Tag: phone taping

  • ಯಾರಿಗೆ ಅನುಭವವಿದ್ಯೋ ಅವರೇ ಈಗ ಟ್ಯಾಪಿಂಗ್ ಬಗ್ಗೆ ಮಾತಾಡ್ತಿರೋದು ಆಶ್ಚರ್ಯ: ಅಶೋಕ್

    ಯಾರಿಗೆ ಅನುಭವವಿದ್ಯೋ ಅವರೇ ಈಗ ಟ್ಯಾಪಿಂಗ್ ಬಗ್ಗೆ ಮಾತಾಡ್ತಿರೋದು ಆಶ್ಚರ್ಯ: ಅಶೋಕ್

    ಬೆಂಗಳೂರು: ಯಾರಿಗೆ ಫೋನ್ ಟ್ಯಾಪ್ ಮಾಡಿ ಅನುಭವ ಇದೆಯೋ ಹಾಗೆಯೇ ಯಾವ ಸರ್ಕಾರ ಹಿಂದೆ ಫೋನ್ ಟ್ಯಾಪ್ ಮಾಡಿತ್ತೋ, ಅವರೇ ಈಗ ಟ್ಯಾಪಿಂಗ್ ಬಗ್ಗೆ ಮಾತಾಡ್ತಿರೋದು ಆಶ್ಚರ್ಯ ಎಂದು ಸಚಿವ ಆರ್ ಅಶೋಕ್ ಅವರು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

    ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿಂದೆ ಅವರದ್ದೇ ಸರ್ಕಾರ ಇದ್ದಾಗ ಫೋನ್ ಟ್ಯಾಪ್ ಆಗಿದ್ದು ಗೊತ್ತಿದೆ. ಹಿಂದಿನ ಸರ್ಕಾರದ ಫೋನ್ ಟ್ಯಾಪ್ ತನಿಖೆ ಒಂದು ಹಂತಕ್ಕೆ ಬರುತ್ತಿದೆ. ಯಾರಿಗೆ ಫೋನ್ ಟ್ಯಾಪ್ ಮಾಡಿ ಅನುಭವ ಇದೆಯೋ, ಅವರೇ ಈಗ ಟ್ಯಾಪಿಂಗ್ ವಿಚಾರ ಮಾತಾಡ್ತಿರೋದು ಆಶ್ಚರ್ಯ ತಂದಿದೆ ಎಂದು ಡಿಕೆಶಿಗೆ ಅಶೋಕ್ ಟಾಂಗ್ ನೀಡಿದರು. ಇದನ್ನೂ ಓದಿ: ನನ್ನ ಫೋನ್ ಟ್ಯಾಪಿಂಗ್ ಆಗ್ತಿರೋದು ನಿಜ- ಸರ್ಕಾರದ ವಿರುದ್ಧ ಡಿಕೆಶಿ ಗಂಭೀರ ಆರೋಪ

    ಇದೊಂಥರಾ ಭೂತದ ಬಾಯಲ್ಲಿ ಭಗದ್ಗೀತೆ ಹೇಳಿದಂತೆ ಕಾಣಿಸ್ತಿದೆ. ಬಸವರಾಜ್ ಬೊಮ್ಮಾಯಿ ಆ ತರಹ ಸಂಸ್ಕೃತಿಯಿಂದ ಬಂದವರಲ್ಲ. ಇದೆಲ್ಲ ಏನಾದ್ರೂ ಇದ್ದರೆ ಕಾಂಗ್ರೆಸ್ ನವರದ್ದೇ ಕಲ್ಚರ್. ಫೋನ್ ಟ್ಯಾಪ್ ಮಾಡುವ ಅಭ್ಯಾಸ, ಅವಶ್ಯಕತೆ ನಮ್ಮ ಸರ್ಕಾರಕ್ಕಿಲ್ಲ. ನಮ್ಮ ಸರ್ಕಾರ ಸುಭದ್ರವಾಗಿದೆ, ಅವರದ್ದೇ ಪಕ್ಷದಲ್ಲಿ ಅಭದ್ರತೆ ಇದೆ ಎಂದರು. ಇದನ್ನೂ ಓದಿ:  ದಕ್ಷ ಅಧಿಕಾರಿಯನ್ನು ಏಜೆಂಟ್ ಎಂದಿರೋದನ್ನ ಖಂಡಿಸ್ತೀನಿ: ಡಿಕೆಶಿಗೆ ಬೊಮ್ಮಾಯಿ ತಿರುಗೇಟು

    ಇದೇ ವೇಳೆ ಕಮಲ್ ಪಂಥ್ ಅವರಿಗೆ ಡಿಕೆಶಿ ವಾರ್ನಿಂಗ್ ಮಾಡಿದ ವಿಚಾರದ ಕುರಿತು ಪ್ರತಿಕ್ರಿಯಿಸಿದ ಅಶೋಕ್, ದಕ್ಷ ಅಧಿಕಾರಿ ಕಮಲ್ ಪಂಥ್ ಅವರು ಗಲಭೆಯಲ್ಲಿ ಭಾಗಿಯಾದವರ ಹೆಡೆಮುರಿ ಕಟ್ಟಿದ್ದಾರೆ. ಪೊಲೀಸರನ್ನು ಹೊಡೆದಂತವರು, ಸ್ಟೇಷನ್ ಗೆ ನುಗ್ಗಿ ಬೆಂಕಿ ಹಚ್ಚಿದವರನ್ನು ಬಂಧಿಸಲಾಗಿದೆ. ಆರೋಪಿಗಳನ್ನು ಬಂಧಿಸಿದ ಕಮಿಷನರ್ ಬಿಜೆಪಿ ಏಜೆಂಟ್ ಅಂತ ಹೇಳಿದರೆ ಹೇಗೆ? ಪೊಲೀಸ್ ಠಾಣೆಗೆ ಬೆಂಕಿ ಇಟ್ಟವರು ಧರ್ಮಾತ್ಮರಾ?, ಕಾಂಗ್ರೆಸ್ ಈ ಸಂಸ್ಕೃತಿ ಬಿಟ್ಟು ಬಿಡಿ. ಈ ದಬ್ಬಾಳಿಕೆ, ಆರೋಪ ನಿಮಗೆ ಬಂದಿರುವ ಬಳುವಳಿ. ಯಾರನ್ನೋ ರಕ್ಷಣೆ ಮಾಡೋದಕ್ಕೆ ಕಮಿಷನರ್ ಗೆ ವಾರ್ನಿಂಗ್ ಕೊಡೋದು ಸರಿಯಲ್ಲ ಎಂದು ಡಿಕೆಶಿಗೆ ಅಶೋಕ್ ತಿರುಗೇಟು ನೀಡಿದರು.  ಇದನ್ನೂ ಓದಿ: ಮಿಸ್ಟರ್ ಪೊಲೀಸ್ ಕಮೀಷನರ್ ಬೆಂಗ್ಳೂರು ಗಲಭೆಯಲ್ಲಿ ನೀವು ಬಿಜೆಪಿ ಏಜೆಂಟ್ ರೀತಿ ವರ್ತಿಸ್ತಿದ್ದೀರಿ: ಡಿಕೆಶಿ

  • ದೇವರು, ಗುರುಗಳು, ತಂದೆ-ತಾಯಿಯ ವ್ಯತ್ಯಾಸ ಗೊತ್ತಿಲ್ಲದ ರಾಕ್ಷಸರನ್ನು ದೇವರೇ ಶಿಕ್ಷಿಸಲಿ: ಡಿವಿಎಸ್

    ದೇವರು, ಗುರುಗಳು, ತಂದೆ-ತಾಯಿಯ ವ್ಯತ್ಯಾಸ ಗೊತ್ತಿಲ್ಲದ ರಾಕ್ಷಸರನ್ನು ದೇವರೇ ಶಿಕ್ಷಿಸಲಿ: ಡಿವಿಎಸ್

    ಬೆಂಗಳೂರು: ಫೋನ್ ಕದ್ದಾಲಿಕೆ ಯಾರೇ ಮಾಡಿರಲಿ ಅವರು ಸಾರ್ವಜನಿಕ ಜೀವನದಲ್ಲಿ ಇರಲು ಅರ್ಹರಲ್ಲ ಎಂದು ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಸಚಿವ ಸಚಿವ ಡಿ.ವಿ ಸದಾನಂದಗೌಡ ಅವರು ಟ್ವೀಟ್ ಮಾಡಿದ್ದಾರೆ.

    ಸದಾನಂದಗೌಡ ಅವರು ತಮ್ಮ ಟ್ವಿಟ್ಟರಿನಲ್ಲಿ, “ಕೆಲ ಸಮಯದ ಹಿಂದೆ ಗುರು ಪೀಠ ಶ್ರೀ ಆದಿಚುಂಚನಗಿರಿ ಶ್ರೀ ನಿರ್ಮಲಾನಂದ ಸ್ವಾಮೀಜಿಯವರ ಫೋನ್ ಕದ್ದಾಲಿಕೆ ನಡೆದಿದೆ ಎನ್ನುವ ಮಾಧ್ಯಮ ವರದಿಗಳು ಆಘಾತಕಾರಿಯಾದದ್ದು. ಅಂತಹ ಕೆಲಸ ಯಾರೇ ಮಾಡಿರಲಿ ಅವರು ಸಾರ್ವಜನಿಕ ಜೀವನದಲ್ಲಿ ಇರಲು ಅರ್ಹರಲ್ಲ. ದೇವರು, ಗುರುಗಳು, ತಂದೆ ತಾಯಿಯ ವ್ಯತ್ಯಾಸ ಗೊತ್ತಿಲ್ಲದ ರಾಕ್ಷಸರನ್ನು ದೇವರೇ ಶಿಕ್ಷಿಸಲಿ” ಎಂದು ಟ್ವೀಟ್ ಮಾಡಿದ್ದಾರೆ.

    ಈ ಬಗ್ಗೆ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಅವರು ಸರಣಿ ಟ್ವೀಟ್ ಮಾಡುವುದರ ಮೂಲಕ ತನ್ನ ವಿರುದ್ಧ ಕೇಳಿ ಬರುತ್ತಿರುವ ಆರೋಪಗಳಿಗೆ ಸ್ಪಷ್ಟನೆ ನೀಡಿದ್ದರು. ಕುಮಾರಸ್ವಾಮಿ ಅವರು ತಮ್ಮ ಟ್ವಿಟ್ಟರಿನಲ್ಲಿ, ನನ್ನ ಅಧಿಕಾರವಧಿಯಲ್ಲಿ ಆದಿ ಚುಂಚನಗಿರಿ ಸ್ವಾಮೀಜಿಗಳ ಫೋನ್ ಟ್ಯಾಪಿಂಗ್ ನಡೆದಿತ್ತು ಎಂಬ ವರದಿಗಳು, ಅದಕ್ಕೆ ಸಂಬಂಧಿಸಿದಂತೆ ರಾಜಕೀಯ ನಾಯಕರ ಹೇಳಿಕೆಗಳು ನನ್ನ ಹೃದಯದಲ್ಲಿ ಸಹಿಸಲಾಗದ ನೋವುಂಟು ಮಾಡಿವೆ. ಎಲ್ಲಕ್ಕೂ ಮಿಗಿಲಾಗಿ ಸ್ವಾಮೀಜಿಗಳಲ್ಲಿ ಮೂಡಿರಬಹುದಾದ ಬೇಸರ ನನ್ನ ನೋವನ್ನು ಹೆಚ್ಚಿಸಿದೆ ಎಂದಿದ್ದಾರೆ.

    ಈ ಪ್ರಕರಣದಲ್ಲಿ ಅನಗತ್ಯವಾಗಿ ನನ್ನ ಹೆಸರು ಪ್ರಸ್ತಾಪಿಸಲಾಗಿದೆ. ಸಂಭವಿಸದ ತಪ್ಪೊಂದಕ್ಕೆ ಅಶೋಕ್ ಅವರು ಎಲ್ಲರಿಗಿಂತಲೂ ಮುಂದೆ ಹೋಗಿ ಕ್ಷಮೆ ಕೇಳಿದ್ದಾರೆ. ಇದರಿಂದ ಅವರಿಗೇನು ಲಾಭವೋ ಗೊತ್ತಿಲ್ಲ. ಅವರ ಆತುರಕ್ಕೆ ಮರುಕವಿದೆ. ಅದೇ ಹೊತ್ತಲ್ಲೇ ಶ್ರೀಗಳಿಗಾಗುತ್ತಿರುವ ಬೇಸರಕ್ಕೆ ಅತೀವ ನೋವಿದೆ ಎಂದು ಹೇಳಿಕೊಂಡಿದ್ದಾರೆ.

    ನಿರ್ಮಲಾನಂದರು ನನಗೆ ನೈತಿಕ ಬಲವಾಗಿದ್ದವರು, ತಮ್ಮ ಸಾಮಾಜಿಕ ಕಾರ್ಯಗಳ ನೆರಳಲ್ಲಿ ನನಗೆ ಮಾರ್ಗದರ್ಶನ ಮಾಡಿದವರು, ನನಗಾಗಿ ಕಾಲಭೈರವನಲ್ಲಿ ಪ್ರಾರ್ಥಿಸಿದವರು. ಅವರ ವಿಚಾರದಲ್ಲಿ ನಾನು ಅನುಮಾನದ ನಡೆ ಅನುಸರಿಸಲು ಸಾಧ್ಯವೇ? ಖಂಡಿತ ಇಲ್ಲ ಎಂದು ಮಾಜಿ ಸಿಎಂ ಟ್ವೀಟ್ ಮಾಡಿದ್ದಾರೆ.