Tag: Photo Change

  • ಹತ್ತನೇ ತರಗತಿ ಪುಸ್ತಕದಲ್ಲಿ ನೆಹರು ಬದಲು ಸಾರ್ವಕರ್ ಫೋಟೋ: ಎನ್‍ಎಸ್‍ಯುಐ ವಿರೋಧ

    ಹತ್ತನೇ ತರಗತಿ ಪುಸ್ತಕದಲ್ಲಿ ನೆಹರು ಬದಲು ಸಾರ್ವಕರ್ ಫೋಟೋ: ಎನ್‍ಎಸ್‍ಯುಐ ವಿರೋಧ

    ಪಣಜಿ: ಗೋವಾದ 10ನೇ ತರಗತಿ ಪುಸ್ತಕದಲ್ಲಿದ್ದ ಮಾಜಿ ಪ್ರಧಾನಿ ಜವಹಾರ್ ಲಾಲ್ ಭಾವಚಿತ್ರದ ತಗೆದು ಆರ್‌ಎಸ್‌ಎಸ್ ಸಹ ಸಂಸ್ಥಾಪಕ, ಸ್ವಾತಂತ್ರ್ಯ ಹೋರಾಟಗಾರ ವಿ.ಡಿ.ಸಾರ್ವಕರ್ ಫೋಟೋ ಬಳಕೆ ಮಾಡಲಾಗಿದ್ದು, ಇದಕ್ಕೆ ಭಾರತೀಯ ರಾಷ್ಟ್ರೀಯ ವಿದ್ಯಾರ್ಥಿ ಸಂಘ (ಎನ್‍ಎಸ್‍ಯುಐ) ಭಾರೀ ವಿರೋಧ ವ್ಯಕ್ತಪಡಿಸಿದೆ.

    10ನೇ ತರಗತಿಯ ಸಮಾಜವಿಜ್ಞಾನ ವಿಷಯ ಪುಸ್ತಕದಲ್ಲಿ ನೆಹರು ಫೋಟೋ ಇತ್ತು. ಅದು 1935ರಲ್ಲಿ ಮಹಾರಾಷ್ಟ್ರದ ವಾರ್ದಾದಲ್ಲಿ ಜವಹಾರ್ ಲಾಲ್ ನೆಹರು ಅವರು ಮಹಾತ್ಮಾ ಗಾಂಧೀಜಿ ಹಾಗೂ ಮೌಲಾನ್ ಅಬ್ದುಲ್ ಕಲಾಂ ಆಜಾದ್ ಜೊತೆಗೆ ಇದ್ದ ಭಾವಚಿತ್ರ. ಆದರೆ ನೆಹರು ಫೋಟೋ ತಗೆದು ಅಲ್ಲಿ ವಿ.ಡಿ.ಸಾರ್ವಕರ್ ಫೋಟೋ ಹಾಕಲಾಗಿದೆ ಎಂದು ದೂರಿದೆ.

    ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ಮೇಲೆ ಬಲಪಂತಿಯ ವಿಚಾರಗಳನ್ನು ಎತ್ತಿ ಹಿಡಿಯುತ್ತಿದೆ. ಅಷ್ಟೇ ಅಲ್ಲದೇ ಬಿಜೆಪಿಯವರು ಇತಿಹಾಸವನ್ನು ತಿರುಚಲು ಹಾಗೂ ಸ್ವಾತಂತ್ರ್ಯದಲ್ಲಿ ಕಾಂಗ್ರೆಸ್ ಕೊಡುಗೆಯನ್ನು ಮರೆಸಲು ಪ್ರಯತ್ನಿಸುತ್ತಿದ್ದಾರೆ ಎಂದು ಎನ್‍ಎಸ್‍ಯುಐ ಗೋವಾ ರಾಜ್ಯ ಅಧ್ಯಕ್ಷ, ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

    ಮುಂದಿನ ದಿನಗಳಲ್ಲಿ ಮಹಾತ್ಮಾ ಗಾಂಧಿ ಕಾಂಗ್ರೆಸ್ಸಿಗೆ ಸೇರಿದವರು ಎನ್ನುವ ಕಾರಣಕ್ಕೆ ಅವರ ಫೋಟೋವನ್ನು ತಗೆದು ಹಾಕಬಹುದು. 60 ವರ್ಷಗಳಿಂದ ಕಾಂಗ್ರೆಸ್ ಏನು ಮಾಡಿದೆ ಎನ್ನುವುದದು ಬಿಜೆಪಿ ವಾದವಾಗಿದೆ. ದೇಶದ ಸ್ವಾತಂತ್ರ್ಯಕ್ಕೆ ಕಾಂಗ್ರೆಸ್ ಹಿರಿಯ ನಾಯಕರು ನೀಡಿದ ಕೊಡುಗೆಯನ್ನು ಇತಿಹಾಸದಿಂದ ಅಳಿಸಿ ಹಾಕಲು ಬಿಜೆಪಿಯವರಿಗೆ ಅವರಿಗೆ ಸಾಧ್ಯವಿಲ್ಲ ಎಂದು ಹೇಳಿದರು.

    ಫೋಟೋ ಬದಲಾಯಿಸಿದ್ದಕ್ಕೆ ಕಾರಣ ನೀಡುವಂತೆ ಉನ್ನತ ಹಾಗೂ ಮಾಧ್ಯಮಿಕ ಪರೀಕ್ಷಾ ಮಂಡಳಿಗೆ ಸೂಚನೆ ನೀಡಲಾಗಿದೆ ಎಂದು ಶಿಕ್ಷಣ ಇಲಾಖೆ ನಿರ್ದೇಶಕ ಗಜಾನನ ಪಿ ಭಟ್ ತಿಳಿಸಿದ್ದು, ಇತ್ತ ಶಿಕ್ಷಣ ಮಂಡಳಿಯ ಅಧ್ಯಕ್ಷ ರಾಮಕೃಷ್ಣ ಸಮಂತ್ ತನಿಖೆಗೆ ಆದೇಶ ನೀಡಿದ್ದಾರೆ.

    ವೃತ್ತಿ ಅನುಭವ ಹಾಗೂ ಹಿನ್ನಲೆ ಆಧಾರದ ಮೇಲೆ ಶಿಕ್ಷಕರನ್ನು ಪುಸ್ತಕದ ವಿಷಯ ಬದಲಾವಣೆಗೆ ಆಯ್ಕೆ ಮಾಡಲಾಗುತ್ತದೆ. ಎಲ್ಲ ಕಡೆಗೂ ಬದಲಾವಣೆ ಮಾಡುವ ಅಧಿಕಾರ ಅವರಿಗೆ ಇರುವುದಿಲ್ಲ. ಅವಶ್ಯಕತೆ ಇರುವಲ್ಲಿ ವಿಷಯ ಬದಲಾವಣೆಗೆ ಸಲಹೆ ನೀಡಬಹುದು. ಆದರೆ ಅವರು ಏಕೆ ಫೋಟೋ ಬದಲಾವಣೆ ಮಾಡಿದರು ಎನ್ನುವುದು ತಿಳಿದಿಲ್ಲ. ಹೀಗಾಗಿ ತನಿಖೆಗೆ ಆದೇಶ ನೀಡಲಾಗಿದೆ ಎಂದು ರಾಮಕೃಷ್ಣ ಸಮಂತ್ ತಿಳಿಸಿದ್ದಾರೆಂದು ವರದಿಯಾಗಿದೆ.

    ಮೇ ತಿಂಗಳಿನಲ್ಲಿ ಹೊಸ ಪಠ್ಯ ಬಿಡುಗಡೆಯಾಗಿದೆ ಎಂದು ಶಿಕ್ಷಣ ಇಲಾಖೆ ಹೇಳಿದೆ.