Tag: Plasma Therapy

  • ಗುಣಮುಖರಾದವರು ಧರ್ಮ ಮರೆತು ಪ್ಲಾಸ್ಮಾ ದಾನ ಮಾಡಿ ಜೀವ ಉಳಿಸಿ: ಕೇಜ್ರಿವಾಲ್

    ಗುಣಮುಖರಾದವರು ಧರ್ಮ ಮರೆತು ಪ್ಲಾಸ್ಮಾ ದಾನ ಮಾಡಿ ಜೀವ ಉಳಿಸಿ: ಕೇಜ್ರಿವಾಲ್

    ನವದೆಹಲಿ: ಕೊರೊನಾ ವೈರಸ್‍ನಿಂದ ಚೇತರಿಸಿಕೊಂಡ ವ್ಯಕ್ತಿಗಳು, ಸೋಂಕಿತ ರೋಗಿಗಳಿಗೆ ಧರ್ಮ ಮೀರಿ ಪ್ಲಾಸ್ಮಾ ದಾನ ಮಾಡಬೇಕು ಎಂದು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಮನವಿ ಮಾಡಿದ್ದಾರೆ.

    ದೆಹಲಿಯಲ್ಲಿ ಮಾತನಾಡಿರುವ ಅವರು, ಕೊರೊನಾ ವಿರುದ್ಧ ಹೋರಾಟಕ್ಕೆ ಪ್ಲಾಸ್ಮಾ ಥೆರಪಿ ಹೊಸ ಆಯುಧ, ರಕ್ತಕ್ಕೆ ಯಾವುದೇ ಧರ್ಮ ಬೇಧವಿಲ್ಲ, ಹಿಂದೂ ರಕ್ತ ಮುಸ್ಲಿಂರನ್ನು, ಮುಸ್ಲಿಂ ರಕ್ತ ಹಿಂದೂಗಳನ್ನು ಉಳಿಸವುದು, ಪೂರ್ವಾಗ್ರಹ ಪೀಡಿತರಾಗದೆ ಪ್ಲಾಸ್ಮಾ ದಾನ ಮಾಡಬೇಕು ಎಂದು ಕೇಳಿಕೊಂಡಿದ್ದಾರೆ.

    ನಾವೇಲ್ಲರೂ ಕೊರೊನಾ ಸಂಕಷ್ಟದಿಂದ ಹೊರ ಬಂದು ಬದುಕಲು ಪ್ರಯತ್ನಿಸುತ್ತೇವೆ. ಗುಣಮುಖರಾದ ವ್ಯಕ್ತಿಗಳು ಪ್ಲಾಸ್ಮಾ ದಾನ ಮಾಡಬೇಕು. ನೀವು ನೀಡುವ ಪ್ಲಾಸ್ಮಾ ಹಿಂದೂ, ಮುಸ್ಲಿಂ ಯಾರ ಜೀವ ಉಳಿಸಬಹುದು ಎಂದು ಯಾರೂ ಊಹಿಸಲು ಸಾಧ್ಯವಿಲ್ಲ, ನಾವು ಜೀವ ಉಳಿಸುವ ಕೆಲಸ ಮಾಡಬೇಕು ಎಂದರು.

    ಕೊರೊನಾ ಸೋಂಕಿತ ವ್ಯಕ್ತಿಗಳಲ್ಲಿ ಪ್ಲಾಸ್ಮಾ ಥೆರಪಿ ಬಳಿಕ ಚೇತರಿಕೆ ಕಂಡು ಬಂದಿದ್ದು, ದೆಹಲಿಯಲ್ಲಿ ಹಲವು ರೋಗಿಗಳು ಗುಣ ಮುಖರಾಗಿದ್ದಾರೆ. ಈ ಹಿನ್ನಲೆ ಕೊರೊನಾದಿಂದ ಗುಣಮುಖರಾದ ಜನರಿಗೆ ಪ್ಲಾಸ್ಮಾ ದಾನ ಮಾಡಲು ಕೋರಿದ್ದಾರೆ.

    ಪ್ಲಾಸ್ಮಾ ಥೆರಪಿ ಎಂದರೇನು?
    ಕೊರೊನಾದಿಂದ ಚೇತರಿಸಿಕೊಂಡ ವ್ಯಕ್ತಿಯ ರಕ್ತದಲ್ಲಿ ಆ್ಯಂಟಿಬಾಡಿಗಳು ಇರುತ್ತವೆ. ಅವು ರೋಗ ನಿರೋಧಕ ಶಕ್ತಿ ಹೊಂದಿರುತ್ತವೆ. ಆ ಪ್ಲಾಸ್ಮಾವನ್ನು ತೆಗೆದು ಸೋಂಕಿತ ಅಥವಾ ಸೋಂಕು ಶಂಕೆ ಹೊಂದಿರುವ ವ್ಯಕ್ತಿಗೆ ನೀಡುವುದನ್ನೇ ಪ್ಲಾಸ್ಮಾ ಥೆರಪಿ ಎನ್ನಲಾಗುತ್ತದೆ. ಪ್ಲಾಸ್ಮಾ ಥೆರಪಿಗೆ ಒಳಗಾದ ವ್ಯಕ್ತಿಗಳು ಬೇಗನೆ ಕೊರೊನಾದಿಂದ ಗುಣಮುಖರಾಗುವುದು ವಿದೇಶಗಳಲ್ಲಿ ಸಾಬೀತಾಗಿದೆ.

    ಸೋಂಕ ಮುಕ್ತವಾದ ವ್ಯಕ್ತಿ ಚೇತರಿಸಿಕೊಂಡ 28 ದಿನಗಳ ಬಳಿಕ ಪ್ಲಾಸ್ಮಾವನ್ನು ದಾನ ಮಾಡಬಹುದು, ಮೊದಲ ಪರೀಕ್ಷೆಯಲ್ಲಿ ಪಾಸಿಟಿವ್ ಬಂದು, 2ನೇ ಪರೀಕ್ಷೆಯಲ್ಲಿ ನೆಗೆಟಿವ್ ಬಂದವರು ಕೂಡಾ ದಾನ ಮಾಡಬಹುದಾಗಿದೆ. ದಾನಿಯೊಬ್ಬನ ಪ್ಲಾಸ್ಮಾವನ್ನು ಅದೇ ರಕ್ತದ ಗುಂಪಿನ ರೋಗಿಗಳಿಗೆ ಮಾತ್ರ ನೀಡಬಹುದು ಎಂದು ತಜ್ಞರು ಹೇಳಿದ್ದಾರೆ.

  • ಪ್ಲಾಸ್ಮಾ ಥೆರಪಿ ಆರಂಭವಾಗಿರುವುದು ರಾಜ್ಯಕ್ಕೆ ಐತಿಹಾಸಿಕ ಕ್ಷಣ: ಡಾ. ಸುಧಾಕರ್

    ಪ್ಲಾಸ್ಮಾ ಥೆರಪಿ ಆರಂಭವಾಗಿರುವುದು ರಾಜ್ಯಕ್ಕೆ ಐತಿಹಾಸಿಕ ಕ್ಷಣ: ಡಾ. ಸುಧಾಕರ್

    ಬೆಂಗಳೂರು: ಕೋವಿಡ್ ಸೋಂಕಿತರಿಗೆ ಹೆಚ್ಚು ಪರಿಣಾಮಕಾರಿ ಚಿಕಿತ್ಸೆ ನೀಡುವಲ್ಲಿ ಯಶಸ್ವಿಯಾಗಿರುವ ಪ್ಲಾಸ್ಮಾ ಚಿಕಿತ್ಸೆಗೆ ಇಂದು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಾಲನೆ ನೀಡಲಾಗಿದೆ. ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಶ್ರೀರಾಮುಲು ಅವರು ಈ ಉಪಕ್ರಮಕ್ಕೆ ಚಾಲನೆ ನೀಡಿದರು. ಗಂಭೀರ ಪರಿಸ್ಥಿತಿಯಲ್ಲಿರುವ ಕೊರೊನಾ ಸೋಂಕಿತ ವ್ಯಕ್ತಿಗಳಿಗೆ ಪ್ಲಾಸ್ಮಾ ಚಿಕಿತ್ಸೆ ಪರಿಣಾಮಕಾರಿಯಾಗಿ ಇರುವುದು ಕಂಡು ಬಂದಿದೆ. ಇದೀಗ ರಾಜ್ಯದಲ್ಲಿ ಕೂಡ ಈ ಪ್ರಕ್ರಿಯೆ ಲಭ್ಯವಾದಂತಾಗಿದೆ.

    ಈ ಸಂದರ್ಭದಲ್ಲಿ ಮಾತನಾಡಿದ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ ಸುಧಾಕರ್ ಅವರು, ಕರ್ನಾಟಕ ರಾಜ್ಯಕ್ಕೆ ಇದೊಂದು ಐತಿಹಾಸಿಕ ಕ್ಷಣವಾಗಿದ್ದು, ಪ್ಲಾಸ್ಮಾ ಚಿಕಿತ್ಸೆಯಿಂದ ಸೋಂಕಿತರು ಗುಣಮುಖರಾದರೆ ಅತ್ಯಂತ ಸಂತೋಷದ ಸಂಗತಿ ಎಂದು ಹೇಳಿದರು. ಇಂದಿನಿಂದ ಇದರ ಕ್ಲಿನಿಕಲ್ ಪ್ರಯೋಗ ಆರಂಭವಾಗಿದ್ದು, ವೆಂಟಿಲೇಟರ್ ನಲ್ಲಿರುವ ಪೀಡಿತರಿಗೆ ಈ ಚಿಕಿತ್ಸೆ ನೀಡಲಾಗುವುದು. ಕೋವಿಡ್‍ನಿಂದ ಗುಣಮುಖರಾಗಿರುವ ವ್ಯಕ್ತಿಯೊಬ್ಬರು ಚಿಕಿತ್ಸೆಗೆ ಸಹಕರಿಸಲು ಮುಂದೆ ಬಂದಿದ್ದಾರೆ. ಅವರಿಗೆ ನಾನು ಅಭಿನಂದನೆ ಸಲ್ಲಿಸುತ್ತೇನೆ ಎಂದು ಸಚಿವರು ತಿಳಿಸಿದ್ದಾರೆ.

    ಈ ಚಿಕಿತ್ಸೆಗೆ ಗುಣಮುಖರಾಗಿರುವ ವ್ಯಕ್ತಿಗಳು ಸ್ವಯಂಪ್ರೇರಿತರಾಗಿ ಬಂದು ಸಹಕಾರ ನೀಡಬೇಕಾಗಿದೆ. ಗುಣಮುಖರಾಗಿರುವ ವ್ಯಕ್ತಿಗಳು 2 ವಾರದ ಅಂತರದಲ್ಲಿ ಕನಿಷ್ಠ ಇಬ್ಬರು ಅಥವಾ ಮೂವರಿಗೆ ಈ ನೆರವು ನೀಡಬಹುದಾಗಿದ್ದು, ಈ ನಿಟ್ಟಿನಲ್ಲಿ ಸಹಕರಿಸಬೇಕೆಂದು ಸಚಿವ ಸುಧಾಕರ್ ಹೇಳಿದರು

    ವಿಕ್ಟೋರಿಯಾ ಆಸ್ಪತ್ರೆಯ ಡೀನ್ ಡಾ.ಸಿ.ಆರ್ ಜಯಂತಿ, ಬೆಂಗಳೂರು ಇನ್‍ಸ್ಟಿಟ್ಯೂಟ್ ಆಫ್ ಆಂಕಾಲಜಿಯ ಡಾ. ವಿಶಾಲ್ ರಾವ್ ಹಾಗೂ ಬೆಂಗಳೂರು ಮೆಡಿಕಲ್ ಕಾಲೇಜಿನ ಪ್ರಾಂಶುಪಾಲ ಡಾ. ರಮೇಶ್ ಈ ಸಂದರ್ಭದಲ್ಲಿ ಹಾಜರಿದ್ದರು.

    https://twitter.com/mla_sudhakar/status/1253932907250368512

    ಪ್ಲಾಸ್ಮಾ ಥೆರಪಿ:
    ಪ್ಲಾಸ್ಮಾ ಥೆರಪಿಯು ನೆರೆಯ ಕೇರಳ ರಾಜ್ಯದಲ್ಲಿ ಅತ್ಯಂತ ಯಶಸ್ವಿಯಾಗಿದ್ದು, ಕರ್ನಾಟಕದಲ್ಲೂ ಇದನ್ನು ನಡೆಸಲು ಅನುಮತಿ ನೀಡುವಂತೆ ಕೋರಿ ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಸರ್ಕಾರ ಮನವಿ ಸಲ್ಲಿಸಿತ್ತು. ಇತ್ತೀಚೆಗಷ್ಟೇ ಕೇಂದ್ರ ಸಾರ್ವಜನಿಕ ಆರೋಗ್ಯ ನಿರ್ದೇಶನಾಲಯವು ಬೆಂಗಳೂರು ಇನ್‍ಸ್ಟಿಟ್ಯೂಟ್ ಆಫ್ ಆಂಕಾಲಜಿಯ ವೈದ್ಯ ಡಾ. ವಿಶಾಲ್ ರಾವ್ ಅವರಿಗೆ ಪ್ಲಾಸ್ಮಾ ಚಿಕಿತ್ಸೆ ನೀಡಲು ಅನುಮತಿ ನೀಡಿದ್ದನ್ನು ಇಲ್ಲಿ ಸ್ಮರಿಸಬಹುದಾಗಿದೆ. ಪ್ಲಾಸ್ಮಾ ಥೆರಪಿಯನ್ನು ಈ ಹಿಂದೆಯೂ ಕೂಡ ಎಬೋಲಾ ಮತ್ತು ಸ್ವೈನ್ ಫ್ಲೂ ನಂತಹ ಕಾಯಿಲೆಗಳಿಗೆ ಯಶಸ್ವಿಯಾಗಿ ಉಪಯೋಗಿಸಲಾಗಿದ್ದು, ಕೋವಿಡ್ ಸೋಂಕಿತರಿಗೆ ಪರಿಣಾಮಕಾರಿ ಚಿಕಿತ್ಸೆ ನೀಡುವ ನಿಟ್ಟಿನಲ್ಲಿ ಇದೊಂದು ಮಹತ್ವದ ಬೆಳವಣಿಗೆ ಎಂದೇ ಹೇಳಬಹುದಾಗಿದೆ.

    ಏನಿದು ಪ್ಲಾಸ್ಮಾ ಥೆರಪಿ?
    * ಪ್ಲಾಸ್ಮಾ ಎಂದರೆ ರಕ್ತದ ಕಣ (ಹಳದಿ ದ್ರವಾಂಶ). ರಕ್ತದಲ್ಲಿರುವ ರೋಗ ನಿರೋಧಕ ಅಂಶ ಇರುವುದು ಪ್ಲಾಸ್ಮಾದಲ್ಲಿ
    * ಪ್ಲಾಸ್ಮಾ ಥೆರಪಿ ಎಂದರೆ ಗುಣಮುಖರಾಗಿರುವ ವ್ಯಕ್ತಿಯ ರಕ್ತದಲ್ಲಿರುವ ಪ್ಲಾಸ್ಮಾವನ್ನು ಚಿಂತಾಜನಕ ಸ್ಥಿತಿಯಲ್ಲಿರುವ ರೋಗಿಯ ರಕ್ತಕ್ಕೆ ಇಂಜೆಕ್ಟ್ ಮಾಡುವುದು.
    * ಗುಣಮುಖರಾದವರ ರಕ್ತದಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಿರುತ್ತೆ. ಇದೇ ರಕ್ತದಲ್ಲಿರುವ ಪ್ಲಾಸ್ಮಾವನ್ನು ರೋಗಿಗೆ ನೀಡಿದರೆ ಆಗ ಆ ರೋಗಿಯ ರೋಗ ನಿರೋಧಕ ಶಕ್ತಿಯೂ ಹೆಚ್ಚಾಗಿ ಶೀಘ್ರ ಗುಣಮುಖರಾಗುತ್ತಾರೆ.
    * ಕೊರೊನಾದಿಂದ ಗುಣಮುಖರಾಗಿರುವ ವ್ಯಕ್ತಿಯ ಪ್ಲಾಸ್ಮಾವನ್ನು ಕೊರೊನಾದಿಂದಾಗಿ ಚಿಂತಾಜನಕ ಸ್ಥಿತಿಯಲ್ಲಿರುವ ರೋಗಿಗೆ ಇಂಜೆಕ್ಟ್ ಮಾಡಿದರೆ ಆ ರೋಗಿಯ ರೋಗ ನಿರೋಧಕ ಶಕ್ತಿ ಹೆಚ್ಚಾಗಿ ಶೀಘ್ರ ಗುಣಮುಖರಾಗುತ್ತಾರೆ.
    * ಪ್ಲಾಸ್ಮಾ ಚಿಕಿತ್ಸೆಯಿಂದ ರೋಗಿಗಳು 3 ರಿಂದ 7 ದಿನದೊಳಗೆ ಗುಣಮುಖರಾಗುವ ನಿರೀಕ್ಷೆ

    ಯಾರು ಪ್ಲಾಸ್ಮಾ ದಾನ ಮಾಡಬಹುದು?
    * ಕೊರೊನಾದಿಂದ ಗುಣಮುಖರಾಗಿರುವ ವ್ಯಕ್ತಿ ಪ್ಲಾಸ್ಮಾ ದಾನ ಮಾಡಬಹುದು
    * ಕೊರೊನಾದಿಂದ ಗುಣಮುಖರಾದ ವ್ಯಕ್ತಿ 28 ದಿನಗಳ ಬಳಿಕ ಪ್ಲಾಸ್ಮಾ ದಾನ ಮಾಡಬಹುದು
    * ಒಬ್ಬ ರೋಗಿಯನ್ನ ಗುಣಪಡಿಸಲು 200-250 ಮಿಲಿ ಲೀಟರ್ ಪ್ಲಾಸ್ಮಾ ಅಗತ್ಯ
    * ಒಬ್ಬ ದಾನಿಯಿಂದ ಇಬ್ಬರಿಂದ ಐವರು ರೋಗಿಗಳನ್ನು ಗುಣಪಡಿಸಬಹುದು
    * ರಕ್ತದಾನಕ್ಕಿಂತ ಪ್ಲಾಸ್ಮಾ ದಾನ ಭಿನ್ನ
    * ರಕ್ತದಲ್ಲಿರುವ ಪ್ಲಾಸ್ಮಾವನ್ನಷ್ಟೇ ಸಂಗ್ರಹಿಸಿ ರಕ್ತವನ್ನು ಮತ್ತೆ ದಾನಿಗಳ ದೇಹಕ್ಕೆ ಬಿಡಲಾಗುತ್ತದೆ
    * ಒಬ್ಬ ದಾನಿ ವಾರದಲ್ಲಿ ಎರಡು ಬಾರಿ ಪ್ಲಾಸ್ಮಾ ದಾನ ಮಾಡಬಹುದು

  • 24 ಗಂಟೆಯಲ್ಲಿ ಭಾರತದಲ್ಲಿ 57 ಮಂದಿ ಸಾವು – 24,506ಕ್ಕೆ ಏರಿದ ಸೋಂಕಿತರ ಸಂಖ್ಯೆ

    24 ಗಂಟೆಯಲ್ಲಿ ಭಾರತದಲ್ಲಿ 57 ಮಂದಿ ಸಾವು – 24,506ಕ್ಕೆ ಏರಿದ ಸೋಂಕಿತರ ಸಂಖ್ಯೆ

    – 775 ಮಂದಿ ಸೋಂಕಿಗೆ ಬಲಿ
    – 24 ಗಂಟೆಯಲ್ಲಿ 1,429 ಹೊಸ ಪ್ರಕರಣ ಪತ್ತೆ

    ನವದೆಹಲಿ: ದಿನೇ ದಿನೇ ಭಾರತದಲ್ಲಿ ಕೊರೊನಾ ರಣಕೇಕೆ ಹೆಚ್ಚಾಗುತ್ತಿದೆ. ಕಳೆದ 24 ಗಂಟೆಯಲ್ಲಿ 57 ಮಂದಿ ಮಹಾಮಾರಿಗೆ ಬಲಿಯಾಗಿದ್ದು, ದೇಶದಲ್ಲಿ ಸೋಂಕಿತರ ಸಂಖ್ಯೆ 24,506ಕ್ಕೆ ಏರಿದೆ.

    ಕಳೆದ 24 ಗಂಟೆಯಲ್ಲಿ ದೇಶಾದ್ಯಂತ ಬರೋಬ್ಬರಿ 1,429 ಹೊಸ ಕೊರೊನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿದೆ. ಈವರೆಗೆ 775 ಮಂದಿಯನ್ನು ಮಹಾಮಾರಿ ಕೊರೊನಾ ಬಲಿ ಪಡೆದಿದೆ. ಮಹಾರಾಷ್ಟ್ರದಲ್ಲಿ ಕೊರೊನಾ ವೇಗವಾಗಿ ಹರಡುತ್ತಿದ್ದು, ಈವರೆಗೆ 6,817 ಮಂದಿಗೆ ಸೋಂಕು ತಗುಲಿದ್ದು, 301 ಮಂದಿ ಸಾವನ್ನಪ್ಪಿದ್ದಾರೆ. ಹೆಚ್ಚು ಸೋಂಕು ಹರಡಿರುವ ರಾಜ್ಯಗಳ ಪಟ್ಟಿಯಲ್ಲಿ ಗುತರಾತ್ 2ನೇ ಸ್ಥಾನದಲ್ಲಿದ್ದು, ಅಲ್ಲಿ 2,815 ಮಂದಿ ಕೊರೊನಾಗೆ ತುತ್ತಾಗಿದ್ದು, 127 ಮಂದಿ ಸಾವನ್ನಪ್ಪಿದ್ದಾರೆ.

    ಇತ್ತ ರಾಷ್ಟ್ರ ರಾಜಧಾನಿಯಲ್ಲಿ ಸೋಂಕಿತರ ಸಂಖ್ಯೆ 2,514ಕ್ಕೆ ಏರಿದ್ದು, 53 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ರಾಜಸ್ಥಾನದಲ್ಲಿ 2,059 ಮಂದಿಗೆ ಸೋಂಕು ತಗುಲಿದ್ದು, 32 ಮಂದಿ ಸಾವನ್ನಪ್ಪಿದ್ದಾರೆ. ಹಾಗೆಯೇ ಕರ್ನಾಟಕದಲ್ಲಿ ಈವರೆಗೆ 489 ಮಂದಿ ಕೊರೊನಾಗೆ ತುತ್ತಾಗಿದ್ದು, 18 ಮಂದಿ ಸಾವನ್ನಪ್ಪಿದ್ದಾರೆ. ಕಳೆದ 24 ಗಂಟೆಯಲ್ಲಿ 15 ಹೊಸ ಪ್ರಕರಣಗಳು ವರದಿಯಾಗಿದ್ದು, ಈವರೆಗೆ 153 ಮಂದಿ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.

    ಕೇರಳದಲ್ಲಿ ಕೊರೊನಾ ಈಗ ಸ್ವಲ್ಪ ಮಟ್ಟಿಗೆ ನಿಯಂತ್ರಣಕ್ಕೆ ಬಂದಿದೆ. ಈವರೆಗೆ 450 ಮಂದಿಗೆ ಸೋಂಕು ತಗುಲಿದ್ದು, 3 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ಅಲ್ಲದೇ 331 ಮಂದಿ ಕೊರೊನಾದಿಂದ ಗುಣಮುಖರಾಗಿದ್ದಾರೆ ಎಂದು ವರದಿಯಾಗಿದೆ.

    ಕೊರೊನಾ ವೈರಸ್‍ನಿಂದ ದೇಶದಲ್ಲಿ ಆರ್ಥಿಕ ವ್ಯವಸ್ಥೆ ಹದಗೆಟ್ಟಿದೆ. ಇತ್ತ ದಿನೇ ದಿನೇ ಸೋಂಕಿತರ ಸಂಖ್ಯೆ ಕೂಡ ದೇಶದಲ್ಲಿ ಏರಿಕೆಯಾಗುತ್ತಿದೆ. ಈಗಾಗಲೇ ಕೊರೊನಾ ನಿಯಂತ್ರಣಕ್ಕೆ ದೇಶಾದ್ಯಂತ ಲಾಕ್‍ಡೌನ್ ಜಾರಿಗೊಳಿಸಿದ್ದರೂ ಸೋಂಕು ಮಾತ್ರ ಹತೋಟಿಗೆ ಬರುತ್ತಿಲ್ಲ. ದಿನ ಕಳೆದಂತೆ ಸೋಂಕಿಗೆ ತುತ್ತಾಗುತ್ತಿರುವವರ ಸಂಖ್ಯೆ ಏರುತ್ತಲೇ ಇದೆಯೇ ಹೊರತಾಗಿ ಕಡಿಮೆಯಾಗುತ್ತಿಲ್ಲ.

    ಈ ಮಧ್ಯೆ ಶುಭಸುದ್ದಿಯೆಂದರೆ ರಾಜ್ಯದಲ್ಲಿ ಇಂದು ಮೊದಲ ಪ್ಲಾಸ್ಮಾ ಥೆರಪಿಗೆ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಾಲನೆ ನೀಡಲಾಗಿದೆ. ಕೊರೊನಾದಿಂದ ಗುಣಮುಖರಾದವರೊಬ್ಬರು ತಮ್ಮ ರಕ್ತದ ಪ್ರತಿರೋಧಕ ಕಣಗಳನ್ನು ದಾನ ಮಾಡುತ್ತಾರೆ. ಅವರಿಂದ ಪ್ರತಿರೋಧಕ ಕಣಗಳನ್ನು ಪಡೆದು ಕೊರೊನಾ ಸೋಂಕಿತ ವ್ಯಕ್ತಿಯ ರಕ್ತಕ್ಕೆ ಸೇರಿಸಲಾಗುತ್ತದೆ. ಈ ಚಿಕಿತ್ಸೆಯೇ ಪ್ಲಾಸ್ಮಾ ಥೆರಪಿಯಾಗಿದೆ. ಇಂದು ರಾಜ್ಯದ ಮೊದಲ ಪ್ಲಾಸ್ಮಾ ಥೆರಪಿ ಮಾಡಲಾಗುತ್ತಿದೆ. ಇದರ ಸಫಲತೆ ಆಧರಿಸಿ ಮುಂದಿನ ದಿನಗಳಲ್ಲಿ ಇನ್ನಷ್ಟು ಪ್ಲಾಸ್ಮಾ ಥೆರಪಿಗೆ ಸರ್ಕಾರ ನಿರ್ಧಾರ ಕೈಗೊಳ್ಳುತ್ತದೆ.

  • ಕರ್ನಾಟಕದಲ್ಲಿ ಇಂದು ಮೊದಲ ಪ್ಲಾಸ್ಮಾ ಥೆರಪಿ – ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಾಲನೆ

    ಕರ್ನಾಟಕದಲ್ಲಿ ಇಂದು ಮೊದಲ ಪ್ಲಾಸ್ಮಾ ಥೆರಪಿ – ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಾಲನೆ

    ಬೆಂಗಳೂರು: ಇವತ್ತಿನಿಂದ ಕೊರೊನಾ ರೋಗಕ್ಕೆ ಕರ್ನಾಟಕದಲ್ಲಿ ಪ್ಲಾಸ್ಮಾ ಚಿಕಿತ್ಸೆಯ ಪ್ರಾಯೋಗಿಕ ಪರೀಕ್ಷೆ ಆರಂಭವಾಗಲಿದೆ. ಕೇಂದ್ರ ಸರ್ಕಾರದ ಸಂಸ್ಥೆ ಆಗಿರುವ ಐಸಿಎಂಆರ್ ಕೊಟ್ಟಿರುವ ಅನುಮತಿ ಮೇರೆಗೆ ಬೆಂಗಳೂರಲ್ಲಿ ಕ್ಯಾನ್ಸರ್ ಚಿಕಿತ್ಸೆ ಆಸ್ಪತ್ರೆ ಹೆಚ್‍ಸಿಜಿ ಪ್ಲಾಸ್ಮಾ ಥೆರಪಿಯ ಪ್ರಯೋಗ ಕೈಗೊಳ್ಳಲಿದೆ.

    ರಾಜ್ಯದಲ್ಲಿ ಇಂದು ಮೊದಲ ಪ್ಲಾಸ್ಮಾ ಥೆರಪಿಗೆ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಾಲನೆ ನೀಡಲಾಗಿದೆ. ಕೊರೊನಾದಿಂದ ಗುಣಮುಖರಾದವರೊಬ್ಬರು ತಮ್ಮ ರಕ್ತದ ಪ್ರತಿರೋಧಕ ಕಣಗಳನ್ನು ದಾನ ಮಾಡುತ್ತಾರೆ. ಅವರಿಂದ ಪ್ರತಿರೋಧಕ ಕಣಗಳನ್ನು ಪಡೆದು ಕೊರೊನಾ ಸೋಂಕಿತ ವ್ಯಕ್ತಿಯ ರಕ್ತಕ್ಕೆ ಸೇರಿಸಲಾಗುತ್ತದೆ. ಈ ಚಿಕಿತ್ಸೆಯೇ ಪ್ಲಾಸ್ಮಾ ಥೆರಪಿಯಾಗಿದೆ.

    ಇಂದು ರಾಜ್ಯದ ಮೊದಲ ಪ್ಲಾಸ್ಮಾ ಥೆರಪಿ ಮಾಡಲಾಗುತ್ತಿದೆ. ಇದರ ಸಫಲತೆ ಆಧರಿಸಿ ಮುಂದಿನ ದಿನಗಳಲ್ಲಿ ಇನ್ನಷ್ಟು ಪ್ಲಾಸ್ಮಾ ಥೆರಪಿಗೆ ಸರ್ಕಾರ ನಿರ್ಧಾರ ಕೈಗೊಳ್ಳುತ್ತದೆ. ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್, ಆರೋಗ್ಯ ಸಚಿವ ಶ್ರೀರಾಮುಲು ಮತ್ತು ಆರೋಗ್ಯ ಇಲಾಖೆ ಅಧಿಕಾರಿಗಳು ಉಪಸ್ಥಿತಿಯಲ್ಲಿದ್ದರು. ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಪ್ಲಾಸ್ಮಾ ಥೆರಪಿ ಚಿಕಿತ್ಸಾ ಕ್ರಮವನ್ನು ಸಚಿವರಾದ ಸುಧಾಕರ್ ಮತ್ತು ಶ್ರೀರಾಮುಲು ವೀಕ್ಷಿಸಿದರು.

    ಏನಿದು ಪ್ಲಾಸ್ಮಾ ಥೆರಪಿ?
    * ಪ್ಲಾಸ್ಮಾ ಎಂದರೆ ರಕ್ತದ ಕಣ (ಹಳದಿ ದ್ರವಾಂಶ). ರಕ್ತದಲ್ಲಿರುವ ರೋಗ ನಿರೋಧಕ ಅಂಶ ಇರುವುದು ಪ್ಲಾಸ್ಮಾದಲ್ಲಿ
    * ಪ್ಲಾಸ್ಮಾ ಥೆರಪಿ ಎಂದರೆ ಗುಣಮುಖರಾಗಿರುವ ವ್ಯಕ್ತಿಯ ರಕ್ತದಲ್ಲಿರುವ ಪ್ಲಾಸ್ಮಾವನ್ನು ಚಿಂತಾಜನಕ ಸ್ಥಿತಿಯಲ್ಲಿರುವ ರೋಗಿಯ ರಕ್ತಕ್ಕೆ ಇಂಜೆಕ್ಟ್ ಮಾಡುವುದು.
    * ಗುಣಮುಖರಾದವರ ರಕ್ತದಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಿರುತ್ತೆ. ಇದೇ ರಕ್ತದಲ್ಲಿರುವ ಪ್ಲಾಸ್ಮಾವನ್ನು ರೋಗಿಗೆ ನೀಡಿದರೆ ಆಗ ಆ ರೋಗಿಯ ರೋಗ ನಿರೋಧಕ ಶಕ್ತಿಯೂ ಹೆಚ್ಚಾಗಿ ಶೀಘ್ರ ಗುಣಮುಖರಾಗುತ್ತಾರೆ.
    * ಕೊರೊನಾದಿಂದ ಗುಣಮುಖರಾಗಿರುವ ವ್ಯಕ್ತಿಯ ಪ್ಲಾಸ್ಮಾವನ್ನು ಕೊರೊನಾದಿಂದಾಗಿ ಚಿಂತಾಜನಕ ಸ್ಥಿತಿಯಲ್ಲಿರುವ ರೋಗಿಗೆ ಇಂಜೆಕ್ಟ್ ಮಾಡಿದರೆ ಆ ರೋಗಿಯ ರೋಗ ನಿರೋಧಕ ಶಕ್ತಿ ಹೆಚ್ಚಾಗಿ ಶೀಘ್ರ ಗುಣಮುಖರಾಗುತ್ತಾರೆ.
    * ಪ್ಲಾಸ್ಮಾ ಚಿಕಿತ್ಸೆಯಿಂದ ರೋಗಿಗಳು 3 ರಿಂದ 7 ದಿನದೊಳಗೆ ಗುಣಮುಖರಾಗುವ ನಿರೀಕ್ಷೆ

    ಯಾರು ಪ್ಲಾಸ್ಮಾ ದಾನ ಮಾಡಬಹುದು?
    * ಕೊರೊನಾದಿಂದ ಗುಣಮುಖರಾಗಿರುವ ವ್ಯಕ್ತಿ ಪ್ಲಾಸ್ಮಾ ದಾನ ಮಾಡಬಹುದು
    * ಕೊರೊನಾದಿಂದ ಗುಣಮುಖರಾದ ವ್ಯಕ್ತಿ 28 ದಿನಗಳ ಬಳಿಕ ಪ್ಲಾಸ್ಮಾ ದಾನ ಮಾಡಬಹುದು
    * ಒಬ್ಬ ರೋಗಿಯನ್ನ ಗುಣಪಡಿಸಲು 200-250 ಮಿಲಿ ಲೀಟರ್ ಪ್ಲಾಸ್ಮಾ ಅಗತ್ಯ
    * ಒಬ್ಬ ದಾನಿಯಿಂದ ಇಬ್ಬರಿಂದ ಐವರು ರೋಗಿಗಳನ್ನು ಗುಣಪಡಿಸಬಹುದು
    * ರಕ್ತದಾನಕ್ಕಿಂತ ಪ್ಲಾಸ್ಮಾ ದಾನ ಭಿನ್ನ
    * ರಕ್ತದಲ್ಲಿರುವ ಪ್ಲಾಸ್ಮಾವನ್ನಷ್ಟೇ ಸಂಗ್ರಹಿಸಿ ರಕ್ತವನ್ನು ಮತ್ತೆ ದಾನಿಗಳ ದೇಹಕ್ಕೆ ಬಿಡಲಾಗುತ್ತದೆ
    * ಒಬ್ಬ ದಾನಿ ವಾರದಲ್ಲಿ ಎರಡು ಬಾರಿ ಪ್ಲಾಸ್ಮಾ ದಾನ ಮಾಡಬಹುದು

    ಈ ಹಿಂದೆ ದೆಹಲಿಯಲ್ಲಿ 49 ವರ್ಷದ ಕೊರೊನಾ ರೋಗಿಯನ್ನು ಪ್ಲಾಸ್ಮಾ ಚಿಕಿತ್ಸೆ ಮೂಲಕ ಗುಣಪಡಿಸಲಾಗಿದೆ. ಅಮೆರಿಕ, ಚೀನಾದಲ್ಲಿ ಕೊರೊನಾ ರೋಗಿಗಳಿಗೆ ಪ್ಲಾಸ್ಮಾ ಚಿಕಿತ್ಸೆಯನ್ನು ನೀಡಲಾಗಿದ್ದು, ಸಮಾಧಾನಕಾರಿ ಫಲಿತಾಂಶ ಸಿಕ್ಕಿದೆ. ಈ ಹಿನ್ನೆಲೆಯಲ್ಲಿ ಕೇರಳ, ಗುಜರಾತ್, ಪಂಜಾಬ್‍ನಲ್ಲೂ ಪ್ಲಾಸ್ಮಾ ಥೆರಪಿಗೆ ಅನುಮತಿ ಸಿಕ್ಕಿದೆ.

  • ಕೊರೊನಾಗೆ ಪ್ಲಾಸ್ಮಾ ಥೆರಪಿ ಸಂಜೀವಿನಿ – ಸೋಂಕಿತ ವ್ಯಕ್ತಿಯ ಆರೋಗ್ಯದಲ್ಲಿ ಚೇತರಿಕೆ

    ಕೊರೊನಾಗೆ ಪ್ಲಾಸ್ಮಾ ಥೆರಪಿ ಸಂಜೀವಿನಿ – ಸೋಂಕಿತ ವ್ಯಕ್ತಿಯ ಆರೋಗ್ಯದಲ್ಲಿ ಚೇತರಿಕೆ

    ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಈ ನಡುವೆ ಸೋಂಕಿಗೆ ಲಸಿಕೆ ಇಲ್ಲದಿರುವುದು ಮತ್ತಷ್ಟು ಸಂಕಷ್ಟಕ್ಕೆ ಕಾರಣವಾಗಿದೆ. ಈ ಬೆಳವಣಿಗೆಗಳ ಮಧ್ಯೆ ಪ್ಲಾಸ್ಮಾ ಥೆರಪಿ ಎನ್ನುವ ಚಿಕಿತ್ಸೆ ಕೊರೊನಾ ವಿರುದ್ಧದ ಹೋರಾಟಕ್ಕೆ ಸಂಜೀವಿನಿ ರೂಪದಲ್ಲಿ ಕಾಣುತ್ತಿದೆ.

    ದೆಹಲಿಯ ಸಾಕೇತ್ ನಲ್ಲಿರುವ ಮ್ಯಾಕ್ಸ್ ಆಸ್ಪತ್ರೆಯಲ್ಲಿ ಕೊರೊನಾ ಸೋಂಕಿತ ವ್ಯಕ್ತಿಗೆ ಮೊದಲ ಪ್ಲಾಸ್ಮಾ ಥೆರಪಿ ನೀಡಲಾಗಿತ್ತು. ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದ್ದು, ನಾಲ್ಕು ದಿನಗಳಲ್ಲಿ ಕೊರೊನಾ ಸೋಂಕು ನೆಗೆಟಿವ್ ರಿಪೋರ್ಟ್ ಬಂದಿದೆ.

    ಎಪ್ರಿಲ್ ನಾಲ್ಕರಂದು 49 ವರ್ಷದ ವ್ಯಕ್ತಿಯಲ್ಲಿ ಕೊರೊನಾ ಸೋಂಕು ಕಂಡು ಬಂದಿತು. ನಿರಂತರ ಚಿಕಿತ್ಸೆ ನೀಡಿದ್ರೂ ಯಾವುದೇ ಪ್ರಯೋಜನವಾಗಿರಲಿಲ್ಲ. ವೆಂಟಿಲೇಟರ್ ಮೇಲಿದ್ದು ರೋಗಿಯ ಸ್ಥಿತಿ ಕಂಡು ಕುಟುಂಬಸ್ಥರುವ ಪ್ಲಾಸ್ಮಾ ಥೆರಪಿ ಮಾಡಲು ಮನವಿ ಮಾಡಿಕೊಂಡಿದ್ದರು. ಇದನ್ನೂ ಓದಿ: ಸೋಂಕಿನಿಂದ ಗುಣಮುಖರಾದ ವ್ಯಕ್ತಿಯ ರಕ್ತವೇ ಕೊರೊನಾಗೆ ಔಷಧಿ

    ಕುಟುಂಬದ ಮನವಿ ಮೇರೆಗೆ ಎಪ್ರಿಲ್ 14ರಂದು ಸೋಂಕಿತ ವ್ಯಕ್ತಿಗೆ ಪ್ಲಾಸ್ಮಾ ಥೆರಪಿ ಮಾಡಲಾಗಿತ್ತು. ಥೆರಪಿ ಬಳಿಕ ನಾಲ್ಕು ದಿನಗಳಲ್ಲಿ ಸೋಂಕಿತ ವ್ಯಕ್ತಿ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ ಎಂದು ಮ್ಯಾಕ್ಸ್ ಆಸ್ಪತ್ರೆ ವೈದ್ಯರು ಮಾಹಿತಿ ನೀಡಿದ್ದು, ವೆಂಟಿಲೇಟರ್ ಸಹಾಯವಿಲ್ಲದೆ ಸೋಂಕಿತ ವ್ಯಕ್ತಿ ಉಸಿರಾಡುತ್ತಿದ್ದಾನೆ ಮತ್ತು ಇತ್ತಿಚೇಗೆ ನಡೆಸಿದ ಎರಡು ಟೆಸ್ಟ್‍ಗಳಲ್ಲಿ ಸೋಂಕು ನೆಗೆಟಿವ್ ರಿಪೋರ್ಟ್ ಬಂದಿದೆ ಎಂದಿದ್ದಾರೆ. ಇದನ್ನೂ ಓದಿ: ಕೊರೊನಾ ಹೋರಾಟಕ್ಕೆ ಪ್ಲಾಸ್ಮಾ ಥೆರಪಿ ಅಸ್ತ್ರ – ಐಸಿಎಂಆರ್ ಅನುಮತಿ, ಶೀಘ್ರದಲ್ಲಿ ಆರಂಭ

    ಪ್ಲಾಸ್ಮಾ ಥೆರಪಿ ಎಂದರೇನು?
    ಕೊರೊನಾದಿಂದ ಚೇತರಿಸಿಕೊಂಡ ವ್ಯಕ್ತಿಯ ರಕ್ತದಲ್ಲಿ ಆ್ಯಂಟಿಬಾಡಿಗಳು ಇರುತ್ತವೆ. ಅವು ರೋಗ ನಿರೋಧಕ ಶಕ್ತಿ ಹೊಂದಿರುತ್ತವೆ. ಆ ಪ್ಲಾಸ್ಮಾವನ್ನು ತೆಗೆದು ಸೋಂಕಿತ ಅಥವಾ ಸೋಂಕು ಶಂಕೆ ಹೊಂದಿರುವ ವ್ಯಕ್ತಿಗೆ ನೀಡುವುದನ್ನೇ ಪ್ಲಾಸ್ಮಾ ಥೆರಪಿ ಎನ್ನಲಾಗುತ್ತದೆ. ಪ್ಲಾಸ್ಮಾ ಥೆರಪಿಗೆ ಒಳಗಾದ ವ್ಯಕ್ತಿಗಳು ಬೇಗನೆ ಕೊರೊನಾದಿಂದ ಗುಣಮುಖರಾಗುವುದು ವಿದೇಶಗಳಲ್ಲಿ ಸಾಬೀತಾಗಿದೆ.

    ಸೋಂಕ ಮುಕ್ತವಾದ ವ್ಯಕ್ತಿ ಚೇತರಿಸಿಕೊಂಡ 28 ದಿನಗಳ ಬಳಿಕ ಪ್ಲಾಸ್ಮಾವನ್ನು ದಾನ ಮಾಡಬಹುದು, ಮೊದಲ ಪರೀಕ್ಷೆಯಲ್ಲಿ ಪಾಸಿಟಿವ್ ಬಂದು, 2ನೇ ಪರೀಕ್ಷೆಯಲ್ಲಿ ನೆಗೆಟಿವ್ ಬಂದವರು ಕೂಡಾ ದಾನ ಮಾಡಬಹುದಾಗಿದೆ. ದಾನಿಯೊಬ್ಬನ ಪ್ಲಾಸ್ಮಾವನ್ನು ಅದೇ ರಕ್ತದ ಗುಂಪಿನ ರೋಗಿಗಳಿಗೆ ಮಾತ್ರ ನೀಡಬಹುದು ಎಂದು ತಜ್ಞರು ಹೇಳಿದ್ದಾರೆ.

  • ಕೊರೊನಾ ಹೋರಾಟಕ್ಕೆ ಪ್ಲಾಸ್ಮಾ ಥೆರಪಿ ಅಸ್ತ್ರ – ಐಸಿಎಂಆರ್ ಅನುಮತಿ, ಶೀಘ್ರದಲ್ಲಿ ಆರಂಭ

    ಕೊರೊನಾ ಹೋರಾಟಕ್ಕೆ ಪ್ಲಾಸ್ಮಾ ಥೆರಪಿ ಅಸ್ತ್ರ – ಐಸಿಎಂಆರ್ ಅನುಮತಿ, ಶೀಘ್ರದಲ್ಲಿ ಆರಂಭ

    ನವದೆಹಲಿ: ಭಾರತದಲ್ಲಿ ಪ್ಲಾಸ್ಮಾ ಥೆರಪಿ ಆರಂಭಿಸಲು ಭಾರತೀಯ ವೈದ್ಯಕೀಯ ಸಂಶೋಧನಾ ಪರಿಷತ್ತು(ಐಸಿಎಂಆರ್) ಅನುಮತಿ ನೀಡಿದ್ದು ಕೇರಳದಲ್ಲಿ ಮೊದಲು ಪ್ರಾಯೋಗಿಕವಾಗಿ ಆರಂಭಿಸಲಿದ್ದು ದೇಶದ್ಯಾಂತ ಎಲ್ಲ ಕೊರೊನಾ ಆಸ್ಪತ್ರೆಗಳಲ್ಲಿ ಶೀಘ್ರದಲ್ಲಿ ಆರಂಭವಾಗುವ ಸಾಧ್ಯತೆ ಇದೆ.

    ಕೊರನಾಗೆ ಲಸಿಕೆ ಇಲ್ಲದ ಹಿನ್ನೆಲೆ ಚೀನಾ ಅಮೆರಿಕಾ ಬ್ರಿಟನ್ ದೇಶಗಳಲ್ಲಿ ಕೊರೊನಾ ಚಿಕಿತ್ಸೆಗೆ ಪ್ಲಾಸ್ಮಾ ಥೆರಪಿ ಮಾಡಲಾಗಿತ್ತು. ಕೊರೊನಾ ವೈರಸ್ ನಿಯಂತ್ರಿಸುವಲ್ಲಿ ಥೆರಪಿ ಸಹಾಯಕವಾಗುವುದು ಸಾಬೀತಾದ ಮೇಲೆ ದೇಶದಲ್ಲೂ ಆರಂಭಿಸಲು ಒತ್ತಡ ಕೇಳಿ ಬಂದಿತ್ತು. ಈ ಬಗ್ಗೆ ಪರಿಶೀಲನೆ ನಡೆಸಿರುವ ಐಸಿಎಂಆರ್ ಈಗ ಅನುಮತಿ ನೀಡಿದೆ.

    ಕೊರೊನಾದಿಂದ ಚೇತರಿಸಿಕೊಂಡ ವ್ಯಕ್ತಿಯ ರಕ್ತದಲ್ಲಿ ಆ್ಯಂಟಿಬಾಡಿಗಳು ಇರುತ್ತವೆ. ಅವು ರೋಗ ನಿರೋಧಕ ಶಕ್ತಿ ಹೊಂದಿರುತ್ತವೆ. ಆ ಪ್ಲಾಸ್ಮಾವನ್ನು ತೆಗೆದು ಸೋಂಕಿತ ಅಥವಾ ಸೋಂಕು ಶಂಕೆ ಹೊಂದಿರುವ ವ್ಯಕ್ತಿಗೆ ನೀಡುವುದನ್ನೇ ಪ್ಲಾಸ್ಮಾ ಥೆರಪಿ ಎನ್ನಲಾಗುತ್ತದೆ. ಪ್ಲಾಸ್ಮಾ ಥೆರಪಿಗೆ ಒಳಗಾದ ವ್ಯಕ್ತಿಗಳು ಬೇಗನೆ ಕೊರೊನಾದಿಂದ ಗುಣಮುಖರಾಗುವುದು ವಿದೇಶಗಳಲ್ಲಿ ಸಾಬೀತಾಗಿದೆ.

    ಸೋಂಕು ಮುಕ್ತವಾದ ವ್ಯಕ್ತಿ ಚೇತರಿಸಿಕೊಂಡ 28 ದಿನಗಳ ಬಳಿಕ ಪ್ಲಾಸ್ಮಾವನ್ನು ದಾನ ಮಾಡಬಹುದು, ಮೊದಲ ಪರೀಕ್ಷೆಯಲ್ಲಿ ಪಾಸಿಟಿವ್ ಬಂದು, 2ನೇ ಪರೀಕ್ಷೆಯಲ್ಲಿ ನೆಗೆಟಿವ್ ಬಂದವರು ಕೂಡಾ ದಾನ ಮಾಡಬಹುದಾಗಿದ್ದು ದಾನಿಯೊಬ್ಬನ ಪ್ಲಾಸ್ಮಾವನ್ನು ಅದೇ ರಕ್ತದ ಗುಂಪಿನ ರೋಗಿಗಳಿಗೆ ಮಾತ್ರ ನೀಡಬಹುದು ಎಂದು ತಜ್ಞರು ಹೇಳಿದ್ದಾರೆ.

    ಏನಿದು ಪ್ಲಾಸ್ಮಾ ಥೆರಪಿ?
    ಕೊರೊನಾದಿಂದ ಗುಣಮುಖರಾದ ವ್ಯಕ್ತಿಯಲ್ಲಿ ರೋಗನಿರೋಧಕ ಶಕ್ತಿ ಜಾಸ್ತಿ ಇರುತ್ತದೆ. ಅವರ ರಕ್ತ ಕಣಗಳನ್ನು ಬೇರ್ಪಡಿಸಿ ಸೋಂಕಿತರ ಚಿಕಿತ್ಸೆಗೆ ಬಳಸಲಾಗುತ್ತದೆ. ಕೊರೊನಾ ವೈರಸ್ಸಿನೊಂದಿಗೆ ಹೋರಾಡಿದ ಪರಿಣಾಮ ಈ ರಕ್ತಕ್ಕೆ ವೈರಸ್ ಗಳನ್ನು ತಡೆಯುವ ಶಕ್ತಿ ಇರುತ್ತದೆ. ಹೀಗಾಗಿ ಪ್ಲಾಸ್ಮಾ ಥೆರಪಿ ನೀಡಿದರೆ ಉತ್ತಮ ಎಂಬ ಅಭಿಪ್ರಾಯಕ್ಕೆ ಬರಲಾಗಿದೆ.

    ಪ್ರಯೋಗ ನಡೆದಿದೆಯೇ?
    ಚೀನಾದಲ್ಲೂ ಕೂಡ ಕೊರೊನಾ ನಿಯಂತ್ರಣಕ್ಕೆ ಸೋಂಕಿನಿಂದ ಗುಣಮುಖರಾದ ವ್ಯಕ್ತಿಯ ಪ್ಲಾಸ್ಮಾವನ್ನೇ ಬಳಸಲಾಗಿದೆ. ಚೀನಾದ 2 ವೈದ್ಯರ ತಂಡ 2 ಪ್ರತ್ಯೇಕ ಆಸ್ಪತ್ರೆಗಳಲ್ಲಿ 15 ಮಂದಿ ಸೋಂಕಿತರಿಗೆ ಮೊದಲು ಈ ಪರೀಕ್ಷೆ ನಡೆಸಿ ಅವರಲ್ಲಿ ಸುಧಾರಣೆ ಕಂಡದ್ದನ್ನು ದಾಖಲಿಸಿವೆ.

    ಒಬ್ಬನಿಂದ ಎಷ್ಟು ಮಂದಿಗೆ ನೀಡಬಹುದು?
    ಒಬ್ಬನಿಂದ ಇಷ್ಟೇ ಮಂದಿಗೆ ನೀಡಬಹುದು ಎಂದು ಹೇಳಲು ಸಾಧ್ಯವಿಲ್ಲ. ಎಷ್ಟು ಪ್ರಮಾಣದಲ್ಲಿ ಪ್ಲಾಸ್ಮಾ ಸಿಗುತ್ತದೆ ಎಂಬುದರ ಮೇಲೆ ಎಷ್ಟು ಮಂದಿಗೆ ನೀಡಬಹುದು ಎನ್ನುವ ಲೆಕ್ಕಾಚಾರವನ್ನು ಹಾಕಲಾಗುತ್ತದೆ. ಒಬ್ಬನಿಂದ ಕನಿಷ್ಟ ಇಬ್ಬರು ಗರಿಷ್ಟ 5 ಮಂದಿಗೆ ಪ್ಲಾಸ್ಮಾ ನೀಡಬಹುದು. ಒಬ್ಬ ರೋಗಿಯನ್ನು ಗುಣಪಡಿಸಲು ಅಂದಾಜು 200-250 ಎಂಎಲ್ ಪ್ಲಾಸ್ಮಾ ಬೇಕಾಗುತ್ತದೆ.

    ಎಷ್ಟು ದಿನಗಳ ನಂತರ ಪ್ಲಾಸ್ಮಾ ಸಂಗ್ರಹಿಸಬಹುದು?
    ಇದು ಬಹಳ ಕಠಿಣ ಪ್ರಶ್ನೆ. ಕೊರೊನಾ ವಾಸಿಯಾದ ನಂತರವು ಸೋಂಕು ಬಂದಿದೆ ಎನ್ನುವ ವರದಿಗಳು ಚೀನಾದಲ್ಲಿ ದಾಖಲಾಗಿದೆ. ಹೀಗಾಗಿ ರೋಗಿ ಸಂಪೂರ್ಣವಾಗಿ ಗುಣವಾದ 28 ದಿನಗಳ ನಂತರ ಪ್ಲಾಸ್ಮಾವನ್ನು ಸಂಗ್ರಹಿಸಬಹುದು ಎನ್ನುವ ಲೆಕ್ಕಾಚಾರಕ್ಕೆ ಬರಲಾಗಿದೆ.

    ಯಾರಿಗೆ ನೀಡಬಹುದು?
    ಕೊರೊನಾ ಪೀಡಿತ ಎಲ್ಲರಿಗೆ ಈ ಥೆರಪಿಯ ಅಗತ್ಯವಿಲ್ಲ. ರೋಗ ನಿರೋಧಕ ಶಕ್ತಿಯನ್ನು ಹೊಂದಿರುವ ವ್ಯಕ್ತಿಗಳು ಉತ್ತಮ ಆಹಾರ, ಔಷಧಿ, ತಮ್ಮಲ್ಲಿನ ದೃಢ ವಿಶ್ವಾಸದಿಂದಲೇ ಗುಣಮುಖರಾಗುತ್ತಾರೆ. ಆದರೆ ಗಂಭೀರವಾಗಿರುವ ರೋಗಿಗಳಿಗೆ ನೀಡಲು ಯಾವುದೇ ಔಷಧ ಇಲ್ಲದ ಕಾರಣ ಈ ಥೆರಪಿ ಮಾಡಬಹುದು. ಈ ಥೆರಪಿ ಮೂಲಕ ರೋಗಿಯನ್ನು 5-7 ದಿನಗಳಲ್ಲಿ ಗುಣಪಡಿಸಬಹುದು ಎನ್ನುವ ಅಭಿಪ್ರಾಯಕ್ಕೆ ಬರಲಾಗಿದೆ.