Tag: PCB

  • ಡ್ರೆಸ್ಸಿಂಗ್‌ ರೂಮಿನಲ್ಲಿ ಇಸ್ಲಾಂ ಪ್ರಚಾರ ಮಾಡಿದ್ದಕ್ಕೆ ಕ್ಯಾಪ್ಟನ್ಸಿಯಿಂದ ರಿಜ್ವಾನ್‌ ಔಟ್‌!

    ಡ್ರೆಸ್ಸಿಂಗ್‌ ರೂಮಿನಲ್ಲಿ ಇಸ್ಲಾಂ ಪ್ರಚಾರ ಮಾಡಿದ್ದಕ್ಕೆ ಕ್ಯಾಪ್ಟನ್ಸಿಯಿಂದ ರಿಜ್ವಾನ್‌ ಔಟ್‌!

    – ಪಿಸಿಬಿ ವಿರುದ್ಧ ಮಾಜಿ ಕ್ರಿಕೆಟಿಗ ರಶೀದ್‌ ಲತೀಫ್‌ ಕಿಡಿ

    ಇಸ್ಲಾಮಾಬಾದ್‌: ಡ್ರೆಸ್ಸಿಂಗ್‌ ರೂಮಿನಲ್ಲಿ ಇಸ್ಲಾಂ ಧರ್ಮವನ್ನು ಪ್ರಚಾರ ಮಾಡಿದ್ದಕ್ಕೆ ಮೊಹಮ್ಮದ್‌ ರಿಜ್ವಾನ್ (Mohammad Rizwan) ಅವರನ್ನು ನಾಯಕ ಪಟ್ಟದಿಂದ ಇಳಿಸಲಾಗಿದೆ ಎಂದು ಪಾಕಿಸ್ತಾನ (Pakistan) ತಂಡದ ಮಾಜಿ ಆಟಗಾರ ರಶೀದ್‌ ಲತೀಫ್‌ (Rashid Latif) ಹೇಳಿಕೆ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ.

    ರಿಜ್ವಾನ್ ಅವರ ಜಾಗಕ್ಕೆ ಶಾಹೀನ್ ಶಾ ಅಫ್ರಿದಿಯನ್ನು ನೇಮಿಸಿದ್ದಕ್ಕೆ ಪ್ರತಿಕ್ರಿಯಿಸಿದ ಅವರು, ಮೊಹಮ್ಮದ್ ರಿಜ್ವಾನ್ ಪ್ಯಾಲೆಸ್ಟೈನ್ ಪರವಾಗಿ ಬಹಿರಂಗವಾಗಿ ಮಾತನಾಡಿದ್ದರು. ಈ ಕಾರಣಕ್ಕೆ ಅವರನ್ನು ನಾಯಕ ಸ್ಥಾನದಿಂದ ತೆಗೆಯಲಾಗಿದೆ ಎಂದು ಆರೋಪಿಸಿದರು. ಇದನ್ನೂ ಓದಿ:  ರಿಜ್ವಾನ್‌ಗೆ ಸ್ಲೆಡ್ಜಿಂಗ್ – ನಮಾಜ್‌, ಜೈ ಶ್ರೀರಾಮ್‌ ಫುಲ್‌ ಟ್ರೆಂಡ್!‌

    ಕೋಚ್‌ ಮೈಕ್ ಹೆಸ್ಸನ್ ಅವರು ರಿಜ್ವಾನ್ ಅವರ ಡ್ರೆಸ್ಸಿಂಗ್‌ ರೂಮ್‌ ಸಂಸ್ಕೃತಿಯನ್ನು ಇಷ್ಟಪಡುತ್ತಿಲ್ಲ. ಇಸ್ಲಾಮಿಕ್ ದೇಶದಲ್ಲಿ ಇಸ್ಲಾಮಿಕ್ ಅಲ್ಲದ ನಾಯಕ ಬರಬೇಕು ಎಂಬ ಮನಸ್ಥಿತಿಯನ್ನು ಪಿಸಿಬಿ ಹೊಂದಿದೆ. ಪ್ಯಾಲೆಸ್ಟೈನ್ ಧ್ವಜವನ್ನು ಬಹಿರಂಗವಾಗಿ ಪ್ರದರ್ಶನ ಮಾಡಿದ್ದಕ್ಕೆ ಅವರನ್ನು ತೆಗೆಯುವುದು ಎಷ್ಟು ಸರಿ ಎಂದು ಪ್ರಶ್ನಿಸಿದ್ದಾರೆ.

    ಚಾಂಪಿಯನ್ಸ್‌ ಟ್ರೋಫಿಯಲ್ಲಿ ಪಾಕ್‌ ಕಳಪೆ ಪ್ರದರ್ಶನ ನೀಡಿದ್ದಕ್ಕೆ ರಿಜ್ವಾನ್ ಅವರನ್ನು ಏಕದಿನ ತಂಡದ ನಾಯಕ ಸ್ಥಾನದಿಂದ ಇಳಿಸಿ ಶಾಹೀನ್ ಶಾ ಅಫ್ರಿದಿ ಅವರನ್ನು ಆಯ್ಕೆ ಮಾಡಲಾಗಿದೆ.  ಇದನ್ನೂ ಓದಿ:  ಮೈದಾನದಲ್ಲಿ ನಮಾಜ್‌ – ರಿಜ್ವಾನ್‌ ವಿರುದ್ಧ ದೂರು ದಾಖಲು

    ಮೊಹಮ್ಮದ್‌ ರಿಜ್ವಾನ್ ಇಸ್ಲಾಂ ಮೌಲ್ಯಗಳ ಮೇಲೆ ಹೆಚ್ಚು ಗಮನ ಹರಿಸುತ್ತಾರೆ ಎಂದು ಪಾಕಿಸ್ತಾನ ಕ್ರಿಕೆಟಿಗ ಇಮಾಮ್ ಉಲ್ ಹಕ್ ಈ ಹಿಂದೆ ಹೇಳಿದ್ದರು. ಯಾವುದೇ ಹೋಟೆಲ್‌ಗೆ ಹೋದಾಗ ರಿಜ್ವಾನ್ ಮೊದಲು ನಮಾಜ್‌ ಕೊಠಡಿಯನ್ನು ಹುಡುಕುತ್ತಾರೆ. ನಮಾಜ್‌ ಮಾಡಲು ಕೋಣೆಯಲ್ಲಿ ಬಿಳಿ ಬಟ್ಟೆಯನ್ನು ಹಾಸುತ್ತಾರೆ. ಮುಸ್ಲಿಮೇತರರು ಕೋಣೆ ಪ್ರವೇಶಕ್ಕೆ ನಿರ್ಬಂಧ ಹೇರುತ್ತಾರೆ. ನಮಾಜ್ ಸಮಯಕ್ಕಾಗಿ ವಾಟ್ಸಪ್ ಗ್ರೂಪ್‌ ರಚನೆ ಮಾಡುತ್ತಾರೆ ಎಂದು ತಿಳಿಸಿದ್ದರು.

  • ಭಾರತ ನನ್ನ ಮಾತೃಭೂಮಿ, ಪಾಕಿಸ್ತಾನ ನನ್ನ ಜನ್ಮಭೂಮಿ – ಪಾಕ್‌ ಮಾಜಿ ಕ್ರಿಕೆಟಿಗ ಡ್ಯಾನಿಶ್ ಕನೇರಿಯಾ

    ಭಾರತ ನನ್ನ ಮಾತೃಭೂಮಿ, ಪಾಕಿಸ್ತಾನ ನನ್ನ ಜನ್ಮಭೂಮಿ – ಪಾಕ್‌ ಮಾಜಿ ಕ್ರಿಕೆಟಿಗ ಡ್ಯಾನಿಶ್ ಕನೇರಿಯಾ

    ಇಸ್ಲಮಾಬಾದ್‌: ಭಾರತ (India) ನನ್ನ ಮಾತೃಭೂಮಿ, ಪಾಕ್‌ ನನ್ನ ಜನ್ಮಭೂಮಿ, ಭಾರತ ನನಗೆ ದೇಗುಲವಿದ್ದಂತೆ ಎಂದು ಪಾಕ್ ಮಾಜಿ ಕ್ರಿಕೆಟಿಗ ಡ್ಯಾನಿಶ್ ಕನೇರಿಯಾ (Danish Kaneria) ಹೇಳಿಕೊಂಡಿದ್ದಾರೆ.

    ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಅವರು, ನೀವು ಪಾಕಿಸ್ತಾನದ ಬಗ್ಗೆ ಏಕೆ ಮಾತನಾಡುವುದಿಲ್ಲ? ಭಾರತದ ಆಂತರಿಕ ವಿಷಯಗಳ ಬಗ್ಗೆ ಏಕೆ ಪ್ರತಿಕ್ರಿಯಿಸುತ್ತೀರಿ ಎಂದು ಹಲವರು ನನ್ನನ್ನು ಪ್ರಶ್ನಿಸುತ್ತಾರೆ. ಕೆಲವರು ಭಾರತದ ಪೌರತ್ವಕ್ಕಾಗಿ ನಾನು ಹೀಗೆ ನಡೆದುಕೊಳ್ಳುತ್ತೇನೆ ಎಂದು ಆರೋಪಿಸುತ್ತಿದ್ದಾರೆ. ಇದನ್ನೂ ಓದಿ: ವಿಂಡೀಸ್‌ ವಿರುದ್ಧ 140 ರನ್‌ಗಳ ಭರ್ಜರಿ ಗೆಲುವು – WTC ಅಂಕಪಟ್ಟಿಯಲ್ಲಿ 3ನೇ ಸ್ಥಾನ ಕಾಯ್ದುಕೊಂಡ ಭಾರತ

    ನನಗೆ ಭಾರತದ ಪೌರತ್ವ ಪಡೆಯುವ ಯಾವ ಆಲೋಚನೆಯೂ ಇಲ್ಲ. ಮುಂದೆ ನನ್ನಂತವರಿಗೆ ಅಂತಹ ಯೋಚನೆ ಬಂದರೆ ಸಿಎಎ ಈಗಾಗಲೇ ಜಾರಿಯಲ್ಲಿದೆ. ಪಾಕಿಸ್ತಾನ (Pakistan) ನನ್ನ ಜನ್ಮಭೂಮಿಯಾಗಿರಬಹುದು ಆದರೆ ಭಾರತ ನನ್ನ ಪೂರ್ವಜರ ಭೂಮಿ, ನನ್ನ ಮಾತೃಭೂಮಿ. ನನ್ನ ಪಾಲಿಗೆ ಭಾರತ ಒಂದು ದೇವಾಲಯದಂತೆ ಎಂದು ಗೌರವಯುತ ಸಾಲುಗಳಲ್ಲಿ ಹಿಂದೂಸ್ಥಾನವನ್ನು ಕೊಂಡಾಡಿದ್ದಾರೆ.

    ನನ್ನ ಮಾತುಗಳು ಭಾರತದ ಪೌರತ್ವಕ್ಕಾಗಿ ಎಂಬ ಆರೋಪ ಸಂಪೂರ್ಣ ತಪ್ಪು. ನಾನು ಧರ್ಮದ ಪರವಾಗಿ ನಿಲ್ಲುವುದನ್ನು ಮತ್ತು ನಮ್ಮ ಸಮಾಜವನ್ನು ವಿಭಜಿಸಲು ಪ್ರಯತ್ನಿಸುತ್ತಿರುವ ರಾಷ್ಟ್ರವಿರೋಧಿಗಳು, ಹುಸಿ ಜಾತ್ಯತೀತರ ವಿರುದ್ಧದ ಸಮರವನ್ನು ಮುಂದುವರಿಸುತ್ತೇನೆ.

    ಪಾಕಿಸ್ತಾನದ ಜನರಿಂದಲೂ ನಾನು ಪ್ರೀತಿಯನ್ನು ಪಡೆದಿದ್ದೇನೆ. ಆ ಪ್ರೀತಿಯ ಜೊತೆಗೆ, ಬಲವಂತದ ಮತಾಂತರದ ಪ್ರಯತ್ನ, ಪಾಕ್‌ನ ಅಧಿಕಾರಿಗಳು ಮತ್ತು ಪಿಸಿಬಿಯಿಂದ (PCB) ತಾರತಮ್ಯವನ್ನು ಸಹ ಎದುರಿಸಿದ್ದೇನೆ ಎಂದು ತಾವು ಅನುಭವಿಸಿದ ಸಂಕಷ್ಟವನ್ನು ತೋಡಿಕೊಂಡಿದ್ದಾರೆ.

    ಕೊನೆಯಲ್ಲಿ ʻಜೈ ಶ್ರೀರಾಮ್‌ʼ ಘೋಷದೊಂದಿದೆ, ನಾನು ನನ್ನ ಕುಟುಂಬದೊಂದಿಗೆ ಸುರಕ್ಷಿತವಾಗಿ, ಸಂತೋಷವಾಗಿದ್ದೇನೆ. ನನ್ನ ಭವಿಷ್ಯ ಭಗವಾನ್ ರಾಮನ ಕೈಯಲ್ಲಿದೆ ಎಂದು ಅಭಿಮಾನಿಗಳಿಗೆ ಸಂದೇಶ ರವಾನಿಸಿದ್ದಾರೆ. ಇದನ್ನೂ ಓದಿ: ಆಸೀಸ್‌ ವಿರುದ್ಧ ಸರಣಿಗೆ ಭಾರತ ತಂಡ ಪ್ರಕಟ – ಏಕದಿನ ಕ್ರಿಕೆಟ್‌ಗೆ ಗಿಲ್‌ ಕ್ಯಾಪ್ಟನ್‌; ರೋಹಿತ್‌, ಕೊಹ್ಲಿ ನಿವೃತ್ತಿ ಬಯಸಿದ್ಯಾ ಬಿಸಿಸಿಐ?

  • ಮತ್ತೆ ಹೊಸ ನಾಟಕ- ಕಪ್‌ ನೀಡಲು ಹೊಸ ಷರತ್ತು ಮುಂದಿಟ್ಟ ನಖ್ವಿ

    ಮತ್ತೆ ಹೊಸ ನಾಟಕ- ಕಪ್‌ ನೀಡಲು ಹೊಸ ಷರತ್ತು ಮುಂದಿಟ್ಟ ನಖ್ವಿ

    ದುಬೈ: ಏಷ್ಯಾಕಪ್‌ ಫೈನಲ್‌ ಮುಗಿದ ಬಳಿಕವೂ ಹೈಡ್ರಾಮಾ ನಿಲ್ಲುವ ಲಕ್ಷಣ ಕಾಣುತ್ತಿಲ್ಲ. ಟ್ರೋಫಿ ಎತ್ತಿಕೊಂಡು ಹೋಗಿ ಟ್ರೋಲ್‌ ಆದ ಬೆನ್ನಲ್ಲೇ ಏಷ್ಯನ್ ಕ್ರಿಕೆಟ್ ಕೌನ್ಸಿಲ್ (ACC) ಮುಖ್ಯಸ್ಥ ಮತ್ತು ಪಾಕಿಸ್ತಾನ ಕ್ರಿಕೆಟ್ ಮಂಡಳಿ (PCB) ಅಧ್ಯಕ್ಷ ಮೊಹ್ಸಿನ್ ನಖ್ವಿ (Mohsin Naqvi) ಹೊಸ ನಾಟಕ ಆಡಲು ಆರಂಭಿಸಿದ್ದಾರೆ.

    ನಾನು ಟ್ರೋಫಿಯನ್ನು ಟೀಂ ಇಂಡಿಯಾಗೆ ನೀಡುತ್ತೇನೆ. ಆದರೆ ‘ಔಪಚಾರಿಕ ಸಮಾರಂಭ’ವನ್ನು ಆಯೋಜಿಸಬೇಕೆಂಬ ಬೇಡಿಕೆಯನ್ನು ಮುಂದಿಟ್ಟಿದ್ದಾರೆ ಎಂದು ಮಾಧ್ಯಮವೊಂದು ವರದಿ ಮಾಡಿದೆ. ಇದನ್ನೂ ಓದಿ: 1 ಗಂಟೆ ಹೈಡ್ರಾಮಾ, ಟ್ರೋಫಿ ಜೊತೆ ಓಡಿದ ನಖ್ವಿ – ಮಧ್ಯರಾತ್ರಿ ಏನಾಯ್ತ? ಇಲ್ಲಿದೆ ಪೂರ್ಣ ವಿವರ

    ತನ್ನ ಕೈಯಿಂದ ಟ್ರೋಫಿ ಪಡೆಯಲು ಭಾರತ ನಿರಾಕರಿಸಿದ ಬೆನ್ನಲ್ಲೇ ನಖ್ವಿ ಎಸಿಸಿ ಈ ಹೊಸ ಷರತ್ತನ್ನು ನಖ್ವಿ ಇರಿಸಿದ್ದಾರೆ. ಆದರೆ ಈ ರೀತಿಯ ಕಾರ್ಯಕ್ರಮ ನಡೆಯದ ಟ್ರೋಫಿ ಹೇಗೆ ಭಾರತಕ್ಕೆ ಹೇಗೆ ಹಸ್ತಾಂತರವಾಗುತ್ತದೆ ಎನ್ನುವುದೇ ಸದ್ಯ ಕುತೂಹಲ. ಇದನ್ನೂಓದಿ: Asia Cup 2025 | ಚಾಂಪಿಯನ್‌ ಭಾರತ ತಂಡಕ್ಕೆ ಬಿಸಿಸಿಐನಿಂದ 21 ಕೋಟಿ ಗಿಫ್ಟ್‌

    ನಖ್ವಿ ನಡೆ ವಿರುದ್ಧ ಐಸಿಸಿಗೆ ದೂರು ನೀಡಲು ಬಿಸಿಸಿಐ ನಿರ್ಧರಿಸಿದೆ. ಟೀಂ ಇಂಡಿಯಾದ ನಿಲುವನ್ನು ಬಿಸಿಸಿಐ ಸಮರ್ಥಿಸಿಕೊಂಡಿದೆ. ನಮ್ಮ ವಿರುದ್ಧ ಯುದ್ಧ ನಡೆಸುತ್ತಿರುವ ವ್ಯಕ್ತಿಯಿಂದ ಭಾರತ ಟ್ರೋಫಿ ಸ್ವೀಕರಿಸಲು ಸಾಧ್ಯವಿಲ್ಲ. ಟ್ರೋಫಿ ಮತ್ತು ಪದಕಗಳನ್ನು ಆದಷ್ಟು ಬೇಗ ಭಾರತಕ್ಕೆ ಹಿಂದಿರುಗಿಸುತ್ತಾರೆ ಎಂದು ನಾವು ಭಾವಿಸುತ್ತೇವೆ ಅಂದಿದೆ. ಹೀಗಾಗಿ ನವೆಂಬರ್‌ನಲ್ಲಿ ನಡೆಯಲಿರುವ ಐಸಿಸಿ ಸಭೆಯಲ್ಲಿ ಪ್ರತಿಭಟಿಸಲು ಬಿಸಿಸಿಐ ನಿರ್ಧರಿಸಿದೆ.

  • ಭಾರತ-ಪಾಕ್ ಪಂದ್ಯದ ವೇಳೆ ದುವರ್ತನೆ – ಫರ್ಹಾನ್, ರೌಫ್‌ ವಿರುದ್ಧ ಐಸಿಸಿಗೆ ಬಿಸಿಸಿಐ ದೂರು

    ಭಾರತ-ಪಾಕ್ ಪಂದ್ಯದ ವೇಳೆ ದುವರ್ತನೆ – ಫರ್ಹಾನ್, ರೌಫ್‌ ವಿರುದ್ಧ ಐಸಿಸಿಗೆ ಬಿಸಿಸಿಐ ದೂರು

    – ಪಹಲ್ಗಾಮ್‌ ಸಂತ್ರಸ್ತರಿಗೆ ಗೆಲುವು ಅರ್ಪಿಸಿದ್ದಕ್ಕೆ ಸೂರ್ಯ ವಿರುದ್ಧ ಪಿಸಿಬಿ ಕಂಪ್ಲೆಂಟ್‌

    ದುಬೈ: ಆಪರೇಷನ್‌ ಸಿಂಧೂರ ಕಾರ್ಯಾಚರಣೆ ಬಳಿಕ ಭಾರತ-ಪಾಕ್‌ (Ind vs Pak) ಮುಖಾಮುಖಿಯಾಗಿರುವ ಮೊದಲ ಟೂರ್ನಿ ವಿವಾದದ ಕಣವಾಗಿ ಮಾರ್ಪಟ್ಟಿದೆ. ಕಳೆದ ಭಾನುವಾರ ಭಾರತ ಮತ್ತು ಪಾಕ್‌ ನಡುವಿನ ಮೊದಲ ಸೂಪರ್‌ ಫೋರ್‌ ಪಂದ್ಯ ಕೂಡ ಸ್ಲೆಡ್ಜಿಂಗ್‌ಗೆ (ಕೆಣಕುವುದು) ವೇದಿಕೆಯಾಗಿತ್ತು.

    ಸೂಪರ್‌-4 ಪಂದ್ಯದ ವೇಳೆ ದುವರ್ತನೆ ತೋರಿದ ಪಾಕಿಸ್ತಾನಿ ಕ್ರಿಕೆಟಿಗರಾದ ಹ್ಯಾರಿಸ್ ರೌಫ್ (Haris Rauf) ಮತ್ತು ಸಾಹಿಬ್‌ಝಾದಾ ಫರ್ಹಾನ್ (Sahibzada Farhan) ವಿರುದ್ಧ ಐಸಿಸಿಗೆ ಬಿಸಿಸಿಐ (BCCI) ದೂರು ನೀಡಿದೆ. ಐಸಿಸಿಗೆ ಇ-ಮೇಲ್ ಮೂಲಕ ದೂರು ನೀಡಿದೆ. ಸಾಹಿಬ್‌ಝಾದಾ ಫರ್ಹಾನ್ ಮತ್ತು ರೌಫ್ ಈ ಆರೋಪಗಳನ್ನು ಲಿಖಿತವಾಗಿ ನಿರಾಕರಿಸಿದ್ರೆ ಐಸಿಸಿ ವಿಚಾರಣೆ ನಡೆಸುವ ನಿರೀಕ್ಷೆಯಿದೆ. ಅವರು ಐಸಿಸಿ ಎಲೈಟ್ ಪ್ಯಾನಲ್ ರೆಫರಿ ರಿಚಿ ರಿಚರ್ಡ್ಸನ್ ಅವರ ಮುಂದೆ ವಿಚಾರಣೆಗೆ ಹಾಜರಾಗಬೇಕಾಗಬಹುದು ಎಂದು ವಿಶ್ವಾಸಾರ್ಹ ಮೂಲಗಳಿಂದ ತಿಳಿದುಬಂದಿದೆ.

    Abhishek Sharma 3

    ವಿವಾದ ಆಗಿದ್ದೇನು?
    ಸೂಪರ್‌-4 ಪಂದ್ಯದ ವೇಳೆ ಸಾಹಿಬ್‌ಝಾದಾ ಫರ್ಹಾನ್ ಫಿಫ್ಟಿ ಬಾರಿಸಿದ ಬಳಿಕ ಗನ್‌ ಸೆಲಬ್ರೇಷನ್‌ ಮಾಡಿದ್ದರು. ರೈಫಲ್‌ ರೀತಿ ಶೋ ಮಾಡಿ ಮೂರು ಸುತ್ತು ಗುಂಡು ಹಾರಿಸಿದ ರೀತಿ ಆಕ್ಷನ್‌ ಮಾಡಿದ್ದರು. ಇನ್ನೂ ಫೀಲ್ಡಿಂಗ್‌ ವೇಳೆ ಹ್ಯಾರಿಸ್‌ ರೌಫ್‌ಗೆ ಕೊಹ್ಲಿ ಅಭಿಮಾನಿಗಳು ಕಾಡಿಸಿದರು. 2022ರ ಟಿ20 ವಿಶ್ವಕಪ್‌ ಪಂದ್ಯದಲ್ಲಿ ಹ್ಯಾರಿಸ್‌ ರೌಫ್‌ಗೆ ಬಾರಿಸಿದ್ದ ಸಿಕ್ಸ್‌ ಅನ್ನು ಉಲ್ಲೇಖಿಸುತ್ತಾ ಕೊಹ್ಲಿ ಕ್ಲೊಹ್ಲಿ ಅಂತ ಕೂಗುತ್ತಿದ್ದರು. ಈ ವೇಳೆ ರೌಫ್‌ ವಿಮಾನ ಕ್ರ್ಯಾಶ್‌ ರೀತಿ ಸನ್ನೆ ಮಾಡಿ ಅಣುಕಿಸಿದ್ದರು. ಇದು ವ್ಯಾಪಕ ಟೀಕೆಗೆ ಗುರಿಯಾಗಿದೆ. ಹೀಗಾಗಿ ರೌಫ್ ಮತ್ತು ಫರ್ಹಾನ್‌ ಇಬ್ಬರೂ ಐಸಿಸಿ ವಿಚಾರಣೆಯಲ್ಲಿ ತಮ್ಮ ಸನ್ನೆಗಳನ್ನು ವಿವರಿಸಬೇಕಾಗುತ್ತದೆ. ಒಂದು ವೇಳೆ ಅವರು ಮನವೊಲಿಸಲು ಸಾಧ್ಯವಾಗದಿದ್ದರೇ ನೀತಿ ಸಂಹಿತೆಯ ಉಲ್ಲಂಘನೆ ಪ್ರಕಾರ ನಿರ್ಬಂಧ ಎದುರಿಸಬೇಕಾಗುತ್ತೆ ಎಂದು ತಿಳಿದುಬಂದಿದೆ.

    ಸೂರ್ಯ ವಿರುದ್ಧ ದೂರು
    ಇನ್ನೂ ಲೀಗ್‌ ಸುತ್ತಿನಲ್ಲಿ ಪಾಕ್‌ ವಿರುದ್ಧದ ಪಂದ್ಯದಲ್ಲಿ ಗೆದ್ದ ಬಳಿಕ ಟೀಂ ಇಂಡಿಯಾ ನಾಯಕ ಸೂರ್ಯಕುಮಾರ್‌ ಯಾದವ್‌ (Suryakumar Yadav), ಪಂದ್ಯದ ಗೆಲುವುನ್ನು ಪಹಲ್ಗಾಮ್‌ ದಾಳಿಯ ಸಂತ್ರಸ್ತರು ಹಾಗೂ ಭಾರತೀಯ ಸಶಸ್ತ್ರಪಡೆಗಳಿಗೆ ಅರ್ಪಿಸಿದ್ದರು. ಇದಕ್ಕಾಗಿ ಸೂರ್ಯಕುಮಾರ್‌ ಯಾದವ್‌ ವಿರುದ್ಧ ಪಾಕಿಸ್ತಾನ ಕ್ರಿಕೆಟ್‌ ಮಂಡಳಿ (PCB) ಐಸಿಸಿಗೆ ದೂರು ನೀಡಿದೆ.

    ಸೂರ್ಯಕುಮಾರ್‌ ಹೇಳಿಕೆಗಳು ರಾಜಕೀಯ ಪ್ರೇರಿತವಾಗಿದ್ದು, ಕ್ರೀಡಾ ಪ್ರತಿಷ್ಠೆಗೆ ಹಾನಿಯಾಗಿದೆ. ಹೀಗಾಗಿ ಕ್ರಮಕ್ಕೆ ಆಗ್ರಹಿಸಿ ದೂರು ನೀಡಿದ್ದಾರೆ. ಸೂರ್ಯ ಈ ಆರೋಪಗಳನ್ನು ನಿರಾಕರಿಸಿದ್ರೆ, ಅಧಿಕೃತ ವಿಚಾರಣೆಗೆ ಐಸಿಸಿ ಮುಂದೆ ಹಾಜರಾಗಬೇಕಾಗುತ್ತೆ ಎಂದು ತಿಳಿದುಬಂದಿದೆ.

  • Asia Cup 2025 | ಮತ್ತೊಮ್ಮೆ ರೋಚಕ ಹಣಾಹಣಿ – ಸೂಪರ್‌ ಸಂಡೇ ಭಾರತ-ಪಾಕ್‌ ಮುಖಾಮುಖಿ

    Asia Cup 2025 | ಮತ್ತೊಮ್ಮೆ ರೋಚಕ ಹಣಾಹಣಿ – ಸೂಪರ್‌ ಸಂಡೇ ಭಾರತ-ಪಾಕ್‌ ಮುಖಾಮುಖಿ

    ದುಬೈ: 2025ರ ಟಿ20 ಏಷ್ಯಾಕಪ್‌ (T20 Asia Cup) ಟೂರ್ನಿಯಲ್ಲಿ ಹ್ಯಾಂಡ್‌ ಶೇಕ್‌ ವಿವಾದ ತಣ್ಣಗಾಗುವ ಮುನ್ನವೇ ಭಾರತ – ಪಾಕಿಸ್ತಾನ (Ind vs Pak) ತಂಡಗಳು ಮತ್ತೊಮ್ಮೆ ಮುಖಾಮುಖಿಯಾಗಲು ಸಜ್ಜಾಗಿವೆ.

    ಟೂರ್ನಿಯ ಲೀಗ್‌ ಸುತ್ತಿನಲ್ಲಿ ಅಗ್ರಸ್ಥಾನದಲ್ಲಿರುವ ಟೀಂ ಇಂಡಿಯಾ (Team India) ಹಾಗೂ 2ನೇ ಸ್ಥಾನದಲ್ಲಿರುವ ಪಾಕಿಸ್ತಾನ ತಂಡಗಳು ಭಾನುವಾರ (ಸೆ.21) ಮತ್ತೊಮ್ಮೆ ಮುಖಾಮುಖಿಯಾಗಲಿವೆ. ದುಬೈನ ಅಂತಾರಾಷ್ಟ್ರೀಯ ಕ್ರಿಕೆಟ್‌ ಮೈದಾನದಲ್ಲಿ ರಾತ್ರಿ 8 ಗಂಟೆಗೆ ಪಂದ್ಯ ನಡೆಯಲಿದೆ. ಇದನ್ನೂ ಓದಿ: ಕೆಲ ವಿಷಯಗಳು ಕ್ರೀಡಾ ಮನೋಭಾವಕ್ಕಿಂತಲೂ ದೊಡ್ಡದು – ಕೈಕುಲುಕದ್ದಕ್ಕೆ ಸೂರ್ಯ ಸ್ಪಷ್ಟನೆ

    ಈಗಾಗಲೇ ಲೀಗ್‌ ಸುತ್ತಿನಲ್ಲಿ ತನ್ನ ಮೂರು ಪಂದ್ಯಗಳನ್ನಾಡಿರುವ ಪಾಕ್‌ 2 ರಲ್ಲಿ ಗೆದ್ದು 4 ಅಂಕಗಳೊಂದಿಗೆ 2ನೇ ಸ್ಥಾನದಲ್ಲಿದ್ದರೆ, ಭಾರತ ಎರಡೂ ಪಂದ್ಯಗಳಲ್ಲಿ ಗೆದ್ದು ಅಗ್ರಸ್ಥಾನದಲ್ಲಿದೆ. ಸೆ.19ರಂದು ಒಮನ್‌ ವಿರುದ್ಧ ತನ್ನ ಕೊನೆಯ ಲೀಗ್‌ ಪಂದ್ಯವನ್ನಾಡಲಿದ್ದು, ಭಾನುವಾರ ಸೂಪರ್‌ ಫೋರ್‌ ಮೊದಲ ಪಂದ್ಯದಲ್ಲಿ ಪಾಕ್‌ ವಿರುದ್ಧ ಮುಖಾಮುಖಿಯಾಗಲಿದೆ.

    ಕಳೆದ ಭಾನುವಾರ ಪಾಕ್‌ ವಿರುದ್ಧ ನಡೆದ ಪಂದ್ಯದಲ್ಲಿ ಟೀಂ ಇಂಡಿಯಾ ಭರ್ಜರಿ ಗೆಲುವು ಸಾಧಿಸಿತ್ತು. ಆದ್ರೆ ಈ ಪಂದ್ಯದ ಟಾಸ್‌ ವೇಳೆ ಹಾಗೂ ಪಂದ್ಯದ ಗೆದ್ದ ಬಳಿಕ ಭಾರತೀಯ ಆಟಗಾರರು ಹ್ಯಾಂಡ್‌ ಶೇಕ್‌ ಮಾಡೋದನ್ನ ಬಿಟ್ಟಿದ್ದರು. ಸದ್ಯ ಹ್ಯಾಂಡ್‌ ಶೇಕ್‌ ವಿವಾದ ತೀವ್ರತೆ ಕಡಿಮೆಯಾಗುವ ಮುನ್ನವೇ ಭಾರತ-ಪಾಕ್‌ ಸೂಪರ್‌ ಫೋರ್‌ನಲ್ಲಿ ಮತ್ತೊಮ್ಮೆ ಮುಖಾಮುಖಿಯಾಗುತ್ತಿರುವುದು ಭಾರೀ ಥ್ರಿಲ್ಲಿಂಗ್‌ ಆಗಿಸಿದೆ. ಇದನ್ನೂ ಓದಿ: ಭಾರತ-ಪಾಕ್‌ ಕದನ ಯಾವಾಗಲೂ ಏಕೆ ರಣಕಣ? – ಆಕ್ರಮಣಕಾರಿ ಆಟಕ್ಕೆ ಟೀಂ ಇಂಡಿಯಾ ರೆಡಿ!

    suryakumar yadav shivam dube

    ಆಪರೇಷನ್‌ ಸಿಂಧೂರ ಬಳಿಕ ಮೊದಲ ಟೂರ್ನಿ
    ಕಳೆದ ಏಪ್ರಿಲ್‌ 22ರಂದು ನಡೆದ ಪಹಲ್ಗಾಮ್‌ ಭಯೋತ್ಪಾದಕ ದಾಳಿ ಹಾಗೂ ಆಪರೇಷನ್‌ ಸಿಂಧೂರ ಪ್ರತೀಕಾರದ ಬಳಿಕ ಭಾರತ ಪಾಕ್‌ ಮುಖಾಮುಖಿಯಾಗಿರುವ ಮೊದಲ ಟೂರ್ನಿ ಇದಾಗಿದೆ. ಲೀಗ್‌ ಸುತ್ತಿನಲ್ಲಿ ಮೊದಲಬಾರಿಗೆ ಮುಖಾಮುಖಿಯಾದಾಗ ಪಂದ್ಯ ರದ್ದುಗೊಳಿಸಬೇಕು, ಶತ್ರು ರಾಷ್ಟ್ರದ ವಿರುದ್ಧ ಭಾರತ ಆಡದಂತೆ ನಿಷೇಧಿಸಬೇಕು ಎಂಬ ಕೂಗು ಕೇಳಿಬಂದಿತ್ತು. ಸೋಷಿಯಲ್‌ ಮೀಡಿಯಾದಲ್ಲೂ ಬಾಯ್ಕಾಟ್‌ ಅಭಿಮಾನ ಸದ್ದು ಮಾಡಿತ್ತು. ಇದೆಲ್ಲದರ ಹೊರತಾಗಿಯೂ ಪಂದ್ಯವಾಡಿದ್ದ ಭಾರತ, ಮೈದಾನದಲ್ಲೇ ಪಾಕ್‌ ಆಟಗಾರರ ಮಾತ ಕಳೆದಿತ್ತು. ಸೆ.21ರ ಭಾನುವಾರ ಮತ್ತೊಮ್ಮೆ ಟೂರ್ನಿಯಲ್ಲಿ ಮುಖಾಮುಖಿಯಾಗಲಿದ್ದು, ತೀವ್ರತೆ ಹೇಗಿರಲಿದೆ ಎಂಬುದನ್ನು ಕಾದುನೋಡಬೇಕಿದೆ. ಇದನ್ನೂ ಓದಿ: India vs Pakistan: ಟಾಸ್‌ ಬಳಿಕ ಪಾಕ್‌ ನಾಯಕನಿಗೆ ಹ್ಯಾಂಡ್‌ಶೇಕ್‌ ಮಾಡದ ಸೂರ್ಯಕುಮಾರ್‌ ಯಾದವ್‌

    ಪಹಲ್ಗಾಮ್‌ ನರಮೇಧ-ಸಿಂಧೂರ ಪ್ರತೀಕಾರ
    ಕಾಶ್ಮೀರದ ಪಹಲ್ಗಾಮ್‌ನ ಬೈಸರನ್‌ ಕಣಿವೆ ಪ್ರದೇಶದಲ್ಲಿ ಕಾಲ ಕಳೆಯುತ್ತಿದ್ದ ಪ್ರವಾಸಿಗರ ಮೇಲೆ ಏ.22ರಂದು ಸೈನಿಕರ ಸೋಗಿನಲ್ಲಿ ಬಂದ ಉಗ್ರರು ಅಮಾಯಕರನ್ನ ಗುಂಡಿಟ್ಟು ಕೊಂದಿದ್ದರು. ಇದಕ್ಕೆ ಪ್ರತೀಕಾರ ತೀರಿಸಿಕೊಳ್ಳಬೇಕೆಂದೇ ಪಣ ತೊಟ್ಟಿದ್ದ ಭಾರತ ʻಆಪರೇಷನ್‌ ಸಿಂಧೂರʼ ಹೆಸರಿನಡಿ ಪಾಕ್‌ ಮತ್ತು ಪಾಕ್‌ ಆಕ್ರಮಿತ ಪ್ರದೇಶದಲ್ಲಿದ್ದ ಉಗ್ರರ 9 ಅಡಗುತಾಣಗಳನ್ನ ಧ್ವಂಸ ಮಾಡಿತು. ಆದ್ರೂ ಮತ್ತೆ ಕಿತಾಪತಿ ಮಾಡಿದ್ದ ಪಾಕ್‌ ಭಾರತದ 15 ನಗರಗಳ ಮೇಲೆ ದಾಳಿ ನಡೆಸಲು ಹೊಂಚುಹಾಕಿತ್ತು. ಇದನ್ನರಿತ ಭಾರತ, ಪಾಕ್‌ ದಾಳಿಯನ್ನ ವಿಫಲಗೊಳಿಸಿದ್ದಲ್ಲದೇ ಲಾಹೋರ್‌ನಲ್ಲಿನ ರೆಡಾರ್‌ ಕೇಂದ್ರವನ್ನೇ ಛಿದ್ರ ಛಿದ್ರ ಮಾಡಿತು. ಪಾಕ್‌ ಜೊತೆಗಿನ ಈ ಸಂಘರ್ಷ ಇಡೀ ದೇಶವೇ ಭಯೋತ್ಪಾದನೆ ವಿರುದ್ಧ ಒಗ್ಗೂಡುವಂತೆ ಮಾಡಿತು. ಈ ಬೆಳವಣಿಗೆಯ ನಂತರ ಶತ್ರು ರಾಷ್ಟ್ರಗಳೊಂದಿಗಿನ ಎಲ್ಲ ಚಟುವಟಿಕೆಗಳಿಗೆ ಬ್ರೇಕ್‌ ಹಾಕಲಾಯಿತು. ಆದ್ದರಿಂದಲೇ ಇನ್ನೆಂದಿಗೂ ಭಾರತ – ಪಾಕಿಸ್ತಾನ ನಡುವೆ ಪಂದ್ಯವನ್ನಾಡಬಾರದು ಎಂಬ ಒತ್ತಾಯ ಭಾರತೀಯರದ್ದಾಗಿದೆ.

  • Asia Cup 2025 | ಹೊಸ ನಾಯಕತ್ವದಲ್ಲಿ ಪಾಕ್‌ ತಂಡ ಪ್ರಕಟ – ರಿಜ್ವಾನ್‌, ಬಾಬರ್‌ ಹೊರದಬ್ಬಿದ ಪಿಸಿಬಿ

    Asia Cup 2025 | ಹೊಸ ನಾಯಕತ್ವದಲ್ಲಿ ಪಾಕ್‌ ತಂಡ ಪ್ರಕಟ – ರಿಜ್ವಾನ್‌, ಬಾಬರ್‌ ಹೊರದಬ್ಬಿದ ಪಿಸಿಬಿ

    ಇಸ್ಲಾಮಾಬಾದ್‌: ಬಹುನಿರೀಕ್ಷಿತ 2025ರ ಟಿ20 ಏಷ್ಯಾ ಕಪ್ (Asia Cup 2025 T20I) ಟೂರ್ನಿಗಾಗಿ ಪಾಕಿಸ್ತಾನ ಕ್ರಿಕೆಟ್‌ ಬೋರ್ಡ್‌ ಅಚ್ಚರಿ ತಂಡವನ್ನು ಪ್ರಕಟಿಸಿದೆ.

    ಪಾಕ್‌ ತಂಡದ ಸ್ಟಾರ್‌ ಐಕಾನ್‌ಗಳಾದ ಮೊಹಮ್ಮದ್‌ ರಿಜ್ವಾನ್‌ (Mohammad Rizwan) ಹಾಗೂ ಬಾಬರ್‌ ಆಜಂ (Babar Azam) ಮತ್ತು ಸ್ಟಾರ್‌ ವೇಗಿ ನಸೀಮ್‌ ಶಾ ಅವರನ್ನ ಹೊರದಬ್ಬಿ ಹೊಸ ಮುಖದ ನಾಯಕತ್ವದಲ್ಲಿ ಹೊಸ ತಂಡವನ್ನು ಪ್ರಕಟಿಸಿದೆ. ಇದನ್ನ ಓದಿ: Asia Cup T20 | ಏಷ್ಯಾ ಕಪ್‌ ಟೂರ್ನಿಗೆ ದಿನಾಂಕ ಪ್ರಕಟ; ಭಾರತ – ಪಾಕ್ ಕದನಕ್ಕೆ ಮುಹೂರ್ತ ಫಿಕ್ಸ್!

    Ind vs Pak 2

    ಸಲ್ಮಾನ್ ಅಲಿ ಅಘಾಗೆ (Salman Ali Agha) ತಂಡದ ನಾಯಕತ್ವದ ಹೊಣೆ ನೀಡಲಾಗಿದೆ. ಉಳಿದಂತೆ ಸ್ಫೋಟಕ ಬ್ಯಾಟರ್‌ ಫಖರ್‌ ಜಮಾನ್‌, ಚಾಂಪಿಯನ್ಸ್‌ ಟ್ರೋಫಿ ಟೂರ್ನಿಯಲ್ಲಿ ಅಮೋಘ ಪ್ರದರ್ಶನ ನೀಡಿದ ಖುಷ್ದಿಲ್ ಶಾಗೆ ಸ್ಥಾನ ನೀಡಲಾಗಿದೆ. ಜೊತೆ‌ಗೆ ಇದೇ ಟೂರ್ನಿಯಲ್ಲಿ ಮಿಂಚಿದ ಆಫ್‌ ಸ್ಪಿನ್ನರ್‌ ಅಬ್ರಾರ್ ಅಹ್ಮದ್‌‌ ತಂಡದಲ್ಲಿ ಸ್ಥಾನ ಗಿಟ್ಟಿಸಿಕೊಂಡಿದ್ದಾರೆ. ಇದನ್ನ ಓದಿ: ಅನಗತ್ಯ ರನ್‌ ಕದಿಯಲು ಯತ್ನಿಸಿ ಯಡವಟ್ಟು – ಮೈದಾನದಲ್ಲೇ ಬ್ಯಾಟ್‌ ಎಸೆದು ಪಾಕ್‌ ಓಪನರ್ ಆಕ್ರೋಶ

    ಏಷ್ಯಾ ಕಪ್‌ಗೆ ಪಾಕ್‌ ತಂಡ
    ಸಲ್ಮಾನ್ ಅಲಿ ಅಘಾ (ನಾಯಕ), ಅಬ್ರಾರ್ ಅಹ್ಮದ್, ಫಹೀಮ್ ಅಶ್ರಫ್, ಫಖರ್ ಜಮಾನ್, ಹ್ಯಾರಿಸ್‌ ರೌಫ್‌, ಹಸನ್ ಅಲಿ, ಹಸನ್ ನವಾಜ್, ಹುಸೇನ್ ತಲತ್, ಖುಷ್ದಿಲ್ ಶಾ, ಮೊಹಮ್ಮದ್ ಹ್ಯಾರಿಸ್ (ವಿಕೆಟ್-ಕೀಪರ್), ಮೊಹಮ್ಮದ್ ನವಾಜ್, ಮೊಹಮ್ಮದ್ ನವಾಜ್, ಮೊಹಮ್ಮದ್ ನವಾಜ್ ಅಯೂಬ್, ಸಲ್ಮಾನ್ ಮಿರ್ಜಾ, ಶಾಹೀನ್ ಶಾ ಆಫ್ರಿದಿ ಮತ್ತು ಸುಫ್ಯಾನ್ ಮೊಕಿಮ್.

    ASIA CUP 1

    ಯಾವಾಗಿನಿಂದ ಏಷ್ಯಾಕಪ್‌ ಟೂರ್ನಿ
    2026ರ ಟಿ20 ವಿಶ್ವಕಪ್‌ ಗಮನದಲ್ಲಿಟ್ಟುಕೊಂಡು ಈ ಬಾರಿ ಟಿ20 ಮಾದರಿಯಲ್ಲಿ ಏಷ್ಯಾಕಪ್‌ ಟೂರ್ನಿ ಆಡಿಸಲು ನಿರ್ಧರಿಸಲಾಗಿದೆ. ಸೆಪ್ಟೆಂಬರ್‌ 9 ರಿಂದ 28ರ ವರೆಗೆ ಯುಎಇನಲ್ಲಿ ಟೂರ್ನಿ ನಡೆಯಲಿದೆ. ಇದನ್ನ ಓದಿ: 1,650 ಕೋಟಿ ವೆಚ್ಚ, 60,000 ಆಸನ ಸಾಮರ್ಥ್ಯ – ಬೆಂಗ್ಳೂರಲ್ಲಿ ತಲೆ ಎತ್ತಲಿದೆ ಚಿನ್ನಸ್ವಾಮಿಗಿಂತಲೂ ಬೃಹತ್‌ ಸ್ಟೇಡಿಯಂ

    ಜುಲೈ 24 ರಂದು ನಡೆದ ಏಷ್ಯನ್ ಕ್ರಿಕೆಟ್ ಕೌನ್ಸಿಲ್ ಸಭೆಯಲ್ಲಿ (Asian Cricket Council) ಟೂರ್ನಿಯ ಸ್ಥಳವನ್ನ ಅಧಿಕೃತಗೊಳಿಸಲಾಯಿತು. ಈ ಬಾರಿ ಟೂರ್ನಿಯ ಹಕ್ಕು ಬಿಸಿಸಿಐನದ್ದೇ (ಭಾರತೀಯ ಕ್ರಿಕೆಟ್‌ ನಿಯಂತ್ರಣ ಮಂಡಳಿ) ಆಗಿದೆ. ಆದ್ರೆ ಭಾರತ ಮತ್ತು ಪಾಕ್‌ ನಡುವಿನ ಉದ್ವಿಗ್ನತೆಯಿಂದಾಗಿ 2027ರ ವರೆಗೂ ತಟಸ್ಥ ಸ್ಥಳಗಳಲ್ಲಿ ಟೂರ್ನಿ ನಡೆಸಲು ನಿರ್ಧರಿಸಲಾಗಿದೆ. ಸೆ.9 ರಿಂದ ಸೆ.28ರ ವರೆಗೆ ಟೂರ್ನಿ ನಿಗದಿಯಾಗಿದ್ದು, ಭಾರತ ಮತ್ತು ಪಾಕ್‌ ನಡುವಿನ ಪಂದ್ಯ ಸೆ.14ರಂದು ನಡೆಯಲಿದೆ.

    ಈ ಬಾರಿ 8 ತಂಡಗಳು
    ಇಷ್ಟು ವರ್ಷ 6 ತಂಡಗಳ ನಡುವೆ ನಡೆಯುತ್ತಿದ್ದ ಹಣಾಹಣಿ ಈ ಬಾರಿ 8 ತಂಡಗಳ ನಡುವೆ ನಡೆಯಲಿದೆ. ಭಾರತ ಮತ್ತು ಪಾಕಿಸ್ತಾನ ಒಂದೇ ಗುಂಪಿನಲ್ಲಿ ಇರಲಿವೆ. ಎಲ್ಲವೂ ಅಂದುಕೊಂಡಂತೆ ನಡೆದರೆ ಭಾರತ ಮತ್ತು ಪಾಕಿಸ್ತಾನ (Ind vs Pak) ತಂಡಗಳು ಮೂರು ಬಾರಿ ಮುಖಾಮುಖಿಯಾಗುವ ಸಾಧ್ಯತೆಗಳೂ ಇವೆ. ಲೀಗ್‌ ಹಂತ, ಸೂಪರ್‌ ಸಿಕ್ಸ್‌ ಹಾಗೂ ಪ್ರಶಸ್ತಿ ಸುತ್ತಿಗೆ ತಲುಪಿದ್ರೆ ಮೂರು ಬಾರಿ ಮುಖಾಮುಖಿ ಆಗುವ ಸಾಧ್ಯತೆಗಳು ಇವೆ.

    ಕಳೆದ ಬಾರಿ ಪಾಕ್‌ ಮತ್ತು ಶ್ರೀಲಂಕಾ ಆತಿಥ್ಯದಲ್ಲಿ ಏಕದಿನ ಮಾದರಿಯಲ್ಲಿ ಏಷ್ಯಾಕಪ್‌ ಟೂರ್ನಿ ನಡೆದಿತ್ತು. ಭಾರತ ಚಾಂಪಿಯನ್‌ ಆಗಿ ಹೊರಹೊಮ್ಮಿತ್ತು. ಇದನ್ನ ಓದಿ: ಖ್ಯಾತ ಉದ್ಯಮಿಯ ಮೊಮ್ಮಗಳ ಜೊತೆ ಅರ್ಜುನ್‌ ತೆಂಡ್ಕೂಲರ್‌ ಎಂಗೇಜ್‌

  • ಇನ್ನು ಮುಂದೆ ನಾನು ಪಾಕ್‌ಗೆ ಹೋಗಲ್ಲ: ಡೇರಿಲ್ ಮಿಚೆಲ್

    ಇನ್ನು ಮುಂದೆ ನಾನು ಪಾಕ್‌ಗೆ ಹೋಗಲ್ಲ: ಡೇರಿಲ್ ಮಿಚೆಲ್

    – ಪಾಕ್‌ ಕೆಟ್ಟ ಪರಿಸ್ಥಿತಿಯನ್ನು ಬಿಚ್ಚಿಟ್ಟ ಬಾಂಗ್ಲಾ ಆಟಗಾರ

    ದುಬೈ: ಇನ್ನು ಮುಂದೆ ನಾನು ಪಾಕಿಸ್ತಾನಕ್ಕೆ (Pakistan) ಹೋಗುವುದೇ ಇಲ್ಲ ಎಂದು ನ್ಯೂಜಿಲೆಂಡ್‌ ಆಟಗಾರ ‌ ಡೇರಿಲ್‌ ಮಿಚೆಲ್ (Daryl Mitchell) ಹೇಳಿದ್ದಾರೆ.

    ಭಾರತ ಮತ್ತು ಪಾಕಿಸ್ತಾನದ ಮಧ್ಯೆ ಸಂಘರ್ಷ ತೀವ್ರಗೊಂಡ ಬೆನ್ನಲ್ಲೇ ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) ಇಂಡಿಯನ್ ಪ್ರೀಮಿಯರ್ ಲೀಗ್ 2025 ಸೀಸನ್ (IPL) ಅನ್ನು ಒಂದು ವಾರ ಸ್ಥಗಿತಗೊಳಿಸಿದ ಬೆನ್ನಲ್ಲೇ ಪಾಕಿಸ್ತಾನ ಕ್ರಿಕೆಟ್ ಮಂಡಳಿ (PCB) ಪಿಎಸ್‌ಎಲ್‌ ಅನ್ನು ಮುಂದೂಡುವುದಾಗಿ ಘೋಷಿಸಿತ್ತು.

    ಪಿಸಿಬಿ ಉಳಿದ ಪಿಎಸ್‌ಎಲ್‌ ಪಂದ್ಯಗಳನ್ನು ಕರಾಚಿಯಲ್ಲಿ ನಡೆಸಲು ಬಯಸಿತ್ತು. ಆದರೆ ಆಟಗಾರರು ಆತಂಕ ವ್ಯಕ್ತಪಡಿಸಿದ ನಂತರ ಆಟಗಾರರನ್ನು ದುಬೈಗೆ ಕಳುಹಿಸಿಕೊಟ್ಟಿತ್ತು. ದುಬೈಗೆ ಬಂದ ನಂತರ ಬಾಂಗ್ಲಾದೇಶ ಲೆಗ್ ಸ್ಪಿನ್ನರ್ ರಿಷಾದ್ ಹೊಸೈನ್ ಪಾಕಿಸ್ತಾನದ ಕೆಟ್ಟ ಅನುಭವದ ಬಗ್ಗೆ ಮಾಧ್ಯಮದ ಜೊತೆ ಹಂಚಿಕೊಂಡಿದ್ದಾರೆ. ಇದನ್ನೂ ಓದಿ: ಬ್ರಹ್ಮೋಸ್‌ ದಾಳಿಗೆ ಬೆಚ್ಚಿ ಗೋಗರೆದು ಕದನ ವಿರಾಮ ಮಾಡಿಸಿದ್ದ ಪಾಕ್‌!

    ಸ್ಯಾಮ್ ಬಿಲ್ಲಿಂಗ್ಸ್, ಡೇರಿಲ್ ಮಿಚೆಲ್, ಕುಶಾಲ್ ಪೆರೆರಾ, ಡೇವಿಡ್ ವೈಸ್, ಟಾಮ್ ಕರ್ರನ್‌ ತುಂಬಾ ಭಯಗೊಂಡಿದ್ದರು. ದುಬೈಗೆ ಬಂದ ಬಳಿಕ ಮಿಚೆಲ್ ಇನ್ನು ಮುಂದೆ ಎಂದಿಗೂ ಪಾಕಿಸ್ತಾನಕ್ಕೆ ಹೋಗುವುದಿಲ್ಲ ಎಂದು ಹೇಳಿದರು. ಆಟಗಾರರು ಬಹಳ ಆತಂಕದಲ್ಲಿದ್ದರು ರಿಷದ್ ತಿಳಿಸಿದರು. ಇದನ್ನೂ ಓದಿ: ದಾಳಿ ವೇಳೆ ಕುತಂತ್ರ ಮಾಡಿದ್ರೂ ಭಾರತದ ಉತ್ತರಕ್ಕೆ ಪಾಕ್‌ ತತ್ತರ!

    ನಾವು ಹೊರಟ 20 ನಿಮಿಷಗಳ ಬಳಿಕ ವಿಮಾನ ನಿಲ್ದಾಣದ ಬಳಿಯೇ ಕ್ಷಿಪಣಿ ಅಪ್ಪಳಿಸಿದ ವಿಷಯ ದುಬೈಗೆ ಇಳಿದ ನಂತರ ತಿಳಿಯಿತು. ನಮ್ಮ ಕುಟುಂಬ ನಿದ್ದೆಯಿಲ್ಲದೇ ಹಲವು ರಾತ್ರಿಗಳನ್ನು ಕಳೆದಿದೆ ಎಂದು ಹೇಳಿದರು.

     

    ಇಂಗ್ಲೆಂಡ್‌ ಆಟಗಾರ ಟಾಮ್‌ ಕರ್ರನ್‌ ಬಗ್ಗೆ ಮಾತನಾಡಿದ ರಿಷಾದ್, ಅವರು ವಿಮಾನ ನಿಲ್ದಾಣಕ್ಕೆ ಹೋದಾಗ ನಿಲ್ದಾಣ ಮುಚ್ಚಲ್ಪಟ್ಟಿದೆ ಎಂದು ತಿಳಿಸಲಾಯಿತು. ವಿಮಾನ ಮುಚ್ಚಿದ ವಿಚಾರ ತಿಳಿದು ಅವರು ಚಿಕ್ಕ ಮಗುವಿನಂತೆ ಅಳಲು ಪ್ರಾರಂಭಿಸಿದರು. ಅವರನ್ನು ಮೂವರಿಂದ ಸಮಾಧಾನ ಮಾಡಲಾಯಿತು ಎಂದು ತಿಳಿಸಿದರು.

    ಉಳಿದ ಪಂದ್ಯಗಳನ್ನು ಕರಾಚಿಯಲ್ಲಿ ಆಡಲು ಪಿಸಿಬಿ ಮುಂದಾಗಿತ್ತು. ಈ ನಿಟ್ಟಿನಲ್ಲಿ ವಿದೇಶಿ ಆಟಗಾರರನ್ನು ಮನವೊಲಿಸುವ ಕೆಲಸ ನಡೆಸುತ್ತಿತ್ತು. ಆದರೆ ಹಿಂದಿನ ದಿನ ಇಲ್ಲಿ ಎರಡು ಡ್ರೋನ್‌ ದಾಳಿ ನಡೆದಿರುವ ವಿಚಾರವನ್ನು ಮರೆ ಮಾಡಿದ್ದರು. ಮರು ದಿನ ಡ್ರೋನ್‌ ದಾಳಿ ನಡೆದ ವಿಚಾರ ಗೊತ್ತಾಯಿತು ಎಂದು ರಿಷದ್‌ ನುಡಿದರು.

  • ಆಪರೇಷನ್ ಸಿಂಧೂರ ಬಳಿಕ ಪಾಕ್ ಸೂಪರ್ ಲೀಗ್ ತೊರೆಯಲು ಮುಂದಾದ್ರಾ ವಿದೇಶಿ ಪ್ಲೇಯರ್ಸ್‌?

    ಆಪರೇಷನ್ ಸಿಂಧೂರ ಬಳಿಕ ಪಾಕ್ ಸೂಪರ್ ಲೀಗ್ ತೊರೆಯಲು ಮುಂದಾದ್ರಾ ವಿದೇಶಿ ಪ್ಲೇಯರ್ಸ್‌?

    ಇಸ್ಲಾಮಾಬಾದ್: ಪಾಕ್ ಉಗ್ರರ ನೆಲೆಗಳ ಮೇಲೆ ಭಾರತೀಯ ಸೇನೆ (Indian Army) ನಡೆಸಿದ `ಆಪರೇಷನ್ ಸಿಂಧೂರ’ (Operation Operation) ಬಳಿಕ ವಿದೇಶಿ ಕ್ರಿಕೆಟಿಗರು ಪಾಕಿಸ್ತಾನ ಸೂಪರ್ ಲೀಗ್ (Pakistan Supre League) ತೊರೆಯಲು ಮುಂದಾಗುತ್ತಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ.

    ಏ.22ರಂದು ಪಹಲ್ಗಾಮ್‌ನ (Pahalgam Terrorist Attack) ಬೈಸರನ್ ಕಣಿವೆಯಲ್ಲಿ ನಡೆದ ಭಯೋತ್ಪಾದಕರ ಉಗ್ರರ ದಾಳಿಯಲ್ಲಿ 26 ಜನರು ಪ್ರಾಣತೆತ್ತರು. ಇದಾದ ಬಳಿಕ ಭಾರತ ಮತ್ತು ಪಾಕಿಸ್ತಾನದ ನಡುವೆ ಉದ್ವಿಗ್ನ ಪರಿಸ್ಥಿತಿ ಉಂಟಾಗಿದೆ. ಇದರ ಮಧ್ಯೆ ಉಗ್ರರ ದಾಳಿಗೆ ಪ್ರತೀಕಾರವಾಗಿ ಭಾರತೀಯ ಸೇನೆ `ಆಪರೇಷನ್ ಸಿಂಧೂರ’ ಹೆಸರಿನಲ್ಲಿ ಮಂಗಳವಾರ ತಡರಾತ್ರಿ 1:44ರ ಸುಮಾರಿಗೆ ಪಾಕ್‌ನ 9 ಉಗ್ರರ ನೆಲೆಗಳ ಮೇಲೆ ದಾಳಿ ನಡೆಸಿ, ಸೇಡು ತೀರಿಸಿಕೊಂಡಿದೆ.ಇದನ್ನೂ ಓದಿ:ಮಾದಕ ಲುಕ್‌ನಲ್ಲಿ ಮಿಂಚಿದ ವೈಷ್ಣವಿ – ಕೊಲ್ತಾಳಲ್ಲಪ್ಪೋ… ಅಂದ್ರು ನೆಟ್ಟಿಗರು

    ಹೆಚ್ಚುತ್ತಿರುವ ಉದ್ವಿಗ್ನತೆ ನಡುವೆಯೂ ಪಾಕಿಸ್ತಾನ ಸೂಪರ್ ಲೀಗ್ ಪ್ರಕಟಗೊಂಡ ವೇಳಾಪಟ್ಟಿಯಂತೆ ಮುಂದುವರಿಯಲಿದೆ ಎಂದು ಪಾಕಿಸ್ತಾನ ಕ್ರಿಕೆಟ್ ಮಂಡಳಿ (PCB) ತಿಳಿಸಿದೆ. ಈ ಕುರಿತು ಲೀಗ್‌ನಲ್ಲಿರುವ ಆರು ಫ್ರಾಂಚೈಸಿಗಳ ಮೂವರು ಮಾಧ್ಯಮ ವ್ಯವಸ್ಥಾಪಕರು ಮಾತನಾಡಿ, ಪ್ರತಿಯೊಂದು ಫ್ರಾಂಚೈಸಿಯೂ ಕನಿಷ್ಠ 5-6 ವಿದೇಶಿ ಆಟಗಾರರನ್ನು ಹೊಂದಿದ್ದು, `ಆಪರೇಷನ್ ಸಿಂಧೂರ’ ಬಳಿಕ ಪರಿಸ್ಥಿತಿ ಉದ್ವಿಗ್ನಗೊಳ್ಳುತ್ತಿದೆ ಎಂದು ಹೇಳಿದ್ದಾರೆ.

    ಇಂದು ರಾವಲ್ಪಿಂಡಿ ಕ್ರಿಕೆಟ್ ಮೈದಾನದಲ್ಲಿ ಇಸ್ಲಾಮಾಬಾದ್ ಯುನೈಟೆಡ್ ಮತ್ತು ಕ್ವೆಟ್ಟಾ ಗ್ಲಾಡಿಯೇಟರ್ಸ್ ನಡುವೆ ಪಂದ್ಯ ನಡೆಯುತ್ತಿದ್ದು, ಇನ್ನೂ 8, 9 ಮತ್ತು 10 ರಂದು ಇದೇ ಮೈದಾನದಲ್ಲಿ ಪಂದ್ಯಗಳು ನಡೆಯಲಿದೆ. ಅರ್ಹತಾ ಪಂದ್ಯವು ಮೇ 13 ರಂದು ರಾವಲ್ಪಿಂಡಿಯಲ್ಲಿ ನಡೆಯಲಿದ್ದು, ಎಲಿಮಿನೇಟರ್ ಪಂದ್ಯ 1 ಮತ್ತು 2, ಮಾರ್ಕ್ಯೂ ಈವೆಂಟ್‌ನ ಫೈನಲ್ ಎರಡೂ ಕ್ರಮವಾಗಿ ಮೇ 14, 16 ಮತ್ತು 18 ರಂದು ಗಡಾಫಿ ಕ್ರೀಡಾಂಗಣದಲ್ಲಿ ನಡೆಯಲಿವೆ.

    ಆದರೆ ಇಲ್ಲಿಯವರೆಗೆ ಯಾವುದೇ ವಿದೇಶಿ ಆಟಗಾರರು ಲೀಗ್ ತೊರೆಯುವ ಕುರಿತು ಮಾತನಾಡಿಲ್ಲ ಹಾಗೂ ಯಾವುದೇ ಮನವಿಯನ್ನು ಸಲ್ಲಿಸಿಲ್ಲ ಎಂದು ಪಿಸಿಬಿ ಅಧಿಕಾರಿಯೊಬ್ಬರು ದೃಢಪಡಿಸಿದ್ದಾರೆ.ಇದನ್ನೂ ಓದಿ: ಶಿವನ ದೇಗುಲದಲ್ಲಿ ಮಂಡಿಯೂರಿ 108 ಮೆಟ್ಟಿಲು ಹತ್ತಿದ ಉರ್ಫಿ

  • ಚಾಂಪಿಯನ್ಸ್‌ ಟ್ರೋಫಿ ಭದ್ರತಾ ಕಾರ್ಯ ನಿರ್ವಹಿಸಲು ನಿರಾಕರಣೆ – ಪಾಕ್‌ನ 100ಕ್ಕೂ ಹೆಚ್ಚು ಪೊಲೀಸರು ವಜಾ

    ಚಾಂಪಿಯನ್ಸ್‌ ಟ್ರೋಫಿ ಭದ್ರತಾ ಕಾರ್ಯ ನಿರ್ವಹಿಸಲು ನಿರಾಕರಣೆ – ಪಾಕ್‌ನ 100ಕ್ಕೂ ಹೆಚ್ಚು ಪೊಲೀಸರು ವಜಾ

    ಇಸ್ಲಾಮಾಬಾದ್‌: ತನ್ನ ಆತಿಥ್ಯದಲ್ಲಿ ನಡೆಯುತ್ತಿರುವ ಚಾಂಪಿಯನ್ಸ್‌ ಟ್ರೋಫಿ (Champions Trophy 2025) ಟೂರ್ನಿಯ ಭದ್ರತಾ ಕಾರ್ಯ ನಿರ್ವಹಿಸಲು ನಿರಾಕರಿಸಿದ ಹಿನ್ನೆಲೆ ಪಾಕಿಸ್ತಾನ ಪಂಬಾಬ್‌ನ 100ಕ್ಕೂ ಹೆಚ್ಚು ಪೊಲೀಸರನ್ನು (Punjab Police) ಸೇವೆಯಿಂದಲೇ ವಜಾಗೊಳಿಸಿರುವುದಾಗಿ ವರದಿಯಾಗಿದೆ.

    ಪಂಜಾಬ್‌ ಪೊಲೀಸರ ಮಾಹಿತಿ ಪ್ರಕಾರ, ಸೇವಯಿಂದ ವಜಾಗೊಳಿಸಲಾದ ಅಧಿಕಾರಿಗಳು ಹಲವು ಸಂದರ್ಭದಲ್ಲಿ ಗೈರಾಗಿದ್ದರು. ಅಲ್ಲದೇ ಚಾಂಪಿಯನ್ಸ್‌ ಟ್ರೋಫಿ ಟೂರ್ನಿ ವೇಳೆ ಭದ್ರತಾ ಕಾರ್ಯ ನಿರ್ವಹಿಸಲು ನಿರಾಕರಿಸಿದ್ದರು ಎಂದು ತಿಳಿದುಬಂದಿದೆ. ಇದನ್ನೂ ಓದಿ: 300 ಮಕ್ಕಳ ಮೇಲೆ ವೈದ್ಯನಿಂದ ರೇಪ್ – ನಾನು `ಶಿಶುಕಾಮಿ’ ಎಂದು ತಪ್ಪೊಪ್ಪಿಕೊಂಡ ಆರೋಪಿ

    ಈ ಬಾರಿ ಪಾಕಿಸ್ತಾನದ ಆತಿಥ್ಯದಲ್ಲಿ ನಡೆಯುತ್ತಿರುವ ಚಾಂಪಿಯನ್ಸ್‌ ಟ್ರೋಫಿ ಟೂರ್ನಿಗೆ ಲಾಹೋರ್‌ನ ಗಡಾಫಿ, ಕರಾಚಿ ಹಾಗೂ ರಾವಲ್ಪಿಂಡಿ ಮೈದಾನಗಳು ಆತಿಥ್ಯ ವಹಿಸಿವೆ. ಹಾಗಾಗಿ ಗೊತ್ತುಪಡಿಸಿದ ಹೋಟೆಲ್‌ಗಳಿಗೆ ಪ್ರವಾಣಿಸುವ ತಂಡಗಳಿಗೆ ಭದ್ರತೆ ಒದಗಿಸಲು ಅಧಿಕಾರಿಗಳನ್ನು ನಿಯೋಜಿಸಲಾಗಿತ್ತು. ಆದ್ರೆ ಅವರೆಲ್ಲರೂ ಜವಾಬ್ದಾರಿ ತೆಗೆದುಕೊಳ್ಳಲು ಸಂಪೂರ್ಣವಾಗಿ ನಿರಾಕರಿಸಿದ್ದರು. ಈ ಹಿನ್ನೆಲೆ ಕರ್ತವ್ಯದಿಂದ ವಜಾಗೊಳಿಸಲಾಗಿದೆ ಎಂದು ಹೇಳಲಾಗಿದೆ. ಇದನ್ನೂ ಓದಿ: ಡ್ರೈವಿಂಗ್ ಬಗ್ಗೆ ಚಾಲಕರಿಗೆ ಸರಿಯಾಗಿ ತರಬೇತಿ ಕೊಡಿ – ಸಾರ್ವಜನಿಕರಿಂದ ಬಿಎಂಟಿಸಿಗೆ ದೂರು

    ಇತ್ತೀಚೆಗಷ್ಟೇ ಐಸಿಸಿ ಚಾಂಪಿಯನ್ಸ್ ಟ್ರೋಫಿ 2025 (Champions Trophy 2025) ವೀಕ್ಷಣೆಗೆ ಆಗಮಿಸಿರುವ ವಿದೇಶಿಯರನ್ನು ಅಪಹರಿಸಿ ಸುಲಿಗೆ ಮಾಡಲು ಸಂಚು ರೂಪಿಸಲಾಗುತ್ತಿದೆ ಎಂದು ಪಾಕಿಸ್ತಾನದ ಗುಪ್ತಚರ ಸಂಸ್ಥೆ ಎಚ್ಚರಿಕೆ ನೀಡಿತ್ತು. ಇಸ್ಲಾಮಿಕ್ ಸ್ಟೇಟ್ (Islamic State) ಖೊರಾಸನ್ ಪ್ರಾಂತ್ಯದಿಂದ ಸಂಭಾವ್ಯ ಬೆದರಿಕೆಯ ಬಗ್ಗೆ ಪಾಕ್ ಇಂಟಲಿಜೆನ್ಸ್ ವರದಿ ನೀಡಿತ್ತು.

  • Ind vs Pak ಬ್ಲಾಕ್‌ಬಸ್ಟರ್ ಪಂದ್ಯದ VIP ಟಿಕೆಟ್‌ 3.50 ಕೋಟಿಗೆ ಮಾರಿಕೊಂಡ ಪಿಸಿಬಿ ಅಧ್ಯಕ್ಷ

    Ind vs Pak ಬ್ಲಾಕ್‌ಬಸ್ಟರ್ ಪಂದ್ಯದ VIP ಟಿಕೆಟ್‌ 3.50 ಕೋಟಿಗೆ ಮಾರಿಕೊಂಡ ಪಿಸಿಬಿ ಅಧ್ಯಕ್ಷ

    ಇಸ್ಲಾಮಾಬಾದ್‌/ಅಬುಧಾಬಿ: ಐಸಿಸಿ ಚಾಂಪಿಯನ್ಸ್ ಟ್ರೋಫಿಯಲ್ಲಿ (ICC Champions Trophy 2025) ಫೆಬ್ರವರಿ 23ರ ಸೂಪರ್‌ ಸಂಡೇ ನಡೆಯಲಿರುವ ಭಾರತ ಮತ್ತು ಪಾಕಿಸ್ತಾನ ನಡುವಿನ ಬ್ಲಾಕ್‌ಬಸ್ಟರ್ ಪಂದ್ಯಕ್ಕಾಗಿ ದುಬೈ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ 30 ಆಸನಗಳ ವಿಐಪಿ ಬಾಕ್ಸ್ ಟಿಕೆಟ್‌ಗಳನ್ನು ಪಾಕಿಸ್ತಾನ ಕ್ರಿಕೆಟ್ ಮಂಡಳಿ (PCB) ಅಧ್ಯಕ್ಷ ಮೊಹ್ಸಿನ್‌ ನಖ್ವಿ (PCB Chairman Mohsin Naqvi) ಮಾರಿಕೊಂಡಿದ್ದಾರೆ ಎಂದು ವರದಿಯಾಗಿದೆ.

    ಹೌದು.. ಭದ್ರತಾ ಕಾರಣಗಳಿಂದ ಈ ಬಾರಿಯ ಟೂರ್ನಿ ಹೈಬ್ರಿಡ್‌ ಮಾದರಿಯಲ್ಲಿ ನಡೆಯುತ್ತಿದ್ದು, ಭಾರತದ ಎಲ್ಲಾ ಪಂದ್ಯಗಳು ದುಬೈನಲ್ಲಿ ನಡೆಯಲಿದೆ. ಹಾಗಾಗಿ ದುಬೈನಲ್ಲಿ ನಡೆಯುವ ಪಂದ್ಯಗಳನ್ನು ಕ್ರೀಡಾಂಗಣದಲ್ಲಿ ಉತ್ತಮ ಆಸನ, ವಿಶೇಷ ಸೌಕರ್ಯವುಳ್ಳ ಬಾಕ್ಸ್‌ನಲ್ಲಿ ತಮ್ಮ ಕುಟುಂಬ, ಆಪ್ತರೊಂದಿಗೆ ಕುಳಿತು ವೀಕ್ಷಿಸಲು ನಖ್ವಿ ಅವರಿಗೆ ಸುಮಾರು 95 ಲಕ್ಷ ರೂ. (4 ಲಕ್ಷ ದುಬೈ ಕರೆನ್ಸಿ) ಬೆಲೆಯ 30 ವಿಐಪಿ ಆಸನದ ಟಿಕೆಟ್‌ಗಳನ್ನು (VIP box Tickets) ನೀಡಲಾಗಿತ್ತು. ಆದ್ರೆ ಈ ಟಿಕೆಟ್‌ಗಳನ್ನ ಪಿಸಿಬಿ ಅಧ್ಯಕ್ಷ ಬರೋಬ್ಬರಿ 3.5 ಕೋಟಿ ರೂ. (ಸುಮಾರು 4 ಲಕ್ಷ ಡಾಲರ್‌)ಗೆ ಮಾರಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ. ಇದನ್ನೂ ಓದಿ: ಇಂದಿನಿಂದ ಚಾಂಪಿಯನ್ಸ್ ಟ್ರೋಫಿ – ಭಾರತದ ಮೂವರು ʻಚಾಂಪಿಯನ್ಸ್‌ʼಗೆ ಕೊನೇ ಟೂರ್ನಿ!

    ವಿಐಪಿ ಟಿಕೆಟ್‌ಗಳನ್ನು ಮಾರಾಟ ಮಾಡಿಕೊಂಡಿರುವ ನಖ್ವಿ ಅಭಿಮಾನಿಗಳೊಂದಿಗೆ ಕುಳಿತು ಸಾಮಾನ್ಯರಂತೆ ಕ್ರಿಕೆಟ್‌ ಪಂದ್ಯ ವೀಕ್ಷಣೆ ಮಾಡುವುದಾಗಿ ತಿಳಿಸಿದ್ದಾರೆ. ಅಲ್ಲದೇ ಟಿಕೆಟ್‌ ಮಾರಾಟ ಮಾಡಿದ ಹಣವನ್ನ ಕರಾಚಿ, ಲಾಹೋರ್ ಮತ್ತು ಪಾಕಿಸ್ತಾನದ ಇತರೇ ಕ್ರೀಡಾಂಗಣಗಳ ನವೀಕರಣಕ್ಕೆ ಬಳಸಲಾಗುತ್ತದೆ ಎಂದು ತಿಳಿಸಿದ್ದಾರೆ ಎಂದು ವರದಿಗಳು ತಿಳಿಸಿವೆ. ಇದನ್ನೂ ಓದಿ: Champions Trophy 2025 – ಚಾಂಪಿಯನ್ಸ್‌ ಟ್ರೋಫಿ ದಾಲ್ಮೀಯಾರ ಕನಸಿನ ಕೂಸು

    ಈ ಬಾರಿಯ ಚಾಂಪಿಯನ್ಸ್ ಟ್ರೋಫಿ ಟೂರ್ನಿಯು ಪಾಕಿಸ್ತಾನ ಆತಿಥ್ಯದಲ್ಲಿ ನಡೆಯುತ್ತಿದೆ. ಇದರೊಂದಿಗೆ, ಸುಮಾರು 30 ವರ್ಷಗಳ ಬಳಿಕ ಪ್ರಮುಖ ಟೂರ್ನಿಯೊಂದಕ್ಕೆ ಪಾಕ್ ಆತಿಥ್ಯ ವಹಿಸಿದೆ. ಟೂರ್ನಿಯು ಫೆಬ್ರುವರಿ 19ರಂದು (ಇಂದಿನಿಂದ) ಆರಂಭವಾಗಲಿದೆ. ಕರಾಚಿಯ ನ್ಯಾಷನಲ್ ಸ್ಟೇಡಿಯಂನಲ್ಲಿ ಉದ್ಘಾಟನಾ ಪಂದ್ಯ ನಡೆಯಲಿದ್ದು, ಕಿವೀಸ್‌ ಪಡೆಯು ಅತಿಥೇಯ ಪಾಕಿಸ್ತಾನ ವಿರುದ್ಧ ಸೆಣಸಾಡಲಿದೆ. ಇದನ್ನೂ ಓದಿ: Champions Trophy | ಯಾವ ವರ್ಷ – ಯಾರು ಚಾಂಪಿಯನ್ಸ್‌? – ಭಾರತ ಕೊನೇ ಬಾರಿ ಟ್ರೋಫಿ ಗೆದ್ದಿದ್ದು ಯಾವಾಗ?

    ಪಾಕಿಸ್ತಾನದ ಕರಾಚಿ, ರಾವಲ್ಪಿಂಡಿ ಮತ್ತು ಲಾಹೋರ್‌ ಕ್ರೀಡಾಂಗಣಗಳು ಟೂರ್ನಿಯ ಆತಿಥ್ಯ ವಹಿಸಿವೆ. ಪಾಕಿಸ್ತಾನಕ್ಕೆ ತೆರಳಲು ನಿರಾಕರಿಸಿರುವ ಭಾರತ ತನ್ನ ಪಾಲಿನ ಎಲ್ಲ ಪಂದ್ಯಗಳನ್ನು ದುಬೈನಲ್ಲಿ ಆಡಲಿದೆ.