Tag: Pentagon

  • ಬಾಂಬ್‌ ದಾಳಿ ನಡೆದಿರೋದು ಸ್ಪಷ್ಟ – ನಮ್ಮಲ್ಲೇನು ಆಗೇ ಇಲ್ಲ ಎನ್ನುತ್ತಿದ್ದ ಇರಾನ್‌ಗೆ ವಿಡಿಯೋ ಸಮೇತ ಅಮೆರಿಕ ತಿರುಗೇಟು

    ಬಾಂಬ್‌ ದಾಳಿ ನಡೆದಿರೋದು ಸ್ಪಷ್ಟ – ನಮ್ಮಲ್ಲೇನು ಆಗೇ ಇಲ್ಲ ಎನ್ನುತ್ತಿದ್ದ ಇರಾನ್‌ಗೆ ವಿಡಿಯೋ ಸಮೇತ ಅಮೆರಿಕ ತಿರುಗೇಟು

    ವಾಷಿಂಗ್ಟನ್‌: ಅಮೆರಿಕದ ಬಾಂಬ್‌ ದಾಳಿಯಿಂದ (America Strikes In Iran) ನಮ್ಮಲ್ಲಿ ಅಂಥದ್ದೇನೂ ಹಾನಿಯಾಗಿಲ್ಲ ಎಂದಿದ್ದ ಇರಾನ್‌ಗೆ ಅಮೆರಿಕ ಈಗ ವಿಡಿಯೋ ಸಮೇತ ತಿರುಗೇಟು ಕೊಟ್ಟಿದೆ.

    ಇರಾನ್‌ನ ಅಣುಸ್ಥಾವರದ ಮೇಲೆ ಮಾಡಿರುವ ಬಿ2 ಬಾಂಬರ್‌ಗಳ (B2 Bomber) ಮಿಡ್‌ನೈಟ್ ಹ್ಯಾಮರ್ ದಾಳಿಯ ಹೊಸ ವಿಡಿಯೋವನ್ನು ಪೆಂಟಗನ್‌ (Pentagon) (ಅಮೆರಿಕ ರಕ್ಷಣಾ ಸಚಿವಾಲಯದ ಪ್ರಧಾನ ಕಚೇರಿ) ಅಮೆರಿಕ ಬಿಡುಗಡೆ ಮಾಡಿದೆ. ಈ ವಿಡಿಯೋನಲ್ಲಿ ಅಮೆರಿಕವು ವಿಶ್ವದ ಶಕ್ತಿಶಾಲಿ ವೆಪೆನ್‌ ʻಬಂಕರ್‌ ಬಸ್ಟರ್‌ʼ ಬಳಸಿ ದಾಳಿ ನಡೆಸಿರುವುದು ಸ್ಪಷ್ಟವಾಗಿದೆ. ಇದನ್ನೂ ಓದಿ: ವಿಶ್ವದ ಪವರ್‌ಫುಲ್‌ ವೆಪೆನ್‌ ʻಬಂಕರ್‌ ಬಸ್ಟರ್‌ʼ – 14,000 ಕೆಜಿ ತೂಕದ ಬಾಂಬ್‌ ಬಳಸಿ ಇರಾನ್‌ ಪರಮಾಣು ಕೇಂದ್ರದ ಮೇಲೆ ಅಮೆರಿಕ ದಾಳಿ

    ಪೆಂಟಗನ್‌ನ ರಕ್ಷಣಾ ಕಾರ್ಯದರ್ಶಿ ಪೀಟ್ ಹೆಗ್ಸೆತ್ ಮತ್ತು ಲೆಫ್ಟಿನೆಂಟ್ ಜನರಲ್ ಡ್ಯಾನ್ ಕೈನ್ ಅಮೆರಿಕದ ಬಿ2 ಬಾಂಬರ್‌ಗಳು ಹೇಗೆ ದಾಳಿ ನಡೆಸಿವೆ ಎಂಬುದನ್ನು ಇಂಚಿಂಚಾಗಿ ವಿವರಿಸಿದ್ರು. ಒಂದೊಂದೇ ದೃಶ್ಯಗಳನ್ನು ಬಿಡುಗಡೆ ಮಾಡುತ್ತಾ.. ಸಾಮಾನ್ಯ ಬಾಂಬ್‌ಗಳಿಗಿಂತ ʻಬಂಕರ್‌ ಬಸ್ಟರ್‌ʼ ಎಷ್ಟು ವಿಭಿನ್ನ? ಇದರ ಹಾನಿ ಪ್ರಮಾಣ ಹೇಗಿರುತ್ತೆ? ಭೂಮಿಯನ್ನು ಸೀಳಿಕೊಂಡು ಪರಮಾಣು ಕೇಂದ್ರವನ್ನು ಧ್ವಂಸಗೊಳಿಸಿದ್ದು ಹೇಗೆ? ಎಂಬೆಲ್ಲ ಮಾಹಿತಿಗಳನ್ನ ವಿವರಿಸಿದ್ದಾರೆ.  ಇದನ್ನೂ ಓದಿ: ಇರಾನ್‌ನ ಮೂರು ಪರಮಾಣು ಕೇಂದ್ರಗಳ ಮೇಲೆ ಅಮೆರಿಕ ಬಾಂಬ್‌ ದಾಳಿ

    ನೆಲದಡಿಯಿಂದ ಸುಮಾರು 80 ರಿಂದ 90 ಮೀಟರ್ (295 ಅಡಿ) ಆಳದಲ್ಲಿರುವ ಫೋರ್ಡೋ ಪರಮಾಣು ಘಟಕವನ್ನು ಅಮೆರಿಕ ಬಿ2 ಬಾಂಬರ್‌ ಧ್ವಂಸಗೊಳಿಸಿರುವುದು, ಅದರ ಭೀಕರತೆ ಹೇಗಿತ್ತು? ಎಂಬುದನ್ನು ವಿಡಿಯೋ ಬಿಚ್ಚಿಟ್ಟಿದೆ.  ಇದನ್ನೂ ಓದಿ: ಅಮೆರಿಕ ಬಳಿಕ ಇರಾನ್‌ನ ಶಕ್ತಿಶಾಲಿ ಫೋರ್ಡೋ ಪರಮಾಣು ಘಟಕದ ಮೇಲೆ ಇಸ್ರೇಲ್‌ ದಾಳಿ

    ಅಮೆರಿಕ ದಾಳಿ ಎಷ್ಟು ಭೀಕರ?
    ಇರಾನ್‌ನ ಫೋರ್ಡೊ, ನಟಾಂಜ್ ಮತ್ತು ಇಸ್ಪಹಾನ್ ಪರಮಾಣು ಕೇಂದ್ರಗಳ ಮೇಲೆ ಅಮೆರಿಕ ಯಶಸ್ವಿ ಬಾಂಬ್ ದಾಳಿ ನಡೆಸಿತ್ತು. ಅಮೆರಿಕವು 6 ಶಕ್ತಿಶಾಲಿ Northrop B-2 Spirit ಯುದ್ಧವಿಮಾನ ಬಳಸಿಕೊಂಡು ಡಜನ್‌ಗಟ್ಟಲೇ ಜಿಬಿಯು -57 ಎ/ಬಿ ಬೃಹತ್ ಆರ್ಡ್‌ನೆನ್ಸ್ ಪೆನೆಟ್ರೇಟರ್ (MOP) ಬಾಂಬ್‌ಗಳನ್ನ ಬಳಸಿ ದಾಳಿ ನಡೆಸಿತ್ತು. ಇದನ್ನ ʻಬಂಕರ್‌ ಬಸ್ಟರ್‌ʼ ಎಂದೂ ಕರೆಯಲಾಗುತ್ತದೆ. ಈ ʻಬಂಕರ್‌ ಬಸ್ಟರ್‌ʼ ಇರಾನ್‌ ರಾಜಧಾನಿ ಟೆಹ್ರಾನ್‌ನಿಂದ 100 ಕಿಮೀ ದೂರದಲ್ಲಿರುವ ಫೋರ್ಡೋ ಘಟಕದ ಮೇಲೆ ದಾಳಿ ಮಾಡಿದ್ರೆ, ಜಲಾಂತರ್ಗಾಮಿ ನೌಕೆಗಳಿಂದ ಹಾರಿಸಲಾದ 30 ಟೊಮಾಹಾಕ್ ಕ್ಷಿಪಣಿಗಳು (ಕ್ರೂಸ್‌ ಕ್ಷಿಪಣಿ) ಉಳಿದ 2 ಅಣು ಕೇಂದ್ರಗಳ ಮೇಲೆ ದಾಳಿ ನಡೆಸಿ ಧ್ವಂಸಗೊಳಿಸಿದ್ದವು.

    ಫೋರ್ಡೋ ಅಣು ಕೇಂದ್ರ ಎಷ್ಟು ಸೇಫ್‌?
    ಫೋರ್ಡೋ ಪರಮಾಣು ಘಟಕದ ಮುಖ್ಯ ಸಭಾಂಗಣವು ನೆಲದಡಿಯಲ್ಲಿ ಸುಮಾರು 80 ರಿಂದ 90 ಮೀಟರ್ (295 ಅಡಿ) ಆಳದಲ್ಲಿದೆ. ಇಷ್ಟು ಅಡಿ ಆಳದಲ್ಲಿರುವ ಈ ಘಟಕವನ್ನು ಇಸ್ರೇಲ್ ಹೊಂದಿರುವ ಯಾವುದೇ ವೈಮಾನಿಕ ಬಾಂಬ್‌ನಿಂದ ಧ್ವಂಸ ಮಾಡಲು ಸಾಧ್ಯವಿಲ್ಲ. ಹೀಗಾಗಿಯೇ ವಿಶ್ವದಲ್ಲೇ ಅತಿಹೆಚ್ಚು ಪವರ್‌ಫುಲ್‌ ಆಗಿರುವ ಸ್ವದೇಶಿ ನಿರ್ಮಿತ GBU-57A/B Massive Ordinance Penetrator ಬಾಂಬ್‌ನಿಂದ ಅಮೆರಿಕ ದಾಳಿ ನಡೆಸಿದೆ.

    ಇನ್ನೂ ಇಸ್ರೇಲ್-ಇರಾನ್ ಮಧ್ಯೆ ಕದನ ವಿರಾಮ ಘೋಷಣೆಯಾಗಿದ್ದರೂ, ಇರಾನ್ ಸಿಟ್ಟು ಕಡಿಮೆಯಾಗಿಲ್ಲ. ಇರಾನ್ ಪರಮೋಚ್ಛ ನಾಯಕ ಖಮೇನಿ ಮತ್ತೆ ಅಮೆರಿಕ ವಿರುದ್ಧ ಕೆಂಡಕಾರಿದ್ದಾರೆ. ಇಸ್ರೇಲ್ ಸೋಲುವ ಭೀತಿಯಿಂದಲೇ ಅಮೆರಿಕ ಎಂಟ್ರಿ ಕೊಟ್ಟಿದೆ. ಈ ಯುದ್ಧದಿಂದ ಅಮೆರಿಕ ಸಾಧಿಸಿದ್ದೇನೂ ಇಲ್ಲ. ನಾವು ಅಮೆರಿಕಕ್ಕೆ ಶರಣಾಗತಿಯಾಗೋ ಪ್ರಶ್ನೆಯೇ ಇಲ್ಲವೆಂದು ಸ್ಪಷ್ಟಪಡಿಸಿದ್ದಾರೆ.

    ಇನ್ನು ಇಸ್ರೇಲ್ ಜೊತೆಗಿನ ಕದನ ವಿರಾಮ ಬಳಿಕ ಇರಾನ್ ತನ್ನ ವಾಯುಪ್ರದೇಶವನ್ನು ಮತ್ತೆ ಸಂಚಾರಕ್ಕೆ ಮುಕ್ತಗೊಳಿಸಿದೆ. ಜೂನ್ 12ರಿಂದಲೂ ಇರಾನ್ ವಾಯುಪ್ರದೇಶ ಮುಚ್ಚಿತ್ತು.. ಅಂತಾರಾಷ್ಟ್ರೀಯ, ದೇಶೀಯ ವಿಮಾನಗಳಿಗೆ ಏರ್‌ಸ್ಪೇಸ್ ಓಪನ್ ಮಾಡಲಾಗಿದೆ ಎಂದು ಇರಾನ್ ತಿಳಿಸಿದೆ.

    ಸಂಘರ್ಷಪೀಡಿತ ಇರಾನ್‌ನಲ್ಲಿ ಸಿಲುಕಿದ್ದ ಒಟ್ಟು 3,154 ಭಾರತೀಯ ಪ್ರಜೆಗಳನ್ನು ಆಪರೇಷನ್ ಸಿಂಧು ಕಾರ್ಯಾಚರಣೆಯಡಿ ಕರೆತರಲಾಗಿದೆ. 296 ಭಾರತೀಯರು ಮತ್ತು ನಾಲ್ವರು ನೇಪಾಳಿ ಪ್ರಜೆಗಳನ್ನು ಹೊತ್ತ ವಿಮಾನ ನಿನ್ನೆ ದೆಹಲಿಗೆ ಮರಳಿತ್ತು. ಇದರೊಂದಿಗೆ ಆಪರೇಷನ್ ಸಿಂಧು ಅಡಿಯಲ್ಲಿ ಸ್ಥಳಾಂತರಿಸಲಾದ ಒಟ್ಟು ಭಾರತೀಯರ ಸಂಖ್ಯೆ 3,154ಕ್ಕೆ ತಲುಪಿದೆ.

  • ಬಿಗ್ ಬಾಸ್ ಸ್ಪರ್ಧಿ ತನಿಷಾ ಕುಪ್ಪಂಡ ನಟನೆಯ ‘ಪೆಂಟಗನ್’ ಹಿಂದಿಯಲ್ಲಿ ರಿಲೀಸ್

    ಬಿಗ್ ಬಾಸ್ ಸ್ಪರ್ಧಿ ತನಿಷಾ ಕುಪ್ಪಂಡ ನಟನೆಯ ‘ಪೆಂಟಗನ್’ ಹಿಂದಿಯಲ್ಲಿ ರಿಲೀಸ್

    ದ್ಯ ಬಿಗ್ ಬಾಸ್ ಮನೆಯ ಕೇಂದ್ರಬಿಂದು ಆಗಿರುವ ನಟಿ ತನಿಷಾ ಕುಪ್ಪಂಡ ಮತ್ತು ಇತರರು ನಟನೆಯ ‘ಪೆಂಟಗನ್’ ಸಿನಿಮಾ ಹಿಂದಿಯಲ್ಲಿ (Hindi) ಬಿಡುಗಡೆ ಆಗಿದೆ. ‘ಪೆಂಟಗನ್’ ಈಗ ಹಿಂದಿ ಭಾಷೆಯಲ್ಲಿ ‘ಪೆಂಟಗನ್- ಪಾಂಚ್ ಕಾ ಧಮ್’ ಎಂದು dollywood play ನಲ್ಲಿ ಇಂದಿನಿಂದ ಪ್ರಸಾರವಾಗುತ್ತಿದೆ. ಐದು ಕಥೆಗಳು, ಐದು ನಿರ್ದೇಶಕರು ಹಾಗೂ ಹಲವಾರು ನಟರು ಈ ಸಿನಿಮಾದ ಭಾಗವಾಗಿದ್ದಾರೆ. ಗುರು ದೇಶಪಾಂಡೆ (Guru Deshpanda) ಅವರ ನಿರ್ಮಾಣ ಮತ್ತು ಸಾರಥ್ಯದಲ್ಲಿ ಈ ಸಿನಿಮಾ ಮೂಡಿ ಬಂದಿದೆ. ರಾಘು ಶಿವಮೊಗ್ಗ, ಆಕಾಶ್ ಶ್ರೀವತ್ಸ, ಚಂದ್ರ ಮೋಹನ್, ಕಿರಣ್ ಕುಮಾರ್ ಮತ್ತು ಗುರು ದೇಶಪಾಂಡೆ ತಲಾ ಒಂದೊಂದು ಕಥೆಯನ್ನು ನಿರ್ದೇಶನ ಮಾಡಿದ್ದಾರೆ. ಕಿಶೋರ್, ಪ್ರಕಾಶ್ ಬೆಳವಾಡಿ, ರವಿಶಂಕರ್ ಸೇರಿದಂತೆ ಹೆಸರಾಂತ ತಾರಾ ಬಳಗವೇ ಸಿನಿಮಾ ದಲ್ಲಿದೆ.

    ನೆನಪಾಗುವ ತನಿಷಾ ವಿವಾದ

    ಸದ್ಯ ಬಿಗ್ ಬಾಸ್ ಮನೆಯಲ್ಲಿರುವ ತನಿಷಾ ಪೆಂಟಗನ್ ಸಿನಿಮಾದ ಒಂದು ಕಥೆಯಲ್ಲಿ ಬೋಲ್ಡ್ ಆಗಿ ನಟಿಸಿದ್ದರು. ಈ ನಟಿಗೆ ಅನೇಕ ರೀತಿಯಲ್ಲಿ ಕಿರುಕುಳ ಆಗಿದೆ ಎಂದು ಈ ಹಿಂದೆ ಆರೋಪ ಮಾಡಿದ್ದರು. ಸಿನಿಮಾ ರಿಲೀಸ್ ವೇಳೆ ಯುಟ್ಯೂಬರ್ ಒಬ್ಬನ ಮೇಲೆ ಆರೋಪ ಮಾಡಿದ್ದ ತನಿಷಾ, ನಂತರ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಸೂಪರ್ ಹಿಟ್ ಸಿನಿಮಾದ ನಟನೊಬ್ಬನ ಮೇಲೆ ಗುರುತರ ಆರೋಪ ಮಾಡಿದ್ದರು.

    ಪೆಂಟಗನ್ (Pentagon) ಸಿನಿಮಾದ ಒಂದು ಕಥೆಯಲ್ಲಿ ತನಿಷಾ ಬೋಲ್ಡ್ ಆಗಿರುವಂಥ ಪಾತ್ರವನ್ನು ನಿರ್ವಹಿಸಿದ್ದಾರೆ. ಅದು ಡೇಟಿಂಗ್ ಆಪ್ ಕುರಿತಾದ ಕಥೆಯಾಗಿದ್ದರಿಂದ, ಪಾತ್ರವೇ ಡಿಮಾಂಡ್ ಮಾಡಿದ್ದರಿಂದ ಅಂಥದ್ದೊಂದು ಪಾತ್ರವನ್ನು ನಿರ್ವಹಿಸಿದ್ದೇನೆ ಎಂದಿದ್ದರು. ಆದರೆ, ರಾಜಾಹುಲಿ ಅಂತಹ ಹಿಟ್ ಸಿನಿಮಾದಲ್ಲಿ ಯಶ್ ಗೆಳೆಯನ ಪಾತ್ರ ಮಾಡಿದ್ದ ನಟನೊಬ್ಬ ತನಿಷಾಗೆ ಬ್ಲೂಫಿಲ್ಮ್ ಮಾಡ್ತೀಯಾ ಎಂದು ಸೋಷಿಯಲ್ ಮೀಡಿಯಾ ಮೂಲಕ ಪ್ರಶ್ನೆ ಮಾಡಿದ್ದಾರಂತೆ. ಆ ನಟನ ಬಗ್ಗೆ ಮಾತನಾಡಿದ ತನಿಷಾ ಪತ್ರಿಕಾಗೋಷ್ಠಿಯಲ್ಲೇ ಕಣ್ಣೀರಿಟ್ಟಿದ್ದರು.

    ಪೆಂಟಗನ್ ಸಿನಿಮಾದಲ್ಲಿ ಒಟ್ಟು ಐದು ಕಥೆಗಳಿವೆ. ಕನ್ನಡದ ಪ್ರೇಮ, ಸಾಮಾಜಿಕ ಸಂದೇಶ ಹಾಗೂ ಮನರಂಜನೆ ನೀಡುವಂತಹ ಎಲ್ಲ ಅಂಶಗಳು ಇದ್ದರೂ, ಕೇವಲ ಒಂದೇ ಒಂದು ಕಥೆಯ ಬಗ್ಗೆ ಈ ರೀತಿ ಮಾತನಾಡುವುದು ಸರಿ ಅಲ್ಲ ಎನ್ನುವುದು ತನಿಷಾ ಮಾತಾಗಿತ್ತು. ಐದು ಪ್ರತಿಭಾವಂತ ನಿರ್ದೇಶಕರು ಈ ಸಿನಿಮಾವನ್ನು ನಿರ್ದೇಶನ ಮಾಡಿದ್ದಾರೆ. ಅವರು ನನ್ನಿಂದ ಕೆಟ್ಟ ರೀತಿಯಲ್ಲಿ ಪಾತ್ರ ಮಾಡಲು ಸಾಧ್ಯವಾ ಎನ್ನುವುದು ಅವರ ಪ್ರಶ್ನೆಯಾಗಿತ್ತು.

    `ಮಂಗಳಗೌರಿ ಮದುವೆ’ (Mangala Gowri Maduve) ಸೀರಿಯಲ್‌ನಲ್ಲಿ ಖಡಕ್ ವಿಲನ್ ಆಗಿ ಮನಗೆದ್ದ ತನಿಷಾ ಕುಪ್ಪಂಡ (Tanisha Kuppanda) ಅವರು (ಸಿನಿಮಾದಲ್ಲಿ ಹಾಟ್ ಆಗಿ ಕಾಣಿಸಿಕೊಂಡಿದ್ದಾರೆ. ಸಂದರ್ಶನವೊಂದರಲ್ಲಿ ಯೂಟ್ಯೂಬರ್ ಅಸಭ್ಯ ಪ್ರಶ್ನೆಗೆ ತನಿಷಾ ಖಡಕ್ ವಾರ್ನಿಂಗ್ ಕೊಟ್ಟಿದ್ದರು.

     

    ನೀವು ನೀಲಿ ಚಿತ್ರದಲ್ಲಿ ನಟಿಸಲು ಸಿದ್ಧವಿದ್ದೀರಾ? ಎಂದು ಓರ್ವ ಯೂಟ್ಯೂಬರ್ ಪ್ರಶ್ನೆ ಮಾಡಿದ್ದರು. ಆಗ ಸಿಟ್ಟಾದ ತನಿಷಾ ಕುಪ್ಪಂಡ ಹಾಗಿದ್ರೆ ನಾನು ಕನ್ನಡ ಸಿನಿಮಾ ಇಂಡಸ್ಟ್ರಿಯಲ್ಲಿ ಇರಬಾರದಿತ್ತು. ನೀಲಿ ಸಿನಿಮಾ ಇಂಡಸ್ಟ್ರಿಯಲ್ಲೇ ಇರಬೇಕಿತ್ತು. ಬೋಲ್ಡ್ ಆಗಿ ನಟಿಸಿದ್ದೀವಿ ಅಂದ ಮಾತ್ರಕ್ಕೆ. ಈ ತರಹ ಪ್ರಶ್ನೆ ಕೇಳೋದ್ರಲ್ಲಿ ಅರ್ಥವೇ ಇಲ್ಲ. ನೀಲಿ ಚಿತ್ರದ ತಾರೆಯರು ಬೆತ್ತಲಾಗುತ್ತಾರೆ. ನಾನು ನೀಲಿ ಚಿತ್ರದ ತಾರೆಯಲ್ಲ. ಯಾಕೆ ಈ ರೀತಿ ಪ್ರಶ್ನೆ ಮಾಡ್ತಿದ್ದೀರಾ.? ಪ್ರಶ್ನೆ ಮಾಡೋಕೂ ಮುನ್ನ ನಿಮಗೆ ಕಾಮನ್ ಸೆನ್ಸ್ ಇರಬೇಕು. ಕನ್ನಡ ಸಿನಿಮಾ ಇಂಡಸ್ಟ್ರಿಯಲ್ಲಿ ಯಾರು ಬೆತ್ತಲೆ ಸಿನಿಮಾ ಮಾಡ್ತಿದ್ದಾರೆ? ಯಾಕೆ ಈ ರೀತಿ ಅಸಭ್ಯವಾಗಿ ಪ್ರಶ್ನೆಯನ್ನ ಕೇಳುತ್ತಿದ್ದೀರಾ? ಎಂದು ಹೇಳಿ ಸಂದರ್ಶನವನ್ನ ಮೊಟಕುಗೊಳಿಸಿದ್ದರು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಚುನಾವಣೆ, ಐಪಿಎಲ್ ಹಾವಳಿ ನಡುವೆ ‘ವೀರಂ’ ಜೊತೆ ‘ಪೆಂಟಗನ್’ ರಿಲೀಸ್

    ಚುನಾವಣೆ, ಐಪಿಎಲ್ ಹಾವಳಿ ನಡುವೆ ‘ವೀರಂ’ ಜೊತೆ ‘ಪೆಂಟಗನ್’ ರಿಲೀಸ್

    ರಾಜ್ಯದ ಜನತೆ ಚುನಾವಣೆ ಹಾಗೂ ಐಪಿಎಲ್ ಪಂದ್ಯಾವಳಿಯಲ್ಲಿ ಮುಳುಗಿ ಹೋಗಿರುವ ಸಂದರ್ಭದಲ್ಲಿ ಕನ್ನಡದ ಎರಡು ಮಹತ್ವದ ಚಿತ್ರಗಳು ಇಂದು ಬಿಡುಗಡೆ ಆಗುತ್ತಿವೆ. ತಮ್ಮದೇ ಆದ ಕಾರಣಗಳಿಂದಾಗಿ ಈ ಚಿತ್ರಗಳು ನಿರೀಕ್ಷೆ ಮೂಡಿಸಿವೆ. ಆದರೆ, ಪ್ರೇಕ್ಷಕ ಈ ಸಿನಿಮಾಗಳನ್ನು ಯಾವ ರೀತಿಯಲ್ಲಿ ಸ್ವೀಕರಿಸುತ್ತಾನೆ ಎನ್ನುವುದನ್ನು ಕಾದು ನೋಡಬೇಕಿದೆ.

    ವೀರಂ

    ಶಶಿಧರ್ ಸ್ಟುಡಿಯೋಸ್ ಪ್ರೊಡಕ್ಷನ್ ಮೂಲಕ  ಕೆ.ಎಂ. ಶಶಿಧರ್ ಅವರು ನಿರ್ಮಿಸಿರುವ  ಫ್ಯಾಮಿಲಿ ಎಮೋಷನ್  ಜೊತೆಗೆ ಲವ್,  ಆಕ್ಷನ್, ಥ್ರಿಲ್ಲರ್ ಡ್ರಾಮಾ ಕಥಾಹಂದರ ಹೊಂದಿರುವ ಚಿತ್ರ ವೀರಂ‌ (Veeram) ರಾಜ್ಯಾದ್ಯಂತ ತೆರೆಕಾಣುತ್ತಿದೆ. ಟ್ರೈಲರ್, ಹಾಡುಗಳ ಮೂಲಕ ದೊಡ್ಡ ಮಟ್ಟದ ಕುತೂಹಲ ಹುಟ್ಟುಹಾಕಿರುವ  ಈ ಚಿತ್ರಕ್ಕೆ ಖದರ್ ಕುಮಾರ್ ಕಥೆ, ಚಿತ್ರಕಥೆ ಬರೆದು ಆ್ಯಕ್ಷನ್ ಕಟ್ ಹೇಳಿದ್ದಾರೆ. ಒಂದು ಕುಟುಂಬಕ್ಕೆ ತೊಂದರೆ ಬಂದಾಗ ಎಲ್ಲರೂ ಹೇಗೆ ಜೊತೆಗೆ ನಿಲ್ತಾರೆ ಎನ್ನುವುದು ಚಿತ್ರದ ಕಥೆ.

    ಈ ಚಿತ್ರದಲ್ಲಿ ಪ್ರಜ್ವಲ್ ದೇವರಾಜ್ (Rachita Ram) ಹಾಗೂ ನಟಿ  ಶೃತಿ, ಅಕ್ಕ ತಮ್ಮನಾಗಿ ಅಲ್ಲದೆ  ಶ್ರೀನಗರ ಕಿಟ್ಟಿ ಅಣ್ಣನಾಗಿಯೂ ಕಾಣಿಸಿಕೊಂಡಿದ್ದಾರೆ. ರಚಿತಾರಾಮ್, ಶಿಶ್ಯ ದೀಪಕ್, ಬಲ ರಾಜವಾಡಿ, ಅಚ್ಯುತ್‌ಕುಮಾರ್, ಸ್ವಾತಿ, ಮೈಕೋ ನಾಗರಾಜ್, ಪ್ರಶಾಂತ್ ನಟನಾ, ಹನುಮಂತೇಗೌಡ ಅಲ್ಲದೆ ನಿರ್ದೇಶಕರಾದ ಜೋಸೈಮನ್, ವಿ.ನಾಗೇಂದ್ರಪ್ರಸಾದ್ ಉಳಿದ ತಾರಾಬಳಗದಲ್ಲಿದ್ದಾರೆ. ಇದನ್ನೂ ಓದಿ: ರಿಲಯನ್ಸ್ ಜ್ಯುವೆಲ್ಸ್‌ಗಾಗಿ ಬೆಂಗಳೂರಿಗೆ ಬಂದ ಜಾನ್ವಿ ಕಪೂರ್

    5 ವಿಭಿನ್ನ ಕಥೆಗಳ ಪೆಂಟಗನ್

    ಐದು ಬೇರೆ ಬೇರೆ ಜಾನರ್ ಕಥೆಗಳನ್ನು ಇಟ್ಟುಕೊಂಡು ಮಾಡಿರುವ  ಅಂಥಾಲಜಿ ಸಿನಿಮಾ ಪೆಂಟಗನ್ (Pentagon) ರಾಜ್ಯಾದ್ಯಂತ ತೆರೆಕಾಣುತ್ತಿದೆ. ಈ ಚಿತ್ರವನ್ನು ನಿರ್ದೇಶಕ ಕಮ್ ನಿರ್ಮಾಪಕ ಗುರು ದೇಶಪಾಂಡೆ ಅವರು ತಮ್ಮ ಜಿ.ಅಕಾಡೆಮಿ ಅಡಿಯಲ್ಲಿ ನಿರ್ಮಿಸಿದ್ದು,  ಚಿತ್ರದ 5 ಕಥೆಗಳಿಗೆ ಆಕಾಶ್ ಶ್ರೀವತ್ಸ, ಚಂದ್ರಮೋಹನ್, ರಾಘು ಶಿವಮೊಗ್ಗ, ಕಿರಣ್ ಕುಮಾರ್ ಹಾಗೂ ಗುರು ದೇಶಪಾಂಡೆ  ಆ್ಯಕ್ಷನ್-ಕಟ್ ಹೇಳಿದ್ದಾರೆ.

    ಚಿತ್ರದಲ್ಲಿ ಬರುವ ಡೆತ್ ಥೀಮ್ 5 ಕಥೆಗಳಲ್ಲೂ ಕಾಮನ್ ಆಗಿದ್ದು, ಈ ಐದೂ ಕತೆಗಳ ಕೊನೆಯಲ್ಲಿ ಕಾಗೆಯೊಂದು ಕತೆಗಳಿಗೆ ಲಿಂಕ್ ಮಾಡುತ್ತ ಹೋಗುತ್ತದೆ. ಮಣಿಕಾಂತ್ ಕದ್ರಿ ಅವರ ಸಂಗೀತ, ಕಿರಣ್ ಹಂಪಾಪುರ, ಅಭಿಲಾಶ್ ಕಲ್ಲತ್ತಿ, ಗುರುಪ್ರಸಾದ್ ಅವರ ಛಾಯಾಗ್ರಹಣ, ವೆಂಕಟೇಶ್ ಯುವಿಡಿ ಅವರ ಸಂಕಲನ ಚಿತ್ರಕ್ಕಿದೆ.

    ಈ ಚಿತ್ರದಲ್ಲಿ ಹಿರಿಯನಟ ಪ್ರಕಾಶ್ ಬೆಳವಾಡಿ, ಪ್ರಮೋದ್ ಶೆಟ್ಟಿ, ಕೃತಿಕಾ ದೇಶಪಾಂಡೆ, ರವಿಶಂಕರ್, ಅನುಷಾ ರೈ, ವಂಶಿಕೃಷ್ಣ, ಅಪೂರ್ವ, ತನಿಶಾ, ಪ್ರೇರಣಾ ಕಂಬಂ, ಕಿರಣ್ ನಾಯಕ್, ಕಿಶೋರ್, ಕನ್ನಡಪರ ಹೋರಾಟಗಾರ ರೂಪೇಶ್ ರಾಜಣ್ಣ, ಅಶ್ವಿನಿ, ನಟ ಪೃಥ್ವಿ ಅಂಬರ್, ಬಿರಾದಾರ್ ಹಾಗೂ ಬಾಲನಟಿ ಆರಾಧ್ಯ ಹಾಗೂ ಇತರರು ಅಭಿನಯಿಸಿದ್ದಾರೆ.

  • ಬ್ಲೂಫಿಲ್ಮ್ ಮಾಡ್ತೀಯಾ ಅಂತ ಕೇಳಿದ ‘ಆ’ ನಟ: ಪೆಂಟಗನ್ ನಟಿಯ ಕಣ್ಣೀರು

    ಬ್ಲೂಫಿಲ್ಮ್ ಮಾಡ್ತೀಯಾ ಅಂತ ಕೇಳಿದ ‘ಆ’ ನಟ: ಪೆಂಟಗನ್ ನಟಿಯ ಕಣ್ಣೀರು

    ಕಿರುತೆರೆ ಮತ್ತು ಹಿರಿತೆರೆ ನಟಿ ತನಿಷಾ ಕುಪ್ಪಂಡ (Tanisha Kuppanda) ಪತ್ರಿಕಾಗೋಷ್ಠಿಯಲ್ಲಿ ಕಣ್ಣೀರು ಹಾಕಿದ್ದಾರೆ. ಗುರು ದೇಶಪಾಂಡೆ ಸಾರಥ್ಯದಲ್ಲಿ ಮೂಡಿ ಬಂದಿರುವ ಪೆಂಟಗನ್ ಸಿನಿಮಾದ ಒಂದು ಕಥೆಯಲ್ಲಿ ಬೋಲ್ಡ್ ಆಗಿ ನಟಿಸಿರುವ ಈ ನಟಿಗೆ ಅನೇಕ ರೀತಿಯಲ್ಲಿ ಕಿರುಕುಳ ಆಗಿದೆಯಂತೆ. ಮೊನ್ನೆಯಷ್ಟೇ ಯುಟ್ಯೂಬರ್ ಒಬ್ಬನ ಮೇಲೆ ಆರೋಪ ಮಾಡಿದ್ದ ತನಿಷಾ ನಿನ್ನೆ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಸೂಪರ್ ಹಿಟ್ ಸಿನಿಮಾದ ನಟನೊಬ್ಬನ ಮೇಲೆ ಗುರುತರ ಆರೋಪ ಮಾಡಿದ್ದಾರೆ.

    ಪೆಂಟಗನ್ (Pentagon) ಸಿನಿಮಾದ ಒಂದು ಕಥೆಯಲ್ಲಿ ತನಿಷಾ ಬೋಲ್ಡ್ ಆಗಿರುವಂಥ ಪಾತ್ರವನ್ನು ನಿರ್ವಹಿಸಿದ್ದಾರೆ. ಅದು ಡೇಟಿಂಗ್ ಆಪ್ ಕುರಿತಾದ ಕಥೆಯಾಗಿದ್ದರಿಂದ, ಪಾತ್ರವೇ ಡಿಮಾಂಡ್ ಮಾಡಿದ್ದರಿಂದ ಅಂಥದ್ದೊಂದು ಪಾತ್ರವನ್ನು ನಿರ್ವಹಿಸಿದ್ದೇನೆ ಎನ್ನುತ್ತಾರೆ. ಆದರೆ, ರಾಜಾಹುಲಿ ಅಂತಹ ಹಿಟ್ ಸಿನಿಮಾದಲ್ಲಿ ಯಶ್ ಗೆಳೆಯನ ಪಾತ್ರ ಮಾಡಿದ್ದ ನಟನೊಬ್ಬ ತನಿಷಾಗೆ ಬ್ಲೂಫಿಲ್ಮ್ ಮಾಡ್ತೀಯಾ ಎಂದು ಸೋಷಿಯಲ್ ಮೀಡಿಯಾ ಮೂಲಕ ಪ್ರಶ್ನೆ ಮಾಡಿದ್ದಾರಂತೆ. ಆ ನಟನ ಬಗ್ಗೆ ಮಾತನಾಡಿದ ತನಿಷಾ ಪತ್ರಿಕಾಗೋಷ್ಠಿಯಲ್ಲೇ ಕಣ್ಣೀರಿಟ್ಟಿದ್ದಾರೆ.

    ಪೆಂಟಗನ್ ಸಿನಿಮಾದಲ್ಲಿ ಒಟ್ಟು ಐದು ಕಥೆಗಳಿವೆ. ಕನ್ನಡದ ಪ್ರೇಮ, ಸಾಮಾಜಿಕ ಸಂದೇಶ ಹಾಗೂ ಮನರಂಜನೆ ನೀಡುವಂತಹ ಎಲ್ಲ ಅಂಶಗಳು ಇದ್ದರೂ, ಕೇವಲ ಒಂದೇ ಒಂದು ಕಥೆಯ ಬಗ್ಗೆ ಈ ರೀತಿ ಮಾತನಾಡುವುದು ಸರಿ ಅಲ್ಲ ಎನ್ನುವುದು ತನಿಷಾ ಮಾತು. ಐದು ಪ್ರತಿಭಾವಂತ ನಿರ್ದೇಶಕರು ಈ ಸಿನಿಮಾವನ್ನು ನಿರ್ದೇಶನ ಮಾಡಿದ್ದಾರೆ. ಅವರು ನನ್ನಿಂದ ಕೆಟ್ಟ ರೀತಿಯಲ್ಲಿ ಪಾತ್ರ ಮಾಡಲು ಸಾಧ್ಯವಾ ಎನ್ನುವುದು ಅವರ ಪ್ರಶ್ನೆ. ಇದನ್ನೂ ಓದಿ: ನಟಿ ನಗ್ಮಾ ಜೊತೆಗೆ ಯಾವುದೇ ಸಂಬಂಧ ಹೊಂದಿಲ್ಲ : ನಟ ರವಿಕಿಶನ್

    `ಮಂಗಳಗೌರಿ ಮದುವೆ’ (Mangala Gowri Maduve) ಸೀರಿಯಲ್‌ನಲ್ಲಿ ಖಡಕ್ ವಿಲನ್ ಆಗಿ ಮನಗೆದ್ದ ತನಿಷಾ ಕುಪ್ಪಂಡ (Tanisha Kuppanda) ಅವರು Pentagon ಸಿನಿಮಾದಲ್ಲಿ ಹಾಟ್ ಆಗಿ ಕಾಣಿಸಿಕೊಂಡಿದ್ದಾರೆ. ಸದ್ಯ ಸಿನಿಮಾ ಪ್ರಚಾರ ಕಾರ್ಯದಲ್ಲಿ ಬ್ಯುಸಿಯಿರುವ ನಟಿ ತನಿಷಾ ಮುಜುಗರದ ಸನ್ನಿವೇಶವೊಂದು ಎದುರಾಗಿದೆ. ಸಂದರ್ಶನವೊಂದರಲ್ಲಿ ಯೂಟ್ಯೂಬರ್ ಅಸಭ್ಯ ಪ್ರಶ್ನೆಗೆ ತನಿಷಾ ಖಡಕ್ ವಾರ್ನಿಂಗ್ ಕೊಟ್ಟಿದ್ದಾರೆ.

    ನೀವು ನೀಲಿ ಚಿತ್ರದಲ್ಲಿ ನಟಿಸಲು ಸಿದ್ಧವಿದ್ದೀರಾ? ಎಂದು ಓರ್ವ ಯೂಟ್ಯೂಬರ್ ಪ್ರಶ್ನೆ ಮಾಡಿದ್ದಾರೆ. ಆಗ ಸಿಟ್ಟಾದ ತನಿಷಾ ಕುಪ್ಪಂಡ ಹಾಗಿದ್ರೆ ನಾನು ಕನ್ನಡ ಸಿನಿಮಾ ಇಂಡಸ್ಟ್ರಿಯಲ್ಲಿ ಇರಬಾರದಿತ್ತು. ನೀಲಿ ಸಿನಿಮಾ ಇಂಡಸ್ಟ್ರಿಯಲ್ಲೇ ಇರಬೇಕಿತ್ತು. ಬೋಲ್ಡ್ ಆಗಿ ನಟಿಸಿದ್ದೀವಿ ಅಂದ ಮಾತ್ರಕ್ಕೆ. ಈ ತರಹ ಪ್ರಶ್ನೆ ಕೇಳೋದ್ರಲ್ಲಿ ಅರ್ಥವೇ ಇಲ್ಲ. ನೀಲಿ ಚಿತ್ರದ ತಾರೆಯರು ಬೆತ್ತಲಾಗುತ್ತಾರೆ. ನಾನು ನೀಲಿ ಚಿತ್ರದ ತಾರೆಯಲ್ಲ. ಯಾಕೆ ಈ ರೀತಿ ಪ್ರಶ್ನೆ ಮಾಡ್ತಿದ್ದೀರಾ.? ಪ್ರಶ್ನೆ ಮಾಡೋಕೂ ಮುನ್ನ ನಿಮಗೆ ಕಾಮನ್ ಸೆನ್ಸ್ ಇರಬೇಕು. ಕನ್ನಡ ಸಿನಿಮಾ ಇಂಡಸ್ಟ್ರಿಯಲ್ಲಿ ಯಾರು ಬೆತ್ತಲೆ ಸಿನಿಮಾ ಮಾಡ್ತಿದ್ದಾರೆ? ಯಾಕೆ ಈ ರೀತಿ ಅಸಭ್ಯವಾಗಿ ಪ್ರಶ್ನೆಯನ್ನ ಕೇಳುತ್ತಿದ್ದೀರಾ? ಎಂದು ಹೇಳಿ ಸಂದರ್ಶನವನ್ನ ಮೊಟಕುಗೊಳಿಸುತ್ತಾರೆ.

  • ಪೆಂಟಗನ್ ನಲ್ಲಿ ತನಿಷಾ ಬೋಲ್ಡ್ : ನೆಗೆಟಿವ್ ಕಾಮೆಂಟ್ ಕೇರ್ ಮಾಡಲ್ಲ ಎಂದ ನಟಿ

    ಪೆಂಟಗನ್ ನಲ್ಲಿ ತನಿಷಾ ಬೋಲ್ಡ್ : ನೆಗೆಟಿವ್ ಕಾಮೆಂಟ್ ಕೇರ್ ಮಾಡಲ್ಲ ಎಂದ ನಟಿ

    ಗುರು ದೇಶಪಾಂಡೆ ಸಾರಥ್ಯದಲ್ಲಿ ಮೂಡಿ ಬಂದಿರುವ ಪೆಂಟಗನ್ ಸಿನಿಮಾದ ಒಂದು ಕಥೆಯಲ್ಲಿ ನಟಿ ತನಿಷಾ ಕುಪ್ಪಂಡ ಸಖತ್ ಬೋಲ್ಡ್ ಆಗಿ ಕಾಣಿಸಿಕೊಂಡಿದ್ದಾರೆ. ನಾಯಕನ ಜೊತೆ ಲಿಪ್ ಲಾಕ್ ಮತ್ತು ಬ್ಯಾಕ್ ಲೆಸ್ ಕಾರಣದಿಂದಾಗಿಯೂ ಸುದ್ದಿಯಾಗಿದ್ದಾರೆ.  ಈ ಕುರಿತು ಅವರು ಮಾತನಾಡಿದ್ದು, ಈ ರೀತಿಯ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದು ನನಗೆ ಯಾವುದೇ ಮುಜಗರವಿಲ್ಲ. ಅಲ್ಲದೇ, ನೆಗೆಟಿವ್ ಕಾಮೆಂಟ್ ಗಳಿಗೆ ನಾನು ಕೇರ್ ಮಾಡುವುದಿಲ್ಲ ಎಂದಿದ್ದಾರೆ.

    `ಮಂಗಳಗೌರಿ ಮದುವೆ’ (Mangala Gowri Maduve) ಸೀರಿಯಲ್‌ನಲ್ಲಿ ಖಡಕ್ ವಿಲನ್ ಆಗಿ ಮನಗೆದ್ದ ತನಿಷಾ ಕುಪ್ಪಂಡ (Tanisha Kuppanda) ಅವರು Pentagon ಸಿನಿಮಾದಲ್ಲಿ ಹಾಟ್ ಆಗಿ ಕಾಣಿಸಿಕೊಂಡಿದ್ದಾರೆ. ಸದ್ಯ ಸಿನಿಮಾ ಪ್ರಚಾರ ಕಾರ್ಯದಲ್ಲಿ ಬ್ಯುಸಿಯಿರುವ ನಟಿ ತನಿಷಾ ಮುಜುಗರದ ಸನ್ನಿವೇಶವೊಂದು ಎದುರಾಗಿದೆ. ಸಂದರ್ಶನವೊಂದರಲ್ಲಿ ಯೂಟ್ಯೂಬರ್ ಅಸಭ್ಯ ಪ್ರಶ್ನೆಗೆ ತನಿಷಾ ಖಡಕ್ ವಾರ್ನಿಂಗ್ ಕೊಟ್ಟಿದ್ದಾರೆ. ಇದನ್ನೂ ಓದಿ:ಮಗ ಸತ್ತಾಗ ಆತ್ಮಸ್ಥೈರ್ಯ ತುಂಬಿ ಜೊತೆಯಾಗಿದ್ದು, ಪ್ರಭುದೇವ: ಪ್ರಕಾಶ್‌ ರಾಜ್‌

    ನೀವು ನೀಲಿ ಚಿತ್ರದಲ್ಲಿ ನಟಿಸಲು ಸಿದ್ಧವಿದ್ದೀರಾ? ಎಂದು ಓರ್ವ ಯೂಟ್ಯೂಬರ್ ಪ್ರಶ್ನೆ ಮಾಡಿದ್ದಾರೆ. ಆಗ ಸಿಟ್ಟಾದ ತನಿಷಾ ಕುಪ್ಪಂಡ ಹಾಗಿದ್ರೆ ನಾನು ಕನ್ನಡ ಸಿನಿಮಾ ಇಂಡಸ್ಟ್ರಿಯಲ್ಲಿ ಇರಬಾರದಿತ್ತು. ನೀಲಿ ಸಿನಿಮಾ ಇಂಡಸ್ಟ್ರಿಯಲ್ಲೇ ಇರಬೇಕಿತ್ತು. ಬೋಲ್ಡ್ ಆಗಿ ನಟಿಸಿದ್ದೀವಿ ಅಂದ ಮಾತ್ರಕ್ಕೆ. ಈ ತರಹ ಪ್ರಶ್ನೆ ಕೇಳೋದ್ರಲ್ಲಿ ಅರ್ಥವೇ ಇಲ್ಲ. ನೀಲಿ ಚಿತ್ರದ ತಾರೆಯರು ಬೆತ್ತಲಾಗುತ್ತಾರೆ. ನಾನು ನೀಲಿ ಚಿತ್ರದ ತಾರೆಯಲ್ಲ. ಯಾಕೆ ಈ ರೀತಿ ಪ್ರಶ್ನೆ ಮಾಡ್ತಿದ್ದೀರಾ.? ಪ್ರಶ್ನೆ ಮಾಡೋಕೂ ಮುನ್ನ ನಿಮಗೆ ಕಾಮನ್ ಸೆನ್ಸ್ ಇರಬೇಕು. ಕನ್ನಡ ಸಿನಿಮಾ ಇಂಡಸ್ಟ್ರಿಯಲ್ಲಿ ಯಾರು ಬೆತ್ತಲೆ ಸಿನಿಮಾ ಮಾಡ್ತಿದ್ದಾರೆ? ಯಾಕೆ ಈ ರೀತಿ ಅಸಭ್ಯವಾಗಿ ಪ್ರಶ್ನೆಯನ್ನ ಕೇಳುತ್ತಿದ್ದೀರಾ? ಎಂದು ಹೇಳಿ ಸಂದರ್ಶನವನ್ನ ಮೊಟಕುಗೊಳಿಸುತ್ತಾರೆ.

    ಇದೇ ವೇಳೆ ಯೂಟ್ಯೂಬರ್‌ನ `ಪೆಂಟಗನ್’ ಚಿತ್ರತಂಡ ತರಾಟೆಗೆ ತೆಗೆದುಕೊಂಡಿದೆ. ಯೂಟ್ಯೂಬರ್ ವಿರುದ್ಧ ನಟಿ ತನಿಷ ಕುಪ್ಪಂಡ ಮತ್ತು ಚಿತ್ರತಂಡ ಕಿಡಿಕಾರಿದೆ. ತಮ್ಮ ಆಕ್ರೋಶವನ್ನ ತನಿಷಾ ಕುಪ್ಪಂಡ ಹೊರಹಾಕಿದ್ದಾರೆ.

  • ಅನನ್ಯ ಭಟ್ ಕಂಠದಲ್ಲಿ ‘ಪೆಂಟಗನ್’ ಸಿನಿಮಾದ ಥೀಮ್ ಸಾಂಗ್ ರಿಲೀಸ್

    ಅನನ್ಯ ಭಟ್ ಕಂಠದಲ್ಲಿ ‘ಪೆಂಟಗನ್’ ಸಿನಿಮಾದ ಥೀಮ್ ಸಾಂಗ್ ರಿಲೀಸ್

    ಗುರು ದೇಶಪಾಂಡೆ (Guru Deshpande) ಸಾರಥ್ಯದಲ್ಲಿ ಮೂಡಿ ಬಂದ ‘ಪೆಂಟಗನ್’ ಸಿನಿಮಾದ ಥೀಮ್ ಸಾಂಗ್ (Theme Song) ಇಂದು ರಿಲೀಸ್ ಆಗಿದೆ. ಖ್ಯಾತ ಗಾಯಕಿ ಅನನ್ಯ ಭಟ್ (Ananya Bhatt) ಕಂಠಸಿರಿಯಲ್ಲಿ ಮೂಡಿ ಬಂದ ಗೀತೆಗೆ ಮಣಿಕಾಂತ್ ಕದ್ರಿ (Manikanth Kadri) ಸಂಗೀತ ಸಂಯೋಜನೆ ಮಾಡಿದ್ದಾರೆ. ನಿರ್ದೇಶಕ ರಾಘು ಶಿವಮೊಗ್ಗ (Raghu Shivamogga) ಸಾಹಿತ್ಯದಲ್ಲಿ ಈ ಹಾಡು ಮೂಡಿ ಬಂದಿದೆ. ಐದು ಕಥೆಗಳನ್ನು ಬೆಸೆಯುವಂತಹ ಮತ್ತು ಆ ಆಶಯವನ್ನು ಹಿಡಿದಿಡುವಂತಹ ಗೀತೆ ಇದಾಗಿದೆ.

    ಈಗಾಗಲೇ ಪೆಂಟಗನ್ (Pentagon) ಸಿನಿಮಾ ಟ್ರೈಲರ್ (Trailer) ರಿಲೀಸ್ ಆಗಿದ್ದು, ದಕ್ಷಿಣ ಭಾರತದ ಸಾಕಷ್ಟು ಕಲಾವಿದರು ಮತ್ತು ತಂತ್ರಜ್ಞರು ಟ್ರೈಲರ್ ಕುರಿತು ಮೆಚ್ಚುಗೆ ವ್ಯಕ್ತ ಪಡಿಸಿದ್ದಾರೆ. ಟ್ರೈಲರ್ ಲಿಂಕ್ ಅನ್ನು ಸೋಷಿಯಲ್ ಮೀಡಿಯಾಗಳಲ್ಲೂ ಹಂಚಿಕೊಂಡಿದ್ದಾರೆ. ಅದರಲ್ಲೂ ಕಾಂತಾರ ಖ್ಯಾತಿಯ ರಿಷಬ್ ಶೆಟ್ಟಿ (Rishabh Shetty), ತೆಲುಗಿನ ಖ್ಯಾತ ನಿರ್ದೇಶಕ ಅನಿಲ್ ರವಿಪುಡಿ (Anil Ravipudi), ನಿರ್ದೇಶಕರಾದ ತರುಣ್ ಸುಧೀರ್, ಶಶಾಂಕ್ ಸೇರಿದಂತೆ ಸಾಕಷ್ಟು ಸೆಲೆಬ್ರಿಟಿಗಳು ಮೆಚ್ಚುಗೆಯ ಮಾತುಗಳನ್ನು ಆಡಿದ್ದಾರೆ.

    ಐದು ಜನ ನಿರ್ದೇಶಕರು, ಐದು ಕಥೆಗಳು, ಐದು ಜನ ಬರಹಗಾರರು, ಐದು ಹೀರೋಗಳು ಹೀಗೆ ಐದೈದು ವಿಷಯಗಳನ್ನು ಪೆಂಟಗನ್ ಚಿತ್ರದಲ್ಲಿ ಹೇಳಲು ಹೊರಟಿದೆ ಚಿತ್ರತಂಡ. ಎಲ್ಲ ವಯಸ್ಸಿನವರಿಗೂ ಇಷ್ಟವಾಗುವಂತಹ ಕಥೆಗಳನ್ನು ಒಳಗೊಂಡಿರುವ ಸಿನಿಮಾ ಇದಾಗಿದ್ದು, ಚಿತ್ರದಲ್ಲಿ ಸಾಕಷ್ಟು ಪ್ರಯೋಗಗಳನ್ನು ಮಾಡಲಾಗಿದೆ ಎಂದಿದ್ದಾರೆ ಗುರು ದೇಶಪಾಂಡೆ.

    ಪ್ರತಿಭಾವಂತ ನಿರ್ದೇಶಕರುಗಳಾದ ರಾಘು ಶಿವಮೊಗ್ಗ, ಆಕಾಶ್ ಶ್ರೀವತ್ಸ, ಚಂದ್ರ ಮೋಹನ್, ಕಿರಣ್ ಕುಮಾರ್ ಹಾಗೂ ಮತ್ತೊಂದು ಕಥೆಗೆ ಗುರು ದೇಶಪಾಂಡೆ ಅವರೇ ನಿರ್ದೇಶನ ಮಾಡಿದ್ದಾರೆ. ಪ್ರಕಾಶ್ ಬೆಳವಾಡಿ, ಕಿಶೋರ್ (Kishore), ರವಿಶಂಕರ್ ಸೇರಿದಂತೆ ಹೆಸರಾಂತ ನಟರೇ ತಾರಾ ಬಳಗದಲ್ಲಿ ಇದ್ದಾರೆ. ಮಣಿಕಾಂತ್ ಕದ್ರಿ ಸಂಗೀತ ಸಂಯೋಜನೆಯಲ್ಲಿ ಮೂಡಿ ಬಂದ ಹಾಡುಗಳು ಜನರ ಗಮನ ಸೆಳೆದಿವೆ.

    ಇದು ಪ್ರಯೋಗಾತ್ಮಕ ಸಿನಿಮಾವಲ್ಲ, ಪಕ್ಕಾ ಕಮರ್ಷಿಯಲ್ ಚಿತ್ರ. ನೋಡುಗನಿಗೆ ಏನೆಲ್ಲ ಬೇಕಿದೆಯೋ ಎಲ್ಲವನ್ನೂ ಈ ಸಿನಿಮಾದಲ್ಲಿ ತೋರಿಸುವ ಪ್ರಯತ್ನ ಮಾಡಿದ್ದೇವೆ. ಹೊಸ ಆಲೋಚನೆಯ ನಿರ್ದೇಶಕರು, ಬರಹಗಾರರು ಮತ್ತು ಹೊಸ ಕಲಾವಿದರು ಕೂಡ ಸಿನಿಮಾದ ಭಾಗವಾಗಿದ್ದಾರೆ. ಹಾಗಾಗಿ ಪ್ರೇಕ್ಷಕರಿಗೆ ಈ ಸಿನಿಮಾ ಹೊಸ ಅನುಭವನ್ನು ನೀಡಲಿದೆ ಎನ್ನುತ್ತಾರೆ ಗುರು ದೇಶಪಾಂಡೆ.

  • ‘ಪೆಂಟಗನ್’ ಟ್ರೈಲರ್ ಮೆಚ್ಚಿಕೊಂಡ ಟಾಪ್ ಸೆಲೆಬ್ರಿಟಿಸ್

    ‘ಪೆಂಟಗನ್’ ಟ್ರೈಲರ್ ಮೆಚ್ಚಿಕೊಂಡ ಟಾಪ್ ಸೆಲೆಬ್ರಿಟಿಸ್

    ನಿರ್ದೇಶಕ ಗುರು ದೇಶಪಾಂಡೆ (Guru Deshpande) ಪ್ರಧಾನ ನೇತೃತ್ವದಲ್ಲಿ ಮೂಡಿ ಬಂದಿರುವ ಪೆಂಟಗನ್ (Pentagon) ಸಿನಿಮಾ ಟ್ರೈಲರ್ (Trailer) ರಿಲೀಸ್ ಆಗಿದ್ದು, ದಕ್ಷಿಣ ಭಾರತದ ಸಾಕಷ್ಟು ಕಲಾವಿದರು ಮತ್ತು ತಂತ್ರಜ್ಞರು ಟ್ರೈಲರ್ ಕುರಿತು ಮೆಚ್ಚುಗೆ ವ್ಯಕ್ತ ಪಡಿಸಿದ್ದಾರೆ. ಟ್ರೈಲರ್ ಲಿಂಕ್ ಅನ್ನು ಸೋಷಿಯಲ್ ಮೀಡಿಯಾಗಳಲ್ಲೂ ಹಂಚಿಕೊಂಡಿದ್ದಾರೆ. ಅದರಲ್ಲೂ ಕಾಂತಾರ ಖ್ಯಾತಿಯ ರಿಷಬ್ ಶೆಟ್ಟಿ (Rishabh Shetty), ತೆಲುಗಿನ ಖ್ಯಾತ ನಿರ್ದೇಶಕ ಅನಿಲ್ ರವಿಪುಡಿ (Anil Ravipudi), ನಿರ್ದೇಶಕರಾದ ತರುಣ್ ಸುಧೀರ್, ಶಶಾಂಕ್ ಸೇರಿದಂತೆ ಸಾಕಷ್ಟು ಸೆಲೆಬ್ರಿಟಿಗಳು ಮೆಚ್ಚುಗೆಯ ಮಾತುಗಳನ್ನು ಆಡಿದ್ದಾರೆ.

    ಐದು ಜನ ನಿರ್ದೇಶಕರು, ಐದು ಕಥೆಗಳು, ಐದು ಜನ ಬರಹಗಾರರು, ಐದು ಹೀರೋಗಳು ಹೀಗೆ ಐದೈದು ವಿಷಯಗಳನ್ನು ಪೆಂಟಗನ್ ಚಿತ್ರದಲ್ಲಿ ಹೇಳಲು ಹೊರಟಿದೆ ಚಿತ್ರತಂಡ. ಎಲ್ಲ ವಯಸ್ಸಿನವರಿಗೂ ಇಷ್ಟವಾಗುವಂತಹ ಕಥೆಗಳನ್ನು ಒಳಗೊಂಡಿರುವ ಸಿನಿಮಾ ಇದಾಗಿದ್ದು, ಚಿತ್ರದಲ್ಲಿ ಸಾಕಷ್ಟು ಪ್ರಯೋಗಗಳನ್ನು ಮಾಡಲಾಗಿದೆ ಎಂದಿದ್ದಾರೆ ಗುರು ದೇಶಪಾಂಡೆ.

    ಪ್ರತಿಭಾವಂತ ನಿರ್ದೇಶಕರುಗಳಾದ ರಾಘು ಶಿವಮೊಗ್ಗ, ಆಕಾಶ್ ಶ್ರೀವತ್ಸ, ಚಂದ್ರ ಮೋಹನ್, ಕಿರಣ್ ಕುಮಾರ್ ಹಾಗೂ ಮತ್ತೊಂದು ಕಥೆಗೆ ಗುರು ದೇಶಪಾಂಡೆ ಅವರೇ ನಿರ್ದೇಶನ ಮಾಡಿದ್ದಾರೆ. ಪ್ರಕಾಶ್ ಬೆಳವಾಡಿ, ಕಿಶೋರ್ (Kishore), ರವಿಶಂಕರ್ ಸೇರಿದಂತೆ ಹೆಸರಾಂತ ನಟರೇ ತಾರಾ ಬಳಗದಲ್ಲಿ ಇದ್ದಾರೆ. ಮಣಿಕಾಂತ್ ಕದ್ರಿ ಸಂಗೀತ ಸಂಯೋಜನೆಯಲ್ಲಿ ಮೂಡಿ ಬಂದ ಹಾಡುಗಳು ಜನರ ಗಮನ ಸೆಳೆದಿವೆ.

    ಇದು ಪ್ರಯೋಗಾತ್ಮಕ ಸಿನಿಮಾವಲ್ಲ, ಪಕ್ಕಾ ಕಮರ್ಷಿಯಲ್ ಚಿತ್ರ. ನೋಡುಗನಿಗೆ ಏನೆಲ್ಲ ಬೇಕಿದೆಯೋ ಎಲ್ಲವನ್ನೂ ಈ ಸಿನಿಮಾದಲ್ಲಿ ತೋರಿಸುವ ಪ್ರಯತ್ನ ಮಾಡಿದ್ದೇವೆ. ಹೊಸ ಆಲೋಚನೆಯ ನಿರ್ದೇಶಕರು, ಬರಹಗಾರರು ಮತ್ತು ಹೊಸ ಕಲಾವಿದರು ಕೂಡ ಸಿನಿಮಾದ ಭಾಗವಾಗಿದ್ದಾರೆ. ಹಾಗಾಗಿ ಪ್ರೇಕ್ಷಕರಿಗೆ ಈ ಸಿನಿಮಾ ಹೊಸ ಅನುಭವನ್ನು ನೀಡಲಿದೆ ಎನ್ನುತ್ತಾರೆ ಗುರು ದೇಶಪಾಂಡೆ.

  • ಐದು ನಿರ್ದೇಶಕರ ಹೊಸಬಗೆಯ ‘ಪೆಂಟಗನ್’ ಸಿನಿಮಾದ ರಿಲೀಸ್ ಡೇಟ್ ಫಿಕ್ಸ್

    ಐದು ನಿರ್ದೇಶಕರ ಹೊಸಬಗೆಯ ‘ಪೆಂಟಗನ್’ ಸಿನಿಮಾದ ರಿಲೀಸ್ ಡೇಟ್ ಫಿಕ್ಸ್

    ನ್ನಡದ ಪ್ರಯೋಗಾತ್ಮಕ ಹಾಗೂ ನಿರೀಕ್ಷಿತ ಸಿನಿಮಾಗಳಲ್ಲಿ ಒಂದಾದ ‘ಪೆಂಟಗನ್’ (Pentagon) ಚಿತ್ರದ ಬಿಡುಗಡೆ ದಿನಾಂಕ (Release) ಘೋಷಣೆಯಾಗಿದೆ. ಏಪ್ರಿಲ್ 7 ರಂದು ದೇಶಾದ್ಯಂತ ಈ ಸಿನಿಮಾವನ್ನು ಬಿಡುಗಡೆ ಮಾಡುವುದಾಗಿ ಚಿತ್ರದ ಕ್ರಿಯೇಟಿವ್ ಡೈರೆಕ್ಟರ್ ಗುರು ದೇಶಪಾಂಡೆ (Guru Deshpande) ಸೋಷಿಯಲ್ ಮೀಡಿಯಾದಲ್ಲಿ ಈ ವಿಷಯವನ್ನು ಹಂಚಿಕೊಂಡಿದ್ದಾರೆ.

    ಐದು ಜನ ನಿರ್ದೇಶಕರು, ಐದು ಕಥೆಗಳು, ಐದು ಜನ ಬರಹಗಾರರು, ಐದು ಹೀರೋಗಳು ಹೀಗೆ ಐದೈದು ವಿಷಯಗಳನ್ನು ಪೆಂಟಗನ್ ಚಿತ್ರದಲ್ಲಿ ಹೇಳಲು ಹೊರಟಿದೆ ಚಿತ್ರತಂಡ. ಎಲ್ಲ ವಯಸ್ಸಿನವರಿಗೂ ಇಷ್ಟವಾಗುವಂತಹ ಕಥೆಗಳನ್ನು ಒಳಗೊಂಡಿರುವ ಸಿನಿಮಾ ಇದಾಗಿದ್ದು, ಚಿತ್ರದಲ್ಲಿ ಸಾಕಷ್ಟು ಪ್ರಯೋಗಗಳನ್ನು ಮಾಡಲಾಗಿದೆ ಎಂದಿದ್ದಾರೆ ಗುರು ದೇಶಪಾಂಡೆ. ಹಾಗಾಗಿ ಸಿನಿಮಾ ಟ್ರೈಲರ್ ಬಿಡುಗಡೆಯಾದ ದಿನದಿಂದ ನಿರೀಕ್ಷೆ ಮೂಡಿಸಿದೆ. ಇದನ್ನೂ ಓದಿ: ಪವನ್ ಕಲ್ಯಾಣ್‌ಗೆ ಆ್ಯಕ್ಷನ್ ಕಟ್ ಹೇಳಲಿದ್ದಾರೆ ಆರ್.ಚಂದ್ರು

    ಪ್ರತಿಭಾವಂತ ನಿರ್ದೇಶಕರುಗಳಾದ ರಾಘು ಶಿವಮೊಗ್ಗ, ಆಕಾಶ್ ಶ್ರೀವತ್ಸ, ಚಂದ್ರ ಮೋಹನ್, ಕಿರಣ್ ಕುಮಾರ್ ಹಾಗೂ ಮತ್ತೊಂದು ಕಥೆಗೆ ಗುರು ದೇಶಪಾಂಡೆ ಅವರೇ ನಿರ್ದೇಶನ ಮಾಡಿದ್ದಾರೆ. ಪ್ರಕಾಶ್ ಬೆಳವಾಡಿ, ಕಿಶೋರ್ (Kishore), ರವಿಶಂಕರ್ ಸೇರಿದಂತೆ ಹೆಸರಾಂತ ನಟರೇ ತಾರಾ ಬಳಗದಲ್ಲಿ ಇದ್ದಾರೆ. ಮಣಿಕಾಂತ್ ಕದ್ರಿ ಸಂಗೀತ ಸಂಯೋಜನೆಯಲ್ಲಿ ಮೂಡಿ ಬಂದ ಹಾಡುಗಳು ಜನರ ಗಮನ ಸೆಳೆದಿವೆ.

    ಇದು ಪ್ರಯೋಗಾತ್ಮಕ ಸಿನಿಮಾವಲ್ಲ, ಪಕ್ಕಾ ಕಮರ್ಷಿಯಲ್ ಚಿತ್ರ. ನೋಡುಗನಿಗೆ ಏನೆಲ್ಲ ಬೇಕಿದೆಯೋ ಎಲ್ಲವನ್ನೂ ಈ ಸಿನಿಮಾದಲ್ಲಿ ತೋರಿಸುವ ಪ್ರಯತ್ನ ಮಾಡಿದ್ದೇವೆ. ಹೊಸ ಆಲೋಚನೆಯ ನಿರ್ದೇಶಕರು, ಬರಹಗಾರರು ಮತ್ತು ಹೊಸ ಕಲಾವಿದರು ಕೂಡ ಸಿನಿಮಾದ ಭಾಗವಾಗಿದ್ದಾರೆ. ಹಾಗಾಗಿ ಪ್ರೇಕ್ಷಕರಿಗೆ ಈ ಸಿನಿಮಾ ಹೊಸ ಅನುಭವನ್ನು ನೀಡಲಿದೆ ಎನ್ನುತ್ತಾರೆ ಗುರು ದೇಶಪಾಂಡೆ.

  • ಪಡ್ಡೆಗಳ ಮೈಬಿಸಿ ಹೆಚ್ಚಿಸುವ ‘ಪೆಂಟಗನ್’ ಚಿತ್ರದ  ವಿಡಿಯೋ ಸಾಂಗ್

    ಪಡ್ಡೆಗಳ ಮೈಬಿಸಿ ಹೆಚ್ಚಿಸುವ ‘ಪೆಂಟಗನ್’ ಚಿತ್ರದ ವಿಡಿಯೋ ಸಾಂಗ್

    ದು ಕಥೆಗಳನ್ನು ಒಳಗೊಂಡ, ಐವರು ನಿರ್ದೇಶಕರು ನಿರ್ದೇಶನ ಮಾಡಿರುವ ‘ಪೆಂಟಗನ್’ (Pentagon) ಸಿನಿಮಾದ 5 ನೇ ಕಥೆಯ ಟೀಸರ್ ಈಗಾಗಲೇ ಬಿಡುಗಡೆಯಾಗಿ ಸದ್ದು ಮಾಡಿದ್ದು, ಸಾಕಷ್ಟು ಚರ್ಚೆ  ಕೂಡ ಆಗಿದೆ. ಇದೀಗ ಈ ಚಿದ್ರದಲ್ಲಿನ ಮೂರನೇ ಕಥೆಯ ‘ಕಾಮನಬಿಲ್ಲು ಮೂಡುತಿದೆ ‘ ಲಿರಿಕಲ್ ವಿಡಿಯೋ ಸಾಂಗ್ ಬಿಡುಗಡೆಯಾಗಿದೆ. ಉತ್ತಮ ಪ್ರತಿಕ್ರಿಯೆ ಕೂಡ ವ್ಯಕ್ತವಾಗಿದೆ

    ಪೆಂಟಗನ್ ಸಿನಿಮಾದ ಈ ಕಥೆಯಲ್ಲಿ ಸಾಮಾಜಿಕ ಜಾಲತಾಣದ ಮೋಸ, ಅಪರಾಧ ಜಗತ್ತು, ಯವ ಪೀಳಿಗೆಯ ಭವಿಷ್ಯದ ಕುರಿತು ಬೆಳಕು ಚೆಲ್ಲುವ ಕಥೆಯಿದು. ರಾಘು ಶಿವಮೊಗ್ಗ (Raghu Shivamogga) ನಿರ್ದೇಶನದಲ್ಲಿ ಈ ಅಧ್ಯಾಯದ ಮುಖ್ಯ ಭೂಮಿಕೆಯಲ್ಲಿ ಪ್ರಕಾಶ್ ಬೆಳವಾಡಿ, ತನಿಷಾ ಕುಪ್ಪಂದ, ಪ್ರೇರಣಾ,ಸಾಗರ್,ರಾಕೇಶ ಇನ್ನು ಹಲವರು ಕಾಣಿಸಿಕೊಂಡಿದ್ದಾರೆ. ಇದನ್ನೂ ಓದಿ: ದಾಂಪತ್ಯ ಜೀವನಕ್ಕೆ ಕಾಲಿಟ್ಟ `ಸತ್ಯ’ ಸೀರಿಯಲ್ ನಟ ಸೀರುಂಡೆ ರಘು

    ಈ ಅಧ್ಯಾಯಕ್ಕೆ ಕಿರಣ್ ಹಂಪಾಪುರ ಸಿನಿಮಾಟೋಗ್ರಫಿ ಮಾಡಿದ್ದು, ಮಣಿಕಾಂತ್ ಕದ್ರಿ ಅವರ ಸಂಗೀತ ಸಂಯೋಜನೆಯಿದೆ. ಸಾಹಿತ್ಯ ನಾಗಾರ್ಜುನ ಶರ್ಮಾ, ಸಂಕಲನ ವೆಂಕಟೇಶ ಯುಡಿವಿ, ಸಂತೋಷ ವೆಂಕಿ ಮತ್ತು ಇಂಚರ ರಾವ್ ಅವರ ಕಂಠದಲ್ಲಿ ಹಾಡು ಮೂಡಿ ಬಂದಿದೆ. ಪೆಂಟಗನ್ ಸಿನಿಮಾದಲ್ಲಿ ಒಟ್ಟು ಐದು ಕಥೆಗಳಿದ್ದು, ಆಕಾಶ್ ಶ್ರೀವತ್ಸ (ಶಿವಾಜಿ ಸುರತ್ಕಲ್) ಚಂದ್ರಮೋಹನ್ (ಬ್ರಹ್ಮಚಾರಿ), ರಾಘು ಶಿವಮೊಗ್ಗ (ಚೂರಿಕಟ್ಟೆ), ಕಿರಣ್ ಕುಮಾರ್  ಹಾಗೂ ಗುರು ದೇಶಪಾಂಡೆ ತಲಾ ಒಂದೊಂದು ಕಥೆಯನ್ನು ನಿರ್ದೇಶನ ಮಾಡಿದ್ದಾರೆ.

    ಜಿ ಸಿನಿಮಾಸ್ ಬ್ಯಾನರ್ ನಲ್ಲಿ ಮೂಡಿ ಬಂದಿರುವ ಈ ಸಿನಿಮಾಗೆ ಕ್ರಿಯೇಟಿವ್ ಹೆಡ್ ಮತ್ತು ನಿರ್ಮಾಪಕರು ಗುರು ದೇಶಪಾಂಡೆ (Guru Deshpande).  ಸಾಂಗ್  ರಿಲೀಸ್ ಮಾಡಿ, ಮುಂದಿನ ದಿನಗಳಲ್ಲಿ ಸಿನಿಮಾ ಬಿಡುಗಡೆಯ ದಿನಾಂಕವನ್ನು ಘೋಷಿಸಲಿದೆ.

  • ‘ಪೆಂಟಗನ್’ ಸಿನಿಮಾದ 3ನೇ ಕಥೆಯ ಲಿರಿಕಲ್ ವಿಡಿಯೋ ಸಾಂಗ್ ರಿಲೀಸ್

    ‘ಪೆಂಟಗನ್’ ಸಿನಿಮಾದ 3ನೇ ಕಥೆಯ ಲಿರಿಕಲ್ ವಿಡಿಯೋ ಸಾಂಗ್ ರಿಲೀಸ್

    ದು ಕಥೆಗಳನ್ನು ಒಳಗೊಂಡ, ಐವರು ನಿರ್ದೇಶಕರು ನಿರ್ದೇಶನ ಮಾಡಿರುವ ಪೆಂಟಗನ್ ಸಿನಿಮಾದ 5 ನೇ ಕಥೆಯ ಟೀಸರ್ ಈಗಾಗಲೇ ಬಿಡುಗಡೆಯಾಗಿ ಸದ್ದು ಮಾಡಿದ್ದು, ಸಾಕಷ್ಟು ಚರ್ಚೆ  ಕೂಡ ಆಗಿದೆ. ಇದೀಗ ಈ ಚಿದ್ರದಲ್ಲಿನ ಮೂರನೇ ಕಥೆಯ ‘ಬಾ ಹೊರಗೆ ಬಾ ‘ ಲಿರಿಕಲ್ ವಿಡಿಯೋ ಸಾಂಗ್ ಅನ್ನು ಪೆಬ್ರವರಿ 22 ರಂದು ಸಂಜೆ 4 ಗಂಟೆಗೆ ಶ್ರೀ ರೇಣುಕಾಂಬ ಸ್ಟುಡಿಯೋದಲ್ಲಿ ಬಿಡುಗಡೆ ಮಾಡಲಾಗುತ್ತಿದೆ. ಪೆಂಟಗನ್ ಸಿನಿಮಾದ ಈ ಕಥೆಯಲ್ಲಿ ಸಾಮಾಜಿಕ ಜಾಲತಾಣದ ಮೋಸ, ಅಪರಾಧ ಜಗತ್ತು, ಯವ ಪೀಳಿಗೆಯ ಭವಿಷ್ಯದ ಕುರಿತು ಬೆಳಕು ಚೆಲ್ಲುವ ಕಥೆಯಿದು.

    ರಾಘು ಶಿವಮೊಗ್ಗ ನಿರ್ದೇಶನದಲ್ಲಿ ಈ ಅಧ್ಯಾಯದ ಮುಖ್ಯ ಭೂಮಿಕೆಯಲ್ಲಿ ಪ್ರಕಾಶ್ ಬೆಳವಾಡಿ, ತನಿಷಾ ಕುಪ್ಪಂದ, ಪ್ರೇರಣಾ,ಸಾಗರ್,ರಾಕೇಶ ಇನ್ನು ಹಲವರು ಕಾಣಿಸಿಕೊಂಡಿದ್ದಾರೆ. ಈ ಅಧ್ಯಾಯಕ್ಕೆ ಕಿರಣ್ ಹಂಪಾಪುರ ಸಿನಿಮಾಟೋಗ್ರಫಿ ಮಾಡಿದ್ದು, ಮಣಿಕಾಂತ್ ಕದ್ರಿ ಅವರ ಸಂಗೀತ ಸಂಯೋಜನೆಯಿದೆ. ಸಾಹಿತ್ಯ ರಾಘು ಶಿವಮೊಗ್ಗ, ಸಂಕಲನ ವೆಂಕಟೇಶ ಯುಡಿವಿ, ವ್ಯಾಸರಾಜ್ ಸೋಸಲೆ ಅವರ ಕಂಠದಲ್ಲಿ ಹಾಡು ಮೂಡಿ ಬಂದಿದೆ. ಪೆಂಟಗನ್ ಸಿನಿಮಾದಲ್ಲಿ ಒಟ್ಟು ಐದು ಕಥೆಗಳಿದ್ದು, ಆಕಾಶ್ ಶ್ರೀವತ್ಸ (ಶಿವಾಜಿ ಸುರತ್ಕಲ್) ಚಂದ್ರಮೋಹನ್ (ಬ್ರಹ್ಮಚಾರಿ), ರಾಘು ಶಿವಮೊಗ್ಗ (ಚೂರಿಕಟ್ಟೆ), ಕಿರಣ್ ಕುಮಾರ್ (Debut) ಹಾಗೂ ಗುರು ದೇಶಪಾಂಡೆ ತಲಾ ಒಂದೊಂದು ಕಥೆಯನ್ನು ನಿರ್ದೇಶನ ಮಾಡಿದ್ದಾರೆ. ಜಿ ಸಿನಿಮಾಸ್ ಬ್ಯಾನರ್ ನಲ್ಲಿ ಮೂಡಿ ಬಂದಿರುವ ಈ ಸಿನಿಮಾಗೆ ಕ್ರಿಯೇಟಿವ್ ಹೆಡ್ ಮತ್ತು ನಿರ್ಮಾಪಕರು ಗುರು ದೇಶಪಾಂಡೆ.

    ತಮ್ಮ ಬ್ಯಾನರ್ ಅಡಿಯಲ್ಲಿ ಈಗಾಗಲೇ ಅನೇಕ ನಿರ್ದೇಶಕರನ್ನು ಪರಿಚಯಿಸಿರುವ ಗುರು ದೇಶಪಾಂಡೆ, ಜಂಟಲ್ ಮನ್ ಮೂಲಕ ಜಡೇಶ್ ಹಂಪಿ, ಲವ್ ಯೂ ರಚ್ಚು ಮೂಲಕ ಶಂಕರ್ ಅವರನ್ನು ಸಿನಿಮಾ ರಂಗಕ್ಕೆ ನಿರ್ದೇಶಕರಾಗಿ ಪರಿಚಯಿಸಿದ್ದಾರೆ. ರಾಜಾ ಹುಲಿ ಹಾಗೂ ಜಾನ್ ಜಾನಿ ಜನಾರ್ದನ್ ಗಳಂತ ಚಿತ್ರಗಳ ನಿರ್ದೇಶಕರಾದ ಗುರು ದೇಶಪಾಂಡೆ ಮೂರು ವರ್ಷಗಳ ನಂತರ ಮತ್ತೆ ನಿರ್ದೇಶನಕ್ಕೆ ಮರಳಿದ್ದಾರೆ. ಇದನ್ನೂ ಓದಿ:ಸೀರೆಯುಟ್ಟು ಮಿಂಚಿದ `ವಜ್ರಕಾಯ’ ನಟಿ ನಭಾ ನಟೇಶ್

    ತಮ್ಮ ಬ್ಯಾನರ್ ಬಗ್ಗೆ ಗುರು ದೇಶಪಾಂಡೆ, “ನಮ್ಮ ಜಿ ಸಿನಿಮಾಸ್ ಕೇವಲ ಮನರಂಜನೆಯ ಸಿನಿಮಾಗಳನ್ನು ಮಾತ್ರ ಮಾಡದೇ, ಚಿಂತನೆ- ಪ್ರಚೋದನೆ ಹಾಗೂ ಪ್ರಚಲಿತ ವಿಷಯಗಳನ್ನು ಸಿನಿಮಾವಾಗಿಸುವ ಪ್ರಯತ್ನಗಳನ್ನು ಮಾಡುತ್ತಿದೆ. ಈಗಾಗಲೇ ಹಲವು ನಿರ್ದೇಶಕರನ್ನು, ತಂತ್ರಜ್ಞರನ್ನು ಮತ್ತು ಹೊಸ ಹೊಸ ಕಲಾವಿದರನ್ನು ಸಿನಿಮಾ ರಂಗಕ್ಕೆ ಪರಿಚಯಿಸಿದೆ. ಪೆಂಟಗನ್ ಸಿನಿಮಾದಲ್ಲೂ ಇದನ್ನು ಮುಂದುವರೆಸಿದೆ,” ಎನ್ನುತ್ತಾರೆ. ಪೆಭ್ರವರಿ 22 ರಂದು ಸಾಂಗ್  ರಿಲೀಸ್ ಮಾಡಿ, ಮುಂದಿನ ದಿನಗಳಲ್ಲಿ ಸಿನಿಮಾ ಬಿಡುಗಡೆಗೆ  ತಯಾರಿಯಲ್ಲಿ ಚಿತ್ರತಂಡ ತೊಡಗಿಕೊಳ್ಳಲಿದೆ.

    LIVE TV
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k