Tag: Plate

  • ಜಿ20ಯಲ್ಲಿ ಭಾಗಿಯಾಗುವ ಗಣ್ಯರಿಗೆ ಭವ್ಯ ಭೋಜನ – ಚಿನ್ನ, ಬೆಳ್ಳಿ ಲೇಪಿತ ತಟ್ಟೆಯಲ್ಲಿ ಊಟದ ವ್ಯವಸ್ಥೆ

    ಜಿ20ಯಲ್ಲಿ ಭಾಗಿಯಾಗುವ ಗಣ್ಯರಿಗೆ ಭವ್ಯ ಭೋಜನ – ಚಿನ್ನ, ಬೆಳ್ಳಿ ಲೇಪಿತ ತಟ್ಟೆಯಲ್ಲಿ ಊಟದ ವ್ಯವಸ್ಥೆ

    ನವದೆಹಲಿ: ಜಿ20 ಶೃಂಗಸಭೆಗೆ (G20 Summit) ಭಾರತ ಸಂಪೂರ್ಣ ಸಿದ್ಧವಾಗಿದೆ. ವಿದೇಶಿ ಗಣ್ಯರ ವಾಸ್ತವ್ಯಕ್ಕೆ ಹೋಟೆಲ್‌ಗಳನ್ನು ಬುಕ್ ಮಾಡಲಾಗಿದ್ದು, ಇಲ್ಲಿ ಭೋಜನದ (Dinner) ವೇಳೆ ವಿಶೇಷ ಅನುಭೂತಿ ನೀಡಲು ಚಿನ್ನ (Gold) ಲೇಪಿತ ತಟ್ಟೆ (Plate), ಬೆಳ್ಳಿ (Silver) ಲೋಟಗಳಲ್ಲಿ (Glass) ಅತಿಥಿಗಳಿಗೆ ಊಟದ ವ್ಯವಸ್ಥೆ ಮಾಡಲಾಗುತ್ತಿದೆ. ಈ ಮೂಲಕ ಭಾರತದ ಶ್ರೀಮಂತ ಸಂಸ್ಕೃತಿ ಮತ್ತು ಪರಂಪರೆಯನ್ನು ಪ್ರದರ್ಶಿಸುವ ಪ್ರಯತ್ನ ಮಾಡಲಾಗುತ್ತಿದೆ ಎಂದು ಮೂಲಗಳು ಹೇಳಿವೆ.

    ಇದಕ್ಕಾಗಿ ಐಕಾನಿಕ್ ಐಟಿಸಿ ತಾಜ್ ಸೇರಿದಂತೆ 11 ಹೋಟೆಲ್‌ಗಳಿಗೆ ತಟ್ಟೆ ಮತ್ತು ಲೋಟಗಳನ್ನು ಸರಬರಾಜು ಮಾಡುವ ಕ್ರೋಕರಿ ಕಂಪನಿಗೆ ಚಿನ್ನ ಮತ್ತು ಬೆಳ್ಳಿ ಲೇಪಿತ ಅಗತ್ಯಗಳನ್ನು ಪೂರೈಕೆ ಮಾಡಲು ಜವಾಬ್ದಾರಿ ನೀಡಲಾಗಿದೆ. ಪಾತ್ರೆಗಳ ಮೇಲೆ ಜೈಪುರ, ಉದಯಪುರ, ವಾರಣಾಸಿ ಮತ್ತು ಕರ್ನಾಟಕದ ಸಂಕೀರ್ಣ ಕಲಾತ್ಮಕತೆ ಇರಲಿದ್ದು, ಇದು ಭಾರತದ ವೈವಿಧ್ಯಮಯ ಸಾಂಸ್ಕೃತಿಕತೆಯನ್ನು ಪ್ರತಿಬಿಂಬಿಸುತ್ತದೆ. ಇದನ್ನೂ ಓದಿ: ಜಿ20 ಶೃಂಗಸಭೆಯಲ್ಲಿ ಭಗವದ್ಗೀತೆಯ ನೀತಿಗಳನ್ನು ಹರಡಲಿರುವ ಗೀತಾ ಅಪ್ಲಿಕೇಷನ್!

     

    ಈ ವಸ್ತುಗಳು ತಯಾರಾದ ಬಳಿಕ ಪ್ರತಿ ವಸ್ತುವನ್ನು R&D ಲ್ಯಾಬ್‌ನಲ್ಲಿ ಸಂಪೂರ್ಣ ಪರೀಕ್ಷೆಗೆ ಒಳಪಡಿಸಲಾಗುತ್ತದೆ. ಈ ಪಾತ್ರೆಗಳ ವಿನ್ಯಾಸವು ಪ್ರತಿ ಹೋಟೆಲ್‌ನ ನಿರ್ದಿಷ್ಟ ಅವಶ್ಯಕತೆಗಳಿಗೆ ಅನುಗುಣವಾಗಿರುತ್ತದೆ. ಉದಾಹರಣೆಗೆ ‘ಮಹಾರಾಜ ಥಾಲಿ’ ಸೆಟ್, ಉಪ್ಪು ಮತ್ತು ಮೆಣಸಿನಕಾಯಿಗಾಗಿ ಪ್ರತ್ಯೇಕ ಬೆಳ್ಳಿಯ ಪೆಟ್ಟಿಗೆಗಳು ಮತ್ತು 5-6 ಬೌಲ್‌ಗಳನ್ನು ಒಳಗೊಂಡಿರುತ್ತದೆ. ಎಲ್ಲವನ್ನೂ ಹೋಟೆಲ್‌ನ ಮೆನು ಮತ್ತು ಶೈಲಿಗೆ ಹೊಂದಿಸಲು ವಿನ್ಯಾಸಗೊಳಿಸಲಾಗಿದೆ. ಇದನ್ನೂ ಓದಿ: G20 ಸಭೆಗೆ ಆಗಮಿಸುತ್ತಿರೋ ಜೋ ಬೈಡನ್‌ಗಾಗಿ ಮೂರು ಹಂತದ ಭದ್ರತೆ

    ಕ್ರೋಕರಿ ಕಂಪನಿಯು ರಾಷ್ಟ್ರೀಯ ಪಕ್ಷಿಯಾದ ನವಿಲನ್ನು ವಿನ್ಯಾಸದಲ್ಲಿ ಅಳವಡಿಸಿಕೊಂಡಿದೆ. ಇದು ಈ ಹಿಂದೆ ಅತಿಥಿಗಳಿಂದ ಮೆಚ್ಚುಗೆಯನ್ನು ಗಳಿಸಿತ್ತು. ಮಹಾರಾಜ ಥಾಲಿ ಜೊತೆಗೆ, ದಕ್ಷಿಣ ಭಾರತದ ವಿನ್ಯಾಸಗಳನ್ನು ಸಹ ಸಂಗ್ರಹದಲ್ಲಿ ಒಳಗೊಳಿಸಲಾಗುತ್ತಿದೆ. ಕಂಪನಿಯ ಮಾಲೀಕ ರಾಜೀವ್, ಮಾಜಿ ಅಮೇರಿಕಾ ಅಧ್ಯಕ್ಷ ಬರಾಕ್ ಒಬಾಮಾ ಭಾರತಕ್ಕೆ ಭೇಟಿ ನೀಡಿದಾಗ ವಿಶೇಷ ಊಟದ ಸೆಟ್‌ಗಳನ್ನು ಪ್ರಸ್ತುತಪಡಿಸಿದ್ದರು. ಇವುಗಳನ್ನು ಕಂಡು ಒಬಾಮಾ ತುಂಬಾ ಪ್ರಭಾವಿತರಾಗಿ ತಮ್ಮೊಂದಿಗೆ ಊಟದ ಸೆಟ್ ಅನ್ನು ಕೊಂಡೊಯ್ದಿದ್ದರು. ಇದನ್ನೂ ಓದಿ: ಇಂಡಿಯಾ, ಭಾರತದ ನಡುವಿನ ವ್ಯತ್ಯಾಸ ವಿವರಿಸಿದ್ದ ಲಾಲೂ ಹಳೆಯ ವೀಡಿಯೋ ವೈರಲ್

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಈ ಶಾಲೆಯಲ್ಲಿ ವಿದ್ಯಾರ್ಥಿಗಳೇ ಕಸ ಗುಡಿಸ್ತಾರೆ, ಪ್ಲೇಟ್‍ನೂ ತೊಳಿತಾರೆ

    ಈ ಶಾಲೆಯಲ್ಲಿ ವಿದ್ಯಾರ್ಥಿಗಳೇ ಕಸ ಗುಡಿಸ್ತಾರೆ, ಪ್ಲೇಟ್‍ನೂ ತೊಳಿತಾರೆ

    ಭೋಪಾಲ್: ಮಧ್ಯಪ್ರದೇಶದ (Madhya Pradesh)ಶಾಲೆಯೊಂದರಲ್ಲಿ ಮಕ್ಕಳೇ ಕಸ ಗುಡಿಸುವ, ರೊಟ್ಟಿ ಮಾಡುವ ಮತ್ತು ಪಾತ್ರೆಗಳನ್ನು ತೊಳೆಯುವ ದೃಶ್ಯಗಳು ತಡವಾಗಿ ಬೆಳಕಿಗೆ ಬಂದಿದೆ.

    ಚಕ್‍ದೇವಪುರ ಗ್ರಾಮದ (Chakdevpur village) ಕೊಯಲಾರಿಯ (Koyalari)ಸರ್ಕಾರಿ ಮಾಧ್ಯಮಿಕ ಶಾಲೆಯಲ್ಲಿ 5 ಮತ್ತು 6 ನೇ ತರಗತಿಯ ಶಾಲಾ ವಿದ್ಯಾರ್ಥಿನಿಯರು ತಮ್ಮ ಶಾಲಾ ಆವರಣದಲ್ಲಿರುವ ಕೈ ಪಂಪ್‍ನಿಂದ ನೀರು ತಂದು ಶೌಚಾಲಯ ಸ್ವಚ್ಛಗೊಳಿಸಿ ಮತ್ತು ಮಹಡಿಗಳನ್ನು ಗುಡಿಸಿದ್ದಾರೆ.  ಇದನ್ನೂ ಓದಿ: ಮಗು ಏಕೆ ಕಪ್ಪಾಗಿದೆ ಎಂದು ಪತ್ನಿಯನ್ನೇ ಕೊಂದ ಪತಿ- ಎರಡೂವರೆ ವರ್ಷದ ಮಗುವಿನಿಂದ ಬಯಲಾಯ್ತು ರಹಸ್ಯ

     

    ವಿದ್ಯಾರ್ಥಿಗಳು ಎದುರಿಸುತ್ತಿರುವ ಈ ಸಮಸ್ಯೆಗಳ ಕುರಿತಂತೆ ಗಿರಿಜನ ಕಲ್ಯಾಣ ಇಲಾಖೆಯ ಹೆಚ್ಚುವರಿ ಆಯುಕ್ತ ಪಿಎನ್ ಚತುರ್ವೇದಿ (PN Chaturvedi) ಅವರು, ನಾವು ಈ ಸಮಸ್ಯೆಯನ್ನು ಉನ್ನತ ಅಧಿಕಾರಿಗಳಿಗೆ ತಿಳಿಸುತ್ತೇವೆ ಮತ್ತು ತನಿಖೆ ನಡೆಸುತ್ತೇವೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಬೆಳಗ್ಗಿನ ಜಾವ ಮಲ ವಿಸರ್ಜನೆಗೆ ಹೋಗಿದ್ದ ಮಹಿಳೆ ಶವವಾಗಿ ಪತ್ತೆ

    ಮತ್ತೊಂದೆಡೆ ಈ ಬಗ್ಗೆ ಪ್ರತಿಕ್ರಿಯಿಸಿರುವ ಜಿಲ್ಲಾ ಶಿಕ್ಷಣಾಧಿಕಾರಿ ಚಂದ್ರಶೇಖರ್ ಸಿಸೋಡಿಯಾ (Chandrasekhar Sisodia) ಅವರು, ನಾವು ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿದ್ದೇವೆ ಮತ್ತು ಈ ಸಮಸ್ಯೆಗಳ ಬಗ್ಗೆ ತನಿಖೆ ನಡೆಸುತ್ತಿದ್ದೇವೆ. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

    ಮಧ್ಯಪ್ರದೇಶದಲ್ಲಿ 21,077 ಸರ್ಕಾರಿ ಶಾಲೆಗಳಲ್ಲಿ ತಲಾ ಒಬ್ಬ ಶಿಕ್ಷಕರಿದ್ದಾರೆ. 87,630 ಶಿಕ್ಷಕರ ಹುದ್ದೆಗಳು ಖಾಲಿ ಇವೆ. ಕಡಿಮೆ-ಗುಣಮಟ್ಟದ ಬೋಧನೆ ಮತ್ತು ಮೂಲಭೂತ ಸೌಕರ್ಯಗಳ ಕೊರತೆಯಿಂದ ಮಕ್ಕಳಿಗೆ ಓದುವುದರಲ್ಲಿ ಆಸಕ್ತಿ ಕಡಿಮೆ ಆಗುತ್ತದೆ. 2020-2021 ರಲ್ಲಿ ಶಾಲೆಗಳಿಂದ ಡ್ರಾಪ್-ಔಟ್ ಆದವರ ಪ್ರಮಾಣ ಶೇಕಡಾ 23.8 ರಷ್ಟಿತ್ತು.

    Live Tv
    [brid partner=56869869 player=32851 video=960834 autoplay=true]

  • ರಾಜ್ಯಾದ್ಯಂತ ಸಾರಿಗೆ ನೌಕರರ ಕುಟುಂಬಸ್ಥರು ತಟ್ಟೆ, ಲೋಟ ಬಡಿದು ಆಕ್ರೋಶ

    ರಾಜ್ಯಾದ್ಯಂತ ಸಾರಿಗೆ ನೌಕರರ ಕುಟುಂಬಸ್ಥರು ತಟ್ಟೆ, ಲೋಟ ಬಡಿದು ಆಕ್ರೋಶ

    – ಮಕ್ಕಳ ಜೊತೆ ಆಗಮಿಸಿದ ಮಹಿಳೆಯರು
    – ಸರ್ಕಾರದ ವಿರುದ್ಧ ಫಲಕ ಹಿಡಿದು ಆಕ್ರೋಶ

    ಬೆಂಗಳೂರು: ಆರನೇ ವೇತನ ಆಯೋಗ ಜಾರಿಗೊಳಿಸುವಂತೆ ಆಗ್ರಹಿಸಿ ಸರ್ಕಾರದ ವಿರುದ್ಧ ಕಳೆದ ಆರು ದಿನಗಳಿಂದ ಸಾರಿಗೆ ಸಿಬ್ಬಂದಿ ಪ್ರತಿಭಟನೆ ನಡೆಸುತ್ತಿದ್ದಾರೆ. ಸದ್ಯ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಸಾರಿಗೆ ಸಿಬ್ಬಂದಿ ಕುಟುಂಬ ಸಮೇತರಾಗಿ ರಸ್ತೆಗಿಳಿದು ತಟ್ಟೆ ಹಾಗೂ ಲೋಟ ಬಡಿಯುವ ಮೂಲಕ ತಮ್ಮ ಆಕ್ರೋಶವನ್ನು ಹೊರಹಾಕಿದ್ದಾರೆ.

    ಚಿಕ್ಕಮಗಳೂರು: ನಗರದ ಆಜಾದ್ ಪಾರ್ಕ್ ವೃತ್ತದಲ್ಲಿ ಕೆಎಸ್‌ಆರ್‌ಟಿಸಿ ಸಾರಿಗೆ ನೌಕರರು ಕುಟುಂಬ ಸಮೇತ ಬಂದು ರಸ್ತೆ ಮಧ್ಯೆ ತಟ್ಟೆ-ಲೋಟ ಬಡಿದು ಸರ್ಕಾರದ ವಿರುದ್ಧ ಅಸಮಾಧಾನ ಹೊರಹಾಕಿದರು. ಸುಮಾರು 300 ಕ್ಕೂ ಅಧಿಕ ಮಂದಿ ನಗರದ ಆಜಾದ್ ಪಾರ್ಕ್‍ನಲ್ಲಿ ಜಮಾಯಿಸಿ ಸರ್ಕಾರ ಹಾಗೂ ಸಾರಿಗೆ ಸಚಿವರ ವಿರುದ್ಧ ಕಿಡಿ ಕಾರಿದರು. ನಿಮ್ಮಿಂದ ಇಂದು ನಾವು ಬೀದಿಗೆ ಬಂದಿದ್ದೇವೆ. ಮಾರ್ಚ್ ತಿಂಗಳ ಸಂಬಳ ನೀಡಿಲ್ಲ. ತಿನ್ನೋಕೆ ಅನ್ನ ಇಲ್ಲ. ನಾವು ಇಂದು ಇಲ್ಲಿ ಕೂತಿದ್ದೇವೆ ಅಂದರೆ ಅದಕ್ಕೆ ನೀವೇ ಕಾರಣ ಎಂದು ಆಕ್ರೋಶ ವ್ಯಕ್ತಪಡಿಸಿದರು. ಸರ್ಕಾರ ನಮ್ಮ ಬೇಡಿಕೆಗಳನ್ನ ಈಡೇರಿಸದೆ ನೌಕರರ ಹೋರಾಟವನ್ನ ಹತ್ತಿಕ್ಕಲು ಪ್ರಯತ್ನಿಸುತ್ತಿದೆ. ಆದರೆ, ನಾವು ನಿಮ್ಮ ಬೆದರಿಕೆಗಳಿಗೆ ಬಗ್ಗುವುದಿಲ್ಲ. ಕೂಡಲೇ ನಮ್ಮ ಬೇಡಿಕೆ ಈಡೇರಿಸಬೇಕು, ಬೇಡಿಕೆ ಈಡೇರುವವರೆಗೂ ಪ್ರತಿಭಟನೆಯಿಂದ ಹಿಂದೆ ಸರಿಯೋ ಮಾತೇ ಇಲ್ಲ ಎಂದು ಸರ್ಕಾರಕ್ಕೆ ಎಚ್ಚರಿಸಿದ್ದಾರೆ. ಡಿಸೆಂಬರ್ ತಿಂಗಳಲ್ಲಿ ನೀವೇ ಕೊಟ್ಟಂತ ಮಾತನ್ನ ಉಳಿಸಿಕೊಳ್ಳುವಲ್ಲಿ ವಿಫಲವಾಗಿದ್ದೀರಾ. ಕೊಟ್ಟ ಮಾತನ್ನ ಉಳಿಸಿಕೊಳ್ಳುವಂತೆ ಸರ್ಕಾರ ಹಾಗೂ ಸಾರಿಗೆ ಸಚಿವರಿಗೆ ಆಗ್ರಹಿಸಿದ್ದಾರೆ.

    ಚಿಕ್ಕಬಳ್ಳಾಪುರ: ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಇಂದು ಚಿಕ್ಕಬಳ್ಳಾಪುರದಲ್ಲಿ ಸಾರಿಗೆ ನೌಕರರು ಪ್ರತಿಭಟನೆ ನಡೆಸಿದ್ದಾರೆ. ಚಿಕ್ಕಬಳ್ಳಾಪುರ ನಗರದ ಅಂಬೇಡ್ಕರ್ ಭವನದಿಂದ ಶಿಡ್ಲಘಟ್ಟ ಮಾರ್ಗದ ಅಂಬೇಡ್ಕರ್ ವೃತ್ತದವರೆಗೆ ಮೆರವಣಿಗೆ ನಡೆಸಿದರು. ಅಂಬೇಡ್ಕರ್ ವೃತ್ತದಲ್ಲಿ ಕೆಲ ಕಾಲ ರಸ್ತೆ ತಡೆ ನಡೆಸಿದ ಸಾರಿಗೆ ನೌಕರರ ಕುಟುಂಬಸ್ಥರು, ತಟ್ಟೆ ಲೋಟ ಬಡಿಯುವ ಚಳುವಳು ನಡೆಸಿದರು. ಪ್ರತಿಭಟನೆಯಲ್ಲಿ ಸಾರಿಗೆ ನೌಕರರು ತಂದೆ ತಾಯಿ, ಪತ್ನಿ , ಅಣ್ಣ, ತಮ್ಮ, ಮಕ್ಕಳು ಎಲ್ಲರೂ ಭಾಗಿಯಾಗಿದ್ದರು. ಸರ್ಕಾರ ಸಾರಿಗೆ ನೌಕರರ ಬೇಡಿಕೆಗಳನ್ನ ಈಡೇರಿಸಬೇಕು ಅಂತ ಆಗ್ರಹಿಸಿದರು.

    ಬಾಗಲಕೋಟೆ: ಜಿಲ್ಲೆಯ ಹುನಗುಂದ ಪಟ್ಟಣದಲ್ಲಿ ಸಾರಿಗೆ ನೌಕರರು ಕುಟುಂಬ ಸಮೇತರಾಗಿ ಸಾರಿಗೆ ನೌಕರರಿಗೂ 6ನೇ ವೇತನ ಆಯೋಗ ವರದಿ ಜಾರಿಯಾಗಬೇಕೆಂದು ಬರೆದ ಫಲಕ ಹಿಡಿದು ಫಲಕ ಹಿಡಿದು ತಹಶೀಲ್ದಾರ್ ಕಚೇರಿವರೆಗೂ ಮೆರವಣಿಗೆ ನಡೆಸಿದರು. ಈ ವೇಳೆ ಸಾರಿಗೆ ನೌಕರರ ಪ್ರತಿಭಟನೆ ರೈತ ಸಂಘಟನೆಗಳು ಸಾಥ್ ನೀಡಿದವು.

    ವಿಜಯಪುರ: ವಿಜಯಪುರದ ಸೆಟಲೈಟ್ ಬಸ್ ನಿಲ್ದಾಣದ ಕ್ವಾಟ್ರಸ್ ನ ಸಾರಿಗೆ ನೌಕರರ ಕುಟುಂಬಸ್ಥರೊಂದಿಗೆ ಮಾರ್ಚ್ ತಿಂಗಳ ಸಂಬಳ ನೀಡುವಂತೆ ಒತ್ತಾಯಿಸಿ ಜಿಲ್ಲಾಧಿಕಾರಿಗಳ ಕಛೇರಿ ಎದುರು ಪ್ರತಿಭಟನೆ ನಡೆಸಿದರು.

    ಬಳ್ಳಾರಿ: ಸಾರಿಗೆ ನೌಕರರ ಪತ್ನಿಯರು ತಮಟೆ ಮತ್ತು ಗಂಟೆ ಬಾರಿಸುವ ಹೋರಾಟಕ್ಕೆ ಬಳ್ಳಾರಿ ಜಿಲ್ಲಾಡಳಿತ ಅವಕಾಶ ನೀಡದ ಹಿನ್ನೆಲೆಯಲ್ಲಿ, ಬೀದಿಯಲ್ಲಿ ನಿಂತು ರಸ್ತೆ ಮಧ್ಯೆ ಬಸ್ ತಡೆದು ಕುಟುಂಬಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ದಿಢೀರನೆ ನಡೆದ ಪ್ರತಿಭಟನೆಯಿಂದ ಕೆಲ ಕಾಲ ಗೊಂದಲ ಮತ್ತು ಗಲಾಟೆ ವಾತಾವರಣ ಸೃಷ್ಟಿಯಾಯಿತು, ದಾರಿಯಲ್ಲಿ ಬಂದ ಸಾರಿಗೆ ಬಸ್ ತಡೆದು ಬಸ್ ಚಾಲಕನನ್ನು ತರಾಟೆ ತೆಗೆದುಕೊಂಡು ಕುಟುಂಬಸ್ಥರು ಬಸ್ ಮುಂದೆ ಕುಳಿತು ಪ್ರತಿಭಟನೆ ಮಾಡಿದ್ದಾರೆ.

    ಚಾಮರಾಜನಗರ: ಚಾಮರಾಜನಗರ ಡಿಸಿ ಕಚೇರಿ ಮುಂದೆ ಸಾರಿಗೆ ನೌಕರರು ಕುಟುಂಬಸ್ಥರೊಟ್ಟಿಗೆ ತಟ್ಟೆ, ಲೋಟ ಬಡಿದು ಪ್ರತಿಭಟನೆ ನಡೆಸಿದರು. ಈ ವೇಳೆ ಸಾರಿಗೆ ನೌಕರರಿಗೆ ರೈತ ಸಂಘದ ಕಾರ್ಯಕರ್ತರು ಭಾಗಿಯಾಗಿ ಬೆಂಬಲ ನೀಡಿದರು.

    ಚಿತ್ರದುರ್ಗ: ಜಿಲ್ಲೆಯ ಓಬವ್ವ ವೃತ್ತದಿಂದ ಡಿಸಿ ಕಚೇರಿವರೆಗೆ ಸಾರಿಗೆ ನೌಕರರು ಕುಟುಂಬಸ್ಥರೊಂದಿಗೆ ಸಿಎಂ ಬಿಎಸ್ ವೈ, ಸಾರಿಗೆ ಸಚಿವ ಸವದಿ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಧರಣಿ ನಡೆಸಿದರು ಹಾಗೂ ಈ ಪ್ರತಿಭಟನೆಯಲ್ಲಿ ವಿವಿಧ ಸಂಘಟನೆ ಮುಖಂಡರು ಭಾಗಿಯಾಗಿದ್ದರು.

    ದಾವಣಗೆರೆ: ಯುಗಾದಿ ಹಬ್ಬವನ್ನು ಮರೆತು ಇಂದು ಸಾರಿಗೆ ನೌಕರರು ಕುಟುಂಬಸ್ಥರ ಸಮೇತ ಪ್ರತಿಭಟನೆ ನಡೆಸಿದರು. ಯಡಿಯೂರಪ್ಪನವರು ಒಂದೇ ದಿನ ಬಂದು ಬಸ್ ಓಡಿಸಲಿ, ಎಸಿ ಕಾರಿನಲ್ಲಿ ಡ್ರೈವರ್‍ನನ್ನು ಇಟ್ಟುಕೊಂಡು ಹೋಗುವುದಲ್ಲ. ನಮ್ಮ ಗಂಡಂದಿರ ತರ ಗಾಡಿ ಓಡಿಸಲಿ ಗೊತ್ತಾಗುತ್ತೆ. ಹಬ್ಬ ಇದೆ ಮಕ್ಕಳಿಗೆ ಬಟ್ಟೆ ಇಲ್ಲ, ಮನೆಯಲ್ಲಿ ರೇಷನ್ ಇಲ್ಲ ಹೇಗೆ ಹಬ್ಬ ಮಾಡುವುದು. ಕೂಡಲೇ ನಮ್ಮ ಬೇಡಿಕೆ ಈಡೇರಿಸಲು ಒತ್ತಾಯಿಸುತ್ತೇವೆ. ಬೇಡಿಕೆ ಈಡೇರಿದರೆ ಆಗ ನಮಗೆ ನಿಜವಾದ ಯುಗಾದಿ ಎಂದು ಮಹಿಳೆಯರು ಆಕ್ರೋಶ ವ್ಯಕ್ತಪಡಿಸಿದಸಿರು.

    ಧಾರವಾಡ: ಸಾರಿಗೆ ಮಹಿಳಾ ಸಿಬ್ಬಂದಿ ಮತ್ತು ಅವರ ಮಕ್ಕಳು ಇಂದು ಜಿಲ್ಲಾಧಿಕಾರಿ ಕಚೇರಿ ಎದುರು ತಟ್ಟೆ ಬಾರಿಸಿ ಪ್ರತಿಭಟನೆ ನಡೆಸಿದರು.

    ಬಾಗಲಕೋಟೆ: ಕಲಬುರಗಿ ನಗರದ ಮೂರು ಡಿಪೋ ಮುಂದೆ ಕುಳಿತು ಮಹಿಳೆಯರು ಬೇಡಿಕೆ ಈಡೇರಿಸುವವರೆಗೆ ನಮ್ಮ ಮನೆಯವರನ್ನು ಕೆಲಸಕ್ಕೆ ಕಳಿಸೋದಿಲ್ಲಾ ಅಂತ ಧರಣಿ ನಡೆಸಿದರು.

    ಹಾಸನ: ಸಾರಿಗೆ ನೌಕರರು ಮತ್ತು ಅವರ ಕುಟುಂಬದವರು ತಟ್ಟೆ, ಲೋಟ ಹಿಡಿದು ಹಾಸನದ ಬಸ್ ನಿಲ್ದಾಣದವರೆಗೆ ಪ್ರತಿಭಟನಾ ರ್ಯಾಲಿ ನಡೆಸಿದರು. ಈ ವೇಳೆ ಕರ್ತವ್ಯಕ್ಕೆ ಹಾಜರಾಗಿದ್ದ ಸಿಬ್ಬಂದಿ ವಿರುದ್ಧ ಆಕ್ರೋಶ ಹೊರಹಾಕಿ ಬಸ್‍ನಿಂದ ಕೆಳಗಿಳಿಸಿದರು. ಪೊಲೀಸರು ಮಧ್ಯಪ್ರವೇಶ ಮಾಡಿ ಪರಿಸ್ಥಿತಿ ತಿಳಿಗೊಳಿಸಿದರು. ಮತ್ತೊಂದೆಡೆ ಸಾರಿಗೆ ನೌಕರ ಪಾಲಾಕ್ಷ ಎಂಬವರು ಹಾಸನದ ಸಿಟಿ ಬಸ್‍ನಿಲ್ದಾಣದಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿ ಸರ್ಕಾರ ವಿರುದ್ಧ ಆಕ್ರೋಶ ಹೊರಹಾಕಿದರು. ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

    ಹಾವೇರಿ: ನಗರದ ಹೊಸಮನಿ ಸಿದ್ದಪ್ಪ ವೃತ್ತದಲ್ಲಿ ಸಾರಿಗೆ ನೌಕರರು ಹಾಗೂ ಅವರ ಕುಟುಂಬದವರೊಂದಿಗೆ ಹಾವೇರಿಯಲ್ಲಿ ತಟ್ಟೆ ಮತ್ತು ಲೋಟ ಬಾರಿಸಿ ಸಾರಿಗೆ ಸಚಿವ ಲಕ್ಷ್ಮಣ ಸವದಿ ಹಾಗೂ ಸರಕಾರದ ವಿರುದ್ಧ ಆಕ್ರೋಶ ಹೊರಹಾಕಿದರು. ಈ ವೇಳೆ ರಾಜ್ಯ ರೈತ ಸಂಘ, ಎಸ್‍ಎಫ್‍ಐ, ಕರ್ನಾಟಕ ರಕ್ಷಣಾ ವೇದಿಕೆ, ದಲಿತ ಸಂಘಟನೆಗಳು ಸೇರಿದಂತೆ ವಿವಿಧ ಸಂಘಟನೆಗಳಿಂದ ಪ್ರತಿಭಟನೆಗೆ ಸಾಥ್ ನೀಡಿದರು.

    ಕೋಲಾರ: ಸಾರಿಗೆ ನೌಕರರ ಮುಷ್ಕರವನ್ನ ಬೆಂಬಲಿಸಿ ಕಾಂಗ್ರೆಸ್ ಶಾಸಕರ ನೇತೃತ್ವದಲ್ಲಿ ವಿವಿಧ ಸಂಘಟನೆಗಳ ಮುಖಂಡರು ತಟ್ಟೆ ಲೋಟ ಹಿಡಿದುಕೊಂಡು ಪ್ರತಿಭಟನೆ ನಡೆಸಿದ ಘಟನೆ ಕೋಲಾರದಲ್ಲಿ ನಡೆದಿದೆ. ಕೋಲಾರ ಜಿಲ್ಲೆ ಬಂಗಾರಪೇಟೆ ಪಟ್ಟಣದ ಅಂಬೇಡ್ಕರ್ ಪ್ರತಿಮೆ ಎದುರು ತಟ್ಟೆ ಲೋಟ ಹಿಡಿದು ಪ್ರತಿಭಟನೆ ನಡೆಸಿದ ಬಂಗಾರಪೇಟೆ ಶಾಸಕ ಎಸ್.ಎನ್.ನಾರಾಯಣಸ್ವಾಮಿ, ಸರ್ಕಾರದ ವಿರುದ್ದ ದಿಕ್ಕಾರಗಳನ್ನ ಕೂಗಿದ್ರು. ಸಾರಿಗೆ ನೌಕರರ ಬೇಡಿಕೆಗಳನ್ನ ಈಡೇರಿಸದೆ, ಸರ್ಕಾರ ನೌಕರರ ವಿರುದ್ದ ತೆಗೆದುಕೊಳ್ಳುತ್ತಿರುವ ಕ್ರಮಕ್ಕೆ ಆಕ್ರೋಶ ವ್ಯಕ್ತಪಡಿಸಿದರು. ಸರ್ಕಾರ ಬೇಡಿಕೆಗಳನ್ನ ಈಡೇರಿಸುವುದನ್ನ ಬಿಟ್ಟು, ಅವರ ಮೇಲೆ ಎಸ್ಮಾ ಜಾರಿ ಮಾಡುವುದು ಹಾಗೂ ವರ್ಗಾವಣೆ ಮಾಡುತ್ತಿರುವುದು ಖಂಡನೀಯ ಎಂದರು. ಅಲ್ಲದೆ ತರಬೇತಿಯಲ್ಲಿರುವ ಸಾರಿಗೆ ನೌಕರರನ್ನ ಕೆಲಸದಿಂದ ವಜಾ ಮಾಡಿತ್ತೇವೆಂದು ಬೆದರಿಕೆ ಹಾಕಿ ನೋಟೀಸ್ ನೀಡುತ್ತಿರುವ ಸರ್ಕಾರದ ಧೋರಣೆಗೆ ಅಸಮಧಾನ ವ್ಯಕ್ತಪಡಿಸಿದರು.

    ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಕಾರವಾರ, ಕುಮಟಾ, ಅಂಕೋಲ ತಾಲೂಕು ಸೇರಿ ವಿವಿಧ ತಾಲೂಕಿನಲ್ಲಿ ಸಾರಿಗೆ ನೌಕರರ ಕುಟುಂಬಸ್ಥರ ಜೊತೆ ಪ್ರತಿಭಟನೆಗೆ ನಡೆಸಿದರು.

    ಮಂಡ್ಯ: ನಮ್ಮ ಕುಟುಂಬದ ಜೊತೆ ಸರ್ಕಾರ ಚೆಲ್ಲಾಟವಾಡುತ್ತಿದೆ. ಹೋರಾಟ ಹತ್ತಿಕ್ಕಲು ಧಮನಕಾರಿ ನೀತಿ ಅನುಸರಿಸಲಾಗುತ್ತಿದೆ ಎಂದು ಮಂಡ್ಯದ ವಿಶ್ವೇಶ್ವರಯ್ಯ ಪ್ರತಿಮೆ ಎದುರು ಸಾರಿಗೆ ನೌಕರರ ಜೊತೆ ಕುಟುಂಸ್ಥರು ಪ್ರತಿಭಟನೆ ನಡೆಸಿದರು.

    ಮೈಸೂರು: ಜಿಲ್ಲೆಯ ಗಾಂಧಿ ವೃತ್ತದಲ್ಲಿ ಬೇಡಿಕೆ ಈಡೇರುವವರೆಗೂ ಪ್ರತಿಭಟನೆ ಮುಂದುವರೆಸುತ್ತೇವೆ. ನಾವು ನಮ್ಮ ಮನೆಗಳನ್ನು ಖಾಲಿ ಮಾಡುವುದಿಲ್ಲ ಎಂದು ಸಾರಿಗೆ ನೌಕರರ ಕುಟುಂಬಸ್ಥರು ಧರಣಿ ನಡೆಸಿದರು.

    ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯ ಸಾಗರದ ಉಪ ವಿಭಾಗಾಧಿಕಾರಿ ಕಚೇರಿ ಎದುರು ಪ್ರತಿಭಟನೆ ಸಾರಿಗೆ ನೌಕರರ ಜೊತೆ ಕುಟುಂಬಸ್ಥರು ಪ್ರತಿಭಟನೆ ನಡೆಸಿದರು. ಪ್ರತಿಭಟನೆಯಲ್ಲಿ ಸಾರಿಗೆ ನೌಕರರ ಕುಟುಂಬಸ್ಥರಿಗೆ ರೈತ ಸಂಘದ ಕಾರ್ಯಕರ್ತರ ಸಾಥ್ ನೀಡಿದರು.

  • ಮೇಲ್ಜಾತಿಯ ನಾಯಕರು ತಟ್ಟೆಯಲ್ಲಿ, ದಲಿತ ಬಿಜೆಪಿ ಎಂಎಲ್‍ಎ ಎಲೆಯಲ್ಲಿ ಊಟ- ಫೋಟೋ ವೈರಲ್

    ಮೇಲ್ಜಾತಿಯ ನಾಯಕರು ತಟ್ಟೆಯಲ್ಲಿ, ದಲಿತ ಬಿಜೆಪಿ ಎಂಎಲ್‍ಎ ಎಲೆಯಲ್ಲಿ ಊಟ- ಫೋಟೋ ವೈರಲ್

    ಭೋಪಾಲ್: ಮಧ್ಯಪ್ರದೇಶದಲ್ಲಿ ರವಿವಾರ ಸಾಮಾಜಿಕ ಜಾಲತಾಣದಲ್ಲಿ ಫೋಟೋವೊಂದು ವೈರಲ್ ಆಗಿದ್ದು, ರಾಜಕೀಯ ಕ್ಷೇತ್ರದಲ್ಲಿ ಸಂವಲನವನ್ನೇ ಉಂಟು ಮಾಡಿದೆ. ಕಾರ್ಯಕ್ರಮದಲ್ಲಿ ಮೇಲು ಜಾತಿಯ ನಾಯಕರು ಸ್ಟೀಲ್ ತಟ್ಟೆಯಲ್ಲಿ ಊಟ ಮಾಡುತ್ತಿದ್ದರೆ, ಪಕ್ಕದಲ್ಲಿಯೇ ಬಿಜೆಪಿಯ ದಲಿತ ಶಾಸಕರೊಬ್ಬರು ಎಲೆಯಲ್ಲಿ ಊಟ ಮಾಡುತ್ತಿದ್ದಾರೆ.

    ಫೋಟೋದಲ್ಲಿ ಏನಿದೆ?: ವೈರಲ್ ಫೋಟೋದಲ್ಲಿ ಮಧ್ಯಪ್ರದೇಶ ಸಾರಿಗೆ ಸಚಿವ ಭೂಪೇಂದ್ರ ಸಿಂಗ್ ಮತ್ತು ಜಿಲ್ಲಾ ಪಂಚಾಯ್ತಿ ಅಧ್ಯಕ್ಷ ತೋರಣ್ ಸಿಂಗ್ ಇಬ್ಬರೂ ಸ್ಟೀಲ್ ತಟ್ಟೆಯಲ್ಲಿ ಭೋಜನ ಸೇವಿಸುತ್ತಿದ್ದಾರೆ. ಇತ್ತ ಇವರ ಪಕ್ಕವೇ ಕುಳಿತ ಶಾಸಕ ಗೋಪಿಲಾಲ್ ಎಲೆಯಲ್ಲಿ ಊಟ ಮಾಡುತ್ತಿದ್ದಾರೆ.

    ಎಲೆಯಲ್ಲಿ ಊಟ ಮಾಡಿದ ಬಿಜೆಪಿ ದಲಿತ ಶಾಸಕ ಗೋಪಿಲಾಲ್ ಜಟವಾ, ಫೋಟೋ ವೈರಲ್ ಆಗಿರುವುದು ‘ರಾಜಕೀಯ ಕುತಂತ್ರ’ ಎಂದು ಪ್ರತಿಕ್ರಿಯೆ ನೀಡಿದ್ದಾರೆ. ಈ ಘಟನೆ ಶುಕ್ರವಾರ ನಡೆದಿದ್ದು, ಕಾರ್ಯಕ್ರಮಕ್ಕೆ ಆಗಮಿಸಿದ ಎಲ್ಲ ಕಾರ್ಯಕರ್ತರಿಗೂ ಊಟದ ವ್ಯವಸ್ಥೆಯನ್ನು ಮಾಡಲಾಗಿತ್ತು. ಈ ವೇಳೆ ಕಾರ್ಯಕ್ರಮಕ್ಕೆ ದಿಢೀರ್ ಅಂತಾ ತೋರಣ್ ಸಿಂಗ್ ಆಗಮಿಸಿದರು. ಊಟಕ್ಕೆ ಕುಳಿತಾಗ ಆಯೋಜಕರು ಕೇವಲ ಎರಡು ತಟ್ಟೆಗಳನ್ನು ಇರಿಸಿದ್ರು. ತೋರಣ್ ಸಿಂಗ್ ನಮಗೆ ಅತಿಥಿಯಾಗಿದ್ದರಿಂದ ನನ್ನ ತಟ್ಟೆಯನ್ನು ಅವರಿಗೆ ನೀಡಿ, ನಾನು ಎಲೆಯಲ್ಲಿ ಊಟ ಮಾಡಿದೆ. ಎಲೆಯಲ್ಲಿ ಕೇವಲ ನಾನೊಬ್ಬನೇ ಅಲ್ಲ, ಎಲ್ಲ ಕಾರ್ಯಕರ್ತರು ಮತ್ತು ಅಧಿಕಾರಿಗಳು ಊಟ ಮಾಡಿದ್ದಾರೆ ಎಂದು ಗೋಪಿಲಾಲ್ ಸ್ಪಷ್ಟನೆ ನೀಡಿದ್ದಾರೆ.

    ನಮ್ಮ ಪಕ್ಷ ಮತ್ತು ಆರ್‍ಎಸ್‍ಎಸ್ ಸಂಘಟನೆ ನಮಗೆ ‘ಅತಿಥಿ ದೇವೋ ಭವಃ’ ಎಂದು ಕಲಿಸಿದೆ. ಹಾಗಾಗಿ ಅತಿಥಿಯಾಗಿ ಬಂದ ತೋರಣ್ ಸಿಂಗ್ ಅವರಿಗೆ ತಟ್ಟೆ ನೀಡಬೇಕಾಯಿತು ಎಂದು ಗೋಪಿಲಾಲ್ ಹೇಳಿದ್ದಾರೆ.