Tag: PLA

  • ‘ನಿಮ್ಮದಲ್ಲ, ಇದು ನಮ್ಮ ದೇಶದ ಜಾಗʼ- ಚೀನಿ ಸೈನಿಕರನ್ನು ಓಡಿಸಿದ ಭಾರತದ ಕುರಿಗಾಹಿಗಳು

    ‘ನಿಮ್ಮದಲ್ಲ, ಇದು ನಮ್ಮ ದೇಶದ ಜಾಗʼ- ಚೀನಿ ಸೈನಿಕರನ್ನು ಓಡಿಸಿದ ಭಾರತದ ಕುರಿಗಾಹಿಗಳು

    ಲಡಾಖ್‌: ಚೀನಾ ಗಡಿಯಲ್ಲಿ (China Border) ಭಾರತದ ಕುರಿಗಾಹಿಗಳು (Indian Shepherds) ಸೈನಿಕರ ರೀತಿ ಪಿಎಲ್‌ಎ ಪಡೆಗಳಿಗೆ ಎದುರೊಡ್ಡಿದ ಘಟನೆ ಲಡಾಖ್‌ನ (Ladakh) ಕಾಕ್‌ಜಂಗ್‌ನಲ್ಲಿ ನಡೆದಿದೆ.

    ಭಾರತದ ಗಡಿಭಾಗದಲ್ಲಿ ಕುರಿ ಮೇಯಿಸುವುದಕ್ಕೆ ಚೀನಾ ಸೈನಿಕರು ಆಕ್ಷೇಪ ವ್ಯಕ್ತಪಡಿಸಿದ್ದರು. ಆದರೆ ಕುರಿಗಾಯಿಗಳು ಮಾತ್ರ, ಇದು ನಮ್ಮ ದೇಶದ ಭೂಭಾಗ ಎಂದು ವಾದ ಮಂಡಿಸಿದ್ದರು.
    ಇದನ್ನೂ ಓದಿ: ಲಕ್ನೋದಿಂದ 6 ದಿನ ಕಾಲ್ನಡಿಗೆಯಲ್ಲಿ ತೆರಳಿ ರಾಮಲಲ್ಲಾಗೆ ನಮಿಸಿದ 350 ಮಂದಿ ಮುಸ್ಲಿಮರು!

    ಈ ಸಂದರ್ಭದಲ್ಲಿ ಮಾತಿನ ಚಕಮಕಿ ಕೂಡ ನಡೆದಿದೆ. ಒಂದು ಹಂತದಲ್ಲಿ ಕುರಿಗಾಹಿಗಳು ಕಲ್ಲನ್ನು ಎತ್ತಿಕೊಳ್ಳಲು ನೆಲಕ್ಕೆ ಕೈ ಹಾಕಿದ್ದಾರೆ. ಈ ವೇಳೆ ಸ್ಥಳಕ್ಕೆ ಭಾರತದ ಸೈನಿಕರು ಬಂದಿದ್ದಾರೆ.

    ಅದೃಷ್ಟವಶಾತ್ ಯಾವುದೇ ಘರ್ಷಣೆ ನಡೆಯಲ್ಲ. ಚೀನಿ ಸೈನಿಕರ ವಿರುದ್ಧ ಧೈರ್ಯ ತೋರಿದ ವಿಡಿಯೋ ಸಖತ್ ವೈರಲ್ ಆಗಿದೆ. ಇದನ್ನೂ ಓದಿ: ರಾಮಲಲ್ಲಾ ಪ್ರಾಣ ಪ್ರತಿಷ್ಠಾ ಸಮಾರಂಭದಲ್ಲಿ ಭಾಗವಹಿಸಿದ್ದ ಮುಖ್ಯ ಇಮಾಮ್ ವಿರುದ್ಧ ಫತ್ವಾ

     

  • ಚೀನಾದಲ್ಲಿ ಕ್ಷಿಪ್ರ ಕಾಂತ್ರಿ – ಗೃಹ ಬಂಧನದಲ್ಲಿ ಅಧ್ಯಕ್ಷ ಕ್ಸಿ ಜಿನ್‌ಪಿಂಗ್‌?

    ಚೀನಾದಲ್ಲಿ ಕ್ಷಿಪ್ರ ಕಾಂತ್ರಿ – ಗೃಹ ಬಂಧನದಲ್ಲಿ ಅಧ್ಯಕ್ಷ ಕ್ಸಿ ಜಿನ್‌ಪಿಂಗ್‌?

    ಬೀಜಿಂಗ್‌: ಚೀನಾದಲ್ಲಿ(China) ಸೇನೆಯ ಕ್ಷಿಪ್ರ ಕ್ರಾಂತಿ ನಡೆಯುತ್ತಿದ್ದು, ಅಧ್ಯಕ್ಷ ಕ್ಸಿ ಜಿನ್‍ಪಿಂಗ್(Xi Jinping ) ಅವರನ್ನು ಗೃಹ ಬಂಧನದಲ್ಲಿ(House Arrest) ಇರಿಸಲಾಗಿದೆ ಎಂಬ ವದಂತಿ ವ್ಯಾಪಕವಾಗಿ ಹರಿದಾಡುತ್ತಿದೆ.

    ರಾಜಧಾನಿ ಬೀಜಿಂಗ್(Beijing) ಈಗ ಚೀನಾದ ಪೀಪಲ್ಸ್‌ ಲಿಬರೇಷನ್‌ ಆರ್ಮಿ(PLA) ನಿಯಂತ್ರಣದಲ್ಲಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಅನೇಕ ವರದಿಗಳು ಹೇಳಿವೆ.

    ಬೀಜಿಂಗ್‍ನಲ್ಲಿ ಸುಮಾರು 6 ಸಾವಿರ ವಿಮಾನಗಳ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ. ರೈಲು ಸಂಚಾರವನ್ನು ಬಂದ್‌ ಮಾಡಲಾಗಿದೆ ಎಂದು ಹೇಳಲಾಗುತ್ತಿದೆ. ಇತರೆ ಭಾಗದಿಂದ ನಗರದ ಸಂಪರ್ಕ ಸಂಪೂರ್ಣ ಕಡಿತಗೊಂಡಿದೆ. ಸುಮಾರು 80 ಕಿಮೀ ಉದ್ದದ ಬೃಹತ್ ಸೇನಾ ತಂಡ ಬೀಜಿಂಗ್ ಕಡೆ ಸಾಗುತ್ತಿರುವುದು ವಿಡಿಯೋಗಳಲ್ಲಿ ಕಾಣಿಸಿದೆ. ಸೆ. 22ರಂದು ಪಿಎಲ್‍ಎ ಸೇನಾ ವಾಹನಗಳು ಬೀಜಿಂಗ್ ಕಡೆ ತೆರಳಿವೆ ಎಂದು ವರದಿಯಾಗಿದೆ.

    ಚೀನಾದಲ್ಲಿ ಏನು ನಡೆಯುತ್ತಿದೆ ಎನ್ನುವುದು ಯಾರಿಗೂ ತಿಳಿಯುತ್ತಿಲ್ಲ. ಚೀನಾ ಸರ್ಕಾರದಿಂದ ಇಲ್ಲಿಯವರೆಗೆ ಯಾವುದೇ ಅಧಿಕೃತ ಪ್ರಕಟಣೆ ತಿಳಿಸಿಲ್ಲ. ಸಮರ್‌ಖಂಡ್‌ನಲ್ಲಿ ನಡೆದ ಶಾಂಘೈ ಸಹಕಾರ ಸಂಘಟನೆಯ ಶೃಂಗಸಭೆಯಲ್ಲಿ ಜಿನ್‌ಪಿಂಗ್‌ ಭಾಗವಹಿಸಿದ್ದರು. ಆದರೆ ಇತರ ನಾಯಕರು ಭಾಗವಹಿಸಿದ್ದ ಔತಣಕೂಟದಲ್ಲಿ ಅವರು ಉಪಸ್ಥಿತರಿರಲಿಲ್ಲ. ಕೋವಿಡ್‌ 19 ಕಾರಣಕ್ಕೆ ಅವರು ಗೈರಾಗಿದ್ದಾರೆ ಎಂದು ತಿಳಿಸಲಾಗಿದ್ದರೂ, ಅದು ಎಲ್ಲರೂ ಒಪ್ಪಬಹುದಾದ ಕಾರಣವಾಗಿರಲಿಲ್ಲ. ಇದನ್ನೂ ಓದಿ: ಭಾರೀ ಭ್ರಷ್ಟಾಚಾರ – ಚೀನಾದ ಉನ್ನತ ಭದ್ರತಾ ಅಧಿಕಾರಿಗೆ ಮರಣದಂಡನೆ ಶಿಕ್ಷೆ

    ಬೀಜಿಂಗ್‌ನಲ್ಲಿ ಬುಧವಾರ ನಡೆದ ರಾಷ್ಟ್ರೀಯ ರಕ್ಷಣಾ ಮತ್ತು ಸೇನಾ ಸುಧಾರಣೆ ಕುರಿತ ಉನ್ನತ ಮಟ್ಟದ ಸಭೆಯಲ್ಲಿ ಕ್ಸಿ ಜಿನ್‌ಪಿಂಗ್ ಕೂಡ ಉಪಸ್ಥಿತರಿರಲಿಲ್ಲ ಎಂದು ಹೇಳಲಾಗುತ್ತಿದೆ. ಉಜ್ಬೇಕಿಸ್ತಾನ್‌ನಿಂದ ಬೀಜಿಂಗ್‌ಗೆ ಹಿಂತಿರುಗಿದ್ದರೂ, ಆರ್ಮಿ ಕಮಾಂಡರ್ ಲಿಯು ಝೆನ್ಲಿ ಮತ್ತು ಉತ್ತರ ಕಮಾಂಡ್‌ನ ಉಸ್ತುವಾರಿ ಜನರಲ್ ಲಿ ಕಿಯಾಮಿಂಗ್ ಅವರಂತಹ ಹಲವಾರು ಹಿರಿಯ ಮಿಲಿಟರಿ ನಾಯಕರು ಭಾಗವಹಿಸಿದ್ದ ಸಭೆಯಲ್ಲಿ ಅವರು ಭಾಗವಹಿಸಲಿಲ್ಲ.

    https://twitter.com/MonilParikh/status/1573668019343007744

    ದಂಗೆಯ ‘ಸುದ್ದಿ’ಯನ್ನು ಹೆಚ್ಚಾಗಿ ಚೀನಾದ ಹೊರಗೆ ವಾಸಿಸುವ ಚೀನಾದ ಆಡಳಿತ ವಿರೋಧಿ ಕಾರ್ಯಕರ್ತರು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಾರೆ ಮತ್ತು ನೇಪಾಳ ಮತ್ತು ತೈವಾನ್‌ನಿಂದ ಚೀನಾ ವಿರೋಧಿ ಟ್ವಿಟರ್ ಹ್ಯಾಂಡಲ್‌ಗಳು ಪೋಸ್ಟ್ ಮಾಡಿರುವುದು ಗಮನಾರ್ಹವಾಗಿದೆ.

    ವಿದೇಶದ ಮಾಧ್ಯಮಗಳಿಗೆ ನಿರ್ಬಂಧ, ಫೇಸ್‌ಬುಕ್‌, ಟ್ವಿಟ್ಟರ್‌, ಯೂ ಟ್ಯೂಬ್‌ಗಳಿಗೆ ಚೀನಾದಲ್ಲಿ ನಿರ್ಬಂಧ ಇರುವುದರಿಂದ ಖಚಿತವಾಗಿ ಅಲ್ಲಿ ಏನು ನಡೆಯುತ್ತಿದೆ ಎನ್ನುವುದು ಯಾರಿಗೂ ಸ್ಪಷ್ಟವಾಗಿ ತಿಳಿಯುತ್ತಿಲ್ಲ.ಕ್ಸಿ ಜಿನ್‌ಪಿಂಗ್‌ ಗೃಹ ಬಂಧನಲ್ಲಿ ಇದ್ದಾರಾ? ಇಲ್ಲವೋ ಎನ್ನುವುದು ಶೀಘ್ರವೇ ಬಹಿರಂಗವಾಗುವ ಸಾಧ್ಯತೆಯಿದೆ.

    Live Tv
    [brid partner=56869869 player=32851 video=960834 autoplay=true]

  • ಸ್ಫೋಟಕ ಆಡಿಯೋ ಲೀಕ್ – ತೈವಾನ್ ಮೇಲೆ ಆಕ್ರಮಣಕ್ಕೆ ಚೀನಾ ಯೋಜನೆ

    ಸ್ಫೋಟಕ ಆಡಿಯೋ ಲೀಕ್ – ತೈವಾನ್ ಮೇಲೆ ಆಕ್ರಮಣಕ್ಕೆ ಚೀನಾ ಯೋಜನೆ

    ಬೀಜಿಂಗ್: ಪೀಪಲ್ಸ್ ಲಿಬರೇಷನ್ ಆರ್ಮಿಯ(ಪಿಎಲ್‌ಎ) ಉನ್ನತ ರಹಸ್ಯ ಸಭೆಯ ಸ್ಫೋಟಕ ಆಡಿಯೋ ಸೋರಿಕೆಯಾಗಿದ್ದು, ಇದರಲ್ಲಿ ಚೀನಾ ತೈವಾನ್ ಮೇಲೆ ದಾಳಿ ನಡೆಸುವ ಬಗ್ಗೆ ಯೋಜನೆ ರೂಪಿಸಿರುವುದು ಬಹಿರಂಗವಾಗಿದೆ.

    1949ರಲ್ಲಿ ಪೀಪಲ್ಸ್ ರಿಪಬ್ಲಿಕ್ ಆಫ್ ಚೀನಾ ರಚನೆಯಾದ ಬಳಿಕ ಇದೇ ಮೊದಲ ಬಾರಿಗೆ ಮಿಲಿಟರಿ ಕಮಾಂಡ್‌ನ ಉನ್ನತ ರಹಸ್ಯ ಸಭೆಯ ರೆಕಾರ್ಡಿಂಗ್ ಸೋರಿಕೆಯಾಗಿರುವುದು ಎಂದು ವರದಿಯಾಗಿದೆ. ಸೋರಿಕೆಯಾಗಿರುವ ಆಡಿಯೋ ಕ್ಲಿಪ್ ಅಧಿಕೃತವಾಗಿದೆ ಎಂದು ತಜ್ಞರು ತಿಳಿಸಿದ್ದಾರೆ. ಇದನ್ನೂ ಓದಿ: ಇಬ್ಬರು ‘ಹೈಬ್ರೀಡ್’ ಉಗ್ರರ ಬಂಧನ- ಶಸ್ತ್ರಾಸ್ತ್ರಗಳು ವಶ

    ಮೇ 14ರಂದು ಚೀನಾದ ಕಮ್ಯುನಿಸ್ಟ್ ಪಾರ್ಟಿ ಮಿಲಿಟರಿಯೊಂದಿಗೆ ಸಭೆ ನಡೆಸಿತ್ತು. ಇದರ ಆಡಿಯೋ ರೆಕಾರ್ಡಿಂಗ್ ಅನ್ನು ಕಾರ್ಯಕರ್ತೆ ಜೆನ್ನಿಫರ್ ಝೆಂಗ್ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ. ಇದನ್ನೂ ಓದಿ: ಶ್ರೀಲಂಕಾ ಆರ್ಥಿಕ ಬಿಕ್ಕಟ್ಟು – ಭಾರತದಿಂದ ಅಗತ್ಯ ವಸ್ತುಗಳ ಪೂರೈಕೆ

    ಆಡಿಯೋದಲ್ಲಿ ಚೀನಾದ ಉನ್ನತ ಮಿಲಿಟರಿ ಜನರಲ್ ತೈವಾನ್ ಮೇಲೆ ಯುದ್ಧದ ಕಾರ್ಯತಂತ್ರ ರೂಪಿಸುವುದನ್ನು ಕೇಳಬಹುದು. ಆಡಿಯೋ ಕ್ಲಿಪ್ 57 ನಿಮಿಷಗಳದ್ದಾಗಿದ್ದು, ಚೀನಾದ ಉನ್ನತ ಜನರಲ್ ತೈವಾನ್‌ನಲ್ಲಿ ಯುದ್ಧ ಹೇಗೆ ನಡೆಸಬೇಕು ಹಾಗೂ ಹೇಗೆ ಸಾಗಬೇಕು ಎಂದು ಚರ್ಚಿಸಿದ್ದಾರೆ.

  • Galwan Clash ಚೀನಾದ ಸುಳ್ಳು ಬಯಲು – 38 ಪಿಎಲ್‌ಎ ಯೋಧರು ಸಾವು

    Galwan Clash ಚೀನಾದ ಸುಳ್ಳು ಬಯಲು – 38 ಪಿಎಲ್‌ಎ ಯೋಧರು ಸಾವು

    – ಭಾರತದ ಸೇನೆಗೆ ಹೆದರಿ ಪರಾರಿಯಾದ ಚೀನಿ ಸೈನಿಕರು
    – ರಾತ್ರಿ ವೇಳೆ ಗಲ್ವಾನ್‌ ನದಿಗೆ ಬಿದ್ದು ಸಾವು

    ನವದೆಹಲಿ: ಗಲ್ವಾನ್‌ ಕಣಿವೆಯಲ್ಲಿ ಭಾರತದೊಂದಿಗಿನ ಘರ್ಷಣೆಯ ವೇಳೆ ಚೀನಾ ಕಡೆಯಲ್ಲಿ ಭಾರೀ ಪ್ರಮಾಣದ ಸಾವು ನೋವು ಸಂಭವಿಸಿದೆ ಎಂದು ಆಸ್ಟ್ರೇಲಿಯಾದ ಪತ್ರಿಕೆಯೊಂದು ತನಿಖಾ ವರದಿ ಮಾಡಿದೆ.

    ಚೀನಾದಲ್ಲಿನ ಮೂಲಗಳನ್ನು ಆಧಾರಿಸಿ ಆಸ್ಟ್ರೇಲಿಯಾದ ದಿ ಕ್ಲಾಕ್ಸನ್‌ನ ಪತ್ರಿಕೆ, 2020ರ ಜೂನ್ 15-16 ರ ಘರ್ಷಣೆಯ ಆರಂಭದ ಸಮಯದಲ್ಲಿ ಭಾರತೀಯ ಸೇನೆಯಿಂದ ಪಾರಾಗಲು ಗಾಲ್ವಾನ್ ನದಿಯನ್ನು ರಾತ್ರಿ ದಾಟುವ ವೇಳೆ ಕನಿಷ್ಠ 38 ಚೀನಿ ಸೈನಿಕರು ಮುಳುಗಿ ಸಾವನ್ನಪ್ಪಿದ್ದಾರೆ ಎಂದು ಪ್ರಕಟಿಸಿದೆ.

    ಚೀನಾ ಬ್ಲಾಗರ್‌ಗಳು, ಚೀನಿ ನಾಗರಿಕರಿಂದ ಪಡೆದ ಮಾಹಿತಿಯನ್ನು ಆಧರಿಸಿ ಈ ಸುದ್ದಿ ಪ್ರಕಟಿಸಲಾಗಿದೆ. ಭದ್ರತಾ ಕಾರಣದಿಂದ ಚೀನಿ ಮೂಲಗಳ ಹೆಸರನ್ನು ಬಹಿರಂಗ ಪಡಿಸುವುದಿಲ್ಲ ಎಂದು ಪತ್ರಿಕೆ ಹೇಳಿದೆ. ಇದನ್ನೂ ಓದಿ: ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ – ಕಂಪನಿಗಳಿಗೆ ಬಿಸಿ ಮುಟ್ಟಿಸಿದ ಕೇಂದ್ರ

    ಘರ್ಷಣೆಯಲ್ಲಿ ಮಡಿದ ತನ್ನ ನಾಲ್ಕು ಸೈನಿಕರಿಗೆ ಫೆಬ್ರವರಿ 2021 ರಲ್ಲಿ ಚೀನಾ ಪದಕಗಳನ್ನು ಘೋಷಿಸಿತ್ತು. ಈ ಮೂಲಕ ಘಟನೆಯಲ್ಲಿ ನಮ್ಮ ಕಡೆಯಲ್ಲೂ ಸಾವು ನೋವು ಸಂಭವಿಸಿದೆ ಎನ್ನುವುದನ್ನು ಮೊದಲ ಬಾರಿಗೆ ಖಚಿತ ಪಡಿಸಿತ್ತು. ಹೀಗಿದ್ದರೂ ಅಧಿಕೃತವಾಗಿ ಚೀನಾ ವರದಿ ಮಾಡಿದ್ದಕ್ಕಿಂತ ಹೆಚ್ಚಿನ ಪ್ರಮಾಣದಲ್ಲಿ ಸಾವು ಸಂಭವಿಸಿದೆ ಎಂದು ವರದಿ ಹೇಳಿದೆ.

    ಅಂದು ಏನಾಯ್ತು?
    ವರದಿಯ ಪ್ರಕಾರ ಭಾರತೀಯ ಸೈನಿಕರು ಜೂನ್ 15ರ ರಾತ್ರಿ ಗಾಲ್ವಾನ್ ಕಣಿವೆಯ ಎಲ್‌ಎಸಿ(ವಾಸ್ತವಿಕ ಗಡಿ ರೇಖೆ) ಜಾಗಕ್ಕೆ ತೆರಳಿ ಚೀನಾ ಅಕ್ರಮವಾಗಿ ನಿರ್ಮಿಸಿದ್ದ ಟೆಂಟ್‌ ಕಿತ್ತು ಎಸೆದಿದ್ದಾರೆ. ಈ ವೇಳೆ ಚೀನಾದ ಕರ್ನಲ್ ಕಿ ಫಾಬಾವೊ ಮತ್ತು 150 ಚೀನೀ ಸೈನಿಕರು ಭಾರತೀಯ ಸೈನಿಕರೊಂದಿಗೆ ಸಮಸ್ಯೆಯನ್ನು ಚರ್ಚಿಸುವ ಬದಲು ಘರ್ಷಣೆಗೆ ಇಳಿದಿದ್ದಾರೆ. ಇದನ್ನೂ ಓದಿ: ಗಲ್ವಾನ್ ಘರ್ಷಣೆಯಲ್ಲಿ ಐವರು ಬಲಿ – ಕೊನೆಗೂ ಸತ್ಯ ಒಪ್ಪಿಕೊಂಡ ಚೀನಾ

    ಕರ್ನಲ್ ಫಾಬಾವೊ ದಾಳಿ ಮಾಡಿದ ಕೂಡಲೇ ಭಾರತೀಯ ಸೈನಿಕರು ಪಿಎಲ್‌ಎ ಯೋಧರನ್ನು ಮುತ್ತಿಗೆ ಹಾಕಿದ್ದಾರೆ. ಅನಿರೀಕ್ಷಿತ ಬೆಳವಣಿಗೆ ಕಂಡು ಬೆಟಾಲಿಯನ್ ಕಮಾಂಡರ್ ಚೆನ್ ಹಾಂಗ್‌ಜುನ್ ಮತ್ತು ಸೈನಿಕ ಚೆನ್ ಕ್ಸಿಯಾಂಗ್ರಾನ್ ಉಕ್ಕಿನ ಪೈಪ್‌ಗಳು, ಸ್ಟಿಕ್‌ಗಳು ಮತ್ತು ಕಲ್ಲುಗಳನ್ನು ಬಳಸಿ ಭಾರತೀಯ ಸೈನಿಕರೊಂದಿಗೆ ಘರ್ಷಣೆ ನಡೆಸಿದ್ದಾರೆ. ಭಾರತದ ಪ್ರತಿದಾಳಿಗೆ ಮೂವರು ಪಿಎಲ್‌ಎ ಸೈನಿಕರು ಮೃತಪಟ್ಟಿದ್ದನ್ನು ನೋಡಿ ಚೀನಿ ಸೈನಿಕರು ಭಯಗೊಂಡು ಸ್ಥಳದಿಂದ ಪರಾರಿಯಾಗಲು ಯತ್ನಿಸಿದ್ದಾರೆ.

    ಈ ಸಂದರ್ಭದಲ್ಲಿ ಪಿಎಲ್‌ಎ ಸೈನಿಕರಿಗೆ ವಾಟರ್‌ ಪ್ಯಾಂಟ್‌ ಧರಿಸಲು ಸಮಯವಿರಲಿಲ್ಲ. ಸೈನಿಕ ವಾಂಗ್‌ ನೇತೃತ್ವದಲ್ಲಿ ರಾತ್ರಿಯೇ ನದಿಯ ಹಿಮಾವೃತ ನೀರನ್ನು ದಾಟಲು ಪಿಎಲ್‌ಎ ಯೋಧರು ನಿರ್ಧರಿಸಿದ್ದಾರೆ. ಈ ವೇಳೆ ನದಿಯ ನೀರಿನ ಮಟ್ಟ ಏರಿತ್ತು. ಹೀಗಾಗಿ ಕೆಲವರು ದಾಟುವ ವೇಳೆ ನೀರಿನಲ್ಲಿ ಕೊಚ್ಚಿಹೋಗಿದ್ದರೆ ಕೆಲವರು ಮೇಲಿನಿಂದ ನದಿಗೆ ಬಿದ್ದು ಮೃತಪಟ್ಟಿದ್ದಾರೆ.

    ಆ ರಾತ್ರಿ ವಾಂಗ್ ಜೊತೆಗೆ ಕನಿಷ್ಠ 38 ಚೀನೀ ಸೈನಿಕರು ಕೊಚ್ಚಿಕೊಂಡು ಹೋಗಿ ಸಾವನ್ನಪ್ಪಿದ್ದಾರೆ ಎಂದು ಚೀನಾದ ಸಾಮಾಜಿಕ ಜಾಲತಾಣ ಖಾತೆ ವೈಬೋದಲ್ಲಿ ಹಲವು ಮಂದಿ ಹೇಳಿದ್ದಾರೆ ಎಂದು ವರದಿ ಉಲ್ಲೇಖಿಸಿದೆ.

    ನಿಜವಾಗಿ ಏನಾಯಿತು? ಚಕಮಕಿಗೆ ಕಾರಣವೇನು ಎಂಬುದರ ಕುರಿತು ಬಹಳಷ್ಟು ಸಂಗತಿಗಳನ್ನು ಬೀಜಿಂಗ್ ಮರೆಮಾಡಿದೆ. ಅಷ್ಟೇ ಅಲ್ಲದೇ ಚೀನಾ ಹಲವು ಕಟ್ಟು ಕಥೆಗಳನ್ನು ಪ್ರಕಟಿಸಿದೆ ಎಂದು ಪತ್ರಿಕೆ ಹೇಳಿದೆ.

    2020ರ ಜೂನ್‌ 16ರಂದೇ ಗ್ಲೋಬಲ್‌ ಟೈಮ್ಸ್‌ ಸಂಪಾದಕ ಹು ಕ್ಸಿಜಿನ್‌ ಚೀನಿ ಸೈನಿಕರು ಮೃತಪಟ್ಟ ವಿಚಾರವನ್ನು ದೃಢಪಡಿಸಿದ್ದರು. ನನಗೆ ತಿಳಿದ ಮಾಹಿತಿ ಪ್ರಕಾರ ಗಲ್ವಾನ್‌ ಕಣಿವೆಯಲ್ಲಿ ಘರ್ಷಣೆಯಲ್ಲಿ ಚೀನಾದ ಸೈನಿಕರು ಮೃತಪಟ್ಟಿದ್ದಾರೆ. ಹೀಗಾಗಿ ನಾನು ಭಾರತಕ್ಕೆ ಒಂದು ವಿಚಾರ ಹೇಳಲು ಇಚ್ಛಿಸುತ್ತೇನೆ. ಚೀನಾದ ಸಹನೆಯನ್ನು ದೌರ್ಬಲ್ಯ ಎಂದು ತಿಳಿಯಬೇಡಿ. ಭಾರತದ ಜೊತೆ ಘರ್ಷಣೆ ನಡೆಸಲು ಚೀನಾ ಬಯಸುತ್ತಿಲ್ಲ. ಆದರೆ ನಾವು ಯಾರಿಗೂ ಭಯ ಪಡುವುದಿಲ್ಲ ಎಂದು ಟ್ವೀಟ್‌ ಮಾಡಿದ್ದರು.

    ಲಡಾಖ್‌ ಗಡಿಯಲ್ಲಿ ಜೂನ್‌ 15 ರಂದು ನಡೆದ ಗರ್ಷಣೆಯಲ್ಲಿ ನಮ್ಮ 20 ಯೋಧರು ಹುತಾತ್ಮರಾಗಿದ್ದಾರೆ ಎಂದು ಭಾರತ ಹೇಳಿತ್ತು. ಈ ವೇಳೆ ಮಾಧ್ಯಮಗಳಿಗೆ ಬಿಡುಗಡೆ ಮಾಡಿದ್ದ ಹೇಳಿಕೆಯಲ್ಲಿ ಸೇನೆ ಚೀನಾ ಕಡೆಯಲ್ಲೂ ಅಪಾರ ಪ್ರಮಾಣದ ಸಾವು ನೋವು ಸಂಭವಿಸಿದೆ ಎಂದು ತಿಳಿಸಿತ್ತು. ಚೀನಾದ 43 ಯೋಧರು ಮೃತಪಟ್ಟಿದ್ದಾರೆ ಎಂದು ವರದಿಯಾಗಿತ್ತು. ಆದರೆ ಚೀನಾ ಅಧಿಕೃತವಾಗಿ ಎಷ್ಟು ಮಂದಿ ಮೃತಪಟ್ಟಿದ್ದಾರೆ ಎಂಬ ಸುದ್ದಿಯನ್ನು ಇಲ್ಲಿಯವರೆಗೆ ತಿಳಿಸಿಲ್ಲ.

  • ಭಾರತದ ಅನಿರೀಕ್ಷಿತ ನಡೆಯಿಂದ ಚೀನಾ ಆಕ್ರಮಣ ವಿಫಲ

    ಭಾರತದ ಅನಿರೀಕ್ಷಿತ ನಡೆಯಿಂದ ಚೀನಾ ಆಕ್ರಮಣ ವಿಫಲ

    – ಅಮೆರಿಕದ ನ್ಯೂಸ್‌ವೀಕ್‌ನಲ್ಲಿ ವರದಿ
    – ಅರ್ಧ ಶತಮಾನದಲ್ಲಿ ಮೊದಲ ಬಾರಿಗೆ ಭಾರತದ ಆಕ್ರಮಣಕಾರಿ ನೀತಿ

    ವಾಷಿಂಗ್ಟನ್: ಗಡಿಯಲ್ಲಿ ಭಾರತ ತೋರಿದ ಅನಿರೀಕ್ಷಿತ ನಡೆಯಿಂದ ಚೀನಾ ಆಕ್ರಮಣ ವಿಫಲವಾಗಿದೆ ಎಂದು ಅಮೆರಿಕದ ಪ್ರಮುಖ ನಿಯತಕಾಲಿಕೆ ನ್ಯೂಸ್‌ವೀಕ್‌ ಹೇಳಿದೆ.

    67 ವರ್ಷದ ಕ್ಸಿ ಜಿನ್‌ಪಿಂಗ್‌ ವಿಫಲವಾಗಿದ್ದಾರೆ. ಚೀನಾ ವಿಫಲವಾಗಿದ್ದಕ್ಕೆ ಕ್ಸಿ ಜಿನ್‌ಪಿಂಗ್‌ ವಿರುದ್ಧವೇ ಕಮ್ಯೂನಿಸ್ಟ್‌ ಪಕ್ಷದಲ್ಲಿ ಅಸಮಾಧಾನ ಎದ್ದಿದೆ ಎಂದು ವರದಿಯಾಗಿದೆ.

    ತನ್ನ ವಿರುದ್ಧ ಎದ್ದಿರುವ ಅಸಮಾಧಾನವನ್ನು ತಣಿಸಲು ಕ್ಸಿ ಜಿನ್‌ಪಿಂಗ್‌ ಮತ್ತೊಮ್ಮೆ ಭಾರತದ ಮೇಲೆ ಆಕ್ರಮಣ ಮಾಡಲು ಪಿಎಲ್‌ಎ ಸೈನಿಕರಿಗೆ ಸೂಚಿಸಬಹುದು ಎಂದು ಅದಾಜಿಸಿದೆ.

    ವಿಶೇಷವಾಗಿ ಗಲ್ವಾನ್‌ ಘರ್ಷಣೆಯನ್ನು ಪ್ರಸ್ತಾಪಿಸಿರುವ ನ್ಯೂಸ್‌ವೀಕ್‌, ಈ ಘರ್ಷಣೆಯಲ್ಲಿ 20 ಭಾರತೀಯ ಸೈನಿಕರು ಮೃತಪಟ್ಟಿದ್ದರೆ ಚೀನಾ ಕಡೆಯಲ್ಲೂ ಸಾವು ಸಂಭವಿಸಿದೆ. ಆದರೆ ಅಲ್ಲಿನ ಸರ್ಕಾರ ಯಾವುದೇ ಮಾಹಿತಿಯನ್ನು ಬಹಿರಂಗ ಪಡಿಸಿಲ್ಲ. ಆದರೆ ಚೀನಾದ 43 ಸೈನಿಕರು ಸಾವನ್ನಪ್ಪಿದ್ದಾರೆ ಎಂದು ಹೇಳಿದೆ.  ಇದನ್ನೂ ಓದಿ: ಭಾರತಕ್ಕೆ ಮೊದಲ ಪ್ರಾಶಸ್ತ್ಯ – ಚೀನಾಗೆ ಶಾಕ್‌ ನೀಡಿದ ಲಂಕಾ

    ಭಾರತ ಈ ರೀತಿಯ ಪ್ರತಿರೋಧ ತೋರುತ್ತದೆ ಎಂದು ಚೀನಾ ನಿರೀಕ್ಷೆ ಮಾಡಿರಲಿಲ್ಲ. ಅರ್ಧ ಶತಮಾನದಲ್ಲಿ ಮೊದಲ ಬಾರಿಗೆ ಭಾರತ ಚೀನಾ ವಿರುದ್ಧ ಆಕ್ರಮಣಕಾರಿ ನಡೆಯನ್ನು ಅನುಸರಿಸುತ್ತದೆ. ಕಳೆದ ತಿಂಗಳು ಗಡಿಯಲ್ಲಿನ ಆಯಕಟ್ಟಿನ ಸ್ಥಳಕ್ಕೆ ತೆರಳಲು ಚೀನಾ ಮುಂದಾಗಿತ್ತು. ಆದರೆ ಈ ಸ್ಥಳವನ್ನು ನಾವು ತಲುಪುವ ಮೊದಲು ಭಾರತದ ಸೈನಿಕರು ತಲುಪಿದ್ದನ್ನು ನೋಡಿ ಚೀನಿ ಸೈನಿಕರು ಆಶ್ಚರ್ಯಗೊಂಡಿದ್ದರು ಎಂದು ವರದಿಯಲ್ಲಿ ಹೇಳಿದೆ.

    ಯುದ್ಧದ ಇತಿಹಾಸ ನೋಡಿದರೆ ಚೀನಾ ಕೊನೆಯ ಬಾರಿ ಯುದ್ಧ ಮಾಡಿರುವುದು 1979ರಲ್ಲಿ. ವಿಯೆಟ್ನಾ ಯುದ್ಧದಲ್ಲಿ ಚೀನಾ ಸೋತಿದೆ. ಆದರೆ ಭಾರತ ಈಗ ಬದಲಾಗಿ ಆಕ್ರಮಣಕಾರಿ ನೀತಿ ಅನುಸರಿಸುತ್ತಿದ್ದು ದಿಟ್ಟ ಉತ್ತರ ನೀಡುತ್ತಿದೆ ಎಂದು ತಿಳಿಸಿದೆ.

  • ಭಾರತದ ಸೇನೆಯಿಂದ ಗುಂಡಿನ ದಾಳಿ, ಈ ಅಪಾಯಕಾರಿ ನಡೆಯನ್ನು ನಿಲ್ಲಿಸಿ – ಚೀನಾ ಆಗ್ರಹ

    ಭಾರತದ ಸೇನೆಯಿಂದ ಗುಂಡಿನ ದಾಳಿ, ಈ ಅಪಾಯಕಾರಿ ನಡೆಯನ್ನು ನಿಲ್ಲಿಸಿ – ಚೀನಾ ಆಗ್ರಹ

    ನವದೆಹಲಿ: ಪೂರ್ವ ಲಡಾಖ್‌ನ ಪಾಂಗಾಂಗ್ ಸರೋವರದ ದಕ್ಷಿಣ ದಂಡೆಯ ಎಲ್‌ಎಸಿ ಬಳಿ ಭಾರತ ಮತ್ತು ಚೀನಾದ ನಡುವೆ ಗುಂಡಿನ ಚಕಮಕಿ ನಡೆದಿದೆ ಎಂದು ವರದಿಯಾಗಿದೆ.

    ಈ ಬಗ್ಗೆ ಚೀನಾ ಸರ್ಕಾರ ಅಧಿಕೃತ ಹೇಳಿಕೆ ನೀಡಿದ್ದರೆ ಭಾರತದ ಕಡೆಯಿಂದ ಇಲ್ಲಿಯವರೆಗೆ ಯಾವುದೇ ಪ್ರಕಟಣೆ ಹೊರ ಬಂದಿಲ್ಲ. ಸಾವು ನೋವು ಸಂಭವಿಸಿದ ಬಗ್ಗೆ ಯಾವುದೇ ವರದಿಯಾಗಿಲ್ಲ.

    ಪಾಂಗಾಂಗ್ ಸರೋವರದ ದಕ್ಷಿಣ ದಂಡೆ ಬಳಿ ಅಕ್ರಮವಾಗಿ ವಾಸ್ತವ ಗಡಿರೇಖೆ (ಎಲ್‌ಎಸಿ) ಪ್ರವೇಶಿಸಿ ಗುಂಡಿನ ದಾಳಿ ನಡೆಸಿದೆ ಎಂದು ಪೀಪಲ್‌ ಲೀಬರೇಷನ್‌ ಆರ್ಮಿಯ(ಪಿಎಲ್‌ಎ) ಪಶ್ಚಿಮ ಕಮಾಂಡ್‌ನ ಹಿರಿಯ ಕರ್ನಲ್ ಝಾಂಗ್ ಸುಯಿಲಿ ಸೋಮವಾರ ರಾತ್ರಿ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿದ್ದಾರೆ. ಈ ಹೇಳಿಕೆಯನ್ನು ಆಧಾರಿಸಿ ಚೀನಾ ಕಮ್ಯೂನಿಸ್ಟ್‌ ಸರ್ಕಾರದ ಮುಖವಾಣಿ ಗ್ಲೋಬಲ್‌ ಟೈಮ್ಸ್‌ ವರದಿ ಮಾಡಿದೆ.

    ಭಾರತೀಯ ಸೈನಿಕರು ನಡೆಸಿದ ದಾಳಿಗೆ ಪ್ರತಿಯಾಗಿ ನಾವು ಗುಂಡಿನ ದಾಳಿ ನಡೆಸಿದ್ದೇವೆ. ಭಾರತ ಸೈನಿಕರು ಪದೇ ಪದೇ ಎಲ್‌ಎಸಿಯನ್ನು ಉಲ್ಲಂಘಿಸುತ್ತಿದೆ. ಭಾರತ ಕೂಡಲೇ ಈ ಅಪಾಯಕಾರಿ ನಡೆಯನ್ನು ನಿಲ್ಲಿಸಬೇಕೆಂದು ಚೀನಾ ಆಗ್ರಹಿಸಿದೆ. ಎಲ್‌ಎಸಿ ಉಲ್ಲಂಘಿಸಿದ ಸೈನಿಕರ ಮೇಲೆ ಭಾರತ ಶೀಘ್ರವೇ ಶಿಸ್ತುಕ್ರಮ ಕೈಗೊಳ್ಳಬೇಕು. ಇನ್ನು ಮುಂದೆ ಈ ರೀತಿ ಘಟನೆ ನಡೆಯದಂತೆ ವರ್ತಿಸಬೇಕು ಎಂದು ಹೇಳಿಕೆಯಲ್ಲಿ ತಿಳಿಸಿದೆ.

    ಭಾರತ ಸೇನೆಯ ಮೂಲಗಳು ಈ ಬಗ್ಗೆ ಮಾಹಿತಿ ನೀಡಿದ್ದು, ಭಾರತದ ಕಡೆಯಿಂದ ಯಾವುದೇ ಗುಂಡಿನ ದಾಳಿ ನಡೆದಿಲ್ಲ. ಎಲ್‌ಎಸಿ ಬಳಿ ಭಾರತ ಸೇನೆ ಗಸ್ತು ತಿರುಗುತ್ತಿರುವುದನ್ನು ನೋಡಿ ಭಯಗೊಂಡು ಚೀನಾ ಗಾಳಿಯಲ್ಲಿ ಗುಂಡು ಹಾರಿಸುವ ಪ್ರಯತ್ನ ನಡೆಸಿದೆ ಎಂದು ತಿಳಿಸಿದೆ.

    ಕೆಲ ದಿನಗಳ ಹಿಂದೆ ಪಾಂಗಾಂಗ್ ಸರೋವರ ಬಳಿ ಚೀನಾ ಸೇನೆ ಯಥಾಸ್ಥಿತಿ ಉಲ್ಲಂಘಿಸುವ ಪ್ರಯತ್ನ ಮಾಡಿತ್ತು. ಈ ಕುತಂತ್ರಿ ನಡೆಯನ್ನು ಮೊದಲೇ ತಿಳಿದಿದ್ದ ಭಾರತ ಸೇನೆ ಯಶಸ್ವಿಯಾಗಿ ಪಿಎಲ್‌ಎ ಸೈನಿಕರನ್ನು ಹಿಂದಕ್ಕೆ ಕಳುಹಿಸಿತ್ತು.

    ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮತ್ತು ಚೀನಾದ ರಕ್ಷಣಾ ಸಚಿವ ವೀ ಫೆಂಗೆ ನಡುವೆ ಮಾತುಕತೆ ನಡೆದ ಕೇವಲ ಮೂರೇ ದಿನಗಳಲ್ಲಿ ಗುಂಡಿನ ಚಕಮಕಿ ನಡೆದಿದೆ. ರಷ್ಯಾದ ಮಾಸ್ಕೋದಲ್ಲಿ ನಡೆದ ಶಾಂಘೈ ಸಹಕಾರ ಸಂಸ್ಥೆಯ (ಎಸ್‌ಸಿಒ) ರಕ್ಷಣಾ ಸಚಿವರ ಸಭೆಯಲ್ಲಿ ಉಭಯ ಸಚಿವರ ನಡುವೆ ಮಾತುಕತೆ ನಡೆದಿತ್ತು. ವಿದೇಶಾಂಗ ಸಚಿವ ಎಸ್.ಜೈಶಂಕರ್ ಸಹ ವಾರಾಂತ್ಯದಲ್ಲಿ ಚೀನಾದ ವಿದೇಶಾಂಗ ಸಚಿವ ವಾಂಗ್ ಯಿ ಜತೆ ಮಾತುಕತೆ ನಡೆಸುವ ಸಾಧ್ಯತೆ ಇದೆ.

     ಗಲ್ವಾನ್‌ ಸಂಘರ್ಷದಲ್ಲಿ ಭಾರತೀಯ ಸೇನೆಯ ಕರ್ನಲ್ ಶ್ರೇಣಿಯ ಅಧಿಕಾರಿ ಸೇರಿದಂತೆ 21 ಯೋಧರು ಹುತಾತ್ಮರಾಗಿದ್ದರು. ಚೀನಾ ಕಡೆಯಲ್ಲಿಯೂ ಸಾವು–ನೋವು ಸಂಭವಿಸಿತ್ತು. ಆದರೆ ಚೀನಾ ಇಲ್ಲಿಯವರೆಗೂ ಎಷ್ಟು ಮಂದಿ ಮೃತಪಟ್ಟಿದ್ದಾರೆ ಎಂಬುದನ್ನು ತಿಳಿಸಿಲ್ಲ.

    ಈಗ ಗುಂಡು ಹಾರಿಸಬಹುದು:
    ಆತ್ಮ ರಕ್ಷಣೆಗಾಗಿ ಸಿಡಿಎಸ್(ಚೀಫ್ ಡಿಫೆನ್ಸ್ ಸ್ಟಾಫ್) ಬಿಪಿನ್‌ ರಾವತ್‌ ಮತ್ತು ಮೂರು ಸೇನೆಯ ಮುಖ್ಯಸ್ಥರು ಆತ್ಮರಕ್ಷಣೆಗಾಗಿ ಚೀನಾ ಗಡಿಯಲ್ಲಿ ಗುಂಡು ಹಾರಿಸಲು ಸೈನಿಕರಿಗೆ ಅನುಮತಿ ನೀಡಿದ್ದರು. ಗಲ್ವಾನ್‌ ಘರ್ಷಣೆಯ ಸಂದರ್ಭದಲ್ಲಿ ಚೀನಿ ಸೈನಿಕರು ಮೊಳೆಗಳನ್ನು ವೆಲ್ಡ್‌ ಮಾಡಿದ ಬೇಸ್‌ ಬಾಲ್‌ ಬ್ಯಾಟ್‌ನಂತಿರುವ ಕಬ್ಬಿಣದ ರಾಡ್‌ಗಳಿಂದ ಭಾರತೀಯ ಸೇನೆಯ ಮೇಲೆ ಹಲ್ಲೆ ಮಾಡಿದ ಹಿನ್ನೆಲೆಯಲ್ಲಿ ಸೈನಿಕರಿಗೆ ಸರ್ಕಾರ ಸಂಪೂರ್ಣ ಸ್ವಾತಂತ್ರ್ಯವನ್ನು ನೀಡಿದೆ.

    ಒಪ್ಪಂದ ಮಾಡಿಕೊಂಡಿದ್ದು ಯಾಕೆ?
    ಭಾರತ ಮತ್ತು ಚೀನಾ ನಡುವೆ ಅಂತಾರಾಷ್ಟ್ರೀಯ ಗಡಿ ರೇಖೆ ಇಲ್ಲದ ಕಾರಣ ಗಡಿಯಲ್ಲಿ ಈ ರೀತಿ ಕಿತ್ತಾಟಗಳು ನಡೆಯುತಿತ್ತು. ಎರಡು ದೇಶಗಳ ಗಡಿಯನ್ನು ವಾಸ್ತವ ಗಡಿ ರೇಖೆಯಿಂದ(ಎಲ್‌ಎಸಿ – ಲೈನ್ ಆಫ್ ಆಕ್ಚುವಲ್ ಕಂಟ್ರೋಲ್) ಗುರುತಿಸಲಾಗಿದೆ. ಆದರೆ ಹಲವು ಭಾಗಗಳಲ್ಲಿ ಭಾರತ ಮತ್ತು ಚೀನಾದ ನಡುವಿನ ಗಡಿಗಳು ನಿರ್ಧಾರವಾಗಿಲ್ಲ. ಹೀಗಾಗಿ ಹಲವು ಬಾರಿ ಎರಡು ಕಡೆಯ ಸೈನಿಕರು ಗಡಿಯಲ್ಲಿ ಪಹರೆ ಕಾಯುತ್ತಿದ್ದಾಗ ಕಿತ್ತಾಟಗಳು ನಡೆಯುತ್ತಿದ್ದವು. ಎರಡು ಕಡೆಯಿಂದಲೂ ಪ್ರತಿರೋಧಗಳು ಜಾಸ್ತಿಯಾಗುತ್ತಿರುವ ಹಿನ್ನೆಲೆಯಲ್ಲಿ 1993, 1996ರಲ್ಲಿ ಭಾರತ ಮತ್ತು ಚೀನಾ ನಡುವೆ ಒಪ್ಪಂದ ನಡೆಯಿತು.

    1993ರ ಒಪ್ಪಂದದ ಪ್ರಕಾರ ಎಲ್‌ಎಸಿ ದಾಟಿ ಯಾರೇ ಒಳಬಂದರೂ ಅವರಿಗೆ ಎಚ್ಚರಿಕೆ ನೀಡಿ ಕಳುಹಿಸಬೇಕು. 1996ರ ಪ್ರಕಾರ ಎಲ್‌ಎಸಿಯ ಎರಡು ಕಿ.ಮೀ ವ್ಯಾಪ್ತಿಯಲ್ಲಿ ಎರಡು ದೇಶಗಳು ಯಾವುದೇ ಸ್ಫೋಟ ನಡೆಸಬಾರದು. ಗುಂಡಿನ ದಾಳಿ ನಡೆಸಕೂಡದು ಎಂಬ ಒಪ್ಪಂದಕ್ಕೆ ಬರಲಾಗಿದೆ. ಇಲ್ಲಿಯವರೆಗೆ ಚೀನಾ ಗಡಿಯಲ್ಲಿ ಭಾರತದ ಸೈನಿಕರು ಈ ಒಪ್ಪಂದಕ್ಕೆ ಬದ್ಧವಾಗಿದ್ದರು. ಆದರೆ ಗಲ್ವಾನ್‌ ಘರ್ಷಣೆಯ ಬಳಿಕ ಭಾರತ ಗಡಿ ಒಪ್ಪಂದ ರದ್ದು ಮಾಡಿದ್ದು ಸರ್ಕಾರ ಭಾರತೀಯ ಸೇನೆಗೆ ಪೂರ್ಣ ಅಧಿಕಾರವನ್ನು ನೀಡಿದೆ.

  • ಗಲ್ವಾನ್‌ ಘರ್ಷಣೆ – ಚೀನಿ ಯೋಧರ ಸಾವಿಗೆ ಸಿಕ್ಕಿತು ಮೊದಲ ಸಾಕ್ಷ್ಯ

    ಗಲ್ವಾನ್‌ ಘರ್ಷಣೆ – ಚೀನಿ ಯೋಧರ ಸಾವಿಗೆ ಸಿಕ್ಕಿತು ಮೊದಲ ಸಾಕ್ಷ್ಯ

    ಬೀಜಿಂಗ್‌: ಗಲ್ವಾನ್‌ನಲ್ಲಿ ನಡೆದ ಘರ್ಷಣೆಯಲ್ಲಿ ಪಿಎಲ್‌ಎ ಸೈನಿಕರು ಮೃತಪಟ್ಟಿದ್ದಾರೆ ಎಂದು ಭಾರತದ ಸೇನೆ ಹೇಳಿದ್ದರೂ ಚೀನಾ ಮಾತ್ರ ಇಲ್ಲಿಯವರೆಗೆ ಮೃತಪಟ್ಟಿರುವುದನ್ನು ಖಚಿತಪಡಿಸಿಲ್ಲ. ಆದರೆ ಈಗ ಚೀನಾ ಸೈನಿಕರು ಮೃತಪಟ್ಟಿದ್ದಾರೆ ಎಂಬುದಕ್ಕೆ ಸಾಕ್ಷ್ಯ ಸಿಕ್ಕಿದೆ.

    ಚೀನಾದ ಸಾಮಾಜಿಕ ಜಾಲತಾಣವಾದ ವಿಬೋದದಲ್ಲಿ ಹುತಾತ್ಮ ಯೋಧನ ಸಮಾಧಿಯ ಫೋಟೋ ವೈರಲ್‌ ಆಗಿದೆ.

    ದಕ್ಷಿಣದ ಕ್ಸಿನ್‌ಜಿಯಾಂಗ್‌ ಸೇನಾವಲಯದಲ್ಲಿ ಮೃತ ಯೋಧನ ಸಮಾಧಿಯನ್ನು ಸ್ಥಾಪನೆ ಮಾಡಲಾಗಿದೆ. ಈ ಸಮಾಧಿಯ ಮೇಲೆ ಚೆನ್‌ ಕ್ಸಿಯಾಂಗ್‌ರಾಂಗ್‌, 19316 ಪಡೆಯ ಯೋಧ. 2020ರ ಜೂನ್‌ನಲ್ಲಿ ಭಾರತದ ಗಡಿಯಲ್ಲಿ ನಡೆದ ಸಂಘರ್ಷದಲ್ಲಿ ಹುತಾತ್ಮನಾದ ಸೈನಿಕ ಎಂದು ಬರೆಯಲಾಗಿದೆ.

    ಫೋಟೋ ವೈರಲ್‌ ಆದ ಕೂಡಲೇ ಇದು ಚೀನಾ ಸೈನಿಕರು ಈ ಘರ್ಷಣೆಯಲ್ಲಿ ಮೃತಪಟ್ಟಿದ್ದಾರೆ ಎಂಬುದಕ್ಕೆ ಸಿಕ್ಕಿದ ಮೊದಲ ಸಾಕ್ಷ್ಯ ಎಂದು ವಿಶ್ಲೇಷಿಸಲಾಗುತ್ತಿದೆ.

    ತಂಟೆಕೋರ ಚೀನಾ ಇಲ್ಲಿಯವರೆಗೆ ಸಾವು ನೋವಿನ ಬಗ್ಗೆ ಅಧಿಕೃತವಾಗಿ ಸುದ್ದಿ ಪ್ರಕಟಿಸದೇ ಇದ್ದರೂ ಚೀನಾದ ಸರ್ಕಾರದ ಮುಖವಾಣಿ ಇಂಗ್ಲಿಷ್ ಗ್ಲೋಬಲ್‌ ಟೈಮ್ಸ್‌ ‌ ಸಂಪಾದಕ ಈ ಹಿಂದೆ ಸಾವು ಸಂಭವಿಸಿದೆ ಎಂಬುದನ್ನು ಒಪ್ಪಿಕೊಂಡಿದ್ದರು.

    ಗ್ಲೋಬಲ್‌ ಟೈಮ್ಸ್‌ ಸಂಪಾದಕ ಹು ಕ್ಸಿಜಿನ್‌ ಟ್ವೀಟ್‌ ಮಾಡಿ,”ನನಗೆ ತಿಳಿದ ಮಾಹಿತಿ ಪ್ರಕಾರ ಗಲ್ವಾನ್‌ ಕಣಿವೆಯಲ್ಲಿ ಘರ್ಷಣೆಯಲ್ಲಿ ಚೀನಾದ ಸೈನಿಕರು ಮೃತಪಟ್ಟಿದ್ದಾರೆ. ಹೀಗಾಗಿ ನಾನು ಭಾರತಕ್ಕೆ ಒಂದು ವಿಚಾರ ಹೇಳಲು ಇಚ್ಛಿಸುತ್ತೇನೆ. ಚೀನಾದ ಸಹನೆಯನ್ನು ದೌರ್ಬಲ್ಯ ಎಂದು ತಿಳಿಯಬೇಡಿ. ಭಾರತದ ಜೊತೆ ಘರ್ಷಣೆ ನಡೆಸಲು ಚೀನಾ ಬಯಸುತ್ತಿಲ್ಲ. ಆದರೆ ನಾವು ಯಾರಿಗೂ ಭಯ ಪಡುವುದಿಲ್ಲ” ಎಂದು ಟ್ವೀಟ್‌ ಮಾಡಿದ್ದರು. ಇದನ್ನೂ ಓದಿ: ಭಯಕ್ಕೆ ಬಿದ್ದು ಭಾರತದ ವೆಬ್‌ಸೈಟ್‌ಗಳಿಗೆ ಕತ್ತರಿ ಹಾಕಿದ ಚೀನಾ

    ಲಡಾಖ್‌ ಗಡಿಯಲ್ಲಿ ಜೂನ್‌ 15 ರಂದು ನಡೆದ ಗರ್ಷಣೆಯಲ್ಲಿ ನಮ್ಮ 20 ಯೋಧರು ಹುತಾತ್ಮರಾಗಿದ್ದಾರೆ ಎಂದು ಭಾರತ ಹೇಳಿತ್ತು. ಈ ವೇಳೆ ಮಾಧ್ಯಮಗಳಿಗೆ ಬಿಡುಗಡೆ ಮಾಡಿದ್ದ ಹೇಳಿಕೆಯಲ್ಲಿ ಸೇನೆ ಚೀನಾ ಕಡೆಯಲ್ಲೂ ಅಪಾರ ಪ್ರಮಾಣದ ಸಾವು ನೋವು ಸಂಭವಿಸಿದೆ ಎಂದು ತಿಳಿಸಿತ್ತು. ಚೀನಾದ 43 ಯೋಧರು ಮೃತಪಟ್ಟಿದ್ದಾರೆ ಎಂದು ವರದಿಯಾಗಿತ್ತು.

  • ಪಿಎಲ್‌ಎ ಉಗ್ರರ ದಾಳಿಗೆ ಮೂವರು ಯೋಧರು ಹುತಾತ್ಮ, 4 ಮಂದಿಗೆ ಗಾಯ

    ಪಿಎಲ್‌ಎ ಉಗ್ರರ ದಾಳಿಗೆ ಮೂವರು ಯೋಧರು ಹುತಾತ್ಮ, 4 ಮಂದಿಗೆ ಗಾಯ

    ಚಾಂಡೇಲ್‌: ಮಣಿಪುರ – ಮ್ಯಾನ್ಮಾರ್‌ ಗಡಿಯಲ್ಲಿ ಉಗ್ರರ ದಾಳಿಗೆ ಅಸ್ಸಾಂ ರೈಫಲ್ಸ್‌ನ 4ನೇ ಘಟಕದ ಮೂವರು ಯೋಧರು ಹುತಾತ್ಮರಾಗಿದ್ದಾರೆ.

    ಕಳೆದ ರಾತ್ರಿ ಮ್ಯಾನ್ಮಾರ್‌ನಲ್ಲಿರುವ ಪೀಪಲ್ಸ್‌ ಲಿಬರೇಷನ್‌ ಆರ್ಮಿ ಹೆಸರಿನ ಉಗ್ರರು ಸುಧಾರಿತ ಸ್ಫೋಟಕ ಸಾಮಾಗ್ರಿ(ಐಇಡಿ) ಬಳಸಿ ಕೃತ್ಯ ಎಸಗಿ ಗುಂಡಿನ ದಾಳಿ ನಡೆಸಿದ್ದಾರೆ. ಈ ದಾಳಿಯಲ್ಲಿ ಮೂವರು ಸೈನಿಕರು ಹುತಾತ್ಮರಾಗಿದ್ದು, 7 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.

    ಇಂಫಾಲದಿಂದ 100 ಕಿ.ಮೀ ದೂರದಲ್ಲಿ ಸೈನಿಕರು ವಾಹನದಲ್ಲಿ ಬರುತ್ತಿದ್ದಾಗ ಐಇಡಿ ಸ್ಫೋಟಿಸಿದ್ದಾರೆ. ಬಳಿಕ ಉಗ್ರರು ಗುಂಡಿನ ದಾಳಿ ನಡೆಸಿದ್ದಾರೆ.

    ಸ್ವಾತಂತ್ರ್ಯ ಬಂದ ನಂತರ ಮ್ಯಾನ್ಮಾರ್‌ ಗಡಿಯಲ್ಲಿ ಸುಮಾರು 750 ಮಂದಿ ಸೈನಿಕರು ಹುತಾತ್ಮರಾಗಿದ್ದಾರೆ. 2017ರ ಅಸ್ಸಾಂ ರೈಫಲ್ಸ್‌ ಯೋಧರ ಮೇಲೆ ದಾಳಿ ನಡೆಸಿದ ಪ್ರಕರಣ ಸಂಬಂಧ ಈ ವರ್ಷದ ಆರಂಭದಲ್ಲಿ ರಾಷ್ಟ್ರೀಯ ತನಿಖಾ ದಳ (ಎನ್‌ಐಎ) 6 ಮಂದಿ ಪಿಎಲ್‌ಎ ಉಗ್ರರ ಮೇಲೆ ಚಾರ್ಜ್‌ಶೀಟ್‌ ಸಲ್ಲಿಕೆ ಮಾಡಿತ್ತು.

    ಗಲ್ವಾನ್‌ ಘರ್ಷಣೆಯ ಬಳಿಕ ‘ಪಿಎಲ್‌ಎʼ ಪದ ಹೆಚ್ಚು ಬಳಕೆಯಾಗುತ್ತಿದೆ. ಚೀನಾದ ಸೇನೆಯನ್ನು ಪೀಪಲ್‌ ಲಿಬರೇಷನ್‌ ಆರ್ಮಿ(ಪಿಎಲ್‌ಎ) ಎಂದು ಕರೆಯಲಾಗುತ್ತದೆ. ಆದರೆ ಆ ಪಿಎಲ್‌ಎಗೂ ಮ್ಯಾನ್ಮಾರ್‌ನಲ್ಲಿರುವ ಉಗ್ರ ಸಂಘಟನೆಗೆ ನೇರವಾಗಿ ಯಾವುದೇ ಸಂಬಂಧವಿಲ್ಲ. ಆದರೆ ಈ ಹಿಂದೆ ದೇಶದಲ್ಲಿರುವ ಉಗ್ರರಿಗೆ ಚೀನಾದಿಂದ ಶಸ್ತ್ರಾಸ್ತ್ರಗಳು ಸರಬರಾಜು ಆಗುತ್ತಿದೆ ಎಂದು ಮ್ಯಾನ್ಮಾರ್‌ ನೇರವಾಗಿ ಹೇಳಿತ್ತು.

    ರಷ್ಯಾದ ಸರ್ಕಾರಿ ಟಿವಿ ಚಾನೆಲ್ ಒಂದಕ್ಕೆ ಇತ್ತೀಚೆಗೆ ಮ್ಯಾನ್ಮಾರ್‌ನ ಹಿರಿಯ ಜನರಲ್ ಮಿನ್ ಆಂಗ್ ಹೇಲಿಂಗ್ ಸಂದರ್ಶನ ನೀಡಿದ್ದರು. ಈ ವೇಳೆ ದೇಶದೊಳಗಿನ ಬಂಡುಕೋರ ಗುಂಪುಗಳಿಗೆ ‘ಬಲಾಢ್ಯ’ ರಾಷ್ಟ್ರ ಸಹಕಾರ ನೀಡುತ್ತಿದೆ. ಉಗ್ರರು ಚೈನಾ ನಿರ್ಮಿತ ಅತ್ಯಾಧುನಿಕ ಶಸ್ತ್ರಾಸ್ತ್ರಗಳನ್ನು ಬಳಕೆ ಮಾಡುತ್ತಿದ್ದಾರೆ. ಈ ಉಗ್ರರನ್ನು ಮಟ್ಟ ಹಾಕಲು ಅಂತಾರಾಷ್ಟ್ರೀಯ ಸಹಕಾರದ ಅಗತ್ಯವಿದೆ ಎಂದು ತಿಳಿಸಿದ್ದರು.

    ಚೀನಾದ ಗಡಿಯ ಪಶ್ಚಿಮ ಮ್ಯಾನ್ಮಾರ್‌ನ ರಾಖೈನ್ ರಾಜ್ಯದಲ್ಲಿ ಸಕ್ರಿಯವಾಗಿರುವ ಉಗ್ರಗಾಮಿ ಸಂಘಟನೆಗಳಾದ ಅರಾಕನ್ ಆರ್ಮಿ (ಎಎ) ಮತ್ತು ಅರಾಕನ್ ರೋಹಿಂಗ್ಯಾ ಸಾಲ್ವೇಶನ್ ಆರ್ಮಿ (ಎಆರ್‌ಎಸ್‌ಎ) ಯನ್ನುಉಲ್ಲೇಖಿಸಿ ಮಿನ್ ಆಂಗ್ ಹೇಲಿಂಗ್, ಈ ಉಗ್ರ ಸಂಘಟನೆಯನ್ನು ‘ಬಲಾಢ್ಯ ರಾಷ್ಟ್ರʼವೊಂದು ಬೆಂಬಲಿಸುತ್ತದೆ ಎಂದಿದ್ದರು.

    ಆಗ್ನೇಯ ಏಷ್ಯಾದ ಭಾಗದಲ್ಲಿ ಉಗ್ರರಿಗೆ ಚೀನಾ ಸಹಾಯ ಮಾಡುತ್ತದೆ ಎನ್ನುವ ಆರೋಪ ಹೊಸದಲ್ಲ. ವಿಶ್ವದ ನಂಬರ್‌ಒನ್‌ ಪಟ್ಟ ಏರಲು ಹವಣಿಸುತ್ತಿರುವ ಚೀನಾ ಪಾಕಿಸ್ತಾನ ಸೇನೆಗೆ ಸಹಕಾರ ನೀಡುವ ನೆಪದಲ್ಲಿ ಉಗ್ರರಿಗೂ ಶಸ್ತ್ರಾಸ್ತ್ರಗಳನ್ನು ಸರಬರಾಜು ಮಾಡುತ್ತದೆ ಎಂಬ ಆರೋಪವಿದೆ.

  • 59 ಆಪ್‌ ಆಯ್ತು ಈಗ 7 ಚೀನಿ ಕಂಪನಿಗಳ ವಿರುದ್ಧ ಕ್ರಮ – ಹುವಾವೇ, ಅಲಿಬಾಬಾ ಮೇಲೆ ನಿಗಾ

    59 ಆಪ್‌ ಆಯ್ತು ಈಗ 7 ಚೀನಿ ಕಂಪನಿಗಳ ವಿರುದ್ಧ ಕ್ರಮ – ಹುವಾವೇ, ಅಲಿಬಾಬಾ ಮೇಲೆ ನಿಗಾ

    ನವದೆಹಲಿ: ಲಡಾಖ್‌ನ ಗಲ್ವಾನ್‌ ಕಣಿವೆಯಲ್ಲಿ ಯೋಧರ ಹತ್ಯೆಗೆ ಪ್ರತೀಕಾರವಾಗಿ 59 ಅಪ್ಲಿಕೇಶನ್‌ನಗಳನ್ನು ನಿಷೇಧಿಸಿದ ಬೆನ್ನಲ್ಲೇ ಈಗ ಚೀನಾ ಪೀಪಲ್ಸ್‌ ಲಿಬರೇಷನ್‌ ಆರ್ಮಿ(ಪಿಎಲ್‌ಎ) ಜೊತೆ ನೇರವಾಗಿ ಗುರುತಿಸಿಕೊಂಡಿರುವ 7 ಪ್ರಮುಖ ಕಂಪನಿಗಳ ವಿರುದ್ಧ ಕ್ರಮ ಜರುಗಿಸಲು ಭಾರತ ಸರ್ಕಾರ ಮುಂದಾಗಿದೆ.

    ಹುವಾವೇ, ಅಲಿಬಾಬಾ, ಕ್ಷಿಇಂಡಿಯಾ ಸ್ಟೀಲ್ಸ್‌, ಕ್ಸಿನ್ಸಿಂಗ್‌ ಕ್ಯಾಥೆ ಇಂಟರ್‌ ನ್ಯಾಷನಲ್‌, ಚೀನಾ ಇಲೆಕ್ಟ್ರಾನಿಕ್‌ ಟೆಕ್ನಾಲಜಿ ಗ್ರೂಪ್‌, ಟೆನ್ಸೆಂಟ್‌ ಮತ್ತು ಎಸ್‌ಎಐಸಿ ಮೋಟಾರ್‌ ಕಾರ್ಪೊರೇಷನ್‌ ಕಂಪನಿಗಳ ಮೇಲೆ ಸರ್ಕಾರ ನಿಗಾವಹಿಸಿದೆ ಎಂದು ಮೂಲಗಳು ತಿಳಿಸಿವೆ.

    2017ರಲ್ಲಿ ಚೀನಾ ತನ್ನ ಗುಪ್ತಚರ ಕಾನೂನಿಗೆ ತಿದ್ದುಪಡಿ ತಂದಿದೆ. ಈ ಕಾನೂನಿನ ಪ್ರಕಾರ ಸರ್ಕಾರದ ಜಂಟಿ ಸಹಭಾಗಿತ್ವದ ಅಡಿಯಲ್ಲಿ ಕಾರ್ಯನಿರ್ವಹಿಸುವ ಸಂಸ್ಥೆಗಳು ಗುಪ್ತಚರ ಇಲಾಖೆಗೆ ಮಾಹಿತಿ ನೀಡುವ ಅಧಿಕಾರವನ್ನು ಹೊಂದಿರುತ್ತದೆ. ಗುಪ್ತಚರ ಕೆಲಸವನ್ನು ಬೆಂಬಲಿಸಿ, ಸಹಾಯ ಮಾಡುವ ಸಂಸ್ಥೆಗಳನ್ನು ಚೀನಾ ಸರ್ಕಾರ ರಕ್ಷಣೆ ಮಾಡಲಿದೆ.

    ಈಗಾಗಲೇ 5ಜಿ ವಿಚಾರಕ್ಕೆ ಸಂಬಂಧಿಸಿದಂತೆ ಹುವಾವೇ ಈಗಾಗಲೇ ಅಮೆರಿಕ, ಜಪಾನ್‌, ಬ್ರಿಟನ್‌, ಆಸ್ಪ್ರೇಲಿಯಾ ಭಾರೀ ವಿರೋಧ ವ್ಯಕ್ತಪಡಿಸುತ್ತಿವೆ. ಹುವಾವೇ ಟೆಲಿಕಾಂ ಕಂಪನಿಯ ಸ್ಥಾಪಕ ರೆನ್‌ ಝೆಂಗ್‌ಫೆಯ್‌, ಪಿಎಲ್‌ಎಯ ಎಂಜಿನಿಯರಿಂಗ್‌ ವಿಭಾಗದ ಮಾಜಿ ಉಪ ನಿರ್ದೇಶಕರಾಗಿ ಕಾರ್ಯನಿರ್ವಹಿಸಿದ್ದರು. ಹುವಾವೇ ಇಂಡಿಯಾ 2018-19ರಲ್ಲಿ 12,800 ಕೋಟಿ ರೂ. ಆದಾಯವನ್ನು ಸಂಪಾದಿಸಿತ್ತು.

    ಅಲಿಬಾಬಾ, ಬೈಡು, ಟೆನ್ಸೆಂಟ್‌ ಕಂಪನಿಗಳು ಸೇನೆಯ ಭಾಗವಾಗಿ ಕೃತಕ ಬುದ್ಧಿಮತ್ತೆ(ಆರ್ಟಿಫಿಶಿಯಲ್‌ ಇಂಟಲಿಜೆನ್ಸ್‌) ಯೋಜನೆಯಲ್ಲಿ ಕಾರ್ಯನಿರ್ವಹಿಸುತ್ತಿವೆ. ವಿಶ್ವದ ಶತಕೋಟಿ ಪಟ್ಟಿಯಲ್ಲಿ 21ನೇ ಸ್ಥಾನದಲ್ಲಿರುವ ಜ್ಯಾಕ್‌ ಮಾ ಮಾಲೀಕತ್ವದ ಅಲಿಬಾಬಾ ಸಂಸ್ಥೆ ಪೇಟಿಎಂ, ಝೊಮೆಟೋ, ಬಿಗ್‌ ಬಾಸ್ಕೆಟ್‌ ಸೇರಿದಂತೆ ಭಾರತದ ಪ್ರಸಿದ್ಧ ಕಂಪನಿಗಳಲ್ಲಿ ನೂರಾರು ಕೋಟಿ ರು. ಹೂಡಿಕೆ ಮಾಡಿದೆ. ಇಂಟರ್‌ನೆಟ್‌ ಕಂಪನಿಯಾದ ಟೆನ್ಸೆಂಟ್‌ ಫ್ಲಿಪ್‌ಕಾರ್ಟ್‌ನಲ್ಲಿ 5,300 ಕೋಟಿ ರೂ., ಓಲಾ ಕ್ಯಾಬ್‌ನಲ್ಲಿ 3 ಸಾವಿರ ಕೋಟಿ ರೂ. ಹೂಡಿಕೆ ಮಾಡಿದೆ.

    ಶಾಂಘೈ ಅಟೋಮೊಟಿವ್‌ ಇಂಡಸ್ಟ್ರಿ ಕಾರ್ಪೊರೇಷನ್‌(ಎಸ್‌ಎಐಸಿ) ಚೀನಾದ ಅಟೊಮೊಬೈಲ್‌ ಕಂಪನಿ ಭಾರತದಲ್ಲಿ ಎಂಜಿ ಹೆಕ್ಟರ್‌ ಹೆಸರಿನಲ್ಲಿ ಎಸ್‌ಯುವಿ(ಸ್ಫೋರ್ಟ್ಸ್‌ ಯುಟಿಲಿಟಿ ವೆಹಿಕಲ್‌) ಕಾರುಗಳನ್ನು ಬಿಡುಗಡೆ ಮಾಡುತ್ತಿದೆ. ಈ ಕಂಪನಿಯ ಅಂಗಸಂಸ್ಥೆ ನಾನ್ಜಿಂಗ್‌ ಅಟೋಮೊಬೈಲ್‌ ಈ ಹಿಂದೆ ಪಿಎಲ್‌ಎಗೆ ವಾಹನಗಳನ್ನು ವಿತರಣೆ ಮಾಡುತ್ತಿತ್ತು. ಕ್ಸಿನ್ಸಿಂಗ್‌ ಕ್ಯಾಥೆ ಇಂಟರ್‌ ನ್ಯಾಷನಲ್‌ ಗ್ರೂಪ್‌ ಲೋಹ ಉದ್ಯಮ ಕಂಪನಿಯಾಗಿದ್ದು, ಆಂಧ್ರ ಪ್ರದೇಶದಲ್ಲಿ 2018ರಲ್ಲಿ 320 ಕೋಟಿ ರೂ. ಹಣವನ್ನು ಹೂಡಿಕೆ ಮಾಡಿದೆ.

    ಭಾರತದಲ್ಲಿ ವಿದೇಶಿ ಹೂಡಿಕೆಗೆ ಅನುಮತಿ ಇರುವ ಕಾರಣ ಚೀನಾದ ಕಂಪನಿಗಳು ಇಲ್ಲಿ ಹೂಡಿಕೆ ಮಾಡುತ್ತಿವೆ. ಆದರೆ ಇನ್ನು ಮುಂದೆ ವಿದೇಶಿ ಹೂಡಿಕೆ ವಿಚಾರದಲ್ಲಿ ಕೆಲ ನಿಯಮಗಳನ್ನು ಅಳವಡಿಸಲು ಸರ್ಕಾರ ಮುಂದಾಗಿದೆ ಎಂದು ವರದಿಯಾಗಿದೆ.

  • ಚೀನಾದಿಂದ ಪೂರ್ವನಿಯೋಜಿತ ದಾಳಿ – ಭಾರತದ ಖಡಕ್‌ ಮಾತು

    ಚೀನಾದಿಂದ ಪೂರ್ವನಿಯೋಜಿತ ದಾಳಿ – ಭಾರತದ ಖಡಕ್‌ ಮಾತು

    – ಭಾರತ ಚೀನಾ ನಡುವೆ ದೂರವಾಣಿ ಮಾತುಕತೆ
    – ಮಾತುಕತೆಯ ಮೂಲಕ ಸಮಸ್ಯೆ ಪರಿಹಾರಕ್ಕೆ  ದೇಶಗಳ ಒಪ್ಪಿಗೆ

    ನವದೆಹಲಿ: ಗಾಲ್ವಾನ್‌ ಕಣಿವೆಯಲ್ಲಿ ಚೀನಾ ಸೈನಿಕರು ಪೂರ್ವನಿಯೋಜಿತವಾಗಿ ನಮ್ಮ ಸೈನಿಕರ ಮೇಲೆ ದಾಳಿ ನಡೆಸಿದ್ದಾರೆ ಎಂದು ಭಾರತ ಚೀನಾಗೆ ಖಡಕ್‌ ಆಗಿ ತಿಳಿಸಿದೆ.

    ಸೋಮವಾರ ರಾತ್ರಿ ಗಡಿಯಲ್ಲಿ ಎರಡು ರಾಷ್ಟ್ರಗಳ ಸೈನಿಕರ ಮಧ್ಯೆ ಘರ್ಷಣೆ ನಡೆದ ಬಳಿಕ ಬುಧವಾರ ಭಾರತದ ವಿದೇಶಾಂಗ ಇಲಾಖೆ ಸಚಿವ ಜೈಶಂಕರ್‌ ಮತ್ತು ಚೀನಾದ ವಿದೇಶಾಂಗ ಸಚಿವ ವಾಂಗ್‌ ವೈ ಮಧ್ಯೆ ದೂರವಾಣಿ ಮಾತುಕತೆ ನಡೆಯಿತು.

    ಭಾರತ ಹೇಳಿದ್ದು ಏನು?
    ಜೂನ್‌ 6 ರಂದು ನಡೆದ ಮಿಲಿಟರಿ ಕಮಾಂಡರ್‌ ಮಟ್ಟದ ಮಾತುಕತೆಯ ವೇಳೆ ಎಲ್‌ಎಸಿಯಿಂದ ಸೇನೆ ಹಿಂದಕ್ಕೆ ಬರುವ ಸಂಬಂಧ ಮಾತುಕತೆ ನಡೆದಿತ್ತು. ಆದರೆ ಚೀನಾ ಸೇನೆ ಭಾರತದ ಎಲ್‌ಎಸಿ ಬಳಿ ಟೆಂಟ್‌ ನಿರ್ಮಿಸಿತ್ತು. ವಿವಾದಕ್ಕೆ ಕಾರಣವಾದ ಈ ಟೆಂಟ್‌ ಅನ್ನು ಚೀನಾ ತೆರವು ಮಾಡಬೇಕಿತ್ತು. ಈ ವಿಚಾರದ ಬಗ್ಗೆ ಮಾತುಕತೆ ನಡೆಯುತ್ತಿದ್ದಾಗ ಚೀನಾ ಸೇನೆ ಪೂರ್ವ ನಿಗದಿಯಂತೆ ದಾಳಿ ನಡೆಸಿದೆ. ಇದರಿಂದಾಗಿ ಸಾವು ನೋವು ಸಂಭವಿಸಿದೆ. ಈ ಘಟನೆಗೆ ಚೀನಾವೇ ನೇರ ಕಾರಣ.

    ಈ ಘಟನೆಯಿಂದ ದ್ವಿಪಕ್ಷೀಯ ಮಾತುಕತೆಯ ಮೇಲೆ ಭಾರೀ ಪರಿಣಾಮ ಬೀರಿದೆ. ಜೂನ್‌ 6 ರಂದು ಕಮಾಂಡರ್‌ ಮಟ್ಟ ಮಾತುಕತೆಯ ವೇಳೆ ಏನು ನಿರ್ಧಾರ ಮಾಡಲಾಗಿದೆಯೋ ಅದನ್ನು ಎರಡು ದೇಶಗಳು ಪಾಲಿಸಬೇಕು. ಎರಡು ಕಡೆಯ ಸೈನಿಕರು ದ್ವಿಪಕ್ಷೀಯ ಒಪ್ಪಂದವನ್ನು ಪಾಲಿಸಬೇಕು ಎಂದು ಭಾರತ ಹೇಳಿದೆ.

    ಚೀನಾ ಹೇಳಿದ್ದು ಏನು?
    ಭಾರತದ ಸೇನೆ ಎಲ್‌ಎಸಿ ದಾಟಿ ನಮ್ಮ ಸೈನಿಕರ ಮೇಲೆ ದಾಳಿ ನಡೆಸಿದೆ. ಭಾರತ ಎಲ್ಲ ಒಪ್ಪಂದಗಳನ್ನು ಉಲ್ಲಂಘಿಸಿ ಈ ಕೃತ್ಯ ಎಸಗಿದೆ. ಚೀನಾ ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿದೆ. ಚೀನಿ ಸೈನಿಕರ ಮೇಲೆ ಹಲ್ಲೆ ಎಸಗಿದವರ ವಿರುದ್ಧ ಭಾರತ ಕ್ರಮ ಕೈಗೊಳ್ಳಬೇಕು. ಇನ್ನು ಮುಂದೆ ಈ ರೀತಿಯ ಘಟನೆ ಮರುಕಳಿಸಬಾರದು. ನೂರು ಕೋಟಿ ಜನಸಂಖ್ಯೆ ಇರುವ ದೇಶಗಳಾದ ನಾವು ಅಭಿವೃದ್ಧಿ ವಿಚಾರಗಳಿಗೆ ಮನ್ನಣೆ ನೀಡಬೇಕು.

    ಕೊನೆಯಲ್ಲಿ ಏನಾಯ್ತು?
    ಎರಡು ದೇಶಗಳು ಯಾಥಾಸ್ಥಿತಿಯನ್ನು ಕಾಯ್ದುಕೊಳ್ಳಲು ಒಪ್ಪಿಕೊಂಡಿದ್ದು, ಸಮಸ್ಯೆಯನ್ನು ಮಾತುಕತೆಯಿಂದ ಬಗೆಹರಿಸಿಕೊಳ್ಳುವ ತೀರ್ಮಾನಕ್ಕೆ ಬರಲಾಗಿದೆ..