Tag: PBKS

  • IPL 2025 Final – ಪಂದ್ಯಕ್ಕೂ ಮುನ್ನವೇ ಮೋದಿ ಸ್ಟೇಡಿಯಂ ಹೊರಗೆ ಸಿಲಿಂಡರ್ ಬ್ಲಾಸ್ಟ್

    IPL 2025 Final – ಪಂದ್ಯಕ್ಕೂ ಮುನ್ನವೇ ಮೋದಿ ಸ್ಟೇಡಿಯಂ ಹೊರಗೆ ಸಿಲಿಂಡರ್ ಬ್ಲಾಸ್ಟ್

    ಅಹಮದಾಬಾದ್: ಆರ್‌ಸಿಬಿ (RCB) ಹಾಗೂ ಪಂಜಾಬ್ ಕಿಂಗ್ಸ್ (Punjab Kings) ತಂಡದ ನಡುವೆ ಐಪಿಎಲ್ ಫೈನಲ್ ಪಂದ್ಯ ನಡೆಯಲು ಇನ್ನೇನು ಕೆಲವೇ ಗಂಟೆಗಳು ಬಾಕಿಯಿರುವಾಗಲೇ ನರೇಂದ್ರ ಮೋದಿ ಕ್ರೀಡಾಂಗಣದ (Narendra Modi Stadium) ಹೊರಗೆ ಸಿಲಿಂಡರ್ ಸ್ಫೋಟಗೊಂಡಿದೆ.

    ಸ್ಟೇಡಿಯಂನ ಗೇಟ್ ನಂಬರ್ 1ರ ಬಳಿ ಘಟನೆ ನಡೆದಿದ್ದು, ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಘಟನೆಯಿಂದ ಕೆಲಹೊತ್ತು ಆತಂಕ ಮನೆಮಾಡಿತ್ತು. ಘಟನೆ ನಡೆದ ತಕ್ಷಣವೇ ಬೆಂಕಿಯನ್ನು ನಂದಿಸಲಾಯಿತು. ಕ್ರೀಡಾಂಗಣದ ಹೊರಗಿನ ಫುಟ್‌ಪಾತ್‌ನಲ್ಲಿ ಆಹಾರ ಪದಾರ್ಥಗಳನ್ನು ಮಾರಾಟ ಮಾಡುವವರ ನಿರ್ಲಕ್ಷ್ಯದಿಂದಾಗಿ ಸಿಲಿಂಡರ್ ಸ್ಫೋಟಗೊಂಡಿರಬಹುದು ಎಂದು ಶಂಕಿಸಲಾಗಿದೆ. ಇದನ್ನೂ ಓದಿ: ಮೊದಲು ಕ್ಷಮೆ ಕೇಳಿ, ಜನರ ಭಾವನೆಗೆ ಧಕ್ಕೆ ತರಬೇಡಿ: ಕಮಲ್‌ಗೆ ಹೈಕೋರ್ಟ್‌ ಚಾಟಿ

    ಸಿಲಿಂಡರ್ ಸ್ಫೋಟದಿಂದಾಗಿ (Cylinder Balst) ಪಂದ್ಯದಲ್ಲಿ ಯಾವುದೇ ಬದಲಾವಣೆ ಇಲ್ಲವೆಂದು ಬಿಸಿಸಿಐ ಮೂಲಗಳು ತಿಳಿಸಿವೆ. ಫೈನಲ್ ಪಂದ್ಯಕ್ಕೂ ಮುನ್ನ ಅದ್ಧೂರಿ ಸಮಾರೋಪ ಸಮಾರಂಭ ಆಯೋಜಿಸಲು ಬಿಸಿಸಿಐ ನಿರ್ಧರಿಸಿದೆ. ಆಪರೇಷನ್ ಸಿಂಧೂರಕ್ಕೆ ಗೌರವ ಸಲ್ಲಿಸುವ ನಿಟ್ಟಿನಲ್ಲಿ ಸಮಾರಂಭವನ್ನು ಭಾರತೀಯ ಸೇನೆಗೆ ಸಮರ್ಪಿಸಲಾಗುತ್ತದೆ. ಖ್ಯಾತ ಗಾಯಕ ಶಂಕರ್ ಮಹದೇವನ್ ಸೇರಿದಂತೆ ಅನೇಕರು ಪ್ರದರ್ಶನ ನೀಡಲಿದ್ದಾರೆ. ಇದನ್ನೂ ಓದಿ: ಕಪ್‌ ನಮ್ದೆ ಅಂತ ಗೆದ್ದ ಮೇಲೆ ಹೇಳೋಣ: ಅನಿಲ್‌ ಕುಂಬ್ಳೆ

    ಆರ್‌ಸಿಬಿ ತಂಡ 4ನೇ ಬಾರಿಗೆ ಫೈನಲ್ ಪ್ರವೇಶಿಸಿದೆ. ಈ ಮೊದಲು 2009, 2011 ಹಾಗೂ 2016ರಲ್ಲಿ ಫೈನಲ್ ಪ್ರವೇಶಿಸಿದ್ದರೂ ಕಪ್ ಗೆದ್ದಿರಲಿಲ್ಲ. ಇದೀಗ ಮತ್ತೆ ಫೈನಲ್ ಪ್ರವೇಶಿಸಿದ್ದು, ಪಂಜಾಬ್ ಜೊತೆ ಸೆಣಸಾಡಲಿದೆ. ಈ ರೋಚಕ ಪಂದ್ಯ ಕಣ್ತುಂಬಿಕೊಳ್ಳಲು ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ. ಇದನ್ನೂ ಓದಿ: 18ನೇ ಐಪಿಎಲ್‌, 18ನೇ ಸಂಖ್ಯೆಗೆ ನಂಟು – 2013 ರಿಂದ ಆರ್‌ಸಿಬಿ ಪರ 18 ಟ್ರೆಂಡಿಂಗ್‌!

  • ಪಂಜಾಬ್‌ ವಿರುದ್ಧ ಗೆದ್ದು ಫೈನಲ್‌ ಪ್ರವೇಶಿಸಿದ ಆರ್‌ಸಿಬಿಗೆ ವಿಜಯ್‌ ಮಲ್ಯ ವಿಶ್

    ಪಂಜಾಬ್‌ ವಿರುದ್ಧ ಗೆದ್ದು ಫೈನಲ್‌ ಪ್ರವೇಶಿಸಿದ ಆರ್‌ಸಿಬಿಗೆ ವಿಜಯ್‌ ಮಲ್ಯ ವಿಶ್

    ಪಂಜಾಬ್‌ ವಿರುದ್ಧ ಭರ್ಜರಿ ಗೆಲವು ಸಾಧಿಸಿ ಫೈನಲ್‌ ಪ್ರವೇಶಿಸಿದ ಆರ್‌ಸಿಬಿ ತಂಡಕ್ಕೆ ಉದ್ಯಮಿ ವಿಜಯ್ ಮಲ್ಯ ಅಭಿನಂದನೆ ಸಲ್ಲಿಸಿದ್ದಾರೆ.

    ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್‌ ಹಾಕಿರುವ ಅವರು, ಆರ್‌ಸಿಬಿ ಅತ್ಯುತ್ತಮ ಆಲ್-ರೌಂಡ್ ಪ್ರದರ್ಶನ ನೀಡಿದೆ. ಧೈರ್ಯದಿಂದ ಆಟವಾಡಿ, ಕಪ್‌ ಗೆಲ್ಲಿ ಎಂದು ಶುಭ ಹಾರೈಸಿದ್ದಾರೆ.

    ಐಪಿಎಲ್‌ (IPL 2025) ಟಿ20 ಟೂರ್ನಿಯ ಮೊದಲ ಕ್ವಾಲಿಫೈಯರ್‌ ಪಂದ್ಯದಲ್ಲಿ ಪಂಜಾಬ್‌ ಕಿಂಗ್ಸ್‌ (PBKS) ವಿರುದ್ಧ ಆರ್‌ಸಿಬಿ 8 ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿದೆ. ಆ ಮೂಲಕ ಐಪಿಎಲ್‌ ಇತಿಹಾಸದಲ್ಲಿ ನಾಲ್ಕನೇ ಬಾರಿಗೆ ಆರ್‌ಸಿಬಿ (RCB) ಫೈನಲ್‌ಗೆ ಲಗ್ಗೆ ಇಟ್ಟಿದೆ. ಟಾಸ್ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಪಂಜಾಬ್‌ 14.1 ಓವರ್‌ಗೆ ತನ್ನೆಲ್ಲಾ ವಿಕೆಟ್‌ ಕಳೆದುಕೊಂಡು ಕೇವಲ 101 ರನ್‌ ಗಳಿಸಿತು. ಆರ್‌ಸಿಬಿ 10 ಓವರ್‌ಗೆ ಗುರಿ ತಲುಪಿ ಗೆದ್ದು ಬೀಗಿತು.

    ಉತ್ತಮ ಬ್ಯಾಟಿಂಗ್‌ ಪ್ರದರ್ಶನ ನೀಡಿದ ಫಿಲ್‌ ಸಾಲ್ಟ್‌ ಸ್ಫೋಟಕ ಅರ್ಧಶತಕದೊಂದಿಗೆ ತಂಡಕ್ಕೆ ಗೆಲುವು ತಂದುಕೊಟ್ಟರು. 27 ಬಾಲ್‌ಗಳಿಗೆ 6 ಫೋರ್‌, 3 ಸಿಕ್ಸರ್‌ನೊಂದಿಗೆ 56 ರನ್‌ (ಔಟಾಗದೇ) ಗಳಿಸಿ ಮಿಂಚಿದರು. ವಿರಾಟ್‌ ಕೊಹ್ಲಿ 12, ಮಯಂಕ್‌ ಅಗರ್ವಾಲ್‌ 19, ರಜತ್‌ ಪಾಟೀದಾರ್‌ 15 ರನ್‌ (ಔಟಾಗದೇ) ಗಳಿಸಿದರು. ಅಂತಿಮವಾಗಿ ಆರ್‌ಸಿಬಿ 10 ಓವರ್‌ಗೆ 2 ವಿಕೆಟ್‌ ನಷ್ಟಕ್ಕೆ 106 ರನ್‌ ಗಳಿಸಿ ಜಯ ಸಾಧಿಸಿತು.

    ಪ್ರಿಯಾಂಶ್ ಆರ್ಯ 7, ಜೋಶ್‌ ಇಂಗ್ಲಿಸ್‌ 4, ಕ್ಯಾಪ್ಟನ್‌ ಶ್ರೇಯಸ್‌ ಅಯ್ಯರ್‌ 2, ನೆಹಾಲ್ ವಧೇರಾ 8 ರನ್‌ನ ಒಂದಂಕಿ ಆಟದಿಂದ ನಿರಾಸೆ ಮೂಡಿಸಿದರು. ಪ್ರಭಸಿಮ್ರನ್ ಸಿಂಗ್ 18, ಮಾರ್ಕಸ್ ಸ್ಟೊಯಿನಿಸ್ 26, ಅಜ್ಮತುಲ್ಲಾ ಒಮರ್ಜೈ 18 ರನ್‌ಗಳಿಸಿ ಹೆಚ್ಚು ಹೊತ್ತು ಕ್ರೀಸ್‌ನಲ್ಲಿ ನಿಲ್ಲುವಲ್ಲಿ ವಿಫಲರಾದರು. ಕೊನೆಗೆ ಪಂಜಾಬ್‌ 14.1 ಓವರ್‌ಗೆ 101 ರನ್‌ ಗಳಿಸಿ ಆಲೌಟ್‌ ಆಯಿತು.

    2018ರಲ್ಲಿ ಚೆನ್ನೈ ಸೂಪರ್‌ ಕಿಂಗ್ಸ್‌, 2019 ಮತ್ತು 2020ರಲ್ಲಿ ಮುಂಬೈ ಇಂಡಿಯನ್ಸ್‌, 2021ರಲ್ಲಿ ಸಿಎಸ್‌ಕೆ, 2022ರಲ್ಲಿ ಗುಜರಾತ್‌ ಟೈಟಾನ್ಸ್‌, 2023ರಲ್ಲಿ ಸಿಎಸ್‌ಕೆ, 2024ರಲ್ಲಿ ಕೆಕೆಆರ್‌ ತಂಡಗಳು ಕ್ವಾಲಿಫೈಯರ್‌-1ನಲ್ಲಿ ಗೆಲುವು ಸಾಧಿಸಿ ಚಾಂಪಿಯನ್‌ ಪಟ್ಟವನ್ನು ತಮ್ಮದಾಗಿಸಿಕೊಂಡಿವೆ. ಇದೀಗ 18ನೇ ಆವೃತ್ತಿಯ ಕ್ವಾಲಿಫೈಯರ್‌-1 ನಲ್ಲಿ ಗೆದ್ದು ಫೈನಲ್‌ ಪ್ರವೇಶಿಸಿರುವ ಆರ್‌ಸಿಬಿ ಚಾಂಪಿಯನ್‌ ಪಟ್ಟಕ್ಕೆ ಕೊರಳೊಡ್ಡಲಿದೆಯೇ ಎಂಬುದನ್ನು ಕಾದುನೋಡಬೇಕಿದೆ.

  • ಐಪಿಎಲ್ ಫೈನಲ್‌ಗೆ ಎಂಟ್ರಿ – ‘ಹಾಕ್ರೊ ಸ್ಟೆಪ್ಪು’ ಅಂತ ಫ್ಯಾನ್ಸ್‌ಗೆ ಹುರಿದುಂಬಿಸಿದ ಆರ್‌ಸಿಬಿ

    ಐಪಿಎಲ್ ಫೈನಲ್‌ಗೆ ಎಂಟ್ರಿ – ‘ಹಾಕ್ರೊ ಸ್ಟೆಪ್ಪು’ ಅಂತ ಫ್ಯಾನ್ಸ್‌ಗೆ ಹುರಿದುಂಬಿಸಿದ ಆರ್‌ಸಿಬಿ

    ಚಂಡೀಗಢ: ಐಪಿಎಲ್ ಕ್ವಾಲಿಫೈಯರ್ 1 ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ (Punjab Kings) ವಿರುದ್ಧ ಭರ್ಜರಿ ಜಯ ಸಾಧಿಸಿದ ಆರ್‌ಸಿಬಿ (RCB) ತಂಡ ಫೈನಲ್‌ಗೆ ಗ್ರ್ಯಾಂಡ್ ಎಂಟ್ರಿ ಕೊಟ್ಟಿದ್ದು, ‘ಹಾಕ್ರೊ ಸ್ಟೆಪ್ಪು’ ಎಂದು ಅಭಿಮಾನಿಗಳನ್ನು ಹುರಿದುಂಬಿಸಿದೆ.

    ಮಲ್ಲನ್‌ಪುರ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಐಪಿಎಲ್ ಪಂದ್ಯದಲ್ಲಿ ಪಂಜಾಬ್ ವಿರುದ್ಧ ಆರ್‌ಸಿಬಿ ಕೇವಲ 10 ಓವರ್‌ಗಳಲ್ಲಿ 2 ವಿಕೆಟ್ ನಷ್ಟಕ್ಕೆ ಗುರಿ ತಲುಪಿ ಐಪಿಎಲ್ ಇತಿಹಾಸದಲ್ಲಿ ನಾಲ್ಕನೇ ಬಾರಿಗೆ ಫೈನಲ್‌ಗೆ ಎಂಟ್ರಿ ಕೊಟ್ಟಿದೆ.

    ಈ ಬೆನ್ನಲ್ಲೇ ಆರ್‌ಸಿಬಿ, ರಾಯಲ್ ಚಾಲೆಂಜರ್ಸ್ ಬೆಂಗಳೂರು ಎಕ್ಸ್ ಖಾತೆಯಲ್ಲಿ ‘ಹಾಕ್ರೊ ಸ್ಟೆಪ್ಪು’ ಎಂದು ಬರೆದು ಬೆಂಕಿಯ ಇಮೋಜಿ ಹಾಕಿ ಹರ್ಷ ವ್ಯಕ್ತಪಡಿಸಿದೆ. ಈ ಪೋಸ್ಟ್‌ಗೆ ಆರ್‌ಸಿಬಿ ಅಭಿಮಾನಿಗಳು ಕೂಡ ಫುಲ್ ಖುಷಿಯಾಗಿ ಲೈಕ್ಸ್, ಕಾಮೆಂಟ್ಸ್ ಮಾಡುತ್ತಿದ್ದಾರೆ.

    2018ರಲ್ಲಿ ಚೆನ್ನೈ ಸೂಪರ್ ಕಿಂಗ್ಸ್, 2019 ಮತ್ತು 2020ರಲ್ಲಿ ಮುಂಬೈ ಇಂಡಿಯನ್ಸ್, 2021ರಲ್ಲಿ ಸಿಎಸ್‌ಕೆ, 2022ರಲ್ಲಿ ಗುಜರಾತ್ ಟೈಟಾನ್ಸ್, 2023ರಲ್ಲಿ ಸಿಎಸ್‌ಕೆ, 2024ರಲ್ಲಿ ಕೆಕೆಆರ್ ತಂಡಗಳು ಕ್ವಾಲಿಫೈಯರ್-1ನಲ್ಲಿ ಗೆಲುವು ಸಾಧಿಸಿ ಚಾಂಪಿಯನ್ ಪಟ್ಟವನ್ನು ತಮ್ಮದಾಗಿಸಿಕೊಂಡಿವೆ. ಇದೀಗ 18ನೇ ಆವೃತ್ತಿಯ ಕ್ವಾಲಿಫೈಯರ್-1 ನಲ್ಲಿ ಗೆದ್ದು ಫೈನಲ್ ಪ್ರವೇಶಿಸಿರುವ ಆರ್‌ಸಿಬಿ ಚಾಂಪಿಯನ್ ಪಟ್ಟಕ್ಕೆ ಕೊರಳೊಡ್ಡಲಿದೆಯೇ ಎಂಬುದನ್ನು ಕಾದುನೋಡಬೇಕಿದೆ.

  • ಕಳೆದ 7 ವರ್ಷಗಳಲ್ಲಿ ಕ್ವಾಲಿಫೈಯರ್-1 ಗೆದ್ದೋರೇ ಚಾಂಪಿಯನ್‌!

    ಕಳೆದ 7 ವರ್ಷಗಳಲ್ಲಿ ಕ್ವಾಲಿಫೈಯರ್-1 ಗೆದ್ದೋರೇ ಚಾಂಪಿಯನ್‌!

    ಚಂಡೀಗಢ: ಮಲ್ಲನ್‌ಪುರ ಕ್ರಿಕೆಟ್‌ ಸ್ಟೇಡಿಯಂನಲ್ಲಿ ನಡೆದ ಐಪಿಎಲ್‌ ಕ್ವಾಲಿಫೈಯರ್‌ 1 ಪಂದ್ಯದಲ್ಲಿ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು (Royal Challengers Bengaluru) ತಂಡ ಪಂಜಾಬ್‌ ಕಿಂಗ್ಸ್‌ (PBKS) ವಿರುದ್ಧ 8 ವಿಕೆಟ್‌ಗಳ ಭರ್ಜರಿ ಗೆಲುವು ಸಾಧಿಸಿದೆ. 102 ರನ್‌ಗಳ ಅಲ್ಪ ಮೊತ್ತದ ಗುರಿ ಬೆನ್ನಟ್ಟಿದ ಆರ್‌ಸಿಬಿ 10 ಓವರ್‌ಗಳಲ್ಲೇ 2 ವಿಕೆಟ್‌ ನಷ್ಟಕ್ಕೆ 106 ರನ್‌ ಸಿಡಿಸಿ ಗೆಲುವು ಸಾಧಿಸಿದೆ. ಈ ಮೂಲಕ 4ನೇ ಬಾರಿಗೆ ಫೈನಲ್‌ಗೆ ಎಂಟ್ರಿಕೊಟ್ಟಿದೆ.

    2009, 2011, 2016ರ ಬಳಿಕ 4ನೇ ಬಾರಿಗೆ ಫೈನಲ್‌ಗೆ ಲಗ್ಗೆಯಿಟ್ಟಿರುವ ಆರ್‌ಸಿಬಿ ಈ ಬಾರಿ ಟ್ರೋಫಿ ಮುಡಿಗೇರಿಸಿಕೊಳ್ಳಲಿದೆ ಎಂದು ಕ್ರಿಕೆಟ್‌ ತಜ್ಞರು ಭವಿಷ್ಯ ನುಡಿದಿದ್ದಾರೆ. ಏಕೆಂದರೆ ಕಳೆದ 7 ವರ್ಷಗಳಲ್ಲಿ ನಡೆದ ಐಪಿಎಲ್‌ ಆವೃತ್ತಿಗಳಲ್ಲಿ ಐಪಿಎಲ್‌ ಕ್ವಾಲಿಫೈರ್‌-1 ನಲ್ಲಿ ಗೆದ್ದ ತಂಡಗಳೇ ಚಾಂಪಿಯನ್‌ ಪಟ್ಟ ಮುಡಿಗೇರಿಸಿಕೊಂಡಿರುವುದು ಇದಕ್ಕೆ ಸಾಕ್ಷಿಯಾಗಿದೆ.

    ಯಾವ ವರ್ಷ – ಯಾವ ತಂಡ?
    2018 – CSK.
    2019 – MI.
    2020 – MI.
    2021 – CSK.
    2022 – GT.
    2023 – CSK.
    2024 – KKR
    2025 – ….?

    2018ರಲ್ಲಿ ಚೆನ್ನೈ ಸೂಪರ್‌ ಕಿಂಗ್ಸ್‌, 2019 ಮತ್ತು 2020ರಲ್ಲಿ ಮುಂಬೈ ಇಂಡಿಯನ್ಸ್‌, 2021ರಲ್ಲಿ ಸಿಎಸ್‌ಕೆ, 2022ರಲ್ಲಿ ಗುಜರಾತ್‌ ಟೈಟಾನ್ಸ್‌, 2023ರಲ್ಲಿ ಸಿಎಸ್‌ಕೆ, 2024ರಲ್ಲಿ ಕೆಕೆಆರ್‌ ತಂಡಗಳು ಕ್ವಾಲಿಫೈಯರ್‌-1ನಲ್ಲಿ ಗೆಲುವು ಸಾಧಿಸಿ ಚಾಂಪಿಯನ್‌ ಪಟ್ಟವನ್ನು ತಮ್ಮದಾಗಿಸಿಕೊಂಡಿವೆ. ಇದೀಗ 18ನೇ ಆವೃತ್ತಿಯ ಕ್ವಾಲಿಫೈಯರ್‌-1 ನಲ್ಲಿ ಗೆದ್ದು ಫೈನಲ್‌ ಪ್ರವೇಶಿಸಿರುವ ಆರ್‌ಸಿಬಿ ಚಾಂಪಿಯನ್‌ ಪಟ್ಟಕ್ಕೆ ಕೊರಳೊಡ್ಡಲಿದೆಯೇ ಎಂಬುದನ್ನು ಕಾದುನೋಡಬೇಕಿದೆ.

  • RCB vs PBKS | 101 ರನ್‌ಗಳಿಗೆ ಪಂಜಾಬ್‌ ಆಲೌಟ್‌ – ಆರ್‌ಸಿಬಿ ಫೈನಲ್‌ಗೇರಲು 102 ರನ್‌ ಗುರಿ

    RCB vs PBKS | 101 ರನ್‌ಗಳಿಗೆ ಪಂಜಾಬ್‌ ಆಲೌಟ್‌ – ಆರ್‌ಸಿಬಿ ಫೈನಲ್‌ಗೇರಲು 102 ರನ್‌ ಗುರಿ

    ಚಂಡೀಗಢ: ಅಗ್ರ ಕ್ರಮಾಂಕದ ಬ್ಯಾಟರ್‌ಗಳ ಕಳಪೆ ಪ್ರದರ್ಶನದಿಂದ ಪಂಜಾಬ್‌ ಕಿಂಗ್ಸ್‌ವು (Punjab Kings) ಕ್ವಾಲಿಫೈಯರ್‌-1ನಲ್ಲಿ 14.1 ಓವರ್‌ಗಳಲ್ಲೇ 101‌ ರನ್‌ಗಳಿಗೆ ಆಲೌಟ್‌ ಆಗಿದೆ. ಈ ಮೂಲಕ ಎದುರಾಳಿ ಆರ್‌ಸಿಬಿಗೆ (RCB) 102 ರನ್‌ಗಳ ಗುರಿ ನೀಡಿದೆ.

    ಮಲ್ಲನ್‌ಪುರ ಕ್ರಿಕೆಟ್‌ ಅಂಗಳದಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಟಾಸ್‌ ಗೆದ್ದ ಆರ್‌ಸಿಬಿ ಮೊದಲು‌ ಫೀಲ್ಡಿಂಗ್‌ ಆಯ್ದುಕೊಂಡು ಬ್ಯಾಟಿಂಗ್‌ ಮಾಡುವ ಅವಕಾಶವನ್ನು ಪಂಜಾಬ್‌ಗೆ ಬಿಟ್ಟುಕೊಟ್ಟಿತು.

    ಉತ್ತಮ ರನ್‌ ಪೇರಿಸುವ ನಿರೀಕ್ಷೆಯೊಂದಿಗೆ ಕಣಕ್ಕಿಳಿದ ಪಂಜಾಬ್‌ ಕಿಂಗ್ಸ್‌ಗೆ  ಆರಂಭದಲ್ಲೇ ಮರ್ಮಾಘಾತವಾಯಿತು. 1.2 ಓವರ್‌ಗಳಲ್ಲಿ 9 ರನ್‌ಗಳಿಗೆ ಮೊದಲ ವಿಕೆಟ್‌ ಕಳೆದುಕೊಂಡಿದ್ದ ಪಂಜಾಬ್‌ ಬಳಿಕ ಪೆವಿಲಿಯನ್‌ ಪರೇಡ್‌ ನಡೆಸಲು ಶುರು ಮಾಡಿತು. ಪವರ್‌ ಪ್ಲೇನಲ್ಲಿ ಒಂದೆಡೆ ರನ್‌ ಹರಿಯುತ್ತಿದ್ದರೆ ಮತ್ತೊಂದೆಡೆ ಪ್ರಮುಖ ವಿಕೆಟ್‌ಗಳು ತರಗೆಲೆಗಳಂತೆ ಉದುರುತ್ತಿದ್ದವು. ಇದರಿಂದ ಪವರ್‌ ಪ್ಲೇನಲ್ಲಿ 48 ರನ್‌ ಗಳಿಸುವ ಹೊತ್ತಿಗೆ ಪಂಜಾಬ್‌ ಪ್ರಮುಖ 4 ವಿಕೆಟ್‌ ಕಳೆದುಕೊಂಡಿತ್ತು.

    ಆರ್‌ಸಿಬಿ ಬೌಲರ್‌ಗಳ ಬಿಗಿ ಹಿಡಿತ:
    ಮೊದಲ ಓವರ್‌ನಲ್ಲಿ ನಿರಾಸೆಗೊಂಡಿದ್ದ ಆರ್‌ಸಿಬಿ ಬೌಲಿಂಗ್‌ ಪಡೆ 2ನೇ ಓವರ್‌ನಿಂದಲೇ ಪಂಜಾಬ್‌ ಬ್ಯಾಟರ್‌ಗಳ ಮೇಲುಗೈ ಸಾಧಿಸಿತು. ಈ ಆವೃತ್ತಿಯಲ್ಲಿ ಮೆರೆದಾಡಿದ ಅಗ್ರ ಕ್ರಮಾಂಕದ ಬ್ಯಾಟರ್‌ಗಳಿಗೆ ಪೆವಿಲಿಯನ್‌ ಹಾದಿ ತೋರುವಲ್ಲಿ ಯಶಸ್ವಿಯಾದರು. ಸೂಯಶ್‌ ಶರ್ಮಾ (Suyash Sharma) ಸ್ಪಿನ್‌ ಮೋಡಿ, ಜೋಶ್‌ ಹೇಜಲ್ವುಡ್‌, ಯಶ್‌ ದಯಾಳ್‌, ಭುವನೇಶ್ವರ್‌ ಕುಮಾರ್‌ ಅವರ ಉರಿ ಚೆಂಡಿನ ದಾಳಿಗೆ ಪಂಜಾಬ್‌ ರನ್‌ ಕದಿಯಲು ತಿಣುಕಾಡಿತು. ಮಾರ್ಕಸ್‌ ಸ್ಟೋಯ್ನಿಸ್‌, ನೇಹಾಲ್‌ ವಧೇರಾ ಹೊರತುಪಡಿಸಿದ್ರೆ ಉಳಿದ ಅಗ್ರ ಕ್ರಮಾಂಕದ ಬ್ಯಾಟರ್‌ಗಳು ಒಂದಂಕಿಯ ರನ್‌ ಗಳಿಸಿ ಪೆವಿಲಿಯನ್‌ಗೆ ಮರಳಿದರು.

    ಪಂಜಾಬ್‌ ಕಿಂಗ್ಸ್‌ ಪರ ಮಾರ್ಕಸ್‌ ಸ್ಟೋಯ್ನಿಸ್‌ 26 ರನ್‌, ಅಜ್ಮತುಲ್ಲಾ ಒಮರ್ಜೈ, ಪ್ರಭ್‌ಸಿಮ್ರನ್‌ ತಲಾ 18 ರನ್‌, ಪ್ರಿಯಾಂಶ್‌ ಆರ್ಯ 7 ರನ್‌, ಜೋಶ್‌ ಇಂಗ್ಲಿಸ್‌ 4 ರನ್‌. ಶ್ರೇಯಸ್‌ ಅಯ್ಯರ್‌ 2 ರನ್‌, ನೇಹಾಲ್‌ ವಧೇರಾ 8 ರನ್‌, ಶಶಾಂಕ್‌ ಸಿಂಗ್‌ 3, ಹರ್ಪ್ರೀತ್‌ ಬ್ರಾರ್‌ 4 ರನ್‌ ಗಳಿಸಿದ್ರೆ ಮುಶೀರ್‌ ಖಾನ್‌ ಶೂನ್ಯ ಸುತ್ತಿದರು.

    ಆರ್‌ಸಿಬಿ ಪರ ಸೂಯಶ್‌ ಶರ್ಮಾ, ಜೋಶ್‌ ಹೇಜಲ್ವುಡ್‌ ತಲಾ 3 ವಿಕೆಟ್‌ ಕಿತ್ತರೆ, ಯಶ್‌ ದಯಾಳ್‌ 2 ವಿಕೆಟ್‌, ಭುವನೇಶ್ವರ್‌ ಕುಮಾರ್‌, ರೊಮಾರಿಯೊ ಶೆಫರ್ಡ್‌ ತಲಾ ಒಂದು ವಿಕೆಟ್‌ ಪಡೆದು ಮಿಂಚಿದರು.

  • ಆರ್‌ಸಿಬಿಗೆ ʻಜೋಶ್‌ʼ – ಟಾಸ್‌ ಗೆದ್ದ ಬೆಂಗಳೂರು ಫೀಲ್ಡಿಂಗ್‌ ಆಯ್ಕೆ

    ಆರ್‌ಸಿಬಿಗೆ ʻಜೋಶ್‌ʼ – ಟಾಸ್‌ ಗೆದ್ದ ಬೆಂಗಳೂರು ಫೀಲ್ಡಿಂಗ್‌ ಆಯ್ಕೆ

    ಚಂಡೀಗಢ: 18ನೇ ಆವೃತ್ತಿ ಐಪಿಎಲ್‌ ಟೂರ್ನಿಯ ಕ್ವಾಲಿಫೈಯರ್‌-1 (IPL Qualifier 1) ಪಂದ್ಯ ಇಂದು ನಡೆಯುತ್ತಿದ್ದು, ಆರ್‌ಸಿಬಿ-ಪಂಜಾಬ್‌ ಕಿಂಗ್ಸ್‌ ತಂಡಗಳು ಕಾದಾಟ ನಡೆಸಲಿವೆ. ಟಾಸ್‌ ಗೆದ್ದ ಆರ್‌ಸಿಬಿ (RCB) ಫೀಲ್ಡಿಂಗ್‌ ಆಯ್ದುಕೊಂಡಿದ್ದು, ಬ್ಯಾಟಿಂಗ್‌ ಮಾಡುವ ಅವಕಾಶವನ್ನು ಪಂಜಾಬ್‌ಗೆ ಬಿಟ್ಟುಕೊಟ್ಟಿದೆ.

    ಚಂಡೀಗಢದ ಮಲ್ಲನ್‌ಪುರ ಕ್ರಿಕೆಟ್‌ ಅಂಗಳದಲ್ಲಿ ಸರಿಯಾಗಿ 7:30ಕ್ಕೆ ಪಂದ್ಯ ಆರಂಭವಾಗಲಿದೆ. ಗೆದ್ದ ತಂಡ ನೇರವಾಗಿ ಫೈನಲ್‌ ಪ್ರವೇಶಿಸಲಿದೆ. ಇನ್ನೂ ಸೋತ ತಂಡ ಕ್ವಾಲಿಫೈಯರ್‌ 2ನಲ್ಲಿ ಎಲಿಮಿನೇಟರ್‌ನಲ್ಲಿ ಗೆದ್ದ ತಂಡದೊಂದಿಗೆ ಸೆಣಸಲಿದೆ. ಗಾಯದ ಸಮಸ್ಯೆ ಎದುರಿಸುತ್ತಿದ್ದ ಜೋಶ್‌ ಹೇಜಲ್ವುಡ್‌ ಮತ್ತೆ ಆರ್‌ಸಿಬಿಗೆ ಕಂಬ್ಯಾಕ್‌ ಮಾಡಿದ್ದಾರೆ. ಇನ್ನೂ ಬೆರಳು ಗಾಯದ ಸಮಸ್ಯೆಯಿಂದ ಇಂಪ್ಯಾಕ್ಟ್‌ ಪ್ಲೇಯರ್‌ ಆಗಿ ಕಣಕ್ಕಿಳಿಯುತ್ತಿದ್ದ ರಜತ್‌ ಪಾಟಿದಾರ್‌ ಮತ್ತೆ ನಾಯಕತ್ವ ವಹಿಸಿಕೊಂಡಿದ್ದಾರೆ. ಹೀಗಾಗಿ ಇಂದಿನ ಆರ್‌ಸಿಬಿ ಫಲಿತಾಂಶದಲ್ಲಿ ಬದಲಾವಣೆ ತರಲಿದೆಯೇ ಎಂಬುದನ್ನು ಕಾದುನೋಡಬೇಕಿದೆ.

    ಪಂಜಾಬ್‌ ಕಿಂಗ್ಸ್‌ ಪ್ಲೇಯಿಂಗ್‌-11
    ಪ್ರಿಯಾಂಶ್‌ ಆರ್ಯ, ಪ್ರಭ್‌ಸಿಮ್ರನ್‌ ಸಿಂಗ್‌, ಜೋಶ್‌ ಇಂಗ್ಲಿಷ್‌, ಶ್ರೇಯಸ್‌ ಅಯ್ಯರ್‌ (ನಾಯಕ), ನೇಹಾಲ್‌ ವಧೇರಾ, ಶಶಾಂಕ್‌ ಸಿಂಗ್‌, ಮಾರ್ಕಸ್‌ ಸ್ಟೋಯ್ನಿಸ್‌, ಅಝ್ಮತುಲ್ಲಾ ಒಮರ್ಝೈ, ಹರ್ಪ್ರೀತ್‌ ಬ್ರಾರ್‌, ಕೈಲ್‌ ಜೇಮಿಸನ್‌, ಅರ್ಷ್‌ದೀಪ್‌ ಸಿಂಗ್‌.

    ಆರ್‌ಸಿಬಿ ಪ್ಲೇಯಿಂಗ್‌-11
    ವಿರಾಟ್‌ ಕೊಹ್ಲಿ, ಫಿಲ್‌ ಸಾಲ್ಟ್‌, ರಜತ್‌ ಪಾಟಿದಾರ್‌ (ನಾಯಕ), ಲಿಯಾಮ್‌ ಲಿವಿಂಗ್‌ಸ್ಟೋನ್‌, ಜಿತೇಶ್‌ ಶರ್ಮಾ, ರೊಮಾರಿಯೊ ಶೆಫರ್ಡ್‌, ಕೃನಾಲ್‌ ಪಾಂಡ್ಯ, ಭುವನೇಶ್ವರ್‌ ಕುಮಾರ್‌, ಜೋಶ್‌ ಹೇಜಲ್ವುಡ್‌, ಸೂಯಶ್‌ ಶರ್ಮಾ, ಯಶ್‌ ದಯಾಳ್‌.

  • IPL 2025 | ಕೊನೆಯಲ್ಲಿ ʻಸನ್‌ʼ ಸ್ಟ್ರೋಕ್‌ – ಮೊದಲೆರಡು ಸ್ಥಾನ ಕಳೆದುಕೊಂಡರೆ ಆರ್‌ಸಿಬಿಗೆ ಆಗುವ ನಷ್ಟವೇನು?

    IPL 2025 | ಕೊನೆಯಲ್ಲಿ ʻಸನ್‌ʼ ಸ್ಟ್ರೋಕ್‌ – ಮೊದಲೆರಡು ಸ್ಥಾನ ಕಳೆದುಕೊಂಡರೆ ಆರ್‌ಸಿಬಿಗೆ ಆಗುವ ನಷ್ಟವೇನು?

    ಲಕ್ನೋ: 18ನೇ ಆವೃತ್ತಿಯ ಐಪಿಎಲ್‌ (IPL 2025) ಆವೃತ್ತಿ ಇನ್ನೇನು ಮುಕ್ತಾಯ ಘಟಕ್ಕೆ ತಲುಪುತ್ತಿದೆ. ಲೀಗ್‌ ಸುತ್ತಿನಲ್ಲಿ ಉತ್ತಮ ಪ್ರದರ್ಶನ ಕಾಯ್ದುಕೊಂಡಿದ್ದ ಆರ್‌ಸಿಬಿಗೆ (RCB) ಕೊನೆಕೊನೆಯಲ್ಲಿ ಮರ್ಮಾಘಾತ ಆಗಿದೆ.

    ಸನ್‌ ರೈಸರ್ಸ್‌ ಹೈದರಾಬಾದ್‌ (SRH) ವಿರುದ್ಧದ ಸೋಲಿನಿಂದ ಇದೀಗ ಲೀಗ್‌ ಸುತ್ತಿನಲ್ಲಿ 2ನೇ ಸ್ಥಾನವನ್ನೂ ಕಳೆದುಕೊಳ್ಳುವ ಆತಂಕ ಎದುರಾಗಿದೆ. ಇದರಿಂದ ಟ್ರೋಫಿ ಗೆಲ್ಲುವ ಕನಸು ಕಂಡಿರುವ ಆರ್‌ಸಿಬಿಗೆ ದೊಡ್ಡ ನಷ್ಟ ಉಂಟಾಗುವ ಸಾಧ್ಯತೆ ಇದೆ. ಅದು ಹೇಗೆ ಅನ್ನೋದನ್ನ ತಿಳಿಯಬೇಕಿದ್ದರೆ ಮುಂದೆ ಓದಿ…

    18ನೇ ಆವೃತ್ತಿಯ ಐಪಿಎಲ್‌ ಪ್ಲೇ ಆಫ್‌ಗೆ ಗುಜರಾತ್‌, ಪಂಜಾಬ್‌, ಆರ್‌ಸಿಬಿ, ಮುಂಬೈ ತಂಡಗಳು ಈಗಾಗಲೇ ಲಗ್ಗೆಯಿಟ್ಟಿವೆ. ಈ ನಾಲ್ಕು ತಂಡಗಳಲ್ಲಿ ಈಗ ನಂ.1, ನಂ.2 ಪಟ್ಟಕ್ಕೆ ಹಣಾಹಣಿ ನಡೆಯುತ್ತಿದೆ. ಗುಜರಾತ್‌, ಆರ್‌ಸಿಬಿ, ಮುಂಬೈ ತಲಾ 13 ಪಂದ್ಯಗಳನ್ನಾಡಿದ್ದರೆ, ಪಂಜಾಬ್‌ ಕಿಂಗ್ಸ್‌ಗೆ ಮಾತ್ರ ಇನ್ನೂ 2 ಪಂದ್ಯಗಳು ಬಾಕಿಯಿವೆ.

    ನಂ.2 ಸ್ಥಾನವೂ ಕಳೆದುಕೊಳ್ಳುತ್ತಾ ಆರ್‌ಸಿಬಿ?
    ಸದ್ಯ ಸನ್‌ ರೈಸರ್ಸ್‌ ವಿರುದ್ಧದ ಸೋಲಿನಿಂದ 3ನೇ ಸ್ಥಾನಕ್ಕೆ ಕುಸಿದಿರುವ ಆರ್‌ಸಿಬಿಗೆ ಮತ್ತೆ 1 ಅಥವಾ 2ನೇ ಸ್ಥಾನಕ್ಕೇರುವ ಅವಕಾಶವಿದೆ. ಮುಂದಿನ ಪಂದ್ಯದಲ್ಲಿ ಪಂಜಾಬ್‌ ಕಿಂಗ್ಸ್‌, ಡೆಲ್ಲಿ ಕ್ಯಾಪಿಟಲ್ಸ್‌ ವಿರುದ್ಧ ಸೋತು, ಮುಂಬೈ ವಿರುದ್ಧ ಕಡಿಮೆ ರನ್‌ ಅಂತರದಿಂದ ಗೆಲ್ಲಬೇಕು. ಗುಜರಾತ್‌ ಟೈಟಾನ್ಸ್‌ ಸಿಎಸ್‌ಕೆ ವಿರುದ್ಧ ಸೋಲಬೇಕು. ಇದೇ ವೇಳೆ ಮುಂಬೈ ಪಂಜಾಬ್‌ ವಿರುದ್ಧ ಕಡಿಮೆ ರನ್‌ ಅಂತರದಿಂದ ಸೋತು. ಆರ್‌ಸಿಬಿ ಲಕ್ನೋ ವಿರುದ್ಧ ಉತ್ತಮ ರನ್‌ ರೇಟ್‌ನಿಂದ ಗೆದ್ದರೆ, ಆಗ ಆರ್‌ಸಿಬಿ ಮೊದಲ ಅಥವಾ ಅಗ್ರಸ್ಥಾನಕ್ಕೇರುವ ಸಾಧ್ಯತೆಗಳಿವೆ. ಏಕೆಂದರೆ ನೆಟ್ ರನ್‌ರೇಟ್‌ನಲ್ಲಿ ಮುಂಬೈ ಇಂಡಿಯನ್ಸ್‌ ಎಲ್ಲರಿಗಿಂತ ಮುಂದಿದೆ. ಮುಂಬೈ +1.292 ನೆಟ್‌ರನ್‌ ರೇಟ್‌ ಹೊಂದಿದ್ದರೆ, ಗುಜರಾತ್‌ +0.602, ಪಂಜಾಬ್‌ +0.389, ಆರ್‌ಸಿಬಿ +0.255 ನೆಟ್‌ ರನ್‌ರೇಟ್‌ ಹೊಂದಿದೆ.

    ಮೊದಲೆರಡು ಸ್ಥಾನ ಕಸಿದರೆ ಆರ್‌ಸಿಬಿಗೆ ಆಗುವ ನಷ್ಟ ಏನು?
    ಸಾಮಾನ್ಯವಾಗಿ ಐಪಿಎಲ್‌ನಲ್ಲಿ ಮೊದಲ 2 ಸ್ಥಾನಗಳಲ್ಲಿರುವ ತಂಡಗಳಿಗೆ ಹೆಚ್ಚು ಲಾಭ. ಏಕೆಂದರೆ ಮೊದಲ ಕ್ವಾಲಿಫೈಯರ್‌ 1ನಲ್ಲಿ ಸೆಣಸಿದಾಗ ಗೆದ್ದ ತಂಡ ನೇರವಾಗಿ ಫೈನಲ್‌ ಪ್ರವೇಶಿಸಿದ್ರೆ, ಸೋತ ತಂಡಕ್ಕೆ ಮತ್ತೊಂದು ಅವಕಾಶ ಸಿಗಲಿದೆ. ಆದ್ರೆ 3 ಮತ್ತು 4ನೇ‌ ಸ್ಥಾನ ಪಡೆಯುವ ತಂಡಗಳಿಗೆ ಒಂದೊಂದೇ ಅವಕಾಶ ಇರುತ್ತದೆ. ಎಲಿಮಿನೇಟರ್‌ 1ನಲ್ಲಿ ಮೂರು ಮತ್ತು 4ನೇ ಸ್ಥಾನ ಪಡೆದ ತಂಡಗಳು ಸೆಣಸಲಿದ್ದು, ಸೋತ ತಂಡ ಮನೆಗೆ ಹೋಗಬೇಕಾಗುತ್ತದೆ. ಗೆದ್ದ ತಂಡ ಕ್ವಾಲಿಫೈಯರ್‌ 1ನಲ್ಲಿ ಸೋತ ತಂಡದ ಜೊತೆಗೆ ಕ್ವಾಲಿಫೈಯರ್‌-2ನಲ್ಲಿ ಸೆಣಸಬೇಕಾಗುತ್ತದೆ. ಕ್ವಾಲಿಫೈಯರ್‌ 2ನಲ್ಲಿ ಗೆದ್ದ ತಂಡ ಫೈನಲ್‌ ಪ್ರವೇಶಿಸಲಿದೆ. ಹೀಗಾಗಿ ಆರ್‌ಸಿಬಿಗೆ ಮೊದಲ 2 ಸ್ಥಾನಗಳಲ್ಲಿ ಕಾಯ್ದುಕೊಳ್ಳುತ್ತಾ ಅನ್ನೋದನ್ನ ಕಾದುನೋಡಬೇಕಿದೆ.

    ಆರ್‌ಸಿಬಿಗೆ ಹೀನಾಯ ಸೋಲು:
    ಇನ್ನೂ ಶುಕ್ರವಾರ ಸನ್‌ ರೈಸರ್ಸ್‌ ಹೈದರಾಬಾದ್‌ ವಿರುದ್ಧ ಲಕ್ನೋದ ಏಕನಾ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಆರ್‌ಸಿಬಿ 42 ರನ್‌ಗಳ ಅಂತರದಿಂದ ಸೋಲು ಕಂಡಿದೆ. ಇದರೊಂದಿಗೆ ಅಂಕಪಟ್ಟಿಯಲ್ಲಿ 3ನೇ ಸ್ಥಾನಕ್ಕೆ ಕುಸಿದಿದೆ.

    .

  • IPL Retention | ಹೊಸ ಮುಖಗಳಿಗೆ ಪಂಜಾಬ್‌ ಕಿಂಗ್ಸ್‌ ಮಣೆ – ಸ್ಟಾರ್‌ ಆಟಗಾರರು ಹೊರಕ್ಕೆ

    IPL Retention | ಹೊಸ ಮುಖಗಳಿಗೆ ಪಂಜಾಬ್‌ ಕಿಂಗ್ಸ್‌ ಮಣೆ – ಸ್ಟಾರ್‌ ಆಟಗಾರರು ಹೊರಕ್ಕೆ

    ಮುಂಬೈ: 2024ರ ಐಪಿಎಲ್‌ನಲ್ಲಿ ಅಮೋಘ ಪ್ರದರ್ಶನ ನೀಡಿದರೂ ವಿರೋಚಿತ ಸೋಲುಗಳಿಂದಲೇ ಪ್ಲೇ ಆಫ್‌ ನಿಂದ ದೂರ ಉಳಿದ ಪಂಜಾಬ್‌ ಕಿಂಗ್ಸ್‌ (PBKS) ಈ ಬಾರಿ ಕೇವಲ ಇಬ್ಬರು ಆಟಗಾರರನ್ನು ಮಾತ್ರ ಉಳಿಸಿಕೊಂಡಿದೆ.

    ಶಶಾಂಕ್‌ ಸಿಂಗ್‌ (Shashank Singh) ಅವರನ್ನು 5.5 ಕೋಟಿ ರೂ.ಗೆ ಹಾಗೂ ಆರಂಭಿಕ ಆಟಗಾರ ಪ್ರಭ್‌ಸಿಮ್ರನ್‌ ಸಿಂಗ್‌ (Prabhsimran Singh) ಅವರನ್ನು 4 ಕೋಟಿ ರೂ.ಗೆ ಧಾರಣೆ ಮಾಡಿಕೊಂಡಿದೆ. ಉಳಿದೆಲ್ಲ ಸ್ಟಾರ್‌ ಆಟಗಾರರನ್ನ ಹೊರದಬ್ಬಿದೆ. ಇದರಿಂದ ಪರ್ಸ್‌ನಲ್ಲಿ 110 ಕೋಟಿ ರೂ. ಬಾಕಿ ಉಳಿಸಿಕೊಂಡಿದೆ. ಇದನ್ನೂ ಓದಿ: IPL Retention | ಸಂಭಾವನೆ ಹೆಚ್ಚಿಸಿಕೊಂಡ ಕ್ಲಾಸೆನ್‌ – ಬರೋಬ್ಬರಿ 23 ಕೋಟಿ ರೂ.ಗೆ ರೀಟೆನ್‌

    ದಾಖಲೆ ಬೆಲೆಯ ಆಟಗಾರ ಔಟ್‌: 
    2023ರ ಐಪಿಎಲ್‌ಗೆ ನಡೆದ ಮಿನಿ ಹರಾಜಿನಲ್ಲಿ ಪಂಜಾಬ್‌ ಕಿಂಗ್ಸ್‌ ಆವೃತ್ತಿಗೆ 18.50 ಕೋಟಿ ರೂ.ಗೆ ಬಿಕರಿಯಾಗಿದ್ದ ಆಲ್‌ರೌಂಡರ್‌ ಸ್ಯಾಮ್‌ ಕರ್ರನ್‌ (Sam Curran) ರಿಟೇನ್‌ ಪಟ್ಟಿಯಲ್ಲಿ ಸ್ಥಾನ ಪಡೆದುಕೊಳ್ಳಲು ವಿಫಲರಾಗಿದ್ದಾರೆ.

    2022ರ ಟಿ20 ವಿಶ್ವಕಪ್‌ ಫೈನಲ್‌ ಪಂದ್ಯದಲ್ಲಿ ಆಲ್‌ರೌಂಡರ್‌ ಪ್ರದರ್ಶನ ನೀಡಿ ಗಮನ ಸೆಳೆದಿದ್ದ ಸ್ಯಾಮ್‌ ಕರ್ರನ್‌ ಅವರನ್ನು ಪಂಜಾಬ್‌ ಕಿಂಗ್ಸ್‌ 18.50 ಕೋಟಿ ರೂ.ಗೆ ಖರೀದಿ ಮಾಡಿತ್ತು. ಇದನ್ನೂ ಓದಿ: IPL Retention | ಕೆಕೆಆರ್‌ನಿಂದ ಸ್ಟಾರ್ಕ್‌, ಶ್ರೇಯಸ್‌ ಔಟ್‌ – ರಿಂಕು ಸಂಭಾವನೆ ಕೋಟಿ ಕೋಟಿ ಏರಿಕೆ!

    2025 ರಿಂದ 2027ರ ಐಪಿಎಲ್‌ ಆವೃತ್ತಿಗಳಿಗೆ ಹೊಸ ನಿಯಮ ಘೋಷಣೆ ಮಾಡಿರುವ ಬಿಸಿಸಿಐ, ನವೆಂಬರ್ 24 ಮತ್ತು 25 ರಂದು ಸೌದಿ ಅರೇಬಿಯಾದ ರಿಯಾದ್‌ನಲ್ಲಿ ಮೆಗಾ ಹರಾಜು ನಡೆಸಲು ತೀರ್ಮಾನಿಸಿದೆ. ಇದನ್ನೂ ಓದಿ: IPL Retention | ಲಕ್ನೋದಿಂದ ರಾಹುಲ್‌ ಔಟ್‌ – ಪೂರನ್‌, ರಾಕೆಟ್‌ ವೇಗಿ ಮಯಾಂಕ್‌ಗೆ ಬಂಪರ್‌ ಗಿಫ್ಟ್‌

  • ಕದನದೊಳ್‌ ಕೊಹ್ಲಿ ಕೆಣಕಿ ಉಳಿದವರುಂಟೇ – ಐಪಿಎಲ್‌ನಲ್ಲಿ ಗನ್‌ಶೂಟ್‌ ಕದನ – ಕಲಾಶ್‌ ನಿಕಾವೋಗೆ ಹೋಲಿಸಿ ಟ್ರೆಂಡ್‌!

    ಕದನದೊಳ್‌ ಕೊಹ್ಲಿ ಕೆಣಕಿ ಉಳಿದವರುಂಟೇ – ಐಪಿಎಲ್‌ನಲ್ಲಿ ಗನ್‌ಶೂಟ್‌ ಕದನ – ಕಲಾಶ್‌ ನಿಕಾವೋಗೆ ಹೋಲಿಸಿ ಟ್ರೆಂಡ್‌!

    ಧರ್ಮಶಾಲಾ: ಕ್ರಿಕೆಟ್‌ ಲೋಕದ ಕಿಂಗ್‌ ಎಂದೇ ಕರೆಸಿಕೊಂಡಿರುವ ವಿರಾಟ್‌ ಕೊಹ್ಲಿ (Virat Kohli) ಮೈದಾನದಲ್ಲಿ ತಮ್ಮನ್ನಾಗಲಿ, ತಮ್ಮ ತಂಡದವರನ್ನಾಗಲಿ ಕೆಣಕಿದವರಿಗೆ ಸುಮ್ಮನೇ ಬಿಟ್ಟಿದ್ದೇ ಇಲ್ಲ. ಖಡಕ್‌ ರಿಯಾಕ್ಷನ್‌ಗಳ ಮೂಲಕ ಏಟಿಗೆ-ಎದುರೇಟು ಕೊಟ್ಟೇ ತೀರುತ್ತಾರೆ.

    ಪ್ರತಿಯೊಬ್ಬ ಅಭಿಮಾನಿಯನ್ನು (Kohli Fans) ನಕ್ಕುನಲಿಸುವ ಕೊಹ್ಲಿ, ಗೌತಮ್‌ ಗಂಭೀರ್‌, ಅವೇಶ್‌ ಖಾನ್‌, ನವೀನ್‌ ಹುಲ್‌ ಹಕ್‌ ಅವರಿಗೆ ಅವರದ್ದೇ ಶೈಲಿಯಲ್ಲಿ ತಿರುಗೇಟು ನೀಡಿದ್ದರು. ಇತ್ತೀಚೆಗೆ ತಮ್ಮ ಸ್ಟ್ರೇಕ್‌ರೇಟ್‌ ಕುರಿತು ಮಾತನಾಡುತ್ತಿದ್ದ ಸುನೀಲ್‌ ಗವಾಸ್ಕರ್‌ ಅವರಿಗೂ ಬ್ಯಾಟ್‌ ಮೂಲಕವೇ ಉತ್ತರ ಕೊಟ್ಟ ಕಿಂಗ್‌ ಕೊಹ್ಲಿ, ಮೈದಾನದಲ್ಲಿ ಪಂಜಾಬ್‌ ಕಿಂಗ್ಸ್‌ (PBKS) ಆಟಗಾರ ರೀಲಿ ರುಸ್ಸೊ ಅವರಿಗೆ ಅವರದ್ದೇ ಶೈಲಿಯಲ್ಲಿ ತಿರುಗೇಟು ಕೊಟ್ಟಿದ್ದಾರೆ.

    ಕಿಂಗ್ಸ್‌-ರಾಯಲ್ಸ್‌ ಕದನದಲ್ಲಿ ಕಲಾಶ್‌ನಿಕಾವೋ:
    ಆರ್‌ಸಿಬಿ ನೀಡಿದ 242 ರನ್‌ಗಳ ಬೃಹತ್‌ ಮೊತ್ತ ಬೆನ್ನಟ್ಟಿದ್ದ ಕಿಂಗ್ಸ್‌ ಪಂಜಾಬ್‌ ಪರ ಎಡಗೈ ಆಟಗಾರ ರೀಲಿ ರುಸ್ಸೊ (Rilee Rossouw) ಸ್ಫೋಟಕ ಅರ್ಧಶತಕ ಬಾರಿಸಿದರು. ಅರ್ಧಶತಕ ಬಾರಿಸಿದ ಬಳಿಕ ಅವರು ಗನ್‌ ಶಾಟ್‌ ರೀತಿಯ ಭಂಗಿ ಮೂಲಕ ಸಂಭ್ರಮಿಸಿದ್ದರು. ಆದರೆ, ಅರ್ಧಶತಕದ ಬಳಿಕ ಕರಣ್‌ ಶರ್ಮಾ ಎಸೆತದಲ್ಲಿ ವಿಲ್‌ ಜಾಕ್ಸ್‌ಗೆ ಕ್ಯಾಚಿತ್ತು ರುಸ್ಸೊ ಔಟಾದರು. ರುಸ್ಸೊ ಔಟಾಗುತ್ತಲೇ ವಿರಾಟ್‌ ಕೊಹ್ಲಿ ಅವರೂ ಗನ್‌ನಿಂದ ಶೂಟ್‌ ಮಾಡುವ ರೀತಿ ಕುಟುಕಿದರು. ಈ ವೀಡಿಯೋ ಸೋಷಿಯಲ್‌ ಮೀಡಿಯಾಗಳಲ್ಲಿ ಭಾರೀ ಸದ್ದು ಮಾಡುತ್ತಿದೆ. ಕೊಹ್ಲಿ ಅಭಿಮಾನಿಗಳಂತೂ ಈ ವೀಡಿಯೋ ನೋಡಿ ಖುಷಿಪಟ್ಟಿದ್ದಾರೆ. ಇನ್ನೂ ಕೆಲವರು ಕೆಜಿಎಫ್‌-2 ಚಿತ್ರದಲ್ಲಿ ಯಶ್‌ ಅವರು ಹಿಡಿಯುವ ಕಲಾಶ್‌ನಿಕಾವೊ ಗನ್‌ಗೆ ಹೋಲಿಸಿ ಸಂಭ್ರಮಿಸಿದ್ದಾರೆ.

    ಧರ್ಮಶಾಲಾದ ಹಿಮಾಚಲ ಪ್ರದೇಶ ಕ್ರಿಕೆಟ್​ ಸ್ಟೇಡಿಯಂ​ನಲ್ಲಿ ಗುರುವಾರ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಆರ್‌ಸಿಬಿ 20 ಓವರ್​​ಗಳಲ್ಲಿ 7 ವಿಕೆಟ್​ಗೆ 241 ರನ್ ಬಾರಿಸಿತು. ಪ್ರತಿಯಾಗಿ ಬ್ಯಾಟ್​ ಮಾಡಿದ ಪಂಜಾಬ್ ಬಳಗ 17 ಓವರ್​ಗಳಲ್ಲಿ 181 ರನ್​ಗಳಿಗೆ ಆಲ್​ಔಟ್ ಆಯಿತು. ಇದರೊಂದಿಗೆ ಆರ್‌ಸಿಬಿಯು ಸತತ 4ನೇ ಜಯ ದಾಖಲಿಸಿತು.

  • ಸ್ಟೋಯಿನಿಸ್ ಸ್ಟನ್‌ ಬೌಲಿಂಗ್, ಡಿ ಕಾಕ್ ದರ್ಬಾರ್‌ – ಪ್ಲೇ ಆಫ್‍ಗೆ ಎರಡನೇ ತಂಡವಾಗಿ ಎಂಟ್ರಿಕೊಟ್ಟ ಲಕ್ನೋ

    ಸ್ಟೋಯಿನಿಸ್ ಸ್ಟನ್‌ ಬೌಲಿಂಗ್, ಡಿ ಕಾಕ್ ದರ್ಬಾರ್‌ – ಪ್ಲೇ ಆಫ್‍ಗೆ ಎರಡನೇ ತಂಡವಾಗಿ ಎಂಟ್ರಿಕೊಟ್ಟ ಲಕ್ನೋ

    ಮುಂಬೈ: ಕೊನೆಯ ಎಸೆತದಲ್ಲಿ ಕೆಕೆಆರ್ ಗೆಲುವಿಗೆ 3 ರನ್ ಬೇಕಾಗಿದ್ದ ವೇಳೆ ಲಕ್ನೋ ಗೆಲುವಿಗಾಗಿ ಮಾರ್ಕಸ್ ಸ್ಟೋಯಿನಿಸ್ ಎಸೆದ ಕೊನೆಯ ಎಸೆತದಲ್ಲಿ ಉಮೇಶ್ ಯಾದವ್ ಬೌಲ್ಡ್ ಆಗುವ ಮೂಲಕ ಸ್ಟನಿಂಗ್ ವಿನ್ನಿಂಗ್ ಮೂಮೆಂಟ್ ಲಕ್ನೋ ಪಾಲಾಯಿತು. ಈ ಮೂಲಕ ಲಕ್ನೋ ಪ್ಲೇ ಆಫ್‍ಗೆ ಎರಡನೇ ತಂಡವಾಗಿ ಎಂಟ್ರಿಕೊಟ್ಟಿದೆ.

    ಗೆದ್ದಿದ್ದು ಹೇಗೆ?
    19 ಓವರ್‌ನಲ್ಲಿ ಕೋಲ್ಕತ್ತಾಗೆ 17 ರನ್ ಹರಿದುಬಂತು. ಕೊನೆಯ 6 ಎಸೆತದಲ್ಲಿ ಕೆಕೆಆರ್‌ ಗೆಲುವಿಗೆ 21 ರನ್ ಬೇಕಾಗಿತ್ತು. ಸ್ಟೋಯಿನಿಸ್ ಎಸೆದ ಮೊದಲ ಎಸೆತವನ್ನೇ ರಿಂಕು ಸಿಂಗ್ ಬೌಂಡರಿಗಟ್ಟಿದರು, ಆ ಬಳಿಕ ಸತತ ಎರಡು ಎಸೆತಗಳನ್ನು ಸಿಕ್ಸ್ ಬಾರಿಸಿದರು. 4 ನೇ ಎಸೆತದಲ್ಲಿ 2 ರನ್ ಬಂತು. 5ನೇ ಎಸೆತದಲ್ಲಿ ರಿಂಕು ಸಿಂಗ್ ಔಟ್ ಆದರು. ಕೊನೆಯ ಎಸೆತದಲ್ಲಿ ಕೆಕೆಆರ್ ಗೆಲುವಿಗೆ 3 ರನ್ ಬೇಕಾಗಿತ್ತು. ಉಮೇಶ್ ಯಾದವ್ ಕ್ರೀಸ್‍ನಲ್ಲಿದ್ದರು. ಆದರೆ ಸ್ಟೋಯಿನಿಸ್ ಎಸೆದ ಯಾರ್ಕರ್ ಎಸೆತವನ್ನು ಜಡ್ಜ್‌ ಮಾಡಲು ಎಡವಿದ ಯಾದವ್‌ ಕ್ಲೀನ್ ಬೌಲ್ಡ್ ಆಗುವ ಮೂಲಕ ಕೆಕೆಆರ್ ಸೋತರೆ, ಲಕ್ನೋ 2 ರನ್‍ಗಳ ರೋಚಕ ಜಯ ಸಾಧಿಸಿತು.

    ಲಕ್ನೋ ನೀಡಿದ 211 ರನ್‍ಗಳ ಬೃಹತ್ ಮೊತ್ತವನ್ನು ಚೇಸ್ ಮಾಡಿದ ಕೆಕೆಆರ್ ಆರಂಭದಲ್ಲಿ ನಿಧಾನವಾಗಿ ಕಂಡರು, ಕೊನೆಯಲ್ಲಿ ರೋಚಕವಾಗಿತ್ತು. ಕೋಲ್ಕತ್ತಾ ಪರ ನಿತೀಶ್ ರಾಣಾ 42 ರನ್ (22 ಎಸೆತ, 9 ಬೌಂಡರಿ), ಶ್ರೇಯಸ್ ಅಯ್ಯರ್ 50 ರನ್ (29 ಎಸೆತ, 4 ಬೌಂಡರಿ, 3 ಸಿಕ್ಸ್) ಮತ್ತು ಬಿಲ್ಲಿಂಗ್ಸ್ 36 ರನ್ (24 ಎಸೆತ, 2 ಬೌಂಡರಿ, 3 ಸಿಕ್ಸ್) ಬಾರಿಸಿ ಔಟ್ ಆದರು. ಆ ಬಳಿಕ ರಿಂಕು ಸಿಂಗ್ 40 ರನ್ (15 ಎಸೆತ, 2 ಬೌಂಡರಿ, 4 ಸಿಕ್ಸ್) ಚಚ್ಚಿ ಹೋರಾಡಿ ಕೊನೆಯಲ್ಲಿ ವಿಕೆಟ್ ಕೈ ಚೆಲ್ಲಿ ಕೆಕೆಆರ್ ಸೋಲುವಂತಾದರು.

    ಈ ಮೊದಲು ಟಾಸ್‍ಗೆದ್ದ ಲಕ್ನೋ ನಾಯಕ ಕೆಎಲ್ ರಾಹುಲ್ ಬ್ಯಾಟಿಂಗ್ ಮಾಡುವ ನಿರ್ಧಾರ ತೆಗೆದುಕೊಂಡರು. ರಾಹುಲ್ ನಿರ್ಧಾರಕ್ಕೆ ಆರಂಭದಿಂದಲೇ ಬೆಂಬಲವಾಗಿ ಕ್ವಿಂಟನ್ ಡಿ ಕಾಕ್ ನಿಂತರು.

    ರಾಹುಲ್, ಡಿಕಾಕ್ ದಾಖಲೆಯ ಆಟ
    ಆರಂಭದಲ್ಲಿ ನಿಧಾನವಾಗಿ ಇನ್ನಿಂಗ್ಸ್ ಕಟ್ಟಿದ ಈ ಜೋಡಿ ಕೆಲ ಓವರ್‌ಗಳ ಆಟದ ಬಳಿಕ ಇಬ್ಬರೂ ಕೂಡ ಕೆಕೆಆರ್ ಬೌಲರ್‌ಗಳ ಮೇಲೆ ಸವಾರಿ ಆರಂಭಿಸಿದರು. ಡಿಕಾಕ್ ಅಂತೂ ಬೌಂಡರಿ, ಸಿಕ್ಸ್ ಸಿಡಿಸಿ ಕೆಕೆಆರ್ ಬೌಲರ್‌ಗಳ ಬೆವರಿಳಿಸಿದರು.

    ಕೋಲ್ಕತ್ತಾದ 6 ಮಂದಿ ಬೌಲರ್‌ಗಳು ದಾಳಿಗಿಳಿದರೂ ರನ್ ವೇಗಕ್ಕೆ ಬ್ರೇಕ್ ಹಾಕುವಲ್ಲಿ ಸಾಧ್ಯವಾಗಲಿಲ್ಲ. ಮೊದಲ ಎಸೆತದಿಂದ ಕೊನೆಯ ಎಸೆತದ ವರೆಗೆ ಕೆಕೆಆರ್ ತಂಡವನ್ನು ಕಾಡಿದ ಈ ಜೋಡಿ ಅಜೇಯ 210 ರನ್ (120 ಎಸೆತ) ಗಳಿಂದ ಮೊದಲನೇ ವಿಕೆಟ್‍ಗೆ ದಾಖಲೆಯ ಜೊತೆಯಾಟವಾಡಿ ಮಿಂಚಿತು.

    ಡಿಕಾಕ್ ಅಜೇಯ 140 ರನ್ (70 ಎಸೆತ, 10 ಬೌಂಡರಿ, 10 ಸಿಕ್ಸ್) ಮತ್ತು ರಾಹುಲ್ 68 ರನ್ (51 ಎಸೆತ, 3 ಬೌಂಡರಿ, 4 ಸಿಕ್ಸ್) ಚಚ್ಚಿ ಬಿಸಾಕಿದರು. ಈ ಮೂಲಕ ಲಕ್ನೋ ವಿಕೆಟ್ ನಷ್ಟವಿಲ್ಲದೆ 20 ಓವರ್‌ಗಳಲ್ಲಿ 210 ರನ್‍ಗಳ ಬೃಹತ್ ಮೊತ್ತ ಪೇರಿಸಿತು. ಇತ್ತ ಕೆಕೆಆರ್ ಬೌಲರ್‌ಗಳ ಪಾಡಂತೂ ಹೇಳತೀರದಾಯಿತು. ಒಂದು ವಿಕೆಟ್ ಪಡೆಯಲಾಗದೆ, ಭರ್ಜರಿ ರನ್ ನೀಡಿ ದುಬಾರಿ ಎನಿಸಿಕೊಂಡರು.

    ರನ್ ಏರಿದ್ದು ಹೇಗೆ?
    44 ಎಸೆತ 50 ರನ್
    77 ಎಸೆತ 100 ರನ್
    104 ಎಸೆತ 150 ರನ್
    200 ಎಸೆತ 118 ರನ್
    210 ಎಸೆತ 120 ರನ್