Tag: PES University

  • ಸರ್ಕಾರವೇ ಎಲ್ಲವನ್ನೂ ಮಾಡುವುದು ಕಷ್ಟವಾಗಬಹುದು: ಶರಣಪ್ರಕಾಶ್ ಪಾಟೀಲ್‌

    ಸರ್ಕಾರವೇ ಎಲ್ಲವನ್ನೂ ಮಾಡುವುದು ಕಷ್ಟವಾಗಬಹುದು: ಶರಣಪ್ರಕಾಶ್ ಪಾಟೀಲ್‌

    – ಯಶಸ್ವಿ ಕೈಗಾರಿಕೆ ಸಂಸ್ಥೆಗಳ ಮಾದರಿಯನ್ನು ಸರ್ಕಾರ ಕೂಡ ಅಳವಡಿಸಿಕೊಳ್ಳಬಹುದು
    – ಪಿಇಎಸ್‌ ವಿವಿಯಲ್ಲಿ ನಡೆದ ಕಾರ್ಯಕ್ರಮ

    ಬೆಂಗಳೂರು: ಸರ್ಕಾರವೇ ಎಲ್ಲವನ್ನೂ ಮಾಡುವುದು ಕಷ್ಟವಾಗಬಹುದು. ಯಶಸ್ವಿ ಕೈಗಾರಿಕಾ ಮಾದರಿಗಳಿಂದ ನಾವು ಕೂಡ ಕಲಿಯಬಹುದು.ಕೈಗಾರಿಕೆ ಸಂಸ್ಥೆಗಳು ನೀಡುವ ತರಬೇತಿಯನ್ನು ಶಿಕ್ಷಣಕ್ಕೆ ಮತ್ತು ಉದ್ಯೋಗಾವಕಾಶಗಳೊಂದಿಗೆ ಹೇಗೆ ಮಿಳಿತಗೊಳಿಸಬಹುದು ಎಂಬುದನ್ನು ನಾವು ಅಳವಡಿಸಿಕೊಳ್ಳಬೇಕು ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಜೀವನೋಪಾಯ ಮತ್ತು ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಶರಣ ಪ್ರಕಾಶ್ ಆರ್. ಪಾಟೀಲ್‌ (Sharanprakash R Patil) ತಿಳಿಸಿದರು.

    ಪಿಇಎಸ್ ವಿಶ್ವವಿದ್ಯಾಲಯದಲ್ಲಿ (PES University) ಬಜಾಜ್ ಎಂಜಿನಿಯರಿಂಗ್ ಕೌಶಲ್ಯ ತರಬೇತಿ (ಬೆಸ್ಟ್) ಕೇಂದ್ರದ ಮೊದಲ ವಾರ್ಷಿಕೋತ್ಸವ ಸಮಾರಂಭದಲ್ಲಿ ಭಾಷಣ ಮಾಡಿದ ಸಚಿವರು, ಕೌಶಲ್ಯಾಭಿವೃದ್ಧಿಗೆ ಹೆಚ್ಚು ಒತ್ತು ನೀಡಲು ಹಾಗೂ ಯುವಕರನ್ನು ಸಬಲೀಕರಣಗೊಳಿಸಲು ಸಹಯೋಗದ ಪ್ರಯತ್ನಗಳಗೆ ಆದ್ಯತೆ ನೀಡಲಾಗುವುದು ಎಂದರು.

    ಈ ಯೋಜನೆಯು ವಿಶೇಷವಾಗಿ ಕಲ್ಯಾಣ ಮತ್ತು ಕಿತ್ತೂರು ಕರ್ನಾಟಕದ ವಿದ್ಯಾರ್ಥಿಗಳಿಗೆ ಸಾಕಷ್ಟು ಪ್ರಯೋಗವಾಗುತ್ತದೆ. ಮಹತ್ವಾಕಾಂಕ್ಷೆಯ ಜಿಲ್ಲೆಗಳ ಯುವಕರನ್ನು ಉನ್ನತೀಕರಿಸುವ ಮಾದರಿಯಾಗಿದೆ ಎಂದು ತಿಳಿಸಿದರು.  ಇದನ್ನೂ ಓದಿ: ಉಡುಪಿ | ಅಲೆಗಳ ಅಬ್ಬರಕ್ಕೆ ಮಗುಚಿದ ದೋಣಿ ಮೀನುಗಾರ ಸಾವು

     

    ಕೌಶಲ್ಯ ಅಭಿವೃದ್ಧಿ ಮತ್ತು ಉದ್ಯೋಗ ಗುರಿಗಳನ್ನು ಸಾಧಿಸಲು ಬಲವಾದ ಸರ್ಕಾರಿ-ಶೈಕ್ಷಣಿಕ-ಉದ್ಯಮ ಪಾಲುದಾರಿಕೆಯನ್ನು ನಾವು ಇನ್ನಷ್ಟು ಅನ್ವೇಷಿಸಬೇಕಾಗಿದೆ ಎಂದು ಸಚಿವರು ತಿಳಿಸಿದರು.

    ಬಜಾಜ್ ಆಟೋ ಮತ್ತು ಪಿಇಎಸ್ ವಿಶ್ವವಿದ್ಯಾಲಯದ ನಡುವಿನ ಈ ಸಹಯೋಗವು ಸಾರ್ವಜನಿಕ-ಖಾಸಗಿ ಸಹಭಾಗಿತ್ವಕ್ಕೆ ಅತ್ಯುತ್ತಮ ಉದಾಹರಣೆಯಾಗಿದೆ. ಶೈಕ್ಷಣಿಕ ಕ್ಷೇತ್ರದ ಬಲವು ಉದ್ಯಮದ ನಿಖರತೆಗೆ ಪೂರಕವಾಗಿದೆ. ವಿಶೇಷವಾಗಿ ಕರ್ನಾಟಕದ ಸೌಲಭ್ಯ ವಂಚಿತ ಪ್ರದೇಶಗಳ ಯುವಕರನ್ನು ಸಬಲೀಕರಣಗೊಳಿಸುವುದು ಪ್ರೋತ್ಸಾಹದಾಯಕ ಕ್ರಮವಾಗಬಾರದು. ಅದು ನಮ್ಮ ಭವಿಷ್ಯದ ಕಾರ್ಯತಂತ್ರದ ಭಾಗವಾಗಿರಬೇಕು ಎಂದು ಡಾ. ಪಾಟೀಲ್‌ ಹೇಳಿದರು.  ಇದನ್ನೂ ಓದಿ: ತಪ್ಪಿದ ಭಾರಿ ಅನಾಹುತ: ಆಯತಪ್ಪಿ ಬಿದ್ದ ನಟಿ

    320 ವಿದ್ಯಾರ್ಥಿಗಳಿಗೆ ತರಬೇತಿ
    ಬಜಾಜ್ ಆಟೋ ಲಿಮಿಟೆಡ್‌ನ ಸಿಎಸ್‌ಆರ್ ಉಪಕ್ರಮವಾದ ಪಿಇಎಸ್ ವಿಶ್ವವಿದ್ಯಾಲಯದ ಬೆಸ್ಟ್ ಕೇಂದ್ರವು ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಮೆಕಾಟ್ರಾನಿಕ್ಸ್, ಮೋಷನ್ ಕಂಟ್ರೋಲ್, ರೊಬೊಟಿಕ್ಸ್, ಇಂಡಸ್ಟ್ರಿ 4.0 ಮತ್ತು ಸ್ಮಾರ್ಟ್ ಮ್ಯಾನುಫ್ಯಾಕ್ಚರಿಂಗ್‌ನಂತಹ ಸಮಕಾಲೀನ ತಂತ್ರಜ್ಞಾನಗಳಲ್ಲಿ ಸುಧಾರಿತ ತರಬೇತಿ ನೀಡುತ್ತದೆ. ಮೊದಲ ವರ್ಷದಲ್ಲಿ, ಈ ಕಾರ್ಯಕ್ರಮವು 320 ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ತರಬೇತಿ ನೀಡಿದ್ದು, ಅವರೆಲ್ಲರೂ ಉತ್ತಮ ಸಂಬಳದೊಂದಿಗೆ ಉದ್ಯೋಗ ಪಡೆದುಕೊಂಡಿದ್ದಾರೆ. ಮುಂಬರುವ ವರ್ಷಗಳಲ್ಲಿ ವಿದ್ಯಾರ್ಥಿಗಳ ಸಂಖ್ಯೆಯನ್ನು ದ್ವಿಗುಣಗೊಳಿಸುವ ಗುರಿ ಹೊಂದಲಾಗಿದೆ.

    ಪಿಇಎಸ್ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಡಿ. ಜವಾಹರ್, ಉಪಕುಲಪತಿ ಡಾ. ಜೆ. ಸೂರ್ಯ ಪ್ರಸಾದ್ ಮತ್ತು ಬಜಾಜ್ ಆಟೋ ಲಿಮಿಟೆಡ್‌ನ ಸಿಎಸ್‌ಆರ್ ಉಪಾಧ್ಯಕ್ಷ ಸುಧಾಕರ್ ಗುಡಿಪತಿ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

  • ಪಿಇಎಸ್ ಶಿಕ್ಷಣ ಸಂಸ್ಥೆ ಸಂಸ್ಥಾಪಕ ಎಂ.ಆರ್.ದೊರೆಸ್ವಾಮಿ ನಿಧನ

    ಪಿಇಎಸ್ ಶಿಕ್ಷಣ ಸಂಸ್ಥೆ ಸಂಸ್ಥಾಪಕ ಎಂ.ಆರ್.ದೊರೆಸ್ವಾಮಿ ನಿಧನ

    ಬೆಂಗಳೂರು: ಶಿಕ್ಷಣ ಕ್ಷೇತ್ರದಲ್ಲಿ ಜಾಗತಿಕ ಮಟ್ಟದಲ್ಲಿ ಹೆಸರು ಮಾಡಿರುವ ಪಿಇಎಸ್ ಶಿಕ್ಷಣ ಸಂಸ್ಥೆಯ (PES University) ಸಂಸ್ಥಾಪಕ ಹಾಗೂ ಪಿಇಎಸ್ ವಿಶ್ವವಿದ್ಯಾಲಯದ ಕುಲಪತಿ ಡಾ.ಎಂ.ಆರ್. ದೊರೆಸ್ವಾಮಿ (M.R Doreswamy) ಗುರುವಾರ ಸಂಜೆ ನಿಧನರಾಗಿದ್ದಾರೆ.

    ಐದು ದಶಕಗಳ ಹಿಂದೆ ಬೆಂಗಳೂರಿನ ಗವಿಪುರ ಗುಟ್ಟಹಳ್ಳಿಯಲ್ಲಿ ತಾತ್ಕಾಲಿಕ ಕಟ್ಟಡವೊಂದರಲ್ಲಿ ಕೇವಲ 45 ವಿದ್ಯಾರ್ಥಿಗಳೊಂದಿಗೆ ಪಿಯು ಕಾಲೇಜು ಆರಂಭಿಸಿದ ದೂರದೃಷ್ಟಿಯ ದೊರೆಸ್ವಾಮಿಯವರು ಪೀಪಲ್ಸ್ ಎಜುಕೇಷನ್ ಸೊಸೈಟಿ (ಪಿಇಎಸ್) ಎಂಬ ಬ್ರ್ಯಾಂಡ್ ಕಟ್ಟಿ, ಇಂಜಿನಿಯರಿಂಗ್, ಮೆಡಿಕಲ್, ಹೊಸ ವಿಶ್ವವಿದ್ಯಾಲಯ ಸೇರಿದಂತೆ ಉನ್ನತ ಶಿಕ್ಷಣ ಕ್ಷೇತ್ರದಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದಾರೆ.

    ಮೂಲತಃ ಆಂಧ್ರಪ್ರದೇಶದ ಚಿತ್ತೂರಿನ ಕೃಷಿ ಕುಟುಂಬದಲ್ಲಿ 1937ರಲ್ಲಿ ಮೇದರಪಟ್ಲ ರಾಮನಾಯ್ಡು ದೊರೆಸ್ವಾಮಿ ಜನಿಸಿದ್ದರು. ಕರ್ನಾಟಕದಲ್ಲಿ ಉನ್ನತ ಶಿಕ್ಷಣ ಪಡೆದು, ಇಲ್ಲಿಯೇ ಖಾಸಗಿ ಕಾಲೇಜಿನಲ್ಲಿ ಉಪನ್ಯಾಸಕರಾಗಿ ಸೇವೆ ಆರಂಭಿಸಿದ್ದರು. ನಂತರ ಖಾಸಗಿ ಕಾಲೇಜು ಪ್ರಾಚಾರ್ಯರಾಗಿ ಕಾರ್ಯನಿರ್ವಹಿಸಿ, ಅಲ್ಲಿಂದ ಹೊರಬಂದು ಪಿಇಎಸ್ ಶಿಕ್ಷಣ ಸಂಸ್ಥೆ ಆರಂಭಿಸಿದರು.

    ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದ ವೇಳೆ 2013ರಲ್ಲಿ ದೊರೆಸ್ವಾಮಿ ವಿಧಾನ ಪರಿಷತ್ ಸದಸ್ಯರಾಗಿ ನೇಮಕವಾದರು. ನಂತರ ರಾಜ್ಯ ಸರ್ಕಾರದಲ್ಲಿ ಉನ್ನತ ಶಿಕ್ಷಣಗಳ ಸುಧಾರಣಾ ಸಮಿತಿ ಸದಸ್ಯರಾಗಿ ಕಾರ್ಯನಿರ್ವಹಿಸಿದ್ದಾರೆ.

  • ಪ್ರೆಸ್ ಕ್ಲಬ್, ಪಿಇಎಸ್ ಕ್ರಿಕೆಟ್ ಟೂರ್ನಮೆಂಟ್‍ಗೆ ಡಿಕೆ ಶಿವಕುಮಾರ್ ಚಾಲನೆ

    ಪ್ರೆಸ್ ಕ್ಲಬ್, ಪಿಇಎಸ್ ಕ್ರಿಕೆಟ್ ಟೂರ್ನಮೆಂಟ್‍ಗೆ ಡಿಕೆ ಶಿವಕುಮಾರ್ ಚಾಲನೆ

    – ಪ್ರಶಸ್ತಿ ಗೆಲ್ಲಲು 22 ತಂಡಗಳು ತೀವ್ರ ಪೈಪೋಟಿ

    ಬೆಂಗಳೂರು: 2019-20ರ ಪ್ರೆಸ್ ಕ್ಲಬ್ ಹಾಗೂ ಪಿಇಎಸ್ ಯೂನಿವರ್ಸಿಟಿ ಸಹಯೋಗದಲ್ಲಿ ಇಂಟರ್ ಮೀಡಿಯಾ ಟಿ-10 ಕ್ರಿಕೆಟ್ ಟೂರ್ನಮೆಂಟ್ ಗೆ ಇಂದು ಚಾಲನೆ ಸಿಕ್ಕಿತು.

    ಮುದ್ರಣ ಹಾಗೂ ಎಲೆಕ್ಟ್ರಾನಿಕ್ ಮಾಧ್ಯಮದವರಿಗಾಗಿ ಆಯೋಜನೆಗೊಂಡಿದ್ದ ಈ ಟೂರ್ನಮೆಂಟ್‍ನ್ನು ಕಾಂಗ್ರೆಸ್ಸಿನ ನಾಯಕ ಡಿ.ಕೆ ಶಿವಕುಮಾರ್ ಉದ್ಘಾಟಿಸಿ, ಸಖತ್ ಆಗಿ ಬ್ಯಾಟ್ ಬೀಸಿದರು. ಬ್ಯಾಟಿಂಗ್ ಮತ್ತು ಬೌಲಿಂಗ್ ಮಾಡಿದ ಬಳಿಕ ಮಾತನಾಡಿದ ಡಿಕೆಶಿ, ಪ್ರೆಸ್ ಕ್ಲಬ್ ನಿಂದ ಇದೊಂದು ಒಳ್ಳೆಯ ಕೆಲಸ. ಮಾಧ್ಯಮ ದೊಡ್ಡ ಬುನಾದಿ. ನಿಮಗೆ ನಾನು ಗೌರವ ಕೊಡಬೇಕಾದದ್ದಿದೆ. ಹೀಗಾಗಿ ನಿಮ್ಮ ಆಹ್ವಾನಕ್ಕೆ ಬಂದಿದ್ದೇನೆ ಎಂದರು.

    ಮುಂದಿನ ದಿನಗಳಲ್ಲಿ ಈಡೀ ರಾಜ್ಯದ ಎಲ್ಲಾ ಪತ್ರಕರ್ತರನ್ನ ಸೇರಿಸಿಕೊಂಡು ಸ್ಪರ್ಧೆಗೆ ಅವಕಾಶ ಮಾಡಿಕೊಡಿ ಎಂದು ಪ್ರೆಸ್ ಕ್ಲಬ್ ಸದಸ್ಯರಿಗೆ ಮನವಿ ಮಾಡಿಕೊಂಡಿದರು. ನೀವು ಏನೇ ತೋರಿಸಿದರೂ ನಮ್ಮ ಒಳ್ಳೆಯದಕ್ಕಾಗಿ ತೋರಿಸ್ತೀರಿ. ನಮ್ ತರ ನೀವು ಕಿತ್ತಾಡಬೇಡಿ ಎಂದು ಹೇಳಿದರು. ಈ ವೇಳೆ ತಮ್ಮ ಬಾಲ್ಯದ ಜೀವನದ ಬಗ್ಗೆ ಮೆಲಕು ಹಾಕಿದ ಡಿ.ಕೆ.ಶಿವಕುಮಾರ್, ನಾನು ನಮ್ಮ ಹಳ್ಳಿಯಲ್ಲಿ ಕ್ರಿಕೆಟ್ ಜೊತೆಗೆ, ಶಾಟ್ ಪುಟ್, ವಾಲಿಬಾಲ್ ಆಡುತ್ತಿದ್ದೆ ಇವತ್ತು ಬಹಳ ಸಂತೋಷ ಆಯ್ತು. ಬಾಲ್ಯದ ದಿನಗಳು ನೆನಪಾದವು ಅಂತ ಹೇಳಿದರು.

    ಎರಡು ದಿನಗಳ ಕಾಲ ನಡೆಯುವ ಈ ಟೂರ್ನಮೆಂಟ್‍ನಲ್ಲಿ ಒಟ್ಟು 22 ತಂಡಗಳು ಭಾಗಿಯಾಗಿವೆ. ನಾಳೆ ಫೈನಲ್ ಪಂದ್ಯ ನಡೆಯಲಿದ್ದು, ಕಪ್ ಗೆಲ್ಲಲು ಎಲ್ಲಾ ತಂಡಗಳು ಫುಲ್ ಜೋಶ್ ನಲ್ಲಿ ಪಂದ್ಯಗಳನ್ನು ಆಡುತ್ತಿವೆ.