Tag: pejawar shree

  • ಪೇಜಾವರ ಶ್ರೀ ಬಗ್ಗೆ ಹರಿಪ್ರಸಾದ್ ವಿವಾದಾತ್ಮಕ ಹೇಳಿಕೆ – ಬಾಗಲಕೋಟೆಯಲ್ಲಿ ಬ್ರಾಹ್ಮಣ ಸಮಾಜ ಆಕ್ರೋಶ

    ಪೇಜಾವರ ಶ್ರೀ ಬಗ್ಗೆ ಹರಿಪ್ರಸಾದ್ ವಿವಾದಾತ್ಮಕ ಹೇಳಿಕೆ – ಬಾಗಲಕೋಟೆಯಲ್ಲಿ ಬ್ರಾಹ್ಮಣ ಸಮಾಜ ಆಕ್ರೋಶ

    ಬಾಗಲಕೋಟೆ: ಉಡುಪಿ ಪೇಜಾವರ ಮಠದ ವಿಶ್ವ ಪ್ರಸನ್ನ ತೀರ್ಥ ಸ್ವಾಮೀಜಿ (Udupi Pejawar Vishwa Prasanna Teertha Swamiji) ಕುರಿತಾಗಿ ಕಾಂಗ್ರೆಸ್ ಮುಖಂಡ ಬಿ.ಕೆ.ಹರಿಪ್ರಸಾದ್ (BK Hariprasad) ನೀಡಿರುವ ಹೇಳಿಕೆ ಖಂಡಿಸಿ ಇಂದು ಬಾಗಲಕೋಟೆಯ (Bagalkot) ಬ್ರಾಹ್ಮಣ ತರುಣ ಸಂಘದ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.

    ಜಿಲ್ಲಾಡಳಿತ ಸಭಾಭವನದ ಎದುರು ಜಮಾಯಿಸಿದ ಬ್ರಾಹ್ಮಣ ಸಮಾಜದವರು (Brahmin Community Members) ಬಿ.ಕೆ.ಹರಿಪ್ರಸಾದ್ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

    ಸಂಘದ ಅಧ್ಯಕ್ಷ ನಾರಾಯಣ ದೇಸಾಯಿ ಅವರು ಮಾತನಾಡಿ, ರಾಮಮಂದಿರ (Ram Mandir) ನಿರ್ಮಾಣ ಹೋರಾಟದಲ್ಲಿ ಪೇಜಾವರ ಮಠದ ಹಿರಿಯ ಶ್ರೀಗಳು ನೇತೃತ್ವ ವಹಿಸಿದ್ದರೆ, ಮೂರ್ತಿ ಪ್ರತಿಷ್ಠಾಪನೆಯನ್ನು ಈಗಿನ ವಿಶ್ವಪ್ರಸನ್ನತೀರ್ಥರು ನೆರವೇರಿಸಿದ್ದರು. ಶ್ರೀಮಠಕ್ಕೆ ಭವ್ಯ ಪರಂಪರೆಯಿದ್ದು ಅವರ ಕುರಿತಾಗಿ ಮಾತನಾಡುವಾಗ ಎಚ್ಚರವಹಿಸಬೇಕು ಎಂದು ಆಕ್ರೋಶ ಹೊರ ಹಾಕಿದರು.

    ಬ್ರಾಹ್ಮಣ ಸಮಾಜದ ತ್ರಿಮಸ್ಥ ಸ್ವಾಮೀಜಿ ಹಾಗೂ ಮುಖಂಡರ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿದರೆ ಇನ್ನು ಸಮಾಜ ಸಹಿಸುವುದಿಲ್ಲ. ಸಮಾಜದ ಯುವಕರು ಪ್ರತಿಭಟಿಸಲು ಸಜ್ಜಾಗಿದ್ದು, ಮತದಾನದ ಮೂಲಕ ಉತ್ತರ ನೀಡುವುದು ಸಹ ಸಮಾಜಕ್ಕೆ ತಿಳಿದಿದೆ ಎಂದು ಎಚ್ಚರಿಕೆ ನೀಡಿದರು.

    ಪಂಡಿತ್ ರಘೋತ್ತಮಾಚಾರ್ಯ ನಾಗಸಂಪಿಗೆ, ಪಂ.ಭೀಮಸೇನಾಚಾರ್ಯ ಪಾಂಡುರಂಗಿ ಅವರು ಮಾತನಾಡಿ, ಪೇಜಾವರ ಶ್ರೀಗಳು ಎಲ್ಲ ಸಮಾಜದೊಡನೆ ಉತ್ತಮ ಬಾಂಧವ್ಯ ಹೊಂದಿದ್ದಾರೆ. ಗೋಶಾಲೆ, ದೀನದಲಿತರ ಏಳಿಗೆಗೆ ಶ್ರಮಿಸಿದ್ದಾರೆ. ಅಂಥವರ ಬಗ್ಗೆ ರಾಜಕಾರಣಿಗಳು ಮಾತನಾಡುವಾಗ ಎಚ್ಚರದಿಂದ ಇರಬೇಕೆಂದು ಹೇಳಿದರು. ಇದನ್ನೂ ಓದಿ: ಜಾತ್ಯಾತೀತ ರಾಷ್ಟ್ರದಲ್ಲಿ ಜಾತಿ ಗಣತಿ ಯಾಕೆ? – ವಿಶ್ವಪ್ರಸನ್ನ ತೀರ್ಥ ಶ್ರೀ

    ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ರಾಜ್ಯ ಉಪಾಧ್ಯಕ್ಷ ಡಾ.ಗಿರೀಶ ಮಸೂರಕರ‌ ಮಾತನಾಡಿ, ಬ್ರಾಹ್ಮಣರ ಸಂಖ್ಯೆ ಕಡಿಮೆ ಎನ್ನುವ ಮನೋಭಾವದಲ್ಲಿ ಸಮಾಜದ ಕುರಿತಾಗಿ ಲಘುವಾಗಿ ಮಾತನಾಡಿದರೆ ಅದನ್ನು ಸಹಿಸಲು ಸಾಧ್ಯವಿಲ್ಲ. ಸಮಾಜ ಪರಿವರ್ತನೆಯ ತಾಕತ್ತು ನಮಗಿದೆ. ಸಂದರ್ಭ ಬಂದಾಗ ಉತ್ತರಿಸುತ್ತೇವೆ ಎಂದರು.

    ಬಿ. ಕೆ. ಹರಿಪ್ರಸಾದ್ ತಮ್ಮ ಮಾತನ್ನು ಹಿಂಪಡೆಯದಿದ್ದರೆ ಮುಂದಿನ ದಿನಗಳಲ್ಲಿ ಹೋರಾಟ ಉಗ್ರ ಸ್ವರೂಪ ಪಡೆದುಕೊಳ್ಳಲಿದೆ ಎಂದು ಎಚ್ಚರಿಕೆ‌ ನೀಡಿದರು.

    ಹರಿಪ್ರಸಾದ್‌ ಹೇಳಿದ್ದೇನು?
    ಜಾತಿಗಣತಿ ವಿಚಾರದ ಬಗ್ಗೆ ಶಿವಮೊಗ್ಗದಲ್ಲಿ ಪ್ರತಿಕ್ರಿಯಿಸಿದ್ದ ಪೇಜಾವರ ಶ್ರೀ, ಸರ್ಕಾರ ಹಣ ಖರ್ಚು ಮಾಡಿ ಜಾತಿ ಜನಗಣತಿ (Caste Census) ಮಾಡಿ ಮುಚ್ಚಿಟ್ಟಿದೆ. ಜಾತ್ಯಾತೀತವಾಗಿರುವ (Secular) ರಾಷ್ಟ್ರದಲ್ಲಿ ಜಾತಿ ಗಣತಿ ಯಾಕೆ ಬೇಕು ಎಂದು ಪ್ರಶ್ನಿಸಿದ್ದರು. ಒಂದು ಕಡೆ ಜಾತಿ ಆಧಾರದಲ್ಲಿ ರಾಜಕೀಯ ಬೇಡ ಎನ್ನುತ್ತೀರಿ. ಇನ್ನೊಂದು ಕಡೆ ಜಾತಿಗಣತಿ ಎನ್ನುತ್ತೀರಿ. ಈ ಜಾತಿ ಗಣತಿ ಯಾಕೆ ಎನ್ನುವುದು ತಿಳಿಯುತ್ತಿಲ್ಲ ಎಂದಿದ್ದರು.

    ಈ ವಿಚಾರಕ್ಕೆ ಪ್ರತಿಕ್ರಿಯಿಸಿದ್ದ ಹರಿಪ್ರಸಾದ್‌, ಪೇಜಾವರ ಸ್ವಾಮೀಜಿ ಅವರು ಪುಡಿ ರಾಜಕಾರಣಿಗಳಂತೆ ಹೇಳಿಕೆ ನೀಡುತ್ತಿದ್ದಾರೆ. ಪೇಜಾವರ ಸ್ವಾಮೀಜಿ ಅವರು ಕಾವಿ ಬಟ್ಟೆ ತ್ಯಜಿಸಿ ಬಂದರೆ ಅವರಿಗೆ ನಾವು ತಕ್ಕ ಉತ್ತರ ನೀಡುತ್ತೇವೆ ಎಂದು ಹೇಳಿದ್ದರು.

     

  • ಇನ್ನೊಂದು ವರ್ಷದಲ್ಲಿ ರಾಮಮಂದಿರ ಪೂರ್ಣ: ಪೇಜಾವರ ಶ್ರೀ

    ಇನ್ನೊಂದು ವರ್ಷದಲ್ಲಿ ರಾಮಮಂದಿರ ಪೂರ್ಣ: ಪೇಜಾವರ ಶ್ರೀ

    ವಿಜಯಪುರ: ಇನ್ನೊಂದು ವರ್ಷದಲ್ಲಿ ಅಯೋಧ್ಯೆಯ ರಾಮಮಂದಿರ (Ayodhya Ram Mandir) ಕಾಮಗಾರಿ ಪೂರ್ಣಗೊಳ್ಳಲಿದೆ ಎಂದು ಉಡುಪಿಯ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ (Pejawar shree) ಹೇಳಿದ್ದಾರೆ.

    ವಿಜಯಪುರದಲ್ಲಿ (Vijayapura) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಯೋಧ್ಯೆಯ ರಾಮ ಮಂದಿರ ನಿರ್ಮಾಣ ಕಾಮಗಾರಿ ಇನ್ನೂ ಮುಕ್ತಾಯವಾಗಿಲ್ಲ. ಇದೇ ಕಾರಣಕ್ಕೆ ಮಳೆ ಬಂದಾಗ ಮಂದಿರ ಸೋರಿದೆ. ಇನ್ನೂ ಒಂದು ವರ್ಷದಲ್ಲಿ ಕಾಮಗಾರಿ ಪೂರ್ಣಗೊಳ್ಳಲಿದೆ ಎಂದು ಅವರು ತಿಳಿಸಿದ್ದಾರೆ. ಇದನ್ನೂ ಓದಿ: ಸಹಿಷ್ಣು ಆಗಿರುವವರನ್ನು ಕೆದಕುವುದು ಕೆಲವರ ಚಾಳಿ – ರಾಹುಲ್ ಹೇಳಿಕೆಗೆ ಪೇಜಾವರ ಶ್ರೀ ಕಿಡಿ

    ಇಂದು ರಾಜಕೀಯ ಪಕ್ಷಗಳಿಂದ ಜಾತಿ ವ್ಯವಸ್ಥೆ ಸಮಸ್ಯೆಯಾಗಿದೆ. ಆಯಾ ಪಂಗಡಗಳಿಗೆ ಅನ್ಯಾಯವಾದಾಗ ಆ ಪಂಗಡಗಳ ಮಠಾಧಿಪತಿ ಗಳು ವಿರೋಧಿಸುತ್ತಾರೆ. ಜಾತಿ ಆಧಾರದ ಮೇಲೆ ಸೀಟು, ಟಿಕೆಟ್ ಹಾಗೂ ನಿಗಮ ಮಂಡಳಿ ನೀಡುವುದಾದರೆ, ಮಠಾಧೀಶರು ಮಾತಾಡುವುದು ಸರಿ, ಮೊದಲು ಅಲ್ಲಿ ಸರಿಯಾಗಲಿ, ಆಗ ಇಲ್ಲಿ ಸರಿಯಾಗುತ್ತದೆ. ಆಧಿಕಾರದಲ್ಲಿ ಸಂವಿಧಾನ ಬದ್ಧವಾಗಿ ಕಾನೂನು ಬದ್ಧವಾಗಿ ಆಡಳಿತ ಮಾಡಬೇಕು ಎಂದು ಅವರು ಸಲಹೆ ನಿಡಿದ್ದಾರೆ.

    ಚುನಾಯಿತವಾಗಿ ಬಂದ ಬಳಿಕ ಯಾವುದೇ ಒಂದು ಪಕ್ಷದ ಸರ್ಕಾರ ಆಗಲ್ಲಾ. ಅದು ಎಲ್ಲರ ಸರ್ಕಾರವಾಗುತ್ತದೆ. ನಮ್ಮ ಪಕ್ಷ, ಪ್ರತಿಪಕ್ಷ ಎಂದು ಸರ್ಕಾರ ತಾರತಮ್ಯ ಮಾಡುವುದು ಸರಿಯಲ್ಲ ಎಂದಿದ್ದಾರೆ. ಇದನ್ನೂ ಓದಿ: ʻವಿಶ್ವʼವಿಜಯಯಾತ್ರೆಗೆ ವರುಣ ಅಡ್ಡಿ – ಮಳೆಯಲ್ಲೂ ಕುಗ್ಗದ ಟೀಂ ಇಂಡಿಯಾ ಅಭಿಮಾನಿಗಳ ಉತ್ಸಾಹ

  • ರಾಮ ಮಂದಿರದ ಜೊತೆ ಬಡವರಿಗೆ ಮನೆ ನಿರ್ಮಿಸೋಣ: ವರ್ಷದೊಳಗೆ 6 ಮನೆ ಕಟ್ಟಿಸಲು ಪೇಜಾವರ ಶ್ರೀ ನಿರ್ಧಾರ

    ರಾಮ ಮಂದಿರದ ಜೊತೆ ಬಡವರಿಗೆ ಮನೆ ನಿರ್ಮಿಸೋಣ: ವರ್ಷದೊಳಗೆ 6 ಮನೆ ಕಟ್ಟಿಸಲು ಪೇಜಾವರ ಶ್ರೀ ನಿರ್ಧಾರ

    ಉಡುಪಿ: ರಾಮಮಂದಿರ (Ram Mandir) ನಿರ್ಮಾಣದ ವೇಳೆ ರಾಮ ರಾಜ್ಯ ನಿರ್ಮಾಣದ ಸಂಕಲ್ಪ ಮಾಡೋಣ. ಒಂದು ವರ್ಷ ದೇಶಾದ್ಯಂತ ರಾಮರಾಜ್ಯ ನಿರ್ಮಾಣಕ್ಕೆ ಮನೆ ನಿರ್ಮಾಣ, ಆರೋಗ್ಯ ಸೇವೆ, ಶಿಕ್ಷಣ, ಗೋವು ಸೇವೆಗೆ ಒತ್ತು ಕೊಡುವ ಸಂಕಲ್ಪವನ್ನು ಪೇಜಾವರ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ (Pejawar Shree) ಘೋಷಿಸಿದ್ದಾರೆ.

    ಉಡುಪಿಯಲ್ಲಿ (Udupi) ಮಾತನಾಡಿದ ಅವರು, ರಾಷ್ಟ್ರಾದ್ಯಂತ ರಾಮಸೇವಾ ಸಂಕಲ್ಪ ಕೈಗೊಳ್ಳಲು ಪ್ರಧಾನಿಗೆ ಸೂಚನೆ ನೀಡುತ್ತೇನೆ. ದೇವಾಲಯದ ಹುಂಡಿಗೆ ಹಾಕುವ ಹಣ ಹೇಗೆ ವಿನಿಯೋಗ ಆಗುತ್ತೋ ಗೊತ್ತಿಲ್ಲ. ರಾಮ ರಾಜ್ಯಕ್ಕೋಸ್ಕರ ರಾಮಮಂದಿರದ ನಿರ್ಮಾಣ ಆಗುತ್ತಿದೆ. ಮಂದಿರ ಕಟ್ಟುವ ಜೊತೆಗೆ ಬಡವರಿಗೆ ಮನೆ ಕಟ್ಟಿಸಿಕೊಡುವ ಸಂಕಲ್ಪ ಮಾಡೋಣ ಎಂದು ಸ್ವಾಮೀಜಿ ಕರೆ ನೀಡಿದರು.

    ಒಂದು ವರ್ಷದ ಅವಧಿಯಲ್ಲಿ 6 ಮನೆ ನಿರ್ಮಿಸಿ ಕೊಡಲು ಸಂಕಲ್ಪಿಸಿದ್ದೇವೆ. ಒಂದು ವರ್ಷದ ಕಾಲಾವಕಾಶದೊಳಗೆ ಬಡವರಿಗೆ ಮನೆ ನಿರ್ಮಾಣ ಮಾಡೋಣ. ಮಂದಿರದಿಂದ ದೇಶಕ್ಕೇನು ಲಾಭ ಅಂತ ಜನ ಕೇಳ್ತಾರೆ? ಮಂದಿರದ ಜೊತೆ ದೇಶದ ಮಂದಿಗೂ ಸಹಾಯ ಮಾಡೋಣ. ಪ್ರಧಾನಿ ಮೋದಿ (Narendra Modi) ಅವರು ಒಂದು ದಿನವನ್ನು ಸಂಕಲ್ಪ ದಿನ ಎಂದು ಘೋಷಿಸಬೇಕು ಎಂದು ಒತ್ತಾಯಿಸಿದರು.

    ದೇಶದ ಭಗವದ್ಭಕ್ತರು, ದೇಶಪ್ರೇಮಿಗಳು ಯೋಜನೆಗೆ ಕೈಜೋಡಿಸಬೇಕು. ಈ ಸೇವಾ ಕಾರ್ಯಕ್ಕೆ ಒಂದು ಆಪ್ ಸಿದ್ಧ ಮಾಡಬೇಕು. ಪ್ರತಿಜಿಲ್ಲೆಯ ರಾಜ್ಯದಲ್ಲಿ ಕೈಗೊಂಡ ಕೆಲಸ ದಾಖಲಾಗಬೇಕು. ಒಂದು ವರ್ಷದ ಉತ್ತಮ ಕಾರ್ಯಗಳನ್ನು ಶ್ರೀರಾಮ ದೇವರಿಗೆ ಅರ್ಪಿಸೋಣ. ಮನೆ ನಿರ್ಮಾಣದ ಜೊತೆ ಗೋವು, ವಿದ್ಯಾರ್ಥಿಗಳು, ರೋಗಿಗಳ ದತ್ತು ಸ್ವೀಕಾರ ಮಾಡೋಣ. ದೇಶದ ಉದ್ದಗಲದಲ್ಲಿ ಜನರಲ್ಲಿ ಈ ಪರಿವರ್ತನೆ ಆಗಬೇಕು ಎಂದರು. ಇದನ್ನೂ ಓದಿ: 13 ಜನ ಸಚಿವರ ಸಿಡಿಗಳು ಚುನಾವಣೆ ಒಳಗೆ ಬಿಡುಗಡೆಯಾಗಲಿದೆ: ಸಿಎಂ ಇಬ್ರಾಹಿಂ ಹೊಸ ಬಾಂಬ್

    ದೇಶಾದ್ಯಂತ ಸೇವಾ ಕಾರ್ಯ ಐಚ್ಛಿಕವಾಗದೆ ಕಡ್ಡಾಯ ಆಗಬೇಕು. ಜೀವನದಲ್ಲಿ ವೈಭವದ ಆಚರಣೆಯ ಜೊತೆ ಬಡವರ ಬಗ್ಗೆ ಕನಿಕರ ತೋರೋಣ. ದೇವಭಕ್ತಿ ಮತ್ತು ದೇಶಭಕ್ತಿ ಬೇರೆ ಬೇರೆಯಲ್ಲ. ಈ ಯೋಜನೆಯ ಕುರಿತು ಪ್ರಧಾನಿ ಮೋದಿಯನ್ನು ಭೇಟಿಯಾಗಿ ಚರ್ಚೆ ಮಾಡುತ್ತೇನೆ ಎಂದು ಪೇಜಾವರ ಮಠಾಧೀಶರಾದ ವಿಶ್ವ ಪ್ರಸನ್ನ ತೀರ್ಥ ಸ್ವಾಮೀಜಿ ಹೇಳಿದರು. ಇದನ್ನೂ ಓದಿ: ಆರೋಗ್ಯ ಇಲಾಖೆಯ ಟೆಂಡರ್ ಕೊಡಿಸದ್ದಕ್ಕೆ ನನ್ನ ಮೇಲೆ ಭ್ರಷ್ಟಾಚಾರ ಆರೋಪ: ಶಾಸಕ ತಿಪ್ಪಾರೆಡ್ಡಿ

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಲಾಸ್ಟ್ ಪ್ರೋಗ್ರಾಂನಲ್ಲಿ ಮಕ್ಕಳ ಜೊತೆ ಪೇಜಾವರ ಶ್ರೀಗಳು

    ಲಾಸ್ಟ್ ಪ್ರೋಗ್ರಾಂನಲ್ಲಿ ಮಕ್ಕಳ ಜೊತೆ ಪೇಜಾವರ ಶ್ರೀಗಳು

    – ಡ್ಯಾನ್ಸ್ ನೋಡಿ ಆನಂದಿಸಿದ್ದ ಸ್ವಾಮೀಜಿ

    ಉಡುಪಿ: ಪೇಜಾವರ ಮಠಾಧೀಶ ವಿಶ್ವೇಶತೀರ್ಥ ಸ್ವಾಮೀಜಿ ಅವರಿಗೆ ದೇವರು, ಮಠ, ಎಷ್ಟು ಇಷ್ಟವೋ ಮಕ್ಕಳೆಂದರೂ ಅಷ್ಟೇ ಅಕ್ಕರೆ. ಸ್ವಾಮೀಜಿ ಮಣಿಪಾಲದ ಕೆಎಂಸಿ ಆಸ್ಪತ್ರೆ ಸೇರುವ ಕೆಲ ಗಂಟೆಗಳ ಹಿಂದೆ ತಮ್ಮದೇ ಮಠದ ಆನಂದ ತೀರ್ಥ ಶಾಲೆಯ ವಾರ್ಷಿಕೋತ್ಸವದಲ್ಲಿ ಭಾಗಿಯಾಗಿ ಖುಷಿಪಟ್ಟಿದ್ದರು.

    ಕಾರ್ಯಕ್ರಮದಲ್ಲಿ ಮಕ್ಕಳ ಡಾನ್ಸ್ ನೋಡಿ ಆನಂದಿಸಿದ್ದರು. ಪ್ರಶಸ್ತಿ ಕೊಡುವಾಗ ಪ್ರತಿಯೊಂದು ಮಗುವಿನ ಹೆಸರು ಮತ್ತು ಸಾಧನೆಯ ಬಗ್ಗೆ ಕೇಳುತ್ತಿದ್ದರು. ಸದಾ ನಗು ನಗುತ್ತಲೇ ಇರುವ, ಓಡಾಡುವ ಹಾಗೂ ಟೀಕೆಗಳಿಗೆ ನಕ್ಕು ಉತ್ತರ ಕೊಡುವ ಪೇಜಾವರ ಶ್ರೀಗಳು ಮಕ್ಕಳ ಜೊತೆ ಮಕ್ಕಳಾದ ವೀಡಿಯೋ ಪಬ್ಲಿಕ್ ಟಿವಿಗೆ ಲಭ್ಯವಾಗಿದೆ. ಇದನ್ನೂ ಓದಿ: ಪೇಜಾವರ ಶ್ರೀಗಳ ಬೃಂದಾವನದ ಮುಂದೆ ಶಿಷ್ಯ ವೃಂದದಿಂದ ಮಂತ್ರಪಟನೆ

    ವಿಶೇಷ ಅಂದರೆ ಪೇಜಾವರ ಶ್ರೀಗಳು ಕೊನೆಯದಾಗಿ ನೋಡಿದ್ದ ಮಕ್ಕಳ ಡಾನ್ಸ್ ನಲ್ಲಿ ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ ‘ಅರಮನೆ’ ಚಿತ್ರದ ‘ನಗು ನಗು’ ಹಾಡು ಎಂಬುದು ಮತ್ತೊಂದು ವಿಶೇಷವಾಗಿತ್ತು.

    ಮಹಾಸಂತ ಪೇಜಾವರ ವಿಶ್ವೇಶತೀರ್ಥ ಶ್ರೀಪಾದರು ಭಾನುವಾರ ಕೃಷ್ಣನಲ್ಲಿ ಲೀನರಾಗಿದ್ದಾರೆ. ಬೆಂಗಳೂರಿನ ವಿದ್ಯಾಪೀಠದಲ್ಲಿ ಪೇಜಾವರ ಶ್ರೀಗಳ ಅಂತಿಮ ವಿಧಿವಿಧಾನಗಳು ಮಾಧ್ವ ಪರಂಪರೆಗೆ ಅನುಗುಣವಾಗಿ ಮಾಡಲಾಗಿತ್ತು.

  • ಇಂದಿನಿಂದ ಭಕ್ತರಿಗೆ ಪೇಜಾವರ ಶ್ರೀಗಳ ಬೃಂದಾವನ ದರ್ಶನಕ್ಕೆ ಅವಕಾಶ

    ಇಂದಿನಿಂದ ಭಕ್ತರಿಗೆ ಪೇಜಾವರ ಶ್ರೀಗಳ ಬೃಂದಾವನ ದರ್ಶನಕ್ಕೆ ಅವಕಾಶ

    ಬೆಂಗಳೂರು: ಉಡುಪಿಯ ಪೇಜಾವರ ಶ್ರೀಗಳು ತಾವೇ ಕಟ್ಟಿ ಬೆಳೆಸಿದ ವಿದ್ಯಾಪೀಠದಲ್ಲಿ ಶ್ರೀ ಕೃಷ್ಣನ ಸನ್ನಿಧಾನದ ಪಕ್ಕದಲ್ಲೇ ಬೃಂದಾವನ ಪ್ರವೇಶ ಮಾಡಿದ್ದಾರೆ. ಇಂದಿನಿಂದ ಭಕ್ತರು ಶ್ರೀಗಳ ಬೃಂದಾವನ ದರ್ಶನ ಮಾಡಬಹುದು ಎಂದು ಪೂರ್ಣ ಪ್ರಜ್ಞಾ ವಿದ್ಯಾಪೀಠದ ಕಾರ್ಯದರ್ಶಿ ಕೇಶವ ಚಾರ್ಯ ತಿಳಿಸಿದ್ದಾರೆ.

    ಭಾನುವಾರ ಉಡುಪಿ ಭಾಗದ ಮಧ್ವ ಸಂಪ್ರದಾಯದಂತೆ ಅಂತಿಮ ವಿಧಿ ವಿಧಾನಗಳು ನೆರವೇರಿದೆ. ರಾತ್ರಿಪೂರ್ತಿ ಅವರ ಬೃಂದಾವನ ಪ್ರವೇಶ ಆಗಿದ್ದು, ರಾತ್ರಿ ಪೂರ್ತಿ ಭಜನೆ-ಆರಾಧನೆ ನಡೆದಿದೆ. ಹೀಗಾಗಿ ಇಂದಿನಿಂದ ಶ್ರೀಗಳ ಬೃಂದಾವನ ದರ್ಶನ ಮಾಡಬಹುದು. ಇದನ್ನೂ ಓದಿ: ವಿಶ್ವಸಂತ ಪೇಜಾವರ ಶ್ರೀಗಳು ಕೃಷ್ಣೈಕ್ಯ – ಬೆಂಗಳೂರಿನ ವಿದ್ಯಾಪೀಠದಲ್ಲಿ ವೃಂದಾವನಸ್ಥ

    ಪೇಜಾವರ ಶ್ರೀಗಳ ಬೃಂದಾವನ ಪ್ರವೇಶದ ಬಳಿಕ ಮಾತನಾಡಿದ ಕೇಶವ ಚಾರ್ಯ, ಇಂದಿನಿಂದ ಪ್ರತಿನಿತ್ಯ ಪಾಯಶ್ಚಿತ ಹೋಮ, ಪವಿತ್ರಯಾಗ, ಪುಷ್ಪಾರ್ಣ ಯಾಗ, ಇತ್ಯಾದಿ ಶಾಂತಿ ಹೋಮಗಳು ಮತ್ತು ಯಾಗಗಳು ನಡೆಯಲಿವೆ. 12ನೇ ದಿನಕ್ಕೆ ವಿಶೇಷ ಮಹಾಸಮಾರಾಧನೆ ನಡೆಯುತ್ತೆ. ಪರಮಪೂಜ್ಯ ವಿಶ್ವ ಪ್ರಸನ್ನ ಅವರ ನೇತೃತ್ವದಲ್ಲಿ ಅವರ ಆದೇಶದಂತೆ ಸತ್ಕಾರ್ಯಗಳು ನಡೆಯಲಿವೆ.

    ಇಂದಿನಿಂದ ಭಕ್ತಾದಿಗಳು ಪೇಜಾವರ ಶ್ರೀಗಳ ಬೃಂದಾವನ ದರ್ಶನ ಮಾಡಲಿಕ್ಕೆ ಅವಕಾಶ ಮಾಡಿಕೊಡಲಾಗುತ್ತೆ. ಬೃಂದಾವನ ನಿರ್ಮಾಣ ಮಾಡೋದಕ್ಕೆ ಒಂದೂವರೆ ವರ್ಷ ಬೇಕಾಗಿತ್ತೆ. ಇದು ತಾತ್ಕಾಲಿಕ ಬೃಂದಾವನವಾಗಿದ್ದು, ಪ್ರತಿದಿನ ಪೂಜೆ ಪುನಸ್ಕಾರಗಳು ನಡೆಯಲಿವೆ ಎಂದು ತಿಳಿಸಿದ್ದಾರೆ.

     

  • ಪೇಜಾವರ ಶ್ರೀಗಳಿಗೆ ‘ಅಂತಿಮ ಚಿತ್ರನಮನ’

    ಪೇಜಾವರ ಶ್ರೀಗಳಿಗೆ ‘ಅಂತಿಮ ಚಿತ್ರನಮನ’

    ಬೆಂಗಳೂರು: ನಮ್ಮನ್ನು ಅಗಲಿದ ಪೇಜಾವರ ಮಠದ ವಿಶ್ವೇಶ ತೀರ್ಥರಿಗೆ ಫಿಡಿಲಿಟಸ್ ಗ್ಯಾಲರಿಯ ಕಲಾವಿದರು ಅಂತಿಮ ಚಿತ್ರನಮನ ಸಲ್ಲಿಸಿದರು.

    ತಮ್ಮ ಧಾರ್ಮಿಕ ಹಾಗೂ ರಾಜಕೀಯ ನಿಲುವುಗಳಿಂದ, ಸಾಮಾಜಿಕ ಸುಧಾರಣೆಗಳ ಬಗ್ಗೆ ಒಲವಿದ್ದ ಹಾಗೂ ತಮ್ಮ ಸರಳ ಧಾರ್ಮಿಕ ಜೀವನದಿಂದ ಗಮನ ಸೆಳೆದಿದ್ದ ಉಡುಪಿಯ ಪೇಜಾವರ ಮಠಾಧೀಶ ಶ್ರೀ ವಿಶ್ವೇಶ ತೀರ್ಥ ಸ್ವಾಮೀಜಿಗಳು ವೈಕುಂಠವಾಸಿಯಾದುದು ಅವರ ಶಿಷ್ಯರಿಗೆ ಹಾಗೂ ಅಭಿಮಾನಿಗಳಿಗೆ ಅತ್ಯಂತ ದುಃಖದ ವಿಚಾರವಾಗಿದೆ.

    ಹೀಗಾಗಿ ಬೆಂಗಳೂರಿನ ಪ್ರಸಿದ್ಧ ಕಲಾ ಗ್ಯಾಲರಿಯಾದ ಫಿಡಿಲಿಟಸ್ ಗ್ಯಾಲರಿಯ ಕಲಾವಿದ ಕೋಟೆ ಗದ್ದೆ ಎಸ್ ರವಿಯವರು ಶ್ರೀಗಳ ಶೀಘ್ರ ಚಿತ್ರಣವನ್ನು ರಚಿಸಿ ಫಿಡಿಲಿಟಸ್ ಗ್ಯಾಲರಿ ಹಾಗೂ ಕಲಾ ಸಮೂಹದ ಪರವಾಗಿ ಶ್ರೀಗಳಿಗೆ ಅಂತಿಮ ಚಿತ್ರ ನಮನವನ್ನು ಸಲ್ಲಿಸಿದ್ದಾರೆ.

  • ಪೇಜಾವರ ಶ್ರೀಗಳ ಜೊತೆಗಿನ ವಿಮಾನಯಾನದ ಅನುಭವ ಬಿಚ್ಚಿಟ್ಟ ಶ್ರೀರಾಮುಲು

    ಪೇಜಾವರ ಶ್ರೀಗಳ ಜೊತೆಗಿನ ವಿಮಾನಯಾನದ ಅನುಭವ ಬಿಚ್ಚಿಟ್ಟ ಶ್ರೀರಾಮುಲು

    ಕೊಪ್ಪಳ: ಪೇಜಾವರ ಶ್ರೀಗಳು ಹಾಗೂ ನನ್ನ ನಡುವೆ ಉತ್ತಮ ಬಾಂಧವ್ಯ ಇತ್ತು ಎಂದು ಆರೋಗ್ಯ ಸಚಿವ ಶ್ರೀರಾಮುಲು ಹೇಳಿದ್ದಾರೆ.

    ಇಂದು ಖಾಸಗಿ ಕಾರ್ಯಕ್ರಮದ ನಿಮಿತ್ಯ ಕೊಪ್ಪಳ ಭೇಟಿ ನೀಡಿದ್ದ ಅವರು ಈ ಸುದ್ದಿಗಾರರ ಜೊತೆ ಮಾತನಾಡಿ, ಪೇಜಾವರ ಶ್ರೀಗಳು ಅಸ್ತಂಗತರಾದ ಸುದ್ದಿ ಕೇಳಿ ಅಘಾತವಾಗಿದೆ. ಶ್ರೀಗಳು ಇಷ್ಟು ಬೇಗ ದೇಹ ತ್ಯಜಿಸುತ್ತಾರೆ ಅಂದುಕೊಂಡಿರಲಿಲ್ಲ. ಶ್ರೀಗಳು ಒಮ್ಮೆ 2014ರ ಲೋಕಸಭೆ ಚುನಾವಣೆ ವೇಳೆ ಹೊಸಪೇಟೆಯಲ್ಲಿ ರಸ್ತೆಯಲ್ಲೇ ಸಿಕ್ಕಿದ್ದರು. ರಸ್ತೆಯಲ್ಲೇ ಮಾತನಾಡಿ ಆಶೀರ್ವಾದ ಮಾಡಿ ಹೋಗಿದ್ದರು ಎಂದು ಹಳೆಯ ಮೆಲುಕು ಹಾಕಿದರು.

    ನಾವು ಜನಪ್ರತಿನಿಧಿಗಳು, ನಮಗೆ ವಿಮಾನದಲ್ಲಿ ಪ್ರಯಾಣ ಮಾಡಲು ಕ್ಲಾಸ್ ಒನ್ ವ್ಯವಸ್ಥೆ ಟಿಕೆಟ್ ಇರುತ್ತದೆ. ವಿಮಾನದಲ್ಲಿ ಒಮ್ಮೆ ಹೋಗುವಾಗ ಶ್ರೀಗಳು ಹಿಂದೆ ಕುಳಿತ್ತಿದ್ದರು. ಆಗ ನನ್ನ ನೋಡಿ ಮಾತನಾಡಿಸಿದ ಸಂದರ್ಭದಲ್ಲಿ ನಾನು ನನ್ನ ಸೀಟಿನಲ್ಲಿ ಮುಂದೆ ಕುಳ್ಳಿರಿಸಿದ್ದೆ. ಅವರ ಸೀಟಿನಲ್ಲಿ ನಾನು ಕೂತು ಪ್ರಯಾಣ ಮಾಡಿದ್ದೆ. ನನಗೆ ಶ್ರೀಗಳು ಸದಾ ಮಾರ್ಗದರ್ಶಕರಾಗಿದ್ದರು. ಪೇಜಾವರ ಶ್ರೀಗಳು ಸಮಾಜದ ಏಳಿಗೆಗೆ ಶ್ರಮಿಸಿದವರು. ದಲಿತರ ಕೇರಿಗಳಿಗೆ ಹೋಗಿ ಸಹಪಂಕ್ತಿ ಭೋಜನ ಮಾಡಿದರು ಎಂದು ರಾಮುಲು ಹೇಳಿದರು.

    ದಲಿತ ಕೇರಿಗಳಲ್ಲಿ ಪಾದಯಾತ್ರೆ ಮಾಡಿ ಜಾತಿ, ಮತ ಧರ್ಮವನ್ನು ತೊಲಗಿಸುವ ಪ್ರಯತ್ನ ಮಾಡಿದರು. ಹಿಂದೂ ಮುಸ್ಲಿಮರಲ್ಲಿ ಭಾವೈಕ್ಯತೆ ಬಿತ್ತುವ ಸಲುವಾಗಿ ಇಫ್ತಾರ್ ಕೂಟ ಮಾಡಿ, ಭಾವೈಕ್ಯತೆ ಬೆಳೆಸುವ ಕೆಲಸ ಮಾಡುತ್ತಿದ್ದರು. ಈ ದೇಶದ ತುರ್ತು ಪರಿಸ್ಥಿತಿಯ ಸಂದರ್ಭದಲ್ಲಿ ಸುಮಾರು 1977 ರಲ್ಲಿ ಇಂದಿರಾಗಾಂಧಿ ವಿರುದ್ಧವೇ ಧ್ವನಿ ಎತ್ತಿದವರು ಪೇಜಾವರ ಶ್ರೀಗಳು ಎಂದು ತಿಳಿಸಿದರು.

    ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಮಾಡುವ ಬಗ್ಗೆ ಕೂಡ ಧ್ವನಿ ಎತ್ತಿದ್ದ ನಮ್ಮ ಶ್ರೀಗಳು, ಶ್ರೀ ಸಿದ್ದಗಂಗಾ, ಪಂಡಿತ್ ಪುಟ್ಟರಾಜ ಗವಾಯಿಗಳ ರೀತಿ ಪೇಜಾವರ ಶ್ರೀಗಳು ಕೂಡ ಹಿರಿಮೆಯನ್ನ ಹೊಂದಿದವರು. ಅವರ ಮಾರ್ಗದರ್ಶನದಲ್ಲಿ ನಾವು ಸದಾ ನಡೆಯಬೇಕು. ಈಗ ಅವರು ಅಗಲಿದ್ದಾರೆ. ಅವರ ಆತ್ಮಕ್ಕೆ ಶಾಂತಿ ದೊರೆಯಲಿ ಎಂದು ಪ್ರಾರ್ಥಿಸಿದರು.

  • ಪೇಜಾವರ ಶ್ರೀಗಳ ಆಗಲಿಕೆಯಿಂದ ಕರ್ನಾಟಕ ರಾಜ್ಯ ಬಡವಾಗಿದೆ – ಎಚ್ ಕೆ ಪಾಟೀಲ್ ಸಂತಾಪ

    ಪೇಜಾವರ ಶ್ರೀಗಳ ಆಗಲಿಕೆಯಿಂದ ಕರ್ನಾಟಕ ರಾಜ್ಯ ಬಡವಾಗಿದೆ – ಎಚ್ ಕೆ ಪಾಟೀಲ್ ಸಂತಾಪ

    ಬೆಂಗಳೂರು: ಪೇಜಾವರ ಶ್ರೀಗಳ ಆಗಲಿಕೆಯಿಂದ ಕರ್ನಾಟಕ ರಾಜ್ಯ ಬಡವಾಗಿದೆ ಎಂದು ಶಾಸಕ ಎಚ್ ಕೆ ಪಾಟೀಲ್ ಸಂತಾಪ ಸೂಚಿಸಿದ್ದಾರೆ.

    ಇಂದು ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, ಪೇಜಾವರ ವಿಶ್ವೇಶತೀರ್ಥ ಶ್ರೀಗಳ ಆಗಲಿಕೆ ನಮಗೆ ಬಹಳ ಅಘಾತ ತಂದಿದೆ. ಪೂಜ್ಯರು ರಾಷ್ಟ್ರದ ಖ್ಯಾತ ಸಂತರು. ದೇಶದಲ್ಲಿ ಯಾವುದೇ ಕ್ಲಿಷ್ಟಕರ ಸಮಸ್ಯೆ ಇರಲಿ, ಧರ್ಮ ವೇದಾಂತದ ವಿಚಾರದಲ್ಲಿ ದಿಟ್ಟತನ ತೋರಿದ ಶ್ರೀಗಳು ಇಂದು ನಮ್ಮನ್ನು ಆಗಲಿದ್ದಾರೆ ಎಂದು ತಿಳಿಸಿದರು.

    ಸಮಾನತೆ ಸದ್ಭಾವನೆ ಪ್ರಾರ್ಥನೆ ಮೂಲಕ ಎಲ್ಲರ ಮನ ಗೆದ್ದಂತಹವರು ಶ್ರೀಗಳು. ಆದರೆ ಅವರನ್ನು ಕಳೆದುಕೊಂಡು ಕರ್ನಾಟಕ ರಾಜ್ಯ ಇಂದು ಬಡವಾಗಿದೆ. ನಮ್ಮ ತಂದೆ ಕಾಲದಿಂದಲೂ ಕುಟುಂಬದ ಜೊತೆಗೆ ಶ್ರೀಗಳ ನಂಟಿದೆ. ಸ್ವಾಮೀಜಿಯವರ ಆಶೀರ್ವಾದ ಹಾಗೂ ಮಾರ್ಗದರ್ಶನದಿಂದಲೇ ನಾನು ಈ ಮಟ್ಟಕ್ಕೆ ಬೆಳೆದಿದ್ದೇನೆ. ಯಾರೇ ಆಗಲಿ ಶ್ರೀಗಳು ಅವರಿಗೆ ಸರಿಯಾದ ಮಾರ್ಗದರ್ಶನ ಕೊಡುತ್ತಿದ್ದರು. ಈಗ ಅವರ ಮಾರ್ಗದರ್ಶನದಲ್ಲಿ ನಾವು ನಡೆಯುವ ಮೂಲಕ ಅವರ ಆತ್ಮಕ್ಕೆ ನಾವು ಶಾಂತಿ ತರುವ ಕೆಲಸ ಮಾಡಬೇಕಿದೆ ಎಂದರು.

  • ನ್ಯಾಷನಲ್ ಕಾಲೇಜ್ ಮೈದಾನದಲ್ಲಿ ಪಾರ್ಥಿವ ಶರೀರ – ವಿದ್ಯಾಪೀಠದಲ್ಲಿ ಪಾಸ್ ಇದ್ದವರಿಗೆ ಮಾತ್ರ ಅನುಮತಿ

    ನ್ಯಾಷನಲ್ ಕಾಲೇಜ್ ಮೈದಾನದಲ್ಲಿ ಪಾರ್ಥಿವ ಶರೀರ – ವಿದ್ಯಾಪೀಠದಲ್ಲಿ ಪಾಸ್ ಇದ್ದವರಿಗೆ ಮಾತ್ರ ಅನುಮತಿ

    ಬೆಂಗಳೂರು: ಇಂದು ಬೆಳಗ್ಗೆ ಕೃಷ್ಣೈಕ್ಯರಾದ ಪೇಜಾವರ ವಿಶ್ವೇಶ ತೀರ್ಥ ಶ್ರೀಗಳ ಪಾರ್ಥಿವ ಶರೀರವನ್ನು ಬಸವನಗುಡಿಯ ನ್ಯಾಷನಲ್ ಕಾಲೇಜ್ ಮೈದಾನದಲ್ಲಿ ಸಾರ್ವಜನಿಕ ದರ್ಶಕ್ಕೆ ಇಡಲಾಗಿದೆ.

    ಆದಿ ಉಡುಪಿಯಿಂದ ಪಾರ್ಥಿವ ಶರೀರವನ್ನು ಹೊತ್ತುಕೊಂಡು ಬಂದ ವಾಯು ಸೇನಾ ಪಡೆಯ ಹೆಲಿಕಾಪ್ಟರ್ ಮಧ್ಯಾಹ್ನ 3:35ಕ್ಕೆ ಎಚ್‍ಎಎಲ್ ತಲುಪಿತು. ಇಲ್ಲಿಂದ ಅಲಕೃಂತಗೊಂಡ ತೆರೆದ ವಾಹನದಲ್ಲಿ ಮೃತ ಶರೀರವನ್ನು ಬಸವನಗುಡಿಯ ನ್ಯಾಷನಲ್ ಕಾಲೇಜಿನ ಮೈದಾನಕ್ಕೆ ತರಲಾಯಿತು.

    ಸಂಜೆ 5:30ರ ವರೆಗೆ ಸಾರ್ವಜನಿಕ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು ಬಳಿಕ ಮೆರವಣಿಗೆಯೊಂದಿಗೆ ವಿದ್ಯಾಪೀಠಕ್ಕೆ ತರಲಾಗುತ್ತದೆ. ರಾಘವೇಂದ್ರ, ಕೃಷ್ಣ, ಮದ್ವಚಾರ್ಯರ ಮೂರ್ತಿಗೆ ಪೂಜೆ ಮಾಡಿದ ಬಳಿಕ ಅಂತ್ಯ ಕ್ರಿಯೆ ನಡೆಯಲಿದೆ.

    ಪೇಜಾವರ ಶ್ರೀಗಳ ಪೂಜಾ ಸಾಮಾಗ್ರಿ, ಅವರ ಪೀಠ, ಶ್ರೀ ಕೃಷ್ಣನ ಪೂಜೆಗೆ ಉಪಯೋಗಿಸುತ್ತಿದ್ದ ಪೂಜಾ ಪರಿಕರ ಉಡುಪಿಯಿಂದ ಈಗಾಗಲೇ ಬೆಂಗಳೂರಿಗೆ ಬಂದಿದೆ.

    ವಿದ್ಯಾಪೀಠದಲ್ಲಿ ಭಕ್ತರ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಪೊಲೀಸರು ಈಗ ಯಾರನ್ನೂ ಒಳಗಡೆ ಬಿಡುತ್ತಿಲ್ಲ. ಗೇಟ್ ಬಳಿಯೇ ಪೊಲೀಸರು ತಡೆಯುತ್ತಿದ್ದು ಪಾಸ್ ಹೊಂದಿರುವ ಭಕ್ತರನ್ನು ಮಾತ್ರ ಒಳಗಡೆ ಬಿಡುತ್ತಿದ್ದಾರೆ.

  • ದೆಹಲಿಯ ಕೊರೆಯುವ ಚಳಿ ನಡುವೆ ಪೇಜಾವರ ಶ್ರೀಗಳ ಪೂಜೆ

    ದೆಹಲಿಯ ಕೊರೆಯುವ ಚಳಿ ನಡುವೆ ಪೇಜಾವರ ಶ್ರೀಗಳ ಪೂಜೆ

    – ದೆಹಲಿಯ ಕೃಷ್ಣ ಮಠದಲ್ಲಿ ನೀರವ ಮೌನ

    ನವದೆಹಲಿ: ಪೇಜಾವರ ಶ್ರೀಗಳು ತಮ್ಮ ಪೂಜೆಯಿಂದಲೇ ಸಾಕಷ್ಟು ಪ್ರಖ್ಯಾತಿ ಆಗಿದ್ದವರು. ದಿನದಲ್ಲಿ ಎಂತಹದ್ದೇ ಪ್ರಮುಖ ಕೆಲಸವಿದ್ದರೂ ಶ್ರೀಕೃಷ್ಣನ ಪೂಜೆ ತಪ್ಪಿಸಿಕೊಳ್ಳುತ್ತಿರಲಿಲ್ಲ. ಪೂಜೆಯ ಬಳಿಕವೇ ಕೆಲಸ ಮಾಡುವುದನ್ನು ರೂಢಿಸಿಕೊಂಡಿದ್ದರು.

    ದೆಹಲಿಯ ಕೊರತೆಯುವ ಚಳಿಯಲ್ಲೂ ನಡುಗುತ್ತಾ ಪೇಜಾವರ ಶ್ರೀಗಳು ಮಠದಲ್ಲಿ ಪೂಜೆ ಮಾಡುತ್ತಿರುವ ವಿಡಿಯೋ ಈಗ ವೈರಲ್ ಆಗುತ್ತಿದೆ. ಕಳೆದ ಡಿಸೆಂಬರ್ 5 ರಂದು ದೆಹಲಿಯಲ್ಲಿ ರಾಜ್ಯದ ಸಂಸದರಿಗೆ ಸನ್ಮಾನ ಕಾರ್ಯಕ್ರಮ ಹಿನ್ನೆಲೆ ಪೇಜಾವರ ಶ್ರೀಗಳು ಮಠಕ್ಕೆ ಬಂದಿದ್ದರು. ಈ ವೇಳೆ ಬೆಳ್ಳಂಬೆಳಗ್ಗೆ ಕೊರತೆಯುವ ಚಳಿಯ ನಡುವೆ ಶ್ರೀಗಳು ಪೂಜೆ ಮಾಡುತ್ತಿದ್ದರು.

    ತೀವ್ರ ಚಳಿಯ ಹಿನ್ನೆಲೆ ಮಠದ ಸಿಬ್ಬಂದಿ ಪೂಜೆ ತಡ ಮಾಡಿದ್ದರು. ಆದರೆ ಸ್ವಾಮೀಜಿಗಳು ಪ್ರತಿದಿನದ ಸಮಯದಂತೆ ಬೆಳಗ್ಗೆಯೇ ಪೂಜೆ ಮಾಡಲೇ ಬೇಕು ಎಂದು ಹಠ ಮಾಡಿ ಪೂಜೆಗೆ ವ್ಯವಸ್ಥೆ ಮಾಡಿಸಿದ್ದರು. ತಟ್ಟೆಯಲ್ಲಿ ಹನುಮಂತನ ಮೂರ್ತಿ ಇಟ್ಟು ಹೂವು ಹಾಕಿ ಪೂಜೆ ಮಾಡಿದ್ದರು. ಈ ವೇಳೆ ಕೊರೆಯುವ ಚಳಿಗೆ ಅವರ ಮೈ ನಡಗುತ್ತಿರುವುದು ವಿಡಿಯೋದಲ್ಲಿ ನೋಡಬಹುದು.

    ನೀರವ ಮೌನ:
    ಪೇಜಾವರ ಶ್ರೀಗಳ ನಿಧನ ಸುದ್ದಿ ಬೆನ್ನೆಲೆ ದೆಹಲಿ ಶ್ರೀಕೃಷ್ಣ ಮಠದಲ್ಲಿ ದುಃಖದ ಛಾಯೆ ಆವರಿಸಿದೆ. ಮಠದ ಭಕ್ತರು ಮೌನವಾಗಿದ್ದು ಶ್ರೀಗಳ ಅಂತಿಮ ದರ್ಶನಕ್ಕೆ ಬೆಂಗಳೂರಿಗೆ ತೆರಳುತ್ತಿದ್ದಾರೆ. ಸದ್ಯ ದೆಹಲಿಯ ಮಠದಲ್ಲಿ ಬೆರಳೆಣಿಕೆಯಷ್ಟು ಸಿಬ್ಬಂದಿಗಳಿದ್ದು ಎಲ್ಲರೂ ಮೌನಕ್ಕೆ ಶರಣರಾಗಿದ್ದಾರೆ.

    ಶ್ರೀಗಳ ನಿಧನ ಹಿನ್ನೆಲೆ ಮಠದಲ್ಲಿ ಶಾಂತಿ ಮಂತ್ರ ಪಟಿಸಲಾಯಿತು ಮತ್ತು ಮೌನಚಾರಣೆ ಮಾಡುವ ಮೂಲಕ ಶ್ರೀಗಳ ಆತ್ಮಕ್ಕೆ ಶಾಂತಿ ಕೋರಲಾಗಿದೆ. ವಿದ್ಯಾರ್ಥಿ ದೆಸೆಯಿಂದ ಪೇಜಾವರ ಶ್ರೀಗಳ ಅನುಯಾಯಿಗಳಾಗಿದ್ದ ಭಕ್ತರದಲ್ಲಿ ದುಃಖ ಮಡುಗಟ್ಟಿತ್ತು. ಪಬ್ಲಿಕ್ ಟಿವಿ ಜೊತೆಗೆ ಅವರು ತಮ್ಮ ನೆನಪುಗಳನ್ನು ಹಂಚಿಕೊಂಡರು.

    ದೆಹಲಿ ಶ್ರೀಕೃಷ್ಣ ಮಠದ ಭಕ್ತರೊಬ್ಬರು ಮಾತನಾಡಿ, ಶ್ರೀಗಳು ಅಗಲಿಕೆ ದುಃಖ ತಂದಿದೆ. ಅವರು ಅನೇಕ ವಿದ್ಯಾರ್ಥಿ ನಿಯಲಗಳನ್ನು ಕಟ್ಟಿಸಿ ವಿದ್ಯೆ ಹಾಗೂ ಅನ್ನದಾನ ಮಾಡಿದ್ದಾರೆ. ಅನೇಕ ಗ್ರಂಥಗಳನ್ನು ರಚಿಸಿ ಸಂಸ್ಕೃತವನ್ನು ಸಾಮಾನ್ಯರಿಗೂ ಅರ್ಥವಾಗಲು ಶ್ರಮಿಸಿದರು. ಅನೇಕ ಪಂಡಿತರನ್ನು ಶ್ರೀಗಳು ನಾಡಿಗೆ ಕೊಟ್ಟಿದ್ದಾರೆ.

    ಪೇಜಾವರ ಶ್ರೀಗಳು ಭಕ್ತರ ಅನುಕೂಲಕ್ಕಾಗಿ ದೆಹಲಿಯ ವಸಂತ್ ಕುಂಜ್‍ನಲ್ಲಿ ಶ್ರೀಕೃಷ್ಣ ಮಠವನ್ನು 2003 ರಲ್ಲಿ ನಿರ್ಮಿಸಿದ್ದರು. ದೇಶದ ಬೇರೆ ಬೇರೆ ಕಡೆಯಿಂದ ಬರುವ ಭಕ್ತರಿಗೆ ಅನುಕೂಲ ಆಗುವ ನಿಟ್ಟಿನಲ್ಲಿ ವಾಸ್ತವ್ಯಕ್ಕೂ ವ್ಯವಸ್ಥೆ ಮಾಡಲಾಗಿದೆ. 2010ರಲ್ಲಿ ಮಠದ ಅಂಗಳದಲ್ಲೇ ಶ್ರೀಕೃಷ್ಣ ದೇವಸ್ಥಾನ ಕಟ್ಟಿ ಮೂರ್ತಿ ಪ್ರತಿಷ್ಠಾಪನೆ ಮಾಡಿದ್ದರು.