ಬೆಂಗಳೂರು: ಬ್ಯಾಂಕಿಂಗ್ ನಿಯಮಗಳ ಉಲ್ಲಂಘನೆ (Violation of Rules) ಹಿನ್ನೆಲೆ ಪೇಟಿಎಂಗೆ (Paytm) ಆರ್ಬಿಐ (RBI) ನೋಟಿಸ್ ನೀಡಿದ್ದು, ಪೇಟಿಎಂ ಹೊಸ ಡೆಪಾಸಿಟ್ ಪಡೆಯುವಂತಿಲ್ಲ ಎಂದು ಸೂಚನೆ ನೀಡಿದೆ.
ಪೇಟಿಎಂ ಪೇಮೆಂಟ್ಸ್ ಬ್ಯಾಂಕ್ಗೆ ಆರ್ಬಿಐ ನಿರ್ಬಂಧ ಹೇರಿದೆ. ಪೇಟಿಎಂ ಪೇಮೆಂಟ್ಸ್ ಬ್ಯಾಂಕ್ ಯಾವುದೇ ಹೊಸ ಖಾತೆ ರಚಿಸಲು ಮತ್ತು ಡೆಪಾಸಿಟ್ ಪಡೆಯುವಂತಿಲ್ಲ. ವಿವಿಧ ನಿಯಮಗಳನ್ನು ಉಲ್ಲಂಘಿಸಿರುವುದು ಬೆಳಕಿಗೆ ಬಂದ ಹಿನ್ನೆಲೆಯಲ್ಲಿ ಪೇಟಿಎಂ ಪೇಮೆಂಟ್ಸ್ ಬ್ಯಾಂಕ್ಗೆ ನೋಟಿಸ್ (Notice) ನೀಡಲಾಗಿದೆ. ಇದನ್ನೂ ಓದಿ: ಆಳವಾದ ಕಂದಕಕ್ಕೆ ಉರುಳಿದ ಕ್ಯಾಬ್ – 7 ಮಂದಿ ದುರ್ಮರಣ
ಬೆಂಗಳೂರು: ಗುತ್ತಿಗೆದಾರರಿಂದ 40 ಪರ್ಸೆಂಟ್ ಕಮಿಷನ್ (40 Percent Commission) ಪಡೆಯುವ ಆರೋಪ ಹೊತ್ತಿರುವ ಸರ್ಕಾರದ ವಿರುದ್ಧ ವ್ಯಾಪಕ ಟೀಕೆ ವ್ಯಕ್ತವಾಗುತ್ತಿದೆ. ಭ್ರಷ್ಟಾಚಾರ ಆರೋಪ ಹೊತ್ತಿರುವ ಸರ್ಕಾರ ಅಣಕಿಸುವ ಪೋಸ್ಟರ್ನ್ನು ನಗರದ ಹಲವೆಡೆ ಅಂಟಿಸಲಾಗಿದೆ. ಪೇಟಿಎಂ (Paytm) ಮಾದರಿಯಲ್ಲೇ ಪೇ ಸಿಎಂ (Paycm Poster) ಎಂಬ ಪೋಸ್ಟರ್ ವೈರಲ್ ಆಗಿದೆ.
ನಗರದ ಜಯಮಹಲ್ ರಸ್ತೆ, ಇಂಡಿಯನ್ ಎಕ್ಷ್ಪ್ರೆಸ್ ಬಳಿ ಗೋಡೆಗೆ ಪೇ ಸಿಎಂ ಎಂದು ಬಸವರಾಜ ಬೊಮ್ಮಾಯಿ (Basavaraj Bommai) ಅವರ ಭಾವಚಿತ್ರವಿರುವ ಪೋಸ್ಟರ್ ಅಂಟಿಸುವ ಮೂಲಕ ಭ್ರಷ್ಟ ಸರ್ಕಾರ ಎಂದು ಅಣಕಿಸಲಾಗಿದೆ. 40% accepted here ಎಂದು ಪೋಸ್ಟರ್ನಲ್ಲಿ ಒಕ್ಕಣೆ ಬರೆಯಲಾಗಿದೆ. ಇದನ್ನೂ ಓದಿ: ಮತ್ತೆ 40 ಪರ್ಸೆಂಟ್ ಕಮಿಷನ್ ದಂದೆ ಸದ್ದು – SC, ST ಗುತ್ತಿಗೆದಾರರಿಂದಲೂ ಆರೋಪ
ಪೇಟಿಎಂ ಮಾದರಿಯಲ್ಲಿ ಪೇ ಸಿಎಂ ಎಂದು ಕ್ಯೂಆರ್ ಕೋಡ್ ಮೇಲೆ ಸಿಎಂ ಬಸವರಾಜ ಬೊಮ್ಮಾಯಿ ಫೋಟೋ ಹಾಕಲಾಗಿದೆ. ಕಾಂಗ್ರೆಸ್ ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಆರೋಪದ ದೂರು ನೀಡಲು ಸಹಾಯವಾಣಿ ನಂಬರ್ ಹಾಕಿರುವ ಪೋಸ್ಟರ್ನ್ನು ಬೆಂಗಳೂರಿನ ಹಲವೆಡೆ ಅಂಟಿಸಲಾಗಿದೆ. ಮಾಜಿ ಸಿಎಂ ಸಿದ್ದರಾಮಯ್ಯ ನಿವಾಸದ ಬಳಿಯೂ ಪೋಸ್ಟರ್ ಹಾಕಲಾಗಿದೆ.
ಇದನ್ನು ಸ್ಕ್ಯಾನ್ ಮಾಡಿದರೆ 40% ಸ್ಕ್ಯಾಮ್ ಸ್ಟಾರ್ಸ್ ಎನ್ನುವ ಪೇಜ್ ಓಪನ್ ಆಗುತ್ತದೆ. ರೋಡ್ ಸ್ಕ್ಯಾಮ್, ಬಿಟ್ಕಾಯಿನ್ ಸ್ಕ್ಯಾಮ್, ಪಿಎಸ್ಐ ಸ್ಕ್ಯಾಮ್ ಎನ್ನುವ ಪೇಜ್ ಬರುತ್ತದೆ. ಸ್ಕ್ಯಾನ್ ಮಾಡಿದವರ ಸಂಖ್ಯೆ ಇಲ್ಲಿಯವರೆಗೆ 95,428 ಆಗಿದೆ. ಸ್ಕ್ಯಾನ್ ಮಾಡಿದ ಕೂಡಲೇ ಅಭಿಯಾನಕ್ಕೆ ಆ್ಯಡ್ ಆಗಿದ್ದೀರಿ ಎಂದು ಮೆಸೇಜ್ ಬರುತ್ತದೆ. ಇದನ್ನೂ ಓದಿ: 40 ಪರ್ಸೆಂಟ್ ಸರ್ಕಾರದಲ್ಲಿ 3ನೇ ಸಿಎಂ ಸೀಟು ಹತ್ತುವ ಕಾಲ ಬಂದಿದೆ: ಬೊಮ್ಮಾಯಿ ಕಾಲೆಳೆದ ಕಾಂಗ್ರೆಸ್
ಸರ್ಕಾರ ಗುತ್ತಿಗೆದಾರರಿಂದ 40 ಪರ್ಸೆಂಟ್ ಕಮಿಷನ್ ಪಡೆಯುತ್ತದೆ ಎಂದು ಆರೋಪಿಸಿ ಗುತ್ತಿಗೆದಾರರ ಸಂಘದವರು ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದಿದ್ದರು. ಈ ಬಗ್ಗೆ ಸೂಕ್ತ ತನಿಖೆಯಾಗಿ ತಪ್ಪಿತಸ್ಥರಿಗೆ ಶಿಕ್ಷೆ ಆಗಬೇಕು ಎಂದು ಆಗ್ರಹಿಸಿದ್ದರು. ಇತ್ತೀಚೆಗೆ ಗುತ್ತಿಗೆದಾರ ಸಂತೋಷ್ ಪಾಟೀಲ್ (Santosh patil) ಕೂಡ ಕಮಿಷನ್ ಆರೋಪ ಮಾಡಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಆಗ ಸಚಿವರಾಗಿದ್ದ ಈಶ್ವರಪ್ಪ (K.S.Eshwarappa) ಅವರ ವಿರುದ್ಧ ಸಂತೋಷ್ ಗಂಭೀರ ಆರೋಪ ಮಾಡಿದ್ದರು. ನಂತರ ಈಶ್ವರಪ್ಪ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದರು.
Live Tv
[brid partner=56869869 player=32851 video=960834 autoplay=true]
ನವದೆಹಲಿ: ಜಾರಿ ನಿರ್ದೇಶನಾಲಯ(ED) ವನ್ 97 ಕಮ್ಯುನಿಕೇಷನ್ಸ್ ಲಿಮಿಟೆಡ್ನ ಪೇಟಿಯಂ(Paytm) ಹಾಗೂ ಪಾವತಿ ಪರಿಹಾರಗಳನ್ನು ಒದಗಿಸುವ ಪೇಯುನ(PayU )ಕೆಲ ಕಚೇರಿ ಮೇಲೆ ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲಿಸುತ್ತಿದೆ.
ಈ ಬಗ್ಗೆ ಮಾಹಿತಿ ನೀಡಿದ ಪೇಟಿಯಂ ವಕ್ತಾರರು, ಇಡಿ ವಿವಿಧ ಪಾವತಿ ಸೇವಾ ಪೂರೈಕೆದಾರರಿಂದ ಕೆಲವು ವ್ಯಾಪಾರಿಗಳ ಬಗ್ಗೆ ಮಾಹಿತಿಗಳನ್ನು ಪಡೆಯುತ್ತಿದೆ. ನಾವು ಇಡಿ ಅಧಿಕಾರಿಗಳೊಂದಿಗೆ ಅಗತ್ಯ ಮಾಹಿತಿಗಳನ್ನು ಹಂಚಿಕೊಳ್ಳುತ್ತಿದ್ದೇವೆ ಎಂದು ತಿಳಿಸಿದ್ದಾರೆ. ಚೀನಿ ಶೆಲ್ ಕಂಪನಿಗಳಿಗೆ ಹಣ ವರ್ಗಾವಣೆ ನಡೆಸಿದ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಮುಂಬೈ, ದೆಹಲಿ, ಲಕ್ನೋ, ಗುರುಗ್ರಾಮ, ಕೋಲ್ಕತ್ತಾದಲ್ಲಿರುವ ಕಚೇರಿ ಮೇಲೆ ದಾಳಿ ನಡೆದಿದೆ ಎಂದು ವರದಿಯಾಗಿದೆ. ಇದನ್ನೂ ಓದಿ: ಆಪಲ್ ಆಯ್ತು ಈಗ ಭಾರತದಲ್ಲೇ ಪಿಕ್ಸೆಲ್ ಫೋನ್ ತಯಾರಿಸಲು ಮುಂದಾದ ಗೂಗಲ್
ಇತ್ತೀಚೆಗೆ ಇಡಿ ಆನ್ಲೈನ್ ಪಾವತಿಗಳ ವೇದಿಕೆಗಳಾದ ರೇಜರ್ಪೇ, ಪೇಟಿಯಂ ಹಾಗೂ ಕ್ಯಾಶ್ಫ್ರೀ ಕಂಪನಿಗಳ ಬೆಂಗಳೂರಿನ ಆವರಣಗಳಲ್ಲಿ ದಾಳಿ ನಡೆಸಿತ್ತು. ಈ ವೇಳೆ ಬೆಂಗಳೂರಿನ 6 ಸ್ಥಳಗಳಲ್ಲಿ ಶೋಧ ನಡೆಸಿದ್ದಾಗಿ ಇಡಿ ತಿಳಿಸಿತ್ತು. ಇದನ್ನೂ ಓದಿ: ನಟ ರಮೇಶ್ ಅರವಿಂದ್ಗೆ ಗೌರವ ಡಾಕ್ಟರೇಟ್
ದಾಳಿಯ ವೇಳೆ ಚೀನೀ ವ್ಯಕ್ತಿಗಳಿಂದ ನಿಯಂತ್ರಿತವಾಗಿದ್ದ ಘಟಕಗಳ ಬ್ಯಾಂಕ್ ಖಾತೆಗಳಲ್ಲಿ ಇರಿಸಲಾಗಿದ್ದ 17 ಕೋಟಿ ರೂ. ಮೌಲ್ಯದ ಹಣವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ತನಿಖಾ ಸಂಸ್ಥೆ ಮಾಹಿತಿ ನೀಡಿತ್ತು. ಚೀನೀ ವ್ಯಕ್ತಿಗಳು ಭಾರತೀಯರ ನಕಲಿ ದಾಖಲೆಗಳನ್ನು ಬಳಸಿ, ವಂಚನೆ ನಡೆಸುತ್ತಿವೆ ಎಂದು ಇಡಿ ಆರೋಪಿಸಿದೆ.
Live Tv
[brid partner=56869869 player=32851 video=960834 autoplay=true]
ನವದೆಹಲಿ: ಯುನಿಫೈಡ್ ಪೇಮೆಂಟ್ ಇಂಟರ್ಫೇಸ್ (ಯುಪಿಐ) ಪಾವತಿಗಳಿಗೆ ಯಾವುದೇ ಶುಲ್ಕ ವಿಧಿಸುವುದಿಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ.
ಕೇಂದ್ರ ಹಣಕಾಸು ಇಲಾಖೆ ಟ್ವೀಟ್ ಮಾಡಿ ಸ್ಪಷ್ಟನೆ ನೀಡಿದೆ. ಯುಪಿಐ ಡಿಜಿಟಲ್ ಪಾವತಿ ವ್ಯವಸ್ಥೆಯು ಸಾರ್ವಜನಿಕರಿಗೆ ಅಪಾರ ಅನುಕೂಲ ಹಾಗೂ ಉತ್ಪಾದಕತೆ ಲಾಭವನ್ನು ತಂದು ಕೊಡುತ್ತಿದೆ. ಯುಪಿಐ ಪಾವತಿಗಳಿಗೆ ಶುಲ್ಕ ವಿಧಿಸುವ ಯಾವುದೇ ಪ್ರಸ್ತಾಪ ಸರ್ಕಾರದ ಪರಿಗಣನೆಯಲ್ಲಿ ಇಲ್ಲ ಎಂದು ತಿಳಿಸಿದೆ.
The Govt had provided financial support for #DigitalPayment ecosystem last year and has announced the same this year as well to encourage further adoption of #DigitalPayments and promotion of payment platforms that are economical and user-friendly. (2/2)
ಸ್ಪಷ್ಟನೆ ನೀಡಿದ್ದು ಯಾಕೆ?
ದೇಶದಲ್ಲಿ ಅತಿ ಹೆಚ್ಚು ಜನಪ್ರಿಯವಾಗಿರುವ ಯುಪಿಐ ಪಾವತಿಗಳಿಗೆ ಆರ್ಬಿಐ ಶುಲ್ಕ ವಿಧಿಸಲಿದೆ ಎಂದು ವರದಿಯಾಗಿತ್ತು. ಕೆಲ ದಿನಗಳ ಹಿಂದೆ ಆರ್ಬಿಐ ಬಿಡುಗಡೆ ಮಾಡಿದ್ದ ಸಲಹಾ ಪತ್ರದಲ್ಲಿ ಯುಪಿಐ ಸೇರಿದಂತೆ ಆನ್ಲೈನ್ ವ್ಯವಸ್ಥೆಗಳ ಮೂಲಕ ನಡೆಸುವ ವಹಿವಾಟಿಗೆ ಶುಲ್ಕ ವಿಧಿಸುವ ಬಗ್ಗೆ ಸಾರ್ವಜನಿಕರಿಂದ ಸಲಹೆ ಕೋರಿತ್ತು. ಈ ಹಿನ್ನೆಲೆಯಲ್ಲಿ ಯುಪಿಐ ವಹಿವಾಟಿಗೂ ಶುಲ್ಕ ವಿಧಿಸಲು ಸರ್ಕಾರ ಮುಂದಾಗಿದ್ಯಾ ಎಂಬ ಪ್ರಶ್ನೆ ಎದ್ದಿತ್ತು.
ಎಷ್ಟು ವಹಿವಾಟು ನಡೆಯುತ್ತಿದೆ?
ಪ್ರತಿ ತಿಂಗಳು ಡಿಜಿಟಲ್ ಪಾವತಿ ಮೂಲಕ ನಡೆಯುವ ವ್ಯವಹಾರ ಹೆಚ್ಚಾಗುತ್ತಿದೆ. ಜೂನ್ ತಿಂಗಳಿನಲ್ಲಿ 5.86 ಶತಕೋಟಿ ವ್ಯವಹಾರ ನಡೆದರೆ ಜುಲೈನಲ್ಲಿ 6.28 ಶತಕೋಟಿ ವ್ಯವಹಾರ ನಡೆದಿತ್ತು.
Live Tv
[brid partner=56869869 player=32851 video=960834 autoplay=true]
ನವದೆಹಲಿ: ಪೇಟಿಎಂನ ವ್ಯವಸ್ಥಾಪಕ ನಿರ್ದೇಶಕ ಹಾಗೂ ಮುಖ್ಯ ಕಾರ್ಯನಿರ್ವಾಹಕಾಧಿಕಾರಿಯಾಗಿ ವಿಜಯ್ ಶೇಖರ್ ಅವರನ್ನು ಮರುನೇಮಕಗೊಳಿಸಲಾಗಿದೆ. ವಿಜಯ್ ಶೇಖರ್ ಅವರ ಪರವಾಗಿ ಶೇ.99.67 ರಷ್ಟು ಷೇರುದಾರರು ಮತ ಚಲಾಯಿಸಿದ್ದಾರೆ ಎಂದು ವರದಿಯಾಗಿದೆ.
ಶೇ.100 ಕ್ಕೆ ತುಂಬಾ ಹತ್ತಿರದಲ್ಲಿ ಮತ ಪಡೆದಿರುವ ಬಗ್ಗೆ ಸಂತಸ ವ್ಯಕ್ತಪಡಿಸಿದ ವಿಜಯ್ ಶೇಖರ್, ಇದು ನನ್ನ ನಾಯಕತ್ವದಲ್ಲಿ ಕಂಪನಿಯ ಹೂಡಿಕೆದಾರರು ಎಷ್ಟು ನಂಬಿಕೆ ಇಟ್ಟಿದ್ದಾರೆ ಎಂಬುದನ್ನು ಪ್ರತಿಬಿಂಬಿಸುತ್ತದೆ. ಕಂಪನಿಯ ಬೆಳವಣಿಗೆ ಹಾಗೂ ಲಾಭದಾಯಕ ಗುರಿಯ ಬಗ್ಗೆ ಅವರು ವಿಶ್ವಾಸ ಇಟ್ಟುಕೊಂಡಿದ್ದಾರೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಪಟ್ಟವಿಲ್ಲದಿದ್ದರೂ ನಾನು ನಾಯಕನೇ: ಡೇವಿಡ್ ವಾರ್ನರ್
Live Tv
[brid partner=56869869 player=32851 video=960834 autoplay=true]
ನವದೆಹಲಿ: ಡಿಜಿಟಲ್ ಪಾವತಿ ಅಪ್ಲಿಕೇಶನ್ ಪೇಟಿಎಂ ಸರಿಯಾಗಿ ಕಾರ್ಯ ನಿರ್ವಹಿಸುತ್ತಿಲ್ಲ ಎಂದು ಹಲವು ಬಳಕೆದಾರರು ದೂರು ನೀಡಿದ್ದಾರೆ. ಅಪ್ಲಿಕೇಶನ್ನಲ್ಲಿ ಲಾಗ್ಇನ್ ಹಾಗೂ ಪಾವತಿ ಮಾಡಲು ಸಾಧ್ಯವಾಗುತ್ತಿಲ್ಲ ಎಂಬುದು ವರದಿಯಾಗಿದೆ. ಈ ಸಮಸ್ಯೆಯನ್ನು ಪೇಟಿಎಂ ಕೂಡಾ ಒಪ್ಪಿಕೊಂಡಿದ್ದು, ದೋಷವನ್ನು ಸರಿಪಡಿಸುವುದಾಗಿ ತಿಳಿಸಿದೆ.
ಪೇಟಿಎಂನ ಸಮಸ್ಯೆ ಬೆಂಗಳೂರು ಸೇರಿದಂತೆ ದೆಹಲಿ, ಮುಂಬೈ, ಅಹಮದಾಬಾದ್, ಚೆನ್ನೈನಂತಹ ಹಲವಾರು ನಗರಗಳಲ್ಲಿ ಬಳಕೆದಾರರು ಎದುರಿಸಿರುವುದಾಗಿ ವರದಿಯಾಗಿದೆ. ದೂರು ನೀಡಿರುವ ಬಳಕೆದಾರರ ಪೈಕಿ ಶೇ.66 ರಷ್ಟು ಜನರು ಲಾಗ್ಇನ್ ಸಮಸ್ಯೆಯನ್ನು ಎದುರಿಸಿದ್ದಾರೆ. ಶೇ.5 ರಷ್ಟು ಜನರು ಪಾವತಿ ಮಾಡಲು ಸಾಧ್ಯವಾಗುತ್ತಿಲ್ಲ ಎಂದಿದ್ದಾರೆ. ಉಳಿದ ಶೇ.29 ರಷ್ಟು ಬಳಕೆದಾರರು ಇತರ ಸಮಸ್ಯೆಗಳನ್ನು ಎದುರಿಸಿದ್ದಾರೆ. ಇದನ್ನೂ ಓದಿ: ಜಾಹೀರಾತುಗಳಲ್ಲಿ ಮಹಿಳೆಯರು ಕಾಣಿಸಿಕೊಳ್ಳುವಂತಿಲ್ಲ- ಇರಾನ್ನಲ್ಲಿ ಆದೇಶ
ಬಳಕೆದಾರರು ಸಮಸ್ಯೆಗಳನ್ನು ಎದುರಿಸುತ್ತಿರುವುದನ್ನು ಒಪ್ಪಿಕೊಂಡಿರುವ ಪೇಟಿಎಂ, ಅದನ್ನು ಸರಿಪಡಿಸಲು ಕೆಲಸ ಮಾಡುತ್ತಿದೆ ಎಂದಿದೆ. ಪೇಟಿಎಂ ಅಪ್ಲಿಕೇಶನ್ನಲ್ಲಿ ಕೆಲವು ಬಳಕೆದಾರರು ಲಾಗ್ಇನ್ ಮಾಡುವಲ್ಲಿ ಸಮಸ್ಯೆ ಎದುರಿಸುತ್ತಿರಬಹುದು. ನಾವು ಈಗಾಗಲೇ ಈ ಸಮಸ್ಯೆಯನ್ನು ಶೀಘ್ರವಾಗಿ ಸರಿಪಡಿಸಲು ಪ್ರಯತ್ನಿಸುತ್ತಿದ್ದೇವೆ. ಅದನ್ನು ಸರಿಪಡಿಸಿದ ತಕ್ಷಣವೇ ಅದರ ಬಗ್ಗೆ ಮಾಹಿತಿ ನೀಡುತ್ತೇವೆ ಎಂದು ಟ್ವೀಟ್ನಲ್ಲಿ ತಿಳಿಸಿದೆ. ಇದನ್ನೂ ಓದಿ: ಅಮೃತ ಮಹೋತ್ಸವಕ್ಕೆ 750 ಗ್ರಾಮೀಣ ಹೆಣ್ಣುಮಕ್ಕಳೇ ತಯಾರಿಸಿದ ಆಜಾದಿ ಉಪಗ್ರಹ ಉಡಾವಣೆ – ಏನಿದರ ವಿಶೇಷತೆ?
Live Tv
[brid partner=56869869 player=32851 video=960834 autoplay=true]
ಮುಂಬೈ: ಭಾರತದಲ್ಲಿ ನಡೆಯಲಿರುವ ದೇಸಿ ಮತ್ತು ಅಂತರಾಷ್ಟ್ರೀಯ ಕ್ರಿಕೆಟ್ ಪಂದ್ಯಗಳಿಗೆ ಮಾಸ್ಟರ್ ಕಾರ್ಡ್ ಟೀಂ ಇಂಡಿಯಾದ ಶೀರ್ಷಿಕೆ ಪ್ರಾಯೋಜಕ ಕಂಪನಿಯಾಗಿ ಕಾಣಿಸಿಕೊಳ್ಳಲಿದೆ.
ಶೀರ್ಷಿಕೆ ಪ್ರಯೋಜಕವಾಗಿದ್ದ ಪೇಟಿಎಂನ 7 ವರ್ಷಗಳ ಒಪ್ಪಂದ ಕೊನೆಗೊಂಡಿದೆ. ಇದೀಗ ಪೇಟಿಎಂ ಸಂಸ್ಥೆ ತನ್ನ ಬಳಿ ಇದ್ದ ಪ್ರಾಯೋಜಕತ್ವ ಹಕ್ಕನ್ನು ಮಾಸ್ಟರ್ ಕಾರ್ಡ್ಗೆ ವರ್ಗಾಯಿಸಿದ್ದು, ಈ ಹಿಂದಿನಂತೆಯೇ ಬಿಸಿಸಿಐಗೆ ಪ್ರತಿ ಪಂದ್ಯಕ್ಕೆ 3.8 ಕೋಟಿ ರೂ. ಪಾವತಿಯಾಗಲಿದೆ. ಇದನ್ನೂ ಓದಿ: ಇಂದು ಮೂರನೇ ಏಕದಿನ ಪಂದ್ಯ – ಭಾರತದ ಬೆಂಚ್ ಸ್ಟ್ರೆಂತ್ ಪರೀಕ್ಷಿಸಲು ಅವಕಾಶ
7 ವರ್ಷಗಳಿಂದ ಶೀರ್ಷಿಕೆ ಪ್ರಾಯೋಜಕರಾಗಿದ್ದ ಪೇಟಿಎಂ ಆರ್ಥಿಕ ಸಂಕಷ್ಟದಿಂದಾಗಿ ಪ್ರಾಯೋಜಕತ್ವದಿಂದ ಹಿಂದೆ ಸರಿದಿದೆ. 2023ರ ವರೆಗೆ ಮಾಸ್ಟರ್ ಕಾರ್ಡ್ ಶೀರ್ಷಿಕೆ ಪ್ರಾಯೋಜಕತ್ವ ಮಾಡಲಿದೆ ಎಂದು ಮೂಲಗಳು ವರದಿಯಾಗಿದೆ. ಪ್ರಯೋಜಕತ್ವದ ಹಕ್ಕನ್ನು ಮುಂದಿನ 10 ದಿನಗಳಲ್ಲಿ ಪೇಟಿಎಂ, ಮಾಸ್ಟರ್ ಕಾರ್ಡ್ಗೆ ವರ್ಗಾಹಿಸುವ ಸಾಧ್ಯತೆ ಇದೆ. ಇದನ್ನೂ ಓದಿ: ಲವ್ಲಿನಾ ಕೋಚ್ಗೆ ಕಾಮನ್ ವೆಲ್ತ್ ಗೇಮ್ಸ್ ಪ್ರವೇಶಿಸಲು ಮಾನ್ಯತೆ
2019ರ ಆಗಸ್ಟ್ನಲ್ಲಿ ಬಿಸಿಸಿಐ ಜೊತೆಗೆ ಪೇಟಿಎಂ ಶೀರ್ಷಿಕೆ ಪ್ರಯೋಜಕತ್ವದ ಹಕ್ಕನ್ನು ಮುಂದಿನ 4 ವರ್ಷಕ್ಕೆ ನವೀಕರಣಗೊಳಿಸಿತ್ತು. ಮುಂದಿನ ನಾಲ್ಕು ವರ್ಷದ ಪ್ರಯೋಜಕತ್ವದ ಹಕ್ಕನ್ನು 3.80 ಕೋಟಿ ರೂ.ಗೆ ಪೇಟಿಎಂ ತನ್ನದಾಗಿಸಿಕೊಂಡಿತ್ತು. ಪೇಟಿಎಂ 2015 ರಿಂದ 2019ರ ವರಗೆ ಶೀರ್ಷಿಕೆ ಪ್ರಾಯೋಜಕತ್ವವನ್ನು ಬಿಸಿಸಿಐನಿಂದ 2.4 ಕೋಟಿ ರೂ. ನೀಡಿ ಖರೀದಿತ್ತು. ಸೆಪ್ಟೆಂಬರ್ನಲ್ಲಿ ತವರಿನಲ್ಲಿ ನಡೆಯಲಿರುವ ಆಸ್ಪ್ರೇಲಿಯಾ ವಿರುದ್ಧದ ಸರಣಿಯಿಂದ ಭಾರತ ತಂಡ ಹೊಸ ಪ್ರಯೋಜಕತ್ವದೊಂದಿಗೆ ಆಡುವ ಸಾಧ್ಯತೆ ಇದೆ.
Live Tv
[brid partner=56869869 player=32851 video=960834 autoplay=true]
ನವದೆಹಲಿ: ಅತಿ ವೇಗ ಚಾಲನೆ ಪ್ರಕರಣದಲ್ಲಿ ಪೇಟಿಎಂ ಸಿಇಒ ವಿಜಯ್ ಶೇಖರ್ ಶರ್ಮಾ ಅವರನ್ನು ಕಳೆದ ತಿಂಗಳು ದೆಹಲಿ ಪೊಲೀಸರು ಬಂಧಿಸಿ ನಂತರ ಅವರನ್ನು ಜಾಮೀನಿನ ಆಧಾರದ ಮೇಲೆ ಬಿಡುಗಡೆಗೊಳಿಸಿದ್ದಾರೆ.
ವಿಜಯ್ ಶೇಖರ್ ಶರ್ಮಾ ಅವರು ಜಾಗ್ವಾರ್ ಲ್ಯಾಂಡ್ ರೋವರ್ ಕಾರನ್ನು ಹೊಂದಿದ್ದು, ಕಳೆದ ತಿಂಗಳು ವೇಗವಾಗಿ ಕಾರಿನಲ್ಲಿ ಬಂದು ದಕ್ಷಿಣ ದೆಹಲಿಯ ಜಿಲ್ಲಾ ಪೊಲೀಸ್ ಆಯುಕ್ತರ ಕಾರಿಗೆ ಡಿಕ್ಕಿ ಹೊಡೆದಿದ್ದಾರೆ. ಇದನ್ನೂ ಓದಿ: ಮಮತಾ ಬ್ಯಾನರ್ಜಿ ಬಿಜೆಪಿ ಏಜೆಂಟ್: ಕಾಂಗ್ರೆಸ್
ಫೆಬ್ರವರಿ 22 ರಂದು ಮದರ್ ಇಂಟರ್ನ್ಯಾಶನಲ್ ಸ್ಕೂಲ್ ಹೊರಗೆ ಡಿಸಿಪಿ ಬೆನಿಟಾ ಮೇರಿ ಜೈಕರ್ ಅವರ ಕಾರಿಗೆ ವಿಜಯ್ ಶೇಖರ್ ಶರ್ಮಾ ಅವರ ಲ್ಯಾಂಡ್ ರೋವರ್ ಡಿಕ್ಕಿ ಹೊಡೆದು, ನಂತರ ವಿಜಯ್ ಶೇಖರ್ ಶರ್ಮಾ ಅವರು ಸ್ಥಳದಿಂದ ಪರಾರಿಯಾಗಿದ್ದರು. ಡಿಸಿಪಿ ಅವರ ಕಾರನ್ನು ಓಡಿಸುತ್ತಿದ್ದ ಚಾಲಕ, ಕಾನ್ಸ್ಟೇಬಲ್ ದೀಪಕ್ ಕುಮಾರ್ ಅವರು, ಲ್ಯಾಂಡ್ ರೋವರ್ ಕಾರಿನ ನಂಬರ್ ಬರೆದಿಟ್ಟುಕೊಂಡು ಡಿಸಿಪಿಗೆ ಮಾಹಿತಿ ನೀಡಿದ್ದಾರೆ.
Delhi | Vijay Shekhar Sharma, founder and CEO of Paytm, was arrested and later released on bail for ramming his car into the vehicle of DCP South in the month of February
ನಂತರ ಪ್ರಾಥಮಿಕ ತನಿಖೆ ನಡೆಸಿದ ಪೊಲೀಸರಿಗೆ ಕಾರು ಗುರುಗ್ರಾಮ್ನ ಕಂಪನಿಯೊಂದಕ್ಕೆ ನೋಂದಾಯಿಸಲಾಗಿದ್ದು, ಕಾರು ದಕ್ಷಿಣ ದೆಹಲಿಯಲ್ಲಿ ನೆಲೆಸಿರುವ ವಿಜಯ್ ಶಂಕರ್ ಶರ್ಮಾ ಅವರಿಗೆ ಸೇರಿದೆ ಎಂದು ತಿಳಿದುಬಂದಿದೆ. ಹೀಗಾಗಿ ಅತಿವೇಗ ಅಥವಾ ನಿರ್ಲಕ್ಷ್ಯದ ಚಾಲನೆ ಪ್ರಕರಣದಲ್ಲಿ ವಿಜಯ್ ಶೇಖರ್ ಶರ್ಮಾ ಅವರನ್ನು ಬಂಧಿಸಲಾಗಿತ್ತು ನಂತರ ಜಾಮೀನಿನ ಮೇಲೆ ಬಿಡುಗಡೆ ಮಾಡಿರುವುದಾಗಿ ದೆಹಲಿ ಪೊಲೀಸ್ ವಕ್ತಾರ ಸುಮನ್ ನಲ್ವಾ ಖಚಿತಪಡಿಸಿದ್ದಾರೆ. ಇದನ್ನೂ ಓದಿ: ಯಾವುದೇ ಧರ್ಮದ ಬಗ್ಗೆ ಅಗೌರವ ತೋರಿದ್ರೆ ಸಹಿಸುವುದಿಲ್ಲ: ಭಗವಂತ್ ಮಾನ್
ನವದೆಹಲಿ: ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (ಆರ್ಬಿಐ) ಪೇಟಿಎಂ ಪೇಮೆಂಟ್ಸ್ ಬ್ಯಾಂಕ್ಗೆ ಶುಕ್ರವಾರ ಹೊಸ ಗ್ರಾಹಕರನ್ನು ಸೇರ್ಪಡೆಗೊಳಿಸದಂತೆ ಸೂಚಿಸಿದೆ.
ವರದಿಗಳ ಪ್ರಕಾರ ಬ್ಯಾಂಕಿಂಗ್ ನಿಯಂತ್ರಣ ಕಾಯ್ದೆ ಪೇಟಿಎಂ ಪೇಮೆಂಟ್ಸ್ ಬ್ಯಾಂಕ್ ಮೇಲೆ ಸೆಕ್ಷನ್ 35ಎ ಹಾಗೂ ಬ್ಯಾಂಕಿಂಗ್ ರೆಗ್ಯುಲೇಶನ್ ಆ್ಯಕ್ಟ್ 1949 ಅನ್ನು ವಿಧಿಸಿದೆ. ಹೀಗಾಗಿ ಆರ್ಬಿಐ ಪೇಟಿಎಂ ಹೊಸ ಗ್ರಾಹಕರನ್ನು ನಿರ್ಬಂಧಿಸುವಂತೆ ಆದೇಶಿಸಿದೆ. ಇದನ್ನೂ ಓದಿ: ಚುನಾವಣೆಯಲ್ಲಿ ಸೋಲು- ಪಂಜಾಬ್, ಮಣಿಪುರ ಸಿಎಂ ರಾಜೀನಾಮೆ
ಪೇಟಿಎಂ ಡಿಸೆಂಬರ್ನಲ್ಲಿ ನಿಗದಿತ ಪಾವತಿ ಬ್ಯಾಂಕ್ ಆಗಿ ಕಾರ್ಯನಿರ್ವಹಿಸಲು ಆರ್ಬಿಐ ಅನುಮೋದನೆಯನ್ನು ಪಡೆದಿತ್ತು. ಹೀಗೆ ತನ್ನ ಹಣಕಾಸು ಸೇವೆಗಳ ಕಾರ್ಯಾಚರಣೆಯನ್ನು ವಿಸ್ತರಿಸಲು ಮುಂದಾಗಿತ್ತು. ಇದೀಗ ಪೇಟಿಎಂ ಸಂಸ್ಥಾಪಕ ವಿಜಯ್ ಶೇಖರ್ ಶರ್ಮಾ ಪೇಟಿಎಂ ಪೇಮೆಂಟ್ಸ್ ಬ್ಯಾಂಕ್ನ ಶೇ.51 ರಷ್ಟು ಪಾಲನ್ನು ಹೊಂದಿದ್ದಾರೆ.
ಚೆನ್ನೈ: ಕಳೆದ ವರ್ಷ ದೇಶಕ್ಕೆ ಕಾಲಿಟ್ಟ ಹೆಮ್ಮಾರಿ ಕೊರೊನಾದಿಂದಾಗಿ ಎಲ್ಲಾ ಚಟುವಟಿಕೆಗಳು ಸ್ಥಗಿತಗೊಂಡಿದ್ದವು. ಇದೀಗ ಮೆಲ್ಲನೆ ಎಲ್ಲವೂ ಆರಂಭವಾಗುತ್ತಿದ್ದಂತೆ ಇತ್ತ ಕ್ರಿಕೆಟ್ ಪ್ರೇಮಿಗಳಿಗೆ ಶುಭ ಸುದ್ದಿ ಹೊರಬಿದ್ದಿದೆ. ಭಾರತ ಹಾಗೂ ಇಂಗ್ಲೆಂಡ್ ನಡುವಿನ ಎರಡನೇ ಟೆಸ್ಟ್ ನಲ್ಲಿ ಶೇ. 50ರಷ್ಟು ಪ್ರೇಕ್ಷಕರಿಗೆ ಪಂದ್ಯ ವೀಕ್ಷಿಸಲು ಅವಕಾಶ ಕಡೆಗೂ ಕೂಡಿ ಬಂದಿದೆ.
ಈವರೆಗೆ ಕ್ರೀಡಾ ಚಟುವಟಿಕೆಗಳು ನಡೆದರು ಖಾಲಿ ಕ್ರೀಡಾಂಗಣದಲ್ಲಿ ಪಂದ್ಯಾಟಗಳು ನಡೆಯುತ್ತಿತ್ತು. ವಿಶೇಷವಾಗಿ ಚೆನ್ನೈನ ಚಿದಂಬರಂ ಕ್ರೀಡಾಂಗಣ ಕೊರೊನಾ ಮುಂಚೆಯೆ 2011ರ ವಿಶ್ವಕಪ್ ಬಳಿಕ ಸ್ಥಳೀಯಾಡಳಿತ ಮತ್ತು ತಮಿಳುನಾಡು ಕ್ರಿಕೆಟ್ ಸಂಸ್ಥೆಯ ತಕರಾರಿನಿಂದಾಗಿ ಐ, ಜೆ ಮತ್ತು ಕೆ ಗ್ಯಾಲರಿಗಳು ಪ್ರೇಕ್ಷಕರಿಂದ ದೂರ ಉಳಿದಿತ್ತು. ಇದೀಗ ಈ ಸಮಸ್ಯೆಯೂ ಬಗೆಹರಿದು ಪ್ರೇಕ್ಷಕರಿಗೆ ಮುಕ್ತವಾಗುವ ಸನಿಹದಲ್ಲಿದೆ.
ಈಗಾಗಲೇ 2ನೇ ಟೆಸ್ಟ್ ಪಂದ್ಯಕ್ಕೆ ಕೇಂದ್ರ ಸರ್ಕಾರದಿಂದ ಶೇ. 50ರಷ್ಟು ಪ್ರೇಕ್ಷಕರಿಗೆ ಬರಲು ಅವಕಾಶ ಸಿಕ್ಕಿರುವ ಕಾರಣ ಟಿಕೆಟ್ ಮಾರಾಟವು ಪ್ರಾರಂಭಗೊಂಡಿದೆ. 2ನೇ ಟೆಸ್ಟ್ ವೇಳೆ 15 ಸಾವಿರ ಟಿಕೆಟ್ ಸಾರ್ವಜನಿಕರಿಗೆ ಮಾರಾಟವಾಗುವ ನಿರೀಕ್ಷೆ ಇದೆ. ಟಿಕೆಟ್ಗಳನ್ನು 3 ವಿಧಗಳಲ್ಲಿ ವರ್ಗಿಕರಿಸಲಾಗಿದ್ದು, 100, 150 ಮತ್ತು 200 ರೂಪಾಯಿ ಬೆಲೆಯ ಟಿಕೆಟ್ಗಳನ್ನು ಕೌಂಟರ್ ನಲ್ಲಿ ಮಾರಾಟ ಮಾಡದೆ ಪೇಟಿಂ ಆ್ಯಪ್ನ ಮೂಲಕ ಮಾರಾಟ ಮಾಡಲು ನಿರ್ಧರಿಸಲಾಗಿದೆ. ಈ ಮೂಲಕ ಪ್ರೇಕ್ಷಕರಿಗೆ ಸಂಪೂರ್ಣ ಅಟದ ರಸವತ್ತತೆಯನ್ನು ಸವಿಯುವ ಅವಕಾಶ ದೊರೆತಂತಾಗಿದೆ.