Tag: plant

  • ಬೆಂಗ್ಳೂರು ರಸ್ತೆ ಬದಿ ಸಸಿ ಮಾರುತ್ತಿರೋ ವೃದ್ಧನ ವಿಡಿಯೋ ವೈರಲ್ – ಬಾಲಿವುಡ್ ನಟ, ನಟಿಯರ ಸ್ಪಂದನೆ

    ಬೆಂಗ್ಳೂರು ರಸ್ತೆ ಬದಿ ಸಸಿ ಮಾರುತ್ತಿರೋ ವೃದ್ಧನ ವಿಡಿಯೋ ವೈರಲ್ – ಬಾಲಿವುಡ್ ನಟ, ನಟಿಯರ ಸ್ಪಂದನೆ

    ಬೆಂಗಳೂರು: ದೆಹಲಿಯ ಬಾಬಾ ಕಾ ಡಾಭಾ ವೃದ್ಧರ ಸಂಕಷ್ಟದ ಕುರಿತು ಸುದ್ದಿ ವೈರಲ್ ಆದ ಬೆನ್ನಲ್ಲೇ ಇದೀಗ ಬೆಂಗಳೂರಿನ ಸಸಿ ಮಾರುವ ವೃದ್ಧನ ವಿಡಿಯೋ ಸಖತ್ ವೈರಲ್ ಆಗಿದ್ದು, ಸಹಾಯ ಮಾಡುವಂತೆ ಬಾಲಿವುಡ್ ಸ್ಟಾರ್‍ ಗಳು ಸಹ ಮನವಿ ಮಾಡಿದ್ದಾರೆ.

    ಬೆಂಗಳೂರಿನ ಜೆಪಿ ನಗರದ ಕನಕಪುರ ರಸ್ತೆಯ ಸಾರಕ್ಕಿ ಸಿಗ್ನಲ್ ಬಳಿ ಸಸಿ ಮಾರುವ ರೇವಣಸಿದ್ದಪ್ಪ ಅವರಿಗೆ ಸಹಾಯ ಮಾಡುವಂತೆ ಟ್ವೀಟ್ ವೈರಲ್ ಆಗಿದೆ. ಅಲ್ಲದೆ ಇದಕ್ಕೆ ಬಾಲಿವುಡ್ ನಟರು ಪ್ರತಿಕ್ರಿಯಿಸಿದ್ದು, ಸಹಾಯ ಮಾಡುವಂತೆ ಮನವಿ ಮಾಡಿದ್ದಾರೆ.

    ರೇವಣಸಿದ್ದಪ್ಪ ಅವರು ಸುಡುವ ಬಿಸಿಲಿನಲ್ಲಿ ಸಿಗ್ನಲ್ ಪಕ್ಕ ಕುಳಿತುಕೊಂಡು 10 ರಿಂದ 30 ರೂಪಾಯಿಗೆ ಸಸಿ ಮಾರುತ್ತಿದ್ದಾರೆ. ಈ ವೃದ್ಧನ ಬಗ್ಗೆ ಐ ಆಮ್ ಶುಭಮ್ ಎಂಬ ಖಾತೆಯಿಂದ ಟ್ವೀಟ್ ಮಾಡಲಾಗಿತ್ತು. ಇವರಿಗೆ ಸಹಾಯ ಮಾಡಿ ಎಂದು ನಟರಾದ ಸೋನು ಸೂದ್, ಮಾಧವನ್, ಕಾಂಚನಾ ಗುಪ್ತ ಮತ್ತು ಪ್ರವೀಣ್ ಕಸ್ವನ್ ಗೆ ಟ್ಯಾಗ್ ಮಾಡಲಾಗಿದೆ. ಇದನ್ನು ಕಂಡ ಹಲವರು ರೀಟ್ವೀಟ್ ಮಾಡಿದ್ದು, ಪೋಸ್ಟ್ ವೈರಲ್ ಆಗಿದೆ. ಪೋಸ್ಟ್ ನೋಡಿದ ಬಾಲಿವುಡ್ ನಟ ರಣದೀಪ್ ಹೂಡಾ ಪ್ರತಿಕ್ರಿಯೆ ನೀಡಿದ್ದಾರೆ.

    ಈ ಕುರಿತು ಟ್ವೀಟ್ ಮಾಡಿರುವ ರಣದೀಪ್ ಹೂಡಾ, ಹೇ ಬೆಂಗಳೂರು ಸ್ವಲ್ಪ ಪ್ರೀತಿಯನ್ನು ತೋರಿಸುವುದನ್ನು ಮಾಡಿ, ಇವರು ವುಲಾರ್ ಫ್ಯಾಷನ್ ಫ್ಯಾಕ್ಟರಿ, ಜೆಪಿ ನಗರ, ಸಾರಕ್ಕಿ ಸಿಗ್ನಲ್, ಕನಕಪುರ ರಸ್ತೆ, ಬೆಂಗಳೂರು. ಈ ವಿಳಾಸದಲ್ಲಿ ಕುಳಿತಿರುತ್ತಾರೆ ಎಂದು ಮನವಿ ಮಾಡಿದ್ದಾರೆ.

    ಸುಡುವ ಬಿಸಿಲಿನಲ್ಲಿ ಕೊಡೆ ಹಿಡಿದು ವ್ಯಾಪಾರ ಮಾಡುವ ಈ ವೃದ್ಧನ ಕಥೆ ಪರಿಸ್ಥಿತಿ ಎಂತಹವರಿಗೂ ಮನಮಿಡಿಯುತ್ತದೆ. ರಸ್ತೆ ಪಕ್ಕ ಕೊಡೆ ಹಿಡಿದುಕಂಡು ಸಸಿಗಳನ್ನು ಮಾರುತ್ತಿದ್ದಾರೆ. ಆದರೆ ಗ್ರಾಹಕರು ಬಾರದ ಹಿನ್ನೆಲೆ ಬೇಸರಗೊಂಡಿದ್ದಾರೆ. ಸಸಿಗಳನ್ನು ಯಾರು ತೆಗೆದುಕೊಳ್ಳದ್ದಕ್ಕೆ ವೃದ್ಧನಿಗೆ ತುಂಬಾ ನೋವುಂಟಾಗಿದೆ. ಇದನ್ನು ಮನಗಂಡ ಸೈನಿಕರೊಬ್ಬರು ಟ್ವೀಟ್ ಮಾಡಿ, ಬಾಲಿವುಡ್ ನಟರಿಗೆ ಟ್ಯಾಗ್ ಮಾಡಿದ್ದಾರೆ. ವೃದ್ಧನಿಗೆ ಸಹಾಯ ಮಾಡುವಂತೆ ಮನವಿ ಮಾಡಿದ್ದಾರೆ.

  • ನಾಡಿನೊಳಗೆ ಕಾಡು ಬೆಳೆಸಲು ಹೊರಟ ಸಂವೇದನಾ ಯುವಕರು

    ನಾಡಿನೊಳಗೆ ಕಾಡು ಬೆಳೆಸಲು ಹೊರಟ ಸಂವೇದನಾ ಯುವಕರು

    ಉಡುಪಿ: ಕಾಡು ನಾಶ ಆಗುತ್ತಿದ್ದು, ಕಾಡಿರುವ ಜಾಗದಲ್ಲಿ ನಾಡು ನಿರ್ಮಾಣ ಆಗಿದೆ ಎಂಬ ಒಂದು ದೊಡ್ಡ ಕೂಗು ಪರಿಸರವಾದಿಗಳಿಂದ ಕೇಳಿ ಬರುತ್ತಿದೆ. ಹೀಗಾಗಿಯೇ ನಾಡಿನೊಳಗೆ ಕಾಡು ನಿರ್ಮಾಣ ಮಾಡಲು ಉಡುಪಿಯ ಸಂಸ್ಥೆಯೊಂದು ಮುಂದಾಗಿದೆ. ಪೇಟೆಯೊಳಗೆ ಒಂದು ಚಿಕ್ಕ ಜಾಗ ಸಿಕ್ಕರೂ ಸಾಕು ಅಲ್ಲಿ ದೊಡ್ಡ ಕಾಡು ನಿರ್ಮಾಣ ಮಾಡಬೇಕು ಎಂಬ ಕನಸು ಈ ಸಂಸ್ಥೆಯದ್ದಾಗಿದೆ.

    ಉಡುಪಿಯ ಸಂವೇದನಾ ಸಂಸ್ಥೆ ಸದ್ದಿಲ್ಲದೆ ಇಂತಹದೊಂದು ಕೆಲಸವನ್ನು ಮಾಡುತ್ತಿದೆ. ತನ್ನ ವನ ಸಂವೇದನಾ ಯೋಜನೆಯ ಅಂಗವಾಗಿ ಉಡುಪಿಯ ಮಲ್ಪೆ ಸಮೀಪದ ಕಂಗಣಬೆಟ್ಟು ಅಣ್ಣಪ್ಪ ಸ್ವಾಮಿ ದೇವಸ್ಥಾನದ ಪಕ್ಕದಲ್ಲಿ ಅರ್ಧ ಎಕರೆ ಜಮೀನಿನಲ್ಲಿ ಸಿರಿವನವನ್ನು ನಿರ್ಮಿಸಿದೆ. ಇದು ಸಂಸ್ಥೆಯ ಎರಡನೇ ವನ. ಇಲ್ಲಿ 23 ಜಾತಿಯ 600 ಗಿಡಗಳನ್ನು ತಿಂಗಳ ಹಿಂದೆ ನೆಟ್ಟಾಗಿದೆ.

    ಬಿಲ್ವ ಪತ್ರೆ, ಮುತ್ತುಗ, ಶಿವಾನಿ, ಬಾಗೆ ಮರೆ, ಸಿಲ್ವರ್ ಓಕ್, ಬೀಟೆ, ರಕ್ತ ಚಂದನ ಹೀಗೆ 15 ಜಾತಿ ಆಯುರ್ವೇದ ಗಿಡ ನೆಡಲಾಗಿದೆ. ಅದರ ಪಾಲನೆ ಪೋಷಣೆಗೆ ಸ್ವಯಂ ಸೇವಕರ ತಂಡಕ್ಕೆ ಜವಾಬ್ದಾರಿ ಕೊಡಲಾಗಿದೆ.

    ಸಿರಿವನದಲ್ಲಿ ಹಕ್ಕಿಗಳನ್ನು ಸೆಳೆಯುವ ಶಕ್ತಿಯಿರುವ ಮರಗಳನ್ನು ಬೆಳೆಸಲಾಗುತ್ತಿದೆ. ಈ ಪೈಕಿ ಮುತ್ತುಗ ಸಂಪೂರ್ಣ ಆಯುರ್ವೇದಿಕ್ ಸಸ್ಯ. ಎಲ್ಲಾ ಹಕ್ಕಿಗಳನ್ನು ಮುತ್ತುಗದ ಹೂವು ಆಕರ್ಷಿಸುತ್ತದೆ. ಮುತ್ತುಗಕ್ಕೆ ಆ ಶಕ್ತಿಯಿದೆ. ಸುಮಾರು 20ಕ್ಕೂ ಹಕ್ಕಿಗಳನ್ನು ಸೆಳೆಯುವ ಗಿಡಗಳನ್ನು ನೆಡಲಾಗಿದೆ. ಕಾಗೆಯನ್ನು ಯಾವ ಹೂವುಗಳೂ ಆಕರ್ಷಿಸುವುದಿಲ್ಲ.

    ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಸಂವೇದನಾ ಸಂಸ್ಥೆಯ ಸಂಸ್ಥಾಪಕ ಪ್ರಕಾಶ್, ಸಮಾನ ಮನಸ್ಕರ ತಂಡ ಪರಿಸರದ ಬಗ್ಗೆ ಚಿಂತನೆ ಮಾಡಿದಾಗ ಯೋಜನೆ ಚರ್ಚೆಗೆ ಬಂತು. ನಾಡಿನೊಳಗೊಂದು ಕಾಡು ನಿರ್ಮಾಣ ಆಗಬೇಕು. ಅದು ಮನುಷ್ಯನಿಗೂ ಪ್ರಾಣಿ ಪಕ್ಷಿಗಳಿಗೂ ಉಪಯೋಗ ಆಗಬೇಕು ಎಂಬುದು ನಮ್ಮ ಉದ್ದೇಶ. ನಮ್ಮ ಊರಿನ, ರಾಜ್ಯದ ಅಲ್ಲಲ್ಲಿ ಪುಟ್ಟ ಪುಟ್ಟ ಕಾಡುಗಳನ್ನು ನಾವು ನಿರ್ಮಾಣ ಮಾಡುವ ಸಂಕಲ್ಪ ಹೊಂದಿದ್ದೇವೆ. ಇದರ ಜೊತೆ ಪರಿಸರ ಕಾಳಜಿಯ ಹತ್ತು ಹಲವು ಕೆಲಸಗಳನ್ನು ಮಾಡುತ್ತಿದ್ದೇವೆ. ನಮಗೆ ಖಾಲಿ ಜಮೀನು ಮತ್ತು ಊರಿನ ಆಸಕ್ತ ಯುವಕ ತಂಡ ಸಿಕ್ಕರೆ ನಿಮ್ಮೂರಲ್ಲೂ ಇಂತಹ ವನ ಕಟ್ಟುತ್ತೇವೆ ಎಂದು ಹೇಳಿದರು.

  • ಗಿಡ ಉಳಿಸಲು ಹೋಗಿ ಪ್ರಾಣಿಗಳ ಜೀವಕ್ಕೆ ಕುತ್ತು ತಂದ ಅರಣ್ಯ ಇಲಾಖೆ – ನಾಲ್ಕು ಹಸು ಸಾವು

    ಗಿಡ ಉಳಿಸಲು ಹೋಗಿ ಪ್ರಾಣಿಗಳ ಜೀವಕ್ಕೆ ಕುತ್ತು ತಂದ ಅರಣ್ಯ ಇಲಾಖೆ – ನಾಲ್ಕು ಹಸು ಸಾವು

    ಶಿವಮೊಗ್ಗ: ಅರಣ್ಯ ಇಲಾಖೆಯ ಎಡವಟ್ಟಿನಿಂದ ವನ್ಯ ಜೀವಿಗಳ ಪ್ರಾಣಕ್ಕೆ ಸಂಚಕಾರ ಉಂಟಾಗಿರುವ ಘಟನೆ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಆಗುಂಬೆ ಅರಣ್ಯ ಪ್ರದೇಶದಲ್ಲಿ ನಡೆದಿದೆ.

    ಆಗುಂಬೆ ಸಮೀಪದ ಕಾರೀ ಕುಂಬ್ರಿ ಅರಣ್ಯದಲ್ಲಿ ಅರಣ್ಯ ಇಲಾಖೆ ಹೊಸದಾಗಿ ನೆಡುತೋಪು ನಿರ್ಮಿಸಿದ್ದು, ಇಲ್ಲಿ ಹಲವು ಜಾತಿಯ ವಿವಿಧ ಗಿಡಗಳನ್ನು ನೆಡಲಾಗಿದೆ. ಈ ಗಿಡಗಳನ್ನು ವನ್ಯಜೀವಿಗಳು ತಿನ್ನುತ್ತವೆ. ಇದರಿಂದ ಗಿಡಗಳು ಹಾಳಾಗಿ ಹೋಗುತ್ತವೆ ಎಂಬ ಉದ್ದೇಶದಿಂದ ಅರಣ್ಯ ಇಲಾಖೆ ಅಧಿಕಾರಿಗಳು ಗಿಡಗಳ ಬುಡದಲ್ಲಿ ವಿಷಪೂರಿತ ಔಷಧಿಯನ್ನು ಪ್ಲಾಸ್ಟಿಕ್ ಕವರ್‌ನಲ್ಲಿ ಕಟ್ಟಿ ಪ್ರತಿಯೊಂದು ಗಿಡಕ್ಕೂ ಕಟ್ಟಿದ್ದಾರೆ.

    ಈ ಮೂಲಕ ವನ್ಯ ಜೀವಿಗಳ ಸಂರಕ್ಷಿಸಬೇಕಾದ ಅರಣ್ಯ ಇಲಾಖೆಯೇ ವನ್ಯಜೀವಿಗಳ ಪ್ರಾಣಕ್ಕೆ ಸಂಚಕಾರ ತಂದೊಡ್ಡಿದೆ. ಅಲ್ಲದೇ ಅರಣ್ಯ ಪ್ರದೇಶದಲ್ಲಿ ಮೇವು ಅರಸಿ ಹೋಗುವ ಜಾನುವಾರುಗಳಿಗೂ ಕುತ್ತು ಉಂಟಾಗಿದೆ. ಈ ವಿಷಪೂರಿತ ಔಷಧಿ ಸೇವನೆಯಿಂದ ಆಗುಂಬೆ ಸುತ್ತಮುತ್ತಲಿನ ಗ್ರಾಮದಲ್ಲಿ ಇಂದು ನಾಲ್ಕು ಹಸುಗಳು ಸಹ ಪ್ರಾಣ ಕಳೆದುಕೊಂಡಿವೆ.

    ಅರಣ್ಯ ಇಲಾಖೆ ವಿರುದ್ಧ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜೊತೆಗೆ ಜಾನುವಾರುಗಳ ಸಾವಿಗೆ ಕಾರಣವಾಗಿರುವ ಅರಣ್ಯ ಸಿಬ್ಬಂದಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.

  • ಬಿಸಿಲನಾಡಲ್ಲಿ 5 ಲಕ್ಷ ಸಸಿ ನೆಡುವ ಅಭಿಯಾನ – ಪೊಲೀಸ್ ಇಲಾಖೆ ಕೆಲಸಕ್ಕೆ ಇಡೀ ನಗರವೇ ಸಾಥ್

    ಬಿಸಿಲನಾಡಲ್ಲಿ 5 ಲಕ್ಷ ಸಸಿ ನೆಡುವ ಅಭಿಯಾನ – ಪೊಲೀಸ್ ಇಲಾಖೆ ಕೆಲಸಕ್ಕೆ ಇಡೀ ನಗರವೇ ಸಾಥ್

    ರಾಯಚೂರು: ಐದು ಲಕ್ಷ ಸಸಿಗಳನ್ನ ನೆಡುವ ಕಾರ್ಯಕ್ರಮ ಅಂಗವಾಗಿ ನಗರದಲ್ಲಿಂದು ಪೊಲೀಸ್ ಇಲಾಖೆ, ವಿವಿಧ ಸಂಘ-ಸಂಸ್ಥೆಗಳ ಸಹಯೋಗದಲ್ಲಿ ಸಾವಿರಾರು ಬೀಜಗಳನ್ನ ನೆಡುವ ಕಾರ್ಯಕ್ರಮಕ್ಕೆ ಪೊಲೀಸ್ ಮೈದಾನದಲ್ಲಿ ಚಾಲನೆ ನೀಡಲಾಯಿತು.

    ಡೈರಿ ಹಾಲಿನ ಖಾಲಿ ಪ್ಯಾಕೆಟ್‍ಗಳಲ್ಲಿ, ನೀರಿನ ಬಾಟಲ್, ಅಡುಗೆ ಎಣ್ಣೆಯ ಪ್ಲಾಸ್ಟಿಕ್ ಪ್ಯಾಕೆಟ್‍ಗಳಲ್ಲಿ ಮಣ್ಣು ಗೊಬ್ಬರ ತುಂಬಿ ಬೀಜ ಹಾಕಿ ಸಸಿಗಳನ್ನು ತಯಾರಿಸುವ ಕಾರ್ಯಕ್ಕೆ ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ.ಸಿ.ಬಿ.ವೇದಮೂರ್ತಿ ಚಾಲನೆ ನೀಡಿದರು. ಜೊತೆಗೆ 186ನೇ ವಾರದ ಸ್ವಚ್ಛತಾ ಆಂದೋಲನ ಕಾರ್ಯಕ್ರಮವನ್ನೂ ಮುಂದುವರಿಸಲಾಯಿತು.

    ಈಗಾಗಲೇ ಬೇಸಿಗೆಯ ಬಿರು ಬಿಸಿಲು ಆರಂಭವಾಗಿದೆ. ಹೀಗಾಗಿ ಮುಂದಿನ ದಿನಗಳಲ್ಲಿ ಈ ತಾಪಮಾನ ಕಡಿಮೆಗೊಳಿಸಲು ನಾವು ಹೆಚ್ಚು ಹೆಚ್ಚು ಮರಗಳನ್ನು ಬೆಳೆಸಬೇಕಿದೆ. ಈ ನಿಟ್ಟಿನಲ್ಲಿ ನಮ್ಮ ಪ್ರಯತ್ನ ಸಾಗಿದೆ. ಜಿಲ್ಲೆಯ ಸಾರ್ವಜನಿಕರು ಈ ಕಾರ್ಯಕ್ಕೆ ಕೈ ಜೋಡಿಸಿದಲ್ಲಿ ಮುಂದಿನ ಮಳೆಗಾಲದ ವೇಳೆಗೆ ನಾವು ಐದು ಲಕ್ಷ ಸಸಿಗಳನ್ನು ಬೆಳೆಸುವ ಕಾರ್ಯ ಯಶಸ್ವಿಗೊಳಿಸಲು ಸಾಧ್ಯ ಎಂದು ವೇದಮೂರ್ತಿ ಹೇಳಿದರು.

    ಜಿಲ್ಲಾ ಪೋಲಿಸ್ ಇಲಾಖೆ ಜೊತೆಗೆ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಅರಣ್ಯ ಇಲಾಖೆ, ನಗರಸಭೆ, ಶಿಲ್ಪಾ ಫೌಂಡೇಶನ್, ಗ್ರೀನ್ ರಾಯಚೂರು ಮತ್ತು ರಾಯಚೂರು ನಗರದ ವಿವಿಧ ಸಂಘ ಸಂಸ್ಥೆಗಳು ಸಹಕಾರ ನೀಡಿವೆ. ಇನ್ನೂ ಈ ಸಂದರ್ಭದಲ್ಲಿ ಜಿಲ್ಲಾ ಉಪ ಅರಣ್ಯ ಸಂರಕ್ಷಣಾಧಿಕಾರಿಗಳಾದ ಎಚ್.ಆರ್. ಕುಮಾರ್, ಡಿ.ಎ.ಆರ್ ಪೊಲೀಸ್ ಉಪಾಧೀಕ್ಷಕರಾದ ಪ್ರಮಾನಂದ ಘೋಡ್ಕೆ ಮತ್ತು ಆರ್.ಪಿ.ಐ ಕೇದಾರನಾಥ ಭಾಗವಹಿಸಿದ್ದರು.

     

  • ಗಿಡ ನೆಟ್ಟು ನನಗೆ ಫೋಟೋ ಕಳುಹಿಸಿ- ಸಂಸದೆ ಸುಮಲತಾರಿಂದ ಪರಿಸರ ಜಾಗೃತಿ

    ಗಿಡ ನೆಟ್ಟು ನನಗೆ ಫೋಟೋ ಕಳುಹಿಸಿ- ಸಂಸದೆ ಸುಮಲತಾರಿಂದ ಪರಿಸರ ಜಾಗೃತಿ

    ಮಂಡ್ಯ: ಸಂಸದೆಯಾದ ಬಳಿಕ ಸುಮಲತಾ ಅವರು ಎಲ್ಲಾ ಕ್ಷೇತ್ರಗಳಿಗೆ ಭೇಟಿ ನೀಡುತ್ತಿದ್ದು, ಈ ವೇಳೆ ಅಲ್ಲಿ ಹಾರ, ಶಾಲು, ಪೇಟ ತೊಡಿಸಬೇಡಿ. ಬದಲಾಗಿ ಗಿಡ ನೆಡಿ ಎಂದು ಜನರಲ್ಲಿ ಪರಿಸರ ಜಾಗೃತಿ ಮೂಡಿಸಿದ್ದಾರೆ.

    ಈ ಸಂಬಂಧ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಧಿವೇಶನದ ಮುಗಿದ ಬಳಿಕ ಎಲ್ಲಾ ಕ್ಷೇತ್ರಗಳಿಗೂ ಭೇಟಿ ನೀಡುತ್ತಿದ್ದೇನೆ. ಮಳವಳ್ಳಿ, ಶ್ರೀರಂಗಪಟ್ಟಣ, ಮದ್ದೂರು, ಕೆ.ಆರ್ ನಗರ, ಮಂಡ್ಯ ಹೀಗೆ ಎಲ್ಲಾ ತಾಲೂಕುಗಳಿಗೂ ಹೋಗುತ್ತಿದ್ದೇನೆ. ಜನ ತುಂಬಾ ಪ್ರೀತಿಯಿಂದ ನನ್ನನ್ನು ಸ್ವಾಗತಿಸುತ್ತಿದ್ದಾರೆ ಎಂದರು.

    ಹೋದ ಕಡೆಯೆಲ್ಲಾ ನನಗೆ ಜನ ಪ್ರೀತಿಯಿಂದ ಹೂವಿನ ಹಾರ, ಶಾಲು, ಪೇಟ ತೆಗೆದುಕೊಂಡು ಬಂದು ಸನ್ಮಾನ ಮಾಡುತ್ತಾರೆ. ಈ ಮೂಲಕ ಅವರು ನನ್ನ ಮೇಲೆ ಪ್ರೀತಿ ತೋರಿಸುತ್ತಿದ್ದಾರೆ. ಆದರೆ ನಿಜಕ್ಕೂ ಅದು ನನಗೆ ಬೇಡ ಎಂದು ಮನವಿ ಮಾಡಿಕೊಳ್ಳುತ್ತಿದ್ದೇನೆ. ಈ ಪ್ರೀತಿಯನ್ನು ತೋರಿಸಿಕೊಳ್ಳುವುದಕ್ಕೆ ಅವರು ಎಲ್ಲಿಯಾದರೂ ಒಂದು ಸಸಿ ನೆಟ್ಟು ಆ ಫೋಟೋ ನನಗೆ ಕಳುಹಿಸಿದರೆ ಅವರ ಹೆಸರು ಹಾಕಿ ನನ್ನ ಫೇಸ್ ಬುಕ್ ಪೇಜಿನಲ್ಲಿ ಅಭಿನಂದಿಸುತ್ತೇನೆ ಎಂದು ತಿಳಿಸಿದ್ದಾರೆ.

    ದುಡ್ಡು ವೇಸ್ಟ್ ಆಗಬಾರದು, ಪರಿಸರಕ್ಕೆ ಒಳ್ಳೆಯದಾಗಬೇಕು. ಇಲ್ಲವೆಂದಲ್ಲಿ ಬಡವರಿಗೆ ಒಂದುಷ್ಟು ಏನಾದರೂ ಕೊಡುವುದಾದರೆ ಕೊಡಲಿ. ಸನ್ಮಾನಕ್ಕಾಗಿ ಹಣ ವ್ಯರ್ಥ ಮಾಡದಂತೆ ಕಾರ್ಯಕರ್ತರು, ಅಭಿಮಾನಿಗಳಲ್ಲಿ ಮನವಿ ಮಾಡಿದ್ದಾರೆ.

    ಉತ್ತರ ಕರ್ನಾಟಕದಲ್ಲಿ ಪ್ರವಾಹ ಉಂಟಾಗಿ ಅಲ್ಲಿ ಸಂತ್ರಸ್ತರಿದ್ದಾರೆ. ಅವರಿಗೆ ಸಹಾಯ ಮಾಡಲಿ. ಬರುವ ವಾರದಲ್ಲಿ ಉತ್ತರ ಕರ್ನಾಟಕದ ಪ್ರವಾಹ ಸಂತ್ರಸ್ತರಿಗೆ ಸಹಾಯ ಮಾಡುವ ದೃಷ್ಟಿಯಿಂದ ಯಾರು ಯಾರು ಏನೇನು ಮಾಡಬೇಕು ಎಂಬುದನ್ನು ಯೋಚನೆ ಮಾಡುತ್ತೇನೆ. ಒಟ್ಟಿನಲ್ಲಿ ನಮ್ಮ ಕೈಲಾದಷ್ಟು ಸಹಾಯ ಮಾಡಬೇಕು ಎಂಬುದನ್ನು ಒದೇ ವೇಳೆ ಮಂಡ್ಯ ಯುವಕರಲ್ಲಿ ಮನವಿ ಮಾಡಿಕೊಂಡರು.

  • ಮಗುವಿನ ನಾಮಕರಣಕ್ಕೆ ನಕ್ಷತ್ರ, ರಾಶಿಗೆ ಅನುಗುಣವಾಗಿ ಗ್ರೀನ್ ಗಿಫ್ಟ್

    ಮಗುವಿನ ನಾಮಕರಣಕ್ಕೆ ನಕ್ಷತ್ರ, ರಾಶಿಗೆ ಅನುಗುಣವಾಗಿ ಗ್ರೀನ್ ಗಿಫ್ಟ್

    ಉಡುಪಿ: ಸಾಮಾನ್ಯವಾಗಿ ಮನೆಯಲ್ಲಿ ಮಗು ಹುಟ್ಟಿದರೆ ಸಿಹಿ ಹಂಚುವ ಸಂಪ್ರದಾಯ ಇದೆ. ನಾಮಕರಣಕ್ಕೆ ನೂರಾರು ಜನ ಬಂಧು-ಮಿತ್ರರಿಗೆ ಊಟ ಹಾಕಿ ಖುಷಿ ಹಂಚಿಕೊಳ್ಳುತ್ತಾರೆ. ಆದರೆ ಜಿಲ್ಲೆಯಲ್ಲಿ ನಾಮಕರಣಕ್ಕೆ ಬಂದ ಬಂಧು-ಮಿತ್ರರಿಗೆಲ್ಲ ಸ್ಪೆಷಲ್ ಗಿಫ್ಟ್ ಕೊಡಲಾಗಿದೆ.

    ಉಡುಪಿಯಲ್ಲಿ ನಡೆದ ಧಾರ್ಮಿಕ ಕಾರ್ಯದ ಸಭಾಂಗಣಕ್ಕೆ ಬಂದ ಎಲ್ಲರ ರಾಶಿ ನಕ್ಷತ್ರ ಕೇಳಿದ್ದು ವಿಶೇಷವಾಗಿದೆ. ಉಡುಪಿಯ ಮಟ್ಟುವಿನಲ್ಲಿ ವಿಶಿಷ್ಟ ಕಾರ್ಯಕ್ರಮವೊಂದು ನಡೆದಿದೆ. ಇಲ್ಲಿನ ವಿಷ್ಣುಮೂರ್ತಿ ದೇವಸ್ಥಾನದ ತಂತ್ರಿಗಳಿಗೆ ಪುತ್ರ ಸಂತಾನವಾಗಿದೆ. ಈ ಪ್ರಯುಕ್ತ ಊರಿಗೆಲ್ಲಾ ಊಟ ಹಾಕಿಸಿದರು. ಊಟ ಮಾಡಿ ಕೈ ತೊಳೆಯುವಷ್ಟರಲ್ಲಿ ಅಪರೂಪದ ತಳಿಯ ಗಿಡಗಳನ್ನು ಹಂಚಿದ್ದಾರೆ. ಗಿಡಗಳನ್ನು ಹಂಚುವಾಗಲು ಕೂಡ ಧಾರ್ಮಿಕ ಪ್ರಜ್ಞೆಯನ್ನು ಮೆರೆದಿದ್ದಾರೆ. ತಮ್ಮ ಬಂಧುಗಳು ಹಾಗೂ ಸ್ನೇಹಿತರ ನಕ್ಷತ್ರ ಮತ್ತು ರಾಶಿಗೆ ಅನುಗುಣವಾಗಿ ಗಿಡಗಳನ್ನು ಕೊಟ್ಟು ವಿಶಿಷ್ಟ ಪರಂಪರೆಗೆ ನಾಂದಿ ಹಾಡಿದ್ದಾರೆ.

    ನಮ್ಮ ನಕ್ಷತ್ರಕ್ಕೂ ನಮ್ಮ ಸುತ್ತಲೂ ಇರಬೇಕಾದ ಸಸ್ಯ ಸಂಪತ್ತಿಗೂ ಒಂದು ನಂಟಿದೆ. ನಮ್ಮ ಜಾತಕದ ಅನುಸಾರ ನಮಗೆ ಬಾಧಿಸಬಹುದಾದ ಅನಾರೋಗ್ಯಗಳನ್ನು ಹೋಗಲಾಡಿಸುವ ಗಿಡಗಳನ್ನು ನೆಟ್ಟರೆ ಹೆಚ್ಚು ಅನುಕೂಲವಾಗುತ್ತದೆ. ಉದಾಹರಣೆಗೆ ಭರಣಿ ನಕ್ಷತ್ರದವರು ನೆಲ್ಲಿಯ ಗಿಡನೆಟ್ಟರೆ ದಾತು ವೃದ್ಧಿಯಾಗುತ್ತೆ ಅನ್ನೋದು ಶಾಸ್ತ್ರ. ರೋಹಿಣಿ ನಕ್ಷತ್ರವರಿಗೆ ನೇರಳೆ ಮರ, ಪುನರ್ವಸು ನಕ್ಷತ್ರಕ್ಕೆ ಬಿದಿರು, ಪುಷ್ಯ ನಕ್ಷತ್ರಕ್ಕೆ ಅಶ್ವತ್ಥ ಮರ. ಹೀಗೆ 27 ನಕ್ಷತ್ರಕ್ಕೂ ನಾನಾ ಬಗೆಯ ಗಿಡಗಳು ಅನುಕೂಲಕರವಾಗಲಿದೆ ಎಂದು ಧಾರ್ಮಿಕ ವಿದ್ವಾಂಸರು ನವೀನ್ ತಂತ್ರಿ ತಿಳಿಸಿದ್ದಾರೆ.

    ತಮ್ಮ ಮನೆಗೆ ಬಂದ ಪುಟ್ಟ ಕಂದಮ್ಮ ಕೇವಲ ತಮ್ಮ ಮನೆ ಬೆಳಗಿದರೆ ಸಾಲದು, ಊರನ್ನೂ ತಂಪಾಗಿಡಬೇಕು ಅನ್ನೋ ಪ್ರವೀಣ್ ತಂತ್ರಿಗಳ ಪರಿಸರ ಪ್ರಜ್ಞೆ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ. ಅದರಲ್ಲೂ ವಿಷ್ಣುಮೂರ್ತಿ ದೇವರ ಸನ್ನಿಧಾನದಲ್ಲಿ ಪಡೆದ ಈ ಗಿಡಗಳನ್ನು ದೇವರ ಪ್ರಸಾದವೆಂದೇ ಭಾವಿಸಿ ಜನರು ಲಾಲನೆ ಪಾಲನೆ ಮಾಡುವುದರಿಂದ ಪರಿಸರಕ್ಕೂ ಅನುಕೂಲವಾಗಲಿದೆ.

  • ಚಿತ್ರ ವೀಕ್ಷಣೆಗೆ ಬಂದ ವೀಕ್ಷಕರಿಗೆ ಉಪ್ಪಿ ಅಭಿಮಾನಿಗಳಿಂದ ಸಸಿ ವಿತರಣೆ

    ಚಿತ್ರ ವೀಕ್ಷಣೆಗೆ ಬಂದ ವೀಕ್ಷಕರಿಗೆ ಉಪ್ಪಿ ಅಭಿಮಾನಿಗಳಿಂದ ಸಸಿ ವಿತರಣೆ

    ರಾಮನಗರ: ನಟ ರಿಯಲ್ ಸ್ಟಾರ್ ಉಪೇಂದ್ರರವರ ಅಭಿಮಾನಿಗಳು ಹಾಗೂ ಪ್ರಜಾಕೀಯ ಪಕ್ಷದ ಕಾರ್ಯಕರ್ತರು ‘ಐ ಲವ್ ಯೂ’ ಸಿನಿಮಾ ವೀಕ್ಷಣೆಗೆ ಬಂದ ವೀಕ್ಷಕರಿಗೆ ಸಸಿಗಳನ್ನು ವಿತರಿಸುವ ಮೂಲಕ ವಿಭಿನ್ನ ರೀತಿಯಲ್ಲಿ ಪ್ರಮೋಷನ್ ಮಾಡಿದ್ದಾರೆ.

    ಜಿಲ್ಲೆಯ ಪ್ರಜಾಕೀಯ ಪಕ್ಷದ ಕಾರ್ಯಕರ್ತರು ಹಾಗೂ ಉಪ್ಪಿ ಅಭಿಮಾನಿಗಳು ನಗರದ ಶಾನ್ ಥಿಯೇಟರ್ ಬಳಿ ಸಿನಿಮಾ ವೀಕ್ಷಣೆಗೆ ಬಂದ ವೀಕ್ಷಕರಿಗೆ ವಿವಿಧ ಜಾತಿಯ ಹಣ್ಣಿನ ಸಸಿಗಳನ್ನು ವಿತರಿಸಿದ್ದಾರೆ. ಪರಿಸರ ದಿನಾಚರಣೆಯನ್ನ ಉಪೇಂದ್ರ ಚಿತ್ರ ವೀಕ್ಷಣೆಗೆ ಬಂದ ಅಭಿಮಾನಿಗಳ ಜೊತೆ ಆಚರಿಸುವ ಮೂಲಕ ಸಿನಿಮಾ ಪ್ರೀಯರಿಗೆ 1,000ಕ್ಕೂ ಹೆಚ್ಚು ಸಸಿಗಳನ್ನು ವಿತರಿಸಿದ್ದಾರೆ.

    ಇದೇ ವೇಳೆ ಸಸಿ ವಿತರಣೆ ಜೊತೆಗೆ ಸಾರ್ವಜನಿಕರು ಅನುಭವಿಸುತ್ತಿರುವ ಸಮಸ್ಯೆಗಳನ್ನ ತಿಳಿಸುವಂತೆ ಅರ್ಜಿಗಳನ್ನು ವಿತರಿಸಿದ್ದಾರೆ. ಬಳಿಕ ಸಾರ್ವಜನಿಕರ ದೂರನ್ನ ಆಡಳಿತ ಪಕ್ಷದ ಶಾಸಕರು, ಸಚಿವರ ಗಮನಕ್ಕೆ ತಂದು ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸ ಮಾಡುವುದಾಗಿ ಭರವಸೆ ನೀಡಿದ್ದಾರೆ.

    ‘ಐ ಲವ್ ಯೂ’ ಸಿನಿಮಾವನ್ನು ಆರ್. ಚಂದ್ರು ನಿರ್ದೇಶನ ಮಾಡಿದ್ದು, ಉಪೇಂದ್ರ ಅವರಿಗೆ ನಾಯಕಿಯಾಗಿ ರಚಿತಾ ರಾಮ್ ಮತ್ತು ಸೋನುಗೌಡ ಕಾಣಿಸಿಕೊಂಡಿದ್ದಾರೆ. ಅದರಲ್ಲೂ ರಚಿತಾ ರಾಮ್ ಅವರು ತುಂಬಾ ಬೋಲ್ಡ್ ಆಗಿ ಕಾಣಿಸಿಕೊಂಡಿದ್ದಾರೆ.

  • ವಿನೂತನವಾಗಿ ನಿಶ್ಚಿತಾರ್ಥ ಮಾಡ್ಕೊಂಡ ಜೋಡಿ

    ವಿನೂತನವಾಗಿ ನಿಶ್ಚಿತಾರ್ಥ ಮಾಡ್ಕೊಂಡ ಜೋಡಿ

    ಚಿಕ್ಕಮಗಳೂರು: ಹೊಸ ಜೀವನಕ್ಕೆ ಕಾಲಿಡುತ್ತಿರುವ ವಧು-ವರರು ಉಂಗುರ, ಹೂವಿನ ಹಾರ ಹಾಕಿ ನಿಶ್ಚಿತಾರ್ಥ ಮಾಡಿಕೊಳ್ಳೋದು ಸಾಮಾನ್ಯವಾಗಿದೆ. ಆದರೆ ಜಿಲ್ಲೆಯಲ್ಲಿ ಜೋಡಿಯೊಂದು ಗಿಡ ನೆಡುವ ಮೂಲಕ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ.

    ಚಿಕ್ಕಮಗಳೂರು ನಗರದ ಕಾವ್ಯ ಹಾಗೂ ರಂಜಿತ್ ಮಾವಿನ ಗಿಡ ನೆಡುವ ಮೂಲಕ ನಿಶ್ಚಿತಾರ್ಥವನ್ನ ಮಾಡಿಕೊಂಡಿದ್ದಾರೆ. ಇವರು ಉಂಗುರ ಹಾಗೂ ಹಾರ ಬದಲಿಸಿಕೊಳ್ಳುವ ಬದಲು ಪರಿಸರ ಕಾಳಜಿ ಮೆರೆದು ಉಳಿದವರಿಗೂ ಮಾದರಿಯಾಗಿದ್ದಾರೆ. ಇದನ್ನೂ ಓದಿ: ಉಪನಯನದಲ್ಲಿ ಸಿಹಿ ಬದಲಾಗಿ ಬೀಜದುಂಡೆ ನೀಡಿ ಪರಿಸರ ಕಾಳಜಿ ಮೆರೆದ ಕುಟುಂಬ

    ಕೇವಲ ಗಿಡ ನೆಡುವುದಲ್ಲದೇ ಮದುವೆ ದಿನಾಂಕ ನಿಗದಿಯಾಗಿ ತಾಳಿ ಕಟ್ಟುವ ಕೊನೆಯ ಘಳಿಗೆವರೆಗೂ ಗಿಡವನ್ನ ಸಂರಕ್ಷಿಸಿ, ಪೋಷಿಸುವ ಜವಾಬ್ಧಾರಿ ನವ ಜೋಡಿ ಹೊತ್ತಿರುವುದು ವಿಶೇಷವಾಗಿದೆ. ಗಿಡ ನೆಡುವ ಮೂಲಕ ಪರಿಸರ ಉಳಿಸಿ ಅಭಿಯಾನ ಆರಂಭಿಸುವ ಮೂಲಕ ಮದುವೆಗೂ ಮುನ್ನ ಈ ಜೋಡಿಗಳು ಪರಿಸರ ಜವಾಬ್ದಾರಿ ಮೆರೆದಿದ್ದಾರೆ.

    ಇತ್ತೀಚೆಗೆ ಮದುವೆಗೆ ಬಂದವರಿಗೆ ಉಡುಗೊರೆಯಾಗಿ ಗಿಡವನ್ನು ಕೊಡುವುದು ರೂಢಿಯಾಗಿದೆ. ಆದರೆ ಈ ಜೋಡಿ ಮದುವೆಗೂ ಮುನ್ನವೇ ಪರಿಸರದ ಬಗ್ಗೆ ಕಾಳಜಿ ಮೂಡಿಸುವಂತಹ ಕಾರ್ಯ ಮಾಡಿದ್ದಾರೆ.

  • ಚಾಮರಾಜನಗರದಲ್ಲೊಂದು ವಿಶೇಷ ಮದ್ವೆ – ಜೋಡಿಯಿಂದ ಅತಿಥಿಗಳಿಗೆ ಸಸಿ ಗಿಫ್ಟ್

    ಚಾಮರಾಜನಗರದಲ್ಲೊಂದು ವಿಶೇಷ ಮದ್ವೆ – ಜೋಡಿಯಿಂದ ಅತಿಥಿಗಳಿಗೆ ಸಸಿ ಗಿಫ್ಟ್

    ಚಾಮರಾಜನಗರ: ಸಾಮಾನ್ಯವಾಗಿ ಮದುವೆ ಅಂದಮೇಲೆ ಬಂದ ಅಥಿತಿಗಳಿಗೆ ತಾಂಬೂಲದ ವೇಳೆ ಉಡುಗೊರೆಗಳನ್ನು ಕೊಡುವುದು ಸಾಮಾನ್ಯ. ಆದರೆ ಇಲ್ಲೊಂದು ಮದುವೆ ಮನೆಯಲ್ಲಿ ಅತಿಥಿಗಳಿಗೆ ಪರಿಸರ ರಕ್ಷಣೆಯ ಬಗ್ಗೆ ಪಾಠ ಮಾಡುವುದರ ಜೊತೆಗೆ, ಪರಿಸರ ಸಂರಕ್ಷಣೆಗೆಂದು ಒಂದು ಗಿಫ್ಟ್ ಕೂಡ ನೀಡಿದ್ದಾರೆ.

    ಮರ ಬೆಳೆಸಿ ಪರಿಸರ ರಕ್ಷಿಸಿ ಎನ್ನುವ ಸಂದೇಶದೊಂದಿಗೆ ದಿವ್ಯಜ್ಯೋತಿ ಮತ್ತು ನಂದೀಶ್ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಆಧುನಿಕರಣ ಜನರನ್ನು ಆವರಿಸುತ್ತಿರುವ ದಿನಗಳಲ್ಲಿ ಪರಿಸರವೂ ಕೂಡ ನಾಶವಾಗುತ್ತಿದೆ. ಈ ಪರಿಸರದ ಅವನತಿ ಆಗಬಾರದು ಎಂದು ನವ ಜೋಡಿಗಳು ಹಾಗೂ ಅವರ ಪೋಷಕರು ಜನರಿಗೆ ಪರಿಸರದ ಪಾಠ ಹೇಳಿ ಕೊಡುವುದರ ಜೊತೆಗೆ ಬಂದಿದ್ದ ಅತಿಥಿಗಳಿಗೆ ತಾಂಬೂಲದ ಜೊತೆಗೆ ಸಸಿಗಳನ್ನು ಉಡುಗೊರೆಯನ್ನಾಗಿ ನೀಡಿದ್ದಾರೆ.

    ಚಾಮರಾಜನಗರ ಜಿಲ್ಲೆಯ ವ್ಯಾಪ್ತಿಯ ಬಂಡೀಪುರ, ಬಿಳಿಗಿರಿ ರಂಗನಬೆಟ್ಟ, ಮಲೆಮಹದೇಶ್ವರ ಬೆಟ್ಟದ ಕಾಡುಗಳು ಬೆಂಕಿ ಬಿದ್ದು ನಾಶವಾಗಿತ್ತು. ಈ ರೀತಿ ಕಾಡು ನಾಶವಾದರೆ ನಮ್ಮ ಪರಿಸರ ಸಂಪೂರ್ಣವಾಗಿ ಹಾಳಾಗುತ್ತದೆ. ಹೀಗಾಗಿ ಪರಿಸರಕ್ಕೆ ನಮ್ಮದೊಂದು ಕಾಣಿಕೆ ಇರಲಿ ಎಂದು ಬಂದ ಅಥಿತಿಗಳಿಗೆ ಬೇವು, ಸಿಲ್ವರ್, ಸೀಬೆ, ನಿಂಬೆ ಸೇರಿದಂತೆ ಇತರೆ ಜಾತಿಯ ಗಿಡಗಳನ್ನು ಉಡುಗೊರೆಯನ್ನಾಗಿ ನೀಡಿದ್ದಾರೆ ಎಂದು ಮದುವೆಗೆ ಬಂದ ಅತಿಥಿ ರವೀಶ್‍ಮೂರ್ತಿ ಹೇಳಿದ್ದಾರೆ.

  • ಚೀನಾದಲ್ಲಿ ಜನರಲ್ ಮೋಟಾರ್ಸ್ ಸಂಸ್ಥೆಯ ಕಾರು ಉತ್ಪಾದನೆ ನಿಲ್ಲಿಸಿ: ಡೊನಾಲ್ಡ್ ಟ್ರಂಪ್

    ಚೀನಾದಲ್ಲಿ ಜನರಲ್ ಮೋಟಾರ್ಸ್ ಸಂಸ್ಥೆಯ ಕಾರು ಉತ್ಪಾದನೆ ನಿಲ್ಲಿಸಿ: ಡೊನಾಲ್ಡ್ ಟ್ರಂಪ್

    ವಾಷಿಂಗ್ಟನ್: ಅಮೆರಿಕ ಮೂಲದ ಕಾರು ಉತ್ಪಾದಕ ಸಂಸ್ಥೆ ಜನರಲ್ ಮೋಟಾರ್ಸ್ ಗೆ ಚೀನಾದಲ್ಲಿ ಉತ್ಪಾದನೆ ನಿಲ್ಲಿಸುವಂತೆ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸೂಚಿಸಿದ್ದಾರೆ ಎನ್ನುವ ಮಾಹಿತಿಯನ್ನು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.

    ಅಮೆರಿಕದ ಪ್ರಖ್ಯಾತ ಕಾರು ತಯಾರಿಕಾ ಸಂಸ್ಥೆಯಾದ ಜನರಲ್ ಮೋಟಾರ್ಸ್ ಚೀನಾದಲ್ಲಿ ಉತ್ಪಾದನಾ ಘಟಕವನ್ನು ಹೊಂದಿದೆ. ಆದರೆ ಈಗ ಈ ಘಟಕವನ್ನು ಸ್ಥಗಿತಗೊಳಿಸಿ ಅಮೆರಿಕದ ಬಹಿಯೊ ರಾಜ್ಯದಲ್ಲಿ ಘಟಕ ಸ್ಥಾಪಿಸಲು ಸೂಚನೆ ನೀಡಿದೆ ಎಂದು ತಿಳಿದು ಬಂದಿದೆ.

    ಚೀನಾದಲ್ಲಿ ಸ್ಥಗಿತ ಮಾಡಲು ಹೇಳಿದ್ದೇಕೆ?
    ಇತ್ತೀಚೆಗೆ ಜನರಲ್ ಮೋಟಾರ್ಸ್ ಕಂಪನಿ ತನ್ನ ಅಮೆರಿಕ ಮತ್ತು ಕೆನಡಾ ಘಟಕಗಳಲ್ಲಿರುವ 14,800 ಉದ್ಯೋಗಗಳನ್ನು ಕಡಿತಗೊಳಿಸಲು ಚಿಂತನೆ ನಡೆಸುತ್ತಿದ್ದು, ಇದರಿಂದಾಗಿ 2020ರ ಅಂತ್ಯಕ್ಕೆ ಕಂಪನಿಗೆ ಸುಮಾರು 4.5 ಬಿಲಿಯನ್ ಡಾಲರ್ ಉಳಿತಾಯವಾಗುತ್ತದೆಂದು ಘೋಷಿಸಿತ್ತು.ಕಂಪನಿಯ ನಿರ್ಧಾರವನ್ನು ಡೊನಾಲ್ಡ್ ಟ್ರಂಪ್ ಖುದ್ದು ಶ್ವೇತ ಭವನದಲ್ಲಿ ಈ ವಿಷಯವನ್ನು ಪ್ರಸ್ತಾಪಿಸಿ, ಜನರಲ್ ಮೋಟಾರ್ಸ್ ತೀರ್ಮಾನ ನಮಗೆ ಒಪ್ಪಿಗೆ ಆಗಲಿಲ್ಲ ಅಂತ ಅಸಮಾಧಾನ ಹೊರಹಾಕಿದ್ದರು.

    ಕಂಪನಿಯ ನಿರ್ಣಯದಿಂದ ಅಮೆರಿಕಾದ ಬಹಿಯೊ ಮತ್ತು ಮಿಚಿಗನ್ ರಾಜ್ಯಗಳ ಜನರ ಉದ್ಯೋಗದ ಮೇಲೆ ತೀವ್ರ ಪರಿಣಾಮ ಬೀರುತ್ತದೆ. ಹೀಗಾಗಿ ಜನರಲ್ ಮೋಟಾರ್ಸ್ ಚೀನಾದಲ್ಲಿರುವ ತಮ್ಮ ಉತ್ಪಾದನಾ ಘಟಕವನ್ನು ಸ್ಥಗಿತಗೊಳಿಸಿ ಬಹಿಯೊದಲ್ಲಿ ಹೊಸ ಘಟಕವನ್ನು ಸ್ಥಾಪಿಸುವಂತೆ ಹೇಳಿತ್ತು. ಈ ಬಗ್ಗೆ ಜನರಲ್ ಮೋಟಾರ್ಸ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಬರ್ರೆ ಅವರಿಗೆ ತಿಳಿಸಿದ್ದಾರೆಂದು ಸ್ಥಳೀಯ ಸಂಸ್ಥೆಯೊಂದು ವರದಿ ಮಾಡಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv