Tag: Piriyapatna

  • Mysuru | ಬಾತ್‌ರೂಂನಲ್ಲಿ ಗ್ಯಾಸ್ ಗೀಸರ್ ಸೋರಿಕೆ; ಉಸಿರುಗಟ್ಟಿ ಅಕ್ಕ-ತಂಗಿ ಸಾವು

    Mysuru | ಬಾತ್‌ರೂಂನಲ್ಲಿ ಗ್ಯಾಸ್ ಗೀಸರ್ ಸೋರಿಕೆ; ಉಸಿರುಗಟ್ಟಿ ಅಕ್ಕ-ತಂಗಿ ಸಾವು

    ಮೈಸೂರು: ಬಾತ್‌ರೂಂನಲ್ಲಿ (Bathroom) ಗ್ಯಾಸ್ ಗೀಸರ್ (Gas Geyser) ಸೋರಿಕೆಯಾದ ಪರಿಣಾಮ ಉಸಿರುಗಟ್ಟಿ ಅಕ್ಕ-ತಂಗಿ (Sisters) ಸಾವನ್ನಪ್ಪಿದ ಘಟನೆ ಮೈಸೂರು (Mysuru) ಜಿಲ್ಲೆ ಪಿರಿಯಾಪಟ್ಟಣ (Piriyapatna) ತಾಲೂಕಿನ ಬೆಟ್ಟದಪುರ ಗ್ರಾಮದಲ್ಲಿ ನಡೆದಿದೆ.

    ಗುಲ್ಫರ್ಮ್ ತಾಜ್ (23), ಸಿಮ್ರಾನ್ ತಾಜ್ (20) ಮೃತ ದುರ್ದೈವಿಗಳು. ಗ್ಯಾಸ್ ಗೀಸರ್‌ನಿಂದ ಕಾರ್ಬನ್ ಮೋನಾಕ್ಸೈಡ್ (Carbon Monoxide) ಸೋರಿಕೆಯಾಗಿ ಘಟನೆ ಸಂಭವಿಸಿದೆ. ಗುಲ್ಫಾರ್ಮ್, ಸಿಮ್ರಾನ್ ತಾಜ್ ಇಬ್ಬರೂ ಒಟ್ಟಿಗೆ ಬಾತ್‌ರೂಂಗೆ ಹೋದಾಗ ಘಟನೆ ನಡೆದಿದೆ. ಬಹಳ ಹೊತ್ತು ಕಳೆದರು ಬಾತ್‌ರೂಂನಿಂದ ಅಕ್ಕ, ತಂಗಿ ಹೊರಬಾರದ ಹಿನ್ನೆಲೆ ತಂದೆ ಅಲ್ತಾಫ್ ಅನುಮಾನಗೊಂಡು ಬಾಗಿಲು ಬಡಿದಿದ್ದಾರೆ. ಆಗಲೂ ಬಾಗಿಲು ತೆಗೆದಿಲ್ಲ. ಈ ವೇಳೆ ಬಾಗಿಲು ಒಡೆದು ನೋಡಿದಾಗ ಮಕ್ಕಳಿಬ್ಬರು ಅರೆಪ್ರಜ್ಞಾವಸ್ಥೆಯಲ್ಲಿರೋದು ಗೊತ್ತಾಗಿದೆ. ಇದನ್ನೂ ಓದಿ: ಗುಂಡಿ ತಪ್ಪಿಸಲು ಹೋಗಿ ಬೈಕ್‌ನಿಂದ ರಸ್ತೆಗೆ ಬಿದ್ದ ಟೆಕ್ಕಿ – ಲಾರಿ ಹರಿದು ದುರ್ಮರಣ

    ತಕ್ಷಣವೇ ಮಕ್ಕಳನ್ನು ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಅಷ್ಟುಹೊತ್ತಿಗಾಗಲೇ ಇಬ್ಬರೂ ಮೃತಪಟ್ಟಿದ್ದರು. ಕೋಣೆಯಲ್ಲಿ ಕಿಟಕಿ ಇರದ ಹಿನ್ನೆಲೆ ಉಸಿರುಗಟ್ಟಿದೆ ಎನ್ನಲಾಗಿದೆ. ಪಿರಿಯಾಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ. ಇದನ್ನೂ ಓದಿ: ಶಬರಿಮಲೆಯಲ್ಲಿ ಚಿನ್ನ ನಾಪತ್ತೆ ಪ್ರಕರಣಕ್ಕೆ ಬೆಂಗಳೂರು ಲಿಂಕ್‌ – ಬಳ್ಳಾರಿಯಲ್ಲಿ ಚಿನ್ನ ಮಾರಾಟ ಮಾಡಿರೋ ಶಂಕೆ

  • ಜಿಡಿಎಸ್‌ಗೆ ವೋಟ್ ಹಾಕಿದ್ದಕ್ಕೆ ಗಂಗಾ ಕಲ್ಯಾಣ ಪಟ್ಟಿಗೆ ತಡೆ – ಸಚಿವ ವೆಂಕಟೇಶ್ ವಿರುದ್ಧ ರೈತರ ಕಿಡಿ

    ಜಿಡಿಎಸ್‌ಗೆ ವೋಟ್ ಹಾಕಿದ್ದಕ್ಕೆ ಗಂಗಾ ಕಲ್ಯಾಣ ಪಟ್ಟಿಗೆ ತಡೆ – ಸಚಿವ ವೆಂಕಟೇಶ್ ವಿರುದ್ಧ ರೈತರ ಕಿಡಿ

    ಮೈಸೂರು: ಪಿರಿಯಾಪಟ್ಟಣದಲ್ಲಿ (Piriyapatna) ಮತ್ತೆ ದ್ವೇಷದ ರಾಜಕಾರಣ ಶುರುವಾಗಿದೆ. ಬೋರ್‌ವೆಲ್ ರಾಜಕೀಯ ಜೋರಾಗಿದ್ದು ರೈತರಿಗೆ ಮಂಜೂರಾಗಿದ್ದ ಗಂಗಾ ಕಲ್ಯಾಣ ಯೋಜನೆ ಪಟ್ಟಿಯನ್ನು ಖುದ್ದು ಸಚಿವ ಕೆ.ವಂಕಟೇಶ್  (K.Venkatesh ) ತಡೆಹಿಡಿಸಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.

    ಯೋಜನೆ ಪಟ್ಟಿಯನ್ನು ಸಚಿವ ಕೆ.ವಂಕಟೇಶ್ ತಡೆದಿರುವ ವಿಚಾರ ಕುರಿತು ಪ್ರತಿಕ್ರಿಯಿಸಿದ ರೈತರು, ಗಂಗಾ ಕಲ್ಯಾಣ ಯೋಜನೆ ಪಟ್ಟಿಯನ್ನು ಖುದ್ದು ವಂಕಟೇಶ್ ತಡೆಹಿಡಿಸಿದ್ದಾರೆ. ಮಾಜಿ ಶಾಸಕ ಜೆಡಿಎಸ್‌ನ ಕೆ.ಮಹದೇವ್  (K.Mahadeva )ಮೇಲಿನ ಸೇಡಿಗೆ ನಮ್ಮ ಭವಿಷ್ಯ ಬಲಿಯಾಗುತ್ತಿದೆ ಎಂದು ರೈತರು ಬೇಸರ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಇಷ್ಟಾರ್ಥಸಿದ್ಧಿಗಾಗಿ ಹರಕೆ ಕೋಲ ನೆರವೇರಿಸಿದ ಯು.ಟಿ ಖಾದರ್

    2021 ರಿಂದ 23ನೇ ಸಾಲಿನವರೆಗೆ ನೂರಕ್ಕೂ ಹೆಚ್ಚು ರೈತರು ಗಂಗಾ ಕಲ್ಯಾಣ ಯೋಜನೆಯ ಫಲಾನುಭವಿಗಳಾಗಿ ಆಯ್ಕೆಯಾಗಿದ್ದರು. ಹಿಂದಿನ ಜೆಡಿಎಸ್ ಶಾಸಕ ಕೆ.ಮಹದೇವ್ ಇದ್ದ ಸಮಯದಲ್ಲಿ ಆಯ್ಕೆ ಮಾಡಿ ತಯಾರಾಗಿ ಮಂಜೂರಾತಿ ಸಿಕ್ಕಿತ್ತು. ಇದೀಗ ವೆಂಕಟೇಶ್ ಈ ಪಟ್ಟಿ ಜಾರಿಗೆ ಅಡ್ಡಿಯಾಗಿ ನಿಂತಿದ್ದಾರೆ. ಕಳೆದ ಬಾರಿ ಮಹದೇವ್ ಪರ ಚುನಾವಣೆಯಲ್ಲಿ ಕೆಲಸ ಮಾಡಿದ್ದೇವೆ ಎಂಬ ಕಾರಣ ಇಟ್ಟುಕೊಂಡು ದ್ವೇಷ ಸಾಧಿಸುತ್ತಿದ್ದಾರೆ ಎಂದು ರೈತರು ಆರೋಪಿಸಿದ್ದಾರೆ. ಇದನ್ನೂ ಓದಿ: ಸಾರ್ವಜನಿಕ ಆಸ್ತಿಗೆ ನಷ್ಟ ಭರಿಸಿದ್ರೆ ಮಾತ್ರ ಪ್ರತಿಭಟನಾಕಾರರಿಗೆ ಜಾಮೀನು – ಕಾನೂನು ಆಯೋಗ ಶಿಫಾರಸು

  • ಪತ್ನಿ ಮೇಲೆ ವಿಪರೀತ ಸಂಶಯ – ಚಾಕುವಿನಿಂದ 5 ಬಾರಿ ಇರಿದು, ನೇಣಿಗೆ ಶರಣಾದ ಪತಿ

    ಪತ್ನಿ ಮೇಲೆ ವಿಪರೀತ ಸಂಶಯ – ಚಾಕುವಿನಿಂದ 5 ಬಾರಿ ಇರಿದು, ನೇಣಿಗೆ ಶರಣಾದ ಪತಿ

    ಮಡಿಕೇರಿ: ಪತ್ನಿ ಮೇಲೆ ವಿಪರೀತ ಸಂಶಯ ಪಡುತ್ತಿದ್ದ ಗಂಡನೊಬ್ಬ ಆಕೆ ತವರು ಮನೆಗೆ ಹೋಗಿದ್ದಾಗ ಅಲ್ಲಿ ಆಕೆಗೆ ಚಾಕುವಿನಿಂದ 5 ಬಾರಿ ಇರಿದು, ಬಳಿಕ ತನ್ನ ಮನೆಗೆ ಪರಾರಿಯಾಗಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ (Piriyapatna) ತಾಲೂಕಿನ ಮುತ್ತಿನಮುಳ್ಳುಸೋಗೆ ಗ್ರಾಮದಲ್ಲಿ ನಡೆದಿದೆ.

    ಕಳೆದ ಒಂದೂವರೆ ವರ್ಷದ ಹಿಂದೆ ಮುತ್ತಿನ ಮುಳುಸೋಗೆ ಗ್ರಾಮದ ಶ್ವೇತಾ ಎಂಬಾಕೆಯನ್ನು ಗ್ರಾಮದ ಪ್ರಸನ್ನ (36) ಎಂಬಾತ ಪ್ರೀತಿಸಿ ಮನೆಯವರ ಒಪ್ಪಿಗೆ ಪಡೆದು ಮದುವೆಯಾಗಿದ್ದ. ಆದರೆ ದಿನಕಳೆದಂತೆ ತನ್ನ ಪತ್ನಿ ಮೇಲೆ ಪ್ರಸನ್ನ ವಿಪರೀತ ಸಂಶಯ ಪಟ್ಟು ಆಕೆಗೆ ಮಾನಸಿಕ ಹಾಗೂ ದೈಹಿಕವಾಗಿ ಹಿಂಸೆ ನೀಡುತ್ತಿದ್ದ.

    ಈ ಬಗ್ಗೆ ಹಲವಾರು ಬಾರಿ ಮೈಸೂರು ಹಾಗೂ ಪಿರಿಯಾಪಟ್ಟಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಮಾಡಿ, ದಂಪತಿಯ ರಾಜಿ ಸಂಧಾನ ಮಾಡಿ ಕಳುಹಿಸಿದ್ದರು. ಆದರೆ ಪ್ರಸನ್ನ ಮಾತ್ರ ಪತ್ನಿ ಮೇಲೆ ಅನುಮಾನ ಪಡುವುದು ಬಿಟ್ಟಿರಲಿಲ್ಲ. ಆಕೆಯ ತಂಗಿಯ ಮೇಲೆ ವ್ಯಾಮೋಹವೂ ಹೆಚ್ಚಾಗಿ, ಆಕೆಯೊಂದಿಗೆ ಮದುವೆ ಮಾಡಿಸು ಎಂದು ಪತ್ನಿಗೆ ಕಿರುಕುಳ ನೀಡುತ್ತಿದ್ದ ಎನ್ನಲಾಗಿದೆ.

    ಪತಿಯ ಕಿರುಕುಳದಿಂದ ಬೇಸತ್ತು ಶ್ವೇತಾ ಕಳೆದ ಒಂದು ತಿಂಗಳ ಹಿಂದೆ ತವರು ಮನೆಗೆ ಬಂದು ಅಲ್ಲಿಂದಲೇ ಕೆಲಸ ಮಾಡುತ್ತಿದ್ದಳು. ಗುರುವಾರ ಬೆಳಗ್ಗೆ ತವರು ಮನೆಯಿಂದ ಕೆಲಸಕ್ಕೆ ಹೊರಟಿದ್ದ ವೇಳೆ ಹೊರಗೆ ಕಾದು ಕುಳಿತಿದ್ದ ಪ್ರಸನ್ನ ಆಕೆಗೆ ಚಾಕು ತೋರಿಸಿ ತಮ್ಮ ಮನೆಗೆ ಹೋಗೋಣ ಎಂದು ಕರೆದಿದ್ದಾನೆ. ಆದರೆ ಮನೆಯಲ್ಲಿ ಯಾರೂ ಇಲ್ಲ, ಅವರೆಲ್ಲಾ ಬಂದ ಮೇಲೆ ತಮ್ಮ ಮನೆಗೆ ಹೋಗೋಣ ಎಂದು ಕೇಳಿಕೊಂಡಿದ್ದಾಳೆ. ಇದನ್ನೂ ಓದಿ: ಬೈಕ್‌ಗೆ ಅಪರಿಚಿತ ವಾಹನ ಡಿಕ್ಕಿ – ಇಬ್ಬರು ಸವಾರರು ಸ್ಥಳದಲ್ಲೇ ಸಾವು

    ಹೇಳದ ಮಾತು ಕೇಳದೇ ಹೋಗಿದ್ದಕ್ಕೆ ಪ್ರಸನ್ನ ಜಗಳವಾಡಿದ್ದಾನೆ. ಹೀಗೆ ದಂಪತಿ ನಡುವೆ ಮಾತಿಗೆ ಮಾತು ಬೆಳೆದು ಪ್ರಸನ್ನ ಪತ್ನಿ ಶ್ವೇತಾ ಹೊಟ್ಟೆಗೆ ಹಾಗೂ ಬೆನ್ನಿಗೆ ಚಾಕುವಿನಿಂದ 5 ಬಾರಿ ಇರಿದಿದ್ದಾನೆ. ಪತ್ನಿ ರಕ್ತದ ಮಡುವಿನಲ್ಲಿ ಬಿದ್ದು ನರಳಾಡುತ್ತಿದ್ದರೂ ಆಕೆಯನ್ನು ಅಲ್ಲೇ ಬಿಟ್ಟು ತನ್ನ ಮನೆಗೆ ಓಡಿ ಹೋಗಿದ್ದಾನೆ. ನಂತರ ಅಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

    ಇತ್ತ ಶ್ವೇತಾಳ ಚೀರಾಟ ಕೇಳಿ ಅಲ್ಲಿಗೆ ಧಾವಿಸಿದ ಗ್ರಾಮಸ್ಥರು ರಕ್ತದ ಮಡುವಿನಲ್ಲಿ ಬಿದ್ದು ಒದ್ದಾಡುತ್ತಿದ್ದುದನ್ನು ಕಂಡು ತಕ್ಷಣ ಮಡಿಕೇರಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಗಂಭೀರ ಗಾಯಗಳಾಗಿರುವ ಶ್ವೇತಾಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

    ಘಟನೆಗೆ ಸಂಬಂಧಿಸಿದಂತೆ ಪಿರಿಯಾಪಟ್ಟಣ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ನೇಣು ಬೀಗಿದು ಆತ್ಮಹತ್ಯೆ ಮಾಡಿಕೊಂಡ ಪ್ರಸನ್ನ ಮೃತದೇಹವನ್ನು ಪಿರಿಯಾಪಟ್ಟಣ ಸರ್ಕಾರಿ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗೆ ಒಳಪಡಿಸಿದ್ದಾರೆ. ಇದನ್ನೂ ಓದಿ: ಅಂತರ್ಜಾತಿ ಪ್ರೇಮ ವಿವಾಹವಾಗಿದ್ದಕ್ಕೆ ಯುವಕನ ಕಡೆಯವರ ಆಟೋಗೆ ಬೆಂಕಿ ಹಚ್ಚಿದ ಹುಡುಗಿ ಕಡೆಯವರು

  • ಹಾಲಿನ ಡೈರಿ ರಾಜಕೀಯ – ಪಶು ಸಂಗೋಪನಾ ಸಚಿವರ ಸ್ವಕ್ಷೇತ್ರದಲ್ಲೇ ಹಾಲು ಚರಂಡಿ ಪಾಲು

    ಹಾಲಿನ ಡೈರಿ ರಾಜಕೀಯ – ಪಶು ಸಂಗೋಪನಾ ಸಚಿವರ ಸ್ವಕ್ಷೇತ್ರದಲ್ಲೇ ಹಾಲು ಚರಂಡಿ ಪಾಲು

    ಮೈಸೂರು: ಬಣ ರಾಜಕೀಯದಿಂದಾಗಿ ಪಶುಸಂಗೋಪನಾ ಸಚಿವರ ತವರಲ್ಲೇ ಹಾಲು (Milk) ಚರಂಡಿ ಪಾಲಾಗಿರುವ ಘಟನೆ ಪಿರಿಯಾಪಟ್ಟಣದ (Piriyapatna) ಚಿಟ್ಟೇನಹಳ್ಳಿಯಲ್ಲಿ ನಡೆದಿದೆ. ಹಾಲು ತೆಗೆದುಕೊಳ್ಳುವ ವಿಚಾರದಲ್ಲಿ ರಾಜಕೀಯ ಮಾಡಿರುವುದರಿಂದ ಹಾಲನ್ನು ಗ್ರಾಮಸ್ಥರು ಚರಂಡಿಗೆ ಸುರಿದಿದ್ದಾರೆ.

    ಗ್ರಾಮಸ್ಥರಿಂದ ಡೈರಿಯ ಕಾರ್ಯದರ್ಶಿ ಹಾಲು ಪಡೆಯುತ್ತಿಲ್ಲ. ಪಕ್ಕದ ಬೇರೆ ಡೈರಿಗೆ ಹೋಗಿ ಹಾಲು ಹಾಕುವಂತೆ ತಾಕೀತು ಮಾಡಿದ ಕಾರಣ ದಿಕ್ಕು ತೋಚದೆ ಗ್ರಾಮಸ್ಥರು ಹಾಲನ್ನು ಚರಂಡಿಗೆ ಸುರಿದಿದ್ದಾರೆ. ಈ ವೇಳೆ ಪಶು ಸಂಗೋಪನಾ ಸಚಿವ ವೆಂಕಟೇಶ್ ಅವರ ವಿರುದ್ಧ ಗ್ರಾಮಸ್ಥರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ನಮ್ಮ ಮೆಟ್ರೋ ಪ್ರಯಾಣಿಕರಿಗೆ ಸಿಹಿ ಸುದ್ದಿ – ಸೂಕ್ತ ಸಮಯದ ಆಟೋ ಸೇವೆಗೆ ‘ಮೆಟ್ರೋ ಮಿತ್ರ’

    ಈವರೆಗೂ ಗ್ರಾಮದಲ್ಲೇ ಹಾಲು ಸ್ವೀಕಾರ ಮಾಡುತ್ತಿದ್ದ ಕಾರ್ಯದರ್ಶಿ ಸಚಿವ ವೆಂಕಟೇಶ್ (K. Venkatesh) ಅವರ ಕುಮ್ಮಕ್ಕಿನಿಂದ ಹಾಲು ಪಡೆಯದೆ ಮುಖ್ಯ ರಸ್ತೆ ದಾಟಿ ಮತ್ತೊಂದು ಬಿಎಂಸಿ ಕೇಂದ್ರಕ್ಕೆ ಹಾಲು ಹಾಕುವಂತೆ ತಾಕೀತು ಮಾಡುತ್ತಿದ್ದಾರೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ಮತ್ತೊಂದು ಕೇಂದ್ರಕ್ಕೆ ಹಾಲು ಕೊಂಡೊಯ್ಯಲು ಗ್ರಾಮಸ್ಥರು ವಿರೋಧ ವ್ಯಕ್ತಪಡಿಸಿದ್ದಾರೆ. ಮುಖ್ಯ ರಸ್ತೆ ದಾಟಿ ಹಾಲು ಹಾಕಲು ಸಮಸ್ಯೆಯಾಗುತ್ತದೆ. ರಸ್ತೆ ದಾಟುವ ವೇಳೆ ಅಪಘಾತವಾಗಿದೆ. ಇದರಿಂದ ಒಂದೇ ಡೈರಿಯಲ್ಲಿ ಹಾಲು ಹಾಕಿಸಿಕೊಳ್ಳಬೇಕು ಎಂದು ರೈತರು ಮನವಿ ಮಾಡಿದ್ದಾರೆ. ಇದನ್ನೂ ಓದಿ: KRSನಿಂದ 7ನೇ ದಿನವೂ ತಮಿಳುನಾಡಿಗೆ ನೀರು – ಮಂಡ್ಯದಲ್ಲಿ ಮುಂದುವರಿದ ಪ್ರತಿಭಟನೆಗಳು

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಚುನಾವಣಾ ಬೆಟ್ಟಿಂಗ್‍: 1 ಎಕರೆ 37 ಗುಂಟೆ ಜಮೀನು ಮಾರಾಟ ಮಾಡಲು ಮುಂದಾದ ಕೈ ಮುಖಂಡ!

    ಚುನಾವಣಾ ಬೆಟ್ಟಿಂಗ್‍: 1 ಎಕರೆ 37 ಗುಂಟೆ ಜಮೀನು ಮಾರಾಟ ಮಾಡಲು ಮುಂದಾದ ಕೈ ಮುಖಂಡ!

    ಮೈಸೂರು: ಕರ್ನಾಟಕ ವಿಧಾನಸಭಾ ಚುನಾವಣೆ (Karnataka Assembly Election 2023) ಯ ಫಲಿತಾಂಶ ಶನಿವಾರ ಹೊರಬೀಳುತ್ತಿದ್ದು, ಇದೀಗ ರಾಜ್ಯದಲ್ಲಿ ಬೆಟ್ಟಿಂಗ್ ದಂಧೆ ಆರಂಭವಾಗಿದೆ. ಅಂತೆಯೇ ವ್ಯಕ್ತಿಯೊಬ್ಬರು ಬೆಟ್ಟಿಂಗ್‍ಗೆ ತನ್ನ ಜಮೀನನ್ನೇ ಮಾರಾಟ ಮಾಡಲು ಮುಂದಾಗಿರುವ ಪ್ರಸಂಗವೊಂದು ಮೈಸೂರಿನಲ್ಲಿ ನಡೆದಿದೆ.

    ಹೌದು. ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ಹಾರನಹಳ್ಳಿ ಗ್ರಾಮದ ಯೋಗೇಶ್ ಗೌಡ (Yogesh Gowda Betting) ಜಮೀನು ಮಾರಲು ಮುಂದಾದ ಕಾಂಗ್ರೆಸ್ (Congress) ಮುಖಂಡ. ಪಿರಿಯಾಪಟ್ಟಣ ಕ್ಷೇತ್ರದಲ್ಲಿ ಕೈ ಅಭ್ಯರ್ಥಿ ಕೆ.ವೆಂಕಟೇಶ್ (K Venkatesh) ಹಾಗೂ ಜೆಡಿಎಸ್ (JDS) ಅಭ್ಯರ್ಥಿ ಕೆ.ಮಹದೇವ್ ( K Mahadev) ನಡುವೆ ಜಿದ್ದಾಜಿದ್ದಿನ ಪೈಪೋಟಿ ನಡೆದಿದೆ.

    ಈ ಹಿನ್ನೆಲೆಯಲ್ಲಿ ಪಿರಿಯಾಪಟ್ಟಣ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಗೆಲ್ತಾರೆಂದು 1 ಎಕರೆ 37 ಗುಂಟೆ ಜಮೀನು ಬೆಟ್ಟಿಂಗ್ ನಡೆದಿದೆ. ಸದ್ಯ ಯೋಗೇಶ್ ಗೌಡ ಮಾತನಾಡಿರುವ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಇದನ್ನೂ ಓದಿ: ಸಿಂಗಾಪುರ್ ಪಾಲಿಟಿಕ್ಸ್ ಅಸಲಿ ಆಟ ಶುರುನಾ?

     ವೀಡಿಯೋದಲ್ಲಿ ಏನಿದೆ..?: ಪಿರಿಯಾಪಟ್ಟಣ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಗೆಲ್ತಾರೆಂದು ಹಾರನಹಳ್ಳಿ ಗ್ರಾಮದ ಯೋಗೇಶ್ ಗೌಡನಾದ ನಾನು 1 ಎಕರೆ 37 ಗುಂಟೆ ಬೆಟ್‌ ಕಟ್ತೀನಿ. ಯಾರದ್ರೂ ತಯಾರಿದ್ದರೆ ಬರಬಹುದು. ಅಗ್ರಿಮೆಂಟ್‌ ಮಾಡಿ ಕೊಡ್ತೀನಿ. ನನ್ನ ಹೆಂಡ್ತಿ ಮಕ್ಕಳ ಸಹಿ ಕೂಡ ಹಾಕಿ ಕೊಡುತ್ತೇನೆ ಎಂದು ವೀಡಿಯೋದಲ್ಲಿ ಹೇಳಿದ್ದಾರೆ.

  • ಮನೆ ಮನೆ ಸರ್ವೆಗೆ ಮೇ 31ರ ವರೆಗೆ ಗಡುವು – ಎಸ್.ಟಿ.ಸೋಮಶೇಖರ್

    ಮನೆ ಮನೆ ಸರ್ವೆಗೆ ಮೇ 31ರ ವರೆಗೆ ಗಡುವು – ಎಸ್.ಟಿ.ಸೋಮಶೇಖರ್

    – ಯಾವ ಸಂದರ್ಭದಲ್ಲಾದರೂ ಭೇಟಿ ನೀಡುವೆ 
    – ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲನೆ

    ಮೈಸೂರು: ಪಿರಿಯಾಪಟ್ಟಣದ 4 ಹೋಬಳಿಗಳಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಾಗುವ ಸಾಧ್ಯತೆ ಇದೆ. ಹೀಗಾಗಿ ಆ 4 ಹೋಬಳಿಗಳು ಕೊರೊನಾ ಮುಕ್ತ ಹಳ್ಳಿಗಳಾಗಬೇಕು. ಮೇ 31ರೊಳಗಾಗಿ ಮನೆ ಮನೆ ಸರ್ವೆಯನ್ನು ಮಾಡಿ ಮುಗಿಸಬೇಕು. ಜೂ 1 ರಿಂದ ಯಾವಾಗಲಾದರೂ ಆ ಹೋಬಳಿಗಳಿಗೆ ಅನಿರೀಕ್ಷಿತವಾಗಿ ಭೇಟಿ ನೀಡಲಿರುವೆ ಎಂದು ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್‌ರವರು ಹೇಳಿದ್ದಾರೆ.

    ಭಾನುವಾರ ಪಿರಿಯಾಪಟ್ಟಣ ವಿಧಾನಸಭಾ ಕ್ಷೇತ್ರ, ಹುಣಸೂರು ವಿಧಾನ ಸಭಾ ಕ್ಷೇತ್ರದ ಆರೋಗ್ಯ ಕೇಂದ್ರಗಳಿಗೆ ಹಾಗೂ ಕೋವಿಡ್ ಕೇರ್ ಸೆಂಟರ್‍ಗಳಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಮಾತನಾಡಿದ ಅವರು, ಬೈಲುಕುಪ್ಪೆಯಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಾಗಿದ್ದು, ಅಲ್ಲಿನ ಜನರಿಂದ ಮತ್ತಷ್ಟು ಜನರಿಗೆ ಹರಡುವ ಸಂಭವವಿರುವುದರಿಂದ ಅದನ್ನು ಸಂಪೂರ್ಣ ಲಾಕ್ ಡೌನ್ ಮಾಡಬೇಕು. ಬೈಲುಕುಪ್ಪೆಗೆ ಹೊರಗಡೆಯಿಂದ ಯಾರು ಬರಬಾರದು. ಇಲ್ಲಿಂದ ಹೊರಗಡೆಗೆ ಯಾರು ಹೋಗಬಾರದು. ಅವರಿಗೆ ಎಲ್ಲಾ ವಸ್ತುಗಳು ಅಲ್ಲಿಯೇ ಸಿಗುವಂತೆ ಕಲ್ಪಿಸಿ ಎಂದು ಸೂಚಿಸಿದರು.

    ಮನೆಮನೆ ಸರ್ವೆಯನ್ನು ನಡೆಸಲು ಪಿಡಿಒಗಳಿಗೆ ಒಂದು ಗುರಿಯನ್ನು ನಿಗದಿಪಡಿಸಿ. ಅವರೂ ಸಹ ಹಳ್ಳಿಗಳಿಗೆ ಭೇಟಿ ನೀಡಿ ಪರಿಶೀಲಿಸಲಿ. ನಂಜನಗೂಡಿನ ಪಿಡಿಒಗಳಂತೆ ಕಾರ್ಯನಿರ್ವಹಿಸಲಿ ಎಂದರು.

    ವ್ಯಾಕ್ಸಿನೇಷನ್ ಹಾಗೂ ಔಷಧದ ಬಗ್ಗೆ ಚಿಂತಿಸುವ ಅಗತ್ಯವಿಲ್ಲ. 4 ಹೋಬಳಿಗಲ್ಲಿ ಶೇ.100ರಷ್ಟು ವ್ಯಾಕ್ಸಿನೇಷನ್ ಆಗಿರಬೇಕು. ಸಂಸದ ಪ್ರತಾಪ್ ಸಿಂಹ ಅವರು ಟಾಸ್ಕ್ ಫೋರ್ಸ್ ಅಧ್ಯಕ್ಷರಾದ ಮೇಲೆ ಔಷಧಿಗಾಗಲಿ, ಆಕ್ಸಿಜನ್ ಸಿಲಿಂಡರ್‌ಗಳಿಗಾಗಲಿ ಯಾವುದಕ್ಕೂ ಕೊರತೆ ಕಂಡು ಬಂದಿಲ್ಲ. ಇದರಿಂದ ಅವರು ಉತ್ತಮವಾಗಿ ಕೆಲಸ ಮಾಡುತ್ತಿದ್ದಾರೆ ಎಂದು ಹೇಳಿದರು.

    ಮನೆ ಮನೆ ಸರ್ವೆಯನ್ನು ನಡೆಸಲು ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತರನ್ನು ಬಳಸಿಕೊಳ್ಳಿ. ಅವರಿದ್ದರೆ ಸರ್ವೆಯನ್ನು ಆದಷ್ಟು ಬೇಗ ಮುಗಿಸಬಹುದು. ಅವರಿಗಾಗಿ ಫೇಸ್ ಶೀಲ್ಡ್ ಸೇರಿದಂತೆ ಕಿಟ್ ಗಳನ್ನು ಒದಗಿಸಲಾಗುತ್ತದೆ ಎಂದು ನುಡಿದರು.

    ಕೋವಿಡ್ ರೋಗಿಗಳು ಇರುವ ಕೇಂದ್ರಗಳಿಗೆ ತೆರಳಿ ಅಲ್ಲಿನ ಕುಂದು ಕೊರತೆಗಳನ್ನು ಆಲಿಸಿದರು. ಅವರಿಗೆ ಆರೋಗ್ಯದಲ್ಲಾಗಲಿ, ಆಹಾರದಲ್ಲಾಗಲಿ ಯಾವುದೇ ಸಮಸ್ಯೆಗಳು ಉಂಟಾಗದಂತೆ ನೋಡಿಕೊಳ್ಳಿ ಎಂದು ವೈದ್ಯಾಧಿಕಾರಿಗಳಿಗೆ ತಿಳಿಸಿದರು.

    ಇದೇ ಸಂದರ್ಭದಲ್ಲಿ ಸಂಸದ ಪ್ರತಾಪ್ ಸಿಂಹ, ಶಾಸಕ ಕೆ.ಮಹದೇವ್, ಹೆಚ್.ಪಿ.ಮಂಜುನಾಥ್, ಜಿಲ್ಲಾ ಪಂಚಾಯತಿಯ ಮುಖಕಾರ್ಯನಿರ್ವಾಣಾಧಿಕಾರಿ ಎ.ಎಂ.ಯೋಗೀಶ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ.ರಿಷ್ಯಂತ್, ತಹಶಿಲ್ದಾರ್ ಗಳಾದ ಬಸವರಾಜು ಚಂದ್ರಮೌಳಿ, ತಾಲ್ಲೂಕು ವೈದ್ಯಾಧಿಕಾರಿ ಶರತ್ ಬಾಬು, ಮುಖ್ಯ ವೈದ್ಯಾದಿಕಾರಿ ಡಾ.ಜೆ.ಶ್ರೀನಿವಾಸ್, ಡಾ.ದೇವಿಕ ಸೇರಿದಂತೆ ಇತರರು ಹಾಜರಿದ್ದರು.

  • ಬರೋಬ್ಬರಿ 6 ತಿಂಗಳ ನಂತ್ರ ಮಲೇಷ್ಯಾದಿಂದ ಹುಟ್ಟೂರಿಗೆ ಬಂತು ಯುವಕನ ಶವ!

    ಬರೋಬ್ಬರಿ 6 ತಿಂಗಳ ನಂತ್ರ ಮಲೇಷ್ಯಾದಿಂದ ಹುಟ್ಟೂರಿಗೆ ಬಂತು ಯುವಕನ ಶವ!

    ಮೈಸೂರು: ಸರಿಸುಮಾರು 6 ತಿಂಗಳ ಹಿಂದೆ ಮಲೇಷ್ಯಾದಲ್ಲಿ ಮೃತಪಟ್ಟ ಯುವಕನ ಮೃತದೇಹ ಇದೀಗ ಹುಟ್ಟೂರಿಗೆ ಬಂದಿದೆ.

    ಹೌದು. ಪಿರಿಯಾಪಟ್ಟಣದ ನಿವಾಸಿ ಸುಮಂತ್(22) ಮಲೇಷ್ಯಾದಲ್ಲಿ ಡಿಸೆಂಬರ್ ತಿಂಗಳಲ್ಲಿ ನಿಗೂಢವಾಗಿ ಮೃತಪಟ್ಟಿದ್ದನು. ಇದೀಗ ಆತನ ಮೃತದೇಹ ಆರು ತಿಂಗಳ ನಂತರ ತವರೂರಿಗೆ ಬಂದಿದ್ದು, ಕೊನೆಗೂ ಮಗನ ಅಂತ್ಯಕ್ರಿಯೆ ನೆರವೇರಿಸಿ ತಾಯಿ ಸಮಾಧಾನಪಟ್ಟುಕೊಂಡಿದ್ದಾರೆ.

    ಸುಮಂತ್ ಕೆಲಸಕ್ಕಾಗಿ ಮಲೇಷ್ಯಾಕ್ಕೆ ತೆರಳಿದ್ದನು. 35 ಸಾವಿರ ರೂ. ಸಂಬಳ ಕೊಡಿಸುವುದಾಗಿ ನಂಬಿಸಿ ಮಧ್ಯವರ್ತಿಯೊಬ್ಬ ಕರೆದೊಯ್ದಿದ್ದನು. ಆದರೆ ಆ ಬಳಿಕ ಕೇವಲ 18 ಸಾವಿರ ರೂ. ಕೆಲಸ ಕೊಡಿಸಿ ಮಧ್ಯವರ್ತಿ ವಂಚನೆ ಮಾಡಿದ್ದನು. ಇದರಿಂದ ಮನನೊಂದಿದ್ದ ಸುಮಂತ್, ವಾಪಸ್ ಬರುವುದಾಗಿ ತಾಯಿ ಬಳಿ ಹೇಳಿಕೊಂಡಿದ್ದ. ಅಷ್ಟರಲ್ಲೇ ಸುಮಂತ್ ಮೃತಪಟ್ಟಿರುವುದಾಗಿ ಆತನ ಸಹೋದ್ಯೋಗಿಗಳು ತಿಳಿಸಿದ್ದ.

    ಇತ್ತ ಮಗನ ಸಾವಿನ ಸುದ್ದಿ ಕೇಳುತ್ತಿದ್ದಂತೆಯೇ ಸುಮಂತ್ ಪೋಷಕರು ಸಾವಿನ ತನಿಖೆ ಹಾಗೂ ಶವ ತರಿಸಿಕೊಳ್ಳಲು ಸಂಸದ ಪ್ರತಾಪ್‍ಸಿಂಹಗೆ ಮನವಿ ಮಾಡಿದ್ದರು. ಅಂತೆಯೇ ಸಂಸದರು ಭಾರತದ ರಾಯಭಾರಿ ಕಚೇರಿಗೆ ಮಾಹಿತಿ ಕೂಡ ನೀಡಿದ್ದರು. ಆದರೆ ಕೊರೊನಾ ಲಾಕ್‍ಡೌನ್ ಹಿನ್ನೆಲೆಯಲ್ಲಿ ಸುಮಂತ್ ಮೃತದೇಹ ಆರು ತಿಂಗಳ ಬಳಿಕ ತಡವಾಗಿ ಆಗಮಿಸಿದೆ.

  • ಬಜ್ಜಿ ವಿಚಾರಕ್ಕೆ ಹಲ್ಲೆ: ಆಸ್ಪತ್ರೆ ಸೇರಿದವನು ಹೆಣವಾಗಿ ಬಂದ

    ಬಜ್ಜಿ ವಿಚಾರಕ್ಕೆ ಹಲ್ಲೆ: ಆಸ್ಪತ್ರೆ ಸೇರಿದವನು ಹೆಣವಾಗಿ ಬಂದ

    ಮಡಿಕೇರಿ: ಬಜ್ಜಿ ವಿಚಾರಕ್ಕೆ ಹಲ್ಲೆಗೆ ಒಳಗಾಗಿ ಆಸ್ಪತ್ರೆಗೆ ಸೇರಿದ್ದ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಕೊಡಗು ಜಿಲ್ಲೆಯ ಕುಶಾಲನಗರ ಸಮೀಪದ ಕೊಪ್ಪ ಗ್ರಾಮದಲ್ಲಿ ನಡೆದಿದೆ.

    ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ಕೊಪ್ಪ ಗ್ರಾಮದ ಮಹದೇವ ನಾಯಕ(65) ಮೃತ ದುರ್ದೈವಿ. ಅದೇ ಗ್ರಾಮದ ಬಾರ್ ನಲ್ಲಿ ಡಿಸೆಂಬರ್ 6ರಂದು ಮಹದೇವ ಮೇಲೆ ಹಲ್ಲೆ ಆಗಿತ್ತು. ತಕ್ಷಣವೇ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಮೃತಪಟ್ಟಿದ್ದಾರೆ.

    ಕೊಪ್ಪ ಗ್ರಾಮದ ಮಹದೇವ ಡಿಸೆಂಬರ್ 6ರಂದು ಕಂಠಪೂರ್ತಿ ಕುಡಿದಿದ್ದರು. ಎಣ್ಣೆ ಹೊಡೆದ ಮಹದೇವ ಅವರಿಗೆ ಬಾಯಿ ಚಪ್ಪರಿಸುವುದಕ್ಕೆ ಏನಾದರೂ ಬೇಕು ಅನಿಸಿತ್ತು. ಹೀಗಾಗಿ ಬಾರ್ ಎದುರಿಗಿದ್ದ ಕ್ಯಾಂಟಿನ್‍ಗೆ ಹೋಗಿ ಮೆಣಸಿನಕಾಯಿ ಬಜ್ಜಿ ಕೇಳಿದ್ದಾರೆ. ಹಣ ಇಲ್ಲದೆ ಮೆಣಸಿನಕಾಯಿ ಬಜ್ಜಿ ಕೊಡುವುದಿಲ್ಲ ಅಂತ ಅಂಗಡಿ ಮಾಲೀಕರು ಹೇಳಿದ್ದಕ್ಕೆ ಜಗಳಮಾಡಿಕೊಂಡಿದ್ದರು.

    ಮಹದೇವ ಜಗಳ ಆರಂಭಿಸುತ್ತಿದ್ದಂತೆ ಸ್ಥಳಕ್ಕೆ ಬಂದ ಇಬ್ಬರು ಆತನಿಗೆ ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಬಜ್ಜಿ ಅಂಗಡಿಯ ಮಹಿಳೆಯ ಸ್ಟೀಲ್ ಜಗ್‍ನಿಂದ ಮಹದೇವಗೆ ಹೊಡೆದರೆ, ಉಳಿದ ಕೆಲವರು ಎದೆಗೆ ಗುದ್ದಿದ್ದಾರೆ. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ಸಂತೋಷ್ ಮತ್ತು ಶಿವಕುಮಾರ್ ಪಕ್ಕಕ್ಕೆ ಎಳೆದೊಯ್ದು ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಈ ದೃಶ್ಯವು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

    ಗಂಭೀರವಾಗಿ ಗಾಯಗೊಂಡಿದ್ದ ಮಹದೇವ ಅವರನ್ನು ಆಟೋದಲ್ಲಿ ಮನೆಗೆ ಕಳಿಸಿದ್ದಾರೆ. ತಕ್ಷಣವೇ ಕುಟುಂಬಸ್ಥರು ಅವರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮಹದೇವ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡ ಬೈಲುಕುಪ್ಪೆ ಪೊಲೀಸರು ಆರೋಪಿಗಳಾದ ಶಿವಕುಮಾರ್ ಮತ್ತು ಸಂತೋಷನನ್ನು ಬಂಧಿಸಿದ್ದಾರೆ.