Tag: Pawan Khera

  • ಪವನ್‌ ಖೇರಾ ಬಳಿ 2 ವೋಟರ್‌ ಐಡಿ – ಬಿಜೆಪಿ ಬಾಂಬ್‌, EC ನೋಟಿಸ್‌ ಜಾರಿ

    ಪವನ್‌ ಖೇರಾ ಬಳಿ 2 ವೋಟರ್‌ ಐಡಿ – ಬಿಜೆಪಿ ಬಾಂಬ್‌, EC ನೋಟಿಸ್‌ ಜಾರಿ

    ನವದೆಹಲಿ: ಮತ ಕಳ್ಳತನ (Vote Chori) ಎಸಗುತ್ತಿರುವ ಬಿಜೆಪಿ ಮೇಲೆ ಹೈಡ್ರೋಜನ್‌ ಬಾಂಬ್‌ ಹಾಕಲಾಗುವುದು ಎಂದು ರಾಹುಲ್‌ ಗಾಂಧಿ ಹೇಳಿದ ಮರುದಿನವೇ ಬಿಜೆಪಿ ಈಗ ಕಾಂಗ್ರೆಸ್‌ ವಿರುದ್ಧವೇ ಬಾಂಬ್‌ ಹಾಕಿದೆ.

    ರಾಹುಲ್‌ ಗಾಂಧಿ (Rahul Gandhi) ಆಪ್ತ ಪವನ್‌ ಖೇರಾ ಎರಡು ಕಡೆ ವೋಟರ್‌ ಐಡಿ ಹೊಂದಿದ್ದಾರೆ ಎಂದು ಆರೋಪಿಸಿ ಬಿಜೆಪಿ ದಾಖಲೆ ಬಿಡುಗಡೆ ಮಾಡಿ ಚುನಾವಣಾ ಆಯೋಗಕ್ಕೆ ದೂರು ನೀಡಿದೆ. ದೂರಿನ ಬೆನ್ನಲ್ಲೇ ಪವನ್ ಖೇರಾ(Pawan Khera) ಅವರಿಗೆ ಚುನಾವಣಾ ಆಯೋಗ (Election Commission) ನೋಟಿಸ್‌ ನೀಡಿ ಶಾಕ್‌ ನೀಡಿದೆ.

    ದೆಹಲಿಯಲ್ಲಿ ಎರಡು ಕಡೆ ವೋಟರ್‌ ಐಡಿ ಹೊಂದಿರುವುದಕ್ಕೆ ಚುನಾವಣಾ ಆಯೋಗ ಖೇರಾಗೆ ನೋಟಿಸ್‌ ನೀಡಿದೆ. ಎರಡು ಕಡೆ ವೋಟರ್‌ ಐಡಿ ಹೊಂದಿರುವುದು 1950ರ ಜನಪ್ರತಿನಿಧಿ ಕಾಯ್ದೆಯ ಅಡಿ ಶಿಕ್ಷಾರ್ಹ ಅಪರಾಧ. ಈ ಸಂಬಂಧ ಸೆಪ್ಟೆಂಬರ್ 8 ರ ಸೋಮವಾರ ಬೆಳಿಗ್ಗೆ 11 ಗಂಟೆಯೊಳಗೆ ನೋಟಿಸ್‌ಗೆ ಉತ್ತರಿಸಬೇಕು ಮತ್ತು ಕಾಯ್ದೆಯಡಿ ನಿಮ್ಮ ವಿರುದ್ಧ ಕ್ರಮ ಯಾಕೆ ಕೈಗೊಳ್ಳಬಾರದು ಎಂಬುದನ್ನು ತಿಳಿಸಬೇಕು ಎಂದು ನೋಟಿಸ್‌ನಲ್ಲಿ ಉಲ್ಲೇಖಿಸಲಾಗಿದೆ. ಇದನ್ನೂ ಓದಿ: ಪಕ್ಷ ವಿರೋಧಿ ಚಟುವಟಿಕೆ; ಪುತ್ರಿ ಕವಿತಾಗೆ ಪಕ್ಷದಿಂದ ಗೇಟ್ಪಾಸ್

    ನವದೆಹಲಿ ಮತ್ತು ಜಂಗ್ಪುರ ವಿಧಾನಸಭಾ ಕ್ಷೇತ್ರಗಳ ಮತದಾರರ ಪಟ್ಟಿಯಲ್ಲಿ ಪವನ್ ಖೇರಾ ಹೆಸರಿದೆ ಎಂದು ಬಿಜೆಪಿ ದಾಖಲೆಯನ್ನು ಇರಿಸಿ ಗಂಭೀರ ಆರೋಪ ಮಾಡಿ ಚುನಾವಣಾ ಆಯೋಗಕ್ಕೆ ದೂರು ನೀಡಿತ್ತು.

    ಬಿಜೆಪಿ ಸಾಮಾಜಿಕ ಜಾಲತಾಣದ ಮುಖ್ಯಸ್ಥ ಅಮಿತ್‌ ಮಾಳವೀಯ ಎಕ್ಸ್‌ನಲ್ಲಿ ಪವನ್‌ ಖೇರಾ ಎರಡು ವೋಟರ್‌ ಐಡಿ ಹೊಂದಿದ್ದಾರೆ ಎಂದು ಆರೋಪಿಸಿದ್ದರು. ಪವನ್ ಖೇರಾ ಎರಡು ಸಕ್ರಿಯ EPIC ಸಂಖ್ಯೆಗಳನ್ನು ಹೇಗೆ ಹೊಂದಿದ್ದಾರೆ? ಅವರು ಹಲವು ಬಾರಿ ಮತ ಚಲಾಯಿಸಿದ್ದಾರೆಯೇ ಎಂಬುದನ್ನು ತನಿಖೆ ಮಾಡುವುದು ಈಗ ಚುನಾವಣಾ ಆಯೋಗದ ಜವಾಬ್ದಾರಿ.  ಇದು ಚುನಾವಣಾ ಕಾನೂನುಗಳ ಸ್ಪಷ್ಟ ಉಲ್ಲಂಘನೆಯಾಗಿದೆ ಎಂದು ದೂರಿದ್ದಾರೆ.

  • Exit Polls ಚರ್ಚೆಗಳಲ್ಲಿ ಭಾಗವಹಿಸಲ್ಲ: ಕಾಂಗ್ರೆಸ್‌ ಅಧಿಕೃತ ಪ್ರಕಟಣೆ

    Exit Polls ಚರ್ಚೆಗಳಲ್ಲಿ ಭಾಗವಹಿಸಲ್ಲ: ಕಾಂಗ್ರೆಸ್‌ ಅಧಿಕೃತ ಪ್ರಕಟಣೆ

    ನವದೆಹಲಿ: ಚುನಾವಣೋತ್ತರ ಸಮೀಕ್ಷೆ(Exit Polls) ಚರ್ಚೆಯಲ್ಲಿ ನಾವು ಭಾಗವಹಿಸುವುದಿಲ್ಲ ಎಂದು ಕಾಂಗ್ರೆಸ್‌ (Congress) ಅಧಿಕೃತವಾಗಿ ತಿಳಿಸಿದೆ.

    ಕಾಂಗ್ರೆಸ್‌ ಮಾಧ್ಯಮ ವಿಭಾಗದ ಮುಖ್ಯಸ್ಥ ಪವನ್‌ ಖೇರಾ (Pawan Khera) ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿ ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಮತದಾರರು ಮತ ಚಲಾಯಿಸಿದ್ದು, ತೀರ್ಪು ಭದ್ರವಾಗಿದೆ. ಚುನಾವಣೋತ್ತರ ಸಮೀಕ್ಷೆ ಚರ್ಚೆಯಲ್ಲಿ (Debate) ನಾವು ಭಾಗವಹಿಸುವುದಿಲ್ಲ. ಜೂನ್ 4 ರಿಂದ ನಾವು ಸಂತೋಷದಿಂದ ಚರ್ಚೆಗಳಲ್ಲಿ ಭಾಗವಹಿಸುತ್ತೇವೆ ಎಂದು ಹೇಳಿದ್ದಾರೆ.  ಇದನ್ನೂ ಓದಿ: ಭವಾನಿ ರೇವಣ್ಣ ಜಾಮೀನು ಅರ್ಜಿ ವಜಾ – ಯಾವುದೇ ಕ್ಷಣದಲ್ಲಿ ಬಂಧನ ಸಾಧ್ಯತೆ

    ಯಾವುದೇ ಚರ್ಚೆಯ ಉದ್ದೇಶವು ಜನರಿಗೆ ತಿಳಿಸುವುದು ಆಗಿರಬೇಕು. ಆದರೆ ಆರ್‌ಪಿಗಾಗಿ ಊಹಾಪೋಹ ಮತ್ತು ಸ್ಲಗ್‌ಫೆಸ್ಟ್‌ನಲ್ಲಿ ಪಾಲ್ಗೊಳ್ಳಲು ನಮಗೆ ಇಷ್ಟವಿಲ್ಲ ಎಂದು ಬರೆದುಕೊಂಡಿದ್ದಾರೆ.

    ಲೋಕಸಭಾ ಚುನಾವಣೆಯ ಕೊನೆಯ ಮತ್ತು 7ನೇ ಹಂತದ ಮತದಾನ ಶನಿವಾರ ನಡೆಯಲಿದೆ. ನಾಳೆ ಸಂಜೆ 6 ಗಂಟೆಯ ನಂತರ ಮಾಧ್ಯಮಗಳಲ್ಲಿ ಚುನಾವಣೋತ್ತರ ಸಮೀಕ್ಷೆಗಳು ಪ್ರಕಟವಾಗಲಿದೆ.

     

  • Loksabha Elections 2024- ಕಾಂಗ್ರೆಸ್‌ನಿಂದ 39 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ

    Loksabha Elections 2024- ಕಾಂಗ್ರೆಸ್‌ನಿಂದ 39 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ

    ನವದೆಹಲಿ: ಲೋಕಸಭಾ ಚುನಾವಣೆಗೆ (Loksabha Elections 2024) ರಾಜಕೀಯ ಪಕ್ಷಗಳು ಭರ್ಜರಿ ತಯಾರಿ ನಡೆಸುತ್ತಿದ್ದು, ಬಿಜೆಪಿಯಿಂದ (BJP First List) ಈಗಾಗಲೇ ಮೊದಲ ಪಟ್ಟಿ ಬಿಡುಗಡೆಯಾಗಿದೆ. ಇದೀಗ ಮಹಾಶಿವರಾತ್ರಿ ಹಾಗೂ ವಿಶ್ವ ಮಹಿಳಾ ದಿನಾಚರಣೆಯ ಈ ಶುಭದಿನದಂದು ಕಾಂಗ್ರೆಸ್‌ ಕೂಡ ತನ್ನ ಅಭ್ಯರ್ಥಿಗಳ ಫಸ್ಟ್‌ ಲಿಸ್ಟ್‌ (Congress First List) ಬಿಡುಗಡೆ ಮಾಡಿದೆ.

    ಗುರುವಾರ ರಾತ್ರಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ನೇತೃತ್ವದಲ್ಲಿ ನವದೆಹಲಿಯಲ್ಲಿ ಕಾಂಗ್ರೆಸ್ ಕೇಂದ್ರ ಚುನಾವಣಾ ಸಮಿತಿ (CEC) ಸಭೆ ನಡೆದಿತ್ತು. ಈ ಸಭೆಯಲ್ಲಿ 60 ಕ್ಷೇತ್ರಗಳ ಬಗ್ಗೆ ಚರ್ಚೆ ನಡೆದಿದೆ ಎನ್ನಲಾಗಿತ್ತು. ಈ ಬೆನ್ನಲ್ಲೇ ಇಂದು (ಶುಕ್ರವಾರ) ಸಂಜೆ 7 ಗಂಟೆಗೆ ದೆಹಲಿಯ ಕೆಪಿಸಿಸಿ ಕಚೇರಿಯಲ್ಲಿ ಅಜಯ್‌ ಮಾಕೇನ್‌ ಹಾಗೂ ಕೆ.ಸಿ ವೇಣುಗೋಪಾಲ್‌ ಅವರು ಜಂಟಿ ಸುದ್ದಿಗೋಷ್ಠಿ ನಡೆಸಿದರು.

    ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್‌ ಅವರು ಮಾತನಾಡಿ ಮೊದಲು ಶಿವರಾತ್ರಿ ಮತ್ತು ಮಹಿಳಾ ದಿನದ ಶುಭಾಶಯಗಳನ್ನು ತಿಳಿಸಿದರು. ಭಾರತ್ ಜೋಡೋ ಯಾತ್ರೆ ಮುಂಬೈನಲ್ಲಿ ಅಂತ್ಯವಾಗಲಿದೆ. ಇಂಡಿಯಾ ಒಕ್ಕೂಟದ ಎಲ್ಲ ಪಕ್ಷಗಳಿಗೆ ಆಹ್ವಾನ ನೀಡಿದೆ. ಯುವ ನ್ಯಾಯ ಕಾಂಗ್ರೆಸ್ ಪಕ್ಷದ ಅತಿದೊಡ್ಡ ಗ್ಯಾರಂಟಿಯಾಗಿದೆ ಎಂದರು.

    ಕಾಂಗ್ರೆಸ್‌ ಪಕ್ಷ ಅಧಿಕಾರಕ್ಕೆ ಬಂದರೆ ಕೇಂದ್ರ ಸರ್ಕಾರದಲ್ಲಿ ಖಾಲಿಯಾಗಿರುವ 30 ಲಕ್ಷ ಹುದ್ದೆಗಳನ್ನು ಭರ್ತಿ ಮಾಡಲಾಗುವುದು. ಪರೀಕ್ಷೆ ಪತ್ರಿಕೆ ಲೀಕ್ ತಡೆಗೆ ಕ್ರಮ ತೆಗೆದುಕೊಳ್ಳಲಾಗುವುದು. ಗುರುವಾರ ಸಿಇಸಿ ಸಭೆ ನಡೆಯಿತು. 39 ಅಭ್ಯರ್ಥಿಗಳ ಮೊದಲ ಪಟ್ಟಿಯಲ್ಲಿ ಘೋಷಣೆ ಮಾಡಿದೆ. ರಾಹುಲ್ ಗಾಂಧಿ (Rahul Gandhi) ಹೆಸರು ಪಟ್ಟಿಯಲ್ಲಿದೆ. 39ರಲ್ಲಿ  15 ಜನರಲ್ ಕ್ಯಾಟಗರಿ, 24 ಮೈನಾರಿಟಿ, 12 ಮಂದಿ (50 ವರ್ಷದೊಳಗಿನ ಅಭ್ಯರ್ಥಿ)ಗಳು ಪಟ್ಟಿಯಲ್ಲಿದ್ದಾರೆ ಎಂದರು.

    ಮೊದಲ ಪಟ್ಟಿಯಲ್ಲಿರುವ ಪ್ರಮುಖರು ?: ರಾಹುಲ್ ಗಾಂಧಿ (ವಯನಾಡ್, ಕೇರಳ), ಭೂಪೇಶ್ ಬಘೇಲ್ (ರಾಜನಂದಗಾಂವ್, ಛತ್ತೀಸ್‌ಗಢ), ತಾಮ್ರಧ್ವಜ್ ಸಾಹು (ಮಹಾಸಮುಂಡ್, ಛತ್ತೀಸ್‌ಗಢ), ಶಶಿ ತರೂರ್ (ತಿರುವನಂತಪುರ, ಕೇರಳ), ಹೈಬಿ ಈಡನ್ (ಎರ್ನಾಕುಲಂ, ಕೇರಳ), ಡಿಕೆ ಸುರೇಶ್ (ಬೆಂಗಳೂರು ಗ್ರಾಮಾಂತರ, ಕರ್ನಾಟಕ)ದಿಂದ ಸ್ಪರ್ಧಿಸಲಿದ್ದಾರೆ.

    ಯಾರೆಲ್ಲ ಇದ್ದಾರೆ:  ಅನಂತ ಸ್ವಾಮಿ ಗಡ್ಡದೇವರಮಠ  (ಹಾವೇರಿ), ಎಸ್​ಪಿ ಮುದ್ದಹನುಮೇಗೌಡ (ತುಮಕೂರು), ಡಿ.ಕೆ.ಸುರೇಶ್ (ಬೆಂಗಳೂರು ಗ್ರಾಮಾಂತರ), ವೆಂಕಟರಮಣೇ ಗೌಡ  (ಸ್ಟಾರ್ ಚಂದ್ರು) (ಮಂಡ್ಯ), ಗೀತಾ ಶಿವರಾಜ್ ಕುಮಾರ್ (ಶಿವಮೊಗ್ಗ), ಶ್ರೇಯಸ್ ಪಟೇಲ್ (ಹಾಸನ), ರಾಜು​ ಅಲಗೂರು (ವಿಜಯಪುರ)ಗೆ ಲೋಕಸಭಾ ಚುನಾವಣೆಗೆ ಕಾಂಗ್ರೆಸ್‌ನಿಂದ ಅಖಾಡಕ್ಕೆ ಇಳಿಯುವ ಅಭ್ಯರ್ಥಿಗಳಾಗಿದ್ದಾರೆ.

    ಕೇರಳದಿಂದ 15 ಅಭ್ಯರ್ಥಿಗಳ ಹೆಸರನ್ನು ಘೊಷಣೆ ಮಾಡಲಾಗಿದೆ. ರಾಜಮೋಹನ್ ಉನ್ನಿಥಾನ್ (ಕಾಸರಗೋಡು), ಕೆ.ಸುಧಾಕರನ್ (ಕಣ್ಣೂರು), ಶಾಫಿ ಪರಂಬಿಲ್ (ವಡಕರ), ರಾಹುಲ್ ಗಾಂಧಿ (ವಯನಾಡ್), ಎಂ.ಕೆ. ರಾಘವನ್ (ಕೋಳಿಕೋಡ್), ವಿ.ಕೆ. ಶ್ರೀಕಂದನ್ (ಪಾಲಕ್ಕಾಡ್), ರಮ್ಯಾ ಹರಿದಾಸ್ (ಆಲತ್ತೂರ್ (SC), ಕೆ. ಮುರಳೀಧರನ್ (ತ್ರಿಶೂರ್), ಬೆನ್ನಿ ಬಹನನ್ (ಚಾಲಕುಡಿ), ಹೈಬಿ ಈಡನ್ (ಎರ್ನಾಕುಲಂ), ಡೀನ್ ಕುರಿಯಾಕೋಸ್ (ಇಡುಕ್ಕಿ), ಕೋಡಿಕುನ್ನಿಲ್ ಸುರೇಶ್ (ಮಾವೇಲಿಕ್ಕರ (SC), ಆಂಟೊ ಆಂಟೋನಿ (ಪತ್ತನಂತಿಟ್ಟ), ಅಡೂರ್ ಪ್ರಕಾಶ್ (ಅಟ್ಟಿಂಗಲ್), ಡಾ. ಶಶಿ ತರೂರ್ (ತಿರುವನಂತಪುರಂ) ಇವರುಗಳನ್ನು ಈ ಬಾರಿ ಕಣಕ್ಕಿಳಿಸಲು ಕಾಂಗ್ರೆಸ್‌ ನಿರ್ಧರಿಸಿದೆ.

    ಛತ್ತೀಸ್​ಗಢದಲ್ಲಿ ಮಾಜಿ ಸಿಎಂ ಭೂಪೇಶ್​ ಬಘೇಲ್​ ಸೇರಿ 6 ಮಂದಿಗೆ ಟಿಕೆಟ್ ನೀಡಲಾಗಿದೆ. ಡಾ. ಶಿವಕುಮಾರ್ ದಹರಿಯಾ (ಜಂಜಗಿರ್ – ಚಂಪಾ (SC), ಜ್ಯೋತ್ಸ್ನಾ ಮಹಂತ್ (ಕೊರ್ಬಾ), ರಾಜೇಂದ್ರ ಸಾಹು (ದುರ್ಗ್), ವಿಕಾಸ್ ಉಪಾಧ್ಯಾಯ (ರಾಯ್ಪುರ), ತಾರಧ್ವಜ್ ಸಾಹು (ಮಹಾಸಮುಂಡ)ಗೆ ಟಿಕೆಟ್‌ ಘೋಷಣೆ ಮಾಡಲಾಗಿದೆ.

    ತೆಲಂಗಾಣದಿಂದ 4 ಅಭ್ಯರ್ಥಿಗಳ ಹೆಸರನ್ನು ಬಿಡುಗಡೆ ಮಾಡಲಾಗಿದೆ. ಸುರೇಶ್ ಕುಮಾರ್ ಶೆಟ್ಕರ್ (ಜಹೀರಾಬಾದ್), ಸುನೀತಾ ಮಹೇಂದರ್ ರೆಡ್ಡಿ (ಚೇವೆಲ್ಲಾ), ಕುಂದೂರು ರಘುವೀರ್ (ನಲ್ಗೊಂಡ), ಪೋರಿಕ ಬಲರಾಮ್ ನಾಯಕ್ (ಮಹಬೂಬಾಬಾದ್-ST)ಗೆ ಟಿಕೆಟ್ ಘೋಷಿಸಲಾಗಿದೆ. ಜೊತೆಗೆ ಮೊಹಮ್ಮದ್‌ ಹಮ್ದುಲ್ಲಾ ಸೈಯದ್‌ (ಲಕ್ಷದ್ವೀಪ-ST), ವಿನ್ಸೆಂಟ್‌ ಹೆಚ್‌ ಪಾಲಾ (ಶಿಲ್ಲಾಂಗ್-‌ ST, ಮೇಘಾಲಯ), ಸಲೆಂಗ್‌ ಎ ಸಂಗ್ಮಾ (ತುರಾ-ST, ಮೇಘಾಲಯ), ಎಸ್‌ ಸಪಾಂಗ್‌ಮೆರೆನ್‌ ಜಮಿರ್‌ (ನಾಗಾಲ್ಯಾಂಡ್), ಗೋಪಾಲ್‌ ಚೆಟ್ರಿ (ಸಿಕ್ಕಿಂ) ಕಣದಲ್ಲಿದ್ದಾರೆ.

  • ಯಾರ ಪ್ರಭಾವಕ್ಕೂ ಒಳಗಾಗದಿದ್ರೆ ಫೋನ್‌ ಹ್ಯಾಕಿಂಗ್‌ ಪ್ರಯತ್ನ ಯಾಕೆ? – ಯಾವುದಕ್ಕೂ ಹೆದರಲ್ಲ: ರಾಗಾ ತಿರುಗೇಟು

    ಯಾರ ಪ್ರಭಾವಕ್ಕೂ ಒಳಗಾಗದಿದ್ರೆ ಫೋನ್‌ ಹ್ಯಾಕಿಂಗ್‌ ಪ್ರಯತ್ನ ಯಾಕೆ? – ಯಾವುದಕ್ಕೂ ಹೆದರಲ್ಲ: ರಾಗಾ ತಿರುಗೇಟು

    ನವದೆಹಲಿ: ಸರ್ಕಾರ ಯಾರ ಪ್ರಭಾವಕ್ಕೂ ಒಳಗಾಗದಿದ್ರೆ ಫೋನ್‌ ಹ್ಯಾಕಿಂಗ್‌ ಪ್ರಯತ್ನ ಯಾಕೆ? ನಮ್ಮ ಫೋನ್‌ಗಳನ್ನು ಎಷ್ಟು ಬೇಕಾದರೂ ಟ್ಯಾಪ್ (Phone Tapping) ಮಾಡಬಹುದು, ಸರ್ಕಾರದ ಪ್ರಯತ್ನಗಳಿಗೆ ನಾವು ಹೆದರುವುದಿಲ್ಲ ಎಂದು ಸಂಸದ ರಾಹುಲ್ ಗಾಂಧಿ (Rahul Gandhi) ತಿರುಗೇಟು ನೀಡಿದರು.

    ಕೇಂದ್ರ ಸರ್ಕಾರದಿಂದ ವಿಪಕ್ಷ ನಾಯಕರ ಫೋನ್‌ ಕದ್ದಾಲಿಕೆ ಆರೋಪದ ಕುರಿತು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕೇಂದ್ರ ಸರ್ಕಾರದ (Union Government) ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಸರ್ಕಾರದ ಇಂತಹ ನಡೆ ವಿರುದ್ಧ ಬಹಳ ಕಡಿಮೆ ಜನರು ಹೋರಾಡುತ್ತಿದ್ದಾರೆ. ನೀವು ಎಷ್ಟು ಬೇಕಾದರೂ ಟ್ಯಾಪಿಂಗ್ ಮಾಡಬಹುದು, ನಾನು ಹೆದರುವುದಿಲ್ಲ, ಬೇಕಿದ್ದರೆ ನಾನೇ ನಿಮಗೆ ನನ್ನ ಫೋನ್‌ ಕೊಡುತ್ತೇನೆ ಎಂದು ತಿರುಗೇಟು ನೀಡಿದರು. ಇದನ್ನೂ ಓದಿ: ಆಪಲ್‌ನಿಂದ 150 ದೇಶಗಳ ಜನರಿಗೆ ಎಚ್ಚರಿಕೆ ಸಂದೇಶ – ಕದ್ದಾಲಿಕೆ ಆರೋಪಕ್ಕೆ ಕೇಂದ್ರ ಸ್ಪಷ್ಟನೆ

    ಸರ್ಕಾರವು ವಿಚಲಿತ ರಾಜಕೀಯದಲ್ಲಿ ತೊಡಗಿದೆ, ಈಗಿನ ಸರ್ಕಾರದ ಮುಖ್ಯಸ್ಥರು ಮರೆಮಾಚುತ್ತಿದ್ದ ಸತ್ಯ ಪ್ರತಿಪಕ್ಷಗಳಿಗೆ ಗೊತ್ತಾಗಿದೆ. ದೇಶದ ಜನತೆಗೆ ಪ್ರತಿಯೊಂದು ಸತ್ಯವೂ ಅರ್ಥವಾಗುತ್ತಿದೆ. ಸರ್ಕಾರದ ಟ್ಯಾಪಿಂಗ್ ಸಹ ಯಾವುದೇ ವ್ಯತ್ಯಾಸ ತೋರಿಸುತ್ತಿಲ್ಲ. ಸದ್ಯದ ಪರಿಸ್ಥಿತಿಯಲ್ಲಿ ದೇಶ ಅನುಭವಿಸುತ್ತಿರುವ ನಷ್ಟವನ್ನು ಊಹಿಸಲೂ ಸಾಧ್ಯವಿಲ್ಲ. ಏಕೆಂದರೆ ಸುಳ್ಳು ಕನಸುಗಳೇ ಮಾರಾಟವಾಗುತ್ತಿವೆ ಎಂದು ಎಚ್ಚರಿಸಿದರು. ಇದನ್ನೂ ಓದಿ: ಮತೀಯ ದ್ವೇಷಕ್ಕೆ ಪ್ರಚೋದನೆ ಆರೋಪ – ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ವಿರುದ್ಧ ಕೇಸ್‌

    ನಾವು ವಿರೋಧ ಪಕ್ಷದಲ್ಲಿದ್ದು ನಮ್ಮ ಕರ್ತವ್ಯ ಸರಿಯಾಗಿ ನಿರ್ವಹಿಸುತ್ತಿದ್ದೇವೆ. ಅಲ್ಲದೇ ಪ್ರಧಾನಿ ಮೋದಿಯವರ ಆತ್ಮ ಅದಾನಿಯಲ್ಲಿದೆ, ಅಧಿಕಾರ ಬೇರೆಯವರ ಕೈಯಲ್ಲಿದೆ, ಕೃಷಿ ಕ್ಷೇತ್ರ ಅದಾನಿ (Gautam Adani) ಕೈಯಲ್ಲಿದೆ, ಮೂಲಸೌಕರ್ಯ ಅವರ ಕೈಯಲ್ಲಿದೆ. ದೇಶದ ಆಸ್ತಿ ಮಾರಾಟವಾಗುತ್ತಿದೆ. ಇದರಿಂದ ದೇಶದ ಯುವಕರಿಗೆ ತೊಂದರೆಯಾಗುತ್ತಿದೆ ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ಕೇಂದ್ರದಿಂದ ಐಫೋನ್‌ ಕದ್ದಾಲಿಕೆಗೆ ಯತ್ನ – ಎಚ್ಚರಿಕೆ ಸಂದೇಶ ಬಂದಿದ್ದಾಗಿ ಪ್ರತಿಪಕ್ಷ ನಾಯಕರ ಆರೋಪ

    ಈ ಹಿಂದೆ ಪ್ರಧಾನಿ ಮೋದಿ ಸರ್ಕಾರದಲ್ಲಿ ನಂ.1 ಮತ್ತು ಅಮಿತ್ ಶಾ (Amit Shah) 2ನೇ ಸ್ಥಾನದಲ್ಲಿದ್ದಾರೆ ಎಂದು ಹೇಳಲಾಗಿತ್ತು. ಈಗ ಚಿತ್ರಣ ಬದಲಾಗಿದೆ, ಸರ್ಕಾರದಲ್ಲಿ ಅದಾನಿ ನಂಬರ್ 1, ಪಿಎಂ ಮೋದಿ 2 ಮತ್ತು ಅಮಿತ್ ಶಾ 3ನೇ ಸ್ಥಾನದಲ್ಲಿದ್ದಾರೆ. ಪ್ರಧಾನಿ ಮೋದಿಯವರಿಗೆ ಯಾರು ಕೆಲಸ ಕೊಡಲು ಹೊರಟಿದ್ದಾರೆ ಎಂಬ ಸತ್ಯ ಸಾರ್ವಜನಿಕರಿಗೆ ಅರ್ಥವಾಗುತ್ತದೆ. ಕೃಷಿ ಕ್ಷೇತ್ರ ಮತ್ತು ಮೂಲಸೌಕರ್ಯಗಳನ್ನು ಸಂಪೂರ್ಣವಾಗಿ ಮಾರಾಟ ಮಾಡಲಾಗಿದೆ, ಸರ್ಕಾರವು ಯಾವುದೇ ಪ್ರಭಾವಕ್ಕೆ ಒಳಗಾಗುವುದಿಲ್ಲ ಎಂದಾದರೆ ಹ್ಯಾಕಿಂಗ್ ಪ್ರಯತ್ನ ಯಾಕೆ ಎಂದು ಪ್ರಶ್ನಿಸಿದರು.

    ಈಗಿನ ಕೇಂದ್ರ ಸರ್ಕಾರ ಸಾಮಾನ್ಯ ಜನರ ಸರ್ಕಾರವಲ್ಲ, ಈ ಸರ್ಕಾರದಲ್ಲಿ ಶ್ರೀಸಾಮಾನ್ಯರ ಕಡೆಗಣನೆ ಮತ್ತು ಶ್ರೀಮಂತರ ಗಣನೆ ಸ್ಪಷ್ಟವಾಗಿ ಗೋಚರಿಸುತ್ತಿದೆ. ಈ ಸರ್ಕಾರವು ಕೆಲವು ಕೈಗಾರಿಕದ್ಯೊಮಿಗಳ ಮನೆಗಳಿಗೆ ಕೆಲಸ ಮಾಡುತ್ತದೆ. ಈ ಸರ್ಕಾರದ ಅಡಿಯಲ್ಲಿ ಹಣದುಬ್ಬರ ಉತ್ತುಂಗದಲ್ಲಿದೆ, ಜನರ ದೈನಂದಿನ ಅಗತ್ಯಗಳನ್ನು ಪೂರೈಸಲು ಅವರ ಜೇಬಿನಲ್ಲಿ ಹಣವಿಲ್ಲ. ತರಕಾರಿಗಳ ಬೆಲೆ ಗಗನಕ್ಕೇರಿದೆ. ಅಷ್ಟೇ ಅಲ್ಲದೇ ದೇಶೀಯ ರಂಗದಲ್ಲಿ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಮೋದಿ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಅಸಮಾಧಾನ ಹೊರಹಾಕಿದರು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಕೇಂದ್ರದಿಂದ ಐಫೋನ್‌ ಕದ್ದಾಲಿಕೆಗೆ ಯತ್ನ – ಎಚ್ಚರಿಕೆ ಸಂದೇಶ ಬಂದಿದ್ದಾಗಿ ಪ್ರತಿಪಕ್ಷ ನಾಯಕರ ಆರೋಪ

    ಕೇಂದ್ರದಿಂದ ಐಫೋನ್‌ ಕದ್ದಾಲಿಕೆಗೆ ಯತ್ನ – ಎಚ್ಚರಿಕೆ ಸಂದೇಶ ಬಂದಿದ್ದಾಗಿ ಪ್ರತಿಪಕ್ಷ ನಾಯಕರ ಆರೋಪ

    ನವದೆಹಲಿ: ತಮ್ಮ ಫೋನ್‌ಗಳ ಮೇಲೆ ಸರ್ಕಾರಿ ಪ್ರಾಯೋಜಕತ್ವದ ದಾಳಿ ನಡೆಯುತ್ತಿದೆ, ಕೇಂದ್ರದಿಂದ ಫೋನ್‌ ಕದ್ದಾಲಿಕೆ ನಡೆಯುತ್ತಿದೆ ಎಂದು ಪ್ರತಿಪಕ್ಷಗಳ ವಿವಿಧ ನಾಯಕರು ಕೇಂದ್ರ ಸರ್ಕಾರದ (Union Government) ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ.

    ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ (Mahua Moitra), ಕಾಂಗ್ರೆಸ್ ನಾಯಕ ಶಶಿ ತರೂರ್, ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಹಾಗೂ ಶಿವಸೇನಾದ (ಉದ್ಧವ್ ಬಣ) ಪ್ರಿಯಾಂಕಾ ಚತುರ್ವೇದಿ (Priyanka Chaturvedi) ಅವರು ತಮ್ಮ ಐ-ಫೋನ್‌ಗಳ (iPhone) ಮೇಲೆ ಸರ್ಕಾರಿ ಪ್ರಾಯೋಜಿತ ದಾಳಿಕೋರರು ಟಾರ್ಗೆಟ್ ಮಾಡುತ್ತಿರಬಹುದು ಎಂದು ಆಪಲ್ ಕಂಪನಿಯಿಂದ ಫೋನ್ ಹಾಗೂ ಇ-ಮೇಲ್‌ಗಳಿಗೆ (E-mail) ಎಚ್ಚರಿಕೆ ಸಂದೇಶ ಬಂದಿರುವುದಾಗಿ ಹೇಳಿದ್ದಾರೆ.

    ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ (Rahul Gandhi) ಅವರ ಕಚೇರಿಯಲ್ಲಿನ ಕೆಲವರಿಗೂ ಈ ಸಂದೇಶ ಬಂದಿದೆ ಎನ್ನಲಾಗಿದೆ. ಇದಕ್ಕೆ ಪ್ರತಿಕ್ರಿಯೆ ನೀಡಿರುವ ಸರ್ಕಾರ, ಈ ಸಂದೇಶಗಳ ಬಗ್ಗೆ ಅರಿವಿದೆ. ಐಫೋನ್‌ಗಳಲ್ಲಿ ಬೆದರಿಕೆ ಪತ್ತೆ ಮಾಡುವ ತಂತ್ರಜ್ಞಾನವು ಕೆಲವೊಮ್ಮೆ ಅಸಮಗ್ರ ಹಾಗೂ ಅಪೂರ್ಣವಾಗಿರುತ್ತದೆ ಎಂದು ಹೇಳಿದೆ.

    ಆಪಲ್‌ನಿಂದ ಬಂದ ಸಂದೇಶದಲ್ಲಿ ಏನಿದೆ?
    ನೀವು ಸರ್ಕಾರಿ ಪ್ರಾಯೋಜಿತ ದಾಳಿಕೋರರಿಂದ ಗುರಿಯಾಗುತ್ತಿದ್ದೀರಿ. ಅವರು ನಿಮ್ಮ ಆಪಲ್ ಐಡಿಗೆ (Apple ID) ಸಂಬಂಧಿಸಿದ ಐಫೋನ್‌ಗೆ ದೂರದಿಂದ ಕದ್ದಾಲಿಕೆ ಮಾಡಲು ಪ್ರಯತ್ನಿಸುತ್ತಿದ್ದಾರೆ ಎಂದು ಆಪಲ್‌ನ ಸಂದೇಶ ಹೇಳಿದೆ.

    ಈ ದಾಳಿಕೋರರು ನೀವು ಯಾರು ಅಥವಾ ನೀವು ಏನು ಮಾಡುತ್ತೀರಿ ಎಂಬ ಆಧಾರದಲ್ಲಿ ನಿಮ್ಮನ್ನು ವ್ಯಕ್ತಿಗತವಾಗಿ ಟಾರ್ಗೆಟ್ ಮಾಡುತ್ತಿರುವ ಸಾಧ್ಯತೆ ಇದೆ. ಇದರಿಂದ ನಿಮ್ಮ ಸೂಕ್ಷ್ಮ ಡೇಟಾ, ಸಂಹವನಗಳು ಅಥವಾ ಕ್ಯಾಮೆರಾ ಮತ್ತು ಮೈಕ್ರೋಫೋನ್‌ಗಳನ್ನು ಕದಿಯಲು ಅವರಿಗೆ ಸಾಧ್ಯವಾಗಲಿದೆ. ಇದು ಸುಳ್ಳು ಎಚ್ಚರಿಕೆಯಾಗುವ ಸಾಧ್ಯತೆ ಇದ್ದರೂ, ಈ ಎಚ್ಚರಿಕೆಯನ್ನು ಗಂಭೀರವಾಗಿ ಪರಿಗಣಿಸಿ ಎಂದು ಸಂದೇಶದಲ್ಲಿದೆ.

    ಬಿಜೆಪಿ ಪ್ರತಿಕ್ರಿಯೆ ಏನು?
    ತಮ್ಮ ಫೋನ್‌ಗಳನ್ನು ಹ್ಯಾಕ್ ಮಾಡಲು ಸರ್ಕಾರ ಪ್ರಯತ್ನಿಸುತ್ತಿದೆ ಎಂದು ಆರೋಪಿಸಿರುವ ವಿಪಕ್ಷ ನಾಯಕರ ವಿರುದ್ಧ ಹರಿಹಾಯ್ದಿರುವ ಬಿಜೆಪಿ ಐಟಿ ಘಟಕದ ಮುಖ್ಯಸ್ಥ ಅಮಿತ್ ಮಾಳವೀಯ, ಆಪಲ್‌ನ ಸ್ಪಷ್ಟೀಕರಣ ಬರುವವರೆಗೂ ಕಾಯುವಂತೆ ಮನವಿ ಮಾಡಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಪವನ್ ಖೇರಾ ಕ್ಷಮೆಯಾಚಿಸಿದ್ದಾರೆ: ಅಸ್ಸಾಂ ಸಿಎಂ

    ಪವನ್ ಖೇರಾ ಕ್ಷಮೆಯಾಚಿಸಿದ್ದಾರೆ: ಅಸ್ಸಾಂ ಸಿಎಂ

    ದಿಸ್ಪುರ್: ಕಾಂಗ್ರೆಸ್ ಮುಖಂಡ ಪವನ್ ಖೇರಾ (Pawan Khera) ಅವರ ಬಂಧನ ಹಾಗೂ ಬಿಡುಗಡೆಯ ಬಳಿಕ ಅವರು ನೀಡಿದ್ದ ಹೇಳಿಕೆಗೆ ಬೆಷರತ್ ಕ್ಷಮೆ ಯಾಚಿಸಿದ್ದಾರೆ. ಸಾರ್ವಜನಿಕ ಸ್ಥಳಗಳಲ್ಲಿ ಯಾರು ಗೌರವಕ್ಕೆ ಧಕ್ಕೆ ಬರುವಂತಹ ಯಾವ ಪದಗಳನ್ನು ಬಳಸುವದಿಲ್ಲ ಎಂದು ನಾವು ಭಾವಿಸುತ್ತೇವೆ ಎಂದು ಅಸ್ಸಾಂ (Assam) ಮುಖ್ಯಮಂತ್ರಿ ಹಿಮಂತ್ ಬಿಸ್ವಾ ಶರ್ಮಾ (Himanta Biswa Sarma) ಶುಕ್ರವಾರ ಟ್ವೀಟ್ ಮಾಡಿದ್ದಾರೆ.

    ರಾಯ್‍ಪುರದ (Raipur) ಕಾಂಗ್ರೆಸ್ ಮಾಹಾಧಿವೇಶನಕ್ಕೆ (Congress plenary session) ತೆರಳಲು ವಿಮಾನವೇರಿದ್ದ ಪವನ್ ಖೇರಾ ಅವರನ್ನು ಅಸ್ಸಾಂ ಪೊಲೀಸರು ಗುರುವಾರ ಬಂಧಿಸಿದ್ದರು. ಖೇರಾ ಅವರ ವಿರುದ್ಧ ಕ್ರಿಮಿನಲ್ ಸಂಚು, ಮತ್ತು ಪ್ರಧಾನಿ ನರೇಂದ್ರ ಮೋದಿ ಅವರನ್ನು ಗುರಿಯಾಗಿಸಿ ಕೋಮು ಸೌಹಾರ್ದತೆಗೆ ಪ್ರಚೋದಿಸಿದ ಆರೋಪ ದಾಖಲಿಸಲಾಗಿದೆ ಎಂದು ಅಸ್ಸಾಂ ಪೊಲೀಸ್ ಐಜಿಪಿ ಮತ್ತು ವಕ್ತಾರ ಪ್ರಶಾಂತ ಕುಮಾರ್ ಭುಯಾನ್ ತಿಳಿಸಿದ್ದರು. ಇದನ್ನೂ ಓದಿ: ಸಿಟಿ ರವಿಗೆ ಮೂಳೆ ಬಿರಿಯಾನಿ, ಚಿಕನ್ ಪಾರ್ಸೆಲ್ ಮಾಡಿದ ಕೈ ಪಡೆ

     ಮುಂಬೈನ ಪತ್ರಿಕಾಗೋಷ್ಠಿಯೊಂದರಲ್ಲಿ ಫೆ.17ರಂದು ಖೇರಾ, ನರೇಂದ್ರ ಗೌತಮ್‍ದಾಸ್ ಮೋದಿ ಎಂದು ಉಚ್ಛರಿಸಿ ಬಳಿಕ ನರೇಂದ್ರ ದಾಮೋದರ ದಾಸ್ ಮೋದಿ (Narendra Modi) ಎಂದಿದ್ದರು. ಅಸ್ಸಾಂ ಪೊಲೀಸರು ಬಂಧಿಸಿದ ಕೂಡಲೇ ವಕೀಲರು ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದರು. ತುರ್ತು ಅರ್ಜಿ ವಿಚಾರಣೆ ನಡೆಸಿದ ಕೋರ್ಟ್ ಜಾಮೀನು ಮಂಜೂರು ಮಾಡಿತ್ತು. ಇದನ್ನೂ ಓದಿ: ಹಾಸನದ ಜೆಡಿಎಸ್ ಟಿಕೆಟ್ ಗೊಂದಲಕ್ಕೆ ತೆರೆ ಎಳೆಯಲು ಹೆಚ್‌ಡಿಕೆ ಮಾಸ್ಟರ್ ಪ್ಲಾನ್

    LIVE TV
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಬಂಧನಕ್ಕೊಳಗಾದ ಕೆಲವೇ ಗಂಟೆಗಳಲ್ಲಿ ಕೈ ನಾಯಕ ಪವನ್ ಖೇರಾಗೆ ಮಧ್ಯಂತರ ಜಾಮೀನು

    ಬಂಧನಕ್ಕೊಳಗಾದ ಕೆಲವೇ ಗಂಟೆಗಳಲ್ಲಿ ಕೈ ನಾಯಕ ಪವನ್ ಖೇರಾಗೆ ಮಧ್ಯಂತರ ಜಾಮೀನು

    ನವದೆಹಲಿ: ಕೆಲವೇ ಗಂಟೆಗಳ ಹಿಂದೆ ಅಸ್ಸಾಂ ಪೊಲೀಸರಿಂದ ಬಂಧನಕ್ಕೊಳಗಾಗಿದ್ದ ಕಾಂಗ್ರೆಸ್ ಹಿರಿಯ ನಾಯಕ ಪವನ್ ಖೇರಾಗೆ ಸುಪ್ರೀಂಕೋರ್ಟ್ (SupremeCourt) ಜಾಮೀನು ನೀಡಿದೆ. ಜಾಮೀನು (Bail) ಕೋರಿ ಅರ್ಜಿ ಸಲ್ಲಿಸುವವರೆಗೂ ಮಧ್ಯಂತರ ಜಾಮೀನು ನೀಡಲು ದ್ವಾರಕ ನ್ಯಾಯಾಲಯಕ್ಕೆ ಸುಪ್ರೀಂಕೋರ್ಟ್ ನಿರ್ದೇಶನ ನೀಡಿದೆ.

    ಇಂದು ದೆಹಲಿ ವಿಮಾನ ನಿಲ್ದಾಣ (Delhi Airport) ದಲ್ಲಿ ಪವನ್ ಖೇರಾ ಅವರನ್ನು ಬಂಧಿಸುತ್ತಿದ್ದಂತೆ ಸುಪ್ರೀಂಕೋರ್ಟ್ ನಲ್ಲಿ ವಿಚಾರವನ್ನು ಪ್ರಸ್ತಾಪಿಸಲಾಯಿತು. ಸಿಜೆಐ ಚಂದ್ರಚೂಡ್ ಪೀಠದ ಮುಂದೆ ವಿಷಯ ಪ್ರಸ್ತಾಪಿಸಿದ ವಕೀಲ ಅಭಿಷೇಕ್ ಮನುಸಿಂಘ್ವಿ (Abhishek Manu Singhvi) ದೇಶದ್ಯಾಂತ ದಾಖಲಾಗುತ್ತಿರುವ ಎಫ್‍ಐಆರ್‍ಗಳನ್ನು ಒಂದೂಗೂಡಿಸಬೇಕು ಮತ್ತು ಖೇರಾಗೆ ಮಧ್ಯಂತರ ಜಾಮೀನು ನೀಡುವಂತೆ ಮನವಿ ಮಾಡಿದರು.

    ವಾದ ಆಲಿಸಿದ ಬಳಿಕ ಸಿಜೆಐ ಪೀಠ ಮಧ್ಯಂತರ ಜಾಮೀನು ನೀಡಲು ಸೂಚಿಸಿ, ಎಫ್‍ಐಆರ್ ಗಳನ್ನು ಕ್ಲಬ್ ಮಾಡುವ ಅಭಿಪ್ರಾಯ ತಿಳಿಸುವಂತೆ ಅಸ್ಸಾಂ ಮತ್ತು ಉತ್ತರಪ್ರದೇಶ ಪೊಲೀಸರಿಗೆ ನೋಟಿಸ್ ಜಾರಿ ಮಾಡಿತು. ಮುಂದಿನ ವಿಚಾರಣೆ ವೇಳೆಗೆ ಉತ್ತರಿಸಲು ಪೀಠ ಸೂಚಿಸಿದೆ. ಇದನ್ನೂ ಓದಿ: 1.5 ಲಕ್ಷ ಮೌಲ್ಯದ ಚಪ್ಪಲಿ, 80 ಸಾವಿರ ಮೌಲ್ಯದ ಜೀನ್ಸ್ – ಜೈಲಿನಲ್ಲಿ ಸುಕೇಶ್ ಐಷಾರಾಮಿ ಜೀವನ

    ಪವನ್ ಖೇರಾ ವಿರುದ್ಧ ಐಪಿಸಿ ಸೆಕ್ಷನ್ 153 ಎ ಧರ್ಮ, ಜನಾಂಗ, ಜನ್ಮಸ್ಥಳ ಇತ್ಯಾದಿಗಳ ಆಧಾರದ ಮೇಲೆ ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು ಮತ್ತು ಸೆಕ್ಷನ್ 295 ಎ ಉದ್ದೇಶಪೂರ್ವಕ ಮತ್ತು ದುರುದ್ದೇಶಪೂರಿತ ಕೃತ್ಯಗಳು, ಯಾವುದೇ ವರ್ಗದ ಧರ್ಮವನ್ನು ಅವಮಾನಿಸುವ ಮೂಲಕ ಧಾರ್ಮಿಕ ಭಾವನೆಗಳನ್ನು ಕೆರಳಿಸುವ ಉದ್ದೇಶದಿಂದ ಅಪರಾಧಗಳನ್ನು ದಾಖಲಿಸಲಾಗಿದೆ.

    ಇತ್ತೀಚೆಗೆ ನಡೆದ ಸುದ್ದಿಗೋಷ್ಠಿಯಲ್ಲಿ, ಪವನ್ ಖೇರಾ (Pawan Khera) ಅದಾನಿ-ಹಿಂಡೆನ್‍ಬರ್ಗ್ ಪ್ರಕರಣವನ್ನು ಬಗ್ಗೆ ಜಂಟಿ ಸಂಸದೀಯ ತನಿಖೆಗೆ ನೀಡಬೇಕು ಎಂದು ಒತ್ತಾಯಿಸುವ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಹೆಸರನ್ನು ಪ್ರಸ್ತಾಪಿಸಿದ್ದರು. ನರಸಿಂಹರಾವ್ ಅವರು ಜೆಪಿಸಿ (ಜಂಟಿ ಸಂಸದೀಯ ಸಮಿತಿ) ರಚಿಸಬಹುದಾದರೆ, ಅಟಲ್ ಬಿಹಾರಿ ವಾಜಪೇಯಿ ಅವರು ಜೆಪಿಸಿ ರಚಿಸಬಹುದಾದರೆ, ನರೇಂದ್ರ ಗೌತಮ್ ದಾಸ್ ಅವರಿಗೆ ಏನು ಸಮಸ್ಯೆ? ಕ್ಷಮಿಸಿ ದಾಮೋದರದಾಸ್ ಮೋದಿಗೆ? ಎಂದು ಖೇರಾ ಹೇಳಿದ್ದರು. ನಂತರ ಅವರು ಮಧ್ಯದ ಹೆಸರನ್ನು ಸಹೋದ್ಯೋಗಿಯೊಂದಿಗೆ ದೃಢೀಕರಿಸಿಕೊಂಡರು.

    ಖೇರಾ ಅವರು ಉದ್ದೇಶಪೂರ್ವಕವಾಗಿ ಹೆಸರನ್ನು ತೇಲಿಬಿಟ್ಟಿದ್ದಾರೆ ಎಂದು ಬಿಜೆಪಿ ಆರೋಪಿಸಿದೆ. ಅಲ್ಲದೇ ಅಸ್ಸಾಂ ಮತ್ತು ಉತ್ತರ ಪ್ರದೇಶ ಸೇರಿದಂತೆ ಹಲವು ರಾಜ್ಯಗಳಲ್ಲಿ ಅವರ ವಿರುದ್ಧ ಎಫ್‍ಐಆರ್ ದಾಖಲಿಸಲಾಗುತ್ತಿದೆ. ಅಸ್ಸಾಂನಲ್ಲಿ ದಾಖಲಾದ ಎಫ್‍ಐಆರ್ ಅನ್ವಯ ಅವರನ್ನು ಇಂದು ದೆಹಲಿ ವಿಮಾನ ನಿಲ್ದಾಣದಲ್ಲಿ ಬಂಧಿಸಲಾಗಿತ್ತು. ರಾಯ್‍ಪುರಕ್ಕೆ ಕಾಂಗ್ರೆಸ್ ನಾಯಕರು ತೆರಳುವ ವೇಳೆ ವಿಮಾನದಿಂದ ಇಳಿಸಿ ಅವರನ್ನು ಪೊಲೀಸರು ಬಂಧಿಸಿದ್ದರು.

    LIVE TV
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ವಿದೇಶಾಂಗ ಸಚಿವ ಜೈಶಂಕರ್ ಪುತ್ರನಿಗೆ ಚೀನಾ ಫಂಡಿಂಗ್ ಲಿಂಕ್ – ಕಾಂಗ್ರೆಸ್ ಗಂಭೀರ ಆರೋಪ

    ವಿದೇಶಾಂಗ ಸಚಿವ ಜೈಶಂಕರ್ ಪುತ್ರನಿಗೆ ಚೀನಾ ಫಂಡಿಂಗ್ ಲಿಂಕ್ – ಕಾಂಗ್ರೆಸ್ ಗಂಭೀರ ಆರೋಪ

    ನವದೆಹಲಿ: ದಿ. ರಾಜೀವ್ ಗಾಂಧಿ ಫೌಂಡೇಶನ್ (RGF) ಚೀನಾದಿಂದ ಹಣ ಪಡೆದಿದೆ ಎಂಬ ಬಿಜೆಪಿ (BJP) ಆರೋಪಕ್ಕೆ ತಿರುಗೇಟು ನೀಡಿರುವ ಕಾಂಗ್ರೆಸ್ (Congress), ಭಾರತದ ವಿದೇಶಾಂಗ ಸಚಿವ ಎಸ್.ಜೈಶಂಕರ್ (S Jaishankar) ಅವರ ಪುತ್ರನಿಗೆ ಚೀನಾ ಫಂಡಿಂಗ್ (China Fund) ಲಿಂಕ್ ಇರುವುದಾಗಿ ಆರೋಪಿಸಿದೆ.

    ಇಂದು ಸುದ್ದಿಗಾರರೊಂದಿಗೆ ಮಾತನಾಡಿರುವ ಕಾಂಗ್ರೆಸ್ ನಾಯಕ ಪವನ್ ಖೇರಾ (Pawan Khera), ಆರ್‌ಜಿಎಫ್ ಚೀನಾದಿಂದ ಹಣವನ್ನು ತೆಗೆದುಕೊಳ್ಳುವ ಮಾಹಿತಿಯು ಸಾರ್ವಜನಿಕ ಡೊಮೇನ್‌ಲ್ಲಿ ಲಭ್ಯವಿದೆ. ಅಲ್ಲದೇ ವಿವಿಧ ಸಂಸ್ಥೆಗಳಿಂದಲೂ ಅನುದಾನ ಪಡೆಯುತ್ತಿದೆ. ಎಸ್.ಜೈಶಂಕರ್ ಅವರ ಪುತ್ರ ಕೆಲಸ ಮಾಡುತ್ತಿರುವ ಸಂಸ್ಥೆಗೆ ಚೀನಾ ರಾಯಭಾರ ಕಚೇರಿಯಿಂದ ಮೂರು ಬಾರಿ ಅನುದಾನ ಬಂದಿದೆ ಎಂದು ದೂರಿದ್ದಾರೆ. ಇದನ್ನೂ ಓದಿ: PM ಕೇರ್ ನಿಧಿಗೆ ಕೊಡುಗೆ ನೀಡಲು ಚೀನಾ ಕಂಪನಿಗಳಿಗೆ ಅನುಮತಿಸಿದ್ದೇಕೆ?- ಕಾಂಗ್ರೆಸ್

    ಅಲ್ಲಿ ಅನುದಾನ ಹೇಗೆ ಏರಿಕೆ ಆಯ್ತು ಅನ್ನೋ ಬಗ್ಗೆ ನಾವು ಯಾವುದೇ ಆರೋಪಗಳನ್ನು ಮಾಡಲಿಲ್ಲ. ಆದ್ರೆ ರಾಜೀವ್ ಗಾಂಧಿ ಫೌಂಡೇಶನ್ (ಆರ್‌ಜಿಎಫ್) ಚೀನಾ ರಾಯಭಾರ ಕಚೇರಿಯಿಂದ 1.35 ಕೋಟಿ ರೂ. ಪಡೆದಿದ್ದರಿಂದ ವಿದೇಶಿ ಕೊಡುಗೆ (ನಿಯಂತ್ರಣ) ಕಾಯ್ದೆ (FCRA) ನೋಂದಣಿಯನ್ನು ರದ್ದುಗೊಳಿಸಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಮೋದಿ ಸರ್ಕಾರದಲ್ಲಿ ಚೀನಾ ವಿರುದ್ಧ ಮಾತನಾಡಲು ಅವಕಾಶವೇ ಇಲ್ಲ – ಖರ್ಗೆ ಕಿಡಿ

    ಇದೇ ವೇಳೆ ನರೇಂದ್ರ ಮೋದಿ ಅವರ ವಿರುದ್ಧ ಕಿಡಿಕಾರಿದ ಖೇರಾ, ಗಡಿಯಲ್ಲಿನ ಚಟುವಟಿಕೆಗಳ ಬಗ್ಗೆ ಚೀನಾಕ್ಕೆ ಕ್ಲೀನ್ ಚಿಟ್ ನೀಡುವ ಮೂಲಕ ನಮ್ಮ ಸೈನಿಕರ ತ್ಯಾಗವನ್ನು ಏಕೆ ನಿರಾಕರಿಸುತ್ತಿದ್ದಾರೆ? ಎಂಬುದೇ ತಿಳಿಯುತ್ತಿಲ್ಲ. ಮೋದಿಗೆ ಚೀನಾ ಅಂದ್ರೆ ಏಕೆ ಭಯ? ಚೀನಾದ ಮುಂದೆ ಏಕೆ ಬಾಯಿ ತೆರೆಯುತ್ತಿಲ್ಲ? ಏಕೆ ಚೀನಾಕ್ಕೆ ಕ್ಲೀನ್ ಚಿಟ್ ನೀಡಿ ನಮ್ಮ ಸೈನಿಕರ ತ್ಯಾಗವನ್ನು ನಿರಾಕರಿಸುತ್ತಿದ್ದಾರೆ? ಸೈನಿಕರನ್ನೇಕೆ ಅವಮಾನಿಸುತ್ತಿದ್ದಾರೆ ಎಂದು ಪ್ರಶ್ನೆಗಳ ಸುರಿಮಳೆ ಸುರಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • M-ಮಸೂದ್, O-ಒಸಾಮಾ, D-ದಾವೂದ್, I-ಐಎಸ್‍ಐ: ಮೋದಿ ಹೆಸರಿಗೆ ಕಾಂಗ್ರೆಸ್ ವ್ಯಾಖ್ಯಾನ

    M-ಮಸೂದ್, O-ಒಸಾಮಾ, D-ದಾವೂದ್, I-ಐಎಸ್‍ಐ: ಮೋದಿ ಹೆಸರಿಗೆ ಕಾಂಗ್ರೆಸ್ ವ್ಯಾಖ್ಯಾನ

    ನವದೆಹಲಿ: ಮೋದಿ ಅಂದ್ರೆ ಮಸೂದ್ ಅಜರ್, ಒಸಾಮ ಬಿನ್ ಲಾಡೆನ್, ದಾವೂದ್ ಇಬ್ರಾಹಿಂ, ಐಎಸ್‍ಐ ಎಂದು ಕಾಂಗ್ರೆಸ್ ಹೊಸ ವ್ಯಾಖ್ಯಾನವನ್ನು ನೀಡಿದೆ.

    ಖಾಸಗಿ ಸುದ್ದಿವಾಹಿನಿ ನಡೆಸಿದ್ದ ಚರ್ಚಾ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ವಕ್ತಾರ ಪವನ್ ಖೇರಾ ವಿವಾದಾತ್ಮಕ ವ್ಯಾಖ್ಯಾನವನ್ನು ನೀಡಿದ್ದಾರೆ. ಇದಕ್ಕೆ ಪ್ರತ್ಯುತ್ತರ ನೀಡಿದ ಬಿಜೆಪಿ ವಕ್ತಾರ ಸಂಬಿತ್ ಪಾತ್ರಾ ಅವರು, ಪ್ರಧಾನಿ ನರೇಂದ್ರ ಮೋದಿ ಅವರನ್ನು ಉಗ್ರರ ಜೊತೆಗೆ ಹೊಲಿಕೆ ಮಾಡಿದ್ದು ಅಪರಾಧವಾಗಿದೆ. ಪವನ್ ಖೆರಾ ಕ್ಷಮೆ ಕೇಳಬೇಕು ಎಂದು ಒತ್ತಾಯಿಸಿದರು.

    ವಾದವನ್ನು ಮುಂದುವರಿಸಿದ ಸಂಬಿತ್ ಪಾತ್ರಾ ಅವರು, ಪ್ರಧಾನಿ ನರೇಂದ್ರ ಮೋದಿ ಅಂದ್ರೆ ಮಸೂದ್ ಅಜರ್, ಒಸಾಮ ಬಿನ್ ಲಾಡೆನ್, ದಾವೂದ್ ಇಬ್ರಾಹಿಂ, ಐಎಸ್‍ಐ ಹೌದಾ ಎಂದು ಕಾರ್ಯಕ್ರಮ ವೀಕ್ಷಿಸುತ್ತಿದ್ದ ಪ್ರೇಕ್ಷಕರಿಗೆ ಪ್ರಶ್ನಿಸಿದರು. ತಕ್ಷಣವೇ ಸಭಿಕರು ಅಲ್ಲ..ಅಲ್ಲ.. ಎಂದು ಧ್ವನಿಗೂಡಿಸಿದರು. ಹಾಗಾದರೆ ಈ ಹೇಳಿಕೆಯನ್ನು ಖಂಡಿಸುವುದಾದರೆ ಒಮ್ಮೆ ಎದ್ದು ನಿಂತು ‘ಶೇಮ್ ಶೇಮ್’ ಅಂತ ಹೇಳಿ ಎಂದು ಸಂಬಿತ್ ಪಾತ್ರಾ ಮನವಿ ಮಾಡಿದರು. ಇದನ್ನು ಓದಿ: ಅಂದು ಚಾಯ್‍ವಾಲಾ, ಇಂದು ನೀಚ್ ಅಂದ್ರು: ಬಿಜೆಪಿ ಭರ್ಜರಿ ಗೆಲುವಿಗೆ ಕಾರಣವಾಗುತ್ತಾ?

    ಸಂಬಿತ್ ಪಾತ್ರಾ ಅವರು ಹೇಳುತ್ತಿದ್ದಂತೆ ಅನೇಕ ಸಭಿಕರು ಎದ್ದು ನಿಂತು ‘ಶೇಮ್ ಶೇಮ್’ ಎಂದು ಆಕ್ರೋಶ ಹೊರ ಹಾಕಿದರು. ಜನರ ಗದ್ದಲದಲ್ಲಿಯೇ ವಾಗ್ದಾಳಿ ನಡೆಸಿದ ಸಂಬಿತ್ ಪಾತ್ರಾ ಅವರು, ದೇಶದ ಒಬ್ಬ ಪ್ರಧಾನಿಯನ್ನು ಉಗ್ರರ ಜೊತೆಗೆ ಹೋಲಿಕೆ ಮಾಡುವುದು ಎಷ್ಟರ ಮಟ್ಟಿಗೆ ಸರಿ? ಈ ಹೇಳಿಕೆಗೆ ಸಹೋದರ ಪವನ್ ಖೆರಾ ಅವರು ಕ್ಷಮೆ ಕೇಳಬೇಕೆಂದು ಆಗ್ರಹಿಸಿದರು.

    ಆದರೆ ಪವನ್ ಖೇರಾ ಅವರು ತಮ್ಮ ಹೇಳಿಕೆಗೆ ಕ್ಷಮೆ ಕೇಳಲು ಹಿಂದೇಟು ಹಾಕಿದರು. ಬಿಜೆಪಿ ನಾಯಕರು ಪವನ್ ಖೇರಾ ಹೇಳಿಕೆಯನ್ನು ಖಂಡಿಸಿದ್ದು, ಕ್ಷಮೆಗೆ ಆಗ್ರಹಿಸಿದ್ದಾರೆ. ಸಾಮಾಜಿಕ ಸಾಮಾಜಿಕ ಜಾಲತಾಣದಲ್ಲಿ ಕಾಂಗ್ರೆಸ್ ವಿರುದ್ಧ ನೆಟ್ಟಿಗರು ಭಾರೀ ಆಕ್ರೋಶ ವ್ಯಕಪಡಿಸುತ್ತಿದ್ದಾರೆ.

    ಪಾಠ ಕಲಿಯದ ಕಾಂಗ್ರೆಸ್:
    ಚುನಾವಣೆಯ ಸಮಯದಲ್ಲಿ ಮೋದಿ ವಿರುದ್ಧ ವೈಯಕ್ತಿಕವಾಗಿ ದಾಳಿ ಮಾಡಿದಾಗ ಆ ದಾಳಿಗಳು ಮೋದಿ ಪರ ಅಲೆಯನ್ನು ಸೃಷ್ಟಿ ಮಾಡಿದ ಉದಾಹರಣೆಗಳು ಸಾಕಷ್ಟಿದೆ. ಆದರೂ ತಾವು ಮಾಡಿದ ತಪ್ಪಿನಿಂದ ಪಾಠ ಕಲಿಯದ ಕಾಂಗ್ರೆಸ್ ನಾಯಕರು ಮತ್ತೊಮ್ಮೆ ಮೋದಿಯನ್ನು ಲೇವಡಿ ಮಾಡಿದ್ದಾರೆ.

    2007 ರಲ್ಲಿ ಸೋನಿಯಾ ಗಾಂಧಿ ಮೌತ್ ಕಾ ಸೌದ್ಗಾರ್ (ಸಾವಿನ ಏಜೆಂಟ್) ಎಂದು ಮೋದಿಯನ್ನು ಟೀಕಿಸಿದ್ರು. ಇದನ್ನೇ ಬಳಸಿಕೊಂಡಿದ್ದ ಮೋದಿ ಅಂದು ಗುಜರಾತ್ ವಿಧಾನಸಭೆ ಚುನಾವಣೆ ಹಿಂದೂ ಮತಗಳನ್ನು ಧ್ರುವೀಕರಣ ಮಾಡಿಕೊಂಡು ಗೆಲವು ಸಾಧಿಸಿ ಸಿಎಂ ಆಗಿದ್ದರು.

    2014ರ ಲೋಕಸಭೆ ಚುನಾವಣೆಯಲ್ಲಿ ಮಣಿ ಶಂಕರ್ ಅಯ್ಯರ್ ಯೂಥ್ ಕಾಂಗ್ರೆಸ್ ರೀತಿಯಲ್ಲೇ ಮೋದಿಯನ್ನ ‘ಚಾಯ್ ವಾಲಾ’ ಅಂತಾ ಟೀಕೆ ಮಾಡಿದ್ದರು. ಮೋದಿ ಪ್ರಧಾನಿ ಅಭ್ಯರ್ಥಿಯೇ ಅಲ್ಲ. ಚಹಾ ಮಾರುವುದಕ್ಕೆ ಸೂಕ್ತ ವ್ಯಕ್ತಿ ಎಂದಿದ್ದರು. ಇದನ್ನು ಬಳಸಿಕೊಂಡಿದ್ದ ಬಿಜೆಪಿ `ಚಾಯ್ ಪೇ ಚರ್ಚಾ’ ಅಂತಾ ಹೊಸ ಅಭಿಯಾನ ಹುಟ್ಟು ಹಾಕಿತ್ತು. ಈ ಅಭಿಯಾನ ದೊಡ್ಡಮಟ್ಟದಲ್ಲಿ ಜನ ಮಾನಸದಲ್ಲಿ ಉಳಿದುಕೊಳ್ಳುವ ಮೂಲಕ ಯಶಸ್ವಿಯಾಯಿತು.

    2017ರ ಗುಜರಾತ್ ಚುನವಣೆಯ ಸಮಯದಲ್ಲಿ ತಾನೊಬ್ಬ ಶಿವಭಕ್ತ ಎನ್ನುತ್ತಿರುವ ಕಾಂಗ್ರೆಸ್‍ನವರಿಗೆ ಈಗ ಬಾಬಾ ಸಾಹೇಬ್‍ಗಿಂತ ಬಾಬಾ ಬೋಲೆ ಅಂದ್ರೆ ಶಿವನ ನೆನಪು ಆಗುತ್ತಿದೆ ಎಂದು ಹೇಳಿ ಪ್ರಧಾನಿ ಮೋದಿ ಟೀಕಿಸಿದ್ದರು. ಇದಕ್ಕೆ ತಿರುಗೇಟು ನೀಡುವ ಯತ್ನದಲ್ಲಿ ಮೋದಿಯೊಬ್ಬ `ನೀಚ ಮನುಷ್ಯ’, ಅವರಿಗೆ ಮೌಲ್ಯಗಳೇ ಇಲ್ಲ. ಅಂಥವರ ಬಗ್ಗೆ ಏನು ಹೇಳಲಿಕ್ಕೆ ಆಗುತ್ತೆ ಎಂದು ಮಣಿಶಂಕರ್ ಅಯ್ಯರ್ ಮತ್ತೊಮ್ಮೆ ನಾಲಿಗೆಯನ್ನು ಹರಿಯಬಿಟ್ಟಿದ್ದರು.

    https://twitter.com/ShobhaBJP/status/1107134987587850240

    ಈ ಹೇಳಿಕೆಗೆ ಸೂರತ್ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ, ಇದು `ಗುಜರಾತ್ ಜನರಿಗೆ ಮಾಡಿದ ಅವಮಾನ’ ಎಂದು ಹೇಳಿ ತಿರುಗೇಟು ನೀಡಿದ್ದರು. ಅಯ್ಯರ್ ಹೇಳಿಕೆಯನ್ನು ಗುಜರಾತ್ ಬಿಜೆಪಿ ತನ್ನ ಪ್ರಚಾರದ ವೇಳೆ ಬಳಸಿಕೊಂಡಿತ್ತು.