Tag: Photo Viral

  • ಪತ್ನಿ ಜೊತೆಗಿನ ಲವ್ಲೀ ಫೋಟೋ ಶೇರ್ ಮಾಡಿದ ನಟ ನಿಖಿಲ್

    ಪತ್ನಿ ಜೊತೆಗಿನ ಲವ್ಲೀ ಫೋಟೋ ಶೇರ್ ಮಾಡಿದ ನಟ ನಿಖಿಲ್

    ಬೆಂಗಳೂರು: ಸ್ಯಾಂಡಲ್‍ವುಡ್ ನಟ ನಿಖಿಲ್ ಕುಮಾರಸ್ವಾಮಿ ಸಾಮಾಜಿ ಜಾಲತಾಣದಲ್ಲಿ ಸಖತ್ ಆ್ಯಕ್ಟಿವ್ ಆಗಿರುತ್ತಾರೆ. ಫೋಟೋವನ್ನು ಶೇರ್ ಮಾಡಿಕೊಳ್ಳುವ ಮೂಲಕವಾಗಿ ಅಭಿಮಾನಿಗಳ ಜೊತೆಗೆ ಸಂಪರ್ಕದಲ್ಲಿರುತ್ತಾರೆ. ಇದೀಗ ಪತ್ನಿ ಜೊತೆಗೆ ಸೆಲ್ಫಿ ಕ್ಲಿಕ್ಕಿಸಿಕೊಂಡು ಇನ್‍ಸ್ಟಾಗ್ರಾಮ್‍ನಲ್ಲಿ ಶೇರ್ ಮಾಡಿದ್ದಾರೆ.

    ಪತ್ನಿ ಜೊತೆಗೆ ಫೋಟೋವನ್ನು ಸೆರೆ ಹಿಡಿದು ಅದಕ್ಕೆ ಮುದ್ದಾದ ಬರಹವನ್ನು ಬರೆದುಕೊಂಡಿದ್ದಾರೆ. ನನ್ನ ಧರ್ಮ ಪತ್ನಿ ಜೊತೆಗೆ ಒಂದು ಸೆಲ್ಫಿ ಎಂದು ಬರೆದುಕೊಂಡು ಫೋಟೋವನ್ನು ಸೋಶಿಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಈ ಮುದ್ದಾದ ಜೋಡಿಯ ಕ್ಯೂಟ್ ಮೂಮೆಂಟ್ ನೋಡಿದ ನೆಟ್ಟಿಗರು, ಅಭಿಮಾನಿಗಳು ಮೆಚ್ಚುಗೆ ಸೂಚಿಸುತ್ತಿದ್ದಾರೆ. ಇದನ್ನೂ ಓದಿ:  ಹೌದು ತಂದೆಯಾಗುತ್ತಿರುವುದು ನಿಜ: ನಿಖಿಲ್

    ಸೂಪರ್ ಅಣ್ಣ, ಅತ್ತಿಗೆ, ಹಾರ್ಟ್ ಎಮೋಜಿಗಳು ಹೀಗೆ ಅನೇಕ ರೀತಿಯ ಕಮೆಂಟ್ ಗಳನ್ನು ಅಭಿಮಾನಿಗಳು ಮಾಡುತ್ತಿದ್ದಾರೆ. ಫೋಟೋದಲ್ಲಿ ರೇವತಿ ಮತ್ತು ನಿಖಿಲ್ ಕೂಡ ತುಂಬಾ ಮುದ್ದಾಗಿ ಕಾಣಿಕೊಂಡಿದ್ದಾರೆ. ಇದನ್ನೂ ಓದಿ: ಟ್ವಿಟ್ಟರ್​ನಲ್ಲಿ ಅವಕಾಶ ಇಲ್ಲ, ಸಂಸತ್​ನಲ್ಲೂ ಮಾತಾಡೋಕೆ ಬಿಡಲ್ಲ: ರಾಹುಲ್ ಗಾಂಧಿ

    ಕೆಲ ದಿನಗಳ ಹಿಂದೆಯಷ್ಟೇ ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ತಾವು ಅಜ್ಜನಾಗುತ್ತಿರುವ ವಿಚಾರವನ್ನು ಮಾಧ್ಯಮಗಳ ಮುಂದೆ ಬಹಿರಂಗಪಡಿಸಿದ್ದರು. ಸೊಸೆ ರೇವತಿ 5 ತಿಂಗಳ ಗರ್ಭಿಣಿ ಎಂದು ಸಂತಸದ ಸುದ್ದಿಯನ್ನು ರಿವೀಲ್ ಮಾಡಿದ್ದರು. ನಂತರ ನಿಖಿಲ್ ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡುವಾಗ ಪತ್ರಕರ್ತರ ಪ್ರಶ್ನೆಗೆ ಉತ್ತರಿಸುವಾಗ ಈ ಕುರಿತು ಈಗಾಗಲೇ ಸುದ್ದಿ ಹರಿದಾಡುತ್ತಿರುವುದು ಸತ್ಯ, ನಾವು ಮಗುವಿನ ನಿರೀಕ್ಷೆಯಲ್ಲಿದ್ದೇವೆ, ತಂದೆಯಾಗುತ್ತಿದ್ದೇನೆ ಎಂದು ಸ್ವತಃ ಅವರೇ ಸ್ಪಷ್ಟಪಡಿಸಿದ್ದರು.

    2020ರ ಫೆಬ್ರವರಿ 10ರಂದು ನಿಖಿಲ್ ಕುಮಾರಸ್ವಾಮಿ ನಿಶ್ಚಿತಾರ್ಥ ರೇವತಿ ಅವರ ಜೊತೆ ನಡೆದಿತ್ತು. ಮದುವೆಯನ್ನ ಅದ್ಧೂರಿಯಾಗಿ ನಡೆಸಲು ಮಾಜಿ ಸಿಎಂ ಕುಮಾರಸ್ವಾಮಿ ಕುಟುಂಬ ನಿರ್ಧರಿಸಿತ್ತು. ಕೊರೊನಾ ಹಿನ್ನೆಲೆ ಕೆಲ ಆಪ್ತರ ಸಮ್ಮುಖದಲ್ಲಿ 2020 ಏಪ್ರಿಲ್ 17ರಂದು ವಿವಾಹ ನಡೆದಿತ್ತು. ನಿಖಿಲ್ ಮತ್ತು ರೇವತಿ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ಸದ್ದು ಮಾಡುತ್ತಲೇ ಇರುತ್ತವೆ. ಇದೀಗ ಈ ಮುದ್ದಾದ ಫೋಟೋ ಮತ್ತೆ ಸುದ್ದಿಯಾಗುತ್ತಿದೆ.

  • ರೈಲಿನ ಬಾಗಿಲಿಗೆ ತಲೆಬಾಗಿ ನಮಸ್ಕರಿಸಿದ ವ್ಯಕ್ತಿಯ ಫೋಟೋ ವೈರಲ್

    ರೈಲಿನ ಬಾಗಿಲಿಗೆ ತಲೆಬಾಗಿ ನಮಸ್ಕರಿಸಿದ ವ್ಯಕ್ತಿಯ ಫೋಟೋ ವೈರಲ್

    ಮುಂಬೈ: ವ್ಯಕ್ತಿಯೊಬ್ಬ ರೈಲಿನ ಬಾಗಿಲಿಗೆ ತಲೆಬಾಗಿ ನಮಸ್ಕರಿಸಿದ ಫೋಟೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗಿದೆ.

    ಹೌದು. ಮಹಾಮಾರಿ ಕೊರೊನಾದಿಂದ ಇಡೀ ದೇಶವನ್ನೇ ಲಾಕ್‍ಡೌನ್ ಮಾಡಲಾಗಿತ್ತು. ಕೆಲ ತಿಂಗಳ ಬಳಿಕ ಲಾಕ್‍ಡೌನ್ ತೆರವಾದರೂ ಕೆಲವೊಂದು ನಿಯಮಗಳು ಜಾರಿಯಲ್ಲಿದ್ದವು. ಅಂತೆಯೇ ಸ್ಥಳೀಯ ರೈಲುಗಳಿಗೆ ನಿರ್ಬಂಧ ಹೇರಲಾಗಿತ್ತು. ಇದೀಗ ಬರೋಬ್ಬರಿ 10 ತಿಂಗಳ ಬಳಿಕ ಮುಂಬೈನಲ್ಲಿ ಲೋಕ್ ಟ್ರೈನ್ ಸಂಚಾರ ಆರಂಭಗೊಂಡಿದೆ. ಈ ಹಿನ್ನೆಲೆಯಲ್ಲಿ ವ್ಯಕ್ತಿಯೊಬ್ಬ ಹತ್ತುವ ಮುನ್ನ ರೈಲಿನ ಬಾಗಿಲಿಗೆ ತಲೆಯಿಟ್ಟು ನಮಸ್ಕರಿಸಿದ್ದಾರೆ. ಇದನ್ನು ಅಲ್ಲೇ ಇದ್ದವರು ತಮ್ಮ ಮೊಬೈಲ್ ನಲ್ಲಿ ಸೆರೆ ಹಿಡಿದು ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡಿಕೊಂಡಿದ್ದಾರೆ.

    ವೈರಲ್ ಆದ ಫೋಟೋದಲ್ಲಿ ವ್ಯಕ್ತಿ ಹಳಿಯಲ್ಲಿ ನಿಂತಿದ್ದ ಮುಂಬೈ ಸ್ಥಳೀಯ ರೈಲಿನ ಬಾಗಿಲ ಬಳಿ ಕುಳಿತು, ತನ್ನ ಕೈಗಳನ್ನು ಕೆಳಗಿರಿಸಿ ತಲೆ ಬಾಗಿ ನಮಸ್ಕರಿಸಿ ಗೌರವ ನೀಡಿದ್ದಾನೆ. ಈ ಫೋಟೋವನ್ನು ಹಿಮಾಂಶು ಪರ್ಮಾರ್(@ಮದನ್-ಚಿಕ್ನಾ) ಎಂಬವರು ತನ್ನ ಟ್ವಿಟ್ಟರ್ ಖಾತೆಯಲ್ಲಿ ಶೇರ್ ಮಾಡಿಕೊಂಡಿದ್ದು, 10 ತಿಂಗಳ ನಂತರ ರೈಲನ್ನು ಹತ್ತುವ ಮೊದಲು ಪ್ರಯಾಣಿಕ ನಮಸ್ಕರಿಸುತ್ತಿರುವ ಈ ಫೋಟೋ ನನ್ನ ಮನ ಮುಟ್ಟಿದೆ ಎಂದು ಕ್ಯಾಪ್ಷನ್ ಹಾಕಿಕೊಂಡಿದ್ದಾರೆ.

    ಇದೀಗ ಈ ಪೋಸ್ಟ್ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದ್ದು, ಹಲವಾರು ಲೈಕ್ಸ್ ಮತ್ತು ಕಾಮೆಂಟ್‍ಗಳು ಹರಿದು ಬರುತ್ತಿದೆ. ಅಲ್ಲದೆ ವ್ಯಕ್ತಿಯೊಬ್ಬರು ಈ ಫೋಟೋ ಮೂಲಕ ಭಾರತೀಯ ನಾಗರಿಕತೆ ಮತ್ತು ಭಾರತೀಯ ಸಂಸ್ಕøತಿಯನ್ನು ತೋರಿಸುತ್ತದೆ ಎಂದು ಕಾಮೆಂಟ್ ಮಾಡಿದ್ದಾರೆ.

    ಒಟ್ಟಿನಲ್ಲಿ ಕೋವಿಡ್-19 ಸಾಂಕ್ರಾಮಿಕ ರೋಗದಿಂದ ಕಳೆದ ವರ್ಷ ಮಾರ್ಚ್ 22ರ ಮಧ್ಯರಾತ್ರಿಯಿಂದ ಸ್ಥಗಿತಗೊಂಡಿದ್ದ ಮುಂಬೈ ಸ್ಥಳೀಯ ರೈಲುಗಳಲ್ಲಿ ಮತ್ತೆ ಸಾರ್ವಜನಿಕರು ಪ್ರಯಾಣಿಸಲು ಸೋಮವಾರದಿಂದ ಅವಕಾಶ ನೀಡಲಾಗಿದೆ. ಹೀಗಾಗಿ 10 ತಿಂಗಳ ನಂತರ ಲೋಕಲ್ ಟ್ರೈನ್ ಸಂಚಾರ ಆರಂಭಗೊಂಡಿದ್ದರಿಂದ ಮುಂಬೈ ಮಂದಿಗೆ ಮತ್ತೆ ಜೀವ ಬಂದಂತಾಗಿದೆ.

  • ವೈರಲ್ ಆಯ್ತು ಯಶ್, ಯಥರ್ವ್ ಫೋಟೋ

    ವೈರಲ್ ಆಯ್ತು ಯಶ್, ಯಥರ್ವ್ ಫೋಟೋ

    ಬೆಂಗಳೂರು : ಸ್ಯಾಂಡಲ್‍ವುಡ್ ನಟ ರಾಕಿಂಗ್ ಸ್ಟಾರ್ ಯಶ್ ಮಗ ಯಥರ್ವ ಜೊತೆ ಇರುವ ಫೋಟೋವೊಂದನ್ನು ತಮ್ಮ ಇನ್ ಸ್ಟಾಗ್ರಾಮ್ ಖಾತೆಯಲ್ಲಿ ಶೇರ್ ಮಾಡಿಕೊಂಡಿದ್ದಾರೆ. ಸದ್ಯ ಈ ಫೋಟೋ ಇದೀಗ ಎಲ್ಲೆಡೆ ಧೂಳ್ ಎಬ್ಬಿಸುತ್ತಿದೆ.

     

    View this post on Instagram

     

    A post shared by Yash (@thenameisyash)

    ಇತ್ತೀಚೆಗಷ್ಟೇ ರಾಕಿಂಗ್ ಸ್ಟಾರ್ ಯಶ್ ಕುಟುಂಬ ಸಮೇತ ಐಲ್ಯಾಂಡ್ ಪ್ರವಾಸಕ್ಕೆ ತೆರಳಿದ್ದರು. ಈ ವೇಳೆ ಬೇಬಿ ಶಾರ್ಕ್ ಗಳನ್ನು ನೋಡಲು ಭೇಟಿ ನೀಡಿದ್ದಾಗ ಮಗ ಯಥರ್ವ್ ಜೊತೆ ಯಶ್ ಫೋಟೋ ಕ್ಲಿಕ್ಕಿಸಿಕೊಂಡಿದ್ದರು.

     

    View this post on Instagram

     

    A post shared by Yash (@thenameisyash)

    ಮಾಲ್ಡೀವ್ಸ್ ಟ್ರಿಪ್‍ಗೆ ತೆರಳಿದ್ದ ವೇಳೆ ಯಶ್ ಮಗ ಯಥರ್ವ್ ಯಶ್‍ನನ್ನು ತಮ್ಮ ಕೈ ಮೇಲೆ ಎತ್ತಿಕೊಂಡಿದ್ದು, ಸೆಲ್ಫಿ ಕ್ಲಿಕ್ಕಿಸಿಕೊಂಡಿದ್ದರು. ಇನ್ನೂ ಫ್ಯಾಮಿಲಿ ಜೊತೆ ಟ್ರಿಪ್ ಫುಲ್ ಎಂಜಾಯ್ ಮಾಡಿದ್ದ ಯಶ್, ಕಳೆದ ವಾರ ಬೆಂಗಳೂರಿಗೆ ಮರಳಿದ್ದಾರೆ. ಪ್ರವಾಸದ ವೇಳೆ ತೆಗೆದುಕೊಂಡಿದ್ದ ಮಗನೊಂದಿಗಿನ ಫೋಟೋವನ್ನು ಜನವರಿ 27ರಂದು ತಮ್ಮ ಇನ್ ಸ್ಟಾಗ್ರಾಮ್ ಖಾತೆಯಲ್ಲಿ ಶೇರ್ ಮಾಡಿಕೊಂಡಿದ್ದಾರೆ. ಅದರಲ್ಲೂ ವಿಶೇಷವೆನೆಂದರೆ ಯಶ್ ಕ್ಯಾಪ್ಷನ್ ಎಲ್ಲರ ಗಮನ ಸೆಳೆಯುತ್ತಿದೆ.

     

    View this post on Instagram

     

    A post shared by Yash (@thenameisyash)

    ಹೌದು.. ಬೇಬಿ ಶಾರ್ಕ್ ಡು..ಡು..ಡು ಜೊತೆಗೆ ಡಡ್ಡಾ ಶಾರ್ಕ್ ಡು..ಡು..ಡು ಎಂಬ ಪ್ರಾಸ ಪದಗಳೊಂದಿಗೆ ಕ್ಯಾಪ್ಷನ್ ಹಾಕಿ ಫೋಟೋವನ್ನು ಶೇರ್ ಮಾಡಿಕೊಂಡಿದ್ದಾರೆ.

    ಅಷ್ಟೇ ಅಲ್ಲದೆ ಯಶ್ ಪತ್ನಿ ರಾಧಿಕಾ ಪಂಡಿತ್ ಜೊತೆ ತಂಗಿದ್ದ ರೆಸಾರ್ಟ್ ವೀಡಿಯೋವನ್ನು ಶೇರ್ ಮಾಡಿಕೊಂಡಿದ್ದಾರೆ. ಫ್ಯಾಮಿಲಿ ಹಾಲಿಡೇ ಬಹಳ ಮುಖ್ಯ. ಇದು ನಮ್ಮನ್ನು ಪುನರ್ ಯೌವನಗೊಳಿಸುತ್ತದೆ ಎಂದು ರಾಧಿಕಾ ಪಂಡಿತ್ ಹೇಳಿಕೊಂಡಿದ್ದಾರೆ.

     

    View this post on Instagram

     

    A post shared by Yash (@thenameisyash)

    ಸದ್ಯ ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಿಗ್ ಬಜೆಟ್ ಚಿತ್ರ ಕೆಜಿಎಫ್-2 ಸಿನಿಮಾ ಬಿಡುಗಡೆಗಾಗಿ ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ, ಈ ಚಿತ್ರಕ್ಕೆ ನಿರ್ದೇಶಕ ಪ್ರಶಾಂತ್ ನೀಲ್ ಆ್ಯಕ್ಷನ್ ಕಟ್ ಹೇಳಿದ್ದು, ಹೊಂಬಾಳೆ ಬ್ಯಾನರ್ ಆಡಿ ಚಿತ್ರವನ್ನು ನಿರ್ಮಿಸಲಾಗಿದೆ. ಈ ವರ್ಷದ ಕೊನೆಯಲ್ಲಿ ಚಿತ್ರ ಎಲ್ಲ ಥಿಯೇಟರ್‍ಗಳ ಸ್ಕ್ರೀನ್ ಮೇಲೆ ಬರಲಿದೆ ಎನ್ನಲಾಗ್ತಿದೆ.

  • ಬೆಳಗಾವಿ ಯೋಧನಿಗೆ ಬಾಸುಂಡೆ ಬರೋ ಹಾಗೆ ಥಳಿತ

    ಬೆಳಗಾವಿ ಯೋಧನಿಗೆ ಬಾಸುಂಡೆ ಬರೋ ಹಾಗೆ ಥಳಿತ

    ಬೆಳಗಾವಿ: ಸಿಆರ್ ಪಿಎಫ್ ಯೋಧ ಸಚಿನ್ ಸಾವಂತ್ ಅವರಿಗೆ ಬಾಸುಂಡೆ ಬರುವ ಹಾಗೆ ಸದಲಗಾ ಪೊಲೀಸರು ಥಳಿಸಿರುವ ಆರೋಪಗಳು ಕೇಳಿ ಬಂದಿದೆ. ಯೋಧನಿಗೆ ಬಾಸುಂಡೆ ಬಂದಿರುವ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಸಾರ್ವಜನಿಕರು ಪೊಲೀಸರ ನಡೆಗೆ ಕಿಡಿಕಾರಿದ್ದಾರೆ.

    ಏಪ್ರಿಲ್ 23ರಂದು ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಯಕ್ಸಂಬಾ ಪಟ್ಟಣದಲ್ಲಿ ಪೊಲೀಸರು ಮತ್ತು ಯೋಧನ ನಡುವೆ ಗಲಾಟೆ ನಡೆದಿತ್ತು. ತದನಂತರ ಪೊಲೀಸರು ಯೋಧನನ್ನು ಠಾಣೆಗೆ ಕರೆದುಕೊಂಡು ಕೈಗೆ ಕೋಳ ಹಾಕಿದ್ದರು. ದೇಶ ಕಾಯುವ ಯೋಧನ ಕೈಗೆ ಕೋಳ ಹಾಕಿದ್ದಕ್ಕೆ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು. ಕೈಗೆ ಕೋಳ ಹಾಕಿರುವ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು.

    ಮಂಗಳವಾರ ಯೋಧ ಸಚಿನ್ ಸಾವಂತ್ ಅವರಿಗೆ ಜಾಮೀನು ದೊರಕ್ಕಿದ್ದು, ಜೈಲಿನಿಂದ ಹೊರ ಬಂದಿದ್ದರು. ಖುದ್ದು ಸಿಆರ್ ಪಿಎಫ್ ಅಧಿಕಾರಿಗಳೇ ಸಚಿನ್ ಅವರನ್ನು ಕರೆತರಲು ಹೋಗಿದ್ದರು.

  • ಪ್ರೀ-ವೆಡ್ಡಿಂಗ್ ಫೋಟೋಶೂಟ್‍ನಲ್ಲೂ ಪೌರತ್ವದ ಕಿಚ್ಚು- ಕೇರಳ ದಂಪತಿ ಫೋಟೋ ವೈರಲ್

    ಪ್ರೀ-ವೆಡ್ಡಿಂಗ್ ಫೋಟೋಶೂಟ್‍ನಲ್ಲೂ ಪೌರತ್ವದ ಕಿಚ್ಚು- ಕೇರಳ ದಂಪತಿ ಫೋಟೋ ವೈರಲ್

    ತಿರುವನಂತಪುರಂ: ಪೌರತ್ವ ಕಾಯ್ದೆ(ಸಿಎಎ), ರಾಷ್ಟ್ರೀಯ ನಾಗರಿಕ ನೋಂದಣಿ(ಎನ್ಆರ್‌ಸಿ) ವಿರೋಧಿಸಿ ಕೇರಳದ ದಂಪತಿ ಮಾಡಿಸಿರುವ ಪ್ರೀ ವೆಡ್ಡಿಂಗ್ ಫೋಟೋ ಶೂಟ್ ಸಖತ್ ವೈರಲ್ ಆಗಿದೆ.

    ಇತ್ತೀಚೆಗೆ ಪ್ರೀ-ವೆಡ್ಡಿಂಗ್ ಫೋಟೋಶೂಟ್ ಮಾಡಿಸುವುದು ಟ್ರೆಂಡ್ ಆಗಿಬಿಟ್ಟಿದೆ. ಸುಂದರ ಲೊಕೆಷನ್‍ನಲ್ಲಿ ದಂಪತಿ ಫೋಟೋಗಳಿಗೆ ಪೋಸ್‍ಕೊಟ್ಟು ಫೋಟೋಶೂಟ್ ಮಾಡಿಕೊಳ್ಳುತ್ತಾರೆ. ಆದರೆ ಕೇರಳದ ಅರುಣ್ ಗೋಪಿ ಹಾಗೂ ಆಶಾ ಶೇಖರ್ ದಂಪತಿ ಸಿಎಎ ಮತ್ತು ಎನ್ಆರ್‌ಸಿ ವಿರೋಧಿಸಿ ಪ್ರೀ-ವೆಡ್ಡಿಂಗ್ ಫೋಟೋಶೂಟ್ ಮಾಡಿಸಿರುವುದು ವಿಶೇಷವಾಗಿದೆ. ಸುಂದರವಾದ ಪೊನ್ಮುಡಿ ಬೆಟ್ಟದ ಮುಂಭಾಗ ‘ಸಿಎಎ ಬೇಡ’, ‘ಎನ್ಆರ್‌ಸಿ ಬೇಡ’ ಎಂಬ ಫಲಕಗಳನ್ನು ಹಿಡಿದು ಕೇರಳ ದಂಪತಿ ಪ್ರೀ-ವೆಡ್ಡಿಂಗ್ ಫೋಟೋಶೂಟ್ ಮಾಡಿಸಿದ್ದಾರೆ. ಈ ಫೋಟೋಗಳನ್ನು ತಮ್ಮ ಫೇಸ್‍ಬುಕ್‍ನಲ್ಲಿ ದಂಪತಿ ಹಂಚಿಕೊಂಡಿದ್ದು, ಸಿಎಎ, ಎನ್ಆರ್‌ಸಿ ವಿರೋಧಿಸಿದ ಪ್ರೀ-ವೆಡ್ಡಿಂಗ್ ಫೋಟೋಗಳು ಎಲ್ಲೆಡೆ ವೈರಲ್ ಆಗಿದೆ. ಇದನ್ನೂ ಓದಿ: ಪ್ರಿ-ವೆಡ್ಡಿಂಗ್ ಶೂಟ್‍ನಲ್ಲಿ ಕಿಸ್ ಮಾಡೋವಾಗ ಮಗುಚಿದ ದೋಣಿ – ವಿಡಿಯೋ ನೋಡಿ

    ಡಿಸೆಂಬರ್ 18ರಂದು ‘ಫಸ್ಟ್ ಲುಕ್ ಫೋಟೋಗ್ರಾಫಿ’ ಹೆಸರಿನ ಫೇಸ್‍ಬುಕ್ ಖಾತೆಯಿಂದ ಅರುಣ್ ಗೋಪಿ ಹಾಗೂ ಆಶಾ ಶೇಖರ್ ಅವರ ಪ್ರೀ-ವೆಡ್ಡಿಂಗ್ ಫೋಟೋಶೂಟ್ ಫೋಟೋಗಳನ್ನು ಅಪ್ಲೋಡ್ ಮಾಡಲಾಗಿತ್ತು. ನಂತರ ಈ ಫೋಟೋಗಳನ್ನು ಇತರ ಸಾಮಾಜಿಕ ಜಾಲತಾಣಗಳಲ್ಲಿ ನೆಟ್ಟಿಗರು ಶೇರ್ ಮಾಡಿಕೊಂಡಿದ್ದು, ಈ ಫೋಟೋಶೂಟ್ ಪರ ಹಾಗೂ ವಿರೋಧ ಕಮೆಂಟ್‍ಗಳು ವ್ಯಕ್ತವಾಗಿದೆ. ಆದರೆ ಎಲ್ಲೆಡೆ ಪ್ರತಿಭಟನೆ, ಗಲಾಟೆಗಳು ಮಾಡುವ ಮೂಲಕ ಸಿಎಎ, ಎನ್ಆರ್‌ಸಿ ವಿರೋಧಿಸುತ್ತಿರುವ ಜನರ ನಡುವೆ ಈರೀತಿ ವಿನೂತನವಾಗಿ ತಮ್ಮ ವಿರೋಧ ವ್ಯಕ್ತಪಡಿಸಿದ ದಂಪತಿ ಫೋಟೋಗಳು ಎಲ್ಲರ ಗಮನ ಸೆಲೆದಿದೆ.  ಇದನ್ನೂ ಓದಿ: ಕೆಸರಿನಲ್ಲಿ ಜೋಡಿಯ ವೆಡ್ಡಿಂಗ್ ಫೋಟೋಶೂಟ್

    ತಿರುವನಂತಪುರಂ ಜಿಲ್ಲಾ ಮಕ್ಕಳ ಕಲ್ಯಾಣ ಮಂಡಳಿಯ ಖಜಾಂಚಿಯಾಗಿರುವ ಅರುಣ್, ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ(ಮಾಕ್ರ್ಸ್‍ವಾದಿ) ಅಧೀನದಲ್ಲಿರುವ ಮಕ್ಕಳ ಸಂಸ್ಥೆ ಬಾಲಸಂಘಂನ ರಾಜ್ಯಾಧ್ಯಕ್ಷರಾಗಿದ್ದಾರೆ. ಫಸ್ಟ್ ಲುಕ್ ಫೋಟೋಗ್ರಾಫಿಯ ಪಾರ್ಟ್‍ನರ್ ಆಗಿರುವ ಅರ್ಜುನ್ ಎಪಿ ಅವರು ಈ ಫೋಟೋಶೂಟ್ ಬಗ್ಗೆ ಪ್ರತಿಕ್ರಿಯಿಸಿ, ದಂಪತಿಯ ಈ ವಿಶೇಷ ಫೋಟೋಶೂಟ್‍ಗೆ ನಾವು ಐಡಿಯಾ ಕೊಟ್ಟಿದ್ದು, ಆದರೆ ದಂಪತಿ ಖುಷಿಯಿಂದ ಈ ಐಡಿಯಾವನ್ನು ಒಪ್ಪಿಕೊಂಡು ಸಹಕರಿಸಿದರು. ನಾವು ಫೇಸ್‍ಬುಕ್ ಪೋಸ್ಟ್ ಟ್ಯಾಗ್‍ಲೈನ್ ಹಾಕಿದಂತೆ ಇವರು ಜವಾಬ್ದಾರಿ ಇರುವ ದಂಪತಿ ಎಂದು ತಿಳಿಸಿದರು.

  • ವೈರಲ್ ಆಯ್ತು ಮುಖದ್ಮೇಲೆ ಬಾಲ ಇರುವ ಕ್ಯೂಟ್ ನಾಯಿಮರಿ

    ವೈರಲ್ ಆಯ್ತು ಮುಖದ್ಮೇಲೆ ಬಾಲ ಇರುವ ಕ್ಯೂಟ್ ನಾಯಿಮರಿ

    ವಾಷಿಂಗ್ಟನ್: ಸಾಮಾಜಿಕ ಜಾಲತಾಣಗಳಲ್ಲಿ ಈಗ ಮುಖದ ಮೇಲೆ ಬಾಲವಿರುವ ಕ್ಯೂಟ್ ನಾಯಿ ಮರಿ ಸಖತ್ ವೈರಲ್ ಆಗಿದ್ದು. ಈ ನಾಯಿ ಮರಿಯನ್ನು ಕಂಡು ನೆಟ್ಟಿಗರು ಅಚ್ಚರಿ ಪಟ್ಟಿದ್ದಾರೆ.

    ಒಂದು ಬಾಲವಿರುವ ನಾಯಿಯನ್ನು ನೋಡಿರುತ್ತೇವೆ. ಆದರೆ ಅಮೆರಿಕದ ಮಿಸ್ಸೌರಿಯಲ್ಲಿ ಬೀದಿ ನಾಯಿ ಮರಿಯೊಂದಕ್ಕೆ ಎರಡೆರಡು ಬಾಲವಿದೆ. ಅದರಲ್ಲೂ ವಿಚಿತ್ರವೆಂದರೆ ನಾಯಿ ಮರಿಗೆ ಮುಖದ ಮೇಲೆ ಬಾಲವಿದೆ. ಈ ನಾಯಿ ಮರಿ ಹುಟ್ಟಿದಾಗಿಂದಲೇ ಮುಖದ ಮೇಲೆ ಬಾಲವಿತ್ತೆಂದು ಹೇಳಲಾಗುತ್ತಿದ್ದು, ಸದ್ಯ ಎಲ್ಲೆಡೆ ಈ ನಾಯಿ ಮರಿಯದ್ದೇ ಚರ್ಚೆ ಶುರುವಾಗಿದೆ.

    ನಾಯಿ ಮರಿಯನ್ನು ಕಂಡ ಜನರು ಇದಕ್ಕೆ ಕ್ಯೂಟ್ ಯೂನಿಕಾರ್ನ್ ಎಂದು ಕರೆಯುತ್ತಿದ್ದಾರೆ. ಯೂನಿಕಾರ್ನ್ ಎಂದರೆ ಹಣೆಯ ಮೇಲೆ ಕೊಂಬು ಇರುವ ಕುದುರೆ. ಮಕ್ಕಳ ಕಥೆಗಳಲ್ಲಿ ಬರುವ ಯೂನಿಕಾರ್ನ್‍ಗೆ ಕೊಡಿರುವಂತೆ ಈ ನಾಯಿ ಮರಿಗೆ ಹಣೆಯ ಮೇಲೆ ಬಾಲವಿದೆ. ಆದರೆ ಈ ನಾಯಿ ಮರಿಯ ಅಸಲಿ ಹೆಸರು ನಾರ್ವಲ್. ನಾಯಿ ಮರಿಯನ್ನು ಬೀದಿಯಲ್ಲಿ ಕಂಡು ಎನ್‍ಜಿಓವೊಂದು ಇದನ್ನು ರಕ್ಷಿಸಿದೆ.

    https://twitter.com/dog_rates/status/1194660457451159552

    ಈ ನಾಯಿ ಮರಿ ರಸ್ತೆ ಬದಿಯಲ್ಲಿ ಪತ್ತೆಯಾಗಿತ್ತು. ಇದನ್ನು ಮ್ಯಾಕ್ ಮಿಷನ್ಸ್ ಚಾರಿಟಿ ರಕ್ಷಣೆ ಮಾಡಿತ್ತು. ಈ ವೇಳೆ ಈ ಪುಟ್ಟ ನಾಯಿ ಮರಿಯ ಹಣೆಯ ಭಾಗದಲ್ಲಿ ಪುಟ್ಟ ಬಾಲವಿರುವುದನ್ನು ಗಮನಿಸಿದ ಸದಸ್ಯರು ಪಶು ವೈದ್ಯರ ಬಳಿ ಕರೆದೊಯ್ದಿದ್ದಾರೆ.

    ಅಲ್ಲಿ ವೈದ್ಯರು ನಾರ್ವಲ್‍ನನ್ನು ತಪಾಸಣೆ ನಡೆಸಿದ ಬಳಿಕ ನಾಯಿ ಮರಿಯ ಮುಖದ ಮೇಲಿರುವ ಬಾಲ ದೇಹಕ್ಕೆ ಜೋಡಣೆಯಾಗಿಲ್ಲ ಎಂಬುದು ತಿಳಿದು ಬಂದಿದೆ. ಇದರಿಂದ ಅದಕ್ಕೆ ಯಾವುದೇ ಅಪಾಯವಿಲ್ಲ ಎಂದು ಬಾಲವನ್ನು ಕತ್ತರಿಸದೇ ಸುಮ್ಮನೆ ಬಿಟ್ಟಿದ್ದಾರೆ.

    ಈ ಮುದ್ದಾದ ನಾಯಿ ಮರಿಯ ಫೋಟೋಗಳನ್ನು ‘ವಿ ರೇಟ್ ಡಾಗ್ಸ್’ ಹೆಸರಿನ ಟ್ವಿಟ್ಟರ್ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ. ಈ ಅಪರೂಪದ ನಾಯಿ ಮರಿಗೆ ಕ್ಯೂಟ್‍ನೆಸ್‍ಗೆ ಪ್ರಾಣಿ ಪ್ರೀಯರು ಫಿದಾ ಆಗಿದ್ದಾರೆ. ಯೂನಿಕಾರ್ನ್ ತರಹ ಈ ನಾಯಿ ಮರಿಗೆ ಪಪ್ಪಿಕಾರ್ನ್ ಎಂದು ಪ್ರೀತಿಯಿಂದ ಕರೆದಿದ್ದಾರೆ.

  • ಹಿಮಪಾತದ ಮಧ್ಯೆ ಕರ್ತವ್ಯ ಸಲ್ಲಿಸುತ್ತಿರುವ ಯೋಧನಿಗೊಂದು ಸಲಾಂ

    ಹಿಮಪಾತದ ಮಧ್ಯೆ ಕರ್ತವ್ಯ ಸಲ್ಲಿಸುತ್ತಿರುವ ಯೋಧನಿಗೊಂದು ಸಲಾಂ

    ಶ್ರೀನಗರ: ಸದ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರೀ ಹಿಮಪಾತವಾಗುತ್ತಿದೆ. ಈ ನಡುವೆ ಸಿಆರ್‌ಪಿಎಫ್ ಯೋಧರೊಬ್ಬರು ಕರ್ತವ್ಯ ಸಲ್ಲಿಸುತ್ತಿರುವ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗಿದೆ. ಈ ಫೋಟೋ ನೋಡಿದವರು ಆ ಚಳಿಯಲ್ಲೂ ಎದೆಗುಂದದೆ ಕರ್ತವ್ಯ ಸಲ್ಲಿಸುತ್ತಿರುವ ಯೋಧನಿಗೆ ಸಲಾಂ ಎಂದಿದ್ದಾರೆ.

    ಸಿಆರ್‌ಪಿಎಫ್ ಸಹಾಯಕ ಕಮಾಂಡೆಂಟ್ ಕಶ್ಯಪ್ ಕಡಗತ್ತೂರ್ ಅವರು ಈ ಫೋಟೋವನ್ನು ಟ್ವಿಟ್ಟರ್ ನಲ್ಲಿ ಶೇರ್ ಮಾಡಿದ್ದರು. ಫೋಟೋದಲ್ಲಿ ಸಿಆರ್‌ಪಿಎಫ್ ಕಾನ್‍ಸ್ಟೇಬಲ್ ಐಜಾಝ್ ಅವರು ತಮ್ಮ ಸೇನೆಯ ಸಮವಸ್ತ್ರದ ಮೇಲೆ ಹಳದಿ ಬಣ್ಣ ಕೋಟ್ ಹಾಕಿ ನಿಂತಿದ್ದಾರೆ. ಅವರ ಸುತ್ತ ಭಾರೀ ಪ್ರಮಾಣದಲ್ಲಿ ಹಿಮ ಬಿದ್ದಿರುವುದನ್ನು ಕೂಡ ಫೋಟೋದಲ್ಲಿ ಕಾಣಬಹುದಾಗಿದೆ.

    ಇವರು ಬ್ಯಾಟ್‍ಮ್ಯಾನ್ ಅಲ್ಲ. ಕೇಂದ್ರಾಡಳಿತ ಪ್ರದೇಶ ಜಮ್ಮು ಮತ್ತು ಕಾಶ್ಮೀರದಲ್ಲಿ ಸೇವೆ ಸಲ್ಲಿಸುತ್ತಿರುವ ಸಿಆರ್‌ಪಿಎಫ್ ಕಾನ್‍ಸ್ಟೇಬಲ್ ಐಜಾಝ್. ಭಾರೀ ಪ್ರಮಾಣದಲ್ಲಿ ಹಿಮಪಾತವಾಗುತ್ತಿದ್ದರೂ ಧೈರ್ಯದಿಂದ ಕರ್ತವ್ಯ ಸಲ್ಲಿಸುತ್ತಿರುವ ಯೋಧ. ವೃತ್ತಿಪರತೆಗೆ ಮತ್ತೊಂದು ಹೆಸರೇ ಸಿಆರ್‌ಪಿಎಫ್ ಎಂದು ಬರೆದು ಹೆಮ್ಮೆಯಿಂದ ಯೋಧನ ಫೋಟೋವನ್ನು ಕಶ್ಯಪ್ ಕಡಗತ್ತೂರ್ ಶೇರ್ ಮಾಡಿಕೊಂಡಿದ್ದಾರೆ.

    ಈ ಫೋಟೋ ಸದ್ಯ ಎಲ್ಲೆಡೆ ಸಖತ್ ವೈರಲ್ ಆಗಿದ್ದು, ನೆಟ್ಟಿಗರು ಯೋಧನ ಕಾರ್ಯಕ್ಕೆ ಸಲಾಂ ಎಂದಿದ್ದಾರೆ. ಕೆಲವರು ಬ್ಯಾಟ್‍ಮ್ಯಾನ್ ಇದ್ದಾನೋ ಇಲ್ಲವೋ ಗೊತ್ತಿಲ್ಲ. ಆದರೆ ನಮಗೆ ನಮ್ಮ ಯೋಧರೆ ಸೂಪರ್‍ಹೀರೋ. ಕಷ್ಟಕರ ಪ್ರದೇಶದಲ್ಲಿ ಶಿಸ್ತಿನಿಂದ ನಮ್ಮ ಸಿಆರ್‌ಪಿಎಫ್ ಯೋಧರು ಕರ್ತವ್ಯ ಸಲ್ಲಿಸುತ್ತಿದ್ದಾರೆ. ಅವರಿಗೊಂದು ಸಲಾಂ ಎಂದು ಟ್ವೀಟ್ ಮಾಡಿ ಯೋಧರಿಗೆ ಗೌರವ ಸಲ್ಲಿಸಿದ್ದಾರೆ.

  • ಯುವತಿ ಆಸೆ ಪೂರೈಸಲು ಹೋಗಿ ಪೈಲಟ್ ಅಮಾನತು

    ಯುವತಿ ಆಸೆ ಪೂರೈಸಲು ಹೋಗಿ ಪೈಲಟ್ ಅಮಾನತು

    ಬೀಜಿಂಗ್: ಯುವತಿಯೊಬ್ಬಳ ಆಸೆ ಪೂರೈಸಲು ಹೋಗಿ ಪೈಲಟ್ ಓರ್ವ ಅಮಾನತುಗೊಂಡ ಘಟನೆ ಚೀನಾದಲ್ಲಿ ನಡೆದಿದೆ. ಯುವತಿ ಆಸೆಯಿಂದ ಈಗ ಪೈಲಟ್ ಕೆಲಸ ಕಳೆದುಕೊಂಡಿದ್ದಾನೆ.

    ಆಸೆ ಎಲ್ಲರಿಗೂ ಇದ್ದೇ ಇರುತ್ತೆ. ಆದರೆ ಬೇರೆಯವರ ಆಸೆ ಪೂರೈಸಲು ಹೋಗಿ ಸಾಕಷ್ಟು ಮಂದಿ ತಮ್ಮ ಬದುಕನ್ನು ಹಾಳು ಮಾಡಿಕೊಂಡ ಪ್ರಕರಣ ಕೂಡ ಇದೆ. ಹೀಗೆ ಚೈನಿಸ್ ಪೈಲಟ್ ಓರ್ವ ವಿಮಾನದಲ್ಲಿ ಪ್ರಯಾಣಿಸುತ್ತಿದ್ದ ಯುವತಿಯೊಬ್ಬಳ ಆಸೆ ತೀರಿಸಲು ಹೋಗಿ ತನ್ನ ಕೆಲಸ ಕಳೆದುಕೊಂಡಿದ್ದಾನೆ. ಯುವತಿಯೊಬ್ಬಳು ನನಗೆ ಪೈಲಟ್ ಸೀಟ್‌ನಲ್ಲಿ ಕುಳಿತುಕೊಳ್ಳಬೇಕೆಂಬ ಆಸೆ ಇದೆ. ದಯವಿಟ್ಟು ಒಮ್ಮೆ ಅವಕಾಶ ಮಾಡಿಕೊಡಿ ಎಂದು ಪೈಲಟ್ ಬಳಿ ಕೇಳಿಕೊಂಡಿದ್ದಳು. ಯುವತಿ ಮನವಿಗೆ ಪೈಲಟ್ ಮನಸೋತು ಆಕೆಗೆ ವಿಮಾನದ ಕಾಕ್‌ಪಿಟ್‌ನಲ್ಲಿ ಬರಲು ಅವಕಾಶ ಕೊಟ್ಟಿದ್ದಲ್ಲದೆ, ಅಲ್ಲಿ ಪೈಲಟ್ ಸೀಟ್‌ನಲ್ಲಿ ಆಕೆ ಕುಳಿತ ಫೋಟೋವನ್ನು ಕ್ಲಿಕ್ಕಿಸಿದ್ದ.

    ಅಷ್ಟೇ ಅಲ್ಲದೆ ಪೈಲಟ್ ಸೀಟಿನಲ್ಲಿ ಕುಳಿತ ಫೋಟೋವನ್ನು ಯುವತಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಳು. ನನಗೆ ಈ ಅದ್ಭುತ ಅವಕಾಶ ಒದಗಿಸಿಕೊಟ್ಟ ಕ್ಯಾಪ್ಟನ್‌ಗೆ ಧನ್ಯವಾದಗಳು ಎಂದು ಕ್ಯಾಪ್ಷನ್ ಕೂಡ ಬರೆದಿದ್ದಳು. ಈ ಪೋಸ್ಟ್ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು.

    ಫೋಟೋ ವೈರಲ್ ಆಗುತ್ತಿದ್ದಂತೆ ಚೀನಾದ ನಾಗರಿಕ ವಿಮಾನಯಾನ ಆಡಳಿತ ಮಂಡಳಿ ಗಮನಕ್ಕೆ ಈ ವಿಚಾರ ತಿಳಿದಿದೆ. ಕಾಕ್‌ಪಿಟ್‌ನಲ್ಲಿ ಪ್ರಯಾಣಿಕರಿಗೆ ಪ್ರವೇಶವಿಲ್ಲದಿದ್ದರೂ ಪೈಲಟ್ ಅವಕಾಶ ಕೊಟ್ಟಿದ್ದಾರೆ. ಇದರಿಂದ ವಿಮಾನದ ಪ್ರಯಾಣಿಕರ ಸುರಕ್ಷತೆ, ವಿಮಾನ ಸಂಸ್ಥೆಯ ಮೇಲಿನ ನಂಬಿಕೆ ಹಾಳಾಗುತ್ತದೆ ಎಂದು ಕೋಪಗೊಂಡ ಅಧಿಕಾರಿಗಳು ಆ ಪೈಲಟ್‌ನನ್ನೇ ಅನಿರ್ದಿಷ್ಟಾವಧಿಗೆ ಅಮಾನತುಗೊಳಿಸಿದ್ದಾರೆ.

    ಚೀನಾದ ನಾಗರಿಕ ವಿಮಾನಯಾನ ಆಡಳಿತ ಮಂಡಳಿ ನಿಯಮದ ಪ್ರಕಾರ, ಪ್ರಯಾಣಿಕರು ಕಾಕ್‌ಪಿಟ್‌ನೊಳಗೆ ಪ್ರವೇಶ ಮಾಡುವಂತಿಲ್ಲ. ವಿಶೇಷ ಅನುಮತಿ ಇದ್ದರೆ ಅಥವಾ ತುರ್ತು ಪರಿಸ್ಥಿತಿಯಲ್ಲಿ ಮಾತ್ರ ಪ್ರಯಾಣಿಕರಿಗೆ ಒಳಗೆ ಪ್ರವೇಶಿಸಲು ಅವಕಾಶ ನೀಡಲಾಗುತ್ತದೆ. ಆದರೆ, ನಿಯಮ ಉಲ್ಲಂಘಿಸಿ ಯುವತಿಯನ್ನು ಒಳಗೆ ಬಿಟ್ಟಿದ್ದಲ್ಲದೆ, ಪೈಲಟ್ ಸೀಟಿನಲ್ಲಿ ಕುಳಿತು ಫೋಟೋ ತೆಗಿಸಿಕೊಳ್ಳಲು ಅವಕಾಶ ನೀಡಿದ್ದು ತಪ್ಪು. ಹೀಗಾಗಿ ತಪ್ಪು ಮಾಡಿದ ಪೈಲಟ್ ಜೊತೆಗೆ ಆತನಿಗೆ ಸಹಕರಿಸಿದ ಇತರೆ ಸಿಬ್ಬಂದಿಯನ್ನೂ ಅಧಿಕಾರಿಗಳು ಅಮಾನತು ಮಾಡಿದ್ದಾರೆ ಎನ್ನಲಾಗಿದೆ.

  • ತಲೆ ಕೆಳಗಾಗಿ ಯೋಗ ಮಾಡಲು ಹೋಗಿ 80 ಅಡಿ ಎತ್ತರದಿಂದ ಬಿದ್ದ ಯುವತಿ

    ತಲೆ ಕೆಳಗಾಗಿ ಯೋಗ ಮಾಡಲು ಹೋಗಿ 80 ಅಡಿ ಎತ್ತರದಿಂದ ಬಿದ್ದ ಯುವತಿ

    – 110 ಮೂಳೆ ಮುರಿತ, ಯುವತಿ ಸ್ಥಿತಿ ಗಂಭೀರ

    ಮೆಕ್ಸಿಕೋ: ಯುವತಿಯೊಬ್ಬಳು ಬಾಲ್ಕನಿಯಲ್ಲಿ ತಲೆ ಕೆಳಗಾಗಿ ಯೋಗ ಮಾಡಲು ಹೋಗಿ, ಆಯತಪ್ಪಿ 80 ಅಡಿ ಮೇಲಿಂದ ಕೆಳಗೆ ಬಿದ್ದು, 110 ಮೂಳೆಗಳನ್ನು ಮುರಿದುಕೊಂಡಿರುವ ಘಟನೆ ಮೆಕ್ಸಿಕೋದಲ್ಲಿ ನಡೆದಿದೆ.

    ಅಲೆಕ್ಸಾ ಟೆರಾಜಾ(23) ತಲೆ ಕೆಳಗಾಗಿ ಯೋಗ ಮಾಡಲು ಹೋಗಿ ಆಸ್ಪತ್ರೆ ಸೇರಿದ್ದಾಳೆ. ಅಲೆಕ್ಸಾ ಅಪಾರ್ಟ್‌ಮೆಂಟ್‌ನ ಆರನೇ ಮಹಡಿಯಲ್ಲಿರುವ ತನ್ನ ಮನೆಯ ಬಾಲ್ಕನಿಯ ಕಂಬಿಯ ಮೇಲೆ ತಲೆ ಕೆಳಗೆ ಮಾಡಿ, ಕಾಲಿನಿಂದ ಕಂಬಿ ಹಿಡಿದು ಸಾಹಸ ಮಾಡುತ್ತಾ ಯೋಗ ಮಾಡಲು ಹೋಗಿದ್ದಾಳೆ. ಆದರೆ ಈ ವೇಳೆ ಆಯತಪ್ಪಿ ಅಲೆಕ್ಸಾ ಬಾಲ್ಕನಿಯಿಂದ 80 ಅಡಿ ಕೆಳಗೆ ಬಿದ್ದಿದ್ದಾಳೆ. ಪರಿಣಾಮ ಆಕೆಯ ದೇಹದ 110 ಮೂಳೆಗಳು ಮುರಿದಿದೆ, ಜೊತೆಗೆ ತಲೆಗೆ ಕೂಡ ಗಂಭಿರವಾಗಿ ಪೆಟ್ಟಾಗಿದೆ.

    ಈ ಅಪಾಯಕಾರಿ ಸಾಹಸವನ್ನು ಅಲೆಕ್ಸಾ ಮಾಡುತ್ತಿರುವ ಫೋಟೋವನ್ನು ಆಕೆಯ ಸ್ನೇಹಿತ ಕ್ಲಿಕ್ಕಿಸಿದ್ದು, ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ಇದು ವೈರಲ್ ಆಗಿದೆ.

    ಯುವತಿ ಕೆಳಗೆ ಬಿದ್ದ ತಕ್ಷಣ ಆಕೆಯನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಯುವತಿ ತೀವ್ರ ಗಾಯಗೊಂಡ ಕಾರಣಕ್ಕೆ ವೈದ್ಯರು ಆಕೆಯ ಶಸ್ತ್ರಚಿಕಿತ್ಸೆ ಕೂಡ ಮಾಡಿದ್ದಾರೆ. ಬಹಳ ಎತ್ತರದಿಂದ ಬಿದ್ದ ಪರಿಣಾಮ ಆಕೆಯ ಮಂಡಿ ಮತ್ತು ಪಾದದ ಕೀಲುಗಳಿಗೆ ಹಾನಿಯಾಗಿತ್ತು. ಆದ್ದರಿಂದ ಅವುಗಳನ್ನು ಶಸ್ತ್ರಚಿಕಿತ್ಸೆ ಮೂಲಕ ಮರುಜೋಡಣೆ ಮಾಡಲಾಗಿದೆ. ಹೀಗಾಗಿ ಆಕೆ ಮೂರು ವರ್ಷ ನಡೆದಾಡಲಾಗುವುದಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ. ಯುವತಿಗೆ ಶಸ್ತ್ರಚಿಕಿತ್ಸೆ ಮಾಡಲು ವೈದ್ಯರು ಬರೋಬ್ಬರಿ 11 ಗಂಟೆ ಸಮಯ ತೆಗೆದುಕೊಂಡಿದ್ದಾರೆ.

    ಯುವತಿ ಕೆಳಗೆ ಬಿದ್ದಾಗ ಹೆಚ್ಚಿನ ಪ್ರಮಾಣದಲ್ಲಿ ರಕ್ತಸ್ರಾವವಾಗಿದೆ. ಹೀಗಾಗಿ ಆಕೆಗೆ ರಕ್ತದ ಅವಶ್ಯಕತೆ ಇದೆ. ಆದ್ದರಿಂದ ಅಲೆಕ್ಸಾ ಕುಟುಂಬಸ್ಥರು ರಕ್ತದಾನಿಗಳಿಗಾಗಿ ಸಾಮಾಜಿಕ ಜಾಲತಾಣದಲ್ಲಿ ಮನವಿ ಮಾಡಿದ್ದರು. ಈ ಮನವಿಗೆ ಸ್ಪಂದಿಸಿದ ನೂರು ಮಂದಿ ರಕ್ತದಾನ ಮಾಡಲು ಮುಂದೆ ಬಂದಿದ್ದಾರೆ. ಸದ್ಯ ಯುವತಿ ಸ್ಥಿತಿ ಗಂಭೀರವಾಗಿದ್ದು, ವೈದ್ಯರು ಚಿಕಿತ್ಸೆ ಮುಂದುವರಿಸಿದ್ದಾರೆ.

  • ಕೆರೆಯಲ್ಲಿ ಪತ್ತೆಯಾಯ್ತು 2 ಬಾಯಿಯ ಅಪರೂಪದ ಮೀನು

    ಕೆರೆಯಲ್ಲಿ ಪತ್ತೆಯಾಯ್ತು 2 ಬಾಯಿಯ ಅಪರೂಪದ ಮೀನು

    ನ್ಯೂಯಾರ್ಕ್: ಎರಡು ಬಾಯಿಗಳಿರುವ ಮೀನೊಂದು ಅಮೆರಿಕದ ಪ್ಲಾಟ್ಸ್‌ಬರ್ಗ್‌‌ನ ಚಾಂಪ್ಲೇನ್ ಕೆರೆಯಲ್ಲಿ ಕಂಡುಬಂದಿದ್ದು, ಈ ಅಪರೂಪದ ಮೀನಿನ ಫೋಟೊ ಈಗ ಸಾಮಾಜಿಕ ಜಾಲತಾಣಗಳಲ್ಲಿ ಸದ್ದು ಮಾಡುತ್ತಿದೆ.

    ನ್ಯೂಯಾರ್ಕ್ ನಿವಾಸಿ ಡೆಬ್ಬಿ ಗೆಡ್ಡೆಸ್ ಅವರಿಗೆ ಈ ಅಪರೂಪದ ಮೀನು ಸಿಕ್ಕಿತ್ತು. ಕೆಲ ದಿನಗಳ ಹಿಂದೆ ಡೆಬ್ಬಿ ಅವರು ತಮ್ಮ ಪತಿಯೊಂದಿಗೆ ಚಾಂಪ್ಲೇನ್ ಕೆರೆಯಲ್ಲಿ ಮೀನು ಹಿಡಿಯಲು ತೆರಳಿದ್ದರು. ಈ ಸಂದರ್ಭ ಅವರಿಗೆ ಎರಡು ಬಾಯಿ ಇರುವ ವಿಶಿಷ್ಟ ಮೀನು ಸಿಕ್ಕಿತ್ತು. ಅದನ್ನು ನೋಡಿ ಅಚ್ಚರಿಗೊಂಡ ಅವರು ಕೆಲವೇ ಕ್ಷಣಗಳಲ್ಲಿ, ಅದರ ಫೋಟೋಗಳನ್ನು ಸೆರೆ ಹಿಡಿದು ವಾಪಸ್ ನೀರಿಗೆ ಬಿಟ್ಟುಬಿಟ್ಟಿದ್ದಾರೆ.

    https://www.facebook.com/knottyboysfishing/posts/2433491303383951

    ಈ ಫೋಟೋವನ್ನು ಡೆಬ್ಬಿ ಅವರ ಸಹೋದ್ಯೋಗಿಯೊಬ್ಬರು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದರು. ಈ ಫೋಟೋ ಸದ್ಯ ಎಲ್ಲೆಡೆ ವೈರಲ್ ಆಗಿದೆ. ಅಲ್ಲದೆ ಈ ಮೀನನ್ನು ಕಂಡ ನೆಟ್ಟಿಗರು ಅಚ್ಚರಿಪಟ್ಟಿದ್ದಾರೆ. ಜೊತೆಗೆ ಕೆಲವರು ಕಮೆಂಟ್ ಮಾಡಿ ಜಲಚರಗಳ ಬಗ್ಗೆ ಕಳಕಳಿ ವ್ಯಕ್ತಪಡಿಸಿದ್ದಾರೆ.

    ಮಾನವ ತನ್ನ ಸ್ವಾರ್ಥಕ್ಕಾಗಿ ಪರಿಸರವನ್ನು ನಾಶ ಮಾಡುತ್ತಿದ್ದಾನೆ. ಸಮುದ್ರ, ನದಿ, ಕೆರೆಯೊಳಗೆ ವಿಪರೀತ ತ್ಯಾಜ್ಯ ಹಾಕುತ್ತಿರುವ ಕಾರಣ ಅಲ್ಲಿನ ಜಲಚರಗಳ ಹುಟ್ಟಿನಲ್ಲಿ ಈ ರೀತಿಯ ದೋಷಗಳು ಕಾಣಸಿಗುತ್ತಿವೆ ಎಂದು ಅನೇಕರು ಕಮೆಂಟ್‍ಗಳ ಮೂಲಕ ಕಳಕಳಿ ವ್ಯಕ್ತಪಡಿಸಿದ್ದಾರೆ. ಕೆಲವರು ಈ ಮೀನನ್ನು ನೋಡಿ ಖುಷಿಯಾಯ್ತು ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.