Tag: PCB

  • PublicTV Explainer: ಇಂಡೋ-ಪಾಕ್‌ ಕದನ ಯಾಕಿಷ್ಟು ರಣರೋಚಕ – ನೀವು ತಿಳಿಯಲೇಬೇಕಾದ ಸಂಗತಿಗಳಿವು..

    PublicTV Explainer: ಇಂಡೋ-ಪಾಕ್‌ ಕದನ ಯಾಕಿಷ್ಟು ರಣರೋಚಕ – ನೀವು ತಿಳಿಯಲೇಬೇಕಾದ ಸಂಗತಿಗಳಿವು..

    ಪ್ರತಿಷ್ಠಿತ ಐಸಿಸಿ ವಿಶ್ವಕಪ್‌ (ICC World Cup 2023) ಟೂರ್ನಿಗೆ ಇನ್ನು ಎರಡೂವರೆ ತಿಂಗಳಷ್ಟೇ ಸಮಯ ಬಾಕಿಯಿದ್ದರೂ ಪಾಕಿಸ್ತಾನ ಟೂರ್ನಿಯಲ್ಲಿ ಪಾಲ್ಗೊಳ್ಳುವ ಬಗ್ಗೆ ದಿನಕ್ಕೊಂದು ಕ್ಯಾತೆ ತೆಗೆಯುತ್ತಿದೆ. ಏಕೆಂದರೆ ಇನ್ನೆರಡು ತಿಂಗಳ ಒಳಗೆ ಚುನಾವಣೆ ನಡೆಯಲಿದ್ದು, ವಿಶ್ವಕಪ್​ ವೇಳೆ ಹೊಸ ಸರ್ಕಾರ ರಚನೆಯಾಗಲಿದೆ. ಹೀಗಾಗಿ ಹಾಲಿ ಸರ್ಕಾರಕ್ಕಿಂತ ಹೊಸ ಸರ್ಕಾರದ ನಿಲುವೇ ವಿಶ್ವಕಪ್​ನಲ್ಲಿ ಪಾಕ್​ ತಂಡ ಆಡುವಲ್ಲಿ ನಿರ್ಣಾಯಕ ಪಾತ್ರ ವಹಿಸಲಿದೆ ಎನ್ನಲಾಗಿದೆ. ಈ ನಡುವೆ ಪಾಕಿಸ್ತಾನ ಕ್ರಿಕೆಟ್​ ಮಂಡಳಿಯಲ್ಲೂ (PCB) ಹೊಸ ಆಡಳಿತ ಮಂಡಳಿ ಬರಲಿದೆ. ಸದ್ಯ ಪಿಸಿಬಿ ಚುನಾವಣೆ ಜುಲೈ 17ರ ವರೆಗೆ ಮುಂದೂಡಿಕೆಯಾಗಿದೆ.

    ಬಾಬರ್​ ಅಜಮ್​ ಸಾರಥ್ಯದ ಪಾಕಿಸ್ತಾನ ತಂಡವನ್ನು ಏಕದಿನ ವಿಶ್ವಕಪ್​ ಟೂರ್ನಿಯಲ್ಲಿ ಆಡಲು ಭಾರತಕ್ಕೆ ಕಳುಹಿಸುವ ಬಗ್ಗೆ ಪಿಸಿಬಿ ಈಗಲೂ ಅಡ್ಡಗೋಡೆ ಮೇಲೆ ದೀಪವಿಟ್ಟಂತೆ ಮಾತನಾಡುತ್ತಿದ್ದರೂ, ಪಾಕ್​ ತಂಡ ವಿಶ್ವಕಪ್​ನಲ್ಲಿ ಭಾಗವಹಿಸುವ ಬಗ್ಗೆ ಐಸಿಸಿ (ICC) ವಿಶ್ವಾಸ ವ್ಯಕ್ತಪಡಿಸಿದೆ. ಇನ್ನು ಪಾಕ್​ ತಂಡ ರಾಜಕೀಯ ಕಾರಣಗಳಿಂದಾಗಿ ವಿಶ್ವಕಪ್​ನಲ್ಲಿ ಮುಂಬೈನಲ್ಲಿ ಯಾವುದೇ ಪಂದ್ಯ ಆಡದಂತೆ ವೇಳಾಪಟ್ಟಿ ರೂಪಿಸಲಾಗಿದೆ, ಅದಕ್ಕೆ ಕಾರಣವೂ ಇದೆ. ಇದನ್ನೂ ಓದಿ: ವಿಶ್ವಕಪ್‌ ಟೂರ್ನಿ ಆಡಲು ಪಾಕ್‌ ತಂಡ ಭಾರತಕ್ಕೆ ಬರಲ್ಲ – ಮತ್ತೆ ಕ್ಯಾತೆ ತೆಗೆದ ಪಾಕ್‌ ಸಚಿವ

    2023ರ ಏಕದಿನ ಏಷ್ಯಾಕಪ್‌ ಟೂರ್ನಿಯನ್ನಾಡಲು ಭಾರತ ತಂಡವನ್ನು ಪಾಕ್‌ಗೆ ಕಳುಹಿಸಲು ಬಿಸಿಸಿಐ ನಿರಾಕರಿಸಿದ ನಂತರ ACC (ಏಷ್ಯನ್‌ ಕ್ರಿಕೆಟ್‌ ಸಮಿತಿ) ಹೈಬ್ರಿಡ್‌ ಮಾದರಿಯಲ್ಲಿ ಆಡಿಸಲು ನಿರ್ಧರಿಸಿತು. ಏಷ್ಯಾಕಪ್‌ ಟೂರ್ನಿಯ ಹಕ್ಕು ಪಾಕಿಸ್ತಾನದ ಬಳಿಯಿದ್ದರೂ ಪಾಕ್‌ನಲ್ಲಿ ಕೇವಲ 4 ಪಂದ್ಯಗಳನ್ನಾಡಲು ಮಾತ್ರವೇ ಅನುಮತಿ ನೀಡಿತು. ಉಳಿದ 9 ಪಂದ್ಯಗಳನ್ನ ಶ್ರೀಲಂಕಾದಲ್ಲಿ ಆಡಿಸಲು ನಿರ್ಧರಿಸಿತು. ಇದೇ ಕಾರಣಕ್ಕಾಗಿ ಪಾಕಿಸ್ತಾನ ಕೂಡ ವಿಶ್ವಕಪ್‌ ಆಡುವ ವಿಚಾರದಲ್ಲಿ ಅಂತಿಮ ನಿರ್ಧಾರ ಪ್ರಕಟಿಸದೇ ದಿನಕ್ಕೊಂದು ತಗಾದೆ ತೆಗೆದುಕೊಂಡು ಕುಳಿತಿದೆ. ಇದೀಗ ಭಾರತಕ್ಕೆ ವಿಶ್ವಕಪ್‌‌ ಟೂರ್ನಿಗೆ ಕಳುಹಿಸುವ ಬಗ್ಗೆ ಚಿಂತನೆ ನಡೆಸಲು ಪ್ರತ್ಯೇಕ ಸಮಿತಿಯನ್ನೂ ರಚನೆ ಮಾಡಿ, ಚರ್ಚಿಸುತ್ತಿದೆ.

    1987 ಮತ್ತು 1996ರಲ್ಲಿ ಪಾಕಿಸ್ತಾನದ ಜೊತೆಗೆ 2011ರಲ್ಲಿ ಬಾಂಗ್ಲಾದೇಶದ ಜೊತೆಗೆ ಸಹ ಆತಿಥ್ಯದೊಂದಿಗೆ ವಿಶ್ವಕಪ್‌ ಟೂರ್ನಿ ಆಯೋಜಿಸಿದ್ದ ಭಾರತ ಈ ಬಾರಿ ಪೂರ್ಣ ಆತಿಥ್ಯ ವಹಿಸಿಕೊಂಡಿದೆ. ಈಗಾಗಲೇ ಅಕ್ಟೋಬರ್‌ 5 ರಿಂದ ನವೆಂಬರ್‌ 19ರ ವರೆಗೆ ದೇಶದ ವಿವಿಧ ರಾಜ್ಯಗಳ 12 ಕ್ರೀಡಾಂಗಣದಲ್ಲಿ ಟೂರ್ನಿ ನಿಗದಿ ಮಾಡಿದ್ದು, ಎಲ್ಲವೂ ಅಂದುಕೊಂಡಂತೆ ನಡೆದರೆ ಭಾರತ-ಪಾಕಿಸ್ತಾನ ಅಕ್ಟೋಬರ್‌ 15ರಂದು ಅಹಮದಾಬಾದ್‌ನ ನರೇಂದ್ರಮೋದಿ ಕ್ರೀಡಾಂಗಣದಲ್ಲಿ (Narendra Modi Stadium) ಕಾದಾಟ ನಡೆಸಲಿವೆ.

    ಇಂಡೋ-ಪಾಕ್‌ ಕದನ ಯಾಕಿಷ್ಟು ರೋಚಕ? 

    ಭಾರತ ಮತ್ತು ಪಾಕಿಸ್ತಾನ  ತಂಡಗಳು ಎದುರಾಗುತ್ತಿವೆ ಅಂದ್ರೆ ಸಾಕು ಅದೊಂದು ರೋಚಕ ಕ್ಷಣವಾಗಿಯೇ ಮಾರ್ಪಟ್ಟಿರುತ್ತದೆ. ದೇಶದ ಮೂಲೆ ಮೂಲೆಯಲ್ಲಿರುವ ಕ್ರಿಕೆಟ್‌ ಅಭಿಮಾನಿಗಳು ಈ ಪಂದ್ಯಗಳನ್ನು ಕಣ್ತುಂಬಿಕೊಳ್ಳದೇ ಇರಲಾರರು. ಏಕೆ ಇಂಡೋ ಪಾಕ್‌ ಕದನ ಇಷ್ಟೊಂದು ಕೂತುಹಲ? ಭಾರತ ತಂಡವನ್ನ ಏಕೆ ಪಾಕಿಸ್ತಾನಕ್ಕೆ ಕಳುಹಿಸುತ್ತಿಲ್ಲ? ವಿಶ್ವಕಪ್‌ ಟೂರ್ನಿಗೆ ಪಾಕ್‌ ಏಕೆ ಹಿಂದೇಟು ಹಾಕುತ್ತಿದೆ? ಎಂಬುದನ್ನಿಲ್ಲಿ ತಿಳಿಯೋಣ. ಇದನ್ನೂ ಓದಿ: ICC World Cup 2023: ಟೀಂ ಇಂಡಿಯಾ ಪರಿಷ್ಕೃತ ವೇಳಾಪಟ್ಟಿ ರಿಲೀಸ್‌ – ಇಲ್ಲಿದೆ ಡಿಟೇಲ್ಸ್‌

    ಪಾಕಿಸ್ತಾನ ಮುಸ್ಲಿಂ ರಾಷ್ಟ್ರವಾಗಿ ಬೇರ್ಪಟ್ಟ ನಂತರ ಭಾರತದ ವಿರುದ್ಧ ದ್ವೇಷ ಸಾಧಿಸುತ್ತಲೇ ಬಂದಿತು. 1947-48ರಲ್ಲಿ ರಾಜ ಹರಿಸಿಂಗ್‌ ಭಾರತದೊಂದಿಗೆ ಕಾಶ್ಮೀರ ವಿಲೀನ ಒಪ್ಪಂದಕ್ಕೆ ಸಹಿ ಹಾಕಿದ ನಂತರ ಇಂಡೋ ಪಾಕ್‌ ಯುದ್ಧ (Indo Pak War) ನಡೆಯಿತು. ಆ ನಂತರ 1965ರಲ್ಲಿ ಕಾಶ್ಮೀರಕ್ಕಾಗಿ ನಡೆದ ಯುದ್ಧ, 1971ರಲ್ಲಿ ಪೂರ್ವ ಪಾಕಿಸ್ತಾನ (ಇಂದಿನ ಬಾಂಗ್ಲಾದೇಶ) ವಿಮೋಚನೆಗಾಗಿ ನಡೆದ ಯುದ್ಧ, 1999 ರಲ್ಲಿ ನಡೆದ ಕಾರ್ಗಿಲ್‌ ಯುದ್ಧ ಇವೆಲ್ಲವೂ ಭಾರತ ಮತ್ತು ಪಾಕಿಸ್ತಾನ ನಡುವಿನ ಸಂಬಂಧವನ್ನ ಮತ್ತಷ್ಟು ಹದಗೆಡಿಸುತ್ತಾ ಹೋಯಿತು. ಆದ್ರೆ ಕ್ರೀಡೆಯಲ್ಲಿ ಯಾವುದೇ ಬದಲಾವಣೆ ಆಗಿರಲಿಲ್ಲ. ಕಾರ್ಗಿಲ್‌ ಯುದ್ಧದ ನಂತರವೂ ಭಾರತ ಮತ್ತು ಪಾಕ್‌ ತಂಡಗಳು ದ್ವಿಪಕ್ಷಿಯ ಸರಣಿ, ಏಕದಿನ ಹಾಗೂ ಟಿ20 ಸರಣಿಗಳಲ್ಲಿ ಮುಖಾಮುಖಿಯಾಗಿವೆ. ಭಾರತ ತಂಡವು ಸಹ ಪಾಕಿಸ್ತಾನದಲ್ಲೇ ದ್ವಿಪಕ್ಷಿಯ ಸರಣಿಗಳನ್ನಾಡಿದೆ. ಆದ್ರೆ 2008ರಲ್ಲಿ ನಡೆದ ಮುಂಬೈ ದಾಳಿ (Mumbai Attack) ಎರಡು ರಾಷ್ಟ್ರಗಳ ಮೇಲೆ ಭಾರೀ ಪರಿಣಾಮ ಬೀರಿತು.

    ನೆನಪಿದೆಯಾ ಮುಂಬೈ ದಾಳಿ:

    2008ರ ನವೆಂಬರ್ 26 ರಂದು ಪಾಕಿಸ್ತಾನದಿಂದ ಸಮುದ್ರ ಮಾರ್ಗದ ಮೂಲಕ ಭಾರತದ ಆರ್ಥಿಕ ರಾಜಧಾನಿ ಮುಂಬೈಗೆ 10 ಲಷ್ಕರ್-ಎ-ತೈಬಾ ಭಯೋತ್ಪಾದಕರು ಪ್ರವೇಶಿಸಿದ್ದರು. 60 ಗಂಟೆಗಳಿಗೂ ಹೆಚ್ಚು ಕಾಲ ಮುತ್ತಿಗೆ ಹಾಕಿ, ಭಯೋತ್ಪಾದಕರು ಸರಣಿ ಗುಂಡಿನ ದಾಳಿ ಮತ್ತು ಬಾಂಬ್ ಸ್ಫೋಟಗಳನ್ನ ನಡೆಸಿ 166 ಜನರನ್ನು ಹತ್ಯೆಗೈದಿದ್ದರು. 300ಕ್ಕೂ ಹೆಚ್ಚು ಜನರನ್ನ ಗಾಯಗೊಳಿಸಿದ್ದರು. ಛತ್ರಪತಿ ಶಿವಾಜಿ ಟರ್ಮಿನಸ್ ರೈಲು ನಿಲ್ದಾಣ, ಕಾಮಾ ಆಸ್ಪತ್ರೆ, ನಾರಿಮನ್ ಹೌಸ್ ವ್ಯಾಪಾರ ಮತ್ತು ವಸತಿ ಸಂಕೀರ್ಣ, ಲಿಯೋಪೋಲ್ಡ್ ಕೆಫೆ, ತಾಜ್ ಹೋಟೆಲ್ ಮತ್ತು ಒಬೆರಾಯ್ ಟ್ರೈಡೆಂಟ್ ಹೋಟೆಲ್‌ಗಳಲ್ಲಿ ದಾಳಿ ನಡೆಸಲಾಗಿತ್ತು.

    ಭಾರತ ತಂಡವು 2005-2006ರಲ್ಲಿ ರಾಹುಲ್ ದ್ರಾವಿಡ್ ನಾಯಕತ್ವದಲ್ಲಿ ಪಾಕಿಸ್ತಾನಕ್ಕೆ ತನ್ನ ಕೊನೆಯ ಪ್ರವಾಸ ಕೈಗೊಂಡಿತ್ತು. ಈ ಪಂದ್ಯದಲ್ಲಿ ಇತ್ತಂಡಗಳು 3 ಟೆಸ್ಟ್ ಹಾಗೂ 5 ಏಕದಿನ ಪಂದ್ಯಗಳನ್ನಾಡಿದ್ದವು. ಆದ್ರೆ 2008ರಲ್ಲಿ ನಡೆದ ಮುಂಬೈ ದಾಳಿಯ ನಂತರ ಉಭಯ ತಂಡಗಳ ನಡುವೆ ಯಾವುದೇ ದ್ವಿಪಕ್ಷೀಯ ಸರಣಿ ನಡೆದಿಲ್ಲ. ಐಸಿಸಿ ಟೂರ್ನಿ ಅಥವಾ ಏಷ್ಯಾಕಪ್ ಟೂರ್ನಿಗಳಲ್ಲಿ ಮಾತ್ರವೇ ಪರಸ್ಪರ ಮುಖಾಮುಖಿಯಾಗುತ್ತಿವೆ. ಇದನ್ನೂ ಓದಿ: ಯಾರ ಜೊತೆ, ಎಲ್ಲಿ ಬೇಕಾದ್ರೂ ಆಡೋಕೆ ನಾವ್‌ ರೆಡಿ – ಪಾಕ್‌ ತಂಡ ಭಾರತಕ್ಕೆ ಬರೋದು ಖಚಿತ; ಬಾಬರ್‌ ಆಜಂ

    2016ರ‌ಲ್ಲಿ ಕೊನೆಯದ್ದಾಗಿ ಭಾರತಕ್ಕೆ ಬಂದಿದ್ದ ಪಾಕ್‌ ಈಡನ್‌ ಗಾರ್ಡನ್‌ನಲ್ಲಿ ಟೀಂ ಇಂಡಿಯಾ ವಿರುದ್ಧ ಕಣಕ್ಕಿಳಿದಿತ್ತು. ಅಂದು ಮಳೆ ಅಡ್ಡಿಯಾದ್ದರಿಂದ ಪಾಕ್‌ ತಂಡ ನೀಡಿದ್ದ 119 ರನ್‌ಗಳ ಗುರಿಯನ್ನು 18 ಓವರ್‌ಗಳಲ್ಲಿ ತಲುಪಲು ಭಾರತಕ್ಕೆ ಟಾರ್ಗೆಟ್‌ ನೀಡಲಾಗಿತ್ತು. ಆದ್ರೆ ಬಲಿಷ್ಠ ಭಾರತ ತಂಡ 15.5 ಓವರ್‌ಗಳಲ್ಲೇ ಈ ಗುರಿ ಪೂರೈಸಿತ್ತು. ಈ ಬಾರಿ ಪಾಕ್‌ ತಂಡಕ್ಕೆ ಮುಂಬೈನಲ್ಲಿ ಯಾವುದೇ ಪಂದ್ಯವನ್ನು ನಿಗದಿಪಡಿಸಿಲ್ಲ.

    1992ರಲ್ಲಿ ಪಾಕಿಸ್ತಾನ ಮೊದಲ ಬಾರಿಗೆ ಏಕದಿನ ವಿಶ್ವಕಪ್‌ ಟೂರ್ನಿಯಲ್ಲಿ ಚಾಂಪಿಯನ್‌ ಆಗಿ ಹೊರಹೊಮ್ಮಿತ್ತು. 1992ರಲ್ಲಿ ಏಕದಿನ ವಿಶ್ವಕಪ್‌ನಲ್ಲಿ ಭಾರತ ಮತ್ತು ಪಾಕಿಸ್ತಾನ 7 ಬಾರಿ ಮುಖಾಮುಖಿಯಾಗಿವೆ. 1992, 1999, 2003, 2011, 2015 ಹಾಗೂ 2019ರಲ್ಲಿ ಇತ್ತಂಡಗಳು ಮುಖಾಮುಖಿಯಾಗಿವೆ. ಅಲ್ಲದೇ ಟಿ20 ವಿಶ್ವಕಪ್‌ನಲ್ಲಿ 7 ಬಾರಿ, ಚಾಂಪಿಯನ್ಸ್‌ ಟ್ರೋಫಿಯಲ್ಲಿ 5 ಬಾರಿ ಒಟ್ಟು 19 ಬಾರಿ ಇತ್ತಂಡಗಳು ಮುಖಾಮುಖಿಯಾಗಿವೆ. ಭಾರತ ಇದುವರೆಗೆ ಏಷ್ಯಾಕಪ್‌ ಟೂರ್ನಿಯಲ್ಲಿ ಪಾಕ್‌ ವಿರುದ್ಧ ಸೋತಿದೆಯೇ ಹೊರತು ವಿಶ್ವಕಪ್‌ ಟೂರ್ನಿಯಲ್ಲಿ ಸೋತಿಲ್ಲ. ಈ ಬಾರಿಯೂ ಪಾಕ್‌ ವಿರುದ್ಧ ಗೆಲ್ಲುವ ವಿಶ್ವಾಸದಲ್ಲೇ ಮುಂದುವರಿದಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ವಿಶ್ವಕಪ್‌ ಟೂರ್ನಿ ಆಡಲು ಪಾಕ್‌ ತಂಡ ಭಾರತಕ್ಕೆ ಬರಲ್ಲ – ಮತ್ತೆ ಕ್ಯಾತೆ ತೆಗೆದ ಪಾಕ್‌ ಸಚಿವ

    ವಿಶ್ವಕಪ್‌ ಟೂರ್ನಿ ಆಡಲು ಪಾಕ್‌ ತಂಡ ಭಾರತಕ್ಕೆ ಬರಲ್ಲ – ಮತ್ತೆ ಕ್ಯಾತೆ ತೆಗೆದ ಪಾಕ್‌ ಸಚಿವ

    ಇಸ್ಲಾಮಾಬಾದ್‌: ಏಕದಿನ ಏಷ್ಯಾಕಪ್‌ (Asia Cup 2023) ಟೂರ್ನಿ ಆಡಲು ಭಾರತ ತಂಡ ಪಾಕಿಸ್ತಾನಕ್ಕೆ ಬರದಿದ್ದರೆ ಪಾಕ್‌ ತಂಡ ಕೂಡ ವಿಶ್ವಕಪ್‌ ಟೂರ್ನಿ (ICC World Cup 2023) ಆಡೋದಕ್ಕೆ ಬರೋದಿಲ್ಲ ಎಂದು ಪಾಕಿಸ್ತಾನದ ಕ್ರೀಡಾ ಸಚಿವ ಎಹ್ಸಾನ್ ಮಜಾರಿ ಹೇಳಿಕೆ ನೀಡಿದ್ದಾರೆ.

    ಈ ವರ್ಷ ಭಾರತದಲ್ಲಿ ನಡೆಯುವ ವಿಶ್ವಕಪ್‌ ಟೂರ್ನಿಗೆ ಪಾಕಿಸ್ತಾನ ಭಾಗವಹಿಸುವ ಕುರಿತು ಪಾಕ್‌ ಪ್ರಧಾನಿ ಶೆಹಬಾಜ್‌ ಷರೀಫ್‌ (Shehbaz Sharif), ಸಮಿತಿ ರಚಿಸಿದ ಒಂದು ದಿನದ ನಂತರ ಸಚಿವ ಮಜಾರಿ ಈ ಹೇಳಿಕೆ ನೀಡಿದ್ದಾರೆ. ಇದನ್ನೂ ಓದಿ: ಏಕದಿನ ವಿಶ್ವಕಪ್‌ನಲ್ಲೂ ಬುಮ್ರಾ ಕಣಕ್ಕಿಳಿಯೋದು ಡೌಟ್‌ – ಟೀಂ ಇಂಡಿಯಾಕ್ಕೆ ಎಚ್ಚರಿಕೆ ಕೊಟ್ಟ ರವಿಶಾಸ್ತ್ರಿ

    ವಿಶ್ವಕಪ್‌ಗೆ ಇನ್ನೂ 3 ತಿಂಗಳು ಬಾಕಿಯಿದೆ. ಅದಕ್ಕೂ ಮುನ್ನ ಟೀಂ ಇಂಡಿಯಾ (Team India) ಸಾಲು-ಸಾಲು ಸರಣಿಗಳನ್ನ ಎದುರಿಸಬೇಕಿದೆ. ವೆಸ್ಟ್‌ ಇಂಡೀಸ್‌ ವಿರುದ್ಧ ಟೆಸ್ಟ್‌, ಏಕದಿನ ಹಾಗೂ ಟಿ20 ಸರಣಿ, ನಂತರ ಐರ್ಲೆಂಡ್‌ ವಿರುದ್ಧ ಟಿ20 ಸರಣಿ ಆಡಲಿದೆ. ಆ ಬಳಿಕ ಆಗಸ್ಟ್‌ 31 ರಿಂದ ಸೆಪ್ಟಂಬರ್‌ 17ರ ವರೆಗೆ ನಡೆಯುವ ಏಷ್ಯಾಕಪ್‌ನಲ್ಲಿ ಪಾಲ್ಗೊಳ್ಳಲಿದೆ. ಇದನ್ನೂ ಓದಿ: ಆ.31 ರಿಂದ ಏಕದಿನ ಏಷ್ಯಾಕಪ್; ಲಂಕಾ, ಪಾಕ್ ಆತಿಥ್ಯ – ಬುಮ್ರಾ, ಅಯ್ಯರ್ ಕಂಬ್ಯಾಕ್ ಸಾಧ್ಯತೆ

    ಏಷ್ಯಾಕಪ್‌ ಟೂರ್ನಿಯು ಪಾಕಿಸ್ತಾನ (Pakistan) ಮತ್ತು ಶ್ರೀಲಂಕಾದಲ್ಲಿ ಹೈಬ್ರಿಡ್ ಮಾದರಿಯಲ್ಲಿ ನಡೆಯಲಿದೆ. ಈ ಬಾರಿ ಏಷ್ಯಾಕಪ್ ಟೂರ್ನಿಯ ಹಕ್ಕು ಪಾಕಿಸ್ತಾನದ ಬಳಿಯೇ ಇದ್ದರೂ, ಭಾರತ-ಪಾಕಿಸ್ತಾನದಲ್ಲಿ ಆಡಲು ಬಿಸಿಸಿಐ ಒಪ್ಪಿಗೆ ನಿರಾಕರಿಸಿದ ನಂತರ ಹೈಬ್ರಿಡ್ ಮಾದರಿಯಲ್ಲಿ ನಡೆಸಲು ಏಷ್ಯಾಕಪ್ ಕ್ರಿಕೆಟ್ ಸಮಿತಿ ನಿರ್ಧರಿಸಿದೆ. ಇದರಿಂದ ಪಾಕ್‌ ಅಸಮಾಧಾನಗೊಂಡಿದೆ. ಭಾರತವು ತಮ್ಮ ಏಷ್ಯಾಕಪ್ ಪಂದ್ಯಗಳನ್ನ ತಟಸ್ಥ ಸ್ಥಳದಲ್ಲಿ ಆಡಬೇಕೆಂದು ಒತ್ತಾಯಿಸಿದೆ. ನಾವೂ ಕೂಡ ವಿಶ್ವಕಪ್‌ ಟೂರ್ನಿಗೆ ಅದೇ ಬೇಡಿಕೆಯನ್ನ ಮುಂದಿಡುತ್ತೇವೆ ಎಂದು ಹೇಳಿದ್ದಾರೆ.

    ಪಾಕ್‌ ವಿದೇಶಾಂಗ ಸಚಿವ ಬಿಲಾವಲ್‌ ಭುಟ್ಟೋ ಜರ್ದಾರಿ ನೇತೃತ್ವದಲ್ಲಿ ಸಮಿತಿ ರಚಿಸಿದ್ದು, ನಾನೂ ಸಹ 11 ಸಚಿವರ ಪೈಕಿ ಒಬ್ಬನಿದ್ದೇನೆ. ಈ ಸಮಸ್ಯೆ ಚರ್ಚಿಸಿ ಪ್ರಧಾನಿಗೆ ಪಾಕ್‌ ತಂಡವನ್ನು ಭಾರತಕ್ಕೆ ಕಳುಹಿಸದಂತೆ ಶಿಫಾರಸು ಮಾಡುತ್ತೇನೆ. ಅವರು ಅಂತಿಮ‌ ನಿರ್ಧಾರ ಕೈಗೊಳ್ಳುತ್ತಾರೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಪಾಕಿಸ್ತಾನ ವಿಶ್ವಕಪ್‌ ಟೂರ್ನಿಗೆ ಬಾರದಿದ್ರೆ ICC ಬಳಿಯಿದೆ ಮಾಸ್ಟರ್‌ ಪ್ಲ್ಯಾನ್‌ – ಇದರಿಂದ ಯಾರಿಗೆ ನಷ್ಟ?

    ಭಾರತವು ಕ್ರೀಡೆಯನ್ನ ರಾಜಕೀಯಕ್ಕೆ ತರುತ್ತಿದೆ. ಕೆಲ ದಿನಗಳ ಹಿಂದೆ ಭಾರತದಿಂದ ಬೇಸ್‌ ಬಾಲ್‌ ಟೂರ್ನಿಗೆ ಕ್ರೀಡಾಪಟುಗಳ ತಂಡ ಆಗಮಿಸಿತ್ತು. ಸುಮಾರು 60 ಮಂದಿ ಇದ್ದರು. ಇಲ್ಲಿ ಆಡಿ ಟೂರ್ನಿ ಗೆದ್ದುಕೊಂಡು ಹೋಗಿದ್ದಾರೆ. ಆ ನಂತರ ನಮ್ಮ ಪಾಕಿಸ್ತಾನ ತಂಡವು ಸಾಫ್‌ ಫುಟ್ಬಾಲ್‌ ಟೂರ್ನಿಗೆ ಭಾರತಕ್ಕೆ ಆಗಮಿಸಿದೆ. ಆದರೂ ಬಿಸಿಸಿಐ ಏಕೆ ಒಪ್ಪುತ್ತಿಲ್ಲ ಅನ್ನೋದೇ ಆರ್ಥವಾಗುತ್ತಿಲ್ಲ ಎಂದು ಕಳವಳ ವ್ಯಕ್ತಪಡಿಸಿದ್ದಾರೆ.

    ಭಾರತ ಏಕೆ ಪಾಕ್‌ಗೆ ಹೋಗ್ತಿಲ್ಲ: ಭಾರತ ತಂಡವು 2005-2006ರಲ್ಲಿ ರಾಹುಲ್ ದ್ರಾವಿಡ್ ನಾಯಕತ್ವದಲ್ಲಿ ಪಾಕಿಸ್ತಾನಕ್ಕೆ ತನ್ನ ಕೊನೆಯ ಪ್ರವಾಸ ಕೈಗೊಂಡಿತ್ತು. ಈ ಪಂದ್ಯದಲ್ಲಿ ಇತ್ತಂಡಗಳು 3 ಟೆಸ್ಟ್ ಹಾಗೂ 5 ಏಕದಿನ ಪಂದ್ಯಗಳನ್ನಾಡಿದ್ದವು. ಆದರೆ 2008ರಲ್ಲಿ ನಡೆದ ಮುಂಬೈ ದಾಳಿಯ ನಂತರ ಉಭಯ ತಂಡಗಳ ನಡುವೆ ಯಾವುದೇ ದ್ವಿಪಕ್ಷೀಯ ಸರಣಿ ನಡೆದಿಲ್ಲ. ಐಸಿಸಿ (ICC) ಟೂರ್ನಿ ಅಥವಾ ಏಷ್ಯಾ ಕಪ್ ಟೂರ್ನಿಗಳಲ್ಲಿ ಮಾತ್ರವೇ ಪರಸ್ಪರ ಮುಖಾಮುಖಿಯಾಗುತ್ತಿವೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಪಾಕಿಸ್ತಾನ ವಿಶ್ವಕಪ್‌ ಟೂರ್ನಿಗೆ ಬಾರದಿದ್ರೆ ICC ಬಳಿಯಿದೆ ಮಾಸ್ಟರ್‌ ಪ್ಲ್ಯಾನ್‌ – ಇದರಿಂದ ಯಾರಿಗೆ ನಷ್ಟ?

    ಪಾಕಿಸ್ತಾನ ವಿಶ್ವಕಪ್‌ ಟೂರ್ನಿಗೆ ಬಾರದಿದ್ರೆ ICC ಬಳಿಯಿದೆ ಮಾಸ್ಟರ್‌ ಪ್ಲ್ಯಾನ್‌ – ಇದರಿಂದ ಯಾರಿಗೆ ನಷ್ಟ?

    ದುಬೈ: ಈ ಬಾರಿ ವಿಶ್ವಕಪ್‌ (ODI World Cup) ಟೂರ್ನಿಯಲ್ಲಿ ಪಾಕಿಸ್ತಾನ ತಂಡ ಪಾಲ್ಗೊಳ್ಳದಿದ್ದರೆ ಅದಕ್ಕೆ ಪರ್ಯಾಯವಾಗಿ ಮತ್ತೊಂದು ತಂಡವನ್ನು ಕಣಕ್ಕಿಳಿಸಲು ಐಸಿಸಿ (ICC) ಮಾಸ್ಟರ್‌ ಪ್ಲ್ಯಾನ್‌ ಮಾಡಿದೆ.

    ಭಾರತದ ಆತಿಥ್ಯದಲ್ಲಿ ನಡೆಯುತ್ತಿರುವ ಏಕದಿನ ವಿಶ್ವಕಪ್‌ ಟೂರ್ನಿ ವೇಳಾಪಟ್ಟಿ ಬಿಡುಗಡೆಗೊಂಡಿದೆ. ಭಾರತದ ಐದು ಪ್ರಮುಖ ನಗರಗಳಲ್ಲಿ ಪಾಕಿಸ್ತಾನದ (Pakistan) 9 ಪಂದ್ಯಗಳು ನಡೆಯಲಿವೆ. ಇದೇ ಮೊದಲ ಬಾರಿಗೆ ಭಾರತ ಏಕಾಂಗಿಯಾಗಿ ಆತಿಥ್ಯ ವಹಿಸಿಕೊಂಡಿದ್ದು, ಅಕ್ಟೋಬರ್‌ 5 ರಿಂದ ನವೆಂಬರ್‌ 19ರ ವರೆಗೆ ಒಟ್ಟು 48 ಪಂದ್ಯಗಳು ಆಯೋಜನೆಗೊಂಡಿವೆ. ವಿಶ್ವಕಪ್‌ನ ಉದ್ಘಾಟನಾ ಪಂದ್ಯ ಹಾಗೂ‌ ಫೈನಲ್‌ ಪಂದ್ಯ ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲೇ (Narendra Modi Stadium) ನಡೆಯಲಿದೆ.

    ಏಕದಿನ ಏಷ್ಯಾಕಪ್‌ ಟೂರ್ನಿಗೆ (ODI Stadium) ಟೀಂ ಇಂಡಿಯಾವನ್ನ ಪಾಕಿಸ್ತಾನಕ್ಕೆ ಕಳುಹಿಸಲು ಬಿಸಿಸಿಐ (BCCI) ತಿರಸ್ಕರಿಸಿತು. ಈ ಹಿನ್ನೆಲೆಯಲ್ಲಿ ಐಸಿಸಿ ಹೈಬ್ರಿಡ್‌ ಮಾದರಿಯಲ್ಲಿ ಟೂರ್ನಿ ಆಯೋಜನೆ ಮಾಡಲು ನಿರ್ಧರಿಸಿತು. ಹಾಗಾಗಿ ಪಾಕಿಸ್ತಾನ ಕೂಡ ಭಾರತದಲ್ಲಿ ವಿಶ್ವಕಪ್‌ ಪಂದ್ಯವನ್ನಾಡಲು ಆಕ್ಷೇಪ ವ್ಯಕ್ತಪಡಿಸಿದೆ. ಒಂದು ವೇಳೆ ಪಾಕಿಸ್ತಾನ ವಿಶ್ವಕಪ್‌ ಟೂರ್ನಿಯನ್ನ ಬಾಯ್‌ಕಾಟ್‌ ಮಾಡಿದರೆ ಅದಕ್ಕೆ ಪರ್ಯಾಯವಾಗಿ ಐಸಿಸಿ ಮಾಸ್ಟರ್‌ ಪ್ಲ್ಯಾನ್‌ ಮಾಡಿದೆ. ಇದನ್ನೂ ಓದಿ: ICC ODI World Cup: ಪಾಕ್ ಪಂದ್ಯಗಳಿಗೆ ಬಿಗಿ ಭದ್ರತೆ ನೀಡ್ತೇವೆ – ಬಂಗಾಳ ಕ್ರಿಕೆಟ್‌

    ಪಾಕ್‌ ತಂಡ ವಿಶ್ವಕಪ್‌ನಲ್ಲಿ ಪಾಲ್ಗೊಳ್ಳಲು ಅಲ್ಲಿನ ಸರ್ಕಾರವಾಗಲಿ, ಪಿಸಿಬಿಯಾಗಲಿ ಇನ್ನೂ ಅನುಮತಿ ನೀಡಿಲ್ಲ. ಆದ್ದರಿಂದ ಪಾಕಿಸ್ತಾನ ತಂಡ ಭಾಗವಹಿಸದಿದ್ದರೆ, ಕ್ವಾಲಿಫೈಯರ್‌ನಲ್ಲಿ 3ನೇ ರ‍್ಯಾಂಕ್‌ ಪಡೆದ ತಂಡವನ್ನ ಆಯ್ಕೆ ಮಾಡಲು ನಿರ್ಧರಿಸಿದೆ. ಈಗಾಗಲೇ 8 ತಂಡಗಳು ವಿಶ್ವಕಪ್‌ ಟೂರ್ನಿಗೆ ನೇರವಾಗಿ ಪ್ರವೇಶ ಪಡೆದುಕೊಂಡಿದ್ದು, ಉಳಿದ 2 ತಂಡಗಳಿಗಾಗಿ ಸೆಣಸಾಟ ನಡೆಯುತ್ತಿದೆ. ಇದನ್ನೂ ಓದಿ: Asian Games 2023 – ಶಿಖರ್‌ ಧವನ್‌ಗೆ ಟೀಂ ಇಂಡಿಯಾ ನಾಯಕತ್ವ?

    ಈಗಾಗಲೇ ಗ್ರೂಪ್‌ ಹಂತದ ಪಂದ್ಯಗಳು ಮುಕ್ತಾಯಗೊಂಡಿದ್ದು, ಶ್ರೀಲಂಕಾ, ಜಿಂಬಾಬ್ವೆ, ಸ್ಕಾಟ್ಲೆಂಡ್, ನೆದರ್ಲ್ಯಾಂಡ್ಸ್, ವೆಸ್ಟ್‌ ಇಂಡೀಸ್‌ ಮತ್ತು ಒಮನ್ ಸೂಪರ್ ಸಿಕ್ಸ್ ಹಂತದಲ್ಲಿ ಸೆಣಸುತ್ತಿವೆ. ವೆಸ್ಟ್‌ ಇಂಡೀಸ್‌ ಈಗಾಗಲೇ 2 ಪಂದ್ಯಗಳನ್ನ ಸೋತಿರುವುದರಿಂದ ವಿಶ್ವಕಪ್‌ ಟೂರ್ನಿಯಲ್ಲಿ ಅರ್ಹತೆ ಪಡೆಯುವುದಿಲ್ಲವೆನ್ನುವುದು ಖಚಿತವಾಗಿದೆ. ಜಿಂಬಾಬ್ವೆ, ಶ್ರೀಲಂಕಾ ವಿಶ್ವಕಪ್‌ ಟೂರ್ನಿಯಲ್ಲಿ ಅರ್ಹತೆ ಪಡೆಯುವ ಸಾಧ್ಯತೆ ಹೆಚ್ಚಿದೆ. ಒಂದು ವೇಳೆ ಪಾಕ್‌ ತಂಡ ಗೈರಾದರೆ, ಮತ್ತೊಂದು ತಂಡಕ್ಕೆ ಅವಕಾಶ ನೀಡಲು ಐಸಿಸಿ ನಿರ್ಧರಿಸಿದೆ. ಇದನ್ನೂ ಓದಿ: ಭಾರತ Vs ಐರ್ಲೆಂಡ್‌ T20 ಸರಣಿಗೆ ವೇಳಾಪಟ್ಟಿ ಪ್ರಕಟ – ಇಲ್ಲಿದೆ ಡಿಟೇಲ್ಸ್‌

    ಭಾರತದಲ್ಲಿ ಪಾಕ್‌ ತಂಡದ ವೇಳಾಪಟ್ಟಿ ಹೀಗಿದೆ…

    ಪಾಕಿಸ್ತಾನ vs ಕ್ವಾಲಿಫೈಯರ್ 1, ಅಕ್ಟೋಬರ್ 6 – ಹೈದರಾಬಾದ್
    ಪಾಕಿಸ್ತಾನ vs ಕ್ವಾಲಿಫೈಯರ್ 2, ಅಕ್ಟೋಬರ್ 12 – ಹೈದರಾಬಾದ್
    ಪಾಕಿಸ್ತಾನ vs ಭಾರತ, ಅಕ್ಟೋಬರ್ 15 – ಅಹಮದಾಬಾದ್
    ಪಾಕಿಸ್ತಾನ vs ಆಸ್ಟ್ರೇಲಿಯಾ, ಅಕ್ಟೋಬರ್ 20 – ಬೆಂಗಳೂರು
    ಪಾಕಿಸ್ತಾನ vs ಅಫ್ಘಾನಿಸ್ತಾನ, ಅಕ್ಟೋಬರ್ 23- ಚೆನ್ನೈ
    ಪಾಕಿಸ್ತಾನ vs ದಕ್ಷಿಣ ಆಫ್ರಿಕಾ, ಅಕ್ಟೋಬರ್ 27- ಚೆನ್ನೈ
    ಪಾಕಿಸ್ತಾನ vs ಬಾಂಗ್ಲಾದೇಶ, ಅಕ್ಟೋಬರ್ 31 – ಕೋಲ್ಕತ್ತಾ
    ಪಾಕಿಸ್ತಾನ vs ನ್ಯೂಜಿಲೆಂಡ್, ನವೆಂಬರ್ 4 – ಬೆಂಗಳೂರು
    ಪಾಕಿಸ್ತಾನ vs ಇಂಗ್ಲೆಂಡ್, ನವೆಂಬರ್ 12- ಕೋಲ್ಕತ್ತಾ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಪಾಕ್‌ ತಂಡದ ನಾಯಕನಿಗಿಂತ 9 ಪಟ್ಟು ಹೆಚ್ಚು ವೇತನವನ್ನ ಒಂದು ಸೀಸನ್‌ನಲ್ಲಿ ಪಡೀತಾರೆ ಯಶಸ್ವಿ!

    ಪಾಕ್‌ ತಂಡದ ನಾಯಕನಿಗಿಂತ 9 ಪಟ್ಟು ಹೆಚ್ಚು ವೇತನವನ್ನ ಒಂದು ಸೀಸನ್‌ನಲ್ಲಿ ಪಡೀತಾರೆ ಯಶಸ್ವಿ!

    ಕೋಲ್ಕತ್ತಾ: ಐಪಿಎಲ್‌ ಈಗ ವಿಶ್ವದ 2ನೇ ದುಬಾರಿ ಕ್ರೀಡೆಯಾಗಿ ಹೊರಹೊಮ್ಮಿದ್ದು, ಈ ಬಾರಿ ಬಹುತೇಕ ಆಟಗಾರರು ದುಬಾರಿ ಬೆಲೆಗೆ ಬಿಕರಿಯಾಗಿದ್ದಾರೆ. ಕೆಲವರು ರಿಟೈನ್ಡ್‌ ಪ್ಲೇಯರ್‌ಗಳಾಗಿ ಉಳಿದುಕೊಂಡಿದ್ದಾರೆ.

    ಐಪಿಎಲ್‌ ಕ್ರಿಕೆಟ್‌ ಇತಿಹಾಸದಲ್ಲೇ 18.50 ಕೋಟಿ ರೂ.ಗೆ ಸ್ಯಾಮ್‌ ಕರ್ರನ್‌ ಬಿಕರಿಯಾಗಿದ್ದಾರೆ. ಕೆ.ಎಲ್‌ ರಾಹುಲ್‌ 17 ಕೋಟಿ ರೂ. ಮೊತ್ತಕ್ಕೆ ಲಕ್ನೋ ತಂಡದಲ್ಲೇ ರಿಟೈನ್ಡ್‌ ಪ್ಲೇಯರ್‌ಗಳಾಗಿ ಉಳಿದುಕೊಂಡಿದ್ದಾರೆ. ಆದ್ರೆ 2020ರಿಂದ ರಾಜಸ್ಥಾನ್‌ ರಾಯಲ್ಸ್‌ ತಂಡದಲ್ಲಿರುವ 21 ವರ್ಷದ ಯುವ ಆಟಗಾರ ಯಶಸ್ವಿ ಜೈಸ್ವಾಲ್‌ ಈಬಾರಿ 4 ಕೋಟಿ ಸಂಭಾವನೆ ಪಡೆಯುತ್ತಿದ್ದಾರೆ. ಇದು ಪಾಕಿಸ್ತಾನ ತಂಡ ನಾಯಕ ಬಾಬರ್‌ ಆಜಂಗಿಂತಲೂ 9 ಪಟ್ಟು ದುಬಾರಿಯಾಗಿದೆ.

    ಯಶಸ್ವಿ ಜೈಸ್ವಾಲ್‌ ಒಂದು ಐಪಿಎಲ್‌ ಸೀಜನ್‌ನಲ್ಲಿ ಪಡೆಯುತ್ತಿರುವ ಮೊತ್ತವನ್ನ ಬಾಬರ್‌ ಆಜಂ ಎಲ್ಲಾ ಆವೃತ್ತಿಯ ಕ್ರಿಕೆಟ್‌ ಮಾದರಿಯಲ್ಲಿ ಆಡಿದರೂ ವಾರ್ಷಿಕವಾಗಿ 9 ಪಟ್ಟು ಕಡಿಮೆ ಪಡೆಯುತ್ತಾರೆ. ಹೌದು 2023ರ ವಾರ್ಷಿಕ ಒಪ್ಪಂದದ ಪ್ರಕಾರ ಬಾಬರ್‌ ಆಜಂ ವರ್ಷಕ್ಕೆ ಪ್ರತಿ ತಿಂಗಳಿಗೆ 1.25 ಮಿಲಿಯನ್‌ ಪಾಕಿಸ್ತಾನ ರೂಪಾಯಿ ಅಂದ್ರೆ ಭಾರತ ರೂಪಾಯಿ ಪ್ರಕಾರ ವಾರ್ಷಿಕ 43.50 ಲಕ್ಷ ರೂ. ಪಡೆಯುತ್ತಿದ್ದಾರೆ. ಆದ್ರೆ ಯಶಸ್ವಿ ಜೈಸ್ವಾಲ್‌ ಒಂದು ಸೀಜನ್‌ನಲ್ಲಿ 4 ಕೋಟಿ ರೂ. ವೇತನ ಪಡೆಯುತ್ತಿದ್ದಾರೆ. ಇದನ್ನೂ ಓದಿ: ಕನ್ನಡಿಗ ಕೆ.ಎಲ್‌ ರಾಹುಲ್‌ ದಾಖಲೆ ನುಚ್ಚು ನೂರು ಮಾಡಿದ 21ರ ಯುವಕ ಯಶಸ್ವಿ

    2020ರ ಸೀಜನ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ ಸೇರ್ಪಡೆಯಾದ ಯಶಸ್ವಿ ಜೈಸ್ವಾಲ್‌ 2020, 2021ರ ಸೀಜನ್‌ನ 2.4 ಕೋಟಿ ರೂ. ವೇತನ ಪಡೆಯುತ್ತಿದ್ದರು. 2022ರಲ್ಲಿ 4 ಕೋಟಿ ರೂ.ಗೆ ಏರಿಕೆ ಮಾಡಲಾಯ್ತು. 2023ರ ಸೀಜನ್‌ನಲ್ಲೂ ಯಶಸ್ವಿ 4 ಕೋಟಿ ರೂ. ಸಂಭಾವನೆ ಪಡೆಯುತ್ತಿದ್ದಾರೆ. ಇದನ್ನೂ ಓದಿ: ಜೈಸ್ವಾಲ್‌ ಅಬ್ಬರಕ್ಕೆ ಕೋಲ್ಕತ್ತಾ ಧೂಳೀಪಟ – ರಾಜಸ್ಥಾನಕ್ಕೆ 9 ವಿಕೆಟ್‌ಗಳ ಭರ್ಜರಿ ಜಯ

    ಈ ಬಾರಿ ಆರೆಂಜ್‌ ಕ್ಯಾಪ್‌ ರೇಸ್‌ನಲ್ಲಿರುವ ಯಶಸ್ವಿ ಜೈಸ್ವಾಲ್‌ 500ಕ್ಕೂ ಹೆಚ್ಚು ರನ್‌ ಗಳಿಸಿರುವ 2ನೇ ಆಟಗಾರ ಎನಿಸಿಕೊಂಡಿದ್ದಾರೆ. 12 ಪಂದ್ಯಗಳಲ್ಲಿ 52.27 ಸರಾಸರಿಯಲ್ಲಿ ಯಶಸ್ವಿ ಜೈಸ್ವಾಲ್‌ ಬರೋಬ್ಬರಿ 575 ರನ್‌ ಚಚ್ಚಿದ್ದಾರೆ. ಇದರಲ್ಲಿ 74 ಬೌಂಡರಿ ಹಾಗೂ 26 ಸಿಕ್ಸರ್‌ಗಳೂ ಸೇರಿವೆ. ಆರೆಂಜ್‌ಕ್ಯಾಪ್‌ ರೇಸ್‌ನ ಅಗ್ರ ಸ್ಥಾನದಲ್ಲಿ ಆರ್‌ಸಿಬಿ ತಂಡದ ನಾಯಕ ಫಾಫ್‌ ಡು ಪ್ಲೆಸಿಸ್‌ 11 ಪಂದ್ಯಗಳಲ್ಲಿ 576 ರನ್‌ ಗಳಿಸಿ ಮೊದಲ ಸ್ಥಾನದಲ್ಲಿದ್ದಾರೆ. 45 ಬೌಂಡರಿ ಹಾಗೂ 32 ಸಿಕ್ಸರ್‌ಗಳೂ ಇದರಲ್ಲಿ ಸೇರಿವೆ.

  • ದಿನಕ್ಕೆ 24 ಮೊಟ್ಟೆ ತಿಂತೀನಿ – ಡಯಟ್ ರಹಸ್ಯ ಬಿಚ್ಚಿಟ್ಟ ಹ್ಯಾರಿಸ್ ರೌಫ್

    ದಿನಕ್ಕೆ 24 ಮೊಟ್ಟೆ ತಿಂತೀನಿ – ಡಯಟ್ ರಹಸ್ಯ ಬಿಚ್ಚಿಟ್ಟ ಹ್ಯಾರಿಸ್ ರೌಫ್

    ಇಸ್ಲಾಮಾಬಾದ್: ಡಯಟ್ ಮಾಡಲು ನಾನು ಪ್ರತಿದಿನ 24 ಮೊಟ್ಟೆ ತಿನ್ನುತ್ತೇನೆ ಎಂದು ಪಾಕಿಸ್ತಾನ (Pakistan) ಕ್ರಿಕೆಟಿಗ ಹ್ಯಾರಿಸ್ ರೌಫ್ (Haris Rauf) ಹೇಳಿದ್ದಾರೆ.

    2020ರಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ (International Cricket) ಪದಾರ್ಪಣೆ ಮಾಡಿದ 29 ವರ್ಷದ ಹ್ಯಾರಿಸ್ ರೌಫ್ 16 ಏಕದಿನ ಪಂದ್ಯಗಳಲ್ಲಿ 29 ವಿಕೆಟ್ ಹಾಗೂ 57 ಟಿ20 ಪಂದ್ಯಗಳಲ್ಲಿ 72 ವಿಕೆಟ್‌ಗಳನ್ನ ಕಬಳಿಸಿದ್ದಾರೆ. ಅವರು ತಮ್ಮ ಕ್ರಿಕೆಟ್ ಜರ್ನಿ ಕುರಿತು ಖಾಸಗಿ ವಾಹಿನಿಯಲ್ಲಿ ನಡೆಯುತ್ತಿದ್ದ ಸಂದರ್ಶನದ ವೇಳೆ ತಮ್ಮ ಡಯಟ್ ರಹಸ್ಯವನ್ನ ಹೇಳಿಕೊಂಡಿದ್ದಾರೆ.

    ಮೊಟ್ಟೆ (EGG) ಮೇಲಿನ ಪ್ರೀತಿಯನ್ನು ಬಹಿರಂಗಪಡಿಸುತ್ತಾ, ದೇಹದ ತೂಕವನ್ನು ಸಮತೋಲನದಲ್ಲಿ ಹೆಚ್ಚಿಸಿಕೊಳ್ಳಲು ಆಹಾರ ಕ್ರಮ ಹೇಗಿತ್ತು ಎಂಬುದನ್ನ ಸಂದರ್ಶನದಲ್ಲಿ ಹೇಳಿದ್ದಾರೆ. ಇದನ್ನೂ ಓದಿ: ದಕ್ಷಿಣ ಆಫ್ರಿಕಾದ ಆಲ್‌ರೌಂಡರ್ ಪ್ರಿಟೋರಿಯಸ್ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ

    `ನಾನು ದಿನಕ್ಕೆ ದಿನಕ್ಕೆ 24 ಮೊಟ್ಟೆಗಳನ್ನ ತಿನ್ನುತ್ತೇನೆ. ಪಾಕ್ ಕ್ರಿಕೆಟ್ ತಂಡದ ಕೋಚ್ ಅಕೀಬ್ ಜಾವೇದ್ ನನಗೆ ಡಯಟ್ ಪ್ಲಾನ್ ಹೇಳಿಕೊಟ್ಟರು. ಉಪಾಹಾರಕ್ಕೆ 8, ಮಧ್ಯಾಹ್ನ ಊಟಕ್ಕೆ 8 ಹಾಗೂ ರಾತ್ರಿಯ ಊಟಕ್ಕೆ 8 ಮೊಟ್ಟೆ ಸೇವಿಸುವಂತೆ ಪ್ಲ್ಯಾನ್ ಕೊಟ್ಟರು. ನಾನು ಮೊದಲ ಬಾರಿ ಕ್ರಿಕೆಟ್ ಅಕಾಡೆಮಿಗೆ ಹೋದಾಗ ಮೊಟ್ಟೆಯ ಕ್ರೇಟ್‌ಗಳ ರಾಶಿಯನ್ನೇ ಹಾಕಲಾಗಿತ್ತು. ಒಂದು ಕ್ಷಣ ಯಾವುದೋ ಕೋಳಿ ಫಾರ್ಮ್‌ಗೆ ತರಿಸಿದಂತೆ ಭಾಸವಾಗಿತ್ತು’ ಎಂದು ಹಾಸ್ಯ ಮಾಡಿದ್ದಾರೆ.

    ನಾನು ಮೊದಲು 72 ಕೆ.ಜಿ ಇದ್ದೆ, ಆದ್ರೆ ಅಕೀಬ್ ಭಾಯ್ ನಿನ್ನ ಎತ್ತರಕ್ಕೆ 82-83 ಕೆಜಿ ಇದ್ರೆ ಸೂಕ್ತ ಅಂತಾ ಹೇಳಿದ್ರು. ಅದರಂತೆ ಡಯಟ್ ಯೋಜನೆ ರೋಪಿಸಿಕೊಂಡೆ. ಈಗ ನಾನು 82 ಕೆ.ಜಿ ಇದ್ದೇನೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ರಿಸ್ಕ್ ತೆಗೆದುಕೊಳ್ಳಲು ಮುಂದಾಗದ ಬಿಸಿಸಿಐ – ಬುಮ್ರಾಗೆ ವಿಶ್ರಾಂತಿ ಮುಂದುವರಿಕೆ

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಪಾಕ್ ಕದನಕ್ಕೂ ಮುನ್ನವೇ ಇಂಗ್ಲೆಂಡ್‌ಗೆ ಆಘಾತ – ಹೆಸರಿಲ್ಲದ ವೈರಸ್‌ಗೆ ತುತ್ತಾದ ಸ್ಟೋಕ್ಸ್ ಪಡೆ

    ಪಾಕ್ ಕದನಕ್ಕೂ ಮುನ್ನವೇ ಇಂಗ್ಲೆಂಡ್‌ಗೆ ಆಘಾತ – ಹೆಸರಿಲ್ಲದ ವೈರಸ್‌ಗೆ ತುತ್ತಾದ ಸ್ಟೋಕ್ಸ್ ಪಡೆ

    ಲಂಡನ್: ಪಾಕ್ (Pakistan) ವಿರುದ್ಧ ಟೆಸ್ಟ್ ಸರಣಿಯ ಮೊದಲ ಪಂದ್ಯ ಆರಂಭಕ್ಕೂ ಮುನ್ನವೇ ಇಂಗ್ಲೆಂಡ್ (England) ತಂಡಕ್ಕೆ ಆಘಾತ ಎದುರಾಗಿದೆ.

    ಇಂಗ್ಲೆಂಡ್ ತಂಡದ ಕ್ಯಾಪ್ಟನ್ ಬೆನ್‌ಸ್ಟೋಕ್ಸ್ (Ben Stokes) ಸೇರಿದಂತೆ ಪಾಕ್ ಪ್ರವಾಸದಲ್ಲಿದ್ದ ಅರ್ಧದಷ್ಟು ಆಟಗಾರರು ಹೆಸರಿಲ್ಲದ ವೈರಸ್‌ಗೆ (Virus) ತುತ್ತಾಗಿದ್ದಾರೆ. ಆದ್ದರಿಂದ ಟೆಸ್ಟ್ ಸರಣಿ ಮುಂದೂಡುವ ಸಾಧ್ಯತೆಯಿದೆ. ಇಂಗ್ಲೆಂಡ್ ಮತ್ತು ವೇಲ್ಸ್ ಕ್ರಿಕೆಟ್ ಮಂಡಳಿಯೊಂದಿಗೆ ಮುಂದಿನ ಕ್ರಮಗಳ ಕುರಿತು ಚರ್ಚಿಸುತ್ತಿರುವುದಾಗಿ ಪಾಕಿಸ್ತಾನ ಕ್ರಿಕೆಟ್ ಮಂಡಳಿ (PCB) ಬುಧವಾರ ತಿಳಿಸಿದೆ.

    ಪಾಕಿಸ್ತಾನ ಕ್ರಿಕೆಟ್ ಮಂಡಳಿಯು ಇಂಗ್ಲೆಂಡ್ ಜೊತೆಗೆ ನಿರಂತರ ಸಂಪರ್ಕದಲ್ಲಿದ್ದು ಮೇಲ್ವಿಚಾರಣೆ ನಡೆಸುತ್ತಿದೆ. ಸ್ಟೋಕ್ಸ್ಗೆ ಚೇತರಿಕೊಳ್ಳಲು ಸಮಾಯವಾಕಾಶ ನೀಡಲು ನಿರ್ಧರಿಸಿದ್ದು, ನಾಯಕತ್ವ ಬದಲಾವಣೆ ಕುರಿತು ಚರ್ಚಿಸಲಾಗುತ್ತಿದೆ ಎಂದು ಹೇಳಿದೆ.

    ಇಂಗ್ಲೆಂಡ್ ತಂಡದ ನಾಯಕ ಬೆನ್‌ಸ್ಟೋಕ್ಸ್ (Ben Stokes) ಸೇರಿದಂತೆ ಹಲವು ಆಟಗಾರರು, ಸಹ ಸಿಬ್ಬಂದಿ ಅಸ್ವಸ್ಥರಾಗಿದ್ದಾರೆ. ಅವರ ವಿಶ್ರಾಂತಿಗಾಗಿ ಹೋಟೆಲ್‌ನಲ್ಲಿ (Hotel) ಉಳಿಯಲು ಸಲಹೆ ನೀಡಲಾಗಿದೆ. ಅವರಿಗೆ ಫುಡ್‌ಪಾಯಿಸನ್ ಆಗಿದೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ. ಇದನ್ನೂ ಓದಿ: ICC ಮಾಸ್ಟರ್ ಪ್ಲ್ಯಾನ್‌ – ಹೊಸ ಮಾದರಿಯಲ್ಲಿ 2024ರ T20 ವಿಶ್ವಕಪ್

    ಇತ್ತೀಚೆಗೆ ನಡೆದ ಟಿ20 ಸರಣಿಯಲ್ಲಿ ಇಂಗ್ಲೆಂಡ್-ಪಾಕ್ (Pakistan) ವಿರುದ್ಧ 4-3 ಅಂತರದಲ್ಲಿ ಸರಣಿ ಗೆದ್ದುಕೊಂಡಿತು. ಇದೀಗ 17 ವರ್ಷಗಳ ಬಳಿಕ ಪಾಕಿಸ್ತಾನಕ್ಕೆ ಟೆಸ್ಟ್ ಪ್ರವಾಸ ಕೈಗೊಂಡಿದೆ. ಇದನ್ನೂ ಓದಿ: 25 ಬೌಂಡರಿ, 15 ಸಿಕ್ಸರ್ – 277 ರನ್ ಸಿಡಿಸಿ ವಿಶ್ವದಾಖಲೆ ಬರೆದ ಜಗದೀಶನ್ – ಹಿಟ್‌ಮ್ಯಾನ್ ದಾಖಲೆಯೂ ಉಡೀಸ್

    ಡಿಸೆಂಬರ್ 1 ರಿಂದ 5ರ ವರೆಗೆ ಮೊದಲ ಟೆಸ್ಟ್, ಡಿ.9 ರಿಂದ 13ರ ವರೆಗೆ 2ನೇ ಟೆಸ್ಟ್ ಹಾಗೂ ಡಿ.17 ರಿಂದ 21ರ ವರೆಗೆ 3ನೇ ಟೆಸ್ಟ್ ಪಂದ್ಯಗಳು ನಿಗದಿಯಾಗಿದ್ದವು.

    Live Tv
    [brid partner=56869869 player=32851 video=960834 autoplay=true]

  • ಭಾರತಕ್ಕೆ ವಿಶ್ವಕಪ್ ಟೂರ್ನಿ ಬಹಿಷ್ಕರಿಸೋ ಬೆದರಿಕೆ ಹಾಕಿದ ಪಾಕ್

    ಭಾರತಕ್ಕೆ ವಿಶ್ವಕಪ್ ಟೂರ್ನಿ ಬಹಿಷ್ಕರಿಸೋ ಬೆದರಿಕೆ ಹಾಕಿದ ಪಾಕ್

    ಇಸ್ಲಾಮಾಬಾದ್: ಏಷ್ಯಾ ಕಪ್ (AisaCup) ಟೂರ್ನಿಯಲ್ಲಿ ಭಾಗವಹಿಸಲು ಟೀಂ ಇಂಡಿಯಾ ಭಾರತಕ್ಕೆ ಬರ್ಲಿಲ್ಲ ಅಂದ್ರೆ, ಭಾರತದಲ್ಲಿ ನಡೆಯೋ ವಿಶ್ವಕಪ್ ಟೂರ್ನಿಗೆ ಪಾಕ್ ತಂಡವನ್ನು ಕಳಿಸಲ್ಲ ಎಂದು ಪಿಸಿಬಿ (PCB) ಅಧ್ಯಕ್ಷ ರಮಿಝ್ ರಾಜಾ (Ramiz Raja) ಘೋಷಿಸಿದ್ದಾರೆ.

    ಈ ವಿಚಾರದಲ್ಲಿ ತಾವು ಕಠಿಣ ವೈಖರಿಯನ್ನೇ ಅನುಸರಿಸ್ತೇವೆ. ಪಾಕ್ ತಂಡ ಕಳೆದೊಂದು ವರ್ಷದಲ್ಲಿ ಎರಡು ಬಾರಿ ಬೋರ್ಡ್ ಆಫ್ ಬಿಲಿಯನ್ ಡಾಲರ್ ಎಕಾನಮಿ ತಂಡವನ್ನು ಸೋಲಿಸಿ ಉತ್ಕೃಷ್ಟ ಪ್ರದರ್ಶನ ತೋರಿದೆ ಎಂದು ಹೇಳಿಕೊಂಡಿದ್ದಾರೆ. ಇದನ್ನೂ ಓದಿ: ಫೈನಲ್‍ನಲ್ಲಿ ಪಾಕ್‍ಗೆ ಸೋಲು – 12 ವರ್ಷಗಳ ಬಳಿಕ ಟಿ20 ವಿಶ್ವಕಪ್ ಗೆದ್ದ ಇಂಗ್ಲೆಂಡ್

    ಪಾಕಿಸ್ತಾನ ಕ್ರಿಕೆಟ್ ಮಂಡಳಿಯ ಆರ್ಥಿಕ ವ್ಯವಸ್ಥೆ ಸುಧಾರಿಸಬೇಕಾದರೆ, ರಾಷ್ಟ್ರೀಯ ತಂಡದಿಂದ ಉತ್ತಮ ಪ್ರದರ್ಶನ ಮೂಡಿ ಬರುವುದು ಅನಿವಾರ್ಯ. ಇತ್ತೀಚೆಗೆ ನಮ್ಮ ತಂಡ ಉತ್ತಮ ಪ್ರದರ್ಶನ ನೀಡುತ್ತಿದೆ. ಟಿ20 ವಿಶ್ವಕಪ್ ಟೂರ್ನಿಯಲ್ಲಿ ರನ್ನರ್ಸ್ ಅಪ್ ಆಗಿದೆ. ಭಾರತ ವಿರುದ್ಧ ಕಳೆದ ಪಂದ್ಯದಲ್ಲಿ ಪಾಕಿಸ್ತಾನ ತಂಡ ಸೋಲು ಕಂಡಿರಬಹುದು. ಆದರೆ 2021ರ ಟಿ20 ವಿಶ್ವಕಪ್ (T20 WorldCup) ಹಾಗೂ ಏಷ್ಯಾ ಕಪ್ ಟೂರ್ನಿಗಳಲ್ಲಿ ಟೀಂ ಇಂಡಿಯಾವನ್ನು (Team India) ನಮ್ಮ ತಂಡ ಸೋಲಿಸಿದೆ. ಆ ಮೂಲಕ ಎಂತಹ ಬಲಿಷ್ಠ ತಂಡ ಎಂಬುದನ್ನು ತೋರಿಸಿದೆ ಎಂದು ರಮಿಝ್ ರಾಜಾ ಹೇಳಿದ್ದಾರೆ. ಇದನ್ನೂ ಓದಿ: ಅರ್ಜೆಂಟೀನಾಗೆ ಮಾಡು ಇಲ್ಲವೇ ಮಡಿ ಪಂದ್ಯ – ಕತಾರ್ ಕಥೆ ಮುಗಿಯಿತು

    2023ರ ಸಾಲಿನ ಏಕದಿನ ವಿಶ್ವಕಪ್ ಕ್ರಿಕೆಟ್ (ODI WorldCup) ಟೂರ್ನಿಯ ಆಯೋಜನೆಯ ಹಕ್ಕನ್ನು ಬಿಸಿಸಿಐ (BCCI) ಈಗಾಗಲೇ ಪಡೆದುಕೊಂಡಿದೆ. ಒಂದು ವೇಳೆ ಪಾಕಿಸ್ತಾನ ವಿಶ್ವಕಪ್ ಟೂರ್ನಿಯಲ್ಲಿ ಆಡಲು ಭಾರತಕ್ಕೆ ಬರಲು ಒಪ್ಪದಿದ್ದರೆ, ಈ ಮಹತ್ವದ ಟೂರ್ನಿಯನ್ನು ಬೇರೆಡೆಗೆ ಸ್ಥಳಾಂತರಿಸಲು ಸಾಧ್ಯವಿಲ್ಲ ಎಂದು ಐಸಿಸಿ (ICC) ಈಗಾಗಲೇ ಸ್ಪಷ್ಟಪಡಿಸಿದೆ.

    Live Tv
    [brid partner=56869869 player=32851 video=960834 autoplay=true]

  • ಭಾರತ-ಪಾಕ್ ಕ್ರಿಕೆಟ್ ಬೋರ್ಡ್‍ಗಳ ಕದನ – ಭಾರತ ಯಾರ ಮಾತನ್ನು ಕೇಳಲ್ಲ: ಅನುರಾಗ್ ಠಾಕೂರ್

    ಭಾರತ-ಪಾಕ್ ಕ್ರಿಕೆಟ್ ಬೋರ್ಡ್‍ಗಳ ಕದನ – ಭಾರತ ಯಾರ ಮಾತನ್ನು ಕೇಳಲ್ಲ: ಅನುರಾಗ್ ಠಾಕೂರ್

    ಮುಂಬೈ: ಕ್ರಿಕೆಟ್ (Cricket) ವಿಚಾರವಾಗಿ ಭಾರತ-ಪಾಕಿಸ್ತಾನ (India-Pakistan)  ಕ್ರಿಕೆಟ್ ಬೋರ್ಡ್‍ಗಳ ನಡುವೆ ಕಿತ್ತಾಟ ಆರಂಭವಾಗಿದೆ. 2023ರ ಏಷ್ಯಾ ಕಪ್ (Asia Cup) ಟೂರ್ನಿ ಪಾಕಿಸ್ತಾನದಲ್ಲಿ ನಡೆದರೆ ಆ ಟೂರ್ನಿಯಲ್ಲಿ ಭಾರತ ಭಾಗವಹಿಸುವುದಿಲ್ಲ ಎಂದು ಬಿಸಿಸಿಐ (BCCI) ಘೋಷಿಸಿತ್ತು. ಈ ಮಾತಿಗೆ ಪಾಕಿಸ್ತಾನ ತಂಡ ಕೆರಳಿ ಕೆಂಡವಾಗಿದೆ. ಈ ಬಗ್ಗೆ ಅಭಿಪ್ರಾಯ ಹಂಚಿಕೊಂಡಿರುವ ಕೇಂದ್ರ ಕ್ರೀಡಾ ಸಚಿವರಾದ ಅನುರಾಗ್ ಠಾಕೂರ್ (Anurag Thakur), ಭಾರತ ಯಾರ ಮಾತನ್ನು ಕೇಳುವ ಸ್ಥಿತಿಯಲ್ಲಿಲ್ಲ ಎಂದು ತಿರುಗೇಟು ನೀಡಿದ್ದಾರೆ.

    ಈ ಬಗ್ಗೆ ಮಾಧ್ಯಮವೊಂದರಲ್ಲಿ ಮಾತನಾಡಿದ ಅವರು, ಭಾರತದಲ್ಲಿ ನಡೆಯಲಿರುವ ಏಕದಿನ ವಿಶ್ವಕಪ್‍ಗೆ (World Cup) ಪಾಕಿಸ್ತಾನ ಸೇರಿದಂತೆ ಎಲ್ಲಾ ದೇಶಗಳನ್ನು ಆಹ್ವಾನಿಸುತ್ತೇವೆ. ಈ ಟೂರ್ನಿ ನಿಗದಿಯಂತೆ ನಡೆಯಲಿದೆ. ಇದು ಬಿಸಿಸಿಐ ತೆಗೆದುಕೊಂಡಿರುವ ನಿರ್ಧಾರ. ಭಾರತ ಕ್ರೀಡಾಪಟುಗಳ ತವರೂರು. ನಾವು ಈಗಾಗಲೇ ಹಲವು ಕ್ರೀಡಾಕೂಟಗಳೊಂದಿಗೆ ವಿಶ್ವಕಪ್‍ನಂತಹ ಮಹತ್ವದ ಟೂರ್ನಿಗಳನ್ನು ಆಯೋಜಿಸಿದ್ದೇವೆ. ಭಾರತವನ್ನು ಯಾವುದೇ ಕ್ರೀಡೆಯಲ್ಲಿ ನಿರ್ಲಕ್ಷಿಸುವಂತಿಲ್ಲ ಎಂದಿದ್ದಾರೆ. ಇದನ್ನೂ ಓದಿ: ಬಿನ್ನಿ ಬಿಸಿಸಿಐ ಅಧ್ಯಕ್ಷರಾದ ಬಳಿಕ ತೆರವಾದ KSCA ಅಧ್ಯಕ್ಷ ಹುದ್ದೆ – ಮುಂದಿನ ಬಾಸ್ ಯಾರು?

    ಭಾರತದಲ್ಲಿ ನಡೆಯುವ ವಿಶ್ವಕಪ್‍ಗೆ ಸರ್ಕಾರ ಬೆಂಬಲ ನೀಡಲಿದೆ. ಗೃಹ ಸಚಿವಾಲಯದಿಂದ ಟೂರ್ನಿಗೆ ಸಿಗಬೇಕಾದ ಭದ್ರತೆ ವ್ಯವಸ್ಥೆ ಮಾಡುತ್ತೇವೆ. ಈ ಕುರಿತಾಗಿ ಭಾರತ ಯಾರ ಮಾತನ್ನು ಕೇಳುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಇದನ್ನೂ ಓದಿ: ಗ್ರೀನ್‍ಗೆ ಸಿಕ್ತು ಟಿ20 ವಿಶ್ವಕಪ್ ಗ್ರೀನ್ ಸಿಗ್ನಲ್

    ಬಿಸಿಸಿಐ 2023ರ ಏಷ್ಯಾ ಕಪ್ ಟೂರ್ನಿ ಪಾಕಿಸ್ತಾನದಲ್ಲಿ ನಡೆದರೆ ಆ ಟೂರ್ನಿಯಲ್ಲಿ ಭಾರತ ಪಾಲ್ಗೊಳ್ಳಲ್ಲ ಎಂದ ಬಳಿಕ ಭಾರತದ ನಿರ್ಣಯ ಖಂಡಿಸಿ ಭಾರತದಲ್ಲಿ ನಡೆಯುವ ಏಕದಿನ ವಿಶ್ವಕಪ್ ಟೂರ್ನಿ ಬಹಿಷ್ಕರಿಸುವ ಸುಳಿವನ್ನು ಪಾಕಿಸ್ತಾನ ಕ್ರಿಕೆಟ್ ಬೋರ್ಡ್ ನೀಡಿದೆ. ಜೊತೆಗೆ ಏಷ್ಯಾ ಕ್ರಿಕೆಟ್ ಕೌನ್ಸಿಲ್‍ನಿಂದಲೇ ಹೊರಬರುವ ಬಗ್ಗೆ ಪಾಕಿಸ್ತಾನದ ಕ್ರಿಕೆಟ್ ಬೋರ್ಡ್ (PCB) ಮುಖ್ಯಸ್ಥ ರಮೀಜ್ ರಾಜಾ ಗಂಭೀರ ಚಿಂತನೆ ನಡೆಸಿದ್ದಾರೆ.

    ನಾವೀಗ ಕಠಿಣವಾಗಿ ಸ್ಪಂದಿಸಬೇಕಿದೆ. ಐಸಿಸಿ, ಎಸಿಸಿ ಟೂರ್ನಿಯಲ್ಲಿ ಭಾರತದ ವಿರುದ್ಧ ಮ್ಯಾಚ್ ಆಡದಿದ್ರೆ ಪಾಕಿಸ್ತಾನಕ್ಕೆ ಆರ್ಥಿಕವಾಗಿ ಭಾರೀ ನಷ್ಟ ಉಂಟಾಗುತ್ತದೆ. ಪಾಕಿಸ್ತಾನದಲ್ಲಿ ನಡೆಯುವ ಏಷ್ಯಾ ಕಪ್ ಟೂರ್ನಿಯನ್ನು, ಬೇರೆ ಕಡೆ ಮಾಡುತ್ತೇವೆ ಎಂದು ನಿರ್ಧರಿಸಲು ಜಯ್ ಶಾ ಯಾರು ಎಂದು ಪಿಸಿಬಿ ಪ್ರಶ್ನಿಸಿದೆ.

    Live Tv
    [brid partner=56869869 player=32851 video=960834 autoplay=true]

  • ಭಾರತದ ಆಟಗಾರರಿಗೆ ಸಿಗುವ ಪ್ರೋತ್ಸಾಹ ಪಾಕಿಸ್ತಾನದಲ್ಲಿ ಸಿಗಲ್ಲ: ಪಾಕ್ ಕ್ರಿಕೆಟಿಗ ಶೆಹ್‌ಝಾದ್

    ಭಾರತದ ಆಟಗಾರರಿಗೆ ಸಿಗುವ ಪ್ರೋತ್ಸಾಹ ಪಾಕಿಸ್ತಾನದಲ್ಲಿ ಸಿಗಲ್ಲ: ಪಾಕ್ ಕ್ರಿಕೆಟಿಗ ಶೆಹ್‌ಝಾದ್

    ಇಸ್ಲಾಮಾಬಾದ್: ಪಾಕಿಸ್ತಾನ ಕ್ರಿಕೆಟ್ ತಂಡದಲ್ಲಿ ತಮ್ಮನ್ನು ನಡೆಸಿಕೊಂಡ ರೀತಿ ಬೇಸರವಾಗುತ್ತಿದೆ ಎಂದು ಹೇಳಿರುವ ಪಾಕಿಸ್ತಾನದ ಕ್ರಿಕೆಟಿಗ ಅಹ್ಮದ್ ಶೆಹ್‌ಝಾದ್, ಭಾರತದಲ್ಲಿ ಆಟಗಾರರಿಗೆ ಸಿಗುವ ಬೆಂಬಲ ಹಾಗೂ ಪ್ರೋತ್ಸಾಹ ಪಾಕಿಸ್ತಾನದಲ್ಲಿ ಸಿಗುವುದಿಲ್ಲ ಎಂದು ಹೇಳಿಕೊಂಡಿದ್ದಾರೆ.

    2019ರಲ್ಲಿ ತಮ್ಮ 17ನೇ ವಯಸ್ಸಿನಲ್ಲಿಯೇ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿದ್ದ ಶೆಹ್‌ಝಾದ್ ತಮ್ಮ ಆಕ್ರಮಣಕಾರಿ ಬ್ಯಾಟಿಂಗ್‌ನಿಂದ ಅಗ್ರ ಕ್ರಮಾಂಕದ ಆಟಗಾರನಾಗಿ ಗಮನ ಸೆಳೆದಿದ್ದರು. ಆದರೆ ಕೆಲವೇ ಕೆಲವು ಕೆಟ್ಟ ಇನ್ನಿಂಗ್ಸ್ ಅವರನ್ನು ಟೆಸ್ಟ್ ಹಾಗೂ ಓಡಿಐ ತಂಡದಿಂದ ಕೈಬಿಡುವಂತೆ ಮಾಡಿತ್ತು. ಇದನ್ನೂ ಓದಿ: ಔಟ್ ಮಾಡಿದ ಬೌಲರ್‌ಗೆ ಮಧ್ಯದ ಬೆರಳು ತೋರಿಸಿದ CSK ಆಟಗಾರ – ಟಿಎನ್‍ಪಿಎಲ್‍ನಲ್ಲಿ ಕಿರಿಕ್

    ಟಿ20 ಕ್ರಿಕೆಟ್‌ಗೆ ಸೂಕ್ತರಾಗುವ ಅವರನ್ನು ಇನ್ನಷ್ಟು ದಿನಗಳ ಕಾಲ ಆಡಿಸಬಹುದಾಗಿತ್ತು. ಆದರೆ 2019ರಲ್ಲಿ ಮತ್ತೊಮ್ಮೆ ಅವರನ್ನು ತಂಡದಿಂದ ಹೊರದಬ್ಬಲಾಯಿತು. ಅಂದಿನಿಂದ ಬಲಗೈ ಬ್ಯಾಟ್ಸ್‌ಮನ್‌ ಪಾಕಿಸ್ತಾನ ತಂಡದಲ್ಲಿ ಕಾಣಿಸುತ್ತಿಲ್ಲ. ಕೇವಲ ದೇಶಿ ಕ್ರಿಕೆಟ್ ಆಡಿಕೊಂಡಿದ್ದಾರೆ.

    ತಮ್ಮ ಕ್ರಿಕೆಟ್ ವೃತ್ತಿ ಜೀವನದ ಆರಂಭದಲ್ಲಿ ನನ್ನ ಬ್ಯಾಟಿಂಗ್ ಅನ್ನು ವಿರಾಟ್ ಕೊಹ್ಲಿಗೆ ಅಭಿಮಾನಿಗಳು ಹೋಲಿಸಿದ್ದರು ಎಂದೂ ಅವರು ಹೇಳಿಕೊಂಡಿದ್ದಾರೆ. ಇದನ್ನೂ ಓದಿ: ಫಿಫಾ ವಿಶ್ವಕಪ್ ವೇಳೆ ಸೆಕ್ಸ್‌ ಮಾಡಿದ್ರೆ 7 ವರ್ಷ ಜೈಲು!

    ತಮ್ಮ ಅಂತಾರಾಷ್ಟ್ರೀಯ ಕ್ರಿಕೆಟ್ ಪಯಣದ ಕುರಿತು ಮಾತನಾಡಿರುವ ಅವರು, ನನ್ನ ವೈಫಲ್ಯಗಳ ಬಗ್ಗೆ ಪಿಸಿಬಿ ಅಧಿಕಾರಿಗಳು ಮುಖಾಮುಖಿಯಾಗಿ ಕುಳಿತು ಚರ್ಚಿಸಬಹುದಿತ್ತು. ನಾನು ಸವಾಲುಗಳನ್ನು ಸ್ವೀಕರಿಸಲು ಸಿದ್ಧನಿದ್ದೆ. ತದನಂತರ ಯಾರದು ತಪ್ಪು? ಯಾರದು ಸರಿ ಎಂದು ತಿಳಿಯುತ್ತಿತ್ತು ಎಂದು ವಿಷಾದ ವ್ಯಕ್ತಪಡಿಸಿದ್ದಾರೆ.

    ಆದರೆ ವಖಾರ್ ಯೂನಿಸ್ ಅವರ ಮಾತುಗಳು ನನಗೆ ತಂಬಾ ನೋವು ಕೊಟ್ಟಿದ್ದವು. ವಿಶೇಷವಾಗಿ ರಾಷ್ಟ್ರೀಯ ತಂಡದಿಂದ ದೂರ ಉಳಿದಿದ್ದಾಗ ಇದು ಸಿಕ್ಕಾಪಟ್ಟೆ ಕಾಡಿತ್ತು. ನನ್ನನ್ನು ತಂಡದಿಂದ ಕೈಬಿಡಲು ಅವರು ಮೊದಲೇ ರೂಪಿಸಿದ್ದ ಯೋಜನೆ ಇದಾಗಿತ್ತು ಎಂದು ನಾನು ಭಾವಿಸುತ್ತೇನೆ. ಏಕೆಂದರೆ ಒಂದೇ ಕಲ್ಲಿನಲ್ಲಿ ಎರಡು ಪಕ್ಷಿಗಳನ್ನು ಕೊಲ್ಲುವುದು ಅವರ ಉದ್ದೇಶವಾಗಿತ್ತು ಎಂದು ಅಹ್ಮದ್ ಶೆಹ್‌ಝಾದ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

    Live Tv

  • ಪ್ರಧಾನಿ ಮೋದಿ ಬಯಸಿದರೆ ಪಾಕ್‌ ಕ್ರಿಕೆಟ್‌ ಕತೆ ಮುಗಿದಂತೆ: ರಮೀಝ್‌ ರಾಜಾ

    ಪ್ರಧಾನಿ ಮೋದಿ ಬಯಸಿದರೆ ಪಾಕ್‌ ಕ್ರಿಕೆಟ್‌ ಕತೆ ಮುಗಿದಂತೆ: ರಮೀಝ್‌ ರಾಜಾ

    ಕರಾಚಿ: ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) ಬಯಸಿದರೆ ಪಾಕಿಸ್ತಾನ ಕ್ರಿಕೆಟ್ ಮಂಡಳಿಯ (PCB) ಕಥೆ ಕೊನೆಗೊಳ್ಳಬಹುದು ಎಂದು ಪಾಕಿಸ್ತಾನದ ಮಾಜಿ ಕ್ರಿಕೆಟಿಗ ರಮೀಝ್‌ ರಾಜಾ (Ramiz Raja) ಹೇಳಿದ್ದಾರೆ.

    ಪಾಕಿಸ್ತಾನದ ಸೆನೆಟ್ ಸ್ಟ್ಯಾಂಡಿಂಗ್‌ ಸಮಿತಿಯ ಮುಂದೆ ಮಾತನಾಡಿದ ರಾಜಾ, ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿಯ (ICC) ಒಟ್ಟು ಹಣದಲ್ಲಿ ಶೇಕಡ 90 ರಷ್ಟು ಬಿಸಿಸಿಐನಿಂದ ಬರುತ್ತದೆ ಎಂದು ಗಮನಸೆಳೆದರು.

    ಪಿಸಿಬಿ ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿಯ (ICC) ಆರ್ಥಿಕ ನೆರವಿನಿಂದ ಬದುಕುತ್ತಿದೆ. ಆದರೆ ಐಸಿಸಿಯ ಶೇ.90ರಷ್ಟು ಆದಾಯವು ಭಾರತದಿಂದ ಬರುತ್ತದೆ. ಇದು ಭಯ ಹುಟ್ಟಿಸುವ ನೈಜ ಸಂಗತಿ ಎಂದು ರಾಜಾ ಹೇಳಿದರು. ಇದನ್ನೂ ಓದಿ: ಇಶನ್‌ ಕಿಶನ್‌, ಸೂರ್ಯಕುಮಾರ್‌ ಸ್ಫೋಟಕ ಆಟ – ಮುಂಬೈಗೆ 42 ರನ್‌ ಜಯ

    ಐಸಿಸಿ ಈವೆಂಟ್ ಮ್ಯಾನೇಜ್‌ಮೆಂಟ್ ಕಂಪನಿಯಂತೆ. ವಿಶ್ವ ಕ್ರಿಕೆಟನ್ನು ಭಾರತೀಯ ಉದ್ಯಮಿಗಳು ನಿಯಂತ್ರಿಸುತ್ತಾರೆ. ಭವಿಷ್ಯದಲ್ಲಿ ಪಾಕಿಸ್ತಾನಕ್ಕೆ (Pakistan) ಸಹಾಯ ಮಾಡಬೇಡಿ ಎಂದು ಭಾರತದ ಪ್ರಧಾನಿ ಹೇಳಿದರೆ ನಾವು ಏನು ಮಾಡೋಣ ಎಂದು ಪ್ರಶ್ನಿಸಿದರು. ಐಸಿಸಿಯ ಮೇಲೆ ಹೆಚ್ಚು ಅವಲಂಬಿಸದೆ ಪಿಸಿಬಿ ತನ್ನದೇ ಆದ ಆದಾಯವನ್ನು ಗಳಿಸಲು ಹೊಸ ಮಾರ್ಗಗಳನ್ನು ಹುಡುಕಬೇಕು ಎಂದು ಹೇಳಿದರು. ಪಾಕಿಸ್ತಾನ-ನ್ಯೂಜಿಲ್ಯಾಂಡ್ ಸರಣಿಯನ್ನು ಪುನರಾರಂಭಿಸಲು ಮಾತುಕತೆಗಳು ನಡೆಯುತ್ತಿದೆ ಎಂದರು.

    ಪಾಕಿಸ್ತಾನಕ್ಕೆ ಬಂದ ನಂತರ ಸರಣಿಯನ್ನು ರದ್ದುಗೊಳಿಸುವ ನ್ಯೂಜಿಲ್ಯಾಂಡ್ ಕ್ರಮವನ್ನು ಒಪ್ಪಲಾಗದು. ಇಲ್ಲಿಯವರೆಗೆ, ಸರಣಿಯನ್ನು ಏಕೆ ರದ್ದುಗೊಳಿಸಿದರು ಎಂದು ಅವರು ನಮಗೆ ತಿಳಿಸಿಲ್ಲ. ಈಗ ಅವರು ಸರಣಿಯನ್ನು ಇನ್ನೊಂದು ತಿಂಗಳಿಗೆ ಮುಂದೂಡಲು ಪ್ರಯತ್ನಿಸುತ್ತಿದ್ದಾರೆ ಎಂದು ರಮೀಜ್ ರಾಜ ಹೇಳಿದರು.