Tag: pistols

  • 45 ಪಿಸ್ತೂಲ್‌ಗಳನ್ನು ಸಾಗಿಸುತ್ತಿದ್ದ ದಂಪತಿ ದೆಹಲಿ ಏರ್‌ಪೋರ್ಟ್‌ನಲ್ಲಿ ಅರೆಸ್ಟ್‌

    45 ಪಿಸ್ತೂಲ್‌ಗಳನ್ನು ಸಾಗಿಸುತ್ತಿದ್ದ ದಂಪತಿ ದೆಹಲಿ ಏರ್‌ಪೋರ್ಟ್‌ನಲ್ಲಿ ಅರೆಸ್ಟ್‌

    ನವದೆಹಲಿ: 45 ಪಿಸ್ತೂಲ್‌ಗಳನ್ನು ಒಯ್ಯುತ್ತಿದ್ದ ದಂಪತಿಯನ್ನು ನವದೆಹಲಿ ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪೊಲೀಸರು ಬಂಧಿಸಿದ್ದಾರೆ.

    ಈ ಪಿಸ್ತೂಲ್‌ಗಳು ಅಸಲಿಯೇ ಅಥವಾ ನಕಲಿಯೇ ಎಂಬುದನ್ನು ತಿಳಿಯಲು ತನಿಖೆ ನಡೆಸಲಾಗಿತ್ತು. ಆದರೆ ಇವು ಅಸಲಿ ಬಂದೂಕುಗಳು ಎಂದು ಭಯೋತ್ಪಾದನಾ ನಿಗ್ರಹ ಘಟಕದ ರಾಷ್ಟ್ರೀಯ ಭದ್ರತಾ ಸಿಬ್ಬಂದಿ (ಎನ್‌ಎಸ್‌ಜಿ) ವರದಿ ಮಾಡಿದ್ದಾರೆ. ಇದನ್ನೂ ಓದಿ: 18 ವರ್ಷ ಮೇಲ್ಪಟ್ಟವರಿಗೆ ಕೋವಿಡ್‌ ಬೂಸ್ಟರ್‌ ಡೋಸ್‌ ಉಚಿತ: ಕೇಂದ್ರ

    ಜಗಜಿತ್‌ ಸಿಂಗ್‌ ಮತ್ತು ಜಸ್ವಿಂದರ್‌ ಕೌರ್‌ ದಂಪತಿಯನ್ನು ಪೊಲೀಸರು ಬಂಧಿಸಿದ್ದು, ಹೆಚ್ಚಿನ ವಿಚಾರಣೆಗೆ ಒಳಪಡಿಸಿದ್ದಾರೆ. ಇವರು ಜುಲೈ 10 ರಂದು ವಿಯೆಟ್ನಾಂನಿಂದ ಭಾರತಕ್ಕೆ ಮರಳಿದ್ದರು. ಜಗಜಿತ್ ಸಿಂಗ್ ಎರಡು ಬ್ಯಾಗ್‌ಗಳಲ್ಲಿ ಪಿಸ್ತೂಲ್‌ಗಳನ್ನು ಇಟ್ಟುಕೊಂಡಿದ್ದ.

    ಫ್ರಾನ್ಸ್‌ನ ಪ್ಯಾರಿಸ್‌ನಿಂದ ಭಾರತಕ್ಕೆ ಬಂದಿಳಿದ ನಂತರ ಮಂಜಿತ್ ಸಿಂಗ್ ಎಂಬಾತ ವಿಯೆಟ್ನಾಂನಲ್ಲಿರುವ ತನ್ನ ಸಹೋದರ ಜಗಜಿತ್ ಸಿಂಗ್‌ಗೆ ಈ ಬ್ಯಾಗ್‌ಗಳನ್ನು ನೀಡಿದ್ದ ಎಂಬುದು ವಿಚಾರಣೆಯಿಂದ ತಿಳಿದುಬಂದಿದೆ. ಇದನ್ನೂ ಓದಿ: ಮದುವೆಯಾದ 3 ದಿನದವರೆಗೆ ಈ ದೇಶದಲ್ಲಿ ವಧು, ವರ ಟಾಯ್ಲೆಟ್‍ಗೆ ಹೋಗುವಂತಿಲ್ಲ!

    ಪಿಸ್ತೂಲ್‌ಗಳ ಒಟ್ಟು ಮೌಲ್ಯ 22.50 ಲಕ್ಷ ರೂ. ಎಂದು ಅಂದಾಜಿಸಲಾಗಿದೆ. ಈ ಹಿಂದೆಯೂ 25 ಪಿಸ್ತೂಲ್‌ಗಳನ್ನು ಭಾರತಕ್ಕೆ ತಂದಿರುವುದಾಗಿ ಇಬ್ಬರೂ ಆರೋಪಿಗಳು ಒಪ್ಪಿಕೊಂಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಹಾಡಹಗಲೇ ಬಸ್ ನಿಲ್ದಾಣದಲ್ಲಿ ಸಾರ್ವಜನಿಕರಿಗೆ ಪಿಸ್ತೂಲ್ ತೋರಿಸಿ ವ್ಯಕ್ತಿಯ ಕಿಡ್ನಾಪ್

    ಹಾಡಹಗಲೇ ಬಸ್ ನಿಲ್ದಾಣದಲ್ಲಿ ಸಾರ್ವಜನಿಕರಿಗೆ ಪಿಸ್ತೂಲ್ ತೋರಿಸಿ ವ್ಯಕ್ತಿಯ ಕಿಡ್ನಾಪ್

    ರಾಯಚೂರು: ಹಾಡಹಗಲೇ ಸ್ನೇಹಿತರಂತೆ ವ್ಯಕ್ತಿಯೊಬ್ಬರನ್ನು ಮಾತನಾಡಿದ ದುಷ್ಕರ್ಮಿಗಳು ಪಿಸ್ತೂಲ್ ತೋರಿಸಿ ಅಪಹರಣ ಮಾಡಿರುವ ಘಟನೆ ಜಿಲ್ಲೆಯ ಲಿಂಗಸುಗೂರು ಬಸ್ ನಿಲ್ದಾಣದ ಬಳಿ ನಡೆದಿದೆ.

    ಎಂಎಚ್ 14, 3566 ನಂಬರ್ ಕಾರಿನಲ್ಲಿ ಬಂದ ಕೆಲ ದುಷ್ಕರ್ಮಿಗಳು ವ್ಯಕ್ತಿಯೊಬ್ಬರನ್ನು ಸ್ನೇಹಿತರಂತೆ ಮಾತನಾಡಿಸಿದ್ದಾರೆ. ಆ ಬಳಿಕ ಆತನ ಹೆಗಲ ಮೇಲೆ ಕೈ ಹಾಕಿ ಕಾರಿನ ಬಳಿ ಎಳೆದುಕೊಂಡು ಹೋಗಲು ಪ್ರಯತ್ನಿಸಿದ್ದಾರೆ. ಈ ಹಂತದಲ್ಲಿ ದುಷ್ಕರ್ಮಿಗಳ ಸಂಚು ತಿಳಿಯುತ್ತಿದಂತೆ ವ್ಯಕ್ತಿ ರಕ್ಷಣೆಗೆ ಕೂಗಿಕೊಂಡಿದ್ದ.

    ವ್ಯಕ್ತಿಯನ್ನು ಬಲವಂತವಾಗಿ ಕರೆದುಕೊಂಡು ಹೋಗಲು ಯತ್ನಿಸುತ್ತಿರುವುದನ್ನು ಕಂಡ ಕೆಲ ಸಾರ್ವಜನಿಕರು ಕೂಡಲೇ ರಕ್ಷಣೆಗೆ ಮುಂದಾಗಿದ್ದರು. ಆದರೆ ದುಷ್ಕರ್ಮಿಗಳ ಗುಂಪಿನಲ್ಲಿದ್ದ ಮತ್ತೊಬ್ಬ ತನ್ನ ಬಳಿ ಇದ್ದ ಪಿಸ್ತೂಲ್ ತೋರಿಸಿ ಸಾರ್ವಜನಿಕರನ್ನು ಹೆದರಿಸಿದ್ದ. ಪಿಸ್ತೂಲ್ ಕಂಡ ಸಾರ್ವಜನಿಕರು ಏನು ಮಾಡಲಾಗದೆ ಕೈಕಟ್ಟಿ ನಿಲ್ಲುವ ಪರಿಸ್ಥಿತಿ ಎದುರಾಗಿತ್ತು.

    ಇತ್ತ ವ್ಯಕ್ತಿ ಕಾರನ್ನು ಹತ್ತಲು ನಿರಾಕರಿಸಿ ಸ್ಥಳದಲ್ಲಿ ರಂಪಾಟ ನಡೆಸಿದ್ದ. ಆದರೂ ಆತನನ್ನು ಬಿಡದ ದುಷ್ಕರ್ಮಿಗಳು ಕಾರಿಗೆ ಬಲವಂತವಾಗಿ ಎತ್ತಿಹಾಕಿ ಸ್ಥಳದಿಂದ ಕೆಲವೇ ನಿಮಿಷಗಳಲ್ಲಿ ಪರಾರಿಯಾಗಿದ್ದಾರೆ. ಈ ಎಲ್ಲಾ ದೃಶ್ಯಗಳು ಸ್ಥಳದಲ್ಲಿದ್ದ ಸಿಸಿಟಿವಿ ದೃಶ್ಯದಲ್ಲಿ ಸೆರೆಯಾಗಿದೆ.

    ಅಪಹರಣವಾದ ವ್ಯಕ್ತಿ ಹಾಗೂ ದುಷ್ಕರ್ಮಿಗಳ ಯಾವುದೇ ಮಾಹಿತಿ ಇದುವರೆಗೂ ಲಭಿಸಿಲ್ಲ. ಸದ್ಯ ಸಿಸಿಟಿವಿ ದೃಶ್ಯಗಳ ಆಧಾರದಲ್ಲಿ ಪೊಲೀಸರು ಸ್ವಯಂ ದೂರು ದಾಖಲಿಸಿಕೊಂಡು ಪ್ರಕರಣದ ತನಿಖೆ ಕೈಗೆತ್ತಿಕೊಂಡಿದ್ದಾರೆ. ಸ್ಥಳೀಯರು ಪೊಲೀಸರಿಗೆ ನೀಡಿದ ಮಾಹಿತಿ ಪ್ರಕಾರ ಹಣಕಾಸಿನ ವಿಚಾರದಲ್ಲಿ ಅಪಹರಣವಾದ ವ್ಯಕ್ತಿ ಹಾಗೂ ದುಷ್ಕರ್ಮಿಗಳ ನಡುವೆ ಮಾತುಕತೆ ನಡೆಸುತ್ತಿದ್ದರು ಎಂದು ತಿಳಿಸಿದ್ದಾರೆ.

  • ನಿವೃತ್ತ ಕರ್ನಲ್ ಮನೆ ಮೇಲೆ ಡಿಆರ್‍ಐ ದಾಳಿ: ಸಿಕ್ಕಿರುವ ವಸ್ತುಗಳನ್ನು ನೋಡಿದ್ರೆ ಶಾಕ್ ಆಗುತ್ತೆ

    ನಿವೃತ್ತ ಕರ್ನಲ್ ಮನೆ ಮೇಲೆ ಡಿಆರ್‍ಐ ದಾಳಿ: ಸಿಕ್ಕಿರುವ ವಸ್ತುಗಳನ್ನು ನೋಡಿದ್ರೆ ಶಾಕ್ ಆಗುತ್ತೆ

    ಮೀರತ್: ನಿವೃತ್ತ ಕರ್ನಲ್ ಮನೆಗೆ ಕಂದಾಯ ಗುಪ್ತಚರ ಮಹಾ ನಿರ್ದೇಶನಾಲಯ(ಡಿಆರ್‍ಐ) ದಾಳಿ ನಡೆಸಿ ಭಾರೀ ಪ್ರಮಾಣದ ಆಯುಧಗಳನ್ನು ವಶಪಡಿಸಿಕೊಂಡಿದೆ.

    ಶನಿವಾರ ಉತ್ತರಪ್ರದೇಶದ ಮೀರತ್ ನಲ್ಲಿರುವ ನಿವೃತ್ತ ಕರ್ನಲ್ ದೇವೇಂದ್ರ ಸಿಂಗ್ ನಿವಾಸದ ಮೇಲೆ ಡಿಆರ್‍ಐ ಅಧಿಕಾರಿಗಳು ದಾಳಿ ನಡೆಸಿದ್ದರು. ಈ ದಾಳಿ ವೇಳೆ 40 ರೈಫಲ್, 50 ಸಾವಿರ ಮದ್ದುಗುಂಡುಗಳು, ಪಿಸ್ತೂಲ್, 1 ಕೋಟಿ ರೂ. ನಗದು ಹಣ ಸಿಕ್ಕಿದೆ.

    16 ಗಂಟೆಗಳ ಪರಿಶೀಲನೆಯಲ್ಲಿ ಕಂಟೈನರ್‍ನಲ್ಲಿ ತುಂಬಿದ್ದ 117 ಕೆಜಿ ಮಾಂಸ, ಪ್ರಾಣಿಗಳ ತಲೆಬುರಡೆಗಳು, ಕೊಂಬುಗಳು, ಚರ್ಮಗಳು ಸಿಕ್ಕಿವೆ.

    ಬೆಳಗ್ಗೆ ದಾಳಿ ನಡೆಸಿದ್ದು, ಈ ವೇಳೆ ವಿದೇಶಿ ರೈಫಲ್ ಗಳು ಸಿಕ್ಕಿದೆ. ಈ ರೈಫಲ್‍ಗಳಿಗೆ ಯಾವುದೇ ಲೈಸನ್ಸ್ ಇಲ್ಲ. ಇದೇ ವೇಳೆ ಮಗನಾಗಿರುವ ರಾಷ್ಟ್ರಮಟ್ಟದ ಶೂಟರ್ ಪ್ರಶಾಂತ್ ಬಿಶ್ನೋಯಿ ಬಗ್ಗೆ ವಿಚಾರಿಸಿದ್ದು, ದೇವೇಂದ್ರ ಸಿಂಗ್ ಯಾವುದೇ ಮಾಹಿತಿ ನೀಡಿಲ್ಲ. ಆತ ದಾಳಿ ನಡೆದ ಬಳಿಕ ನಾಪತ್ತೆಯಾಗಿದ್ದಾನೆ ಎಂದು ಅಧಿಕಾರಿ ಮನೋಜ್ ಕುಮಾರ್ ತಿಳಿಸಿದ್ದಾರೆ.

    ಇಲ್ಲಿಯವರೆಗೆ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಯಾರನ್ನು ಬಂಧಿಸಿಲ್ಲ. ದಾಳಿ ನಡೆಯುವ ಕೆಲವೇ ಕ್ಷಣಗಳ ಮೊದಲು ಪ್ರಶಾಂತ್ ಬಿಶ್ನೋಯಿ ಮನೆಯಿಂದ ನಾಪತ್ತೆಯಾಗಿದ್ದು, ಆತನ ಪತ್ತೆಗೆ ಪೊಲೀಸರು ಶೋಧ ಕಾರ್ಯ ಆರಂಭಿಸಿದ್ದಾರೆ.