Tag: Penalties

  • ಕಾರ್ ಕಿಟಕಿಯ ಮೇಲೆ ಕುಳಿತು ಸ್ಟಂಟ್ – ಪೊಲೀಸರು ಕೊಟ್ರು 20-20ಯ ತ್ರಿಪಲ್ ಶಾಕ್!

    ಕಾರ್ ಕಿಟಕಿಯ ಮೇಲೆ ಕುಳಿತು ಸ್ಟಂಟ್ – ಪೊಲೀಸರು ಕೊಟ್ರು 20-20ಯ ತ್ರಿಪಲ್ ಶಾಕ್!

    – ಮಳೆಯ ನಡುವೆ ವ್ಯಕ್ತಿಯ ಹುಚ್ಚಾಟ
    – ಸೋಶಿಯಲ್ ಮೀಡಿಯಾದಲ್ಲಿ ವೀಡಿಯೋ ವೈರಲ್

    ಲಕ್ನೋ: ಮಳೆಯ ನಡುವೆ ಕಾರ್ ಕಿಟಕಿಯ ಮೇಲೆ ಕುಳಿತು ಸ್ಟಂಟ್ ಮಾಡಿದ್ದ ವ್ಯಕ್ತಿಗೆ ಗಾಜಿಯಾಬಾದ್ ಪೊಲೀಸರು 20-20 ಶಾಕ್ ನೀಡಿದ್ದಾರೆ. ಉತ್ತರ ಪ್ರದೇಶದ ವಿಜಯ ನಗರದ ಪ್ರತಾಪ್ ವಿಹಾರದಲ್ಲಿ ಈ ಘಟನೆ ನಡೆದಿದೆ.

    ಭಾನುವಾರ ಸೋಶಿಯಲ್ ಮೀಡಿಯಾದಲ್ಲಿ ವೀಡಿಯೋ ವೈರಲ್ ಆಗಿತ್ತು. ವ್ಯಕ್ತಿಯೋರ್ವ ಮದ್ಯಪಾನ ಮಾಡುತ್ತಾ ಕಾರ್ ಹಿಂಭಾಗದ ಕಿಟಕಿಯ ಮೇಲೆ ಕುಳಿತು ಸ್ಟಂಟ್ ಮಾಡುತ್ತಿದ್ದನು. ಇದರ ಜೊತೆ ಈತನ ಹಿಂದೆ ಮತ್ತು ಮುಂದೆ ಇರೋ ಕಾರ್ ಗಳಲ್ಲಿ ಸೈರನ್ ಹಾಕಿ ಟ್ರಾಫಿಕ್ ರೂಲ್ಸ್ ಬ್ರೇಕ್ ಮಾಡಲಾಗಿತ್ತು. ವೀಡಿಯೋ ನೋಡಿದ ಪೊಲೀಸರು ಕಾರ್ ನಂಬರ್ ಪ್ಲೇಟ್ ಸಹಾಯದಿಂದ ಮೂವರು ಕಾರ್ ಮಾಲೀಕರನ್ನು ಪತ್ತೆ ಮಾಡಿ ತಲಾ 20 ಸಾವಿರ ರೂ.ನಂತೆ ದಂಡ ಹಾಕಿದ್ದಾರೆ.

    ಭಾನುವಾರ ವೈರಲ್ ಆದ ವೀಡಿಯೋದಲ್ಲಿ ಕಾರ್ ನಂಬರ್ ಕಾಣಿಸುತ್ತಿತ್ತು. ಅವುಗಳ ಸಹಾಯದಿಂದ ಕಾರ್ ಮಾಲೀಕರನ್ನ ಪತ್ತೆ ಮಾಡಿ ಠಾಣೆಗೆ ಕರೆಸಲಾಯ್ತು. ಸೂರಜ್‍ಪಾಲ್, ರಾಹುಲ್ ನಾಗರ್ ಮತ್ತು ಶೇಖರ್ ಕುಮಾರ್ ಕಾರ್ ಮಾಲೀಕರಿಗೆ ಪ್ರತ್ಯೇಕವಾಗಿ 20 ಸಾವಿರ ರೂ.ನಂತೆ ದಂಡ ಹಾಕಿದ್ದೇವೆ ಎಂದು ಪೊಲೀಸ್ ಅಧೀಕ್ಷಕ ರಾಮಾನಂದ್ ಕುಶುವಾಹಾ ಹೇಳಿದ್ದಾರೆ. ಇದನ್ನೂ ಓದಿ: ಲವ್ ಯು ರಚ್ಚು ಶೂಟಿಂಗ್ ದುರಂತ – ನಿರ್ದೇಶಕ ಸೇರಿ ನಾಲ್ವರು ಪೊಲೀಸ್ ವಶಕ್ಕೆ

    ಟ್ರಾಫಿಕ್ ನಿಯಮ ಉಲ್ಲಂಘನೆ, ಸಾರ್ವಜನಿಕರಿಗೆ ಕಿರಿಕಿರಿ, ಮದ್ಯಪಾನ, ಶಬ್ದ ಮಾಲಿನ್ಯ, ವಿಮೆ ಇಲ್ಲದೇ ವಾಹನ ಚಾಲನೆ ಸೇರಿದಂತೆ ಒಟ್ಟು 20 ಸಾವಿರದಂತೆ ದಂಡ ಹಾಕಿದ್ದಾರೆ. ಮುಂದೆ ಯಾರಾದ್ರೂ ಈ ರೀತಿ ಹುಚ್ಚಾಟ ಪ್ರದರ್ಶಿಸಿದ್ರೆ ದಂಡ ಹಾಕಲಾಗುವುದು ಎಂದು ಪೊಲೀಸರು ಎಚ್ಚರಿಸಿದ್ದಾರೆ. ಇದನ್ನೂ ಓದಿ: ರಾಜ್ಯದಲ್ಲಿಂದು 1,186 ಹೊಸ ಕೊರೊನಾ ಪ್ರಕರಣ – ಪಾಸಿಟಿವಿಟಿ ರೇಟ್ ಶೇ.0.89

  • ಮಾಸ್ಕ್ ಹಾಕು, ಇಲ್ಲಾ ಠಾಣೆಗೆ ನಡಿ- ಪುಂಡರಿಗೆ ಲೇಡಿ ಅಧಿಕಾರಿ ಫುಲ್ ಕ್ಲಾಸ್

    ಮಾಸ್ಕ್ ಹಾಕು, ಇಲ್ಲಾ ಠಾಣೆಗೆ ನಡಿ- ಪುಂಡರಿಗೆ ಲೇಡಿ ಅಧಿಕಾರಿ ಫುಲ್ ಕ್ಲಾಸ್

    ಯಾದಗಿರಿ: ರಾಜ್ಯಾದ್ಯಂತ ಹಾಗೂ ದೇಶಾದ್ಯಂತ ಕೊರೊನಾ ಸೋಂಕಿನ ಪ್ರಕರಣಗಳು ಹೆಚ್ಚುತ್ತಿವೆ. ಹೀಗಾಗಿ ಸರ್ಕಾರ ಕಟ್ಟುನಿಟ್ಟಿನ ನಿಯಮ ರೂಪಿಸಿ ಭಾರೀ ಪ್ರಮಾಣದ ದಂಡ ವಿಧಿಸುತ್ತಿದೆ. ಆದರೂ ಜ ಕ್ಯಾರೆ ಎನ್ನದೆ ಮಾಸ್ಕ್ ಧರಿಸದೆ ತಿರುಗುತ್ತಿದ್ದಾರೆ. ಇಂತಹವರಿಗೆ ಅಧಿಕಾರಿಗಳು ದಂಡ ಹಾಕುವ ಮೂಲಕ ಬುದ್ಧಿ ಕಲಿಸುತ್ತಿದ್ದಾರೆ. ಅದೇ ರೀತಿ ನಗರದಲ್ಲಿ ಸಹ ಮಾಸ್ಕ್ ಧರಿಸದ ಪುಂಡರಿಗೆ ಲೇಡಿ ಅಧಿಕಾರಿ ಫುಲ್ ಕ್ಲಾಸ್ ತೆಗೆದುಕೊಂಡಿದ್ದಾರೆ.

    ಜಿಲ್ಲೆಯಲ್ಲಿ ಸಹ ಕೊರೊನಾ ಪ್ರಕರಣಗಳು ಹೆಚ್ಚುತ್ತಿವೆ. ಆದರೆ ಜನ ಮಾತ್ರ ನಿಯಮ ಪಾಲಿಸುತ್ತಿಲ್ಲ. ಹೀಗಾಗಿ ಅಧಿಕಾರಿಗಳು ರಸ್ತೆಗಿಳಿದು ದಂಡ ಹಾಕಲು ಆರಂಭಿಸಿದ್ದಾರೆ. ಯಾದಗಿರಿಯಲ್ಲಿ ಸಹ ನಗರಸಭೆ ಅಧಿಕಾರಿಗಳು ಮಾಸ್ಕ್ ಧರಿಸದ ವಾಹನ ಸವಾರರು, ವ್ಯಾಪಾರಸ್ಥರು ಹಾಗೂ ಸಾರ್ವಜನಿಕರಿಗೆ ದಂಡ ವಿಧಿಸುತ್ತಿದ್ದಾರೆ. ಈ ಮೂಲಕ ಮಾಸ್ಕ್ ಧರಿಸುವಂತೆ ಜಾಗೃತಿ ಮೂಡಿಸುತ್ತಿದ್ದಾರೆ.

    ಯಾದಗಿರಿ ನಗರಸಭೆಯ ಕಿರಿಯ ಆರೋಗ್ಯ ನಿರಿಕ್ಷಕಿ ಶರಣಮ್ಮ ಅವರ ತಂಡದಿಂದ ನಗರದಲ್ಲಿ ಮಾಸ್ಕ್ ಧರಿಸದವರಿಗೆ ದಂಡ ಹಾಕಲಾಗುತ್ತಿದೆ. ಇಂದು ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸಿದ ಪುಂಡರಿಗೆ ಲೇಡಿ ಅಧಿಕಾರಿ ಫುಲ್ ಕ್ಲಾಸ್ ತೆಗೆದುಕೊಂಡಿದ್ದಾರೆ. ಮಾಸ್ಕ್ ಧರಿಸುವಂತೆ ಯುವಕನಿಗೆ ತಿಳಿಸಿದರೆ, ಅಧಿಕಾರಿಗಳ ಮಾತಿಗೆ ಉದ್ಧಟತನ ತೋರಿದ್ದ. ಈ ವೇಳೆ ಫುಲ್ ಅವಾಜ್ ಹಾಕಿದ ಶರಣಮ್ಮ, ಮಾಸ್ಕ್ ಧರಿಸು ಇಲ್ಲವೇ ಪೊಲೀಸ್ ಠಾಣೆಗೆ ನಡೆ ಎಂದು ಎಚ್ಚರಿಸಿದ್ದಾರೆ.

    ಮಾಸ್ಕ್ ಧರಿಸದೇ ವ್ಯಾಪಾರ ಮಾಡುತ್ತಿದ್ದ ಬೇಕರಿ ಮಾಲೀಕನಿಗೆ ಸಹ ಇದೇ ರೀತಿ ಕ್ಲಾಸ್ ತೆಗೆದುಕೊಂಡಿದ್ದಾರೆ. ಬೇಕರಿ ಮಾಲೀಕ ಅಧಿಕಾರಿಗಳ ಮಾತು ಕೇಳದ ಹಿನ್ನಲೆ ಸಿಬ್ಬಂದಿ ಬೇಕರಿ ಉತ್ಪನ್ನಗಳನ್ನು ಎತ್ತಿಕೊಂಡು ಹೋದ ಪ್ರಸಂಗ ಸಹ ನಡೆಯಿತು. ಮಾತ್ರವಲ್ಲ ಮಾಸ್ಕ್ ಧರಿಸದ ವಾಹನ ಸವಾರರಿಗೆ ಪೊಲೀಸರು ಸಹ ಶಾಕ್ ನೀಡುತ್ತಿದ್ದಾರೆ. ಮಾಸ್ಕ್ ಧರಿಸದೆ ನಗರದಲ್ಲಿ ಸಂಚಾರ ಮಾಡುತ್ತಿದ್ದವ ಬೈಕ್ ವಸಾರರಗಿಗೆ ಎಚ್ಚರಿಕೆ ನೀಡುತ್ತಿದ್ದಾರೆ.

  • ಚಿಕ್ಕಬಳ್ಳಾಪುರದಲ್ಲಿ ಮನೆಯಿಂದ ಹೊರಬಂದರೆ ಬೀಳತ್ತೆ ದಂಡ

    ಚಿಕ್ಕಬಳ್ಳಾಪುರದಲ್ಲಿ ಮನೆಯಿಂದ ಹೊರಬಂದರೆ ಬೀಳತ್ತೆ ದಂಡ

    ಚಿಕ್ಕಬಳ್ಳಾಪುರ: ನಗರದಲ್ಲಿ ಲಾಕ್‍ಡೌನ್ ಉಲ್ಲಂಘಿಸಿ ವಿನಾಕಾರಣ ಅಡ್ಡಾಡುವವರಿಗೆ ದಂಡ ವಿಧಿಸಲಾಗುತ್ತಿದೆ. ಇಷ್ಟು ದಿನ ಬಾಯಿ ಮಾತಿನಲ್ಲಿ ಹೇಳಾಯ್ತು, ಲಾಠಿ ರುಚಿಯೂ ತೋರಿಸಾಯ್ತು ಆದರೂ ಜನ ಅನಾವಶ್ಯಕವಾಗಿ ಓಡಾಡುತ್ತಿರುವ ಕಾರಣ ಈ ಕ್ರಮವನ್ನು ಜಾರಿಗೆ ತರಲಾಗಿದೆ.

    ಚಿಕ್ಕಬಳ್ಳಾಪುರ ನಗರದಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಹೆಚ್ಚಳವಾದ ಹಿನ್ನೆಲೆ ನಗರಸಭೆ ಅಧಿಕಾರಿಗಳು ನಗರದಲ್ಲಿ ದಂಡ ವಿಧಿಸುವ ಮೂಲಕ ಜನ ಹೊರಬಾರದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ತಿದ್ದಾರೆ. ಶುಕ್ರವಾರ ಹಾಗೂ ಇಂದು ಸೇರಿ ಒಟ್ಟು ಎರಡು ಕೊರೊನಾ ಪಾಸಿಟಿವ್ ಪ್ರಕರಣಗಳು ಚಿಕ್ಕಬಳ್ಳಾಪುರ ನಗರದಲ್ಲಿ ವರದಿಯಾಗಿದೆ. ಈಗಾಗಲೇ ಚಿಕ್ಕಬಳ್ಳಾಪುರ ನಗರವನ್ನ ಸಂಪೂರ್ಣ ಸೀಲ್‍ಡೌನ್ ಮಾಡಲಾಗಿದೆ.

    ಆದರೆ ಲಾಕ್‍ಡೌನ್, ಸೀಲ್‍ಡೌನ್ ನಡುವೆಯೂ ಅನಾವಶ್ಯಕವಾಗಿ ರಸ್ತೆಗಿಳಿಯುವ ಸಾರ್ವಜನಿಕರಿಗೆ 100 ರೂಪಾಯಿ ದಂಡ ವಿಧಿಸಲಾಗುತ್ತಿದೆ. ಜನ ಸುಖಾಸುಮ್ಮನೆ ಅಡ್ಡಾಡಿದರೆ, ಮನೆಯಿಂದ ಹೊರಬಂದರೆ ಸಾಕು 100 ರೂಪಾಯಿ ದಂಡ ವಿಧಿಸಲಾಗುತ್ತಿದೆ. ನಗರಸಭೆ ಅಧಿಕಾರಿಗಳು ತಂಡ ಮಾಡಿಕೊಂಡು ನಗರದ ನಾನಾ ಕಡೆ ತೆರಳಿ, ಮನೆಯಿಂದ ಹೊರಬಂದು ಬೇಕಾಬಿಟ್ಟಿ ತಿರುಗುತ್ತಿರುವ ಮಂದಿಗೆ ದಂಡ ವಿಧಿಸೋ ಕೆಲಸ ಮಾಡ್ತಿದ್ದಾರೆ.

    ಸದ್ಯ ಜಿಲ್ಲೆಯಲ್ಲಿ 20 ಮಂದಿ ಕೊರೊನಾ ಸೋಂಕಿತರಲ್ಲಿ ಇಬ್ಬರು ಮೃತಪಟ್ಟಿದ್ದು, 14 ಮಂದಿ ಗುಣಮುಖರಾಗಿದ್ದಾರೆ. ಇನ್ನುಳಿದ 4 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದೂವರೆಗೂ ಜಿಲ್ಲೆಯಲ್ಲಿ ಸರಿಸುಮಾರು 2000 ಮಂದಿಗೆ ಸ್ವಾಬ್ ಟೆಸ್ಟ್ ಮಾಡಲಾಗಿದ್ದು, ಇನ್ನೂ 400 ಮಂದಿಯ ವರದಿಯ ನೀರಿಕ್ಷೆಯಲ್ಲಿದ್ದೇವೆ ಎಂದು ಡಿಸಿ ಆರ್.ಲತಾ ಹೇಳಿದ್ದಾರೆ.

  • ಹೆಲ್ಮೆಟ್ ಹಾಕದ ಎಎಸ್‍ಐ- ಫೈನ್ ಹಾಕಲು ಸೂಚಿಸಿದ ಎಸ್‍ಪಿ

    ಹೆಲ್ಮೆಟ್ ಹಾಕದ ಎಎಸ್‍ಐ- ಫೈನ್ ಹಾಕಲು ಸೂಚಿಸಿದ ಎಸ್‍ಪಿ

    ಹಾಸನ: ಸಂಚಾರಿ ನಿಯಮ ಮಾಲಿಸುವ ಕುರಿತು ಅರಿವು ಮೂಡಿಸಬೇಕಾದ ಪೊಲೀಸರೇ ಹೆಲ್ಮೆಟ್ ಹಾಕದಿದ್ದರೆ ಹೇಗೆ ಅಲ್ಲವೆ, ಹೀಗಾಗಿ ಹಾಸನ ಎಸ್‍ಪಿ ಶ್ರೀನಿವಾಸ್‍ಗೌಡ ಅವರು ಎಎಸ್‍ಐಗೆ ತಕ್ಕ ಪಾಠ ಕಲಿಸಿದ್ದು, ಹೆಲ್ಮೆಟ್ ಧರಿಸದ್ದಕ್ಕೆ ಅವರಿಗೂ ಫೈನ್ ಹಾಕುವಂತೆ ಸೂಚಿಸಿದ್ದಾರೆ.

    ಹಾಸನದ ಸಂತೆ ಪೇಟೆ ಸರ್ಕಲ್ ಬಳಿ ಅನವಶ್ಯಕವಾಗಿ ಓಡಾಡುತ್ತಿದ್ದ ವಾಹನಗಳನ್ನು ಎಸ್‍ಪಿ ಶ್ರೀನಿವಾಸಗೌಡ ತಪಾಸಣೆ ಮಾಡುತ್ತಿದ್ದರು. ಈ ವೇಳೆ ಎಎಸ್‍ಐ ಹೆಲ್ಮೆಟ್ ಇಲ್ಲದೆ ಸ್ಕೂಟರ್‍ನಲ್ಲಿ ಆಗಮಿಸುತ್ತಿದ್ದ ರು. ಇದನ್ನು ಗಮನಿಸಿದ ಎಸ್‍ಪಿ, ಹೆಲ್ಮೆಟ್ ಎಲ್ಲಿ ಎಂದು ಪ್ರಶ್ನಿಸಿದ್ದಾರೆ. ಹೆಲ್ಮೆಟ್ ಹಾಕದ್ದನ್ನು ಕಂಡು ಇವರಿಗೆ ದಂಡ ವಿಧಿಸಿ ಎಂದು ಪೊಲೀಸರಿಗೆ ಸೂಚಿಸಿದ್ದಾರೆ. ಈ ಮೂಲಕ ಪೊಲೀಸರು ಸಹ ಬೇಕಾಬಿಟ್ಟಿಯಾಗಿ ಓಡಾಡದೆ, ಸಂಚಾರಿ ನಿಯಮಗಳನ್ನು ಪಾಲಿಸಿ ಶಿಸ್ತು ಕಾಪಾಡಬೇಕು ಎಂದು ತಿಳಿಸಿದ್ದಾರೆ.

    ಮಂಗಳವಾರ ಈ ಘಟನೆ ನಡೆದಿದ್ದು, ನಮ್ಮ ಇಲಾಖೆಯವರು ಇತರರಿಗೆ ಮಾದರಿಯಾಗಬೇಕು. ಹೀಗಾಗಿ ಯಾರನ್ನೂ ಬಿಡುವುದಿಲ್ಲ. ಇವರಿಗೆ ಫೈನ್ ಹಾಕಿ ಎಂದು ಸೂಚಿಸಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಫುಲ್ ವೈರಲ್ ಆಗಿದೆ.

  • ಲಂಚ ಪಡೆದ ಪೇದೆಗೆ 10 ಸಾವಿರ ದಂಡ, 2 ವರ್ಷ ಕಠಿಣ ಜೈಲು ಶಿಕ್ಷೆ – ಕೋರ್ಟ್ ಆದೇಶ

    ಲಂಚ ಪಡೆದ ಪೇದೆಗೆ 10 ಸಾವಿರ ದಂಡ, 2 ವರ್ಷ ಕಠಿಣ ಜೈಲು ಶಿಕ್ಷೆ – ಕೋರ್ಟ್ ಆದೇಶ

    ಚಿಕ್ಕಮಗಳೂರು: ಪಾಸ್‍ಪೋರ್ಟ್ ಪರಿಶೀಲನೆಗೆ ಲಂಚ ಪಡೆದ ಪೇದೆಗೆ ಕಠಿಣ ಜೈಲು ಶಿಕ್ಷೆ ಮತ್ತು ದಂಡ ವಿಧಿಸಿ ನಗರದ ಪ್ರಧಾನ ಜಿಲ್ಲಾ ಹಾಗೂ ಸೆಷನ್ಸ್ ನ್ಯಾಯಾಲಯ ಹಾಗೂ ವಿಶೇಷ ನ್ಯಾಯಾಲಯ ಈ ತೀರ್ಪನ್ನ ಪ್ರಕಟಿಸಿದೆ.

    ಜಿಲ್ಲೆಯ ಮೂಡಿಗೆರೆ ತಾಲೂಕಿನ ಹರಮಕ್ಕಿ ಗ್ರಾಮದ ಅಜಿತ್ ಎಂಬವರು ಪಾಸ್‍ಪೋರ್ಟ್‍ಗಾಗಿ ಅರ್ಜಿ ಸಲ್ಲಿಸಿದ್ದರು. ಈ ಹಿನ್ನೆಲೆ ಪರಿಶೀಲನೆಗಾಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಛೇರಿಯಿಂದ ಗೋಣಿಬೀಡು ಠಾಣೆಗೆ ಕಳುಹಿಸಲಾಗಿತ್ತು. ಗೋಣಿಬೀಡು ಪೊಲೀಸ್ ಠಾಣಾ ಪೇದೆ ಗಿರೀಶ್ ಕುಮಾರ್ ವರದಿನೀಡಲು 3 ಸಾವಿರ ಲಂಚ ಕೊಡುವಂತೆ ಅರ್ಜಿದಾರ ಅಜಿತ್‍ಗೆ ಆಗ್ರಹಿಸಿ, ಕೊನೆಗೆ 2,500 ರೂ. ಹಣವನ್ನು ನೀಡಿ ಎಂದಿದ್ದರು.

    ಪ್ರಕರಣ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದ ಲೋಕಾಯುಕ್ತ ಪೊಲೀಸರು, ಮೇ 28 2013ರಂದು ಗೋಣಿಬೀಡಿನ ರಾಮೇಶ್ವರ ಬೇಕರಿ ಬಳಿ ಪೇದೆ ಗಿರೀಶ್ ಲಂಚ ಪಡೆಯುತ್ತಿದ್ದಾಗ ಸಿಕ್ಕಿಬಿದ್ದಿದ್ದರು. ಇದೀಗ ಆರೋಪ ಸಾಬೀತಾದ ಹಿನ್ನೆಲೆ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಹಾಗೂ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಉಮೇಶ್.ಎಂ.ಅಡಿಗ ಆರೋಪಿ ಗಿರೀಶ್‍ಗೆ 2 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಹಾಗೂ 10 ಸಾವಿರ ದಂಡ ವಿಧಿಸಿ ತೀರ್ಪು ನೀಡಿದ್ದಾರೆ. ಸರ್ಕಾರದ ಪರವಾಗಿ ಲೋಕಾಯುಕ್ತ ವಿಶೇಷ ಅಭಿಯೋಜಕ ವಿ.ಟಿ.ಥಾಮಸ್ ವಾದ ಮಂಡಿಸಿದರು.

  • ಶಾಲಾ-ಕಾಲೇಜು ಬಳಿ ತಂಬಾಕು ಉತ್ಪನ್ನ ಮಾರ್ತಿದ್ದ ಅಂಗಡಿಗಳ ಮೇಲೆ ದಾಳಿ

    ಶಾಲಾ-ಕಾಲೇಜು ಬಳಿ ತಂಬಾಕು ಉತ್ಪನ್ನ ಮಾರ್ತಿದ್ದ ಅಂಗಡಿಗಳ ಮೇಲೆ ದಾಳಿ

    ಬೆಂಗಳೂರು: ಸಾರ್ವಜನಿಕ ಸ್ಥಳ ಮತ್ತು ಶಾಲಾ ಕಾಲೇಜುಗಳ 100 ಮೀಟರ್ ಅಂತರದಲ್ಲಿ ತಂಬಾಕು ಮಾರುತ್ತಿದ್ದ ಅಂಗಡಿಗಳ ಮೇಲೆ ದಾಳಿ ನಡೆಸಲಾಗಿದೆ. ಬಿಬಿಎಂಪಿ ಪಶ್ಚಿಮ ವಲಯದ ಆರೋಗ್ಯ ಅಧಿಕಾರಿ ಬಾಲಸುಂದರ್ ನೇತೃತ್ವದಲ್ಲಿ ದಾಳಿ ಮಾಡಲಾಗಿದೆ.

    ಮಲ್ಲೇಶ್ವರಂ ಸುತ್ತಮುತ್ತ ಶಾಲಾ ಕಾಲೇಜುಗಳು ಇರುವ 100 ಮೀಟರ್ ಅಂತರದಲ್ಲಿ ತಂಬಾಕು ಮಾರಾಟ ಮಾಡಲಾಗುತ್ತಿತ್ತು. ಸಾರ್ವಜನಿಕರು ಮತ್ತು ವಿದ್ಯಾರ್ಥಿಗಳ ದೂರಿನ ಮೇರೆಗೆ ಬಿಬಿಎಂಪಿ ಆರೋಗ್ಯಾಧಿಕಾರಿಗಳ ಇಂದು ದಾಳಿ ನಡೆಸಿದ್ದಾರೆ. ತಂಬಾಕು ನಿಯಂತ್ರಣ ಕಾಯ್ದೆ ಅನ್ವಯ ದಾಳಿ ನಡೆಸಿ ಎಚ್ಚರಿಕೆ ನೀಡಲಾಗಿದೆ.

    ಸದರಿ ಕಾರ್ಯಾಚರಣೆಯನ್ನು ಮಲ್ಲೇಶ್ವರಂನ ಸಂಪಿಗೆ ರಸ್ತೆ, 11ನೇ ಅಡ್ಡ ರಸ್ತೆ, 15ನೇ ಅಡ್ಡ ರಸ್ತೆ ಹಾಗೂ ರೈಲ್ವೆ ಪ್ಯಾರಲಲ್ ರಸ್ತೆಯಲ್ಲಿ ಮಾಡಲಾಗಿದೆ. ಶಾಲಾ-ಕಾಲೇಜುಗಳ ಬಳಿಯೇ ತಂಬಾಕು ಮಾರುತ್ತಿದ್ದ 7 ಮಳಿಗೆಗಳ ಮೇಲೆ ಪೊಲೀಸ್ ಸಿಬ್ಬಂದಿ ಸಹಕಾರದೊಂದಿಗೆ ದಾಳಿ ನಡೆಸಿದ್ದಾರೆ. ಜೊತೆಗೆ ಒಟ್ಟು 7 ಸಾವಿರ ರೂ. ದಂಡ ವಿಧಿಸಲಾಗಿದ್ದು, ಮತ್ತೊಮ್ಮೆ ಮಾರಾಟ ಮಾಡಿದರೆ ಅಂಗಡಿಯನ್ನು ಮುಚ್ಚಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ.

    ಬೆಂಗಳೂರಿನಲ್ಲಿ ಮೂಲೆ ಮೂಲೆಯಲ್ಲೂ ಶಾಲಾ-ಕಾಲೇಜು ವ್ಯಾಪ್ತಿಯ 100 ಮೀಟರ್ ಅಂತರದಲ್ಲಿ ತಂಬಾಕು ಮಾರಾಟ ಮಾಡುತ್ತಿರುವುದು ಹೆಚ್ಚಾಗಿದೆ. ಬಿಬಿಎಂಪಿ ಅವರು ಇದನ್ನು ಕಂಡು ಸುಮ್ಮನೆ ಇರುತ್ತಿದ್ದು, ಸಾರ್ವಜನಿಕ ಕೆಂಗಣ್ಣಿಗೆ ಗುರಿಯಾಗಿತ್ತು.

  • ಸ್ಕೂಟಿ ಓಡಿಸುತ್ತಾ ಫೋನಿನಲ್ಲಿ ಮಾತು- ಪೊಲೀಸರು ದಂಡ ವಿಧಿಸಲು ಮುಂದಾಗುತ್ತಿದ್ದಂತೆ ಆತ್ಮಹತ್ಯೆ ಬೆದರಿಕೆ

    ಸ್ಕೂಟಿ ಓಡಿಸುತ್ತಾ ಫೋನಿನಲ್ಲಿ ಮಾತು- ಪೊಲೀಸರು ದಂಡ ವಿಧಿಸಲು ಮುಂದಾಗುತ್ತಿದ್ದಂತೆ ಆತ್ಮಹತ್ಯೆ ಬೆದರಿಕೆ

    ನವದೆಹಲಿ: ಹೊಸ ಸಂಚಾರ ನಿಯಮದಲ್ಲಿನ ದಂಡದಿಂದ ತಪ್ಪಿಸಿಕೊಳ್ಳಲು ಮಹಿಳೆಯೊಬ್ಬಳು ಪೊಲೀಸರಿಗೆ ಆತ್ಮಹತ್ಯೆ ಬೆದರಿಕೆ ಒಡ್ಡಿರುವ ಅಚ್ಚರಿ ಘಟನೆ ನಗರದಲ್ಲಿ ನಡೆದಿದೆ.

    ನಗರದ ಕಾಶ್ಮಿರಿ ಗೇಟ್ ಬಳಿ ಶನಿವಾರ ಬೆಳಗ್ಗೆ ಪೊಲೀಸರು ದ್ವಿಚಕ್ರ ವಾಹನವನ್ನು ತಡೆಯುತ್ತಿದ್ದಂತೆ ಮಹಿಳೆ ಆತ್ಮಹತ್ಯೆಯ ನಾಟಕವನ್ನಾಡಿದ್ದಾಳೆ.

    ಪೊಲೀಸ್ ಸಿಬ್ಬಂದಿ ಪ್ರಕಾರ, ದ್ವಿಚಕ್ರ ವಾಹನ ಚಾಲನೆ ಮಾಡುವಾಗ ಮಹಿಳೆ ಫೋನಿನಲ್ಲಿ ಮಾತನಾಡುತ್ತಿದ್ದಳು. ಗಾಡಿಯ ನಂಬರ್ ಪ್ಲೇಟ್ ಸಹ ಮುರಿದು ಬಿದ್ದಿತ್ತು. ಮಹಿಳೆ ಹಲ್ಮೆಟ್ ಸಹ ಸರಿಯಾಗಿ ಧರಿಸಿರಲಿಲ್ಲ. ಆಗ ಪೊಲೀಸರು ಆಕೆಯ ವಾಹನ ತಡೆದು ನಿಲ್ಲಿಸಿ ಈ ಕುರಿತು ಪ್ರಶ್ನಿಸಿದಾಗ ರಸ್ತೆಯಲ್ಲೇ ಸೀನ್ ಕ್ರಿಯೇಟ್ ಮಾಡಿದ್ದಾಳೆ. ಅಲ್ಲದೆ ಪೊಲೀಸರ ವಿರುದ್ಧ ಕಿರುಚಲು ಪ್ರಾರಂಭಿಸಿದ್ದಾಳೆ. ಇದನ್ನು ಓದಿ: ತಲೆಯ ಗಾತ್ರದ ಹೆಲ್ಮೆಟ್ ಸಿಗದೆ ವ್ಯಕ್ತಿಯ ಪರದಾಟ- ದಂಡ ವಿಧಿಸದೆ ಬಿಟ್ಟು ಕಳುಹಿಸಿದ ಪೊಲೀಸ್

    ಮೊದಲಿಗೆ ಮಹಿಳೆ ದಂಡ ವಿಧಿಸದಂತೆ ಪೊಲೀಸರಲ್ಲಿ ವಿನಂತಿ ಮಾಡಿದ್ದಾಳೆ. ಆದರೆ ದಂಡ ಹಾಕಲು ಮುಂದಾದಾಗ ಕಣ್ಣೀರು ಹಾಕಲು ಪ್ರಾರಂಭಿಸಿದ್ದಾಳೆ. ಅಲ್ಲದೆ, ಅನಾರೋಗ್ಯದಿಂದ ಬಳಲುತ್ತಿದ್ದೇನೆ ಎಂದು ನಾಟಕ ಮಾಡತೊಡಗಿದಳು.

    ಪೊಲೀಸರ ಜೊತೆ ವಾದ ಮಾಡುವಾಗ ಅವಳು ಹೆಲ್ಮೆಟ್‍ನ್ನು ರಸ್ತೆಗೆ ಎಸೆದು ಸೀನ್ ಕ್ರಿಯೇಟ್ ಮಾಡಿದ್ದಾಳೆ. ನಂತರ ತಕ್ಷಣವೇ ಅವಳ ತಾಯಿಗೆ ಕರೆ ಮಾಡಿ ಪೊಲೀಸರು ದಂಡ ವಿಧಿಸುತ್ತಿರುವುದರ ಕುರಿತು ತಿಳಿಸಿದ್ದಾಳೆ. ಅಷ್ಟಾಗಿಯೂ ಚಲನ್ ಸ್ವೀಕರಿಸದ ಮಹಿಳೆ, ನಂತರ ನೇಣು ಬಿಗಿದುಕೊಳ್ಳುವುದಾಗಿ ಬೆದರಿಕೆ ಒಡ್ಡಿದ್ದಾಳೆ. ನಾನು ಸತ್ತರೆ ನೀವು ಏನು ಮಾಡುತ್ತೀರಿ ಎಂದು ಪ್ರಶ್ನಿಸಿದ್ದಾಳೆ ಎಂದು ಪೊಲೀಸರು ವಿವರಿಸಿದ್ದಾರೆ.

    ಈ ನಾಟಕ ತೀವ್ರ ಸಂಚಾರದಟ್ಟಣೆ ಇರುವ ರಸ್ತೆಯಲ್ಲಿ 20 ನಿಮಿಷಗಳಿಗೂ ಹೆಚ್ಚು ಕಾಲ ನಡೆದಿದೆ. ಬಿಸಿ ಬಿಸಿ ಚರ್ಚೆಯನ್ನು ವೀಕ್ಷಿಸಲು ದಾರಿಹೋಕರು ಸಹ ಸುತ್ತಲೂ ಆವರಿಸಿದ್ದರು. ಹಲವು ನಿಮಿಷಗಳ ರಾದ್ಧಾಂತದ ನಂತರ ಪೊಲೀಸರು ಅಂತಿಮವಾಗಿ ಅವಳಿಗೆ ದಂಡ ಚಲನ್ ನೀಡದೇ ಬಿಟ್ಟು ಕಳುಹಿಸಿದ್ದಾರೆ.

  • ಬೆಂಗ್ಳೂರಿನಲ್ಲಿ 8 ದಿನಕ್ಕೆ ಬರೋಬ್ಬರಿ 2.40 ಕೋಟಿ ರೂ. ಟ್ರಾಫಿಕ್ ಫೈನ್

    ಬೆಂಗ್ಳೂರಿನಲ್ಲಿ 8 ದಿನಕ್ಕೆ ಬರೋಬ್ಬರಿ 2.40 ಕೋಟಿ ರೂ. ಟ್ರಾಫಿಕ್ ಫೈನ್

    ಬೆಂಗಳೂರು: ರಾಜ್ಯದಲ್ಲಿ ಯಾವಾಗ ಟ್ರಾಫಿಕ್ ದಂಡವನ್ನು ಇಳಿಸುತ್ತಾರೆ ಎಂಬುವುದು ಮಾತ್ರ ಇರುವರೆಗೂ ಸ್ಪಷ್ಟವಾಗಿಲ್ಲ. ಆದರೆ ಕಳೆದ 8 ದಿನಗಳಲ್ಲಿ ಬೆಂಗಳೂರು ನಗರವೊಂದರಲ್ಲೇ ಬರೋಬ್ಬರಿ 2.40 ಕೋಟಿ ಹಣ ದಂಡದ ರೂಪದಲ್ಲಿ ವಸೂಲಾಗಿದೆ.

    ಟ್ರಾಫಿಕ್ ರೂಲ್ಸ್ ಉಲ್ಲಂಘನೆ ಅಡಿ ಹೊಸ ನಿಯಮಗಳು ಅನ್ವಯವಾದ ಬಳಿಕ ಇದುವರೆಗೂ 84,589 ಪ್ರಕರಣಗಳು ದಾಖಲಾಗಿವೆ. ವಿಶೇಷ ಎಂದರೆ ಡ್ರಿಂಕ್ ಅಂಡ್ ಡ್ರೈವ್ ಕೇಸ್‍ಗಳು ಗಣನೀಯ ಪ್ರಮಾಣದಲ್ಲಿ ಇಳಿಕೆಯಾಗಿವೆ. ಕೇವಲ 150 ಪ್ರಕರಣಗಳು ಮಾತ್ರ ಇದುವರೆಗೂ ದಾಖಲಾಗಿವೆ.  ಇದನ್ನೂ ಓದಿ: ಮದ್ಯ ಸೇವಿಸಿ ಕಾರು ಓಡಿಸಿ ಆಟೋಗೆ ಡಿಕ್ಕಿ ಹೊಡೆದ ಆರ್‌ಟಿಓ ಇನ್ಸ್‌ಪೆಕ್ಟರ್

    ಕಳೆದ 8 ದಿನಗಳ ಅವಧಿಯಲ್ಲಿ 84,589 ಪ್ರಕರಣಗಳು ದಾಖಲಾಗಿದ್ದು, ಇದರಲ್ಲಿ ಹೆಲ್ಮೆಟ್ ಇಲ್ಲದೆ ಬೈಕ್ ಚಾಲನೆ ಮಾಡಿದ್ದ 16,710 ಪ್ರಕರಣ, ಹಿಂಬದಿ ಸವಾರ ಹೆಲ್ಮೆಟ್ ಇಲ್ಲದೇ ಪ್ರಯಾಣ ಮಾಡಿದ್ದ ಸಂಬಂಧ 10,977 ಪ್ರಕರಣಗಳು, ಸಿಗ್ನಲ್ ಜಂಪ್ 10,128 ಪ್ರಕರಣ, ನೋ ಪಾರ್ಕಿಂಗ್ 10,867 ಪ್ರಕರಣ, ಡ್ರಿಂಕ್ ಅಂಡ್ ಡ್ರೈವ್ ಅಡಿ 150 ಪ್ರಕರಣಗಳು ದಾಖಲಾಗಿದೆ. ಒಟ್ಟು 60 ವಿವಿಧ ಬಗೆಯ ಸಂಚಾರ ನಿಯಮಗಳ ಉಲ್ಲಂಘನೆ ಅಡಿ ದಂಡವನ್ನು ವಿಧಿಸಲಾಗುತ್ತಿದೆ. ದಿನವೊಂದಕ್ಕೆ ಸರಾಸರಿ 29 ಲಕ್ಷ ರೂ. ದಂಡದ ಹಣ ಸಂಗ್ರಹವಾಗುತ್ತಿದೆ. ಹೀಗೆ ಮುಂದುವರೆದರೆ ಟ್ರಾಫಿಕ್ ಪೊಲೀಸರ ಕಡೆಯಿಂದ ಸರ್ಕಾರದ ಬೊಕ್ಕಸಕ್ಕೆ ತಿಂಗಳಿಗೆ 8 ಕೋಟಿ ಆದಾಯ ಲಭಿಸಲಿದೆ. ಸೆ.12 ಬೆಳಗ್ಗೆ 10 ಗಂಟೆಯಿಂದ ಸೆ.13 ಬೆಳಗ್ಗೆ 10 ಅವಧಿಯಲ್ಲಿ ನಗರದಲ್ಲಿ 18,503 ಪ್ರಕರಣಗಳು ದಾಖಲಾಗಿದ್ದು, ಈ ಪ್ರಕರಣಗಳಲ್ಲಿ ಒಟ್ಟು 60,80,500 ರೂ. ದಂಡ ಸಂಗ್ರಹವಾಗಿದೆ. ಇದನ್ನು ಓದಿ: ಕರ್ನಾಟಕದಲ್ಲಿ ಟ್ರಾಫಿಕ್ ದಂಡದ ಮೊತ್ತ ಇಳಿಯುವುದು ಅನುಮಾನ

    ಇತ್ತ ಉತ್ತರ ಪ್ರದೇಶದ ಸಿದ್ದಾರ್ಥನಗರ ಜಿಲ್ಲೆಯಲ್ಲಿ ಟ್ರಾಫಿಕ್ ರೂಲ್ಸ್ ಉಲ್ಲಂಘಿಸಿದ ಬೈಕ್ ಸವಾರನ ಮೇಲೆ ಪೊಲೀಸರು ಹಲ್ಲೆ ನಡೆಸಿರುವ ಘಟನೆ ನಡೆದಿದೆ. ಈ ನಡುವೆ, ಹಲವು ರಾಜ್ಯಗಳಲ್ಲಿ ದಂಡದ ಪ್ರಮಾಣ ಇಳಿಸಲು ಸಾರಿಗೆ ಸಚಿವ ನಿತಿನ್ ಗಡ್ಕರಿ ಗರಂ ಆಗಿದ್ದಾರೆ ಎನ್ನಲಾಗಿದೆ. ಈ ಸಂಬಂಧ ಚರ್ಚಿಸಲು ಎಲ್ಲಾ ರಾಜ್ಯಗಳ ಸಭೆ ಕರೆಯಲು ನಿರ್ಧರಿಸಿದ್ದಾರೆ. ಈ ಬೆಳವಣಿಯಿಂದ ರಾಜ್ಯದಲ್ಲಿ ಟ್ರಾಫಿಕ್ ದಂಡದ ಇಳಿಕೆ ಮಾಡುತ್ತಾರಾ ಎಂಬ ಅನುಮಾನ ಅನುಮಾನ ಮೂಡಿದೆ.  ಇದನ್ನೂ ಓದಿ: ನಾಯಕರ ‘ದಂಡ’ಯಾತ್ರೆ – ಟ್ರಾಫಿಕ್ ನಿಯಮಕ್ಕೆ ಸಿಎಂ ಡೋಂಟ್‍ಕೇರ್

  • ಟ್ರಾಫಿಕ್ ರೂಲ್ಸ್ ಫಾಲೋ ಮಾಡೋದ್ರಲ್ಲಿ ಮೋದಿಯೇ ಬೆಸ್ಟ್

    ಟ್ರಾಫಿಕ್ ರೂಲ್ಸ್ ಫಾಲೋ ಮಾಡೋದ್ರಲ್ಲಿ ಮೋದಿಯೇ ಬೆಸ್ಟ್

    ಬೆಂಗಳೂರು: ರಾಜ್ಯದ ನಾಯಕರು ಪಾಲಿಸದೇ ಇದ್ದರೆ ಪ್ರಧಾನಿ ಮೋದಿ ಸಂಚಾರಿ ನಿಯಮವನ್ನು ಚಾಚೂ ತಪ್ಪದೇ ಪಾಲಿಸುತ್ತಾರೆ. ಅಪ್ಪಿತಪ್ಪಿಯೂ ಸಹ ಸೀಟ್ ಬೆಲ್ಟ್ ಧರಿಸುವುದನ್ನು ಮರೆಯುವುದಿಲ್ಲ. ಆದರೆ, ರಾಜ್ಯದಲ್ಲಿ ಮುಖ್ಯಮಂತ್ರಿ, ಗೃಹ ಸಚಿವರು ಸೇರಿ ಬಹುತೇಕರು ಸೀಟ್ ಬೆಲ್ಟ್ ಧರಿಸುವುದೇ ಇಲ್ಲ.

    ಜನಸಾಮಾನ್ಯರು ಸಂಚಾರಿ ನಿಯಮ ಪಾಲಿಸುತ್ತಿಲ್ಲ ಎಂದು ಸಾವಿರಾರು ರೂ.ಗೆ ಕೇಂದ್ರ ಸರ್ಕಾರ ದಂಡ ಹೆಚ್ಚಿಸಿದೆ. ಆದರೆ, ಸಂಚಾರಿ ನಿಯಮ ಪಾಲಿಸಿ ಇತರರಿಗೆ ಮಾದರಿಯಾಗಬೇಕಿದ್ದ ಜನಪ್ರತಿನಿಧಿಗಳೇ ನಿರ್ಲಕ್ಷ್ಯ ವಹಿಸಿದ್ದು, ಕನಿಷ್ಟ ಸೀಟ್ ಬೆಲ್ಟ್ ಸಹ ಹಾಕದೆ ವಾಹನದಲ್ಲಿ ಪ್ರಯಾಣಿಸುತ್ತಿದ್ದಾರೆ ಎಂಬುದು ಪಬ್ಲಿಕ್ ಟಿವಿ ರಿಯಾಲಿಟಿ ಚೆಕ್ ವೇಳೆ ಬಹಿರಂಗವಾಗಿದೆ.

    ಮುಖ್ಯಮಂತ್ರಿ ಯಡಿಯೂರಪ್ಪನವರು ಪ್ರತಿ ದಿನ ಇದೇ ರೀತಿ ರೂಲ್ಸ್ ಬ್ರೇಕ್ ಮಾಡುತ್ತಾರೆ. ಪಬ್ಲಿಕ್ ಟಿವಿ ನಡೆಸಿದ ರಿಯಾಲಿಟಿ ಚೆಕ್ ವೇಳೆ ಇದು ಬಹಿರಂಗವಾಗಿದ್ದು, ಸೆಪ್ಟೆಂಬರ್ 4ರಂದು ಸೆರೆ ಹಿಡಿದಿದ್ದ ದೃಶ್ಯದಲ್ಲಿಯೂ ಸಹ ಬಿಎಸ್‍ವೈ ಸೀಟ್ ಬೆಲ್ಟ್ ಧರಿಸಿರಲಿಲ್ಲ. ನಿನ್ನೆಯ ದೃಶ್ಯದಲ್ಲಿಯೂ ಸಹ ಯಡಿಯೂರಪ್ಪ ಸೀಟ್ ಬೆಲ್ಟ್ ಧರಿಸಿರಲಿಲ್ಲ. ಕಾರ್ಯನಿಮಿತ್ತ ತಮ್ಮ ನಿವಾಸ ಧವಳಗಿರಿಯಿಂದ ಕಾರಲ್ಲಿ ಹೊರಟಾಗ ಯಥಾ ಪ್ರಕಾರ ಸೀಟ್ ಬೆಲ್ಟ್ ಹಾಕಿಕೊಳ್ಳದೇ ಪ್ರಯಾಣಿಸಿದರೂ ಪೊಲೀಸರು ಈ ಬಗ್ಗೆ ಗಮನವೇ ಹರಿಸಲಿಲ್ಲ.

    ದೇಶದ ಪ್ರಧಾನಿ ನರೇಂದ್ರ ಮೋದಿ ಅಚ್ಚುಕಟ್ಟಾಗಿ ಸಂಚಾರಿ ನಿಯಮ ಪಾಲಿಸುತ್ತಾರೆ. ಕಾರಿನಲ್ಲಿ ಕುಳಿತ ತಕ್ಷಣ ಮೋದಿ ಸೀಟ್ ಬೆಲ್ಟ್ ಹಾಕಿಕೊಳ್ತಾರೆ. ತಾನು ಪ್ರಧಾನಿ, ದೇಶವನ್ನು ಆಳುವವನು ಅಂತಾ ಮೋದಿ ಎಲ್ಲೂ ರೂಲ್ಸ್ ಬ್ರೇಕ್ ಮಾಡುವುದಿಲ್ಲ. ಆದರೆ, ಮುಖ್ಯಮಂತ್ರಿ ಯಡಿಯೂರಪ್ಪನವರು ಮಾತ್ರ ನಾನು ರಾಜ್ಯದ ಸಿಎಂ ನಾನೇಕೆ ಸಂಚಾರಿ ನಿಯಮ ಪಾಲಿಸಬೇಕು ಎಂಬ ಧೋರಣೆಯನ್ನು ಅನುಸರಿಸುತ್ತಿದ್ದಾರೆ.

  • ನಾಯಕರ ‘ದಂಡ’ಯಾತ್ರೆ – ಟ್ರಾಫಿಕ್ ನಿಯಮಕ್ಕೆ ಸಿಎಂ ಡೋಂಟ್‍ಕೇರ್

    ನಾಯಕರ ‘ದಂಡ’ಯಾತ್ರೆ – ಟ್ರಾಫಿಕ್ ನಿಯಮಕ್ಕೆ ಸಿಎಂ ಡೋಂಟ್‍ಕೇರ್

    ಬೆಂಗಳೂರು: ಟ್ರಾಫಿಕ್ ನಿಯಮ ಸೆ.1 ರಿಂದ ಜಾರಿಯಾಗಿದ್ದರೂ ರಾಜ್ಯದಲ್ಲಿ ಜನರಿಗೆ ಮಾದರಿಯಾಗಬೇಕಾದ ವ್ಯಕ್ತಿಗಳೇ ಪಾಲನೆ ಮಾಡುವಲ್ಲಿ ವಿಫಲರಾಗಿದ್ದಾರೆ.

    ಹೌದು. ಜನಸಾಮಾನ್ಯರು ಸಂಚಾರಿ ನಿಯಮ ಪಾಲಿಸುತ್ತಿಲ್ಲ ಎಂದು ಸಾವಿರಾರು ರೂ.ಗೆ ಕೇಂದ್ರ ಸರ್ಕಾರ ದಂಡ ಹೆಚ್ಚಿಸಿದೆ. ಆದರೆ, ಸಂಚಾರಿ ನಿಯಮ ಪಾಲಿಸಿ ಇತರರಿಗೆ ಮಾದರಿಯಾಗಬೇಕಿದ್ದ ಜನಪ್ರತಿನಿಧಿಗಳೇ ನಿರ್ಲಕ್ಷ್ಯ ವಹಿಸಿದ್ದು, ಕನಿಷ್ಟ ಸೀಟ್ ಬೆಲ್ಟ್ ಸಹ ಹಾಕದೇ ವಾಹನದಲ್ಲಿ ಪ್ರಯಾಣಿಸುತ್ತಿರುವ ವಿಚಾರ ಪಬ್ಲಿಕ್ ಟಿವಿ ರಿಯಾಲಿಟಿ ಚೆಕ್ ವೇಳೆ ಬಹಿರಂಗವಾಗಿದೆ.

    ಸಂಚಾರಿ ನಿಯಮದ ಪ್ರಕಾರ ಕಾರಲ್ಲಿ ಪ್ರಯಾಣಿಸುವಾಗ ಡ್ರೈವರ್ ಜೊತೆ ಸಹ ಪ್ರಯಾಣಿಕರೂ ಸೀಟ್ ಬೆಲ್ಟ್ ಧರಿಸುವುದು ಕಡ್ಡಾಯವಾಗಿದೆ. ಇಲ್ಲವಾದಲ್ಲಿ ಒಂದು ಸಾವಿರ ರೂಪಾಯಿ ದಂಡ ವಿಧಿಸಬೇಕು. ಆದರೆ, ಕಾರಿನ ಮುಂದಿನ ಸೀಟ್‍ನಲ್ಲಿ ಕೂರುವ ಸಿಎಂ ಯಡಿಯೂರಪ್ಪನವರು ಸೀಟ್ ಬೆಲ್ಟ್ ಧರಿಸುವುದೇ ಇಲ್ಲ. ಇದನ್ನು ನೋಡಿಯೂ ಸಹ ಪೊಲೀಸರು ಸಿಎಂಗೆ ಸೆಲ್ಯೂಟ್ ಮಾಡಿ ಹಾಗೇ ಕಳಿಸಿಕೊಡುತ್ತಾರೆ. ಇದು ಒಂದು ದಿನದ ಕಥೆಯಲ್ಲ ಪ್ರತಿನಿತ್ಯವೂ ಸಿಎಂ ಬಿ.ಎಸ್.ಯಡಿಯೂರಪ್ಪನವರು ಸೀಟ್ ಬೆಲ್ಟ್ ಧರಿಸದೇ ಪ್ರಯಾಣಿಸುತ್ತಾರೆ.

    ಮುಖ್ಯಮಂತ್ರಿ ಯಡಿಯೂರಪ್ಪನವರು ಪ್ರತಿ ದಿನ ಇದೇ ರೀತಿ ರೂಲ್ಸ್ ಬ್ರೇಕ್ ಮಾಡುತ್ತಾರೆ. ಪಬ್ಲಿಕ್ ಟಿವಿ ನಡೆಸಿದ ರಿಯಾಲಿಟಿ ಚೆಕ್ ವೇಳೆ ಇದು ಬಹಿರಂಗವಾಗಿದ್ದು, ಸೆಪ್ಟೆಂಬರ್ 4ರಂದು ಸೆರೆ ಹಿಡಿದಿದ್ದ ದೃಶ್ಯದಲ್ಲಿಯೂ ಸಹ ಬಿಎಸ್‍ವೈ ಸೀಟ್ ಬೆಲ್ಟ್ ಧರಿಸಿರಲಿಲ್ಲ. ನಿನ್ನೆಯ ದೃಶ್ಯದಲ್ಲಿಯೂ ಸಹ ಯಡಿಯೂರಪ್ಪ ಸೀಟ್ ಬೆಲ್ಟ್ ಧರಿಸಿರಲಿಲ್ಲ. ಕಾರ್ಯನಿಮಿತ್ತ ತಮ್ಮ ನಿವಾಸ ಧವಳಗಿರಿಯಿಂದ ಕಾರಲ್ಲಿ ಹೊರಟಾಗ ಯಥಾ ಪ್ರಕಾರ ಸೀಟ್ ಬೆಲ್ಟ್ ಹಾಕಿಕೊಳ್ಳದೇ ಪ್ರಯಾಣಿಸಿದ್ದರೂ ಪೊಲೀಸರೂ ಸಹ ಈ ಕುರಿತು ಗಮನ ಸೆಳೆಯಲಿಲ್ಲ.

    ರಾಜ್ಯದ ಕಾನೂನು ತಮ್ಮ ಕೈಯಲ್ಲಿ ಹೊಂದಿರುವ ಗೃಹ ಸಚಿವ ಬಸವರಾಜ ಬೊಮ್ಮಾಯಿಯವರು ಸೀಟ್ ಬೆಲ್ಟ್ ಹಾಕಿಕೊಳ್ಳುವುದಿರಲಿ, ಅವರ ಡ್ರೈವರ್ ಸಹ ಸೀಟ್ ಬೆಲ್ಟ್ ಧರಿಸುವುದಿಲ್ಲ ಎಂಬುದು ಪಬ್ಲಿಕ್ ಟಿವಿ ರಿಯಾಲಿಟಿ ಚೆಕ್ ವೇಳೆ ಬಹಿರಂಗವಾಗಿದೆ.

    ಟ್ರಾಫಿಕ್ ರೂಲ್ಸ್ ಫಾಲೋ ಮಾಡುವ ವಿಚಾರದಲ್ಲಿ ಕೇವಲ ಇವರಿಗಷ್ಟೇ ಉದಾಸೀನ ಇಲ್ಲ. ಉಳಿದ ರಾಜಕಾರಣಿಗಳು ಸಹ ರೂಲ್ಸ್ ಬ್ರೇಕ್ ಮಾಡುವುದರಲ್ಲಿ ಮುಂದಿದ್ದಾರೆ. ವಿಧಾನ ಪರಿಷತ್ ಸದಸ್ಯ ರವಿಕುಮಾರ್ ಸೇರಿದಂತೆ ಬಿಜೆಪಿ ಮುಖಂಡರು ಸೀಟ್ ಬೆಲ್ಟ್ ಧರಿಸುವುದಿಲ್ಲ. ಕ್ಯಾಮರಾ ಕಣ್ಣಿಗೆ ಕಂಡಿದ್ದು ಈ ನಾಯಕರು ಮಾತ್ರ ಆದರೆ, ಪ್ರತಿ ನಿತ್ಯ ಬಹುತೇಕ ರಾಜಕಾರಣಿಗಳು ಸೀಟ್ ಬೆಲ್ಟ್ ಧರಿಸದೆ, ಕಾರಿನಲ್ಲಿ ಪ್ರಯಾಣಿಸುತ್ತಾರೆ.