Tag: Pejavara Matha

  • ಎಸ್‌ಎಂ ಕೃಷ್ಣ ಸಜ್ಜನಿಕೆ, ಸಭ್ಯತೆ, ಸದಾಚಾರದ ರಾಜಕಾರಣಿ: ಪೇಜಾವರ ಶ್ರೀ

    ಎಸ್‌ಎಂ ಕೃಷ್ಣ ಸಜ್ಜನಿಕೆ, ಸಭ್ಯತೆ, ಸದಾಚಾರದ ರಾಜಕಾರಣಿ: ಪೇಜಾವರ ಶ್ರೀ

    ಉಡುಪಿ: ಮಾಜಿ ಮುಖ್ಯಮಂತ್ರಿ ಎಸ್‌ಎಂ ಕೃಷ್ಣ (SM Krishna) ನಿಧನಕ್ಕೆ ಪೇಜಾವರ ಮಠಾಧೀಶ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ (Vishwaprasanna Tirtha Swamiji) ಸಂತಾಪ ವ್ಯಕ್ತಪಡಿಸಿದರು. ಎಸ್‌ಎಂ ಕೃಷ್ಣ ವಿಧಿವಶವಾದ ಸುದ್ದಿ ತಿಳಿದು ಖೇದವಾಗಿದೆ. ಎಸ್‌ಎಂ ಕೃಷ್ಣ ರಾಜ್ಯ ಮತ್ತು ದೇಶಕ್ಕೆ ಉತ್ತಮ ಮಾರ್ಗದರ್ಶನ ಮಾಡಿದವರು ಎಂದು ಸ್ವಾಮೀಜಿ ನೆನಪಿಸಿಕೊಂಡಿದ್ದಾರೆ.

    ಪೇಜಾವರ ಮಠ ಮತ್ತು ನಮ್ಮ ಗುರುಗಳ ಮೇಲೆ ಅವರಿಗೆ ವಿಶೇಷ ಅಭಿಮಾನ ಇತ್ತು. ಭಗವಂತ ಅವರ ಆತ್ಮಕ್ಕೆ ಸಕಲ ಬಗೆಯ ಶ್ರೇಯಸ್ಸು ಕರುಣಿಸಲಿ. ಕುಟುಂಬಕ್ಕೆ ವಿಯೋಗ ಸಹಿಸುವ ಸಾಮರ್ಥ್ಯ ಕೊಡಲಿ. ರಾಜಕಾರಣದಲ್ಲಿ ತಳಮಟ್ಟದಿಂದ ಬಹಳ ಎತ್ತರದವರೆಗೆ ಬೆಳೆದು ಅನೇಕ ಮಹತ್ವದ ಸ್ಥಾನಮಾನಗಳನ್ನು ಯಶಸ್ವಿಯಾಗಿ ನಿರ್ವಹಿಸಿದ್ದಾರೆ. ರಾಜಕೀಯ ಕ್ಷೇತ್ರದಲ್ಲಿ ಅನನ್ಯತೆಯನ್ನು ಕೃಷ್ಣ ಅವರು ಸಂಪಾದಿಸಿದ್ದು ಉಲ್ಲೇಖನೀಯ ಎಂದರು. ಇದನ್ನೂ ಓದಿ: ಬ್ರೇಕ್ ಫೇಲ್ ಆಗಿ ನಿಯಂತ್ರಣ ತಪ್ಪಿದ ಬಸ್ – 6 ಮಂದಿ ಸಾವು, 49 ಮಂದಿಗೆ ಗಾಯ

    ರಾಜ್ಯದ ಮುಖ್ಯಮಂತ್ರಿಯಾಗಿಯೂ ಉತ್ತಮ ಕಾರ್ಯನಿರ್ವಹಿಸಿದ್ದು, ಬೆಂಗಳೂರನ್ನು ಮಾಹಿತಿ ತಂತ್ರಜ್ಞಾನದ ಪ್ರಮುಖ ಕೇಂದ್ರವಾಗಿ ಬೆಳೆಸಿ ಸಾವಿರಾರು ಪ್ರತಿಭಾವಂತ ಯುವಕರಿಗೆ ಉದ್ಯೋಗ ದೊರೆಯುವಂತೆ ಮಾಡಿ ಜೀವನದ ದಾರಿಯನ್ನು ತೆರೆದಿಡುವಲ್ಲಿ ಅವರ ದೂರದೃಷ್ಟಿಯ ಪಾತ್ರ ಸದಾ ಸ್ಮರಣೀಯ. ಸಜ್ಜನಿಕೆ, ಸಭ್ಯತೆ, ಸದಾಚಾರ ಮತ್ತು ಧರ್ಮ ಸಂಪನ್ನರೂ ಆಗಿದ್ದು, ಶ್ರೀಮಠದ ಹಾಗೂ ನಮ್ಮ ಗುರುಗಳ ವಿಶೇಷ ಭಕ್ತರಾಗಿದ್ದರು. ನಮ್ಮ ಗುರುಗಳಾದ ಶ್ರೀ ವಿಶ್ವೇಶತೀರ್ಥ ಶ್ರೀಪಾದರು ತಮ್ಮ ಪಂಚಮ ಶ್ರೀಕೃಷ್ಣ ಪರ್ಯಾಯದ ಸಂದರ್ಭದಲ್ಲಿ ರಾಷ್ಟ್ರರತ್ನ ಬಿರುದಿನೊಂದಿಗೆ ಸನ್ಮಾನಿಸಿದ್ದನ್ನು ಸ್ಮರಿಸುತ್ತೇವೆ ಎಂದು ಹೇಳಿದರು. ಇದನ್ನೂ ಓದಿ: ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ -ಹೋರಾಟಗಾರರ ಮೇಲೆ ಲಾಠಿಚಾರ್ಜ್‌

    ಗುರುಗಳ ಬಳಿಕ ನಮ್ಮ ಮೇಲೂ ಅದೇ ಅಭಿಮಾನ, ಭಕ್ತಿ ಹಾಗೂ ಪ್ರೀತಿಯನ್ನು ಹೊಂದಿದ್ದ ಕೃಷ್ಣ ಅವರ ಆತ್ಮಕ್ಕೆ ಸದ್ಗತಿಯನ್ನು ಕರುಣಿಸಲಿ ಎಂದು ಸ್ವಾಮೀಜಿ ಪ್ರಕಟಣೆ ಮೂಲಕ ಪ್ರಾರ್ಥಿಸಿದ್ದಾರೆ. ಕುಟುಂಬಕ್ಕೂ ಅವರ ವಿಯೋಗದ ದುಃಖವನ್ನು ಸಹಿಸುವ ಶಕ್ತಿಯನ್ನು ನೀಡಲಿ ಎಂದು ಶ್ರೀ ಕೃಷ್ಣಪರಮಾತ್ಮನಲ್ಲಿ ಪ್ರಾರ್ಥಿಸುತ್ತೇವೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಎಸ್‌ಎಂ ಕೃಷ್ಣ ಆಡಳಿತದಲ್ಲಿ ವಿಕಾಸಸೌಧ ನಿರ್ಮಾಣ: ಗೋವಿಂದ ಕಾರಜೋಳ

  • ಜೀವನ ಪರ್ಯಂತ ಸೇವೆಗೈದ ಪೇಜಾವರ ಶ್ರೀಗಳನ್ನು ಶ್ರೀಕೃಷ್ಣ ಉಳಿಸಿಕೊಳ್ಳಲಿ: ಕೆ.ಎಸ್.ಈಶ್ವರಪ್ಪ

    ಜೀವನ ಪರ್ಯಂತ ಸೇವೆಗೈದ ಪೇಜಾವರ ಶ್ರೀಗಳನ್ನು ಶ್ರೀಕೃಷ್ಣ ಉಳಿಸಿಕೊಳ್ಳಲಿ: ಕೆ.ಎಸ್.ಈಶ್ವರಪ್ಪ

    ಉಡುಪಿ: ಜೀವನ ಪರ್ಯಂತ ಪೇಜಾವರ ಶ್ರೀಗಳು ಶ್ರೀಕೃಷ್ಣನ ಸೇವೆ ಮಾಡಿದ್ದಾರೆ. ಅವರನ್ನು ಕೃಷ್ಣಪರಮಾತ್ಮನೇ ಉಳಿಸಿಕೊಳ್ಳಲಿ ಎಂದು ಗ್ರಾಮೀಣಾಭಿವೃದ್ಧಿ ಪಂಚಾಯತ್ ಸಚಿವ ಕೆ.ಎಸ್ ಈಶ್ಚರಪ್ಪ ಪ್ರಾರ್ಥಿಸಿದ್ದಾರೆ.

    ಉಡುಪಿಯ ಮಣಿಪಾಲದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಶ್ರೀ ವಿಶ್ವೇಶ್ವರ ತೀರ್ಥ ಸ್ವಾಮೀಜಿಗಳ ಜೀವನವೇ ನಮಗೆ ಆದರ್ಶ. ವೈದ್ಯರು 48 ಗಂಟೆ ಗಡುವು ಕೊಟ್ಟಿದ್ದಾರೆ. ಶ್ರೀಗಳು ನಿರಂತರ ಶ್ರೀಕೃಷ್ಣನ ಸೇವೆ ಮಾಡಿದವರು, ಕೃಷ್ಣ ಪೇಜಾವರ ಶ್ರೀಗಳನ್ನು ಉಳಿಸಿಕೊಳ್ಳಬೇಕು. ಅವರು ಜಾತಿ ಮೀರಿ ಕೆಲಸ ಮಾಡಿದ್ದಾರೆ. ಶ್ರೀಳು ದೇವರಿಗೆ ಸಮಾನ. ಅವರನ್ನು ಕಾಪಾಡಪ್ಪ ಅಂತ ಭಗವಂತನಲ್ಲಿ ಮಾತ್ರ ಕೇಳಿಕೊಳ್ಳುತ್ತೇನೆ ಎಂದರು.

    ಪೇಜಾವರ ಶ್ರೀಗಳು ಹತ್ತಾರು ವರ್ಷ ಬದುಕಿ ಬಾಳಬೇಕು. ಭಗವಂತನ ಬಳಿ ಪ್ರಾರ್ಥಿಸಲೆಂದೇ ಉಡುಪಿಗೆ ಬಂದಿದ್ದೇನೆ. ನಮಗೆ ಅವರ ಮಾರ್ಗದರ್ಶನ ಮಾಡಬೇಕಾಗಿದೆ ಎಂದು ಸಚಿವರು ಹೇಳಿದರು.

    ಉಸಿರಾಟದ ತೊಂದರೆಯಿಂದ ಬಳಲುತ್ತಿರುವ ಪೇಜಾವರ ಮಠದ ಶ್ರೀ ವಿಶ್ವೇಶ್ವರ ತೀರ್ಥ ಸ್ವಾಮೀಜಿಯವರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ. ಇಂದು ಮುಂಜಾನೆ 5 ಗಂಟೆಗೆ ಶ್ರೀಗಳನ್ನು ಮಣಿಪಾಲ ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಐಸಿಯುನಲ್ಲಿ ಚಿಕಿತ್ಸೆ ಮುಂದುವರಿದಿದೆ. ವೆಂಟಿಲೇಟರ್ ಮೂಲಕ ಕೃತಕ ಉಸಿರಾಟದ ವ್ಯವಸ್ಥೆ ಮಾಡಲಾಗಿದ್ದು, ಡಾ. ಸುಧಾ ವಿದ್ಯಾಸಾಗರ್ ನೇತೃತ್ವದ ಐವರು ವೈದ್ಯರ ತಂಡ ಚಿಕಿತ್ಸೆ ನೀಡುತ್ತಿದೆ. ಚಿಕಿತ್ಸೆಗೆ ಪೇಜಾವರ ಶ್ರೀಗಳು ಸ್ಪಂದಿಸುತ್ತಿದ್ದು, 24 ಗಂಟೆಗಳ ಕಾಲ ನಿಗಾ ವಹಿಸಲಾಗಿದೆ.

    ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ, ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರು ಸೇರಿ ಹಲವರು ಶ್ರೀಗಳ ಆಪ್ತರಿಗೆ ಕರೆ ಮಾಡಿ ಶ್ರೀಗಳ ಆರೋಗ್ಯ ವಿಚಾರಿಸಿದ್ದಾರೆ. ಸಿಎಂ ಯಡಿಯೂರಪ್ಪ ಅವರು ಶನಿವಾರ ಉಡುಪಿಗೆ ತೆರಳಿ ಪೇಜಾವರರ ಆರೋಗ್ಯ ವಿಚಾರಿಸಲಿದ್ದಾರೆ. ಗೃಹಸಚಿವ ಅಮಿತ್ ಶಾ ಕೂಡ ನಾಳೆ ಮಣಿಪಾಲಕ್ಕೆ ಆಗಮಿಸಲಿದ್ದಾರೆ ಎನ್ನಲಾಗಿದೆ.

    ಈ ಮಧ್ಯೆ, ಪುತ್ತಿಗೆ ಮತ್ತು ತರಳಬಾಳು ಶ್ರೀಗಳು, ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಕಲ್ಲಡ್ಕ ಪ್ರಭಾಕರ್ ಭಟ್ ಸೇರಿ ಹಲವು ಗಣ್ಯರು ಆಸ್ಪತ್ರೆ ಭೇಟಿ ನೀಡಿದರು. ಮುಂಜಾಗ್ರತಾ ಕ್ರಮವಾಗಿ ಕೆಎಂಸಿ ಆಸ್ಪತ್ರೆ ಸುತ್ತ ಭದ್ರತೆ ಹೆಚ್ಚಿಸಲಾಗಿದೆ. 88 ವರ್ಷ ವಯಸ್ಸಿನ ಶ್ರೀಗಳು ನಿನ್ನೆಯಷ್ಟೇ 4 ಧಾರ್ಮಿಕ ಉಪನ್ಯಾಸ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಅಲ್ಲದೇ ಇತ್ತೀಚಿಗಷ್ಟೇ ತಿರುಪತಿ ಮತ್ತು ಉತ್ತರ ಭಾರತ ಪ್ರವಾಸಕ್ಕೂ ಹೋಗಿ ಬಂದಿದ್ದರು.