Tag: Pejawar Vishvesha Tirtha Sri

  • ಶಬರಿಮಲೆಗೆ ಹೊರಟವರು ಮಸೀದಿಗೆ ಹೋಗಲಿ- ಶಿವರಾಂ

    ಶಬರಿಮಲೆಗೆ ಹೊರಟವರು ಮಸೀದಿಗೆ ಹೋಗಲಿ- ಶಿವರಾಂ

    ಉಡುಪಿ: ಶಬರಿಮಲೆಗೆ ಹೊರಟವರು ಮಸೀದಿಗೆ ಹೋಗಲಿ ಎಂದು ಹಿರಿಯ ನಟ ಹಾಗೂ ರಾಜ್ಯ ಅಯ್ಯಪ್ಪ ಭಕ್ತ ಸಂಘದ ಅಧ್ಯಕ್ಷ ಶಿವರಾಂ ಕಿಡಿಕಾರಿದ್ದಾರೆ.

    ಎಂಜಿಎಂ ಮೈದಾನದಲ್ಲಿ ನಡೆದ ಧರ್ಮ ಜಾಗೃತಿ ಅಭಿಯಾನದಲ್ಲಿ ಮಾತನಾಡಿದ ಅವರು, ದೇವಾಲಯ ಮೊದಲು ಹುಟ್ಟಿತಾ? ನ್ಯಾಯಾಲಯ ಮೊದಲು ಹುಟ್ಟಿದೆಯೇ ಎಂದು ಪ್ರಶ್ನಿಸಿ, ನಾವು ಪಾರಂಪರಿಕವಾಗಿ ಬಂದ ಸಂಪ್ರದಾಯ ಪಾಲಿಸುತ್ತೇವೆ. ಶಬರಿಮಲೆಗೆ ಮಹಿಳೆಯರ ಪ್ರವೇಶಕ್ಕೆ ಸುಪ್ರೀಂಕೋರ್ಟ್ ನೀಡಿದ ತೀರ್ಪು ಕೋಟ್ಯಂತರ ಭಕ್ತರ ನೋವಿಗೆ ಕಾರಣವಾಗಿದೆ. ಮಹಿಳೆಯರು ಶಬರಿಮಲೆಗೆ ಪ್ರವೇಶ ಮಾಡುವುದು, ಅಯ್ಯಪ್ಪನಿಗೆ ಹಿಡಿಸದ ಸಂಪ್ರದಾಯ ಎಂದು ತಿಳಿಸಿದರು. ಇದನ್ನು ಓದಿ: ಕೋರ್ಟ್ ಧರ್ಮದ ತೀರ್ಮಾನ ಮಾಡಕೂಡದು: ಪೇಜಾವರ ಶ್ರೀ

    ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಉದ್ಧಟತನ ಪ್ರದರ್ಶನ ಮಾಡಿದ್ದಾರೆ. ಸುಪ್ರೀಂಕೋರ್ಟ್ ತೀರ್ಪಿನಿಂದಾಗಿ ದೇಶದಲ್ಲಿ ಹಿಂದೂಗಳಿಗೆ ಹಿಂದೂಗಳೇ ವಿರೋಧಿಗಳಾದರು. ಪವಿತ್ರ ಕ್ಷೇತ್ರಗಳಿಗೆ ತೊಂದರೆಯಾದಾಗ ಹಿಂದೂ ಸಮಾಜದವರು ಸುಮ್ಮನಿರಬಾರದು ಎಂದು ಹೇಳಿದರು.

    ಬಾಕಿ ಇರುವ ತೀರ್ಪುಗಳನ್ನು ತೀರ್ಮಾನ ಮಾಡುವ ನಿರ್ಧಾರಕ್ಕೆ ಸುಪ್ರೀಂ ಕೋರ್ಟ್ ಮುಂದಾಗಿತ್ತು. ಹೀಗಾಗಿ ಸಲಿಂಗ ಲೈಂಗಿಕ ಕ್ರಿಯೆಗೆ ಒಪ್ಪಿಗೆ ನೀಡಲಾಯಿತು. ಅಷ್ಟೇ ಅಲ್ಲದೆ ಒಪ್ಪಿತ ಅಕ್ರಮ ಸಂಬಂಧ ಅಪರಾಧವಲ್ಲ ಅಂತ ಹೇಳಲಾಯಿತು. ಶಬರಿಮಲೆ ಪ್ರವೇಶಕ್ಕೆ ಮಹಿಳೆಯರಿಗೆ ಅವಕಾಶ ಕೊಡಲಾಯಿತು. ಈ ತೀರ್ಪುಗಳು ಸಮಾಜದ ಮೇಲೆ ಕೆಟ್ಟ ಪರಿಣಾಮ ಬೀರಿವೆ ಎಂದು ಆರೋಪಿಸಿದರು. ಇದನ್ನು ಓದಿ: ಅಯ್ಯಪ್ಪ ಸ್ವಾಮಿಯ ಅನುಗ್ರಹದಿಂದ ನನಗೆ ವರ್ಗಾವಣೆ ಸಿಕ್ತು: ರೆಹನಾ ಫಾತಿಮಾ

    ಕ್ರಿಶ್ಚಿಯನ್ ಹಾಗೂ ಮುಸ್ಲಿಂ ಧರ್ಮದ ಇಬ್ಬರು ಮಹಿಳೆಯರು ಅಯ್ಯಪ್ಪನ ದರ್ಶನಕ್ಕೆ ಮುಂದಾಗಿದ್ದರು. ಸಾಮಾಜಿಕ ಕಾರ್ಯಕರ್ತೆ ರೆಹನಾ ಫಾತಿಮಾ ವಿರುದ್ಧ ವಾಗ್ದಾಳಿ ನಡೆಸಿದ ಶಿವರಾಂ ಅವರು, ಆಕೆ ಒಂದು ದಿನವಾದರೂ ಮಸೀದಿಗೆ ಹೋಗಿದ್ದಾಳಾ ಎಂದು ಪ್ರಶ್ನಿಸಿದರು. ಶಬರಿಮಲೆಗೆ ಮಹಿಳೆ ಪ್ರವೇಶದ ಕುರಿತು ಸುಪ್ರೀಂ ಕೋರ್ಟ್ ನೀಡಿದ ತೀರ್ಪು ಸಂಪ್ರದಾಯದ ಮೇಲೆ ಪರಿಣಾಮ ಬೀರಿದೆ. ಹೀಗಾಗಿ ತೀರ್ಪನ್ನು ಪುನರ್ ಪರಿಶೀಲನೆ ಮಾಡಬೇಕು ಎಂದು ಆಗ್ರಹಿಸಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಕೋರ್ಟ್ ಧರ್ಮದ ತೀರ್ಮಾನ ಮಾಡಕೂಡದು: ಪೇಜಾವರ ಶ್ರೀ

    ಕೋರ್ಟ್ ಧರ್ಮದ ತೀರ್ಮಾನ ಮಾಡಕೂಡದು: ಪೇಜಾವರ ಶ್ರೀ

    – ರಾಮ ಮಂದಿರಕ್ಕೆ ವಿರುದ್ಧ ತೀರ್ಪು ಬಂದ್ರೆ ಮೊದಲು ನಾನೇ ವಿರೋಧಿಸುತ್ತೇನೆ

    ಉಡುಪಿ: ಕೆಲದಿನಗಳ ಹಿಂದೆಯಷ್ಟೇ ಶಬರಿಮಲೆ ತೀರ್ಪು ಕುರಿತು ಯಾವುದೇ ಹೇಳಿಕೆ ನೀಡುವುದಿಲ್ಲ ಎಂದಿದ್ದ ಉಡುಪಿ ಪೇಜಾವರ ವಿಶ್ವೇಶತೀರ್ಥ ಶ್ರೀಗಳು ಇಂದು, ಕೋರ್ಟ್ ಧರ್ಮದ ತೀರ್ಮಾನ ಮಾಡಕೂಡದು ಎಂದು ಗುಡುಗಿದ್ದಾರೆ.

    ಎಂಜಿಎಂ ಮೈದಾನದಲ್ಲಿ ನಡೆದ ಧರ್ಮ ಜಾಗೃತಿ ಅಭಿಯಾನದಲ್ಲಿ ಮಾತನಾಡಿದ ಅವರು, ಧಾರ್ಮಿಕ ವಿಚಾರಗಳು ಕೋರ್ಟ್ ಗೆ ಯಾಕೆ? ಶಬರಿಮಲೆ ಹಿಂದೂ ಸಮಾಜದ ಕೇಂದ್ರ ಬಿಂದು. ಇಲ್ಲಿನ ಸಂಪ್ರದಾಯ ಬೇರೆ ಯಾವ ಕ್ಷೇತ್ರದಲ್ಲಿಯೂ ಇಲ್ಲ. ಧಾರ್ಮಿಕ ಶಿಸ್ತಿನ ಶಿಕ್ಷಣವನ್ನು ಅಯ್ಯಪ್ಪ ಕಲಿಸಿದ್ದಾನೆ. ನಿಯಮಬದ್ಧ ದೇವಾಲಯದ ವಿಚಾರದಲ್ಲಿ ಆಂದೋಲನ ನಡೆಯುತ್ತಿದೆ ಎಂದು ಕಿಡಿಕಾರಿದ್ದಾರೆ. ಇದನ್ನು ಓದಿ: ರಾಮಮಂದಿರ ನಿರ್ಮಾಣಕ್ಕೆ ಕೇಂದ್ರ ಸುಗ್ರಿವಾಜ್ಞೆ ಹೊರಡಿಸಲಿ: ಪೇಜಾವರ ಶ್ರೀ

    ಕೋರ್ಟ್ ಧರ್ಮದ ತೀರ್ಮಾನ ಮಾಡಕೂಡದು. ಇಂತಹ ನಿರ್ಣಯವನ್ನು ಸಂತರು, ಭಕ್ತರು ಮಾಡಬೇಕು. ದೇವಸ್ಥಾನಗಳಿಗೆ ದಲಿತರ ಪ್ರವೇಶಕ್ಕೆ ಹಿಂದೂ ಸಮಾಜದ ಬೆಂಬಲವಿದೆ. ಆದರೆ ಕೋರ್ಟ್ ಧಾರ್ಮಿಕ ಪರಿವರ್ತನೆಯನ್ನು ಮಾಡಬಾರದು ಎಂದ ಶ್ರೀಗಳು, ಕೇರಳ ಸರ್ಕಾರ ಹಾಗೂ ಸುಪ್ರೀಂ ಕೋರ್ಟ್ ಪ್ರಜೆಗಳನ್ನು ಧಮನ ಮಾಡುತ್ತಿದೆ. ಇತ್ತ ಕೇರಳ ಸರ್ಕಾರವು ಸರ್ವಾಧಿಕಾರಿ ಧೋರಣೆ ತಾಳಿದೆ ಎಂದು ಆರೋಪಿಸಿದರು.

    ಪಂದಳ ರಾಜರು, ಭಕ್ತರು, ಅರ್ಚಕರ ಅಭಿಪ್ರಾಯಕ್ಕೆ ಕೋರ್ಟ್ ಮನ್ನಣೆ ನೀಡಲಿ. ಹಿಂದೂ ಸಮಾಜ ಮಹಿಳೆಯರನ್ನು ತಿರಸ್ಕಾರ ಮಾಡಿಲ್ಲ. ನಮ್ಮ ಸಂಪ್ರದಾಯವನ್ನು ಮಹಿಳೆಯರು ಒಪ್ಪಿಕೊಂಡಿದ್ದಾರೆ ಎಂದು ತಿಳಿಸಿದರು. ಇದನ್ನು ಓದಿ: ಭಾರತದಲ್ಲಿ ರಾಮ ಮಂದಿರ ಕಟ್ಟಿಲ್ಲ ಅಂದ್ರೆ ಪಾಕಿಸ್ತಾನದಲ್ಲಿ ಕಟ್ಟಲು ಆಗುತ್ತಾ: ರೋಷನ್ ಬೇಗ್ ಪ್ರಶ್ನೆ

    ರಾಮ ಮಂದಿರ ನಿರ್ಮಾಣದ ವಿರುದ್ಧವಾಗಿ ಸುಪ್ರೀಂಕೋರ್ಟ್ ತೀರ್ಪು ನೀಡಿದರೆ, ನಾನೇ ಮೊದಲು ವಿರೋಧಿಸುತ್ತೇನೆ. ಹಿಂದೂ ಸಮಾಜದವರು ದೇಶಾದ್ಯಂತ ಸಂಘಟಿತರಾಗಬೇಕು ಎಂದು ಪೇಜಾವರ ಶ್ರೀ ಹೇಳಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ರಾಮಮಂದಿರ ನಿರ್ಮಾಣಕ್ಕೆ ಕೇಂದ್ರ ಸುಗ್ರಿವಾಜ್ಞೆ ಹೊರಡಿಸಲಿ: ಪೇಜಾವರ ಶ್ರೀ

    ರಾಮಮಂದಿರ ನಿರ್ಮಾಣಕ್ಕೆ ಕೇಂದ್ರ ಸುಗ್ರಿವಾಜ್ಞೆ ಹೊರಡಿಸಲಿ: ಪೇಜಾವರ ಶ್ರೀ

    ನವದೆಹಲಿ: ಅಯೋಧ್ಯೆ ರಾಮಮಂದಿರ ನಿರ್ಮಾಣಕ್ಕೆ ನ್ಯಾಯಾಲಯದಿಂದ ಬೇಗ ತೀರ್ಪು ಸಿಗುವುದಿಲ್ಲ. ಹೀಗಾಗಿ ಈ ಕುರಿತು ಕೇಂದ್ರ ಸರ್ಕಾರವೇ ಸುಗ್ರಿವಾಜ್ಞೆ ಹೊರಡಿಸಬೇಕು ಎಂದು ಉಡುಪಿ ಪೇಜಾವರ ಮಠದ ವಿಶ್ವೇಶತೀರ್ಥ ಶ್ರೀಗಳು ಆಗ್ರಹಿಸಿದ್ದಾರೆ.

    ಆಯೋಧ್ಯೆ ಭೂ ವಿವಾದಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಮೇಲ್ಮನವಿ ಅರ್ಜಿ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಜನವರಿಗೆ ಮುಂದೂಡಿದ ಹಿನ್ನೆಲೆಯಲ್ಲಿ ಪ್ರತಿಕ್ರಿಯೆ ನೀಡಿದ ಅವರು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು, ಸುಗ್ರಿವಾಜ್ಞೆ ಹೊರಡಿಸಿ ಎರಡು ಸದನಗಳಿಂದ ಒಪ್ಪಿಗೆ ಪಡೆಯಬೇಕು ಎಂದ ಅವರು, ಎಲ್ಲ ಸ್ವಾಮೀಜಿಗಳ ಅಭಿಪ್ರಾಯವೂ ಇದೆಯಾಗಿದೆ ಎಂದು ತಿಳಿಸಿದರು.

    ಈ ಸಂಬಂಧ ನಿಯೋಗವೊಂದು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರನ್ನು ಭೇಟಿಯಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗುವುದಾದರೆ, ನಾನು ನಿಯೋಗದೊಂದಿಗೆ ತೆರಳುತ್ತೇನೆ ಎಂದು ಸ್ಪಷ್ಟನೆ ನೀಡಿದ್ದಾರೆ. ಇದನ್ನೂ ಓದಿ: ಸುಗ್ರಿವಾಜ್ಞೆ ಹೊರಡಿಸಿ ರಾಮ ಮಂದಿರ ನಿರ್ಮಿಸಿ: ಕೇಂದ್ರಕ್ಕೆ ಭಾಗವತ್ ಸೂಚನೆ

    ಇದೇ ವೇಳೆ ಮಾಧ್ಯಮಗಳು ಶಬರಿಮಲೆ ವಿವಾದದ ಕುರಿತು ಪ್ರಶ್ನಿಸಿದ್ದಕ್ಕೆ ಪ್ರತಿಕ್ರಿಯಿಸಿದ ಶ್ರೀಗಳು, ಈ ವಿಚಾರವಾಗಿ ನಾನು ತಟಸ್ಥ. ಒಂದು ಕಡೆ ಸುಪ್ರೀಂಕೋರ್ಟ್ ತೀರ್ಪು ನೀಡಿದೆ. ಮತ್ತೊಂದು ಕಡೆ ಜನಾಭಿಪ್ರಾಯ ಹಾಗೂ ಸಂಪ್ರದಾಯದ ಮಧ್ಯೆ ಸಂಘರ್ಷ ಪ್ರಾರಂಭವಾಗಿದೆ. ಶಬರಿಮಲೆ ದೇಗುಲ ಪ್ರವೇಶಕ್ಕೆ ಮಹಿಳೆಯರಿಗೆ ಅವಕಾಶ ನೀಡಬೇಕು ಎನ್ನುವುದು ವೈಯಕ್ತಿಕ ಅಭಿಪ್ರಾಯ. ವಿವಿಧ ದೇವಾಲಯಗಳಲ್ಲಿ ಮಹಿಳೆಯರಿಗೆ ಪ್ರವೇಶವಿದೆ. ಆದರೆ ಶಬರಿಮಲೆ ಸಂಪ್ರದಾಯದ ಪ್ರಕಾರ ಮಹಿಳೆಯರ ಪ್ರವೇಶಕ್ಕೆ ನಿಷೇಧವಿದೆ. ಹೀಗಾಗಿ ಅಲ್ಲಿನ ದೇವಸ್ಥಾನ ಆಡಳಿತ ಸಿಬ್ಬಂದಿಯೇ ನಿರ್ಧಾರ ಕೈಗೊಳ್ಳಬೇಕು. ಈ ಬಗ್ಗೆ ನಾನು ಮಾತನಾಡುವುದಿಲ್ಲ ಎಂದು ಹೇಳಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv