Tag: Pineapple

  • ಸ್ಪೆಷಲ್ ಪೈನಾಪಲ್ ಪಾಯಸ ಮಾಡಿ ಹಬ್ಬವನ್ನು ಸಂಭ್ರಮಿಸಿ

    ಸ್ಪೆಷಲ್ ಪೈನಾಪಲ್ ಪಾಯಸ ಮಾಡಿ ಹಬ್ಬವನ್ನು ಸಂಭ್ರಮಿಸಿ

    ಬ್ಬ ಎಂದರೆ ಪ್ರತಿಯೊಬ್ಬರ ಮನೆಯಲ್ಲಿ ಸಿಹಿಯಾದ ಅಡುಗೆ ಮಾಡುತ್ತಾರೆ. ಇನ್ನು ಕೆಲವೇ ದಿನಗಳಲ್ಲಿ ನವರಾತ್ರಿ ಹಬ್ಬ ಪ್ರಾರಂಭವಾಗಲಿದೆ. 9 ದಿನಗಳು ಮನೆಯಲ್ಲಿ ಸಿಹಿಯಾದ ಅಡುಗೆಯನ್ನು ಮಾಡಬೇಕು ಎಂದು ಯೋಚಿಸುತ್ತಿರುವ ನಿಮಗೆ ನಾವು ಇಂದು ಪೈನಾಪಲ್ ಪಾಯಸ ಮಾಡುವ ವಿಧಾನ ಹಾಗೂ ಬೇಕಾಗಿರುವ ಸಾಮಗ್ರಿಗಳು ಏನು ಎಂದು ಹೇಳುತ್ತೇವೆ. ಈ ಪಾಯಸವನ್ನು ಮಾಡಿ ಹಬ್ಬವನ್ನು ಸ್ಪೆಷಲ್ ಆಗಿ ಆಚರಣೆ ಮಾಡಿ.

    ಬೇಕಾಗುವ ಸಾಮಗ್ರಿಗಳು:
    * ಪೈನಾಪಲ್- 2ಕಪ್
    * ಸಕ್ಕರೆ- ಕಾಲು ಕಪ್
    * ತೆಂಗಿನ ಹಾಲು- 2 ಬಟ್ಟಲು
    * ತುಪ್ಪ- ಅರ್ಧ ಕಪ್
    * ಗೋಡಂಬಿ- ಸ್ವಲ್ಪ
    * ಕಾರ್ನ್ ಫ್ಲೋರ್ (ಜೋಳದ ಹಿಟ್ಟು)- 2 ಚಮಚ

    ಮಾಡುವ ವಿಧಾನ:
    * ಮೊದಲು ಪೈನಾಪಲ್ ಪೀಸ್‍ಗಳನ್ನು ಗೋಡಂಬಿಯನ್ನು ತುಪ್ಪದೊಂದಿಗೆ ಫ್ರೈ ಮಾಡಿಕೊಳ್ಳಬೇಕು.
    * ನಂತರ ತೆಂಗಿನಕಾಯಿ ಹಾಲು ಕಾರ್ನ್‍ಫ್ಲೋರ್ ಸೇರಿಸಿ, ಸಕ್ಕರೆ ಬೆರೆಸಿ ಒಲೆಯ ಮೇಲಿಟ್ಟು ಚೆನ್ನಾಗಿ ಬೇಯಿಸಬೇಕು. ಇದನ್ನೂ ಓದಿ:  ಕೆಲವೇ ಸಾಮಗ್ರಿಗಳಲ್ಲಿ ಮಾಡಿ ರುಚಿಯಾದ ಮೊಟ್ಟೆ ಪಲ್ಯ

    * ನಂತರ ಈ ಮಿಶ್ರಣವು ಬಿಸಿಯಾಗುವಾಗ ಫ್ರೈ ಮಾಡಿದ ಪೈನಾಪಲ್ ಹಾಗೂ ಗೋಡಂಬಿ ಸೇರಿಸಿ ಒಂದು ಬಾರಿ ಕುದಿ ಬಂದ ಕೂಡಲೇ ಕೆಳಗಿಳಿಸಿದರೆ, ರುಚಿಕರವಾದ ಪೈನಾಪಲ್ ಪಾಯಸ ಸವಿಯಲು  ಸಿದ್ಧವಾಗುತ್ತದೆ.

  • ನಾಲಿಗೆ ಚಪ್ಪರಿಸಿ ತಿನ್ನಿ ಅನಾನಸ್ ಕೇಸರಿಬಾತ್

    ನಾಲಿಗೆ ಚಪ್ಪರಿಸಿ ತಿನ್ನಿ ಅನಾನಸ್ ಕೇಸರಿಬಾತ್

    ಸಿಹಿ ತಿಂಡಿ ಎಂದರೆ ಯಾರಿಗೆ ತಾನೇ ಇಷ್ಟ ಇಲ್ಲ ಹೇಳಿ. ಪ್ರತಿಯೊಬ್ಬರು ನಾಲಿಗೆ ಚಪ್ಪರಿಸಿ ಸಿಹಿ ತಿಂಡಿಯನ್ನು ತಿನ್ನುತ್ತಾರೆ. ಅದರಲ್ಲೂ ಮಕ್ಕಳಿಗೆ ಸಿಹಿ ತಿಂಡಿ ಎಂದರೆ ತುಂಬಾ ಇಷ್ಟ. ನಿಮ್ಮ ಮಕ್ಕಳಿಗಾಗಿ ನಿಮ್ಮ ಕೈಯಾರೆ ಇಂದು ಮನೆಯಲ್ಲಿ ಸ್ವೀಟ್ ತಯಾರಿಸಿಕೊಡಿ.

    ಹಬ್ಬದ ದಿನ ಸಿಹಿ ತಿಂಡಿ ಇದ್ದರೆ ಹಬ್ಬಕ್ಕೆ ಒಂದು ಕಳೆ ಇರುತ್ತದೆ. ಮನೆಯಲ್ಲಿ ಸ್ವೀಟ್ ಮಾಡಬೇಕು ಎಂದರೆ ಯಾವುದಾದರೂ ವಿಶೇಷ ಕಾರ್ಯಕ್ರಮ ಅಥವಾ ಹಬ್ಬ ಇರಬೇಕಿತ್ತು. ಆದರೆ ಇಂದು ಕಾಲ ಬದಲಾದಂತೆ ಆಹಾರ ಕ್ರಮವು ಬದಲಾಗಿದೆ. ಯಾವಾಗ ಬೇಕಾದರೂ ಯಾವ ಆಹಾರವನ್ನಾದರು ಸೇವಿಸುತ್ತೇವೆ. ಮನೆಯಲ್ಲಿ ಮಾಡಲಾಗಲಿಲ್ಲ ಎಂದರೆ ನಾವು ಹೋಟೇಲ್‍ಗಳಲ್ಲಿಯಾದ್ರೂ ಸಿಹಿ ತಿಂಡಿ ತಿನ್ನುತ್ತೇವೆ. ಇಂದು ಮನೆಯಲ್ಲಿ ಎಲ್ಲರಿಗೂ ಇಷ್ಟವಾಗುವ ರೀತಿಯಲ್ಲಿ ಅನಾನಸ್ ಕೇಸರಿಬಾತ್ ಮಾಡಿ ಸವಿಯಿರಿ.


    ಬೇಕಾಗುವ ಸಾಮಗ್ರಿಗಳು:
    *ಅನಾನಸ್- ಒಂದು ಕಪ್
    *ಬೆಣ್ಣೆ- ಒಂದು ಚಮಚ
    *ಸಕ್ಕರೆ- ಒಂದು ಚಮಚ
    *ಹಾಲು-1 ಕಪ್
    *ರವೆ-ಒಂದು ಕಪ್
    *ಸಕ್ಕರೆ- ಅರ್ಧ ಕಪ್
    *ಏಲಕ್ಕಿ ಹುಡಿ-ಳಿ ಚಮಚ
    *ಕೇಸರಿ-ಹಾಲಿನಲ್ಲಿ ಮುಳುಗಿಸಿಡಬೇಕು

    ಮಾಡುವ ವಿಧಾನ:
    * ಒಂದು ಪಾತ್ರೆಗೆ ಅನಾನಸ್, ಸಕ್ಕರೆ ಸೇರಿಸಿ ಚೆನ್ನಾಗಿ ಮಿಶ್ರಣ ಮಾಡಿಕೊಂಡು 3-4 ನಿಮಿಷ ಕಾಲ ಕುದಿಸಿ.
    * ಈಗ ಇನ್ನೊಂದು ತವಾ ತೆಗೆದುಕೊಂಡು ಅದರಲ್ಲಿ ರವೆಯನ್ನು ಬೆಣ್ಣೆಯೊಂದಿಗೆ ಬಿಸಿ ಮಾಡಿ. ರವೆ ಗುಲಾಬಿ ಬಣ್ಣಕ್ಕೆ ಬರುವವರೆಗೆ ಚೆನ್ನಾಗಿ ಹುರಿದುಕೊಳ್ಳಿ

    * ಈಗ ರವೆಗೆ ಹಾಲನ್ನು ಹಾಕಿ. ತಕ್ಷಣ ಇದಕ್ಕೆ ಸ್ವಲ್ಪ ನೀರನ್ನು ಹಾಕಿಕೊಂಡು ಸರಿಯಾಗಿ ಕಲಸಿ. ಇಲ್ಲವಾದರೆ ರವೆ ಗಟ್ಟಿಯಾಗುತ್ತದೆ. ಕೆಲವು ನಿಮಿಷ ತಿರುಗಿಸುತ್ತಾ ಇರಬೇಕಾಗುತ್ತದೆ. ಇದು ದಪ್ಪಗೆ ಆದಾಗ ಸಕ್ಕರೆ ಹಾಕಿ ಮಿಶ್ರಣವಾಗುವ ತನಕ ತಿರುಗಿಸಿ.
    * ಈಗ ಇದಕ್ಕೆ ಅನಾನಸ್, ಕೇಸರಿ ಹಾಕಿದ ಹಾಲು, ಏಲಕ್ಕಿ ಹುಡಿಯನ್ನು ಮಿಶ್ರಣಕ್ಕೆ ಹಾಕಿ. ಸರಿಯಾಗಿ ಮಿಶ್ರಣವಾದ ಬಳಿಕ 1-2 ನಿಮಿಷ ಬೇಯಿಸಿದರೆ ರುಚಿಯಾದ ಅನಾನಸ್ ಕೇಸರಿಬಾತ್ ಸವಿಯಲು ಸಿದ್ಧವಾಗುತ್ತದೆ.

  • ಆನೆ ಸತ್ತಿದ್ದು ಸ್ಫೋಟಕ ತುಂಬಿದ ಹಣ್ಣಿನಿಂದಲ್ಲ- ಬಂಧಿತ ಮೊದಲ ಆರೋಪಿ ಹೇಳಿದ್ದೇನು?

    ಆನೆ ಸತ್ತಿದ್ದು ಸ್ಫೋಟಕ ತುಂಬಿದ ಹಣ್ಣಿನಿಂದಲ್ಲ- ಬಂಧಿತ ಮೊದಲ ಆರೋಪಿ ಹೇಳಿದ್ದೇನು?

    ತಿರುವನಂತಪುರಂ: ಕೇರಳದಲ್ಲಿ ಗರ್ಭಿಣಿ ಆನೆ ಸಾವನ್ನಪ್ಪಿದ ಸುದ್ದಿ ದೇಶದ್ಯಾಂತ ಚರ್ಚೆಯಾಗಿತ್ತು. ಈಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮೊದಲ ಆರೋಪಿಯನ್ನು ಅರೆಸ್ಟ್ ಮಾಡಿದ್ದು, ಪ್ರಕರಣಕ್ಕೆ ಹೊಸ ಟ್ವಿಸ್ಟ್ ಸಿಕ್ಕಿದೆ.

    ಬಂಧಿತ ಮೊದಲ ಆರೋಪಿಯನ್ನು 40 ವರ್ಷದ ವಿಲ್ಸನ್ ಎಂದು ಗುರುತಿಸಲಾಗಿದ್ದು, ಈತ ರಬ್ಬರ್ ವ್ಯಾಪಾರಿಯಾಗಿದ್ದ ಎಂದು ತಿಳಿದು ಬಂದಿದೆ. ಇದರ ಜೊತೆಗೆ ಈತ ಸ್ಫೋಟಕವನ್ನು ಬೇರೆಯವರಿಗೆ ತಯಾರು ಮಾಡಿಕೊಡುತ್ತಿದ್ದಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾನೆ. ಇನ್ನಿಬ್ಬರು ತಪ್ಪಿಸಿಕೊಂಡಿದ್ದು, ಪೊಲೀಸರು ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.

    ಈ ವಿಚಾರದ ಬಗ್ಗೆ ಮಾಹಿತಿ ನೀಡಿರುವ ಮನ್ನಾರ್ಕಡ್ ವಿಭಾಗೀಯ ಅರಣ್ಯ ಅಧಿಕಾರಿ ಸುನಿಲ್ ಕುಮಾರ್, ನಾವು ಈಗಾಗಲೇ ಆನೆ ಪ್ರಕರಣಕ್ಕೆ ಸಂಬಂಧಿಸಿದ ಹಾಗೇ ಮೊದಲ ಆರೋಪಿಯನ್ನು ಪತ್ತೆ ಮಾಡಿದ್ದೇವೆ. ಇನ್ನಿಬ್ಬರನ್ನು ಪತ್ತೆ ಹಚ್ಚುವ ಸನಿಹದಲ್ಲಿ ಇದ್ದೇವೆ. ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಮೃತಪಟ್ಟ ಗರ್ಭಿಣಿ ಆನೆ ಸ್ಫೋಟಕ ತುಂಬಿದ ಅನಾನಸ್ ಹಣ್ಣು ತಿಂದು ಸಾವನ್ನಪ್ಪಿಲ್ಲ. ಆನೆ ಸ್ಫೋಟಕ ತುಂಬಿದ ತೆಂಗಿನಕಾಯಿಯನ್ನು ತಿಂದು ಸಾವನ್ನಪ್ಪಿದೆ ಎಂದು ತನಿಖೆ ವೇಳೆ ತಿಳಿದಿದೆ ಎಂದು ಹೇಳಿದ್ದಾರೆ.

    ಕೇರಳದಲ್ಲಿ ಬೆಳೆ ನಾಶ ಮಾಡಲು ಅಥವಾ ತಿನ್ನಲು ಬಂದ ಕಾಡುಹಂದಿಯಂತಹ ಪ್ರಾಣಿಗಳನ್ನು ಹೆದರಿಸಲು ಈ ರೀತಿಯ ಸ್ಫೋಟಕವನ್ನು ಸ್ಥಳೀಯವಾಗಿ ಬಳಸುತ್ತಾರೆ. ಸ್ಫೋಟಕವನ್ನು ಹಣ್ಣು ಮತ್ತು ಪ್ರಾಣಿಗಳ ಮಾಂಸದಲ್ಲಿ ಇಟ್ಟು ಅದನ್ನು ಸ್ಫೋಟಗೊಳಿಸಿ ಪ್ರಾಣಿಗಳನ್ನು ಓಡಿಸಲಾಗುತ್ತದೆ. ಆದರೆ ಇವರು ಆನೆಗೂ ಇದೇ ರೀತಿ ಮಾಡಿದ್ದಾರೆ. ಆದರೆ ಯಾರಿಗೂ ತೊಂದರೆ ಮಾಡದೇ ಆಹಾರವನ್ನು ಅರಸಿ ಬಂದ ಆನೆ ಇಲ್ಲಿ ದುರಂತವಾಗಿ ಸಾವನ್ನಪ್ಪಿದೆ.

    ಅಧಿಕಾರಿಗಳು ಹೇಳಿರುವ ಪ್ರಕಾರ, ಆನೆ ತೆಂಗಿನಕಾಯಿಯ ಒಂದು ಭಾಗವನ್ನು ಮುರಿದುಕೊಂಡು ಬಾಯಿಯೊಳಗೆ ಹಾಕಿಕೊಂಡಿದೆ. ಈ ವೇಳೆ ಅದು ಸ್ಫೋಟಗೊಂಡಿದ್ದು, ಆನೆಯ ಎಡಭಾಗದ ಬಾಯಿ ಸಂಪೂರ್ಣವಾಗಿ ಗಾಯಗೊಂಡಿದೆ. ಇದರಿಂದ ಆನೆಗೆ ಆಹಾರ ಮತ್ತು ನೀರನ್ನು ಸೇವಿಸಲು ಆಗಿಲ್ಲ. ಆನೆ ಬಾಯಿಯ ನೋವಿನ ಜೊತೆಗೆ ಒಂದು ದಿನವೆಲ್ಲ ನರಳಿದೆ. ನಂತರ ಅದು ಪಾಲಕ್ಕಾಡ್‍ನ ವೆಲ್ಲಿಯಾರ್ ನದಿಯಲ್ಲಿ ಬಂದು ನಿಂತುಕೊಂಡು ಪ್ರಾಣಬಿಟ್ಟಿದೆ ಎಂದು ಹೇಳಿದ್ದಾರೆ.

    ಗರ್ಭಿಣಿ ಆನೆ ಮಾನವನ ಸ್ವಾರ್ಥಕ್ಕಾಗಿ ಪ್ರಾಣ ಬಿಟ್ಟಿದೆ ಎಂದು ತಿಳಿದು ಇಡೀ ವಿಶ್ವವೇ ಮರುಗಿತ್ತು. ಜೊತೆಗೆ ಸಾಮಾಜಿಕ ಜಾಲತಾಣದಲ್ಲಿ ಬಹಳ ಚರ್ಚೆಯಾಗಿತ್ತು. ಇಡೀ ದೇಶದಲ್ಲೇ ಸ್ಟಾರ್ ನಟ-ನಟಿಯರು ಕ್ರಿಕೆಟ್ ಆಟಗಾರರು ಕೂಡ ಆನೆ ಸಾವಿಗೆ ನ್ಯಾಯ ಕೊಡಿಸಿ ಎಂದು ಟ್ವೀಟ್ ಮಾಡಿದ್ದರು. ಈ ವಿಚಾರವಾಗಿ ಗುರುವಾರ ಟ್ವೀಟ್ ಮಾಡಿದ್ದ ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಆನೆಯ ಸಾವಿಗೆ ನ್ಯಾಯ ಸಿಗುತ್ತದೆ ಎಂದು ಹೇಳಿದ್ದರು.

  • ಪ್ರಾಣಿಗಳೊಂದಿಗೆ ಹೇಡಿತನದ ಕೃತ್ಯಕ್ಕೆ ಅಂತ್ಯ ಹಾಡೋಣ- ವಿರಾಟ್ ಕರೆ

    ಪ್ರಾಣಿಗಳೊಂದಿಗೆ ಹೇಡಿತನದ ಕೃತ್ಯಕ್ಕೆ ಅಂತ್ಯ ಹಾಡೋಣ- ವಿರಾಟ್ ಕರೆ

    ಮುಂಬೈ: ಪೈನಾಪಲ್‍ನಲ್ಲಿ ಪಟಾಕಿ ಇಟ್ಟು 15 ವರ್ಷದ ಗರ್ಭಿಣಿ ಆನೆಯನ್ನು ಕೊಲೆಗೈದ ಹೀನ ಕೃತ್ಯವನ್ನು ಕ್ರೀಡಾಪಟುಗಳು ಖಂಡಿಸಿ, ಅಸಮಾಧಾನ ಹೊರಹಾಕಿದ್ದಾರೆ. ಪ್ರಾಣಿಗಳನ್ನು ಪ್ರೀತಿಯಿಂದ ನೋಡಿಕೊಳ್ಳಬೇಕೆಂದು ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಜನರಿಗೆ ಮನವಿ ಮಾಡಿಕೊಂಡಿದ್ದಾರೆ.

    ಆನೆ ಹಾಗೂ ಅದರ ಗರ್ಭದಲ್ಲಿ ಮರಿಯಾನೆ ಇರುವ ಕಾರ್ಟೂನ್ ಫೋಟೋವನ್ನು ಟ್ವೀಟ್ ಮಾಡಿರುವ ವಿರಾಟ್ ಕೊಹ್ಲಿ, “ಕೇರಳದ ಘಟನೆಯ ಬಗ್ಗೆ ಕೇಳಿ ತುಂಬಾ ಆಘಾತವಾಯಿತು. ಪ್ರಾಣಿಗಳನ್ನು ಪ್ರೀತಿಯಿಂದ ಕಾಣಬೇಕು, ಅವುಗಳ ಬಗ್ಗೆ ಕಾಳಜಿ ವಹಿಸಬೇಕು ಎಂದು ಮನವಿ ಮಾಡುತ್ತೇನೆ. ಇಂತಹ ಹೇಡಿತನ ಕೃತ್ಯಗಳಿಗೆ ಅಂತ್ಯ ಹಾಡೋಣ” ಎಂದು ಕರೆ ನೀಡಿದ್ದಾರೆ.

    ಟೀಂ ಇಂಡಿಯಾ ಸ್ಪಿನ್ನರ್ ಹರ್ಭಜನ್ ಸಿಂಗ್, “ಪೈನಾಪಲ್‍ನಲ್ಲಿ ಪಟಾಕಿ ತುಂಬಿ ಗರ್ಭಿಣಿ ಆನೆಯನ್ನು ಕೊಂದವರಿಗೆ ಶಿಕ್ಷೆಯಾಗಬೇಕು. ಮುಗ್ಧ ಆನೆ ಮೇಲೆ ಇಂತಹ ಕ್ರೌರ್ಯ ಎಸೆಗಿದ್ದು ಎಷ್ಟು ಸರಿ” ಎಂದು ಪ್ರಶ್ನಿಸಿದ್ದಾರೆ. ಭಾರತೀಯ ಮಹಿಳಾ ಬ್ಯಾಡ್ಮಿಂಟನ್ ತಾರೆ ಸೈನಾ ನೆಹ್ವಾಲ್ ಟ್ವಿಟ್ ಮಾಡಿ, ಇದು ತುಂಬಾ ದುಃಖಕರ ಘಟನೆ ಎಂದು ಹೇಳಿದ್ದಾರೆ.

    ಭಾರತೀಯ ಫುಟ್ಬಾಲ್ ತಂಡದ ನಾಯಕ ಸುನಿಲ್ ಛೆಟ್ರಿ, “ಅವಳು ಮುಗ್ಧ ಗರ್ಭಿಣಿ ಆನೆ. ರಾಕ್ಷಸರೇ ನೀವು ಶಿಕ್ಷೆ ಅನುಭವಿಸುತ್ತೀರಾ ಎಂದು ಭಾವಿಸುತ್ತೇನೆ. ನಾವು ಪ್ರಕೃತಿಯನ್ನು ಮತ್ತೆ ಮತ್ತೆ ವಿಫಲಗೊಳಿಸುತ್ತಲೇ ಇರುತ್ತೇವೆ. ಹಾಗಾಗಿ ನಾವು ಹೆಚ್ಚು ವಿಕಸನಗೊಂಡಿರುವ ಪ್ರಭೇದ ಎನ್ನುವುದನ್ನು ನನಗೆ ತಿಳಿಸಿಕೊಡಿ” ಎಂದು ಟ್ವಿಟ್ ಮಾಡಿದ್ದಾರೆ.

    ಏನಿದು ಪ್ರಕರಣ?:
    ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ಸ್ಥಳೀಯರು ಬುಧವಾರ ಪಟಾಕಿ ತುಂಬಿದ ಪೈನಾಪಲ್ ಹಣ್ಣನ್ನು ಗರ್ಭಿಣಿ ಆನೆಗೆ ತಿನ್ನಿಸಿದ್ದರು. ನಂತರ ಆನೆಯ ಬಾಯಿಯಲ್ಲಿ ಪಟಾಕಿ ಬ್ಲಾಸ್ಟ್ ಆಗಿ ಗಂಭೀರವಾಗಿ ಗಾಯಗೊಂಡಿತ್ತು. ಗರ್ಭಿಣಿ ಆನೆ ಯಾವೊಬ್ಬ ಗ್ರಾಮಸ್ಥರಿಗೂ ತೊಂದರೆ ನೀಡಿರಲಿಲ್ಲ. ಬಾಯಿಯಲ್ಲಿ ಪಟಾಕಿ ಸಿಡಿಯುತ್ತಿದ್ದಂತೆ ನೋವಿನಲ್ಲಿ ರಸ್ತೆ ತುಂಬಾ ಓಡಾಡಿತ್ತು. ಬಳಿಕ ವೆಲ್ಲಿಯಾರ್ ನದಿಯಲ್ಲಿ ಮುಳುಗಿತ್ತು. ಈ ಸುದ್ದಿ ತಿಳಿಯುತ್ತಿದ್ದಂತೆ ಆನೆಯನ್ನು ಮೇಲೆತ್ತಲು ಅರಣ್ಯ ಇಲಾಖೆ ಅಧಿಕಾರಿಗಳು ನೀಲಕಂಠನ್ ಹಾಗೂ ಸುರೇಂದ್ರನ್ ಎಂಬ ಎರಡು ಆನೆಗಳನ್ನು ಕರೆ ತಂದಿದ್ದು, ಅಷ್ಟೊತ್ತಿಗಾಗಲೇ ಸಂಜೆ 4ರ ಸುಮಾರಿಗೆ ಆನೆ ನದಿಯಲ್ಲೇ ಸಾವನ್ನಪ್ಪಿತ್ತು.

    ಮಲಪ್ಪುರಂ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುವ ಅರಣ್ಯಾಧಿಕಾರಿಯೊಬ್ಬರು ಆನೆ ನೋವಿನ ದೃಶ್ಯವನ್ನು ಕ್ಯಾಮೆರಾದಲ್ಲಿ ಸೆರೆ ಹಿಡಿದು ಸಾಮಾಜಿಕ ಜಾಲತಾಣಗಳಲ್ಲಿ ಅಪ್‍ಲೋಡ್ ಮಾಡಿದ್ದರು.

  • ಲಾಕ್‍ಡೌನ್ ಎಫೆಕ್ಟ್ – 100 ಎಕ್ರೆಯಲ್ಲಿ ಕೊಳೆಯುತ್ತಿದೆ 300 ಟನ್ ಅನಾನಸ್

    ಲಾಕ್‍ಡೌನ್ ಎಫೆಕ್ಟ್ – 100 ಎಕ್ರೆಯಲ್ಲಿ ಕೊಳೆಯುತ್ತಿದೆ 300 ಟನ್ ಅನಾನಸ್

    ಮಂಗಳೂರು: ಕೊರೊನಾ ಭೀತಿಯಿಂದ ಇಡೀ ದೇಶವೇ ಲಾಕ್‍ಡೌನ್ ಆಗಿದ್ದು, ಎಲ್ಲ ವರ್ಗದ ಜನ ಆತಂಕದಲ್ಲಿದ್ದಾರೆ. ದೇಶದ ಬೆನ್ನೆಲುಬು ರೈತನು ಕೂಡ ತಾನು ಬೆಳೆದ ಬೆಳೆಯನ್ನು ಮಾರಾಟ ಮಾಡಲಾಗದೇ ಕಷ್ಟ ನಷ್ಟ ಅನುಭವಿಸುವಂತಾಗಿದೆ.

    ಅದರಂತೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಕಕ್ಕಿಂಜೆ ಎಂಬಲ್ಲಿ ಕೇರಳದ ಎರ್ನಾಕುಲಂ ಮೂಲದ ಶೈಜು 100 ಎಕರೆ ಜಮೀನನ್ನು ಲೀಸ್‍ಗೆ ಪಡೆದು ಅನಾನಸ್ ಕೃಷಿ ಮಾಡಿದ್ದರು. ಶ್ರಮಕ್ಕೆ ತಕ್ಕ ಪ್ರತಿಫಲ ಭರ್ಜರಿ ಫಸಲು ಕೂಡ ಬಂದಿತ್ತು. ಆದರೆ ಬೆಳೆ ಕಟಾವಿಗೆ ಬರುವ ಹೊತ್ತಿನಲ್ಲಿ ಲಾಕ್‍ಡೌನ್ ಆದ ಕಾರಣ ಸುಮಾರು 300 ಟನ್ ಅನಾನಸ್ ಬೆಳೆ ಜಮೀನಿನಲ್ಲೇ ಉಳಿಯುವಂತಾಗಿದೆ.

    ಎರ್ನಾಕುಲಂ ಮೂಲದ ಕೃಷಿಕ ಶೈಜು, ಅನಾನಸ್ ಬೆಳೆಯುವ ಉದ್ದೇಶದಿಂದ ಬ್ಯಾಂಕ್ ಗಳಲ್ಲಿ ಕೋಟ್ಯಂತರ ರೂ. ಸಾಲ ಮಾಡಿ ಅನಾನಸ್ ಕೃಷಿ ಮಾಡಿದ್ದರು. ಲಾಕ್‍ಡೌನ್ ಇಲ್ಲದಿದ್ದರೆ ಕೃಷಿಕ ಬೆಳೆದ ಅನಾನಸ್ ಉತ್ತರ ಭಾರತದಲ್ಲಿ ಉತ್ತಮ ಬೆಲೆಗೆ ಮಾರಾಟ ಆಗುತ್ತಿತ್ತು. ಆದರೆ ಲಾಕ್‍ಡೌನ್‍ನಿಂದ ಅನಾನಸ್ ಬೆಳೆ ಹಾಳಾಗುತ್ತಿದೆ. ಹೀಗಾಗಿ ಸರ್ಕಾರ ನೆರವಿಗೆ ಬರುವಂತೆ ಕೃಷಿಕ ಶೈಜು ಮನವಿ ಮಾಡಿದ್ದಾರೆ.

  • ಅನಾನಸ್ ಬೆಳೆ ಬಗ್ಗೆ ಸಿಎಫ್‍ಟಿಆರ್‍ಐ ತಜ್ಞರೊಂದಿಗೆ ಜಿಲ್ಲಾಧಿಕಾರಿ ವಿಡಿಯೋ ಕಾನ್ಫರೆನ್ಸ್

    ಅನಾನಸ್ ಬೆಳೆ ಬಗ್ಗೆ ಸಿಎಫ್‍ಟಿಆರ್‍ಐ ತಜ್ಞರೊಂದಿಗೆ ಜಿಲ್ಲಾಧಿಕಾರಿ ವಿಡಿಯೋ ಕಾನ್ಫರೆನ್ಸ್

    – ರೈತರ ಹಿತಕ್ಕಾಗಿ ಜಿಲ್ಲಾಧಿಕಾರಿಗಳ ಸಂವಾದ
    – ಅನಾನಸ್ ಸಂಸ್ಕರಣೆ ಹೇಗೆ ಮಾಡೋದು?

    ಶಿವಮೊಗ್ಗ: ಲಾಕ್‍ಡೌನ್‍ನಿಂದಾಗಿ ಸಮಸ್ಯೆಗೆ ಸಿಲುಕಿರುವ ಜಿಲ್ಲೆಯ ಅನಾನಸ್ ಬೆಳೆಗಾರರ ಹಿತವನ್ನು ಕಾಪಾಡುವ ನಿಟ್ಟಿನಲ್ಲಿ ಕೈಗೊಳ್ಳಬಹುದಾದ ಕ್ರಮಗಳ ಬಗ್ಗೆ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ಇಂದು ಮೈಸೂರಿನ ಸಿಎಫ್‍ಟಿಆರ್‍ಐ (ಸೆಂಟ್ರಲ್ ಫುಡ್ ಟೆಕ್ನಾಲಜಿ ರಿಸರ್ಚ್ ಇನ್ಸ್ಟಿಟ್ಯೂಟ್) ಅಧಿಕಾರಿಗಳೊಂದಿಗೆ ವಿಡಿಯೋ ಸಂವಾದ ನಡೆಸಿದರು.

    ಜಿಲ್ಲೆಯಲ್ಲಿ ಅಂದಾಜು 65 ಸಾವಿರ ಟನ್ ಅನಾನಸು ಬೆಳೆದಿದ್ದು, ಕಳೆದ 20 ದಿನಗಳಲ್ಲಿ ವಿವಿಧ ಮೂಲಗಳನ್ನು ಬಳಸಿಕೊಂಡು ಅನಾನಸು ಮಾರುಕಟ್ಟೆಗೆ ವಿಲೇವಾರಿ ಮಾಡಲಾಗುತ್ತಿದೆ. ಜಿಲ್ಲೆಯಲ್ಲಿ ಬೆಳೆಯಲಾಗುವ ರಾಜಾ ತಳಿಯ ಅನಾನಸಿಗೆ ದೆಹಲಿಯ ಜ್ಯೂಸ್ ಕಂಪನಿಗಳು ಪ್ರಮುಖ ಮಾರುಕಟ್ಟೆಯಾಗಿದ್ದು, ಲಾಕ್‍ಡೌನ್‍ನಿಂದ ಸಾಗಾಟ ತೊಂದರೆಯಾಗಿದೆ. ಪ್ರಸ್ತುತ ದಿನನಿತ್ಯ 125 ರಿಂದ 150 ಟನ್ ಮಾತ್ರ ಮಾರುಕಟ್ಟೆಗೆ ಸರಬರಾಜು ಮಾಡಲು ಸಾಧ್ಯವಾಗುತ್ತಿದೆ. ಪ್ರತಿನಿತ್ಯ 250 ರಿಂದ 300 ಟನ್ ಇಳುವರಿ ಬರುತ್ತಿದೆ ಎಂದು ಅವರು ಹೇಳಿದರು.

    ಈ ಹಿನ್ನೆಲೆಯಲ್ಲಿ ಸ್ಥಳೀಯವಾಗಿ ಸ್ವಸಹಾಯ ಸಂಘಗಳನ್ನು ಬಳಸಿಕೊಂಡು ಮಾರುಕಟ್ಟೆ ಕಲ್ಪಿಸಲು, ವಿವಿಧ ಆಹಾರ ಸಂಸ್ಕರಣಾ ತಂತ್ರಗಳನ್ನು ಬಳಸಿಕೊಂಡು ಅನಾನಸು ಉತ್ಪನ್ನಗಳನ್ನು ದಾಸ್ತಾನು ಇರಿಸುವುದು ಸೇರಿದಂತೆ ಬೆಳೆಗಾರರಿಗೆ ಹೊಸ ಮಾರುಕಟ್ಟೆ ಅವಕಾಶಗಳ ಬಗ್ಗೆ ಸಿಎಫ್‍ಟಿಆರ್‍ಐ ತಜ್ಞರಿಂದ ಮಾರ್ಗದರ್ಶನ ಬಯಸಲಾಗಿದೆ ಎಂದು ಜಿಲ್ಲಾಧಿಕಾರಿಗಳು ಹೇಳಿದರು.

    ಕೋಲ್ಡ್ ಸ್ಟೋರೇಜ್ ಬಳಸಿಕೊಂಡು ಅನಾನಸು ಗರಿಷ್ಠ ಒಂದು ವಾರಗಳ ಕಾಲ ಮಾತ್ರ ದಾಸ್ತಾನು ಇರಿಸಲು ಸಾಧ್ಯವಿದೆ. ಅದನ್ನು ಪಲ್ಪ್ ಆಗಿ ಪರಿವರ್ತಿಸಿದರೆ ಗರಿಷ್ಟ ಎರಡು ವರ್ಷಗಳ ಕಾಲ ಕಾಪಿಡಬಹುದಾಗಿದೆ. ಹುಬ್ಬಳ್ಳಿ ಮತ್ತು ಚಿತ್ತೂರುಗಳಲ್ಲಿ ಅಂತಹ ಸಂಸ್ಕರಣಾ ಉದ್ಯಮಗಳಿದ್ದು, ಅನಾನಸನ್ನು ಪಲ್ಪ್ ಆಗಿ ಪರಿವರ್ತಿಸಿದ ಬಳಿಕ ಹಾಪ್‍ಕಾಮ್ಸ್ ಮೂಲಕ ಮಾರುಕಟ್ಟೆ ವ್ಯವಸ್ಥೆ ಮಾಡಬಹುದಾಗಿದೆ ಎಂದು ಸಿಎಫ್‍ಟಿಆರ್‍ಐ ಅಧಿಕಾರಿಗಳು ಸಲಹೆ ನೀಡಿದರು.

    ಅತ್ಯಂತ ಕಡಿಮೆ ತಂತ್ರಜ್ಞಾನವನ್ನು ಬಳಸಿಕೊಂಡು ಕಡಿಮೆ ವೆಚ್ಚದಲ್ಲಿ ಅನಾನಸು ಸಂಸ್ಕರಣೆಯನ್ನು ಸ್ಥಳೀಯವಾಗಿ ಮಾಡಲು ಸಾಧ್ಯವಿದೆ. ಸ್ವಸಹಾಯ ಗುಂಪುಗಳ ಸಹಯೋಗದಲ್ಲಿ ಅಂತಹ ಚಟುವಟಿಕೆ ನಡೆಸಲು, ರೈತರಿಗೆ, ಸ್ವಸಹಾಯ ಸಂಘಗಳ ಸದಸ್ಯರಿಗೆ ಸೂಕ್ತ ತರಬೇತಿಯನ್ನು ನೀಡಲು ಸಂಸ್ಥೆ ಸಿದ್ಧವಿದೆ. ಲಾಕ್‍ಡೌನ್ ಮುಗಿದ ಬಳಿಕ ಈ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬಹುದಾಗಿದೆ. ಇದರಿಂದ ಮುಂದಿನ ದಿನಗಳಲ್ಲಿ ಸ್ಥಳೀಯವಾಗಿ ಮಾರುಕಟ್ಟೆಯನ್ನು ವಿಸ್ತರಿಸಲು ಸಾಧ್ಯವಿದೆ. ಈ ನಿಟ್ಟಿನಲ್ಲಿ ಸಿಎಫ್‍ಟಿಆರ್‍ಐ ಎಲ್ಲಾ ತಾಂತ್ರಿಕ ನೆರವು ನೀಡಲು ಸಿದ್ಧವಿದೆ ಎಂದು ಸಂಸ್ಥೆಯ ನಿರ್ದೇಶಕ ಡಾ.ರಾಘವರಾವ್ ಹೇಳಿದರು.

    ಈ ವೇಳೆ ತೋಟಗಾರಿಕಾ ಇಲಾಖೆ ಉಪನಿರ್ದೇಶಕ ಯೋಗೀಶ್, ಕೃಷಿ ಇಲಾಖೆ ಜಂಟಿ ನಿರ್ದೇಶಕ ಕಿರಣ್ ವಿಡಿಯೋ ಕಾನ್ಫರೆನ್ಸ್ ನಲ್ಲಿ ಭಾಗವಹಿಸಿದ್ದರು.