Tag: PLD

  • ಸತೀಶ್ ಜಾರಕಿಹೊಳಿ ದೊಡ್ಡವರು ನನಗೆ ಆದರ್ಶ, ಮಹಾಗುರು: ಲಕ್ಷ್ಮಿ ಹೆಬ್ಬಾಳ್ಕರ್ ತಿರುಗೇಟು

    ಸತೀಶ್ ಜಾರಕಿಹೊಳಿ ದೊಡ್ಡವರು ನನಗೆ ಆದರ್ಶ, ಮಹಾಗುರು: ಲಕ್ಷ್ಮಿ ಹೆಬ್ಬಾಳ್ಕರ್ ತಿರುಗೇಟು

    ಬೆಳಗಾವಿ: ಶಾಸಕ ಸತೀಶ್ ಜಾರಕಿಹೊಳಿ ದೊಡ್ಡವರು ಅವರಿಂದ ತುಂಬ ಕಲಿಯಬೇಕು, ಅವರೇ ನನಗೆ ಆದರ್ಶ, ಮಹಾ ಗುರು ಎಂದು ಪರೋಕ್ಷವಾಗಿ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಟಾಂಗ್ ಕೊಟ್ಟಿದ್ದಾರೆ.

    ಬೆಳಗಾವಿಯಲ್ಲಿ ಮಾತನಾಡಿದ ಅವರು, ಪಿಎಲ್‍ಡಿ ಬ್ಯಾಂಕ್ ಅಧ್ಯಕ್ಷರು, ಉಪಾಧ್ಯಕ್ಷರ ಚುನಾವಣೆ ವಿಚಾರದಲ್ಲಿ ಕೆಲ ಶಕ್ತಿಗಳು ಪ್ರತಿಭಟನೆ ವೇಳೆ ಗಲಾಟೆಗೆ ಯತ್ನ ನಡೆಸಿದವು. ತಹಶೀಲ್ದಾರ್ ಏಕಾಏಕಿ ಚುನಾವಣೆ ಮುಂದೂಡಿದ್ದಾರೆ. ಈ ಮೂಲಕ ಏಕಪಕ್ಷೀಯ ನಿರ್ಧಾರ ಕೈಗೊಂಡಿದ್ದಾರೆ. ಪಿಎಲ್‍ಡಿ ಬ್ಯಾಂಕ್‍ನ 9 ಜನ ನಿರ್ದೇಶಕರು ನನ್ನ ಜೊತೆಗಿದ್ದಾರೆ. ತಹಶೀಲ್ದಾರ್ ತಪ್ಪು ಮಾಡಿದ್ರೆ ಅವರನ್ನು ಅಮಾನತು ಮಾಡಬೇಕು, ಅಲ್ಲಿಯವರೆಗೂ ಹೋರಾಟದಿಂದ ಹಿಂದೆ ಸರಿಯಲ್ಲ. ನ್ಯಾಯ ಸಿಗದಿದ್ರೆ ಬೆಳಗಾವಿ ಚನ್ನಮ್ಮ ವೃತ್ತದಲ್ಲಿ ಹೋರಾಟ ಮಾಡುವುದಾಗಿ ಎಚ್ಚರಿಸಿದರು.

    ಪಿಎಲ್‍ಡಿ ಬ್ಯಾಂಕ್ ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆ ಹಿನ್ನೆಲೆ ಸೋಮವಾರ ಅಹೋರಾತ್ರಿ ಪ್ರತಿಭಟನೆ ನಡೆಸಿದ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಶಾಸಕ ಸತೀಶ ಜಾರಕಿಹೊಳಿ ಗುಡುಗಿದ್ದಾರೆ. ಪಿಎಲ್‍ಡಿ ಬ್ಯಾಂಕ್‍ಗೆ 20 ವರ್ಷದಿಂದ ರಾಜಕೀಯ ಮುಕ್ತ ಚುನಾವಣೆ ನಡೆದಿದೆ. ಸಚಿವರು, ಶಾಸಕರು ಯಾರೊಬ್ಬರು ಪಾಲ್ಗೊಂಡಿಲ್ಲ. ಆದರೆ ಲಕ್ಷ್ಮೀ ಹೆಬ್ಬಾಳ್ಕರ್ ನಿರ್ದೇಶಕರಿಗೆ ಆಮಿಷ ಒಡ್ಡಿದ್ದಾರೆ ಎಂದು ಆರೋಪಿಸಿದ್ದಾರೆ.

    ಶಾಸಕ ಸತೀಶ್ ಜಾರಕಿಹೊಳಿ ಕಾಲು ಕಸ ಆಗಲ್ಲ. ಮೊದಲ ಬಾರಿ ಗೆದ್ದಿದ್ದೀನಿ ಅಂತ ಮೆರಿ ಬೇಡಾ ಅಂತಾ ಬೆಳಗಾವಿಯಲ್ಲಿ ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಸಚಿವ ರಮೇಶ್ ಜಾರಕಿಹೊಳಿ ವಾಗ್ದಾಳಿ ನಡೆಸಿದ್ರು. ಪಿಎಲ್‍ಡಿ ಬ್ಯಾಂಕ್ ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆ ಗೊಂದಲ ವಿಚಾರದಲ್ಲಿ ಪ್ರತಿಕ್ರಿಯಿಸಿ ಪಿಎಲ್‍ಡಿ ಬ್ಯಾಂಕ್ ಚುನಾವಣೆ ವಿಚಾರದಲ್ಲಿ ರಾಜಕೀಯ ಸರಿಯಲ್ಲ, ಅಧಿಕಾರಿಗಳ ಸಭೆ ನಡೆಸಿ ಮುಂದಿನ ತೀರ್ಮಾನ ತೆಗೆದುಕೊಳ್ಳುತ್ತೇನೆ ಅಂತಾ ತಿಳಿಸಿದ್ದಾರೆ.

    ಈ ಹಿಂದಿನ ಪದ್ಧತಿಯಲ್ಲಿ ಚುನಾವಣೆ ನಡೆಸಲು ನಮ್ಮದು ಸಲಹೆ ಇದೆ. ಅವಿರೋಧವಾಗಿ ಆಯ್ಕೆ ಆಗಿರುವವರು ಶಾಸಕಿ ಹೆಬ್ಬಾಳ್ಕರ್ ಜೊತೆಗೆ ಹೋಗಿದ್ದಾರೆ. ಎಲ್ಲರೂ ಸೇರಿ ಕೆಲಸ ಮಾಡುವ ನಿರೀಕ್ಷೆ ಹೊಂದಿದ್ದೇವು. ಆದರೆ ಇದು ಹುಸಿಯಾಗಿದೆ. ಚುನಾವಣೆ ಮುಂದೂಡಿಕೆ ಚುನಾವಣಾ ಅಧಿಕಾರಿಗೆ ಅಧಿಕಾರವಿದೆ. ಪ್ರತಿಭಟನೆಯಿಂದ ಯಾವುದೇ ಪ್ರಯೋಜವಿಲ್ಲ ಎಂದ ಅವರು, ಒಂದೇ ಪಕ್ಷದಲ್ಲಿ ಇದ್ದರೂ ಗುಂಪುಗಾರಿಕೆ ಮಾಡುವುದು ಸಹಜವಾಗಿದೆ. ಈಗಲೂ ಕಾಲ ಮಿಂಚಿಲ್ಲ ಎಲ್ಲರನ್ನೂ ಒಮ್ಮತದಿಂದ ಕರೆದುಕೊಂಡು ಹೋದರೆ ಸ್ವಾಗತ ಎಂದು ಎಚ್ಚರಿಕೆ ನೀಡಿದರು

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv