Tag: Pejawar Sri

  • ಬಾವಿಗಿಳಿದು ಬೆಕ್ಕನ್ನು ರಕ್ಷಣೆ ಮಾಡಿದ ಪೇಜಾವರ ಶ್ರೀ

    ಬಾವಿಗಿಳಿದು ಬೆಕ್ಕನ್ನು ರಕ್ಷಣೆ ಮಾಡಿದ ಪೇಜಾವರ ಶ್ರೀ

    ಉಡುಪಿ: ಪೇಜಾವರ ಶ್ರೀ (Pejawar Sri) ಸುಮಾರು 40 ಅಡಿ ಆಳದ ಬಾವಿಗಿಳಿದು ಬೆಕ್ಕಿನ ಮರಿಯ (Cat) ರಕ್ಷಣೆ ಮಾಡಿದ ಘಟನೆ ಉಡುಪಿಯ (Udupi) ಮುಚ್ಲಕೋಡು ಬಳಿ ನಡೆದಿದೆ. ಸ್ವತಃ ಸ್ವಾಮೀಜಿ ಬಾವಿಗೆ ಇಳಿದಿರುವುದು ಸಾರ್ವಜನಿಕರ ಪ್ರಶಂಸೆಗೆ ಕಾರಣವಾಗಿದೆ.

    ಉಡುಪಿ ನಗರದ ಹೊರವಲಯದಲ್ಲಿರುವ ಮುಚ್ಲಕೋಡು ದೇವಸ್ಥಾನಕ್ಕೆ ಪೇಜಾವರ ಮಠಾಧೀಶ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ (Vishwaprasanna Theertha Swamiji) ತೆರಳಿದ್ದರು. ಈ ಸಂದರ್ಭದಲ್ಲಿ ಬೆಕ್ಕೊಂದು ಬಾವಿಗೆ ಬಿದ್ದ ವಿಷಯ ತಿಳಿದ ಸ್ವಾಮೀಜಿ, ತಾವೇ ಸ್ವತಃ ಬಾವಿಗಿಳಿದು ಬೆಕ್ಕನ್ನು ರಕ್ಷಿಸಿದ್ದಾರೆ. ಇದನ್ನೂ ಓದಿ: ಬಿಜೆಪಿಯ ಬೆಲೆ ಏರಿಕೆಯಿಂದ ತತ್ತರಿಸಿರುವ ಜನರ ನೆರವಿಗಾಗಿಯೇ ಕಾಂಗ್ರೆಸ್ ಗ್ಯಾರಂಟಿಗಳನ್ನ ತಂದಿದೆ: ದಿನೇಶ್ ಗುಂಡೂರಾವ್

    ಕೂಡಲೇ ಹಿಂದೆ ಮುಂದೆ ನೋಡದೆ ಹಗ್ಗದ ಸಹಾಯದಿಂದ ಸ್ವಾಮೀಜಿ ಬಾವಿಗಿಳಿದಿದ್ದಾರೆ. ಗೋವಿನ ರಕ್ಷಣೆಯಲ್ಲಿ ಈಗಾಗಲೇ ಮುಂಚೂಣಿಯಲ್ಲಿರುವ ಪೇಜಾವರ ಸ್ವಾಮೀಜಿ ಹಾವು, ಹದ್ದು ಹೀಗೆ ಸಕಲ ಪ್ರಾಣಿ ಪಕ್ಷಿಗಳ ರಕ್ಷಣೆ ಮಾಡುತ್ತಿರುತ್ತಾರೆ. ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿಗಳ ಈ ಪ್ರಾಣಿ ಪ್ರೀತಿಗೆ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ. ಇದೀಗ ವೀಡಿಯೋ ಮತ್ತು ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ. ಇದನ್ನೂ ಓದಿ: ನನ್ನ ಲಿವರ್ ಏನು ಕಬ್ಬಿಣದ್ದಾ? ಹಗಲು ರಾತ್ರಿ ಮದ್ಯಪಾನ ಆರೋಪಕ್ಕೆ ಭಗವಂತ್ ಮಾನ್ ತಿರುಗೇಟು

  • ವ್ಯಾಪಾರಕ್ಕೆ ಅವಕಾಶ ಕೊಡುವಂತೆ ಪೇಜಾವರ ಶ್ರೀಗಳಿಗೆ ಮುಸ್ಲಿಂ ವರ್ತಕರಿಂದ ಮನವಿ

    ವ್ಯಾಪಾರಕ್ಕೆ ಅವಕಾಶ ಕೊಡುವಂತೆ ಪೇಜಾವರ ಶ್ರೀಗಳಿಗೆ ಮುಸ್ಲಿಂ ವರ್ತಕರಿಂದ ಮನವಿ

    ಉಡುಪಿ: ಹಿಜಬ್ ಹೋರಾಟ ಆರಂಭವಾದ ನಂತರ ಉಡುಪಿಯಲ್ಲಿ ವ್ಯಾಪಾರ ಬಹಿಷ್ಕಾರ ನಡೆಯುತ್ತಿದೆ. ಮುಸಲ್ಮಾನ ವ್ಯಾಪಾರಿಗಳಿಗೆ ಜಾತ್ರೆ ಉತ್ಸವ ದೇವಸ್ಥಾನಗಳ ವ್ಯಾಪಾರಕ್ಕೆ ಅವಕಾಶ ನಿರಾಕರಣೆ ಮಾಡಲಾಗಿದೆ. ಪೇಜಾವರ ಶ್ರೀಗಳನ್ನು ಭೇಟಿ ಮಾಡಿದ ಜಾತ್ರೆ, ಬೀದಿ ವರ್ತಕರ ಸಂಘ ವ್ಯಾಪಾರ ಅವಕಾಶ ಮಾಡಿಕೊಡುವಂತೆ ಹಿಂದೂ ಸಮಾಜಕ್ಕೆ ಕರೆ ನೀಡುವಂತೆ ಮನವಿ ಮಾಡಿದರು.

    ಮುಸಲ್ಮಾನ ನಾಯಕರುಗಳು ಕ್ರೈಸ್ತ ಧರ್ಮಗುರುಗಳು ಪೇಜಾವರಶ್ರೀಗಳನ್ನು ಭೇಟಿಯಾಗಿ ಉಡುಪಿಯಲ್ಲಿ ಸೌಹಾರ್ದ ವಾತಾವರಣ ನೆಲೆಸುವಂತೆ, ಹಿಂದೂಗಳು ವ್ಯಾಪಾರಕ್ಕೆ ಅವಕಾಶ ಮಾಡಿ ಕೊಡುವಂತೆ ಪೇಜಾವರ ಶ್ರೀಗಳನ್ನು ಭೇಟಿಯಾಗಿ ಮನವಿ ಸಲ್ಲಿಕೆ ಮಾಡಲಾಯ್ತು. ಉಡುಪಿಯಲ್ಲಿ ಮುಸಲ್ಮಾನ ವ್ಯಾಪಾರಿಗಳಿಗೆ ವ್ಯಾಪಾರ ಬಹಿಷ್ಕಾರ ಹಿನ್ನೆಲೆಯಲ್ಲಿ ಈ ಭೇಟಿ ಮಹತ್ವ ಪಡೆದಿದೆ. ಇದನ್ನೂ ಓದಿ: ರಾಜಕೀಯ ವಿರೋಧಿಗಳನ್ನು ಹತ್ತಿಕ್ಕಲು ಹಿಂಸಾಚಾರ ಬಳಸೋದು ಹಕ್ಕುಗಳ ಉಲ್ಲಂಘನೆ: ಮೋದಿ

    ಪೇಜಾವರ ಮಠದ ಶ್ರೀ ರಾಮ ವಿಠಲ ಸಭಾಭವನದಲ್ಲಿ ಭೇಟಿಯಾಗಿದ್ದು, ಬೀದಿಬದಿ ಜಾತ್ರೆ ವ್ಯಾಪಾರಿಗಳಿಗೆ ಸಮಸ್ಯೆಯಾಗಿದೆ. ದೇವಸ್ಥಾನಗಳಲ್ಲಿ ವ್ಯಾಪಾರಕ್ಕೆ ಅವಕಾಶ ಮಾಡಿಕೊಡಿ. ನೂರಾರು ವರ್ಷಗಳಿಂದ ಉಡುಪಿಯಲ್ಲಿ ಹಿಂದೂ ಮತ್ತು ಮುಸಲ್ಮಾನರ ಅನ್ಯೋನ್ಯವಾಗಿ ಜೀವನ ಮಾಡುತ್ತಿದ್ದೇವೆ. ಕೆಲ ಬೆಳವಣಿಗೆಗಳಿಂದ ಎರಡು ಧರ್ಮಗಳ ನಡುವೆ ಭಿನ್ನಾಭಿಪ್ರಾಯಗಳು ಬಂದಿದೆ. ಸಮಸ್ಯೆಯನ್ನು ಬಗೆಹರಿಸಿ ಕೊಡಲು ತಾವು ನೇತೃತ್ವದ ಬೇಕು ಎಂದು ವಿಶ್ವಪ್ರಸನ್ನ ತೀರ್ಥ ಶ್ರೀಪಾದರಿಗೆ ಮುಸಲ್ಮಾನ ವ್ಯಾಪಾರಿಗಳ ಮನವಿ ಮಾಡಿದರು. ಇದನ್ನೂ ಓದಿ: ಮಾನವೀಯತೆ ಇರುವುದು ನಿಜವೇ? – ಸಿಎಂ ಕೇಜ್ರಿವಾಲ್‌ಗೆ ಅಗ್ನಿಹೋತ್ರಿ ಪ್ರಶ್ನೆ

    ಉಡುಪಿಯ ಮದರ್ ಆಫ್ ಸಾರೋಸ್ ಚರ್ಚ್ ಧರ್ಮಗುರುಗಳು ಸಮಾಜದ ಸಾಮರಸ್ಯ ತೆಯ ಬಗ್ಗೆ ಮಾತನಾಡಿದರು. ಬಳಕೆದಾರರ ವೇದಿಕೆಯ ಗೌರವಾಧ್ಯಕ್ಷ ಅಬೂಬಕ್ಕರ್ ಆತ್ರಾಡಿ, ಉಡುಪಿ ಜಿಲ್ಲಾ ಮುಸ್ಲಿಮ್ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಮಹಮ್ಮದ್ ಮೌಲಾ, ಮಹಮ್ಮದ್ ಆರಿಫ್ ಮತ್ತಿತರ ವ್ಯಾಪಾರಿಗಳು ಮನವಿ ಸಂದರ್ಭ ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಪೇಜಾವರ ಸ್ವಾಮೀಜಿಗಳು ಹಣ್ಣುಗಳನ್ನು ನೀಡಿದರು.

  • ಮಾಲ್‍ನಲ್ಲಿ ‘ದಿ ಕಾಶ್ಮೀರ್ ಫೈಲ್ಸ್’ ವೀಕ್ಷಿಸಿದ ಪೇಜಾವರ ಶ್ರೀ, ಕಾಣಿಯೂರು ಶ್ರೀ

    ಮಾಲ್‍ನಲ್ಲಿ ‘ದಿ ಕಾಶ್ಮೀರ್ ಫೈಲ್ಸ್’ ವೀಕ್ಷಿಸಿದ ಪೇಜಾವರ ಶ್ರೀ, ಕಾಣಿಯೂರು ಶ್ರೀ

    ಉಡುಪಿ: ದೇಶ ಮತ್ತು ವಿಶ್ವದಾದ್ಯಂತ ಬಹು ಚರ್ಚೆಯಲ್ಲಿರುವ ದಿ ಕಾಶ್ಮೀರ್ ಫೈಲ್ಸ್ ಚಿತ್ರವನ್ನು ಉಡುಪಿಯ ಪೇಜಾವರ ಶ್ರೀ ಮತ್ತು ಕಾಣಿಯೂರು ಸ್ವಾಮೀಜಿ ಜೊತೆಯಾಗಿ ವೀಕ್ಷಣೆ ಮಾಡಿದರು. ಮೊಟ್ಟಮೊದಲ ಬಾರಿಗೆ ಮಾಲ್‍ಗೆ ತೆರಳಿದ ಸ್ವಾಮೀಜಿಗಳು ನೈಜ ಕತೆಯಾಧಾರಿತ ಚಿತ್ರ ವೀಕ್ಷಣೆ ಮಾಡಿದರು.

    ಕಾಶ್ಮೀರಿ ಪಂಡಿತರ ಸಂಕಟಗಳನ್ನು ಎಳೆಯಾಗಿ ಬಿಚ್ಚಿಟ್ಟಿರುವ ದಿ ಕಾಶ್ಮೀರ್‌ ಫೈಲ್ಸ್ ಸಿನಿಮಾ ದೇಶಾದ್ಯಂತ ಭಾರೀ ಚರ್ಚೆಯಲ್ಲಿದೆ. ಕಾಂಗ್ರೆಸ್ ಸೇರಿದಂತೆ ಬಿಜೆಪಿಯ ವಿರೋಧಿ ಪಕ್ಷಗಳು ಅದನ್ನು ಟೀಕಿಸುತ್ತೇವೆ. ಇದು ನಿಜ ಅಲ್ಲ, ಇದೊಂದು ಕಾಲ್ಪನಿಕ ಎಂದು ಹೇಳುತ್ತಿವೆ. ಚಿತ್ರ ನಿರ್ದೇಶಕರಿಗೆ ಜೀವ ಬೆದರಿಕೆ ಇದ್ದು, ಹೆಚ್ಚುವರಿ ಭದ್ರತೆ ಕೊಡಲಾಗಿದೆ. ಪರ-ವಿರೋಧ ಚರ್ಚೆಯ ನಡುವೆ ಉಡುಪಿಯ ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಮತ್ತು ಕಾಣಿಯೂರು ಮಠಾಧೀಶ ವಿದ್ಯಾವಲ್ಲಭತೀರ್ಥ ಸ್ವಾಮೀಜಿ ಥಿಯೇಟರ್‌ಗೆ ತೆರಳಿ ಚಲನಚಿತ್ರವನ್ನು ವೀಕ್ಷಣೆ ಮಾಡಿದರು.

    ಸಿನಿಮಾ ಮಂದಿರಕ್ಕೆ ಸ್ವಾಮೀಜಿಗಳು ಭೇಟಿ ನೀಡಿದ್ದು ಇದೇ ಮೊದಲು. ಮಣಿಪಾಲಕ್ಕೆ ತಮ್ಮ ಜೊತೆಗೆ ಮಠದ 35 ಶಿಷ್ಯರನ್ನು ಕೂಡ ಕರೆದೊಯ್ದಿದ್ದರು. ತಮ್ಮ ಬಿಡುವಿಲ್ಲದ ಕಾರ್ಯಚಟುವಟಿಕೆಗಳ ನಡುವೆಯೂ ಶೋ ನೋಡಲು ಯತಿಗಳಿಗೆ ವ್ಯವಸ್ಥೆ ಮಾಡಲಾಗಿತ್ತು. ಈ ಹಿಂದೆ ʼಉರಿʼ ಚಲನಚಿತ್ರ ಬಿಡುಗಡೆಯಾದಾಗ ಪೇಜಾವರ ಮಠದ ಹಿರಿಯ ಯತಿಗಳಾದ ಕೀರ್ತಿಶೇಷ ವಿಶ್ವೇಶತೀರ್ಥರು ತಮ್ಮ ಶಿಷ್ಯರೊಂದಿಗೆ ಸಿನಿಮಾ ನೋಡಿದ್ದರು. ಇದನ್ನೂ ಓದಿ: ಕುರಾನ್,ಬೈಬಲ್ ಎಲ್ಲರನ್ನು ಕೊಲ್ಲು ಎಂದು ಹೇಳುತ್ತಿದೆ:  ಕಲ್ಲಡ್ಕ ಪ್ರಭಾಕರ ಭಟ್

    ಚಲನಚಿತ್ರ ವೀಕ್ಷಣೆ ವೇಳೆ ಕೆಲ ಪ್ರೇಕ್ಷಕರು ಸ್ವಾಮೀಜಿಗಳ ಕಾಲಿಗೆ ಬಿದ್ದು ಆಶೀರ್ವಾದವನ್ನು ಪಡೆದಿದ್ದಾರೆ. ಕಾಣಿಯೂರು ಸ್ವಾಮೀಜಿ ತಮ್ಮ ಶಿಷ್ಯರ ಮೊಬೈಲ್‍ನಲ್ಲಿ ಪೇಜಾವರ ಸ್ವಾಮೀಜಿಗಳ ಜೊತೆ ಸೆಲ್ಫಿ ತೆಗೆದುಕೊಂಡಿದ್ದಾರೆ. ಚಿತ್ರದ ಬಗ್ಗೆ ಇಬ್ಬರು ಸ್ವಾಮೀಜಿಗಳು ಪ್ರಶಂಶಿಸಿದ್ದು, ಘಟನೆಯ ಬಗ್ಗೆ ಕಳವಳ ವ್ಯಕ್ತಪಡಿಸಿದರು. ಅಂದಿನ ಪರಿಸ್ಥಿತಿಯನ್ನು ಕಂಡು ನೊಂದುಕೊಂಡರು. ಇದನ್ನೂ ಓದಿ: ಹಿಜಬ್‌ ತೀರ್ಪು- ಹೈಕೋರ್ಟ್‌ ಜಡ್ಜ್‌ಗಳಿಗೆ ʼವೈʼ ಭದ್ರತೆ

  • ರಾಮಮಂದಿರ ನಿಧಿ ಸಂಗ್ರಹ – ಪೇಜಾವರ ಶ್ರೀಗಳ ನೇತೃತ್ವದಲ್ಲಿ ಭಾರೀ ದೇಣಿಗೆ ಸಂಗ್ರಹ

    ರಾಮಮಂದಿರ ನಿಧಿ ಸಂಗ್ರಹ – ಪೇಜಾವರ ಶ್ರೀಗಳ ನೇತೃತ್ವದಲ್ಲಿ ಭಾರೀ ದೇಣಿಗೆ ಸಂಗ್ರಹ

    ಉಡುಪಿ: ರಾಮ ರಾಮ ರಾಮ.. ದೇಶಾದ್ಯಂತ ಒಂದು ತಿಂಗಳು ಮರ್ಯಾದಾ ಪುರುಷೋತ್ತಮನ ನಾಮ ಮನೆ ಮನೆಗಳಿಗೆ ತಲುಪುತ್ತಿದೆ. ವಿಶ್ವದ ಅತೀ ದೊಡ್ಡ ಧನ ಸಂಗ್ರಹ ಅಭಿಯಾನ ಭಾರತದಲ್ಲಿ ನಡೆಯುತ್ತಿದೆ. ಕೇವಲ 15 ದಿನದಲ್ಲಿ ಜನ ರಾಮಲಲ್ಲಾನಿಗಾಗಿ ಜನ ಕೊಟ್ಟ ದೇಣಿಗೆ ಕೇಳಿದ್ರೆ ನಿಮಗೆ ಆಶ್ಚರ್ಯ ಆಗಬಹುದು.

    ಸಾಮಾನ್ಯ ಜನರೇ ಸೇರಿ ರಾಮಮಂದಿರ ನಿರ್ಮಾಣಕ್ಕೆ ತಗಲುವ ಧನ ಸಂಗ್ರಹಕ್ಕೆ ಮುಂದಾಗಿದ್ದಾರೆ. ಸರ್ಕಾರದ ನೆರವನ್ನೇ ಪಡೆಯದೇ ಸುಮಾರು ಒಂದೂವರೆ ಸಾವಿರ ಕೋಟಿ ವೆಚ್ಚದಲ್ಲಿ ರಾಮಲಲ್ಲಾನ ಮಂದಿರ ನಿರ್ಮಾಣವಾಗುತ್ತಿದೆ. ವಿಶ್ವಹಿಂದೂ ಪರಿಷತ್ ನೇತೃತ್ವದಲ್ಲಿ ಕೈಗೊಂಡ ದೇಶದ ಅಭಿಯಾನದ ನೇತೃತ್ವವನ್ನು ದಕ್ಷಿಣ ಭಾರತದಲ್ಲಿ ಪೇಜಾವರ ಸ್ವಾಮೀಜಿ ವಹಿಸಿಕೊಂಡಿದ್ದಾರೆ. ಶ್ರೀ ರಾಮಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ನ ದಕ್ಷಿಣ ಭಾರತದ ಏಕೈಕ ವಿಶ್ವಸ್ಥರಾಗಿರುವ ಸ್ವಾಮೀಜಿ ದಕ್ಷಿಣದ ರಾಜ್ಯಗಳಲ್ಲಿ ಅಭಿಯಾನ ಮಾಡುತ್ತಾ, ಪ್ರಮುಖ ಕೇಂದ್ರಗಳನ್ನು ಭೇಟಿಯಾಗಿ ಧನ ಸಂಗ್ರಹ ಮಾಡುತ್ತಿದ್ದಾರೆ. 15 ದಿನಗಳಲ್ಲಿ 525 ಕೋಟಿ ರೂಪಾಯಿ ಸಂಗ್ರಹವಾಗಿದೆ.

    ಪೇಜಾವರ ಮಠದ ವಿಶ್ವೇಶ ತೀರ್ಥರ ಕಾಲದಲ್ಲಿ ಕೋರ್ಟ್ ಕಟ್ಟಳೆಗಳು ಮುಗಿದು ವಿವಾದಿತ ಭೂಮಿ ಹಿಂದೂಗಳ ಪಾಲಾಗಿತ್ತು. ಗುರುಗಳು ವೃಂದಾವನಸ್ಥರಾದ ನಂತರ ಟ್ರಸ್ಟ್ ನ ವಿಶ್ವಸ್ಥ ಸ್ಥಾನವನ್ನು ವಿಶ್ವಪ್ರಸನ್ನ ತೀರ್ಥರಿಗೆ ಒಲಿದಿದ್ದು, ಜವಾಬ್ದಾರಿ ಹೊತ್ತುಕೊಂಡಿದ್ದಾರೆ. ಮಕರ ಸಂಕ್ರಾಂತಿಯ ದಿನ ತಿರುಗಾಟ ಆರಂಭಿಸಿರುವ ಶ್ರೀಗಳು ಕೇರಳ, ತಮಿಳ್ನಾಡು, ಆಂಧ್ರಪ್ರದೇಶಗಳಲ್ಲಿ ಅಭಿಯಾನ ನಡೆಸಿ ಧನ ಸಂಗ್ರಹ ಪೂರೈಸಿದ್ದಾರೆ. ಗ್ರಾಮದಿಂದ ರಾಜಭವನದವರೆಗೆ, ಧಾರ್ಮಿಕ ಕೇಂದ್ರ, ಶಿಕ್ಷಣ ಸಂಸ್ಥೆಗಳಿಗೆ ಭೇಟಿ ಮಾಡಿದ್ದಾರೆ.

    ಭಜನಾ ಮಂದಿರ, ಹಿಂದೂಪರ ಸಂಘಟನೆಗಳು ಮನೆ ಮನೆ ಭೇಟಿ ನೀಡುತ್ತಿದ್ದು ಧನ ಸಂಗ್ರಹಿಸುತ್ತಿವೆ. ಫೆಬ್ರವರಿ 27 ಮಾಘ ಪೂರ್ಣಿಮೆವರೆಗೆ ನಿಧಿ ಸಂಗ್ರಹ ಅಭಿಯಾನ ದೇಶದಲ್ಲಿ ನಡೆಯಲಿದೆ. ಸಾವಿರ ಕೋಟಿಗೂ ಅಧಿಕ ಹಣ ಸಂಗ್ರಹವಾಗುವ ನಿರೀಕ್ಷೆಯಿದೆ.

  • ಪೇಜಾವರ ಶ್ರೀಗಳ ಆರೋಗ್ಯ ಸುಧಾರಣೆಗಾಗಿ ವಿಶೇಷ ಪಾರಾಯಣ

    ಪೇಜಾವರ ಶ್ರೀಗಳ ಆರೋಗ್ಯ ಸುಧಾರಣೆಗಾಗಿ ವಿಶೇಷ ಪಾರಾಯಣ

    ದಾವಣಗೆರೆ: ಉಡುಪಿಯ ಪೇಜಾವರ ಶ್ರೀಗಳ ಆರೋಗ್ಯ ಸುಧಾರಣೆಗಾಗಿ ದಾವಣಗೆರೆಯ ಎಂಸಿಸಿ ಎ ಬ್ಲಾಕ್ ನಲ್ಲಿ ಕೃಷ್ಣ ಕಲಾ ಮಂದಿರದಲ್ಲಿ ಶ್ರೀಗಳ ಭಕ್ತರು ವಿಶೇಷ ಪಾರಾಯಣ ಹಾಗೂ ಹೋಮ ನೆರವೇರಿಸಿದ್ರು.

    ಕೃಷ್ಣ ಕಲಾ ಮಂದಿರದಲ್ಲಿ ನೂರಾರು ಭಕ್ತರಿಂದ ಹೋಮ, ಮನ್ಯು ಪಾರಾಯಣ, ವಿಷ್ಣು ಸಹಸ್ರನಾಮ, ಕೃಷ್ಟ ಅಷ್ಟೋತ್ತರ ಹಾಗೂ ವೆಂಕಟೇಶ್ವರ ಸ್ತೋತ್ರ ಪಾರಾಯಣ ಜರುಗಿತು. ಪೇಜಾವರ ಶ್ರೀಪಾದಂಗಳ ಆರೋಗ್ಯದಲ್ಲಿ ಚೇತರಿಕೆ ಕಂಡು ಬರಲಿ. ಎಂದಿನಂತೆ ಪೂಜೆ ಹಾಗೂ ಜಗತ್ ಕಲ್ಯಾಣ ಕಾರ್ಯಗಳಲ್ಲಿ ತೊಡಗಿಸಿಕೊಳ್ಳಲಿ ಎಂದು ಭಕ್ತರು ಪ್ರಾರ್ಥಿಸಿದರು.

    ಬ್ರಾಹ್ಮಣ ಸಮಾಜದಿಂದ ಪೂಜೆ, ಪಾರಾಯಣ ಹಾಗೂ ಹೋಮ ನಡೆಸುತ್ತಿದ್ದು, ಶ್ರೀಗಳು ಲೋಕ ಕಲ್ಯಾಣಕ್ಕಾಗಿ ಹುಟ್ಟಿದ್ದು, ಆರೋಗ್ಯದಲ್ಲಿ ಬೇಗ ಚೇತರಿಕೆಯಾಗಲಿ ಎಂದು ಪೇಜಾವರ ಶ್ರೀಗಳ ಫೋಟೋ ಇಟ್ಟು ಹೋಮ ಮಾಡಿ ಪ್ರಾರ್ಥನೆ ಸಲ್ಲಿಸಲಾಯ್ತು.

  • ನ್ಯುಮೋನಿಯಾಕ್ಕೆ ಹಲವು ದಿನದ ಚಿಕಿತ್ಸೆ ಅವಶ್ಯಕ: ನೀರಾ ರಾಡಿಯಾ

    ನ್ಯುಮೋನಿಯಾಕ್ಕೆ ಹಲವು ದಿನದ ಚಿಕಿತ್ಸೆ ಅವಶ್ಯಕ: ನೀರಾ ರಾಡಿಯಾ

    ಉಡುಪಿ: ನ್ಯುಮೋನಿಯಾಕ್ಕೆ ಹಲವು ದಿನ ಚಿಕಿತ್ಸೆ ಬೇಕು. ಪೇಜಾವರ ಶ್ರೀಗಳ ಆರೋಗ್ಯ ಸದ್ಯ ಸ್ಥಿರವಾಗಿದೆ. ಸಂಪೂರ್ಣ ಸುಧಾರಿಸಲು ಸಮಯಾವಕಾಶ ಬೇಕಾಗಬಹುದು ಎಂದು ಪೇಜಾವರ ಶ್ರೀ ಶಿಷ್ಯೆ, ಕಾರ್ಪೊರೇಟ್ ಜಗತ್ತಿನ ಪ್ರಭಾವಿ ನೀರಾ ರಾಡಿಯಾ ಹೇಳಿದ್ದಾರೆ.

    ಉಡುಪಿಯಲ್ಲಿ ಮಾತನಾಡಿದ ಅವರು, ನ್ಯುಮೋನಿಯಾಗೆ ಕೆಲ ದಿನ ಟ್ರೀಟ್‍ಮೆಂಟ್ ಕೊಡಬೇಕಾಗುತ್ತದೆ. ಸಾಮಾನ್ಯವಾಗಿ ನ್ಯುಮೋನಿಯಾ ಸಮಸ್ಯೆಗೆ ಹೆಚ್ಚು ದಿನ ಟ್ರೀಟ್ಮೆಂಟ್ ಬೇಕಾಗುತ್ತದೆ. ಶ್ರೀಗಳು ದಾಖಲಾದ ಸ್ಥಿತಿಗಿಂತ ಆರೋಗ್ಯ ಈಗ ಬಹಳ ಸುಧಾರಿಸಿದೆ ಎಂದರು. ಇದನ್ನೂ ಓದಿ: ಎದೆಯಲ್ಲಿದ್ದ ಕಫ ನೀರಾಗುತ್ತಿದೆ- ಚಿಕಿತ್ಸೆಗೆ ಪೇಜಾವರ ಶ್ರೀಗಳು ಸ್ಪಂದನೆ

    ತನ್ನ ನಿಯತಿ ಹೆಲ್ತ್ ಕೇರ್ ಮಥುರಾ, ಡೆಲ್ಲಿಯ ಆಸ್ಪತ್ರೆಯ ಉತ್ಪಲ್ ಶರ್ಮಾ ಮತ್ತು ಅಜಯ್ ಅಗರವಾಲ್ ಇಬ್ಬರು ತಜ್ಞರು ನನ್ನ ಜೊತೆಗಿದ್ದಾರೆ. ಅವರು ಕೆಎಂಸಿ ವೈದ್ಯರ ತಂಡದ ಜೊತೆ ಚರ್ಚೆ ಮಾಡಿದ್ದಾರೆ ಎಂದು ನೀರಾ ಹೇಳಿದರು.

    ಡಾ. ಉತ್ಪಲ್ ಶರ್ಮಾ ಮಾತನಾಡಿ, ಡಾಕ್ಟರ್ ಜೊತೆ ನಿರಂತರ ಸಂಪರ್ಕದಲ್ಲಿದ್ದೇವೆ. ಒಬ್ಬ ರೋಗಿಯನ್ನು ಮೂರು ದಿನ ಮಾನಿಟರ್ ಮಾಡಬೇಕು. ಗುರುಗಳ ಆರೋಗ್ಯದಲ್ಲಿ ಸುಧಾರಣೆ ಇದೆ. ಕೆಎಂಸಿ ವೈದ್ಯರ ತಂಡ ಬಹಳ ಶ್ರಮ ವಹಿಸುತ್ತಿದೆ ಎಂದರು.

  • ಎದೆಯಲ್ಲಿದ್ದ ಕಫ ನೀರಾಗುತ್ತಿದೆ- ಚಿಕಿತ್ಸೆಗೆ ಪೇಜಾವರ ಶ್ರೀಗಳು ಸ್ಪಂದನೆ

    ಎದೆಯಲ್ಲಿದ್ದ ಕಫ ನೀರಾಗುತ್ತಿದೆ- ಚಿಕಿತ್ಸೆಗೆ ಪೇಜಾವರ ಶ್ರೀಗಳು ಸ್ಪಂದನೆ

    ಉಡುಪಿ: ಪೇಜಾವರ ಶ್ರೀ ವಿಶ್ವೇಶತೀರ್ಥ ಸ್ವಾಮೀಜಿಗಳ ಆರೋಗ್ಯ ಸ್ಥಿರವಾಗಿದೆ. ಕಳೆದ 48 ಗಂಟೆಯಲ್ಲಿ ಹೆಚ್ಚು ಚೇತರಿಸಿಕೊಂಡಿದ್ದು, ಮಣಿಪಾಲ ಕೆಎಂಸಿ ಬಾಳಿಗಾ ಬ್ಲಾಕ್ ಐಸಿಯುನಲ್ಲಿ ಶ್ರೀಗಳು ಚಿಕಿತ್ಸೆ ಪಡೆಯುತ್ತಿದ್ದಾರೆ.

    ಶ್ರೀಗಳ ಎದೆಯಲ್ಲಿ ಕಟ್ಟಿದ ಕಫ ನಿಧಾನವಾಗಿ ಕರಗುತ್ತಿದೆ. ನ್ಯುಮೋನಿಯಾ ಸಮಸ್ಯೆಯಿಂದ ಬಳಲುತ್ತಿದ್ದು, ಚೇತರಿಸಿಕೊಳ್ಳುತ್ತಿದ್ದಾರೆ. ಈ ಬಗ್ಗೆ ಭಕ್ತರು ಯಾವುದೇ ಆತಂಕ ಪಡಬೇಕಿಲ್ಲ. ಸುಳ್ಳು ವದಂತಿಗಳಿಗೆ ಯಾರೂ ಕಿವಿಗೊಡಬೇಡಿ, ಎರಡು ದಿನದಿಂದ ಎಲ್ಲಾ ಬೆಳವಣಿಗೆಗಳನ್ನು ಗಮನಿಸುತ್ತಿದ್ದೇನೆ ಎಂದು ಸ್ವಾಮೀಜಿ ಆಪ್ತ ಸಹಾಯಕ ವಿಷ್ಣುಮೂರ್ತಿ ಆಚಾರ್ಯ ಹೇಳಿದ್ದಾರೆ.

    ವಿಶ್ವಪ್ರಸನ್ನ ತೀರ್ಥರಿಂದ ವಿಶೇಷ ಪೂಜೆ:
    ಶ್ರೀಗಳ ಅನಾರೋಗ್ಯ ಹಿನ್ನೆಲೆಯಲ್ಲಿ ಪೇಜಾವರ ಮಠದಲ್ಲಿ ಪೂಜೆ, ಪುನಸ್ಕಾರ ಮುಂದುವರಿದಿದೆ. ಪೇಜಾವರ ಕಿರಿಯ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ದೇವರಿಗೆ ವಿಶೇಷ ಪ್ರಾರ್ಥನೆ, ಪೂಜೆ ಸಲ್ಲಿಸಿ, ಹಿರಿಯ ಶ್ರೀಗಳು ಆರೋಗ್ಯವಂತರಾಗಿ ಮಠಕ್ಕೆ ವಾಪಸ್ ಆಗಬೇಕು ಎಂದು ದೇವರಲ್ಲಿ ಕೇಳಿಕೊಂಡಿದ್ದಾರೆ. ಪೂಜೆಯಲ್ಲಿ ಮಠದ ಶಿಷ್ಯರು, ಸಿಬ್ಬಂದಿ ಭಾಗಿಯಾಗಿದ್ದಾರೆ.

    ಹೆಲ್ತ್ ಬುಲೆಟಿನ್ ರಿಲೀಸ್:
    ಕೆಎಂಸಿ ಆಸ್ಪತ್ರೆ ಐದನೇ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಲಿದೆ. ವೈದ್ಯರು 48 ಗಂಟೆಗಳ ಅವಲೋಕನಾ ಅವಧಿ ಮುಗಿಸಿದ್ದು, ಈ ಹೆಲ್ತ್ ಬುಲೆಟಿನ್ ಬಹಳ ಮಹತ್ವ ಪಡೆದಿದೆ.

  • ಪೇಜಾವರರನ್ನು ಭಗವಾನ್ ಕೃಷ್ಣನೇ ಕಾಪಾಡುತ್ತಾನೆ: ಡಾ. ವೀರೇಂದ್ರ ಹೆಗ್ಗಡೆ

    ಪೇಜಾವರರನ್ನು ಭಗವಾನ್ ಕೃಷ್ಣನೇ ಕಾಪಾಡುತ್ತಾನೆ: ಡಾ. ವೀರೇಂದ್ರ ಹೆಗ್ಗಡೆ

    ಉಡುಪಿ: ಪೂಜ್ಯ ಪೇಜಾವರ ಶ್ರೀಗಳು ಅನಾರೋಗ್ಯದಿಂದಿದ್ದಾರೆ. ಐಸಿಯುನಲ್ಲಿರೋದನ್ನು ನೋಡಿ ಬಂದಿದ್ದೇನೆ. ನಿಧಾನವಾಗಿ ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಹೇಳಿದ್ದಾರೆ.

    ಉಡುಪಿಯಲ್ಲಿ ಮಾತನಾಡಿದ ಅವರು, ವಯೋಧರ್ಮ ಪ್ರಕಾರ ನಿಧಾನ ಸ್ಪಂದನೆ ಆಗ್ತಾಯಿದೆ. ಸ್ವಾಮೀಜಿಗಳಿಗೆ ಬೇರೆ ಯಾವುದೇ ಕಾಯಿಲೆ, ಅಡ್ಡ ರೋಗ ಇಲ್ಲ. ಚಿಕಿತ್ಸೆಗೆ ನಿಧಾನವಾಗಿ ಸ್ಪಂದಿಸುತ್ತಿದ್ದಾರೆ. ಸ್ವಾಮೀಜಿಗಳಿಗೆ ಶೀಘ್ರ ಆರೋಗ್ಯ ವೃದ್ಧಿಯಾಗಲಿ. ಇಡೀ ದೇಶ ಅವರಿಗಾಗಿ ಪ್ರಾರ್ಥನೆ ಮಾಡುತ್ತಿದೆ. ಅವರು ಸದಾ ದೇವರ ಸಾನಿಧ್ಯದಲ್ಲೇ ಇದ್ದವರು. ದೇವರು ಅವರನ್ನು ಶೀಘ್ರ ಗುಣಮುಖ ಮಾಡುತ್ತಾರೆ. ಅಗತ್ಯ ಇಲ್ಲದ ಅಪಪ್ರಚಾರ ಬೇಡ. ಯಾರೂ ಮನಸ್ಸನ್ನು ವ್ಯಸ್ಥ ಮಾಡಿಕೊಳ್ಳಬೇಡಿ. ಕೆಟ್ಟ ಸಂದೇಶ ಬರಲ್ಲ, ಒಳ್ಳೆ ಸಂದೇಶ ಬರುತ್ತದೆಯೆಂದು ಡಾ. ವೀರೇಂದ್ರ ಹೆಗ್ಗಡೆ ಹೇಳಿದರು.

    ಆಸ್ಪತ್ರೆಗೆ ಆಗಮಿಸಿದ ಸಚಿವ ಈಶ್ವರಪ್ಪ:
    ಸಚಿವ ಕೆ.ಎಸ್.ಈಶ್ವರಪ್ಪ ಎರಡನೇ ಬಾರಿ ಪೇಜಾವರ ಶ್ರೀಗಳ ಆರೋಗ್ಯ ವಿಚಾರಿಸಿದರು. ಪೇಜಾವರ ಶ್ರೀಗಳ ಆರೋಗ್ಯ ಸಾಕಷ್ಟು ಸುಧಾರಣೆ ಆಗಿದೆ. ನಿನ್ನೆಗಿಂತ ಇಂದು ಹೆಚ್ಚಿನ ಸುಧಾರಣೆಯಾಗಿದೆ. ವೈದ್ಯರು ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಖುದ್ದು ನಾನೇ ನೋಡಿದಾಗಲೂ ನನಗೂ ಹಾಗೇ ಅನಿಸಿದೆ. ಅಯೋಧ್ಯೆ ರಾಮಮಂದಿರ ಆಗುವವರೆಗೆ ನಾನಿರಬೇಕು ಎಂಬ ಆಸೆ ಅವರಿಗಿತ್ತು. ಅವರ ಆಸೆಯನ್ನು ಉಡುಪಿಯ ಶ್ರೀ ಕೃಷ್ಣ ನೆರವೇರಿಸುತ್ತಾನೆ ಎಂಬ ವಿಶ್ವಾಸವಿದೆ ಎಂದು ಈಶ್ವರಪ್ಪ ಹೇಳಿದರು. ಸೋಷಿಯಲ್ ಮೀಡಿಯಾದಲ್ಲಿ ವದಂತಿಗಳನ್ನು ಸೃಷ್ಠಿ ಮಾಡಲಾಗುತ್ತಿದೆ. ವದಂತಿಗಳಿಗೆ ಯಾರು ಕಿವಿಗೊಡಬೇಡಿ. ಶ್ರೀಗಳ ಆರೋಗ್ಯ ಸಾಕಷ್ಟು ಸುಧಾರಣೆ ಆಗ್ತಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

    ಈ ನಡುವೆ ಎರಡು ದಿನಗಳಿಂದ ಪೇಜಾವರ ಶ್ರೀಗಳ ಶಿಷ್ಯೆ ನೀರಾ ರಾಡಿಯಾ ಕೆಎಂಸಿಯಲ್ಲೇ ಇದ್ದಾರೆ. ಕಾರ್ಪೋರೇಟ್ ಜಗತ್ತಿನ ಪ್ರಭಾವಿ ಮಹಿಳೆ ಆಗಿರುವ ನೀರಾ ರಾಡಿಯಾ, ಶುಕ್ರವಾರ ರಾತ್ರಿ ಮತ್ತು ಶನಿವಾರ ಮುಂಜಾನೆಯಿಂದ ಆಸ್ಪತ್ರೆಯಲ್ಲಿದ್ದು, ತಜ್ಞ ವೈದ್ಯರ ಜೊತೆಗೆ ಕೆಎಂಸಿ ಗೆ ಬಂದು ಮೇಲ್ವಿಚಾರಣೆ ಮಾಡುತ್ತಿದ್ದಾರೆ. ನೀರಾ ರಾಡಿಯಾ ಮಾತನಾಡಿ, ಶ್ರೀಗಳ ಆರೋಗ್ಯದಲ್ಲಿ ಸಾಕಷ್ಟು ಸುಧಾರಣೆ ಇದೆ. ನಿನ್ನೆಗಿಂತ ಇವತ್ತು ಮತ್ತಷ್ಟು ಚೇತರಿಸಿಕೊಂಡಿದ್ದಾರೆ. ಮಣಿಪಾಲ ಆಸ್ಪತ್ರೆಯಲ್ಲಿ ಅವರಿಗೆ ಉತ್ತಮ ಚಿಕಿತ್ಸೆ ದೊರಕುತ್ತಿದೆ ಎಂದು ಹೇಳಿದರು.

  • ಪೇಜಾವರಶ್ರೀ ಆರೋಗ್ಯದಲ್ಲಿ ಚೇತರಿಕೆ- ಕೆಎಂಸಿ ಹೆಲ್ತ್ ಬುಲೆಟಿನ್ ರಿಲೀಸ್

    ಪೇಜಾವರಶ್ರೀ ಆರೋಗ್ಯದಲ್ಲಿ ಚೇತರಿಕೆ- ಕೆಎಂಸಿ ಹೆಲ್ತ್ ಬುಲೆಟಿನ್ ರಿಲೀಸ್

    ಉಡುಪಿ: ಉಸಿರಾಟ ಸಮಸ್ಯೆಯಿಂದ ಬಳಲುತ್ತಿರುವ ಪೇಜಾವರ ವಿಶ್ವೇಶತೀರ್ಥ ಶ್ರೀಗಳು ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ ಎಂದು ಕೆಎಂಸಿ ಮಣಿಪಾಲದ ಹಿರಿಯ ವೈದ್ಯೆ ಡಾ. ಸುಧಾ ವಿದ್ಯಾಸಾಗರ್ ಹೇಳಿದ್ದಾರೆ.

    ದಿನದ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದ ಅವರು, ಉಸಿರಾಟದ ಸಮಸ್ಯೆಯಿಂದ ಸ್ವಾಮೀಜಿ ಕೆಎಂಸಿಗೆ ಬೆಳಗ್ಗೆ ದಾಖಲಾಗಿದ್ದರು. ಈಗ ಕೊಂಚ ಚೇತರಿಸಿಕೊಳ್ಳುತ್ತಿದ್ದಾರೆ. ಸ್ವಾಮೀಜಿ ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ. ಆಸ್ಪತ್ರೆಗೆ ದಾಖಲಾಗುವಾಗ ಬಹಳ ಸಮಸ್ಯೆಯಿತ್ತು ಎಂದು ಹೇಳಿದರು.

    ಶ್ರೀಗಳಿಗೆ ವೆಂಟಿಲೇಟರ್ ಅಳವಡಿಸಿದ್ದೇವೆ, ಚೇತರಿಸಿಕೊಳ್ಳಲು ಮದ್ದುಗಳನ್ನು ಹಾಕಿರುವುದರಿಂದ ಅಮಲಿನಲ್ಲಿದ್ದಾರೆ ಎಂದು ಡಾ. ಸುಧಾ ವಿದ್ಯಾಸಾಗರ್ ಹೇಳಿದರು.

    ಪೇಜಾವರ ಶ್ರೀಗಳಿಗೆ ಕೆಎಂಸಿಯ ಆರು ತಜ್ಞ ವೈದ್ಯರಿಂದ ಚಿಕಿತ್ಸೆ ಸಿಗುತ್ತಿದೆ. ಡಾ. ಸುಧಾ ವಿದ್ಯಾಸಾಗರ್ ವೈದ್ಯರ ತಂಡದ ನೇತೃತ್ವ ವಹಿಸಿದ್ದು, ರವಿರಾಜ್ ಆಚಾರ್ಯ, ಡಾ. ಶ್ವೇತಪ್ರಿಯ, ಡಾ. ಮಂಜುನಾಥ ಹಂದೆ, ಡಾ. ಪದ್ಮಕುಮಾರ್, ಡಾ. ವಿಶಾಲ್ ಶಾನುಭೋಗ್ ಅವರು 24 ಗಂಟೆ ನಿಗಾ ವಹಿಸಲಿದ್ದಾರೆ. ಕೆಎಂಸಿ ವೈದ್ಯಕೀಯ ಅಧೀಕ್ಷಕ ಡಾ. ಅವಿನಾಶ್ ಶೆಟ್ಟಿ ಶ್ರೀಗಳ ಚಿಕಿತ್ಸೆಯ ಸಂಪೂರ್ಣ ಮೇಲ್ವಿಚಾರಣೆ ಜವಾಬ್ದಾರಿ ಹೊತ್ತಿದ್ದಾರೆ.

  • ವೇದವ್ಯಾಸರೊಬ್ಬರೇ ರಾಷ್ಟ್ರಪಿತ- ಉಳಿದವರೆಲ್ಲಾ ರಾಷ್ಟ್ರಪುತ್ರರಷ್ಟೇ ಅಂದ್ರು ಪೇಜಾವರ ಶ್ರೀ

    ವೇದವ್ಯಾಸರೊಬ್ಬರೇ ರಾಷ್ಟ್ರಪಿತ- ಉಳಿದವರೆಲ್ಲಾ ರಾಷ್ಟ್ರಪುತ್ರರಷ್ಟೇ ಅಂದ್ರು ಪೇಜಾವರ ಶ್ರೀ

    -ಮಹಾತ್ಮ ಗಾಂಧೀಜಿ ರಾಷ್ಟ್ರಪಿತ ಅಲ್ವಾ..?

    ಧಾರವಾಡ: ಮಹಾಭಾರತ ರಚಿಸಿರೋ ವೇದವ್ಯಾಸರೊಬ್ಬರೇ ನಮ್ಮ ದೇಶದ ರಾಷ್ಟ್ರಪಿತ. ಉಳಿದವರು ಅನೇಕರು ದೊಡ್ಡ ವ್ಯಕ್ತಿಗಳಿದ್ದರೂ ಅವರೆಲ್ಲ ರಾಷ್ಟ್ರಪುತ್ರರು ಮಾತ್ರ ಅಂತ ಪೇಜಾವರ ಶ್ರೀಗಳು ಹೇಳಿದ್ದಾರೆ. ಧಾರವಾಡದಲ್ಲಿ ಮಾತನಾಡಿ, ಪರೋಕ್ಷವಾಗಿ ಮಹಾತ್ಮಾ ಗಾಂಧಿ ರಾಷ್ಟ್ರಪಿತ ಅಲ್ಲ ಅಂತ ವಿವಾದದ ಕಿರಿ ಹೊತ್ತಿಸಿದ್ದಾರೆ.

    ಮಹಾಭಾರತದಲ್ಲಿ ಎಲ್ಲವೂ ಅಡಗಿದೆ, ಅರ್ಥಶಾಸ್ತ್ರ, ರಾಜ್ಯಶಾಸ್ತ್ರ, ತತ್ವಶಾಸ್ತ್ರ, ವೇದಾಂತ ಹೀಗೆ ಎಲ್ಲವನ್ನು ವೇದವ್ಯಾಸರು ಮಹಾಭಾರತದ ಮೂಲಕ ಹೇಳಿಕೊಟ್ಟಿದ್ದಾರೆ. ರಾಜಕಾರಣ ಹೇಗಿರಬೇಕು, ರಾಜನಾದವರು ದೇಶ ಪರಿಪಾಲನೆ ಹೇಗೆ ಮಾಡಬೇಕು ಎಂಬುದೆಲ್ಲವನ್ನು ವೇದವ್ಯಾಸರು ಮಹಭಾರತದ ಮೂಲಕ ಪರಿಚಯ ಮಾಡಿಕೊಟ್ಟಿದ್ದಾರೆ. ಹೀಗಾಗಿ ವೇದವ್ಯಾಸರೊಬ್ಬರೇ ನಮ್ಮ ದೇಶದ ರಾಷ್ಟ್ರಪಿತ ಅಂತಾ ಹೇಳಿದ್ದಾರೆ.

    ಪ್ರಧಾನಿಗಳು ಕಳೆದ ಐದು ವರ್ಷಗಳಲ್ಲಿ ಅಭಿವೃದ್ಧಿ ಕೆಲಸಗಳನ್ನು ಮಾಡಿ ಬಹುಮತ ಪಡೆದು ಎರಡನೇ ಬಾರಿ ಸಂಸತ್ ಪ್ರವೇಶ ಮಾಡುತ್ತಿದ್ದಾರೆ. ಹಾಗಾಗಿ ಪ್ರಧಾನಿಗಳಿಗೆ ಅಭಿನಂದನೆ ಸಲ್ಲಿಸುತ್ತೇವೆ. ಮುಂದಿನ ದಿನಗಳಲಿಯೂ ರಾಜ್ಯಸಭೆಯಲ್ಲಿ ಬಹುಮತ ಬರಲಿದ್ದು, ರಾಮಮಂದಿರ ನಿರ್ಮಾಣ ಆಗಲಿದೆ ಎಂಬ ಪೂರ್ಣ ಭರವಸೆಯನ್ನು ಹೊಂದಿದ್ದೇವೆ. ಸುಪ್ರೀಂ ಕೋರ್ಟ್ ತೀರ್ಪಿಗೆ ಕಾಯಬೇಕು. ಮೋದಿ ಅವರ ಕೈಯಲ್ಲಿ ಐದು ವರ್ಷಗಳಿದ್ದು, ರಾಮಮಂದಿರ ನಿರ್ಮಾಣ ಮಾಡಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.