Tag: PETA

  • ಸೈನ್ಸ್ ವಿದ್ಯಾರ್ಥಿಗಳಿಗೆ ಬ್ಯಾಡ್ ನ್ಯೂಸ್!

    ಸೈನ್ಸ್ ವಿದ್ಯಾರ್ಥಿಗಳಿಗೆ ಬ್ಯಾಡ್ ನ್ಯೂಸ್!

    ಬೆಂಗಳೂರು: ವಿಜ್ಞಾನದ ವಿದ್ಯಾರ್ಥಿಗಳು ಅಂದರೆ ಸಂಶೋಧನೆ, ಪ್ರಾಕ್ಟಿಕಲ್ ವರ್ಕ್ ಮಾಡೋದು ಸಹಜ. ವಿವಿಧ ಪ್ರಾಣಿಗಳು, ಜಂತುಗಳನ್ನು ಬಳಸಿ ಯಾವಾಗಲು ಲ್ಯಾಬ್‍ಗಳಲ್ಲಿ ಬ್ಯುಸಿಯಾಗಿರುತ್ತಾರೆ. ಆದರೆ ಇದೀಗ ವಿಜ್ಞಾನ ಓದೋ ವಿದ್ಯಾರ್ಥಿಗಳು ಲ್ಯಾಬ್‍ಗಳಿಗೆ ಜೀವಂತ ಪ್ರಾಣಿ ಮತ್ತು ಪಕ್ಷಿ ತರುವಂತಿಲ್ಲ ಎಂದು ಪೇಟಾ ದೂರು ಕೊಟ್ಟಿದೆ.

    ಹೌದು..ಸೈನ್ಸ್ ವಿದ್ಯಾರ್ಥಿಗಳು ಹೆಚ್ಚು ಸಮಯವನ್ನು ಲ್ಯಾಬ್‍ನಲ್ಲೇ ಕಳೆಯುತ್ತಾರೆ. ಇಲಿ, ಜಿರಲೆ ಇಂಥಹ ಸಣ್ಣ ಪುಟ್ಟ ಪ್ರಾಣಿಗಳನ್ನು ಕೊಯ್ದು ಅದರ ದೇಹ ಮತ್ತು ಅಂಗ ರಚನೆ ಬಗ್ಗೆ ಪಾಠ ಕಲಿಯುತ್ತಾರೆ. ಆದರೆ ಈಗ ಸೈನ್ಸ್ ವಿದ್ಯಾರ್ಥಿಗಳು, ಉಪನ್ಯಾಸಕರಿಗೆ ಇದು ಬೇಸರದ ಸುದ್ದಿಯಾಗಿದ್ದು, ಜೀವಂತ ಪ್ರಾಣಿಗಳನ್ನ ತಂದು ವಿದ್ಯಾರ್ಥಿಗಳಿಗೆ ಪ್ರಾಯೋಗಿಕವಾಗಿ ಬೋಧನೆ ಮಾಡುವುದು ಸರಿಯಲ್ಲ ಅಂತ ಪ್ರಾಣಿ ದಯ ಸಂಘ ಪೇಟಾ ಸೇರಿ ಹಲವು ಸಂಘಟನೆಗಳು ಶಿಕ್ಷಣ ಇಲಾಖೆಗೆ ದೂರು ಕೊಟ್ಟಿವೆ.

    ದೂರಿನನ್ವಯ ಶಿಕ್ಷಣ ಇಲಾಖೆ ಪರ್ಯಾಯ ಮಾರ್ಗದ ಮೂಲಕ ವಿದ್ಯಾರ್ಥಿಗಳಿಗೆ ಪ್ರಾಯೋಗಿಕ ಪಾಠ ಮಾಡುವಂತೆ ಉಪನ್ಯಾಸಕರಿಗೆ ಸುತ್ತೋಲೆ ಹೊರಡಿಸಿದೆ.

    ಈ ಹಿಂದೆ ವೈಜ್ಞಾನಿಕ ಪ್ರಾಯೋಗಿಕ ತರಗತಿಗಳಲ್ಲಿ ಕಪ್ಪೆ, ಜಿರಳೆ, ಮೀನು ಸೇರಿದಂತೆ ಪಕ್ಷಿಗಳ ದೇಹ ಅಂಗರಚನೆಗೆ ಜೀವಂತ ಪ್ರಾಣಿಗಳನ್ನು ತಂದು ಪಾಠ ಮಾಡಲಾಗುತ್ತಿತ್ತು. ಆದರೆ ಈಗ ಕಂಪ್ಯೂಟರ್, 3ಡಿ ಮಾಡೆಲ್, ವರ್ಚುಯಲ್ ರಿಯಾಲಿಟಿ ಮೂಲಕ ವಿದ್ಯಾರ್ಥಿಗಳಿಗೆ ಜೀವಶಾಸ್ತ್ರವನ್ನು ಬೋಧಿಸಬೇಕಿದೆ. ಆದರೆ ಇದಕ್ಕೆ ವಿರೋಧವೂ ವ್ಯಕ್ತವಾಗುತ್ತಿದೆ ಪಿಯು ಮಂಡಳಿಯ ಉಪ ನಿರ್ದೇಶಕರು ಅಸಾದುಲ್ಲಾ ಖಾನ್ ತಿಳಿಸಿದ್ದಾರೆ.

    ವೈಜ್ಞಾನಿಕ ಕ್ಷೇತ್ರಗಲ್ಲಿ ದಿನಕ್ಕೊಂದು ಸಂಶೋಧನೆಗಳು ನಡೆಯುವ ಈ ಕಾಲದಲ್ಲೂ ಈ ರೀತಿಯ ನಿರ್ಬಂಧ ಹೇರುವುದು ಎಷ್ಟು ಸರಿ ಅನ್ನೋದು ವಿದ್ಯಾರ್ಥಿಗಳು ಮತ್ತು ಉಪನ್ಯಾಸಕರ ಪ್ರಶ್ನೆಯಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
    ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
    ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
    ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
    ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews

  • ತನ್ನ ಬ್ಯೂಟಿ, ಆರೋಗ್ಯದ ರಹಸ್ಯ ಬಿಚ್ಚಿಟ್ಟ ಅನುಷ್ಕಾ ಶರ್ಮಾ!

    ತನ್ನ ಬ್ಯೂಟಿ, ಆರೋಗ್ಯದ ರಹಸ್ಯ ಬಿಚ್ಚಿಟ್ಟ ಅನುಷ್ಕಾ ಶರ್ಮಾ!

    ಮುಂಬೈ: ಮೂರು ವರ್ಷಗಳಿಂದ ನಾನು ಸಸ್ಯಹಾರಿ ಆಗಿದ್ದೇನೆ. ಇದು ನನ್ನ ಜೀವನದಲ್ಲಿ ತೆಗೆದುಕೊಂಡ ಉತ್ತಮ ನಿರ್ಧಾರ ಎಂದು ಬಾಲಿವುಡ್ ನಟಿ ಅನುಷ್ಕಾ ಶರ್ಮಾ ಹೇಳಿದ್ದಾರೆ.

    ಅನುಷ್ಕಾ ಪೇಟಾ(ಪೀಪಲ್ ಫಾರ್ ದಿ ಎತಿಕಲ್ ಟ್ರೀಟ್‍ಮೆಂಟ್ ಆಫ್ ಆನಿಮಲ್ಸ್) ಜಾಗೃತಿ ಮೂಡಿಸುತ್ತಿದ್ದಾರೆ. ಈ ಜಾಹೀರಾತಿನಲ್ಲಿ “ನಾನು ಅನುಷ್ಕಾ ಶರ್ಮಾ, ನಾನು ಸಸ್ಯಹಾರಿ” ಎಂದು ಹೇಳಿದ್ದಾರೆ. ಈ ಜಾಹೀರಾತನ್ನು ಮಜೇನ್ ಅಬುಸ್ರಾರ್ ನಿರ್ದೇಶನ ಮಾಡಿದ್ದಾರೆ.

    ನಾನು ಸಸ್ಯಹಾರಿ ಆಗಿರುವುದು ನನ್ನ ಜೀವನದಲ್ಲಿ ನಾನು ತೆಗೆದುಕೊಂಡ ಉತ್ತಮ ನಿರ್ಧಾರ. ನನಗೆ ಈಗ ಸಾಕಷ್ಟು ಶಕ್ತಿ ಇದೆ. ನಾನು ಈಗ ಆರೋಗ್ಯಕರವಾಗಿದ್ದೇನೆ ಎಂದು ಅನಿಸುತ್ತದೆ. ನನ್ನ ಆಹಾರದಿಂದ ಯಾವುದೇ ಪ್ರಾಣಿಗಳಿಗೆ ತೊಂದರೆಯಾಗುತ್ತಿಲ್ಲ ಎಂಬುದು ನನಗೆ ಖುಷಿ ಇದೆ ಎಂದು ಅನುಷ್ಕಾ ತಿಳಿಸಿದ್ದಾರೆ.

    ಅನುಷ್ಕಾ ಶರ್ಮಾ ಕಳೆದ ಮೂರುವರೆ ವರ್ಷದಿಂದ ಸಸ್ಯಹಾರಿಯಾಗಿದ್ದಾರೆ. 2015ರಲ್ಲಿ ಅನುಷ್ಕಾ ‘ಪೇಟಾ ಇಂಡಿಯಾಸ್ ಹಾಟೆಸ್ಟ್ ಸಸ್ಯಹಾರಿ ಸೆಲೆಬ್ರಿಟಿ ಹಾಗೂ 2017ರಲ್ಲಿ ಪರ್ಸನ್ ಆಫ್ ದಿ ಇಯರ್ ಪ್ರಶಸ್ತಿಯನ್ನು ಪಡೆದುಕೊಂಡಿದ್ದರು.

    ಈಗಾಗಲೇ ನಟ ಅಮಿತಾಬ್ ಬಚ್ಚನ್, ಶಾಹಿದ್ ಕಪೂರ್, ಅಲಿಯಾ ಭಟ್, ರಾಜ್‍ಕುಮಾರ್ ರಾವ್, ಸೋನಂ ಕಪೂರ್, ವಿದ್ಯಾ ಬಾಲನ್, ಸನ್ನಿ ಲಿಯೋನ್ ಮಾಂಸವನ್ನು ಬಿಟ್ಟು ಸಸ್ಯಹಾರಿ ಆಗಿದ್ದಾರೆ.

  • ಕುದುರೆ ರೇಸಲ್ಲಿ ಹಿಂಸೆ ಇಲ್ವಾ? ಪೇಟಾದ್ದು ಅತಿಯಾಯ್ತು- ಸಚಿವ ಡಿವಿಎಸ್ ವಾಗ್ದಾಳಿ

    ಕುದುರೆ ರೇಸಲ್ಲಿ ಹಿಂಸೆ ಇಲ್ವಾ? ಪೇಟಾದ್ದು ಅತಿಯಾಯ್ತು- ಸಚಿವ ಡಿವಿಎಸ್ ವಾಗ್ದಾಳಿ

    ಉಡುಪಿ: ಕರಾವಳಿ ಭಾಗದ ಜನಪದ ಕಂಬಳ ಕ್ರೀಡೆಗೆ ಪೇಟಾ ಮತ್ತೆ ಅಡ್ಡಗಾಲು ಹಾಕಿರುವ ಹಿನ್ನೆಲೆಯಲ್ಲಿ ಪ್ರಾಣಿದಯಾ ಸಂಘದ ವಿರುದ್ಧ ಕೇಂದ್ರ ಸಚಿವ ಡಿ.ವಿ ಸದಾನಂದ ಗೌಡ ವಾಗ್ದಾಳಿ ನಡೆಸಿದ್ದಾರೆ.

    ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಾಣಿದಯಾ ಸಂಘದ್ದು ಯಾಕೋ ಅತಿಯಾಯ್ತು ಅಂತ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪೇಟಾದವರು ಸಮಗ್ರ ಅಧ್ಯಯನ ಮಾಡಲಿ. ಕೋಣಗಳ ಪಾಲನೆ ಪೋಷಣೆ ನಿಮಗೆ ಗೊತ್ತಾ? ಸಾವಿರಾರು ಕೋಣಗಳ ಬಲಿ ದಿನನಿತ್ಯ ನಡೆಯುತ್ತಿರುವಾಗ ಕಸಾಯಿಖಾನೆಯ ವಿರುದ್ಧ ಪೇಟಾ ಏನು ಮಾಡಿದೆ ಎಂದು ಪ್ರಶ್ನೆ ಮಾಡಿದ್ರು.

    ಕಂಬಳ ಕರಾವಳಿ ಭಾಗಕ್ಕಿರುವ ಏಕೈಕ ಮನರಂಜನಾ ಕ್ರೀಡೆ. ನಾವು ಕುದುರೆ ರೇಸಿಗೆ ಹೋಗಲ್ಲ. ಪೇಟಾದವರು ಕುದುರೆ ರೇಸಿಗೆ ಹೋಗಿಲ್ವಾ? ಕುದುರೆಗೆ ಹೊಡೆಯೋದನ್ನು ನೀವು ನೋಡಿಲ್ವಾ ಎಂದು ಸವಾಲೆಸೆದರು.

    ಪೇಟಾದವರು ಪ್ರಚಾರಕ್ಕೆ ಹೀಗೆ ಮಾಡುತ್ತಿದ್ದಾರೆ. ಕೇಂದ್ರ ಸರ್ಕಾರ-ರಾಜ್ಯ ಸರಕಾರ ಹಿಂಸೆಯ ಪರವಾಗಿಲ್ಲ ಎಂದು ಮತ್ತೆ ಮತ್ತೆ ಸ್ಪಷ್ಟಪಡಿಸುತ್ತೇವೆ. ಪೇಟಾದವರದ್ದು ಇದು ಬೇಜವಾಬ್ದಾರಿಯುತ ನಡವಳಿಕೆಯಾಗಿದೆ. ಎಲ್ಲದಕ್ಕೂ ಕೊನೆಯೆಂಬುದು ಇದೆ. ಸುಪ್ರೀಂ ಕೋರ್ಟ್ ಎಲ್ಲದಕ್ಕೂ ಕೊನೆಯನ್ನು ಮಾಡುತ್ತದೆ ಎಂದು ಡಿವಿಎಸ್ ಗೌಡ ಕಿಡಿಕಾರಿದ್ರು.

    ಪೇಟಾ ಏನ್ ಹೇಳಿದೆ?: ಕಂಬಳದ ವಿರುದ್ಧ ಸುಪ್ರೀಂಕೋರ್ಟ್ ಮೆಟ್ಟಲೇರಲು ಪೇಟಾ ತೀರ್ಮಾನ ಮಾಡಿದೆ. ನಿನ್ನೆ ಮೂಡಬಿದ್ರೆಯಲ್ಲಿ ಕಂಬಳದ ಕೋಣಗಳಿಗೆ ಚಿತ್ರ ಹಿಂಸೆ ನೀಡಲಾಗಿದೆ. ಈಗಾಗಲೇ ಸುಪ್ರೀಂ ಕೋರ್ಟ್ ಹಿಂಸೆ ರಹಿತ ಕಂಬಳ ನಡೆಸಬೇಕೆಂದು ಹೇಳಿದ್ರೂ ಈ ಆದೇಶ ಪಾಲನೆಯಾಗಿಲ್ಲ. ಕೋಣದ ಮೂಗಿಗೆ ಹಗ್ಗ ಹಾಕಿ ಹಿಂಸೆ ಕೊಡಲಾಗಿದೆ. ಅಲ್ಲದೆ ಕಂಬಳದ ಗದ್ದೆಯಲ್ಲಿ ಓಡಿಸುವಾಗ ಕೋಣಗಳಿಗೆ ಕೋಲಿನಿಂದ ಹೊಡೆದಿದ್ದಾರೆ.

    ಕಂಬಳ ಮುಗಿಸಿ ಬಂದ ಮೇಲೆ ಕೋಣಗಳಿಗೆ ಉಸಿರಾಟಕ್ಕೂ ಕಷ್ಟವಾಗುತ್ತದೆ. ಇದ್ರಿಂದ ಈ ಕಂಬಳದಲ್ಲಿ ಪ್ರಾಣಿ ಹಿಂಸೆ ನಡೆಯುತ್ತದೆ. ಈ ವೇಳೆ ರಹಸ್ಯವಾಗಿ ಚಿತ್ರೀಕರಣ ಮಾಡಲಾಗಿದೆ. ಕೋಣಗಳನ್ನ ಹಿಂಸಿಸಿರುವುದು ವಿಡಿಯೋದಲ್ಲಿ ದಾಖಲಾಗಿದೆ. ಫೋಟೋ ಮತ್ತು ವಿಡಿಯೋವನ್ನ ಕೋರ್ಟ್ ಗಮನಕ್ಕೆ ತರುತ್ತೇವೆ. ಇದನ್ನು ಬ್ಯಾನ್ ಮಾಡಲು ಸುಪ್ರೀಂ ಕೋರ್ಟ್‍ಗೆ ಅರ್ಜಿ ಹಾಕುತ್ತೇವೆ ಅಂತಾ ಪೇಟಾ ಸಂಸ್ಥೆ ಪ್ರಕಟಣೆ ಹೊರಡಿಸಿತ್ತು.