Tag: PCB

  • ‌ಪಾಕ್‌ ಮೈದಾನದಲ್ಲಿ ಫೀಲ್ಡಿಂಗ್‌ ವೇಳೆ ಹಣೆಗೆ ಬಡಿದ ಚೆಂಡು – ರಕ್ತ ಸೋರುತ್ತಲೇ ಹೊರನಡೆದ ರಚಿನ್‌ ರವೀಂದ್ರ

    ‌ಪಾಕ್‌ ಮೈದಾನದಲ್ಲಿ ಫೀಲ್ಡಿಂಗ್‌ ವೇಳೆ ಹಣೆಗೆ ಬಡಿದ ಚೆಂಡು – ರಕ್ತ ಸೋರುತ್ತಲೇ ಹೊರನಡೆದ ರಚಿನ್‌ ರವೀಂದ್ರ

    – ಚಾಂಪಿಯನ್ಸ್‌ ಟ್ರೋಫಿಗೆ ಗೈರು ಸಾಧ್ಯತೆ

    ಲಾಹೋರ್‌: ಇದೇ ಫೆಬ್ರವರಿ 19ರಿಂದ ಐಸಿಸಿ ಚಾಂಪಿಯನ್ಸ್ ಟ್ರೋಫಿ ನಡೆಯಲಿರುವ ಲಾಹೋರ್‌ನ ಗಡಾಫಿ ಕ್ರೀಡಾಂಗಣದಲ್ಲಿ ಕಿವೀಸ್‌ ಸ್ಟಾರ್‌ ಆಟಗಾರ ಬೆಂಗಳೂರು ಮೂಲದ ರಚಿನ್‌ ರವೀಂದ್ರ (Rachin Ravindra) ಹಣೆಗೆ ಚೆಂಡು ಬಡಿದು ಗಾಯಗೊಂಡಿದ್ದಾರೆ. ಈ ಬೆನ್ನಲ್ಲೇ ಪಾಕಿಸ್ತಾನದ ಕ್ರಿಕೆಟ್‌ ಅಂಗಳದಲ್ಲಿ ಕ್ರಿಕೆಟ್‌ ಫ್ಲಡ್‌ ಲೈಟ್‌ (Floodlights) ವ್ಯವಸ್ಥೆ ಸರಿಯಾಗಿ ಕೆಲಸ ಮಾಡ್ತಿದೆಯೇ? ಎನ್ನುವ ಪ್ರಶ್ನೆಯೂ ಎದ್ದಿದೆ.

    ಚಾಂಪಿಯನ್ಸ್ ಟ್ರೋಫಿಗೂ ಮುನ್ನ ಪಾಕಿಸ್ತಾನ ಕ್ರಿಕೆಟ್ ಬೋರ್ಡ್ (PCB) ತನ್ನ ವ್ಯವಸ್ಥೆ ಎಲ್ಲವೂ ಸರಿಯಾಗಿದೆಯೆಂದು ಜಗತ್ತಿನೆದುರು ಖಾತ್ರಿ ಪಡಿಸಲು ನ್ಯೂಜಿಲೆಂಡ್ (New Zealand), ದಕ್ಷಿಣ ಆಫ್ರಿಕಾ ತಂಡದೊಂದಿಗೆ ತ್ರಿಕೋನ ಸರಣಿ ಏರ್ಪಡಿಸಿದೆ. ಪಾಕಿಸ್ತಾನದಲ್ಲಿ ಆಡುವುದಿಲ್ಲ ಎಂದು ಪಟ್ಟು ಹಿಡಿದು ತನ್ನ ಪಂದ್ಯಗಳನ್ನು ದುಬೈಗೆ ಸ್ಥಳಾಂತರ ಮಾಡಿಸಿಕೊಂಡ ಭಾರತಕ್ಕೆ ಛಾಟಿಯೇಟು ನೀಡುವ ಉದ್ದೇಶವೂ ಈ ಗಡಿಬಿಡಿಯ ಟೂರ್ನಿಯಲ್ಲಿ ಇತ್ತು ಎಂಬುದು ಸ್ಪಷ್ಟ. ಆದ್ರೆ ಎಲ್ಲವೂ ಸುಸೂತ್ರವಾಗಿ ಸಾಗುತ್ತಿದೆ ಎನ್ನುವಾಗಲೇ ಆ ಘಟನೆ ನಡೆದು ಹೋಗಿದೆ. ಪಿಸಿಬಿ ಅರೆಬರೆ ಕಾರ್ಯಗಳ ಕಡೆಗೆ ಕೈ ತೋರಿಸುವಂತೆ ಆಗಿದೆ.

    ಲಾಹೋರ್‌ ಮೈದಾನದಲ್ಲಿ ಆಗಿದ್ದೇನು?
    ಪಾಕಿಸ್ತಾನದ ಇನ್ನಿಂಗ್ಸ್‌ನ 38ನೇ ಓವರ್ ನಲ್ಲಿ ರಚಿನ್ ರವೀಂದ್ರ ಅವರು ಸ್ಕ್ವೇರ್‌ ಲೆಗ್‌ನಲ್ಲಿ ಫೀಲ್ಡಿಂಗ್ ಮಾಡುತ್ತಿದ್ದರು. ಈ ವೇಳೆ ಪಾಕಿಸ್ತಾನದ ಖುಷ್ದಿಲ್ ಶಾ ಹೊಡೆದ ಸ್ವೀಪ್ ಶಾಟ್ ನೇರವಾಗಿ ರಚಿನ್ ರವೀಂದ್ರ ಅವರ ಕಡೆಗೆ ಹೋಗಿತ್ತು. ಮಾಮಾಲಿ ಫೀಲ್ದರ್ ಅಲ್ಲಿದ್ದಿದ್ದರೂ ಕ್ಲೀಯರ್ ಕ್ಯಾಚ್ ಆಗುತ್ತಿತ್ತು. ಹಾಗೆಯೇ ಗುಡ್‌ ಫೀಲ್ಡರ್‌ ಕೂಡ ಆಗಿರುವ ರಚಿನ್‌ ಕ್ಯಾಚ್‌ ಕ್ಲಿಯರ್‌ ಮಾಡುತ್ತಾರೆ ಎಂಬ ವಿಶ್ವಾಸ ಕಿವೀಸ್‌ ಆಟಗಾರರಿಗೂ ಇತ್ತು. ಆದ್ರೆ ಅಲ್ಲಿ ಆಗಿದ್ದೇ ಬೇರೆ.

    ಕ್ಯಾಚ್‌ ಅಗಿ ಕೈಸೇರಬೇಕಾದ ಚೆಂಡು ನೇರವಾಗಿ ಹೋಗಿ ರಚಿನ್ ರವೀಂದ್ರ ಅವರ ಹಣೆವಗೆ ಬಡಿಯಿತು. ಅವರಿಗೆ ಚೆಂಡು ಬಂದ ದಾರಿಯನ್ನು ಕೊಂಚವೂ ಅಂದಾಜಿಸಲು ಸಾಧ್ಯವಾಗಿಲ್ಲ. ಚೆಂಡು ಹಣೆಗೆ ಬಡಿಯುತ್ತಿದ್ದಂತೆ ಅಲ್ಲಿಯೇ ರಚಿನ್‌ ಕುಸಿದು ಬಿದ್ದಿದ್ದಾರೆ. ಏನಾಗುತ್ತಿದೆ ಎಂದು ಎಲ್ಲರೂ ಗಾಬರಿಯಾಗಬೇಕಾದರೆ ಅವರ ಮುಖದಿಂದ ರಕ್ತ ಸೋರುತ್ತಿತ್ತು. ತಕ್ಷಣವೇ ಮೈದಾನಕ್ಕೆ ಆಗಮಿಸಿದ ನ್ಯೂಜಿಲೆಂಡ್ ತಂಡದ ಫಿಸಿಯೋ ಮತ್ತು ಮೈದಾನದಲ್ಲಿದ್ದ ರಕ್ಷಣಾ ಸಿಬ್ಬಂದಿ ಅವರ ಮುಖವನ್ನು ಟವೆಲ್‌ನಿಂದ ಮುಚ್ಚಿಕೊಂಡು ಮೈದಾನದಿಂದ ಹೊರ ನಡೆದರು.

    ರಚಿನ್ ರವೀಂದ್ರ ಅವರ ಹಣೆಯಿಂದ ರಕ್ತ ಸೋರುತ್ತಿದ್ದುದು ಸ್ಪಷ್ಟವಾಗಿ ಗೋಚರಿಸುತ್ತಿತ್ತು. ಇದೀಗ ಅವರ ಗಾಯದ ಪ್ರಮಾಣ ಏನು ಎಂದು ತಿಳಿದು ಬಂದಿಲ್ಲ. ಗಾಯದ ತೀವ್ರತೆ ನೋಡಿದರೆ ಅವರು ಮುಂಬರುವ ಐಸಿಸಿ ಚಾಂಪಿಯನ್ಸ್ ಟ್ರೋಫಿ ಆಡುವುದೂ ಅನುಮಾನ ಎಂದು ಹೇಳಲಾಗುತ್ತಿದೆ. ಈ ಬಗ್ಗೆ ನ್ಯೂಜಿಲೆಂಡ್ ತಂಡದ ಕಡೆಯಿಂದ ಯಾವುದೇ ಅಧಿಕೃತ ಹೇಳಿಕೆ ಈವರೆಗೂ ಹೊರಬಿದ್ದಿಲ್ಲ.

    ಪಾಕ್‌ ಕ್ರೀಡಾಂಗಣದ ವಿರುದ್ಧ ಟೀಕೆ:
    ರಚಿನ್‌ ರವೀಂದ್ರರು ಗಾಯಗೊಳ್ಳಲು ಗಡಾಫಿ ಸ್ಟೇಡಿಯಂನಲ್ಲಿ ಅಳವಡಿಸಲಾದ ಕಳಪೆ ಗುಣಮಟ್ಟದ ಫ್ಲಡ್‌ ಲೈಟ್‌ ವ್ಯವಸ್ಥೆಯೇ ಕಾರಣ ಎಂಬ ಟೀಕೆಯೂ ವ್ಯಕ್ತವಾಗಿದೆ. ಲೈಟಿಂಗ್ಸ್‌ ಸಮಸ್ಯೆಯಿಂದಾಗಿಯೇ ಚೆಂಡನ್ನು ಗುರುತಿಸಲು ಸಾಧ್ಯವಾಗಲಿಲ್ಲ ಎಂದು ಕೆಲವರು ಹೇಳಿದ್ದಾರೆ.

  • ಭಾರತಕ್ಕೂ ಮೊದಲೇ ಚಾಂಪಿಯನ್ಸ್‌ ಟ್ರೋಫಿ ಬಾಯ್ಕಾಟ್‌ ಮಾಡ್ಬೇಕು – ಪಾಕ್ ಹೊಸ ಕ್ಯಾತೆ

    ಭಾರತಕ್ಕೂ ಮೊದಲೇ ಚಾಂಪಿಯನ್ಸ್‌ ಟ್ರೋಫಿ ಬಾಯ್ಕಾಟ್‌ ಮಾಡ್ಬೇಕು – ಪಾಕ್ ಹೊಸ ಕ್ಯಾತೆ

    ಇಸ್ಲಾಮಾಬಾದ್‌: ತೀವ್ರ ಕುತೂಹಲ ಮೂಡಿಸಿರುವ ಚಾಂಪಿಯನ್ಸ್ ಟ್ರೋಫಿ (Champions Trophy 2025) ಕ್ರಿಕೆಟ್ ಟೂರ್ನಿಯನ್ನು ಹೈಬ್ರಿಡ್ ಮಾದರಿಯಲ್ಲಿ ನಡೆಸುವ ಸಂಬಂಧ ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ (ICC) ಒಮ್ಮತದ ನಿರ್ಣಯ ಕೈಗೊಂಡಿದೆ. ಮುಂದಿನ ವರ್ಷ ಪಾಕಿಸ್ತಾನದಲ್ಲಿ ನಡೆಯಲಿರುವ ಟ್ರೋಫಿಯಲ್ಲಿ ಭಾರತ ತನ್ನ ಪಂದ್ಯಗಳನ್ನು ದುಬೈನಲ್ಲಿ ಆಡುವುದಕ್ಕೆ ಐಸಿಸಿ ಅನುಮತಿ ನೀಡಿದೆ. ಈ ನಡುವೆ ಪಾಕಿಸ್ತಾನ ಕ್ರಿಕೆಟ್‌ ತಂಡದ ಮಾಜಿ ನಾಯಕ ಹಾಗೂ ಮಾಜಿ ಕೋಚ್‌ ರಶೀದ್ ಲತೀಫ್ (Rashid Latif) ಹೊಸ ಕ್ಯಾತೆ ತೆಗೆದಿದ್ದಾರೆ.

    ಖಾಸಗಿ ವಾಹಿನಿಯೊಂದಕ್ಕೆ ನೀಡಿದ ಸಂದರ್ಶನದಲ್ಲಿ ಮಾತನಾಡಿರುವ ಲತೀಫ್‌, ಭಾರತೀಯ ಕ್ರಿಕೆಟ್‌ ನಿಯಂತ್ರಣ ಮಂಡಳಿ (BCCI) ಮುಂದಿನ ಹೆಜ್ಜೆ ಇಡುವ ಮೊದಲು ಪಾಕಿಸ್ತಾನ ಚಾಂಪಿಯನ್ಸ್‌ ಟ್ರೋಫಿಯನ್ನ ಬಾಯ್ಕಾಟ್‌ ಮಾಡಬೇಕು. ಇನ್ಮುಂದೆ ಚಾಂಪಿಯನ್‌ ಟ್ರೋಫಿ ನಡೆಯಬಾರದು ಎಂದು ಹೇಳಿದ್ದಾರೆ. ಇದನ್ನೂ ಓದಿ: ಐಸಿಸಿ ಅಂಗಳ ತಲುಪಿದ ಸಿರಾಜ್‌ vs ಹೆಡ್‌ ವಾಗ್ವಾದ – ಇಬ್ಬರಿಗೂ ಬ್ಯಾನ್‌ ಭೀತಿ?

    ಚಾಂಪಿಯನ್ಸ್‌ ಟ್ರೋಫಿ ಪೂರ್ಣ ಪಂದ್ಯಗಳು ಪಾಕಿಸ್ತಾನದಲ್ಲಿ (Pakistan) ನಡೆಯಬೇಕಿತ್ತು. ಆದ್ರೆ ಭದ್ರತಾ ಕಾಳಜಿಯನ್ನು ಉಲ್ಲೇಖಿಸಿ, ಭಾರತ ತನ್ನ ಪಂದ್ಯಗಳನ್ನಾಡಲು ನಿರಾಕರಿಸಿದೆ. ಐಸಿಸಿ ಹೈಬ್ರಿಡ್‌ ಮಾದರಿಗೆ ಒಪ್ಪಿಗೆ ಸೂಚಿಸಿದ್ದರೂ ಬಿಸಿಸಿಐ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ನಮ್ಮನ್ನು ಯಾವಾಗಲೂ ಬಲಿಪಶುಗಳಾಗಿ ಮಾಡುತ್ತಿದ್ದಾರೆ ಎಂದು ಅಸಮಾಧಾನ ಹೊರಹಾಕಿದ್ದಾರೆ. ಇದನ್ನೂ ಓದಿ: ಭಾರತಕ್ಕಿಂದು ಹ್ಯಾಟ್ರಿಕ್‌ ಶಾಕ್‌ – ಸತತ 2ನೇ ಬಾರಿಗೆ ಬಾಂಗ್ಲಾಗೆ U19 ಏಷ್ಯಾಕಪ್‌ ಕಿರೀಟ

    ಪಾಕಿಸ್ತಾನ ಕ್ರಿಕೆಟ್‌ ಬೋರ್ಡ್‌ (PCB), ಅಫ್ಘಾನಿಸ್ತಾನ ಕ್ರಿಕೆಟ್‌ ಬೋರ್ಡ್‌ (ACB) ಆಗಿರಲಿ ಅಥವಾ ಐಸಿಸಿ ಆಗಿರಲಿ, ಬಿಸಿಸಿಐ ಎದುರು ಫೈಟ್‌ ಮಾಡೋಕೆ ಸಾಧ್ಯವಿಲ್ಲ. ಭಾರತ ಬಹಿಷ್ಕರಿಸಿದ್ರೆ, ನಾವು ಎಲ್ಲಿಗೆ ಹೋಗಿ ನಿಲ್ಲಬೇಕಾಗುತ್ತೆ ಅನ್ನೋ ಭಯ ಇದೆ. ಅದಕ್ಕಾಗಿ ಪಾಕಿಸ್ತಾನವನ್ನು ಬಲಿಪಶುಗಳಾಗಿ ಮಾಡ್ತಾರೆ. ಆದ್ದರಿಂದ ಬಿಸಿಸಿಐ ಮುಂದಿನ ನಡೆದ ತೆಗೆದುಕೊಳ್ಳುವ ಮೊದಲು ಪಾಕಿಸ್ತಾನ ಟೂರ್ನಿಯನ್ನ ಬಹಿಷ್ಕರಿಸಬೇಕು ಎಂದು ಕರೆ ಕೊಟ್ಟಿದ್ದಾರೆ. ಇದನ್ನೂ ಓದಿ: ಆಸೀಸ್‌ ವಿರುದ್ಧ ಹೀನಾಯ ಸೋಲು – WTC ಅಂಕಪಟ್ಟಿಯಲ್ಲಿ 3ನೇ ಸ್ಥಾನಕ್ಕೆ ಕುಸಿದ ಭಾರತ, ಫೈನಲ್‌ ಹಾದಿ ಕಠಿಣ

    2025ರ ಫೆಬ್ರವರಿ- ಮಾರ್ಚ್‌ನಲ್ಲಿ ನಡೆಯಲಿರುವ ಚಾಂಪಿಯನ್ಸ್ ಟ್ರೋಫಿ ಟೂರ್ನಿಗೆ ಶೀಘ್ರದಲ್ಲಿಯೇ ವೇಳಾಪಟ್ಟಿ ಪ್ರಕಟವಾಗಲಿದೆ. ಭಾರತ ತನ್ನ ಪಂದ್ಯಗಳನ್ನು ದುಬೈನಲ್ಲಿ ಆಡಲಿದೆ. ತಾನು ಹೈಬ್ರಿಡ್ ಮಾದರಿಗೆ ಸುತಾರಾಂ ಒಪ್ಪುವುದಿಲ್ಲ ಎಂದು ಕಳೆದ ವಾರ ಹಠ ಹಿಡಿದಿದ್ದ ಪಾಕಿಸ್ತಾನ, ಬಹಿಷ್ಕಾರದ ಬೆದರಿಕೆ ಹಿಂಪಡೆದು, ಹೈಬ್ರಿಡ್ ಮಾದರಿಗೆ ಒಪ್ಪಿಕೊಂಡಿರುವುದಲ್ಲದೆ, ಈ ವ್ಯವಸ್ಥೆ 2031ರವರೆಗೂ ಮುಂದುವರಿಯಬೇಕು ಎಂದು ಆಗ್ರಹಿಸಿತ್ತು. ಅಲ್ಲದೇ ಫೈನಲ್‌ ಪಂದ್ಯ ಲಾಹೋರ್‌ನಲ್ಲೇ ನಡೆಯಬೇಕು ಎಂದು ಷರತ್ತು ವಿಧಿಸಿದೆ. ಸದ್ಯಕ್ಕೆ ಐಸಿಸಿ ತನ್ನ ಟೂರ್ನಿಗಳನ್ನು ಹೈಬ್ರಿಡ್ ಮಾದರಿಯಲ್ಲಿ 2027ರ ವರೆಗೆ ನಡೆಸಲು ಒಪ್ಪಿಕೊಂಡಿದೆ. ಆದ್ರೆ ಫೈನಲ್‌ ಪಂದ್ಯವನ್ನು ಲಾಹೋರ್‌ನಲ್ಲೇ ನಡೆಸುವ ಬಗ್ಗೆ ಒಪ್ಪಿಗೆ ಸೂಚಿಸಿಲ್ಲ.

  • ಹೈಬ್ರಿಡ್ ಮಾಡೆಲ್‌ನಲ್ಲಿ ಚಾಂಪಿಯನ್ಸ್ ಟ್ರೋಫಿಗೆ ಆಡಲು ಪಾಕಿಸ್ತಾನ ಒಪ್ಪಿಗೆ – ಆದ್ರೆ ಕಂಡೀಷನ್ ಅಪ್ಲೈ

    ಹೈಬ್ರಿಡ್ ಮಾಡೆಲ್‌ನಲ್ಲಿ ಚಾಂಪಿಯನ್ಸ್ ಟ್ರೋಫಿಗೆ ಆಡಲು ಪಾಕಿಸ್ತಾನ ಒಪ್ಪಿಗೆ – ಆದ್ರೆ ಕಂಡೀಷನ್ ಅಪ್ಲೈ

    ನವದೆಹಲಿ: ಹೈಬ್ರಿಡ್ ಮಾದರಿಯಲ್ಲಿ ಚಾಂಪಿಯನ್ಸ್ ಟ್ರೋಫಿಗೆ ಆಡಲು ಪಾಕಿಸ್ತಾನ (Pakistan Cricket Board) ಒಪ್ಪಿಗೆ ಸೂಚಿಸಿದೆ. ಆದರೆ, ಅದಕ್ಕೆ ಕೆಲವು ಷರತ್ತುಗಳನ್ನೂ ವಿಧಿಸಿದೆ.

    ಟೂರ್ನಿ ವಿಚಾರಕ್ಕೆ ಭಾರತ-ಪಾಕಿಸ್ತಾನ ನಡುವೆ ಹಗ್ಗಜಗ್ಗಾಟ ನಡೆದಿತ್ತು. ಭದ್ರತಾ ಕಾರಣಗಳಿಗಾಗಿ ಪಾಕಿಸ್ತಾನಕ್ಕೆ ಆಡಲು ಹೋಗುವುದಿಲ್ಲ ಎಂದು ನಿರಾಕರಿಸಿತ್ತು. ಆಗ, ಹೈಬ್ರಿಡ್ ಮಾದರಿಯ ಚಾಂಪಿಯನ್ಸ್ ಟ್ರೋಫಿ ನಡೆಸಲು ಐಸಿಸಿ ಪಾಕಿಸ್ತಾನಕ್ಕೆ ಸಲಹೆ ನೀಡಿತ್ತು. ಈಗ ಪಾಕಿಸ್ತಾನ ಒಪ್ಪಿಗೆ ಸೂಚಿಸಿದ್ದು, ಮೂರು ಷರತ್ತುಗಳನ್ನು ವಿಧಿಸಿದೆ ಎಂದು ವರದಿಯಾಗಿದೆ.

    ಭಾರತದ ಪಂದ್ಯಗಳು ದುಬೈನಲ್ಲಿ ನಡೆಯಲಿವೆ. ಭಾರತ ಫೈನಲ್‌ಗೆ ಲಗ್ಗೆಯಿಟ್ಟರೆ ಅದು ಕೂಡ ದುಬೈನಲ್ಲೇ ನಡೆಯಲಿದೆ. ಒಂದು ವೇಳೆ, ಟೀಂ ಇಂಡಿಯಾ ಗ್ರೂಪ್ ಸ್ಟೇಜ್ ದಾಟದಿದ್ದರೆ ಸೆಮಿಫೈನಲ್ ಮತ್ತು ಫೈನಲ್ ಪಂದ್ಯ ಪಾಕ್‌ನ ಲಾಹೋರ್‌ನಲ್ಲೇ ನಡೆಯಲಿದೆ. ಭಾರತದಲ್ಲಿ ಮುಂದಿನ ದಿನಗಳಲ್ಲಿ ಐಸಿಸಿ ಪಂದ್ಯ ಆಯೋಜಿಸಿದರೆ ಪಾಕಿಸ್ತಾನದ ಪಂದ್ಯಗಳು ತಟಸ್ಥ ಕೇಂದ್ರಗಳಿಗೆ ವರ್ಗಾಯಿಸಬೇಕು ಎಂದು ಪಾಕಿಸ್ತಾನ ಕ್ರಿಕೆಟ್ ಮಂಡಳಿಯು ಐಸಿಸಿ ನಡೆಸಿದ ಸಭೆಯಲ್ಲಿ ಷರತ್ತುಗಳನ್ನು ಹಾಕಿದೆ.

    ಮುಂದಿನ ವರ್ಷ ಫೆಬ್ರವರಿ-ಮಾರ್ಚ್‌ನಲ್ಲಿ ನಡೆಯಲಿರುವ ಚಾಂಪಿಯನ್ಸ್ ಟ್ರೋಫಿಗಾಗಿ ಹೈಬ್ರಿಡ್ ಮಾದರಿಯ ಚರ್ಚೆಯ ನಡುವೆ ಪಾಕಿಸ್ತಾನ ಕ್ರಿಕೆಟ್ ಮಂಡಳಿ (ಪಿಸಿಬಿ) ಅಧ್ಯಕ್ಷ ಮೊಹ್ಸಿನ್ ನಖ್ವಿ ಎಮಿರೇಟ್ಸ್ ಕ್ರಿಕೆಟ್ ಮಂಡಳಿಯ ಮುಖ್ಯಸ್ಥ ಮುಬಾಶಿರ್ ಉಸ್ಮಾನಿಯನ್ನು ದುಬೈನಲ್ಲಿ ಭೇಟಿಯಾದರು.

    ಸಭೆಗೆ ಸಂಬಂಧಿಸಿದಂತೆ ಪಿಸಿಬಿ ಹೇಳಿಕೆಯ ಪ್ರಕಾರ, ಚಾಂಪಿಯನ್ಸ್ ಟ್ರೋಫಿಯನ್ನು ಆಯೋಜಿಸಲು ಪಾಕಿಸ್ತಾನ ಸಿದ್ಧವಾಗಿದೆ. ಎಲ್ಲಾ ಸಿದ್ಧತೆಗಳು ವೇಳಾಪಟ್ಟಿಯಲ್ಲಿದೆ ಎಂದು ನಖ್ವಿ ಉಸ್ಮಾನಿಗೆ ತಿಳಿಸಿದ್ದಾರೆ.

    ಪಾಕಿಸ್ತಾನದಲ್ಲಿ ಪರಿಸ್ಥಿತಿ ಸ್ಥಿರವಾಗಿದೆ. ಮೆಗಾ-ಈವೆಂಟ್‌ನಲ್ಲಿ ಭಾಗವಹಿಸುವ ಎಲ್ಲಾ ತಂಡಗಳಿಗೆ ರಾಜ್ಯ ಮಟ್ಟದ ಭದ್ರತೆಯನ್ನು ಒದಗಿಸಲಾಗುವುದು ಎಂದು ನಖ್ವಿ ಹೇಳಿದ್ದಾರೆ. ಪಂದ್ಯಾವಳಿಗೆ ಆತಿಥ್ಯ ವಹಿಸುವ ಕ್ರೀಡಾಂಗಣಗಳ ನಿರ್ಮಾಣ ಕಾರ್ಯವೂ ನಿಗದಿತ ಸಮಯಕ್ಕೆ ಸರಿಯಾಗಿದೆ. ಪಾಕಿಸ್ತಾನದ ಜನರು ದೇಶದಲ್ಲಿ ಉತ್ತಮ ತಂಡಗಳು ಮತ್ತು ಆಟಗಾರರು ಆಡುವುದನ್ನು ವೀಕ್ಷಿಸಲು ಎದುರು ನೋಡುತ್ತಿದ್ದಾರೆ ಎಂದು ಹೇಳಿದ್ದಾರೆ.

  • ಭಾರತ ಬರಲಿ, ಬಾರದೇ ಇರಲಿ ನಾವು ಚಾಂಪಿಯನ್ಸ್‌ ಟ್ರೋಫಿ ಆಯೋಜಿಸುತ್ತೇವೆ: ಪಾಕಿಸ್ತಾನ

    ಭಾರತ ಬರಲಿ, ಬಾರದೇ ಇರಲಿ ನಾವು ಚಾಂಪಿಯನ್ಸ್‌ ಟ್ರೋಫಿ ಆಯೋಜಿಸುತ್ತೇವೆ: ಪಾಕಿಸ್ತಾನ

    ಇಸ್ಲಾಮಾಬಾದ್‌: ಭಾರತ ತಂಡ (Team India) ಪಾಕಿಸ್ತಾನಕ್ಕೆ (Pakistan) ಬಾರದೇ ಇದ್ದರೂ ನಾವು ಚಾಂಪಿಯನ್ಸ್‌ ಟ್ರೋಫಿ (Champions Trophy) ಆಯೋಜಿಸುತ್ತೇವೆ ಎಂದು ಪಾಕಿಸ್ತಾನ ಕ್ರಿಕೆಟ್‌ ಬೋರ್ಡ್‌ (PCB) ಐಸಿಸಿ ತಿಳಿಸಿದೆ ಎಂದು ವರದಿಯಾಗಿದೆ.

    ಹೈಬ್ರಿಡ್‌ ಮಾದರಿಯಲ್ಲಿ ಪಂದ್ಯ ನಡೆಸಲು ಸಾಧ್ಯವೇ ಎಂದು ಐಸಿಸಿ (ICC) ಪಿಸಿಬಿಯನ್ನು ಕೇಳಿತ್ತು. ಈ ಪ್ರಶ್ನೆಗೆ ಪಿಸಿಬಿ ಭಾರತ ತಂಡ ಪಾಕ್‌ಗೆ ಬರಲಿ ಅಥವಾ ಬಾರದೇ ಇದ್ದರೂ ಇದ್ದರೂ ನಾವು ಟೂರ್ನಿಯನ್ನು ಆಯೋಜಿಸುಸುತ್ತೇವೆ ಎಂದು ಪತ್ರ ಬರೆದಿದೆ.

    ಭದ್ರತಾ ದೃಷ್ಟಿಯಿಂದ ಭಾರತ ತಂಡ ಪಾಕಿಸ್ತಾನಕ್ಕೆ ತೆರಳಲು ನಿರಾಕರಿಸಿತ್ತು. ಬಳಿಕ ದುಬೈಯಲ್ಲಿ (Dubai) ಹೈಬ್ರಿಡ್‌ ಮಾದರಿಯಲ್ಲಿ ಪಂದ್ಯ ನಡೆಸುವ ಬಗ್ಗೆ ಪ್ರಸ್ತಾಪವಾಗಿತ್ತು. ಈಗ ಈ ಎಲ್ಲಾ ಪ್ರಸ್ತಾಪವನ್ನು ಪಾಕಿಸ್ತಾನ ನಿರಾಕರಿಸಿದೆ. ಇದನ್ನೂ ಓದಿ: ಟೀಂ ಇಂಡಿಯಾ ಪಾಕಿಸ್ತಾನಕ್ಕೆ ಬರದಿದ್ದರೆ ಐಸಿಸಿ ಟೂರ್ನಿಗಳಿಗೆ ಬಹಿಷ್ಕಾರ: ಪಾಕ್‌

    ಪಿಸಿಬಿ ಅಧ್ಯಕ್ಷ ಮೊಹ್ಸಿನ್ ನಖ್ವಿ ಇತ್ತೀಚೆಗೆ ಹೈಬ್ರಿಡ್ ಮಾದರಿಯಲ್ಲಿ ಪಂದ್ಯಾವಳಿಯನ್ನು ಆಯೋಜಿಸುವ ಸಾಧ್ಯತೆಯನ್ನು ತಳ್ಳಿಹಾಕಿದ್ದರು. ಅಂತಹ ವ್ಯವಸ್ಥೆ ಬಗ್ಗೆ ಯಾವುದೇ ಚರ್ಚೆಗಳು ನಡೆದಿಲ್ಲ ಎಂದು ಹೇಳಿದ್ದರು.

    ಈಗಾಗಲೇ ಟಿವಿ ರೈಟ್ಸ್‌ ಮಾರಾಟವಾಗಿರುವ ಕಾರಣ ಭಾರತ ತಂಡ ಒಂದು ವೇಳೆ ಭಾಗವಹಿಸದೇ ಇದ್ದರೆ ಐಸಿಸಿಗೆ ಭಾರೀ ನಷ್ಟವಾಗಲಿದೆ. ಹೀಗಾಗಿ ಐಸಿಸಿ ಯಾವ ನಿರ್ಧಾರ ಕೈಗೊಳ್ಳಲಿದೆ ಎಂಬ ಕುತೂಹಲ ಹೆಚ್ಚಾಗಿದೆ. 2025ರ ಫೆಬ್ರವರಿಯಲ್ಲಿ ಚಾಂಪಿಯನ್ಸ್‌ ಟ್ರೋಫಿ ನಡೆಸಲು ಐಸಿಸಿ ಸಿದ್ಧತೆ ನಡೆಸಿದೆ.

    ಭಾರತ ತಂಡವು 2005-2006ರಲ್ಲಿ ರಾಹುಲ್ ದ್ರಾವಿಡ್ (Rahul Dravid) ನಾಯಕತ್ವದಲ್ಲಿ ಪಾಕಿಸ್ತಾನಕ್ಕೆ ತನ್ನ ಕೊನೆಯ ಪ್ರವಾಸ ಕೈಗೊಂಡಿತ್ತು. ಈ ಪಂದ್ಯದಲ್ಲಿ ಇತ್ತಂಡಗಳು 3 ಟೆಸ್ಟ್ ಹಾಗೂ 5 ಏಕದಿನ ಪಂದ್ಯಗಳನ್ನಾಡಿದ್ದವು. ನಂತರ ರಾಜತಾಂತ್ರಿಕ ಕಾರಣಗಳಿಂದಾಗಿ ಉಭಯ ತಂಡಗಳ ನಡುವೆ ಯಾವುದೇ ದ್ವಿಪಕ್ಷೀಯ ಸರಣಿ ನಡೆದಿಲ್ಲ. ಐಸಿಸಿ (ICC) ಟೂರ್ನಿ ಅಥವಾ ಏಷ್ಯಾ ಕಪ್ ಟೂರ್ನಿಗಳಲ್ಲಿ ಮಾತ್ರವೇ ಪರಸ್ಪರ ಮುಖಾಮುಖಿಯಾಗುತ್ತಿವೆ.

    ಭಾರತ ಮತ್ತು ಪಾಕಿಸ್ತಾನ ಇತ್ತಂಡಗಳ ನಡುವಿನ ಪಂದ್ಯವು ಯಾವಾಗಲೂ ರಣರೋಚಕವಾಗಿರುತ್ತವೆ. 2023 ರಲ್ಲಿ ನಡೆದ ವಿಶ್ವಕಪ್‌ ಕ್ರಿಕೆಟ್‌ ಪಂದ್ಯಗಳಲ್ಲಿ ಭಾಗವಹಿಸಲು ಪಾಕಿಸ್ತಾನ ತಂಡ ಭಾರತಕ್ಕೆ ಬಂದಿತ್ತು.

  • ಟೀಂ ಇಂಡಿಯಾ ಪಾಕಿಸ್ತಾನಕ್ಕೆ ಬರದಿದ್ದರೆ ಐಸಿಸಿ ಟೂರ್ನಿಗಳಿಗೆ ಬಹಿಷ್ಕಾರ: ಪಾಕ್‌

    ಟೀಂ ಇಂಡಿಯಾ ಪಾಕಿಸ್ತಾನಕ್ಕೆ ಬರದಿದ್ದರೆ ಐಸಿಸಿ ಟೂರ್ನಿಗಳಿಗೆ ಬಹಿಷ್ಕಾರ: ಪಾಕ್‌

    – ಭಾರತ-ಪಾಕ್‌ ಇರೋದ್ರಿಂದಲೇ ಐಸಿಸಿ ಅಸ್ತಿತ್ವದಲ್ಲಿದೆ ಎಂದ ರಶೀದ್ ಲತೀಫ್

    ಇಸ್ಲಾಮಾಬಾದ್‌: ಮುಂದಿನ ವರ್ಷ ನಡೆಯಲಿರುವ ಚಾಂಪಿಯನ್ಸ್‌ ಟ್ರೋಫಿಯಲ್ಲಿ‌ (hampions trophy) ಪಾಲ್ಗೊಳ್ಳುವ ವಿಚಾರದಲ್ಲಿ ಭಾರತ-ಪಾಕಿಸ್ತಾನದ ನಡುವೆ ಹಗ್ಗಜಗ್ಗಾಟ ಮುಂದುವರಿದಿದೆ. ಭಾರತೀಯ ಕ್ರಿಕೆಟ್‌ ನಿಯಂತ್ರಣ ಮಂಡಳಿ (BCCI) ಈಗಾಗಲೇ ಪಾಕ್‌ಗೆ ಪ್ರಯಾಣಿಸುವುದಿಲ್ಲ ಎಂದು ಸ್ಪಷ್ಟವಾಗಿ ಹೇಳಿದ್ದರೂ, ಪಿಸಿಬಿ ಮಾತ್ರ ಬರಲೇಬೇಕೆಂದು ಪಟ್ಟು ಹಿಡಿದಿದೆ. ಈ ನಡುವೆ ಪಾಕಿಸ್ತಾನ ಕ್ರಿಕೆಟ್‌ ಮಂಡಳಿ (PCB) ಮಹತ್ವದ ಹೇಳಿಕೆಯೊಂದನ್ನು ನೀಡಿದೆ.

    ಪಾಕ್‌ ತಂಡದ ಮಾಜಿ ನಾಯಕ ರಶೀದ್ ಲತೀಫ್, ಭಾರತ ಈ ಬಾರಿ ಪಾಕಿಸ್ತಾನಕ್ಕೆ ಹೋಗದಿದ್ದರೆ, ಐಸಿಸಿ ಕಾರ್ಯಕ್ರಮಗಳನ್ನು ಬಹಿಷ್ಕರಿಸುವ ದೊಡ್ಡ ಹೆಜ್ಜೆಯನ್ನು ಪಿಸಿಬಿ ತೆಗೆದುಕೊಳ್ಳುತ್ತದೆ ಹೇಳಿದ್ದಾರೆ. ಇದನ್ನೂ ಓದಿ: ಚಾಂಪಿಯನ್ಸ್ ಟ್ರೋಫಿಗಾಗಿ ಟೀಂ ಇಂಡಿಯಾ ಪಾಕಿಸ್ತಾನಕ್ಕೆ ಬರಲ್ಲ; ಹೊಸ ಷರತ್ತು ಮುಂದಿಟ್ಟ ಬಿಸಿಸಿಐ

    ಇದು ದ್ವಿಪಕ್ಷೀಯ ಸರಣಿ ಅಥವಾ ಏಷ್ಯಾ ಕಪ್ ಆಗಿದ್ದರೆ, ಭಾರತವು ಆಡಬೇಕೆ ಅಥವಾ ಬೇಡವೇ ಎಂದು ತಂಡಗಳನ್ನು ಕೇಳಬಹುದಿತ್ತು. ಇದು ದ್ವಿಪಕ್ಷೀಯ ಪಂದ್ಯವಾಗಿದ್ದರೆ, ಪಂದ್ಯವನ್ನು ರದ್ದು ಮಾಡಬಹುದಿತ್ತು. ಆದ್ರೆ ನೀವು ಈಗಾಗಲೇ ಸಹಿ ಮಾಡಿರುವುದರಿಂದ ಐಸಿಸಿ ಒಪ್ಪಂದಗಳನ್ನು ನಿರಾಕರಿಸಲಾಗುವುದಿಲ್ಲ. ಭಾರತವು ಗಟ್ಟಿ ನಿಲುವು ತೆಗೆದುಕೊಳ್ಳಬೇಕು ಎಂದು ಹೇಳಿದ್ದಾರೆ. ಇದನ್ನೂ ಓದಿ: WPL 2025 | 3ನೇ ಆವೃತ್ತಿಗೆ ಭರ್ಜರಿ ತಯಾರಿ – ರೀಟೆನ್‌ ಪಟ್ಟಿ ರಿಲೀಸ್‌

    ಈಗಾಗಲೇ ಎಲ್ಲಾ ಪ್ರಸಾರಕರು ಮತ್ತು ಪ್ರಾಯೋಜಕರು 2024-31ರ ಅವಧಿಗೆ ಸಹಿ ಮಾಡಿದ್ದಾರೆ. ಭಾರತ ತಂಡ ಭಾಗವಹಿಸಲು ನಿರಾಕರಿಸಿದ್ರೆ ಬಲವಾದ ಕಾರಣ ಇರಬೇಕು. ಬಿಸಿಸಿಐ ಭದ್ರತೆಯ ಕಾರಣಗಳನ್ನು ನೀಡಿ ಟೂರ್ನಿ ನಿರಾಕರಿಸಲು ಮುಂದಾಗುತ್ತಿದೆ. ಹಾಗಾದರೆ ಆಸ್ಟ್ರೇಲಿಯಾ, ನ್ಯೂಜಿಲೆಂಡ್, ಇಂಗ್ಲೆಂಡ್ ಮತ್ತು ದಕ್ಷಿಣ ಆಫ್ರಿಕಾದಂತಹ ತಂಡಗಳು ಪಾಕಿಸ್ತಾನಕ್ಕೆ ಬರುತ್ತಿಲ್ಲವೇ? ಭಾರತವು ಪಾಕಿಸ್ತಾನಕ್ಕೆ ಹೋಗದಿದ್ದರೆ, ಪಾಕಿಸ್ತಾನವು ಐಸಿಸಿ ಕಾರ್ಯಕ್ರಮಗಳಲ್ಲಿ ಭಾಗವಹಿಸುವುದಿಲ್ಲ ಎಂದು ಹೇಳಿದ್ದಾರೆ.

    ಮುಂದುವರಿದು ಪಾಕಿಸ್ತಾನ ಮತ್ತು ಭಾರತ ಇರುವುದರಿಂದಲೇ ಐಸಿಸಿ ಅಸ್ತಿತ್ವದಲ್ಲಿದೆ. ಭಾರತದಂತೆ ಪಾಕಿಸ್ತಾನ ಸರ್ಕಾರವೂ ನಾವು ಆಡುವುದಿಲ್ಲ ಎಂದು ಹೇಳಿದರೆ, ಯಾರೂ ಕೂಡ ಪಂದ್ಯವನ್ನು ವೀಕ್ಷಿಸುವುದಿಲ್ಲ. ಬಿಸಿಸಿಐನಿಂದಲೂ ಯಾವುದೇ ಪ್ರಯೋಜನ ಆಗೋದಿಲ್ಲ ಎಂದು ಕೆಣಕಿದ್ದಾರೆ. ಇದನ್ನೂ ಓದಿ: ಕೊಹ್ಲಿಗೆ ಕ್ಯಾಪ್ಟೆನ್ಸಿ ನೀಡುವ ಬಗ್ಗೆ ನಿರ್ಧಾರ ಆಗಿಲ್ಲ -‌ ಕೋಟ್ಯಂತರ ಅಭಿಮಾನಿಗಳ ಆಸೆಗೆ ಫ್ರಾಂಚೈಸಿ ತಣ್ಣೀರು

    ಚಾಂಪಿಯನ್ಸ್ ಟ್ರೋಫಿಯಲ್ಲಿ ಅಫ್ಘಾನಿಸ್ತಾನ, ಆಸ್ಟ್ರೇಲಿಯಾ, ಬಾಂಗ್ಲಾದೇಶ, ಇಂಗ್ಲೆಂಡ್, ಭಾರತ, ನ್ಯೂಜಿಲೆಂಡ್, ದಕ್ಷಿಣ ಆಫ್ರಿಕಾ ಮತ್ತು ಹಾಲಿ ಚಾಂಪಿಯನ್ ಪಾಕಿಸ್ತಾನ ಸೇರಿದಂತೆ ತಲಾ 4 ತಂಡಗಳ ಎರಡು ಗುಂಪುಗಳನ್ನು ಒಳಗೊಂಡಿವೆ. ಈಗಾಗಲೇ ಚಾಂಪಿಯನ್ಸ್‌ ಟ್ರೋಫಿ ವೇಳಾಪಟ್ಟಿ ನಿಗದಿಯಾಗಿದ್ದು, ಪಾಕಿಸ್ತಾನದ ಮುಲ್ತಾನ್‌, ರಾವಲ್ಪಿಂಡಿ ಹಾಗೂ ಲಾಹೋರ್‌ ಕ್ರೀಡಾಂಗಣಗಳು ಆತಿಥ್ಯ ವಹಿಸಲು ಸಜ್ಜಾಗಿವೆ.

    ಬಿಸಿಸಿಐ ಷರತ್ತು ಏನು?
    ಚಾಂಪಿಯನ್ಸ್‌ ಟ್ರೋಫಿಗಾಗಿ ಭಾರತ ತಂಡವು ಪಾಕಿಸ್ತಾನಕ್ಕೆ (Pakistan) ಬರುವುದಿಲ್ಲ ಎಂದು ಬಿಸಿಸಿಐ ಹೇಳಿದೆ. ಜೊತೆಗೆ ಭಾರತದ ಎಲ್ಲಾ ಪಂದ್ಯಗಳನ್ನು ದುಬೈಗೆ ಸ್ಥಳಾಂತರಿಸುವಂತೆ ಬೇಡಿಕೆಯಿಟ್ಟಿದೆ ಎಂದು ವರದಿಯಾಗಿದೆ. ಇದನ್ನೂ ಓದಿ: 6,6,6,6,6,W,6 – ಒಂದೇ ಓವರ್‌ನಲ್ಲಿ 37 ರನ್‌ ಬಿಟ್ಟುಕೊಟ್ಟ ರಾಬಿನ್ ಉತ್ತಪ್ಪ!

  • ಚಾಂಪಿಯನ್ಸ್ ಟ್ರೋಫಿಗಾಗಿ ಟೀಂ ಇಂಡಿಯಾ ಪಾಕಿಸ್ತಾನಕ್ಕೆ ಬರಲ್ಲ; ಹೊಸ ಷರತ್ತು ಮುಂದಿಟ್ಟ ಬಿಸಿಸಿಐ

    ಚಾಂಪಿಯನ್ಸ್ ಟ್ರೋಫಿಗಾಗಿ ಟೀಂ ಇಂಡಿಯಾ ಪಾಕಿಸ್ತಾನಕ್ಕೆ ಬರಲ್ಲ; ಹೊಸ ಷರತ್ತು ಮುಂದಿಟ್ಟ ಬಿಸಿಸಿಐ

    ಮುಂಬೈ: 2025ರ ಫೆಬ್ರವರಿಯಲ್ಲಿ ನಡೆಯಲಿರುವ ಚಾಂಪಿಯನ್ಸ್‌ ಟ್ರೋಫಿಗಾಗಿ ಭಾರತ ಪುರುಷರ ಕ್ರಿಕೆಟ್‌ ತಂಡ (Team India) ಪಾಕಿಸ್ತಾನಕ್ಕೆ ಪ್ರಯಾಣಿಸುವುದಿಲ್ಲ ಎಂದು ಹೇಳಿರುವ ಭಾರತೀಯ ಕ್ರಿಕೆಟ್‌ ನಿಯಂತ್ರಣ ಮಂಡಳಿ (BCCI), ಹೊಸ ಷರತ್ತು ಮುಂದಿಟ್ಟಿದೆ.

    2025ರ ಫೆಬ್ರವರಿ 19ರಿಂದ ಮಾರ್ಚ್‌ 9ರ ವರೆಗೆ ನಡೆಯಲಿರುವ ಐಸಿಸಿ ಚಾಂಪಿಯನ್ಸ್ ಟ್ರೋಫಿ (Champions Trophy 2025) ಪಾಕ್‌ ಆತಿಥ್ಯದಲ್ಲಿ ನಡೆಯಲಿದೆ. ಈಗಾಗಲೇ ವೇಳಾಪಟ್ಟಿ ಸಹ ನಿಗದಿಯಾಗಿದ್ದು, ಭಾರತದ ಪಂದ್ಯಗಳಿಗೆ ಲಾಹೋರ್‌ ಕ್ರೀಡಾಂಗಣ ಆತಿಥ್ಯ ವಹಿಸಲು ಸಜ್ಜಾಗಿವೆ. ಈ ಸಂಬಂಧ ಬಿಸಿಸಿಐ ಪ್ರತಿಕ್ರಿಯೆ ನೀಡಿದ್ದು, ಭಾರತ ತಂಡವು ಪಾಕಿಸ್ತಾನಕ್ಕೆ (Pakistan) ಬರುವುದಿಲ್ಲ ಎಂದು ಹೇಳಿದೆ. ಜೊತೆಗೆ ಭಾರತದ ಎಲ್ಲಾ ಪಂದ್ಯಗಳನ್ನು ದುಬೈಗೆ ಸ್ಥಳಾಂತರಿಸುವಂತೆ ಬೇಡಿಕೆಯಿಟ್ಟಿದೆ ಎಂದು ವರದಿಯಾಗಿದೆ. ಆದ್ರೆ ವರದಿಗಳನ್ನು ತಳ್ಳಿಹಾಕಿರುವ ಪಾಕಿಸ್ತಾನ ಕ್ರಿಕೆಟ್‌ ಮಂಡಳಿ ಪಾಕಿಸ್ತಾನ ನೆಲದಲ್ಲೇ ಭಾರತ ತನ್ನ ಪಂದ್ಯಗಳನ್ನಾಡಲಿದೆ ಎಂದು ಹೇಳಿಕೊಂಡಿದೆ.

    ಪಾಕ್‌ ಆಶ್ವಾಸನೆ ಏನು?
    ಭಾರತಕ್ಕೆ ಭದ್ರತೆಯ ಕೊರತೆ ಇದೆ ಅನ್ನಿಸಿದ್ರೆ, ಲಾಹೋರ್‌ನಲ್ಲಿ ಪಂದ್ಯಗಳನ್ನು ಆಡಿದ ಬಳಿಕ ಅದೇ ದಿನ ಭಾರತಕ್ಕೆ ಪ್ರಯಾಣಿಸಬಹುದು. ಅದಕ್ಕೆ ಬೇಕಾದ ಎಲ್ಲಾ ವ್ಯವಸ್ಥೆಗಳನ್ನು ಪಾಕಿಸ್ತಾನ ಕ್ರಿಕೆಟ್‌ ಮಂಡಳಿ ಮಾಡಲಿದೆ. ಇದರೊಂದಿಗೆ ಭಾರತೀಯ ಕ್ರಿಕೆಟ್‌ ಅಭಿಮಾನಿಗಳಿಗೆ ವಿಶೇಷ ಕೋಟಾ, ವೀಸಾ ವ್ಯವಸ್ಥೆ ಮಾಡುತ್ತೇವೆ ಎಂದು ಪಿಸಿಬಿ ಅಧ್ಯಕ್ಷ ನಖ್ವಿ ಹೇಳಿದ್ದಾರೆ.

    ಹೈಬ್ರಿಡ್‌ ಮಾದರಿಯಲ್ಲೇ ಟೂರ್ನಿ?
    ಕಳೆದ ವರ್ಷ ಏಕದಿನ ಏಷ್ಯಾಕಪ್‌ ಟೂರ್ನಿಯನ್ನಾಡಲು ಭಾರತ ತಂಡವನ್ನು ಪಾಕ್‌ಗೆ ಕಳುಹಿಸಲು ಬಿಸಿಸಿಐ ನಿರಾಕರಿಸಿದ ನಂತರ ACC (ಏಷ್ಯನ್‌ ಕ್ರಿಕೆಟ್‌ ಸಮಿತಿ) ಹೈಬ್ರಿಡ್‌ ಮಾದರಿಯಲ್ಲಿ ಆಡಿಸಲು ನಿರ್ಧರಿಸಿತು. ಏಷ್ಯಾಕಪ್‌ ಟೂರ್ನಿಯ ಹಕ್ಕು ಪಾಕಿಸ್ತಾನದ ಬಳಿಯಿದ್ದರೂ ಪಾಕ್‌ನಲ್ಲಿ ಕೇವಲ 4 ಪಂದ್ಯಗಳನ್ನಾಡಲು ಮಾತ್ರವೇ ಅನುಮತಿ ನೀಡಿತು. ಉಳಿದ 9 ಪಂದ್ಯಗಳನ್ನ ಶ್ರೀಲಂಕಾದಲ್ಲಿ ಆಡಿಸಲು ನಿರ್ಧರಿಸಿತು. ಈ ಬಾರಿಯೂ ಅದೇ ರೀತಿ ಹೈಬ್ರಿಡ್‌ ಮಾದರಿಯಲ್ಲಿ ಪಂದ್ಯಗಳನ್ನು ಆಯೋಜಿಸುವುದು ಬಹುತೇಕ ಖಚಿತವಾಗಿದೆ. ಆದ್ರೆ ಈ ಬಗ್ಗೆ ಪಿಸಿಬಿ ಹಾಗೂ ಐಸಿಸಿ ಇನ್ನೂ ಅಧಿಕೃತ ಹೇಳಿಕೆ ನೀಡಿಲ್ಲ.

    ಪಾಕ್‌ಗೆ ಪ್ರಯಾಣಿಸಲು ಭಾರತ ಹಿಂದೇಟು ಏಕೆ?
    ಪಾಕಿಸ್ತಾನ ಮುಸ್ಲಿಂ ರಾಷ್ಟ್ರವಾಗಿ ಬೇರ್ಪಟ್ಟ ನಂತರ ಭಾರತದ ವಿರುದ್ಧ ದ್ವೇಷ ಸಾಧಿಸುತ್ತಲೇ ಬಂದಿತು. 1947-48ರಲ್ಲಿ ರಾಜ ಹರಿಸಿಂಗ್‌ ಭಾರತದೊಂದಿಗೆ ಕಾಶ್ಮೀರ ವಿಲೀನ ಒಪ್ಪಂದಕ್ಕೆ ಸಹಿ ಹಾಕಿದ ನಂತರ ಇಂಡೋ ಪಾಕ್‌ ಯುದ್ಧ (Indo Pak War) ನಡೆಯಿತು. ಆ ನಂತರ 1965ರಲ್ಲಿ ಕಾಶ್ಮೀರಕ್ಕಾಗಿ ನಡೆದ ಯುದ್ಧ, 1971ರಲ್ಲಿ ಪೂರ್ವ ಪಾಕಿಸ್ತಾನ (ಇಂದಿನ ಬಾಂಗ್ಲಾದೇಶ) ವಿಮೋಚನೆಗಾಗಿ ನಡೆದ ಯುದ್ಧ, 1999 ರಲ್ಲಿ ನಡೆದ ಕಾರ್ಗಿಲ್‌ ಯುದ್ಧ ಇವೆಲ್ಲವೂ ಭಾರತ ಮತ್ತು ಪಾಕಿಸ್ತಾನ ನಡುವಿನ ಸಂಬಂಧವನ್ನ ಮತ್ತಷ್ಟು ಹದಗೆಡಿಸುತ್ತಾ ಹೋಯಿತು. ಆದ್ರೆ ಕ್ರೀಡೆಯಲ್ಲಿ ಯಾವುದೇ ಬದಲಾವಣೆ ಆಗಿರಲಿಲ್ಲ. ಕಾರ್ಗಿಲ್‌ ಯುದ್ಧದ ನಂತರವೂ ಭಾರತ ಮತ್ತು ಪಾಕ್‌ ತಂಡಗಳು ದ್ವಿಪಕ್ಷಿಯ ಸರಣಿ, ಏಕದಿನ ಹಾಗೂ ಟಿ20 ಸರಣಿಗಳಲ್ಲಿ ಮುಖಾಮುಖಿಯಾಗಿವೆ. ಭಾರತ ತಂಡವು ಸಹ ಪಾಕಿಸ್ತಾನದಲ್ಲೇ ದ್ವಿಪಕ್ಷಿಯ ಸರಣಿಗಳನ್ನಾಡಿದೆ. ಆದ್ರೆ 2008ರಲ್ಲಿ ನಡೆದ ಮುಂಬೈ ದಾಳಿ (Mumbai Attack) ಎರಡು ರಾಷ್ಟ್ರಗಳ ಮೇಲೆ ಭಾರೀ ಪರಿಣಾಮ ಬೀರಿತು.

    ಭಾರತ ತಂಡವು 2005-2006ರಲ್ಲಿ ರಾಹುಲ್ ದ್ರಾವಿಡ್ ನಾಯಕತ್ವದಲ್ಲಿ ಪಾಕಿಸ್ತಾನಕ್ಕೆ ತನ್ನ ಕೊನೆಯ ಪ್ರವಾಸ ಕೈಗೊಂಡಿತ್ತು. ಈ ಪಂದ್ಯದಲ್ಲಿ ಇತ್ತಂಡಗಳು 3 ಟೆಸ್ಟ್ ಹಾಗೂ 5 ಏಕದಿನ ಪಂದ್ಯಗಳನ್ನಾಡಿದ್ದವು. ಆದ್ರೆ 2008ರಲ್ಲಿ ನಡೆದ ಮುಂಬೈ ದಾಳಿಯ ನಂತರ ಉಭಯ ತಂಡಗಳ ನಡುವೆ ಯಾವುದೇ ದ್ವಿಪಕ್ಷೀಯ ಸರಣಿ ನಡೆದಿಲ್ಲ. ಐಸಿಸಿ ಟೂರ್ನಿ ಅಥವಾ ಏಷ್ಯಾಕಪ್ ಟೂರ್ನಿಗಳಲ್ಲಿ ಮಾತ್ರವೇ ಪರಸ್ಪರ ಮುಖಾಮುಖಿಯಾಗುತ್ತಿವೆ. ಕಳೆದ ವರ್ಷ ಪಾಕಿಸ್ತಾನ ತಂಡ ಭಾರತದಲ್ಲಿ ನಡೆದ ವಿಶ್ವಕಪ್‌ ಟೂರ್ನಿಯಲ್ಲಿ ಪಾಕ್‌ ತಂಡ ಪಾಲ್ಗೊಂಡಿತ್ತು.

  • ನಾಲ್ಕೇ ತಿಂಗಳಿಗೆ ಪಾಕ್‌ ತಂಡದ ಮುಖ್ಯ ಕೋಚ್‌ ಹುದ್ದೆಗೆ ಗ್ಯಾರಿ ಗುಡ್‌ಬೈ

    ನಾಲ್ಕೇ ತಿಂಗಳಿಗೆ ಪಾಕ್‌ ತಂಡದ ಮುಖ್ಯ ಕೋಚ್‌ ಹುದ್ದೆಗೆ ಗ್ಯಾರಿ ಗುಡ್‌ಬೈ

    – 2011ರ ವಿಶ್ವಕಪ್‌ ವೇಳೆ ಟೀಂ ಇಂಡಿಯಾ ಕೋಚ್‌ ಆಗಿದ್ದ ಗ್ಯಾರಿ ಕರ್ಸ್ಟನ್‌

    ಇಸ್ಲಾಮಾಬಾದ್‌: ಪಾಕಿಸ್ತಾನ ಕ್ರಿಕೆಟ್‌ನಲ್ಲಿ (Pakistan, Cricket) ಯಾರು ಯಾವ ಹುದ್ದೆಯಲ್ಲಿದ್ದಾರೆಂದು ಹೇಳುವುದೇ ಕಷ್ಟವಾಗುತ್ತಿದೆ. ಏಕೆಂದರೆ ಕ್ರಿಕೆಟ್‌ ತಂಡದಲ್ಲಿ ತತಕ್ಷಣದ ಬದಲಾವಣೆಗಳು ನಡೆಯುತ್ತಲೇ ಇವೆ. ಇತ್ತೀಚೆಗಷ್ಟೆ ನಾಯಕನ ಬದಲಾವಣೆಯೂ ಮಾಡಿರುವ ಪಾಕ್‌ ತಂಡ ಇದೀಗ ಮುಖ್ಯಕೋಚ್‌ ಬದಲಾವಣೆಗೂ ಮುಂದಾಗಿದೆ. 4 ತಿಂಗಳ ಹಿಂದೆಯಷ್ಟೇ ಪಾಕಿಸ್ತಾನ ಕ್ರಿಕೆಟ್‌ ತಂಡಕ್ಕೆ ವೈಟ್‌ಬಾಲ್‌ ಕ್ರಿಕೆಟ್‌ನ ಮುಖ್ಯಕೋಚ್‌ ಆಗಿ ನೇಮಕವಾಗಿದ್ದ ಗ್ಯಾರಿ ಕರ್ಸ್ಟನ್ (Gary Kirsten) ಅವರು ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ.

    ದಕ್ಷಿಣ ಆಫ್ರಿಕಾದ ಮಾಜಿ ಆಟಗಾರ ಗ್ಯಾರಿ ಕರ್ಸ್ಟನ್‌ ಅವರು ಕೋಚಿಂಗ್‌ನಲ್ಲಿ ಉತ್ತಮ ಹೆಸರು ಸಂಪಾದಿಸಿದ್ದ ಕ್ರಿಸ್ಟನ್‌ ಐಪಿಎಲ್‌ನಲ್ಲಿ ಗುಜರಾತ್‌ ಟೈಟಾನ್ಸ್‌ ತಂಡದ ಮೆಂಟರ್‌ ಆಗಿದ್ದರು. 2011ರಲ್ಲಿ ವಿಶ್ವಕಪ್‌ ಗೆದ್ದ ವೇಳೆ ಅವರು ಭಾರತ ತಂಡದ ಕೋಚ್‌ ಆಗಿದ್ದವರು. ಕಳೆದ ನಾಲ್ಕು ತಿಂಗಳ ಹಿಂದೆ ಅವರು ಪಾಕಿಸ್ತಾನದ ಏಕದಿನ ಮತ್ತು ಟಿ20 ಕ್ರಿಕೆಟ್‌ ತಂಡದ ಕೋಚ್‌ ಆಗಿ ನೇಮಕವಾಗಿದ್ದರು. ಇದನ್ನೂ ಓದಿ: ಮೊದಲ ದಿನ ಸ್ಪಿನ್ನರ್‌ಗಳ ಆಟ – ವಾಷಿಂಗ್ಟನ್‌, ಅಶ್ವಿನ್‌ ಶೈನ್‌; ಕಿವೀಸ್‌ 259ಕ್ಕೆ ಆಲೌಟ್‌

    ಗ್ಯಾರಿ ಕರ್ಸ್ಟನ್ ವೈಟ್‌ಬಾಲ್‌ ಕ್ರಿಕೆಟ್‌ನ ಮುಖ್ಯಕೋಚ್‌ ಹುದ್ದೆಗೆ ರಾಜೀನಾಮೆ ನೀಡಿದ ಬೆನ್ನಲ್ಲೇ ಮುಂಬರುವ ಆಸ್ಟ್ರೇಲಿಯಾ ಮತ್ತು ಜಿಂಬಾಬ್ವೆ ವಿರುದ್ಧದ ಸರಣಿಗೆ ಟೆಸ್ಟ್ ತಂಡದ ಕೋಚ್ ಜೇಸನ್ ಗಿಲ್ಲೆಸ್ಪಿ ಅವರನ್ನು ವೈಟ್ ಬಾಲ್ ಕೋಚ್‌ ಆಗಿ ನೇಮಕ ಮಾಡಿರುವುದಾಗಿ ಪಾಕಿಸ್ತಾನ ಕ್ರಿಕೆಟ್ ಮಂಡಳಿ (PCB) ತಿಳಿಸಿದೆ. ಈ ಸಂದೇಶವನ್ನು ತನ್ನ ಎಕ್ಸ್‌ ಖಾತೆಯಲ್ಲಿ ಹಂಚಿಕೊಂಡಿದೆ. ವೈಟ್‌ಬಾಲ್‌ ಕ್ರಿಕೆಟ್‌ಗೆ ನೂತನ ಕೋಚ್‌ ಅನ್ನು ಸೂಕ್ತ ಸಮಯದಲ್ಲಿ ನೇಮಿಸಲಾಗುವುದು. ಅಲ್ಲಿಯವರೆಗೆ ಗಿಲ್ಲೆಸ್ಪಿಯವರ ತಾತ್ಕಾಲಿಕ ಕೋಚ್‌ ಆಗಿ ಮುಂದುವರಿಯುವುದಾಗಿ ತಿಳಿಸಿದೆ.

    ಕರ್ಸ್ಟನ್‌ ಅವರು ಮುಂಬರುವ ಆಸ್ಟ್ರೇಲಿಯಾ ಮತ್ತು ಜಿಂಬಾಬ್ವೆ ವಿರುದ್ಧದ ಸರಣಿಗಳಿಗೆ ತಂಡದ ಆಯ್ಕೆ ಬಗ್ಗೆ ಪಿಸಿಬಿಯೊಂದಿಗೆ ಭಿನ್ನಾಭಿಪ್ರಾಯ ಹೊಂದಿದ್ದರು. ಕೊನೆಗೆ ಪಿಸಿಬಿ ಕಸ್ಟರ್ನ್‌ ಅವರ ಸಲಹೆಗಳನ್ನೇ ಪರಿಗಣನೆಗೆ ತೆಗೆದುಕೊಳ್ಳದೇ ತಂಡವನ್ನು ಪ್ರಕಟಿಸಿದೆ. ಇದರಿಂದ ಬೇಸರಗೊಂಡ ಕರ್ಸ್ಟನ್‌ ತಮ್ಮ ಹುದ್ದೆಗೆ ಗುಡ್‌ಬೈ ಹೇಳಿದ್ದಾರೆ ಎಂದು ಮೂಲಗಳು ತಿಳಿಸಿವೆ. ಇದನ್ನೂ ಓದಿ: ಜಾರ್ಖಂಡ್ ವಿಧಾನಸಭಾ ಚುನಾವಣೆ ರಾಯಭಾರಿಯಾಗಿ ಲೆಜೆಂಡ್ ಕ್ರಿಕೆಟಿಗ ಎಂ.ಎಸ್ ಧೋನಿ ನೇಮಕ

    2024ರ ಐಪಿಎಲ್‌ ಟೂರ್ನಿ ಬಳಿಕ ಪಾಕ್‌ ತಂಡದ ವೈಟ್‌ಬಾಲ್‌ ಕ್ರಿಕೆಟ್‌ ಮುಖ್ಯಕೋಚ್‌ ಆಗಿ ನೇಮಕಗೊಂಡು, 2024ರ ಟಿ20 ವಿಶ್ವಕಪ್‌ ಟೂರ್ನಿಯಿಂದ ತಮ್ಮ ವೃತ್ತಿ ಆರಂಭಿಸಿದ್ದರು. ಅಲ್ಲದೇ 2025ಕ್ಕೆ ಪಾಕಿಸ್ತಾನದಲ್ಲಿ ನಡೆಯಲಿರುವ ಚಾಂಪಿಯನ್ಸ್‌ ಟ್ರೋಫಿ, 2025ರ ಐಸಿಸಿ ಟಿ20 ಏಷ್ಯಾಕಪ್‌, 2026ರ ಐಸಿಸಿ ಪುರುಷರ ಟಿ20 ವಿಶ್ವಕಪ್‌ ಟೂರ್ನಿಗಳಿಗೆ ಪಾಕ್‌ ತಂಡದ ಮುಖ್ಯಕೋಚ್‌ ಆಗಿ ಗ್ಯಾರಿ ಕೆಲಸ ಮಾಡಲಿದ್ದಾರೆ ಎಂದು ಪಿಸಿಬಿ ಹೇಳಿತ್ತು. ಆದ್ರೆ ಕೋಚ್‌ ಆಗಿ ನೇಮಕಗೊಂಡ ನಾಲ್ಕೇ ತಿಂಗಳಿಗೆ ಕೋಚ್‌ಹುದ್ದೆಗೆ ಗುಡ್‌ಬೈ ಹೇಳಿದ್ದಾರೆ.

    ಗ್ಯಾರಿ ಕೋಚ್‌ ಆಗಿ ನಿರ್ವಹಿಸಿದ ಮೊದಲ ಟಿ20 ವಿಶ್ವಕಪ್‌ ಆವೃತ್ತಿಯಲ್ಲೇ ಪಾಕ್‌ ಹೀನಾಯ ಸೋಲಿಗೆ ತುತ್ತಾಯಿತು. ಆ ಆವೃತ್ತಿಯಲ್ಲಿ ಪಾಕ್‌ ಲೀಗ್‌ಸುತ್ತಿನಲ್ಲೇ ಹೊರಬಿದ್ದಿತು. ಇದನ್ನೂ ಓದಿ: 2025ರ ಐಪಿಎಲ್‌ನಲ್ಲೂ ಮಹಿ ಆಡೋದು ಫಿಕ್ಸ್‌ – ಅ.31ಕ್ಕೆ ರಿಟೇನ್‌ ಆಟಗಾರರ ಭವಿಷ್ಯ!

  • ನಂಬಿಕೆ ಇಲ್ಲದಿದ್ರೆ ಪ್ರತಿ ಪಂದ್ಯ ಮುಗಿದ ಬಳಿಕ ಭಾರತಕ್ಕೆ ಮರಳಬಹುದು: ಬಿಸಿಸಿಐಗೆ ಪಾಕ್‌ ಹೊಸ ಆಫರ್‌

    ನಂಬಿಕೆ ಇಲ್ಲದಿದ್ರೆ ಪ್ರತಿ ಪಂದ್ಯ ಮುಗಿದ ಬಳಿಕ ಭಾರತಕ್ಕೆ ಮರಳಬಹುದು: ಬಿಸಿಸಿಐಗೆ ಪಾಕ್‌ ಹೊಸ ಆಫರ್‌

    ನವದೆಹಲಿ: 2025ರ ಐಸಿಸಿ ಚಾಂಪಿಯನ್ಸ್‌ ಟ್ರೋಫಿ (Champions Trophy 2025) ಟೂರ್ನಿಗಾಗಿ ಭಾರತ ಕ್ರಿಕೆಟ್‌ ತಂಡವು ಪಾಕಿಸ್ತಾನಕ್ಕೆ ಬರುವುದಿಲ್ಲ ಎಂದು ಈಗಾಗಲೇ ಬಿಸಿಸಿಐ ಸ್ಪಷ್ಟಪಡಿಸಿದ್ದರೂ ಪಾಕಿಸ್ತಾನ ಕ್ರಿಕೆಟ್‌ ಮಂಡಳಿ ಮಾತ್ರ ಪದೇ ಪದೇ ಒತ್ತಾಯ ಮಾಡುತ್ತಲೇ ಇದೆ. ಈ ಬಾರಿ ಐಸಿಸಿ ಚಾಂಪಿಯನ್ಸ್‌ ಟ್ರೋಫಿಯನ್ನು ತನ್ನ ನೆಲದಲ್ಲೇ ನಡೆಸಲು ಶತಾಯಗತಾಯ ಪ್ರಯತ್ನ ನಡೆಸುತ್ತಿರುವ ಪಾಕಿಸ್ತಾನ ಕ್ರಿಕೆಟ್‌ ಮಂಡಳಿ (PCB), ಬಿಸಿಸಿಐ ಮುಂದೆ ಹೊಸ ಪ್ರಸ್ತಾಪ ಇಟ್ಟಿದೆ.

    ಚಾಂಪಿಯನ್ಸ್‌ ಟ್ರೋಫಿ ವೇಳೆ ಭಾರತ ತಂಡಕ್ಕೆ (Team India) ಪಾಕಿಸ್ತಾನ ಸಂಪೂರ್ಣ ಭದ್ರತೆ ಒದಗಿಸಲಿದೆ. ಭಾರತ ತಂಡಕ್ಕೆ ಸುಲಭವಾಗಲೆಂದೇ ತಂಡದ ಎಲ್ಲಾ ಪಂದ್ಯಗಳನ್ನು ಲಾಹೋರ್‌ನಲ್ಲಿ ನಿಗದಿಪಡಿಸಲಾಗಿದೆ. ಭಾರತೀಯ ಅಭಿಮಾನಿಗಳಿಗೂ ಇದು ಅನುಕೂಲವಾಗಲಿದೆ. ಭಾರತ ತಂಡದ ಗುಂಪು ಹಂತದ ಪಂದ್ಯಗಳಿಗೆ ಅಂತರ ಇರುವುದರಿಂದ ಪ್ರತಿ ಪಂದ್ಯ ಮುಗಿದ ಬಳಿಕ ಸ್ವದೇಶಕ್ಕೆ ಮರಳಬಹುದು ಎಂದು ಬಿಸಿಸಿಐಗೆ (BCCI) ಪಾಕಿಸ್ತಾನ ಕ್ರಿಕೆಟ್‌ ಮಂಡಳಿ ಪತ್ರ ಬರೆದಿದೆ. ಇದನ್ನೂ ಓದಿ: ಟೀಕೆಗಳಿಗೆ ತಕ್ಕ ಉತ್ತರ – 1,338 ದಿನಗಳ ಬಳಿಕ ತವರಿನಲ್ಲಿ ಟೆಸ್ಟ್‌ ಪಂದ್ಯ ಗೆದ್ದ ಪಾಕ್‌

    ಭಾರತದ ಪಂದ್ಯಗಳು ಲಾಹೋರ್‌ನಲ್ಲಿ ಆಯೋಜಿಸಲಾಗಿದ್ದು, ಪಂಜಾಬ್‌ನ ಚಂಡೀಗಢ ಇದಕ್ಕೆ ಹತ್ತಿರದಲ್ಲಿದೆ. ಒಂದು ವೇಳೆ ಪಾಕಿಸ್ತಾನದಲ್ಲಿ ಉಳಿಯಲು ಇಚ್ಛಿಸದಿದ್ದರೆ, ಭದ್ರತೆ ಕೊರತೆ ಅನ್ನಿಸಿದರೆ, ಪ್ರತಿ ಪಂದ್ಯ ಮುಗಿದ ಬಳಿಕ ಚಂಡೀಗಢ ಅಥವಾ ದೆಹಲಿಗೆ ಟೀಂ ಇಂಡಿಯಾ ವಾಪಸ್‌ ಬರಬಹುದು ಎಂದು ಪತ್ರದಲ್ಲಿ ತಿಳಿಸಿದೆ ಎಂದು ವರದಿಗಳು ಹೇಳಿವೆ. ಇದನ್ನೂ ಓದಿ: ಜಿಯೋದಲ್ಲಿ ಐಪಿಎಲ್‌ ಬರಲ್ಲ, ಇನ್ನು ಮುಂದೆ ಹಾಟ್‌ಸ್ಟಾರ್‌ನಲ್ಲಿ ನೇರಪ್ರಸಾರ!

    ಭಾರತ ಸರ್ಕಾರ ಭದ್ರತಾ ಕಾರಣಗಳಿಗಾಗಿ ತಂಡವನ್ನು ಕಳುಹಿಸಲು ಅನುಮತಿ ನಿರಾಕರಿಸಿದ್ದರೆ, ಬಿಸಿಸಿಐ (BCCI) ಲಿಖಿತ ರೂಪದಲ್ಲಿ ಬರೆದುಕೊಡಬೇಕು ಎಂದು ಪಟ್ಟು ಹಿಡಿದಿದ್ದ ಪಾಕ್‌ ಇದೀಗ ಹೊಸ ಪ್ರಸ್ತಾಪವನ್ನ ಬಿಸಿಸಿಐ ಮುಂದಿಟ್ಟಿದೆ. ಅಲ್ಲದೇ ಇತ್ತೀಚೆಗೆ ಭಾರತದ ವಿದೇಶಾಂಗ ಸಚಿವ ಎಸ್‌.ಜೈಶಂಕರ್‌ ಅವರು ಪಾಕಿಸ್ತಾನಕ್ಕೆ ಭೇಟಿ ನೀಡಿದ್ದ ವೇಳೆ, ಭಾರತ ತಂಡವನ್ನು ಪಾಕಿಸ್ತಾನಕ್ಕೆ ಕಳುಹಿಸಿಕೊಡುವಂತೆ ಅಲ್ಲಿನ ಸರ್ಕಾರ ಹಾಗೂ ಪಿಸಿಬಿ ಮನವಿ ಸಹ ಸಲ್ಲಿಸಿದೆ ಎಂದು ಹೇಳಲಾಗಿದೆ.

    ಭಾರತದ ಪಂದ್ಯಗಳು ಹೇಗಿವೆ?
    ಚಾಂಪಿಯನ್ಸ್‌ ಟ್ರೋಫಿಯಲ್ಲಿ ಭಾರತ ಮೂರು ಗುಂಪು ಹಂತದ ಪಂದ್ಯಗಳನ್ನಾಡಲಿದೆ. ಸದ್ಯದ ವೇಳಾಪಟ್ಟಿಯ ಪ್ರಕಾರ ಫೆಬ್ರವರಿ 20 ರಂದು ಬಾಂಗ್ಲಾದೇಶದ ವಿರುದ್ಧ, ಫೆಬ್ರವರಿ 23 ರಂದು ಪಾಕಿಸ್ತಾನದ ವಿರುದ್ಧ, ಮಾರ್ಚ್ 2 ಎಂದು ನ್ಯೂಜಿಲೆಂಡ್ ವಿರುದ್ಧ ನಿಗದಿಯಾಗಿದೆ. ಈ ನಡುವೆ ಭಾರತ ಮತ್ತು ಕಿವೀಸ್‌ ನಡುವಿನ ಪಂದ್ಯವನ್ನು ಲಾಹೋರ್‌ನಿಂದ ರಾವಲ್ಪಿಂಡಿಗೆ ವರ್ಗಾಯಿಸುವ ಚರ್ಚೆಗಳೂ ನಡೆದಿವೆ.

    ಭಾರತ ಪಾಕ್‌ ತಂಡ ಪ್ರವೇಶಿಸುವ ಯಾವುದೇ ಸಾಧ್ಯತೆಗಳೂ ಇಲ್ಲದ ಕಾರಣ ಭಾರತದ ಲೀಗ್‌ ಪಂದ್ಯಗಳನ್ನ ಪಾಕ್‌ನಿಂದ ಹೊರಗೆ ನಡೆಸಬೇಕಾಗುತ್ತದೆ. ಒಂದು ವೇಳೆ ಭಾರತ ಫೈನಲ್‌ ತಲುಪಿದರೆ ದುಬೈನಲ್ಲಿ ನಡೆಯಲಿದೆ, ಅದರ ಖರ್ಚು ವೆಚ್ಚವನ್ನೂ ಐಸಿಸಿ ಬರಿಸಲಿದೆ ಎಂದು ಹೇಳಿದೆ.

  • ಭದ್ರತಾ ಕಾರಣಕ್ಕಾಗಿ ಭಾರತ ಸರ್ಕಾರ ಅನುಮತಿ ನಿರಾಕರಿಸಿದ್ರೆ ಬಿಸಿಸಿಐ ಬರೆದುಕೊಡಲಿ – ಪಾಕ್‌ ಪಟ್ಟು!

    ಭದ್ರತಾ ಕಾರಣಕ್ಕಾಗಿ ಭಾರತ ಸರ್ಕಾರ ಅನುಮತಿ ನಿರಾಕರಿಸಿದ್ರೆ ಬಿಸಿಸಿಐ ಬರೆದುಕೊಡಲಿ – ಪಾಕ್‌ ಪಟ್ಟು!

    ಇಸ್ಲಾಮಾಬಾದ್‌: 2025ರ ಐಸಿಸಿ ಚಾಂಪಿಯನ್ಸ್‌ ಟ್ರೋಫಿ (Champions Trophy 2025) ಟೂರ್ನಿಗಾಗಿ ಭಾರತ ಕ್ರಿಕೆಟ್‌ ತಂಡವು ಪಾಕಿಸ್ತಾನಕ್ಕೆ ಬರುವುದಿಲ್ಲ ಎಂದು ಹೇಳಿದೆ. ಭಾರತ ಸರ್ಕಾರ ಭದ್ರತಾ ಕಾರಣಗಳಿಗಾಗಿ ಭಾರತ ತಂಡವನ್ನು ಕಳುಹಿಸಲು ಅನುಮತಿ ನಿರಾಕರಿಸಿದ್ದರೆ. ಬಿಸಿಸಿಐ (BCCI) ಲಿಖಿತ ರೂಪದಲ್ಲಿ ಬರೆದುಕೊಡಬೇಕು ಎಂದು ಪಾಕಿಸ್ತಾನ ಕ್ರಿಕೆಟ್‌ ಮಂಡಳಿ (PCB) ಒತ್ತಾಯಿಸಿದೆ.

    ಭಾರತ ಕ್ರಿಕೆಟ್‌ ತಂಡ ಪಾಕಿಸ್ತಾನಕ್ಕೆ ಪ್ರಯಾಣಿಸಲು ಭಾರತ ಸರ್ಕಾರ ಅನುಮತಿ ನಿರಾಕರಿಸಿದರೆ, ಅದನ್ನು ಲಿಖಿತ ರೂಪದಲ್ಲಿ ಬರೆದುಕೊಡಬೇಕು. ಜೊತೆಗೆ ಆ ಪತ್ರವನ್ನು ಅಂತಾರಾಷ್ಟ್ರೀಯ ಕ್ರಿಕೆಟ್‌ ಮಂಡಳಿಗೆ (ಐಸಿಸಿ) ಸಲ್ಲಿಸಬೇಕು. ಈಗಾಗಲೇ ಕರಡು ವೇಳಾಪಟ್ಟಿ ಸಿದ್ಧಗೊಂಡಿರುವುದರಿಂದ ಟೂರ್ನಿ ಪ್ರಾರಂಭವಾಗುವ 5-6 ತಿಂಗಳಿಗೆ ಮುಂಚಿತವಾಗಿಯೇ ಐಸಿಸಿಗೆ ತಿಳಿಸಬೇಕು ಪಾಕಿಸ್ತಾನ ಕ್ರಿಕೆಟ್‌ ಮಂಡಳಿ ಹೇಳಿದೆ. ಇದನ್ನೂ ಓದಿ: ಮುಂಬೈನಲ್ಲಿ ದೇಶದ 2ನೇ ಅತಿದೊಡ್ಡ ಕ್ರಿಕೆಟ್‌ ಸ್ಟೇಡಿಯಂ ನಿರ್ಮಿಸಲು ಪ್ಲ್ಯಾನ್‌!

    2025ರ ಫೆಬ್ರವರಿ 19ರಿಂದ ಮಾರ್ಚ್‌ 9ರ ವರೆಗೆ ನಡೆಯಲಿರುವ ಐಸಿಸಿ ಚಾಂಪಿಯನ್ಸ್ ಟ್ರೋಫಿ (Champions Trophy) ಪಾಕ್‌ ಆತಿಥ್ಯದಲ್ಲಿ ನಡೆಯಲಿದೆ. ಫೈನಲ್‌ ಪಂದ್ಯಕ್ಕೆ ಮಳೆ ಅಡ್ಡಿಯಾದ್ರೆ ಮಾರ್ಚ್‌ 10 ರಂದು ಮೀಸಲು ದಿನ ಇರಲಿದೆ. ಪಾಕಿಸ್ತಾನದ (Pakistan) ಕರಾಚಿ, ಲಾಹೋರ್, ಮುಲ್ತಾನ್ ಮತ್ತು ರಾವಲ್ಪಿಂಡಿ ಕ್ರೀಡಾಂಗಣಗಳು ಆತಿಥ್ಯ ವಹಿಸಲಿವೆ. ಇದನ್ನೂ ಓದಿ: IPL ಟ್ರೋಫಿ ತಂದುಕೊಡದಿದ್ದಕ್ಕೆ ತಲೆದಂಡ – ಡೆಲ್ಲಿ ಕ್ಯಾಪಿಟಲ್ಸ್ ಕೋಚ್ ಹುದ್ದೆಯಿಂದ ರಿಕಿ ಪಾಂಟಿಂಗ್​ಗೆ ಕೊಕ್​!

    ಈಗಾಗಲೇ ಪಿಸಿಬಿ ತನ್ನ ಕರಡು ವೇಳಾಪಟ್ಟಿಯನ್ನ ಐಸಿಸಿಗೆ ಸಲ್ಲಿಸಿದೆ. ಸಂಭವನೀಯ ಸೆಮಿಫೈನಲ್ ಮತ್ತು ಫೈನಲ್ ಪಂದ್ಯ ಸೇರಿದಂತೆ ಭಾರತದ ಎಲ್ಲಾ ಪಂದ್ಯಗಳನ್ನು ಲಾಹೋರ್‌ನಲ್ಲಿ ನಿಗದಿಪಡಿಸಲಾಗಿದೆ. ಪಾಕಿಸ್ತಾನದ ಹೊರಗೆ ಕೆಲವು ಪಂದ್ಯಗಳನ್ನು ಆಡುವ ಅಗತ್ಯವಿದ್ದಲ್ಲಿ ಐಸಿಸಿ ಮ್ಯಾನೇಜ್‌ಮೆಂಟ್ ಹೆಚ್ಚುವರಿ ವೆಚ್ಚವನ್ನು ಶಿಫಾರಸು ಮಾಡಲಿದೆ ಎಂದು ಉನ್ನತ ಮೂಲಗಳಿಂದ ತಿಳಿದುಬಂದಿದೆ. ಇದನ್ನೂ ಓದಿ: Paris Olympics | ಜಿಯೋ ಸಿನಿಮಾದಲ್ಲಿ ಉಚಿತವಾಗಿ ವೀಕ್ಷಿಸಿ

  • Champions Trophy 2025: ಭಾರತ ಕ್ರಿಕೆಟ್‌ ತಂಡವು ಪಾಕ್‌ಗೆ ಹೋಗಲ್ಲ – ಬಿಸಿಸಿಐ ಖಡಕ್‌ ನಿರ್ಧಾರ!

    Champions Trophy 2025: ಭಾರತ ಕ್ರಿಕೆಟ್‌ ತಂಡವು ಪಾಕ್‌ಗೆ ಹೋಗಲ್ಲ – ಬಿಸಿಸಿಐ ಖಡಕ್‌ ನಿರ್ಧಾರ!

    ಮುಂಬೈ: 2025ರ ಐಸಿಸಿ ಚಾಂಪಿಯನ್ಸ್‌ ಟ್ರೋಫಿ (Champions Trophy 2025) ಟೂರ್ನಿಗಾಗಿ ಭಾರತ ಕ್ರಿಕೆಟ್‌ ತಂಡವು ಪಾಕಿಸ್ತಾನಕ್ಕೆ ಪ್ರಯಾಣಿಸುವುದಿಲ್ಲ ಎಂದು ಬಿಸಿಸಿಐ ಮೂಲಗಳು ಖಚಿತಪಡಿಸಿವೆ. ಭಾರತದ ಪಂದ್ಯಗಳನ್ನು ಶ್ರೀಲಂಕಾ ಅಥವಾ ದುಬೈನಲ್ಲಿ ನಡೆಸುವಂತೆ ಅಂತಾರಾಷ್ಟ್ರೀಯ ಕ್ರಿಕೆಟ್‌ ಮಂಡಳಿಗೆ ಕೇಳಿದೆ ಎಂದು ಬಿಸಿಸಿಐ (BCCI) ಮೂಲಗಳು ತಿಳಿಸಿವೆ.

    2025ರ ಫೆಬ್ರವರಿ 19ರಿಂದ ಮಾರ್ಚ್‌ 9ರ ವರೆಗೆ ನಡೆಯಲಿರುವ ಐಸಿಸಿ ಚಾಂಪಿಯನ್ಸ್ ಟ್ರೋಫಿ (Champions Trophy) ಪಾಕ್‌ ಆತಿಥ್ಯದಲ್ಲಿ ನಡೆಯಲಿದೆ. ಫೈನಲ್‌ ಪಂದ್ಯಕ್ಕೆ ಮಳೆ ಅಡ್ಡಿಯಾದ್ರೆ ಮಾರ್ಚ್‌ 10 ರಂದು ಮೀಸಲು ದಿನ ಇರಲಿದೆ. ಪಾಕಿಸ್ತಾನದ (Pakistan) ಕರಾಚಿ, ಲಾಹೋರ್, ಮುಲ್ತಾನ್ ಮತ್ತು ರಾವಲ್ಪಿಂಡಿ ಕ್ರೀಡಾಂಗಣಗಳು ಆತಿಥ್ಯ ವಹಿಸಲಿವೆ. ಸದ್ಯ ಭಾರತ ಮತ್ತು ಪಾಕ್‌ ನಡುವಿನ ಪಂದ್ಯ ಲಾಹೋರ್‌ನಲ್ಲಿ ನಿಗದಿಯಾಗಿದೆ. ಆದ್ರೆ ಪಾಕಿಸ್ತಾನಕ್ಕೆ ತೆರಳಲು ಬಿಸಿಸಿಐ ಹಿಂದೇಟು ಹಾಕಿದೆ. ಇದನ್ನೂ ಓದಿ: 2.5 ಕೋಟಿ ನಗದು ಬಹುಮಾನ ನಿರಾಕರಿಸಿದ ದ್ರಾವಿಡ್‌ – ಕನ್ನಡಿಗನ ನಡೆಗೆ ವ್ಯಾಪಕ ಮೆಚ್ಚುಗೆ!

    ತನ್ನ ಎಲ್ಲಾ ಪಂದ್ಯಗಳನ್ನು ಒಂದೇ ನಗರದಲ್ಲಿ ಆಡುವಂತೆ ಪಾಕಿಸ್ತಾನ ಕ್ರಿಕೆಟ್‌ ಮಂಡಳಿ ಭಾರತಕ್ಕೆ ಪ್ರಸ್ತಾವನೆ ಸಲ್ಲಿಸಿತ್ತು. ಅದಕ್ಕಾಗಿ ಭಾರತದ ಎಲ್ಲಾ ಪಂದ್ಯಗಳನ್ನು ಲಾಹೋರ್‌ ಮೈದಾನದಲ್ಲೇ ನಿಗದಿಪಡಿಸಲಾಗಿತ್ತು. ಆದ್ರೆ ಭಾರತ ಪಾಕಿಸ್ತಾನಕ್ಕೆ ಪ್ರಯಾಣಿಸುವುದಿಲ್ಲ. ದುಬೈ ಅಥವಾ ಶ್ರೀಲಂಕಾದಲ್ಲಿ ತನ್ನ ಪಂದ್ಯಗಳನ್ನು ಆಯೋಜಿಸುವಂತೆ ಐಸಿಸಿಗೆ ಕೇಳಿಕೊಂಡಿದೆ ಎಂದು ಬಿಸಿಸಿಐ ಖಚಿತಪಡಿಸಿದೆ. ಕಳೆದ ಮೇ ತಿಂಗಳಲ್ಲಿ ಬಿಸಿಸಿಐ ಉಪಾಧ್ಯಕ್ಷ ರಾಜೀವ್‌ ಶುಕ್ಲಾ, ಕೇಂದ್ರ ಸರ್ಕಾರ ಅನುಮತಿ ನೀಡಿದರೆ ಭಾರತ ತಂಡ ಪಾಕಿಸ್ತಾನಕ್ಕೆ ತೆರಳಲಿದೆ ಎಂದು ಹೇಳಿದ್ದರು. ಇದೀಗ ಪಾಕ್‌ಗೆ ತೆರಳುವುದಿಲ್ಲ ಎಂದು ಬಿಸಿಸಿಐ ಖಚಿತಪಡಿಸಿದೆ.

    ಹೈಬ್ರಿಡ್‌ ಮಾದರಿಯಲ್ಲಿ ಆಯೋಜನೆಯಾಗುತ್ತಾ?
    ಕಳೆದ ವರ್ಷ ಏಕದಿನ ಏಷ್ಯಾಕಪ್‌ ಟೂರ್ನಿಯನ್ನಾಡಲು ಭಾರತ ತಂಡವನ್ನು ಪಾಕ್‌ಗೆ ಕಳುಹಿಸಲು ಬಿಸಿಸಿಐ ನಿರಾಕರಿಸಿದ ನಂತರ ACC (ಏಷ್ಯನ್‌ ಕ್ರಿಕೆಟ್‌ ಸಮಿತಿ) ಹೈಬ್ರಿಡ್‌ ಮಾದರಿಯಲ್ಲಿ ಆಡಿಸಲು ನಿರ್ಧರಿಸಿತು. ಏಷ್ಯಾಕಪ್‌ ಟೂರ್ನಿಯ ಹಕ್ಕು ಪಾಕಿಸ್ತಾನದ ಬಳಿಯಿದ್ದರೂ ಪಾಕ್‌ನಲ್ಲಿ ಕೇವಲ 4 ಪಂದ್ಯಗಳನ್ನಾಡಲು ಮಾತ್ರವೇ ಅನುಮತಿ ನೀಡಿತು. ಉಳಿದ 9 ಪಂದ್ಯಗಳನ್ನ ಶ್ರೀಲಂಕಾದಲ್ಲಿ ಆಡಿಸಲು ನಿರ್ಧರಿಸಿತು. ಈ ಬಾರಿಯೂ ಅದೇ ರೀತಿ ಹೈಬ್ರಿಡ್‌ ಮಾದರಿಯಲ್ಲಿ ಪಂದ್ಯಗಳನ್ನು ಆಯೋಜಿಸಲಾಗುತ್ತದೆಯೇ ಎಂಬುದನ್ನು ಕಾದು ನೋಡಬೇಕಿದೆ. ಇದನ್ನೂ ಓದಿ: ಗಿಲ್‌, ಗಾಯಕ್‌ವಾಡ್‌ ಸ್ಫೋಟಕ ಆಟ – ಟೀಂ ಇಂಡಿಯಾಗೆ 23 ರನ್‌ಗಳ ಜಯ

    ಪಾಕ್‌ಗೆ ಪ್ರಯಾಣಿಸಲು ಭಾರತ ಹಿಂದೇಟು ಏಕೆ?
    ಪಾಕಿಸ್ತಾನ ಮುಸ್ಲಿಂ ರಾಷ್ಟ್ರವಾಗಿ ಬೇರ್ಪಟ್ಟ ನಂತರ ಭಾರತದ ವಿರುದ್ಧ ದ್ವೇಷ ಸಾಧಿಸುತ್ತಲೇ ಬಂದಿತು. 1947-48ರಲ್ಲಿ ರಾಜ ಹರಿಸಿಂಗ್‌ ಭಾರತದೊಂದಿಗೆ ಕಾಶ್ಮೀರ ವಿಲೀನ ಒಪ್ಪಂದಕ್ಕೆ ಸಹಿ ಹಾಕಿದ ನಂತರ ಇಂಡೋ ಪಾಕ್‌ ಯುದ್ಧ (Indo Pak War) ನಡೆಯಿತು. ಆ ನಂತರ 1965ರಲ್ಲಿ ಕಾಶ್ಮೀರಕ್ಕಾಗಿ ನಡೆದ ಯುದ್ಧ, 1971ರಲ್ಲಿ ಪೂರ್ವ ಪಾಕಿಸ್ತಾನ (ಇಂದಿನ ಬಾಂಗ್ಲಾದೇಶ) ವಿಮೋಚನೆಗಾಗಿ ನಡೆದ ಯುದ್ಧ, 1999 ರಲ್ಲಿ ನಡೆದ ಕಾರ್ಗಿಲ್‌ ಯುದ್ಧ ಇವೆಲ್ಲವೂ ಭಾರತ ಮತ್ತು ಪಾಕಿಸ್ತಾನ ನಡುವಿನ ಸಂಬಂಧವನ್ನ ಮತ್ತಷ್ಟು ಹದಗೆಡಿಸುತ್ತಾ ಹೋಯಿತು. ಆದ್ರೆ ಕ್ರೀಡೆಯಲ್ಲಿ ಯಾವುದೇ ಬದಲಾವಣೆ ಆಗಿರಲಿಲ್ಲ. ಕಾರ್ಗಿಲ್‌ ಯುದ್ಧದ ನಂತರವೂ ಭಾರತ ಮತ್ತು ಪಾಕ್‌ ತಂಡಗಳು ದ್ವಿಪಕ್ಷಿಯ ಸರಣಿ, ಏಕದಿನ ಹಾಗೂ ಟಿ20 ಸರಣಿಗಳಲ್ಲಿ ಮುಖಾಮುಖಿಯಾಗಿವೆ. ಭಾರತ ತಂಡವು ಸಹ ಪಾಕಿಸ್ತಾನದಲ್ಲೇ ದ್ವಿಪಕ್ಷಿಯ ಸರಣಿಗಳನ್ನಾಡಿದೆ. ಆದ್ರೆ 2008ರಲ್ಲಿ ನಡೆದ ಮುಂಬೈ ದಾಳಿ (Mumbai Attack) ಎರಡು ರಾಷ್ಟ್ರಗಳ ಮೇಲೆ ಭಾರೀ ಪರಿಣಾಮ ಬೀರಿತು.

    ಭಾರತ ತಂಡವು 2005-2006ರಲ್ಲಿ ರಾಹುಲ್ ದ್ರಾವಿಡ್ ನಾಯಕತ್ವದಲ್ಲಿ ಪಾಕಿಸ್ತಾನಕ್ಕೆ ತನ್ನ ಕೊನೆಯ ಪ್ರವಾಸ ಕೈಗೊಂಡಿತ್ತು. ಈ ಪಂದ್ಯದಲ್ಲಿ ಇತ್ತಂಡಗಳು 3 ಟೆಸ್ಟ್ ಹಾಗೂ 5 ಏಕದಿನ ಪಂದ್ಯಗಳನ್ನಾಡಿದ್ದವು. ಆದ್ರೆ 2008ರಲ್ಲಿ ನಡೆದ ಮುಂಬೈ ದಾಳಿಯ ನಂತರ ಉಭಯ ತಂಡಗಳ ನಡುವೆ ಯಾವುದೇ ದ್ವಿಪಕ್ಷೀಯ ಸರಣಿ ನಡೆದಿಲ್ಲ. ಐಸಿಸಿ ಟೂರ್ನಿ ಅಥವಾ ಏಷ್ಯಾಕಪ್ ಟೂರ್ನಿಗಳಲ್ಲಿ ಮಾತ್ರವೇ ಪರಸ್ಪರ ಮುಖಾಮುಖಿಯಾಗುತ್ತಿವೆ. ಕಳೆದ ವರ್ಷ ಪಾಕಿಸ್ತಾನ ತಂಡ ಭಾರತದಲ್ಲಿ ನಡೆದ ವಿಶ್ವಕಪ್‌ ಟೂರ್ನಿಯಲ್ಲಿ ಪಾಕ್‌ ತಂಡ ಪಾಲ್ಗೊಂಡಿತ್ತು. ಇದನ್ನೂ ಓದಿ: ವಿಶ್ವ ಚಾಂಪಿಯನ್ಸ್‌ಗೆ 125 ಕೋಟಿ ರೂ. ಬಹುಮಾನ – ರೋಹಿತ್‌, ಕೊಹ್ಲಿ, ದ್ರಾವಿಡ್‌ಗೆ ಸಿಕ್ಕಿದ್ದೆಷ್ಟು?