Tag: PCB

  • ಪಿಸಿಬಿಗೆ ಪಾಕಿಸ್ತಾನ ವಿಶ್ವಕಪ್ ಗೆಲ್ಲುವುದು ಬೇಕಿಲ್ಲ: ಪಾಕ್ ಆಟಗಾರನ ಆರೋಪ

    ಪಿಸಿಬಿಗೆ ಪಾಕಿಸ್ತಾನ ವಿಶ್ವಕಪ್ ಗೆಲ್ಲುವುದು ಬೇಕಿಲ್ಲ: ಪಾಕ್ ಆಟಗಾರನ ಆರೋಪ

    ನವದೆಹಲಿ: ವಿಶ್ವಕಪ್‍ನಲ್ಲಿ (ICC World Cup 2023) ಪಾಕ್ ತಂಡ ವಿಫಲವಾಗಬೇಕೆಂಬುದು ಪಿಸಿಬಿ (PCB) ಉದ್ದೇಶವಾಗಿದೆ ಎಂದು ಪಾಕಿಸ್ತಾನ (Pakistan) ತಂಡದ ಹಿರಿಯ ಆಟಗಾರರೊಬ್ಬರು ಹೊಸ ಬಾಂಬ್ ಸಿಡಿಸಿದ್ದಾರೆ.

    ತಂಡವು ವಿಫಲವಾಗಬೇಕೆಂದು ಪಿಸಿಬಿ ಬಯಸುತ್ತಿದೆ. ತಂಡದಲ್ಲಿ ಬದಲಾವಣೆಗಳನ್ನು ಮಾಡುವ ನಿರೀಕ್ಷೆಯಲ್ಲಿ ಪಿಸಿಬಿ ಇದೆ. ಹೀಗಾಗಿಯೇ ನಾವು ವಿಶ್ವಕಪ್ ಕಪ್ ಗೆಲ್ಲುವುದನ್ನು ಪಿಸಿಬಿ ಬಯಸುವುದಿಲ್ಲ ಎಂದು ಹೆಸರನ್ನು ಬಹಿರಂಗ ಪಡಿಸದಂತೆ ಸೂಚಿಸಿ ಪಾಕ್ ಆಟಗಾರರೊಬ್ಬರು ಈ ಆರೋಪ ಮಾಡಿದ್ದಾರೆ. ಇದನ್ನೂ ಓದಿ: ಪಾಕ್‌ ತಂಡಕ್ಕೆ ಇನ್ಮುಂದೆ ಬಿರಿಯಾನಿ ಬಂದ್‌ – ಆನ್‌ಲೈನ್‌ನಲ್ಲಿ ಬುಕ್‌ ಮಾಡಿ ಸಿಕ್ಕಿಬಿದ್ದ ಆಟಗಾರರು

    ಕ್ರೀಡಾ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿರುವ ಅವರು, ಪಿಸಿಬಿ ಎಲ್ಲಾ ಆಟಗಾರರನ್ನೂ ದೂಷಿಸುತ್ತಿದೆ. ನಮ್ಮ ಆಟಗಾರರು ನಿಜವಾಗಿಯೂ ತಮ್ಮ ಪ್ರಯತ್ನವನ್ನು ಮಾಡಿದ್ದಾರೆ. ಕೋಚಿಂಗ್ ಸಿಬ್ಬಂದಿ ಹಾಗೂ ಆಟಗಾರರ ಶ್ರಮ ಬಹಳಷ್ಟಿದೆ ಎಂದಿದ್ದಾರೆ.

    ಕಳೆದ ಐದು ತಿಂಗಳಿನಿಂದ ಪಾಕಿಸ್ತಾನ ಆಟಗಾರರಿಗೆ ವೇತನವೇ ಬಿಡುಗಡೆಯಾಗಿಲ್ಲ. ಈ ಬಗ್ಗೆ ನಾಯಕ ಫೋನ್ ಮಾಡಿದರೆ ಪಿಸಿಬಿ ಅಧ್ಯಕ್ಷ ಝಾಖಾ ಆಶ್ರಫ್ ಕರೆ ಸ್ವೀಕರಿಸುತ್ತಿಲ್ಲ. ಈ ವಿಚಾರ ಸುದ್ದಿಯಾಗುತ್ತಿದ್ದಂತೆ ಅ.30 ರಂದು ಮುಖ್ಯ ಆಯ್ಕೆಗಾರ ಸ್ಥಾನಕ್ಕೆ ಇಂಜಿಮಾಮ್ ಉಲ್ ಹಕ್ ರಾಜೀನಾಮೆ ನೀಡಿದ್ದಾರೆ. ಇಂಜಿಮಾಮ್ ಅವರ ವಿರುದ್ಧ ಕೆಲವು ಆರೋಪಗಳು ಕೇಳಿಬಂದಿದ್ದು ಈ ಬಗ್ಗೆ ಪಿಸಿಬಿ ತನಿಖೆಗೆ ಮುಂದಾಗಿದೆ ಎಂದಿದ್ದಾರೆ.

    ನೆದರ್ಲೆಂಡ್ಸ್ ಮತ್ತು ಶ್ರೀಲಂಕಾ ವಿರುದ್ಧ ಗೆಲುವು ಕಂಡಿದ್ದ ಪಾಕಿಸ್ತಾನ ಆ ನಂತರ 4 ಪಂದ್ಯಗಳಲ್ಲಿ ಸೋಲು ಕಂಡಿದೆ. ಭಾರತ, ಆಸ್ಟ್ರೇಲಿಯಾ, ಅಫ್ಘಾನಿಸ್ತಾನ ಹಾಗೂ ದಕ್ಷಿಣ ಆಫ್ರಿಕಾ ವಿರುದ್ಧ ಬಾಬರ್ ಪಡೆ ಸೋಲು ಕಂಡಿದೆ. ಈ ಮೂಲಕ ಬಲಿಷ್ಠ ತಂಡವಾಗಿದ್ದ ಪಾಕ್ ಸತತ 4 ಪಂದ್ಯಗಳನ್ನು ಸೋಲುವ ಮೂಲಕ ಅತ್ಯಂತ ಕಳಪೆ ಪ್ರದರ್ಶನ ನೀಡುತ್ತಿದೆ. ಇದನ್ನೂ ಓದಿ: IPL 2024: ನಿವೃತ್ತಿ ಬಗ್ಗೆ ಮಹತ್ವದ ಸುಳಿವು ಕೊಟ್ಟ ಮಹಿ – ಅಭಿಮಾನಿಗಳಿಗೆ ಬಿಗ್‌ ಶಾಕ್‌!

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಪಾಕ್‌ ತಂಡಕ್ಕೆ ಇನ್ಮುಂದೆ ಬಿರಿಯಾನಿ ಬಂದ್‌ – ಆನ್‌ಲೈನ್‌ನಲ್ಲಿ ಬುಕ್‌ ಮಾಡಿ ಸಿಕ್ಕಿಬಿದ್ದ ಆಟಗಾರರು

    ಪಾಕ್‌ ತಂಡಕ್ಕೆ ಇನ್ಮುಂದೆ ಬಿರಿಯಾನಿ ಬಂದ್‌ – ಆನ್‌ಲೈನ್‌ನಲ್ಲಿ ಬುಕ್‌ ಮಾಡಿ ಸಿಕ್ಕಿಬಿದ್ದ ಆಟಗಾರರು

    ಕೋಲ್ಕತ್ತಾ: ಭಾರತದ ಆತಿಥ್ಯದಲ್ಲಿ ಇದೇ ನಡೆಯುತ್ತಿರುವ ವಿಶ್ವಕಪ್‌ ಟೂರ್ನಿಯಲ್ಲಿ ಪಾಲ್ಗೊಂಡಿರುವ ಬಾಬರ್‌ ಆಜಂ ನಾಯಕತ್ವದ ಪಾಕಿಸ್ತಾನ ಕ್ರಿಕೆಟ್​ ತಂಡವು (Pakistan Criekct Team) ಬಾಂಗ್ಲಾದೇಶ ವಿರುದ್ಧ ಪಂದ್ಯವನ್ನಾಡಲು ಕೋಲ್ಕತ್ತಾಗೆ (Kolkata0 ಆಗಮಿಸಿದೆ. ಭರ್ಜರಿ ಆತಿಥ್ಯದೊಂದಿಗೆ ಹೈದರಾಬಾದ್ ಮತ್ತು ಚೆನ್ನೈನಲ್ಲಿ ಬಿರಿಯಾನಿ ಮತ್ತು ಇತರ ಭಕ್ಷ್ಯಗಳನ್ನು ಸವಿದ ನಂತರ, ಕೋಲ್ಕತ್ತಾ ಮತ್ತು ಬೆಂಗಳೂರಿನಲ್ಲಿ ನಡೆಯಲಿರುವ ಕೊನೆಯ 3 ಪಂದ್ಯಗಳಿಗೆ ತಯಾರಿ ನಡೆಸುತ್ತಿರುವ ಪಾಕಿಸ್ತಾನ ತಂಡಕ್ಕೆ ಇನ್ನುಂದೆ ಬಿರಿಯಾನಿ (Biriyani) ಸಿಗುವುದಿಲ್ಲ ಎಂದು ಮೂಲಗಳಿಂದ ತಿಳಿದುಬಂದಿದೆ.

    ಪಾಕಿಸ್ತಾನ ತಂಡ ಅಕ್ಟೋಬರ್ 31ರಂದು (ಇಂದು) ಬಾಂಗ್ಲಾದೇಶ ವಿರುದ್ಧ ಹಾಗೂ ನವೆಂಬರ್ 4ರಂದು ನ್ಯೂಜಿಲೆಂಡ್ (New Zealand) ವಿರುದ್ಧ ಬೆಂಗಳೂರಿನಲ್ಲಿ ಸೆಣಸಲಿದೆ. ನವೆಂಬರ್ 11ರಂದು ಕೋಲ್ಕತ್ತಾಗೆ ವಾಪಸಾಗಲಿದ್ದು, ಇಂಗ್ಲೆಂಡ್ ವಿರುದ್ಧ ಸೆಣಸಲಿದೆ. ಆದ್ರೆ ಇನ್ನುಳಿದ ಪಂದ್ಯಗಳಿಗೆ ಪಾಕಿಸ್ತಾನ ಕ್ರಿಕೆಟ್ ತಂಡವು ಬಿರಿಯಾನಿ ಮಾತ್ರವಲ್ಲದೆ ಇನ್ನೂ ಹಲವಾರು ಭಕ್ಷ್ಯಗಳನ್ನು ತ್ಯಜಿಸಬೇಕಾಗಿದೆ. ಕಟ್ಟುನಿಟ್ಟಾದ ಫುಡ್‌ ಚಾರ್ಟ್‌ನೊಂದಿಗೆ ಅಭ್ಯಾಸ ಮಾಡಬೇಕಾಗಿದೆ ಎಂದು ಮೂಲಗಳು ತಿಳಿಸಿವೆ.

    ಝಮ್‌ ಝಮ್‌ ಬಿರಿಯಾನಿ ಸವಿದ ಪಾಕ್‌: ಸತತ ಸೋಲಿನಿಂದ ಕಂಗೆಟ್ಟಿರುವ ಪಾಕ್‌ ಆಟಗಾರರು ಫಿಟ್‌ನೆಸ್‌ ಕಾಯ್ದುಕೊಳ್ಳಲು ತಮ್ಮ ಪ್ರೀತಿಯ ಬಿರಿಯಾನಿ ತ್ಯಜಿಸಬೇಕು, ಅದರ ಬದಲಿಗೆ ಮೆಡಿಟರೇನಿಯನ್ ಕಬಾಬ್​​ಗಳು (Mediterranean Kebabs), ಮೊಟ್ಟೆಗಳು ಮತ್ತು ಪ್ರೋಟೀನ್‌ಯುಕ್ತ ಆಹಾರವನ್ನು ಸೇವಿಸಬೇಕು ಎಂದು ಹೇಳಲಾಗಿದೆ. ಈ ನಡುವೆ ತಮಗೆ ನಿಗದಿಪಡಿಸಿದ್ದ ರೆಸ್ಟೋರೆಂಟ್‌ ಅನ್ನು ಬಿಟ್ಟು ಆನ್‌ಲೈನ್‌ನಲ್ಲಿ ಬುಕ್‌ಮಾಡಿದ ಬಗೆಬಗೆಯ ಭಕ್ಷ್ಯಗಳನ್ನ ಸವಿದಿರುವುದು ಕಂಡುಬಂದಿದೆ. ಇದು ಜಾಲತಾಣದಲ್ಲಿ ಬಿಸಿ ಬಿಸಿ ಚರ್ಚೆಯಲಿದೆ.

    ಹೌದು. ಕೋಲ್ಕತ್ತಾಗೆ ಆಗಮಿಸಿರುವ ಪಾಕ್‌ ತಂಡಕ್ಕೆ ಮೆನ್‌ ಇನ್‌ ಗ್ರೀನ್‌ ಹೋಟೆಲ್‌ನಲ್ಲಿ ಊಟ ನಿಗದಿಪಡಿಸಲಾಗಿತ್ತು. ಆದ್ರೆ ಪಾಕ್‌ ತಂಡ ಕೋಲ್ಕತ್ತಾದ ಫೇಮಸ್‌ ಝಮ್ ಝಮ್ ರೆಸ್ಟೋರೆಂಟ್‌ ಬಿರಿಯಾನಿ (Zam Zam Biriyani), ಕಬಾಬ್‌ ಹಾಗೂ ಚಾಪ್ಸ್‌ಗಳನ್ನು ಆನ್‌ಲೈನ್‌ನಲ್ಲಿ ಬುಕ್‌ಮಾಡಿ ತರಿಸಿಕೊಂಡು ಸವಿದಿದೆ. ಝಮ್ ಝಮ್ ರೆಸ್ಟೋರೆಂಟ್‌ನ ನಿರ್ದೇಶಕ ಶಾದ್ಮನ್ ಫೈಜ್ ಇದನ್ನು ಖಚಿತಪಡಿಸಿದ್ದಾರೆ.

    ಮೊದಲು ಇದು ಪಾಕ್‌ ತಂಡದಿಂದ ಬಂದ ಆರ್ಡರ್‌ ಎಂದು ತಿಳಿದಿರಲಿಲ್ಲ, ಸ್ವಲ್ಪ ತಡವಾಗಿ ಗೊತ್ತಾಗಿದೆ. ಇಡೀ ವಿಶ್ವದಲ್ಲೇ ಕೋಲ್ಕತ್ತಾದ ನಮ್ಮ ಝಮ್‌ ಝಮ್‌ ಬಿರಿಯಾನಿ ತನ್ನದೇ ವಿಶೇಷತೆ ಹೊಂದಿದೆ. ಹಾಗಾಗಿ ಬಹಳ ಪ್ರಸಿದ್ಧವಾಗಿದೆ ಎಂದು ಹೇಳಿಕೊಂಡಿದ್ದಾರೆ.

    ಇದಕ್ಕೂ ಮುನ್ನ ಹೈದರಾಬಾದ್‌, ಚೆನ್ನೈನಲ್ಲಿ ಪಾಕ್‌ ತಂಡದ ಡಯಟ್‌ ಚಾರ್ಟ್‌ನಲ್ಲಿ ಗ್ರಿಲ್ಡ್‌ ಲ್ಯಾಂಬ್‌ ಚಾಪ್ಸ್ (Grilled Lamb Chops), ಮಟನ್‌ ಕರಿ, ಹೈದರಾಬಾದ್‌ನಲ್ಲಿ ಬಹುಬೇಡಿಕೆಯ ಬಟರ್‌ ಚಿಕನ್‌ ಮತ್ತು ಗ್ರಿಲ್ಡ್‌ ಫಿಶ್‌ (Grilled Fish) ನೀಗದಿಪಡಿಸಲಾಗಿತ್ತು.

    ಕಳಪೆ ಫಿಟ್‌ನೆಸ್‌ ಬಗ್ಗೆ ಕಿಡಿ: ಇನ್ನೂ ಪಾಕಿಸ್ತಾನ ಕ್ರಿಕೆಟ್‌ ತಂಡದ ಪಾಕ್‌ ಕಳಪೆ ಫಿಟ್‌ನೆಸ್‌ ಬಗ್ಗೆ ಪಾಕ್‌ ಮಾಜಿ ನಾಯಕ ವಾಸಿಮ್ ಅಕ್ರಮ್ ಅವರು ವಾಗ್ದಾಳಿ ನಡೆಸಿದ್ದಾರೆ. ಆಟಗಾರರು ಒಂದೆರಡು ವರ್ಷಗಳಿಂದ ಫಿಟ್ನೆಸ್ ಪರೀಕ್ಷೆಗೆ ಒಳಗಾಗಿಲ್ಲ. ದೇಶಕ್ಕಾಗಿ ಆಡುತ್ತಿರುವುದಕ್ಕೆ ಆಟಗಾರರಿಗೆ ಸಂಭಾವನೆ ನೀಡಲಾಗುತ್ತಿದೆ. ಆದ್ರೆ ಒಂದು ನಿರ್ದಿಷ್ಟ ಮಾನದಂಡವಿರಬೇಕು. ಪ್ರತಿದಿನ 8 ಕೆಜಿ ಮಟನ್​ ತಿನ್ನುತ್ತಾರೆ ಎಂದು ಹೇಳಿದ್ದರು. ಹೀಗಾಗಿ ತಂಡದ ಆಡಳಿತವು ಅವರ ಅನಾರೋಗ್ಯಕರ ಆಹಾರ ಪದ್ಧತಿಯನ್ನು ನಿಲ್ಲಿಸಿದೆ ಮತ್ತು ಆಟಗಾರರಿಗೆ ಕಟ್ಟುನಿಟ್ಟಾದ ಆಹಾರ ಯೋಜನೆ ರೂಪಿಸಿದೆ ಎಂದು ಹೇಳಿದ್ದಾರೆ.

    ಸದ್ಯ 6 ರಲ್ಲಿ 2 ಪಂದ್ಯಗಳಲ್ಲಿ ಗೆದ್ದಿರುವ ಪಾಕ್‌ ತಂಡ ಬೃಹತ್‌ ಜಯವನ್ನು ಎದುರು ನೋಡುತ್ತಿದೆ. ಆ ಮೂಲಕ ಉಳಿದ ಮೂರು ಪಂದ್ಯಗಳಲ್ಲಿ ಉತ್ತಮ ರನ್‌ರೇಟ್‌ನೊಂದಿಗೆ ಅಗ್ರ 4ರಲ್ಲಿ ಸ್ಥಾನ ಪಡೆಯಲು ಹಾತೊರೆಯುತ್ತಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ವಿಶ್ವಕಪ್‌ನಲ್ಲಿ ಪಾಕ್‌ ಕಳಪೆ ಪ್ರದರ್ಶನ – ಮೊದಲನೇಯ ದೊಡ್ಡ ವಿಕೆಟ್‌ ಪತನ

    ವಿಶ್ವಕಪ್‌ನಲ್ಲಿ ಪಾಕ್‌ ಕಳಪೆ ಪ್ರದರ್ಶನ – ಮೊದಲನೇಯ ದೊಡ್ಡ ವಿಕೆಟ್‌ ಪತನ

    ಇಸ್ಲಾಮಾಬಾದ್‌: ವಿಶ್ವಕಪ್‌ ಕ್ರಿಕೆಟ್‌ನಲ್ಲಿ (World Cup Cricket) ಪಾಕಿಸ್ತಾನ ತಂಡದ ಕಳಪೆ ಪ್ರದರ್ಶನಕ್ಕೆ ಮೊದಲನೇಯ ದೊಡ್ಡ ವಿಕೆಟ್‌ ಪತನವಾಗಿದೆ. ಪಾಕಿಸ್ತಾನ ಕ್ರಿಕೆಟ್‌ನ (Pakistan Cricket) ತಂಡದ ಆಯ್ಕೆ ಮಂಡಳಿಯ ಮುಖ್ಯಸ್ಥ ಸ್ಥಾನಕ್ಕೆ ಮಾಜಿ ನಾಯಕ ಇಂಜಮಾಮ್‌ ಉಲ್ ಹಕ್ (Inzamam-ul-Haq) ರಾಜೀನಾಮೆ ನೀಡಿದ್ದಾರೆ.

    ಆಯ್ಕೆ ಮಂಡಳಿ ಸರಿಯಾದ ಆಟಗಾರರನ್ನು ಆಯ್ಕೆ ಮಾಡಲಿಲ್ಲ ಎಂಬ ಟೀಕೆಯ ಬೆನ್ನಲ್ಲೇ ವಿಶ್ವಕಪ್‌ ಟೂರ್ನಿ ನಡೆಯುತ್ತಿರುವ ಮಧ್ಯದಲ್ಲೇ ಇಂಜಮಾಮ್‌ ಪಾಕಿಸ್ತಾನ ಕ್ರಿಕೆಟ್ ಮಂಡಳಿಯ (PCB) ಮುಖ್ಯಸ್ಥ ಝಕಾ ಅಶ್ರಫ್ ಅವರಿಗೆ ರಾಜೀನಾಮೆ ಪತ್ರವನ್ನು ಕಳುಹಿಸಿದ್ದಾರೆ.

    ವಿಶ್ವಕಪ್‌ಗಾಗಿ ಪಾಕಿಸ್ತಾನದ ತಂಡದ ಆಯ್ಕೆ ಪ್ರಕ್ರಿಯೆಯಲ್ಲಿ ವೈಯಕ್ತಿಕ ಹಿತಾಸಕ್ತಿ ಸಂಘರ್ಷದ ಆರೋಪ ಬಂದಿತ್ತು. ಈ ಆರೋಪಗಳಿಗೆ ಬೇಸತ್ತು ಇಂಜಮಾಮ್‌ ರಾಜೀನಾಮೆ ನೀಡಿದ್ದ ಬೆನ್ನಲ್ಲೇ ಈ ಆರೋಪಗಳ ತನಿಖೆಗಾಗಿ ಐದು ಸದಸ್ಯರ ಸತ್ಯ ಶೋಧನಾ ಸಮಿತಿಯನ್ನು ಪಿಸಿಬಿ ರಚಿಸಿದೆ.

    2016 ರಿಂದ 19ರವರೆಗಿನ ಒಂದು ಅವಧಿಯಲ್ಲಿ ಪಾಕಿಸ್ತಾನದ ಮುಖ್ಯ ಆಯ್ಕೆಗಾರರಾಗಿದ್ದ ಇವರು ಕೋಚ್ ಆಗಿಯೂ ಕಾರ್ಯ ನಿರ್ವಹಿಸಿದ್ದರು. ಇದಾದ ಬಳಿಕ ವಿಶ್ವಕಪ್‌ ಟೂರ್ನಿಯ ವೇಳೆ ಆಗಸ್ಟ್‌ನಲ್ಲಿ ಮತ್ತೆ ಆಯ್ಕೆ ಮಂಡಳಿಯ ಮುಖ್ಯಸ್ಥ ಸ್ಥಾನಕ್ಕೆ ಆಯ್ಕೆ ಮಾಡಲಾಗಿತ್ತು. ಇದನ್ನೂ ಓದಿ: ಪಾಕ್‌ ವಿರುದ್ಧ ಗೆದ್ದ ಅಫ್ಘಾನ್‌ ಕ್ರಿಕೆಟಿಗರಿಗೆ ಬಹುಮಾನ; ರತನ್‌ ಟಾಟಾ ಸ್ಪಷ್ಟನೆ ಏನು?

     

    ಏನಿದು ಆರೋಪ?
    ಸ್ಥಳೀಯ ಮಾಧ್ಯಮಗಳ ಪ್ರಕಾರ ಇಂಜಮಾಮ್‌ ಅವರು Yazo International Limited ಕಂಪನಿಯಲ್ಲಿ ಪಾಲುದಾರರಾಗಿದ್ದಾರೆ. ಪಾಕ್‌ ಕ್ರಿಕೆಟ್ ತಂಡದ ನಾಯಕ ಬಾಬರ್ ಅಜಮ್, ಶಾಹೀನ್ ಅಫ್ರಿದಿ ಮತ್ತು ಮೊಹಮ್ಮದ್ ರಿಜ್ವಾನ್ ಈ ಕಂಪನಿಯನ್ನು ಪ್ರತಿನಿಧಿಸುತ್ತಿದ್ದಾರೆ. ತಮ್ಮ ಕಂಪನಿಯ ವೈಯಕ್ತಿಕ ಹಿತಾಸಕ್ತಿಗಾಗಿ ಇಂಜಮಾಮ್‌ ಈ ಆಟಗಾರರನ್ನು ಆಯ್ಕೆ ಮಾಡಿದ್ದಾರೆ ಎಂಬ ಗಂಭೀರ ಆರೋಪ ಈಗ ಕೇಳಿ ಬಂದಿದೆ.

    ಪಾಕಿಸ್ತಾನ ಒಟ್ಟು 6 ಪಂದ್ಯವಾಡಿದ್ದು ಸತತ 4 ಪಂದ್ಯಗಳಲ್ಲಿ ಸೋಲನ್ನು ಕಂಡಿದೆ. ನೆದರ್‌ಲ್ಯಾಂರ್ಡ್ಸ್‌ ವಿರುದ್ಧ 84 ರನ್‌, ಶ್ರೀಲಂಕಾ ವಿರುದ್ಧ 6 ವಿಕೆಟ್‌ಗಳ ಜಯ ಸಾಧಿಸಿತ್ತು. ನಂತರ ಅನುಕ್ರಮವಾಗಿ ಭಾರತ, ಆಸ್ಟ್ರೇಲಿಯಾ, ಅಫ್ಘಾನಿಸ್ತಾನ, ದಕ್ಷಿಣ ಆಫ್ರಿಕಾದ ವಿರುದ್ಧ ಸೋಲನ್ನು ಅನುಭವಿಸಿತ್ತು. ಅದರಲ್ಲೂ ಅಫ್ಘಾನಿಸ್ತಾನದ ವಿರುದ್ಧ ಸೋತಿದ್ದಕ್ಕೆ ಪಾಕಿಸ್ತಾನದಲ್ಲಿ ಭಾರೀ ಟೀಕೆ ವ್ಯಕ್ತವಾಗಿತ್ತು.

    ಬಾಬರ್‌ ಅಜಂ ವಿರುದ್ಧವೂ ಟೀಕೆ ಬಂದಿದ್ದು ಈ ವಿಶ್ವಕಪ್‌ ಟೂರ್ನಿ ಮುಕ್ತಾಯವಾದ ಬಳಿಕ ಅವರನ್ನು ನಾಯಕ ಪಟ್ಟದಿಂದ ಕೆಳಗಿಳಿಸುವ ಸಾಧ್ಯತೆಯಿದೆ ಎಂದು ವರದಿಯಾಗಿದೆ.

     

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಭಾರತವನ್ನು ಶತ್ರು ರಾಷ್ಟ್ರವೆಂದು ನಾಲಿಗೆ ಹರಿಬಿಟ್ಟ ಪಾಕ್‌ ಕ್ರಿಕೆಟ್‌ ಮಂಡಳಿ ಅಧ್ಯಕ್ಷ

    ಭಾರತವನ್ನು ಶತ್ರು ರಾಷ್ಟ್ರವೆಂದು ನಾಲಿಗೆ ಹರಿಬಿಟ್ಟ ಪಾಕ್‌ ಕ್ರಿಕೆಟ್‌ ಮಂಡಳಿ ಅಧ್ಯಕ್ಷ

    ಇಸ್ಲಾಮಾಬಾದ್‌: ಇದೇ ಮೊದಲಬಾರಿಗೆ ಭಾರತದ ಸಂಪೂರ್ಣ ಆತಿಥ್ಯದಲ್ಲಿ ಭಾರತದಲ್ಲಿ ವಿಶ್ವಕಪ್‌ ಟೂರ್ನಿ (ICC WorldCup) ಆಯೋಜನೆಗೊಂಡಿದ್ದು, ಪಾಕಿಸ್ತಾನ ಕ್ರಿಕೆಟ್‌ ತಂಡ 7 ವರ್ಷಗಳ ಬಳಿಕ ಭಾರತಕ್ಕೆ ಎಂಟ್ರಿ ಕೊಟ್ಟಿದೆ. ಇಂತಹ ಹೊತ್ತಿನಲ್ಲೇ ಪಾಕಿಸ್ತಾನ ಕ್ರಿಕೆಟ್‌ ಮಂಡಳಿ (PCB) ಅಧ್ಯಕ್ಷ ಝಾಕಾ ಅಶ್ರಫ್ (Zaka Ashraf) ಭಾರತವನ್ನು ಶತ್ರುಗಳ ದೇಶ ಎಂದು ಹೇಳುವ ಮೂಲಕ ನಾಲಿಗೆ ಹರಿಬಿಟ್ಟಿದ್ದಾರೆ.

    ನಾಯಕ ಬಾಬರ್ ಆಜಂ (Babar Azam) ನೇತೃತ್ವದ ತಂಡ ಸೆಪ್ಟೆಂಬರ್ 27ರ ಬುಧವಾರ ರಾತ್ರಿ ಹೈದರಾಬಾದ್​ಗೆ (Hyderabad) ಬಂದಿಳಿದಿದೆ. ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾರತೀಯ ಕ್ರಿಕೆಟ್ ಉತ್ಸಾಹಿಗಳು ಅವರನ್ನು ಸಾಂಪ್ರದಾಯಿಕವಾಗಿ ಶಾಲು ಹಾಕಿ ಸ್ವಾಗತಿಸಿದ್ದಾರೆ. ಬಾಬರ್ ಮತ್ತು ಶಾಹೀನ್ ಶಾ ಅಫ್ರಿದಿ (Shaheen Afridi) ಇನ್ನೂ ಮೊದಲಾದ ಆಟಗಾರರು ತಮ್ಮ ಜಾಲತಾಣ ಖಾತೆಗಳಲ್ಲಿ ಭಾರತದಲ್ಲಿ ತಮಗೆ ಸಿಕ್ಕ ಸ್ವಾಗತವನ್ನು ಶ್ಲಾಘಿಸಿದ್ದಾರೆ. ಇಂತಹ ಹೊತ್ತಿನಲ್ಲಿ ಪಿಸಿಬಿ ಅಧ್ಯಕ್ಷ ನಾಲಿಗೆ ಹರಿಬಿಟ್ಟಿದ್ದಾರೆ.

    ಪಾಕ್‌ ಆಟಗಾರರು ವಿಶ್ವಕಪ್‌ ಟೂರ್ನಿಯನ್ನಾಡಲು ಭಾರತಕ್ಕೆ ಭೇಟಿ ನೀಡಿದ ದಿನವೇ ಪಿಸಿಬಿ ತನ್ನ ಆಟಗಾರರಿಗೆ ವೇತನ ಹೆಚ್ಚಳ ಘೋಷಣೆ ಮಾಡಿತು. ಈ ಲಾಭದಾಯಕ ಒಪ್ಪಂದದ ಕುರಿತು ಅಶ್ರಫ್‌ ಮಾತನಾಡುತ್ತಿದ್ದ ವೇಳೆ, ʻದುಷ್ಮನ್ ಮುಲ್ಕ್’ ಗೆ (ಶತ್ರುಗಳ ದೇಶಕ್ಕೆ) ನಮ್ಮ ಆಟಗಾರರು ಪ್ರಯಾಣಿಸುತ್ತಿದ್ದಾರೆ ಎಂದು ಹೇಳಿದ್ದಾರೆ. ಈ ವೀಡಿಯೋ ತುಣುಕು ಈಗ ಜಾಲತಾಣದಲ್ಲಿ ಭಾರೀ ಸದ್ದು ಮಾಡುತ್ತಿದೆ. ಇದನ್ನೂ ಓದಿ: ಭಾರತಕ್ಕೆ ಬಂದ ಪಾಕ್‌ ತಂಡಕ್ಕೆ ಕೇಸರಿ ಶಾಲು ಹಾಕಿ ಸ್ವಾಗತ – ಬಾಬರ್‌ ಆಜಂ ಬಿಜೆಪಿ ಯುವನಾಯಕ ಎಂದು ಟ್ರೋಲ್‌

    ಈ ವೀಡಿಯೋದಲ್ಲಿ ಅಶ್ರಫ್‌, ನಾವು ಈ ಒಪ್ಪಂದಗಳನ್ನು ನಮ್ಮ ಆಟಗಾರರಿಗೆ ಪ್ರೀತಿ ಮತ್ತು ವಾತ್ಸಲ್ಯದಿಂದ ನೀಡಿದ್ದೇವೆ. ಪಾಕಿಸ್ತಾನದ ಇತಿಹಾಸದಲ್ಲಿ ಆಟಗಾರರಿಗೆ ಇಷ್ಟು ಹಣವನ್ನು ನೀಡಿರಲಿಲ್ಲ. ಪಿಸಿಬಿಯ ಈ ಕ್ರಮದಿಂದಾಗಿ ವಿಶ್ವಕಪ್‌ಗಾಗಿ ಶತ್ರು ದೇಶಕ್ಕೆ (Dushman Mulk) ಹೋಗುವಾಗ ಆಟಗಾರರ ನೈತಿಕ ಸ್ಥೈರ್ಯ ಹೆಚ್ಚಿಸುತ್ತದೆ ಎಂದು ಹೇಳಿದ್ದಾರೆ. ಅಶ್ರಫ್‌ ಹೇಳಿಕೆಗೆ ಭಾರತ ಮಾತ್ರವಲ್ಲದೇ ಪಾಕಿಸ್ತಾನದ ಕ್ರಿಕೆಟ್‌ ಅಭಿಮಾನಿಗಳಿಂದಲೂ ಸಾಕಷ್ಟು ಟೀಕೆಗಳು‌ ವ್ಯಕ್ತವಾಗಿವೆ.

    ಪಾಕಿಸ್ತಾನ ತಂಡವು (Pakistan Cricket Team) ಕೊನೆಯ ಬಾರಿ 2016ರಲ್ಲಿ ನಡೆದ ಟಿ20 ವಿಶ್ವಕಪ್​ಗಾಗಿ ಭಾರತಕ್ಕೆ ಆಗಮಿಸಿತ್ತು. ಇದಾದ 7 ವರ್ಷಗಳ ಬಳಿಕ ಮತ್ತೆ ಭಾರತದ ನೆಲಕ್ಕೆ ಪಾಕ್​ ತಂಡ ಕಾಲಿಟ್ಟಿದೆ. ಈ ಬಾರಿ ಪಾಕಿಸ್ತಾನ ತಂಡವು ಹೈದರಾಬಾದ್‌, ಬೆಂಗಳೂರು, ಚೆನ್ನೈ, ಅಹಮದಾಬಾದ್‌ ಹಾಗೂ ಕೋಲ್ಕತ್ತಾ ಮೈದಾನಗಳಲ್ಲಿ ತನ್ನ ವಿಶ್ವಕಪ್‌ ಪಂದ್ಯಗಳನ್ನ ಆಡಲಿದೆ. ಅಕ್ಟೋಬರ್‌ 3 ರಂದು ಆಸ್ಟ್ರೇಲಿಯಾ ವಿರುದ್ಧ ಕೊನೆಯ ಅಭ್ಯಾಸ ಪಂದ್ಯಗಳನ್ನಾಡಲಿದೆ.  ಇದನ್ನೂ ಓದಿ: ಹೈದರಾಬಾದ್‌ ಬಿರಿಯಾನಿ, ಬಟರ್‌ ಚಿಕನ್‌, ಲ್ಯಾಂಬ್‌ ಚಾಪ್ಸ್; ಭಾರತದಲ್ಲಿ ಪಾಕ್‌ ಕ್ರಿಕೆಟಿಗರಿಗೆ ಭರ್ಜರಿ ಬಾಡೂಟದ ಆತಿಥ್ಯ

    ಭಾರತದಲ್ಲಿ ಪಾಕ್‌ ತಂಡದ ವೇಳಾಪಟ್ಟಿ ಹೀಗಿದೆ…
    ಪಾಕಿಸ್ತಾನ vs ಕ್ವಾಲಿಫೈಯರ್ 1, ಅಕ್ಟೋಬರ್ 6 – ಹೈದರಾಬಾದ್
    ಪಾಕಿಸ್ತಾನ vs ಕ್ವಾಲಿಫೈಯರ್ 2, ಅಕ್ಟೋಬರ್ 12 – ಹೈದರಾಬಾದ್
    ಪಾಕಿಸ್ತಾನ vs ಭಾರತ, ಅಕ್ಟೋಬರ್ 15 – ಅಹಮದಾಬಾದ್
    ಪಾಕಿಸ್ತಾನ vs ಆಸ್ಟ್ರೇಲಿಯಾ, ಅಕ್ಟೋಬರ್ 20 – ಬೆಂಗಳೂರು
    ಪಾಕಿಸ್ತಾನ vs ಅಫ್ಘಾನಿಸ್ತಾನ, ಅಕ್ಟೋಬರ್ 23- ಚೆನ್ನೈ
    ಪಾಕಿಸ್ತಾನ vs ದಕ್ಷಿಣ ಆಫ್ರಿಕಾ, ಅಕ್ಟೋಬರ್ 27- ಚೆನ್ನೈ
    ಪಾಕಿಸ್ತಾನ vs ಬಾಂಗ್ಲಾದೇಶ, ಅಕ್ಟೋಬರ್ 31 – ಕೋಲ್ಕತ್ತಾ
    ಪಾಕಿಸ್ತಾನ vs ನ್ಯೂಜಿಲೆಂಡ್, ನವೆಂಬರ್ 4 – ಬೆಂಗಳೂರು
    ಪಾಕಿಸ್ತಾನ vs ಇಂಗ್ಲೆಂಡ್, ನವೆಂಬರ್ 12- ಕೋಲ್ಕತ್ತಾ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • World Cup 2023: ಇನ್ನೂ ವೀಸಾ ಸಿಕ್ಕಿಲ್ಲ – ಪಾಕಿಸ್ತಾನ ಆಟಗಾರರಿಗೆ ಶುರುವಾಯ್ತು ಹೊಸ ಸಮಸ್ಯೆ

    World Cup 2023: ಇನ್ನೂ ವೀಸಾ ಸಿಕ್ಕಿಲ್ಲ – ಪಾಕಿಸ್ತಾನ ಆಟಗಾರರಿಗೆ ಶುರುವಾಯ್ತು ಹೊಸ ಸಮಸ್ಯೆ

    ಇಸ್ಲಾಮಾಬಾದ್‌: ಅಕ್ಟೋಬರ್‌ 5 ರಿಂದ ಭಾರತದಲ್ಲಿ ವಿಶ್ವಕಪ್‌ (World Cup 2023) ಟೂರ್ನಿ ಆರಂಭವಾಗಲಿದ್ದು, ಭಾರತಕ್ಕೆ ಪ್ರಯಾಣಿಸಬೇಕಿರುವ ಕ್ರಿಕೆಟ್‌ ಆಟಗಾರರಿಗೆ ಇನ್ನೂ ವೀಸಾ ಸಿಕ್ಕಿಲ್ಲ ಎಂದು ಪಾಕಿಸ್ತಾನ ಕ್ರಿಕೆಟ್‌ ಮಂಡಳಿ (PCB) ಕಳವಳ ವ್ಯಕ್ತಪಡಿಸಿದೆ. ಈ ಕುರಿತು ಅಂತಾರಾಷ್ಟ್ರೀಯ ಕ್ರಿಕೆಟ್‌ ಮಂಡಳಿಗೂ (ICC) ಪತ್ರ ಬರೆದಿದೆ.

    ವಿಶ್ವಕಪ್‌ ಟೂರ್ನಿಗೆ ಇನ್ನೂ 10 ದಿನಗಳು ಮಾತ್ರ ಬಾಕಿ ಉಳಿದಿದ್ದು, ಭಾರತಕ್ಕೆ ಪ್ರಯಾಣಿಸಲು ಎಲ್ಲಾ ತಂಡಗಳು ಸಂಪೂರ್ಣ ಸಿದ್ಧತೆ ಮಾಡಿಕೊಂಡಿವೆ. ಆದ್ರೆ ಪಾಕಿಸ್ತಾನ ತಂಡಕ್ಕೆ ವೀಸಾ ಸಮಸ್ಯೆ (Visa clearance Problem) ಶುರುವಾಗಿದ್ದು, ತೀವ್ರ ಕಳವಳಕ್ಕೆ ಕಾರಣವಾಗಿದೆ. ವಿಶ್ವಕಪ್‌ಗೂ ಮುನ್ನ ಪಾಕ್‌ ತಂಡ ದುಬೈಗೆ ತೆರಳಬೇಕಿತ್ತು. ಆದ್ರೆ ಶುಕ್ರವಾರದವರೆಗೂ ಭಾರತ ಸರ್ಕಾರವು ಪಾಕಿಸ್ತಾನ ತಂಡಕ್ಕೆ ವೀಸಾಗೆ ಅನುಮೋದನೆ ನೀಡಿಲ್ಲ. ಇದರಿಂದಾಗಿ ಈ ದುಬೈ ಪ್ರವಾಸವನ್ನೂ ರದ್ದುಗೊಳಿಸಲಾಗಿದೆ ಎಂದು ಪಿಸಿಬಿ ತಿಳಿಸಿದೆ. ಇದನ್ನೂ ಓದಿ: World Cup 2023: ವಿಶ್ವಕಪ್‌ ಟೂರ್ನಿಗೆ ಟೀಂ ಇಂಡಿಯಾ ಬಲಿಷ್ಠ ತಂಡ ಪ್ರಕಟ – ಕನ್ನಡಿಗ ಕೆ.ಎಲ್‌ ರಾಹುಲ್‌ಗೆ ಸ್ಥಾನ

    ಸದ್ಯ ವೀಸಾ ಸಮಸ್ಯೆಗೆ ಸಿಲುಕಿರುವ ಪಾಕಿಸ್ತಾನ (Pakistan), ಐಸಿಸಿಗೆ ಪತ್ರ ಬರೆದಿದೆ. ನಮ್ಮ ಆಟಗಾರರಿಗೆ ಇನ್ನೂ ವೀಸಾ ಸಿಕ್ಕಿಲ್ಲ. ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್‌ನಿಂದ ವೀಸಾ ಕ್ಲಿಯರೆನ್ಸ್‌ಗಾಗಿ ಕಾಯುತ್ತಿದ್ದೇವೆ. ನಮ್ಮ ಆಟಗಾರರು ಎಲ್ಲಾ ಸಿದ್ಧತೆ ಮಾಡಿಕೊಂಡಿದ್ದಾರೆ. ಆದ್ರೆ ವಿಶ್ವಕಪ್‌ಗೆ ತೆರಳಬೇಕಿರುವ ಆಟಗಾರರು, ತಂಡದ ಅಧಿಕಾರಿಗಳು, ಕ್ರಿಕೆಟ್‌ ಅಭಿಮಾನಿಗಳು ಮತ್ತು ಪತ್ರಕರ್ತರಿಗೆ ವೀಸಾ ಇನ್ನೂ ಸಿಕ್ಕಿಲ್ಲ. ಭಾರತೀಯ ಗೃಹ ಸಚಿವಾಲಯವು NOC ನೀಡಿಲ್ಲ, ಇಂತಹ ವರ್ತನೆ ಸ್ವೀಕಾರಾರ್ಹವಲ್ಲ ಎಂದು ಪಾಕಿಸ್ತಾನ ಕ್ರಿಕೆಟ್‌ ಮಂಡಳಿ ಅಸಮಾಧಾನ ಹೊರಹಾಕಿದೆ.

    ವಿಶ್ವಕಪ್‌ ಟೂರ್ನಿಗೂ ಮುನ್ನ ಪಾಕಿಸ್ತಾನವು ಸೆಪ್ಟೆಂಬರ್‌ 29ರಂದು ನ್ಯೂಜಿಲೆಂಡ್ ವಿರುದ್ಧ ಹೈದರಾಬಾದ್‌ನಲ್ಲಿ ಅಭ್ಯಾಸ ಪಂದ್ಯವನ್ನಾಡಬೇಕಿದೆ. ಅದಕ್ಕೂ ಮೊದಲು ತಂಡವು ದುಬೈನಲ್ಲಿ ಕೆಲವು ದಿನಗಳ ಕಾಲ ಇದ್ದು ನಂತರ ಹೈದರಾಬಾದ್‌ಗೆ ತೆರಳಬೇಕಿತ್ತು. ಆದ್ರೆ ವೀಸಾ ಸಮಸ್ಯೆಯಿಂದ ದುಬೈ ಪ್ರವಾಸ ಕೂಡ ರದ್ದಾಗಿದೆ. ಹಾಗಾಗಿ ಪಾಕಿಸ್ತಾನ ಲಾಹೋರ್‌ನಿಂದ ನೇರವಾಗಿ ಭಾರತಕ್ಕೆ ಬರಲು ಪ್ಲ್ಯಾನ್‌ ಮಾಡಿಕೊಂಡಿದ್ದು, ಸೆಪ್ಟೆಂಬರ್ 27 ರಂದು ಲಾಹೋರ್‌ನಿಂದ ನೇರವಾಗಿ ಹೈದರಾಬಾದ್​ಗೆ ಬಂದಿಳಿಯಲಿದೆ. ಇದನ್ನೂ ಓದಿ: ವಿಶ್ವಕಪ್‌ ಟೂರ್ನಿಯಲ್ಲಿ ಗೆದ್ದರೂ ಸೋತರೂ ದುಡ್ಡೋ ದುಡ್ಡು – ಬಹುಮಾನದ ಮೊತ್ತ ಪ್ರಕಟಿಸಿದ ICC

    ಪಾಕಿಸ್ತಾನ ತಂಡವು ಕೊನೆಯ ಬಾರಿ 2016ರಲ್ಲಿ ನಡೆದ ಟಿ20 ವಿಶ್ವಕಪ್​ಗಾಗಿ ಭಾರತಕ್ಕೆ ಆಗಮಿಸಿತ್ತು. ಇದಾದ ಬಳಿಕ ಈ ವರ್ಷ ಅಂದರೆ ಬರೋಬ್ಬರಿ 7 ವರ್ಷಗಳ ಬಳಿಕ ಮತ್ತೆ ಭಾರತದ ನೆಲಕ್ಕೆ ಪಾಕ್​ ತಂಡ ಕಾಲಿಡುತ್ತಿದೆ. ಈ ಬಾರಿ ಪಾಕಿಸ್ತಾನ ತಂಡವು ಹೈದರಾಬಾದ್‌, ಬೆಂಗಳೂರು, ಚೆನ್ನೈ, ಅಹಮದಾಬಾದ್‌ ಹಾಗೂ ಕೋಲ್ಕತ್ತಾ ಮೈದಾನಗಳಲ್ಲಿ ತನ್ನ ವಿಶ್ವಕಪ್‌ ಪಂದ್ಯಗಳನ್ನ ಆಡಲಿದೆ. ಅದಕ್ಕೂ ಮುನ್ನ ಸೆಪ್ಟೆಂಬರ್‌ 29 ರಂದು ನ್ಯೂಜಿಲೆಂಡ್‌ ವಿರುದ್ಧ, ಅಕ್ಟೋಬರ್‌ 3 ರಂದು ಆಸ್ಟ್ರೇಲಿಯಾ ವಿರುದ್ಧ ಅಭ್ಯಾಸ ಪಂದ್ಯಗಳನ್ನಾಡಲಿದೆ. ಇದನ್ನೂ ಓದಿ: Ind vs Aus: ಬೆಂಕಿ ಬ್ಯಾಟಿಂಗ್‌, ಮಿಂಚಿನ ಬೌಲಿಂಗ್‌; ಆಸೀಸ್‌ ವಿರುದ್ಧ ಭಾರತಕ್ಕೆ ಸರಣಿ ಜಯ

    ಭಾರತದಲ್ಲಿ ಪಾಕ್‌ ತಂಡದ ವೇಳಾಪಟ್ಟಿ ಹೀಗಿದೆ…
    ಪಾಕಿಸ್ತಾನ vs ಕ್ವಾಲಿಫೈಯರ್ 1, ಅಕ್ಟೋಬರ್ 6 – ಹೈದರಾಬಾದ್
    ಪಾಕಿಸ್ತಾನ vs ಕ್ವಾಲಿಫೈಯರ್ 2, ಅಕ್ಟೋಬರ್ 12 – ಹೈದರಾಬಾದ್
    ಪಾಕಿಸ್ತಾನ vs ಭಾರತ, ಅಕ್ಟೋಬರ್ 15 – ಅಹಮದಾಬಾದ್
    ಪಾಕಿಸ್ತಾನ vs ಆಸ್ಟ್ರೇಲಿಯಾ, ಅಕ್ಟೋಬರ್ 20 – ಬೆಂಗಳೂರು
    ಪಾಕಿಸ್ತಾನ vs ಅಫ್ಘಾನಿಸ್ತಾನ, ಅಕ್ಟೋಬರ್ 23- ಚೆನ್ನೈ
    ಪಾಕಿಸ್ತಾನ vs ದಕ್ಷಿಣ ಆಫ್ರಿಕಾ, ಅಕ್ಟೋಬರ್ 27- ಚೆನ್ನೈ
    ಪಾಕಿಸ್ತಾನ vs ಬಾಂಗ್ಲಾದೇಶ, ಅಕ್ಟೋಬರ್ 31 – ಕೋಲ್ಕತ್ತಾ
    ಪಾಕಿಸ್ತಾನ vs ನ್ಯೂಜಿಲೆಂಡ್, ನವೆಂಬರ್ 4 – ಬೆಂಗಳೂರು
    ಪಾಕಿಸ್ತಾನ vs ಇಂಗ್ಲೆಂಡ್, ನವೆಂಬರ್ 12- ಕೋಲ್ಕತ್ತಾ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • AsiaCup 2023: ಪಾಕಿಸ್ತಾನಕ್ಕೆ ಬರುವಂತೆ ಜಯ್‌ಶಾಗೆ ಆಹ್ವಾನ ಕೊಟ್ಟ PCB

    AsiaCup 2023: ಪಾಕಿಸ್ತಾನಕ್ಕೆ ಬರುವಂತೆ ಜಯ್‌ಶಾಗೆ ಆಹ್ವಾನ ಕೊಟ್ಟ PCB

    ಇಸ್ಲಾಮಾಬಾದ್‌: ಇದೇ ಆಗಸ್ಟ್‌ 30 ರಿಂದ ಪ್ರತಿಷ್ಟಿತ ಏಕದಿನ ಏಷ್ಯಾಕಪ್‌ (AsiaCup 2023) ಟೂರ್ನಿ ಆರಂಭವಾಗಲಿದ್ದು, ಉದ್ಘಾಟನಾ ಪಂದ್ಯಕ್ಕೆ ಪಾಕಿಸ್ತಾನಕ್ಕೆ ಬರುವಂತೆ ಬಿಸಿಸಿಐ ಕಾರ್ಯದರ್ಶಿ ಜಯ್‌ ಶಾ ಅವರಿಗೆ ಪಾಕಿಸ್ತಾನ ಕ್ರಿಕೆಟ್‌ ಮಂಡಳಿ (PCB) ಆಹ್ವಾನ ನೀಡಿದೆ.

    ಆಗಸ್ಟ್‌ 30 ರಿಂದ ಸೆಪ್ಟೆಂಬರ್‌ 17ರ ವರೆಗೆ ಏಕದಿನ ಏಷ್ಯಾಕಪ್‌ ಟೂರ್ನಿ ನಡೆಯಲಿದ್ದು, ಪಾಕಿಸ್ತಾನದ ಮುಲ್ತಾನ್‌ ಕ್ರೀಡಾಂಗಣದಲ್ಲಿ ಪಾಕಿಸ್ತಾನ ಮತ್ತು ನೇಪಾಳ ನಡುವೆ ಆರಂಭಿಕ ಪಂದ್ಯ ನಡೆಯಲಿದೆ. ಉದ್ಘಾಟನಾ ಪಂದ್ಯಕ್ಕೆ ಜಯ್‌ ಶಾ (Jay Shah) ಜೊತೆಗೆ ಏಷ್ಯನ್‌ ಕ್ರಿಕೆಟ್‌ ಕೌನ್ಸಿಲ್‌ನ (ACC) ಭಾಗವಾಗಿರುವ ಇತರ ಮಂಡಳಿಗಳ ಮುಖ್ಯಸ್ಥರನ್ನೂ ಆರಂಭಿಕ ಪಂದ್ಯಕ್ಕೆ ಆಹ್ವಾನಿಸಲಾಗಿದೆ ಎಂದು ಪಿಸಿಬಿ ತಿಳಿಸಿದೆ. ಇದನ್ನೂ ಓದಿ: AsiaCup 2023: ಟೀಂ ಇಂಡಿಯಾದಿಂದ ಸಂಜು ಸ್ಯಾಮ್ಸನ್‌ ಔಟ್‌?

    ಕೆಲ ದಿನಗಳ ಹಿಂದೆ ಐಸಿಸಿ ಸಭೆಗಾಗಿ ಡರ್ಬನ್‌ನಲ್ಲಿ ಭೇಟಿಯಾಗಿದ್ದಾಗ ಅಧ್ಯಕ್ಷ ಝಾಕಾ ಅಶ್ರಫ್, ಜಯ್ ಶಾ ಅವರಿಗೆ ಮೌಖಿಕವಾಗಿ ನೀಡಿದ್ದ ಮೌಖಿಕಿ ಆಹ್ವಾನವನ್ನು ಅವರು ಒಪ್ಪಿದ್ದರು. ಖಂಡಿತವಾಗಿಯೂ ಜಯ್‌ ಶಾ ಪಾಕಿಸ್ತಾನಕ್ಕೆ ಬರುತ್ತಾರೆ ಎಂದು ಪಾಕ್‌ ಮಾಧ್ಯಮಗಳು ವರದಿ ಮಾಡಿವೆ.

    ಅಲ್ಲದೇ, ಭಾರತ ಮತ್ತು ಪಾಕಿಸ್ತಾನದ ನಡುವೆ ಅಸ್ತಿತ್ವದಲ್ಲಿರುವ ಸಂಬಂಧಗಳ ಬಗ್ಗೆ ತಿಳಿದಿರುವ ಪಿಸಿಬಿ, ಜಯ್‌ ಶಾ ಅವರಿಗೆ ಆಹ್ವಾನ ನೀಡುವ ಮೂಲಕ ಕ್ರೀಡೆಯೊಂದಿಗೆ ರಾಜಕೀಯ ಬೆರೆಸುವುದಿಲ್ಲ ಎಂಬುದನ್ನ ತೋರಿಸಿದೆ ಎಂದು ಹೇಳಲಾಗಿದೆ. ಇದನ್ನೂ ಓದಿ: ಮೊದಲ ಓವರ್‌ನಲ್ಲೇ 2 ವಿಕೆಟ್‌ ಉಡೀಸ್‌ – 11 ತಿಂಗಳ ಬಳಿಕ ಎಂಟ್ರಿ ಕೊಟ್ಟು ​ಭಾರತಕ್ಕೆ ಜಯ ತಂದ ಬುಮ್ರಾ

    ಭಾರತ ಏಕೆ ಪಾಕ್‌ಗೆ ಹೋಗ್ತಿಲ್ಲ?
    ಭಾರತ ತಂಡವು 2005-2006ರಲ್ಲಿ ರಾಹುಲ್ ದ್ರಾವಿಡ್ ನಾಯಕತ್ವದಲ್ಲಿ ಪಾಕಿಸ್ತಾನಕ್ಕೆ ತನ್ನ ಕೊನೆಯ ಪ್ರವಾಸ ಕೈಗೊಂಡಿತ್ತು. ಈ ಪಂದ್ಯದಲ್ಲಿ ಇತ್ತಂಡಗಳು 3 ಟೆಸ್ಟ್ ಹಾಗೂ 5 ಏಕದಿನ ಪಂದ್ಯಗಳನ್ನಾಡಿದ್ದವು. ಆದರೆ 2008ರಲ್ಲಿ ನಡೆದ ಮುಂಬೈ ದಾಳಿಯ ನಂತರ ಉಭಯ ತಂಡಗಳ ನಡುವೆ ಯಾವುದೇ ದ್ವಿಪಕ್ಷೀಯ ಸರಣಿ ನಡೆದಿಲ್ಲ. ಐಸಿಸಿ (ICC) ಟೂರ್ನಿ ಅಥವಾ ಏಷ್ಯಾ ಕಪ್ ಟೂರ್ನಿಗಳಲ್ಲಿ ಮಾತ್ರವೇ ಪರಸ್ಪರ ಮುಖಾಮುಖಿಯಾಗುತ್ತಿವೆ. ಕಳೆದ ವರ್ಷ ಟಿ20 ಏಷ್ಯಾಕಪ್‌ ಹಾಗೂ ಟಿ20 ವಿಶ್ವಕಪ್‌ನಲ್ಲಿ ಇತ್ತಂಡಗಳು ಭಾಗಿಯಾಗಿದ್ದವು. ನಂತರ ಏಷ್ಯಾಕಪ್‌ ಆಡಲು ಭಾರತ ತಂಡವನ್ನು ತನ್ನ ದೇಶಕ್ಕೆ ಕಳುಹಿಸಿಕೊಡುವಂತೆ ಪಾಕಿಸ್ತಾನ ಮನವಿ ಮಾಡಿತ್ತು. ಆದರೆ ಬಿಸಿಸಿಐ ಕಾರ್ಯದರ್ಶಿ ಜಯ್‌ ಶಾ ಈ ಮನವಿಯನ್ನು ನಿರಾಕರಿಸಿದ್ದರು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಟೀಂ ಇಂಡಿಯಾ ವಿನಾಶದತ್ತ ಸಾಗುತ್ತಿದೆ – ನಾಲಿಗೆ ಹರಿಬಿಟ್ಟ ಪಾಕ್‌ ಮಾಜಿ ಕ್ರಿಕೆಟಿಗ, ಅಭಿಮಾನಿಗಳು ಕೆಂಡ

    ಟೀಂ ಇಂಡಿಯಾ ವಿನಾಶದತ್ತ ಸಾಗುತ್ತಿದೆ – ನಾಲಿಗೆ ಹರಿಬಿಟ್ಟ ಪಾಕ್‌ ಮಾಜಿ ಕ್ರಿಕೆಟಿಗ, ಅಭಿಮಾನಿಗಳು ಕೆಂಡ

    ಇಸ್ಲಾಮಾಬಾದ್‌: ಪ್ರತಿಷ್ಠಿತ ಏಕದಿನ ಏಷ್ಯಾಕಪ್‌ (AsiaCup 2023) ಟೂರ್ನಿಗೆ ಇನ್ನೂ ಮೂರು ವಾರಗಳಷ್ಟೇ ಬಾಕಿಯಿದ್ದು, ಸೆ.2ರಂದು ನಡೆಯಲಿರುವ ಇಂಡೋಪಾಕ್‌ ರೋಚಕ ಕದನಕ್ಕಾಗಿ ಅಭಿಮಾನಿಗಳು ಕಾದು ಕುಳಿತಿದ್ದಾರೆ. ಈ ನಡುವೆ ಪಾಕ್‌ ತಂಡದ ಮಾಜಿ ವೇಗಿ ಸರ್ಫರಾಜ್‌ ನವಾಜ್‌, ಟೀಂ ಇಂಡಿಯಾ (Team India) ವಿನಾಶದತ್ತ ಸಾಗುತ್ತಿದೆ ಎಂದು ಹೇಳುವ ಮೂಲಕ ನಾಲಿಗೆ ಹರಿಬಿಟ್ಟಿದ್ದಾರೆ. ಟೀಂ ಇಂಡಿಯಾ ಕ್ರಿಕೆಟ್‌ ಅಭಿಮಾನಿಗಳಿಂದಲೂ ಟೀಕೆಗೆ ಗುರಿಯಾಗಿದ್ದಾರೆ.

    ಪಾಕಿಸ್ತಾನ (Pakistan) ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಸರ್ಫರಾಜ್‌ ನವಾಜ್‌, ಟೀಂ ಇಂಡಿಯಾ ಇತ್ತೀಚೆಗೆ ವಿಂಡೀಸ್‌ (West Indies) ವಿರುದ್ಧ ನಡೆದ ಏಕದಿನ ಪಂದ್ಯದಲ್ಲಿ ನಡೆಸಿದ ಪ್ರಯೋಗಗಳ ಕುರಿತು ಅಭಿಪ್ರಾಯ ಹಂಚಿಕೊಂಡಿದ್ದಾರೆ. ಭಾರತ ತಂಡಕ್ಕೆ ಹೋಲಿಸಿದ್ರೆ ಪಾಕಿಸ್ತಾನ ತಂಡ 100% ಸ್ಥಿರವಾಗಿದೆ. ಏಷ್ಯಾಕಪ್ ಮತ್ತು ಏಕದಿನ ವಿಶ್ವಕಪ್​ ಟೂರ್ನಿಗಳಿಗೆ ಅತ್ಯಂತ ಸ್ಥಿರವಾದ ತಂಡವನ್ನ ಹೊಂದಿದೆ. ಆದ್ರೆ ಭಾರತ ಇನ್ನೂ ಅಂತಿಮ ತಂಡವನ್ನ ಸಂಯೋಜನೆ ಮಾಡೋದಕ್ಕೆ ಹೆಣಗಾಡುತ್ತಿದೆ ಎಂದು ಟೀಕಿಸಿದ್ದಾರೆ. ಇದನ್ನೂ ಓದಿ: ಇನ್ಸ್ಟಾದಿಂದ ಅತಿ ಹೆಚ್ಚು ಹಣ – ಜಸ್ಟ್ 1 ಪೋಸ್ಟ್‌ಗೆ ಕೊಹ್ಲಿಗೆ ಸಿಗುತ್ತೆ ಕೋಟಿ ಕೋಟಿ

    ವೆಸ್ಟ್​ ಇಂಡೀಸ್​ ಸರಣಿಯಲ್ಲಿ ಭಾರತ ತಂಡದ ಪರಿಸ್ಥಿತಿ ಅರ್ಥವಾಗುತ್ತಿದೆ. ಏಷ್ಯಾಕಪ್ ಮತ್ತು ಏಕದಿನ ವಿಶ್ವಕಪ್​ಗೆ ತಮ್ಮ ತಂಡವನ್ನು ಸಂಯೋಜಿಸಲು ಪರದಾಡುತ್ತಿದೆ. ಯಾರನ್ನ ಯಾವ ಜಾಗದಲ್ಲಿ ಆಡಿಸಿದ್ರೆ ಉತ್ತಮ ಅನ್ನೋದೇ ಗೊಂದಲವಾಗಿ ಕಾಡುತ್ತಿದೆ. ಪದೆ ಪದೇ ನಾಯಕರು ಬದಲಾಗುತ್ತಿದ್ದಾರೆ. ಹೊಸ ಆಟಗಾರರನ್ನ ಕರೆ ತರುತ್ತಿದ್ದಾರೆ. ಮತ್ತೊಂದೆಡೆ ಆಟಗಾರರಿಗೆ ಗಾಯದ ಸಮಸ್ಯೆಗಳು. ಇದೆಲ್ಲಾ ನೋಡುತ್ತಿದ್ದರೆ, ಸರಿಯಾದ ಸಂಯೋಜನೆಗೆ ಸಿದ್ಧವಾಗಲು ಕಷ್ಟವಾಗುತ್ತಿದೆ ಎಂದೆನಿಸುತ್ತದೆ ಎಂದಿದ್ದಾರೆ.

    ಇದೇ ವೇಳೆ ಶ್ರೇಯಸ್ ಅಯ್ಯರ್, ಕೆ.ಎಲ್ ರಾಹುಲ್ ಕಂಬ್ಯಾಕ್‌ ಕುರಿತು ಕಳವಳ ವ್ಯಕ್ತಪಡಿಸಿದ ನವಾಜ್‌, ಟೀಂ ಇಂಡಿಯಾ ತನ್ನ ಅಭಿವೃದ್ಧಿಗೆ ಯಾವುದೇ ಪ್ರಯತ್ನ ನಡೆಸುತ್ತಿಲ್ಲ. ಬೆಂಚ್​ ಬಲವನ್ನ ಹೆಚ್ಚಿಸುವಲ್ಲಿ ವಿಫಲವಾಗುತ್ತಿದ್ದು, ವಿನಾಶದತ್ತ ಸಾಗುತ್ತಿದೆ. ಪ್ರಮುಖ ಟೂರ್ನಿಗಳು ಹತ್ತಿರದಲ್ಲಿರುವಾಗ ಯಾವ ರೀತಿ ಸಂಯೋಜನೆ ಮಾಡಬೇಕು ಎಂಬುದೇ ತಿಳಿದಿಲ್ಲ. ಈ ಅವಧಿಯಲ್ಲೂ ಪ್ರಯೋಗಗಳು ಅಗತ್ಯವೇ? ಎಂದು ಪ್ರಶ್ನಿಸಿದ್ದಾರೆ. ಇದನ್ನೂ ಓದಿ: ICC WorldCup 2023: ಭಾರತ-ಪಾಕ್‌ ಸೇರಿದಂತೆ ಪ್ರಮುಖ ಪಂದ್ಯಗಳ ವೇಳಾಪಟ್ಟಿ ಬದಲು

    ಐಸಿಸಿ ಟ್ರೋಫಿ ಗೆಲ್ಲುವ ಒತ್ತಡಕ್ಕೂ ಭಾರತ ಸಿಲುಕಿದೆ. ಏಕೆಂದರೆ ಕಳೆದ 10 ವರ್ಷಗಳಲ್ಲಿ ಟೀಂ ಇಂಡಿಯಾ ಐಸಿಸಿಯ ಯಾವುದೇ ಟ್ರೋಫಿ ಗೆದ್ದಿಲ್ಲ ಎಂದು ನವಾಜ್ ವಿವರಿಸಿದ್ದಾರೆ.

    ಇದೇ ಆಗಸ್ಟ್‌ 30 ರಿಂದ ಪಾಕಿಸ್ತಾನ ಮತ್ತು ಶ್ರೀಲಂಕಾ ಆತಿಥ್ಯದಲ್ಲಿ ಏಕದಿನ ಏಷ್ಯಾಕಪ್‌ ಟೂರ್ನಿ ಆಯೋಜನೆಗೊಂಡಿದೆ. ಆ ನಂತರ ಅಕ್ಟೋಬರ್‌ 5 ರಿಂದ ನವೆಂಬರ್‌ 19ರ ವರೆಗೆ ಭಾರತದಲ್ಲಿ ವಿಶ್ವಕಪ್‌ ಟೂರ್ನಿ ನಡೆಯಲಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ICC WorldCup 2023: ಪಾಕಿಸ್ತಾನ ತಂಡ ಭಾರತಕ್ಕೆ ಬರೋದು ಫಿಕ್ಸ್

    ICC WorldCup 2023: ಪಾಕಿಸ್ತಾನ ತಂಡ ಭಾರತಕ್ಕೆ ಬರೋದು ಫಿಕ್ಸ್

    ಇಸ್ಲಾಮಾಬಾದ್: ಪಾಕಿಸ್ತಾನ ಪುರುಷರ ಕ್ರಿಕೆಟ್ ತಂಡವು (Pakistan Cricket Team) 2023ರ ವಿಶ್ವಕಪ್ ಟೂರ್ನಿಗೆ ಭಾರತಕ್ಕೆ ಪ್ರಯಾಣಿಸಲಿದೆ ಎಂದು ಪಾಕಿಸ್ತಾನ ವಿದೇಶಾಂಗ ವ್ಯವಹಾರಗಳ ಸಚಿವಾಲಯ ಭಾನುವಾರ ಖಚಿತಪಡಿಸಿದೆ.

    2023ರ ಏಕದಿನ ವಿಶ್ವಕಪ್ (ICC World Cup 2023) ಟೂರ್ನಿಗಾಗಿ ಪಾಕಿಸ್ತಾನ ತಂಡವು ಭಾರತಕ್ಕೆ ಪ್ರಯಾಣಿಸಲಿದೆ. ಭಾರತದೊಂದಿಗಿನ ದ್ವಿಪಕ್ಷೀಯ ಸಂಬಂಧಗಳು ಕ್ರೀಡೆಗೆ ಅಡ್ಡಿಯಾಗುವುದಿಲ್ಲ ಎಂದು ಸಚಿವಾಲಯ ತಿಳಿಸಿದೆ. ಈ ಹಿನ್ನೆಲೆಯಲ್ಲಿ ಅಕ್ಟೋಬರ್ 15ರಂದು ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಿಗದಿಯಾಗಿರುವ ಪಂದ್ಯದಲ್ಲಿ ಪಾಕ್ ತಂಡ ಭಾರತದ ವಿರುದ್ಧ ಕಣಕ್ಕಿಳಿಯುವುದು ಪಕ್ಕಾ ಆಗಿದೆ. ಆದ್ರೆ ಅಕ್ಟೋಬರ್ 15 ರಂದು ನವರಾತ್ರಿ ಉತ್ಸವದ ಆರಂಭದ ದಿನ ಆಗಿರುವುದರಿಂದ ದಿನಾಂಕ ಬದಲಾಯಿಸುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ. ಇದನ್ನೂ ಓದಿ: ಉತ್ತರ ಪ್ರದೇಶದಲ್ಲಿ ಕಾರು ಅಪಘಾತ – ಇಬ್ಬರು ಮಕ್ಕಳು ಸೇರಿ 6 ಮಂದಿ ನೇಪಾಳಿ ಪ್ರಜೆಗಳು ದುರ್ಮರಣ

    ಕ್ರೀಡೆಯನ್ನು (Sports) ರಾಜಕೀಯದಿಂದೊಗೆ ಬೆರಸಬಾರದು ಎಂಬುದನ್ನ ಪಾಕಿಸ್ತಾನ ನಿರಂತರವಾಗಿ ಸಮರ್ಥಿಸಿಕೊಂಡಿದೆ. ಆದ್ದರಿಂದ ಮುಂಬರುವ ಐಸಿಸಿ ಟೂರ್ನಿಯಲ್ಲಿ ಕ್ರಿಕೆಟ್ ತಂಡವನ್ನು ಭಾರತಕ್ಕೆ ಕಳುಹಿಸಲು ನಿರ್ಧರಿಸಿದೆ ಎಂದು ಹೇಳಿದೆ.

    ಏಕದಿನ ಏಷ್ಯಾಕಪ್ (ODI AsiaCup) ಟೂರ್ನಿಯನ್ನು ಪಾಕಿಸ್ತಾನದಲ್ಲಿ ಆಯೋಜಿಸಲು ನಿರ್ಧರಿಸಲಾಗಿತ್ತು. ಆದ್ರೆ ಭಾರತ ತಂಡವನ್ನು ಪಾಕಿಸ್ತಾನಕ್ಕೆ ಕಳುಹಿಸಲು ಬಿಸಿಸಿಐ ನಿರಾಕರಿಸಿತು. ಆದ್ದರಿಂದ ಶ್ರೀಲಂಕಾದಲ್ಲಿ ನಿಗದಿಯಾಗಿದೆ. ಭಾರತ ಕಠಿಣ ನಿರ್ಧಾರ ತೋರಿದ ಹೊರತಾಗಿಯೂ ಪಾಕಿಸ್ತಾನದ ಈ ನಿರ್ಧಾರ ತನ್ನ ಜವಾಬ್ದಾರಿಯನ್ನ ತೋರಿಸಿದೆ ಎಂದು ಸಚಿವಾಲಯ ತಿಳಿಸಿದೆ. ಇದನ್ನೂ ಓದಿ: ಜಮ್ಮು ಕಾಶ್ಮೀರದಲ್ಲಿ ಎನ್‌ಕೌಂಟರ್ – ಒಬ್ಬ ಭಯೋತ್ಪಾದಕನನ್ನು ಹೊಡೆದುರುಳಿಸಿದ ಭದ್ರತಾ ಪಡೆ

    ಕಳೆದ ಕೆಲವು ದಿನಗಳಲ್ಲಿ ಪಾಕಿಸ್ತಾನದ ಅಧಿಕಾರಿಗಳ ಸಮಿತಿ ಭಾರತಕ್ಕೆ ಭೇಟಿ ನೀಡಿತ್ತು. ಇಲ್ಲಿ ಪಾಕ್ ತಂಡಕ್ಕೆ ನೀಯೋಜಿಸಲಾದ ಭದ್ರತಾ ವ್ಯವಸ್ಥೆಯ ಬಗ್ಗೆ ಪರಿಶೀಲಿಸಲು ವಿವಿಧ ಸ್ಥಳಗಳಿಗೆ ಅಧಿಕಾರಿಗಳ ತಂಡ ಪ್ರಯಾಣಿಸಿತ್ತು. 2016ರಲ್ಲಿ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಪಾಕಿಸ್ತಾನ ತಂಡ ಭಾರತದ ವಿರುದ್ಧ ಈಡನ್ ಗಾರ್ಡನ್‌ನಲ್ಲಿ ಸೆಣಸಾಟ ನಡೆಸಿತ್ತು. ಆ ನಂತರ ಇದೇ ಮೊದಲಿಗೆ ಭಾರತಕ್ಕೆ ಪಾಕ್ ತಂಡ ಪ್ರಯಾಣಿಸುತ್ತಿದೆ.


    ಭಾರತದಲ್ಲಿ ಪಾಕ್‌ ತಂಡದ ವೇಳಾಪಟ್ಟಿ ಹೀಗಿದೆ…

    ಪಾಕಿಸ್ತಾನ vs ಕ್ವಾಲಿಫೈಯರ್ 1, ಅಕ್ಟೋಬರ್ 6 – ಹೈದರಾಬಾದ್
    ಪಾಕಿಸ್ತಾನ vs ಕ್ವಾಲಿಫೈಯರ್ 2, ಅಕ್ಟೋಬರ್ 12 – ಹೈದರಾಬಾದ್
    ಪಾಕಿಸ್ತಾನ vs ಭಾರತ, ಅಕ್ಟೋಬರ್ 15 – ಅಹಮದಾಬಾದ್
    ಪಾಕಿಸ್ತಾನ vs ಆಸ್ಟ್ರೇಲಿಯಾ, ಅಕ್ಟೋಬರ್ 20 – ಬೆಂಗಳೂರು
    ಪಾಕಿಸ್ತಾನ vs ಅಫ್ಘಾನಿಸ್ತಾನ, ಅಕ್ಟೋಬರ್ 23- ಚೆನ್ನೈ
    ಪಾಕಿಸ್ತಾನ vs ದಕ್ಷಿಣ ಆಫ್ರಿಕಾ, ಅಕ್ಟೋಬರ್ 27- ಚೆನ್ನೈ
    ಪಾಕಿಸ್ತಾನ vs ಬಾಂಗ್ಲಾದೇಶ, ಅಕ್ಟೋಬರ್ 31 – ಕೋಲ್ಕತ್ತಾ
    ಪಾಕಿಸ್ತಾನ vs ನ್ಯೂಜಿಲೆಂಡ್, ನವೆಂಬರ್ 4 – ಬೆಂಗಳೂರು
    ಪಾಕಿಸ್ತಾನ vs ಇಂಗ್ಲೆಂಡ್, ನವೆಂಬರ್ 12- ಕೋಲ್ಕತ್ತಾ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಇಂಡೋ-ಪಾಕ್‌ ಕದನಕ್ಕೆ ನವರಾತ್ರಿ ಅಡ್ಡಿಯಾಗುತ್ತಾ? – ಹೈವೋಲ್ಟೇಜ್‌ ಸಭೆಯಲ್ಲಿ BCCI ಹೇಳಿದ್ದೇನು?

    ಇಂಡೋ-ಪಾಕ್‌ ಕದನಕ್ಕೆ ನವರಾತ್ರಿ ಅಡ್ಡಿಯಾಗುತ್ತಾ? – ಹೈವೋಲ್ಟೇಜ್‌ ಸಭೆಯಲ್ಲಿ BCCI ಹೇಳಿದ್ದೇನು?

    ಮುಂಬೈ: ಐಸಿಸಿ ವಿಶ್ವಕಪ್‌ ಟೂರ್ನಿಗೆ (World Cup 2023) ಸಂಬಂಧಿಸಿದಂತೆ ರಾಜ್ಯ ಸಂಸ್ಥೆಗಳೊಂದಿಗೆ ಹೈವೋಲ್ಟೇಜ್‌ ಸಭೆ ನಡೆಸಿದ ಬಿಸಿಸಿಐ (BCCI), ಬಹುನಿರೀಕ್ಷಿತ ಭಾರತ ಮತ್ತು ಪಾಕಿಸ್ತಾನ (India-Pakistan) ನಡುವಿನ ಪಂದ್ಯವು ನಿಗದಿಪಡಿಸಿದ ದಿನಾಂಕ, ಸ್ಥಳದಲ್ಲೇ ನಡೆಯಲಿದೆ. ಈ ಕುರಿತು ಇನ್ನೆರಡು-ಮೂರು ದಿನಗಳಲ್ಲಿ ನಿರ್ಧಾರ ಪ್ರಕಟಿಸಲಾಗುವುದು ಎಂದು ತಿಳಿಸಿದೆ.

    ಅಕ್ಟೋಬರ್‌ 15 ರಂದು ನವರಾತ್ರಿ ಉತ್ಸವದ ಮೊದಲ ದಿನ ಆರಂಭವಾಗುವುದರಿಂದ ಅಕ್ಟೋಬರ್‌ 14 ರಂದೇ ಪಂದ್ಯ ನಡೆಸಲಾಗುವುದು ಎಂದು ಹೇಳಲಾಗಿತ್ತು. ಇದಕ್ಕೆ ಸ್ಪಷ್ಟನೆ ನೀಡಿರುವ ಬಿಸಿಸಿಐ, ವೇಳಾಪಟ್ಟಿಯಲ್ಲಿ ಯಾವುದೇ ಬದಲಾವಣೆ ಇಲ್ಲ.‌ ಭಾರತ ಮತ್ತು ಪಾಕಿಸ್ತಾನ ನಡುವಿನ ಪಂದ್ಯ ನಿಗದಿತ ದಿನಾಂಕ ಮತ್ತು ಸ್ಥಳದಲ್ಲೇ ನಡೆಯಲಿದೆ. ಇನ್ನೆರಡು-ಮೂರು ದಿನಗಳಲ್ಲಿ ಅಧಿಕೃತ ನಿರ್ಧಾರ ಪ್ರಕಟಿಸಲಾಗುವುದು ಎಂದು ಬಿಸಿಸಿಐ ಕಾರ್ಯದರ್ಶಿ ಜಯ್‌ ಶಾ (Jay Shah) ತಿಳಿಸಿದ್ದಾರೆ. ಇದನ್ನೂ ಓದಿ: ಪಾಕ್‌ ಆಟಗಾರರು ಹುಲಿಗಳಂತೆ ಆಡ್ತಾರೆ, ಭಾರತವನ್ನ ಎಲ್ಲಿ ಬೇಕಾದ್ರೂ ಸೋಲಿಸ್ತಾರೆ – ಪಾಕ್‌ ಮಾಜಿ ಕ್ರಿಕೆಟಿಗ

    ಅಂತಿಮ ನಿರ್ಧಾರಕ್ಕೆ ಬರುವುದಕ್ಕೂ ಮುನ್ನ ಅಂತಾರಾಷ್ಟ್ರೀಯ ಕ್ರಿಕೆಟ್‌ ಮಂಡಳಿ (ICC) ಮತ್ತು ಪಾಕಿಸ್ತಾನ ಕ್ರಿಕೆಟ್‌ ಮಂಡಳಿ (PCB) ಜೊತೆಗೆ ಚರ್ಚೆ ನಡೆಸಲಾಗುವುದು. ಮೂವರು ಐಸಿಸಿ ಸದಸ್ಯರು ವೇಳಾಪಟ್ಟಿಯಲ್ಲಿ ಬದಲಾವಣೆ ಮಾಡುವಂತೆ ಕೇಳಿರುವುದರಿಂದ ಸಣ್ಣಪುಟ್ಟ ಬದಲಾವಣೆ ಆಗಬಹುದು ಎಂದು ಶಾ ಹೇಳಿದ್ದಾರೆ. ಇದನ್ನೂ ಓದಿ: ಅನುಚಿತ ವರ್ತನೆ ತೋರಿದ್ದೇ ಮುಳುವಾಯ್ತಾ? – ಹರ್ಮನ್‌ಪ್ರೀತ್ ಕೌರ್‌ಗೆ ನಿಷೇಧದ ಭೀತಿ

    ಕೋಕಾ ಕೋಲಾ ಜೊತೆಗ ಒಪ್ಪಂದ:
    ಇನ್ನೂ ಟಿಕೆಟ್‌ ದರ ನಿಗದಿಗಾಗಿ ಬಿಸಿಸಿಐ ರಾಜ್ಯ ಸಂಸ್ಥೆಗಳ ಜೊತೆಗೂ ಮಾತುಕತೆ ನಡೆಸುತ್ತಿದೆ. ಜೊತೆಗೆ ಕ್ರೀಡಾಂಗಣಗಳಲ್ಲಿ ಸ್ವಚ್ಛತೆ, ಶೌಚಾಲಯ ವ್ಯವಸ್ಥೆಗಳ ಬಗ್ಗೆಯೂ ಸಭೆಯಲ್ಲಿ ಚರ್ಚಿಸಿದೆ. ಕ್ರೀಡಾಭಿಮಾನಿಗಳಿಗೆ ನೀರಿನ ಬಾಟಲಿಗಳನ್ನು ಒದಗಿಸಲು ಕೋಕಾ-ಕೋಲಾದೊಂದಿಗೆ ಒಪ್ಪಂದ ಮಾಡಿಕೊಳ್ಳಲಾಗಿದೆ ಎಂದು ಅವರು ತಿಳಿಸಿದ್ದಾರೆ. ಇದನ್ನೂ ಓದಿ:  AsiaCup 2023: ಅಂದುಕೊಂಡಂತೆ ನಡೆದ್ರೆ 15 ದಿನಗಳಲ್ಲಿ 3 ಬಾರಿ ಇಂಡೋ-ಪಾಕ್ ಕದನ ಫಿಕ್ಸ್

    ಐಸಿಸಿ ಕಳೆದ ತಿಂಗಳು ಏಕದಿನ ವಿಶ್ವಕಪ್‌ ವೇಳಾಪಟ್ಟಿ ಬಿಡುಗಡೆ ಮಾಡಿತ್ತು. ಅದರಂತೆ ಆರಂಭಿಕ ಮತ್ತು ಫೈನಲ್‌ ಪಂದ್ಯಗಳು ನರೇಂದ್ರಮೋದಿ ಕ್ರೀಡಾಂಗಣದಲ್ಲಿ ನಡೆಯಲಿದೆ. 10 ದಿನಗಳಲ್ಲಿ ಒಟ್ಟು 48 ಪಂದ್ಯಗಳು ನಡೆಯಲಿದ್ದು, ನವೆಂಬರ್‌ 19ರಂದು ಫೈನಲ್‌ ಪಂದ್ಯ ನಡೆಯಲಿದೆ. ಇದನ್ನೂ ಓದಿ: Emerging AsiaCup: ಭಾರತಕ್ಕೆ ಹೀನಾಯ ಸೋಲು, 128 ರನ್‌ ಜಯದೊಂದಿಗೆ ಚಾಂಪಿಯನ್‌ ಪಟ್ಟಕ್ಕೇರಿದ ಪಾಕಿಸ್ತಾನ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಇಸ್ಲಾಂ ಧರ್ಮ ಹೇಳಿದಂತೆ ಬದುಕುತ್ತೇನೆ – ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಗುಡ್‌ಬೈ ಹೇಳಿದ ಪಾಕ್‌ ಆಟಗಾರ್ತಿ

    ಇಸ್ಲಾಂ ಧರ್ಮ ಹೇಳಿದಂತೆ ಬದುಕುತ್ತೇನೆ – ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಗುಡ್‌ಬೈ ಹೇಳಿದ ಪಾಕ್‌ ಆಟಗಾರ್ತಿ

    ಇಸ್ಲಾಮಾಬಾದ್‌: ನಾನು ಇನ್ಮುಂದೆ ಇಸ್ಲಾಮಿಕ್‌ ಧರ್ಮದಂತೆಯೇ ಬದುಕುತ್ತೇನೆ, ಇಸ್ಲಾಮಿಕ್‌ ತತ್ವ ಬೋಧನೆಯನ್ನ ಅನುಸರಿಸುತ್ತೇನೆ ಎಂದು ಹೇಳಿರುವ ಪಾಕ್‌ ಮಹಿಳಾ ಕ್ರಿಕೆಟ್‌ ತಂಡದ ಸ್ಫೋಟಕ ಬ್ಯಾಟರ್‌ (Pakistani Cricketer) ಆಯೇಶಾ ನಸೀಮ್ (Ayesha Naseem) ತನ್ನ 18ನೇ ವಯಸ್ಸಿಗೆ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದಾರೆ.

    ಆರಂಭಿಕ ಹಂತದಿಂದಲೇ ಅದ್ಭುತ ಬ್ಯಾಟಿಂಗ್‌ ಪ್ರದರ್ಶನ ನೀಡುತ್ತಿದ್ದ ಆಯೇಶಾ, ಮುಂದೆ ತಂಡ ನಾಯಕತ್ವ ವಹಿಸುವ ಭರವಸೆ ಮೂಡಿಸಿದ್ದರು. ಇದೀಗ ನಿವೃತ್ತಿ ಘೋಷಿಸಿ ನಿರಾಸೆ ಮೂಡಿಸಿದ್ದಾರೆ. ಇದನ್ನೂ ಓದಿ: ಪಾಕ್‌ ಆಟಗಾರರು ಹುಲಿಗಳಂತೆ ಆಡ್ತಾರೆ, ಭಾರತವನ್ನ ಎಲ್ಲಿ ಬೇಕಾದ್ರೂ ಸೋಲಿಸ್ತಾರೆ – ಪಾಕ್‌ ಮಾಜಿ ಕ್ರಿಕೆಟಿಗ

    ನಸೀಮ್ ಅವರು ಇಸ್ಲಾಂ ಧರ್ಮದ ಪ್ರಕಾರ ತಮ್ಮ ಜೀವನವನ್ನು ನಡೆಸುವ ಕಾರಣದಿಂದ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಹೇಳಲು ನಿರ್ಧರಿಸಿದ್ದಾರೆ. ನಾನು ಕ್ರಿಕೆಟ್ ಆಟ ತ್ಯಜಿಸುತ್ತಿದ್ದೇನೆ ಮತ್ತು ಇಸ್ಲಾಂ ಧರ್ಮದ ಪ್ರಕಾರ ನನ್ನ ಜೀವನವನ್ನು ನಡೆಸಲು ಬಯಸುತ್ತೇನೆ ಎಂದು ನಸೀಮ್ ಪಾಕಿಸ್ತಾನ ಕ್ರಿಕೆಟ್‌ ಬೋರ್ಡ್‌ಗೆ ತಿಳಿಸಿದ್ದಾರೆ.

    18 ವರ್ಷದ ಪಾಕ್‌ ಮಹಿಳಾ ಆಟಗಾರ್ತಿ ಆಯೇಶಾ ನಸೀಮ್ ಈವರೆಗೆ ನಾಲ್ಕು ಏಕದಿನ, 30 T20 ಪಂದ್ಯಗಳನ್ನಾಡಿದ್ದಾರೆ. ಅಗ್ರ ಕ್ರಮಾಂಕದ ಬ್ಯಾಟರ್‌ ಆಗಿ ಟಿ20 ಕ್ರಿಕೆಟ್‌ನಲ್ಲಿ 18:45 ಸರಾಸರಿಯಲ್ಲಿ 369 ರನ್‌ ಗಳಿಸಿದ್ದಾರೆ. ಏಕದಿನ ಕ್ರಿಕೆಟ್‌ನಲ್ಲಿ ಕೇವಲ 33 ರನ್‌ ಗಳಿಸಿದ್ದಾರೆ. 2023ರ ಮಹಿಳಾ ಟಿ20 ವಿಶ್ವಕಪ್‌ ಟೂರ್ನಿಯಲ್ಲಿ ಭಾರತೀಯ ಮಹಿಳಾ ಕ್ರಿಕೆಟ್‌ ತಂಡದ ವಿರುದ್ಧ ಕಣಕ್ಕಿಳಿದಾಗ 25 ಎಸೆತಗಳಲ್ಲಿ ಸ್ಫೋಟಕ 43 ರನ್‌ ಚಚ್ಚಿದ್ದರು. ಇದನ್ನೂ ಓದಿ: AsiaCup 2023: ಅಂದುಕೊಂಡಂತೆ ನಡೆದ್ರೆ 15 ದಿನಗಳಲ್ಲಿ 3 ಬಾರಿ ಇಂಡೋ-ಪಾಕ್ ಕದನ ಫಿಕ್ಸ್

    2021ರಲ್ಲಿ ಆಯೇಶಾ ವೆಸ್ಟ್‌ ಇಂಡೀಸ್‌ ವಿರುದ್ಧ ಕಣಕ್ಕಿಳಿದಾಗ 33 ಎಸೆತಗಳಲ್ಲಿ 45 ರನ್‌ ಗಳಿಸಿದ್ದರು. ಈ ಮೂಲಕ ಎಲ್ಲರ ಗಮನ ಸೆಳೆದಿದ್ದರು. ಅದೇ ವರ್ಷದಲ್ಲಿ ಶ್ರೀಲಂಕಾ ವಿರುದ್ಧ ನಡೆದ ಟಿ20 ಕ್ರಿಕೆಟ್‌ನಲ್ಲಿ 31 ಎಸೆತಗಳಲ್ಲಿ 45 ರನ್‌ ಗಳಿಸಿ ಮಿಂಚಿದ್ದರು. ಈ ವರ್ಷದ ಜನವರಿಯಲ್ಲಿ ಆಸ್ಟ್ರೇಲಿಯಾ ವಿರುದ್ಧ ಟಿ20 ಸರಣಿಯಲ್ಲಿ ಭರ್ಜರಿ ಬ್ಯಾಟಿಂಗ್‌ ಮಾಡಿ ತಂಡದಲ್ಲಿ ಗುರುತಿಸಿಕೊಂಡಿದ್ದರು. ಪಾಕ್‌ ಹಿರಿಯ ಕ್ರಿಕೆಟಿಗರಿಂದಲೂ ಭಾರೀ ಹೊಳಿಗಕೆ ಸಂದಿತ್ತು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]