Tag: Pejawar Sri

  • ರಾಮಮಂದಿರ ಸುಗ್ರೀವಾಜ್ಞೆಯ ಪ್ರಧಾನಿಗಳ ಹೇಳಿಕೆಗೆ ನಮ್ಮ ಸ್ವಾಗತವಿದೆ: ಪೇಜಾವರ ಶ್ರೀ

    ರಾಮಮಂದಿರ ಸುಗ್ರೀವಾಜ್ಞೆಯ ಪ್ರಧಾನಿಗಳ ಹೇಳಿಕೆಗೆ ನಮ್ಮ ಸ್ವಾಗತವಿದೆ: ಪೇಜಾವರ ಶ್ರೀ

    ಬೆಂಗಳೂರು: ಅಯೋಧ್ಯೆ ರಾಮಮಂದಿರ ನಿರ್ಮಾಣದ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರು ನೀಡಿರುವ ಹೇಳಿಕೆಗೆ ನಮ್ಮ ಸ್ವಾಗತವಿದೆ ಎಂದು ಪೇಜಾವರ ಶ್ರೀಗಳು ಹೇಳಿದ್ದಾರೆ.

    ನಗರದಲ್ಲಿ ಈ ಕುರಿತು ಪಬ್ಲಿಕ್ ಟಿವಿಗೆ ಪ್ರತಿಕ್ರಿಯೆ ನೀಡಿ ಮಾತನಾಡಿದ ಅವರು, ದೇಶದಲ್ಲಿ ಕಾನೂನು ಮೀರಿ ಯಾವುದನ್ನು ಮಾಡಬಾರದು. ಈ ಬಗ್ಗೆ ಮೋದಿ ಅವರ ಹೇಳಿಕೆಯ ಬಗ್ಗೆ ನಮ್ಮ ಸ್ವಾಗತ ಇದೆ. ಆದರೆ ಮಂದಿರದ ನಿರ್ಮಾಣದ ಬಗ್ಗೆ ಕಾನೂನು ತಜ್ಞರು ಸಲಹೆ ಪಡೆದು ಸುಗ್ರೀವಾಜ್ಞೆ ಹೊರಡಿಸಬಹುದು. ಈ ಕುರಿತು ನಮ್ಮ ಹಂತದಲ್ಲಿ ಮತ್ತೆ ಕಾನೂನು ತಜ್ಞರೊಂದಿಗೆ ಈ ಬಗ್ಗೆ ಚರ್ಚೆ ಮಾಡುತ್ತೇವೆ. ಕಾನೂನನ್ನೂ ಮೀರಿ ಯಾವುದೂ ಮಾಡಬಾರದು ಎಂಬ ಕಾರಣಕ್ಕೆ ಪ್ರಧಾನಿಗಳು ಈ ರೀತಿ ಹೇಳಿರಬಹುದು ಎಂದರು.

    ಮೋದಿ ಅವರು ಸಂವಿಧಾನದ ಒಳಗೆ ನಿರ್ಧಾರ ಮಾಡುವುದು ಎಂದು ಹೇಳಿದ್ದಾರೆ. ಆದ್ದರಿಂದ ನಾನು ರಾಮಮಂದಿರ ಬಗ್ಗೆ ಕಾನೂನು ತಜ್ಞರು ಹಾಗೂ ಸಂಘಟನೆಗಳೊಂದಿಗೆ ಬಗ್ಗೆ ಚರ್ಚೆ ನಡೆಸುತ್ತೇನೆ. ಸುಗ್ರೀವಾಜ್ಞೆ ಹೊರಡಿಸುವುದು ಸಂವಿಧಾನ ವಿರೋಧವಲ್ಲ ಎಂಬ ಅಭಿಪ್ರಾಯ ಇದೆ. ಈ ತಿಂಗಳ ಕೊನೆಗೆ ಕುಂಭಮೇಳ ನಡೆಯಲಿದ್ದು, ಇಲ್ಲಿ ಚರ್ಚೆ ನಡೆಸಿ ಅಂತಿಮ ನಿರ್ಧಾರ ತಿಳಿಸುತ್ತೇವೆ. ಈ ಬಳಿಕವೇ ನನ್ನ ಖಚಿತ ಅಭಿಪ್ರಾಯವೂ ತಿಳಿಸುತ್ತೇನೆ ಎಂದರು.

    ಮೋದಿ ಹೇಳಿದ್ದೇನು?
    ಸುಪ್ರೀಂ ಕೋರ್ಟ್ ಅಯೋಧ್ಯೆ ಕುರಿತು ತೀರ್ಪು ನೀಡಿದ ಬಳಿಕ ಸರ್ಕಾರ ಮುಂದಿನ ನಿರ್ಧಾರವನ್ನು ತೆಗೆದುಕೊಳ್ಳುತ್ತದೆ. ನ್ಯಾಯಾಲಯದಲ್ಲಿ ರಾಮಮಂದಿರಕ್ಕೆ ಸಂಬಂಧಿಸಿದ ಪ್ರಕರಣದ ವಿಚಾರಣೆ ವಿಳಂಬವಾಗಲು ಕಾಂಗ್ರೆಸ್ ವಕೀಲರು ಕಾರಣ. ರಾಮಮಂದಿರ ಬಿಜೆಪಿ ಭಾವಾತ್ಮಕ ವಿಚಾರವಾಗಿದ್ದು ಅದನ್ನು ನಾವು ನಿರ್ಲಕ್ಷ್ಯ ವಹಿಸಿಲ್ಲ. ರಾಮಮಂದಿರವನ್ನು ಸಂವಿಧಾನದ ವ್ಯಾಪ್ತಿಯಲ್ಲಿ ಇತ್ಯರ್ಥ ಪಡಿಸುವುದಾಗಿ ಬಿಜೆಪಿ ಪ್ರಣಾಳಿಕೆಯಲ್ಲಿ ತಿಳಿಸಿದೆ. ಹೀಗಾಗಿ ನಾವು ನ್ಯಾಯಾಂಗದಲ್ಲಿ ನಂಬಿಕೆ ಇಟ್ಟಿದ್ದೇವೆ. ಸುಪ್ರೀಂ ಕೋರ್ಟ್ ತೀರ್ಪಿನ ನಂತರವಷ್ಟೇ ರಾಮಮಂದಿರ ನಿರ್ಮಾಣಕ್ಕೆ ಸುಗ್ರೀವಾಜ್ಞೆಯನ್ನು ಹೊರಡಿಸುವ ನಿರ್ಧಾರವನ್ನು ಕೈಗೊಳ್ಳಲಾಗುವುದು ಎಂದು ಪ್ರಧಾನಿ ಮೋದಿ ಸುದ್ದಿ ಸಂಸ್ಥೆಗೆ ನೀಡಿದ ಸಂದರ್ಶನದಲ್ಲಿ ಸ್ಪಷ್ಟಪಡಿಸಿದ್ದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv, ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಬಾಬ್ರಿ ಮಸೀದಿ ಗುಂಬಜ್ ಉರುಳಿಸಿದವನ ಕಪಾಳಕ್ಕೆ ಬಾರಿಸಿದ್ದೆ: ಪೇಜಾವರ ಶ್ರೀ

    ಬಾಬ್ರಿ ಮಸೀದಿ ಗುಂಬಜ್ ಉರುಳಿಸಿದವನ ಕಪಾಳಕ್ಕೆ ಬಾರಿಸಿದ್ದೆ: ಪೇಜಾವರ ಶ್ರೀ

    – ರಾಮಮಂದಿರಕ್ಕೆ ದೇಶದಲ್ಲಿ ಸಾರ್ವತ್ರಿಕ ಮತಗಣನೆಯಾಗಲಿ

    ಉಡುಪಿ: ಬಾಬ್ರಿ ಮಸೀದಿಯ ಮೊದಲ ಗುಂಬಜ್ ಕೆಡವಿದವನ ಕಪಾಳಕ್ಕೆ ನಾನು ಬಾರಿಸಿದ್ದೆ. ಮಸೀದಿ ಕೆಡವುದರ ಬಗ್ಗೆ ಯಾವುದೇ ಪೂರ್ವ ಸೂಚನೆ ಅಂದು ಇರಲಿಲ್ಲ ಎಂದು ಉಡುಪಿ ಪೇಜಾವರ ಮಠಾಧೀಶ ವಿಶ್ವೇಶತೀರ್ಥ ಸ್ವಾಮೀಜಿ ಹಳೆ ನೆನಪನ್ನು ಕೆದಕಿದ್ದಾರೆ.

    ಪಬ್ಲಿಕ್ ಟಿವಿ ಜಿತೆ ಮಾತನಾಡಿದ ಪೇಜಾವರ ಶ್ರೀಗಳು, ಮಸೀದಿ ಧ್ವಂಸದಲ್ಲಿ ನನ್ನ ಪಾತ್ರ ಇಲ್ಲ. ಹೋಮದ ಮುಂದೆ ನಾನು ಜಪಮಾಡುತ್ತಾ ಕುಳಿತ್ತಿದ್ದಾಗ ಗುಂಬಜ್ ಮೇಲೆ ಏಕಾಏಕಿ ಕಲ್ಲುಗಳು ಬಿದ್ದವು. ಪೂಜೆ ಬಿಟ್ಟು ಮಸೀದಿಯೊಳಗೆ ನಾನು ಓಡಿಹೋದಾಗ ಯುವಕರ ಗುಂಪು ಕೇಕೆ ಹಾಕುತ್ತಾ ಸಂಭ್ರಮದಲ್ಲಿತ್ತು. ಕಟ್ಟಡ ಕೆಡವಿದ ಕರಸೇವಕನ ಕಪಾಳಕ್ಕೆ ನಾನು ಬಾರಿಸಿದ್ದೆ. ಕೆನ್ನೆಗೆ ಬಾರಿಸಿ ಅಲ್ಲೇ ಬೈದಿದ್ದೇನೆ. ನಾನು ಮಸೀದಿ ಧ್ವಂಸ ಮಾಡಿಲ್ಲ, ಕೆಡವಲು ಪ್ರಚೋದನೆ ಕೊಟ್ಟಿಲ್ಲ. ನನ್ನ ಮೇಲೆ ಸುಮ್ಮನೆ ಆರೋಪ ಮಾಡಬೇಡಿ. ಎಲ್ಲರೂ ಈ ಬಗ್ಗೆ ತಿಳಿಯದೆ ಮಾತನಾಡುತ್ತಿದ್ದಾರೆ. ಸಂತರು, ಆ ಕಾಲದ ರಾಜಕಾರಣಿಗಳು, ಮಾಧ್ಯಮಗಳನ್ನು ಕೇಳಿ ಸತ್ಯ ತಿಳಿದುಕೊಳ್ಳಿ ಎಂದು ಹೇಳಿದರು.

    ಕಾನೂನು ಸುವ್ಯವಸ್ಥೆ ಕಾಪಾಡುವ ಸವಾಲು ಇಟ್ಟುಕೊಂಡೇ ಕೇಂದ್ರ ಸರ್ಕಾರ ರಾಮ ಮಂದಿರ ನಿರ್ಮಾಣ ಕುರಿತಾಗಿ ಸಾರ್ವತ್ರಿಕ ಮತಗಣನೆ ಮಾಡಲಿ. ಚುನಾವಣೆ ಬಂದಾಗಲೇ ರಾಮಮಂದಿರ ಹೋರಾಟ ಮಾಡಬೇಕು. ಬಿಜೆಪಿಯವರು ಮಂದಿರ ಘೋಷಣೆ ಮಾಡುತ್ತಾ ಅಧಿಕಾರಕ್ಕೆ ಬಂದರು. ಮೋದಿ ಸರ್ಕಾರ ಅಧಿಕಾರಕ್ಕೆ ಬಂದು ನಾಲ್ಕೂವರೆ ವರ್ಷ ಆದರೂ ರಾಮಮಂದಿರ ನಿರ್ಮಾಣವಾಗಿಲ್ಲ ಎಂದು ಪೇಜಾವರ ಶ್ರೀಗಳು ಟೀಕಿಸಿದರು.

    ದೇಶದ ಜನಾಪೇಕ್ಷೆಗೆ ಸರ್ಕಾರದಲ್ಲಿ ಬೆಲೆ ಇಲ್ಲವೇ ಎಂದ ಶ್ರೀಗಳು ಕೇಂದ್ರ ಸರ್ಕಾರ ಒಂದೋ ಸುಗ್ರೀವಾಜ್ಞೆ ಹೊರಡಿಸಲಿ. ಇಲ್ಲವೇ ದೇಶಾದ್ಯಂತ ಸಾರ್ವತ್ರಿಕ ಮತಗಣನೆ ನಡೆಸಲಿ. ರೆಫರೆಂಡಮ್ ಮಾಡಲು ಬಹಳ ಖರ್ಚು ತಗಲಬಹುದು, ಶಾಂತಿ ಸುವ್ಯವಸ್ಥೆ ಕಾಪಾಡುವುದು ಸವಾಲಿನ ವಿಚಾರವಾಗಬಹುದು. ಆದ್ರೆ ಮಂದಿರ ನಿರ್ಮಾಣ ಆಗಲೇಬೇಕು ಎಂದು ಒತ್ತಾಯಿಸಿದರು.

    ಜನಾಗ್ರಹ ಸಭೆಯಲ್ಲಿ ಮುಸಲ್ಮಾನ ಸಮುದಾಯವನ್ನು ಬೈಯ್ಯಬಾರದು. ನಾನು ಭಾಗಿಯಾದ ವೇದಿಕೆಯಲ್ಲಿ ಮುಸಲ್ಮಾನರನ್ನು ಟೀಕಿಸದಂತೆ ನೋಡಿಕೊಂಡಿದ್ದೇನೆ. ವಿಶ್ವಹಿಂದೂ ಪರಿಷದ್, ಬಜರಂಗದಳ ಕಾರ್ಯಕರ್ತರು, ನಾಯಕರು ವಿವಾದ ಶುರುಮಾಡುವ, ಇನ್ನೊಬ್ಬರ ಮನಸ್ಸಿಗೆ ನೋಯಿಸುವಂತಹ ಮಾತುಗಳನ್ನು ಆಡಬಾರದು ಎಂದು ವಿನಂತಿಸಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ರಾಮ ಮಂದಿರಕ್ಕೆ ಕಾಂಗ್ರೆಸ್ ವಿರೋಧಿಸಿದರೆ ಚುನಾವಣೆಯಲ್ಲಿ ಪಾಠ: ಪೇಜಾವರ ಶ್ರೀ

    ರಾಮ ಮಂದಿರಕ್ಕೆ ಕಾಂಗ್ರೆಸ್ ವಿರೋಧಿಸಿದರೆ ಚುನಾವಣೆಯಲ್ಲಿ ಪಾಠ: ಪೇಜಾವರ ಶ್ರೀ

    ಮಂಗಳೂರು: ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ಕಾಂಗ್ರೆಸ್ ವಿರೋಧಿಸಿದರೆ ಚುನಾವಣೆಯಲ್ಲಿ ಜನ ಪಾಠ ಕಲಿಸುತ್ತಾರೆ ಎಂದು ಉಡುಪಿಯ ಪೇಜಾವರ ಶ್ರೀಗಳು ಹೇಳಿದ್ದಾರೆ.

    ನಗರದಲ್ಲಿ ನಡೆಯುತ್ತಿರುವ ರಾಮ ಮಂದಿರ ಬೃಹತ್ ಜನಾಗ್ರಹ ಸಭೆಯಲ್ಲಿ ಮಾತನಾಡಿದ ಶ್ರೀಗಳು, ಕೋರ್ಟ್ ನಿಂದ ಹೊರಗೆ ಮಂದಿರ ನಿರ್ಮಾಣದ ಸಮಸ್ಯೆ ಬಗೆಹರಿಸಬೇಕು. ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಸಂಸತ್ತಿನ ಸಂಯುಕ್ತ ಸಭೆ ಕರೆದು ನಿರ್ಧಾರ ತೆಗೆದುಕೊಳ್ಳಬೇಕು. ಅವಶ್ಯಕತೆ ಬಿದ್ದರೆ ಸುಗ್ರೀವಾಜ್ಞೆ ಅಥವಾ ಶಾಸನ ರಚಿಸಿ ಮಂದಿರ ನಿರ್ಮಾಣಕ್ಕೆ ನಿರ್ಣಯ ಕೈಗೊಳ್ಳಬೇಕು ಎಂದು ಹೇಳಿದರು.

    ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ಮುಸ್ಲಿಮರು ವಿರೋಧ ವ್ಯಕ್ತಪಡಿಸುವುದಿಲ್ಲ. ಅಷ್ಟೇ ಅಲ್ಲದೆ ಕಾಂಗ್ರೆಸ್‍ನಿಂದಲೂ ತಕರಾರು ಇಲ್ಲ. ಆದರೆ ಇದು ಚುನಾವಣೆಗಾಗಿ ನಡೆಯುತ್ತಿರುವ ಆಂದೋಲನವಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

    ವಿಶ್ವ ಹಿಂದೂ ಪರಿಷತ್ ನಿಂದ ಮಂಗಳೂರಿನ ಕೇಂದ್ರ ಮೈದಾನದಲ್ಲಿ ರಾಮ ಮಂದಿರಕ್ಕಾಗಿ ಬೃಹತ್ ಜನಾಗ್ರಹ ಸಭೆ ನಡೆದಿದೆ. ಈ ಕಾರ್ಯಕ್ರಮದಲ್ಲಿ 50 ಸಾವಿರಕ್ಕೂ ಅಧಿಕ ಜನರು ಭಾಗವಹಿಸಿದ್ದಾರೆ.

    ಪ್ರಧಾನಿ ನರೇಂದ್ರ ಮೋದಿ ಅವರು ಫೆಬ್ರವರಿಯಲ್ಲಿ ಕುಂಭಮೇಳಕ್ಕಿಂತ ಮೊದಲೇ ರಾಮ ಮಂದಿರ ನಿರ್ಮಾಣಕ್ಕೆ ಮುಂದಾಗುತ್ತಾರೆ ಎನ್ನುವ ಭರವಸೆ ನೀಡಬೇಕು. ಒಂದು ವೇಳೆ ಅದು ಸಾಧ್ಯವಾಗದಿದ್ದರೆ ಕುಂಭಮೇಳದಲ್ಲಿ ಸಂತರು ಸಭೆ ಸೇರಿ ಮುಂದಿನ ಹೋರಾಟ ನಿರ್ಧಾರ ಕೈಗೊಳ್ಳುತ್ತೇವೆ ಎಂದು ಅವರು ತಿಳಿಸಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಶಿರೂರು ಶ್ರೀಗಳಿಗೆ ಮದ್ಯಪಾನ, ಸ್ತ್ರೀ ಸಂಪರ್ಕ ಇದ್ದಿರೋದಕ್ಕೆ ಹೀಗಾಯ್ತೋ ಏನೋ ಗೊತ್ತಿಲ್ಲ: ಪೇಜಾವರ ಶ್ರೀ

    ಶಿರೂರು ಶ್ರೀಗಳಿಗೆ ಮದ್ಯಪಾನ, ಸ್ತ್ರೀ ಸಂಪರ್ಕ ಇದ್ದಿರೋದಕ್ಕೆ ಹೀಗಾಯ್ತೋ ಏನೋ ಗೊತ್ತಿಲ್ಲ: ಪೇಜಾವರ ಶ್ರೀ

    ಉಡುಪಿ: ಶಿರೂರು ಸ್ವಾಮೀಜಿಗೆ ಮದ್ಯಪಾನ, ಸ್ತ್ರೀ ಸಂಪರ್ಕ ಇದ್ದರಿಂದ ಹೀಗಾಯಿತೋ ಏನೋ ಗೊತ್ತಿಲ್ಲ ಎಂದು ಪೇಜಾವರ ಶ್ರೀಗಳು ಶಂಕೆ ವ್ಯಕ್ತಪಡಿಸಿದ್ದಾರೆ.

    ಇಂದು ಉಡುಪಿ ಕೃಷ್ಣ ಮಠಕ್ಕೆ ಆಗಮಿಸಿ, ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಶ್ರೀಗಳು, ಶಿರೂರು ಶ್ರೀ ಹಲವಾರು ಒಳ್ಳೆಯ ಕಾರ್ಯಗಳ ಮೂಲಕ ಸಾಮಾಜಿಕ, ಸಾಂಸ್ಕೃತಿಕ ಕೆಲಸ ಮಾಡಿದ್ದಾರೆ. ಆದರೆ ಅವರು ಸನ್ಯಾಸ ಧರ್ಮ ಪಾಲಿಸದೇ ಪುಂಡಾಟಿಕೆ ಮೆರೆದಿದ್ದರು. ಅಷ್ಟೇ ಅಲ್ಲದೆ ಅವರಿಗೆ ದುರ್ವ್ಯಸನ ಹಾಗೂ ಸ್ತ್ರೀಯರ ಮೇಲೆ ಆಸಕ್ತಿ ಇತ್ತು ಎಂದು ಆರೋಪಿಸಿದರು.

    ಶ್ರೀಗಳ ಸಾವಿನ ಬಗ್ಗೆ ಯಾವುದೇ ಖಚಿತ ಮಾಹಿತಿ ದೊರೆತಿಲ್ಲ. ಅನ್ನಾಹಾರ ವಿಷವಾಗಿದೆಯೋ ಗೊತ್ತಿಲ್ಲ. ಕೆಲವರು ಶ್ರೀಗಳಿಗೆ ಮೂತ್ರಪಿಂಡ ಹಾಗೂ ಪಿತ್ತಕೋಶದ ಸಮಸ್ಯೆ ಅಂತಾ ಹೇಳುತ್ತಿದ್ದಾರೆ. ಇನ್ನೂ ಕೆಲವು ಮೂಲಗಳ ಪ್ರಕಾರ ಮಹಿಳೆ ಜೊತೆ ಜಗಳವಾಗಿದೆ ಎನ್ನಲಾಗಿದೆ ಎಂಬ ಶಂಕೆಯನ್ನು ವ್ಯಕ್ತಪಡಿಸಿದರು. ಇದನ್ನೂ ಓದಿ: ಪಟ್ಟದ ದೇವರನ್ನು ಶಿರೂರು ಶ್ರೀಗಳಿಗೆ ಕೊಡದೆ ಇರಲು ಕಾರಣವಿದೆ – ರಹಸ್ಯ ಬಿಚ್ಚಿಟ್ಟ ಪೇಜಾವರ ಶ್ರೀ

    ಬೇರೆ ಯಾವ ಮಠದಿಂದ ಈ ಕೃತ್ಯ ನಡೆದಿಲ್ಲ. ಜೊತೆಗಿರುವವರಿಂದ ಸಮಸ್ಯೆ ಆಗಿದೆಯೋ ಗೊತ್ತಿಲ್ಲ. ಪಲಾವ್ ತಿಂದಿರುವ ಬಗ್ಗೆ ಶಿರೂರು ಶ್ರೀಗಳ ಸಹೋದರ ಹೇಳಿದ್ದಾರೆ. ಹೀಗಾಗಿ ಅವರ ಮಠದವರಿಂದಲೇ ಕೃತ್ಯ ನಡೆದಿರಬಹುದು ಎನ್ನಲಾಗುತ್ತಿದೆ. ಅಷ್ಟೇ ಅಲ್ಲದೆ ವನ ಮಹೋತ್ಸವಕ್ಕೆ ಬಂದಾಗ ವಿದ್ಯಾರ್ಥಿಗಳ ಜೊತೆ ಇರಿಸು ಮುರುಸಾಗಿತ್ತು. ಎಲ್ಲ ಸತ್ಯಾಸತ್ಯತೆಗಳು ಮರಣೋತ್ತರ ಪರೀಕ್ಷೆಯ ಬಳಿಕ ತಿಳಿಯಲಿದೆ ಎಂದು ಹೇಳಿದರು.

    ಪರ್ಯಾಯ ಸಭೆಯಲ್ಲಿಯೇ ಹಾಗೂ ವೈಯಕ್ತಿಕವಾಗಿ ತಪ್ಪುಗಳನ್ನು ತಿದ್ದಿಕೊಳ್ಳಲು ನಾನು ಸಲಹೆ ನೀಡಿದ್ದೆ. ಆದರೆ ಅವರು ಯಾವುದನ್ನೂ ಪಾಲಿಸಿಲ್ಲ. ಶಿರೂರು ಶ್ರೀ ತಮಗೆ ಮಕ್ಕಳಿದ್ದಾರೆ ಎಂದು ಒಪ್ಪಿಕೊಂಡಿದ್ದಾರೆ. ಅವರೇ ಒಪ್ಪಿಕೊಂಡ ಮೇಲೆ ಸ್ವಾಮೀಜಿ ಆಗುವುದು ಹೇಗೆ ಎಂದು ಇತರೆ ಮಠಾಧೀಶರೂ ಪ್ರಶ್ನೆ ಕೇಳಿದ್ದಾರೆ. ಶ್ರೀಗಳು ಸನ್ಯಾಸ ಧರ್ಮ ಪಾಲಿಸದಿರುವುದರಿಂದ ಪಟ್ಟದ ದೇವರನ್ನು ಕೊಟ್ಟಿಲ್ಲ. ನಿನ್ನೆ ಹುಬ್ಬಳ್ಳಿಯಲ್ಲಿದ್ದೆ. ಆರೋಗ್ಯ ದೃಷ್ಟಿಯಿಂದ ವೈದ್ಯರು ಪ್ರಯಾಣ ಮಾಡಬಾರದು ಎಂದು ಸಲಹೆ ನೀಡಿದ್ದರಿಂದ ಉಡುಪಿಗೆ ಬರಲು ಸಾಧ್ಯವಾಗಲಿಲ್ಲ ಎಂದರು.

  • ಪಟ್ಟದ ದೇವರನ್ನು ಶಿರೂರು ಶ್ರೀಗಳಿಗೆ ಕೊಡದೆ ಇರಲು ಕಾರಣವಿದೆ – ರಹಸ್ಯ ಬಿಚ್ಚಿಟ್ಟ ಪೇಜಾವರ ಶ್ರೀ

    ಪಟ್ಟದ ದೇವರನ್ನು ಶಿರೂರು ಶ್ರೀಗಳಿಗೆ ಕೊಡದೆ ಇರಲು ಕಾರಣವಿದೆ – ರಹಸ್ಯ ಬಿಚ್ಚಿಟ್ಟ ಪೇಜಾವರ ಶ್ರೀ

    ಕಾರವಾರ: ಶಿರೂರು ಶ್ರೀಗಳು ನನಗೆ ಮಕ್ಕಳಿದ್ದಾರೆ ಎಂದು ಅವರೇ ಒಪ್ಪಿಕೊಂಡಿದ್ದರಿಂದ ಅವರಿಗೆ ಪಟ್ಟದ ದೇವರನ್ನು ಕೊಡಲಿಲ್ಲ ಎಂದು ಪೇಜಾವರ ಶ್ರೀಗಳು ಹೇಳಿದ್ದಾರೆ.

    ಶಿರೂರು ಶ್ರೀ ಗಳ ಅಂತಿಮ ದರ್ಶನಕ್ಕೆ ಹೋಗದ ಕುರಿತು ಸ್ವಷ್ಟನೆ ನೀಡಿ ಶಿರಸಿಯಲ್ಲಿ ಮಾತನಾಡಿದ ಪೇಜಾವರ ಶ್ರೀಗಳು, ಶಿರೂರು ಶ್ರೀಗಳು ಸನ್ಯಾಸತ್ವಕ್ಕೆ ಭ್ರಷ್ಟರಾಗಿದ್ದರು ಎಂಬುದರ ಬಗ್ಗೆ ನಮ್ಮ ಬಳಿ ಮಾಹಿತಿಗಳಿವೆ. ಅದ್ದರಿಂದ ಅವರನ್ನು ಪೀಠಾಧಿಪತಿ ಎಂದು ಒಪ್ಪಿಕೊಳ್ಳಲು ಸಾಧ್ಯವಿಲ್ಲ. ಸ್ವಾಮಿಗಳಾದ ಮೇಲೆ ಧರ್ಮ ಬೇಕು. ಅದ್ದರಿಂದ ಅವರು ಮಠಾಧೀಶರಲ್ಲ, ಅವರು ಸನ್ಯಾಸವನ್ನು ಬಿಟ್ಟಿದ್ದಾರೆ, ಅವರೇ ಒಪ್ಪಿಕೊಂಡಿದ್ದಾರೆ. ಆದ್ದರಿಂದ ಅವರ ಅಂತಿಮ ದರ್ಶನಕ್ಕೆ ಹೋಗಿಲ್ಲ ಎಂದರು.

    ಶಿರೂರು ಶ್ರೀಗಳ ಮೇಲೆ ಮಠಾಧೀಶರಿಗೆ ದ್ವೇಷವಿಲ್ಲ. ನನ್ನ ಅವರ ಮಧ್ಯೆ ಉತ್ತಮ ವಿಶ್ವಾಸವಿತ್ತು. ಆದರೆ ಕೆಲವು ನೈತಿಕ, ತಾತ್ವಿಕ ಕಾರಣಗಳಿಂದ ಅವರ ಅಂತಿಮ ದರ್ಶನಕ್ಕೆ ಹೋಗಿಲ್ಲ. ಅವರ ಅಂತ್ಯ ಸಂಸ್ಕಾರಕ್ಕೆ ಎಲ್ಲಾ ವ್ಯವಸ್ಥೆ ಮಾಡುತ್ತೇವೆ. ಶಿರೂರು ಶ್ರೀಗಳನ್ನು ಪೀಠಾಧಿಪತಿ ಅಲ್ಲ ಎಂದು ಎಲ್ಲರೂ ತೀರ್ಮಾನ ಮಾಡಿ ಒಪ್ಪಿಕೊಂಡಿದ್ದೇವೆ. ಅವರು ಸನ್ಯಾಸ ಜೀವನದಿಂದ ಭ್ರಷ್ಟರಾಗಿದ್ದಾರೆ ಅವರಿಗೆ ಮಗನಿದ್ದಾನೆ. ತನ್ನ ಮಗನೆಂದು ಎಲ್ಲರಿಗೂ ತೋರಿಸಿದ್ದಾರೆ. ಅಂತವರು ಸ್ವಾಮಿಗಳಾಗಲು ಸಾಧ್ಯವಿಲ್ಲ ಎಂದರು.

    ಇದೇ ವೇಳೆ ಶಿರೂರು ಶ್ರೀಗಳ ಸಂಶಯಾಸ್ಪದ ಸಾವು ಕುರಿತು ಪೂರ್ವಾಶ್ರಮದ ಸಹೋದರ ಆರೋಪದ ಕುರಿತು ಪ್ರತಿಕ್ರಿಯೆ ನೀಡಿ, ಅವರು ನಿನ್ನೆ ನನ್ನೊಂದಿಗೆ ಲಾತವ್ಯ ಆಚಾರ್ಯ ಮಾತನಾಡುವಾಗ ಶಿರೂರು ಶ್ರೀಗಳು ಫಲಾಹಾರವನ್ನು ತೆಗೆದುಕೊಂಡಿದ್ದರು. ಆಹಾರವನ್ನು ಒಂದು ಕೆಟ್ಟ ಕಿಲುಬು ಪಾತ್ರೆಯನ್ನು ನೀಡಲಾಗಿದೆ ಅಂದಿದ್ದರು. ಅವರ ಸಾವಿಗೆ ಪಾತ್ರೆ ದೋಷ ಕಾರಣವಾಗಿರುವ ಸಾಧ್ಯತೆಗಳಿವೆ. ನಿನ್ನೆ ಅನುಮಾನ ಬಾರದ್ದು ಇಂದು ಹೇಗೆ ಅನುಮಾನ ಬಂತು. ಮರಣೋತ್ತರ ಪರೀಕ್ಷೆಯ ಅಂತಿಮ ವರದಿ ಬಂದ ಬಳಿಕ ಈ ಕುರಿತು ಎಲ್ಲಾ ವಿಷಯ ತಿಳಿಯುತ್ತದೆ ಎಂದರು.

  • ಪೇಜಾವರ ಶ್ರೀಗಳು ಮೋದಿ ಸರ್ಕಾರವನ್ನ ಟೀಕಿಸಿಲ್ಲ: ಸೊಗಡು ಶಿವಣ್ಣ

    ಪೇಜಾವರ ಶ್ರೀಗಳು ಮೋದಿ ಸರ್ಕಾರವನ್ನ ಟೀಕಿಸಿಲ್ಲ: ಸೊಗಡು ಶಿವಣ್ಣ

    ತುಮಕೂರು: ಪೇಜಾವರ ಶ್ರೀಗಳು ಮೋದಿ ಸರ್ಕಾರ ಕುರಿತು ಸಲಹೆ ನೀಡಿದ್ದಾರೆಯೇ ಹೊರತು ಟೀಕೆ ಮಾಡಿಲ್ಲ ಅಂತಾ ಮಾಜಿ ಸಚಿವ ಸೊಗಡು ಶಿವಣ್ಣ ಹೇಳಿದ್ದಾರೆ.

    ಕೇಂದ್ರ ಸರ್ಕಾರ ಪ್ರಣಾಳಿಕೆಯಲ್ಲಿ ಹೇಳಿದ ಕಾರ್ಯಕ್ರಮಗಳು ಬೇಗನೇ ಜಾರಿ ಮಾಡುವಂತೆ ಪೇಜಾವರ ಶ್ರೀಗಳು ಸಲಹೆ ನೀಡಿದ್ದಾರೆ. ಶ್ರೀಗಳ ಸಲಹೆಯನ್ನು ಟೀಕೆ ರೂಪದಲ್ಲಿ ಬಿಂಬಿಸಲಾಗುತಿದೆ ಎಂದು ಪ್ರತಿಕ್ರಿಯಿಸಿದ್ದಾರೆ. ಇದನ್ನೂ ಓದಿ: ಮೋದಿಯವರ ಅಚ್ಛೇ ದಿನ್ ಇನ್ನೂ ಪರಿಣಾಮಕಾರಿ ಆಗಬೇಕಿದೆ: ಶ್ರೀ ವಿಶ್ವೇಶತೀರ್ಥ ಸ್ವಾಮೀಜಿ

    ಪರಮ ಪೂಜ್ಯರ ಬಗ್ಗೆ ಮೋದಿಯವರಿಗೆ ಎಲ್ಲರಿಗಿಂತ ಹೆಚ್ಚಿನ ಗೌರವ ಇದೆ. ದೇಶ, ಧರ್ಮದ ಬಗ್ಗೆ, ಅನಾದಿಕಾಲದಿಂದ ಇದ್ದ ನಂಬಿಕೆ ಉಳಿಸಿ ಬೆಳೆಸಿಕೊಂಡು ಬಂದ ಮಹಾನುಭಾವರು ಪೇಜಾವರ ಶ್ರೀಗಳು, ಅಂಥವರ ಸಲಹೆಯನ್ನೇ ಟೀಕೆ ಎಂದು ಭ್ರಮಿಸಿ ತರಾವರಿ ಹೇಳಿಕೆ ನೀಡಲಾಗುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದ್ರು.

    ಸಂಸದೆ ಶೋಭಾ ಕರಂದ್ಲಾಜೆ ಹಾಗೂ ಶ್ರೀಮಠದ ಒಡನಾಡಿ ಕೆ.ಎಸ್.ಈಶ್ವರಪ್ಪನವರು ಕೇಂದ್ರ ಸರ್ಕಾರದ ಯೋಜನೆ ಕುರಿತು ಶ್ರೀಗಳಿಗೆ ಮಾಹಿತಿ ನೀಡಬೇಕಿತ್ತು. ಈ ಇಬ್ಬರೂ ಮಾಹಿತಿ ನೀಡುವ ಕೆಲಸ ಮಾಡಿಲ್ಲ. ಹಾಗಾಗಿ ಶ್ರೀಗಳು ಮಾಹಿತಿ ಕೊರತೆಯಿಂದ ಈ ಹೇಳಿಕೆ ನೀಡಿದ್ದಾರೆ ಎಂದು ಸೊಗಡು ಸಮರ್ಥಿಸಿಕೊಂಡಿದ್ದಾರೆ.

    ಈ ಹಿಂದೆ ರಾಯಚೂರಿನಲ್ಲಿ ಮಾತನಾಡಿದ ಪೇಜಾವರ ಶ್ರೀ ವಿಶ್ವೇಶ ತೀರ್ಥ ಸ್ವಾಮೀಜಿ, ಮೋದಿಯವರು ತಮ್ಮ ಅಧಿಕಾರ ಅವಧಿಯಲ್ಲಿ ಆರ್ಥಿಕತೆ ಸುಧಾರಣೆಯನ್ನು ಹೆಚ್ಚು ಮಾಡುವುದಕ್ಕಾಗಿ ಸಾಕಷ್ಟು ಯೋಜನೆಗಳನ್ನು ಮಾಡಿದ್ದಾರೆ. ಅಲ್ಲದೇ ಶ್ರೀಮಂತರಿಗೂ ಭ್ರಷ್ಟಾಚಾರ ಮಾಡಲಾಗದಂತಹ ಸನ್ನಿವೇಶವನ್ನು ನಿರ್ಮಿಸಿದ್ದಾರೆ. ಆದರೆ ಅಚ್ಚೆದಿನ್ ಇನ್ನೂ ಪರಿಣಾಮಕಾರಿಯಾಗಿ ಜಾರಿಯಾಗಬೇಕಿದೆ. ಈ ಕಾರ್ಯವನ್ನು ಬೇಗ ಮಾಡಲಿ ಎಂಬ ಉದ್ದೇಶದಿಂದ ಹೇಳಿದ್ದಾಗಿ ತಿಳಿಸಿದ್ದರು.

  • ಸಾಬೀತಾಯ್ತು ಗೋಲ್ಮಾಲ್- ಕೃಷ್ಣಮಠದ ಪಾರ್ಕಿಂಗ್ ವ್ಯವಹಾರ ಅಧಿಕಾರ ಶೀರೂರು ಸ್ವಾಮೀಜಿಗೆ

    ಸಾಬೀತಾಯ್ತು ಗೋಲ್ಮಾಲ್- ಕೃಷ್ಣಮಠದ ಪಾರ್ಕಿಂಗ್ ವ್ಯವಹಾರ ಅಧಿಕಾರ ಶೀರೂರು ಸ್ವಾಮೀಜಿಗೆ

    ಉಡುಪಿ: ಶ್ರೀಕೃಷ್ಣ ಪರಿಸರ ಪ್ರತಿಷ್ಠಾನದ ಗೋಲ್ಮಾಲ್ ವಿರುದ್ಧ ಕಳೆದ ಕೆಲವು ದಿನಗಳ ಹಿಂದೆ ಶೀರೂರು ಮಠಾಧೀಶ ಲಕ್ಷ್ಮೀವರ ತೀರ್ಥ ಸ್ವಾಮೀಜಿ ಸಿಡಿದೆದ್ದಿದ್ದರು. ಅಲ್ಲದೇ ಕೃಷ್ಣಮಠದ ಪಾರ್ಕಿಂಗ್ ಸ್ಥಳದಲ್ಲಿ ಅಕ್ರಮವಾಗಿ ನಿರ್ಮಿಸಿದ್ದ ಅಂಗಡಿಗಳನ್ನು ಜೆಸಿಬಿ ತಂದು ಒಡೆಸಿದ್ದರು. ಆದರೆ ಇದೀಗ ಪೇಜಾವರ ಶ್ರೀಗಳ ಆಪ್ತರು ಈ ಅಕ್ರಮದ ಹಿಂದೆ ಇದ್ದಾರೆ ಎಂದು ಸಾಬೀತಾಗಿದೆ. ಪಾರ್ಕಿಂಗ್ ಸ್ಥಳದ ಜವಾಬ್ದಾರಿ ಶೀರೂರು ಸ್ವಾಮೀಜಿ ಪಾಲಾಗಿದೆ.

    ಪೇಜಾವರ ಮಠದಲ್ಲಿ ಎಲ್ಲಾ ಸ್ವಾಮೀಜಿಗಳ ಸಮ್ಮುಖದಲ್ಲಿ ಸಭೆ ನಡೆದಿದೆ. ಅಷ್ಟಮಠಾಧೀಶರ ಅಭಿಪ್ರಾಯದಂತೆ ಶೀರೂರು ಸ್ವಾಮೀಜಿಗೆ ಪಾರ್ಕಿಂಗ್ ಸ್ಥಳದ ಜವಾಬ್ದಾರಿ ಕೊಡಲಾಗಿದೆ. ಪಾರ್ಕಿಂಗ್ ಶುಲ್ಕ ಸಂಗ್ರಹ ಹಾಗೂ ಸ್ಥಳದ ಕಟ್ಟಡಗಳ ವ್ಯವಹಾರ ಎಲ್ಲವನ್ನೂ ಶೀರೂರು ಸ್ವಾಮೀಜಿ ನೋಡಿಕೊಳ್ಳಬೇಕು ಎಂದು ಅಷ್ಟಮಠಗಳ ಸ್ವಾಮೀಜಿಗಳು ನಿರ್ಧಾರ ಮಾಡಿದ್ದಾರೆ.

    ಪಾರ್ಕಿಂಗ್ ರಸೀದಿ ಪುಸ್ತಕವನ್ನು ನಕಲು ಮಾಡಿದ್ದು, ಒಂದೇ ಸಂಖ್ಯೆ ಇರುವ ಪುಸ್ತಕಗಳು ತಪಾಸಣೆ ವೇಳೆ ಲಭ್ಯವಾಗಿದೆ. ಹೀಗಾಗಿ ಪಾರ್ಕಿಂಗ್ ನಲ್ಲಿ ನಡೆದ ಅವ್ಯವಹಾರವನ್ನು ಶೀರೂರು ಸ್ವಾಮೀಜಿ ಪೇಜಾವರ ಶ್ರೀಗಳ ಗಮನಕ್ಕೆ ತಂದಿದ್ದಾರೆ. ಆರೋಪ ಸಾಬೀತಾಗಿರುವುದರಿಂದ ಅಧಿಕಾರವನ್ನು ಶೀರೂರು ಸ್ವಾಮೀಜಿಗೆ ನೀಡಲಾಗಿದೆ. ಪಾರ್ಕಿಂಗ್ ಸ್ಥಳದ ಜವಾಬ್ದಾರಿ ಜೊತೆ ರಥಬೀದಿಯ ಆಸುಪಾಸಿನ ಅಂಗಡಿಗಳನ್ನು ಪಾರ್ಕಿಂಗ್ ಸ್ಥಳಕ್ಕೆ ಶಿಫ್ಟ್ ಮಾಡುವ ಕನಸಿದೆ ಎಂದು ಶೀರೂರು ಸ್ವಾಮೀಜಿ ಹೇಳಿದ್ದಾರೆ.

    ಶ್ರೀಕೃಷ್ಣ ಮಠದ ಪಾರ್ಕಿಂಗ್ ವ್ಯವಸ್ಥೆಯಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರ ಆರೋಪದ ಹಿನ್ನೆಲೆಯಲ್ಲಿ ಗುರುವಾರ ಪೇಜಾವರ ಶ್ರೀ ಹಾಗೂ ಪರ್ಯಾಯ ಪಲಿಮಾರು ಸ್ವಾಮೀಜಿ ಸಹಿತ ಎಲ್ಲಾ ಮಠಾಧೀಶರ ಉಪಸ್ಥಿತಿಯಲ್ಲಿ ಶ್ರೀಕೃಷ್ಣ ಮಠ ಪರಿಸರ ಸೇವಾ ಪ್ರತಿಷ್ಠಾನದ ಸಭೆ ಪೇಜಾವರ ಮಠದ ವಿಜಯಧ್ವಜ ಛತ್ರದಲ್ಲಿ ನಡೆಯಿತು.

    ಸಭೆಯ ಬಳಿಕ ಮಾತನಾಡಿದ ಪೇಜಾವರ ವಿಶ್ವೇಶ ತೀರ್ಥ ಸ್ವಾಮೀಜಿ, ಟ್ರಸ್ಟ್ ವತಿಯಿಂದ ಪಾರ್ಕಿಂಗ್ ಹಣ ಸಂಗ್ರಹ ಉಸ್ತುವಾರಿಯಾಗಿ ಉದಯ ಸುಬ್ರಹ್ಮಣ್ಯ ಅವರನ್ನು ನೇಮಕ ಮಾಡಲಾಗಿತ್ತು. ಅವರು ಒಂದೇ ರೀತಿಯ ನಂಬರ್ ಇರುವ ಎರಡು ರಶೀದಿ ಪುಸ್ತಕಗಳನ್ನು ಇಟ್ಟುಕೊಂಡು ಪಾರ್ಕಿಂಗ್ ಹಣ ಸಂಗ್ರಹಿಸಿ ಅವ್ಯವಹಾರ ನಡೆಸುತ್ತಿದ್ದಾರೆ ಎಂಬ ಆರೋಪವನ್ನು ಶೀರೂರು ಸ್ವಾಮೀಜಿ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಉದಯ ಅವರನ್ನು ಆ ಜವಾಬ್ದಾರಿಯಿಂದ ತೆಗೆದುಹಾಕಿದ್ದೇವೆ. ಅವರ ಬದಲು ಪಾರ್ಕಿಂಗ್ ಹಣ ಸಂಗ್ರಹದ ಜವಾಬ್ದಾರಿಯನ್ನು ಶೀರೂರು ಶ್ರೀಗಳಿಗೆ ವಹಿಸಿಕೊಡಲಾಗಿದೆ ಎಂದು ತಿಳಿಸಿದರು.

    ಪಾರ್ಕಿಂಗ್ ಪ್ರದೇಶದಲ್ಲಿರುವ ವಿಷ್ಣುಮೂರ್ತಿ ಅವರ ಎರಡು ಅಂಗಡಿಗಳಿಗೆ ಮಠಾಧೀಶರ ವಿರೋಧ ಇರುವ ಹಿನ್ನೆಲೆಯಲ್ಲಿ ಅದನ್ನು ತೆರವುಗೊಳಿಸಲು ಆದೇಶ ನೀಡಲಾಗಿದೆ. ಅದೇ ರೀತಿ ಬೇರೆ ಅಂಗಡಿಗಳನ್ನು ಕೂಡ ತೆರವುಗೊಳಿಸಬೇಕು ಎಂಬುದು ಶೀರೂರು ಸ್ವಾಮೀಜಿಗಳ ಅಪೇಕ್ಷೆ. ಅದಕ್ಕೆ ನಾವು ಎಲ್ಲ ಒಪ್ಪಿಗೆ ಕೊಟ್ಟಿದ್ದೇವೆ ಎಂದರು.

    ಕಳೆದ ಪರ್ಯಾಯ ಅವಧಿಯಲ್ಲಿ ಪಾರ್ಕಿಂಗ್ ವಿಚಾರದಲ್ಲಿ ಮಠಕ್ಕೆ ಯಾವುದೇ ನಷ್ಟ ಆಗಿಲ್ಲ. ಅದಕ್ಕಿಂತ ಹೆಚ್ಚಿನ ಪಾಲು ಹಣವನ್ನು ನಾವು ಟ್ರಸ್ಟ್‍ಗೆ ಕೊಟ್ಟಿದ್ದೇವೆ. 50 ಲಕ್ಷ ರೂ. ಯಾತ್ರಿ ನಿವಾಸಕ್ಕೆ ಮತ್ತು 2.5 ಕೋಟಿ ರೂ. ವೆಚ್ಚದ ಯಾತ್ರಿ ನಿವಾಸ ಕಟ್ಟಡವನ್ನು ಪಾರ್ಕಿಂಗ್ ಪ್ರದೇಶದಲ್ಲಿ ಮಾಡಿದ್ದೇವೆ. ಹಾಗಾಗಿ ಟ್ರಸ್ಟ್‍ಗೆ ನಮ್ಮಿಂದ ಯಾವುದೇ ರೀತಿಯ ಅನ್ಯಾಯ ಆಗಲಿ, ನಷ್ಟ ಆಗಲಿ ಆಗಿಲ್ಲ ಎಂದು ಪೇಜಾವರ ವಿಶ್ವೇಶತೀರ್ಥ ಸ್ವಾಮೀಜಿ ಸ್ಪಷ್ಟಪಡಿಸಿದರು.

    ಇದು ಶ್ರೀ ಕೃಷ್ಣ ಮಠದ ಭಕ್ತರಿಗಾಗಿ ಮಾಡಿರುವ ಹೋರಾಟ. ಭಕ್ತರಿಗೆ ಯಾವುದೇ ತೊಂದರೆ ಆಗಬಾರದು ಎಂಬುದು ನಮ್ಮ ಉದ್ದೇಶ. ರಥಬೀದಿ ಹಾಗೂ ಕೃಷ್ಣ ಮಠದ ಪರಿಸರ ವಾಹನ ಮುಕ್ತ ಹಾಗೂ ವಾಣಿಜ್ಯ ಮುಕ್ತ ಆಗಬೇಕು. ಆದರೆ ಕೆಲವರು ಅದನ್ನು ಹಾಳು ಮಾಡುವ ಯತ್ನ ಮಾಡುತ್ತಿದ್ದಾರೆ. ಈ ಕುರಿತು ಪೇಜಾವರ ಶ್ರೀಗಳಿಗೆ ಎಲ್ಲ ರೀತಿಯ ಆಧಾರಗಳನ್ನು ನೀಡಿದ್ದೇನೆ. ಮುಂದೆ ಪಾರ್ಕಿಂಗ್ ಪ್ರದೇಶದಲ್ಲಿ ಭಕ್ತರಿಗೆ ಬೇಕಾದ ಎಲ್ಲ ವ್ಯವಸ್ಥೆ ಹಾಗೂ ವಾಣಿಜ್ಯ ಅಂಗಡಿಗಳನ್ನು ಮಾಡಲಾಗುವುದು ಎಂದರು.

    ಮಠಗಳ ವತಿಯಿಂದ ಖರೀದಿಸಲಾದ ಐದೂವರೆ ಎಕರೆ ಜಾಗವನ್ನು ಸಂಪೂರ್ಣ ಅಭಿವೃದ್ಧಿ ಮಾಡಲಾಗುವುದು ಎಂದು ಶೀರೂರು ಶ್ರೀ ತಿಳಿಸಿದರು. ಸಭೆಯಲ್ಲಿ ಪರ್ಯಾಯ ಪಲಿಮಾರು ಶ್ರೀವಿದ್ಯಾಧೀಶ ತೀರ್ಥ ಸ್ವಾಮೀಜಿ, ಪೇಜಾವರ ಕಿರಿಯ ಯತಿ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ, ಸೋದೆ ಶ್ರೀ ವಿಶ್ವವಲ್ಲಭ ತೀರ್ಥ ಸ್ವಾಮೀಜಿ, ಅದಮಾರು ಕಿರಿಯ ಸ್ವಾಮೀಜಿ, ಕಾಣಿಯೂರು ಶ್ರೀವಿದ್ಯಾಲ್ಲಭ ತೀರ್ಥ ಸ್ವಾಮೀಜಿ ಹಾಜರಿದ್ದರು.

  • ಜೆಸಿಬಿ ಜೊತೆ ಬಂದು ಪೇಜಾವರ ಶ್ರೀ ಆಪ್ತರ ಅಕ್ರಮದ ವಿರುದ್ಧ ಘರ್ಜಿಸಿದ ಶೀರೂರು ಶ್ರೀ

    ಜೆಸಿಬಿ ಜೊತೆ ಬಂದು ಪೇಜಾವರ ಶ್ರೀ ಆಪ್ತರ ಅಕ್ರಮದ ವಿರುದ್ಧ ಘರ್ಜಿಸಿದ ಶೀರೂರು ಶ್ರೀ

    ಉಡುಪಿ: ಪೇಜಾವರಶ್ರೀ ಆಪ್ತರು ನಡೆಸುತ್ತಿದ್ದ ಆಕ್ರಮಗಳ ಮೇಲೆ ಶೀರೂರು ಸ್ವಾಮೀಜಿ ಘರ್ಜಿಸಿದ್ದಾರೆ. ಮಠದ ಹೆಸರಲ್ಲಿ ಸಾರ್ವಜನಿಕರ ಹಣವನ್ನು ಪೇಜಾವರಶ್ರೀ ಗಳ ಆಪ್ತರು ಲೂಟಿ ಮಾಡುತ್ತಿದ್ದಾರೆ. ಪೇಜಾವರ ಶ್ರೀಗಳಿಗೆ ದಾಕ್ಷಿಣ್ಯ ಜಾಸ್ತಿ. ಆದರೆ ಅಕ್ರಮವನ್ನು ನೋಡಿಕೊಂಡು ನಾನು ಸುಮ್ಮನಿರಲ್ಲ ಎಂದು ಬುಲ್ಡೋಜರ್ ತಂದು ಅಂಗಡಿ ಮತ್ತು ಬಟ್ಟೆ ಮಳಿಗೆಯನ್ನು ಶೀರೂರು ಸ್ವಾಮೀಜಿ ನೆಲಕ್ಕುರುಳಿಸಿದ್ದಾರೆ.

    ಕಳೆದ 12 ವರ್ಷಗಳಿಂದ ಅಕ್ರಮಗಳನ್ನು ನೋಡಿಯೂ ಏನೂ ಮಾಡಲಾಗದೆ ಸುಮ್ಮನಿದ್ದ ಉಡುಪಿ ಶೀರೂರು ಮಠಾಧೀಶ ಲಕ್ಷ್ಮೀವರ ತೀರ್ಥರು ಇದೀಗ ಅಸಮಾಧಾನ ಹೊರಹಾಕಿದ್ದಾರೆ. ಜೆಸಿಬಿ ಜೊತೆ ಕೃಷ್ಣಮಠದ ಪಾರ್ಕಿಂಗ್ ಏರಿಯಾಗೆ ಬಂದ ಶೀರೂರು ಶ್ರೀ ಅಕ್ರಮ ಅಂಗಡಿ ಮಾಲೀಕರಿಗೆ ಚಳಿ ಬಿಡಿಸಿದರು.

    ಯಾತ್ರಿ ನಿವಾಸ ಲಾಡ್ಜ್ ಕಚೇರಿಗೆ ಬಂದು ಕಡತಗಳನ್ನು ಜಾಲಾಡಿ ಸಿಬ್ಬಂದಿಗೆ ಚಳಿ ಬಿಡಿಸಿದರು. ಐಟಿ ದಾಳಿಗಿಂತ ನನ್ನ ದಾಳಿ ಪರಿಣಾಮಕಾರಿ, ಈಗ ಕಾರ್ಯಾಚರಣೆ ಮಾಡಿದ್ದು 5% ನಿಂದ 95% ಅಕ್ರಮದ ವಿರುದ್ಧ ನನ್ನ ಹೋರಾಟವಿದೆ ಎಂದು ಎಚ್ಚರಿಕೆ ನೀಡಿದರು. ಈ ಮೂಲಕ ಪೇಜಾವರಶ್ರೀ ಆಪ್ತರಿಗೆ ಬಿಸಿಮುಟ್ಟಿಸಿದರು.

    ಕೃಷ್ಣಮಠದ ಸುತ್ತಮುತ್ತಲ ಅಂಗಡಿಗಳು, ಪಾರ್ಕಿಂಗ್ ನಿಂದ ಬರುವ ಹಣವನ್ನು ಕೃಷ್ಣಮಠಕ್ಕೆ ಸಲ್ಲಿಕೆ ಮಾಡಬೇಕು. ಆದರೆ ಅಷ್ಟಮಠಗಳ ಟ್ರಸ್ಟ್ ನಲ್ಲಿದ್ದವರು ಹಣವನ್ನು ಮಠಕ್ಕೆ ಕೊಡದೇ ಲೂಟಿ ಮಾಡುತ್ತಿದ್ದರು. ಅಷ್ಠಮಠಗಳ ಟ್ರಸ್ಟ್ ಗೆ ಕೆಲವರಿಂದ ಅನ್ಯಾಯವಾಗಿದೆ. ಎಲ್ಲವನ್ನು ನೋಡಿಕೊಂಡು ಕೂರುವ ಜಾಯಮಾನ ನನ್ನದಲ್ಲ. ಕೃಷ್ಣ ಮುಖ್ಯಪ್ರಾಣನಿಗೆ ಪೂಜೆ ಮಾಡಲೂ ಗೊತ್ತು ಅಕ್ರಮಕ್ಕೆ ಬ್ರೇಕ್ ಹಾಕಲೂ ಗೊತ್ತು ಎಂದು ಗುಡುಗಿದರು.

    ಪೇಜಾವರ ಪರ್ಯಾಯ ಮುಗಿಯುವುದಕ್ಕೆ ಕಾಯುತ್ತಿದ್ದೆ. ಪೇಜಾವರ ಶ್ರೀಗಳ ಆಪ್ತರು ಅಕ್ರಮ ಮಾಡಿದ್ದರೂ, ಹಿರಿಯರು ಕಣ್ಮುಂದೆ ನಡೆಯುವ ಲೂಟಿ ನೋಡಿಕೊಂಡು ಸುಮ್ಮನಿದ್ದರು. ಅಲ್ಲದೇ ಸ್ವಾಮೀಜಿ ಅವರು ಆಪ್ತ ಕಳ್ಳರ ವಿರುದ್ಧ ಕ್ರಮ ಕೈಗೊಳ್ಳಲ್ಲ. ವಿಚಾರ ಗಮನಕ್ಕೆ ತಂದರೆ ನಾನು ಉಪವಾಸ ಮಾಡುತ್ತೇನೆ ಅಂತ ಬೇಸರದ ಮಾತನಾಡುತ್ತಾರೆ. ಹೀಗಾಗಿ ಅಕ್ರಮ ಮಾಡುವ ಆಪ್ತರಿಗೆ ನಾನು ಬುದ್ಧಿ ಕಲಿಸುತ್ತೇನೆ. ಇಂತವರಿಗೆ ಇದೇ ಸೂಕ್ತ ದಾರಿ ಎಂದು ನಾನು ರೇಡ್ ಮಾಡಲು ಇಳಿದಿದ್ದೇನೆ ಎಂದರು.

    ಎರಡೂವರೆ ಎಕರೆ ಜಮೀನನ್ನು ನಾನು ಹಣಕೊಟ್ಟು ಖರೀದಿ ಮಾಡಿದ್ದೇನೆ. ರಥಬೀದಿ ವಾಹನ ಮುಕ್ತ ಮಾಡಿದಾಗ ಆಟೋ, ಕಾರು ಚಾಲಕರನ್ನು ಇಲ್ಲಿಗೆ ಕರೆದುಕೊಂಡು ಬಂದು ನೆಲೆ ಕೊಟ್ಟಿದ್ದೇನೆ. ಎಂಟೂ ಮಠದ ಸ್ವಾಮೀಜಿಗಳು ಹಣ ಕೊಟ್ಟು ಒಟ್ಟು ಐದೂವರೆ ಎಕರೆ ಜಮೀನು ಖರೀದಿ ಮಾಡಿದ್ದೇವೆ. ಮಠದ ಜಮೀನಿನ ಪಾರ್ಕಿಂಗ್, ಮಳಿಗೆ ಹೆಸರಲ್ಲಿ ಅಷ್ಟ ಮಠಗಳ ಟ್ರಸ್ಟ್ ದರೋಡೆ ಮಾಡುತ್ತಿದೆ. ಪಾರ್ಕಿಂಗ್, ಅಂಗಡಿ ಹಣದಲ್ಲಿ ಕೋಟ್ಯಾಂತರ ರೂ. ಲೂಟಿ ಮಾಡಲಾಗಿದೆ. ಪ್ರವಾಸಿಗರಿಗೆ ಅನಗತ್ಯ ಕಿರುಕುಳ ನೀಡುತ್ತಿದ್ದಾರೆ. ತಾನು ದಾನ ಕೊಟ್ಟ ಭೂಮಿಯಲ್ಲಿ ಅಕ್ರಮ ಸಹಿಸಲ್ಲ. ಕೃಷ್ಣಮಠಕ್ಕೆ ಯಾವುದೇ ಆದಾಯ ಸಿಗುತ್ತಿಲ್ಲ ಎಂದು ಶೀರೂರು ಲಕ್ಷ್ಮೀವರತೀರ್ಥ ಶ್ರೀ ಆಕ್ರೋಶ ಹೊರ ಹಾಕಿದರು.

    ಪೇಜಾವರ ಸ್ವಾಮೀಜಿ ಜ್ಞಾನವೃದ್ಧರು, ವಯೋವೃದ್ಧರು ಅವರ ಪಕ್ಕದಲ್ಲೇ ಹೆಗ್ಗಣಗಳಿವೆ. ಅವುಗಳನ್ನು ಓಡಿಸಿದರೆ ಪೇಜಾವರಶ್ರೀ ಗಳ ಗೌರವ ಇನ್ನೂ ಹೆಚ್ಚಾಗುತ್ತದೆ. ಅವರ ಆಪ್ತರಿಂದಲೇ ಅನ್ಯಾಯವಾಗಿದೆ ಎಂದು ಶೀರೂರು ಸ್ವಾಮೀಜಿ ಆರೋಪಿಸಿದ್ದಾರೆ.

    ಯಾವುದೇ ಪೂರ್ವಸೂಚನೆ ನೀಡದೇ ಕಟ್ಟಡ ತೆರವು ಮಾಡಿದ್ದರಿಂದ ಅಂಗಡಿ ಮತ್ತು ಬಟ್ಟೆ ವ್ಯಾಪಾರ ಮಾಡುತ್ತಿದ್ದ ಅಂಗಡಿ ಮಾಲೀಕರಿಗೆ ಕೆಲಕಾಲ ಭೂಕಂಪವಾದ ಅನುಭವವಾದಂತಿತ್ತು. ಅಷ್ಟಮಠಗಳ ಟ್ರಸ್ಟ್ ಅಕ್ರಮದಿಂದ ವ್ಯಾಪಾರಿಗಳು ನಷ್ಟ ಅನುಭವಿಸಿದಂತಾಗಿದೆ.

  • ದೇಶ ಸುತ್ತಿದ್ದೇನೆ, ಸಂವಿಧಾನ ಅರಿತಿದ್ದೇನೆ: ಶ್ರೀನಿವಾಸ ಪ್ರಸಾದ್ ಗೆ ಪೇಜಾವರ ಶ್ರೀ ಖಡಕ್ ತಿರುಗೇಟು

    ದೇಶ ಸುತ್ತಿದ್ದೇನೆ, ಸಂವಿಧಾನ ಅರಿತಿದ್ದೇನೆ: ಶ್ರೀನಿವಾಸ ಪ್ರಸಾದ್ ಗೆ ಪೇಜಾವರ ಶ್ರೀ ಖಡಕ್ ತಿರುಗೇಟು

    ಉಡುಪಿ: ನನಗೆ ಸಂವಿಧಾನ ಬಗ್ಗೆ ಅರಿವಿದೆ. ಸಂವಿಧಾನ ರಚನೆಯಾಗುವಾಗ ನನಗೆ 18 ವರ್ಷ ಆಗಿತ್ತು. ಸಂವಿಧಾನ ರಚನಾ ಸಮಿತಿಯಲ್ಲಿ ಯಾರೆಲ್ಲಾ ಸದಸ್ಯರು ಅಂತ ಗೊತ್ತಿದೆ ಎಂದು ಹೇಳುವ ಮೂಲಕ ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್‍ರಿಗೆ ಪೇಜಾವರ ಶ್ರೀಗಳು ಖಡಕ್ ತಿರುಗೇಟು ನೀಡಿದ್ದಾರೆ.

    ಪತ್ರಿಕೆ ಓದಿ, ಲೋಕ ಸಂಚಾರ ಮಾಡಿದ ಅನುಭವ ನನಗಿದೆ. ನನಗೆ ಏನೂ ಗೊತ್ತಿಲ್ಲ ಅಂತ ಹೇಳುವುದು ಬೇಡ, ಸಂವಿಧಾನದಲ್ಲಿ ಹಲವು ತಿದ್ದುಪಡಿಯಾಗಿದೆ. ಈಗಲೂ ತಿದ್ದುಪಡಿಯಾದರೆ ತಪ್ಪೇನು ಎಂದು ಪೇಜಾವರ ಶ್ರೀಗಳು ಪ್ರಶ್ನೆ ಮಾಡಿದ್ದಾರೆ.

    ಮಠಾಧಿಪತಿಗಳಿಗೆ ಸಾಮಾಜಿಕ ಜವಾಬ್ದಾರಿ ಇದೆ. ಸಮಾಜದ ಬಗ್ಗೆ ನಾನು ಮಾತನಾಡಿದರೆ ತಪ್ಪೇನು? ಕೆಲ ವಿಚಾರಗಳು ಜಾತ್ಯಾತೀತತೆಗೆ ವಿರುದ್ಧವಾಗಿದೆ. ಅಲ್ಪಸಂಖ್ಯಾತ ಮತ್ತು ಬಹು ಸಂಖ್ಯಾತ ಜನರನ್ನು ಸರ್ಕಾರ ಒಂದೇ ರೀತಿಯಲ್ಲಿ ಕಾಣಬೇಕು. ಸರ್ಕಾರದ ಶಾದಿ ಭಾಗ್ಯ ಯೋಜನೆ ಹಿಂದುಳಿದವರಿಗೆ ಮತ್ತು ದಲಿತರಿಗೂ ಸಿಗಬೇಕು. ಒಂದು ವೇಳೆ ನಾನು ಹೇಳಿದ್ದರಲ್ಲಿ ತಪ್ಪಿದ್ದರೆ ತಿಳಿಸಿ ಅಂತಾ ಅಂದರು. ಇದನ್ನೂ ಓದಿ: ಬಿಜೆಪಿ ನಾಯಕರಿಗೆ ಬುದ್ಧಿ ಬೆಳೆದಿಲ್ಲ, ಪೇಜಾವರ ಶ್ರೀ ಎಲ್ಲದಕ್ಕೂ ಮಾತನಾಡುತ್ತಾರೆ- ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ ಕಿಡಿ

    ಶೃಂಗೇರಿ ಶ್ರೀಗಳ ವಿಚಾರ ಬೇರೆ ಇರಬಹುದು. ಹಲವು ಮಠಾಧಿಪತಿಗಳು ಜಾತ್ಯಾತೀತದ ಬಗ್ಗೆ ಮಾತನಾಡುತ್ತಾರೆ. ಮಠಾಧಿಪತಿಗಳು ಸಾಮಾಜಿಕ ಜವಬ್ದಾರಿಯನ್ನು ಹೊಂದಿದ್ದಾರೆ. ನಾವು ಧರ್ಮ ಮತ್ತು ಸಮಾಜದ ಬಗ್ಗೆಯೂ ಮಾತನಾಡುತ್ತೇವೆ, ನಮಗೇನು ಗೊತ್ತಿಲ್ಲ ಅಂತಾ ಹೇಳುವುದು ತಪ್ಪಾಗುತ್ತದೆ. ಸರ್ಕಾರ ರಾಜ್ಯದಲ್ಲಿನ ಎಲ್ಲ ಜನರನ್ನು ಒಂದೇ ಭಾವನೆಯಿಂದ ನೋಡಬೇಕು ಅಂತಾ ತಿಳಿಸಿದರು.

    https://youtu.be/8fnPGk-CNuQ