Tag: PIL

  • ಬಂದ್ ನಿರ್ಬಂಧಿಸಿ, ವಾಟಾಳ್ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಪಿಐಎಲ್ ಸಲ್ಲಿಕೆ

    ಬಂದ್ ನಿರ್ಬಂಧಿಸಿ, ವಾಟಾಳ್ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಪಿಐಎಲ್ ಸಲ್ಲಿಕೆ

    ಬೆಂಗಳೂರು: ಮಹದಾಯಿಗಾಗಿ ಕರ್ನಾಟಕ ಬಂದ್ ಕರೆ ನೀಡಿದ ವಾಟಾಳ್ ನಾಗರಾಜ್ ವಿರುದ್ಧ ಕ್ರಮಕೈಗೊಳ್ಳುವಂತೆ ಸರ್ಕಾರಕ್ಕೆ ನಿರ್ದೇಶನ ನೀಡಬೇಕು ಎಂದು ಹೈಕೋರ್ಟ್‍ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ(ಪಿಐಎಲ್) ಸಲ್ಲಿಕೆಯಾಗಿದೆ.

    ರಾಜಾಜಿನಗರ ಶ್ರದ್ಧಾ ಪೋಷಕರ ಸಂಘ ಪಿಐಎಲ್ ಸಲ್ಲಿಸಿದ್ದು, ಮಹದಾಯಿಗಾಗಿ 10 ದಿನಗಳ ಅಂತರದಲ್ಲಿ 2 ದಿನ ಬಂದ್ ಕರೆ ನೀಡಲಾಗಿದೆ ಇದರಿಂದ ಜನರ ಮೂಲಭೂತ ಹಕ್ಕಿಗೆ ದಕ್ಕೆ ಉಂಟಾಗಲಿದೆ ಎಂದು ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ.

    ಬಂದ್ ನಡೆಸುವುದು ಅಸಂವಿಧಾನಿಕ, ಕಾನೂನು ಬಾಹಿರ ಎಂದು ಘೋಷಿಸಬೇಕು. ಬಂದ್‍ನಿಂದ ಉಂಟಾಗಿರುವ ನಷ್ಟವನ್ನು ವಾಟಾಳ್ ನಾಗರಾಜ್ ಅವರು ಸರ್ಕಾರಕ್ಕೆ ಪಾವತಿಸುವಂತೆ ಆದೇಶಿಸಬೇಕು ಹಾಗೂ ಪದೇ ಪದೇ ಬಂದ್ ಕರೆ ನೀಡುತ್ತಿರುವ ವಾಟಾಳ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಸರ್ಕಾರಕ್ಕೆ ನಿರ್ದೇಶನ ನೀಡಬೇಕೆಂದು ಸಂಘ ಅರ್ಜಿಯಲ್ಲಿ ಮನವಿ ಮಾಡಿಕೊಂಡಿದೆ.

  • ಹಿಂದೂಗಳಿಗೆ ಅಲ್ಪಸಂಖ್ಯಾತರ ಸ್ಥಾನಮಾನ ಪಿಐಎಲ್ ತಿರಸ್ಕರಿಸಿದ ಸುಪ್ರೀಂ

    ಹಿಂದೂಗಳಿಗೆ ಅಲ್ಪಸಂಖ್ಯಾತರ ಸ್ಥಾನಮಾನ ಪಿಐಎಲ್ ತಿರಸ್ಕರಿಸಿದ ಸುಪ್ರೀಂ

    ನವದೆಹಲಿ: ದೇಶದ 8 ರಾಜ್ಯಗಳಲ್ಲಿ ಹಿಂದೂಗಳಿಗೆ ಅಲ್ಪಸಂಖ್ಯಾತರ ಸ್ಥಾನಮಾನ ನೀಡಬೇಕೆಂದು ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ(ಪಿಐಎಲ್) ಯನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿದ್ದು, ಈ ಕುರಿತು ಅಲ್ಪಸಂಖ್ಯಾತ ಆಯೋಗದ ಮೊರೆ ಹೋಗುವಂತೆ ಸೂಚಿಸಿದೆ.

    ಬಿಜೆಪಿ ಮುಖಂಡ ಹಾಗೂ ವಕೀಲರಾದ ಅಶ್ವಿನಿ ಕುಮಾರ್ ಉಪಾಧ್ಯಾಯ್ ಅವರು ಸಲ್ಲಿಸಿದ ಪಿಐಎಲ್ ವಿಚಾರಣೆ ನಡೆಸಿದ ನ್ಯಾಯಮೂರ್ತಿ ರಂಜನ್ ಗೊಗೊಯ್ ಪೀಠವು ಈ ವಿಚಾರವನ್ನು ಅಲ್ಪಸಂಖ್ಯಾತ ಆಯೋಗವೇ ತೀರ್ಮಾನ ಮಾಡಬೇಕು ಎಂದು ಅಭಿಪ್ರಾಯ ಪಟ್ಟಿದೆ.

    ವಕೀಲ ಉಪಾಧ್ಯಾಯ್ ಅವರು ತಮ್ಮ ಅರ್ಜಿಯಲ್ಲಿ ಹಿಂದೂ ಅಲ್ಪಸಂಖ್ಯಾತರಿಗೆ ಸಲ್ಲಬೇಕಾದ ಹಕ್ಕುಗಳು ಅವರಿಗೆ ದೊರೆಯುತ್ತಿಲ್ಲ. ಕೇಂದ್ರ ಅಥವಾ ರಾಜ್ಯಗಳು ಹಿಂದೂಗಳನ್ನು ಅಲ್ಪಸಂಖ್ಯಾತರ ಅಡಿಯಲ್ಲಿ ಗುರುತಿಸಲ್ಲ ಎಂದು ಉಲ್ಲೇಖಿಸಿದ್ದರು.

    ಅಲ್ಲದೇ ಜಮ್ಮು ಕಾಶ್ಮೀರ, ಪಂಜಾಬ್, ಲಕ್ಷದ್ವೀಪ, ಮಿಜೊರಾಂ, ನಾಗಾಲ್ಯಾಂಡ್, ಮೇಘಾಲಯ, ಅರುಣಾಚಲ ಪ್ರದೇಶ, ಮಣಿಪುರ ರಾಜ್ಯಗಳಲ್ಲಿರುವ ಹಿಂದೂಗಳನ್ನು ಅಲ್ಪಸಂಖ್ಯಾತರನ್ನಾಗಿ ಗುರುತಿಸಿ ಸರ್ಕಾರಿ ಸೌಲಭ್ಯಗಳನ್ನು ನೀಡಬೇಕು ಎಂದು ಅರ್ಜಿಯಲ್ಲಿ ಮನವಿ ಸಲ್ಲಿಸಿದ್ದರು.

    ತಮ್ಮ ಅರ್ಜಿಗೆ ಪೂರಕವಾಗಿ, ಕೇಂದ್ರ ಸರ್ಕಾರ ಟೆಕ್ನಿಕಲ್ ಶಿಕ್ಷಣ ಓದುತ್ತಿರುವ 20 ಸಾವಿರ ಮಂದಿಗೆ ವಿದ್ಯಾರ್ಥಿ ವೇತನ ನೀಡಿದೆ. ಜಮ್ಮು ಕಾಶ್ಮೀರದಲ್ಲಿ ಮುಸ್ಲಿಮರ ಜನಸಂಖ್ಯೆ ಶೇ.68.30 ಇದ್ದರೂ ವಿತರಣೆಯಾದ 753 ಮಂದಿಯಲ್ಲಿ 717 ಮಂದಿ ಮುಸ್ಲಿಮ್ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಸಿಕ್ಕಿದೆ. ನಿಜವಾಗಿಯೂ ಇಲ್ಲಿ ಹಿಂದೂಗಳು ಅಲ್ಪಸಂಖ್ಯಾತರಾಗಿದ್ದರೂ ಅವರಿಗೆ ವಿದ್ಯಾರ್ಥಿ ವೇತನ ಸಿಗದೇ ಅನ್ಯಾಯವಾಗಿದೆ ಎನ್ನುವ ವಿಚಾರವನ್ನು ಉಲ್ಲೇಖಿಸಿದ್ದರು.

    ಮುಸ್ಲಿಂ, ಕೈಸ್ತ, ಸಿಖ್, ಬೌದ್ಧ ಧರ್ಮ, ಪಾರ್ಸಿ, ಧರ್ಮದ ಸಮುದಾಯಗಳನ್ನು 1993 ರಲ್ಲಿ ಕೇಂದ್ರ ಸರ್ಕಾರ ನೋಟಿಫಿಕೇಶನ್ ಹೊರಡಿಸಿ ಅಲ್ಪಸಂಖ್ಯಾತರ ಮಾನ್ಯತೆ ನೀಡಿತ್ತು. 2014ರಲ್ಲಿ ಈ ಪಟ್ಟಿಗೆ ಜೈನ ಧರ್ಮವನ್ನು ಸೇರಿಸಿತ್ತು.

    ಆದರೆ ಹಿಂದೂಗಳಿಗೆ ಯಾವುದೇ ಅಲ್ಪ ಸಂಖ್ಯಾತ ಸ್ಥಾನಮಾನ ನೀಡಿಲ್ಲ. ನಿಜವಾಗಿಯೂ ಬಹುಸಂಖ್ಯಾತರು ಎಂದು ಗುರುತಿಸಿಕೊಂಡ ಹಿಂದೂಗಳು ಅಲ್ಪಸಂಖ್ಯಾತರಾಗಿದ್ದು, ಇದರಿಂದಾಗಿ ಸರ್ಕಾರಿ ಲಾಭಗಳು ತಲುಪಬೇಕಾದ ಜನರಿಗೆ ತಲುಪುತ್ತಿಲ್ಲ. ಹೀಗಾಗಿ ಈ 8 ರಾಜ್ಯಗಳಲ್ಲಿ ಹಿಂದೂಗಳಿಗೆ ಅಲ್ಪಸಂಖ್ಯಾತರ ಸ್ಥಾನಮಾನ ನೀಡಿ ಎಂದು ಅರ್ಜಿಯಲ್ಲಿ ಮನವಿ ಮಾಡಲಾಗಿತ್ತು.

    2011ರ ಜನಗಣತಿಯ ಪ್ರಕಾರ ಲಕ್ಷದ್ವೀಪದಲ್ಲಿ ಶೇ.2.5, ಮಿಜೊರಾಂ ಶೇ.2.75, ನಾಗಾಲ್ಯಾಂಡ್ ಶೇ.8.75, ಮೇಘಾಲಯ ಶೇ.11.53, ಜಮ್ಮು ಕಾಶ್ಮೀರ ಶೇ. 28.44, ಅರುಣಾಚಲ ಪ್ರದೇಶ ಶೇ.29, ಮಣಿಪುರ ಶೇ. 31.39 ಮತ್ತು ಪಂಜಾಬ್‍ನಲ್ಲಿ ಶೇ.38.40 ರಷ್ಟು ಹಿಂದೂಗಳು ವಾಸಿಸುತ್ತಿದ್ದಾರೆ. ಲಕ್ಷದ್ವೀಪ ಶೇ.96.20, ಜಮ್ಮು ಕಾಶ್ಮೀರ ಶೇ.68.30, ಅಸ್ಸಾಂ ಶೇ.34.20, ಪಶ್ಚಿಮ ಬಂಗಾಳ ಶೇ.27.5, ಕೇರಳ ಶೇ.26.20 ಉತ್ತರ ಪ್ರದೇಶ ಶೇ.19.30, ಬಿಹಾರದಲ್ಲಿ ಶೇ.18 ರಷ್ಟು ಮುಸ್ಲಿಮರು ನೆಲೆಸಿದ್ದಾರೆ.

  • ಕರ್ನಾಟಕದಲ್ಲಿ ಪಟಾಕಿ ನಿಷೇಧಿಸುವಂತೆ ಪಿಐಎಲ್ ಹಾಕಲಿದೆ ಹಿಂದೂ ಜನಜಾಗೃತಿ ಸಮಿತಿ

    ಕರ್ನಾಟಕದಲ್ಲಿ ಪಟಾಕಿ ನಿಷೇಧಿಸುವಂತೆ ಪಿಐಎಲ್ ಹಾಕಲಿದೆ ಹಿಂದೂ ಜನಜಾಗೃತಿ ಸಮಿತಿ

    ಬೆಂಗಳೂರು: ಕರ್ನಾಟಕದಲ್ಲಿ ಪಟಾಕಿಯನ್ನು ನಿಷೇಧಿಸುವಂತೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ(ಪಿಐಎಲ್) ಹಾಕುವುದಕ್ಕೆ ಹಿಂದೂ ಜನಜಾಗೃತಿ ಸಮಿತಿ ಹಾಗೂ ಸನಾತನ ಸಂಸ್ಥೆ ಮುಂದಾಗಿದೆ.

    ಹಿಂದೂ ಧರ್ಮದಲ್ಲಿ ದೀಪಾವಳಿಗೆ ಪಟಾಕಿ ಹೊಡೆಯಬೇಕು ಎಂದು ಎಲ್ಲೂ ಉಲ್ಲೇಖವಾಗಿಲ್ಲ, ಪಟಾಕಿಯಲ್ಲಿ ದೇವರ ಚಿತ್ರಗಳು ಇರುತ್ತವೆ. ಅದಕ್ಕೆ ಬೆಂಕಿಯಿಟ್ಟರೆ ದೇವರಿಗೆ ಅವಮಾನ ಅಲ್ಲದೆ ಪಟಾಕಿಯಿಂದ ಪರಿಸರ ಮಾಲಿನ್ಯವಾಗುತ್ತದೆ. ಪಟಾಕಿ ಹೊಡೆಯುವುದು ರಾಷ್ಟ್ರದ್ರೋಹದ ಕೆಲಸ ಅದಕ್ಕಾಗಿ ಸರ್ಕಾರಕ್ಕೆ ಪಟಾಕಿ ನಿಷೇಧವಾಗಲೇ ಬೇಕು ಎಂದು ಒತ್ತಾಯಿಸಿ ಪಿಎಐಎಲ್ ಹಾಕಲು ಈ ಎರಡು ಸಂಘಟನೆಗಳು ಮುಂದಾಗಿವೆ.

    ದೀಪಾವಳಿ ಸಂದರ್ಭದಲ್ಲಿ ಮಾತ್ರವಲ್ಲದೇ, ಹಬ್ಬ ಜಾತ್ರೆ ಇನ್ನೂ ಯಾವುದೇ ಸಂದರ್ಭಗಳಲ್ಲಿ ಪಟಾಕಿ ಹೊಡೆಯುವುದು ನಿಷೇಧವಾಗಬೇಕು. ಹಾಗೆಯೇ ಶಬ್ಧ ಮಾಲಿನ್ಯವಾಗುವ ಮುಸ್ಲಿಂ ಅಜಾನ್ ನಿಷೇಧಮಾಡುವಂತೆ, ಸದ್ಯದಲ್ಲೇ ಕೋರ್ಟ್ ಮೆಟ್ಟಿಲೇರಲು ನಿರ್ಧಾರವನ್ನು ಮಾಡಲಿದ್ದೇವೆಂದು ಪಬ್ಲಿಕ್ ಟಿವಿಗೆ ಹಿಂದೂ ಜನಜಾಗೃತಿ ಸಂಸ್ಥೆಯ ಮೋಹನ್ ಗೌಡ ಹೇಳಿದ್ದಾರೆ.