Tag: Playoffs

  • ಸಿಎಸ್‌ಕೆಗೆ ಗುಡ್‌ನ್ಯೂಸ್‌, ಆರ್‌ಸಿಬಿಗೆ ಬ್ಯಾಡ್‌ ನ್ಯೂಸ್‌ – ಮುಂದಿನ 5 ದಿನ ಬೆಂಗ್ಳೂರಿನಲ್ಲಿ ಮಳೆ ವಾತಾವರಣ ಹೇಗಿದೆ?

    ಸಿಎಸ್‌ಕೆಗೆ ಗುಡ್‌ನ್ಯೂಸ್‌, ಆರ್‌ಸಿಬಿಗೆ ಬ್ಯಾಡ್‌ ನ್ಯೂಸ್‌ – ಮುಂದಿನ 5 ದಿನ ಬೆಂಗ್ಳೂರಿನಲ್ಲಿ ಮಳೆ ವಾತಾವರಣ ಹೇಗಿದೆ?

    ಬೆಂಗಳೂರು: ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು (Royal Challengers Bengaluru) ಮತ್ತು ಚೆನ್ನೈ ಸೂಪರ್‌ ಕಿಂಗ್ಸ್‌ ನಡುವಿನ ಮಹಾಕಾಳಗ ಬೆಂಗಳೂರಿನ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಶನಿವಾರ (ಮೇ 18) ನಡೆಯಲಿದೆ. ಈ ಹೈವೋಲ್ಟೇಜ್‌ ಪಂದ್ಯವನ್ನು ಕಣ್ತುಂಬಿಕೊಳ್ಳಲು ಕಾದುಕುಳಿತಿರುವ ಕೋಟ್ಯಂತರ ಆರ್‌ಸಿಬಿ ಅಭಿಮಾನಿಗಳಿಗೆ (RCB Fans) ಮಳೆ ನಿರಾಸೆ ಮೂಡಿಸಲಿದೆಯೇ ಎಂಬ ಆತಂಕ ಶುರುವಾಗಿದೆ.

    ಹೌದು. ಬೆಂಗಳೂರಿನಲ್ಲಿ (Bengaluru) ಮುಂದಿನ 5 ದಿನಗಳ ಕಾಲವೂ ಭಾರೀ ಮಳೆಯಾಗಲಿದ್ದು, ಆರೆಂಜ್‌ ಅಲರ್ಟ್‌ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇದರಿಂದ ಶನಿವಾರ ನಡೆಯಲಿರುವ ಆರ್‌ಸಿಬಿ VS ಚೆನ್ನೈ (RCB vs CSK) ನಡುವಿನ ನಾಕೌಟ್‌ ಪಂದ್ಯಕ್ಕೆ ಅಡ್ಡಿ ಉಂಟಾಗಲಿದೆ ಎಂದು ಹೇಳಲಾಗಿದೆ.

    5 ದಿನಗಳ ವಾತಾವರಣ ಹೇಗಿರಲಿದೆ?
    ಬೆಂಗಳೂರಿನಲ್ಲಿ ಶುಕ್ರವಾರ ಗರಿಷ್ಠ 27° ಕನಿಷ್ಠ 21° ಸೆಲ್ಸಿಯಸ್‌ ತಾಪಮಾನ ಇರಲಿದೆ. ಹಾಗೆಯೇ ಶನಿವಾರ ಗರಿಷ್ಠ 28° – ಕನಿಷ್ಠ 22°, ಭಾನುವಾರ ಗರಿಷ್ಠ 28° – ಕನಿಷ್ಠ 22°, ಸೋಮವಾರ ಗರಿಷ್ಠ 28° – ಕನಿಷ್ಠ 21°, ಮಂಗಳವಾರ ಗರಿಷ್ಠ 29° – ಕನಿಷ್ಠ 21° ಸೆಲ್ಸಿಯಸ್‌ ತಾಪಮಾನ ಇರಲಿದ್ದು, ಐದು ದಿನವೂ ಭಾರೀ ಮಳೆಯಾಗಲಿದೆ (Heavy Rain). ಶನಿವಾರ ಸಂಜೆ ವೇಳೆಗೆ ಭಾರೀ ಮಳೆಯಾಗುವ ಸಾಧ್ಯತೆ ಹೆಚ್ಚಾಗಿಯೇ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಆರ್‌ಸಿಬಿಗೆ ಈ ಪಂದ್ಯ ನಿರ್ಣಾಯಕವಾಗಿರುವುದರಿಂದ ರಾತ್ರಿ 8 ರಿಂದ 12 ಗಂಟೆವರೆಗೆ ಮಳೆ ಬಿಡುವುಕೊಟ್ಟರೆ ಪೂರ್ಣ ಪಂದ್ಯ ನಡೆಯಲಿದೆ.

    ಪಂದ್ಯವಾಡದೆಯೇ ಪ್ಲೇ ಆಫ್‌ ತಲುಪುತ್ತಾ ಸಿಎಸ್‌ಕೆ?
    13 ಪಂದ್ಯಗಳಲ್ಲಿ 7 ರಲ್ಲಿ ಗೆಲುವು ಸಾಧಿಸಿರುವ ಸಿಎಸ್‌ಕೆ ಉತ್ತಮ ನೆಟ್‌ ರನ್‌ರೇಟ್‌ನೊಂದಿಗೆ 3ನೇ ಸ್ಥಾನದಲ್ಲಿದೆ. ಒಂದು ವೇಳೆ ಮುಂದಿನ ಪಂದ್ಯ ಮಳೆಯಿಂದ ರದ್ದಾದರೂ ಸಿಎಸ್‌ಕೆ ಒಂದು ಅಂಕ ಪಡೆದು ಪ್ಲೇ ಆಫ್‌ ತಲುಪಲಿದೆ. ಆದ್ರೆ 13 ಪಂದ್ಯಗಳಲ್ಲಿ 6ರಲ್ಲಿ ಗೆಲುವು ಸಾಧಿಸಿರುವ ಆರ್‌ಸಿಬಿ 6ನೇ ಸ್ಥಾನದಲ್ಲಿದೆ. ಒಂದು ವೇಳೆ ಆರ್‌ಸಿಬಿ ರನ್‌ ಚೇಸ್‌ ಮಾಡಿದರೆ 18.1 ಓವರ್‌ಗಳ ಒಳಗೆ ಗೆಲ್ಲಬೇಕು. ಮೊದಲು ಬ್ಯಾಟ್‌ ಮಾಡಿದರೆ ಕನಿಷ್ಠ 18 ರನ್‌ಗಳಿಂದ ಗೆಲ್ಲಬೇಕು. ಆಗಷ್ಟೇ ಆರ್‌ಸಿಬಿಗೆ ಗೆಲ್ಲುವ ಅವಕಾಶವಿದೆ ಎಂದು ಕ್ರಿಕೆಟ್‌ ತಜ್ಞರು ಅಂದಾಜಿಸಿದ್ದಾರೆ. ಮಳೆಯಿಂದ ಪಂದ್ಯ ರದ್ದಾದರೆ ಒಂದು ಅಂಕದೊಂದಿಗೆ ಪ್ಲೇ ಆಫ್‌ ನಿಂದ ಹೊರಗುಳಿಯಲಿದೆ.

    ʻಸಬ್‌ ಏರ್‌ ಸಿಸ್ಟಮ್‌ʼ ಕೈ ಹಿಡಿಯುತ್ತಾ?
    ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಎಷ್ಟೇ ಮಳೆಯಾದರೂ, ಮಳೆ ನಿಂತ ನಂತರ ಕೆಲವೇ ನಿಮಿಷಗಳಲ್ಲಿ ಪಂದ್ಯಗಳು ಆರಂಭಿಸಬಹುದಾಗಿದೆ. ಉದಾಹರಣೆಗೆ ಒಂದು ಗಂಟೆ ಭಾರೀ ಮಳೆ ಸುರಿದರೆ ಕೇವಲ 7 ನಿಮಿಷಗಳಲ್ಲಿ ಪಂದ್ಯವನ್ನು ಆರಂಭಿಸಬಹುದು. ಕ್ರೀಡಾಂಗಣದಲ್ಲಿ ಸಬ್ ಏರ್ ಸಿಸ್ಟಂ ಅಳವಡಿಕೆಯಾಗಿದ್ದು ಕೂಡಲೇ ನೀರನ್ನು ಹೊರ ಹಾಕಲಾಗುತ್ತದೆ. ಬಿಸಿ ಗಾಳಿಯನ್ನು ಹಾಯಿಸಿ ಮೈದಾನವನ್ನ ಒಣಗಿಸುವ ವ್ಯವಸ್ಥೆಯಿದೆ. 4.5 ಕೋಟಿ ರೂ. ವೆಚ್ಚದಲ್ಲಿ ಈ ವ್ಯವಸ್ಥೆಯನ್ನು ಅಳವಡಿಸಲಾಗಿದೆ. ಆದ್ದರಿಂದ ಮಳೆಯು 9 ಗಂಟೆ ವೇಳೆಗೆ ಬಿಡುವು ಕೊಟ್ಟರು ಕನಿಷ್ಠ ಓವರ್‌ಗಳ ಮಿತಿಯಲ್ಲಿ 9:30 ರಿಂದ ಪಂದ್ಯ ಆರಂಭಿಸಬಹುದಾಗಿದೆ ಎಂದು ತಜ್ಞರು ಸಲಹೆ ನೀಡಿದ್ದಾರೆ.

  • ಹೈವೋಲ್ಟೇಜ್ ಕದನ ವಾಷ್‌ಔಟ್‌ ಆಗುವ ಸಾಧ್ಯತೆ – ಆರ್‌ಸಿಬಿ ಅಭಿಮಾನಿಗಳಲ್ಲಿ ಹೆಚ್ಚಿದ ಆತಂಕ!

    ಹೈವೋಲ್ಟೇಜ್ ಕದನ ವಾಷ್‌ಔಟ್‌ ಆಗುವ ಸಾಧ್ಯತೆ – ಆರ್‌ಸಿಬಿ ಅಭಿಮಾನಿಗಳಲ್ಲಿ ಹೆಚ್ಚಿದ ಆತಂಕ!

    – ಬೆಂಗಳೂರಿನಲ್ಲಿ ಮಳೆಯ ವಾತಾವರಣ ಹೇಗಿದೆ?
    – ʻಸಬ್ ಏರ್ ಸಿಸ್ಟಂʼ ಒಂದೇ ಆಧಾರ

    ಬೆಂಗಳೂರು: ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ಮತ್ತು ಚೆನ್ನೈ ಸೂಪರ್‌ ಕಿಂಗ್ಸ್‌ ನಡುವೆ ಬೆಂಗಳೂರಿನ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಶನಿವಾರ (ಮೇ 18) ನಡೆಯಲಿರುವ ಹೈವೋಲ್ಟೇಜ್‌ ಪಂದ್ಯಕ್ಕೆ ಮಳೆ ಅಡ್ಡಿ ಪಡಿಸುವ ಸಾಧ್ಯತೆ ಹೆಚ್ಚಾಗಿದೆ.

    ಕಳೆದ ಒಂದು ವಾರದಿಂದಲೂ ಬೆಂಗಳೂರಿನಲ್ಲಿ ಭಾರೀ ಮಳೆಯಾಗುತ್ತಿದೆ. ಶನಿವಾರವೂ ಗರಿಷ್ಠ 28°, ಕನಿಷ್ಠ 21° ಸೆಲ್ಸಿಯಸ್‌ ತಾಪಮಾನ ಇರಲಿದೆ. ಒಂದು ವೇಳೆ ಶನಿವಾರವೂ ನಗರದಲ್ಲಿ ಮಳೆಯಾದರೆ, ಪಂದ್ಯ ರದ್ದಾಗಲಿದ್ದು, ಉಭಯ ತಂಡಗಳಿಗೆ ತಲಾ ಒಂದೊಂದು ಅಂಕ ಸಿಗಲಿದೆ. ಇದರಿಂದ ಹಾಲಿ ಚಾಂಪಿಯನ್ಸ್‌ ಚೆನ್ನೈ ಸೂಪರ್‌ ಕಿಂಗ್ಸ್‌ ಪ್ಲೇ ಆಫ್‌ ಪ್ರವೇಶಿಸಲಿದೆ. ಹಾಗಾಗಿ ಮೇ 18 ರಂದು ಯಾವುದೇ ಕಾರಣಕ್ಕೂ ಮಳೆಯಾಗದಿರಲಿ ಎಂದು ಆರ್‌ಸಿಬಿ ಅಭಿಮಾನಿಗಳು ಪ್ರಾರ್ಥಿಸುತ್ತಿದ್ದಾರೆ. ಇದನ್ನೂ ಓದಿ: ಟೀಂ ಇಂಡಿಯಾ ಮುಖ್ಯ ಕೋಚ್ ಹುದ್ದೆಗೆ ಬಿಸಿಸಿಐ ಅರ್ಜಿ ಆಹ್ವಾನ- ಅರ್ಹತೆಗಳೇನು?

    ಆರ್‌ಸಿಬಿ ತಂಡ ಈವರೆಗೆ ಆಡಿದ 13 ಪಂದ್ಯಗಳಿಂದ 12 ಅಂಕಗಳನ್ನು ಕಲೆಹಾಕಿ ಅಂಕಪಟ್ಟಿಯಲ್ಲಿ 6ನೇ ಸ್ಥಾನದಲ್ಲಿದೆ. ಉತ್ತಮ ನೆಟ್‌ ರನ್‌ರೇಟ್‌ ಆರ್‌ಸಿಬಿ ಕೈ ಹಿಡಿದಿದ್ದು, ಪ್ಲೇ ಆಫ್ಸ್‌ ಪ್ರವೇಶಿಸಲು ಎದುರು ನೋಡುತ್ತಿದೆ. ಆದ್ರೆ ಆರ್‌ಸಿಬಿಗೆ ಮ್ಯಾಜಿಕ್‌ ನಂಬರ್‌ 14 ಅಂಕಗಳನ್ನು ಸಂಪಾದಿಸಲು ಡಿಫೆಂಡಿಂಗ್‌ ಚಾಂಪಿಯನ್ಸ್‌ ಸಿಎಸ್‌ಕೆ ಎದುರು ಜಯಗಳಿಸಲೇಬೇಕಿದೆ. ಇದನ್ನೂ ಓದಿ: ಮೈದಾನಕ್ಕೆ ನುಗ್ಗಿ ಪಾದ ಮುಟ್ಟಿ ನಮಸ್ಕರಿಸಿದ ಅಭಿಮಾನಿ; ಹೃದಯ ಶ್ರೀಮಂತಿಕೆ ಮೆರೆದ ಧೋನಿ – ವೀಡಿಯೋ ವೈರಲ್‌!

    ಒಂದು ವೇಳೆ ಆರ್‌ಸಿಬಿ ರನ್‌ ಚೇಸ್‌ ಮಾಡಿದರೆ 18.1 ಓವರ್‌ಗಳ ಒಳಗೆ ಗೆಲ್ಲಬೇಕು. ಮೊದಲು ಬ್ಯಾಟ್‌ ಮಾಡಿದರೆ ಕನಿಷ್ಠ 18 ರನ್‌ಗಳಿಂದ ಗೆಲ್ಲಬೇಕು. ಈ ಸುಲಭ ಲೆಕ್ಕಾಚಾರದ ಗೆಲುವು ಕೂಡ ಆರ್‌ಸಿಬಿಗೆ ಅಗತ್ಯವಿದೆ. ಆದರೆ, ಆರ್‌ಸಿಬಿ ತಂಡದ ಎಲ್ಲಾ ಲೆಕ್ಕಾಚಾರಗಳಿಗೆ ಮಳೆ ತಣ್ಣೀರೆರಚುವ ಸಾಧ್ಯತೆ ಇದೆ. ಹವಾಮಾನ ವರದಿ ಪ್ರಕಾರ ಶನಿವಾರ ಸಂಜೆ 5-11ರ ವರೆಗೆ ಗುಡುಗು-ಮಿಂಚು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಒಂದು ವೇಳೆ ಪಂದ್ಯ ಮಳೆಗೆ ಬಲಿಯಾದ್ರೆ ಸಿಎಸ್‌ಕೆ 15 ಅಂಕಗಳೊಂದಿಗೆ ಪ್ಲೇ ಆಫ್‌ ಪ್ರವೇಶಿಸಲಿದೆ.

    ʻಸಬ್‌ ಏರ್‌ ಸಿಸ್ಟಮ್‌ʼ ಒಂದೇ ಆಧಾರ:
    ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಎಷ್ಟೇ ಮಳೆಯಾದರೂ, ಮಳೆ ನಿಂತ ನಂತರ ಕೆಲವೇ ನಿಮಿಷಗಳಲ್ಲಿ ಪಂದ್ಯಗಳು ಆರಂಭಿಸಬಹುದಾಗಿದೆ. ಉದಾಹರಣೆಗೆ ಒಂದು ಗಂಟೆ ಭಾರೀ ಮಳೆ ಸುರಿದರೆ ಕೇವಲ 7 ನಿಮಿಷಗಳಲ್ಲಿ ಪಂದ್ಯವನ್ನು ಆರಂಭಿಸಬಹುದು. ಕ್ರೀಡಾಂಗಣದಲ್ಲಿ ಸಬ್ ಏರ್ ಸಿಸ್ಟಂ ಅಳವಡಿಕೆಯಾಗಿದ್ದು ಕೂಡಲೇ ನೀರನ್ನು ಹೊರ ಹಾಕಲಾಗುತ್ತದೆ. ಬಿಸಿ ಗಾಳಿಯನ್ನು ಹಾಯಿಸಿ ಮೈದಾನವನ್ನ ಒಣಗಿಸುವ ವ್ಯವಸ್ಥೆಯಿದೆ. 4.5 ಕೋಟಿ ರೂ. ವೆಚ್ಚದಲ್ಲಿ ಈ ವ್ಯವಸ್ಥೆಯನ್ನು ಅಳವಡಿಸಲಾಗಿದೆ. ಆದ್ದರಿಂದ ಮಳೆಯು 9 ಗಂಟೆ ವೇಳೆಗೆ ಬಿಡುವು ಕೊಟ್ಟರು ಕನಿಷ್ಠ ಓವರ್‌ಗಳ ಮಿತಿಯಲ್ಲಿ 9:30 ರಿಂದ ಪಂದ್ಯ ಆರಂಭಿಸಬಹುದಾಗಿದೆ ಎಂದು ತಜ್ಞರು ಸಲಹೆ ನೀಡಿದ್ದಾರೆ. ಇದನ್ನೂ ಓದಿ: ವಿಚಿತ್ರ ಕಾರಣಕ್ಕೆ ಔಟಾದ ಜಡೇಜಾ – ಏನಿದು ರೂಲ್ಸ್ 37.1.4? 

  • ಐಪಿಎಲ್ ಪಂದ್ಯ ರದ್ದು ತಡೆಗೆ `ಸೂಪರ್’ ನಿಯಮ – ಯಾವ ತಂಡದ ಲಕ್ ಹೇಗಿದೆ?

    ಐಪಿಎಲ್ ಪಂದ್ಯ ರದ್ದು ತಡೆಗೆ `ಸೂಪರ್’ ನಿಯಮ – ಯಾವ ತಂಡದ ಲಕ್ ಹೇಗಿದೆ?

    ನವದೆಹಲಿ: 15ನೇ ಆವೃತ್ತಿಯ ಐಪಿಎಲ್ ಪ್ಲೇ-ಆಫ್ ಹಂತದ ಪಂದ್ಯಗಳಿಗೆ ಮಳೆ ಅಡ್ಡಿಪಡಿಸುವ ಸಾಧ್ಯತೆ ಇದ್ದು, ಬಿಸಿಸಿಐ ಹೊಸ ನಿಯಮ ಪ್ರಕಟಿಸಿದೆ.

    ಈ ಆವೃತ್ತಿಯ ಐಪಿಎಲ್‌ನಲ್ಲಿ ಆರ್‌ಸಿಬಿಗೆ ಒಂದಿಲ್ಲೊಂದು ಲಕ್ ಒಲಿಯುತ್ತಿದ್ದು, ಬಹುಶಃ ಚಾಂಪಿಯನ್ ಆಗುವ ಅವಕಾಶವಿದ್ದಂತೆಯೇ ಕಾಣುತ್ತಿದೆ. ಪ್ಲೇ ಆಫ್‌ನಿಂದ ಹೊರಬೀಳಬೇಕಿದ್ದ ಆರ್‌ಸಿಬಿ ಮುಂಬೈ ಗೆಲುವಿನ ಕೃಪೆಯಿಂದ ಪ್ಲೇ-ಆಫ್ ಪ್ರವೇಶಿಸಿತು. ಮಳೆಯಿಂದ ಪಂದ್ಯಕ್ಕೆ ಅಡ್ಡಿಯಾದರೆ, ರನ್‌ರೇಟ್ ಮೇಲೆ ವಿಜೇತರನ್ನು ನಿರ್ಧರಿಸಲಾಗುತ್ತಿತ್ತು. ಆದರೆ, ಈ ಬಾರಿ ಸೂಪರ್ ಓವರ್ ನಿಯಮವನ್ನು ಅನುಷ್ಠಾನಗೊಳಿಸಿದ್ದು, ಹೆಚ್ಚುವರಿ ಸಮಯವನ್ನೂ ನಿಗದಿ ಮಾಡಲಾಗಿದೆ. ಈ ಬೆಳವಣಿಗೆ ಆರ್‌ಸಿಬಿಗೆ ವರ.

    IPL 2022 RCB VS SRH 5

    ಮಳೆ ಅಡ್ಡಿಯಿಂದ ನಿಗದಿತ ಸಮಯದೊಳಿಗೆ ಪಂದ್ಯ ನಡೆಸಲು ಸಾಧ್ಯವಾಗದಿದ್ದರೆ ಕೇವಲ ಸೂಪರ್ ಓವರ್ ವಿಜೇತರನ್ನು ನಿರ್ಧರಿಸಲಿದೆ. ಟಿ20 ಕ್ರಿಕೆಟ್‌ನಲ್ಲಿ ಕೇವಲ ಸೂಪರ್ ಓವರ್‌ನಿಂದಲೇ ಫಲಿತಾಂಶ ನಿರ್ಧರಿಸುವ ನಿಯಮ ಇದೇ ಮೊದಲಿಗೆ ಬಿಸಿಸಿಐ ಮಾಡಿದೆ. ಇದನ್ನೂ ಓದಿ: ಆಫ್ರಿಕಾ ಸರಣಿಗೆ ತಂಡ ಪ್ರಕಟ – ಟಿ20 ತಂಡಕ್ಕೆ ಕನ್ನಡಿಗ ಕೆ.ಎಲ್ ರಾಹುಲ್ ಕ್ಯಾಪ್ಟನ್, ಡಿಕೆ ವಾಪಸ್‌, ಉಮ್ರಾನ್ ಮಲಿಕ್‍ಗೆ ಸ್ಥಾನ

    ಫೈನಲ್ ಸೇರಿ ಪ್ಲೇ-ಆಫ್‌ನ ಒಟ್ಟು 4 ಪಂದ್ಯಗಳಿಗೆ ನಿಗದಿತ 200 ನಿಮಿಷಗಳ ಜೊತೆಗೆ ಹೆಚ್ಚುವರಿ 2 ಗಂಟೆಗಳ ಸಮಯಾವಕಾಶ ನೀಡಲಾಗಿದೆ. ಮೊದಲ 3 ಪಂದ್ಯಗಳು ಮಳೆಯಿಂದಾಗಿ ವಿಳಂಬಗೊಂಡರೆ ಓವರ್ ಕಡಿತಗೊಳಿಸದೆ ರಾತ್ರಿ 9:40ಕ್ಕೆ ಆರಂಭಿಸಲು ಗಡುವು ನೀಡಲಾಗಿದೆ. ಒಂದು ವೇಳೆ ತಲಾ 5 ಓವರ್ ಪಂದ್ಯ ನಡೆಸಲು ಅವಕಾಶ ಸಿಕ್ಕರೆ ಆ ಪಂದ್ಯ ಆರಂಭಿಸಲು ರಾತ್ರಿ 11:56 ರವರೆಗೂ ಸಮಯವಿರಲಿದೆ. 5 ಓವರ್ ಪಂದ್ಯದಲ್ಲಿ ಟೈಮ್‌ಔಟ್ ಇರುವುದಿಲ್ಲ. ಅಲ್ಲದೆ ಮಧ್ಯರಾತ್ರಿ 12:50ರೊಳಗೆ ಪಂದ್ಯ ಮುಗಿಸುವಂತೆ ನಿಯಮ ಮಾಡಿದೆ.

    IPL 2022 GT VS LSG PLAYOFF 1

    5 ಓವರ್ ಪಂದ್ಯವೂ ಸಾಧ್ಯವಾಗದೆ ಇದ್ದಲ್ಲಿ ಸೂಪರ್ ಓವರ್ ನಡೆಯಲಿದೆ. ಇದಕ್ಕೆ ಮಧ್ಯರಾತ್ರಿ 12:50ರ ವರೆಗೂ ಸಮಯವಿರಲಿದೆ. ಮಳೆ ನಿಲ್ಲದೆ ಪಂದ್ಯ ನಡೆಸಲು ಸಾಧ್ಯವಾಗದೆ ಇದ್ದರೆ ಅಂಕಪಟ್ಟಿಯಲ್ಲಿ ಗಳಿಸಿದ ಸ್ಥಾನಗಳ ಮೇಲೆ ವಿಜೇತರ ನಿರ್ಧಾರವಾಗಲಿದೆ.  ಇದನ್ನೂ ಓದಿ: ಪ್ಲೇ ಆಫ್ ಪಂದ್ಯಗಳಿಗೆ ಮಳೆ ಕಾಟ – ಹೀಗೆ ನಿರ್ಧಾರವಾಗಲಿದೆ ಫಲಿತಾಂಶ?

    ಕ್ವಾಲಿಫೈಯರ್-1 ಮಳೆಗೆ ಬಲಿಯಾದರೆ, ಅಂಕಪಟ್ಟಿಯಲ್ಲಿ ಮೊದಲ ಸ್ಥಾನ ಪಡೆದ ಗುಜರಾತ್ ನೇರವಾಗಿ ಫೈನಲ್‌ಗೇರಲಿದೆ. ರಾಜಾಸ್ಥಾನ ಕ್ವಾಲಿಫೈಯರ್-2ರಲ್ಲಿ ಆಡಬೇಕಾಗುತ್ತದೆ. ಎಲಿಮಿನೇಟರ್ ಪಂದ್ಯ ಮಳೆಗೆ ಆಹುತಿಯಾದರೆ, ಆರ್‌ಸಿಬಿ ಹೊರಬೀಳಲಿದ್ದು, 2ನೇ ಪ್ಲೇ ಆಫ್ ಪಂದ್ಯಕ್ಕೆ ಲಖನೌ ಪ್ರವೇಶ ಪಡೆಯಲಿದೆ.

    ಫೈನಲ್ ಪಂದ್ಯಕ್ಕೆ ಏನು ನಿಯಮ?: ಮೇ 29ಕ್ಕೆ ನಿಗದಿಯಾಗಿರುವ ಫೈನಲ್ ಪಂದ್ಯ ರಾತ್ರಿ 8ಕ್ಕೆ ಆರಂಭಗೊಳ್ಳುವ ಕಾರಣ ಮಳೆಯಿಂದ ತಡವಾದರೆ ಓವರ್ ಕಡಿತವಿಲ್ಲದೆ ಪಂದ್ಯ ಆರಂಭಿಸಲು ರಾತ್ರಿ 10:10ರ ವರೆಗೂ ಅವಕಾಶವಿರಲಿದೆ. 5 ಓವರ್ ಪಂದ್ಯ ನಡೆಸಲುಮಧ್ಯ ರಾತ್ರಿ 12:26ರ ವರೆಗೂ ಕಾಲಾವಕಾಶ ಇರಲಿದ್ದು, ಮೇ 30 ಅನ್ನು ಮೀಸಲು ದಿನವಾಗಿ ಇಡಲಾಗಿದೆ.

    IPL2022

    ಮೊದಲ ದಿನ ಪಂದ್ಯ ಅರ್ಧ ನಡೆದಿದ್ದರೆ, ಮೀಸಲು ದಿನದಂದು ಪಂದ್ಯ ಮುಂದುವರಿಯಲಿದೆ. ಕೇವಲ ಟಾಸ್ ಅಷ್ಟೇ ಆಗಿ ಪಂದ್ಯ ನಡೆಯದಿದ್ದರೆ, 2ನೇ ದಿನ ಹೊಸದಾಗಿ ಟಾಸ್ ಹಾಕಲಾಗುತ್ತದೆ. ಒಂದು ವೇಳೆ ಮೊದಲ ಇನ್ನಿಂಗ್ಸ್ ಮುಗಿದು, 2ನೇ ಇನ್ನಿಂಗ್ಸ್‌ 5 ಓವರ್ ಪೂರ್ಣಗೊಂಡ ಬಳಿಕ ಮಳೆ ಸುರಿದರೆ, ಡಕ್ವರ್ತ್ ಲೂಯಿಸ್ ನಿಯಮವನ್ನು ಅಳವಡಿಸಿ ವಿಜೇತರನ್ನು ನಿರ್ಧರಿಸಲಾಗುತ್ತದೆ. ಮೀಸಲು ದಿನದಂದು ಕೇವಲ ಸೂಪರ್ ಓವರ್ ನಿಂದಲೂ ಫಲಿತಾಂಶ ನಿರ್ಧರಿಸಬಹುದಾಗಿದೆ.

    ಫೈನಲ್‌ನಲ್ಲಿ ಸೂಪರ್ ಓವರ್ ಆರಂಭಿಸಲು ಮಧ್ಯರಾತ್ರಿ 1.20ರ ವರೆಗೂ ಅವಕಾಶವಿರಲಿದೆ.

  • ಪಂದ್ಯವಾಡದೇ ಆರ್‌ಸಿಬಿ ಮನೆಗೆ ಬರುತ್ತಾ?

    ಪಂದ್ಯವಾಡದೇ ಆರ್‌ಸಿಬಿ ಮನೆಗೆ ಬರುತ್ತಾ?

    ಕೋಲ್ಕತ್ತಾ: ಐಪಿಎಲ್‍ನಲ್ಲಿ ಕಡೆಯ ರೋಚಕ ಪಂದ್ಯಗಳಿಗೆ ಕೋಲ್ಕತ್ತಾ ಸಜ್ಜಾಗುತ್ತಿದೆ. ಈಗಾಗಲೇ 4 ತಂಡಗಳು ಪ್ಲೇ ಆಫ್ ಪಂದ್ಯಗಳನ್ನು ಆಡಲು ತಯಾರಿ ನಡೆಸುತ್ತಿವೆ. ಈ ನಡುವೆ ಪ್ಲೇ ಆಫ್ ಪ್ರವೇಶಿಸಿರುವ ಆರ್‌ಸಿಬಿ ಪಂದ್ಯವಾಡದೇ ಮನೆಗೆ ಬರುತ್ತಾ ಎಂಬ ಅನುಮಾನ ಅಭಿಮಾನಿಗಳಲ್ಲಿ ಮೂಡುತ್ತಿದೆ.

    ಹೌದು ಇದಕ್ಕೆಲ್ಲ ಕಾರಣ ಕೋಲ್ಕತ್ತಾದಲ್ಲಿ ಸುರಿಯುತ್ತಿರುವ ಮಳೆ. ಕೋಲ್ಕತ್ತಾದಲ್ಲಿ ಪ್ಲೇ ಆಫ್ ಪಂದ್ಯಗಳು ನಡೆಯುತ್ತಿದ್ದು, ಕೋಲ್ಕತ್ತಾದಲ್ಲಿ ಕಳೆದ ಒಂದು ವಾರದಿಂದ ನಿರಂತರ ಮಳೆ ಸುರಿಯುತ್ತಿದೆ. ಇದೀಗ ಪ್ಲೇ ಆಫ್‍ನ ಎರಡು ಪಂದ್ಯಗಳು ಕೋಲ್ಕತ್ತಾದಲ್ಲಿ ನಡೆಯಲಿದೆ. ಕೋಲ್ಕತ್ತಾದಲ್ಲಿ ಇನ್ನೆರಡು ದಿನ ಮಳೆ ಬರುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಹಾಗಾಗಿ ಪ್ಲೇ ಆಫ್ ಪಂದ್ಯಗಳು ಸರಿಯಾಗಿ ನಡೆಯುವುದು ಅನುಮಾನವಾಗಿದೆ. ಇದನ್ನೂ ಓದಿ: ಪ್ಲೇ ಆಫ್ ಪಂದ್ಯಗಳಿಗೆ ಮಳೆ ಕಾಟ – ಹೀಗೆ ನಿರ್ಧಾರವಾಗಲಿದೆ ಫಲಿತಾಂಶ?

    ಮೊದಲನೇ ಕ್ವಾಲಿಫೈಯರ್ ಪಂದ್ಯ ಗುಜರಾತ್ ಟೈಟಾನ್ಸ್ ಮತ್ತು ರಾಜಸ್ಥಾನ ರಾಯಲ್ಸ್ ನಡುವೆ ಮೇ 24 ಮಂಗಳವಾರ ನಡೆಯಲಿದೆ. ಎಲಿಮಿನೇಟರ್ ಪಂದ್ಯ ಲಕ್ನೋ ಸೂಪರ್ ಜೈಂಟ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವೆ ಮೇ 25 ಬುಧವಾರದಂದು ನಡೆಯಲಿದೆ. ಒಂದು ವೇಳೆ ಈ ಪಂದ್ಯಗಳು ಮಳೆಯಿಂದಾಗಿ ಸೂಪರ್ ಓವರ್ ಮೂಲಕವೂ ಫಲಿತಾಂಶ ಕಾಣದೇ ರದ್ದಾದರೆ ನೆಟ್‍ ರನ್‌ರೇಟ್‌ನಲ್ಲಿ ಮುಂದಿರುವ ತಂಡ 2ನೇ ಎಲಿಮಿನೇಟರ್‌ಗೆ ತೇರ್ಗಡೆ ಆಗುವ ಸಾಧ್ಯತೆ ಹೆಚ್ಚಿದೆ. ಹಾಗಾಗಿ ಎಲಿಮಿನೇಟರ್ ಪಂದ್ಯವಾಡುತ್ತಿರುವ ಲಕ್ನೋ ಸೂಪರ್ ಜೈಂಟ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವಿನ ಪಂದ್ಯದಲ್ಲಿ ಲಕ್ನೋ ತಂಡಕ್ಕೆ ರನ್‍ರೇಟ್ ವರವಾಗುವ ಸಾಧ್ಯತೆ ಹೆಚ್ಚಿದೆ.

    ಇದೀಗ ಅಂಕಪಟ್ಟಿಯನ್ನು ಗಮನಿಸಿದಾಗ ಮೊದಲ ಸ್ಥಾನದಲ್ಲಿರುವ ಗುಜರಾತ್ ತಂಡ +0.316 ನೆಟ್‌ ರನ್‍ರೇಟ್ ಹೊಂದಿದ್ದರೆ, 2ನೇ ಸ್ಥಾನದಲ್ಲಿರುವ ರಾಜಸ್ಥಾನ +0298, 3ನೇ ಸ್ಥಾನದಲ್ಲಿರುವ ಲಕ್ನೋ +0.251 ಮತ್ತು ಬೆಂಗಳೂರು -0.253 ರನ್‍ರೇಟ್ ಹೊಂದಿದೆ. ಇದನ್ನು ಗಮನಿಸಿದಾಗ ಅದೃಷ್ಟದಾಟದ ಮೂಲಕ ಪ್ಲೇ ಆಫ್ ಪ್ರವೇಶಿಸಿರುವ ಆರ್‌ಸಿಬಿ ತಂಡಕ್ಕೆ ಪ್ಲೇ ಆಫ್‍ನಲ್ಲಿ ರನ್‍ರೇಟ್ ಮುಳ್ಳಾಗುವ ಸಾಧ್ಯತೆ ಕಂಡುಬರುತ್ತಿದೆ. ಇದನ್ನೂ ಓದಿ: ಆಫ್ರಿಕಾ ಸರಣಿಗೆ ತಂಡ ಪ್ರಕಟ – ಟಿ20 ತಂಡಕ್ಕೆ ಕನ್ನಡಿಗ ಕೆ.ಎಲ್ ರಾಹುಲ್ ಕ್ಯಾಪ್ಟನ್, ಡಿಕೆ ವಾಪಸ್‌, ಉಮ್ರಾನ್ ಮಲಿಕ್‍ಗೆ ಸ್ಥಾನ

    ಆರ್‌ಸಿಬಿ ಮತ್ತು ಲಕ್ನೋ ನಡುವಿನ ಪಂದ್ಯಕ್ಕೆ ಮಳೆ ಅಡಚಣೆ ನೀಡಿ ಒಂದೂ ಎಸೆತ ಕಾಣದೇ ಪಂದ್ಯ ರದ್ದಾದರೆ, ನೆಟ್‍  ರನ್‍ರೇಟ್‍ನಲ್ಲಿ ಮುಂದಿರುವ ತಂಡ 2ನೇ ಕ್ವಾಲಿಫೈಯರ್‌ಗೆ ತೇರ್ಗಡೆ ಹೊಂದಲಿದೆ. ಇದೀಗ ನೆಟ್‍  ರನ್‍ರೇಟ್‍ನಲ್ಲಿ ಆರ್‌ಸಿಬಿಗಿಂತ ಲಕ್ನೋ ತಂಡ ಮುಂದಿದೆ. ಇದು ಪಂದ್ಯಕ್ಕೂ ಮುನ್ನ ಲಕ್ನೋ ಮೇಲುಗೈ ಸಾಧಿಸಿರುವಂತೆ ಕಂಡುಬಂದರೆ, ಇತ್ತ ಆರ್‌ಸಿಬಿ ಪಂದ್ಯವಾಡದೇ ಮನೆಗೆ ಹೆಜ್ಜೆ ಇಡುವ ದಾರಿಯಾಗಿದೆ.

    IPL 2022 GUJARATH VS RCB 05

    ಈ ರೀತಿ ಆಗದಿರಲಿ ಪ್ಲೇ ಆಫ್ ಪಂದ್ಯಗಳು ಸರಿಯಾಗಿ ನಡೆದು ಫಲಿತಾಂಶ ಕಾಣುವಂತಾಗಲಿ. ಆರ್‌ಸಿಬಿ ಫೈನಲ್‍ಗೇರಿ ಕಪ್ ಗೆಲ್ಲಲಿ ಎಂದು ಆರ್‌ಸಿಬಿ ಅಭಿಮಾನಿಗಳು ದೇವರಲ್ಲಿ ಬೇಡಿಕೊಳ್ಳುತ್ತಿದ್ದಾರೆ.

  • ಪ್ಲೇ ಆಫ್ ಪಂದ್ಯಗಳಿಗೆ ಮಳೆ ಕಾಟ – ಹೀಗೆ ನಿರ್ಧಾರವಾಗಲಿದೆ ಫಲಿತಾಂಶ?

    ಪ್ಲೇ ಆಫ್ ಪಂದ್ಯಗಳಿಗೆ ಮಳೆ ಕಾಟ – ಹೀಗೆ ನಿರ್ಧಾರವಾಗಲಿದೆ ಫಲಿತಾಂಶ?

    ಕೋಲ್ಕತ್ತಾ: 15ನೇ ಆವೃತ್ತಿ ಐಪಿಎಲ್‍ನ ಪ್ಲೇ ಆಫ್ ಪಂದ್ಯಗಳಿಗೆ ಮಳೆ ಕಾಟ ಕೊಡುವ ಸಾಧ್ಯತೆ ಹೆಚ್ಚಿದೆ.

    ಕೋಲ್ಕತ್ತಾದಲ್ಲಿ ಪ್ಲೇ ಆಫ್ ಪಂದ್ಯಗಳು ನಡೆಯುತ್ತಿದ್ದು, ಕೋಲ್ಕತ್ತಾದಲ್ಲಿ ಕಳೆದ ಒಂದು ವಾರದಿಂದ ನಿರಂತರ ಮಳೆ ಸುರಿಯುತ್ತಿದೆ. ಇದೀಗ ಪ್ಲೇ ಆಫ್‍ನ ಎರಡು ಪಂದ್ಯಗಳು ಕೋಲ್ಕತ್ತಾದಲ್ಲಿ ನಡೆಯಲಿದೆ. ಕೋಲ್ಕತ್ತಾದಲ್ಲಿ ಇನ್ನೆರಡು ದಿನ ಮಳೆ ಬರುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಹಾಗಾಗಿ ಪ್ಲೇ ಆಫ್ ಪಂದ್ಯಗಳು ಸರಿಯಾದ ಫಲಿತಾಂಶ ಕಾಣುವ ಸಾಧ್ಯತೆ ಕಡಿಮೆ ಇದೆ. ಇದನ್ನೂ ಓದಿ: ಗೆಲುವಿನೊಂದಿಗೆ ಹೊರನಡೆದ ಪಂಜಾಬ್ – ಅಂಕಪಟ್ಟಿಯಲ್ಲಿ 8ನೇ ಸ್ಥಾನಕ್ಕೆ ಕುಸಿದ ಹೈದರಾಬಾದ್

    ಮೊದಲನೇ ಕ್ವಾಲಿಫೈಯರ್ ಪಂದ್ಯ ಗುಜರಾತ್ ಟೈಟಾನ್ಸ್ ಮತ್ತು ರಾಜಸ್ಥಾನ ರಾಯಲ್ಸ್ ನಡುವೆ ಮೇ 24 ಮಂಗಳವಾರ ನಡೆಯಲಿದೆ. ಎಲಿಮಿನೇಟರ್ ಪಂದ್ಯ ಲಕ್ನೋ ಸೂಪರ್ ಜೈಂಟ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವೆ ಮೇ 25 ಬುಧವಾರದಂದು ನಡೆಯಲಿದೆ.

    ಆ ಬಳಿಕ ಕ್ವಾಲಿಫೈಯರ್ 2ನೇ ಪಂದ್ಯ ಅಹಮದಾಬಾದ್‍ನಲ್ಲಿ ಮೇ 27 ರಂದು ಮತ್ತು ಫೈನಲ್ ಪಂದ್ಯ 29 ರಂದು ನಡೆಯಲಿದೆ. ಇದನ್ನೂ ಓದಿ: ಆಫ್ರಿಕಾ ಸರಣಿಗೆ ತಂಡ ಪ್ರಕಟ – ಟಿ20 ತಂಡಕ್ಕೆ ಕನ್ನಡಿಗ ಕೆ.ಎಲ್ ರಾಹುಲ್ ಕ್ಯಾಪ್ಟನ್, ಡಿಕೆ ವಾಪಸ್‌, ಉಮ್ರಾನ್ ಮಲಿಕ್‍ಗೆ ಸ್ಥಾನ

    IPL 2022 SCK VS GT 4

    ಸೂಪರ್ ಓವರ್ ರಿಸಲ್ಟ್:
    ಮಳೆ ಬಂದು ನಿಗದಿತ ಸಮಯದಲ್ಲಿ ಪಂದ್ಯ ನಡೆಯದೇ ಇದ್ದರೆ ಈ ವೇಳೆ ಸೂಪರ್ ಓವರ್ ಮೂಲಕ ಪಂದ್ಯದ ಫಲಿತಾಂಶ ನಿರ್ಧರಿಸುವ ಸಾಧ್ಯತೆ ಇದೆ. ಅಲ್ಲದೇ 2 ಗಂಟೆಗಳ ಕಾಲ ಹೆಚ್ಚಿನ ಅವಧಿಯನ್ನು ಈಗಾಗಲೇ ನಿಗದಿಪಡಿಸಲಾಗಿದ್ದು, ಒಂದು ವೇಳೆ ರಾತ್ರಿ 7:30ಕ್ಕೆ ಪಂದ್ಯ ಆರಂಭವಾಗದೇ ಇದ್ದರೆ 9:30ಕ್ಕೆ ಪ್ರಾರಂಭಿಸಲು ಐಪಿಎಲ್ ಆಡಳಿತ ಮಂಡಳಿ ಪ್ಲಾನ್ ಮಾಡಿಕೊಂಡಿದೆ. ಜೊತೆಗೆ ಎರಡು ತಂಡಗಳಿಗೂ ತಲಾ 5 ಓವರ್‌ಗಳ ಆಟದ ಮೂಲಕ ಫಲಿತಾಂಶ ಕಾಣುವಂತೆ ಮಾಡಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ.

  • 3 ಸ್ಥಾನಕ್ಕೆ 6 ತಂಡಗಳ ಹೋರಾಟ -ಪ್ಲೇ ಆಫ್‌ಗೆ ಯಾರು ಹೇಗೆ ಎಂಟ್ರಿಯಾಗಬಹುದು?

    3 ಸ್ಥಾನಕ್ಕೆ 6 ತಂಡಗಳ ಹೋರಾಟ -ಪ್ಲೇ ಆಫ್‌ಗೆ ಯಾರು ಹೇಗೆ ಎಂಟ್ರಿಯಾಗಬಹುದು?

    ಬೆಂಗಳೂರು: ಐಪಿಎಲ್‌ ಲೀಗ್‌ ಆವೃತ್ತಿ ಮುಂದಿನ ವಾರಕ್ಕೆ ಕೊನೆಯಾಗುತ್ತಿದ್ದರೂ ಪ್ಲೇ ಆಫ್‌ ಯಾರು ಪ್ರವೇಶಿಸುತ್ತಾರೆ ಎನ್ನುವುದು ಇನ್ನೂ ನಿರ್ಧಾರವಾಗಲಿಲ್ಲ. ಗುರುವಾರದ ಪಂದ್ಯದಲ್ಲಿ ಕೋಲ್ಕತ್ತಾ ಸೋತಿರುವ ಕಾರಣ ಮುಂಬೈ ತಂಡ ಒಂದೇ ಇಲ್ಲಿಯವರೆಗೆ ಅಧಿಕೃತವಾಗಿ ಪ್ಲೇ ಆಫ್‌ ಪ್ರವೇಶಿಸಿದೆ.

    ಸದ್ಯದ ಪರಿಸ್ಥಿತಿಯಲ್ಲಿ ಚೆನ್ನೈ ಹೊರತುಪಡಿಸಿ ಉಳಿದ ಎಲ್ಲ ತಂಡಗಳಿಗೆ ಪ್ಲೇ ಆಫ್‌ ಪ್ರವೇಶಿಸುವ ಅವಕಾಶವಿದೆ. ಆದರೆ ಬೆಂಗಳೂರು ಮತ್ತು ಡೆಲ್ಲಿ ಅಂಕ ಪಟ್ಟಿಯಲ್ಲಿ 14 ಅಂಕಗಳಿಸಿರುವ ಜೊತೆಗೆ ಇನ್ನೂ 2 ಪಂದ್ಯಗಳನ್ನು ಆಡಲಿರುವ ಕಾರಣ ಅವಕಾಶ ಜಾಸ್ತಿಯಿದೆ. ಕೋಲ್ಕತ್ತಾ, ಪಂಜಾಬ್‌, ಹೈದರಾಬಾದ್‌, ರಾಜಸ್ಥಾನ ತಂಡಗಳು ಎಲ್ಲ ಪಂದ್ಯವನ್ನು ಗೆಲ್ಲಲೇಬೇಕಾದ ಅನಿವಾರ್ಯತೆಯಲ್ಲಿದೆ.

    ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು: ಅಂಕಪಟ್ಟಿಯಲ್ಲಿ 14 ಅಂಕದೊಂದಿಗೆ 2ನೇ ಸ್ಥಾನದಲ್ಲಿರುವ ಬೆಂಗಳೂರು ಇನ್ನೂ 2 ಪಂದ್ಯ ಆಡಬೇಕಿದೆ. +0.048 ರನ್‌ ರೇಟ್‌ ಹೊಂದಿದ್ದು, ಶನಿವಾರ ಹೈದರಾಬಾದ್‌ ಜೊತೆ ಇದ್ದರೆ ನ.2 ರಂದು ಡೆಲ್ಲಿ ಜೊತೆ ಪಂದ್ಯವಾಡಲಿದೆ. ಈ ಪೈಕಿ ಒಂದು ಪಂದ್ಯ ಗೆದ್ದರೂ ಪ್ಲೇ ಆಫ್‌ ಪ್ರವೇಶಿಸಲಿದೆ. ಒಂದು ವೇಳೆ 2 ಪಂದ್ಯ ಸೋತರೆ ರನ್‌ ರೇಟ್‌ ಉತ್ತಮವಾಗಿದ್ದರೆ ಮಾತ್ರ ಪ್ಲೇ ಆಫ್‌ ಪ್ರವೇಶಿಸಬಹುದು.  ಇದನ್ನೂ ಓದಿ: ಓವರಿಗೆ 22 ರನ್‌ ಚಚ್ಚಿದ ವಾರ್ನರ್‌ – ಪವರ್‌ ಪ್ಲೇನಲ್ಲಿ ದಾಖಲೆ ಬರೆದ ಹೈದರಾಬಾದ್‌

    ಡೆಲ್ಲಿ ಕ್ಯಾಪಿಟಲ್ಸ್‌: ಆರ್‌ಸಿಬಿ ಜೊತೆ 14 ಅಂಕಗಳಿಸಿದ್ದರೂ ನೆಟ್‌ ರನ್‌ ರೇಟ್‌ +0.030 ಇರುವ ಕಾರಣ ಅಂಕಪಟ್ಟಿಯಲ್ಲಿ ಮೂರನೇ ಸ್ಥಾನ ಪಡೆದಿದೆ. ಶನಿವಾರ ಮುಂಬೈ ಜೊತೆ, ಸೋಮವಾರ ಬೆಂಗಳೂರನ್ನು ಎದುರಿಸಲಿದೆ. ಒಂದು ವೇಳೆ ಹೈದರಾಬಾದ್‌ ವಿರುದ್ಧ ಬೆಂಗಳೂರು, ಮುಂಬೈ ವಿರುದ್ಧ ಡೆಲ್ಲಿ ಸೋತರೆ ಸೋಮವಾರದ ಪಂದ್ಯ ಎರಡು ತಂಡಗಳಿಗೆ ಮಾಡು ಇಲ್ಲವೇ ಮಡಿ ಆಗಲಿದೆ.

    ಕಿಂಗ್ಸ್‌ ಇಲೆವನ್‌ ಪಂಜಾಬ್‌: ಕೊನೆಯ 5 ಪಂದ್ಯಗಳನ್ನು ಗೆದ್ದು ಅಚ್ಚರಿ ರೂಪದಲ್ಲಿ ಮುನ್ನುಗ್ಗಿ ಬರುತ್ತಿರುವ ಪಂಜಾಬ್‌ 12 ಅಂಕಗಳೊಂದಿಗೆ 4ನೇ ಸ್ಥಾನದಲ್ಲಿದೆ. -0.049 ನೆಟ್‌ ರನ್‌ ರೇಟ್‌ ಹೊಂದಿರುವ ಪಂಜಾಬ್‌ ಇಂದು ರಾಜಸ್ಥಾನ ಮತ್ತು ನ.1 ರಂದು ಚೆನ್ನೈ ತಂಡವನ್ನು ಎದುರಿಸಲಿದೆ. ಎರಡು ಪಂದ್ಯ ಗೆದ್ದರೆ 16 ಅಂಕಗಳೊಂದಿಗೆ ಪ್ಲೇ ಆಫ್‌ ಪ್ರವೇಶಿಸಲಿದೆ. ಒಂದು ವೇಳೆ ಸೋತರೆ ಚೆನ್ನೈ ವಿರುದ್ಧ ಭಾರೀ ನೆಟ್‌ ರನ್‌ ರೇಟ್‌ ಅಂತರದಿಂದ ಗೆಲ್ಲಬೇಕಿದೆ. ಯಾಕೆಂದರೆ ಹೈದರಾಬಾದ್‌ ನೆಟ್‌ ರನ್‌ ರೇಟ್‌ ಉತ್ತಮವಾಗಿದ್ದು, ಒಂದು ವೇಳೆ ಎರಡು ಪಂದ್ಯ ಗೆದ್ದರೆ ನೆಟ್‌ ರನ್‌ ರೇಟ್‌ ಆಧಾರದ ಮೇಲೆ ಪ್ಲೇ ಆಫ್‌ ಪ್ರವೇಶಿಸುವ ಸಾಧ್ಯತೆ ಹೆಚ್ಚಿದೆ. ಇದನ್ನೂ ಓದಿ: 1 ರನ್‌ ಅಗತ್ಯವಿದ್ದಾಗ ಕೊಹ್ಲಿ 2 ರನ್‌ ಓಡಿದ್ದು ಯಾಕೆ?

    ಕೋಲ್ಕತ್ತಾ ನೈಟ್‌ ರೈಡರ್ಸ್‌: ಗುರುವಾರ ಚೆನ್ನೈ ವಿರುದ್ಧದ ಪಂದ್ಯ ಗೆದ್ದಿದ್ದರೆ ಕೋಲ್ಕತ್ತಾ ಪ್ಲೇ ಆಫ್‌ ಹಾದಿ ಸುಗಮವಾಗುತ್ತಿತ್ತು. ಸೋತಿರುವ ಕಾರಣ ಒಂದು ಪಂದ್ಯ ಗೆದ್ದರೂ ನೆಟ್‌ ರನ್‌ ರೇಟ್‌ ಲೆಕ್ಕಾಚಾರವೇ ಮುಖ್ಯವಾಗುತ್ತದೆ. 13 ಪಂದ್ಯಗಳಿಂದ 12 ಅಂಕ ಪಡೆದಿರುವ ಕೋಲ್ಕತ್ತಾ -0.467 ನೆಟ್‌ ರನ್‌ ರೇಟ್‌ ಹೊಂದಿದೆ. ನ.1 ರಂದು ಕೋಲ್ಕತ್ತಾ ರಾಜಸ್ಥಾನದ ವಿರುದ್ಧ ಆಡಲಿದೆ. ಕೋಲ್ಕತ್ತಾ ಪ್ಲೇಆಫ್‌ಗೆ ಹೋಗಬೇಕಾದರೆ ಪಂಜಾಬ್‌ ಮತ್ತು ಹೈದರಾಬಾದ್‌ ಒಂದು ಪಂದ್ಯ ಸೋಲಬೇಕು ಮತ್ತು ರನ್‌ ರೇಟ್‌ ಮತ್ತಷ್ಟು ಕಡಿಮೆಯಾಗಬೇಕು.

    ಸನ್‌ರೈಸರ್ಸ್‌ ಹೈದರಾಬಾದ್‌: 12 ಪಂದ್ಯಗಳಿಂದ 10 ಅಂಕ ಪಡೆದು ಪಟ್ಟಿಯಲ್ಲಿ 6ನೇ ಸ್ಥಾನ ಪಡೆದಿರುವ ಹೈದರಾಬಾದ್‌ ನೆಟ್‌ ರನ್‌ ರೇಟ್‌ನಲ್ಲಿ ಉತ್ತಮ ಸ್ಥಾನದಲ್ಲಿದೆ. +0.396 ನೆಟ್‌ ರನ್‌ ರೇಟ್‌ ಹೊಂದಿರುವ ಹೈದರಾಬಾದ್‌ ಶನಿವಾರ ಬೆಂಗಳೂರು ಮತ್ತು ನ.3ರಂದು ಮುಂಬೈ ತಂಡವನ್ನು ಎದುರಿಸಲಿದೆ. ಒಂದು ವೇಳೆ ಬೆಂಗಳೂರು ಮತ್ತು ಡೆಲ್ಲಿ ಒಂದು ಪಂದ್ಯ, ಪಂಜಾಬ್‌ ಎರಡೂ ಪಂದ್ಯವನ್ನು ಗೆದ್ದರೆ ಹೈದರಾಬಾದ್‌ ಪ್ಲೇ ಆಫ್‌ ಆಸೆ ಭಗ್ನವಾಗಲಿದೆ.

    ರಾಜಸ್ಥಾನ ರಾಯಲ್ಸ್‌: 12 ಪಂದ್ಯಗಳಿಂದ 10 ಅಂಕ ಪಡೆದಿರುವ ರಾಜಸ್ಥಾನ ಪ್ಲೇ ಆಫ್‌ಗೆ ಹೋಗಬೇಕಾದರೆ ಪವಾಡವೇ ನಡೆಯಬೇಕು. -0.505 ನೆಟ್‌ ರನ್‌ ರೇಟ್‌ ಹೊಂದಿರುವ ರಾಜಸ್ಥಾನ ಇಂದು ಪಂಜಾಬ್‌ ಮತ್ತು ನ.1 ರಂದು ಕೋಲ್ಕತ್ತಾ ವಿರುದ್ಧ ಆಡಲಿದೆ. ಈ ಎರಡು ಪಂದ್ಯಗಳನ್ನು ಗೆಲ್ಲುವುದು ಮುಖ್ಯವಲ್ಲ ಭಾರೀ ಅಂತರದಿಂದ ಗೆಲ್ಲಬೇಕು ಜೊತೆಗೆ ನೆಟ್‌ ರನ್‌ ರೇಟ್‌ ಏರಬೇಕು. ಸದ್ಯದ ಪರಿಸ್ಥಿತಿಯಲ್ಲಿ ಇದು ಕಷ್ಟ ಸಾಧ್ಯ. ಇಂದು ನಡೆಯುವ ಪಂದ್ಯದಲ್ಲಿ ರಾಜಸ್ಥಾನ ಭವಿಷ್ಯ ನಿರ್ಧಾರವಾಗಲಿದೆ.

    ಚೆನ್ನೈ ತಂಡಕ್ಕೆ ಅವಕಾಶ ಇಲ್ಲದೇ ಇದ್ದರೂ ಪಂಜಾಬ್‌ ವಿರುದ್ಧ ಒಂದು ಪಂದ್ಯ ಆಡಲು ಬಾಕಿಯಿದೆ. ಒಂದು ವೇಳೆ ಈ ಪಂದ್ಯವನ್ನು ಚೆನ್ನೈ ಗೆದ್ದರೆ ಪಂಜಾಬ್‌ ಪ್ಲೇ ಆಫ್‌ ಹಾದಿ ಕಷ್ಟವಾಗಲಿದೆ.