Tag: Pilibhit

  • ಉತ್ತರ ಪ್ರದೇಶದ ಪಿಲಿಭಿತ್, ಚಿತ್ರಕೂಟ್‌ನಲ್ಲಿ ರಸ್ತೆ ಅಪಘಾತ – 10 ಸಾವು, 12 ಮಂದಿ ಸ್ಥಿತಿ ಗಂಭೀರ

    ಉತ್ತರ ಪ್ರದೇಶದ ಪಿಲಿಭಿತ್, ಚಿತ್ರಕೂಟ್‌ನಲ್ಲಿ ರಸ್ತೆ ಅಪಘಾತ – 10 ಸಾವು, 12 ಮಂದಿ ಸ್ಥಿತಿ ಗಂಭೀರ

    ಲಕ್ನೋ: ಉತ್ತರ ಪ್ರದೇಶದ (Uttar Pradesh) ಪಿಲಿಭಿತ್ (Pilibhit) ಹಾಗೂ ಚಿತ್ರಕೂಟ್ (Chitrakoot) ಜಿಲ್ಲೆಯಲ್ಲಿ 2 ಭೀಕರ ರಸ್ತೆ ಅಪಘಾತಗಳು ಸಂಭವಿಸಿದೆ. ಈ ಅಪಘಾತದಲ್ಲಿ 10 ಮಂದಿ ಸಾವನ್ನಪ್ಪಿದ್ದು, 12 ಜನ ಗಂಭೀರವಾಗಿ ಗಾಯಗೊಂಡಿದ್ದಾರೆ.

    ಪಿಲಿಭಿತ್ ಜಿಲ್ಲೆಯಲ್ಲಿ 11 ಜನರಿರುವ ಕಾರೊಂದು ಮರಕ್ಕೆ ಡಿಕ್ಕಿ ಹೊಡೆದಿದೆ. ಪರಿಣಾಮ 5 ಜನರು ಸಾವನ್ನಪ್ಪಿದ್ದಾರೆ. ಕಾರಿನಲ್ಲಿದ್ದವರನ್ನು ಉತ್ತರಾಖಂಡದ ಖತಿಮಾ ಮೂಲದವರು ಎಂದು ಗುರುತಿಸಲಾಗಿದೆ.ಇದನ್ನೂ ಓದಿ:

    ಮದುವೆಗೆಂದು ತೆರಳಿದ್ದವರು ಮರಳಿ ಮನೆಗೆ ಹೋಗುವಾಗ ಈ ಅವಘಡ ಸಂಭವಿಸಿದೆ. ಮಾರುತಿ ಕಾರಿನಲ್ಲಿ 11 ಮಂದಿ ಪ್ರಯಾಣಿಸಿದ್ದು, ಚಾಲಕನ ನಿಯಂತ್ರಣ ತಪ್ಪಿ ಕಾರು ರಸ್ತೆಯ ಬದಿಗಿದ್ದ ಮರಕ್ಕೆ ಡಿಕ್ಕಿಯಾಗಿದೆ.

    ಪೊಲೀಸ್ ವರಿಷ್ಠಾಧಿಕಾರಿ ಅವಿನಾಶ್ ಕುಮಾರ್ ಪಾಂಡೆ ಮಾತನಾಡಿ, ಕೂಡಲೇ ಅವರನ್ನು ಆಸ್ಪತ್ರೆಗೆ ರವಾನಿಸಲಾಗಿದ್ದು, ಮಾರ್ಗ ಮಧ್ಯೆ ಮೂವರು ಸಾವನ್ನಪ್ಪಿದ್ದಾರೆ. ಆಸ್ಪತ್ರೆಗೆ ದಾಖಲಾದ ಬಳಿಕ ಚಿಕಿತ್ಸೆ ಫಲಕಾರಿಯಾಗದೇ ಇಬ್ಬರು ಸಾವನ್ನಪ್ಪಿದ್ದಾರೆ. ಇನ್ನುಳಿದವರಿಗೆ ಚಿಕ್ಕಪುಟ್ಟ ಗಾಯಗಳಾಗಿವೆ ಎಂದು ತಿಳಿಸಿದ್ದಾರೆ.

    ಇನ್ನೂ ಚಿತ್ರಕೂಟ್ ಜಿಲ್ಲೆಯಲ್ಲಿ 11 ಜನರಿರುವ ಬುಲೆರೋ, ಟಕ್ರ‍್ಗೆ ಮುಖಾಮುಖಿ ಡಿಕ್ಕಿಯಾಗಿದ್ದು, ಐವರು ಸಾವನ್ನಪ್ಪಿದ್ದಾರೆ.

    ರಾಯಪುರ (Raipura) ಪೊಲೀಸ್ ಠಾಣೆಯ ಬಳಿ ಬೆಳಗ್ಗೆ 5:30ರ ಸುಮಾರಿಗೆ ಈ ಘಟನೆ ಸಂಭವಿಸಿದ್ದು, ಪ್ರಯಾಗ್ರಾಜ್‌ನಿಂದ ಬರುತ್ತಿದ್ದ ಬುಲೆರೋ ಹಾಗೂ ರಾಯಪುರದಿಂದ ಬರುತ್ತಿದ್ದ ಟ್ರಕ್ ಡಿಕ್ಕಿ ಹೊಡೆದಿದೆ. ಪರಿಣಾಮ ಸ್ಥಳದಲ್ಲಿಯೇ ಐದು ಜನ ಸಾವನ್ನಪ್ಪಿದ್ದು, ಇನ್ನುಳಿದವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ. ನಿದ್ದೆಯ ಮಂಪರಿನಲ್ಲಿ ಕಾರು ಚಲಾಯಿಸಿದ ಪರಿಣಾಮ ಈ ಅವಘಡ ಸಂಭವಿಸಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಅರುಣ್ ಕುಮಾರ್ ತಿಳಿಸಿದ್ದಾರೆ.ಇದನ್ನೂ ಓದಿ:

  • ಚುನಾವಣಾ ಕರ್ತವ್ಯದಿಂದ ಎಸ್ಕೇಪ್ ಆಗಲು ನಕಲಿ ಕೋವಿಡ್ ರಿಪೋರ್ಟ್ – ಶಿಕ್ಷಕಿ ವಿರುದ್ಧ ಎಫ್‌ಐಆರ್

    ಚುನಾವಣಾ ಕರ್ತವ್ಯದಿಂದ ಎಸ್ಕೇಪ್ ಆಗಲು ನಕಲಿ ಕೋವಿಡ್ ರಿಪೋರ್ಟ್ – ಶಿಕ್ಷಕಿ ವಿರುದ್ಧ ಎಫ್‌ಐಆರ್

    (ಸಾಂದರ್ಭಿಕ ಚಿತ್ರ)

    ಲಕ್ನೋ: ಮುನ್ಸಿಪಾಲ್ ಚುನಾವಣೆಯಲ್ಲಿ (Municipal Election) ಮತದಾನ ಕರ್ತವ್ಯದಿಂದ ವಿನಾಯಿತಿ ಪಡೆಯುವ ಸಲುವಾಗಿ ಪ್ರಾಥಮಿಕ ಶಾಲಾ ಶಿಕ್ಷಕಿಯೊಬ್ಬರು ನಕಲಿ ಕೋವಿಡ್-19 ಪಾಸಿಟಿವ್ ರಿಪೋರ್ಟ್ ನೀಡಿ ಸಿಕ್ಕಿಬಿದ್ದಿರುವ ಘಟನೆ ಉತ್ತರ ಪ್ರದೇಶದ (Uttar Pradesh) ಪಿಲಿಭಿತ್‌ನ (Pilibhit) ಪುರನ್‌ಪುರ ಪ್ರದೇಶದಲ್ಲಿ ನಡೆದಿದೆ.

    ಮೇ 11ರಂದು ನಡೆಯಲಿರುವ ಪುರಸಭಾ ಚುನಾವಣೆಗೆ ಆಯೋಜಿಸಿದ್ದ ಪಿಂಕ್ ಮತಗಟ್ಟೆಯ ಮತಗಟ್ಟೆ ಸಂಖ್ಯೆ 3ರಲ್ಲಿ ರಿತು ತೋಮರ್ ಅವರನ್ನು ಮತಗಟ್ಟೆಯ ಕರ್ತವ್ಯಕ್ಕೆ ನಿಯೋಜಿಸಲಾಗಿತ್ತು. ಇದರಿಂದ ತಪ್ಪಿಸಿಕೊಳ್ಳುವ ಸಲುವಾಗಿ ಶಿಕ್ಷಕಿ ಕೋವಿಡ್ ಪಾಸಿಟಿವ್ (Covid Positive) ಎಂಬ ನಕಲಿ ದಾಖಲೆಯನ್ನು ತೋರಿಸಿ, ಚುನಾವಣಾ ಕರ್ತವ್ಯದಿಂದ ವಿನಾಯಿತಿ ಕೋರಿ ಅರ್ಜಿ ಸಲ್ಲಿಸಿದ್ದರು. ಅಧಿಕಾರಿಗಳು ದಾಖಲೆಯನ್ನು ಪರಿಶೀಲಿಸಿದಾಗ ಅದು ಇನ್ನೊಬ್ಬ ವ್ಯಕ್ತಿಯ ದಾಖಲೆಗಳು ಎಂದು ತಿಳಿದುಬಂದಿದೆ. ಇದನ್ನೂ ಓದಿ: Karnataka Election 2023 | ಕರ್ನಾಟಕ ವಿಧಾನಸಭಾ ಚುನಾವಣೆಗೆ ಇಂದು ಮತದಾನ | Live Updates

    ನಕಲಿ ದಾಖಲೆ ನೀಡಿದ ಶಿಕ್ಷಕಿ ಚುನಾವಣಾ ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದಿದ್ದು, ಇವರ ವಿರುದ್ಧ ಎಫ್‌ಐಆರ್ (FIR) ದಾಖಲಿಸುವಂತೆ ಮೂಲ ಶಿಕ್ಷಾ ಅಧಿಕಾರಿ (BSA) ಅಮಿತ್ ಕುಮಾರ್ ಸಿಂಗ್ ಅವರಿಗೆ ಮಂಗಳವಾರ ಆದೇಶ ನೀಡಿದ್ದಾರೆ. ಇದನ್ನೂ ಓದಿ: 105ರ ಇಳಿವಯಸ್ಸಿನಲ್ಲೂ ಹುರುಪಿನಿಂದ ಮತ ಚಲಾಯಿಸಿದ ಶತಾಯುಷಿ

  • 9 ಜನರ ಮೇಲೆ ದಾಳಿ ಮಾಡಿದ್ದ ಹೆಣ್ಣು ಹುಲಿಯನ್ನು ಹೊಡೆದು ಕೊಂದ ಗ್ರಾಮಸ್ಥರು

    9 ಜನರ ಮೇಲೆ ದಾಳಿ ಮಾಡಿದ್ದ ಹೆಣ್ಣು ಹುಲಿಯನ್ನು ಹೊಡೆದು ಕೊಂದ ಗ್ರಾಮಸ್ಥರು

    ಲಕ್ನೋ: 9 ಜನರ ಮೇಲೆ ದಾಳಿ ಮಾಡಿ ಗಾಯಗೊಳಿಸಿದ್ದ ಹೆಣ್ಣು ಹುಲಿಯನ್ನು ಗ್ರಾಮಸ್ಥರು ಹೊಡೆದು ಕೊಂದ ಘಟನೆ ಉತ್ತರ ಪ್ರದೇಶ ಫಿಲಿಭಿತ್ ಜಿಲ್ಲೆಯಲ್ಲಿ ನಡೆದಿದೆ.

    ಹತ್ಯೆಯಾದ ಹೆಣ್ಣು ಹುಲಿ ಸುಮಾರು 5ರಿಂದ 6 ವರ್ಷದ್ದಾಗಿದೆ. ಈ ಹುಲಿ ಫಿಲಿಭಿತ್ ಜಿಲ್ಲೆಯ ಮಟೈನಾ ಗ್ರಾಮದಲ್ಲಿ ಕಳೆದ ಬುಧವಾರ 9 ಜನರ ಮೇಲೆ ದಾಳಿ ಮಾಡಿತ್ತು. ಪರಿಣಾಮ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಅಷ್ಟೇ ಅಲ್ಲದೆ ಗುರುವಾರವೂ 19 ವರ್ಷ ಶ್ಯಾಮ ಮೊಹನ್ ಮೇಲೆ ದಾಳಿ ಮಾಡಿತ್ತು.

    ಹುಲಿಯ ನಿರಂತರ ದಾಳಿಯಿಂದ ಬೇಸತ್ತ ಗ್ರಾಮಸ್ಥರು ಅದನ್ನು ಕೊಲೆ ಮಾಡಲು ನಿರ್ಧರಿಸಿದ್ದರು. ಹೀಗಾಗಿ ಗುರುವಾರ ಅರಣ್ಯ ಪ್ರದೇಶವನ್ನು ಸುತ್ತುವರಿದ ಗ್ರಾಮಸ್ಥರು ಹುಲಿಗಾಗಿ ಹುಡುಕಾಟ ನಡೆಸಿದ್ದರು. ದುರಾದೃಷ್ಟವಶಾತ್ ಹುಲಿ ಗ್ರಾಮಸ್ಥರ ಕೈಗೆ ಸಿಕ್ಕಿಬಿದ್ದು ಗಂಭೀರವಾಗಿ ಗಾಯಗೊಂಡಿತ್ತು. ಈ ಕುರಿತು ಮಾಹಿತಿ ಸಿಗುತ್ತಿದ್ದಂತೆ ಅರಣ್ಯಾಧಿಕಾರಿಗಳು ಸ್ಥಳಕ್ಕೆ ಬರುತ್ತಿದ್ದಂತೆ ಹುಲಿ ಪ್ರಾಣ ಬಿಟ್ಟಿತ್ತು.

    ಈ ಸಂಬಂಧ ಪ್ರತಿಕ್ರಿಯೆ ನೀಡಿರುವ ಅರಣ್ಯಾಧಿಕಾರಿ ರಾಜಮೋಹನ್ ಅವರು, ಗ್ರಾಮಸ್ಥರು ಈಟಿಗಳಿಂದ ತಿವಿದಿದ್ದರಿಂದ ಹುಲಿ ಗಂಭೀರವಾಗಿ ಗಾಯಗೊಂಡಿತ್ತು. ಜೊತೆಗೆ ಬಲವಾದ ಹೊಡೆತ ಬಿದ್ದಿದ್ದರಿಂದ ಪಕ್ಕೆಲುಬು ಮುರಿದಿದ್ದವು. ಘಟನಾ ಸ್ಥಳಕ್ಕೆ ಭೇಟಿ ನೀಡಿದಾಗ ಹುಲಿ ಸಾವನ್ನಪ್ಪಿತ್ತು. ಹೀಗಾಗಿ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿ, ಅಂತ್ಯಕ್ರಿಯೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.