Tag: Pegasus

  • ನನ್ನ ಫೋನ್‌ನಲ್ಲೂ ಪೆಗಾಸಸ್‌ ಇತ್ತು, ಕಾಲ್‌ಗಳು ರೆಕಾರ್ಡ್‌ ಆಗ್ತಿತ್ತು – ರಾಹುಲ್‌ ಗಾಂಧಿ

    ನನ್ನ ಫೋನ್‌ನಲ್ಲೂ ಪೆಗಾಸಸ್‌ ಇತ್ತು, ಕಾಲ್‌ಗಳು ರೆಕಾರ್ಡ್‌ ಆಗ್ತಿತ್ತು – ರಾಹುಲ್‌ ಗಾಂಧಿ

    ಲಂಡನ್: ಕೇಂಬ್ರಿಡ್ಜ್‌ ವಿಶ್ವವಿದ್ಯಾನಿಲಯದಲ್ಲಿ (Cambridge) ಉಪನ್ಯಾಸದ ವೇಳೆ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ (Rahul Gandhi) ಅವರು ಕೇಂದ್ರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಭಾರತೀಯ ಪ್ರಜಾಪ್ರಭುತ್ವದ ಮೂಲ ರಚನೆಯ ಮೇಲೆ ದಾಳಿ ನಡೆಯುತ್ತಿದೆ. ಇಸ್ರೇಲ್‌ ಸ್ಪೈವೇರ್‌ ಪೆಗಾಸಸ್‌ (Pegasus) ನನ್ನ ಫೋನ್‌ನಲ್ಲೂ ಇದೆ ಎಂದು ಕೇಂದ್ರದ ವಿರುದ್ಧ ಆರೋಪ ಮಾಡಿದ್ದಾರೆ.

    ಕಾಂಗ್ರೆಸ್ ನಾಯಕ ಮತ್ತು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಮಾಜಿ ಸಲಹೆಗಾರ ಸ್ಯಾಮ್ ಪಿತ್ರೋಡಾ, ಕೇಂಬ್ರಿಡ್ಜ್ ಜಡ್ಜ್ ಬ್ಯುಸಿನೆಸ್ ಸ್ಕೂಲ್‌ನಲ್ಲಿ ಎಂಬಿಎ ವಿದ್ಯಾರ್ಥಿಗಳಿಗೆ ರಾಹುಲ್ ಗಾಂಧಿ ಮಾಡಿದ ಭಾಷಣದ ಯೂಟ್ಯೂಬ್ ಲಿಂಕ್ ಅನ್ನು ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದಾರೆ. “ನಿಮ್ಮ ಫೋನ್‌ ಕರೆಗಳು ರೆಕಾರ್ಡ್‌ ಆಗಿತ್ತಿದೆ. ಫೋನ್‌ನಲ್ಲಿ ಮಾತನಾಡುವಾಗ ಜಾಗರೂಕರಾಗಿರಿ ಎಂದು ಗುಪ್ತಚರ ಅಧಿಕಾರಿಗಳು ನನಗೆ ಎಚ್ಚರಿಕೆ ನೀಡಿದ್ದಾರೆ” ಎಂದು ರಾಹುಲ್‌ ಗಾಂಧಿ ತಿಳಿಸಿದ್ದಾರೆ. ಇದನ್ನೂ ಓದಿ: ಹಿಜಬ್ ಕುರಿತು ಶೀಘ್ರದಲ್ಲಿ ವಿಚಾರಣೆ – ಸಿಜೆಐ

    “ನಾನೇ ನನ್ನ ಫೋನ್‌ನಲ್ಲಿ ಪೆಗಾಸಸ್ ಹೊಂದಿದ್ದೇನೆ. ಹೆಚ್ಚಿನ ಸಂಖ್ಯೆಯ ರಾಜಕಾರಣಿಗಳ ಫೋನ್‌ಗಳಲ್ಲಿ ಪೆಗಾಸಸ್ ಇತ್ತು. ಜಾಗರೂಕರಾಗಿರಿ ಎಂದು ಗುಪ್ತಚರ ಅಧಿಕಾರಿಗಳು ನನಗೆ ಎಚ್ಚರಿಸಿದ್ದಾರೆ” ಎಂದು ಹೇಳಿದ್ದಾರೆ.

    ಭಾರತೀಯ ಪ್ರಜಾಪ್ರಭುತ್ವ ಆಕ್ರಮಣಕ್ಕೆ ಒಳಗಾಗಿದೆ ಎಂಬುದು ಎಲ್ಲರಿಗೂ ಗೊತ್ತಿದೆ. ಪ್ರಜಾಪ್ರಭುತ್ವಕ್ಕೆ ಅಗತ್ಯವಿರುವ ಸಾಂಸ್ಥಿಕ ಚೌಕಟ್ಟಾದ ಸಂಸತ್ತು, ಮಾಧ್ಯಮ, ನ್ಯಾಯಾಂಗವನ್ನೂ ನಿರ್ಬಂಧಿಸಲಾಗುತ್ತಿದೆ. ಹಾಗಾಗಿ, ಭಾರತೀಯ ಪ್ರಜಾಪ್ರಭುತ್ವದ ಮೂಲ ರಚನೆಯ ಮೇಲೆ ದಾಳಿ ನಡೆಯುತ್ತಿದೆ ಎಂದು ಕೇಂದ್ರದ ವಿರುದ್ಧ ಟೀಕಾಪ್ರಹಾರ ನಡೆಸಿದ್ದಾರೆ. ಇದನ್ನೂ ಓದಿ: 40 ಲಕ್ಷ ಲಂಚ ಪ್ರಕರಣ – ಕೆಎಸ್‌ಡಿಎಲ್‌ ಅಧ್ಯಕ್ಷ ಸ್ಥಾನಕ್ಕೆ ಶಾಸಕ ಮಾಡಾಳ್‌ ವಿರೂಪಾಕ್ಷಪ್ಪ ರಾಜೀನಾಮೆ

    ಕೆಲ ವಿಷಯಗಳ ಬಗ್ಗೆ ವಿರೋಧ ಪಕ್ಷದ ನಾಯಕರು ಮಾತನಾಡಿದರೆ ಜೈಲಿಗೆ ಹಾಕುತ್ತಾರೆ. ಮೂರ್ನಾಲ್ಕು ಬಾರಿ ಈ ರೀತಿ ಆಗಿದೆ. ಅಲ್ಪಸಂಖ್ಯಾತರು ಮತ್ತು ಮಾಧ್ಯಮದವರ ಮೇಲಿನ ಹಲ್ಲೆಯ ಬಗ್ಗೆಯೂ ನೀವು ಕೇಳಿದ್ದೀರಿ ಎಂದು ರಾಹುಲ್‌ ಗಾಂಧಿ ತಿಳಿಸಿದ್ದಾರೆ.

  • 5 ಫೋನ್‌ಗಳಲ್ಲಿ ಮಾಲ್‍ವೇರ್‌ಗಳು ಕಂಡು ಬಂದಿದೆ, ನಿರ್ದಿಷ್ಟವಾಗಿ ಪೆಗಾಸಸ್ ಎನ್ನಲು ಸಾಧ್ಯವಿಲ್ಲ – ಸುಪ್ರೀಂ ಕೋರ್ಟ್‍ಗೆ ತಜ್ಞರ ವರದಿ

    5 ಫೋನ್‌ಗಳಲ್ಲಿ ಮಾಲ್‍ವೇರ್‌ಗಳು ಕಂಡು ಬಂದಿದೆ, ನಿರ್ದಿಷ್ಟವಾಗಿ ಪೆಗಾಸಸ್ ಎನ್ನಲು ಸಾಧ್ಯವಿಲ್ಲ – ಸುಪ್ರೀಂ ಕೋರ್ಟ್‍ಗೆ ತಜ್ಞರ ವರದಿ

    ನವದೆಹಲಿ: ಪೆಗಾಸಸ್ ಸ್ಪೈವೇರ್ ಬಳಸಿ ದೇಶದ ಪ್ರಮುಖ ವ್ಯಕ್ತಿಗಳ ಮೇಲೆ ಅಕ್ರಮ ಕಣ್ಗಾವಲು ವಹಿಸುತ್ತಿರುವ ಆರೋಪಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್‍ಗೆ ತಜ್ಞರ ಸಮಿತಿ ವರದಿ ಸಲ್ಲಿಕೆ ಮಾಡಿದೆ. ಮೂರು ಭಾಗಗಳಲ್ಲಿ ವರದಿ ಸಲ್ಲಿಕೆಯಾಗಿದ್ದು, ತಾಂತ್ರಿಕ ಸಮಿತಿಯಿಂದ ಎರಡು ವರದಿಗಳು ಮತ್ತು ಸುಪ್ರೀಂ ಕೋರ್ಟ್‍ನ ನಿವೃತ್ತ ನ್ಯಾಯಾಧೀಶ ಆರ್.ವಿ ರವೀಂದ್ರನ್ ಮೇಲ್ವಿಚಾರಣಾ ಸಮಿತಿಯಿಂದ ಒಂದು ವರದಿಯನ್ನು ಸಲ್ಲಿಸಲಾಗಿದೆ.

    ಮುಖ್ಯ ನ್ಯಾಯಮೂರ್ತಿ ಎನ್.ವಿ ರಮಣ, ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು ನ್ಯಾಯಮೂರ್ತಿ ಹಿಮಾ ಕೊಹ್ಲಿ ಅವರನ್ನೊಳಗೊಂಡ ಪೀಠಕ್ಕೆ ಸಮಿತಿಯೂ ವರದಿ ಸಲ್ಲಿಸಿತ್ತು. ವರದಿ ಸಲ್ಲಿಕೆ ವೇಳೆ ಭಾರತ ಸರ್ಕಾರವು ಸಮಿತಿಯೊಂದಿಗೆ ಸಹಕರಿಸಲಿಲ್ಲ ಎಂದು ಟೀಕಿಸಿತು. ಅಲ್ಲದೇ ತಮ್ಮ ಫೋನ್‌ಗಳನ್ನು ಸಲ್ಲಿಸಿದ ಸದಸ್ಯರು ವರದಿಯನ್ನು ಬಿಡುಗಡೆ ಮಾಡದಂತೆ ಹಾಗೂ ವರದಿಯನ್ನು ಗೌಪ್ಯವಾಗಿಡುವಂತೆ ವಿನಂತಿಸಿದ್ದರು. ಇದನ್ನೂ ಓದಿ: 2017ರಲ್ಲಿ ಭಾರತ-ಇಸ್ರೇಲ್‌ ರಕ್ಷಣಾ ಒಪ್ಪಂದದ ವೇಳೆ ಪೆಗಾಸಸ್‌ ಖರೀದಿ – ನ್ಯೂಯಾರ್ಕ್‌ ಟೈಮ್ಸ್‌ ವರದಿ

    ವರದಿಗಳ ಪ್ರಕಾರ, ತಾಂತ್ರಿಕ ಸಮಿತಿಯೂ 29 ಫೋನ್‌ಗಳನ್ನು ಪರಿಶೀಲಿಸಿದೆ, 29ರ ಪೈಕಿ 5 ಫೋನ್‌ಗಳಲ್ಲಿ ಕೆಲವು ಮಾಲ್‍ವೇರ್‌ಗಳನ್ನು ಹೊಂದಿರುವುದು ಕಂಡುಕೊಂಡಿದೆ. ಆದರೆ ಇದಕ್ಕೆ ಪೆಗಾಸಸ್ ನೇರ ಕಾರಣ ಎಂದು ನಿರ್ದಿಷ್ಟವಾಗಿ ಹೇಳಲು ಸಾಧ್ಯವಿಲ್ಲ. ಈ ಫೋನ್‌ಗಳಲ್ಲಿ ಕಳಪೆ ಸೈಬರ್ ಸುರಕ್ಷತೆಯ ಮಾಲ್‍ವೇರ್‌ಗಳು ಕಂಡು ಬಂದಿದೆ ಎಂದು ಸಮತಿಯೂ ಹೇಳಿದೆ.

    ವರದಿ ಸಲ್ಲಿಕೆ ಬಳಿಕ ಪ್ರತಿಕ್ರಿಯಿಸಿದ ಸಿಜೆಐ ಎನ್.ವಿ ರಮಣ, ರಾಷ್ಟ್ರೀಯ ಭದ್ರತಾ ಕಾರಣದಿಂದ ನ್ಯಾಯಾಂಗ ಪರಿಶೀಲನೆಯನ್ನು ಸಂಪೂರ್ಣವಾಗಿ ಬಹಿರಂಗಪಡಿಸಲು ಸಾಧ್ಯವಿಲ್ಲ. ಇದೊಂದು ದೊಡ್ಡ ವರದಿಯಾಗಿದೆ. ನಾವು ಯಾವ ಭಾಗಗಳನ್ನು ನೀಡಬಹುದು ಎಂಬುದನ್ನು ನೋಡೋಣ. ಇವು ತಾಂತ್ರಿಕ ಸಮಸ್ಯೆಗಳು, ರವೀಂದ್ರನ್ ಅವರ ವರದಿಯನ್ನು ನಾವು ವೆಬ್‍ಸೈಟ್‍ನಲ್ಲಿ ಅಪ್‍ಲೋಡ್ ಮಾಡುತ್ತೇವೆ ಇದರಲ್ಲಿ ಯಾವುದೇ ತೊಂದರೆಗಳಿಲ್ಲ ಎಂದು ಹೇಳಿದರು. ಇದನ್ನೂ ಓದಿ: ತುಮಕೂರಿನ ಭೀಕರ ರಸ್ತೆ ಅಪಘಾತಕ್ಕೆ ಪ್ರಧಾನಿ ಸಂತಾಪ- ಮೃತರ ಕುಟುಂಬಕ್ಕೆ 2 ಲಕ್ಷ ರೂ. ಪರಿಹಾರ

    Live Tv
    [brid partner=56869869 player=32851 video=960834 autoplay=true]

  • ಪೆಗಾಸಸ್ ಮೂಲಕ ಗೂಢಚರ್ಯೆ – ಅಂತಿಮ ವರದಿ ಸಲ್ಲಿಕೆಗೆ ಕಾಲಾವಕಾಶ ವಿಸ್ತರಣೆ

    ಪೆಗಾಸಸ್ ಮೂಲಕ ಗೂಢಚರ್ಯೆ – ಅಂತಿಮ ವರದಿ ಸಲ್ಲಿಕೆಗೆ ಕಾಲಾವಕಾಶ ವಿಸ್ತರಣೆ

    ನವದೆಹಲಿ: ಪೆಗಾಸಸ್ ಮೂಲಕ ಕೇಂದ್ರ ಸರ್ಕಾರ ಗೂಢಚರ್ಯೆ ನಡೆಸಿರುವ ಆರೋಪಕ್ಕೆ ಸಂಬಂಧಿಸಿದಂತೆ ತನಿಖೆ ನಡೆಯುತ್ತಿದೆ. ನ್ಯಾ.ರವೀಂದ್ರನ್ ನೇತೃತ್ವದ ಸಮಿತಿಗೆ ವರದಿ ಸಲ್ಲಿಸಲು ಸುಪ್ರೀಂಕೋರ್ಟ್ ಹೆಚ್ಚುವರಿ ಕಾಲಾವಕಾಶ ನೀಡಿದೆ. ಇಂದು ಪ್ರಕರಣ ವಿಚಾರಣೆ ನಡೆಸಿದ ಮುಖ್ಯ ನ್ಯಾ.ಎನ್.ವಿ.ರಮಣ ನೇತೃತ್ವದ ತ್ರಿ ಸದಸ್ಯ ಪೀಠ ಜೂನ್ 28 ವರೆಗೂ ಸಮಯ ವಿಸ್ತರಿಸಿದೆ.

    ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ ಇಂದು ಸಮಿತಿ ತನ್ನ ಮಧ್ಯಂತರ ವರದಿಯನ್ನು ಸುಪ್ರೀಂಕೋರ್ಟ್‍ಗೆ ಸಲ್ಲಿಕೆ ಮಾಡಿತು. ಸಮಿತಿಯು 29 ಮೂಬೈಲ್ ಸಾಧನಗಳನ್ನು ತನಿಖೆಗೆ ಒಳಪಡಿಸಿದೆ. ಈ ಪ್ರಕ್ರಿಯೆ ಮುಗಿಸಲು ಹೆಚ್ಚುವರಿ ಸಮಯದ ಅವಶ್ಯಕತೆ ಇದೆ. ಹೀಗಾಗಿ ಸಮಯ ವಿಸ್ತರಿಸಬೇಕು ಎಂದು ಸಮಿತಿ ಪರ ವಕೀಲರು ಮನವಿ ಮಾಡಿದರು. ಇದನ್ನೂ ಓದಿ: ಕೆನಡಾ ಸಂಸತ್ತಿನಲ್ಲಿ ಕನ್ನಡದ ಕಂಪು ಬೀರಿದ ಚಂದ್ರ ಆರ್ಯ ಮನೆಯಲ್ಲಿ ಸಂತಸ

    ಇದಕ್ಕೆ ಪ್ರತಿಕ್ರಿಯಿಸಿದ ಕೋರ್ಟ್, ತಾಂತ್ರಿಕ ವರದಿ ಪಡೆದ ಬಳಿಕ ನ್ಯಾಯಾಧೀಶರು ತಮ್ಮ ಅಭಿಪ್ರಾಯವನ್ನು ಕೂಡಾ ತಿಳಿಸಬೇಕು, ಅದಕ್ಕೆ ಸಮಯ ಬೇಕಾಗಬಹುದು. ಹೀಗಾಗಿ ಸಮಯ ವಿಸ್ತರಿಸಲಾಗುತ್ತಿದೆ ಎಂದು ತನ್ನ ಆದೇಶದಲ್ಲಿ ತಿಳಿಸಿದೆ. ಆದರೆ ನಾಲ್ಕು ವಾರಗಳಲ್ಲಿ ಎಲ್ಲ ಪ್ರಕ್ರಿಯೆಗಳು ಅಂತ್ಯವಾಗಬೇಕು. ಅಂತಿಮ ವರದಿಯನ್ನು ಸಲ್ಲಿಸಬೇಕು ಎಂದು ಸೂಚಿಸಿದ ಕೋರ್ಟ್ ವಿಚಾರಣೆ ಮುಂದೂಡಿತು.

    ಹಗರಣದ ತನಿಖೆಗಾಗಿ ಕಳೆದ ವರ್ಷ ಅಕ್ಟೋಬರ್‌ನಲ್ಲಿ ಸುಪ್ರೀಂ ಕೋರ್ಟ್ ಮೂವರು ಸದಸ್ಯರ ತಜ್ಞರ ಸಮಿತಿಯನ್ನು ನೇಮಿಸಿತ್ತು. ಸುಪ್ರೀಂಕೋರ್ಟ್‍ನ ಮಾಜಿ ನ್ಯಾಯಮೂರ್ತಿ ಆರ್.ವಿ.ರವೀಂದ್ರನ್ ಅವರ ನೇತೃತ್ವದಲ್ಲಿ ಮತ್ತು ಅಲೋಕ್ ಜೋಶಿ(ಮಾಜಿ IPS ಅಧಿಕಾರಿ) ಮತ್ತು ಡಾ.ಸಂದೀಪ್ ಒಬೆರಾಯ್, ಉಪ ಸಮಿತಿಯ ಅಧ್ಯಕ್ಷರು (ಇಂಟರ್ನ್ಯಾಷನಲ್ ಆರ್ಗನೈಸೇಶನ್ ಆಫ್ ಸ್ಟ್ಯಾಂಡರ್ಡೈಸೇಶನ್/ಇಂಟರ್ನ್ಯಾಷನಲ್ ಎಲೆಕ್ಟ್ರೋ-ಟೆಕ್ನಿಕಲ್ ಕಮಿಷನ್/ಜಾಯಿಂಟ್ ಟೆಕ್ನಿಕಲ್ ಕಮಿಟಿ) ರನ್ನು ಸಮಿತಿ ಒಳಗೊಂಡಿದೆ. ಇದನ್ನೂ ಓದಿ: ಪೊಲೀಸರ ಮುಂದೆ ಶರಣಾಗಲು ಹೆಚ್ಚಿನ ಸಮಯ ಕೇಳಿದ ಸಿಧು 

    ಏನಿದು ಪ್ರಕರಣ?
    2017ರಲ್ಲಿ 2 ಶತಕೋಟಿ ಡಾಲರ್‌ ಮೌಲ್ಯದ ಅತ್ಯಾಧುನಿಕ ಶಸ್ತ್ರಾಸ್ತ್ರ ಹಾಗೂ ಗುಪ್ತಚರ ಸಾಧನಗಳ ಖರೀದಿ ಸಂಬಂಧ ಭಾರತ ಮತ್ತು ಇಸ್ರೇಲ್‌ ಮಧ್ಯೆ ಒಪ್ಪಂದ ನಡೆದಿತ್ತು. ಈ ಸಂದರ್ಭದಲ್ಲಿ ಇಸ್ರೇಲಿ ಪೆಗಾಸಸ್‌ ತಂತ್ರಾಂಶವನ್ನೂ ಭಾರತ ಖರೀದಿಸಿದೆ ಎಂಬ ಆರೋಪ ಬಂದಿದೆ.

    ಭಾರತ ಸೇರಿದಂತೆ ಹಲವಾರು ದೇಶಗಳಲ್ಲಿ ಪತ್ರಕರ್ತರು, ಮಾನವ ಹಕ್ಕುಗಳ ರಕ್ಷಕರು, ರಾಜಕಾರಣಿಗಳು ಮತ್ತು ಇತರರ ಮೇಲೆ ಕಣ್ಣಿಡಲು ಸರ್ಕಾರಗಳು ಪೆಗಾಸಸ್‌ ಸಾಫ್ಟ್‌ವೇರ್‌ ಅನ್ನು ಬಳಸುತ್ತಿವೆ. ಪೆಗಾಸಸ್‌ ತಂತ್ರಾಂಶದ ಮೂಲಕ ಕೇಂದ್ರ ಸರ್ಕಾರ ನಮ್ಮ ಮೇಲೆ ಕಣ್ಗಾವಲು ಇರಿಸಿದೆ ಎಂದು ಪತ್ರಕರ್ತರು, ರಾಜಕೀಯ ನಾಯಕರು ದೂರಿದ್ದರು. ಆದರೆ ನಿರ್ದಿಷ್ಟ ಜನರ ಮೇಲೆ ತನ್ನಿಂದ ಯಾವುದೇ ಕಣ್ಗಾವಲು ಇಲ್ಲ ಎಂದು ಕೇಂದ್ರ ಸರ್ಕಾರ ಆರೋಪಗಳನ್ನು ತಳ್ಳಿ ಹಾಕಿತ್ತು.

  • ಪೆಗಾಸಸ್‌ ಕುತಂತ್ರಾಂಶ ಖರೀದಿಗೆ ಆಫರ್‌ ಬಂದಿತ್ತು, ನಾವು ರಿಜೆಕ್ಟ್‌ ಮಾಡಿದ್ದೆವು: ಕೇಂದ್ರಕ್ಕೆ ಚಾಟಿ ಬೀಸಿದ ಬ್ಯಾನರ್ಜಿ

    ಪೆಗಾಸಸ್‌ ಕುತಂತ್ರಾಂಶ ಖರೀದಿಗೆ ಆಫರ್‌ ಬಂದಿತ್ತು, ನಾವು ರಿಜೆಕ್ಟ್‌ ಮಾಡಿದ್ದೆವು: ಕೇಂದ್ರಕ್ಕೆ ಚಾಟಿ ಬೀಸಿದ ಬ್ಯಾನರ್ಜಿ

    ಕೋಲ್ಕತ್ತಾ: ಪೆಗಾಸಸ್‌ ಸ್ಪೈವೇರ್‌ ಕುತಂತ್ರಾಂಶ ಖರೀದಿಸುವಂತೆ ಐದು ವರ್ಷಗಳ ಹಿಂದೆಯೇ ಇಸ್ರೇಲ್‌ನ ಎನ್‌ಎಸ್‌ಒ ಗ್ರೂಪ್‌ನವರು ನಮ್ಮ ಬಳಿ ಬಂದಿದ್ದರು. ಆದರೆ ನಾವು ಅದನ್ನು ನಿರಾಕರಿಸಿದ್ದೆವು ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೊಸ ಬಾಂಬ್‌ ಸಿಡಿಸಿದ್ದಾರೆ.

    ಪೆಗಾಸಸ್‌ ಕುತಂತ್ರಾಂಶ ವಿಚಾರವಾಗಿ ಕೇಂದ್ರ ಸರ್ಕಾರದ ವಿರುದ್ಧ ಗಂಭೀರ ಆರೋಪ, ಟೀಕೆಗಳು ವ್ಯಕ್ತವಾಗಿವೆ. ಇದರ ಬೆನ್ನಲ್ಲೇ ಮಮತಾ ಬ್ಯಾನರ್ಜಿ ಅವರು ಅಚ್ಚರಿದಾಯಕ ಹೇಳಿಕೆಯೊಂದನ್ನು ನೀಡಿದ್ದಾರೆ. ಇದನ್ನೂ ಓದಿ: ಮಹಾರಾಷ್ಟ್ರ ಸಚಿವರನ್ನು ಜೈಲಿನಿಂದ ಬಿಡುಗಡೆ ಮಾಡಲು 3 ಕೋಟಿಗೆ ಬೇಡಿಕೆ- ಪುತ್ರನಿಂದ ದೂರು ದಾಖಲು

    ಕಳೆದ ಐದು ವರ್ಷಗಳ ಹಿಂದೆಯೇ 25 ಕೋಟಿ ರೂ.ಗೆ ಪೆಗಾಸಸ್‌ ತಂತ್ರಾಂಶ ಖರೀದಿಸುವಂತೆ ಎನ್‌ಎಸ್‌ಒ ಗ್ರೂಪ್‌ ನಮ್ಮ ಪೊಲೀಸ್‌ ಇಲಾಖೆಗೆ ಆಫರ್‌ ನೀಡಿತ್ತು. ಆದರೆ ನಾವು ಅದನ್ನು ತಿರಸ್ಕರಿಸಿದೆವು. ಸ್ಪೈವೇರ್‌ ಅನ್ನು ರಾಜಕೀಯವಾಗಿ ಬಳಸಿಕೊಳ್ಳಬಹುದಿತ್ತು. ನ್ಯಾಯಾಧೀಶರು, ಪತ್ರಕರ್ತರು, ಅಧಿಕಾರಿಗಳನ್ನು ಇದಕ್ಕೆ ಗುರಿಯಾಗಿಸಬಹುದು ಎಂಬುದು ಸ್ವೀಕಾರಾರ್ಹವಲ್ಲ ಎಂದು ನಾವು ಈ ಆಫರ್‌ ತಿರಸ್ಕರಿಸಿದ್ದೆವು ಎಂದು ಪರೋಕ್ಷವಾಗಿ ಕೇಂದ್ರ ಸರ್ಕಾರಕ್ಕೆ ಚಾಟಿ ಬೀಸಿದ್ದಾರೆ.

    ಪತ್ರಕರ್ತರು, ರಾಜಕಾರಣಿಗಳು, ಉದ್ಯಮಿಗಳು ಮತ್ತು ಇತರರ ಫೋನ್‌ಗಳನ್ನು ಗುರಿಯಾಗಿಸಲು ಮಿಲಿಟರಿ ದರ್ಜೆಯ ಇಸ್ರೇಲಿ ಸ್ಪೈವೇರ್ ಅನ್ನು ಬಳಸುತ್ತಿದ್ದಾರೆ ಎಂದು ಕೇಂದ್ರದ ನರೇಂದ್ರ ಮೋದಿ ಸರ್ಕಾರವನ್ನು ಬ್ಯಾನರ್ಜಿ ಅವರು ಟೀಕಿಸಿದ್ದರು. ಇದನ್ನೂ ಓದಿ: ಯಾರೇ ಲಂಚ ಕೇಳಿದರೂ ಆಡಿಯೋ – ವೀಡಿಯೋ ನನಗೇ ಕಳುಹಿಸಿ: ಪಂಜಾಬ್ ಸಿಎಂ

    ಕಳೆದ ವರ್ಷ ರಾಷ್ಟ್ರವನ್ನು ಬೆಚ್ಚಿಬೀಳಿಸಿದ ಪೆಗಾಸಸ್ ಸ್ಪೈವೇರ್‌ ವಿವಾದದ ಬಗ್ಗೆ ತನಿಖೆಗೆ ಬಂಗಾಳ ಸರ್ಕಾರ ಆದೇಶಿಸಿತ್ತು. ಹಾಗೆ ಮಾಡಿದ ಮೊದಲ ರಾಜ್ಯ ಪಶ್ಚಿಮ ಬಂಗಾಳ. ಆಯೋಗದ 3ನೇ ಪರಿಚ್ಛೇದ ನೀಡಿರುವ ಅಧಿಕಾರವನ್ನು ಚಲಾಯಿಸಿ ಸುಪ್ರೀಂ ಕೋರ್ಟ್‌ನ ಮಾಜಿ ನ್ಯಾಯಾಧೀಶ, ನಿವೃತ್ತ ನ್ಯಾಯಮೂರ್ತಿ ಎಂ.ಬಿ.ಲೋಕೂರ್ ಮತ್ತು ಕೋಲ್ಕತ್ತಾ ಹೈಕೋರ್ಟ್‌ನ ನಿವೃತ್ತ ಮುಖ್ಯ ನ್ಯಾಯಮೂರ್ತಿ, ನಿವೃತ್ತ ನ್ಯಾಯಮೂರ್ತಿ ಜ್ಯೋತಿರ್ಮಯ್ ಭಟ್ಟಾಚಾರ್ಯ ಅವರನ್ನು ಒಳಗೊಂಡ ತನಿಖಾ ಆಯೋಗವನ್ನು ನೇಮಿಸಲು ಸಂಪುಟ ಅನುಮೋದನೆ ನೀಡಿದೆ. ಪಶ್ಚಿಮ ಬಂಗಾಳ ರಾಜ್ಯದ ಅನೇಕರ ಮೊಬೈಲ್ ಫೋನ್‌ಗಳ ಅಕ್ರಮ ಹ್ಯಾಕಿಂಗ್, ಮೇಲ್ವಿಚಾರಣೆ, ಕಣ್ಗಾವಲು, ಟ್ರ್ಯಾಕಿಂಗ್, ರೆಕಾರ್ಡಿಂಗ್ ಇತ್ಯಾದಿಗಳ ವಿಷಯದಲ್ಲಿ ವ್ಯಾಪಕವಾಗಿ ವರದಿಯಾಗಿದೆ ಎಂದು ಆಗ ಬ್ಯಾನರ್ಜಿ ಹೇಳಿದ್ದರು.

  • 2017ರಲ್ಲಿ ಭಾರತ-ಇಸ್ರೇಲ್‌ ರಕ್ಷಣಾ ಒಪ್ಪಂದದ ವೇಳೆ ಪೆಗಾಸಸ್‌ ಖರೀದಿ – ನ್ಯೂಯಾರ್ಕ್‌ ಟೈಮ್ಸ್‌ ವರದಿ

    2017ರಲ್ಲಿ ಭಾರತ-ಇಸ್ರೇಲ್‌ ರಕ್ಷಣಾ ಒಪ್ಪಂದದ ವೇಳೆ ಪೆಗಾಸಸ್‌ ಖರೀದಿ – ನ್ಯೂಯಾರ್ಕ್‌ ಟೈಮ್ಸ್‌ ವರದಿ

    ನ್ಯೂಯಾರ್ಕ್‌: ಭಾರತ ಮತ್ತು ಇಸ್ರೇಲ್‌ ನಡುವೆ 2017ರಲ್ಲಿ ನಡೆದ ರಕ್ಷಣಾ ಒಪ್ಪಂದದ ಸಂದರ್ಭದಲ್ಲಿ ಇಸ್ರೇಲಿ ಪೆಗಾಸಸ್‌ ತಂತ್ರಾಂಶವನ್ನೂ ಖರೀದಿಸಲಾಗಿತ್ತು ಎಂದು ನ್ಯೂಯಾರ್ಕ್‌ ಟೈಮ್ಸ್‌ ವರದಿ ಮಾಡಿದೆ. ಆಗ ಭಾರತ 2 ಶತಕೋಟಿ ಡಾಲರ್‌ ಅತ್ಯಾಧುನಿಕ ಶಸ್ತ್ರಾಸ್ತ್ರ ಹಾಗೂ ಗುಪ್ತಚರ ಸಾಧನಗಳ ಒಪ್ಪಂದ ಮಾಡಿಕೊಂಡಿತ್ತು.

    ಭಾರತ ಸೇರಿದಂತೆ ಹಲವಾರು ದೇಶಗಳಲ್ಲಿ ಪತ್ರಕರ್ತರು, ಮಾನವ ಹಕ್ಕುಗಳ ರಕ್ಷಕರು, ರಾಜಕಾರಣಿಗಳು ಮತ್ತು ಇತರರ ಮೇಲೆ ಕಣ್ಣಿಡಲು ಸರ್ಕಾರಗಳು ಪೆಗಾಸಸ್‌ ಸಾಫ್ಟ್‌ವೇರ್‌ ಅನ್ನು ಬಳಸುತ್ತಿವೆ ಎಂಬ ಸುದ್ದಿ ಕಳೆದ ವರ್ಷ ಭಾರಿ ಸದ್ದು ಮಾಡಿತ್ತು. ಇದನ್ನೂ ಓದಿ: ಇನ್ನು ಮುಂದೆ ಮಾಸ್ಕ್ ಹಾಕಿಕೊಂಡೇ ಐಫೋನ್ ಫೇಸ್ ಐಡಿ ಅನ್‍ಲಾಕ್ ಮಾಡ್ಬೋದು!

    ʼದಿ ಬ್ಯಾಟಲ್‌ ಫಾರ್‌ ದಿ ವರ್ಲ್ದ್ಸ್‌ ಮೋಸ್ಟ್‌ ಪವರ್‌ಫುಲ್‌ ಸೈಬರ್‌ವೆಪನ್‌ʼ ಶೀರ್ಷಿಕೆಯಡಿ ವರದಿ ಮಾಡಿರುವ ನ್ಯೂಯಾರ್ಕ್‌ ಟೈಮ್ಸ್‌, ಇಸ್ರೇಲಿ ಸಂಸ್ಥೆ ಎನ್‌ಎಸ್‌ಒ ಗ್ರೂಪ್‌ ಸುಮಾರು ಒಂದು ದಶಕದಿಂದ ತನ್ನ ಕಣ್ಗಾವಲು ಸಾಫ್ಟ್‌ವೇರ್‌ ಅನ್ನು ಚಂದಾದಾರಿಕೆಯ ಆಧಾರದ ಮೇಲೆ ಪ್ರಪಂಚದಾದ್ಯಂತ ಕಾನೂನು ಜಾರಿ ಮತ್ತು ಗುಪ್ತಚರ ಸಂಸ್ಥೆಗಳಿಗೆ ಮಾರಾಟ ಮಾಡುತ್ತಿದೆ ಎಂದು ಹೇಳಿದೆ.

    ಖಾಸಗಿ ಕಂಪನಿಗಳು, ಗುಪ್ತಚರ ಸಂಸ್ಥೆಗಳೂ ಮಾಡಲಾಗದ ಕೆಲಸವನ್ನು ಅದು ಮಾಡಬಹುದೆಂದು ಭರವಸೆ ನೀಡಿದೆ. ಐಫೋನ್‌, ಆ್ಯಂಡ್ರಾಯ್ಡ್ ಸ್ಮಾರ್ಟ್‌ಫೋನ್‌ನ ಎನ್‌ಕ್ರಿಪ್ಟ್‌ ಮಾಡಲಾದ ಸಂವಹನಗಳನ್ನು ಯಶಸ್ವಿಯಾಗಿ ಭೇದಿಸುತ್ತದೆ ಎಂದು ವರದಿಯಲ್ಲಿ ತಿಳಿಸಲಾಗಿದೆ. ಇದನ್ನೂ ಓದಿ: ಏರ್‌ಟೆಲ್‌ನಲ್ಲಿ 7 ಸಾವಿರ ಕೋಟಿ ಹೂಡಿಕೆ ಮಾಡಲಿದೆ ಗೂಗಲ್

    2017ರಲ್ಲಿ ಪ್ರಧಾನಿ ಮೋದಿ ಅವರು ಇಸ್ರೇಲ್‌ಗೆ ಭೇಟಿ ನೀಡಿದ್ದನ್ನೂ ವರದಿ ಉಲ್ಲೇಖಿಸಿದೆ. ಅಲ್ಲದೇ ಇಸ್ರೇಲ್‌ಗೆ ಭೇಟಿ ನೀಡಿದ ಮೊದಲ ಪ್ರಧಾನಿ ಎಂದು ಕೂಡ ಬರೆಯಲಾಗಿದೆ. ಮೋದಿ ಭೇಟಿಯ ತಿಂಗಳ ನಂತರ ನೆತನ್ಯಾಹು ಭಾರತಕ್ಕೆ ಅಪರೂಪದ ಭೇಟಿ ನೀಡಿದ್ದರು.

    ಪೆಗಾಸಸ್‌ ತಂತ್ರಾಂಶದ ಮೂಲಕ ಕೇಂದ್ರ ಸರ್ಕಾರ ನಮ್ಮ ಮೇಲೆ ಕಣ್ಗಾವಲು ಇರಿಸಿದೆ ಎಂಬ ಗಂಭೀರ ಆರೋಪಗಳು ಕೇಳಿಬಂದಿದ್ದವು. ಆದರೆ ನಿರ್ದಿಷ್ಟ ಜನರ ಮೇಲೆ ತನ್ನಿಂದ ಯಾವುದೇ ಕಣ್ಗಾವಲು ಇಲ್ಲ ಎಂದು ಕೇಂದ್ರ ಆರೋಪಗಳನ್ನು ತಳ್ಳಿ ಹಾಕಿತ್ತು.

  • ಪೆಗಾಸಸ್ ಮೂಲಕ ಗೂಢಚರ್ಯೆ ಆರೋಪ – ತನಿಖೆಗೆ ಸಮಿತಿ ರಚಿಸಿದ ಸುಪ್ರೀಂಕೋರ್ಟ್

    ಪೆಗಾಸಸ್ ಮೂಲಕ ಗೂಢಚರ್ಯೆ ಆರೋಪ – ತನಿಖೆಗೆ ಸಮಿತಿ ರಚಿಸಿದ ಸುಪ್ರೀಂಕೋರ್ಟ್

    ನವದೆಹಲಿ: ತೀವ್ರ ವಿವಾದಕ್ಕೆ ಕಾರಣವಾಗಿದ್ದ ಪೆಗಾಸಸ್ ಸ್ಪೈವೇರ್ ಬಗ್ಗೆ ತನಿಖೆ ನಡೆಸಲು ಸುಪ್ರೀಂಕೋರ್ಟ್ ತಜ್ಞರ ಸಮಿತಿ ರಚಿಸಿದೆ. ನಿವೃತ್ತ ಸುಪ್ರೀಂಕೋರ್ಟ್ ನ್ಯಾಯಮೂರ್ತಿ ಆರ್.ವಿ ರವೀಂದ್ರನ್ ನೇತೃತ್ವದಲ್ಲಿ ತಜ್ಞರ ಸಮಿತಿ ರಚಿಸಲಾಗಿದ್ದು, ಸುಪ್ರೀಂಕೋರ್ಟ್ ಮೇಲ್ವಿಚಾರಣೆಯಲ್ಲಿ ತನಿಖೆ ನಡೆಯಲಿದೆ.

    ಸುಧೀರ್ಘ ವಿಚಾರಣೆ ನಡೆಸಿದ್ದ ಮುಖ್ಯ ನ್ಯಾಯಮೂರ್ತಿ ಎನ್.ವಿ ರಮಣ ನೇತೃತ್ವದ ತ್ರಿ ಸದಸ್ಯ ಪೀಠ ಇಂದು ಮಹತ್ವದ ಆದೇಶ ನೀಡಿತು. ತಜ್ಞರ ಸಮಿತಿ ರಚಿಸುವ ಕೇಂದ್ರ ಸರ್ಕಾರದ ಪ್ರಸ್ತಾಪವನ್ನು ತಿರಸ್ಕರಿಸಿದ ಪೀಠ, ತಾನು ಆಯ್ಕೆ ಮಾಡಿದ ತಜ್ಞರ ಸಮಿತಿಯ ಮೂಲಕ ತನಿಖೆ ನಡೆಯಲಿದೆ ಎಂದಿದೆ. ಸಮಿತಿಯಲ್ಲಿ ಸೈಬರ್ ಸೆಕ್ಯೂರಿಟಿ, ಫೋರೆನ್ಸಿಕ್ಸ್ ನ ತಜ್ಞರನ್ನು ಒಳಗೊಂಡಿದ್ದು ಅಲೋಕ್ ಜೋಶಿ ಕೂಡಾ ಸಮಿತಿಯ ಸದಸ್ಯರಾಗಿದ್ದಾರೆ ಎಂದು ಪೀಠ ಹೇಳಿದೆ. ಇದನ್ನೂ ಓದಿ: ಪೆಗಾಸಸ್ ಸ್ಪೈವೇರ್ ಬಗ್ಗೆ ವಿಸ್ತೃತವಾದ ಅಫಿಡವಿಟ್ ಸಲ್ಲಿಸಲು ಸಾಧ್ಯವಿಲ್ಲ: ಕೇಂದ್ರ

    ಆದೇಶ ಓದುವಾಗ ಮುಖ್ಯ ನ್ಯಾಯಮೂರ್ತಿ ಎನ್.ವಿ ರಮಣ, ಇಡಿ ಪ್ರಕರಣವನ್ನು ಸುಪ್ರೀಂಕೋರ್ಟ್ ಗಂಭೀರವಾಗಿ ಪರಿಗಣಿಸಿದೆ ಎಂದು ಹೇಳಿದರು. ಸುಳ್ಳನ್ನು ತನಿಖೆ ಮಾಡಲು ಮತ್ತು ಸತ್ಯವನ್ನು ಕಂಡುಹಿಡಿಯಲು ಸಮಿತಿಗಳನ್ನು ರಚಿಸಲಾಗಿದ್ದು, ಸಮಿತಿ ಖಾಸಗಿತನದ ಹಕ್ಕು ಉಲ್ಲಂಘನೆಯನ್ನು ಪರಿಶೀಲಿಸಬೇಕು ಎಂಟು ವಾರದಲ್ಲಿ ವರದಿ ನೀಡಬೇಕು ಎಂದು ಸೂಚಿಸಿದರು. ಇದನ್ನೂ ಓದಿ: ಪೆಗಾಸಸ್ ಬಳಸಿ ಯಾರ ಮೇಲೂ ಗೂಢಾಚಾರಿಕೆ ಮಾಡಿಲ್ಲ- ಸುಪ್ರೀಂಗೆ ಅಫಿಡವಿಟ್ ಸಲ್ಲಿಕೆ

    ಅಲ್ಲದೇ ವಿದೇಶಿ ಗೂಢಚರ್ಯೆ ತಂತ್ರಾಂಶದ ಮೂಲಕ ಭಾರತೀಯರನ್ನು ಕಣ್ಗಾವಲು ಮಾಡುವ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿದ ನ್ಯಾ.ಎನ್.ವಿ ರಮಣ, ಹಲವು ಅರ್ಜಿದಾರರು ಪೆಗಾಸಸ್ ನಿಂದ ನೇರ ಬಲಿಪಶುಗಳಾಗಿದ್ದಾರೆ ಪೆಗಾಸಸ್‍ನಂತಹ ತಂತ್ರಜ್ಞಾನದ ಬಳಕೆಯನ್ನು ಗಂಭೀರವಾಗಿ ಪರಿಗಣಿಸುವ ಜವಾಬ್ದಾರಿ ಕೇಂದ್ರದ ಮೇಲಿದೆ. ಭಾರತದಲ್ಲಿ ಖಾಸಗಿತನದ ಹಕ್ಕನ್ನು ರಕ್ಷಿಸುವ ಅಗತ್ಯವನ್ನು ನಾನು ಚರ್ಚಿಸಿದ್ದೇನೆ ಎಂದರು. ಇದನ್ನೂ ಓದಿ: ಸಮ್ಮಿಶ್ರ ಸರ್ಕಾರ ಪತನಕ್ಕೆ ಪೆಗಾಸಸ್ ಕಾರಣ: ಪರಮೇಶ್ವರ್

    ನಾವು ಮಾಹಿತಿಯ ಯುಗದಲ್ಲಿ ವಾಸಿಸುತ್ತಿದ್ದೇವೆ, ತಂತ್ರಜ್ಞಾನವು ಮುಖ್ಯ ಆದರ ಜೊತೆಗೆ ಖಾಸಗಿತನವನ್ನೂ ನಾವು ಗುರುತಿಸಬೇಕು ಮತ್ತು ಅದನ್ನು ಕಾಪಾಡುವುದು ಮುಖ್ಯ ಎಂದು ನ್ಯಾ. ರಮಣ ಹೇಳಿದರು. ಪತ್ರಕರ್ತರು ಮಾತ್ರವಲ್ಲದೆ ಎಲ್ಲಾ ನಾಗರಿಕರಿಗೂ ಖಾಸಗಿತನ ಮುಖ್ಯವಾಗಿದೆ ಖಾಸಗಿತನದ ಹಕ್ಕಿನ ಮೇಲೆ ನಿರ್ಬಂಧಗಳಿವೆ ಆದರೆ ಆ ನಿರ್ಬಂಧಗಳು ಸಾಂವಿಧಾನಿಕ ಪರಿಶೀಲನೆಗೆ ನಿಲ್ಲಬೇಕು. ಇಂದಿನ ಜಗತ್ತಿನಲ್ಲಿ ಖಾಸಗಿತನದ ಮೇಲಿನ ನಿರ್ಬಂಧವು ಭಯೋತ್ಪಾದನಾ ಚಟುವಟಿಕೆಯನ್ನು ತಡೆಗಟ್ಟುವುದು ಮತ್ತು ರಾಷ್ಟ್ರೀಯ ಭದ್ರತೆಯನ್ನು ರಕ್ಷಿಸಲು ಅಗತ್ಯವಿದ್ದಾಗ ಮಾತ್ರ ವಿಧಿಸಬಹುದು. ಆದರೆ ಕೇಂದ್ರ ಸರ್ಕಾರ ರಾಷ್ಟ್ರೀಯ ಭದ್ರತಾ ವಿಚಾರ ಎಂದು ಹೇಳಿ ನ್ಯಾಯಾಲಯವನ್ನ ಮೂಕ ಪ್ರೇಕ್ಷಕರನ್ನಾಗಿ ಮಾಡಬಾರದು ಎಂದು ಇದೇ ವೇಳೆ ನ್ಯಾ. ಎನ್.ವಿ ರಮಣ ಚಾಟೀ ಬೀಸಿದರು.

  • ಪೆಗಾಸಸ್ ಮೂಲಕ ಗೂಢಚರ್ಯೆ ಪ್ರಕರಣ – ತನಿಖೆಗೆ ತಜ್ಞರ ಸಮಿತಿ ರಚಿಸಲಿರುವ ಸುಪ್ರೀಂ

    ಪೆಗಾಸಸ್ ಮೂಲಕ ಗೂಢಚರ್ಯೆ ಪ್ರಕರಣ – ತನಿಖೆಗೆ ತಜ್ಞರ ಸಮಿತಿ ರಚಿಸಲಿರುವ ಸುಪ್ರೀಂ

    ನವದೆಹಲಿ: ಭಾರೀ ವಿವಾದಕ್ಕೆ ಕಾರಣವಾಗಿದ್ದ ಪೆಗಾಸಸ್ ಸ್ಪೈವೇರ್ ಬಗ್ಗೆ ತನಿಖೆ ನಡೆಸಲು ಉನ್ನತ ಮಟ್ಟದ ತಜ್ಞರ ಸಮಿತಿ ರಚನೆ ಮಾಡುವುದಾಗಿ ಮುಖ್ಯ ನ್ಯಾಯಮೂರ್ತಿ ಎನ್.ವಿ ರಮಣ ನೇತೃತ್ವದ ತ್ರಿ ಸದಸ್ಯ ಪೀಠ ಮೌಖಿಕವಾಗಿ ಹೇಳಿದೆ.

    ಇಂದು ವಿಚಾರಣೆ ವೇಳೆ ತನ್ನ ಅಭಿಪ್ರಾಯ ವ್ಯಕ್ತಪಡಿಸಿದ ಪೀಠ, ಇನ್ನೊಂದು ವಾರದಲ್ಲಿ ಸಮಿತಿ ರಚನೆ ಬಗ್ಗೆ ಅಧಿಕೃತ ಆದೇಶ ನೀಡುವುದಾಗಿ ಹೇಳಿದೆ. ಈ ವಾರವೇ ಆದೇಶ ನೀಡುವ ಉದ್ದೇಶವನ್ನು ಕೋರ್ಟ್ ಹೊಂದಿತ್ತು. ಆದರೆ ಕೆಲವು ತಜ್ಞರ ವೈಯಕ್ತಿಕ ಕಾರಣಗಳಿಂದಾಗಿ ಮುಂದಿನ ವಾರ ತೀರ್ಪು ಪ್ರಕಟಿಸಲು ಕೋರ್ಟ್ ತಿರ್ಮಾನಿಸಿದೆ. ಇದನ್ನೂ ಓದಿ: ರಾಹುಲ್, ಪ್ರಿಯಾಂಕಾ ನನ್ನ ಮಕ್ಕಳಿದ್ದಂತೆ, ಅವರಿಗೆ ಅನುಭವ ಇಲ್ಲ: ಕ್ಯಾ.ಅಮರೀಂದರ್ ಸಿಂಗ್

    ಪೆಗಾಸಸ್ ಮೂಲಕ ಗೂಢಚರ್ಯೆ ಆರೋಪದ ಹಿನ್ನೆಲೆ ಸ್ವತಂತ್ರ ತನಿಖೆಗೆ ಕೋರಿ ಸಲ್ಲಿಸಿದ್ದ ಅರ್ಜಿಗಳನ್ನು ಸೆಪ್ಟೆಂಬರ್ 13 ರಂದು ಸಿಜೆಐ ಎನ್.ವಿ ರಮಣ, ನ್ಯಾಯಮೂರ್ತಿ ಸೂರ್ಯಕಾಂತ್ ಮತ್ತು ನ್ಯಾಯಮೂರ್ತಿ ಹಿಮಾಕೊಹ್ಲಿ ಅವರನ್ನೊಳಗೊಂಡ ಪೀಠ ಸುದೀರ್ಘ ವಿಚಾರಣೆ ನಡೆಸಿ, ಪೆಗಾಸಸ್ ಪ್ರಕರಣದಲ್ಲಿ ಮಧ್ಯಂತರ ಆದೇಶವನ್ನು ಕಾಯ್ದಿರಿಸಿತ್ತು.

    ವಿಚಾರಣೆ ವೇಳೆ ಈ ಬಗ್ಗೆ ವಿಸ್ತøತ ವರದಿ ನೀಡಲು ಸುಪ್ರೀಂಕೋರ್ಟ್ ಸೂಚಿಸಿತ್ತು. ಆದರೆ ಈ ಬಗ್ಗೆ ಅಫಿಡವಿಟ್ ಸಲ್ಲಿಸಲು ಕೇಂದ್ರ ಸರ್ಕಾರ ನಿರಾಕರಿಸಿತ್ತು. ಕೇಂದ್ರ ಸರ್ಕಾರದ ಪರ ವಾದ ಮಂಡಿಸಿದ್ದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, ಈ ವಿಷಯವು ರಾಷ್ಟ್ರೀಯ ಭದ್ರತೆಗೆ ಸಂಬಂಧಿಸಿದೆ. ಆದ್ದರಿಂದ ನ್ಯಾಯಾಂಗ ಚರ್ಚೆ ಅಥವಾ ಸಾರ್ವಜನಿಕ ಚರ್ಚೆಯ ವಿಷಯವಾಗಿಸಲು ಸಾಧ್ಯವಿಲ್ಲ ಎಂದು ಹೇಳಿದ್ದರು. ಇದನ್ನೂ ಓದಿ: 17 ವರ್ಷದ ದಾಂಪತ್ಯ ಅಂತ್ಯಗೊಳಿಸಿ ಡೈವೋರ್ಸ್ ಪಾರ್ಟಿ ಮಾಡಿದ ಮಹಿಳೆ

    ಸರ್ಕಾರವು ಯಾವುದೇ ನಿರ್ಧಿಷ್ಟ ಸಾಫ್ಟ್‍ವೇರ್ ಅನ್ನು ಭದ್ರತಾ ಉದ್ದೇಶಗಳಿಗಾಗಿ ಬಳಸಿದೆಯೇ ಎಂಬುದನ್ನು ಅಫಿಡವಿಟ್‍ನಲ್ಲಿ ಬಹಿರಂಗಪಡಿಸಲು ಸಾಧ್ಯವಿಲ್ಲ. ಏಕೆಂದರೆ ಅದು ಭಯೋತ್ಪಾದಕ ಗುಂಪುಗಳನ್ನು ಎಚ್ಚರಿಸುತ್ತದೆ. ಆಪಾದನೆಗಳ ಗಂಭೀರತೆಯನ್ನು ಗಮನದಲ್ಲಿಟ್ಟುಕೊಂಡು, ಕೇಂದ್ರವು ತಾಂತ್ರಿಕ ಸಮಿತಿಯನ್ನು ರಚಿಸಿ ಈ ವಿಷಯವನ್ನು ಪರಿಶೀಲಿಸಲು ಒಪ್ಪಿಕೊಂಡಿದೆ ಎಂದು ಮೆಹ್ತಾ ವಾದಿಸಿದ್ದರು.

    ಇದಕ್ಕೆ ಖಾರವಾಗಿ ಪ್ರತಿಕ್ರಿಯಿಸಿದ್ದ ನ್ಯಾಯಪೀಠ, ರಾಷ್ಟ್ರೀಯ ಭದ್ರತೆ ಅಥವಾ ರಕ್ಷಣೆಗೆ ಸಂಬಂಧಿಸಿದ ಯಾವುದೇ ವಿವರಗಳು ತನಗೆ ಬೇಕಾಗಿಲ್ಲ. ಆದರೆ ನಾಗರಿಕರ ಗೌಪ್ಯತೆಗೆ ಸಂಬಂಧಿಸಿದ ಆರೋಪಗಳಿಗೆ ಸ್ಪಷ್ಟೀಕರಣವನ್ನು ಮಾತ್ರ ಬಯಸುತ್ತಿದೆ ಎಂದು ಹೇಳಿತ್ತು. ಈಗ ತಜ್ಞರ ಸಮಿತಿ ರಚಿಸಲು ಮುಂದಾಗಿರುವ ಪೀಠ ಈ ಬಗ್ಗೆ ಸಮಗ್ರ ತನಿಖೆಗೆ ಸೂಚನೆ ನೀಡುವ ಸಾಧ್ಯತೆಗಳಿವೆ.

  • ಪೆಗಾಸಸ್ ಬಳಸಿ ಯಾರ ಮೇಲೂ ಗೂಢಾಚಾರಿಕೆ ಮಾಡಿಲ್ಲ- ಸುಪ್ರೀಂಗೆ ಅಫಿಡವಿಟ್ ಸಲ್ಲಿಕೆ

    ಪೆಗಾಸಸ್ ಬಳಸಿ ಯಾರ ಮೇಲೂ ಗೂಢಾಚಾರಿಕೆ ಮಾಡಿಲ್ಲ- ಸುಪ್ರೀಂಗೆ ಅಫಿಡವಿಟ್ ಸಲ್ಲಿಕೆ

    ನವದೆಹಲಿ: ಪೆಗಾಸಸ್ ಸ್ಪೈವೇರ್ ಸಾಫ್ಟ್ ವೇರ್ ಬಳಸಿ ಯಾರ ಮೇಲೂ ಗೂಢಾಚಾರಿಕೆ ಮಾಡಿಲ್ಲ ಎಂದು ಕೇಂದ್ರ ಸರ್ಕಾರ ಸುಪ್ರೀಂಕೋರ್ಟ್‍ಗೆ ಅಫಿಡವಿಟ್ ಸಲ್ಲಿಸಿದೆ.

    ಅರ್ಜಿದಾರರ ಎಲ್ಲಾ ಆರೋಪಗಳನ್ನು ಕೇಂದ್ರ ಸರ್ಕಾರ ತಳ್ಳಿ ಹಾಕಿದ್ದು, ಪೆಗಾಸಸ್ ಬಳಸಿ ಯಾರನ್ನೂ ಟ್ರ್ಯಾಪ್ ಮಾಡಿಲ್ಲ. ಕೇವಲ ಊಹೆಗಳ ಆಧಾರದ ಮೇಲೆ ಅರ್ಜಿ ಸಲ್ಲಿಸಲಾಗಿದೆ ಎಂದು ಉಲ್ಲೇಖಿಸಿದೆ. ಇದನ್ನೂ ಓದಿ: ಕೊಟ್ಟ ಮಾತಿನಂತೆ ಸಿಂಧು ಜೊತೆ ಐಸ್‍ಕ್ರೀಂ ಸವಿದ ಮೋದಿ

    ಈ ವಿಚಾರವಾಗಿ ಪರಿಣಿತರ ಸಮಿತಿಯೊಂದನ್ನು ಕೇಂದ್ರ ರಚನೆ ಮಾಡಲಿದೆ. ಆ ಸಮಿತಿ ಎಲ್ಲಾ ಆಯಾಮಗಳಲ್ಲಿ ಅಧ್ಯಯನ ನಡೆಸಲಿದೆ. ತನಿಖೆಯ ನಂತರ ಈ ಬಗ್ಗೆ ಮಾಹಿತಿ ನೀಡಲಿದೆ. ಪೆಗಾಸಸ್ ಬಗ್ಗೆ ಸುಳ್ಳು ವರದಿ ಮಾಡಿದವರ ಬಣ್ಣವನ್ನು ಈ ಸಮಿತಿ ಬಯಲು ಮಾಡಲಿದೆ ಎಂದು ಸುಪ್ರೀಂ ಕೋರ್ಟ್ ಮುಂದೆ ಕೇಂದ್ರ ಸರ್ಕಾರದ ತನ್ನ ವಾದವನ್ನು ಮುಂದಿರಿಸಿದೆ. ಇದನ್ನೂ ಓದಿ: ಸಮ್ಮಿಶ್ರ ಸರ್ಕಾರ ಪತನಕ್ಕೆ ಪೆಗಾಸಸ್ ಕಾರಣ: ಪರಮೇಶ್ವರ್

    ಕೇಂದ್ರ ಸರ್ಕಾರ ಪೆಗಾಸಸ್ ಸ್ಪೈವೇರ್ ಬಳಸಿ ಫೋನ್ ಟ್ರ್ಯಾಪ್ ಮಾಡಿದೆ ಎಂದು ಆರೋಪಿಸಿ ಎಡಿಟರ್ಸ್ ಗ್ರಿಡ್ ಜೊತೆ ಹಿರಿಯ ಪತ್ರಕರ್ತರಾದ ಎನ್. ರಾಮ್ ಮತ್ತು ಶಶಿ ಕುಮಾರ್ ಅರ್ಜಿ ಸಲ್ಲಿಸಿದ್ದರು. ಈ ಪ್ರಕರಣ ವಿಚಾರಣೆ ಮು.ನ್ಯಾ ಎನ್ ರಮಣ ನೇತೃತ್ವದ ತ್ರಿಸದಸ್ಯ ಪೀಠದಲ್ಲಿ ನಡೆಯುತ್ತಿದೆ.

  • ರಾಹುಲ್ ಗಾಂಧಿ ಬ್ರೇಕ್‍ಫಾಸ್ಟ್ ಮೀಟಿಂಗ್ – ಸಂಸತ್‍ವರೆಗೂ ಸೈಕಲ್ ಮಾರ್ಚ್

    ರಾಹುಲ್ ಗಾಂಧಿ ಬ್ರೇಕ್‍ಫಾಸ್ಟ್ ಮೀಟಿಂಗ್ – ಸಂಸತ್‍ವರೆಗೂ ಸೈಕಲ್ ಮಾರ್ಚ್

    ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆಯೋಜಿಸಿರುವ ಉಪಹಾರ ಕೂಟದಲ್ಲಿ ವಿಪಕ್ಷ ನಾಯಕರು ಸೇರಿದ್ದು, ಚರ್ಚೆ ನಡೆಸುತ್ತಿದ್ದಾರೆ. ತೃಣಮೂಲ ಕಾಂಗ್ರೆಸ್, ಶಿವಸೇನೆ, ಸಮಾವಾದಿ ಪಾರ್ಟಿ ಸೇರಿದಂತೆ ಅನೇಕ ವಿಪಕ್ಷ ನಾಯಕರು ಉಪಹಾರ ಕೂಟದಲ್ಲಿ ಭಾಗಿಯಾಗಿದ್ದಾರೆ.

    ಈ ಬಾರಿಯ ಅಧಿವೇಶನದಲ್ಲಿ ವಿಪಕ್ಷಗಳು ಪೆಗಾಸಸ್ ಗೂಢಚಾರಿಕೆಗೆ ಸಂಬಂಧಿಸಿದಂತೆ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸುತ್ತಿವೆ. ಕಾಂಗ್ರೆಸ್ ಸೇರಿದಂತೆ ಅನೇಕ ವಿಪಕ್ಷಗಳು ಈ ಸಂಬಂಧ ಚರ್ಚೆಗೆ ಆಗ್ರಹಿಸುತ್ತಿವೆ. ವಿಪಕ್ಷಗಳ ಒಗ್ಗಟ್ಟು ಪ್ರದರ್ಶಿಸಲು ರಾಹುಲ್ ಗಾಂಧಿ ಉಪಹಾರಕೂಟ ಆಯೋಜಿಸಿದ್ದರು ಎಂದು ವರದಿಯಾಗಿದೆ.

    ಉಪಹಾರ ಕೂಟದಲ್ಲಿ ಮಾತನಾಡಿದ ರಾಹುಲ್ ಗಾಂಧಿ, ವಿಪಕ್ಷಗಳ ಮಧ್ಯೆ ಏನೇ ವಾದಗಳಿರಬಹುದು. ಆದ್ರೆ ಅಧಿವೇಶನದಲ್ಲಿ ಎಲ್ಲರೂ ಒಟ್ಟಾಗಿ ಪೆಟ್ರೋಲ್-ಡೀಸೆಲ್ ಬೆಲೆ ಏರಿಕೆ ಕುರಿತು ಧ್ವನಿ ಎತ್ತಬೇಕಿದೆ. ಹಾಗಾಗಿ ಸಭೆ ಬಳಿಕ ಎಲ್ಲರೂ ಸೈಕಲ್ ಮೂಲಕ ಅಧಿವೇಶನಕ್ಕೆ ತೆರಳೋಣ ಎಂದು ಹೇಳಿದ್ದಾರೆ. ರಾಹುಲ್ ಗಾಂಧಿ ಅವರ ಮಾತಿನಂತೆ ವಿಪಕ್ಷ ನಾಯಕರು ಸೈಕಲ್ ಮೇಲೆ ಸಂಸತ್ ಬಂದು ತೈಲ ಬೆಲೆ ಏರಿಕೆಯನ್ನು ಖಂಡಿಸಿದರು.

    ಸರ್ಕಾರ ನಮ್ಮ ಮಾತುಗಳನ್ನು ಕೇಳಿಸಿಕೊಳ್ಳುತ್ತಿಲ್ಲ. ನಮ್ಮ ಪ್ರತಿಭಟನೆ ರಸ್ತೆಯಿಂದ ಸಂಸತ್ ವರೆಗೂ ನಡೆಯಬೇಕು. ಅದೇ ರೀತಿ ಸದನದಲ್ಲಿ ಕೊರೊನಾ ಮತ್ತು ಪೆಗಾಸಸ್ ಸಂಬಂಧ ಸುಧೀರ್ಘ ಚರ್ಚೆ ನಡೆಯಬೇಕಿದೆ ಎಂದು ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ. ಇದನ್ನೂ ಓದಿ: 2024ಕ್ಕೆ ಭಾರತದ ಪ್ರಧಾನಿ ಮಹಿಳೆಯಾಗಲಿ: ಜಯಾ ಬಚ್ಚನ್

    ರಾಹುಲ್ ಗಾಂಧಿ ಉಪಹಾರಕೂಟದಲ್ಲಿ ಭಾಗಿಯಾದ ಪಕ್ಷಗಳು: INC, NCP, SS, RJD, SP, CPIM, CPI, IUML, RSP, KCM, JMM, NC, TMC,LJD

  • ನನ್ನ ಫೋನ್​​ಗಳನ್ನು ಕದ್ದಾಲಿಕೆ ಮಾಡಲಾಗಿದೆ: ರಾಹುಲ್ ಗಾಂಧಿ

    ನನ್ನ ಫೋನ್​​ಗಳನ್ನು ಕದ್ದಾಲಿಕೆ ಮಾಡಲಾಗಿದೆ: ರಾಹುಲ್ ಗಾಂಧಿ

    ನವದೆಹಲಿ: ನನ್ನ ಎಲ್ಲಾ ಫೋನ್‍ಗಳನ್ನು ಕದ್ದಾಲಿಕೆ ಮಾಡಲಾಗಿದೆ. ನ್ಯಾಯಾಲಯದ ಮೇಲ್ವಿಚಾರಣೆಯ ತನಿಖೆಗೆ ಒತ್ತಾಯಿಸಿದ್ದು, ಇದನ್ನು ಸರ್ಕಾರ ತಿರಸ್ಕರಿಸಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆರೋಪಿಸಿದ್ದಾರೆ.

    ಸಂಸತ್ತಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಸಂಭಾವ್ಯ ಗುರಿ ಅಲ್ಲ. ನನ್ನ ಫೋನ್ ಟ್ಯಾಪ್ ಮಾಡಲಾಗಿದೆ, ಈ ಫೋನ್ ಮಾತ್ರವಲ್ಲ, ನನ್ನ ಎಲ್ಲಾ ಫೋನ್‍ಗಳನ್ನು ಟ್ಯಾಪ್ ಮಾಡಲಾಗಿದೆ ಎಂದಿದ್ದಾರೆ. ಸಂಸತ್ ನಲ್ಲಿ ಕಾಂಗ್ರೆಸ್ ಮತ್ತು ಇತರ ವಿರೋಧ ಪಕ್ಷಗಳು ಪೆಗಾಸಸ್ ಕಣ್ಗಾವಲು ಪ್ರಶ್ನಿಸಿ ಪ್ರತಿಭಟನೆ ನಡೆಸಿವೆ. ಸ್ರೇಲಿ ಕಂಪನಿ ಎನ್‍ಎಸ್‍ಒನ ಸ್ಪೈವೇರ್ ಪೆಗಾಸಸ್‍ನ ಸೋರಿಕೆಯಾದ ಡೇಟಾಬೇಸ್‍ನಲ್ಲಿ ರಾಹುಲ್ ಗಾಂಧಿ ಸಂಭಾವ್ಯ ಗುರಿಗಳ ಪಟ್ಟಿಯಲ್ಲಿದ್ದಾರೆ ಎಂದು ತಿಳಿದುಬಂದಿದೆ, ಇದನ್ನು ಸರ್ಕಾರಗಳಿಗೆ ಮಾತ್ರ ಮಾರಾಟ ಮಾಡಲಾಗುತ್ತದೆ. ಪ್ರತಿಪಕ್ಷದ ನಾಯಕರು, ಇಬ್ಬರು ಕೇಂದ್ರ ಸಚಿವರು, ಉದ್ಯಮಿ ಅನಿಲ್ ಅಂಬಾನಿ, ಮಾಜಿ ಸಿಬಿಐ ಮುಖ್ಯಸ್ಥ, ವೈರಾಲಜಿಸ್ಟ್ ಮತ್ತು 40 ಪತ್ರಕರ್ತರು ಭಾರತದ 300ಫೋನ್‍ಗಳ ಮೇಲೆ ಕಣ್ಗಾವಲು ಇರಿಸಿರುವ ಪಟ್ಟಿಯಲ್ಲಿದ್ದಾರೆ. ಎಲ್ಲಾ ಫೋನ್‍ಗಳನ್ನು ಹ್ಯಾಕ್ ಮಾಡಲಾಗಿದೆ ಎಂದು ದೃಢೀಕರಿಸಿಲ್ಲ ಎಂದಿದ್ದಾರೆ.

    ನನ್ನ ಸಂಭಾಷಣೆಗಳನ್ನು ಕದ್ದಾಲಿಕೆ ಮಾಡಲಾಗಿದೆ ಎಂದು ಭದ್ರತಾ ಸಿಬ್ಬಂದಿ ಹೇಳಿರುವುದಾಗಿ ರಾಹುಲ್ ಗಾಂಧಿ ಹೇಳಿದ್ದಾರೆ. ನನ್ನ ಫೋನ್ ಅನ್ನು ಟ್ಯಾಪ್ ಮಾಡುವ ಐಬಿ (ಇಂಟೆಲಿಜೆನ್ಸ್ ಬ್ಯೂರೋ) ಜನರಿಂದ ನನಗೆ ಫೋನ್ ಕರೆಗಳು ಬರುತ್ತವೆ. ಅವರು ನಿಮ್ಮ ಫೋನ್ ಅನ್ನು ಟ್ಯಾಪ್ ಮಾಡಲಾಗುತ್ತಿದೆ ಎಂದು ಹೇಳುತ್ತಾರೆ. ನಾನು ಹೇಳುವುದನ್ನು ವಿವರಿಸಬೇಕೆಂದು ನನ್ನ ಭದ್ರತಾ ಸಿಬ್ಬಂದಿಗೆ ಹೇಳಲಾಗಿದೆ. ನನ್ನ ಸ್ನೇಹಿತರಿಗೆ ಕೂಡಾ ಫೋನ್‍ಗಳನ್ನು ಟ್ಯಾಪ್ ಮಾಡಿದ್ದಾರೆ ಎಂದು ತಿಳಿಸುವ ಕರೆಗಳನ್ನು ಬಂದಿವೆ. ನಾನು ಹೆದರುವುದಿಲ್ಲ. ನಾನು ಭಯಭೀತರಾಗುವುದಿಲ್ಲ. ಈ ದೇಶದಲ್ಲಿ, ನೀವು ಭ್ರಷ್ಟರಾಗಿದ್ದರೆ ಮತ್ತು ಕಳ್ಳರಾಗಿದ್ದರೆ ನೀವು ಭಯಪಡುತ್ತೀರಿ. ಇಲ್ಲದಿದ್ದರೆ ನೀವು ಭಯಪಡಬೇಕಾಗಿಲ್ಲ ಎಂದು ಹೇಳಿದರು.

    ಕಣ್ಗಾವಲು ಆರೋಪವನ್ನು ಸರ್ಕಾರ ನಿರಾಕರಿಸಿದೆ ಮತ್ತು ಸಂಭಾವ್ಯ ಗುರಿಗಳ ದೈನಂದಿನ ಬಹಿರಂಗಪಡಿಸುವಿಕೆಯ ನಡುವೆ ಯಾವುದೇ ಪಾತ್ರವನ್ನು ನಿರಾಕರಿಸಿದೆ. ಭಾರತದ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿನ ಸಂಸ್ಥೆಗಳ ವಿರುದ್ಧ ಗೃಹ ಸಚಿವ ಅಮಿತ್ ಶಾ ಈ ಶಸ್ತ್ರಾಸ್ತ್ರವನ್ನು (ಪೆಗಾಸಸ್) ಬಳಸುತ್ತಿದ್ದಾರೆ ರಾಹುಲ್ ಆರೋಪಿಸಿದರು. ಸರ್ಕಾರ ಇದಕ್ಕೆ ಹಣ ಪಾವತಿಸಿಲ್ಲವೇ? ಎಂಬದು ಪ್ರಮುಖ ಪ್ರಶ್ನೆ, ನೀವು ಪೆಗಾಸಸ್ ಖರೀದಿಸಬಹುದೇ? ನಾನು ಪೆಗಾಸಸ್ ಖರೀದಿಸಬಹುದೇ? ಒಂದು ಸರ್ಕಾರ ಮಾತ್ರ ಪೆಗಾಸಸ್ ಖರೀದಿಸಬಹುದು. ಪ್ರಧಾನ ಮಂತ್ರಿಯ ಸಹಿ, ಅಥವಾ ಕನಿಷ್ಠ ಗೃಹ ಸಚಿವರ ಸಹಿ ಇದಕ್ಕಾಗಿ ಬೇಕಾಗುತ್ತದೆ. ರಾಷ್ಟ್ರದ ಮಿಲಿಟರಿ ಪೆಗಾಸಸ್ ಅನ್ನು ಖರೀದಿಸಲು ಸಾಧ್ಯವಿಲ್ಲ ಎಂದು  ಹೇಳಿದರು.

    ಮುಂಗಾರು ಅಧಿವೇಶನದಲ್ಲಿ ಪೆಗಾಸಸ್ ವರದಿಗಳನ್ನು ತೀಕ್ಷವಾಗಿ ಪ್ರಶ್ನಿಸಲು ಕಾಂಗ್ರೆಸ್ ನಿರ್ಧರಿಸಿದೆ. ಹಾಗಾಗಿ ಸೋಮವಾರ ಆರಂಭವಾದ ಅಧಿವೇಶನದಲ್ಲಿ ಕಾಂಗ್ರೆಸ್ ಈ ವಿಷಯವನ್ನೆತ್ತಿ ಸರ್ಕಾರವನ್ನು ಪ್ರಶ್ನಿಸುತ್ತದೆ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ