Tag: Pet Animals

  • ಸಾಕು ಪ್ರಾಣಿಗಳಿಂದ ತೊಂದರೆ ಉಂಟಾದ್ರೆ ಮಾಲೀಕರಿಗೆ ಬೀಳುತ್ತೆ 10,000 ರೂ. ದಂಡ – ಎಲ್ಲಿ ಗೊತ್ತಾ?

    ಸಾಕು ಪ್ರಾಣಿಗಳಿಂದ ತೊಂದರೆ ಉಂಟಾದ್ರೆ ಮಾಲೀಕರಿಗೆ ಬೀಳುತ್ತೆ 10,000 ರೂ. ದಂಡ – ಎಲ್ಲಿ ಗೊತ್ತಾ?

    ಲಕ್ನೋ: ಶ್ವಾನಗಳ ಹಾವಳಿ ಪ್ರಕರಣಗಳು ಹೆಚ್ಚುತ್ತಿರುವ ಬೆನ್ನಲ್ಲೇ ನೋಯ್ಡಾ (Noida) ಪ್ರಾಧಿಕಾರವು ಸಾಕುಪ್ರಾಣಿಗಳಿಗೆ (Pet Animals) ಸಂಬಂಧಿಸಿದಂತೆ ಹೊಸ ನೀತಿಯನ್ನು ರೂಪಿಸಿದೆ. ಇನ್ಮುಂದೆ ಸಾಕುಪ್ರಾಣಿಗಳಿಂದ ತೊಂದರೆ ಉಂಟಾದರೆ, ಮಾಲೀಕರು 10,000 ರೂ. ದಂಡ ಪಾವತಿಸಬೇಕಾಗುತ್ತದೆ.

    ಪ್ರಾಧಿಕಾರವು ಹೊರಡಿಸಿರುವ ಮಾರ್ಗಸೂಚಿಗಳ ಪ್ರಕಾರ, ಸಾಕುಪ್ರಾಣಿಗಳ ಮಾಲೀಕರು ತಮ್ಮ ಶ್ವಾನ (Dog) ಅಥವಾ ಬೆಕ್ಕುಗಳನ್ನು ಮುಂದಿನ ವರ್ಷ ಜನವರಿ 31 ರೊಳಗೆ ನೋಂದಾಯಿಸಿಕೊಳ್ಳಬೇಕು. ಇಲ್ಲದಿದ್ದರೆ ದಂಡವನ್ನು ಪಾವತಿಸಬೇಕಾಗುತ್ತದೆ. ಇದಲ್ಲದೆ ಸಾಕು ನಾಯಿ ಅಥವಾ ಬೆಕ್ಕುಗಳಿಂದ (Cat) ಯಾವುದೇ ಅನಾಹುತ ಉಂಟಾದರೆ 10,000 ರೂಪಾಯಿ ದಂಡ ವಿಧಿಸಲಾಗುತ್ತದೆ. ಇದನ್ನೂ ಓದಿ: ಗಾಂಧಿ ಕುಟುಂಬಕ್ಕೆ ಕ್ಷಮೆ ಕೋರುವೆ: ರಾಜೀವ್ ಗಾಂಧಿ ಹತ್ಯೆ ಪ್ರಕರಣದ ಅಪರಾಧಿ ನಳಿನಿ

    ಭಾರತೀಯ ಪ್ರಾಣಿ ಕಲ್ಯಾಣ ಮಂಡಳಿಯ (AWBI) ಮಾರ್ಗಸೂಚಿಗಳಿಗೆ ಅನುಗುಣವಾಗಿ ನೋಯ್ಡಾ ಪ್ರಾಧಿಕಾರದ 207 ನೇ ಮಂಡಳಿ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ನಗರದಲ್ಲಿ ಶ್ವಾನಗಳ ಹಾವಳಿ ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ ಕ್ರಮಕೈಗೊಳ್ಳಲಾಗಿದೆ.

    ನೋಯ್ಡಾ ಪ್ರಾಧಿಕಾರದ ಹೊಸ ನೀತಿಯ ಪ್ರಕಾರ, ಸಾಕು ನಾಯಿಗಳು ಅಥವಾ ಬೆಕ್ಕುಗಳ ನೋಂದಣಿಯು ಜನವರಿ 31, 2023 ರವರೆಗೆ ಕಡ್ಡಾಯವಾಗಿದೆ. ನೋಂದಣಿಯಾಗದಿದ್ದಲ್ಲಿ ದಂಡವನ್ನು ವಿಧಿಸಲಾಗುತ್ತದೆ ಎಂದು ಎಚ್ಚರಿಸಿದೆ. ಅಷ್ಟೇ ಅಲ್ಲದೆ ಸಾಕು ನಾಯಿಗಳಿಗೆ ಕ್ರಿಮಿನಾಶಕ ಅಥವಾ ಆ್ಯಂಟಿರೇಬಿಸ್ ಲಸಿಕೆಯನ್ನು ಕಡ್ಡಾಯಗೊಳಿಸಲಾಗಿದ್ದು, ಉಲ್ಲಂಘಿಸಿದರೆ ಪ್ರತಿ ತಿಂಗಳು 2,000 ರೂಪಾಯಿ ದಂಡ ವಿಧಿಸಲು ಅವಕಾಶವಿದೆ. ಇದನ್ನೂ ಓದಿ: ದ್ರೌಪದಿ ಮುರ್ಮು ನೋಡಲು ಹೇಗಿದ್ದಾರೆ ಗೊತ್ತಲ್ಲ- ವಿವಾದವಾಗ್ತಿದ್ದಂತೆ ಟಿಎಂಸಿ ಸಚಿವ ಕ್ಷಮೆ

    ಸಾರ್ವಜನಿಕ ಸ್ಥಳದಲ್ಲಿ ಸಾಕು ಪ್ರಾಣಿಯಿಂದ ಮಲೀನವಾದರೆ, ಅದನ್ನು ಸ್ವಚ್ಛಗೊಳಿಸುವ ಜವಾಬ್ದಾರಿ ಪ್ರಾಣಿಗಳ ಮಾಲೀಕರ ಮೇಲಿದೆ. ಒಂದು ವೇಳೆ ಸಾಕುಪ್ರಾಣಿ ದಾಳಿಯಿಂದ ವ್ಯಕ್ತಿ ಗಾಯಗೊಂಡರೆ, ಅವರ ಚಿಕಿತ್ಸೆಯ ವೆಚ್ಚವನ್ನು ಪ್ರಾಣಿ ಮಾಲೀಕರೇ ಭರಿಸಬೇಕಾಗುತ್ತದೆ ಎಂದು ಪ್ರಾಧಿಕಾರ ಹೇಳಿದೆ.

    Live Tv
    [brid partner=56869869 player=32851 video=960834 autoplay=true]

  • ಮುಂಬೈನಲ್ಲಿ ಸಾಕುಪ್ರಾಣಿಗಳ ಅಂತ್ಯಸಂಸ್ಕಾರಕ್ಕೆ ವಿದ್ಯುತ್ ಚಿತಾಗಾರ!

    ಮುಂಬೈನಲ್ಲಿ ಸಾಕುಪ್ರಾಣಿಗಳ ಅಂತ್ಯಸಂಸ್ಕಾರಕ್ಕೆ ವಿದ್ಯುತ್ ಚಿತಾಗಾರ!

    ಮುಂಬೈ: ಸಾಕುಪ್ರಾಣಿಗಳ ಅಂತ್ಯಸಂಸ್ಕಾರ ಮಾಡಲು ಮುಂಬೈ ಮುನ್ಸಿಪಲ್ ಕಾರ್ಪೋರೇಷನ್‍ನಿಂದ ದಹಿಸರ್ ಸ್ಮಶಾನದಲ್ಲಿ ಇಲೆಕ್ಟ್ರಿಕ್ ಇನ್ಸಿನರೇಟರ್ ಸ್ಥಾಪಿಸಲಾಗಿದೆ ಎಂದು ಮುಂಬೈ ಮೇಯರ್ ಕಿಶೋರಿ ಪೆಡ್ನೇಕರ್ ತಿಳಿಸಿದ್ದಾರೆ.

    ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾಗರಿಕ ಸಂಸ್ಥೆಯಿಂದ ಮೊದಲ ಬಾರಿಗೆ ಈ ರೀತಿಯ ಸೌಲಭ್ಯವನ್ನು ಕಲ್ಪಿಸಲಾಗಿದೆ. ಸಾಕುಪ್ರಾಣಿಗಳನ್ನು ಸುಡುವ ಯಂತ್ರಕ್ಕೆ ಹಿಂದಿನಿಂದಲೂ ಬೇಡಿಕೆಯಿತ್ತು. ಹೀಗಾಗಿ ಸಾಕು ಪ್ರಾಣಿಗಳ ಶವವನ್ನು ವಿದ್ಯುತ್ ಯಂತ್ರದ ಮೂಲಕ ಸುಡಲು ನಿರ್ಧರಿಸಲಾಗಿದೆ. ಸಾಕುಪ್ರಾಣಿ ಮಾಲೀಕರಿಗೆ ಮುಂಬೈ ಮಹಾನಗರ ಪಾಲಿಕೆ ಒದಗಿಸುತ್ತಿರುವ ಮೊದಲ ಸೇವೆಯಾಗಿದೆ ಎಂದು ಹೇಳಿದ್ದಾರೆ.

    ನಗರದಲ್ಲಿ ಸಾಕುಪ್ರಾಣಿಗಳ ಅಂತ್ಯಕ್ರಿಯೆಗೆ ಸಾಮಾನ್ಯ ಸ್ಮಶಾನ ಇಲ್ಲ. ಬಹುಬೇಡಿಕೆಯಿಂದಾಗಿ ಇದನ್ನು ನಿರ್ಮಿಸಲಾಗಿದ್ದು, 2,500 ಚದರ ಅಡಿ ಪ್ರದೇಶ ವಿಸ್ತೀರ್ಣ ಇದೆ. ಈ ಸೌಲಭ್ಯವೂ ಖಾಸಗಿಯಾಗಿದೆ. ಇದರ ಬಗ್ಗೆ ಈಗಾಗಲೇ ಸುತ್ತೋಲೆಯನ್ನು ಹೊರಡಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: 50 ಕೋಟಿ ರೂ. ಜಾಗತಿಕ ಕ್ರೆಡಿಟ್ ಕಾರ್ಡ್ ಹಗರಣ ಭೇದಿಸಿದ ಪೊಲೀಸರು – 7 ಜನ ಅರೆಸ್ಟ್ 

  • ಹೈದರಾಬಾದ್‌ನಲ್ಲಿ ಇನ್ಮುಂದೆ ಶ್ವಾನಗಳ ನೋಂದಾಯಿಸದವರಿಗೆ 50 ಸಾವಿರ ರೂ. ದಂಡ!

    ಹೈದರಾಬಾದ್‌ನಲ್ಲಿ ಇನ್ಮುಂದೆ ಶ್ವಾನಗಳ ನೋಂದಾಯಿಸದವರಿಗೆ 50 ಸಾವಿರ ರೂ. ದಂಡ!

    ಹೈದರಾಬಾದ್: ಸಾಕುಪ್ರಾಣಿಗಳನ್ನು ನೋಂದಾಯಿಸದವರಿಗೆ 50 ಸಾವಿರ ರೂ. ದಂಡ ವಿಧಿಸಲಾಗುವುದು ಎಂದು ಹೈದರಾಬಾದ್ ಮುನ್ಸಿಪಲ್ ಕಾರ್ಪೊರೇಷನ್ ಆದೇಶವನ್ನು ಹೊರಡಿಸಿದೆ.

    ಈ ಕಾನೂನಿನ ಪ್ರಕಾರ ಕಡ್ಡಾಯ ನೋಂದಣಿ ಸಾಕು ನಾಯಿಗಳಿಗೆ ಮಾತ್ರ ಅನ್ವಯಿಸುತ್ತದೆ. ಇತರೆ ಸಾಕು ಪ್ರಾಣಿಗಳಿಗೆ ವಿನಾಯಿತಿಯನ್ನು ನೀಡಿದೆ. ಶ್ವಾನಪ್ರೇಮಿಗಳು ನೋಂದಣಿಯಾಗದ ನಾಯಿಗಳನ್ನು ಸಾರ್ವಜನಿಕ ಸ್ಥಳಗಳಿಗೆ ಕರೆದೊಯ್ದರೆ ಶೀಘ್ರದಲ್ಲೇ ದಂಡವನ್ನು ಎದುರಿಸಬೇಕಾಗುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    ನೋಂದಾಯಿಸದ ಸಾಕುಪ್ರಾಣಿಗಳನ್ನು ಉದ್ಯಾನವನಗಳು, ಬೀದಿಗಳು ಮತ್ತು ಇತರ ಸಾರ್ವಜನಿಕ ಸ್ಥಳಗಳಿಗೆ ಕರೆದೊಯ್ಯುವುದು, ಸಾರ್ವಜನಿಕ ಸುರಕ್ಷತೆಗೆ ಅಪಾಯವನ್ನುಂಟು ಮಾಡುತ್ತದೆ. ಈ ನಿಟ್ಟಿನಲ್ಲಿ ಸಾಕುನಾಯಿಗಳ ನೋಂದಣಿ ಕಡ್ಡಾಯವಾಗಿದೆ. ಇದನ್ನೂ ಓದಿ: ಪ್ರೀತಿಸಿ ಮದ್ವೆಯಾದ ಮಗಳು – ತಾಳಿ ಕಿತ್ತು, ಜುಟ್ಟು ಹಿಡಿದು ಧರ, ಧರನೇ ಎಳೆದಾಡಿದ ತಂದೆ

    ಒಂದು ವೇಳೆ ನೋಂದಾಯಿಸದ ಸಾಕು ಪ್ರಾಣಿಗಳನ್ನು ಸಾರ್ವಜನಿಕ ಪ್ರದೇಶಕ್ಕೆ ಕರೆತಂದರೆ ಅವುಗಳನ್ನು ವಶಪಡಿಸಿಕೊಳ್ಳುವುದರ ಜೊತೆಗೆ 1,000 ರಿಂದ 50,000 ರೂ.ವರೆಗೂ ದಂಡವನ್ನು ವಿಧಿಸಲಾಗುತ್ತದೆ. ದಂಡವನ್ನು ಪಾವತಿಸಿದ ನಂತರವೇ ಮಾಲೀಕರು ತಮ್ಮ ಸಾಕುಪ್ರಾಣಿಗಳನ್ನು ಮರಳಿ ಪಡೆಯಬಹುದು ಎಂದು ಹೇಳಿದರು.

    ಈ ನಿಯಮಗಳ ಅಡಿಯಲ್ಲಿ, ಶ್ವಾನ ಮಾಲೀಕರು ಪರವಾನಗಿ ಪಡೆಯಬೇಕು. ಜೊತೆಗೆ ಸಾಕು ನಾಯಿಗಳಿಗೆ ಪ್ರತಿ ವರ್ಷ ರೇಬಿಸ್ ಲಸಿಕೆ ಹಾಕಿಸುವುದು ಕಡ್ಡಾಯವಾಗಿದೆ. ಅಲ್ಲದೆ ಸಾಕುಪ್ರಾಣಿಗಳಿಗೆ ಮೈಕ್ರೋಚಿಪ್ ಅಳವಡಿಸಬೇಕು. ಮೈಕ್ರೋಚಿಪ್ ಮೂಲಕ ಅವುಗಳು ನಗರದ ಯಾವುದೇ ಮೂಲದಲ್ಲಿದ್ದರೂ ಸುಲಭವಾಗಿ ಮಾಲೀಕರು ಟ್ರ್ಯಾಕ್ ಮಾಡಬಹುದು ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಪ್ರೀತಿಸಿ ಮದ್ವೆಯಾದ ಮಗಳು – ತಾಳಿ ಕಿತ್ತು, ಜುಟ್ಟು ಹಿಡಿದು ಧರ, ಧರನೇ ಎಳೆದಾಡಿದ ತಂದೆ

    ಅಧಿಕೃತ ಅಂಕಿ ಅಂಶಗಳ ಪ್ರಕಾರ, ನಗರದಲ್ಲಿ ಪ್ರಸ್ತುತ 50,000 ಸಾಕುನಾಯಿಗಳಿದ್ದು, ಅವುಗಳಲ್ಲಿ 465 ಸಾಕು ನಾಯಿಗಳು ಎಂದು ನೋಂದಾಯಿಸಲಾಗಿದೆ.

  • ಮುರುಘಾಮಠದಲ್ಲಿ ಶರಣ ಸಂಸ್ಕೃತಿ ಉತ್ಸವದ ಅಂಗವಾಗಿ ಸಾಕು ಪ್ರಾಣಿಗಳ ಪ್ರದರ್ಶನ

    ಮುರುಘಾಮಠದಲ್ಲಿ ಶರಣ ಸಂಸ್ಕೃತಿ ಉತ್ಸವದ ಅಂಗವಾಗಿ ಸಾಕು ಪ್ರಾಣಿಗಳ ಪ್ರದರ್ಶನ

    ಚಿತ್ರದುರ್ಗ: ಮಠ ಮಾನ್ಯಗಳಲ್ಲಿ ಜಾತ್ರೆ ಉತ್ಸವಗಳ ವೇಳೆ ಪುರಾಣ ಪ್ರವಚನಗಳನ್ನು ಆಯೋಜಿಸುವುದು ಸಹಜ. ಆದರೆ ಕೋಟೆನಾಡು ಚಿತ್ರದುರ್ಗದ ಮುರುಘಾಮಠದಲ್ಲಿ ಮಾತ್ರ ಶರಣ ಸಂಸ್ಕೃತಿ ಉತ್ಸವದ ಅಂಗವಾಗಿ ಸಾಕು ಪ್ರಾಣಿಗಳ ಪ್ರದರ್ಶನ ಏರ್ಪಡಿಸಲಾಗಿತ್ತು. ಹೀಗಾಗಿ ನೂರಾರು ಜನ ತಮ್ಮ ಶ್ವಾನಗಳೊಂದಿಗೆ ಪ್ರದರ್ಶನದಲ್ಲಿ ಭಾಗಿಯಾಗಿದರು. ಅಂತೆಯೇ ರಾಜ್ಯದ ವಿವಿಧ ಭಾಗಗಳಿಂದ ಆಗಮಿಸಿದ್ದ ರೈತರು ಅವರ ಜೋಡೆತ್ತುಗಳನ್ನು ಪ್ರದರ್ಶಿಸಿದರು.

    ಈ ವೇಳೆ ಎತ್ತಿನ ಗಾಡಿಯಲ್ಲಿ ಆಗಮಿಸಿದ ಮುರುಘಾಮಠದ ಡಾ. ಶಿವಮೂರ್ತಿ ಮುರುಘಾ ಶರಣರು ಹಾಗೂ ಕೃಷಿ ಸಚಿವ ಶಿವಶಂಕರರೆಡ್ಡಿ ಸಾಕು ಪ್ರಾಣಿ ಪ್ರದರ್ಶನಕ್ಕೆ ಚಾಲನೆ ನೀಡಿದರು. ಈ ವೇಳೆ ಈ ಪ್ರದರ್ಶನದ ಉಸ್ತುವಾರಿ ಹೊತ್ತಿದ್ದ ರಮಾನಂದ ಸ್ವಾಮೀಜಿ ಸಾಕುಪ್ರಾಣಿ ಪ್ರದರ್ಶನದ ಆಯೋಜನೆ ಕುರಿತು ಮಾತನಾಡಿದರು.

    ಈ ಶ್ವಾನ ಪ್ರದರ್ಶನ ಮತ್ತು ಜೋಡೆತ್ತುಗಳ ಪ್ರದರ್ಶನಕ್ಕೆ ತೀರ್ಪುಗಾರರನ್ನಾಗಿ ನುರಿತ ತಜ್ಞರನ್ನು ನೇಮಿಸಲಾಗಿತ್ತು. ಅವರು ಈ ಶ್ವಾನ ಹಾಗೂ ಜೋಡೆತ್ತುಗಳನ್ನ ವೀಕ್ಷಿಸಿ ಪ್ರಥಮ, ದ್ವಿತೀಯ ಮತ್ತು ತೃತೀಯ ಬಹುಮಾನಗಳನ್ನು ಘೋಷಿಸಿದ್ದು, ಶ್ವಾನ ಪ್ರದರ್ಶನದಲ್ಲಿ ನಯನಾ ಎಂಬವರಿಗೆ ಸೇರಿದ ಮುಧೋಳ ಜಾತಿಯ ನಾಯಿ ಪ್ರಥಮ ಸ್ಥಾನ ಪಡೆದು 10 ಸಾವಿರ ನಗದು ಮತ್ತು ಪುರಸ್ಕಾರಕ್ಕೆ ಪಾತ್ರವಾಯಿತು. ಅಂತೆಯೇ ಗೊಡಬನಾಳ ಸತೀಶ್ ಪಟೇಲ್ ಎಂಬವರ ಅಮೃತ ಮಹಲ್ ಜಾತಿಯ ಜೋಡೆತ್ತು ಇಲ್ಲಿ ಮೊದಲ ಸ್ಥಾನ ಪಡೆಯಿತು. ಈ ವೇಳೆ ಪ್ರಾಣಿ ಪ್ರಿಯರು ಕೂಡ ಈ ಪ್ರದರ್ಶನದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.

    ಒಟ್ಟಾರೆಯಾಗಿ ಕೋಟೆನಾಡು ಚಿತ್ರದುರ್ಗದ ಮುರುಘಾಮಠದಲ್ಲಿ ಮಂಗಳವಾರ ಶರಣ ಸಂಸ್ಕೃತಿ ಉತ್ಸವದ ನೆಪದಲ್ಲಿ ಪ್ರಾಣಿಗಳ ಉತ್ಸವವೂ ನಡೆಯಿತು. ನೂರಾರು ಜಾತಿಯ ನಾಯಿಗಳು, ಹತ್ತಾರು ತಳಿಯ ಜಾನುವಾರುಗಳು ಪ್ರದರ್ಶನದಲ್ಲಿ ಭಾಗವಹಿಸಿದ್ದವು. ಅನೇಕ ಪ್ರಾಣಿ ಪ್ರಿಯರು ಸಾಕು ಪ್ರಾಣಿಗಳ ಪ್ರದರ್ಶನದಲ್ಲಿ ಭಾಗಿಯಾಗಿ ಫುಲ್ ಏಂಜಾಯ್ ಮಾಡಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv