ಹಾಸನ: ಪಿಡಿಒ (PDO) ಹುದ್ದೆಗೆ ನಡೆಯುತ್ತಿರುವ ಪರೀಕ್ಷೆಗೆ ತುಂಬು ತೋಳಿನ ಅಂಗಿ ತೊಟ್ಟು ಹಾಜರಾದ ಅಭ್ಯರ್ಥಿಗಳ ಅಂಗಿಯ ತೋಳುಗಳನ್ನು ಹಾಸನದ (Hassan) ಪರೀಕ್ಷಾ ಕೇಂದ್ರದ ಸಿಬ್ಬಂದಿ ಅರ್ಧ ತೋಳಿನವರೆಗೆ ಕತ್ತರಿಸಿದ್ದಾರೆ.
ನಗರದ ಎಲ್ವಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಪರೀಕ್ಷೆ ಬರೆಯಲು ನೂರಾರು ಯುವಕ-ಯುವತಿಯರು ಆಗಮಿಸಿದ್ದರು. ಕೆಲ ಯುವತಿಯರು ತುಂಬುತೋಳು ಬಟ್ಟೆ ಧರಿಸಿ ಬಂದಿದ್ದರು. ಇದರಿಂದ ಪರೀಕ್ಷಾ ಕೇಂದ್ರದೊಳಗೆ ಅಭ್ಯರ್ಥಿಗಳನ್ನು ಬಿಡಲು ಅಧಿಕಾರಿಗಳು ನಿರಾಕರಿಸಿದರು. ಪರೀಕ್ಷೆಗೆ ಸಮಯವಾಗುತ್ತಿದೆ ಒಳಗೆ ಬಿಡಿ ಎಂದು ಮನವಿ ಮಾಡಿದರು ಅವಕಾಶ ನೀಡಲಿಲ್ಲ.
ಕೊನೆಗೆ ಅರ್ಧ ತೋಳಿನವರೆಗೆ ಬಟ್ಟೆ ಕತ್ತರಿಸಿ ಪರೀಕ್ಷಾ ಕೇಂದ್ರದ ಒಳಗೆ ಬಿಡಲಾಯಿತು. ಈ ವೇಳೆ ಅಧಿಕಾರಿಗಳು ಹಾಗೂ ಪರೀಕ್ಷಾರ್ಥಿಗಳ ನಡುವೆ ವಾಗ್ವಾದ ನಡೆಯಿತು. ಈ ವೇಳೆ, ವಸ್ತ್ರಸಂಹಿತೆ ನಿಯಮವಿದೆ, ಹಾಲ್ ಟಿಕೆಟ್ನಲ್ಲಿ ನಿಯಮಗಳನ್ನು ಹಾಕಲಾಗಿದೆ. ಆದರೆ ನೀವು ಪರೀಕ್ಷಾ ನಿಯಮಗಳನ್ನು ಉಲ್ಲಂಘಿಸಿ ಪರೀಕ್ಷೆ ಬರೆಯಲು ಬಂದಿದ್ದೀರಾ? ನಮ್ಮ ಕರ್ತವ್ಯ ನಾವು ಮಾಡಲೇಬೇಕು ಎಂದು ಅಧಿಕಾರಿ ಉತ್ತರ ನೀಡಿದ್ದಾರೆ.
ಕಡೆಗೆ ಕರ್ತವ್ಯನಿರತ ಸಿಬ್ಬಂದಿ ಕತ್ತರಿಯಿಂದ ಅರ್ಧತೋಳಿನವರೆಗೆ ಬಟ್ಟೆ ಕತ್ತರಿಸಿ ನಂತರ ಪರೀಕ್ಷೆ ಬರೆಯಲು ಅವಕಾಶ ನೀಡಿದ್ದಾರೆ.
ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದ ಪಂಚಾಯತ್ ಅಭಿವೃದ್ಧಿ ಆಧಿಕಾರಿ (PDO) ಪರೀಕ್ಷೆ ಡಿ.8 ಭಾನುವಾರ ನಡೆಯಲಿರುವ ಹಿನ್ನೆಲೆಯಲ್ಲಿ ಅಂದು ಬೆಳಗ್ಗೆ 5:30 ರಿಂದಲೇ ಮೆಟ್ರೋ ಸಂಚಾರ (Metro Service) ಆರಂಭವಾಗಲಿದೆ.
ಅಭ್ಯರ್ಥಿಗಳು ಸಮಯಕ್ಕೆ ಸರಿಯಾಗಿ ಪರೀಕ್ಷೆಗೆ ಹಾಜರಾಗಲು ಮೆಟ್ರೋ ಸೇವೆ ಬೆಳಗ್ಗೆ 7 ಗಂಟೆಯ ಬದಲಾಗಿ ಬೆಳಗ್ಗೆ 5:30ಕ್ಕೆ ಎಲ್ಲಾ ನಾಲ್ಕು ಟರ್ಮಿನಲ್ ನಿಲ್ದಾಣಗಳಾದ ಮಾದಾವರ, ರೇಷ್ಮೆ ಸಂಸ್ಥೆ, ಚಲ್ಲಘಟ್ಟ ಮತ್ತು ವೈಟ್ ಫೀಲ್ಡ್ (ಕಾಡುಗೋಡಿ) ನಿಲ್ದಾಣದಿಂದ ಆರಂಭವಾಗಲಿದೆ ಎಂದು ಬಿಎಂಆರ್ಸಿಎಲ್ (BMRCL) ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.
ರಾಯಚೂರು: ಪಿಡಿಓ ಪ್ರಶ್ನೆಪತ್ರಿಕೆ ಸೋರಿಕೆ ಪ್ರತಿಭಟನೆಯಲ್ಲಿ 12 ಜನ ಹಾಗೂ ಇತರೆ ಪಿಡಿಓ ಪರೀಕ್ಷಾರ್ಥಿಗಳ ವಿರುದ್ಧ ಸಿಂಧನೂರು (Sidhanuru) ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ರಾಯಚೂರಿನ (Raichur) ಸಿಂಧನೂರಿನ ಸರ್ಕಾರಿ ಪದವಿ ಕಾಲೇಜು ಪರೀಕ್ಷಾ ಕೇಂದ್ರದಲ್ಲಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (PDO) ಹುದ್ದೆ ಪರೀಕ್ಷೆಯಲ್ಲಿ ಅಕ್ರಮ, ಪೇಪರ್ ಲೀಕ್ ಆರೋಪಿಸಿ ಪರೀಕ್ಷೆ ಬಹಿಷ್ಕರಿಸಿ ನಿನ್ನೆ (ನ.17) ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದರು. ಈ ಬಗ್ಗೆ ಪರೀಕ್ಷಾ ಮೇಲ್ವಿಚಾರಕ ಬಸವರಾಜ ತಡಕಲ್ ದೂರು ನೀಡಿದ್ದು, ಪರೀಕ್ಷಾರ್ಥಿಗಳ ವಿರುದ್ಧ ಸಿಂಧನೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಹುತೇಕ ಯಾದಗಿರಿ ಜಿಲ್ಲೆಯ ಪರೀಕ್ಷಾರ್ಥಿಗಳ ಮೇಲೆ ಪ್ರಕರಣ ದಾಖಲಾಗಿದ್ದು, ಪೊಲೀಸರು ಓರ್ವ ಪರೀಕ್ಷಾರ್ಥಿಯನ್ನ ವಶಕ್ಕೆ ಪಡೆದು ಸ್ಟೇಷನ್ ಬೇಲ್ ಮೇಲೆ ಬಿಟ್ಟಿದ್ದಾರೆ. ಇದನ್ನೂ ಓದಿ: Nelamangala| ಚಿರತೆ ದಾಳಿ- ಮಹಿಳೆ ಬಲಿ
ಪ್ರಶ್ನೆ ಪತ್ರಿಕೆ ಲೀಕ್ ಮಾಡಿದ್ದೀರಿ ಎಂದು ತಪ್ಪು ಭಾವಿಸಿ ಅನಗತ್ಯ ಗೊಂದಲ ಸೃಷ್ಟಿಸಲಾಗಿದೆ. ಪರೀಕ್ಷಾ ವೀಕ್ಷಕರೊಂದಿಗೆ ವಾಗ್ವಾದ ಮಾಡಿ, ಪರೀಕ್ಷಾ ನಿಯಮಗಳ ಉಲ್ಲಂಘನೆ ಮಾಡಿದ್ದಾರೆ. ಪರೀಕ್ಷೆ ಬರೆಯಲು ಕುಳಿತಿದ್ದ ವಿದ್ಯಾರ್ಥಿಗಳಿಗೆ ಪ್ರಚೋದನೆ ನೀಡಿದ್ದಾರೆ. ಇತರ ಪರೀಕ್ಷಾರ್ಥಿಗಳು ಕೊಠಡಿಗಳಿಂದ ಹೊರ ಬರುವಂತೆ ಮಾಡಿ, ರಸ್ತೆಗಿಳಿದು ಪ್ರತಿಭಟನೆ ಮಾಡಿದ್ದಾರೆ. ಅನಗತ್ಯ ಗೊಂದಲ ಸೃಷ್ಟಿಸಿ ಇತರ ಪರೀಕ್ಷಾರ್ಥಿಗಳನ್ನ ಹೊರಗೆ ಕರೆದೊಯ್ಯಲಾಗಿದೆ. ಸುಳ್ಳು ಸುದ್ದಿ ಹರಡಿ ಕಾಲೇಜಿನ ಮುಂದುಗಡೆ ಗಲಾಟೆ ಮಾಡಿದ್ದಾರೆ ಎಂಬ ಆರೋಪದ ಹಿನ್ನೆಲೆ, ಕೊಠಡಿ ಸಂಖ್ಯೆ 05ರಲ್ಲಿ ಗೊಂದಲ ಸೃಷ್ಟಿಸಿ ಗಲಾಟೆ ಮಾಡಿದ ಪರೀಕ್ಷಾರ್ಥಿ ಕಾಶಿಪತಿಯನ್ನ ವಶಕ್ಕೆ ಪಡೆದು, ಸ್ಟೇಷನ್ ಬೇಲ್ ಮೇಲೆ ಬಿಡುಗಡೆ ಮಾಡಿದ್ದಾರೆ. ಬಾಬು, ಅಯ್ಯನಗೌಡ, ಅಮಿತ್, ವೆಂಕಟೇಶ್ ಸೇರಿ 12 ಜನ ಹಾಗೂ ಇತರರ ವಿರುದ್ಧ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: Chitraduraga| 240 ನರ್ಸಿಂಗ್ ವಿದ್ಯಾರ್ಥಿಗಳಿಗೆ ಒಂದೇ ಕೊಠಡಿಯಲ್ಲಿ ಪಾಠ!
ಗ್ರಾಮೀಣಾಭಿವೃದ್ಧಿ ಇಲಾಖೆಯ ಕಲ್ಯಾಣ ಕರ್ನಾಟಕ ವೃಂದದ 97 (ಪಿಡಿಒ) ಹುದ್ದೆಗಳ ನೇಮಕಾತಿಗೆ ಕರ್ನಾಟಕ ಲೋಕಸೇವಾ ಆಯೋಗ (KPSC) ಸಿದ್ದಪಡಿಸಲಾಗಿದ್ದ ಪ್ರಶ್ನೆ ಪತ್ರಿಕೆ ಸೋರಿಕೆ ಆಗಿದ್ಯಾ ಎಂಬ ಗಂಭೀರ ಪ್ರಶ್ನೆ ಎದ್ದಿದೆ. (ಪಿಡಿಒ) ಹುದ್ದೆಗಳ ನೇಮಕಾತಿಗೆ ಕಲ್ಯಾಣ ಕರ್ನಾಟಕ ಭಾಗದ 298 ಪರೀಕ್ಷಾ ಉಪ ಕೇಂದ್ರಗಳಲ್ಲಿ ನಿನ್ನೆ ಸ್ಪರ್ಧಾತ್ಮಕ ಪರೀಕ್ಷೆ ಆಯೋಜನೆಗೊಂಡಿತ್ತು. ಈ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆಯಾಗಿದೆ ಎಂದು ಆರೋಪಿಸಿ ಅಭ್ಯರ್ಥಿಗಳು ಸಿಂಧನೂರು ಪಟ್ಟಣದ ಸರ್ಕಾರಿ ಪದವಿ ಕಾಲೇಜಿನ ಮುಂದೆ ಪ್ರತಿಭಟನೆ ಮಾಡಿದ್ದಾರೆ. ಇದನ್ನೂ ಓದಿ: ಒಂದೇ ದಿನ ಮೂವರು ಗರ್ಭಿಣಿಯರು ಸಾವು – ಇನ್ನೂ ಬಳ್ಳಾರಿಗೆ ಮುಖ ಮಾಡದ ಜಮೀರ್
ವಿದ್ಯಾರ್ಥಿಗಳು ಹೇಳಿದ್ದೇನು?
ಒಂದು ಕೋಣೆಯಲ್ಲಿ 24 ಅಭ್ಯರ್ಥಿಗಳಿಗೆ ಪರೀಕ್ಷೆ ಬರೆಯಲು ಅವಕಾಶ ನೀಡಲಾಗಿತ್ತು. ಆದರೆ ಕೊಠಡಿಗೆ 24 ಪ್ರಶ್ನೆಪತ್ರಿಕೆ ಬದಲು ಕೇವಲ 12 ಪ್ರಶ್ನೆಪ್ರತಿಕೆಯನ್ನು ಕೆಪಿಎಸ್ಸಿ ಕಳುಹಿಸಿದೆ. ಈ ಹಿನ್ನೆಲೆ ಪ್ರಶ್ನೆಪತ್ರಿಕೆ ಸೋರಿಕೆಯಾಗಿದ್ದು ಮಾತ್ರವಲ್ಲದೇ ಕೊಠಡಿಗೆ ತರುವಾಗಲೇ ಬಂಡಲ್ಗಳು ತೆರೆದಿದ್ದವು. ಅಷ್ಟೇ ಅಲ್ಲದೇ ಪರೀಕ್ಷೆ ನಿಗದಿಯಾದ ಸಮಯಕ್ಕಿಂತಲೂ ತಡವಾಗಿ ಆರಂಭವಾಗಿತ್ತು ಎಂದು ವಿದ್ಯಾರ್ಥಿಗಳು ಆರೋಪಿಸಿದ್ದರು.
ಸರ್ಕಾರಿ ಪದವಿ ಕಾಲೇಜಿನ ಎದುರಿನ ಕುಷ್ಟಗಿ ಸಿಂಧನೂರು ರಸ್ತೆ ಬಂದ್ ಮಾಡಿ ಪ್ರತಿಭಟಿಸಿ ಬೀದರ್, ಕಲಬುರಗಿ ಹಾಗೂ ಯಾದಗಿರಿಯಿಂದ ಪರೀಕ್ಷೆ ಬರೆಯಲು ಬಂದ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ. ನೂರಾರು ಅಭ್ಯರ್ಥಿಗಳು ಕೆಪಿಎಸ್ಸಿ ವಿರುದ್ಧ ಪ್ರತಿಭಟಿಸಿದ್ದು, ಸ್ಥಳಕ್ಕೆ ಸಿಂಧನೂರು ನಗರ ಠಾಣೆ ಪೊಲೀಸರ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ: ವಿದೇಶಿ ಸ್ವತ್ತು, ಆದಾಯ ಘೋಷಿಸದಿದ್ರೆ 10 ಲಕ್ಷ ರೂ. ದಂಡ – ಕೊನೇ ದಿನ ಯಾವಾಗ?
ಬೀದರ್ (Bidar), ಕಲಬುರಗಿ (Kalaburagi), ಯಾದಗಿರಿ, ರಾಯಚೂರು, ವಿಜಯನಗರ, ಬಳ್ಳಾರಿ, ಕೊಪ್ಪಳ ಜಿಲ್ಲಾ ಕೇಂದ್ರಗಳು ಹಾಗೂ ಭಾಲ್ಕಿ, ಜೇವರ್ಗಿ, ಶಹಾಪುರ, ಸಿಂಧನೂರು, ಹಗರಿ ಬೊಮ್ಮನಹಳ್ಳಿ, ಕೂಡ್ಲಿಗಿ, ಗಂಗಾವತಿ ಮತ್ತು ಕುಷ್ಟಗಿ ತಾಲೂಕು ಕೇಂದ್ರಗಳಲ್ಲಿ ಪರೀಕ್ಷೆಗಳು ನಡೆಯುತ್ತಿದೆ. ಭಾನುವಾರದ ಪರೀಕ್ಷೆಗೆ 99,107 ಅಭ್ಯರ್ಥಿಗಳು ಹೆಸರು ನೋಂದಾಯಿಸಿಕೊಂಡಿದ್ದರು ಎಂದು ಕೆಪಿಎಸ್ಸಿ ತಿಳಿಸಿತ್ತು. ಇದನ್ನೂ ಓದಿ: ರಸ್ತೆ ಅಗಲೀಕರಣಕ್ಕಾಗಿ 70ಕ್ಕೂ ಹೆಚ್ಚು ಮನೆಗಳ ನೆಲಸಮ – ನೋಟಿಸ್ ನೀಡದೆ ತೆರವು ಆರೋಪ
ರಾಯಚೂರು: ಗ್ರಾಮೀಣಾಭಿವೃದ್ಧಿ ಇಲಾಖೆಯ (PDO) ಕಲ್ಯಾಣ ಕರ್ನಾಟಕ ವೃಂದದ 97 ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ಹುದ್ದೆಗಳ ನೇಮಕಾತಿಗೆ ಕರ್ನಾಟಕ ಲೋಕಸೇವಾ ಆಯೋಗ (KPSC) ಸಿದ್ದಪಡಿಸಲಾಗಿದ್ದ ಪ್ರಶ್ನೆ ಪತ್ರಿಕೆ ಸೋರಿಕೆ ಆಗಿದ್ಯಾ ಎಂಬ ಗಂಭೀರ ಪ್ರಶ್ನೆ ಎದ್ದಿದೆ.
(ಪಿಡಿಒ) ಹುದ್ದೆಗಳ ನೇಮಕಾತಿಗೆ ಕಲ್ಯಾಣ ಕರ್ನಾಟಕ ಭಾಗದ 298 ಪರೀಕ್ಷಾ ಉಪ ಕೇಂದ್ರಗಳಲ್ಲಿ ಇಂದು (ನ.17) ‘ಸ್ಪರ್ಧಾತ್ಮಕ ಪರೀಕ್ಷೆ’ ಆಯೋಜನೆಗೊಂಡಿತ್ತು. ಈ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆಯಾಗಿದೆ ಎಂದು ಆರೋಪಿಸಿ ಅಭ್ಯರ್ಥಿಗಳು ಸಿಂಧನೂರು ಪಟ್ಟಣದ ಸರ್ಕಾರಿ ಪದವಿ ಕಾಲೇಜಿನ ಮುಂದೆ ಪ್ರತಿಭಟಿಸುತ್ತಿದ್ದಾರೆ.ಇದನ್ನೂ ಓದಿ: ಈರುಳ್ಳಿ ಬೆಲೆ ದಿಢೀರ್ ಏರಿಕೆಯಾಗಿದ್ದೇಕೆ?
ವಿದ್ಯಾರ್ಥಿಗಳು ಹೇಳೋದು ಏನು?
ಒಂದು ಕೋಣೆಯಲ್ಲಿ 24 ಅಭ್ಯರ್ಥಿಗಳಿಗೆ ಪರೀಕ್ಷೆ ಬರೆಯಲು ಅವಕಾಶ ನೀಡಲಾಗಿತ್ತು. ಆದರೆ ಕೊಠಡಿಗೆ 24 ಪ್ರಶ್ನೆಪತ್ರಿಕೆ ಬದಲು ಕೇವಲ 12 ಪ್ರಶ್ನೆಪ್ರತಿಕೆಯನ್ನು ಕೆಪಿಎಸ್ಸಿ ಕಳುಹಿಸಿದೆ. ಈ ಹಿನ್ನೆಲೆ ಪ್ರಶ್ನೆಪತ್ರಿಕೆ ಸೋರಿಕೆಯಾಗಿದ್ದು ಮಾತ್ರವಲ್ಲದೇ ಕೊಠಡಿಗೆ ತರುವಾಗಲೇ ಬಂಡಲ್ಗಳು ತೆರೆದಿದ್ದವು. ಅಷ್ಟೇ ಅಲ್ಲದೇ ಪರೀಕ್ಷೆ ನಿಗದಿಯಾದ ಸಮಯಕ್ಕಿಂತಲೂ ತಡವಾಗಿ ಆರಂಭವಾಗಿತ್ತು ಎಂದು ವಿದ್ಯಾರ್ಥಿಗಳು ಆರೋಪಿಸಿದ್ದಾರೆ.
ಸರ್ಕಾರಿ ಪದವಿ ಕಾಲೇಜಿನ ಎದುರಿನ ಕುಷ್ಟಗಿ – ಸಿಂಧನೂರು ರಸ್ತೆ ಬಂದ್ ಮಾಡಿ ಪ್ರತಿಭಟಿಸುತ್ತಿದ್ದು, ಬೀದರ್, ಕಲಬುರಗಿ ಹಾಗೂ ಯಾದಗಿರಿಯಿಂದ ಪರೀಕ್ಷೆ ಬರೆಯಲು ಬಂದ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸುತ್ತಿದ್ದಾರೆ. ನೂರಾರು ಅಭ್ಯರ್ಥಿಗಳು ಕೆಪಿಎಸ್ಸಿ ವಿರುದ್ಧ ಪ್ರತಿಭಟಿಸುತ್ತಿದ್ದು, ಸ್ಥಳಕ್ಕೆ ಸಿಂಧನೂರು ನಗರ ಠಾಣೆ ಪೊಲೀಸರ ಭೇಟಿ ನೀಡಿ, ಪರಿಶೀಲನೆ ನಡೆಸುತ್ತಿದ್ದಾರೆ.
ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ವಿಜಯನಗರ, ಬಳ್ಳಾರಿ, ಕೊಪ್ಪಳ ಜಿಲ್ಲಾ ಕೇಂದ್ರಗಳು ಹಾಗೂ ಭಾಲ್ಕಿ, ಜೇವರ್ಗಿ, ಶಹಾಪುರ, ಸಿಂಧನೂರು, ಹಗರಿ ಬೊಮ್ಮನಹಳ್ಳಿ, ಕೂಡ್ಲಿಗಿ, ಗಂಗಾವತಿ ಮತ್ತು ಕುಷ್ಟಗಿ ತಾಲೂಕು ಕೇಂದ್ರಗಳಲ್ಲಿ ಪರೀಕ್ಷೆಗಳು ನಡೆಯುತ್ತಿದೆ. ಭಾನುವಾರದ ಪರೀಕ್ಷೆಗೆ 99,107 ಅಭ್ಯರ್ಥಿಗಳು ಹೆಸರು ನೋಂದಾಯಿಸಿಕೊಂಡಿದ್ದಾರೆ ಎಂದು ಕೆಪಿಎಸ್ಸಿ ತಿಳಿಸಿತ್ತು.ಇದನ್ನೂ ಓದಿ: ಬಾಲನಟ ರೋಹಿತ್ ಆರೋಗ್ಯ ಸ್ಥಿರ – ದವಡೆಗೆ ಶಸ್ತ್ರಚಿಕಿತ್ಸೆ, ಪ್ಲೇಟ್ ಅಳವಡಿಕೆ