Tag: petrol

  • ಕಾಂಗ್ರೆಸ್ಸಿನಿಂದ ಶಾಸಕ ಭೈರತಿ ಬಸವರಾಜ್ ಬಂಟ ನಾರಾಯಣ ಸ್ವಾಮಿ ಅಮಾನತು

    ಕಾಂಗ್ರೆಸ್ಸಿನಿಂದ ಶಾಸಕ ಭೈರತಿ ಬಸವರಾಜ್ ಬಂಟ ನಾರಾಯಣ ಸ್ವಾಮಿ ಅಮಾನತು

    ಬೆಂಗಳೂರು: ಕೆಆರ್ ಪುರಂ ಬಿಬಿಎಂಪಿ ಕಚೇರಿಗೆ ಬೆಂಕಿ ಹಚ್ಚುವ ಬೆದರಿಕೆ ಹಾಕಿದ್ದ ಘಟನೆಗೆ ಸಂಬಂಧಿಸಿದಂತೆ ಶಾಸಕ ಭೈರತಿ ಬಸವರಾಜ್ ಬಂಟ ಬೆಂಗಳೂರು ಜಲಮಂಡಳಿ ಸದಸ್ಯನಾಗಿರುವ ನಾರಾಯಣಸ್ವಾಮಿಯನ್ನು ಪಕ್ಷದಿಂದ ಅಮಾನತುಗೊಳಿಸಲಾಗಿದೆ.

    ಈ ಕುರಿತು ಕೆಪಿಸಿಸಿ ಅಧ್ಯಕ್ಷ ಜಿ ಪರಮೇಶ್ವರ್, ನಾರಾಯಣ ಸ್ವಾಮಿಯನ್ನು ಪಕ್ಷದಿಂದ ಅಮಾನತುಗೊಳಿಸಿದ್ದೇವೆ ಎಂದು ಟ್ವೀಟ್ ಮಾಡಿ ತಿಳಿಸಿದ್ದಾರೆ.

    ಘಟನೆ ಕುರಿತು ಮಾಧ್ಯಮಕ್ಕೆ ಸ್ಪಷ್ಟನೆ ನೀಡಿರುವ ನಾರಾಯಣಸ್ವಾಮಿ, ತಮ್ಮ ಕೃತ್ಯವನ್ನು ಸಮರ್ಥನೆ ಮಾಡಿಕೊಂಡಿದ್ದ. ಅಲ್ಲದೇ ಘಟನೆ ಕುರಿತ ವಿಡಿಯೋವನ್ನು ಮಾಧ್ಯಮಗಳು ಪ್ರಸಾರ ಮಾಡಿದರೆ ತನಗೆ ಯಾವುದೇ ನಷ್ಟವಿಲ್ಲ ಎಂದು ತಿಳಿಸಿದ್ದ.

    ರಾಜ್ಯ ವಿಧಾನಸಭಾ ಚುನಾವಣೆ ಕೇವಲ ಕೆಲ ತಿಂಗಳು ಇರುವ ಕಾರಣ ವೇಳೆ ನಾರಾಯಣಸ್ವಾಮಿ ಅವರ ಘಟನೆ ಪಕ್ಷ ಘನತೆಗೆ ದಕ್ಕೆ ತರುವ ಸಾಧ್ಯತೆ ಇರುವುದರಿಂದ ಪಕ್ಷದ ನಾಯಕರು ಈ ಕ್ರಮ ಕೈಗೊಂಡಿದ್ದಾರೆ.

    ಏನಿದು ಘಟನೆ?: ನಾರಾಯಣಸ್ವಾಮಿ ಎನ್‍ಆರ್‍ಐ ಬಡಾವಣೆಯ ಜಮೀನು ವಿಚಾರದಲ್ಲಿ ಅಕ್ರಮವಾಗಿ ಖಾತೆ ಮಾಡಿಕೊಡುವಂತೆ ಬಿಬಿಎಂಪಿ ಸಹಾಯಕ ಕಂದಾಯ ಅಧಿಕಾರಿ ಚೆಂಗಲ್ ರಾಯಪ್ಪಗೆ ಒತ್ತಡ ಹಾಕಿದ್ದ. ಜಮೀನು ವ್ಯಾಜ್ಯ ಕೋರ್ಟ್‍ನಲ್ಲಿದೆ, ಅಕ್ರಮವಾಗಿ ಖಾತೆ ಮಾಡಿಕೊಡಲ್ಲ ಎಂದು ಚೆಂಗಲ್ ರಾಯಪ್ಪ ಹೇಳಿದ್ದರು. ಹೀಗಾಗಿ ಕಳೆದ ಫೆಬ್ರವರಿ 16ರಂದು ಬೆಳಗ್ಗೆ 11 ಗಂಟೆ ವೇಳೆಯಲ್ಲಿ ಹೊರಮಾವು ನಲ್ಲಿರುವ ಬಿಬಿಎಂಪಿ ಕಚೇರಿಗೆ ನುಗ್ಗಿದ ನಾರಾಯಣಸ್ವಾಮಿ, ಎಆರ್‍ಒ ಚೆಂಗಲ್ ರಾಯಪ್ಪ ಮುಂದೆಯೇ ಕಚೇರಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಲು ಮುಂದಾಗಿದ್ದಾನೆ. ಖಾತೆ ಮಾಡಿಕೊಡದಿದ್ದರೆ ಕಚೇರಿಯಲ್ಲಿರುವ ದಾಖಲೆಗಳನ್ನು ಸುಟ್ಟು ಹಾಕುವುದಾಗಿ ಬೆದರಿಕೆ ಹಾಕಿದ್ದ. ಇದನ್ನೂ ಓದಿ: ನಾನು ತಪ್ಪು ಮಾಡಿಲ್ಲ, ಕ್ಷಮೆ ಕೇಳಲ್ಲ – ಸುದ್ದಿ ಪ್ರಸಾರ ಮಾಡಿ: ತನ್ನ ಕೃತ್ಯವನ್ನು ಸಮರ್ಥಿಸಿಕೊಂಡ ನಾರಾಯಣ ಸ್ವಾಮಿ

    ಚೆಂಗಲ್ ರಾಯಪ್ಪ ಖಡಕ್ ಅಧಿಕಾರಿ ಅಂತ ಗುರುತಿಸಿಕೊಂಡಿದ್ದ ವ್ಯಕ್ತಿಯಾಗಿದ್ದು, ಪೆಟ್ರೋಲ್ ಹಾಕೋದಾಗಿ ಬೆದರಿಸಿದ್ರೂ ಅವರು ಹೆದರಲಿಲ್ಲ. ಎರಡು ದಿನಗಳ ಹಿಂದೆ ಚೆಂಗಲ್ ರಾಯಪ್ಪ ಅವರನ್ನ ವರ್ಗಾವಣೆ ಮಾಡಲಾಗಿದೆ. ಸಿಎಂ ಮತ್ತು ಭೈರತಿ ಬಸವರಾಜ್ ಪ್ರಭಾವ ಬಳಸಿ ಚೆಂಗಲ್ ರಾಯಪ್ಪರನ್ನ ನಾರಾಯಣಸ್ವಾಮಿ ವರ್ಗಾವಣೆ ಮಾಡಿಸಿದ್ದಾನೆ ಎನ್ನಲಾಗಿದೆ.  ಇದನ್ನೂ ಓದಿ: ಶಾಸಕ ಭೈರತಿ ಬಸವರಾಜ್ ಬಂಟನ ಗೂಂಡಾಗಿರಿ- ಸರ್ಕಾರಿ ಕಚೇರಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ತೀನೆಂದು ಬೆದರಿಕೆ

  • ನಾನು ತಪ್ಪು ಮಾಡಿಲ್ಲ, ಕ್ಷಮೆ ಕೇಳಲ್ಲ – ಸುದ್ದಿ ಪ್ರಸಾರ ಮಾಡಿ: ತನ್ನ ಕೃತ್ಯವನ್ನು ಸಮರ್ಥಿಸಿಕೊಂಡ ನಾರಾಯಣ ಸ್ವಾಮಿ

    ನಾನು ತಪ್ಪು ಮಾಡಿಲ್ಲ, ಕ್ಷಮೆ ಕೇಳಲ್ಲ – ಸುದ್ದಿ ಪ್ರಸಾರ ಮಾಡಿ: ತನ್ನ ಕೃತ್ಯವನ್ನು ಸಮರ್ಥಿಸಿಕೊಂಡ ನಾರಾಯಣ ಸ್ವಾಮಿ

    ಬೆಂಗಳೂರು: ಕೆಆರ್ ಪುರಂ ಬಿಬಿಎಂಪಿ ಕಚೇರಿಗೆ ಬೆಂಕಿ ಹಚ್ಚಲು ಯತ್ನಿಸಿದ್ದ ಘಟನೆಯನ್ನು ಬೆಂಗಳೂರು ಜಲಮಂಡಳಿ ಸದಸ್ಯನಾಗಿರುವ ನಾರಾಯಣಸ್ವಾಮಿ ಸಮರ್ಥಿಸಿಕೊಂಡಿದ್ದಾನೆ.

    ಈ ಕುರಿತು ಮಾಧ್ಯಮಕ್ಕೆ ಸ್ಪಷ್ಟನೆ ನೀಡಿರುವ ನಾರಾಯಣಸ್ವಾಮಿ, ಖಾತೆ ಮಾಡಿಕೊಡದೇ ವಿನಾಃ ಕಾರಣ ತಡಮಾಡುತ್ತಿದ್ದ ಕಾರಣಕ್ಕೆ ಅಧಿಕಾರಿಯ ಮುಂದೇ ನನ್ನ ಬೇಸರವನ್ನು ವ್ಯಕ್ತಪಡಿಸಿದೆ. ಇದು ಕೇವಲ ನನ್ನ ಒಬ್ಬನ ಸಮಸ್ಯೆಯಲ್ಲ 750 ಜನರ ಸಮಸ್ಯೆ ಎಂದು ಹೇಳಿದ್ದಾನೆ.

    ಪಶ್ಚಾತ್ತಾಪ ಇಲ್ಲ: ಈ ಕುರಿತು ಯಾವುದೇ ಕ್ಷಮೆ ಕೇಳುವ ಪ್ರಶ್ನೆ ಇಲ್ಲ. ನಾನು ಯಾವುದೇ ಕ್ಷಮೆ ಕೇಳುವಂತಹ, ಉದ್ದೇಶ ಪೂರ್ವಕ ತಪ್ಪು ಮಾಡಿಲ್ಲ. ಈ ಕುರಿತು ನಾನು ಯಾರನ್ನು ಕ್ಷಮೆ ಕೇಳುವುದಿಲ್ಲ. ಅಧಿಕಾರಿಗಳು ಜನಸಾಮಾನ್ಯರಿಗೆ ನೀಡುವ ಚಿತ್ರಹಿಂಸೆಯನ್ನು ಎದುರಿದ್ದೇನೆ ಅಷ್ಟೇ. ಕ್ಷೇತ್ರದ ಜನರಿಗೆ ಘಟನೆ ಕುರಿತು ಸಂಪೂರ್ಣ ಮಾಹಿತಿ ಇದೆ. ಈ ಕುರಿತು ಮಾತನಾಡಲು ಇದು ಸಮಯವಲ್ಲ. ಸೂಕ್ತ ವೇದಿಕೆಯಲ್ಲಿ ನಾನು ಉತ್ತರ ನೀಡುತ್ತೇನೆ. ಇಂತಹ ದೃಶ್ಯಗಳನ್ನು ಮಾಧ್ಯಮದಲ್ಲಿ ಪ್ರಸಾರ ಮಾಡಿದರೆ ನನಗೆ ಏನು ನಷ್ಟವಿಲ್ಲ, ಪ್ರಸಾರ ಮಾಡಿ ಎಂದಿದ್ದಾನೆ.

    ಪೆಟ್ರೋಲ್ ಎರಚಿಲ್ಲ: ನನ್ನ ಆರೋಗ್ಯಕ್ಕೆ ಸಂಬಂಧಿಸಿದಂತೆ ವೈದ್ಯರು ಸೂಚಿಸಿದ ಕೆಲವು ಪೌಡರ್ ನೀರಿನಲ್ಲಿ ಕಲಸಿ ಕುಡಿಯುತ್ತೇನೆ. ಆ ವೇಳೆ ನನ್ನ ಕೈನಲ್ಲಿದ್ದ ಆ ಬಾಟಲ್ ನೀರನ್ನು ಬೇಸರದಿಂದ ಎರಚಿದ್ದೇನೆ. ಶಾಸಕರಿಗೂ ಈ ಪ್ರಕರಣಕ್ಕೂ ಯಾವುದೇ ಸಂಬಂಧವಿಲ್ಲ. ಆದರೆ ಜನರ ಸಮಸ್ಯೆ ಬಗೆಹರಿಸಲು ಅಧಿಕಾರಿಗಳಿಗೆ ಸೂಚನೆ ನೀಡಲು ಮಾತ್ರ ಅವರಿಗೆ ಹೇಳಿದ್ದೆ ಎಂದಿದ್ದಾನೆ.

    ನಾನು ಕೇವಲ ಕಾಂಗ್ರೆಸ್ ಪಕ್ಷದ ಸಾಮಾನ್ಯ ಕಾರ್ಯಕರ್ತ ಅಷ್ಟೇ. ಇದರಲ್ಲಿ ಸಿಎಂ, ಶಾಸಕರ ಪ್ರಭಾವ ಬಳಸಿಲ್ಲ. ಅಧಿಕಾರಿ ಕ್ರಮದಿಂದ ಬೇಸತ್ತು ಈ ರೀತಿ ನಡೆದಿದೆ. ಆದರೆ ಸಮಾಜದಲ್ಲಿ ಯಾವುದೇ ತಪ್ಪು ಕಾರ್ಯ ಮಾಡಿಲ್ಲ. ಘಟನೆ ನಡೆದು ಒಂದು ವಾರ ಆಗಿದೆ. ಈ ಕುರಿತು ಯಾವುದೇ ಪಶ್ಚಾತ್ತಾಪ ಪಡುವುದು ಇಲ್ಲ. ಅನಿವಾರ್ಯವಾಗಿ ಸಾರ್ವಜನಿಕ ಜೀವನ ಪ್ರವೇಶ ಮಾಡಿದ್ದೇನೆ ಎಂದು ಪ್ರತಿಕ್ರಿಯಿಸಿದ್ದಾನೆ.

    ಅಧಿಕಾರಿ ವರ್ಗಾವಣೆ: ಕಳೆದ 20 ದಿನಗಳ ಹಿಂದೆಯೇ ಘಟನೆ ಕಾರಣರಾದ ಅಧಿಕಾರಿಯನ್ನು ವರ್ಗಾವಣೆ ಮಾಡಲಾಗಿದೆ. ಅಧಿಕಾರಿಯ ವರ್ಗಾವಣೆಗೆ ನಾನು ಯಾರ ಮೇಲು ಒತ್ತಡ ಹಾಕಿಲ್ಲ. ಅದಕ್ಕೂ ನನಗೂ ಸಂಬಂಧವಿಲ್ಲ. ಕೆಆರ್ ಪುರಂ ಬ್ಲಾಕ್ ಅಧ್ಯಕ್ಷನಾಗಿ ಸೇವೆ ಸಲ್ಲಿಸಿದ್ದೆ. ಪ್ರಸ್ತುತ ಕಾಂಗ್ರೆಸ್ ಪಕ್ಷದ ಸಿದ್ಧಾಂತ ಇಷ್ಟ ಪಟ್ಟು ಸಾಮಾನ್ಯ ಕಾರ್ಯಕರ್ತನಾಗಿ ಸೇವೆ ಸಲ್ಲಿಸುತ್ತಿದ್ದೇನೆ ಎಂದು ತಿಳಿಸಿದ್ದಾನೆ.

    ಏನಿದು ಘಟನೆ?: ನಾರಾಯಣಸ್ವಾಮಿ ಎನ್‍ಆರ್‍ಐ ಬಡಾವಣೆಯ ಜಮೀನು ವಿಚಾರದಲ್ಲಿ ಅಕ್ರಮವಾಗಿ ಖಾತೆ ಮಾಡಿಕೊಡುವಂತೆ ಬಿಬಿಎಂಪಿ ಸಹಾಯಕ ಕಂದಾಯ ಅಧಿಕಾರಿ ಚೆಂಗಲ್ ರಾಯಪ್ಪಗೆ ಒತ್ತಡ ಹಾಕಿದ್ದ. ಜಮೀನು ವ್ಯಾಜ್ಯ ಕೋರ್ಟ್‍ನಲ್ಲಿದೆ, ಅಕ್ರಮವಾಗಿ ಖಾತೆ ಮಾಡಿಕೊಡಲ್ಲ ಎಂದು ಚೆಂಗಲ್ ರಾಯಪ್ಪ ಹೇಳಿದ್ದರು. ಹೀಗಾಗಿ ಕಳೆದ ಫೆಬ್ರವರಿ 16ರಂದು ಬೆಳಗ್ಗೆ 11 ಗಂಟೆ ವೇಳೆಯಲ್ಲಿ ಹೊರಮಾವು ನಲ್ಲಿರುವ ಬಿಬಿಎಂಪಿ ಕಚೇರಿಗೆ ನುಗ್ಗಿದ ನಾರಾಯಣಸ್ವಾಮಿ, ಎಆರ್‍ಒ ಚೆಂಗಲ್ ರಾಯಪ್ಪ ಮುಂದೆಯೇ ಕಚೇರಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಲು ಮುಂದಾಗಿದ್ದಾನೆ. ಖಾತೆ ಮಾಡಿಕೊಡದಿದ್ದರೆ ಕಚೇರಿಯಲ್ಲಿರುವ ದಾಖಲೆಗಳನ್ನು ಸುಟ್ಟು ಹಾಕುವುದಾಗಿ ಬೆದರಿಕೆ ಹಾಕಿದ್ದಾನೆ.

    ಚೆಂಗಲ್ ರಾಯಪ್ಪ ಖಡಕ್ ಅಧಿಕಾರಿ ಅಂತ ಗುರುತಿಸಿಕೊಂಡಿದ್ದ ವ್ಯಕ್ತಿಯಾಗಿದ್ದು, ಪೆಟ್ರೋಲ್ ಹಾಕೋದಾಗಿ ಬೆದರಿಸಿದ್ರೂ ಅವರು ಹೆದರಲಿಲ್ಲ. ಎರಡು ದಿನಗಳ ಹಿಂದೆ ಚೆಂಗಲ್ ರಾಯಪ್ಪ ಅವರನ್ನ ವರ್ಗಾವಣೆ ಮಾಡಲಾಗಿದೆ. ಸಿಎಂ ಮತ್ತು ಭೈರತಿ ಬಸವರಾಜ್ ಪ್ರಭಾವ ಬಳಸಿ ಚೆಂಗಲ್ ರಾಯಪ್ಪರನ್ನ ನಾರಾಯಣಸ್ವಾಮಿ ವರ್ಗಾವಣೆ ಮಾಡಿಸಿದ್ದಾನೆ ಎನ್ನಲಾಗಿದೆ.

    https://www.youtube.com/watch?v=1hoUCWe-r14

  • ಶಾಸಕ ಭೈರತಿ ಬಸವರಾಜ್ ಬಂಟನ ಗೂಂಡಾಗಿರಿ- ಸರ್ಕಾರಿ ಕಚೇರಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ತೀನೆಂದು ಬೆದರಿಕೆ

    ಶಾಸಕ ಭೈರತಿ ಬಸವರಾಜ್ ಬಂಟನ ಗೂಂಡಾಗಿರಿ- ಸರ್ಕಾರಿ ಕಚೇರಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ತೀನೆಂದು ಬೆದರಿಕೆ

    ಬೆಂಗಳೂರು: ಶಾಸಕ ಹ್ಯಾರಿಸ್ ಪುತ್ರನ ಗೂಂಡಾಗಿರಿ ಆಯ್ತು ಇದೀಗ ಭೈರತಿ ಬಸವರಾಜ್ ಬಲಗೈ ಬಂಟ ದರ್ಪ ಪ್ರದರ್ಶಿಸಿರೋ ಘಟನೆ ಬೆಳಕಿಗೆ ಬಂದಿದೆ.

    ಖಾತೆ ಮಾಡಿಕೊಡದಿದ್ದರೆ ಬಿಬಿಎಂಪಿ ಕಚೇರಿಗೆ ಬೆಂಕಿ ಹಚ್ಚಿಬಿಡ್ತೀನಿ ಅಂತ ಭೈರತಿ ಬಸವರಾಜ್ ಬಂಟ ಬೆದರಿಕೆ ಹಾಕಿದ್ದಾನೆ. ಕೆ.ಆರ್.ಪುರಂ ಬಿಬಿಎಂಪಿ ಕಚೇರಿಯಲ್ಲಿ ಈ ಘಟನೆ ನಡೆದಿದೆ.

    ಅಕ್ರಮ ಜಮೀನಿಗೆ ಖಾತೆ ಮಾಡಿಕೊಡುವಂತೆ ಅಧಿಕಾರಿಗೆ ಒತ್ತಡ ಹಾಕಿದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನಾರಾಯಣಸ್ವಾಮಿ ಬಿಬಿಎಂಪಿ ಕಚೇರಿ ಒಳಗೆ ಪೆಟ್ರೋಲ್ ಸುರಿದಿದ್ದು, ಬೆಂಕಿ ಹಚ್ಚೋದಾಗಿ ಬೆದರಿಕೆ ಹಾಕಿದ್ದಾನೆ. ಸಿಎಂ ಮತ್ತು ಭೈರತಿ ಬಸವರಾಜ್ ಕೃಪಾಕಟಾಕ್ಷದಿಂದ ಬೆಂಗಳೂರು ಜಲಮಂಡಳಿ ಸದಸ್ಯನಾಗಿರುವ ನಾರಾಯಣಸ್ವಾಮಿ, ಬಿಬಿಎಂಪಿ ಕಚೇರಿಗೆ ಅಧಿಕಾರಿ ಮುಂದೆಯೇ ಪೆಟ್ರೋಲ್ ಸುರಿದು ಬೆಂಕಿ ಹಚ್ಚಲು ಮುಂದಾಗಿದ್ದಾನೆ.

    ಏನಿದು ಘಟನೆ?: ಕೆಆರ್ ಪುರಂ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷನೂ ಆಗಿರುವ ನಾರಾಯಣಸ್ವಾಮಿ ಎನ್‍ಆರ್‍ಐ ಬಡಾವಣೆಯ ಜಮೀನು ವಿಚಾರದಲ್ಲಿ ಅಕ್ರಮವಾಗಿ ಖಾತೆ ಮಾಡಿಕೊಡುವಂತೆ ಬಿಬಿಎಂಪಿ ಸಹಾಯಕ ಕಂದಾಯ ಅಧಿಕಾರಿ ಚೆಂಗಲ್ ರಾಯಪ್ಪಗೆ ಒತ್ತಡ ಹಾಕಿದ್ದ. ಜಮೀನು ವ್ಯಾಜ್ಯ ಕೋರ್ಟ್‍ನಲ್ಲಿದೆ, ಅಕ್ರಮವಾಗಿ ಖಾತೆ ಮಾಡಿಕೊಡಲ್ಲ ಎಂದು ಚೆಂಗಲ್ ರಾಯಪ್ಪ ಹೇಳಿದ್ದರು. ಹೀಗಾಗಿ ಕಳೆದ ಫೆಬ್ರವರಿ 16ರಂದು ಬೆಳಗ್ಗೆ 11 ಗಂಟೆ ವೇಳೆಯಲ್ಲಿ ಹೊರಮಾವು ನಲ್ಲಿರುವ ಬಿಬಿಎಂಪಿ ಕಚೇರಿಗೆ ನುಗ್ಗಿದ ನಾರಾಯಣಸ್ವಾಮಿ, ಎಆರ್‍ಒ ಚೆಂಗಲ್ ರಾಯಪ್ಪ ಮುಂದೆಯೇ ಕಚೇರಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಲು ಮುಂದಾಗಿದ್ದಾನೆ. ಖಾತೆ ಮಾಡಿಕೊಡದಿದ್ರೆ ಕಚೇರಿಯಲ್ಲಿರುವ ದಾಖಲೆಗಳನ್ನು ಸುಟ್ಟು ಹಾಕುವುದಾಗಿ ಬೆದರಿಕೆ ಹಾಕಿದ್ದಾನೆ.

    ಚೆಂಗಲ್ ರಾಯಪ್ಪ ಖಡಕ್ ಅಧಿಕಾರಿ ಅಂತ ಗುರುತಿಸಿಕೊಂಡಿದ್ದ ವ್ಯಕ್ತಿಯಾಗಿದ್ದು, ಪೆಟ್ರೋಲ್ ಹಾಕೋದಾಗಿ ಬೆದರಿಸಿದ್ರೂ ಅವರು ಹೆದರಿರಲಿಲ್ಲ. ಎರಡು ದಿನಗಳ ಹಿಂದೆ ಚೆಂಗಲ್ ರಾಯಪ್ಪರನ್ನ ಅವರನ್ನ ವರ್ಗಾವಣೆ ಮಾಡಲಾಗಿದೆ. ಸಿಎಂ ಮತ್ತು ಭೈರತಿ ಬಸವರಾಜ್ ಪ್ರಭಾವ ಬಳಸಿ ಚೆಂಗಲ್ ರಾಯಪ್ಪರನ್ನ ನಾರಾಯಣಸ್ವಾಮಿ ವರ್ಗಾವಣೆ ಮಾಡಿಸಿದ್ದಾನೆ ಎನ್ನಲಾಗಿದೆ.

    ಈ ಬಗ್ಗೆ ಜಂಟಿ ಆಯುಕ್ತೆ ಪೊರ್ಣಿಮಾ ವಾಸಂತಿ ಪಬ್ಲಿಕ್ ಟಿವಿಗೆ ಪ್ರತಿಕ್ರಿಯೆ ನೀಡಿದ್ದು, ಈ ಬಗ್ಗೆ ದೂರು ನೀಡಲು ಹೇಳಿದ್ದೆವು. ಅಂದೇ ಶಾಸಕರಾದ ಭೈರತಿ ಬಸವರಾಜ್, ನಾರಾಯಣಸ್ವಾಮಿಯನ್ನ ಕರೆದು ಬುದ್ಧಿವಾದ ಹೇಳಿದ್ದಾರೆ. ನಾವು ಸೆಟ್ಲ್‍ಮೆಂಟ್ ಮಾಡ್ಕೊಳ್ತೀವಿ ಎಂದು ಹೇಳಿದ್ದಾರೆ.

     

  • ಹೆಲ್ಮೆಟ್ ಇಲ್ಲ ಅಂದ್ರೆ ಪೆಟ್ರೋಲ್ ಸಿಗಲ್ಲ!

    ಹೆಲ್ಮೆಟ್ ಇಲ್ಲ ಅಂದ್ರೆ ಪೆಟ್ರೋಲ್ ಸಿಗಲ್ಲ!

    ಧಾರವಾಡ: ಹುಬ್ಬಳ್ಳಿ-ಧಾರವಾಡ ಅವಳಿ ನಗರದಲ್ಲಿ ಇನ್ನು ಮುಂದೆ ಬೈಕ್ ಸವಾರರು ಹೆಲ್ಮೆಟ್ ಧರಿಸದೇ ಬಂಕ್ ಹೋದರೆ ಪೆಟ್ರೋಲ್ ಸಿಗುವುದಿಲ್ಲ.

    ಫೆಬ್ರವರಿ 22 ರಿಂದ ಈ ನಿಯಮ ಜಾರಿ ಬರಲಿದ್ದು, ಪೆಟ್ರೋಲ್ ತುಂಬಿಸಿಕೊಳ್ಳಲು ಬರುವ ಬೈಕ್ ಸವಾರರು ಕಡ್ಡಾಯವಾಗಿ ಹೆಲ್ಮೆಟ್ ಹಾಕಿಕೊಳ್ಳಬೇಕು ಎಂಬ ನಿಯಮ ರೂಪಿಸಲಾಗಿದೆ. ಹುಬ್ಬಳ್ಳಿ ಧಾರವಾಡ ಪೊಲೀಸ್ ಆಯುಕ್ತ ಎಮ್.ಎನ್ ನಾಗರಾಜ್ ಪೆಟ್ರೋಲ್ ಬಂಕ್ ಮಾಲೀಕರಿಗೆ ಹೆಲ್ಮೆಟ್ ಹಾಕಿಕೊಳ್ಳದೇ ಬರುವರಿಗೆ ಪೆಟ್ರೋಲ್ ನೀಡಬೇಡಿ ಎಂದು ಮನವಿ ಮಾಡಿಕೊಂಡಿದ್ದಾರೆ.

    ಪೊಲೀಸ್ ಆಯುಕ್ತರ ಮನವಿ ಹಿನ್ನೆಲೆಯಲ್ಲಿ ಬಂಕ್ ಮಾಲೀಕರು ಜಾಗೃತಿ ಮೂಡಿಸಲು ಈ ನಿಯಮ ಪಾಲನೆಗೆ ಮುಂದಾಗಿದ್ದಾರೆ. ಆದರೆ ಕೆಲ ಬೈಕ್ ಸವಾರರು ಇದಕ್ಕೆ ಅಡ್ಡಿ ಪಡಿಸುವ ಸಾಧ್ಯತೆ ಕೂಡಾ ಇದೆ ಎಂದು ಪೆಟ್ರೋಲ್ ಬಂಕ್ ಮಾಲೀಕರು ಅಭಿಪ್ರಾಯಪಟ್ಟಿದ್ದಾರೆ. ಆದರೆ ಕೆಲ ಗ್ರಾಹಕರು ಬಂಕ್ ಗಳ ಹೊಸ ನಿಯಮ ಸ್ವಾಗತಿಸಿದ್ದು ಮೆಚ್ಚುಗೆ ಸೂಚಿಸಿದ್ದಾರೆ.

     

     

  • ಅಪ್ರಾಪ್ತ ಬಾಲಕನ ಮರ್ಮಾಂಗಕ್ಕೆ ಪೆಟ್ರೋಲ್ ಹಾಕಿ ಬೆಂಕಿ ಹಚ್ಚಲು ಮುಂದಾದ ಪೊಲೀಸರು!

    ಅಪ್ರಾಪ್ತ ಬಾಲಕನ ಮರ್ಮಾಂಗಕ್ಕೆ ಪೆಟ್ರೋಲ್ ಹಾಕಿ ಬೆಂಕಿ ಹಚ್ಚಲು ಮುಂದಾದ ಪೊಲೀಸರು!

    ವಿಜಯಪುರ: ಅಪ್ರಾಪ್ತ ಬಾಲಕನ ಮರ್ಮಾಂಗಕ್ಕೆ ಪೊಲೀಸರು ಪೆಟ್ರೋಲ್ ಹಾಕಿ ಬೆಂಕಿ ಹಚ್ಚಲು ಯತ್ನಿಸಿದ ಆಘಾತಕಾರಿ ಘಟನೆ ಜಿಲ್ಲೆಯಲ್ಲಿ ನಡೆದಿದೆ.

    ನಗರದ ಗ್ಯಾಂಗಬಾಡಿ ನಿವಾಸಿ ಅಪ್ರಾಪ್ತ ಬಾಲಕನ ಮೇಲೆ ನಗರದ ಗಾಂಧಿಚೌಕ ಪೊಲೀಸ್ ಠಾಣೆಯ ಪಿಎಸ್‍ಐ ಆರೀಫ್ ಮುಷರಿಪ್ ಸೇರಿದಂತೆ ಅದೇ ಠಾಣೆಯ ಮೂವರು ಪೊಲೀಸ್ ಪೇದೆಗಳು ಈ ಕೃತ್ಯ ಎಸಗಲು ಯತ್ನಿಸಿದ್ದಾರೆ ಎನ್ನಲಾಗಿದೆ.

    ಅಪ್ರಾಪ್ತ ಸ್ನೇಹಿತ ಚಿನ್ನಾಭರಣ ಕಳ್ಳತನ ಮಾಡಿ ಈತನ ಕೈಗೆ ನೀಡಿದ್ದಾನೆ. ಆದರೆ ಆ ಕಳ್ಳತನ ಬಾಲಕನೇ ಮಾಡಿದ್ದಾನೆಂದು ಆರೋಪಿಸಿ ಪೊಲೀಸರು ಆತನನ್ನು ಠಾಣೆಗೆ ಕರೆದುಕೊಂಡು ಹೋಗಿ ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಅಷ್ಟೇ ಅಲ್ಲದೇ ಮರ್ಮಾಂಗಕ್ಕೆ ಪೆಟ್ರೋಲ್ ಹಾಕಿ ಬೆಂಕಿ ಹಚ್ಚಲು ಮುಂದಾಗಿದ್ದಾರೆ.

    ಈ ಘಟನೆಯಿಂದ ಭಯಭೀತನಾದ ಬಾಲಕನಿಗೆ ಚಳಿಜ್ವರ ಬಂದಿದ್ದು, ಆತನನ್ನು ಹೆಚ್ಚಿನ ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಕಳ್ಳತನಕ್ಕೆ ಸಹಕರಿಸಿದ್ದಕ್ಕಾಗಿ ಬಾಲಕನನ್ನು ಕರೆಸಿ ವಿಚಾರಣೆ ಮಾಡಿದ್ದು ಸರಿ. ಆದರೆ ಈ ರೀತಿ ಮರ್ಮಾಂಗಕ್ಕೆ ಪೆಟ್ರೋಲ್ ಹಾಕಿ ಸುಡಲು ಹೋಗಿದ್ದು ಎಷ್ಟು ಸರಿ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

  • ಹಣ ವಾಪಸ್ ನೀಡಿಲ್ಲವೆಂದು ಯುವಕನ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಸ್ನೇಹಿತರು!

    ಹಣ ವಾಪಸ್ ನೀಡಿಲ್ಲವೆಂದು ಯುವಕನ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಸ್ನೇಹಿತರು!

    ಹುಬ್ಬಳ್ಳಿ: ನಗರದ ಗಿರಣಿಚಾಳನಲ್ಲಿ ಯುವಕನೊಬ್ಬ ಅನುಮಾನಾಸ್ಪದವಾಗಿ ಸಾವಿಗೀಡಾದ ಪ್ರಕರಣ ಹೊಸದೊಂದು ತಿರುವು ಪಡೆದುಕೊಂಡಿದೆ.

    ಜನವರಿ 26ರಂದು ಹುಬ್ಬಳ್ಳಿಯ ಗಿರಣಿಚಾಳ ಬಡಾವಣೆಯಲ್ಲಿ ಮನೆ ಮುಂದೆ ರಾತ್ರಿ ಮಲಗಿದ್ದಾಗ ವಿಜಯ್ ಕಿರೇಸೂರು ಎಂಬ ಯುವಕನಿಗೆ ಬೆಂಕಿ ತಗುಲಿ ಚಿಕಿತ್ಸೆ ಫಲಿಸದೇ ಸಾವಿಗೀಡಾಗಿದ್ದ. ಇತ್ತ ಯುವಕನ ತಾಯಿ ಕೂಡ ರಾತ್ರಿ ಮನೆಯ ಮುಂದೆ ಮಲಗಿದ್ದು ಸೊಳ್ಳೆ ಹೆಚ್ಚಾಗಿದ್ದರಿಂದ ಬೆಂಕಿ ಹಚ್ಚಿಕೊಂಡು ಮಲಗಿದ್ದ. ಬೆಂಕಿ ಹಾಸಿಗೆಗೆ ತಗುಲಿ ಹೊತ್ತಿ ಉರಿದಿದೆ ಎಂದು ಪೊಲೀಸರಿಗೆ ಹೇಳಿಕೆಯೊಂದಿಗೆ ದೂರನ್ನು ನೀಡಿದ್ದರು.

    ಈ ಕುರಿತಂತೆ ಉಪನಗರ ಪೊಲೀಸರು ಕೂಡ ಯುವಕನ ಸಾವಿನ ಕುರಿತಂತೆ ತನಿಖೆ ನಡೆಸುತ್ತಿದ್ದರು. ಇವೆಲ್ಲದರ ನಡುವೆ ಪೊಲೀಸರು ತನಿಖೆ ಮಾಡುತ್ತಿರುವಾಗಲೇ ಈ ಕೇಸ್ ಹೊಸದೊಂದು ತಿರುವು ಪಡೆದುಕೊಂಡಿದೆ.

    ಇದೊಂದು ಸಹಜ ಸಾವಲ್ಲ, ಬೆಂಕಿ ಹಚ್ಚಿ ವಿಜಯ್ ನನ್ನು ಸಾಯಿಸಿದ್ದಾರೆ ಎಂಬ ಸತ್ಯ ಹೊರಬಂದಿದೆ. ವಿಜಯ್ ತನ್ನ ಸ್ನೇಹಿತರ ಬಳಿ 45,000ರೂ. ಹಣವನ್ನು ಪಡೆದಿದ್ದ. ಅದನ್ನು ಹಿಂದಿರುಗಿಸಲಿಲ್ಲ ಎಂದು ಆತನ ನಾಲ್ಕು ಜನ ಸ್ನೇಹಿತರು ಸೇರಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾರೆ ಎಂದು ವಿಜಯ್ ಅವರ ದೊಡಪ್ಪ ಹೇಳಿಕೆ ನೀಡಿದ್ದಾರೆ.

  • ಅಬಕಾರಿ ಸುಂಕ 2 ರೂ. ಇಳಿಕೆಯಾದ್ರೂ ಪೆಟ್ರೋಲ್, ಡೀಸೆಲ್ ಬೆಲೆ ಇಳಿಯಲ್ಲ!

    ಅಬಕಾರಿ ಸುಂಕ 2 ರೂ. ಇಳಿಕೆಯಾದ್ರೂ ಪೆಟ್ರೋಲ್, ಡೀಸೆಲ್ ಬೆಲೆ ಇಳಿಯಲ್ಲ!

    ನವದೆಹಲಿ: ಪೆಟ್ರೋಲ್ ಡೀಸೆಲ್ ಮೇಲೆ 2 ರೂ. ಅಬಕಾರಿ ಸುಂಕವನ್ನು ಕಡಿಮೆ ಮಾಡಿ ಹಣಕಾಸು ಸಚಿವ ಅರುಣ್ ಜೇಟ್ಲಿ ರಸ್ತೆ ಮತ್ತು ಮೂಲಸೌಕರ್ಯ ಹೆಸರಿನಲ್ಲಿ 8 ರೂ. ಹೊಸ ಸೆಸ್ ಹಾಕಿ ದರವನ್ನು ಯಥಾಸ್ಥಿತಿಯಲ್ಲಿ ಇರುವಂತೆ ನೋಡಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.

    ಹೊಸ ಸೆಸ್ ಜಾರಿ ಮಾಡುವುದರ ಜೊತೆಗೆ ಇಲ್ಲಿಯವರೆಗೆ ಪ್ರತಿ ಲೀಟರ್ ಪೆಟ್ರೋಲ್ ಮತ್ತು ಡೀಸೆಲ್ ಮೆಲೆ ವಿಧಿಸಲಾಗುತ್ತಿದ್ದ 6 ರೂ. ರಸ್ತೆ ಸೆಸ್ ರದ್ದುಗೊಳಿಸಲು ಮುಂದಾಗಿರುವ ವಿಚಾರ ಬಜೆಟ್ ನಲ್ಲಿದೆ.

    ಯಾಥಾಸ್ಥಿತಿ ಹೇಗೆ?
    ಅಬಕಾರಿ ಸುಂಕ 2 ರೂ. ಮತ್ತು ರೋಡ್ ಸೆಸ್ 6 ರೂ. ಇಳಿಕೆಯಾದರೆ ಗ್ರಾಹಕರಿಗೆ 8 ರೂ. ಕಡಿಮೆ ಆಗುತಿತ್ತು. ಆದರೆ ಈಗ ರಸ್ತೆ ಮತ್ತು ಮೂಲಸೌಕರ್ಯ ಹೆಸರಿನಲ್ಲಿ ಹೊಸ ಸೆಸ್ ಜಾರಿಗೆ ತರುವ ಪ್ರಸ್ತಾಪವನ್ನು ಸರ್ಕಾರ ಕೈಗೊಂಡಿದ್ದು ಅದಕ್ಕೆ 8 ರೂ. ವಿಧಿಸಿದೆ. ಹೀಗಾಗಿ 8 ರೂ. ಕಡಿಮೆಯಾದರೂ ಹೆಚ್ಚುವರಿ ಸೆಸ್ ಮೂಲಕ ಗ್ರಾಹಕನ ಜೇಬಿನಿಂದ 8 ರೂ. ಹಣ ಸರ್ಕಾರದ ಖಾತೆಗೆ ಹೋಗುತ್ತದೆ. ಹೀಗಾಗಿ ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ಯಾವುದೇ ಇಳಿಕೆ, ಏರಿಕೆ ಆಗದಂತೆ ನೋಡಿಕೊಂಡು ಬಜೆಟ್ ಸಿದ್ಧಪಡಿಸಲಾಗಿದೆ.

    ಇಷ್ಟೇ ಅಲ್ಲದೇ ಈಶಾನ್ಯ ರಾಜ್ಯದ 4 ರಿಫೈನರಿಗಳಿಂದ ಉತ್ಪಾದನೆಯಾದ ಪ್ರತಿ ಲೀಟರ್ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಹೆಚ್ಚುವರಿಯಾಗಿ 4 ರೂ. ಮೂಲಸೌಕರ್ಯ ಸೆಸ್ ವಿಧಿಸುವ ಪ್ರಸ್ತಾಪ ಬಜೆಟ್ ನಲ್ಲಿದೆ. ಇದನ್ನೂ ಓದಿ: ಜಿಎಸ್‍ಟಿ ಅಡಿ ಪೆಟ್ರೋಲ್ ಬಂದ್ರೆ ಬೆಂಗ್ಳೂರಿನಲ್ಲಿ ಪ್ರತಿ ಲೀಟರ್‍ಗೆ 40 ರೂ.ಅಷ್ಟೇ!

    ಯಾವುದಕ್ಕೆ ಎಷ್ಟು?
    ಬ್ರಾಂಡ್ ರಹಿತ ಪೆಟ್ರೋಲ್ ಪ್ರತಿ ಲೀಟರ್ ಗೆ ಹಿಂದೆ 6.48 ರೂ. ಅಬಕಾರಿ ಸುಂಕ ಇದ್ದರೆ, ಈಗ ಇದನ್ನು 4.48 ರೂ. ಇಳಿಸಲಾಗಿದೆ. ಬ್ರಾಂಡೆಡ್ ಪೆಟ್ರೋಲ್ ಹಿಂದೆ 7.66 ರೂ. ಅಬಕಾರಿ ಸುಂಕ ಇದ್ದರೆ, ಈಗ 5.66 ರೂ. ಆಗಿದೆ.

    ಬ್ರಾಂಡ್ ರಹಿತ ಡೀಸೆಲ್ ಪ್ರತಿ ಲೀಟರ್ ಗೆ ಹಿಂದೆ 8.33 ರೂ. ಅಬಕಾರಿ ಸುಂಕ ಇದ್ದರೆ ಈಗ 6.33 ರೂ.ಗೆ ಇಳಿಕೆಯಾಗಿದೆ. ಬ್ರಾಂಡೆಡ್ ಡೀಸೆಲ್ ಗೆ 10.69 ರೂ. ಇದ್ದ ಅಬಕಾರಿ ಸುಂಕ ಈಗ 8.69 ರೂ.ಗೆ ಇಳಿಕೆಯಾಗಿದೆ.

    ಎನ್‍ಡಿಎ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಪ್ರತಿನಿತ್ಯ ತೈಲ ಬೆಲೆಯನ್ನು ಪರಿಷ್ಕರಣೆ ಪದ್ದತಿಯನ್ನು ಜಾರಿಗೆ ತಂದಿತ್ತು. ಜನವರಿ ತಿಂಗಳಿನಲಿ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಛಾ ತೈಲದ ಬೆಲೆ ಭಾರೀ ಏರಿಕೆಯಾದ ಹಿನ್ನೆಲೆಯಲ್ಲಿ ಭಾರತದಲ್ಲೂ ಪೆಟ್ರೋಲ್, ಡೀಸೆಲ್ ದರ ಏರಿಕೆಯಾಗಿತ್ತು. ಹೀಗಾಗಿ ಪೆಟ್ರೋಲ್, ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಇಳಿಕೆ ಮಾಡಬೇಕೆಂಬ ಆಗ್ರಹ ಕೇಳಿ ಬಂದಿತ್ತು.  ಇದನ್ನೂ ಓದಿ: 70 ರೂ. ಪೆಟ್ರೋಲ್ ನಲ್ಲಿ ಯಾರಿಗೆ ಎಷ್ಟು ಪಾಲು? ಬೇರೆ ರಾಷ್ಟ್ರಗಳಲ್ಲಿ ಎಷ್ಟು ದರವಿದೆ?

    2017ರ ಅಕ್ಟೋಬರ್ 3ರಂದು ಕೇಂದ್ರ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು 2 ರೂ. ಕಡಿತಗೊಳಿಸಿತ್ತು. ಬೆಲೆ ಏರಿಕೆಯಂದ ಜನಸಾಮಾನ್ಯರ ಮೇಲೆ ಆಗುತ್ತಿರುವ ಹೊರೆಯನ್ನು ತಪ್ಪಿಸಲು ಈ ಕ್ರಮವನ್ನು ತೆಗೆದುಕೊಳ್ಳಲಾಗಿದೆ ಎಂದು ಅಬಕಾರಿ ಮತ್ತು ಸೀಮಾ ಸುಂಕ ಮಡಳಿ ತನ್ನ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿತ್ತು.

    2014ರಿಂದ 2016ರ ಅವಧಿಯಲ್ಲಿ ಕೇಂದ್ರ ಸರ್ಕಾರ 9 ಬಾರಿ ಅಬಕಾರಿ ಸುಂಕವನ್ನು ಹೆಚ್ಚಿಸಿತ್ತು. ಈ ಅವಧಿಯಲ್ಲಿ ಪೆಟ್ರೋಲ್ ಮೇಲೆ 11.77 ರೂ., ಡೀಸೆಲ್ ಮೇಲೆ 13.47 ರೂ. ನಂತೆ ಅಬಕಾರಿ ಸುಂಕವನ್ನು ಹೆಚ್ಚಿಸಿತ್ತು. ಇದರಿಂದಾಗಿ 2014-15 ರಲ್ಲಿ ಬೊಕ್ಕಸಕ್ಕೆ 99 ಕೋಟಿ ರೂ.ಬಂದಿದ್ದರೆ, 2016-17 ನೇ ಅವಧಿಯಲ್ಲಿ 2.42 ಲಕ್ಷ ಕೋಟಿ ರೂ. ಆದಾಯ ಬಂದಿತ್ತು. ಇದನ್ನೂ ಓದಿ: ಜಿಎಸ್‍ಟಿ ಅಡಿ ಪೆಟ್ರೋಲ್ ಬಂದ್ರೆ ಬೆಂಗ್ಳೂರಿನಲ್ಲಿ ಪ್ರತಿ ಲೀಟರ್ 40 ರೂ.ಅಷ್ಟೇ!

  • ಗ್ರಾಹಕರ ಜೇಬಿಗೆ ಬಿತ್ತು ಕತ್ತರಿ, ಪೆಟ್ರೋಲ್-ಡೀಸೆಲ್ ಬೆಲೆ ಭಾರೀ ಏರಿಕೆ

    ಗ್ರಾಹಕರ ಜೇಬಿಗೆ ಬಿತ್ತು ಕತ್ತರಿ, ಪೆಟ್ರೋಲ್-ಡೀಸೆಲ್ ಬೆಲೆ ಭಾರೀ ಏರಿಕೆ

    ನವದೆಹಲಿ: 2014 ರಲ್ಲಿ ಬಿಜೆಪಿ ನೇತೃತ್ವದ ಎನ್‍ಡಿಎ ಸರ್ಕಾರ ಆಧಿಕಾರ ವಹಿಸಿಕೊಂಡ ಬಳಿಕ ಇಂಧನ ಬೆಲೆಯಲ್ಲಿ ಭಾರೀ ಏರಿಕೆ ಆಗಿದ್ದು, ಗ್ರಾಹಕರ ಜೇಬಿಗೆ ಕತ್ತರಿ ಬಿದ್ದಿದೆ.

    ಒಂದೇ ತಿಂಗಳಲ್ಲಿ ಬೆಂಗಳೂರಿನಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ ಬರೋಬ್ಬರಿ 3 ರೂ. ಏರಿಕೆಯಾಗಿದೆ. ಡೀಸೆಲ್  ದರದಲ್ಲಿ ಎರಡು ತಿಂಗಳ ಅಂತರಲ್ಲಿ 5.85 ಪೈಸೆ ಹೆಚ್ಚಳವಾಗಿದೆ. ಡಿಸೆಂಬರ್ 31 ರಂದು ಪೆಟ್ರೋಲ್ ದರ 71.06 ರೂ ಇದ್ದರೆ, ಪ್ರಸ್ತುತ ಒಂದು ತಿಂಗಳ ಬಳಿಕ 74.07 ರೂ. ಗೆ ಹೆಚ್ಚಳವಾಗಿದೆ.

    ಡೀಸೆಲ್  ದರ ಡಿಸೆಂಬರ್ ಪ್ರಾರಂಭದಲ್ಲಿ ಲೀಟರ್ ಗೆ 59.23 ಇದ್ದು, ಪ್ರಸ್ತುತ 65.08 ರೂ. ಗೆ ಏರಿಕೆ ಆಗುವುದರೊಂದಿಗೆ ಬರೋಬ್ಬರಿ 5 ರೂ. ಹೆಚ್ಚಳವಾಗಿದೆ. ನಿರಂತರವಾಗಿ ಇಂಧನ ಬೆಲೆಯಲ್ಲಿ ಏರಿಕೆ ಆಗುತ್ತಿರುವ ಪರಿಗೆ ಪೆಟ್ರೋಲ್ ಬಂಕ್ ಮಾಲೀಕರು ದಿಗ್ಭ್ರಮೆ ವ್ಯಕ್ತಪಡಿಸಿದ್ದಾರೆ.

    ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ತೈಲ ಬೆಲೆ ಗಗನಕ್ಕೆರುತ್ತಿದ್ದು, ಫೆಬ್ರವರಿ ತಿಂಗಳ ಆರಂಭದಲ್ಲೇ ಭಾರೀ ಪ್ರಮಾಣದಲ್ಲಿ ಇಂಧನ ಬೆಲೆ ಏರಿಕೆ ಯಾಗಿದೆ. 2018-19ನೇ ಸಾಲಿನ ಕೇಂದ್ರ ಬಜೆಟ್ ಮಂಡನೆ ಫೆಬ್ರವರಿ 1 ರಂದು ನಡೆಯಲಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕ ಕಡಿತಗೊಳಿಸುವ ಕುರಿತು ನಿರೀಕ್ಷಿಸಲಾಗುತ್ತಿದೆ.

    ಈಗಾಗಲೇ ಬಳಕೆದಾರರ ಮೇಲಿನ ಹೊರೆ ತಗ್ಗಿಸುವುದಕ್ಕಾಗಿ ಕೇಂದ್ರ ಇಂಧನ ಸಚಿವಾಲಯ ಕೇಂದ್ರ ಬಜೆಟ್ ನಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕ ಕಡಿತಗೊಳಿಸುವಂತೆ ಹಣಕಾಸು ಇಲಾಖೆಗೆ ಮನವಿ ಮಾಡಿದೆ. ಇದನ್ನೂ ಓದಿ: ಪೆಟ್ರೋಲ್, ಡೀಸೆಲ್ ವ್ಯಾಟ್ ಇಳಿಸಲ್ಲ: ಸಿಎಂ ಸಿದ್ದರಾಮಯ್ಯ

    2017ರ ಅಕ್ಟೋಬರ್ 3ರಂದು ಕೇಂದ್ರ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು 2 ರೂ. ಕಡಿತಗೊಳಿಸಿತ್ತು. ಬೆಲೆ ಏರಿಕೆಯಂದ ಜನಸಾಮಾನ್ಯರ ಮೇಲೆ ಆಗುತ್ತಿರುವ ಹೊರೆಯನ್ನು ತಪ್ಪಿಸಲು ಈ ಕ್ರಮವನ್ನು ತೆಗೆದುಕೊಳ್ಳಲಾಗಿದೆ ಎಂದು ಅಬಕಾರಿ ಮತ್ತು ಸೀಮಾ ಸುಂಕ ಮಡಳಿ ತನ್ನ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿತ್ತು. ಇದನ್ನೂ ಓದಿ: 70 ರೂ. ಪೆಟ್ರೋಲ್ ನಲ್ಲಿ ಯಾರಿಗೆ ಎಷ್ಟು ಪಾಲು? ಬೇರೆ ರಾಷ್ಟ್ರಗಳಲ್ಲಿ ಎಷ್ಟು ದರವಿದೆ?

    2014ರಿಂದ 2016ರ ಅವಧಿಯಲ್ಲಿ ಕೇಂದ್ರ ಸರ್ಕಾರ 9 ಬಾರಿ ಅಬಕಾರಿ ಸುಂಕವನ್ನು ಹೆಚ್ಚಿಸಿತ್ತು. ಈ ಅವಧಿಯಲ್ಲಿ ಪೆಟ್ರೋಲ್ ಮೇಲೆ 11.77 ರೂ., ಡೀಸೆಲ್ ಮೇಲೆ 13.47 ರೂ. ನಂತೆ ಅಬಕಾರಿ ಸುಂಕವನ್ನು ಹೆಚ್ಚಿಸಿತ್ತು. ಇದರಿಂದಾಗಿ 2014-15 ರಲ್ಲಿ ಬೊಕ್ಕಸಕ್ಕೆ 99 ಕೋಟಿ ರೂ.ಬಂದಿದ್ದರೆ, 2016-17 ನೇ ಅವಧಿಯಲ್ಲಿ 2.42 ಲಕ್ಷ ಕೋಟಿ ರೂ. ಆದಾಯ ಬಂದಿತ್ತು. ಇದನ್ನೂ ಓದಿ: ಜಿಎಸ್‍ಟಿ ಅಡಿ ಪೆಟ್ರೋಲ್ ಬಂದ್ರೆ ಬೆಂಗ್ಳೂರಿನಲ್ಲಿ ಪ್ರತಿ ಲೀಟರ್‍ಗೆ 40 ರೂ.ಅಷ್ಟೇ!

  • ಲೋಕೋಪಯೋಗಿ ಇಲಾಖೆ ಜೊತೆ ಮಾತುಕತೆ ಯಶಸ್ವಿ- ಟ್ಯಾಂಕರ್ ಮಾಲೀಕರ ಮುಷ್ಕರ ಅಂತ್ಯ

    ಲೋಕೋಪಯೋಗಿ ಇಲಾಖೆ ಜೊತೆ ಮಾತುಕತೆ ಯಶಸ್ವಿ- ಟ್ಯಾಂಕರ್ ಮಾಲೀಕರ ಮುಷ್ಕರ ಅಂತ್ಯ

    ಬೆಂಗಳೂರು: ಪೆಟ್ರೋಲ್ ಪೂರೈಕೆ ಮಾಡೋ ಲಾರಿ ನೌಕರರು ಮುಷ್ಕರ ಕೈಗೊಂಡ ಕುರಿತಂತೆ ತೈಲ ಕಂಪನಿಗಳು ಲೋಕೋಪಯೋಗಿ ಇಲಾಖೆ ಅಧಿಕಾರಿಗಳ ಜೊತೆ ಮಾತುಕತೆ ನಡೆಸಿದ್ದು, ಸಫಲವಾಗಿದೆ. ಹೀಗಾಗಿ ಸದ್ಯ ಪೆಟ್ರೋಲ್ ಬಂಕ್ ಮಾಲೀಕರು ಮುಷ್ಕರ ಕೈ ಬಿಟ್ಟಿದ್ದಾರೆ.

    ಮಾತುಕತೆಯಲ್ಲಿ ಅಧಿಕಾರಿಗಳು ಹದಗೆಟ್ಟ ರಸ್ತೆ ರಿಪೇರಿ ಮಾಡುವ ಭರವಸೆ ನೀಡಿದ್ದಾರೆ. ಈ ಹಿನ್ನಲೆಯಲ್ಲಿ ಮುಷ್ಕರ ಅಂತ್ಯವಾಗಿದ್ದು, ವಾಹನ ಸವಾರರಿಗೆ ರಿಲೀಫ್ ಸಿಕ್ಕಿದೆ.

    ಮುಷ್ಕರ ಯಾಕೆ?: ನಗರದ ಹೊಸಕೋಟೆ ಬಳಿಯ ದೇವನಗುಂಡಿ ತೈಲ ಘಟಕ ಹಾಗೂ ಟರ್ಮಿನಲ್ ಸಂಪರ್ಕ ರಸ್ತೆಯನ್ನು ದುರಸ್ತಿಗೊಳಿಸುವಂತೆ ಲಾರಿ ಚಾಲಕರು ಕಳೆದ ಎರಡು ವರ್ಷಗಳ ಹಿಂದೆಯೂ ಪ್ರತಿಭಟನೆಯನ್ನು ನಡೆಸಿದ್ದರು. ಆದರೆ ತೈಲ ಪೂರೈಕೆ ಸಂಸ್ಥೆಗಳು ಚಾಲಕರ ಮನವೊಲಿಸಿ ಪ್ರತಿಭಟನೆಯನ್ನು ಹಿಂಪಡೆದಿದ್ದರು. ಆದರೆ ಕಳೆದ ಎರಡು ದಿನಗಳ ಹಿಂದೆ ಟ್ಯಾಂಕರ್ ಪಲ್ಟಿಯಾಗಿ ಚಾಲಕರೊಬ್ಬರು ಮೃತಪಟ್ಟಿದ್ದರು. ಇದರಿಂದ ಅನಿವಾರ್ಯವಾಗಿ ಚಾಲಕರು ಮತ್ತೆ ಪ್ರತಿಭಟನೆ ನಡೆಸಲು ಮುಂದಾಗಿದ್ದರು.

    ಕಳೆದ ಬಾರಿ ಪ್ರತಿಭಟನೆ ನಡೆಸಿದ ವೇಳೆ ರಸ್ತೆ ದುರಸ್ಥಿ ಕಾರ್ಯ ನಡೆಸುವ ಭರವಸೆ ನೀಡಿದ್ದ ತೈಲ ಪೂರೈಕೆ ಸಂಸ್ಥೆಗಳು 500 ಕೋಟಿ ರೂ. ಹಣವನ್ನು ಬಿಡುಗಡೆ ಮಾಡಿದ್ದವು. ಆದರೆ ಹಣ ಇದ್ದರು ರಸ್ತೆ ದುರಸ್ಥಿ ಕಾರ್ಯ ಆರಂಭವಾಗಿರಲಿಲ್ಲ.


    ಪ್ರತಿಭಟನೆ ನಡೆಸುವ ಮೊದಲು ಟ್ಯಾಂಕರ್ ಚಾಲಕರ ಮನವೊಲಿಸಲು ತೈಲ ಕಂಪನಿಗಳು ಸಭೆ ನಡೆಸಿದ್ದವು. ಆದರೆ ರಸ್ತೆ ನಿರ್ಮಾಣ ಕಾಮಗಾರಿ ಟೆಂಡರ್ ಪ್ರಕ್ರಿಯೆ ಆರಂಭವಾಗುವರೆಗೂ ಪ್ರತಿಭಟನೆ ಮುಂದುವರೆಸುವುದಾಗಿ ಪ್ರತಿಭಟನಾನಿರತರು ತಿಳಿಸಿದ್ದರು. ಹೀಗಾಗಿ ದೇವನಗುಂದಿ ಸಮೀಪದ ತೈಲ ಘಟಕದ ಬಳಿ 1500ಕ್ಕೂ ಹೆಚ್ಚು ಟ್ಯಾಂಕರ್ ಚಾಲಕರು ಪ್ರತಿಭಟನೆ ಕೈಗೊಂಡಿದ್ದರು. ಈ ಹಿನ್ನೆಲೆಯಂದಾಗಿ ಇಂದು ಬೆಂಗಳೂರು ಸೇರಿದಂತೆ ರಾಮನಗರ, ಮಂಡ್ಯ, ತುಮಕೂರು, ಚಿಕ್ಕಬಳ್ಳಾಪುರ, ಮೈಸೂರು, ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ ಜಿಲ್ಲೆಗಳಿಗೆ ತೈಲ ಪೂರೈಕೆ ಸ್ಥಗಿತವಾಗಲಿದೆ ಎಂಬುದಾಗಿ ವರದಿಯಾಗಿತ್ತು.

  • ಪೆಟ್ರೋಲ್ ಡೀಸೆಲ್, ಪೆಟ್ರೋಲ್ ಬೆಲೆಯಲ್ಲಿ ಭಾರೀ ಹೆಚ್ಚಳ!

    ಪೆಟ್ರೋಲ್ ಡೀಸೆಲ್, ಪೆಟ್ರೋಲ್ ಬೆಲೆಯಲ್ಲಿ ಭಾರೀ ಹೆಚ್ಚಳ!

    ನವದೆಹಲಿ: ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾತೈಲ ಬೆಲೆ ಏರಿಕೆಯಾಗಿರುವ ಹಿನ್ನೆಲೆಯಲ್ಲಿ ಗುರುವಾರ ಡಿಸೇಲ್ ಬೆಲೆ ಸಾರ್ವಕಾಲಿಕ ಗರಿಷ್ಟ ದರ ತಲುಪಿದೆ. ಪ್ರತಿ ಲೀಟರ್ ಪೆಟ್ರೋಲ್ ಬೆಲೆಯೂ ಮೂರು ವರ್ಷಗಳಲ್ಲೇ ಗರಿಷ್ಟ ಮಟ್ಟ ತಲುಪಿದೆ. ದೆಹಲಿಯಲ್ಲಿ ಪ್ರತಿ ಲೀಟರ್ ಡೀಸೆಲ್ 61.88ರೂ. ಮತ್ತು ಪೆಟ್ರೋಲ್ ಬೆಲೆ 71.27 ರೂ. ಏರಿಕೆಯಾಗಿದೆ.

    ಇದರೊಂದಿಗೆ ಒಂದು ದಿನದಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 7 ಪೈಸೆ ಹೆಚ್ಚಳವಾಗಿದ್ದರೆ, ಡೀಸೆಲ್ ಬೆಲೆ 14 ರಿಂದ 16 ಪೈಸೆ ಹೆಚ್ಚಳವಾಗಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 72.39 ರೂ. ಇದ್ದರೆ ಡೀಸೆಲ್ 62.92 ರೂ. ಗೆ ಏರಿಕೆಯಾಗಿದೆ.

    ವಾಣಿಜ್ಯ ನಗರಿ ಮುಂಬೈ ನಲ್ಲಿ ದೇಶದಲ್ಲೇ ಅv ತೈಲ ಬೆಲೆ ಹೊಂದಿದ್ದು, ಪತ್ರಿ ಲೀಟರ್ ಪೆಟ್ರೋಲ್ ಬೆಲೆ ಗರಿಷ್ಟ 79.17 ರೂ ತಲುಪಿದೆ. ಡೀಸೆಲ್ ಬೆಲೆ ಪ್ರತಿ ಲೀಟರ್ ಗೆ 65.90 ರೂ ತಲುಪಿದೆ. ಚೆನ್ನೈ ನಗರದಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 74 ರೂ. ತಲುಪಿದ್ದು, ಡೀಸೆಲ್ 65.23 ರೂ. ಗೆ ಹೆಚ್ಚಳವಾಗಿದೆ.

    ಸೋಮವಾರ ಬ್ರೆಂಟ್ ಕಚ್ಚಾ ತೈಲ ದರ ಪ್ರತಿ ಬ್ಯಾರೆಲ್ ಗೆ 70.37 ಡಾಲರ್(4,495 ರೂ.) ತಲುಪಿದೆ. 2014 ರ ನಂತರ ಅಂತರಾಷ್ಟ್ರೀಯ ಕಚ್ಚಾತೈಲ ಮಾರುಕಟ್ಟೆಯಲ್ಲಿ ಅತೀ ಹೆಚ್ಚಿನ ದರ ಇದಾಗಿದೆ. ಏಪ್ರಿಲ್ ನಲ್ಲಿ ಪ್ರತಿ ಬ್ಯಾರೆಲ್ ಗೆ 52.49 ಡಾಲರ್(3353 ರೂ.) ಇದ್ದರೆ ಡಿಸೆಂಬರ್ ನಲ್ಲಿ 62 ಡಾಲರ್(39600 ರೂ.) ಇತ್ತು. ಈ ಅವಧಿಯಲ್ಲಿ ತೈಲ ದರ 18% ಏರಿಕೆಯಾಗಿದೆ.

    ಜಿಎಸ್‍ಟಿ ವ್ಯಾಪ್ತಿಗೆ ಪೆಟ್ರೋಲ್: ಮುಂದಿನ ಸರಕು ಮತ್ತು ಸೇವಾ ತೆರಿಗೆ ಮಂಡಳಿಯ ಸಭೆಯಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ತರುವ ಬಗ್ಗೆ ಚರ್ಚೆ ನಡೆಸಲಾಗುವುದು ಎಂದು ಹಣಕಾಸು ಸಚಿವ ಅರುಣ್ ಜೇಟ್ಲಿ ತಿಳಿಸಿದ್ದಾರೆ. ಇದನ್ನೂ ಓದಿ: ಪೆಟ್ರೋಲ್, ಡೀಸೆಲ್ ವ್ಯಾಟ್ ಇಳಿಸಲ್ಲ: ಸಿಎಂ ಸಿದ್ದರಾಮಯ್ಯ

    ಕೇಂದ್ರ ಸರ್ಕಾರ ಅಬಕಾರಿ ಸುಂಕವನ್ನು ಕಡಿತಗೊಳಿಸಿದರೆ ಜನ ಸಾಮಾನ್ಯರ ಮೇಲಿನ ಹೊರೆಯನ್ನು ತಕ್ಕಮಟ್ಟಿಗೆ ಇಳಿಸಬಹುದು. 2017ರ ಅಕ್ಟೋಬರ್ನಲ್ಲಿ ಸರ್ಕಾರ ಅಬಕಾರಿ ಸುಂಕವನ್ನು ಕಡಿತಗೊಳಿಸಿದ ಪರಿಣಾಮ ಡೀಸೆಲ್ ಬೆಲೆ ಪ್ರತಿ ಲೀಟರ್ ಗೆ 56.89 ರೂ. ಮತ್ತು 68.38 ರೂ.ಗೆ ಇಳಿದಿತ್ತು. ಹೀಗಿದ್ದರೂ, ನಂತರ ಅಂತರಾಷ್ಟ್ರೀಯ ದರ ಏರಿಕೆಯಿಂದ ತೈಲ ದರ ಹೆಚ್ಚಳವಾಗಿದೆ ಎಂಬುದಾಗಿ ವರದಿಯಾಗಿದೆ. ಇದನ್ನೂ ಓದಿ: ಜಿಎಸ್‍ಟಿ ಅಡಿ ಪೆಟ್ರೋಲ್ ಬಂದ್ರೆ ಬೆಂಗ್ಳೂರಿನಲ್ಲಿ ಪ್ರತಿ ಲೀಟರ್‍ಗೆ 40 ರೂ.ಅಷ್ಟೇ!

    2017ರ ಅಕ್ಟೋಬರ್ 3ರಂದು ಕೇಂದ್ರ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು 2 ರೂ. ಕಡಿತಗೊಳಿಸಿತ್ತು. ಬೆಲೆ ಏರಿಕೆಯಂದ ಜನಸಾಮಾನ್ಯರ ಮೇಲೆ ಆಗುತ್ತಿರುವ ಹೊರೆಯನ್ನು ತಪ್ಪಿಸಲು ಈ ಕ್ರಮವನ್ನು ತೆಗೆದುಕೊಳ್ಳಲಾಗಿದೆ ಎಂದು ಅಬಕಾರಿ ಮತ್ತು ಸೀಮಾ ಸುಂಕ ಮಡಳಿ ತನ್ನ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿತ್ತು.

    2014ರಿಂದ 2016ರ ಅವಧಿಯಲ್ಲಿ ಕೇಂದ್ರ ಸರ್ಕಾರ 9 ಬಾರಿ ಅಬಕಾರಿ ಸುಂಕವನ್ನು ಹೆಚ್ವಿಸಿತ್ತು. ಈ ಅವಧಿಯಲ್ಲಿ ಪೆಟ್ರೋಲ್ ಮೇಲೆ 11.77 ರೂ., ಡೀಸೆಲ್ ಮೇಲೆ 13.47 ರೂ. ನಂತೆ ಅಬಕಾರಿ ಸುಂಕವನ್ನು ಹೆಚ್ಚಿಸಿತ್ತು. ಇದರಿಂದಾಗಿ 2014-15 ರಲ್ಲಿ ಬೊಕ್ಕಸಕ್ಕೆ 99 ಕೋಟಿ ರೂ.ಬಂದಿದ್ದರೆ, 2016-17 ನೇ ಅವಧಿಯಲ್ಲಿ 2.42 ಲಕ್ಷ ಕೋಟಿ ರೂ. ಆದಾಯ ಬಂದಿತ್ತು. ಇದನ್ನೂ ಓದಿ: 70 ರೂ. ಪೆಟ್ರೋಲ್ ನಲ್ಲಿ ಯಾರಿಗೆ ಎಷ್ಟು ಪಾಲು? ಬೇರೆ ರಾಷ್ಟ್ರಗಳಲ್ಲಿ ಎಷ್ಟು ದರವಿದೆ?