Tag: pejawar seer

  • ಜಾತಿ ವ್ಯವಸ್ಥೆ ಅನಿಷ್ಟಗಳಿಗೆ ಮೂಲ ಎನ್ನುವವರೇ ಅದನ್ನು ಪೋಷಿಸುತ್ತಿದ್ದಾರೆ: ಪೇಜಾವರ ಶ್ರೀ

    ಜಾತಿ ವ್ಯವಸ್ಥೆ ಅನಿಷ್ಟಗಳಿಗೆ ಮೂಲ ಎನ್ನುವವರೇ ಅದನ್ನು ಪೋಷಿಸುತ್ತಿದ್ದಾರೆ: ಪೇಜಾವರ ಶ್ರೀ

    ಮಂಗಳೂರು: ಒಂದು ಕಡೆ ನಾವು ಜಾತ್ಯಾತೀತರು ಎನ್ನುವುದು. ಇನ್ನೊಂದು ಎಲ್ಲಾ ವಲಯದಲ್ಲೂ ಅದನ್ನ ಪೋಷಿಸುವುದು.  ಜಾತಿ ವ್ಯವಸ್ಥೆಯನ್ನು ಅನಿಷ್ಟಗಳಿಗೆ ಮೂಲ ಎನ್ನುವವರೇ ಅದನ್ನು ಪೋಷಿಸುತ್ತಿದ್ದಾರೆ ಎಂದು ಪೇಜಾವರ ಮಠದ ವಿಶ್ವ ಪ್ರಸನ್ನ ತೀರ್ಥ ಸ್ವಾಮೀಜಿ (Udupi Pejawar Vishwa Prasanna Teertha Swamiji) ಹೇಳಿದ್ದಾರೆ.

    ಜಾತ್ಯಾತೀತ (Secular) ಅಂತ ಹೇಳಿಕೊಳ್ಳುವಾಗ ಇಲ್ಲಿ ಜಾತಿ (Caste) ಪಂಗಡಗಳ ಲೆಕ್ಕಾಚಾರ ಯಾಕೆ ಎಂದು ಉಡುಪಿ ಪೇಜಾವರ ಪ್ರಶ್ನಿಸಿ ಪರಿಷತ್‌ ಕಾಂಗ್ರೆಸ್‌ ಸದಸ್ಯ ಬಿಕೆ ಹರಿಪ್ರಸಾದ್ (BK Hariprasad) ವಿರುದ್ದ ಅವರು ಪರೋಕ್ಷ ವಾಗ್ದಾಳಿ ನಡೆಸಿದರು.

    ಮಂಗಳೂರಿನ ಕುಳಾಯಿ ಚಿತ್ರಾಪುರ ಮಠದಲ್ಲಿ ನಡೆದ ಧರ್ಮಸಭೆಯಲ್ಲಿ ಮಾತನಾಡಿದ ಅವರು, ನಾವು ಹೇಳಿದ್ದು ತಪ್ಪಂತೆ. ಪುಡಿ ರಾಜಕಾರಣ (Politics) ಮಾಡುತ್ತಿದ್ದೇವೆ ಎನ್ನುತ್ತಾರೆ. ಹಾಗಾದರೆ ಇದು ಪ್ರಜಾಪ್ರಭುತ್ವ ರಾಷ್ಟ್ರ ಹೌದೋ ಅಲ್ವೋ ಹೇಳಿ ಎಂದಿದ್ದಾರೆ. ಹೌದು ಅಂತಾದ್ರೆ ಒಬ್ಬ ಮಾಠಾಧಿಪತಿಗೆ ಅಂತಲ್ಲ, ಸಾಮಾನ್ಯ ಪ್ರಜೆಗೂ ಮಾತಾಡುವ ಹಕ್ಕಿದೆ. ಹೀಗಿರುವಾಗ ಕಾವಿ ತೆಗೆದಿಟ್ಟು ಬಂದರೆ ಉತ್ತರ ಕೊಡುತ್ತೇನೆ ಎನ್ನುವುದು ಎಷ್ಟು ಸರಿ ಎಂದು ಪ್ರಶ್ನಿಸಿದರು.

     

    ಸಮಾಜದಲ್ಲಿ ಮಾತನಾಡುವ ಹಕ್ಕು ಇರುವುದು ಕೆಲವು ರಾಜಕಾರಣಿಗಳಿಗೆ ಮಾತ್ರವೇ? ಪ್ರಜೆಗಳಿಗೂ ಹಕ್ಕಿಲ್ಲ, ರಾಜಕಾರಣಿಗಳಿಗೆ ಮಾತ್ರ ಹಕ್ಕಿದೆ ಅಂತ ಹೇಳಲಿ. ಪ್ರಜಾಪ್ರಭುತ್ವ ಸತ್ತು ಹೋಯ್ತು, ಈಗ ಇರೋದು ರಾಜಕಾರಣಿಗಳ ರಾಜ್ಯ ಅಂತ ಹೇಳಿ ಬಿಡಲಿ. ಹಾಗಿಲ್ಲ ಅಂತಾದ್ರೆ ಪ್ರಜಾಪ್ರಭುತ್ವ ರಾಷ್ಟ್ರದಲ್ಲಿ ಪೀಠಾಧಿಪತಿ ಮಾತ್ರ ಅಲ್ಲ, ಸಾಮಾನ್ಯ ಪ್ರಜೆಗೂ ಅಭಿಪ್ರಾಯ ವ್ಯಕ್ತಪಡಿಸುವ ಹಕ್ಕಿರಲೇಬೇಕು. ಹಾಗಾಗಿ ನಾವು ಅದನ್ನ ಮಾತ್ರ ಮಾಡಿದ್ದೇವೆಯೇ ಹೊರತು ಬೇರೆ ಮಾಡಿಲ್ಲ ಎಂದು ಹೇಳಿದರು. ಇದನ್ನೂ ಓದಿ: ಪೇಜಾವರ ಶ್ರೀ ಬಗ್ಗೆ ಹರಿಪ್ರಸಾದ್ ವಿವಾದಾತ್ಮಕ ಹೇಳಿಕೆ – ಬಾಗಲಕೋಟೆಯಲ್ಲಿ ಬ್ರಾಹ್ಮಣ ಸಮಾಜ ಆಕ್ರೋಶ

    ಇಂಥಹ ರಾಜಕಾರಣಿಗಳಿಗೆ ಸದ್ಭುದ್ದಿ ಕೊಡಲಿ ಎಂದು ದೇವರಲ್ಲಿ ಕೇಳುತ್ತಿದ್ದೇನೆ. ನಮ್ಮ ಪಂಗಡದೊಳಗೆ ಯಾರಿಗೆಲ್ಲಾ ವೈಮನಸ್ಸು ಇದೆಯೋ ಅದು ದೂರವಾಗಲಿ ಎಂದು ಅವರು ಪ್ರಾರ್ಥಿಸಿದರು.

    ಏನಿದು ಪುಡಿ ರಾಜಕಾರಣಿ ವಿವಾದ?
    ಜಾತಿಗಣತಿ ವಿಚಾರದ ಬಗ್ಗೆ ಶಿವಮೊಗ್ಗದಲ್ಲಿ ಪ್ರತಿಕ್ರಿಯಿಸಿದ್ದ ಪೇಜಾವರ ಶ್ರೀ, ಸರ್ಕಾರ ಹಣ ಖರ್ಚು ಮಾಡಿ ಜಾತಿ ಜನಗಣತಿ (Caste Census) ಮಾಡಿ ಮುಚ್ಚಿಟ್ಟಿದೆ. ಜಾತ್ಯಾತೀತವಾಗಿರುವ (Secular) ರಾಷ್ಟ್ರದಲ್ಲಿ ಜಾತಿ ಗಣತಿ ಯಾಕೆ ಬೇಕು ಎಂದು ಪ್ರಶ್ನಿಸಿದ್ದರು. ಒಂದು ಕಡೆ ಜಾತಿ ಆಧಾರದಲ್ಲಿ ರಾಜಕೀಯ ಬೇಡ ಎನ್ನುತ್ತೀರಿ. ಇನ್ನೊಂದು ಕಡೆ ಜಾತಿಗಣತಿ ಎನ್ನುತ್ತೀರಿ. ಈ ಜಾತಿ ಗಣತಿ ಯಾಕೆ ಎನ್ನುವುದು ತಿಳಿಯುತ್ತಿಲ್ಲ ಎಂದಿದ್ದರು.

    ಈ ವಿಚಾರಕ್ಕೆ ಪ್ರತಿಕ್ರಿಯಿಸಿದ್ದ ಹರಿಪ್ರಸಾದ್‌, ಪೇಜಾವರ ಸ್ವಾಮೀಜಿ ಅವರು ಪುಡಿ ರಾಜಕಾರಣಿಗಳಂತೆ ಹೇಳಿಕೆ ನೀಡುತ್ತಿದ್ದಾರೆ. ಪೇಜಾವರ ಸ್ವಾಮೀಜಿ ಅವರು ಕಾವಿ ಬಟ್ಟೆ ತ್ಯಜಿಸಿ ಬಂದರೆ ಅವರಿಗೆ ನಾವು ತಕ್ಕ ಉತ್ತರ ನೀಡುತ್ತೇವೆ ಎಂದು ಹೇಳಿದ್ದರು.

     

  • ಮತ ಚಲಾಯಿಸಿ ರಾಮದೇವರ ಪ್ರಾಣ ಪ್ರತಿಷ್ಠೆ ಮಾಡಿದಷ್ಟೇ ಧನ್ಯತೆ: ಪೇಜಾವರ ಶ್ರೀ

    ಮತ ಚಲಾಯಿಸಿ ರಾಮದೇವರ ಪ್ರಾಣ ಪ್ರತಿಷ್ಠೆ ಮಾಡಿದಷ್ಟೇ ಧನ್ಯತೆ: ಪೇಜಾವರ ಶ್ರೀ

    ಉಡುಪಿ: ಮತ ಚಲಾಯಿಸಿ ರಾಮದೇವರ ಪ್ರಾಣ ಪ್ರತಿಷ್ಠೆ ಮಾಡಿದಷ್ಟೇ ಧನ್ಯತಾ ಭಾವ ಉಂಟಾಗಿದೆ ಎಂದು ಪೇಜಾವರ ವಿಶ್ವ ಪ್ರಸನ್ನ ತೀರ್ಥ ಶ್ರೀಗಳು (Pejawar Seer) ಹೇಳಿದ್ದಾರೆ.

    ಉಡುಪಿಯ ನಾರ್ತ್ ಸ್ಕೂಲ್‍ನ ಮತಗಟ್ಟೆ 185ರಲ್ಲಿ ಮತ ಚಲಾಯಿಸಿ, ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು. ಈ ವೇಳೆ ಮೋದಿ (Narendra Modi ) ಸರ್ವಾಧಿಕಾರಿ ಎಂಬ ಐ.ಎನ್.ಡಿ.ಐ.ಎ ಒಕ್ಕೂಟದ ಆರೋಪಕ್ಕೆ ಅವರು ಪ್ರತಿಕ್ರಿಯೆ ನೀಡಿದ್ದಾರೆ. ಪ್ರಜಾಪ್ರಭುತ್ವ ದೇಶದಲ್ಲಿ ಪ್ರಧಾನಿಯಾದವರು ಸರ್ವಾಧಿಕಾರಿ ಹೇಗೆ ಆಗುತ್ತಾರೆ ಎಂದು ತಿರುಗೇಟು ನೀಡಿದರು. ಇದನ್ನೂ ಓದಿ: ಇಲ್ಲೇನು ಎಕ್ಸಾಂ ಬರೆಸಲ್ಲ, ಬಂದು ವೋಟು ಮಾಡಿ : ನಟ ಶ್ರೀಮುರಳಿ

    ನಮಗೆ ಬೇಕಾಗಿರುವ ಸರ್ಕಾರ ರೂಪಿಸುವ ದೊಡ್ಡ ಹೊಣೆ ಪ್ರಜೆಗಳ ಮೇಲೆ ಇದೆ. ಎಲ್ಲಾ ಪ್ರಜೆಗಳು ಅವಶ್ಯವಾಗಿ ಮತದಾನ ಮಾಡಬೇಕು. ಯಾರು ಕೂಡ ಮತದಾನದಿಂದ ದೂರ ಉಳಿಯಬಾರದು. ಮತದಾನ ಮಾಡಿ ತುಂಬಾ ಹೆಮ್ಮೆ ಅನಿಸುತ್ತಿದೆ. ನೆಲದ ಸಂಸ್ಕೃತಿಯನ್ನು ಗೌರವಿಸುವ ಸರ್ಕಾರವನ್ನು ರೂಪಿಸುವ ಅವಕಾಶ ನಮಗೆ ಇದೆ. ಸಮಾಜದ ಪ್ರಸಕ್ತ ವಾತಾವರಣವನ್ನು ಅರ್ಥ ಮಾಡಿಕೊಂಡು ಮತದಾನ ಮಾಡಬೇಕು. ನಮಗೆ ಬೇಕಾಗಿರುವ ಸರ್ಕಾರವನ್ನು ರೂಪಿಸಬೇಕು. ರಾಜನಾದವ ಸರಿಯಾಗಿದ್ದರೆ ಕಾಲ ಯಾವತ್ತೂ ಹಾಳಾಗುವುದಿಲ್ಲ. ಈಗ ಪ್ರಜೆಗಳೇ ರಾಜರು ಎಂದರು.

    ದೇಶದಲ್ಲಿ ಮತ ಚಲಾಯಿಸದವರಿಗೆ ಪೌರತ್ವ ಕೊಡಬಾರದು. ಅಂತಹವರಿಗೆ ತೃತೀಯ, ದ್ವಿತೀಯ ದರ್ಜೆಯ ಪೌರತ್ವ ಕೊಡಬೇಕು. ನೋಟ ಸಹಜ ಪ್ರಕ್ರಿಯೆ ಆಗಬೇಕೆ ಹೊರತು, ಒತ್ತಡದ ಅಭಿಯಾನ ಆಗಬಾರದು ಎಂದರು. ಇದನ್ನೂ ಓದಿ: ತಾಳಿ ಕಟ್ಟುವ ಮುನ್ನ ಓಡೋಡಿ ಬಂದು ಮತದಾನ ಮಾಡಿದ ವರ

  • ಅಯೋಧ್ಯೆಯಲ್ಲಿ ಮಂಡಲೋತ್ಸವ ನಡೆಸಿ ಮರಳಿದ ಪೇಜಾವರ ಶ್ರೀಗೆ ಮಂಗಳೂರಿನಲ್ಲಿ‌ ಅದ್ದೂರಿ ಸ್ವಾಗತ

    ಅಯೋಧ್ಯೆಯಲ್ಲಿ ಮಂಡಲೋತ್ಸವ ನಡೆಸಿ ಮರಳಿದ ಪೇಜಾವರ ಶ್ರೀಗೆ ಮಂಗಳೂರಿನಲ್ಲಿ‌ ಅದ್ದೂರಿ ಸ್ವಾಗತ

    ಮಂಗಳೂರು: ಅಯೋಧ್ಯೆಯ ರಾಮಮಂದಿರದಲ್ಲಿ (Ayodhya Ramamandir) 48 ದಿನಗಳ ಮಂಡಲೋತ್ಸವ (Mandala Pooja) ಮುಗಿಸಿ ವಾಪಸ್ ಆದ ಪೇಜಾವರ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿಗಳಿಗೆ (Pejawar seer) ಮಂಗಳೂರು (Mangaluru) ವಿಮಾನ ನಿಲ್ದಾಣದಲ್ಲಿ ಅದ್ದೂರಿ ಸ್ವಾಗತ ನೀಡಲಾಯಿತು.

    ಮಂಡಲೋತ್ಸವದ ಬಗ್ಗೆ ಈ ವೇಳೆ ಪ್ರತಿಕ್ರಿಯಿಸಿದ ಅವರು, ಶ್ರೀರಾಮನ ಸೇವೆ ಮಾಡಿದ್ದು ನನ್ನ ದೊಡ್ಡ ಸುಯೋಗ. ಕೃಷ್ಣೈಕ್ಯರಾದ ಹಿರಿಯ ವಿಶ್ವೇಶ್ವರ ತೀರ್ಥ ಸ್ವಾಮೀಜಿ ಅವರು ಈ ಭಾಗ್ಯ ನಮಗೆ ಕರುಣಿಸಿದ್ದಾರೆ. ಶ್ರೀರಾಮನ ನೆಲದಲ್ಲಿ ಮಾಡಿದ ಸೇವೆ ಕೃಷ್ಣನಿಗೆ ಸಮರ್ಪಣೆಯಾಗಿದೆ. ಅಯೋಧ್ಯೆಯಲ್ಲಿದ್ದಾಗ ದೂರದ ಉತ್ತರ ಪ್ರದೇಶದಲ್ಲಿ ಇದ್ದೇವೆ ಎಂದು ಅನಿಸಿಲ್ಲ. ಇಂದು ರಾಮನ ಸಾನಿಧ್ಯ. ಮತ್ತೊಂದು ರಾಮ ಭಕ್ತರ ಸಾನಿಧ್ಯವಾಗಿದೆ ಎಂದಿದ್ದಾರೆ. ಇದನ್ನೂ ಓದಿ: ಸ್ಪರ್ಧೆಯಿಂದ ಹಿಂದೆ ಸರಿಯುವ ಮಾತೇ ಇಲ್ಲ: ಪಟ್ಟು ಬಿಡದ ಈಶ್ವರಪ್ಪ

    ಕರ್ನಾಟಕ ಸೇರಿದಂತೆ ದಕ್ಷಿಣ ಭಾರತದ ರಾಜ್ಯಗಳಿಂದ ನಿರಂತರವಾಗಿ ಭಕ್ತರು ಬರುತ್ತಿದ್ದರು. ದೇವಾಲಯ ಪೂರ್ಣಗೊಳ್ಳಲು ಇನ್ನೂ 2 ವರ್ಷ ಬೇಕು. ಮೋದಿಜಿ ಅವರ ಕಾಲದಲ್ಲಿ ಇಂತಹ ಬೆಳವಣಿಗೆ ಕಾಣುತ್ತಿದ್ದೇವೆ. ಧಾರ್ಮಿಕವಾಗಿ, ಸಾಂಸ್ಕøತಿಕವಾಗಿ, ಆರ್ಥಿಕವಾಗಿ, ಸಾಮಾಜಿಕವಾಗಿ ಎಲ್ಲಾ ನೆಲೆಯಲ್ಲಿ ಬದಲಾವಣೆ ಕಾಣುತ್ತಿದ್ದೇವೆ. ಇಂತಹ ಸರ್ಕಾರ ಮತ್ತೆ ಪುನಃ ದೇಶದಲ್ಲಿ ಆಡಳಿತಕ್ಕೆ ಬರಬೇಕು ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ. ಬಳಿಕ ಮಂಗಳೂರಿನಿಂದ ಉಡುಪಿ ಕಡೆ ಮೆರವಣಿಗೆ ಮೂಲಕ ಪೇಜಾವರ ವಿಶ್ವಪ್ರಸನ್ನ ತೀರ್ಥರು ತೆರಳಿದರು.

    ಇದೇ ವೇಳೆ, ಶಾಸಕರಾದ ವೇದವ್ಯಾಸ ಕಾಮತ್, ಯಶ್‍ಪಾಲ್ ಸುವರ್ಣ, ವಿಶ್ವ ಹಿಂದೂ ಪರಿಷತ್ ರಾಜ್ಯಾಧ್ಯಕ್ಷ ಪ್ರೊ.ಎಂ.ಬಿ ಪುರಾಣಿಕ್ ಅವರಿಂದ ಶ್ರೀಗಳಿಗೆ ವಿಶೇಷ ಗೌರವ ನೀಡಲಾಯಿತು. ಇದನ್ನೂ ಓದಿ: ನನಗೆ ಕರ್ನಾಟಕ ಸಾಹಿತ್ಯ ಅಕಾಡೆಮಿ ಸದಸ್ಯತ್ವ ಬೇಡ: ಹೆಸರು ಕೈಬಿಡುವಂತೆ ಸಿಎಂಗೆ ಅಕ್ಕಯ್‌ ಪದ್ಮಶಾಲಿ ಪತ್ರ

  • ಅಯೋಧ್ಯೆಯಲ್ಲಿ ರಾಮ ಮಂದಿರ, ಮಸೀದಿ ಎರಡು ಆಗಬೇಕು: ಪೇಜಾವರ ಶ್ರೀ

    ಅಯೋಧ್ಯೆಯಲ್ಲಿ ರಾಮ ಮಂದಿರ, ಮಸೀದಿ ಎರಡು ಆಗಬೇಕು: ಪೇಜಾವರ ಶ್ರೀ

    ಬೆಳಗಾವಿ: ಅಯೋಧ್ಯೆಯಲ್ಲಿ ರಾಮ ಮಂದಿರ, ಮಸೀದಿ ಎರಡು ಆಗಬೇಕು ಎಂದು ಉಡುಪಿ ಪೇಜಾವರ ಮಠದ ವಿಶ್ವೇಶತೀರ್ಥ ಸ್ವಾಮೀಜಿ ಹೇಳಿದ್ದಾರೆ.

    ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಮಂದಿರದಿಂದ ಸ್ವಲ್ಪ ದೂರದಲ್ಲಿ ಮಸೀದಿ ನಿರ್ಮಾಣವಾಗಬೇಕು. ಸಂಧಾನ ಮೂಲಕದ ವಿವಾದ ಇತ್ಯರ್ಥವಾದರೆ ಉತ್ತಮ. ಇಲ್ಲವಾದಲ್ಲಿ ಕೇಂದ್ರ ಸರ್ಕಾರ ಉತ್ತಮ ನಿರ್ಧಾರ ಕೈಗೊಳ್ಳಬೇಕು ಎಂದು ತಿಳಿಸಿದರು.

    ಪ್ರಯಾಗ್‍ರಾಜ್‍ನಲ್ಲಿ ನಡೆದ ಹಿಂದೂಗಳ ಸಮ್ಮೇಳನದಲ್ಲಿ ರಾಮಮಂದಿರದ ಬಗ್ಗೆ ಚರ್ಚೆ ನಡೆದಿದೆ. 4 ತಿಂಗಳು ಚುನಾವಣೆ ಸಂದರ್ಭದಲ್ಲಿ ಈ ಬಗ್ಗೆ ಚರ್ಚೆ ಬೇಡ ಎಂದು ನಿರ್ಧರಿಸಲಾಗಿದೆ ಎಂದು ಹೇಳಿದರು.

    ಬಿಜೆಪಿಗೆ ಲೋಕಸಭೆಯಲ್ಲಿ ಬಹುಮತ ಇದ್ದರೂ ರಾಜ್ಯಸಭೆಯಲ್ಲಿ ಇಲ್ಲ. ಸುಪ್ರೀಂ ಕೋರ್ಟ್ ನಲ್ಲೂ ಪ್ರಕರಣದ ವಿಚಾರಣೆ ನಡೆಯುತ್ತಿದೆ. ಇಂತಹ ಸಂದರ್ಭದಲ್ಲಿ ಸರ್ಕಾರ ರಾಮ ಮಂದಿರದ ಬಗ್ಗೆ ಏನು ನಿರ್ಧಾರ ಕೈಗೊಳ್ಳಲು ಸಾಧ್ಯವಿಲ್ಲ ಎಂದರು.

  • ಹಿಂದೂ ಧರ್ಮದ ಪ್ರಚಾರ ನನ್ನ ಕೆಲ್ಸ, ರಾಜಕೀಯ ಗೊತ್ತಾಗಲ್ಲ: ಪೇಜಾವರ ಶ್ರೀ

    ಹಿಂದೂ ಧರ್ಮದ ಪ್ರಚಾರ ನನ್ನ ಕೆಲ್ಸ, ರಾಜಕೀಯ ಗೊತ್ತಾಗಲ್ಲ: ಪೇಜಾವರ ಶ್ರೀ

    ಕೊಪ್ಪಳ: ಹಿಂದೂ ಧರ್ಮದ ಬಗ್ಗೆ ಪ್ರಚಾರ ಮಾಡುವದು ನನ್ನ ಕೆಲಸ ನನಗೆ ರಾಜಕೀಯ ಗೊತ್ತಾಗಲ್ಲ ಎಂದ ಪೇಜಾವರ ಶ್ರೀಗಳು ಹೇಳಿದ್ದಾರೆ.

    ಗಂಗಾವತಿಯ ಅನೆಗುಂದಿ ಬಳಿ ಇರುವ ನವ ವೃಂದಾವನಕ್ಕೆ ಆಗಮಿಸಿದ್ದ ಶ್ರೀಗಳು ಮಾಧ್ಯಮಗಳೊಂದಿಗೆ ಮಾತನಾಡಿದರು. ಸದ್ಯದ ಚುನಾವಣೆಯಿಂದ ನಾನು ತಟಸ್ಥನಾಗಿದ್ದೇನೆ. ಎಲ್ಲ ಪಕ್ಷದಲ್ಲೂ ನನ್ನ ಶಿಷ್ಯರಿದ್ದಾರೆ. ನಾನು ರಾಜಕೀಯ ಬಿಟ್ಟಿದ್ದೇನೆ, ಕೇಳಿದರೆ ಮಾತ್ರ ಸಲಹೆ ಕೊಡುತ್ತೇನೆ ಎಂದರು.

    ಇದೇ ವೇಳೆ ಮಾಧ್ಯಮಗಳ ಕುಟುಂಬ ರಾಜಕಾರಣದ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿ, ಎಲ್ಲಾ ಪಕ್ಷದಲ್ಲೂ ಕುಟುಂಬ ರಾಜಕರಾಣ ಇದೆ. ಕಾಂಗ್ರೆಸ್, ಜೆಡಿಎಸ್ ಪಕ್ಷದಲ್ಲೂ ಕುಟುಂಬ ರಾಜಕಾರಣ ಇದೆ ಎಂದರು. ಅಲ್ಲದೇ ಮೋದಿಯವರು ಕರ್ನಾಟಕದಿಂದ ಸ್ಪರ್ಧೆ ಮಾಡುವುದು ಪಕ್ಷದ ವಿಷಯ. ಚುನಾವಣೆ ಸಮಯ ಇರುವುದಿರಂದ ರಾಜಕೀಯವಾಗಿ ನನ್ನ ಹೆಚ್ಚು ಪ್ರತಿಕ್ರಿಯೆ ನೀಡಲ್ಲ. ಹಿಂದೂ ಧರ್ಮದ ಬಗ್ಗೆ ಪ್ರಚಾರ ಮಾಡುವದು ನನ್ನ ಕೆಲಸ. ನನಗೆ ರಾಜಕೀಯ ಗೊತ್ತಾಗಲ್ಲ. ದೇಶದ ಹಿತ, ದೇಶದ ಅಭಿವೃದ್ಧಿ ಮುಖ್ಯ ಎಂದು ತಿಳಿಸಿದರು.

  • ರಾಮಮಂದಿರ ಅಯೋಧ್ಯೆಯಲ್ಲಿ ಇದ್ದದ್ದು ದೇವರಿದ್ದಷ್ಟೇ ನಿಶ್ಚಿತ: ಪೇಜಾವರ ಶ್ರೀ

    ರಾಮಮಂದಿರ ಅಯೋಧ್ಯೆಯಲ್ಲಿ ಇದ್ದದ್ದು ದೇವರಿದ್ದಷ್ಟೇ ನಿಶ್ಚಿತ: ಪೇಜಾವರ ಶ್ರೀ

    ಉಡುಪಿ: ರಾಮಮಂದಿರ ವಿಚಾರದಲ್ಲಿ ಸಂಧಾನಕ್ಕೆ ಸೂಚಿಸಿರುವ ಸುಪ್ರೀಂ ಕೋರ್ಟ್ ಆದೇಶವನ್ನು ಪೇಜಾವರ ಸ್ವಾಮೀಜಿ ಸ್ವಾಗತಿಸಿದ್ದಾರೆ. ಈ ಬಗ್ಗೆ ತಮ್ಮ ಅಭಿಪ್ರಾಯವನ್ನು ಸ್ಪಷ್ಟಪಡಿಸಿದ್ದಾರೆ.

    ಈ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಂಧಾನ ವಿಚಾರದಲ್ಲಿ ನನಗೆ ನನಗೆ ಎರಡು ಅಭಿಪ್ರಾಯಗಳಿದ್ದು, ದೇವರು ಇದ್ದಾನೋ ಇಲ್ಲವೋ ಎಂಬ ಬಗ್ಗೆ ಸಂಧಾನ ಬೇಕಾಗಿಲ್ಲ ಎಂಬುವುದು ನನ್ನ ಅಭಿಪ್ರಾಯ. ರಾಮಮಂದಿರ ಅಯೋಧ್ಯೆಯಲ್ಲಿ ಇದ್ದದ್ದು ದೇವರಿದ್ದಷ್ಟೇ ನಿಶ್ಚಿತ. ಈ ನಿಶ್ಚಿತವಾಗಿರುವುದರ ಬಗ್ಗೆ ಮತ್ತೆ ಸಂಧಾನ ಏತಕ್ಕೆ? ಆದರೂ ಸುಪ್ರೀಂ ಕೋರ್ಟ್ ಸಂಧಾನಕ್ಕೆ ಸೂಚಿಸಿದೆ. ಸಂಧಾನ ಸಂಘರ್ಷವಿಲ್ಲದೆ ಯಶಸ್ವಿಯಾಗಲಿ. ಮುಸಲ್ಮಾನರು ಮತ್ತು ಹಿಂದುಗಳಿಗೆ ಅಸಮಾಧಾನ ಆಗದಂತೆ ಸಂಧಾನವಾಗಲಿ ಎಂದರು.

    ಒಂದೊಮ್ಮೆ ಸಂಧಾನದಲ್ಲಿ ಸಮಸ್ಯೆ ಬಗೆಹರಿಯದಿದ್ದರೆ ಕೋರ್ಟ್ ಈ ಬಗ್ಗೆ ತೀರ್ಮಾನ ತೆಗೆದುಕೊಳ್ಳಬೇಕು. ಸಂಧಾನ ಎರಡೂ ಸಮುದಾಯಕ್ಕೆ ಸಮ್ಮತವಾಗಿರಬೇಕು. ಆದರೆ ಇಬ್ಬರಿಗೂ ಸಮ್ಮತವಾಗುವ ಸಂಧಾನ ಆಗುವ ಬಗ್ಗೆ ನನಗೆ ಸಂಶಯವಿದೆ. ಸಂಧಾನ ಆಗದಿದ್ದರೆ ನ್ಯಾಯದ ರೀತಿಯಲ್ಲಿ ಮಂದಿರ ನಿರ್ಮಾಣ ಆಗಲಿ ಎಂದರು.

    ಸಂಧಾನ ಸಮಿತಿಯಲ್ಲಿರುವ ರವಿಶಂಕರ್ ಗುರೂಜಿ ಪ್ರಯತ್ನಕ್ಕೆ ಸಂಪೂರ್ಣ ಬೆಂಬಲವಿದೆ. ರವಿಶಂಕರ್ ಗುರೂಜಿಗೆ ಈಗ ಹೆಚ್ಚು ಬೆಲೆ ಬಂದಿದೆ. ರಾಮಮಂದಿರ ನಿರ್ಮಾಣ ವಿಳಂಬವಾಗಬಾರದು. ಈ ಹಿಂದೆ ವೈಯಕ್ತಿಕವಾಗಿ ರವಿಶಂಕರ್ ಗುರೂಜಿ ಅವರು ಪ್ರಯತ್ನ ನಡೆಸಿದ್ದರು. ಆದರೆ ಇದು ಅಧಿಕೃತವಾಗಿದೆ. ನ್ಯಾಯಾಲಯದ ಮೂಲಕ ಬಂದಿರುವುದರಿಂದ ಅವರಿಗೆ ಹೆಚ್ಚು ಬಲ ಬಂದಿದೆ. ಆದರೆ ಇದು ವಿಳಂಬ ಮಾಡುವುದು ಬೇಡ ಎಂದು ಕಿವಿ ಮಾತು ಹೇಳಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ನಾನು ಅಂಬೇಡ್ಕರ್ ಗೆ ಅವಮಾನ ಮಾಡಿಲ್ಲ: ಪೇಜಾವರಶ್ರೀ

    ನಾನು ಅಂಬೇಡ್ಕರ್ ಗೆ ಅವಮಾನ ಮಾಡಿಲ್ಲ: ಪೇಜಾವರಶ್ರೀ

    ಉಡುಪಿ: ನಾನು ಸಂವಿಧಾನ ಬದಲಿಸಿ ಎಂದು ಧರ್ಮ ಸಂಸದ್ ನಲ್ಲಿ ಹೇಳಿಲ್ಲ. ಅಂಬೇಡ್ಕರ್ ಗೆ ಅಪಮಾನ ಮಾಡಿಲ್ಲ ಎಂದು ಪೇಜಾವರ ಮಠಾಧೀಶ ವಿಶ್ವೇಶತೀರ್ಥ ಸ್ವಾಮೀಜಿ ಸ್ಪಷ್ಟಪಡಿಸಿದ್ದಾರೆ.

    ಉಡುಪಿಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಸ್ವಾಮೀಜಿ, ಸಂವಿಧಾನದಲ್ಲಿ ತಿದ್ದುಪಡಿ ಆಗಬೇಕೆಂದು ನಾನು ಹೇಳಿದೆ. ಆದರೆ ದಲಿತರ ಮೀಸಲಾತಿ ವಿಚಾರ ನಾನು ಮಾತನಾಡಲೇ ಇಲ್ಲ. ದಲಿತರಿಗೆ ಮೀಸಲಾತಿ ವಿಸ್ತರಿಸಬೇಕು ಎಂದು ಹೇಳುವವರಲ್ಲಿ ನಾನು ಒಬ್ಬ. ಸಂವಿಧಾನಕ್ಕೆ ಅಪಮಾನ ಮಾಡಿದರೆ ದೇಶಕ್ಕೆ ಅಪಮಾನ ಮಾಡಿದಂತೆ ಎಂದರು.

    ವೇದಿಕೆಯಲ್ಲಿದ್ದ ಸಾಹಿತಿಗಳಿಗೂ ಇದು ಅರ್ಥವಾಗಲಿಲ್ಲವಲ್ಲ ಅನ್ನುವುದೇ ವಿಪರ್ಯಾಸ. ಸಂವಿಧಾನ ಅಂಬೇಡ್ಕರ್ ಒಬ್ಬರೇ ರಚನೆ ಮಾಡಿದ್ದಲ್ಲ. ಸಂವಿಧಾನ ರಚನಾ ಸಮಿತಿಯಲ್ಲಿ ದೇಶದ ಎಲ್ಲಾ ಪ್ರತಿನಿಧಿಗಳು ಇದ್ದರು. ಸಂವಿಧಾನ ರಚನಾ ಸಮಿತಿಯಲ್ಲಿ ಅಲ್ಲಾಡಿ ಕೃಷ್ಣಸ್ವಾಮಿ, ಅಯ್ಯರ್, ಕೆ.ಎಂ ಮುನ್ಶಿ, ಬೆನಗಲ್, ಅಂಬೇಡ್ಕರ್ ಕೆಲಸಕ್ಕೆ ಕೈಜೋಡಿಸಿದ್ದ ಪ್ರಮುಖರು. ತಮ್ಮ ಹೇಳಿಕೆ ಹೋರಾಟಗಾರ ದ್ವಾರಕನಾಥ್ ರಂತ ದೊಡ್ಡ ವಕೀಲರಿಗೂ ಅರ್ಥವಾಗಲಿಲ್ಲ ಎಂಬುವುದೇ ವಿಪರ್ಯಾಸ ಎಂದು ಹೇಳಿದರು.

    ಧರ್ಮದ ಹೆಸರಲ್ಲಿ ವಿಭಜನೆ ಬೇಡ. ಚರ್ಚ್-ಮಸೀದಿಗಿರುವ ಸ್ವಾಯತ್ತತೆ ಎಲ್ಲರಿಗೂ ಬರಲಿ. ಶಾದಿಭಾಗ್ಯ ದಲಿತರಿಗೆ ಯಾಕಿಲ್ಲ, ದಲಿತರಲ್ಲಿ ಬಡವರು ಇಲ್ವಾ ಎಂದು ಇದೇ ವೇಳೆ ಪ್ರಶ್ನಿಸಿದರು.

    ಉಡುಪಿ ಧರ್ಮ ಸಂಸದ್ ಯಶಸ್ವಿಯಾಗಿದೆ. ಧರ್ಮ ಸಂಸದ್ ಯಶಸ್ವಿಯಾದದ್ದನ್ನು ಬುದ್ಧಿ ಜೀವಿಗಳಿಗೆ, ಸಾಹಿತಿಗಳಿಗೆ ಸಹಿಸಲಾಗುತ್ತಿಲ್ಲ. ಸಾಹಿತಿಗಳಿಂದ ಮೊಸರಲ್ಲಿ ಕಲ್ಲು ಹುಡುಕುವ ಕೆಲಸವಾಗುತ್ತಿದೆ. ಪಾಪದ ದಲಿತರನ್ನು ಇವರು ವಿವಾದವೆಂದು ಹೇಳಿ ಎಳೆದು ತರುತ್ತಿದ್ದಾರೆ ಎಂದು ಆರೋಪಿಸಿದರು.

    ಪೇಜಾವರ ಶ್ರೀ ಧರ್ಮ ಸಂಸದ್ ಕಾರ್ಯಕ್ರಮದಲ್ಲಿ ಡಾ. ಬಿ.ಆರ್ ಅಂಬೇಡ್ಕರ್ ಗೆ ಅವಮಾನ ಮಾಡಿದ್ದಾರೆ ಎಂದು ಆರೋಪಿಸಿ ರಾಜ್ಯಾದ್ಯಂತ ಹಲವು ದಲಿತ ಸಂಘಟನೆಗಳು ಪ್ರತಿಭಟನೆ ನಡೆಸಿದ್ದವು.