Tag: pen

  • ತನ್ನ ಚುನಾವಣೆಯ ಗೆಲುವಿನ ರಹಸ್ಯ ರಿವೀಲ್ ಮಾಡಿದ ಮೋದಿ

    ತನ್ನ ಚುನಾವಣೆಯ ಗೆಲುವಿನ ರಹಸ್ಯ ರಿವೀಲ್ ಮಾಡಿದ ಮೋದಿ

    ನವದೆಹಲಿ: ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ನಾಮಪತ್ರ ಸಲ್ಲಿಸುವಾಗ ಸಹಿ ಮಾಡಲು ಬಳಸುವ ಪೆನ್ನಿನ (Pen) ವಿಶೇಷತೆ ಹಾಗೂ ಅದನ್ನು ಯಾರು ನೀಡಿದ್ದಾರೆ ಎಂಬ ಸೀಕ್ರೆಟ್ ರಿವೀಲ್ ಮಾಡಿದ್ದಾರೆ.

    ಹೌದು. ಗುಜರಾತ್‍ನ (Gujarat) ಅಹಮದಾಬಾದ್‍ನಲ್ಲಿ ನಡೆದ ಪ್ರಮುಖ್ ಸ್ವಾಮಿ ಮಹಾರಾಜ್ ಶತಾಬ್ದಿ ಮಹೋತ್ಸವದ (Pramukh Swami Maharaj Shatabdi Mahotsav) ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನಿ ಮೋದಿ ಭಾಗವಹಿಸಿದ್ದರು. ಈ ವೇಳೆ ಮಾತನಾಡಿದ ಅವರು, ಸ್ವಾಮಿ ಮಹಾರಾಜ್ ಅವರೊಂಗಿನ ಕೆಲವು ನೆನಪುಗಳನ್ನು ಹಂಚಿಕೊಂಡರು. ಈ ವೇಳೆ ತಾವು ಚುನಾವಣೆಯಲ್ಲಿ ಸಹಿ ಹಾಕುತ್ತಿರುವ ಪೆನ್‍ನ್ನು ನೀಡಿದವರು ಅವರೇ ಎಂದು ತಿಳಿಸಿದ್ದಾರೆ.

    ಸ್ವಾಮಿ ಮಹಾರಾಜ್ ಅವರನ್ನು ಸ್ಮರಿಸುತ್ತಾ ಮಾತನಾಡಿದ ಅವರು, 2002ರ ಚುನಾವಣೆಯಲ್ಲಿ ರಾಜ್‍ಕೋಟ್‍ನಿಂದ ಸ್ಪರ್ಧಿಸಿದ್ದೆ. ಆ ಸಂದರ್ಭದಲ್ಲಿ ನನಗೆ ಇಬ್ಬರು ಸಂತರು ಪೆನ್ನುಗಳನ್ನು ನೀಡಿದ್ದರು. ಆ ಪೆನ್ನಿನ ಜೊತೆಗೆ ಒಂದು ಕಾಗದವು ಇತ್ತು. ಆ ಕಾಗದದಲ್ಲಿ ಸ್ವಾಮಿ ಮಹಾರಾಜ್ ಅವರು ಈ ಪೆನ್ನನ್ನು ನೀಡಿರುವುದಾಗಿ ಬರೆದಿತ್ತು. ಅಷ್ಟೇ ಅಲ್ಲದೇ ನಾಮಪತ್ರ ಸಲ್ಲಿಸುವಾಗ ಈ ಪೆನ್‍ನಿಂದಲೇ ಸಹಿ ಮಾಡಿ ಎಂದು ಬರೆದಿತ್ತು ಎಂದು ನೆನಪಿಸಿಕೊಂಡರು.

    ಅದಾದ ಬಳಿಕ ರಾಜ್‍ಕೋಟ್‍ನಲ್ಲಿ ನಾಮಪತ್ರ ಸಲ್ಲಿಸುವಾಗ ಅದೇ ಪೆನ್‍ನ್ನು ಬಳಸಿದ್ದೆ. ಆ ಕ್ಷೇತ್ರದಲ್ಲಿ ಭರ್ಜರಿ ಗೆಲುವು ಸಾಧಿಸಿದ್ದೆ. ಅಂದಿನಿಂದ ಇಲ್ಲಿಯವರೆಗೆ ಸಹಿ ಮಾಡುವಾಗ ಅದೇ ಪೆನ್‍ಬಳಸುತ್ತಿದ್ದೇನೆ ಎಂದು ತಾವು ಬಳಸುವ ಪೆನ್ನಿನ ಕುರಿತು ತಿಳಿಸಿದ್ದಾರೆ. ಇದನ್ನೂ ಓದಿ: ಬೆಳಗಾವಿಯಲ್ಲಿ ಮರಾಠಿ ಭಾಷಿಕ ಪುಂಡರ ಪುಂಡಾಟ- ಸರ್ಕಾರಿ ವಾಹನದ ಮೇಲೆ ಕಲ್ಲು ತೂರಾಟ

    2002ರಲ್ಲಿ ಗುಜರಾತ್‍ನ ರಾಜ್‍ಕೋಟ್‍ನಿಂದ ಗೆದ್ದು ವಿಧಾನ ಸಭೆಯನ್ನು ಪ್ರವೇಶಿಸಿದರು. ಅದಾದ ಬಳಿಕ 2014ರಂದು ಉತ್ತರ ಪ್ರದೇಶದ ವಾರಣಾಸಿಯಿಂದ ಲೋಕಸಭೆ ಚುನಾವಣೆಗೆ ಸ್ಪರ್ಧಿಸಿ ಗೆದ್ದು ಪ್ರಧಾನಿ ಆದರು. 2ನೇ ಬಾರಿಗೆ 2019ರಲ್ಲಿಯೂ ವಾರಣಾಸಿಯಿಂದ ಗೆಲುವು ಸಾಧಿಸಿ 2ನೇ ಬಾರಿಗೆ ಪ್ರಧಾನಮಂತ್ರಿ ಆಗಿದ್ದಾರೆ. ಇದನ್ನೂ ಓದಿ: ಬಿಜೆಪಿಗೆ 66-70 ಸ್ಥಾನ ಸಿಗುತ್ತೆ, ನಾವು ಗೆಲ್ತೀವಿ – ಡಿಕೆಶಿಯಿಂದ ಕಾಂಗ್ರೆಸ್‌ ಸಮೀಕ್ಷೆ ರಿಸಲ್ಟ್‌ ಔಟ್‌

    Live Tv
    [brid partner=56869869 player=32851 video=960834 autoplay=true]

  • SSLC ವಿದ್ಯಾರ್ಥಿಗಳಿಗೆ ಮಾಸ್ಕ್, ಸ್ಯಾನಿಟೈಸರ್, ಪೆನ್‌ ವಿತರಿಸಿದ ಕೆ. ಗೋಪಾಲಯ್ಯ

    SSLC ವಿದ್ಯಾರ್ಥಿಗಳಿಗೆ ಮಾಸ್ಕ್, ಸ್ಯಾನಿಟೈಸರ್, ಪೆನ್‌ ವಿತರಿಸಿದ ಕೆ. ಗೋಪಾಲಯ್ಯ

    ಬೆಂಗಳೂರು: ಇಂದಿನಿಂದ ಎಸ್‍ಎಸ್‍ಎಲ್‍ಸಿ ಪರೀಕ್ಷೆ ಬರೆಯುವ ಮಹಾಲಕ್ಷ್ಮಿ ಲೇ ಔಟ್ ವಿಧಾನಸಭಾ ಕ್ಷೇತ್ರದ ಶಾಲೆಗಳ ವಿದ್ಯಾರ್ಥಿಗಳಿಗೆ, ಸ್ಥಳೀಯ ಶಾಸಕರೂ ಆದ ಅಬಕಾರಿ ಸಚಿವ ಕೆ.ಗೋಪಾಲಯ್ಯ ಸ್ಯಾನಿಟೈಸರ್, ಮಾಸ್ಕ್ ಮತ್ತು ಪೆನ್ನುಗಳನ್ನು ವಿತರಿಸಿ ಶುಭ ಹಾರೈಸಿದ್ದಾರೆ.

    ಎಸ್‍ಎಸ್‍ಎಲ್‍ಸಿ ಪರೀಕ್ಷೆ ಬರೆಯುತ್ತಿರುವ ಎಲ್ಲಾ ವಿದ್ಯಾರ್ಥಿಗಳಿಗೆ ಶುಭಾಶಯಗಳು. ಯಾವುದೇ ಭಯ, ಹಿಂಜರಿಕೆ ಇಲ್ಲದೆ ಆತ್ಮವಿಶ್ವಾಸದಿಂದ ಪರೀಕ್ಷೆ ಬರೆಯಿರಿ. ವಿನಾಕಾರಣ ಆತಂಕಕ್ಕೆ ಒಳಗಾಗದೆ ಧೈರ್ಯವಾಗಿ ಪರೀಕ್ಷೆ ಬರೆದು ಭವಿಷ್ಯ ರೂಪಿಸಿಕೊಳ್ಳಿ ಎಂದು ಹಾರೈಸುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ. ಇದನ್ನೂ ಓದಿ: ಕೆಜಿಎಫ್-2 ಟ್ರೈಲರ್ ರಿಲೀಸ್ ಮಾಡಿದ ಶಿವಣ್ಣ- ರಾಕಿಬಾಯ್ ಅಬ್ಬರ ಶುರು

    ಮಹಾಲಕ್ಷ್ಮಿ ಲೇ ಔಟ್ ಕ್ಷೇತ್ರ ವ್ಯಾಪ್ತಿಯ ವಿದ್ಯಾವರ್ಧಕ ಶಾಲೆ ಮತ್ತು ಪಾಂಚಜನ್ಯ ಶಾಲೆಯಲ್ಲಿ ಆರಂಭಿಸಿರುವ ಕೇಂದ್ರಗಳಿಗೆ ಭೇಟಿ ನೀಡಿ ಆತ್ಮಸ್ಥೈರ್ಯ ತುಂಬಿದರು. ಕ್ಷೇತ್ರ ವ್ಯಾಪ್ತಿಯಲ್ಲಿ 15 ಪರೀಕ್ಷಾ ಕೇಂದ್ರಗಳನ್ನು ತೆರೆಯಲಾಗಿದ್ದು, 3451 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಈ ಎಲ್ಲ ಮಕ್ಕಳಿಗೂ ಸಚಿವರು ಮಾಸ್ಕ್, ಸ್ಯಾನಿಟೈಸರ್ ಮತ್ತು ಪರೀಕ್ಷೆ ಬರೆಯಲು ಪೆನ್ನುಗಳನ್ನು ವಿತರಿಸಿದರು.

    ಈ ಸಂದರ್ಭದಲ್ಲಿ ಬಿಬಿಎಂಪಿ ಮಾಜಿ ಉಪಮೇಯರ್ ಎಸ್.ಹರೀಶ್, ವೆಂಕಟೇಶ್ ಮೂರ್ತಿ, ವೆಂಕಟೇಶ್ ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು.

  • ಬೀದಿಯಲ್ಲಿ ಪೆನ್ನು ಮಾರ್ತಿದ್ದ ಬಾಲಕಿಗೆ ಐಫೋನ್ ಗಿಫ್ಟ್ ಕೊಟ್ರು ತೇಜ್ ಪ್ರತಾಪ್ ಯಾದವ್!

    ಬೀದಿಯಲ್ಲಿ ಪೆನ್ನು ಮಾರ್ತಿದ್ದ ಬಾಲಕಿಗೆ ಐಫೋನ್ ಗಿಫ್ಟ್ ಕೊಟ್ರು ತೇಜ್ ಪ್ರತಾಪ್ ಯಾದವ್!

    ಪಾಟ್ನಾ: ಆರ್ ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಪುತ್ರ ತೇಜ್ ಪ್ರತಾಪ್ ಯಾದವ್ ಒಂದೊಳ್ಳೆ ಕೆಲಸ ಮಾಡಿರುವ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ.

    ಹೌದು, ಬೀದಿಗಳಲ್ಲಿ ಪೆನ್ನು ಮಾರಾಟ ಮಾಡ್ತಿದ್ದ ಬಡ ಕುಟುಂಬದ ಬಾಲಕಿಯೊಬ್ಬಳಿಗೆ ಐಫೋನ್ ಗಿಫ್ಟ್ ನೀಡಿದ್ದಾರೆ. ಇದರ ವೀಡಿಯೋ ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗುತ್ತಿದೆ. ಇದನ್ನೂ ಓದಿ: ಫೋಟೋಶೂಟ್‌ಗಾಗಿ ಬಂದಿದ್ದ ಮಹಿಳೆ ಮೇಲೆ ಲಾಡ್ಜ್‌ನಲ್ಲಿ ಗ್ಯಾಂಗ್‌ರೇಪ್

    ಶನಿವಾರ ಸಂಜೆ ತನ್ನ ಸ್ನೇಹಿತರೊಂದಿಗೆ ತೇಜ್ ಪ್ರತಾಪ್ ಪಾಟ್ನಾದ ಬೋರಿಂಗ್ ರೋಡ್ ಪ್ರದೇಶದಲ್ಲಿ ಸುತ್ತಾಡುತ್ತಿದ್ದರು. ಈ ವೇಳೆ ರಸ್ತೆ ಬದಿಯಲ್ಲಿ ಪುಟ್ಟ ಬಾಲಕಿಯೊಬ್ಬಳು ಪೆನ್ನು ಮಾರಾಟ ಮಾಡುತ್ತಿರುವುದು ತೇಜ್ ಕಣ್ಣಿಗೆ ಬಿದ್ದಿದೆ. ತಮ್ಮ ಗಮನಕ್ಕೆ ಬಂದ ಕೂಡಲೇ ಅಲ್ಲಿಗೆ ತೆರಳಿರುವ ತೇಜ್ ಪ್ರತಾಪ್, ಕೆಲ ಹೊತ್ತುಆಕೆಯ ಜೊತೆ ಮಾತುಕತೆ ನಡೆಸಿದ್ದಾರೆ.

    ಈ ವೇಳೆ ಬಾಲಕಿಗೆ ತನ್ನ ಮೊಬೈಲ್ ನಂಬರ್ ನೀಡಿ, ಸಹಾಯಕ್ಕಾಗಿ ಕರೆ ಮಾಡುವಂತೆ ತಿಳಿಸಿದ್ದಾರೆ. ಆಗ ಬಾಲಕಿ ತನ್ನ ಬಳಿ ಮೊಬೈಲ್ ಇಲ್ಲ ಎಂದು ಹೇಳಿದ್ದಾಳೆ. ಈ ಬೆನ್ನಲ್ಲೇ ಪಕ್ಕದ ಮೊಬೈಲ್ ಶಾಪ್‍ಗೆ ಬಾಲಕಿಯನ್ನ ಕರೆದುಕೊಂಡು ಹೋಗಿದ ತೇಜ್, ಆಕೆಗೆ 50 ಸಾವಿರ ರೂ. ಮೌಲ್ಯದ ಐಫೋನ್ ಉಡುಗೊರೆಯಾಗಿ ನೀಡಿದ್ದಾರೆ. ಇದನ್ನೂ ಓದಿ: ತುಮಕೂರಿನಲ್ಲಿ ಮತ್ತೆ ಕೊರೊನಾ ಭೀತಿ – 42 ಪುಟ್ಟ ಮಕ್ಕಳಿಗೆ ವಕ್ಕರಿಸಿದ ಕೋವಿಡ್

    ಗಿಫ್ಟ್ ಸಿಕ್ಕ ಬಳಿಕ ಬಾಲಕಿ ಇದನ್ನು ತನ್ನ ವಿದ್ಯಾಭ್ಯಾಸಕ್ಕಾಗಿ ಬಳಕೆ ಮಾಡಿಕೊಳ್ಳುವ ಭರವಸೆ ನೀಡಿದ್ದಾಳೆ. ಬಾಲಕಿಯ ಮಾತಿಗೆ ಫಿದಾ ಆದ ತೇಜ್, ಏನಾದರೂ ಸಹಾಯ ಬೇಕಿದ್ದರೆ ಕರೆ ಮಾಡುವಂತೆ ಹೇಳಿ ಅಲ್ಲಿಂದ ತೆರಳಿದ ಪ್ರಸಂಗ ನಡೆದಿದೆ.

  • ಭಿಕ್ಷೆ ಬೇಡಲು ನಿರಾಕರಿಸಿ ಪೆನ್ನು ಮಾರಾಟ ಮಾಡುವ ವೃದ್ಧೆ – ನೆಟ್ಟಿಗರಿಂದ ಮೆಚ್ಚುಗೆ

    ಭಿಕ್ಷೆ ಬೇಡಲು ನಿರಾಕರಿಸಿ ಪೆನ್ನು ಮಾರಾಟ ಮಾಡುವ ವೃದ್ಧೆ – ನೆಟ್ಟಿಗರಿಂದ ಮೆಚ್ಚುಗೆ

    ಮುಂಬೈ: ಪುಣೆಯ ಬೀದಿಗಳಲ್ಲಿ ವೃದ್ಧೆಯೊಬ್ಬರು ಜೀವನ ನಡೆಸಲು ಪೆನ್ನುಗಳನ್ನು ಮಾರಾಟ ಮಾಡುತ್ತಿರುವ ಫೋಟೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದ್ದು, ನೆಟ್ಟಿಗರ ಮನ ಗೆಲ್ಲುತ್ತಿದೆ.

    ಈ ಫೋಟೋವನ್ನು ಶಿಖಾ ರಾಠಿ ತಮ್ಮ ಇನ್‍ಸ್ಟಾಗ್ರಾಮ್‍ನಲ್ಲಿ ಹಂಚಿಕೊಂಡಿದ್ದಾರೆ. ರತನ್ ಜೀವನ ನಡೆಸುವುದಕ್ಕಾಗಿ ಪುಣೆಯ ಎಂಜಿ ರಸ್ತೆಯಲ್ಲಿ ಪೆನ್ನುಗಳನ್ನು ಮಾರಾಟ ಮಾಡುತ್ತಾರೆ. ಭಿಕ್ಷೆ ಬೇಡುವುದನ್ನು ನಿರಾಕರಿಸಿ ತನ್ನ ಜೀವನವನ್ನು ಗೌರವ ಹಾಗೂ ಸ್ವಾವಲಂಬಿಯಾಗಿ ನಡೆಸಲು ವಿವಿಧ ರೀತಿಯ ಬಣ್ಣ, ಬಣ್ಣದ ಪೆನ್ನುಗಳನ್ನು ಬಾಕ್ಸ್‌ನಲ್ಲಿ ಹಿಡಿದುಕೊಂಡು ನಗುಮುಖದಿ ಮಾರಾಟ ಮಾಡುತ್ತಿರುವ ಫೋಟೋವನ್ನು ಕಾಣಬಹುದಾಗಿದೆ. ಇದನ್ನೂ ಓದಿ: ಕತ್ರಿನಾ ಜೊತೆಗಿನ ಎಂಗೇಜ್‍ಮೆಂಟ್ ಬಗ್ಗೆ ಸುಳಿವು ಕೊಟ್ರಾ ವಿಕ್ಕಿ ಕೌಶಲ್ ?

    ಜೊತೆಗೆ, ಬಾಕ್ಸ್ ಮೇಲೆ ನಾನು ಭಿಕ್ಷೆ ಬೇಡುವುದಿಲ್ಲ. ದಯವಿಟ್ಟು 10ರೂ.ಗೆ ನೀಲಿ ಬಣ್ಣದ ಪೆನ್ನನ್ನು ಖರೀದಿಸಿ, ಆಶೀರ್ವಾದಿಸಿ, ಧನ್ಯವಾದ ಎಂದು ಬರೆದಿರುವುದನ್ನು ನೋಡಬಹುದಾಗಿದೆ. ಇದನ್ನೂ ಓದಿ:  ಮಹಾಮಳೆಯ ಭೂಕುಸಿತಕ್ಕೆ ತತ್ತರಿಸಿದ ದೇವರ ನಾಡು – ಅವಶೇಷಗಳಡಿ 26 ಶವ ಪತ್ತೆ

     

    View this post on Instagram

     

    A post shared by Shikha Rathi (@sr1708)

    ಫೋಟೋ ಜೊತೆಗೆ ಕ್ಯಾಪ್ಷನ್‍ನಲ್ಲಿ ಇಂದು ನಾನು ಜೀವನದ ನಿಜವಾದ ನಾಯಕಿ ಹಾಗೂ ಚಾಂಪಿಯನ್ ರತನ್ ಅವರನ್ನು ನೋಡಿದೆ. ಇವರನ್ನು ನನ್ನ ಸ್ನೇಹಿರೊಂದಿಗೆ ಹೊರ ಹೋಗಿದ್ದಾಗ ಭೇಟಿಯಾದೆ. ಈ ವೇಳೆ ಬಾಕ್ಸ್ ಮೇಲೆ ಬರೆದಿರುವುದನ್ನು ಓದಿ ನನ್ನ ಸ್ನೇಹಿತರು ಪೆನ್ನನ್ನು ಖರೀದಿ ಮಾಡಿದರು. ಆಗ ರತನ್ ಬಹಳ ಸಂತೋಷಗೊಂಡು ನಗುಮುಖದಿ ಧನ್ಯವಾದ ತಿಳಿಸಿದರು. ಈ ವೇಳೆ ಅವರ ಮುಖದಲ್ಲಿ ಮಂದಹಾಸ, ಕೃತಜ್ಞತೆ ಹಾಗೂ ದಯೆ ಎದ್ದು ಕಾಣುತ್ತಿತ್ತು. ನಮಗೆ ಮತ್ತಷ್ಟು ಪೆನ್ನು ಖರೀದಿಸಬೇಕು ಎನಿಸಿತು. ಅವರ ವರ್ತನೆ ಮತ್ತು ಅವರ ಸಿಹಿಯಾದ ನಗು, ಸ್ವಾಭಿಮಾನ ನನಗೆ ಮತ್ತಷ್ಟು ಪೆನ್ನು ಖರೀದಿಸುವಂತೆ ಮಾಡಿತು ಎಂದು ಬರೆದುಕೊಂಡಿದ್ದಾರೆ. ಅಲ್ಲದೇ ಎಂ.ಜಿ ರಸ್ತೆಗೆ ಯಾರಾದರೂ ಹೋದಾಗ ಈ ವೃದ್ಧೆಯಿಂದ ಮತ್ತಷ್ಟು ಪೆನ್ನುಗಳನ್ನು ಖರೀದಿಸುವಂತೆ ಮನವಿ ಮಾಡಿದ್ದಾರೆ.

  • ಮೋದಿ ಹುಟ್ಟುಹಬ್ಬ ಪ್ರಯುಕ್ತ ಮಕ್ಕಳಿಗೆ ಬ್ಯಾಗ್, ಪೆನ್ನು ವಿತರಿಸಿದ ನಾರಾಯಣ ಸ್ವಾಮಿ

    ಮೋದಿ ಹುಟ್ಟುಹಬ್ಬ ಪ್ರಯುಕ್ತ ಮಕ್ಕಳಿಗೆ ಬ್ಯಾಗ್, ಪೆನ್ನು ವಿತರಿಸಿದ ನಾರಾಯಣ ಸ್ವಾಮಿ

    ಚಿತ್ರದುರ್ಗ: ಪ್ರಧಾನಿ ನರೇಂದ್ರ ಮೋದಿ ಜನ್ಮದಿನದ ಅಂಗವಾಗಿ ಶಾಲಾ ಮಕ್ಕಳಿಗೆ ಬ್ಯಾಗ್ ಪುಸ್ತಕ ಮತ್ತು ಪೆನ್ನುಗಳನ್ನು ಸರ್ಕಾರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಖಾತೆ ರಾಜ್ಯ ಸಚಿವ ಎ.ನಾರಾಯಣ ಸ್ವಾಮಿ ವಿತರಿಸಿದ್ದಾರೆ.

    ನಾರಾಯಣ ಸ್ವಾಮಿ ಇಂದು ಪ್ರಧಾನಿ ನರೇಂದ್ರ ಮೋದಿರವರ 71 ಜನ್ಮದಿನವನ್ನು ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಜೋಗಿಹಟ್ಟಿ (ಗೊಲ್ಲರ ಹಟ್ಟಿ) ಗ್ರಾಮದಲ್ಲಿ ಆಚರಿಸಿ ಸಭಾ ಕಾರ್ಯಕ್ರಮದಲ್ಲಿ ಮಾತನಾಡಿದರು. ಜೋಗಿಹಟ್ಟಿ ಗ್ರಾಮದ ಪ್ರಾರ್ಥಮಿಕ ಶಾಲೆಗೆ ಹೆಚ್ಚಿನ ಕೊಠಡಿಗಳನ್ನು ನಿರ್ಮಾಣಕ್ಕೆ ಮುಂದಿನ ದಿನಗಳಲ್ಲಿ ನೀಡುವ ಭರವಸೆ ನೀಡಿದ್ದಾರೆ.

    ಶಿಕ್ಷಣದಿಂದ ಮಾತ್ರ ಸಮಾಜ ಮತ್ತು ದೇಶದ ಅಭಿವೃಧ್ಧಿ ಸಾಧ್ಯ, ಮಕ್ಕಳನ್ನು ಕಡ್ಡಾಯವಾಗಿ ಶಾಲೆಗೆ ಕಳುಹಿಸಿ. ಕಾಲೇಜು ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಸರ್ಕಾರಿ ಬಸ್ ಬಿಡುವಂತೆ ನಿರ್ದೇಶನ ನೀಡುವುದಾಗಿ ಹೇಳಿದರು.

    ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಪ್ರಯುಕ್ತ ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡ ಸಂದರ್ಭದಲ್ಲಿ ಶಾಲಾ ಮಕ್ಕಳಿಗೆ ಬ್ಯಾಗ್, ಪುಸ್ತಕ, ಪೆನ್ಸಿಲ್, ಪೆನ್ ವಿತರಣೆ ಮಾಡಿದ್ದಾರೆ.

  • ಇಂದು ದೇಶದಾದ್ಯಂತ ನೀಟ್ ಪರೀಕ್ಷೆ

    ಇಂದು ದೇಶದಾದ್ಯಂತ ನೀಟ್ ಪರೀಕ್ಷೆ

    -ಮೊದಲ ಡೋಸ್ ಲಸಿಕೆ ಕಡ್ಡಾಯ

    ಬೆಂಗಳೂರು: ವೈದ್ಯಕೀಯ, ದಂತ ವೈದ್ಯಕೀಯ, ಆಯುಷ್ ಕೋರ್ಸ್‍ಗಳ ಕಾಲೇಜು ಪ್ರವೇಶಕ್ಕೆ ಇರುವ 2020-21ನೇ ಸಾಲಿನ ನೀಟ್ (ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆ) ದೇಶದಾದ್ಯಂತ ಇಂದು ನಡೆಯಲಿದೆ.

    ನೀಟ್ ಪ್ರವೇಶ ಪರೀಕ್ಷೆ ಇಂದು ಮಧ್ಯಾಹ್ನ 2 ರಿಂದ ಸಂಜೆ 5 ಗಂಟೆಯವರೆಗೆ ನಡೆಯಲಿದ್ದು, ದೇಶಾದ್ಯಂತ 201 ಪ್ರಮುಖ ನಗರಗಳಲ್ಲಿ ಹಾಗೂ ಕರ್ನಾಟಕದ ಒಟ್ಟು 9 ನಗರಗಳಲ್ಲಿ ಪ್ರವೇಶ ಪರೀಕ್ಷೆ ನಡೆಯಲಿದೆ. ಬೆಂಗಳೂರು, ಬೆಳಗಾವಿ, ದಾವಣಗೆರೆ, ಹುಬ್ಬಳ್ಳಿ, ಧಾರವಾಡ, ಕಲಬುರಗಿ, ಮೈಸೂರು, ಮಂಗಳೂರು, ಉಡುಪಿಯಲ್ಲಿ ಪರೀಕ್ಷೆ ನಡೆಯಲಿದೆ. ನೀಟ್ ಪರೀಕ್ಷೆಗಾಗಿ 16 ಲಕ್ಷಕ್ಕೂ ಹೆಚ್ಚು ಅಭ್ಯರ್ಥಿಗಳು ನೋಂದಣಿ ಮಾಡಿಕೊಂಡಿದ್ದು ಒಟ್ಟು 180 ಪ್ರಶ್ನೆಗಳಿದ್ದು ಪ್ರತಿ ಪ್ರಶ್ನೆಗೆ 4 ಅಂಕಗಳಿರಲಿವೆ. ಒಟ್ಟು 720 ಅಂಕಗಳಿಗೆ ಪರೀಕ್ಷೆ ನಡೆಯಲಿದೆ. ಪ್ರತಿ ಪ್ರಶ್ನೆಯ ತಪ್ಪು ಉತ್ತರಕ್ಕೆ ಒಂದು ನೆಗೆಟಿವ್ ಅಂಕ ಕಡಿತವಾಗುತ್ತದೆ. 3 ಗಂಟೆಗಳ ಕಾಲ ಪರೀಕ್ಷೆ ನಡೆಯುತ್ತಿದ್ದು, ಒಟ್ಟು 13 ಭಾಷೆಗಳಲ್ಲಿ ಪರೀಕ್ಷೆ ನಡೆಯಲಿದೆ. ರಸಾಯನಶಾಸ್ತ್ರ, ಭೌತಶಾಸ್ತ್ರ, ಸಸ್ಯಶಾಸ್ತ್ರ, ಪ್ರಾಣಿಶಾಸ್ತ್ರ ವಿಷಯಗಳಿಗೆ ತಲಾ 45 ಪ್ರಶ್ನೆಗಳಿರಲಿವೆ. ಇದನ್ನೂ ಓದಿ: ನಾಳೆ ನೀಟ್ ಪರೀಕ್ಷೆ- ಕನಿಷ್ಠ ಒಂದು ಡೋಸ್ ಲಸಿಕೆ ಪಡೆದವರಿಗೆ ಮಾತ್ರ ಅವಕಾಶ

    ನೀಟ್ ಪರೀಕ್ಷೆಗೆ ಮಾರ್ಗಸೂಚಿ
    ನೀಟ್ ಪರೀಕ್ಷೆ ಬರೆಯುವ ಪರೀಕ್ಷಾರ್ಥಿಗಗೆ ಮೊದಲ ಡೋಸ್ ಲಸಿಕೆ ಕಡ್ಡಾಯವಾಗಿದ್ದು, ಕೊರೊನಾ ವ್ಯಾಕ್ಸಿನ್ ರಿಪೋರ್ಟ್, ಮೆಸೇಜ್ ಪರಿಶೀಲನೆ ಮಾಡಿ ಪರೀಕ್ಷೆ ಬರೆಯಲು ಅವಕಾಶ ನೀಡಲಾಗುತ್ತದೆ. ಲಸಿಕೆ ಪಡೆಯದ ವಿದ್ಯಾರ್ಥಿಗಳಿಗೆ ಪರೀಕ್ಷೆಗೆ ಅವಕಾಶ ನಿರಾಕರಿಸಲಾಗಿದೆ. ಸೋಂಕಿತ ವಿದ್ಯಾರ್ಥಿಗಳಿಗೂ ಪರೀಕ್ಷೆ ಬರೆಯಲು ಅವಕಾಶವಿಲ್ಲ. ಸೋಂಕಿನ ಲಕ್ಷಣವಿದ್ದರೆ ಪ್ರತ್ಯೇಕ ಕೊಠಡಿಯಲ್ಲಿ ಕೊರೊನಾ ಮಾರ್ಗಸೂಚಿ ಅನುಸರಿಸಿ ಪರೀಕ್ಷೆಗೆ ವ್ಯವಸ್ಥೆ ಮಾಡಲಾಗಿದೆ. ವಿದ್ಯಾರ್ಥಿಗಳು ಪರೀಕ್ಷೆಗೆ ಪೆನ್ ಕೊಂಡೊಯ್ಯುವಂತಿಲ್ಲ. ಪರೀಕ್ಷಾ ಕೇಂದ್ರದಲ್ಲಿ ಕೊಡುವ ಪೆನ್ ಬಳಸಬೇಕು. ವಾಚ್, ಫುಲ್ ಸ್ಲೀವ್ ಡ್ರೆಸ್, ಶೂ, ಬ್ಯಾಗ್, ಪರ್ಸ್ ನಿಷೇಧಿಸಲಾಗಿದೆ. ಇದನ್ನೂ ಓದಿ: ಗುಜರಾತ್ ಮುಂದಿನ ಸಿಎಂ ಯಾರು?- ಪಟೇಲ್ ಸಮುದಾಯಕ್ಕೆ ಮಣೆ ಹಾಕುವ ಚಿಂತನೆ

  • ಪೆನ್‍ಗಾಗಿ ಗೆಳತಿಯನ್ನೇ ಕಬ್ಬಿಣದ ರಾಡ್‍ನಿಂದ ಹೊಡೆದು ಕೊಂದ ಬಾಲಕಿ

    ಪೆನ್‍ಗಾಗಿ ಗೆಳತಿಯನ್ನೇ ಕಬ್ಬಿಣದ ರಾಡ್‍ನಿಂದ ಹೊಡೆದು ಕೊಂದ ಬಾಲಕಿ

    ಜೈಪುರ: ಪೆನ್ ವಾಪಸ್ ಕೊಡು ಎಂದು ಮನೆಗೆ ಬಂದ ಗೆಳತಿಯನ್ನೇ 10 ವರ್ಷದ ಬಾಲಕಿಯೊಬ್ಬಳು ಕಬ್ಬಿಣದ ರಾಡ್‍ನಿಂದ ಹೊಡೆದು ಕೊಲೆಗೈದ ಘಟನೆ ರಾಜಸ್ಥಾನದಲ್ಲಿ ನಡೆದಿರುವ ಬಗ್ಗೆ ಬೆಳಕಿಗೆ ಬಂದಿದೆ.

    ಶನಿವಾರ ಜೈಪುರದಲ್ಲಿ 12 ವರ್ಷದ ಬಾಲಕಿ ತನ್ನ ಕ್ಲಾಸ್‍ಮೇಟ್ ಮನೆಗೆ ಹೋಗಿದ್ದಳು. ಈ ವೇಳೆ ಬಾಲಕಿ ಮನೆಯಲ್ಲಿ ಆಕೆಯ ಪೋಷಕರು ಇರಲಿಲ್ಲ. ಆಗ ಶಾಲೆಯಲ್ಲಿ ತನ್ನ ಬಳಿ ಕಸಿದುಕೊಂಡಿದ್ದ ಪೆನ್ನನ್ನು ವಾಪಸ್ ಕೊಡು ಎಂದು ಸಂತ್ರಸ್ತೆ ಕೇಳಿದ್ದಳು. ಈ ವಿಚಾರಕ್ಕೆ ಇಬ್ಬರ ಮಧ್ಯೆ ಗಲಾಟೆ ನಡೆದಿದೆ. ಇದರಿಂದ ಸಿಟ್ಟಿಗೆದ್ದ ಬಾಲಕಿ ಕಬ್ಬಿಣದ ರಾಡ್‍ನಿಂದ ಗೆಳತಿ ಮೇಲೆ ಮಾರಣಾಂತಿಕವಾಗಿ ಹಲ್ಲೆ ಮಾಡಿದ್ದಳು. ಪರಿಣಾಮ ಸಂತ್ರಸ್ತೆ ಪಕ್ಕೆಲುಬು, ಹೊಟ್ಟೆ ಹಾಗೂ ತಲೆಗೆ ಗಂಭೀರ ಗಾಯವಾಗಿ ಆಕೆ ಸ್ಥಳದಲ್ಲೇ ಸಾವನ್ನಪ್ಪಿದ್ದಳು.

    ಮನೆಗೆ ಬಂದ ತಾಯಿಗೆ ನಡೆದ ಘಟನೆ ಬಗ್ಗೆ ಬಾಲಕಿ ವಿವರಿಸಿದಳು. ಆಗ ಬೇರೆ ದಾರಿ ತೋಚದೆ ಮಗಳನ್ನು ಕಾಪಾಡಲು ಸಂತ್ರಸ್ತೆ ಮೃತದೇಹಕ್ಕೆ ಕಲ್ಲನ್ನು ಕಟ್ಟಿ ತಾಯಿ ಕೊಳವೊಂದರಲ್ಲಿ ಎಸೆದು ಬಂದಿದ್ದಳು. ಬಳಿಕ ಪತಿ ಮನೆಗೆ ಬಂದ ಮೇಲೆ ಮಗಳ ಕೃತ್ಯದ ಬಗ್ಗೆ ತಾಯಿ ತಿಳಿಸಿದಳು. ಆಗ ತಂದೆ ಕೊಳದಲ್ಲಿದ್ದ ಮೃತದೇಹವನ್ನು ಹೊರತೆಗೆದು ಅದನ್ನು ನಿರ್ಜನ ಪ್ರದೇಶದಲ್ಲಿ ಎಸೆದು ಬಂದು ಸಾಕ್ಷ್ಯಗಳನ್ನು ನಾಶ ಮಾಡಿದ್ದನು.

    ಇತ್ತ ಸಂಜೆಯಾದರೂ ಮಗಳು ಮನೆಗೆ ಬರಲಿಲ್ಲ ಎಂದು ಸಂತ್ರಸ್ತೆ ಪೋಷಕರು ಹುಡುಕಾಟ ನಡೆಸಿದರು. ಬಳಿಕ ಮಗಳು ನಾಪತ್ತೆಯಾಗಿದ್ದಾಳೆ ಎಂದು ಹೆತ್ತವರು ಪೊಲೀಸರಿಗೆ ದೂರು ಕೊಟ್ಟಿದ್ದರು. ಈ ಬಗ್ಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಹುಡುಕಾಟ ನಡೆಸಿದಾಗ ಗುರುವಾರ ಸಂತ್ರಸ್ತ ಬಾಲಕಿ ಮೃತದೇಹ ನಿರ್ಜನ ಪ್ರದೇಶದಲ್ಲಿ ಪತ್ತೆಯಾಗಿದೆ.

    ಈ ಸಂಬಂಧ ತನಿಖೆ ನಡೆಸಿದಾಗ ಸಂತ್ರಸ್ತೆಯನ್ನು ಕೊಲೆ ಮಾಡಿರುವ ವಿಚಾರ ತಿಳಿದುಬಂದಿದ್ದು, ಆಕೆಯ ಕ್ಲಾಸ್‍ಮೇಟ್ ಬಾಲಕಿಯೇ ಕೊಲೆಗೈದಿರುವುದು ಬೆಳಕಿಗೆ ಬಂದಿದೆ. ಅಲ್ಲದೆ ಆರೋಪಿ ಬಾಲಕಿ ಹಾಗೂ ಕೃತ್ಯದ ಸಾಕ್ಷ್ಯ ನಾಶ ಮಾಡಿದ್ದಕ್ಕೆ ಆಕೆಯ ಹೆತ್ತವರನ್ನು ಪೊಲೀಸರು ಬಂಧಿಸಿದ್ದು, ತನಿಖೆ ಮುಂದುವರಿಸಿದ್ದಾರೆ.

  • ಸಿಎಂ ಬಳಿಯಿದೆ ಆತಂಕ ನಿವಾರಿಸುವ ಮಂತ್ರದಂಡದ ಪೆನ್

    ಸಿಎಂ ಬಳಿಯಿದೆ ಆತಂಕ ನಿವಾರಿಸುವ ಮಂತ್ರದಂಡದ ಪೆನ್

    ಬೆಂಗಳೂರು: ಶತಾಯ ಗತಾಯ ಸರ್ಕಾರ ರಚಿಸಲೇಬೇಕು ಸಿಎಂ ಆಗಲೇಬೇಕು ಎಂದು ಹಠಕ್ಕೆ ಬಿದ್ದು ಸರ್ಕಾರ ರಚಿಸಿದ ಬಿ.ಎಸ್ ಯಡಿಯೂರಪ್ಪನವರನ್ನು ಒಂದು ಶಕ್ತಿ ಕಾಯುತ್ತಿದೆಯಂತೆ. ಹಾಗಿದ್ರೆ ಆ ಒಂದು ಶಕ್ತಿ ಅವರ ಬಳಿ ಇರುವವರೆಗೂ ಬಿಎಸ್‍ವೈ ಅವರನ್ನ ಅಧಿಕಾರದಿಂದ ಇಳಿಸಲು ಸಾಧ್ಯವೇ ಇಲ್ವ ಅನ್ನೋ ಪ್ರಶ್ನೆಯೊಂದು ಎದ್ದಿದೆ.

    ಹೌದು. ಸಿಎಂ ಯಡಿಯೂರಪ್ಪನವರ ಮಹಾನ್ ಶಕ್ತಿಯ ರಹಸ್ಯ ಅಡಗಿರುವುದು ಒಂದು ಪೆನ್ನಿನಲ್ಲಿ. ಸಿಎಂ ಅವರು ಸದಾ ತಮ್ಮ ಜೇಬಿನಲ್ಲಿ ಕಪ್ಪು ಬಣ್ಣದ ಪೆನ್ನೊಂದನ್ನು ಇಟ್ಟುಕೊಳ್ಳುತ್ತಿದ್ದಾರೆ. ಆ ಪೆನ್ನನ್ನು ಕೊಟ್ಟಿದ್ದು ಗೌರಿಗದ್ದೆಯ ದತ್ತಾತ್ರೆಯ ಆಶ್ರಮದ ವಿನಯ್ ಗುರೂಜಿ. ಯಡಿಯೂರಪ್ಪ ಜುಲೈ 26 ರಂದೆ ಪ್ರಮಾಣ ವಚನ ಸ್ವೀಕರಿಸುತ್ತಾರೆ ಎಂದು ಮೊದಲೇ ಭವಿಷ್ಯ ನುಡಿದಿದ್ದ ಗುರೂಜಿ, ಪೆನ್ ಒಂದನ್ನ ಯಡಿಯೂರಪ್ಪನವರಿಗೆ ಗಿಫ್ಟ್ ಆಗಿ ಕಳುಹಿಸಿಕೊಟ್ಟಿದ್ದರು. ಅದೇ ಪೆನ್ನನ್ನು ಪ್ರಮಾಣ ವಚನ ಸ್ವೀಕರಿಸುವಾಗ ಬಳಸಿ ಎಂದು ಸಲಹೆ ಕೂಡ ನೀಡಿದ್ದರು ಎಂಬ ಮಾಹಿತಿ ಪಬ್ಲಿಕ್ ಟಿವಿಗೆ ಲಭ್ಯವಾಗಿದೆ.

    ರಾಜಭವನದಲ್ಲಿ ಪ್ರಮಾಣವಚನ ಸ್ವೀಕರಿಸಿದ ಸಿಎಂ ಯಡಿಯೂರಪ್ಪ ರಾಜಭವನದ ಅಧಿಕಾರಿ ಕೊಟ್ಟ ಪೆನ್ನನ್ನು ನಿರಾಕರಿಸಿ ಗುರೂಜಿ ಕೊಟ್ಟ ಪೆನ್ನಿನಲ್ಲೇ ಸಹಿ ಮಾಡಿದ್ದರು. ಈಗಲೂ ಪ್ರತಿ ಫೈಲಿಗೆ ಸಹಿ ಹಾಕುವಾಗಲು ಗುರೂಜಿ ಕೊಟ್ಟ ಪೆನ್ನನ್ನೇ ಬಳಸುತ್ತಿದ್ದಾರೆ. ಅಲ್ಲದೆ ಸಿಎಂ ಯಡಿಯೂರಪ್ಪ ಸದಾ ಆ ಪೆನ್ನನ್ನು ತಮ್ಮ ಜೇಬಿನಲ್ಲಿಯೇ ಇಟ್ಟುಕೊಂಡು ಓಡಾಡುತ್ತಿದ್ದಾರೆ. ಸರ್ಕಾರ ರಚಿಸುವಾಗಲೂ ಸಾಕಷ್ಟು ಅಗ್ನಿ ಪರೀಕ್ಷೆ ಎದುರಿಸಿದ ಸಿಎಂ ಬಿಎಸ್‍ವೈ, ಸಂಪುಟ ರಚನೆಯ ವೇಳೆಯೂ ಸಾಕಷ್ಟು ಕಸರತ್ತು ನಡೆಸಿ ಅಡ್ಡಿ ಆತಂಕಗಳನ್ನು ಎದುರಿಸಿದ್ದರು.

    ಪ್ರಮಾಣ ವಚನ ಸ್ವೀಕರಿಸಿ ಮೊದಲ ಸಹಿ ಹಾಕುವಲ್ಲಿಂದ ಸದಾ ಆ ಪೆನ್ನನ್ನು ತಮ್ಮ ಜೊತೆಗೆ ಇಟ್ಟುಕೊಳ್ಳಿ ಶುಭವಾಗುತ್ತದೆ ಎಂದು ಗುರೂಜಿ ಹೇಳಿದ್ದಾರಂತೆ. ಆ ಪೆನ್ನು ತಮಗೆ ಎದುರಾಗುವ ಎಲ್ಲಾ ಅಡ್ಡಿ ಆತಂಕವನ್ನ ನಿವಾರಿಸುವ ಮಂತ್ರ ದಂಡ ಎಂಬುದು ಸಿಎಂ ಯಡಿಯೂರಪ್ಪನವರ ನಂಬಿಕೆಯಾಗಿದೆ. ಆದ್ದರಿಂದ ಎಲ್ಲಾ ಕೆಲಸಕ್ಕೂ ಅದೇ ಪೆನ್ನು ಬಳಸುವ ಮೂಲಕ ಸಿಎಂ ಯಡಿಯೂರಪ್ಪ ತಮ್ಮ ಅದೃಷ್ಟದ ಮಂತ್ರ ದಂಡ ಆ ಪೆನ್ನು ಅನ್ನೋ ನಂಬಿಕೆ ಇಟ್ಟುಕೊಂಡು ಸದಾ ತಮ್ಮ ಬಳಿಯೇ ಇಟ್ಟುಕೊಳ್ಳತೊಡಗಿದ್ದಾರೆ ಎನ್ನಲಾಗಿದೆ.

  • ಪೆನ್ನಿನ ಕ್ಯಾಪ್ ನುಂಗಿದ್ದ ಬಾಲಕ ಸಾವು- ವೈದ್ಯರ ನಿರ್ಲಕ್ಷ್ಯ ಎಂದು ಹೇಳಿ ಪೋಷಕರಿಂದ ಪ್ರತಿಭಟನೆ

    ಪೆನ್ನಿನ ಕ್ಯಾಪ್ ನುಂಗಿದ್ದ ಬಾಲಕ ಸಾವು- ವೈದ್ಯರ ನಿರ್ಲಕ್ಷ್ಯ ಎಂದು ಹೇಳಿ ಪೋಷಕರಿಂದ ಪ್ರತಿಭಟನೆ

    ಬಾಗಲಕೋಟೆ: ಪೆನ್ನಿನ ಕ್ಯಾಪ್ ನುಂಗಿದ್ದ ಬಾಲಕ ವೈದ್ಯರ ನಿರ್ಲಕ್ಷ್ಯದಿಂದ ಸಾವನ್ನಪ್ಪಿದ್ದಾನೆ ಎಂದು ಆರೋಪಿಸಿ ಶವವನ್ನು ಸಾಗಿಸದೇ ರಾತ್ರಿಯಿಡೀ ಪ್ರತಿಭಟನೆ ಮಾಡಿದ ಘಟನೆ ಬಾಗಲಕೋಟೆ ನಗರದ ಕುಮಾರೇಶ್ವರದಲ್ಲಿ ನಡೆದಿದೆ.

    ಮುಧೋಳ ತಾಲೂಕಿನ ಮಾಚಕನೂರು ಗ್ರಾಮದ 9 ವರ್ಷದ ಬಾಲಕ ಮುತ್ತಪ್ಪ ಬಿರೋಜಿ ನಾಲ್ಕು ದಿನದ ಹಿಂದೆ ಪೆನ್ನಿನ ಕ್ಯಾಪ್ ನುಂಗಿದ್ದ. ಬಾಲಕನನ್ನು ವಿವಿಧ ಆಸ್ಪತ್ರೆಗೆ ತೋರಿಸಿ ಮಂಗಳವಾರ ಸಂಜೆ 5 ಗಂಟೆಗೆ ಕುಮಾರೇಶ್ವರ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈ ವೇಳೆ ಆಪರೇಷನ್ ಮಾಡುವ ವೇಳೆ ಬಾಲಕ ಮೃತಪಟ್ಟಿದ್ದಾನೆ. ಬಾಲಕನ ಸಾವಿಗೆ ವೈದ್ಯರ ನಿರ್ಲಕ್ಯವೇ ಕಾರಣ ಎಂದು ಆರೋಪಿಸುತ್ತಿರುವ ಕುಟುಂಬಸ್ಥರು, ಬಾಲಕನ ಮೃತದೇಹವನ್ನು ಮುಂದಿಟ್ಟು ಆಸ್ಪತ್ರೆಯಲ್ಲಿ ಪ್ರತಿಭಟನೆ ಮಾಡಿದ್ದಾರೆ.

    ವೈದ್ಯ ಸಿಎಸ್ ಹಿರೆಮಠ್ ಆಪರೇಷನ್ ಮಾಡುವ ವೇಳೆ ಬಾಲಕ ಸಾವನ್ನಪ್ಪಿದ್ದು ತಪ್ಪಿತಸ್ಥ ವೈದ್ಯನನ್ನು ತಕ್ಷಣವೇ ಕೆಲಸದಿಂದ ತೆಗೆದು ಹಾಕಬೇಕು, ಆತನಿಗೆ ಶಿಕ್ಷೆಯಾಗಬೇಕೆಂದು ಬಾಲಕನ ಪೋಷಕರು ಆಗ್ರಹಿಸಿದ್ದಾರೆ.

    ಸ್ಥಳಕ್ಕೆ ಬಾಗಲಕೋಟೆ ನಗರ ಠಾಣೆ ಪೊಲೀಸರು ಬಂದು ಸಮಾಧಾನ ಪಡಿಸಲು ಮುಂದಾದರೂ ಫಲ ನೀಡಲಿಲ್ಲ. ಇತ್ತ ಇದ್ದ ಒಬ್ಬನೇ ಒಬ್ಬ ಮಗನನ್ನು ಕಳೆದುಕೊಂಡ ತಾಯಿ ಆಕ್ರಂದನ ಮುಗಿಲುಮುಟ್ಟಿತ್ತು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಅಪಘಾತದ ವೇಳೆ ಬಿದ್ದ ರಭಸಕ್ಕೆ ಗಲ್ಲಕ್ಕೆ ಚುಚ್ಚಿಕೊಳ್ತು ಜೇಬಲ್ಲಿದ್ದ ಪೆನ್ನು!

    ಅಪಘಾತದ ವೇಳೆ ಬಿದ್ದ ರಭಸಕ್ಕೆ ಗಲ್ಲಕ್ಕೆ ಚುಚ್ಚಿಕೊಳ್ತು ಜೇಬಲ್ಲಿದ್ದ ಪೆನ್ನು!

    ಕಲಬುರಗಿ: ಜೇಬಿನಲ್ಲಿರುವ ಪೆನ್ನು ಅಪಘಾತದ ನಂತರ ಗಲ್ಲಕ್ಕೆ ಚುಚ್ಚಿದ ವಿಚಿತ್ರ ಘಟನೆ ಕಲಬುರಗಿ ಮಹಾನಗರ ಪಾಲಿಕೆಯ ಮುಂಭಾಗದಲ್ಲಿ ನಡೆದಿದೆ.

    ಪೇದೆಯಾದ ಗುಲಾಬ್ಸಾಬ್ ಎಂಬ ಕರ್ತವ್ಯ ನಿರ್ವಹಿಸಿ ಬೈಕಿನಲ್ಲಿ ಮನೆಗೆ ತೆರಳುತ್ತಿದ್ದರು. ಈ ವೇಳೆ ಪಾಲಿಕೆ ಮುಂಭಾಗದಲ್ಲಿ ಬರುತ್ತಿದ್ದಂತೆ ಬೈಕ್ ಸ್ಕೀಡ್ ಆಗಿ ಬಿದ್ದಿದೆ. ಅಷ್ಟರಲ್ಲೇ ಅವರ ಸಹಾಯಕ್ಕೆ ಜನ ಧಾವಿಸಿದ್ದಾರೆ.

    ವಿಚಿತ್ರ ಎಂಬತೆ ಜೇಬಿನಲ್ಲಿನ ಪೆನ್ನು ಗಲ್ಲದ ಅರ್ಧದಷ್ಟು ಒಳಗೆ ಹೋಗಿರುವುದನ್ನು ಕಂಡು ಜನ ಬೆಚ್ಚಿ ಬಿದ್ದಿದ್ದಾರೆ. ಕೂಡಲೇ ಸ್ಥಳಕಾಗಮಿಸಿದ ಬೈಕ್ ಅಂಬುಲೆನ್ಸ್ ನ ಸಿಬ್ಬಂದಿ ಪ್ರಥಮ ಹಂತದ ಚಿಕಿತ್ಸೆ ನೀಡಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಕಲಬುರಗಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.