Tag: petrol bunk

  • ಯುವಕರ ಗುಂಪುಗಳ ನಡುವೆ ಮಾರಾಮಾರಿ- ವೀಡಿಯೋ ಸಿಸಿಟಿವಿಯಲ್ಲಿ ಸೆರೆ

    ಯುವಕರ ಗುಂಪುಗಳ ನಡುವೆ ಮಾರಾಮಾರಿ- ವೀಡಿಯೋ ಸಿಸಿಟಿವಿಯಲ್ಲಿ ಸೆರೆ

    ಹಾಸನ: ಹಣಕಾಸು ವಿಷಯಕ್ಕೆ ಸಂಬಂಧಿಸಿದಂತೆ ಯುವಕರ ಗುಂಪುಗಳ ನಡುವೆ ಹೊಡೆದಾಟ ನಡೆದಿರುವ ಘಟನೆ ಜಿಲ್ಲೆಯ ಸಕಲೇಶಪುರದಲ್ಲಿ ನಡೆದಿದೆ.

    ಬೇಲೂರು ಮೂಲದ ಯುವಕ ಹಾಗೂ ಬಾಳೆಗದ್ದೆಯ ಯುವಕನ ನಡುವೆ ಹಣಕಾಸು ವ್ಯವಹಾರವಿತ್ತು. ಈ ವ್ಯವಹಾರದಲ್ಲಿ ನಡೆದ ಭಿನ್ನಭಿಪ್ರಾಯಕ್ಕೆ ಸಂಬಂಧಿಸಿದಂತೆ ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ಬಾಳೆಗದ್ದೆಯ ಖಾಸಗಿ ಪೆಟ್ರೋಲ್ ಬಂಕ್ ಬಳಿ ಯುವಕರ ಗುಂಪುಗಳ ನಡುವೆ ಹೊಡೆದಾಟ ನಡೆದಿದೆ. ಎರಡು ದಿನದ ಹಿಂದೆ ನಡೆದಿರುವ ಗಲಾಟೆಯಾಗಿದ್ದು, ಈ ಸಂದರ್ಭ ಹೊಡೆದಾಟದ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿದೆ. ಇದನ್ನೂ ಓದಿ: ಪತ್ನಿಯನ್ನು ಕೊಂದು ಅಪಘಾತವೆಂದು ಬಿಂಬಿಸಿದ್ದ ಪತಿಯ ಬಂಧನ

    ವ್ಯವಹಾರದ ವಿಚಾರಚಾಗಿ ಕುಡಿದ ಮತ್ತಿನಲ್ಲಿ ಯುವಕರ ತಂಡ ಪರಸ್ಪರ ಕುರ್ಚಿ ಹಿಡಿದು ಹೊಡೆದಾಡಿಕೊಂಡಿದ್ದಾರೆ. ಗಲಾಟೆಯಲ್ಲಿ ಓರ್ವನಿಗೆ ಗಾಯಗಳಾಗಿದ್ದು, ಯುವಕರ ಹೊಡೆದಾಡುವ ಸಿಸಿಟಿವಿ ದೃಶ್ಯಗಳು ವೈರಲ್ ಆಗುತ್ತಿದೆ. ಸಕಲೇಶಪುರ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಇದುವರೆಗೂ ಪೊಲೀಸ್ ಠಾಣೆಯಲ್ಲಿ ಯಾವುದೇ ಪ್ರಕರಣ ದಾಖಲಾಗಿಲ್ಲ. ಇದನ್ನೂ ಓದಿ: ಮೈಸೂರಿನಲ್ಲಿ ದರೋಡೆ ಶೂಟೌಟ್ ಪ್ರಕರಣ – ಇಬ್ಬರ ಬಂಧನ

  • ನೋಡನೋಡುತ್ತಲೇ ಹಣ ಎಗರಿಸಿದ ಖತರ್ನಾಕ್ ಕಳ್ಳ – ಸಿಸಿಟಿವಿ ಕ್ಯಾಮೆರಾದಲ್ಲಿ ದೃಶ್ಯ ಸೆರೆ

    ನೋಡನೋಡುತ್ತಲೇ ಹಣ ಎಗರಿಸಿದ ಖತರ್ನಾಕ್ ಕಳ್ಳ – ಸಿಸಿಟಿವಿ ಕ್ಯಾಮೆರಾದಲ್ಲಿ ದೃಶ್ಯ ಸೆರೆ

    – ಬೈಕ್ ಸೈಡ್ ಬ್ಯಾಗ್ ನಲ್ಲಿದ್ದ 1 ಲಕ್ಷ ರೂ. ಹಣವನ್ನು ಎಗರಿಸಿ ಪರಾರಿ

    ಕೊಪ್ಪಳ: ಹಾಡ ಹಗಲೇ ಜನರ ಮಧ್ಯೆ ಪೆಟ್ರೋಲ್ ಬಂಕ್ ನಲ್ಲಿ ಕಳ್ಳನೊಬ್ಬ ತನ್ನ ಕೈಚಳಕ ತೋರಿಸಿದ್ದಾನೆ. ಬೈಕಿನ ಸೈಡ್ ಬ್ಯಾಗ್ ನಲ್ಲಿದ್ದ ಒಂದು ಲಕ್ಷ ರೂಪಾಯಿ ಹಣವನ್ನು ಎಗರಿಸಿಕೊಂಡು ಪರಾರಿಯಾಗಿದ್ದಾನೆ.

    ಕೊಪ್ಪಳದ ಪೆಟ್ರೋಲ್ ಬಂಕ್‍ವೊಂದರಲ್ಲಿ ಈ ಘಟನೆ ನಡೆದಿದ್ದು, ಚಾಲಾಕಿ ಕಳ್ಳನ ಕೈಚಳಕ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಚನ್ನಪ್ಪ ಹನುಮಗೌಡ ಪೊಲೀಸ್ ಪಾಟೀಲ್ ಹಣ ಕಳೆದುಕೊಂಡವರಾಗಿದ್ದಾರೆ.

    ಲಾಚನಕೇರಿಯ ಚನ್ನಪ್ಪ ಬುಧವಾರ ಒಂದು ಲಕ್ಷ ರುಪಾಯಿ ಹಣವನ್ನು ಬೈಕ್ ನ ಸೈಡ್ ಬ್ಯಾಗ್ ನಲ್ಲಿಟ್ಟುಕೊಂಡು ಪೆಟ್ರೋಲ್ ಹಾಕಿಸಿಕೊಳ್ಳಲು ಬಂದಿದ್ದರು. ಬ್ಯಾಗ್ ನಲ್ಲಿ ಹಣವಿರುವುದನ್ನು ಆ ಕಳ್ಳ ಹಿಂಬಾಲಿಸಿಕೊಂಡು ಬಂದು ಬೈಕ್ ಸವಾರನಿಗೆ ಗೊತ್ತಾಗದ ರೀತಿಯಲ್ಲಿ ಪೆಟ್ರೋಲ್ ಬಂಕ್ ನಲ್ಲಿ ಹಣ ಕದ್ದೊಯ್ದಿದ್ದಾನೆ.

    ಜನರ ನಡುವೆಯೇ ಕಳ್ಳ ಕೈಚಳಕ ತೋರಿಸಿದ್ದು, ಕಳ್ಳನ ಕೈಚಳಕ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಕಳ್ಳರು, ವಂಚಕರಿಂದ ಜಾಗರೂಕರಾಗಿರುವಂತೆ ಪೊಲೀಸರು ಎಚ್ಚರಿಕೆ ನೀಡಿದ ನಂತರವೂ ಜನ ಮೈ ಮರೆಯುತ್ತಿದ್ದಾರೆ ಎಂಬುದಕ್ಕೆ ಇಂತಹ ಘಟನೆ ಸಾಕ್ಷಿಯಾಗಿದೆ. ಸದ್ಯ ಈ ಸಂಬಂಧ ಕೊಪ್ಪಳ ನಗರ ಠಾಣೆಯ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ:ಕಿಡ್ನಿ ವೈಫಲ್ಯದ ನಡುವೆಯೂ SSLCಯಲ್ಲಿ ಟಾಪರ್ ಆದ ವಿದ್ಯಾರ್ಥಿನಿ

  • ಎರಡು ಪೆಟ್ರೋಲ್ ಬಂಕ್‍ಗೆ ಕನ್ನಹಾಕಿದ ಖದೀಮರು- 5 ಸಾವಿರ ಲೀಟರ್ ಡೀಸೆಲ್ ಕಳ್ಳತನ

    ಎರಡು ಪೆಟ್ರೋಲ್ ಬಂಕ್‍ಗೆ ಕನ್ನಹಾಕಿದ ಖದೀಮರು- 5 ಸಾವಿರ ಲೀಟರ್ ಡೀಸೆಲ್ ಕಳ್ಳತನ

    ಯಾದಗಿರಿ: ಪೆಟ್ರೋಲ್ ಮತ್ತು ಡೀಸೆಲ್ ದರ ದಿನೇ ದಿನೇ ಹೆಚ್ಚಾಗುತ್ತಿರುವ ಬೆನ್ನಲ್ಲೇ ಪೆಟ್ರೋಲ್, ಡೀಸೆಲ್ ಕಳ್ಳತನ ಮಾಡುವ ಗ್ಯಾಂಗ್ ನಗರದಲ್ಲಿ ಫುಲ್ ಆಕ್ಟಿವ್ ಆಗಿದೆ. ಒಂದೇ ರಾತ್ರಿಯಲ್ಲಿ ಎರಡು ಬಂಕ್ ನಲ್ಲಿನ ಬರೊಬ್ಬರಿ 5 ಸಾವಿರ ಲೀಟರ್ ಡೀಸೆಲ್ ಗೆ ಕನ್ನ ಹಾಕಿದೆ.

    ಒಂದೇ ರಾತ್ರಿಯಲ್ಲಿ ಎರಡು ಬಂಕ್ ನಲ್ಲಿನ ಬರೊಬ್ಬರಿ 5 ಸಾವಿರ ಲೀಟರ್ ಡೀಸೆಲ್ ಗೆ ಕನ್ನ ಹಾಕಿದ್ದು, 5 ಲಕ್ಷ ರೂ.ಗೂ ಅಧಿಕ ಮೌಲ್ಯದ ಡಿಸೇಲ್ ಕದ್ದಿದ್ದಾರೆ. ರಾತ್ರಿ ಹೊತ್ತು ಫುಲ್ ಆಕ್ಟಿವ್ ಆಗುವ ಈ ಗ್ಯಾಂಗ್ ನಗರದ ಹೈದರಾಬಾದ್ ರಸ್ತೆಯಲ್ಲಿರುವ ಎಸ್ಸಾರ್ ಮತ್ತು ಗುರು ಪೆಟ್ರೋಲ್ ಬಂಕ್ ಗಳಲ್ಲಿ, ಮಧ್ಯ ರಾತ್ರಿ 12 ಗಂಟೆ ಸುಮಾರಿಗೆ ಈ ಕಳ್ಳತನ ಮಾಡಿದೆ. ಅಂಡರ್ ಗ್ರೌಂಡ್ ನಲ್ಲಿರುವ ಡೀಸೆಲ್ ಟ್ಯಾಂಕ್ ಕವರ್ ಓಪನ್ ಮಾಡಿ, ಅದಕ್ಕೆ ಪೈಪ್ ಹಾಕಿ, ಬಳಿಕ ಸುಮಾರು 30 ಮೀಟರ್ ದೂರದಲ್ಲಿ ಮೋಟರ್ ಹಚ್ಚಿ ಡೀಸೆಲ್ ಕಳ್ಳತನ ಮಾಡಿದೆ.

    ಸಿಸಿಟಿವಿ ಕ್ಯಾಮೆರಾಗಳನ್ನು ಬಟ್ಟೆಯಿಂದ ಕವರ್ ಮಾಡಿ, ಕಳ್ಳತನ ಮಾಡಲಾಗಿದೆ. ಎರಡು ಬಂಕ್ ಗಳಲ್ಲಿ 12 ಸಿಸಿಟಿವಿ ಕ್ಯಾಮೆರಾಗಳಿದ್ದು, ಸ್ವಲ್ಪವೂ ಸುಳಿವು ಸಿಗದ ಹಾಗೆ ಕಳ್ಳತನ ಮಾಡಲಾಗಿದೆ. ಯಾದಗಿರಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕಳ್ಳರ ಪತ್ತೆಗಾಗಿ ಪೊಲೀಸರು ತೀವ್ರ ಶೋಧ ನಡೆಸಿದ್ದಾರೆ.

  • ವರದಕ್ಷಿಣೆಗಾಗಿ ಪತ್ನಿಯನ್ನೇ ಕೊಂದ ಪತಿ

    ವರದಕ್ಷಿಣೆಗಾಗಿ ಪತ್ನಿಯನ್ನೇ ಕೊಂದ ಪತಿ

    ತುಮಕೂರು: ಒಂದು ವರ್ಷದ ಹಿಂದೆ ಮಾದುವೆಯಾಗಿದ್ದ ಯುವತಿಯನ್ನು ವರದಕ್ಷಿಣೆ ಆಸೆಗೆ ಪತಿಯೇ ಕೊಲೆಗೈದ ಘಟನೆ ತುಮಕೂರಿನಲ್ಲಿ ನಡೆದಿದೆ.

    ಸೌಂದರ್ಯ(19) ಕೊಲೆಯಾದ ದುರ್ದೈವಿ. ಈಕೆಯ ಪತಿ ನಾಗರಾಜು ಕೊಲೆ ಮಾಡಿದ ಆರೋಪಿಯಾಗಿದ್ದಾನೆ. ಕಳೆದ ಒಂದು ವರ್ಷದ ಹಿಂದೆ ಹಾಸನದ ಸಕಲೇಶಪುರದ ನಿವಾಸಿ ಸೌಂದರ್ಯಳನ್ನು, ಕುಣಿಗಲ್ ತಾಲೂಕಿನ ಕಾವೇರಿಪುರದ ನಿವಾಸಿ ನಾಗರಾಜು ವಿವಾಹವಾಗಿದ್ದರು. ಒಂದು ವರ್ಷದಿಂದಲು ವರದಕ್ಷಿಣೆ ಹಣಕ್ಕಾಗಿ ಸೌಂದರ್ಯಾಳ ಪತಿ ನಾಗರಾಜ್ ಕಿರುಕುಳ ನೀಡುತ್ತಿದ್ದ ಎಂಬ ಆರೋಪ ಕೇಳಿಬಂದಿದೆ. ಇದನ್ನು ಓದಿ: ತವರು ಮನೆಯಿಂದ ಹಣ ತರುವಂತೆ ಗಲಾಟೆ- ಸಿವಿಲ್ ಎಂಜಿನಿಯರ್ ಪತ್ನಿ ಆತ್ಮಹತ್ಯೆ

    ಆರೋಪಿ ನಾಗರಾಜು ತುಮಕೂರಿನ ಪೆಟ್ರೋಲ್ ಬಂಕ್ ಒಂದರಲ್ಲಿ ಕೆಲಸ ಮಾಡುತ್ತಿದ್ದು, ಕೆಲವು ತಿಂಗಳ ಹಿಂದೆಯಷ್ಟೇ ತುಮಕೂರಿನ ಸರಸ್ವತಿಪುರಂಗೆ ಬಂದು ನೆಲೆಸಿದ್ದರು. ಆದರೆ ಆಗಿಂದಾಗ್ಗೆ ಇಬ್ಬರ ನಡುವೆ ವರದಕ್ಷಿಣೆ ಹಾಗೂ ಸಣ್ಣಪುಟ್ಟ ವಿಷಯಕ್ಕೆ ಜಗಳ ನಡೆಯುತ್ತಿತ್ತು. ಆದರೆ ಕಳೆದ ರಾತ್ರಿ ಹಣಕ್ಕಾಗಿ ಪೀಡಿಸಿದ ನಾಗರಾಜು ಆಕೆಯನ್ನು ಕತ್ತು ಹಿಸುಕಿ ಕೊಲೆ ಮಾಡಿದ್ದಾನೆ ಎಂದು ಹೇಳಲಾಗುತ್ತಿದೆ. ಸದ್ಯ ಆರೋಪಿ ತಲೆ ಮರೆಸಿಕೊಂಡಿದ್ದು, ತುಮಕೂರಿನ ಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನು ಓದಿ:ಲಸಿಕೆ ಹಾಕಿಸಿಕೊಂಡ ವರನೇ ಬೇಕೆಂದ ವಧು – ಶಶಿ ತರೂರ್ ತಬ್ಬಿಬ್ಬು

  • ಆಯಿಲ್ ಖರೀದಿಸಲು ಬಂದು 1 ಲಕ್ಷ ಎಗರಿಸಿದ ಖದೀಮ

    ಆಯಿಲ್ ಖರೀದಿಸಲು ಬಂದು 1 ಲಕ್ಷ ಎಗರಿಸಿದ ಖದೀಮ

    ಕಾರವಾರ: ಆಯಿಲ್ ಖರೀದಿಸಲು ಪೆಟ್ರೋಲ್ ಬಂಕ್‍ಗೆ ಬಂದಿದ್ದ ವ್ಯಕ್ತಿಯೊಬ್ಬ ಬಂಕ್‍ನ ಕ್ಯಾಷ್  ಕೌಂಟರ್‌ನಲ್ಲಿದ್ದ 1 ಲಕ್ಷ ರೂಪಾಯಿ ಹಣವನ್ನು ಎಗರಿಸಿ ಪರಾರಿಯಾಗಿರುವ ಘಟನೆ ಕುಮಟಾ ಪಟ್ಟಣದಲ್ಲಿ ನಡೆದಿದೆ. ಕಳ್ಳನ ಕೈಚಳಕ ಸಿಸಿ ಟಿವಿಯಲ್ಲಿ ಸೆರೆಯಾಗಿದ್ದು ಈತನ ಹುಡುಕಾಟದಲ್ಲಿ ಪೊಲೀಸರು ತೊಡಗಿದ್ದಾರೆ.

    ಕುಮಟಾ ಪಟ್ಟಣದ ಮೂರೂರು ಕ್ರಾಸ್‍ನಲ್ಲಿರುವ ವಿ.ಎಂ.ಮಿರ್ಜಾನಕರ್ ಪೆಟ್ರೋಲ್ ಬಂಕ್‍ಗೆ ಬೈಕಿನಲ್ಲಿ ಬಂದ ಕಳ್ಳ, ಆಯಿಲ್ ನೀಡುವಂತೆ ತಿಳಿಸಿದ್ದಾನೆ. ಆತನಿಗೆ ಬಂಕ್ ಸಿಬ್ಬಂದಿ ಆಯಿಲ್ ನೀಡುತ್ತಿದ್ದ ಸಮಯದಲ್ಲೇ ಮೂರು, ನಾಲ್ಕು ವಾಹನಗಳು ಡೀಸೆಲ್‍ಗಾಗಿ ಬಂಕ್‍ಗೆ ಬಂದಿವೆ.

    ಬಂಕ್ ಸಿಬ್ಬಂದಿ ಈ ವೇಳೆ ಕ್ಯಾಶ್ ಬಾಕ್ಸ್ ಲಾಕ್ ಮಾಡದೇ ವಾಹನಗಳಿಗೆ ಡೀಸೆಲ್ ಹಾಕಲು ಹೋಗಿದ್ದಾನೆ. ಈ ಸಮಯವನ್ನೇ ಉಪಯೋಗಿಸಿಕೊಂಡ ಕಳ್ಳ ತನ್ನ ಚಾಣಾಕ್ಷತನ ಉಪಯೋಗಿಸಿ ಕ್ಯಾಷ್  ಬಾಕ್ಸ್‌ನಲ್ಲಿದ್ದ ಒಂದು ಲಕ್ಷ ರೂ. ಹಣವನ್ನು ಎಗರಿಸಿ ಪರಾರಿಯಾಗಿದ್ದಾನೆ.

    ವಾಹನಗಳಿಗೆ ಡೀಸೆಲ್ ತುಂಬಿ ಬಂದ ಬಳಿಕ ಕ್ಯಾಶ್ ಬಾಕ್ಸ್‍ನಲ್ಲಿ ಹಣ ಇಲ್ಲದ್ದನ್ನು ಗಮನಿಸಿದ ಸಿಬ್ಬಂದಿ ಸಿ.ಸಿ ಕ್ಯಾಮರಾ ವೀಕ್ಷಣೆ ಮಾಡಿದಾಗ ಘಟನೆ ಬೆಳಕಿಗೆ ಬಂದಿದೆ. ಈ ಘಟನೆ ಸಂಬಂಧ ಕುಮಟಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಆರೋಪಿಗಾಗಿ ಹುಡುಕಾಟ ನಡೆಸಲಾಗುತ್ತಿದೆ.

  • ಸರ್ಕಾರಿ ಜಾಗದಲ್ಲಿ ಪೆಟ್ರೋಲ್ ಬಂಕ್ – ಅಧಿಕಾರಿಗಳಿಂದ ತೆರವು ಕಾರ್ಯ

    ಸರ್ಕಾರಿ ಜಾಗದಲ್ಲಿ ಪೆಟ್ರೋಲ್ ಬಂಕ್ – ಅಧಿಕಾರಿಗಳಿಂದ ತೆರವು ಕಾರ್ಯ

    ಕೋಲಾರ : ನಗರದ ಹೃದಯ ಭಾಗದಲ್ಲಿ ಸರ್ಕಾರಿ ಜಾಗದಲ್ಲಿದ್ದ ಪೆಟ್ರೋಲ್ ಬಂಕ್‌ ಒಂದನ್ನು ಕಂದಾಯ ಇಲಾಖೆ ಅಧಿಕಾರಿಗಳು ಇಂದು ತೆರವುಗೊಳಿಸಿದ್ದಾರೆ.

    ಕೋಲಾರ ಉಪ ವಿಭಾಗಾಧಿಕಾರಿ ಸೋಮಶೇಖರ್ ಹಾಗೂ ತಹಶೀಲ್ದಾರ್ ಶೋಭಿತಾ ನೇತೃತ್ವದಲ್ಲಿ ಕೋಲಾರದ ಟೀಕಲ್ ರಸ್ತೆ ಬಳಿಯಿರುವ ಇಂಡಿಯನ್ ಆಯಿಲ್ ಬಂಕ್ ತೆರವುಗೊಳಿಸಲಾಯಿತು.

    ತೆರವು ಸಂದರ್ಭದಲ್ಲಿ ಅಧಿಕಾರಗಳ ಮತ್ತು ಪೆಟ್ರೋಲ್ ಬಂಕ್ ಮಾಲೀಕ ಸತೀಶ್‌ ನಡುವೆ ನಡುವೆ ಮಾತಿನ ಚಕಮಕಿ ನಡೆಯಿತು.

    1948ರಲ್ಲಿ ನಮ್ಮ ತಂದೆಯವರು ಬೇರೆಯವರಿಂದ ಈ ಜಾಗವನ್ನು ಪಡೆದುಕೊಂಡಿದ್ದಾರೆ. ಜೊತೆಗೆ ಪೆಟ್ರೋಲ್ ಬಂಕ್ ನಿರ್ಮಾಣಕ್ಕೆ ಎಲ್ಲಾ ಇಲಾಖೆಗಳಿಂದ ಅನುಮತಿ ಪಡೆಯಲಾಗಿದೆ. ಈಗ ಏಕಾಏಕಿ ಪೆಟ್ರೋಲ್ ಬಂಕ್ ತೆರವುಗೊಳಿಸುತ್ತಿರುವುದು ಎಷ್ಟು ಸರಿ ಎಂದು ಬಂಕ್‌ ಮಾಲೀಕರು ಪ್ರಶ್ನೆ ಮಾಡಿದ್ದಾರೆ.

     

    ಮಾತಿನ ಚಕಮಕಿ ನಡೆದ ಹಿನ್ನೆಲೆಯಲ್ಲಿ ಸ್ಥಳದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿತ್ತು.

  • ಡೀಸೆಲ್ ಬದಲು ನೀರು – ಮಾರ್ಗ ಮಧ್ಯೆ ಕೆಟ್ಟು ನಿಂತ 3 ಲಾರಿ, 3 ಟ್ರ್ಯಾಕ್ಟರ್, 2 ಕಾರು

    ಡೀಸೆಲ್ ಬದಲು ನೀರು – ಮಾರ್ಗ ಮಧ್ಯೆ ಕೆಟ್ಟು ನಿಂತ 3 ಲಾರಿ, 3 ಟ್ರ್ಯಾಕ್ಟರ್, 2 ಕಾರು

    ರಾಯಚೂರು: ಪೆಟ್ರೋಲ್ ಬಂಕ್ ಸಿಬ್ಬಂದಿ ಡೀಸೆಲ್ ಬದಲಿಗೆ ವಾಹನಗಳ ಟ್ಯಾಂಕ್‍ಗೆ ನೀರು ತುಂಬಿದ ಪರಿಣಾಮ ಅವು ಮಾರ್ಗ ಮಧ್ಯೆ ಕೆಟ್ಟು ನಿಂತ ಘಟನೆ ರಾಯಚೂರಿನ ಮಸ್ಕಿಯ ಕನಕವೃತ್ತದಲ್ಲಿನ ಸೂಪರ್ ಪಿಲ್ಲಿಂಗ್ ಸ್ಟೇಷನ್‍ನಲ್ಲಿ ನಡೆದಿದೆ.

    ಫಿಲ್ಲಿಂಗ್ ಸ್ಟೇಷನ್ ಸಿಬ್ಬಂದಿ ಹಾಗೂ ಮಾಲೀಕರ ಬೇಜವಾಬ್ದಾರಿತನಕ್ಕೆ ವಾಹನ ಮಾಲೀಕರು ಆಕ್ರೋಶ ಹೊರಹಾಕಿದ್ದಾರೆ. 10 ಸಾವಿರ ರೂಪಾಯಿ ಡಿಸೇಲ್ ಹಾಕಿಸಿದರೂ ಲಾರಿ ಸ್ಟಾರ್ಟ್ ಆಗಿರಲಿಲ್ಲ. ಹೀಗಾಗಿ ಅನುಮಾನದ ಮೇಲೆ ಪರೀಕ್ಷೆ ಮಾಡಿದರೆ ಟೀಸೆಲ್ ಟ್ಯಾಂಕ್ ತುಂಬಾ ನೀರು ತುಂಬಿರುವುದು ಬೆಳಕಿಗೆ ಬಂದಿದೆ.

    ಇದೇ ರೀತಿ ಇತರ ವಾಹನಗಳಿಗೂ ನೀರು ತುಂಬಿದ್ದು, ಪರಿಣಾಮ ಮಾರ್ಗ ಮಧ್ಯೆಯೇ ಮೂರು ಲಾರಿ, ಮೂರು ಟ್ರ್ಯಾಕ್ಟರ್ ಹಾಗೂ ಎರಡು ಕಾರುಗಳು ಕೆಟ್ಟು ನಿಂತಿವೆ. ಕೂಡಲೇ ಬಂಕ್ ಗೆ ಬಂದ ವಾಹನ ಮಾಲೀಕರು ಸಿಬ್ಬಂದಿ ಹಾಗೂ ಮಾಲೀಕರ ವಿರುದ್ಧ ಮಾತಿನ ಚಕಮಕಿ ನಡೆಸುವ ಮೂಲಕ ತಮ್ಮ ಆಕ್ರೋಶ ಹೊರಹಾಕಿದ್ದಾರೆ.

    ಮಾತಿಗೆ ಮಾತು ಬೆಳೆದ ಬಳಿಕ ಬಂಕ್ ಮಾಲೀಕ ತನ್ನ ತಪ್ಪನ್ನು ಒಪ್ಪಿಕೊಂಡಿದ್ದು, ವಾಹನಗಳನ್ನು ರಿಪೇರಿ ಮಾಡಿಸಿಕೊಡುವುದಾಗಿ ಹೇಳಿದ್ದಾನೆ.

  • ಪೆಟ್ರೋಲ್ ಬಂಕ್ ಬ್ಲಾಸ್ಟ್ – ಮುಗಿಲೆತ್ತರಕ್ಕೆ ಚಿಮ್ಮಿದ ಬೆಂಕಿ, 7 ಮಂದಿಗೆ ಗಾಯ

    ಪೆಟ್ರೋಲ್ ಬಂಕ್ ಬ್ಲಾಸ್ಟ್ – ಮುಗಿಲೆತ್ತರಕ್ಕೆ ಚಿಮ್ಮಿದ ಬೆಂಕಿ, 7 ಮಂದಿಗೆ ಗಾಯ

    ಭುವನೇಶ್ವರ್: ಓಡಿಶಾದ ಭುವನೇಶ್ವರ್ ನಲ್ಲಿ ಎಲ್‍ಪಿಜಿಯನ್ನು ಸ್ಟೋರ್ ಮಾಡಿದ್ದ ಪೆಟ್ರೋಲ್ ಬಂಕ್ ಬ್ಲಾಸ್ಟ್ ಆಗಿದ್ದು, ಏಳು ಮಂದಿ ಗಾಯಗೊಂಡಿದ್ದಾರೆ.

    ಬ್ಲಾಸ್ಟ್ ನಂತರ ಪೆಟ್ರೋಲ್ ಬಂಕಿನಲ್ಲಿ ದೊಡ್ಡ ಮಟ್ಟದ ಬೆಂಕಿ ಕಾಣಿಸಿಕೊಂಡಿದ್ದು, ಸ್ಥಳದಲ್ಲಿ ಇದ್ದ ಏಳು ಮಂದಿಗೆ ಗಾಯವಾಗಿದೆ. ಜೊತೆಗೆ ಇಬ್ಬರ ಪರಿಸ್ಥಿತಿ ತೀರ ಗಂಭೀರವಾಗಿದ್ದು, ಅವರನ್ನು ಎಸ್‍ಸಿಬಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಬಂದಿದ್ದು, ಅಗ್ನಿ ನಂದಿಸುವಲ್ಲಿ ಕೊನೆಗೂ ಯಶಸ್ವಿಯಾಗಿದ್ದಾರೆ.

    ಈ ಘಟನೆ ಭುವನೇಶ್ವರ್ ನಲ್ಲಿರುವ ರಾಜ್ ಭವನ್ ಹತ್ತಿರದಲ್ಲಿ ನಡೆದಿದೆ. ಸ್ಫೋಟದ ತೀವ್ರತೆಗೆ ಸರ್ಕಾರಿ ಕ್ವಾರ್ಟರ್ಸ್ ನಲ್ಲಿರುವ ಮನೆಗಳ ಕಿಟಕಿಯ ಗಾಜುಗಳು ಪುಡಿಪುಡಿಯಾಗಿವೆ. ಜೊತೆಗೆ ಬೆಂಕಿ ಮುಗಿಲೆತ್ತರಕ್ಕೆ ಚಿಮ್ಮಿದೆ. ಈ ದೃಶ್ಯವನ್ನು ಸ್ಥಳೀಯರು ತಮ್ಮ ಮೊಬೈಲಿನಲ್ಲಿ ಸೆರೆ ಹಿಡಿದಿದ್ದಾರೆ. ಜೊತೆಗೆ ಪೆಟ್ರೋಲ್ ಬಂಕ್‍ನಲ್ಲಿ ಇದ್ದ ಕಾರು ಮತ್ತು ಬೈಕುಗಳು ಸುಟ್ಟು ಕರಕಲಾಗಿವೆ. ಬಂಕ್ ಸುತ್ತಲಿನ 100 ಮೀಟರ್ ಜಾಗ ಸುಟ್ಟು ಹೋಗಿದೆ.

    ಈ ವಿಚಾರದ ಬಗ್ಗೆ ಮಾತನಾಡಿರುವ ಡಿಸಿಪಿ ಉಮಾ ಶಂಕರ್ ದಾಸ್ ಅವರು, ಈ ಘಟನೆ ಮಧ್ಯಾಹ್ನ ಸುಮಾರು 1.25ಕ್ಕೆ ನಡೆದಿದೆ. ಈ ಅಗ್ನಿ ಅವಘಡದಲ್ಲಿ ಯಾವುದೇ ಸಾವು ಸಂಭವಿಸಿಲ್ಲ. ಜೊತೆಗೆ ಪೆಟ್ರೋಲ್ ಬಂಕ್ ಬ್ಲಾಸ್ಟ್ ಆಗಲು ಕಾರಣವೇನು ಎಂಬುದು ಇನ್ನೂ ತಿಳಿದು ಬಂದಿಲ್ಲ. ಆದರ ಬಗ್ಗೆ ತನಿಖೆ ಮಾಡುತ್ತಿದ್ದೇವೆ. ಘಟನೆ ನಡೆದ ಬಳಿಕ ಬಂಕ್ ರಸ್ತೆಯನ್ನು ಬಂದ್ ಮಾಡಿದ್ದೇವೆ. ಸ್ಫೋಟದ ಸದ್ದು 1 ಕಿ.ಮೀವರೆಗೂ ಕೇಳಿಸಿದೆ ಎಂದು ತಿಳಿಸಿದ್ದಾರೆ.

    ನಡೆದ ಘಟನೆಯನ್ನು ಖಂಡಿಸಿ ಟ್ವೀಟ್ ಮಾಡಿರುವ ಓಡಿಶಾದ ಮುಖ್ಯಮಂತ್ರಿ ನವೀನ್ ಪಟ್ನಾಯಕ್, ಭುವನೇಶ್ವರದ ರಾಜ್ ಭವನ್ ಬಳಿಯ ಪೆಟ್ರೋಲ್ ಬಂಕ್‍ನಲ್ಲಿ ಸಂಭವಿಸಿದ ಅಗ್ನಿ ಅಪಘಾತದಲ್ಲಿ ಗಾಯಗೊಂಡ ಜನರಿಗೆ ಉಚಿತ ವೈದ್ಯಕೀಯ ಚಿಕಿತ್ಸೆ ನೀಡುವುದಾಗಿ ಘೋಷಿಸಲಾಗಿದೆ ಮತ್ತು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸುತ್ತೇನೆ. ಬೆಂಕಿಯನ್ನು ನಂದಿಸಲಾಗಿದೆ ಮತ್ತು ಈಗ ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದಿದ್ದಾರೆ.

  • ಪೆಟ್ರೋಲ್, ಡೀಸೆಲ್ ಬದಲು ನೀರು – ಬಂಕ್ ವಿರುದ್ಧ ಗ್ರಾಹಕರ ಆಕ್ರೋಶ

    ಪೆಟ್ರೋಲ್, ಡೀಸೆಲ್ ಬದಲು ನೀರು – ಬಂಕ್ ವಿರುದ್ಧ ಗ್ರಾಹಕರ ಆಕ್ರೋಶ

    ಯಾದಗಿರಿ: ಬಂಕ್ ನಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬದಲು ನೀರು ಹಾಕುತ್ತಿದ್ದು, ಡೀಸೆಲ್ ಹಾಕಿಸಿಕೊಂಡ ವಾಹನಗಳ ಇಂಜಿನ್ ಫುಲ್ ಬ್ಲಾಕ್ ಆಗಿ ಕೆಟ್ಟು ನಿಂತ ಘಟನೆ ಯಾದಗಿರಿ ಜಿಲ್ಲೆಯಲ್ಲಿ ನಡೆದಿದೆ.

    ಜಿಲ್ಲೆಯ ಹುಣಸಗಿ ತಾಲೂಕಿನ ನಾರಾಯಣಪುರದಲ್ಲಿ ಈ ಘಟನೆ ನಡೆದಿದೆ. ಕಳೆದ ಎರಡು ದಿನಗಳಿಂದ ನಾರಾಯಣಪುರದಲ್ಲಿರುವ ಇಂಡಿಯನ್ ಪೆಟ್ರೋಲ್ ಬಂಕ್ ನಲ್ಲಿ ಇಂಧನ ಬದಲಿಗೆ ನೀರು ಹಾಕಲಾಗುತ್ತಿದೆ ಎಂಬ ಆರೋಪ ಕೇಳಿ ಬರುತ್ತಿತ್ತು. ಸೋಮವಾರ ರಾತ್ರಿ ನಾರಾಯಣಪುರ ಗ್ರಾಮದ ಹನುಮಂತ ಎಂಬವರು ತಮ್ಮ ಟಾಟಾ ಏಸ್ ಗಾಡಿಗೆ ರಾತ್ರಿ ಡೀಸೆಲ್ ಹಾಕಿಸಿದ್ದರು, ವಾಹನ ಸ್ವಲ್ಪ ದೂರ ತೆರಳಿ ಇಂಜಿನ್ ಬ್ಲಾಕ್ ಆಗಿ ವಾಹನ ರಿಪೇರಿಗೆ ಬಂದಿತ್ತು.

    ಕೆಲ ಹೊತ್ತಿನ ಬಳಿಕ ಅದೇ ಬಂಕ್ ನಲ್ಲಿ ಡೀಸೆಲ್ ಹಾಕಿಸಿದ ಹನುಮಂತನ ಸ್ನೇಹಿತನ ಗಾಡಿಗೂ ಸಹ ಇದೆ ಸಮಸ್ಯೆ ಎದುರಾಗಿತ್ತು. ಹೀಗಾಗಿ ಹನುಮಂತ ಮತ್ತು ಆತನ ಸ್ನೇಹಿತ ಇಂದು ಬೆಳಗ್ಗೆ ಬಂಕ್ ಗೆ ತೆರಳಿ ಡೀಸೆಲ್ ಮತ್ತು ಪೆಟ್ರೋಲ್ ಪರೀಕ್ಷೆ ಮಾಡಿದಾಗ, ಅದರಲ್ಲಿ ನೀರು ಬೆರೆತ ಸತ್ಯ ಹೊರಬಿದ್ದಿದೆ.

    ಬಂಕ್ ನಲ್ಲಿ ಡೀಸೆಲ್ ಮತ್ತು ಪೆಟ್ರೋಲ್ ಹಾಕಿಸಿಕೊಂಡ ಗ್ರಾಹಕರು, ಮಾಲೀಕರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪೆಟ್ರೋಲ್ ಮತ್ತು ಡೀಸೆಲ್ ಟ್ಯಾಂಕ್ ಗೆ ಮಳೆಯ ನೀರು ಬೆರೆತ ಹಿನ್ನೆಲೆಯಲ್ಲಿ ಇಂಧನದೊಳಗೆ ನೀರು ಸೇರಿಕೊಂಡಿರುವ, ನೆಪ ಹೇಳಿ ಬಂಕ್ ಮಾಲೀಕರು ತಪ್ಪಿಸಿಕೊಳ್ಳಲು ಮುಂದಾಗುತ್ತಿದ್ದಾರೆ ಎನ್ನಲಾಗುತ್ತಿದೆ.

  • ಪೆಟ್ರೋಲ್ ಬಂಕ್‍ಗೆ ಬೆಂಕಿ ಹಚ್ತೀನಿ: ನಂಜನಗೂಡಿನಲ್ಲಿ ಮಹಿಳಾ ಪಿಎಸ್‍ಐ ದರ್ಪ

    ಪೆಟ್ರೋಲ್ ಬಂಕ್‍ಗೆ ಬೆಂಕಿ ಹಚ್ತೀನಿ: ನಂಜನಗೂಡಿನಲ್ಲಿ ಮಹಿಳಾ ಪಿಎಸ್‍ಐ ದರ್ಪ

    ಮೈಸೂರು: ನಗರದ ನಂಜನಗೂಡಿನಲ್ಲಿ ಮಹಿಳಾ ಪಿಎಸ್‍ಐ ಒಬ್ಬರು ದರ್ಪ ಮೆರೆದ ಪ್ರಸಂಗವೊಂದು ನಡೆದಿದೆ.

    ನಂಜನಗೂಡು ಪಟ್ಟಣದ ಹುಲ್ಲಹಳ್ಳಿ ವೃತ್ತದಲ್ಲಿರುವ ಇಂಡಿಯನ್ ಆಯಿಲ್ ಪೆಟ್ರೋಲ್ ಬಂಕ್‍ನಲ್ಲಿ ಸೋಮವಾರ ಸಂಜೆ ಈ ಘಟನೆ ನಡೆದಿದೆ. ಸದ್ಯ ಈ ವಿಡಿಯೋ ಇದೀಗ ವೈರಲ್ ಆಗಿದೆ. ಬಲವಂತವಾಗಿ ಬಂಕ್ ಮುಚ್ಚುವಂತೆ ಬೆದರಿಸಿರುವ ಮಹಿಳಾ ಪಿಎಸ್‍ಐ ವರ್ತನೆಗೆ ಸಾರ್ವಜನಿಕ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

    ಲಾಕ್‍ಡೌನ್ ಹಿನ್ನೆಲೆಯಲ್ಲಿ ನಂಜನಗೂಡು ಗ್ರಾಮಾಂತರ ಠಾಣೆ ಸಬ್‌ಇನ್ಸ್‌ಪೆಕ್ಟರ್ ಯಾಸ್ಮಿನ್ ತಾಜ್ ಅವರು ಪೆಟ್ರೋಲ್ ಬಂಕ್ ಸಿಬ್ಬಂದಿಗೆ ಅವಾಜ್ ಹಾಕಿದ್ದಾರೆ. ನನ್ನ ಜೀಪ್‍ಗೆ ಡೀಸೆಲ್ ಹಾಕದಿದ್ರೆ ಪೆಟ್ರೋಲ್ ಬಂಕ್‍ಗೆ ಬೆಂಕಿ ಹಚ್ಚಿತ್ತೀನಿ ಎಂದು ಪೆಟ್ರೋಲ್ ಬಂಕ್ ಸಿಬ್ಬಂದಿಗೆ ಅವಾಜ್ ಹಾಕಿದ್ದಾರೆ.

    ಪೆಟ್ರೋಲ್ ಬಂಕ್‍ನಲ್ಲಿ ಸಿಬ್ಬಂದಿ ಪೊಲೀಸ್ ಜೀಪ್‍ಗೆ ಡೀಸೆಲ್ ಹಾಕಲು ನಿರಾಕರಿಸಿದ್ದಾರೆ. ಇಷ್ಟಕ್ಕೆ ಸಿಟ್ಟಾದ ಮಹಿಳಾ ಪಿಎಸ್‍ಐ ಯಾಸ್ಮಿನ್ ತಾಜ್, ಅವಾಚ್ಯ ಶಬ್ದಗಳಿಂದ ಸಿಬ್ಬಂದಿಗೆ ನಿಂದಿಸಿದ್ದಾರೆ. ನನ್ನ ಜೀಪ್‍ಗೆ ಡೀಸೆಲ್ ಹಾಕದಿದ್ದ ಮೇಲೆ ಈ ಬಂಕ್ ಯಾಕೆ ಬೇಕು. ಈಗಲೇ ಪೆಟ್ರೋಲ್ ಬಂಕ್ ಅನ್ನ ಬೆಂಕಿ ಹಚ್ಚಿ ಸುಟ್ಟುಬಿಡುತ್ತೀನಿ ಅಂತ ಪೆಟ್ರೋಲ್ ಬಂಕ್ ಸಿಬ್ಬಂದಿಗೆ ಹಿಗ್ಗಾಮುಗ್ಗ ಬೈದಿದ್ದಾರೆ.

    ಇಷ್ಟು ಮಾತ್ರವಲ್ಲದೆ ಬಂಕ್‍ನಲ್ಲಿದ್ದ ಆಟೋ ಚಾಲಕನಿಗೂ ಲಾಠಿಯಿಂದ ಹಲ್ಲೆ ಮಾಡಿದ್ದಾರೆ. ಇಲ್ಲಿ ಪೆಟ್ರೋಲ್ ಡೀಸೆಲ್ ಸಿಗೋಲ್ಲ ಹೋಗ್ತಾ ಇರು ಎನ್ನುತ್ತಲೆ ಲಾಠಿ ಬೀಸಿದ್ದಾರೆ.