೆ – ದರ್ಶನ್‌ ವಿರುದ್ಧವೇ ಗ್ಯಾಂಗ್‌ ಸದಸ್ಯರ ಅಸಮಾಧಾನ?

    – ಬೇರೆ ಜೈಲಿಗೆ ಶಿಫ್ಟ್‌ ಆಗೋದಕ್ಕೂ ದರ್ಶನ್‌ ಅಡ್ಡಿ ಅಂತ ಬೇಸರ

    ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಮಾಡಿದ ಪ್ರಕರಣದಲ್ಲಿ (Renukaswamy Murder Case) ಬಂಧನವಾಗಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ದರ್ಶನ್ ಅಂಡ್ ಗ್ಯಾಂಗ್ (Darshan And Gang) ನಡುವೆ ಒಡಕು ಮೂಡಿದೆ. ಸ್ವತಃ ಗ್ಯಾಂಗ್‌ನ ಸದಸ್ಯರೇ ದರ್ಶನ್‌ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ ಅನ್ನೋದು ಮೂಲಗಳಿಂದ ತಿಳಿದುಬಂದಿದೆ.

    ಹೌದು. ದರ್ಶನ್, ಪ್ರದೋಷ್, ಲಕ್ಷ್ಮಣ್, ಅನ್ಬುಕುಮಾರ್, ಜಗದೀಶ್, ನಾಗರಾಜ್, ಪವಿತ್ರಾಗೌಡ (Pavithra Gowda) ಅವರ ಜಾಮೀನನ್ನ ಸುಪ್ರೀಂ ಕೋರ್ಟ್ ವಜಾಗೊಳಿಸಿದ ಬಳಿಕ ಎಲ್ಲರನ್ನ ಪರಪ್ಪನ ಅಗ್ರಹಾರ ಜೈಲಿಗೆ ಕಳಿಸಲಾಗಿದೆ. ದರ್ಶನ್ ಅಂಡ್ ಗ್ಯಾಂಗ್ ನನ್ನ ಪರಪ್ಪನ ಅಗ್ರಹಾರದ ಜೈಲಿನ ಒಂದೇ ಬ್ಯಾರಕ್‌ನಲ್ಲಿ ಇರಿಸಲಾಗಿದೆ. ಇದನ್ನೂ ಓದಿ: Andhra Pradesh | ಕುದಿಯುತ್ತಿದ್ದ ಹಾಲಿನ ಪಾತ್ರೆಗೆ ಬಿದ್ದು ಒಂದೂವರೆ ವರ್ಷದ ಮಗು ಸಾವು

    ಮೊದಲ ಬಾರಿ ಜೈಲಿಗೆ ಹೋಗಿದ್ದಾಗ ದರ್ಶನ್‌ಗೆ ಬಳ್ಳಾರಿ ಜೈಲು ಸೇರಿದಂತೆ ಉಳಿದ ಆರೋಪಿಗಳಿಗೆ ಬೇರೆ ಬೇರೆ ಜೈಲಿನಲ್ಲಿ ಇರಿಸಲಾಗಿತ್ತು. ಆದೇ ರೀತಿ ಆಡಳಿತ ಹಾಗೂ ಭದ್ರತೆ ದೃಷ್ಠಿಯಿಂದ ಕಳೆದ ಬಾರಿ ಇದ್ದ ಜೈಲುಗಳಿಗೆ ದರ್ಶನ್ ಸೇರಿದಂತೆ ಗ್ಯಾಂಗ್ ಸದಸ್ಯರುಗಳಿಗೆ ಆಯಾ ಜೈಲಿಗೆ ಶಿಫ್ಟ್ ಮಾಡಬೇಕೆಂದು ಸರ್ಕಾರಿ ಪರ ವಕೀಲರು ಅರ್ಜಿ ಹಾಕಿಕೊಂಡಿದ್ದರು. ಟ್ರಯಲ್ ದಿನಾಂಕ ನಿಗದಿಯಾಗುವುದರಿಂದ ಪ್ರತಿಭಾರಿ ದರ್ಶನ್ ಅಂಡ್ ಗ್ಯಾಂಗ್ ಕರೆದುಕೊಂಡು ಬರಲು ಕಷ್ಟವಾಗುತ್ತೆ ಹಾಗಾಗಿ ಬೇರೆ ಜೈಲಿಗೆ ಶಿಫ್ಟ್ ಮಾಡಬಾರದು ಎಂದು ವಾದ ಮಾಡಿದ್ದರು. ವಾದ ಪ್ರತಿವಾದ ಆಲಿಸಿದ ನ್ಯಾಯಾದೀಶರು ದರ್ಶನ್ ಅಂಡ್ ಗ್ಯಾಂಗ್ ಜೈಲಿಗೆ ಹೋದ ದಿನದಿಂದ ದುರ್ವರ್ತನೆ ತೋರದ ಕಾರಣ ಬೇರೆ ಜೈಲಿಗೆ ಶಿಫ್ಟ್ ಮಾಡಲು ಆಗಲ್ಲ ಎಂದು ಕೋರ್ಟ್ ದರ್ಶನ್ ಅಂಡ್ ಗ್ಯಾಂಗ್ ಅನ್ನ ಬೇರೆ ಜೈಲುಗಳಿಗೆ ಶಿಫ್ಟ್ ಮಾಡಲು ಕೋರ್ಟ್ ನಿರಾಕರಿಸಿತ್ತು. ಇದನ್ನೂ ಓದಿ: ರಾಯಚೂರಿನಲ್ಲಿ ಸರ್ಕಾರಿ ಬಸ್ ಪಲ್ಟಿ – ಪ್ರಯಾಣಿಕನ ಕಾಲು ಮುರಿತ, 15 ಮಂದಿಗೆ ಗಾಯ

    ಇದು ದರ್ಶನ್ ಅಂಡ್ ಗ್ಯಾಂಗ್ ನಡುವೆ ಒಡಕು ಮೂಡಲು ಕಾರಣವಾಗಿದೆ ಎಂದು ಹೇಳಲಾಗ್ತಿದೆ. ಬೇರೆ ಜೈಲಿಗೆ ಶಿಫ್ಟ್ ಆಗುವ ವಿಚಾರದಲ್ಲಿ ದರ್ಶನ್ ಅಡ್ಡಿ ಆಗ್ತಿದ್ದಾರೆಂದು ಗ್ಯಾಂಗ್‌ನ ಸದಸ್ಯರು ಮನಸ್ತಾಪ ಮಾಡಿಕೊಂಡಿದ್ದಾರಂತೆ. ದರ್ಶನ್ ತಮ್ಮ ಸ್ವಾರ್ಥಕ್ಕಾಗಿ ನಮ್ಮನ್ನ ಇಲ್ಲಿ ಕೊಳೆಯುವಂತೆ ಮಾಡಿದ್ದಾರೆ. ಚಿತ್ರದುರ್ಗದ ಆರೋಪಿಗಳಾದ ಅನ್ಬುಕುಮಾರ್ ಹಾಗೂ ಜಗದೀಶ್ ಅಸಮಾಧಾನ ಹೊರ ಹಾಕುತ್ತಿದ್ದಾರಂತೆ. ಬೇರೆ ಜೈಲಿಗೆ ಶಿಫ್ಟ್ ಮಾಡಿದ್ದರೇ ನಮ್ಮ ಪೋಷಕರಿಗೆ ಬಂದು ಹೋಗುವುದಕ್ಕೆ ಅನುಕೂಲವಾಗುತ್ತಿತ್ತು. ಇವರ ಅನುಕೂಲಕ್ಕೆ ಬೇರೆ ಜೈಲಿಗೆ ಹೋಗದಂತೆ ಮಾಡಿಕೊಂಡರು ಎಂದು ಆರೋಪಿಗಳಾದ ಜಗದೀಶ್, ಅನ್ಬುಕುಮಾರ್ ದರ್ಶನ್ ಗ್ಯಾಂಗ್ ಉಳಿದ ಸದಸ್ಯರ ಬಳಿ ಅಸಮದಾನ ಹೊರಹಾಕುತ್ತಿದ್ದಾರಂತೆ. ಇದನ್ನೂ ಓದಿ: ಪಿಜಿಯಲ್ಲಿ ಯುವತಿ ಅನುಮಾನಾಸ್ಪದ ಸಾವು – ನೇತಾಡುತ್ತಿದ್ದ ಶವ ಕಂಡು ಹೊರಗೆ ಓಡಿದ ವಿದ್ಯಾರ್ಥಿನಿಯರು

  • ನಟ ದರ್ಶನ್ & ಗ್ಯಾಂಗ್‌ ಇಂದು ಕೋರ್ಟ್‌ಗೆ – ದೋಷಾರೋಪ ಹೊರಿಸಲಿರುವ ಕೋರ್ಟ್‌

    ನಟ ದರ್ಶನ್ & ಗ್ಯಾಂಗ್‌ ಇಂದು ಕೋರ್ಟ್‌ಗೆ – ದೋಷಾರೋಪ ಹೊರಿಸಲಿರುವ ಕೋರ್ಟ್‌

    ಬೆಂಗಳೂರು: ನಟ ದರ್ಶನ್, ಪವಿತ್ರಾ ಗೌಡ (Pavithra Gowda) ಸೇರಿದಂತೆ ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ (Renukaswamy Murder Case) 17 ಆರೋಪಿಗಳು ಇಂದು ಸಿಸಿಎಚ್ 64ರ ನ್ಯಾಯಾದೀಶರ (CCH 64 Court) ಮುಂದೆ ಹಾಜರಾಗಲಿದ್ದಾರೆ.

    ಎಲ್ಲಾ ಆರೋಪಿಗಳ ಹಾಜರಾತಿ ಬಳಿಕ ಚಾರ್ಜಸ್ ಫ್ರೇಮ್ ಪ್ರಕ್ರಿಯೆ ಶುರುವಾಗಲಿದೆ. ಎ೧ ಆರೋಪಿ ಪವಿತ್ರಾಗೌಡ (Pavithra Gowda) ಅಂತಾ ಕೂಗಿದಾಗ ಕಟಕಟೆಗೆ ಬರಬೇಕಿದೆ, ನಿಮ್ಮ ಮೇಲೆ ಐಪಿಸಿ ಸೆಕ್ಷನ್ 302 ಕೊಲೆಯತ್ನ, 364 ಕಿಡ್ನ್ಯಾಪ್, 202 ಸಾಕ್ಷಿನಾಶ ಕೇಸ್ ದಾಖಲಾಗಿದೆ. ಇದನ್ನ ನೀವು ಒಪ್ಕೊತೀರಾ ಅಥವಾ ಅಲ್ಲಗೆಳೆಯುತ್ತೀರಾ ಅಂತಾ ನ್ಯಾಯಾದೀಶರು ಕೇಳಲಿದ್ದಾರೆ.‌ ಇದನ್ನೂ ಓದಿ: ದೆಹಲಿಯಲ್ಲಿ ಅಕ್ರಮ ವಾಸ – 25 ಬಾಂಗ್ಲಾ ಪ್ರಜೆಗಳು ಅರೆಸ್ಟ್‌

    ಇಲ್ಲ ಸ್ವಾಮಿ ಇದೆಲ್ಲಾ ಸುಳ್ಳು ವಿಚಾರಣೆ ನಡೆಯಲಿ ಅಂತಾ ಆರೋಪಿಗಳು ಹೇಳಿಕೆ ನೀಡುವ ಸಾಧ್ಯತೆ ಇದೆ. ಇದೇ ರೀತಿ ಎಲ್ಲಾ 17 ಆರೋಪಿಗಳನ್ನ ಕರೆದು ಅವರ ಮೇಲೆ ದಾಖಲಾಗಿರೊ ಸೆಕ್ಷನ್ ಬಗ್ಗೆ ನ್ಯಾಯಾಧೀಶರು ವಿವರಣೆ ಕೇಳಲಿದ್ದಾರೆ. ಈ ಪ್ರಕ್ರಿಯೆ ಮುಗಿದ ಮೇಲೆ ದೊಷಾರೋಪ ನಿಗದಿ ಬಳಿಕ ಮುಂದೊಂದು ದಿನ ಟ್ರಯಲ್‌ಗೆ ದಿನಾಂಕ ನ್ಯಾಯಾಧೀಶರು ನಿಗದಿಪಡಿಸಲಿದ್ದಾರೆ. ಇದೇ ವೇಳೆ ಹಾಸಿಗೆ ತಲೆದಿಂಬು ನೀಡುವ ವಿಚಾರ ಕೂಡ ಚರ್ಚೆಗೆ ಬರುವ ಸಾಧ್ಯತೆ ಇದೆ. ಇದನ್ನೂ ಓದಿ: ಛತ್ತೀಸ್‌ಗಢ ಮದ್ಯ ಹಗರಣ | ಮಾಜಿ ಸಿಎಂ ಭೂಪೇಶ್ ಬಘೇಲ್ ಪುತ್ರ ಎಸಿಬಿ ಕಸ್ಟಡಿಗೆ

  • ಎ1 ಆರೋಪಿ ಪವಿತ್ರಾ ಗೌಡಗೆ ಮತ್ತೆ ಶಾಕ್ – ಜಾಮೀನು ಅರ್ಜಿ ವಜಾ

    ಎ1 ಆರೋಪಿ ಪವಿತ್ರಾ ಗೌಡಗೆ ಮತ್ತೆ ಶಾಕ್ – ಜಾಮೀನು ಅರ್ಜಿ ವಜಾ

    ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ (Renukaswamy Case) ಮತ್ತೆ ಜೈಲುಪಾಲಾಗಿರುವ ಎ1 ಆರೋಪಿ ಪವಿತ್ರಾ ಗೌಡ (Pavitra Gowda) ಜಾಮೀನು ಅರ್ಜಿಯನ್ನು 57ನೇ ಸೆಷನ್ಸ್ ಕೋರ್ಟ್ ವಜಾಗೊಳಿಸಿದೆ.

    ಪವಿತ್ರಾ ಗೌಡ ಪರ ವಕೀಲರು ತಾಂತ್ರಿಕ ಕಾರಣ ನೀಡಿ ಜಾಮೀನು ಅರ್ಜಿ ಸಲ್ಲಿಸಿದ್ದರು. ಈ ಕುರಿತು ಆ.30ರಂದು ಸೆಷನ್ಸ್ ಕೋರ್ಟ್ ವಿಚಾರಣೆ ನಡೆಸಿತ್ತು. ಈ ವೇಳೆ ಪವಿತ್ರಗೌಡ ಪರ ಹಿರಿಯ ವಕೀಲ ಬಾಲನ್ ವಾದ ಮಂಡಿಸಿ, ಪವಿತ್ರಗೌಡ ವಿರುದ್ಧ ಆರೋಪಪಟ್ಟಿಯನ್ನು ಬಿಎನ್‌ಎಸ್ (BNS) ಬದಲು ಸಿಆರ್‌ಪಿಸಿ (CRPC) ಅಡಿಯಲ್ಲಿ ಸಲ್ಲಿಕೆ ಮಾಡಿದ್ದಾರೆ. ಇದು ಕಾನೂನು ಬಾಹಿರವಾಗಿರುವುದರಿಂದ ಕಡ್ಡಾಯ ಜಾಮೀನಿಗೆ ನಮ್ಮ ಕಕ್ಷಿದಾರರು ಅರ್ಹರು, ಹೀಗಾಗಿ ಜಾಮೀನು ಮಂಜೂರು ಮಾಡುವಂತೆ ಕೋರಿದ್ದರು. ವಾದ-ಪ್ರತಿವಾದಗಳನ್ನು ಆಲಿಸಿದ್ದ ನ್ಯಾಯಾಲಯ ಸೆ.2ಕ್ಕೆ ಆದೇಶವನ್ನು ಕಾಯ್ದಿರಿಸಿತ್ತು. ಇದೀಗ ಎ1 ಆರೋಪಿ ಪವಿತ್ರಾ ಗೌಡ ಜಾಮೀನು ಅರ್ಜಿಯನ್ನು ವಜಾಗೊಳಿಸಿ ಆದೇಶ ಹೊರಡಿಸಿದೆ.ಇದನ್ನೂ ಓದಿ: ಗಂಗೆ, ತುಂಗೆಯ ಜೊತೆ ಧರ್ಮಸ್ಥಳ ಯಾತ್ರೆ ಹೊರಟ ಈಶ್ವರಪ್ಪ

    ಇನ್ನೂ ನಟ ದರ್ಶನ್ ಬಳ್ಳಾರಿ ಜೈಲಿಗೆ, ಜಗದೀಶ್ ಮತ್ತು ಲಕ್ಷ್ಮಣ್ ಶಿವಮೊಗ್ಗ ಜೈಲಿಗೆ, ನಾಗರಾಜ್ ಕಲಬುರಗಿ ಜೈಲಿಗೆ, ಪ್ರದೂಷ್ ಬೆಳಗಾವಿ ಜೈಲಿಗೆ ಶಿಫ್ಟ್ ಮಾಡುವಂತೆ ಹಾಗೂ ಪವಿತ್ರಾ ಗೌಡ ಮತ್ತು ಅನುಕುಮಾರ್ ಪರಪ್ಪನ ಅಗ್ರಹಾರ ಜೈಲಿನಲ್ಲೇ ಉಳಿಯುವಂತೆ ಸಲ್ಲಿಸಿರುವ ಅರ್ಜಿ ಹಾಗೂ ನಟ ದರ್ಶನ್‌ಗೆ ದಿಂಬು, ಬೆಡ್‌ಶೀಟ್ ಕೋರಿರುವ ಅರ್ಜಿಯ ಆದೇಶ ಇಂದು (ಸೆ.2) ಹೊರಬೀಳಲಿದೆ.

    ಆ.14ರಂದು ನಟ ದರ್ಶನ್, ಪವಿತ್ರಾ ಗೌಡ ಸೇರಿ 7 ಆರೋಪಿಗಳಿಗೆ ಹೈಕೋರ್ಟ್ (Karnataka Highcourt) ನೀಡಿದ್ದ ಜಾಮೀನು ಆದೇಶವನ್ನು ಸುಪ್ರೀಂ ಕೋರ್ಟ್ (Supreme Court)  ವಜಾಗೊಳಿಸಿತ್ತು.ಇದನ್ನೂ ಓದಿ: ಭೋವಿ ನಿಗಮದ ಅಕ್ರಮ; ಕಾಂಗ್ರೆಸ್ ಸರ್ಕಾರದ 60% ಕಮಿಷನ್‌ಗೆ ಸಾಕ್ಷಿ – ಜೆಡಿಎಸ್ ಕಿಡಿ

  • ಸಿನಿಮಾ ಗೆಲ್ಲಲು ಸ್ಟಾರ್ ನಟರೇ ಬೇಕಿಲ್ಲ: ರಮ್ಯಾ

    ಸಿನಿಮಾ ಗೆಲ್ಲಲು ಸ್ಟಾರ್ ನಟರೇ ಬೇಕಿಲ್ಲ: ರಮ್ಯಾ

    ದುಬಾರಿ ಬಜೆಟ್, ಸ್ಟಾರ್ ನಟರು ಇಲ್ಲದೇ ಸಿನಿಮಾ ಗೆಲ್ಲಿಸಬಹುದು ಎನ್ನುವುದಕ್ಕೆ ಸು ಫ್ರಂ ಸೋ ಸಿನಿಮಾ ಸಾಕ್ಷಿ ಎಂದಿದ್ದಾರೆ ನಟಿ ರಮ್ಯಾ. ದರ್ಶನ್ ರೀತಿಯ ಸ್ಟಾರ್ ನಟರು ಜೈಲಿಗೆ ಹೋದಾಗ, ಸಿನಿಮಾ ರಂಗ ಪಾತಾಳಕ್ಕೆ ಬೀಳುತ್ತದೆ. ಸ್ಟಾರ್ ನಟರು ಸಿನಿಮಾ ಮಾಡದೇ ಇದ್ದರೆ ಸಿನಿಮಾ ರಂಗಕ್ಕೆ ನಷ್ಟಕ್ಕೆ ತಿರುಗುತ್ತಾ? ಎಂದು ಕೇಳಲಾದ ಪ್ರಶ್ನೆಗೆ ರಮ್ಯಾ ಖಡಕ್ ಆಗಿಯೇ ಉತ್ತರ ನೀಡಿದ್ದಾರೆ. ಸು ಫ್ರಂ ಸೋನಲ್ಲಿ ಯಾವ ಸ್ಟಾರ್ ನಟರು ಇದ್ದಾರೆ?.. ಕಂಟೆಂಟ್ ಚೆನ್ನಾಗಿದ್ದರೆ ಸಿನಿಮಾ ಗೆಲ್ಲುತ್ತದೆ ಅಂದಿದ್ದಾರೆ ರಮ್ಯಾ.

    ದರ್ಶನ್ ಬಗ್ಗೆ ರಮ್ಯಾ ಹೇಳಿದ್ದೇನು?
    ದರ್ಶನ್ (Darshan) ಲೈಟ್ಬಾಯ್ ಆಗಿ ಬಂದ್ರೂ ಕಷ್ಟಪಟ್ಟು ಮೇಲೆ ಬಂದಿದ್ರು. ಆದ್ರೆ ಜೀವನ ಹಾಳುಮಾಡಿಕೊಂಡ್ರು ಅಂತ ನಟಿ ರಮ್ಯಾ (Actress Ramya) ಕೊಲೆ ಆರೋಪಿ ದಚ್ಚು ಬಗ್ಗೆ ಸಾಫ್ಟ್ ಕಾರ್ನರ್ ತೋರಿದ್ದಾರೆ. ಬೆಂಗಳೂರಿನಲ್ಲಿ (Bengaluru) ಮಾಧ್ಯಮಗಳೊಂದಿಗೆ ಮಾತನಾಡಿದ ನಟಿ, ನಾನು ಹೇಳಬೇಕಾದ್ದನ್ನೆಲ್ಲ ಹೇಳಿದ್ದೀನಿ. ದೂರು ಕೊಟ್ಮೇಲೆ ಬ್ಯಾಡ್ ಕಾಮೆಂಟ್ಸ್ ಬರ್ತಿಲ್ಲ. ಎಷ್ಟೋ ಜನ ಪೋನ್ ಸ್ವಿಚ್ ಆಫ್ ಮಾಡಿ ಮನೆ ಬಿಟ್ಟಿದ್ದಾರೆ. ಇನ್ನಷ್ಟು ಮಂದಿ ಅರೆಸ್ಟ್ ಆಗಿದ್ದಾರೆ. ದರ್ಶನ್ ಲೈಟ್ ಬಾಯ್ ಆಗಿ ಚಿತ್ರರಂಗಕ್ಕೆ ಬಂದವರಾಗಿದ್ದರೂ ಕಷ್ಟಪಟ್ಟು ಈ ಹಂತಕ್ಕೆ ಬಂದಿದ್ರು. ಆದ್ರೆ ಜೀವನ ಹಾಳು ಮಾಡಿಕೊಂಡ್ರು. ಹೀಗೆ ಆಗದೇ ಇದ್ದಿದ್ದರೇ ಇನ್ನಷ್ಟು ದೊಡ್ಡ ಮಟ್ಟಕ್ಕೆ ಬೆಳಿಯಬಹುದಿತ್ತು ಎಂದರಲ್ಲದೇ ಸುಪ್ರೀಂ ಕೋರ್ಟ್ ತೀರ್ಪು ಸ್ವಾಗತಿಸುವುದಾಗಿ ಹೇಳಿದರು.

    ಮುಂದುವರಿದು… ಸುಪ್ರೀಂ ತೀರ್ಪಿನಿಂದ ರೇಣುಕಾಸ್ವಾಮಿ ಹೆಂಡತಿ ಮಗುವಿಗೆ ನ್ಯಾಯ ಸಿಕ್ಕಿದೆ. ಈ ಬೆಳವಣಿಗೆಯಿಂದ ಹೆಣ್ಣುಮಕ್ಕಳಿಗೆ ಧೈರ್ಯ ಬಂದಿದೆ. ಎಲ್ಲ ಒಳ್ಳೆಯದಾಗಿದೆ ಅಂದುಕೊಳ್ತೀನಿ ಅಂತ ಹೇಳಿದ್ದಾರೆ. ಇನ್ನೂ ದರ್ಶನ್ ಪತ್ನಿ ವಿಜಯಲಕ್ಷ್ಮಿ, ಸೋಶಿಯಲ್ ಮೀಡಿಯಾ ಹ್ಯಾಂಡಲ್ ಜವಾಬ್ದಾರಿ ಹೊತ್ತ ವಿಚಾರಕ್ಕೆ ಪ್ರತಿಕ್ರಿಯಿಸಿ, ಈ ನಡೆಯನ್ನು ಸ್ವಾಗತಿಸುತ್ತೀನಿ ಅಂದರು. ಇದು ಒಳ್ಳೆ ಬೆಳವಣಿಗೆ, ಅಭಿಮಾನಿಗಳಿಗೆ ವಿಜಯಲಕ್ಷ್ಮಿ ಈ ಮೂಲಕ ಒಳ್ಳೆ ಸಂದೇಶ ಕೊಡಬಹುದು. ಅವರು ಸಹ ಹೆಣ್ಣು, ಹೀಗಾಗಿ ಇದು ಒಳ್ಳೆ ಬೆಳವಣಿಗೆ ಅಂತಿನಿ ಅಂದರು.

  • ದರ್ಶನ್ ಜೈಲಿಗೆ ಹೋಗಿದ್ದು ಬೇಸರ ತಂದಿದೆ, ಅಕ್ಕಪಕ್ಕದವ್ರ ಸಹವಾಸ ಬಿಡ್ಬೇಕು – ರಮ್ಯಾ ಸಾಫ್ಟ್ ಕಾರ್ನರ್

    ದರ್ಶನ್ ಜೈಲಿಗೆ ಹೋಗಿದ್ದು ಬೇಸರ ತಂದಿದೆ, ಅಕ್ಕಪಕ್ಕದವ್ರ ಸಹವಾಸ ಬಿಡ್ಬೇಕು – ರಮ್ಯಾ ಸಾಫ್ಟ್ ಕಾರ್ನರ್

    – ಪವಿತ್ರಾ ಗೌಡಗೆ ಈ ಸ್ಥಿತಿ ಬರಬಾರದಿತ್ತು ಎಂದ ನಟಿ

    ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಕೇಸ್‌ಲ್ಲಿ (Renukaswamy Case) ಸುಪ್ರೀಂ (Supreme Court) ಆದೇಶದ ಬೆನ್ನಲ್ಲೇ ಮತ್ತೆ ಪರಪ್ಪನ ಅಗ್ರಹಾರ ಜೈಲು ಸೇರಿರುವ ನಟ ದರ್ಶನ್ ಬಗ್ಗೆ ಸ್ಯಾಂಡಲ್‌ವುಡ್ ಕ್ವೀನ್ ರಮ್ಯಾ (Actress Ramya) ಸಾಫ್ಟ್ ಕಾರ್ನರ್ ತೋರಿಸಿದ್ದಾರೆ.

    ದರ್ಶನ್ ಜೈಲುಪಾಲಾಗಿರುವ ಬಗ್ಗೆ `ಪಬ್ಲಿಕ್ ಟಿವಿ’ ಜೊತೆ ಮಾತನಾಡಿರುವ ಅವರು, ನಟ ದರ್ಶನ್ ಜೊತೆ ನಾನು ಸಿನಿಮಾ ಮಾಡಿದ್ದೇನೆ. ಸಿನಿಮಾ ಶೂಟಿಂಗ್ ವೇಳೆ ತಾವು ನಡೆದುಕೊಂಡು ಬಂದ ಹಾದಿ ಬಗ್ಗೆ ನನ್ನ ಬಳಿ ಹಂಚಿಕೊಂಡಿದ್ದರು. ನನಗೆ ಹೆಮ್ಮೆ ಅನಿಸಿತ್ತು. ಲೈಟ್ ಬಾಯ್ ಆಗಿ ಕೆಲಸ ಮಾಡಿ ಈ ಮಟ್ಟಕ್ಕೆ ಬೆಳೆದಿದ್ದಾರೆ. ಆದರೆ ಇತ್ತೀಚಿಗೆ ಅವರ ನಡವಳಿಕೆಯಿಂದ ತುಂಬಾ ಬೇಜಾರಾಗಿತ್ತು. ಎಲ್ಲೋ ಒಂದು ಕಡೆ ಅವರು ತಮ್ಮ ಜೀವನ ಹಾಳು ಮಾಡಿಕೊಂಡರು. ಈ ಮಟ್ಟಕ್ಕೆ ಬೆಳೆದ ಮೇಲೆ ಜವಾಬ್ದಾರಿ ಇರುತ್ತದೆ. ಅವರ ಅಕ್ಕಪಕ್ಕ ಯಾರು ಒಳ್ಳೆಯವರಿಲ್ಲ ಅನಿಸುತ್ತೆ ಗೊತ್ತಿಲ್ಲ. ತಮ್ಮ ಸುತ್ತಮುತ್ತ ಒಳ್ಳೆಯವರನ್ನು ಇಟ್ಟುಕೊಂಡು ಒಳ್ಳೆಯ ದಾರಿಯಲ್ಲಿ ಕರೆದುಕೊಂಡು ಹೋಗಬಹುದಿತ್ತು. ಮೊದಲು ಅಕ್ಕಪಕ್ಕದವರ ಸಹವಾಸ ಬಿಡಬೇಕು ಕಿವಿಮಾತು ಹೇಳಿದ್ದಾರೆ.ಇದನ್ನೂ ಓದಿ: ಬೆಂಗಳೂರು | ನಿಗೂಢ ಸ್ಫೋಟ – ಬಾಲಕ ಸಾವು, 8 ಜನರಿಗೆ ಗಾಯ, ಮೂವರ ಸ್ಥಿತಿ ಗಂಭೀರ

    ಇನ್ನೊಂದು ಕಡೆ ಜಡ್ಜ್ಮೆಂಟ್ ಕೇಳಿದಾಗ ರಿಲೀಫ್ ಅಂತಾ ಅನಿಸಿದೆ. ಈಗ ನಾವು ಹೋಗುತ್ತಿರುವ ಸಮಾಜ ಕೆಟ್ಟ ದಾರಿಯಲ್ಲಿದೆ. ಹೆಣ್ಣುಮಕ್ಕಳ ರಕ್ಷಣೆ, ಗೌರವ ವಿಷಯದಲ್ಲಿ ಸುಪ್ರೀಂ ಕೋರ್ಟ್ ಆರ್ಡರ್ ಬಂದಾಗ ನಾನು ಮಾಡಿದ ಪೋಸ್ಟ್ಗೆ ಕೆಟ್ಟದಾಗಿ ಕಾಮೆಂಟ್ ಹಾಕುತ್ತಿದ್ದರು. ನಾವೇ ಕಾನೂನು ಕೈಗೆತ್ತಿಕೊಂಡರೆ ಈ ರೀತಿಯ ಕೆಟ್ಟ ಕೆಲಸಗಳು ಆಗುತ್ತವೆ. ಜಡ್ಜ್ಮೆಂಟ್‌ನಿಂದ ಸಮಾಜಕ್ಕೆ ಒಳ್ಳೆಯದಾಗುತ್ತೆ. ಸಮಾಜಕ್ಕೆ ಒಂದೊಳ್ಳೆ ಮೆಸೇಜ್ ಹೋಗಿದೆ. ಯಾರೇ ಆಗಿರಲಿ ಎಲ್ಲರೂ ಸಮಾನರು. ದೊಡ್ಡವರೇ ಆಗ್ಲಿ ಚಿಕ್ಕವರೇ ಆಗ್ಲಿ ಎಲ್ಲರೂ ಕಾನೂನಿನ ಮುಂದೆ ಒಂದೇ ಎಂದು ತಿಳಿಸಿದ್ದಾರೆ.

    ಪವಿತ್ರಾ ಗೌಡ ಯಾರು ಅಂತಾ ನನಗೆ ಮೊದಲು ಗೊತ್ತಿರಲಿಲ್ಲ. ಆಕೆಗೆ ಈ ಸ್ಥಿತಿ ಬರಬಾರದಿತ್ತು. ಒಂದು ಕಡೆ ನನಗೆ ಬೇಜಾರಾಗುತ್ತೆ. ಯಾಕಂದ್ರೆ ಪವಿತ್ರಾ ಗೌಡ ಒಬ್ಬ ತಾಯಿ, ಅವರಿಗೆ ಮಗಳಿದ್ದಾಳೆ. ಕಾನೂನು ಕೈಗೆ ತೆಗೆದುಕೊಳ್ಳದೇ ನಾವು ನಿಯಮಗಳ ಪ್ರಕಾರ ನಡೆದುಕೊಂಡಿದ್ರೆ ಇದೆಲ್ಲಾ ಆಗುತ್ತಿರಲಿಲ್ಲ. ನಾವು ಏನಾದರೂ ಮಾಡುವ ಮುಂಚೆ ಯೋಚನೆ ಮಾಡಬೇಕು. ಕೋಪ ಬರೋದು ಸಾಮಾನ್ಯ, ಆದರೆ ಎಲ್ಲರ ಜೀವನದಲ್ಲಿ ಒಳ್ಳೆಯದೇ ಆಗಲ್ಲ. ಕೆಲವೊಂದು ಘಟನೆಗಳು ನಡೆಯುತ್ತವೆ. ಹಾಗಂತ ನಾವು ಕಾನೂನನ್ನ ಕೈಗೆತ್ತಿಕೊಳ್ಳಬಾರದು. ಕಾನೂನು ಪ್ರಕಾರವೇ ನಡೆದುಕೊಂಡು ಬರಬೇಕು. ಮತ್ತೇನಾದರೂ ಆದರೆ ಅಂತ ಜೀವನ ಹಾಳು ಮಾಡಿಕೊಳ್ತೀರಾ? ಅದೇ ರೀತಿ ಬೇರೆಯವರು ಶುರು ಮಾಡ್ಕೊಂಡ್ರೆ ಸಮಾಜ ಹೇಗೆ ಬದಲಾಗುತ್ತೆ? ಎಲ್ಲದಕ್ಕೂ ಒಂದು ಲಿಮಿಟ್ ಇರುತ್ತೆ. ಆದರೆ ಕಾನೂನಿಂದ ನಾವ್ಯಾರು ಎಸ್ಕೇಪ್ ಆಗೋಕೆ ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

    ಇದೇ ವೇಳೆ ರೇಣುಕಾಸ್ವಾಮಿ ಕುಟುಂಬದ ಬಗ್ಗೆ ಮಾತನಾಡಿ, ಅವರದ್ದು ಬಡಕುಟುಂಬ. ಅವರಿಗೆ ಎಲ್ಲೋ ಒಂದು ಕಡೆ ಸುಪ್ರೀಂ ತೀರ್ಪಿನಿಂದ ನ್ಯಾಯ ಸಿಕ್ಕಂತಾಗಿದೆ ಅನಿಸುತ್ತದೆ ಎಂದು ತಿಳಿಸಿದ್ದಾರೆ.ಇದನ್ನೂ ಓದಿ: ದೇಶದ ಜನತೆಗೆ ಮೋದಿ ದೀಪಾವಳಿ ಡಬಲ್‌ ಗಿಫ್ಟ್‌ – ತೆರಿಗೆ ಇಳಿಕೆ, ಯುವಜನತೆಗೆ ವಿಕಸಿತ ಭಾರತ ರೋಜ್‌ಗಾರ್‌ ಯೋಜನೆ

  • ಕಾನೂನಿನ ಮುಂದೆ ಎಲ್ಲರೂ ಒಂದೇ – ದರ್ಶನ್ ಬೇಲ್ ರದ್ದು ಬಗ್ಗೆ ನಟಿ ರಮ್ಯಾ ಪೋಸ್ಟ್

    ಕಾನೂನಿನ ಮುಂದೆ ಎಲ್ಲರೂ ಒಂದೇ – ದರ್ಶನ್ ಬೇಲ್ ರದ್ದು ಬಗ್ಗೆ ನಟಿ ರಮ್ಯಾ ಪೋಸ್ಟ್

    – ಕಾನೂನು ಕೈಗೆ ತೆಗೆದುಕೊಳ್ಳಬೇಡಿ ಎಂದ ನಟಿ

    ರೇಣುಕಾಸ್ವಾಮಿ ಕೇಸ್‌ಲ್ಲಿ ನಟ ದರ್ಶನ್ ಸೇರಿ ಏಳು ಆರೋಪಿಗಳ ಜಾಮೀನನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದ ಬೆನ್ನಲ್ಲೇ ಸ್ಯಾಂಡಲ್‌ವುಡ್ ಕ್ವೀನ್ ರಮ್ಯಾ ಸ್ಟೋರಿ ಹಂಚಿಕೊಂಡಿದ್ದಾರೆ.ಇದನ್ನೂ ಓದಿ: ದರ್ಶನ್‌ ಜಾಮೀನು ರದ್ದು | ಕಾನೂನು ಎಲ್ಲರಿಗೂ ಒಂದೇ ಎಂಬ ಸಂದೇಶ ಸಾರಿದ ಸುಪ್ರೀಂ: ವಕೀಲ ಚಿದಾನಂದ್

    ಈ ಕುರಿತು ಇನ್‌ಸ್ಟಾಗ್ರಾಂನಲ್ಲಿ ಸ್ಟೋರಿ ಹಾಕಿಕೊಂಡಿರುವ ಅವರು, ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಮತ್ತು ಇತರರಿಗೆ ಜಾಮೀನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್ ತೀರ್ಪು ಇಂದು ಬಲವಾದ ಸಂದೇಶವನ್ನು ರವಾನಿಸಿದೆ. ಕಾನೂನಿನ ಮುಂದೆ ಎಲ್ಲರೂ ಸಮಾನರು. ಎಲ್ಲರಿಗೂ ನಾನು ಹೇಳುವುದೇನೆಂದರೆ ನ್ಯಾಯಯುತ ಪ್ರಕ್ರಿಯೆಯನ್ನು ಅನುಸರಿಸಿ, ಕಾನೂನು ವ್ಯವಸ್ಥೆಯಲ್ಲಿ ನಂಬಿಕೆ ಇರಿಸಿ. ಕಾನೂನನ್ನು ನಿಮ್ಮ ಕೈಗೆ ತೆಗೆದುಕೊಳ್ಳಬೇಡಿ, ಎಲ್ಲರಿಗೂ ನ್ಯಾಯ ಸಿಕ್ಕೇ ಸಿಗುತ್ತದೆ ಎಂದು ಬರೆದುಕೊಂಡಿದ್ದಾರೆ.

    ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಸೇರಿ ಎಲ್ಲಾ ಆರೋಪಿಗಳಿಗೆ ಕರ್ನಾಟಕ ಹೈಕೋರ್ಟ್ ಜಾಮೀನು ನೀಡಿತ್ತು. ಈ ಜಾಮೀನು ಆದೇಶವನ್ನು ಪ್ರಶ್ನಿಸಿ ರಾಜ್ಯ ಪೊಲೀಸ್ ಇಲಾಖೆ ಸುಪ್ರೀಂ ಕೋರ್ಟ್ ಮೊರೆ ಹೋಗಿತ್ತು. ವಾದ-ಪ್ರತಿವಾದ ಆಲಿಸಿದ ಸುಪ್ರೀಂ ಗುರುವಾರ (ಆ.14) ಜಾಮೀನು ಅರ್ಜಿಯನ್ನು ರದ್ದುಗೊಳಿಸಿ, ಕೂಡಲೇ ಎಲ್ಲಾ 7 ಆರೋಪಿಗಳು ಸರೆಂಡರ್ ಆಗಬೇಕೆಂದು ಸೂಚನೆ ನೀಡಿತ್ತು.ಇದನ್ನೂ ಓದಿ: ದರ್ಶನ್ ಜಾಮೀನು ರದ್ದು; ತಪ್ಪು ಮಾಡಿದವರಿಗೆ ಶಿಕ್ಷೆ ಆಗಲಿ: ರೇಣುಕಾಸ್ವಾಮಿ ಪತ್ನಿ

  • ಸತ್ಯ ಎಲ್ಲಕ್ಕಿಂತ ಶಕ್ತಿಶಾಲಿ, ಅದು ನ್ಯಾಯ ಕೊಡುತ್ತೆ – ತೀರ್ಪಿಗೂ ಮುನ್ನ ಪವಿತ್ರಾ ಗೌಡ ಪೋಸ್ಟ್

    ಸತ್ಯ ಎಲ್ಲಕ್ಕಿಂತ ಶಕ್ತಿಶಾಲಿ, ಅದು ನ್ಯಾಯ ಕೊಡುತ್ತೆ – ತೀರ್ಪಿಗೂ ಮುನ್ನ ಪವಿತ್ರಾ ಗೌಡ ಪೋಸ್ಟ್

    ರೇಣುಕಾಸ್ವಾಮಿ ಕೊಲೆ (Renukaswamy Case) ಕೇಸಲ್ಲಿ ಆರೋಪಿಗಳಾದ ನಟ ದರ್ಶನ್ (Actor Darshan)  ಸೇರಿ ಏಳು ಆರೋಪಿಗಳಿಗೆ ಹೈಕೋರ್ಟ್ ನೀಡಿದ್ದ ಜಾಮೀನು ರದ್ದು ಕೋರಿ ಸಲ್ಲಿಸಿದ್ದ ಅರ್ಜಿ ಭವಿಷ್ಯ ಇಂದು (ಆ.14) ಹೊರಬೀಳಲಿದೆ. ಈ ಹಿನ್ನೆಲೆ ಆರೋಪಿ ಪವಿತ್ರಾ ಗೌಡ (Pavitra Gowda) ಪೋಸ್ಟ್‌ವೊಂದನ್ನು ಹಾಕಿಕೊಂಡಿದ್ದಾರೆ.

    ಜಾಮೀನು ಮುಂದುವರೆಯುವ ನಿರೀಕ್ಷೆಯಲ್ಲಿರುವ ಪವಿತ್ರಾ ಗೌಡ ಇನ್ಸ್‌ಸ್ಟಾಗ್ರಾಂ ನಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ. ಪೋಸ್ಟ್ನಲ್ಲಿ, ಸತ್ಯವು ಎಲ್ಲಕ್ಕಿಂತ ಹೆಚ್ಚು ಶಕ್ತಿಶಾಲಿ. ಅದು ಯಾವಾಗಲೂ ನ್ಯಾಯವನ್ನು ಕೊಡುತ್ತದೆ. ಈ ಜಗತ್ತಿನಲ್ಲಿರುವ ಎಲ್ಲಕ್ಕಿಂತ ಹೆಚ್ಚಿನ ಶಕ್ತಿಯನ್ನು ಸತ್ಯ ಹೊಂದಿರುತ್ತದೆ. ಎಷ್ಟೇ ಸಮಯ ತೆಗೆದುಕೊಂಡರೂ, ನ್ಯಾಯವು ಯಾವಾಗಲೂ ತನ್ನ ದಾರಿಯನ್ನು ಕಂಡುಕೊಳ್ಳುತ್ತದೆ ಎಂದು ಬರೆದುಕೊಂಡಿದ್ದಾರೆ.ಇದನ್ನೂ ಓದಿ: ಪ್ರಜ್ವಲ್‌ ರೇವಣ್ಣ ಮಾನಸಿಕ ಸ್ಥಿತಿ ಕುಗ್ಗಿತಾ?- ಅತ್ಯಾಚಾರ ಕೇಸ್‌ ಅಪರಾಧಿಗೆ ಜೈಲಿನಲ್ಲೇ ಕೌನ್ಸಿಲಿಂಗ್

    ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಆರೋಪಕ್ಕೆ ಸಂಬಂಸಿದಂತೆ ಪ್ರಕರಣದ ಎ1 ಪವಿತ್ರಾ ಗೌಡ, ಎ2 ದರ್ಶನ್ ಹಾಗೂ `ಡಿ’ ಗ್ಯಾಂಗ್‌ಗೆ ಹೈಕೋರ್ಟ್ ಜಾಮೀನು ನೀಡಿತ್ತು. ರಾಜ್ಯ ಪೊಲೀಸ್ ಇಲಾಖೆ ನಟ ದರ್ಶನ್‌ಗೆ ಹೈಕೋರ್ಟ್ ನೀಡಿರುವ ಜಾಮೀನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೊರೆ ಹೋಗಿತ್ತು. ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ವಾದ-ಪ್ರತಿವಾದ ಆಲಿಸಿ, ಆದೇಶವನ್ನು ಕಾಯ್ದಿರಿಸಿತ್ತು. ಗುರುವಾರ ದರ್ಶನ್, ಪವಿತ್ರಾ ಸೇರಿದಂತೆ ಏಳು ಜನರ ಬೇಲ್ ಭವಿಷ್ಯ ನಿರ್ಧಾರವಾಗಲಿದೆ.

    ಸುಪ್ರೀಂ ಕೋರ್ಟ್ ಜಾಮೀನು ರದ್ದುಗೊಳಿಸುತ್ತಾ? ಅಥವಾ ಮುಂದುವರೆಯುತ್ತಾ ಎಂಬ ಕುತೂಹಲಕ್ಕೆ ಕೌಂಟ್‌ಡೌನ್ ಶುರುವಾಗಿದ್ದು, ಪವಿತ್ರಾ ಗೌಡ ಜಾಮೀನು ಮುಂದುವರೆಯುವ ನಿರೀಕ್ಷೆಯಲ್ಲಿದ್ದಾರೆ.ಇದನ್ನೂ ಓದಿ: 2.5 ಲಕ್ಷಕ್ಕೆ ನವಜಾತ ಶಿಶುವನ್ನೇ ಮಾರಿದ ತಾಯಿ – ಹಣ ಖರ್ಚಾದ ಬಳಿಕ ಮಗು ವಾಪಸ್ಸಿಗಾಗಿ ದೂರು

  • ದರ್ಶನ್ ಜಾಮೀನು ಭವಿಷ್ಯಕ್ಕೆ ಕೌಂಟ್‌ಡೌನ್ – ನಟನಿಗೆ ಜೈಲಾ? ಬೇಲಾ?

    ದರ್ಶನ್ ಜಾಮೀನು ಭವಿಷ್ಯಕ್ಕೆ ಕೌಂಟ್‌ಡೌನ್ – ನಟನಿಗೆ ಜೈಲಾ? ಬೇಲಾ?

    – `ಡಿ’ ಗ್ಯಾಂಗ್‌ನ ಏಳು ಆರೋಪಿಗಳ ಜಾಮೀನು ರದ್ದು ಕೋರಿ ಸಲ್ಲಿಸಿದ್ದ ಅರ್ಜಿ ಆದೇಶ

    ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಆರೋಪಿಗಳಾದ ನಟ ದರ್ಶನ್ (Actor Darshan) ಸೇರಿ ಏಳು ಆರೋಪಿಗಳಿಗೆ ಹೈಕೋರ್ಟ್ ನೀಡಿದ್ದ ಜಾಮೀನು ರದ್ದು ಕೋರಿ ಕರ್ನಾಟಕ ಪೊಲೀಸರು (Karnataka Police) ಸಲ್ಲಿಸಿದ್ದ ಅರ್ಜಿ ಭವಿಷ್ಯ ಇಂದು (ಆ.14) ಹೊರಬೀಳಲಿದೆ.

    ಸುಪ್ರೀಂ ಕೋರ್ಟ್ ಜಾಮೀನು ರದ್ದುಗೊಳಿಸುತ್ತಾ? ಅಥವಾ ಮುಂದುವರೆಯುತ್ತಾ ಎಂಬ ಕುತೂಹಲಕ್ಕೆ ಕೌಂಟ್‌ಡೌನ್ ಶುರುವಾಗಿದೆ. ಜೊತೆಗೆ ನಟ ದರ್ಶನ್ ಕೂಡ ಜಾಮೀನು ಮುಂದುವರೆಯುವ ನಿರೀಕ್ಷೆಯಲ್ಲಿದ್ದಾರೆ.

    ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಆರೋಪಕ್ಕೆ ಸಂಬಂಧಿಸಿದಂತೆ ಪ್ರಕರಣದ ಎ2 ದರ್ಶನ್ ಹಾಗೂ `ಡಿ’ ಗ್ಯಾಂಗ್‌ಗೆ ಹೈಕೋರ್ಟ್ ಜಾಮೀನು ನೀಡಿತ್ತು. ರಾಜ್ಯ ಪೊಲೀಸ್ ಇಲಾಖೆ ನಟ ದರ್ಶನ್‌ಗೆ ಹೈಕೋರ್ಟ್ ನೀಡಿರುವ ಜಾಮೀನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೊರೆ ಹೋಗಿತ್ತು. ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ವಾದ-ಪ್ರತಿವಾದ ಆಲಿಸಿ, ಆದೇಶವನ್ನು ಕಾಯ್ದಿರಿಸಿತ್ತು. ಗುರುವಾರ ದರ್ಶನ್, ಪವಿತ್ರಾ ಸೇರಿದಂತೆ ಏಳು ಜನರ ಬೇಲ್ ಭವಿಷ್ಯ ಹೊರಬೇಳಲಿದೆ.

    ಇನ್ನೂ ಈ ಹಿಂದೆ ಸುಪ್ರೀಂ ಕೋರ್ಟ್‌ನಲ್ಲಿ ನಡೆದ ವಾದ-ಪ್ರತಿವಾದದ ಸಂದರ್ಭದಲ್ಲಿ ದರ್ಶನ್ ಹಾಗೂ ಪವಿತ್ರಾ ಪರ ವಕೀಲರು ಸುಪ್ರೀಂ ಕೋರ್ಟ್‌ಗೆ ಜಾಮೀನು ಮುಂದುವರೆಸುವಂತೆ ಮನವಿ ಮಾಡಿಕೊಂಡಿದ್ದರು.

    ದರ್ಶನ್ ಹೇಳಿದ್ದೇನು?

    •  ಮೈಸೂರಿನಲ್ಲಿ ಬಂಧಿಸಿ, ಬೆಂಗಳೂರಲ್ಲಿ ಎಫ್‌ಐಆರ್ ಹಾಕಿದ್ದಾರೆ
    • ಬಂಧನಕ್ಕೆ ಸಂಜೆ 6:30ವರೆಗೆ ಲಿಖಿತ ಕಾರಣ ತಿಳಿಸಿಲ್ಲ, ಇದು ಕಾನೂನು ಉಲ್ಲಂಘನೆ
    • ಜಾಮೀನು ರದ್ದುಪಡಿಸೋದು ಕಠಿಣ ಕ್ರಮವಾಗಲಿದೆ
    •  ಯಾವುದೇ ಜಾಮೀನು ಷರತ್ತುಗಳನ್ನು ಉಲ್ಲಂಘಿಸಿಲ್ಲ
    • ಅಪಹರಣದಲ್ಲಿ ಇವರ ಪಾತ್ರ, ಸೂಚನೆಗೆ ಸಾಕ್ಷಿ, ಆಧಾರಗಳಿಲ್ಲ
    • ದರ್ಶನ್ & ಎ-3 ಪವನ್ ಮಧ್ಯೆ ಮಾತುಕತೆ ನಡೆದಿಲ್ಲ
    •  ವಾಟ್ಸಾಪ್ ಸಂದೇಶ ವಿನಿಮಯವಾಗಿಲ್ಲ
    • ಸಾಕ್ಷಿಗಳ ಹೇಳಿಕೆಗಳಲ್ಲೇ ಅನುಮಾನವಿದೆ

    ಪವಿತ್ರಾಗೌಡ ಹೇಳಿದ್ದೇನು?

    •  ನಾನು ಒಬ್ಬಂಟಿ ಪೋಷಕಳಾಗಿದ್ದೇನೆ ನನಗೆ ಒಬ್ಬಳೇ ಒಬ್ಬಳು ಮಗಳಿದ್ದಾಳೆ
    •  ವಯಸ್ಸಾದ ಪೋಷಕರನ್ನೂ ನೋಡಿಕೊಳ್ಳಬೇಕಿದೆ
    • ನನಗೆ ಯಾವುದೇ ಕ್ರಿಮಿನಲ್ ಹಿನ್ನೆಲೆ ಇಲ್ಲ
    • ಮಹಿಳೆ ಆಗಿರೋದ್ರಿಂದ ಜಾಮೀನು ರದ್ದು ಕಠಿಣ ಕ್ರಮವಾಗಲಿದೆ

    ಇದೆಲ್ಲದರ ಮಧ್ಯೆ ಸರ್ಕಾರಿ ಪರ ವಕೀಲರು ಸುಪ್ರೀಂ ಕೋರ್ಟ್‌ಗೆ ಕೆಲವು ಮಾಹಿತಿಗಳನ್ನು ನೀಡಿದ್ದರು.

    •  ಮೃತ ರೇಣುಕಾಸ್ವಾಮಿ ದರ್ಶನ್ ಅಭಿಮಾನಿಯಾಗಿದ್ದ.
    •  ದರ್ಶನ್-ಪವಿತ್ರಗೌಡ ಲಿವ್-ಇನ್ ಸಂಬಂಧದಲ್ಲಿದ್ದರು.
    •  ಪವಿತ್ರಾಗೌಡಗೆ ರೇಣುಕಾಸ್ವಾಮಿ ಅವಹೇಳನಕಾರಿ ಸಂದೇಶ ಕಳುಹಿಸಿದ್ದ
    • ಇದರಿಂದಾಗಿ ಪಟ್ಟಣಗೆರೆ ಶೆಡ್‌ನಲ್ಲಿ ಕೊಲೆ ಮಾಡಲಾಯ್ತು
    • ಆರೋಪಿಗಳು ಕಿಡ್ನ್ಯಾಪ್‌, ಕೊಲೆಯಾದ ಸ್ಥಳದಲ್ಲಿದ್ದರು ಅನ್ನೋದು ತನಿಖೆಯಿಂದ ಬಯಲು
    • ಪಟ್ಟಣಗೆರೆ ಶೆಡ್‌ಗೆ ಪ್ರವೇಶ ಮಾಡೋದನ್ನು ಐವರು ಸಾಕ್ಷಿಗಳು ನೋಡಿದ್ದಾರೆ
    • ಘಟನಾ ಸ್ಥಳದಿಂದ ಸಂಗ್ರಹಿಸಲಾದ ಮಣ್ಣಿನ ಮಾದರಿ ದೃಢಪಟ್ಟಿದೆ
    • ಕೊಲೆ ವೇಳೆ ಎ-1 ಪವಿತ್ರಾ, ಎ-2 ದರ್ಶನ್ ಸಕ್ರಿಯ
    • ರೇಣುಕಾಸ್ವಾಮಿ ರಕ್ತದ ಕಲೆಗಳು ಆರೋಪಿ ಬಟ್ಟೆ ಮೇಲೆ ಕಂಡುಬಂದಿದೆ
    • ಕೊಲೆ ಮಾಡಲು ಬಳಸಿದ ಆಯುಧಗಳು ಮಾರಕವಲ್ಲ ಅಂತ ಹೈಕೋರ್ಟ್ ಹೇಳಿರುವುದು
    • ತಪ್ಪು ಸಾಕ್ಷಿ ಪುನೀತ್ ಹೇಳಿಕೆ ತಡವಾಗಿ ದಾಖಲಿಸಿರೋದಕ್ಕೆ ಸೂಕ್ತ ಕಾರಣ ನೀಡಲಾಗಿದೆ
    •  ವಿಧಿವಿಜ್ಞಾನ, ಎಲೆಕ್ಟ್ರಾನಿಕ್ ಮತ್ತು ಸಿಡಿಆರ್ ಪುರಾವೆಗಳನ್ನು ಹೈಕೋರ್ಟ್ ಪರಿಗಣಿಸಿಲ್ಲ
    • ಎ-2 ದರ್ಶನ್‌ಗೆ ಅಪರಾಧದ ಹಿನ್ನೆಲೆ ಇದೆ
    • ಬೆನ್ನು ನೋವು ಅಂತ ವಿನಾಯ್ತಿ ಪಡೆದು ಮರುದಿನವೇ ಶೂಟಿಂಗ್‌ಗೆ ಹೋಗಿದ್ದಾರೆ

    ಎಲ್ಲಾ ಅಂಶಗಳನ್ನು ಗಮನದಲ್ಲಿಟ್ಟುಕೊಂಡಿರುವ ಸುಪ್ರೀಂಕೋರ್ಟ್ನ ದ್ವಿಸದಸ್ಯ ಪೀಠ ಮಹತ್ವದ ತೀರ್ಪನ್ನು ನೀಡುವ ಸಾಧ್ಯತೆ ಇದೆ. ಇದರ ಜೊತೆಗೆ ವಿಶೇಷ ಅಂದ್ರೆ `ಇದ್ರೆ ನೆಮ್ದಿಯಾಗ್ ಇರ್ಬೇಕ್’ ಅನ್ನೋ ಸಾಲುಗಳಲ್ಲಿ ಡೆವಿಲ್ ಸಿನಿಮಾ ಹಾಡು ಶುಕ್ರವಾರ (ಆ.15) ರಿಲೀಸ್ ಆಗಲಿದೆ.

  • ರೇಣುಕಾಸ್ವಾಮಿ ಹತ್ಯೆ ಕೇಸ್ – ಸುಪ್ರೀಂನಲ್ಲಿ ನಾಳೆ ದರ್ಶನ್ ಜಾಮೀನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಿಚಾರಣೆ

    ರೇಣುಕಾಸ್ವಾಮಿ ಹತ್ಯೆ ಕೇಸ್ – ಸುಪ್ರೀಂನಲ್ಲಿ ನಾಳೆ ದರ್ಶನ್ ಜಾಮೀನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಿಚಾರಣೆ

    ನವದೆಹಲಿ: ಚಿತ್ರದುರ್ಗದ (Chitradurga) ರೇಣುಕಾಸ್ವಾಮಿ ಕೊಲೆ (Renukaswamy Case) ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಸೇರಿ 7 ಆರೋಪಿಗಳಿಗೆ ಹೈಕೋರ್ಟ್ ನೀಡಿದ್ದ ಜಾಮೀನು ಪ್ರಶ್ನಿಸಿ ಸುಪ್ರೀಂಕೋರ್ಟ್‌ಗೆ (Supreme Court) ಸಲ್ಲಿಸಿದ್ದ ಅರ್ಜಿ ವಿಚಾರಣೆ ನಾಳೆ (ಏ.2) ನಡೆಯಲಿದೆ.

    ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಸೇರಿ ಏಳು ಆರೋಪಿಗಳಿಗೆ ಹೈಕೋರ್ಟ್ (High Court) ಜಾಮೀನು ನೀಡಿತ್ತು. ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಬೆಂಗಳೂರು ಪೊಲೀಸರು ಸುಪ್ರೀಂಕೋರ್ಟ್ ಮೊರೆ ಹೋಗಿದ್ದು, ಆರೋಪಿಗಳಿಗೆ ಮತ್ತೆ ಸಂಕಷ್ಟ ಎದುರಾಗುವಂತಿದೆ.ಇದನ್ನೂ ಓದಿ:ರೇಣುಕಾಸ್ವಾಮಿ ಹತ್ಯೆ ಕೇಸ್ – ಏ.2ಕ್ಕೆ ದರ್ಶನ್ ಜಾಮೀನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಿಚಾರಣೆ

    ಜಾಮೀನು ಪ್ರಶ್ನಿಸಿ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯ ವಿಚಾರಣೆ ಮಾ.18ಕ್ಕೆ ನಡೆಯಬೇಕಿತ್ತು. ವಿಚಾರಣೆಗೆ ಪಟ್ಟಿಯಾಗದ ಹಿನ್ನೆಲೆ ದರ್ಶನ್ ಪ್ರಕರಣದಲ್ಲಿನ ರಾಜ್ಯದ ವಿಶೇಷ ವಕೀಲ ಅನಿಲ್ ನಿಶಾನಿ ಅರ್ಜಿ ವಿಚಾರಣೆ ನಡೆಸುವಂತೆ ಪ್ರಸ್ತಾಪಿಸಿದ್ದರು. ಇದಕ್ಕೆ ಉತ್ತರಿಸಿದ ಕೋರ್ಟ್ ಏ.2 ರಂದು ವಿಚಾರಣೆ ನಡೆಸಲಾಗುವುದು ಎಂದು ಹೇಳಿತ್ತು.

    ಮಾ.18ಕ್ಕೂ ಮುನ್ನ ನಡೆದ ವಿಚಾರಣೆಯಲ್ಲಿ ಅರ್ಜಿ ವಿಚಾರಣೆಗೆ ಒಪ್ಪಿಕೊಂಡಿದ್ದ ಸುಪ್ರೀಂಕೋರ್ಟ್ ನಟ ದರ್ಶನ್ ಸೇರಿದಂತೆ ಇತರೆ ಆರೋಪಿಗಳಿಗೆ ನೋಟಿಸ್ ಜಾರಿ ಮಾಡಿತ್ತು. ಹೈಕೋರ್ಟ್‌ನಲ್ಲಿ ಗೆಲುವು ಪಡೆದಂತೆ ಸುಪ್ರೀಂಕೋರ್ಟ್‌ನಲ್ಲಿಯೂ ಗೆಲುವು ಪಡೆಯಲು ಖ್ಯಾತ ಹಿರಿಯ ವಕೀಲ ಕಪಿಲ್ ಸಿಬಲ್ ಅವರನ್ನು ದರ್ಶನ್ ಕುಟುಂಬದವರು ನೇಮಿಸಿಕೊಂಡಿದ್ದಾರೆ ಹಾಗೂ ಹೈಕೋರ್ಟ್‌ನಲ್ಲಿ ನಡೆದ ವಾದ ಪ್ರತಿವಾದದ ಎಲ್ಲ ದಾಖಲೆ ನೀಡಲಾಗಿದೆ ಎನ್ನಲಾಗಿತ್ತು. ಆದರೆ ಈ ಬಗ್ಗೆ ಸದ್ಯಕ್ಕೆ ಯಾವುದೇ ಬೆಳವಣಿಗೆ ಕಂಡು ಬಂದಿಲ್ಲ.

    ನಟ ದರ್ಶನ್ 131 ದಿನಗಳ ಜೈಲುವಾಸದ ನಂತರ ವೈದ್ಯಕೀಯ ಕಾರಣಗಳನ್ನು ಉಲ್ಲೇಖಿಸಿ ಅ.30 ರಂದು ಮಧ್ಯಂತರ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದರು. ನಂತರ ಹೈಕೋರ್ಟ್ ಡಿ.13 ರಂದು ದರ್ಶನ್ ಮತ್ತು ಪ್ರಮುಖ ಆರೋಪಿ ಪವಿತ್ರ ಗೌಡ ಸೇರಿದಂತೆ ಇತರ ಆರೋಪಿಗಳಿಗೆ ಜಾಮೀನು ಮಂಜೂರು ಮಾಡಿತ್ತು.ಇದನ್ನೂ ಓದಿ:ಗ್ಯಾರಂಟಿ ಸರ್ಕಾರದಿಂದ ಶಾಕ್‌ – ಡೀಸೆಲ್‌ ದರ 2 ರೂ. ಏರಿಕೆ

  • ರೇಣುಕಾಸ್ವಾಮಿ ಕೊಲೆ ಕೇಸ್ – ಇಂದು ಕೋರ್ಟ್‌ಗೆ ಹಾಜರಾಗಲಿರುವ ದರ್ಶನ್ & ಗ್ಯಾಂಗ್

    ರೇಣುಕಾಸ್ವಾಮಿ ಕೊಲೆ ಕೇಸ್ – ಇಂದು ಕೋರ್ಟ್‌ಗೆ ಹಾಜರಾಗಲಿರುವ ದರ್ಶನ್ & ಗ್ಯಾಂಗ್

    ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ (Renukaswamy) ಕೊಲೆ ಪ್ರಕರಣದ ಆರೋಪಿಗಳಾಗಿರುವ ನಟ ದರ್ಶನ್ (Darshan) ಆ್ಯಂಡ್ ಗ್ಯಾಂಗ್ ಇಂದು ಕೋರ್ಟ್ ಮುಂದೆ ಹಾಜರಾಗಲಿದ್ದಾರೆ.

    ಬೆಂಗಳೂರಿನ (Bengaluru) 57ನೇ ಸಿಸಿಹೆಚ್ ಕೋರ್ಟ್‌ನಲ್ಲಿ ವಿಚಾರಣೆ ನಡೆಯಲಿದ್ದು, ಪವಿತ್ರಾಗೌಡ, ದರ್ಶನ್ ಸೇರಿ ಎಲ್ಲಾ 17 ಆರೋಪಿಗಳು ಕೋರ್ಟ್‌ಗೆ ಹಾಜರಾಗಲಿದ್ದಾರೆ. ಬೆಳಗ್ಗೆ 11 ಗಂಟೆ ಸುಮಾರಿಗೆ ಕೋರ್ಟ್‌ನಲ್ಲಿ ವಿಚಾರಣೆ ನಡೆಯಲಿದೆ. ಇದನ್ನೂ ಓದಿ: AAP ಸರ್ಕಾರದಲ್ಲಿ ಹಗರಣ – ದೆಹಲಿ ವಿಧಾನಸಭೆಯಲ್ಲಿ ಇಂದು ಸರ್ಕಾರದಿಂದ ಸಿಎಜಿ ವರದಿ ಮಂಡನೆ

    ಆರ್.ಆರ್. ನಗರದ ದರ್ಶನ್ ಮನೆ ಮುಂದೆ ಅಂಗರಕ್ಷಕರು ಜಮಾಯಿಸಿದ್ದು, ಮನೆ ಮುಂದೆ ಸ್ವಚ್ಛತಾ ಕಾರ್ಯ ನಡೆಯುತ್ತಿದೆ. ಆದ್ದರಿಂದ ಆರ್.ಆರ್. ನಗರದ ಮನೆಯಲ್ಲಿಯೇ ದರ್ಶನ್ ಇದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಇದನ್ನೂ ಓದಿ: ಮಹಾರಾಷ್ಟ್ರ ಬಸ್ ಚಾಲಕನಿಗೆ ಕನ್ನಡ ಧ್ವಜ ಹಿಡಿಸಿ ‘ಜೈ ಕರ್ನಾಟಕ’ ಎಂದು ಕೂಗಿಸಿದ ಕನ್ನಡಿಗರು

    ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪವಿತ್ರಾಗೌಡ, ನಟ ದರ್ಶನ್ ಸೇರಿ 17 ಆರೋಪಿಗಳು ಜೈಲು ಸೇರಿದ್ದರು. ಜಾಮೀನಿನ ಮೂಲಕ ಹೊರಬಂದಿರುವ ಡಿ ಗ್ಯಾಂಗ್ ಇಂದು ಕೋರ್ಟ್ ವಿಚಾರಣೆ ಎದುರಿಸಲಿದ್ದಾರೆ. ಇದನ್ನೂ ಓದಿ: ತಡರಾತ್ರಿ ತಲ್ವಾರ್ ಝಳಪಿಸುತ್ತ ವ್ಹೀಲಿಂಗ್ ಮಾಡಿದ್ದ ಪುಂಡರ ಮೇಲೆ ರೌಡಿಶೀಟ್

    ನಟ ದರ್ಶನ್‌ ಹಾಗೂ ಪವಿತ್ರಾಗೌಡ ಈಗಾಗಲೇ ಕೋರ್ಟ್‌ನತ್ತ ಸಾಗುತ್ತಿದ್ದಾರೆ.