Tag: PLD Bank

  • ಪಿಎಲ್‍ಡಿ ಬ್ಯಾಂಕ್ ನಂತರ, ಇದೀಗ ಡಿಸಿಸಿ ಬ್ಯಾಂಕ್ ಚುನಾವಣೆ- ಕುಂದಾ ನಗರದ ಕದನ

    ಪಿಎಲ್‍ಡಿ ಬ್ಯಾಂಕ್ ನಂತರ, ಇದೀಗ ಡಿಸಿಸಿ ಬ್ಯಾಂಕ್ ಚುನಾವಣೆ- ಕುಂದಾ ನಗರದ ಕದನ

    ಬೆಂಗಳೂರು: ಒಂದು ವರ್ಷದ ಹಿಂದೆ ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ಬೆಳಗಾವಿ ಕಾಂಗ್ರೆಸ್ ಶಾಸಕರ ನಡುವೆ ಪಿಎಲ್‍ಡಿ ಬ್ಯಾಂಕ್ ಚುನಾವಣೆ ಕದನ ಜೋರಾಗಿತ್ತು. ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಹಾಗೂ ಜಾರಕಿಹೋಳಿ ಸಹೋದರರ ನಡುವೆ ಶುರುವಾದ ಜಟಾಪಟಿ ಅಂತಿಮವಾಗಿ ಸಮ್ಮಿಶ್ರ ಸರ್ಕಾರದ ಪಥನಕ್ಕೆ ಕಾರಣವಾಗಿತ್ತು.

    ಅದೇ ಬೆಳಗಾವಿಯಲ್ಲಿ ಈಗ ಡಿಸಿಸಿ ಬ್ಯಾಂಕ್ ಚುನಾವಣೆ ಗಲಾಟೆ ಗರಿಗೆದರಿದೆ. ಅಂದು ಕಾಂಗ್ರೆಸ್ ಶಾಸಕರ ನಡುವೆ ನಡೆದ ಕದನದ ರೀತಿಯಲ್ಲೇ ಬಿಜೆಪಿ ಶಾಸಕರ ನಡಯವೆಯೂ ಇದೀಗ ಫೈಟ್ ಆರಂಭವಾಗಿದೆ. ಬಿಜೆಪಿ ನಾಯಕರಾದ ಡಿಸಿಎಂ ಲಕ್ಷ್ಮಣ ಸವದಿ, ಪ್ರಭಾಕರ್ ಕೋರೆ ಹಾಗೂ ಸಂಸದ ಸುರೇಶ್ ಅಂಗಡಿ ಒಂದು ಕಡೆಯಾದರೆ ಬಿಜೆಪಿ ಶಾಸಕರು ಸಚಿವರಾದ ರಮೇಶ್ ಜಾರಕಿಹೊಳಿ, ಉಮೇಶ್ ಕತ್ತಿ ಹಾಗೂ ಬಾಲಚಂದ್ರ ಜಾರಕಿಹೋಳಿ ಮತ್ತೊಂದು ಕಡೆ ನಿಂತಿದ್ದಾರೆ.

    ಎರಡೂ ಬಣದವರು ಬಿಜೆಪಿಯವರೇ ಆಗಿದ್ದರೂ, ಮಾರ್ಚ್ ತಿಂಗಳಲ್ಲಿ ನಡೆಯುವ ಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ತಮ್ಮ ಬಣವೇ ಗೆಲ್ಲಬೇಕು ಎನ್ನುವ ಜಿದ್ದಿಗೆ ಬಿದ್ದಿದ್ದಾರೆ. ಇದರ ಮಧ್ಯೆ ಲಕ್ಷಣ ಸವದಿಯವರನ್ನು ಡಿಸಿಎಂ ಆಗಿ ಮುಂದುವರಿಸಿದ್ದು ಜಾರಕಿಹೊಳಿ ಬಣಕ್ಕೆ ಇಷ್ಟ ಇರಲಿಲ್ಲ. ಅಲ್ಲದೆ ಉಮೇಶ್ ಕತ್ತಿಯವರನ್ನು ಸಚಿವರನ್ನಾಗಿ ಮಾಡದಿರುವುದು ಕತ್ತಿ ಬಣದ ಸಿಟ್ಟಿಗೆ ಕಾರಣವಾಗಿದೆ.

    ತಮ್ಮ ವಿರೋಧಿಗಳ ಸಿಟ್ಟನ್ನು ಅರಿತ ಡಿಸಿಎಂ ಲಕ್ಷ್ಮಣ್ ಸವದಿ ಪ್ರಭಾಕರ್ ಕೋರೆ ಹಾಗೂ ಸುರೇಶ್ ಅಂಗಡಿ ಜೊತೆ ಸೇರಿ ಶತಾಯಗತಾಯ ಕತ್ತಿ ಹಾಗೂ ಜಾರಕಿಹೋಳಿ ಗುಂಪಿಗೆ ಮುಖಭಂಗ ಮಾಡುವ ಪಣ ತೊಟ್ಟಿದ್ದಾರೆ. ಹೀಗೆ ಬೆಳಗಾವಿ ಅಖಾಡದಲ್ಲಿ ಡಿಸಿಸಿ ಬ್ಯಾಂಕ್ ಚುನಾವಣೆ ಗಲಾಟೆ ಜೋರಾಗುವ ಲಕ್ಷಣಗಳು ಕಾಣತೊಡಗಿವೆ. ಮೊದಲೇ ಸಚಿವ ಸ್ಥಾನ ಸಿಗದ ಸಿಟ್ಟು. ಡಿಸಿಎಂ ಪೋಸ್ಟ್ ಗಲಾಟೆ ಎಲ್ಲವೂ ಸೇರಿಕೊಂಡು ಪಿಎಲ್‍ಡಿ ಬ್ಯಾಂಕ್ ಗಲಾಟೆ ಮಾದರಿಯಲ್ಲೇ ಡಿಸಿಸಿ ಬ್ಯಾಂಕ್ ಚುನಾವಣೆ ಸರ್ಕಾರದ ಪಾಲಿಗೆ ಮಗ್ಗಲ ಮುಳ್ಳಾಗುತ್ತಾ ಎನ್ನುವ ಆತಂಕವಂತೂ ಬಿಜೆಪಿ ಪಾಳಯದಲ್ಲಿ ಮನೆ ಮಾಡಿದೆ.

  • ಪಿಎಲ್‍ಡಿ ಚುನಾವಣೆ: ಸುಧಾಕರ್ ತಂದೆ ವರ್ಸಸ್ ‘ಕೈ-ತೆನೆ’ ಮುಖಂಡರ ನಡುವೆ ಮಾರಮಾರಿ

    ಪಿಎಲ್‍ಡಿ ಚುನಾವಣೆ: ಸುಧಾಕರ್ ತಂದೆ ವರ್ಸಸ್ ‘ಕೈ-ತೆನೆ’ ಮುಖಂಡರ ನಡುವೆ ಮಾರಮಾರಿ

    ಚಿಕ್ಕಬಳ್ಳಾಪುರ: ಪಿಎಲ್‍ಡಿ ಬ್ಯಾಂಕ್ ಚುನಾವಣೆ ವೇಳೆ ಕ್ಷೇತ್ರದ ಶಾಸಕ, ವೈದ್ಯಕೀಯ ಸಚಿವ ಡಾ ಕೆ.ಸುಧಾಕರ್ ತಂದೆ ಪಿ.ಎನ್ ಕೇಶವರೆಡ್ಡಿ ಹಾಗೂ ಕಾಂಗ್ರೆಸ್-ಜೆಡಿಎಸ್ ಮುಖಂಡರ ನಡುವೆ ಮಾರಾಮಾರಿ ನಡೆದಿದೆ.

    ಪಿಎಲ್‍ಡಿ ಬ್ಯಾಂಕ್‍ಗೆ ಇಂದು ಬೆಳಗ್ಗೆ 9 ಗಂಟೆಯಿಂದ ಚುನಾವಣೆ ನಡೆಯುತ್ತಿದ್ದು, ಮತದಾನ ಪ್ರಕ್ರಿಯೆ ಚಿಕ್ಕಬಳ್ಳಾಪುರ ತಾಲೂಕು ಪಂಚಾಯತ್ ಆವರಣದಲ್ಲಿನ ಮತಗಟ್ಟೆಗಳಲ್ಲಿ ಆರಂಭವಾಗಿದೆ. 12 ಕ್ಷೇತ್ರಗಳ ಪೈಕಿ ಪೇರೇಸಂದ್ರ ಸೇರಿ 2 ಕ್ಷೇತ್ರಗಳಿಗೆ ಅವಿರೋಧ ಆಯ್ಕೆಯಾಗಿದ್ದು, 10 ಕ್ಷೇತ್ರಗಳಿಗೆ ಇಂದು ಚುನಾವಣೆ ನಡೆಯುತ್ತಿದೆ.

    ಈ ವೇಳೆ ಶಾಸಕ ಸುಧಾಕರ್ ತಂದೆ ಕೇಶವರೆಡ್ಡಿ ತಮ್ಮ ಬೆಂಬಲಿಗರೊಂದಿಗೆ ಮತಕೇಂದ್ರದತ್ತ ಹೆಜ್ಜೆ ಹಾಕಿದ್ದರು. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಕಾಂಗ್ರೆಸ್ ಮುಖಂಡ, ವಕೀಲ ನಾರಾಯಣಸ್ವಾಮಿ, ಮತದಾರರಲ್ಲದ ಕೇಶವರೆಡ್ಡಿ, ಅವರ ತಮ್ಮಂದಿರಾದ ಚನ್ನಕೃಷ್ಣಾರೆಡ್ಡಿ ಹಾಗೂ ರವೀಂದ್ರರೆಡ್ಡಿ ಅವರನ್ನು ಒಳಗೆ ಬಿಟ್ರೀ ಸರಿ ಇರುವುದಿಲ್ಲ ಅಂತ ಗಲಾಟೆ ನಡೆಸಿದ್ದಾರೆ. ಇದರಿಂದಾಗಿ ಕೇಶವರೆಡ್ಡಿ ಹಾಗೂ ಕಾಂಗ್ರೆಸ್ ಮುಖಂಡ ನಾರಾಯಣಸ್ವಾಮಿ ನಡುವೆ ಮಾತಿನ ಚಕಮಕಿ ನಡೆದು ನಾನಾ ನೀನಾ ಅಂತ ಅವಾಚ್ಯ ಪದಗಳಿಂದ ನಿಂದಿಸಿಕೊಂಡಿದ್ದಾರೆ ಎನ್ನಲಾಗಿದೆ.

    ಈ ಮಧ್ಯೆ ಕೇಶವರೆಡ್ಡಿ ಅವರು ಖಾಸಗಿ ಭದ್ರತಾ ಸಿಬ್ಬಂದಿ ಚೇತನ್ ಕಾಂಗ್ರೆಸ್ ಮುಖಂಡ ನಾರಾಯಣಸ್ವಾಮಿ ಮೇಲೆ ಮುಗಿಬಿದ್ದು ಹಲ್ಲೆಗೆ ಮುಂದಾಗಿ ಪರಸ್ಪರ ತಳ್ಳಾಟ ನಡೆಸಿದ್ದಾರೆ. ಕೂಡಲೇ ಪಿಎಸ್‍ಐ ಚೇತನ್ ಹಾಗೂ ಡಿವೈಎಸ್‍ಪಿ ರವಿಶಂಕರ್ ಗಲಾಟೆ ನಿಯಂತ್ರಿಸಲು ಪ್ರಯತ್ನಿಸಿದ್ದಾರೆ. ಅಷ್ಟರಲ್ಲೇ ಕೇಶವರೆಡ್ಡಿ ಬೆಂಬಲಿಗರು ವಿರುದ್ಧ ಕಾಂಗ್ರೆಸ್‍ನ ಮತ್ತೋರ್ವ ಮುಖಂಡ ಅಂಜಿನಪ್ಪ ಹಾಗೂ ಜೆಡಿಎಸ್‍ನ ಕೆಲ ಮುಖಂಡರು ಒಂದಾಗಿ ಕೈ ಕೈ ಮಿಲಾಯಿಸುವುದಕ್ಕೆ ಮುಂದಾಗಿದ್ದರಿಂದ ಉದ್ರಿಕ್ತ ವಾತಾವರಣ ನಿರ್ಮಾಣವಾಗಿದೆ.

    ತಳ್ಳಾಟ ನೂಕಾಟದಲ್ಲಿ ಡಿವೈಎಸ್‍ಪಿ ರವಿಶಂಕರ್ ಅವರಿಗೂ ಸಣ್ಣ ಗಾಯವಾಗಿದೆ. ಘಟನೆ ನಡೆಸ ನಂತರ ಸ್ಥಳಕ್ಕೆ ಸಚಿವ ಸುಧಾಕರ್ ಭೇಟಿ ನೀಡಿ ಆಕ್ರೋಶ ವ್ಯಕ್ತಪಡಿಸಿದರು. ಮತ್ತೊಂದೆಡೆ ಪ್ರಭಾರ ಎಸ್‍ಪಿ ಕಾರ್ತಿಕ್ ರೆಡ್ಡಿ ಸಹ ಭೇಟಿ ನೀಡಿ ಪರೀಶಿನೆ ನಡೆಸಿದರು. ಸದ್ಯ ಶಾಂತಿಯುತವಾಗಿ ಚುನಾವಣಾ ಪ್ರಕ್ರಿಯೆ ನಡೆಸಿದ್ದು, ಇಂದು ಸಂಜೆ ಫಲಿತಾಂಶ ಹೊರಬೀಳಲಿದೆ.

  • ನಿರ್ದೇಶಕರಾಗಿ ಅಧಿಕಾರ ಸ್ವೀಕರಿಸೋ ಮುನ್ನವೇ ವ್ಯಕ್ತಿ ಸಾವು

    ನಿರ್ದೇಶಕರಾಗಿ ಅಧಿಕಾರ ಸ್ವೀಕರಿಸೋ ಮುನ್ನವೇ ವ್ಯಕ್ತಿ ಸಾವು

    ಬೀದರ್: ಪಿಎಲ್‍ಡಿ ಬ್ಯಾಂಕ್ ಹಾಗೂ ಪಿಕೆಪಿಎಸ್‍ನ ನಿರ್ದೇಶಕರಾಗಿ ಆಯ್ಕೆಯಾಗಿದ್ದ ವ್ಯಕ್ತಿಯೊಬ್ಬರು, ಅಧಿಕಾರ ಸ್ವೀಕರಿಸುವ ಮುನವೇ ರಸ್ತೆ ಅಪಘಾತದಲ್ಲಿ ಮೃತಪಟ್ಟ ಘಟನೆ ಬೀದರ್ ಜಿಲ್ಲೆ ಬಸವಕಲ್ಯಾಣ ತಾಲೂಕಿನ ಇಸ್ಲಾಂಪೂರ ಗ್ರಾಮದಲ್ಲಿ ನಡೆದಿದೆ.

    ಇಸ್ಲಾಂಪೂರ ಗ್ರಾಮದ ಕಾಶಿನಾಥ ಕನಾಟೆ(66) ಮೃತ ವ್ಯಕ್ತಿ. ಇವರು ಗ್ರಾಮದ ಸಮೀಪ ಇರುವ ಮಶಾಳ ತಾಂಡಾದಿಂದ ಭಾನುವಾರ ರಾತ್ರಿ ಗ್ರಾಮಕ್ಕೆ ಬರುವಾಗ ಬೈಕಿನಿಂದ ಬಿದ್ದು ಮೃತಪಟ್ಟಿದ್ದಾರೆ. ಕಳೆದ 30 ವರ್ಷಗಳಿಂದ ಸಹಕಾರಿ ರಂಗದ ವಿವಿಧ ಬ್ಯಾಂಕ್ ಹಾಗೂ ಸಹಕಾರಿ ಸಂಘಗಳ ಅಧ್ಯಕ್ಷ, ಉಪಾಧ್ಯಕ್ಷ ಹಾಗೂ ನಿರ್ದೇಶಕರಾಗಿ ಸೇವೆ ಸಲ್ಲಿಸಿದ ಇವರು, ಬಸವಕಲ್ಯಾಣದ ಪಿಎಲ್‍ಡಿ ಬ್ಯಾಂಕ್ ಅಧ್ಯಕ್ಷರಾಗಿ ಹಾಗೂ ರಾಜೇಶ್ವರ ಪಿಕೆಪಿಎಸ್‍ನ ಅಧ್ಯಕ್ಷರಾಗಿ ಕೆಲಸ ಮಾಡಿದ್ದರು.

    ಕಳೆದ ಒಂದು ವಾರದ ಹಿಂದೆ ನಡೆದ ರಾಜೇಶ್ವರ ಪಿಕೆಪಿಎಸ್ ಚುನಾವಣೆಯಲ್ಲಿ ನಿರ್ದೇಶಕರಾಗಿ ಆಯ್ಕೆಯಾಗಿದ್ದ ಇವರು, ಎರಡು ದಿನಗಳ ಹಿಂದೆ ನಡೆದಿದ್ದ ಪಿಎಲ್‍ಡಿ ಬ್ಯಾಂಕ್ ಆಡಳಿತ ಮಂಡಳಿಗೆ ನಿರ್ದೇಶಕರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದರು. ಕಾಶಿನಾಥ ಅವರು ಪಿಕೆಪಿಎಸ್ ಹಾಗೂ ಪಿಎಲ್‍ಡಿ ಬ್ಯಾಂಕಿನ ನಿರ್ದೇಶಕರಾಗಿ ಆಯ್ಕೆಯಾಗಿದ್ದನ್ನು ಸಹಿಸದ ವ್ಯಕ್ತಿಗಳು ಕೊಲೆ ಮಾಡರಬಹುದು ಎಂದು ಶಂಕೆ ವ್ಯಕ್ತಪಡಿಸಿದರು.

    ಮಂಠಾಳ ಸಿಪಿಐ ಮಹೇಶಗೌಡ ಪಾಟೀಲ, ಮುಡಬಿ ಪಿಎಸ್‍ಐ ವಸೀಮ್ ಪಟೇಲ್ ಹಾಗೂ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಈ ಕುರಿತು ಮುಡಬಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  • ಎಂಪಿ ಚುನಾವಣೆಯಲ್ಲಿ ಮತ್ತೇ ಸಮಸ್ಯೆ ಕಾಣಿಸಿಕೊಳ್ಳುತ್ತೆ: ಹೈಕಮಾಂಡ್‍ಗೆ ಸತೀಶ್ ಎಚ್ಚರಿಕೆ

    ಎಂಪಿ ಚುನಾವಣೆಯಲ್ಲಿ ಮತ್ತೇ ಸಮಸ್ಯೆ ಕಾಣಿಸಿಕೊಳ್ಳುತ್ತೆ: ಹೈಕಮಾಂಡ್‍ಗೆ ಸತೀಶ್ ಎಚ್ಚರಿಕೆ

    ಬೆಳಗಾವಿ: ಪಿಎಲ್‍ಡಿ ಬ್ಯಾಂಕ್ ಚುನಾವಣೆಯನ್ನು 6 ಕೋಟಿ ಜನ ನೋಡುವಂತಾಯಿತು. ಇದೊಂದು ಮುಗಿದ ಅಧ್ಯಾಯವಾಗಿದ್ದು, ಲೋಕಸಭಾ ಚುನಾವಣೆಯಲ್ಲಿ ಮತ್ತೇ ಸಮಸ್ಯೆ ಕಾಣಿಸಿಕೊಳ್ಳಲಿದೆ ಎಂದು ಶಾಸಕ ಸತೀಶ್ ಜಾರಕಿಹೊಳಿ, ಹೈಕಮಾಂಡ್‍ಗೆ ಎಚ್ಚರಿಕೆ ನೀಡಿದ್ದಾರೆ.

    ಪಕ್ಷದ ಹಿತದೃಷ್ಟಿಯಿಂದ ಹಾಗೂ ಎಲ್ಲರ ಸಹಮತದಿಂದ ಪಿಎಲ್‍ಡಿ ಬ್ಯಾಂಕ್ ಅಧ್ಯಕ್ಷರ ಆಯ್ಕೆಯಾಗಿದೆ. ಇದು ಯಾರ ಗೆಲುವು ಅಲ್ಲ, ಯಾರ ಸೋಲು ಅಲ್ಲ. ಜಿಲ್ಲೆಯ ನಾಯಕರಲ್ಲಿ ಕಾಣಿಸಿಕೊಂಡಿದ್ದ ಬೆಂಕಿಯನ್ನು ಆರಿಸಬೇಕಿತ್ತು, ಹೀಗಾಗಿ ಪೌರಾಡಳಿತ ಸಚಿವ ರಮೇಶ್ ಜಾರಕಿಹೊಳಿ ಸಲಹೆ ಮೇರೆಗೆ ಸಮಸ್ಯೆ ಇತ್ಯರ್ಥ ಪಡಿಸಲಾಗಿದೆ ಎಂದು ಹೇಳಿದರು.

    ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ನಾನು ಸಚಿವ ಸ್ಥಾನದ ಆಕಾಂಕ್ಷಿಯಲ್ಲ. ಲೋಕಸಭಾ ಚುನಾವಣೆ ವೇಳೆ ಮತ್ತೇ ಸಮಸ್ಯೆ ಬರಲಿದ್ದು, ಅದನ್ನು ಪಕ್ಷದ ವರಿಷ್ಠರೇ ಬಗೆಹರಿಸುವರು. ಆದರೆ ನಮ್ಮ ಸ್ವಾಭಿಮಾನಕ್ಕೆ ಧಕ್ಕೆಯಾದರೆ ನಾವು ಸ್ವತಂತ್ರ ನಿರ್ಧಾರ ಕೈಗೊಳ್ಳುತ್ತೇವೆ ಎಂದು ಹೈಕಮಾಂಡ್‍ಗೆ ಖಡಕ್ ಎಚ್ಚರಿಕೆ ನೀಡಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಬೆಳಗಾವಿ ಬ್ಯಾಂಕ್ ಬ್ಯಾಟಲ್- ಬಿಜೆಪಿ ನಾಯಕರಿಗೆ ಬಿಎಸ್‍ವೈ ಖಡಕ್ ಸೂಚನೆ

    ಬೆಳಗಾವಿ ಬ್ಯಾಂಕ್ ಬ್ಯಾಟಲ್- ಬಿಜೆಪಿ ನಾಯಕರಿಗೆ ಬಿಎಸ್‍ವೈ ಖಡಕ್ ಸೂಚನೆ

    ಬೆಂಗಳೂರು: ಬೆಳಗಾವಿ ಬ್ಯಾಂಕ್ ಬ್ಯಾಟಲ್ ನಲ್ಲಿ ಬಿಜೆಪಿ ಸೈಲೆಂಟ್ ಆಗಿದ್ದು, ನಾಯಕರಿಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಖಡಕ್ ಸೂಚನೆ ನೀಡಿದ್ದಾರೆ.

    ನಮ್ಮ ಪಕ್ಷದ ಯಾರೂ ಜಾರಕಿಹೊಳಿ ಬ್ರದರ್ಸ್, ಲಕ್ಷ್ಮೀ ಹೆಬ್ಬಾಳ್ಕರ್ ಪರ ವಿರೋಧ ನಿಲ್ಲಬಾರದು. ಅದು ಅವರ ಪಕ್ಷದ ಒಳ ಬೇಗುದಿ. ಎಲ್ಲಿಗೆ ಹೋಗಿ ತಲುಪುತ್ತೆ ನೋಡೋಣ. ಅವರ ಮೇಲಾಟ ಮುಗಿದ ಮೇಲೆ ನಮ್ಮ ಆಟ ಏನು ಅನ್ನೋದನ್ನ ನೋಡೋಣ ಅಂತ ಸೂಚಿಸಿದ್ದಾರೆ ಎಂಬುದಾಗಿ ಪಕ್ಷದ ಮೂಲಗಳಿಂದ ಪಬ್ಲಿಕ್ ಟಿವಿಗೆ ಮಾಹಿತಿ ಲಭಿಸಿದೆ.

    ಸದ್ಯಕ್ಕೆ ಪಿಎಲ್ ಡಿ ಬ್ಯಾಂಕ್ ವಿಚಾರದಲ್ಲಿ ಅಂತರ ಕಾಯ್ದುಕೊಳ್ಳಿ ಎಂದು ಬಿಎಸ್ ವೈ ಖಡಕ್ ಸೂಚನೆ ನೀಡಿದ್ದಾರೆ.

    ಇತ್ತ ಶಿವಮೊಗ್ಗದಲ್ಲಿ ಬಿಜೆಪಿ ನಾಯಕ ಕೆಎಸ್ ಈಶ್ವರಪ್ಪ ಮಾತನಾಡಿ, ಕಾಂಗ್ರೆಸ್ ನವರಿಗೆ ಹೇಳೋರು, ಕೇಳೋರು ಯಾರೂ ಇಲ್ಲ ಎಂಬುದಕ್ಕೆ ಬೆಳಗಾವಿನ ಪಿಎಲ್‍ಡಿ ಬ್ಯಾಂಕ್ ಚುನಾವಣೆಯೇ ಸಾಕ್ಷಿ. ಒಂದು ರಾಷ್ಟ್ರೀಯ ಪಕ್ಷ ಕಾಂಗ್ರೆಸ್ ಗೆ ಇಂತಹ ಹೀನಾಯ ಸ್ಥಿತಿ ಬರಬಾರದು. ಆದ್ರೆ ಅವರ ಬಡಿದಾಟ ಅವರಿಗೆ ಮಾತ್ರ ಸಂಬಂಧಪಟ್ಟಿದ್ದಾಗಿದೆ. ಹೀಗಾಗಿ ನಾವು ಇದ್ರಲ್ಲಿ ತಲೆತೂರಿಸುವುದಿಲ್ಲ ಅಂತ ಹೇಳಿದ್ದಾರೆ.

    ಒಬ್ಬ ಮಂತ್ರಿ, ಇನ್ನೊಬ್ಬ ಮಹಿಳೆ ಹಾಗೂ ಚುನಾಯಿತ ಪ್ರತಿನಿಧಿ. ಜಾರಕಿಹೊಳಿ ಈ ಶಾಸಕಿಯನ್ನು ಕಾಲಕಸಕ್ಕಿಂತ ಸಮ. ಇದು ಮಹಿಳಾ ಕುಲಕ್ಕೆ ಚುನಾಯಿತ ಪ್ರತಿನಿಧಿಗೆ ಮಾಡಿದ ಅಪಮಾನ. ಹಾದಿ ರಂಪ, ಬೀದಿ ರಂಪ ಮಾಡಿಕೊಂಡು ಕಾಂಗ್ರೆಸ್ ದಯನೀಯ ಸ್ಥಿತಿಯಲ್ಲಿ ಇದೆ ಅಂತ ಅವರು ತಿಳಿಸಿದ್ರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಎಲ್ಲವನ್ನು ಆ ದೇವ್ರು ನೋಡಿಕೊಳ್ತಾನೆ – ಗೆದ್ದ ಬಳಿಕ ಲಕ್ಷ್ಮಿ ಹೆಬ್ಬಾಳ್ಕರ್ ಚುಟುಕು ಮಾತು

    ಎಲ್ಲವನ್ನು ಆ ದೇವ್ರು ನೋಡಿಕೊಳ್ತಾನೆ – ಗೆದ್ದ ಬಳಿಕ ಲಕ್ಷ್ಮಿ ಹೆಬ್ಬಾಳ್ಕರ್ ಚುಟುಕು ಮಾತು

    – ಲೋಕಲ್ ಸಮಸ್ಯೆ ಇತ್ಯರ್ಥ ಎಂದ ಸತೀಶ್ ಜಾರಕಿಹೊಳಿ

    ಬೆಳಗಾವಿ: ಒಂದು ವಾರದಿಂದ ರಾಜ್ಯದ ಗಮನ ಸೆಳೆದಿದ್ದ ಪಿಎಲ್‍ಡಿ ಬ್ಯಾಂಕ್ ಚುನಾವಣೆಗೆ ತೆರೆ ಬಿದ್ದಿದೆ. ಪಿಎಲ್‍ಡಿ ಬ್ಯಾಂಕ್ ಅಧ್ಯಕ್ಷರ ನೇಮಕಾತಿ ವಿಚಾರದಲ್ಲಿ ತೀವ್ರ ಕೂತುಹಲ ಕೆರಳಿಸಿದ್ದ ಸಾಹುಕಾರರ ಅಡ್ಡದ ರಣರಂಗದಲ್ಲಿ ಲಕ್ಷ್ಮಿ ಹೆಬ್ಬಾಳ್ಕರ್ ಬಣ ಮೇಲುಗೈ ಸಾಧಿಸಿದ್ದು, ಜಾರಕಿಹೊಳಿ ಬಣಕ್ಕೆ ಹಿನ್ನಡೆಯಾಗಿದೆ.

    ಗೆಲುವಿನ ಬಳಿಕ ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್, ಎಲ್ಲರ ಒಮ್ಮತದಿಂದ ಅಧ್ಯಕ್ಷ, ಉಪಾಧ್ಯಕ್ಷರು ಆಯ್ಕೆಯಾಗಿದ್ದಾರೆ. ನನ್ನ ವಿರುದ್ಧದ ವೈಯಕ್ತಿಕ ಟೀಕೆಗಳಿಗೆ ನಾನು ಉತ್ತರ ಕೊಡಲ್ಲ. ಭಗವಂತ ಎಲ್ಲವನ್ನು ನೋಡಿಕೊಳ್ಳುತ್ತಾನೆ. ಚುನಾವಣೆಯಲ್ಲಿ ಯಾರ ಗೆಲುವು ಇಲ್ಲ. ಸೋಲು ಇಲ್ಲ. ಪಕ್ಷದ ಮುಖಂಡರ ಸಮ್ಮುಖದಲ್ಲಿ ಎಲ್ಲವೂ ಸುಖಾಂತ್ಯವಾಗಿದೆ. ಜಾರಕಿಹೊಳಿ ಸಹೋದರರೊಂದಿಗೆ ಪಕ್ಷದ ವರಿಷ್ಠರು ಮಾತನಾಡಿದ್ದಾರೆ. ನನ್ನ ಕ್ಷೇತ್ರಕ್ಕೆ ಗೆಲುವು ಆಗಿದೆ ಎಂದು ಸಂತೋಷ ಹಂಚಿಕೊಂಡರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

    ಪಿಎಲ್‍ಡಿ ಚುನಾವಣೆಗೆ ಸಂಬಂಧಿಸಿದಂತೆ ಎಲ್ಲಿಯೂ ಮಾಧ್ಯಮಗಳ ಮುಂದೆ ಬಂದಿಲ್ಲ. ನಾನು ಎಲ್ಲಿಯೂ ಬೇರೆಯವರ ರೀತಿ ನಡೆದುಕೊಂಡಿಲ್ಲ. ಇನ್ನು ಆ ಘಟನೆಗಳ ಬಗ್ಗೆ ನಾನು ಹೆಚ್ಚು ಮಾತನಾಡಲು ಇಷ್ಟಪಡಲ್ಲ. ನಾನು ಸ್ಲಂನಲ್ಲಿಯೇ ಹುಟ್ಟಿರಬಹುದು, ಏನಾದ್ರೂ ಆಗಿರಬಹುದು. ಯಾವುದೇ ಹೇಳಿಕೆಗಳಿಗೂ ನಾನು ಕಮೆಂಟ್ ಮಾಡಲ್ಲ. ವೈಯಕ್ತಿಕ ಟೀಕೆಗಳಿಂದ ಮನಸ್ಸಿಗೆ ತುಂಬಾ ನೋವಾಗಿದೆ. ಪಕ್ಷ ಮತ್ತು ವರಿಷ್ಠರು ಏನು ಹೇಳಿದ್ದಾರೋ ಆ ಕೆಲಸವನ್ನು ಮಾತ್ರ ಮಾಡಿದ್ದೇನೆ. ಎಲ್ಲ ಬೆಳವಣಿಗೆಯನ್ನು ಜನತೆ ಗಮನಿಸಿದ್ದಾರೆ ಎಂದು ತಿಳಿಸಿದ್ದಾರೆ.

    ಲೋಕಲ್ ಸಮಸ್ಯೆ ಇತ್ಯರ್ಥ:
    ಅವಿರೋಧವಾಗಿ ಎಲ್ಲರನ್ನು ಆಯ್ಕೆ ಮಾಡಿದ್ದೇವೆ. ಇಂದು ಮಾಡಿದ್ದ ಕೆಲಸವನ್ನು ಕಾರ್ಯಧ್ಯಕ್ಷರು ಮೊದಲೇ ಮಾಡಬೇಕಿತ್ತು. ಸ್ವಲ್ಪ ತಡವಾಗಿದ್ದರಿಂದ ಇಷ್ಟೆಲ್ಲಾ ಗೊಂದಲ ನಿರ್ಮಾಣವಾಗಿತ್ತು. ಇದೊಂದು ಸ್ಥಳೀಯ ಮಟ್ಟದ ಸಮಸ್ಯೆ ಇದಾಗಿದ್ದು, ಇಲ್ಲಿಯೇ ಬಗೆಹರಿಸಿಕೊಂಡಿದ್ದೇವೆ. ಪಕ್ಷ ಅಂತಾ ಬಂದಾಗ ನಮ್ಮಲ್ಲಿ ಏನೇ ಗೊಂದಲಗಳಿದ್ದರೂ ನಾವೆಲ್ಲರೂ ಒಂದಾಗುತ್ತೇವೆ ಅಂತಾ ಸತೀಶ್ ಜಾರಕಿಹೊಳಿ ವಿಶ್ವಾಸ ವ್ಯಕ್ತಪಡಿಸಿದರು.

     

    ಅವಿರೋಧ ಆಯ್ಕೆಯ ನಂತರ ಸರ್ಕಿಟ್ ಹೌಸ್‍ನಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ನೇತೃತ್ವದಲ್ಲಿ ಜಂಟಿ ಸುದ್ದಿಗೋಷ್ಠಿ ನಡೆಯಿತು. ಎಲ್ಲಾ ಸಮಸ್ಯೆ ಬಗೆಹರಿದಿದೆ. ಎಲ್ಲವನ್ನೂ ಸೌಹಾರ್ದಯುತವಾಗಿ ಇತ್ಯರ್ಥ ಮಾಡಿಕೊಂಡಿದ್ದೇವೆ ಎಂದು ಈಶ್ವರ್ ಖಂಡ್ರೆ ಹೇಳಿದ್ದಾರೆ. ಲಕ್ಷ್ಮಿ ಹೆಬ್ಬಾಳ್ಕರ್ ಮತ್ತು ಸತೀಶ್ ಜಾರಕಿಹೊಳಿ ಸುದ್ದಿಗೋಷ್ಠಿಯಲ್ಲಿ ಭಾಗಿಯಾದರೂ ಪರಸ್ಪರ ಮುಖ ನೋಡದೇ ಮಾತು ಮುಗಿಸಿದ್ರು.

     

  • ಬೆಳಗಾವಿ ಪಿಎಲ್‍ಡಿ ಬ್ಯಾಂಕ್‍ಗಿಂದು ಚುನಾವಣೆ – ಜಾರಕಿಹೊಳಿ ಬ್ರದರ್ಸ್ ಗೆ ಅಗ್ನಿಪರೀಕ್ಷೆ

    ಬೆಳಗಾವಿ ಪಿಎಲ್‍ಡಿ ಬ್ಯಾಂಕ್‍ಗಿಂದು ಚುನಾವಣೆ – ಜಾರಕಿಹೊಳಿ ಬ್ರದರ್ಸ್ ಗೆ ಅಗ್ನಿಪರೀಕ್ಷೆ

    ಬೆಳಗಾವಿ: ಇಂದು ಜಿಲ್ಲೆಯ ಪಿಎಲ್‍ಡಿ ಬ್ಯಾಂಕ್‍ಗೆ ಚುನಾವಣೆ ನಡೆಯಲಿದೆ. ಸಮ್ಮಿಶ್ರ ಸರ್ಕಾರಕ್ಕೂ ಇಂದೇ ನಿರ್ಣಾಯಕ ದಿನವಾಗಿದ್ದು, ಲಕ್ಷ್ಮಿ ಗೆದ್ದರೆ ಕುಮಾರಸ್ವಾಮಿ ಆಡಳಿತಕ್ಕೆ ಕೊನೆಗಾಲ ಎದುರಾಗ್ತಿದೆಯಾ ಅನ್ನೋ ಪ್ರಶ್ನೆಯೊಂದು ಮೂಡಿದೆ.

    ಇಂದಿನ ಪಿಎಲ್‍ಡಿ ಬ್ಯಾಂಕ್ ಚುನಾವಣೆ ಕುತೂಹಲ ಕೆರಳಿಸಿದ್ದು, ಜಾರಕಿಹೊಳಿ ಬ್ರದರ್ಸ್ ಮತ್ತು ಲಕ್ಷ್ಮಿ ಹೆಬ್ಬಾಳ್ಕರ್ ಸಮರ ಕ್ಲೈಮ್ಯಾಕ್ಸ್ ತಲುಪಿದೆ. 9 ಜನ ಪಿಎಲ್‍ಡಿ ಬ್ಯಾಂಕ್ ನಿರ್ದೇಶಕರನ್ನು ಹೊಂದಿರುವ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್, ಅಧ್ಯಕ್ಷ ಸ್ಥಾನಕ್ಕೆ ತಮ್ಮ ಬೆಂಬಲಿಗರನ್ನೇ ಕೂರಿಸಲು ಹಠ ಹಿಡಿದಿದ್ದಾರೆ. ಎಲ್ಲ ಬೆಂಬಲಿತ ಪಿಎಲ್‍ಡಿ ಬ್ಯಾಂಕ್ ನಿರ್ದೇಶಕರಿಗೆ ಪೊಲೀಸ್ ರಕ್ಷಣೆಗೆ ಮನವಿ ಮಾಡಿಕೊಂಡಿದ್ದಾರೆ. ಇದನ್ನೂ ಓದಿ: ಲಕ್ಷ್ಮಿ ಹೆಬ್ಬಾಳ್ಕರ್ – ಜಾರಕಿಹೊಳಿ ಕಗ್ಗಂಟು ಬಿಡಿಸಲು ಕಾಂಗ್ರೆಸ್ ಹೈಕಮಾಂಡ್ ಎಂಟ್ರಿ!

    ಚುನಾವಣೆ ಪ್ರಕ್ರಿಯೆಯನ್ನು ವಿಡಿಯೋ ಚಿತ್ರಣ ಮಾಡಿಸಬೇಕೆಂದು ಜಿಲ್ಲಾಡಳಿತಕ್ಕೆ ಬೇಡಿಕೆ ಇಡಲಾಗಿದ್ದು, ಈಗಾಗಲೇ ಹೆಬ್ಬಾಳ್ಕರ್ ಬಣಕ್ಕೆ ನಾಮನಿರ್ದೇಶಿತ ಸದಸ್ಯ ಮಹಾದೇವ್ ಪಾಟೀಲ್ ಬೆಂಬಲ ಸೂಚಿಸಿದ್ದಾರೆ. ಇತ್ತ ಜಾರಕಿಹೊಳಿ ಸಹೋದರರು ತಮ್ಮದೇ ದಾಳ ಉರುಳಿಸಿದ್ದು, ಕಾನೂನು ಸುವ್ಯವಸ್ಥೆ ಹಾಳಾಗಬಹುದು. ಚುನಾವಣೆಯನ್ನೇ ಮುಂದೂಡಿ ಎಂದು ಜಿಲ್ಲಾಡಳಿತಕ್ಕೆ ಮನವಿ ಮಾಡಿಕೊಂಡಿದ್ದಾರೆ. ಬೆಂಬಲಿಗರನ್ನು ತಮ್ಮ ಬಳಿಯೇ ಉಳಿಸಿಕೊಂಡು ನೇರವಾಗಿ ಚುನಾವಣಾ ಸ್ಥಳಕ್ಕೆ ಕರೆದೊಯ್ಯಲು ವ್ಯವಸ್ಥೆ ಮಾಡಲಾಗಿದೆ. ಒಟ್ಟಿನಲ್ಲಿ ಗೆಲುವಿಗಾಗಿ ಎರಡು ಬಣದಿಂದ ಕೊನೆಗಳಿಗೆವರೆಗೆ ಶತ ಪ್ರಯತ್ನ ನಡೆಯಲಿದೆ.

    ಮಹಾರಾಷ್ಟ್ರದ ಅಂಬೋಲಿ ಬಳಿಯ ರೆಸಾರ್ಟ್ ನಲ್ಲಿ ಲಕ್ಷ್ಮಿ ಹೆಬ್ಬಾಳ್ಕರ್ ಪಟಾಲಂ ಬೀಡುಬಿಟ್ಟಿದೆ. ಇಂದು ಬೆಳಗ್ಗೆ ಸದಸ್ಯರು ಲಕ್ಷ್ಮಿ ಹೆಬ್ಬಾಳ್ಕರ್ ಭೇಟಿ ಬಳಿಕ ಬ್ಯಾಂಕ್‍ಗೆ ಆಗಮಿಸಲಿದ್ದಾರೆ. ಲಕ್ಷ್ಮಿ ಹೆಬ್ಬಾಳ್ಕರ್ ಸಹೋದರ ಚನ್ನರಾಜ್ ಹಟ್ಟಿಹೊಳಿ ಸಂಪರ್ಕದಲ್ಲಿರುವ ಸದಸ್ಯರು ಬೇರೆ ಯಾರ ಸಂಪರ್ಕಕ್ಕೂ ಬಂದಿಲ್ಲ ಅನ್ನೋ ಮಾಹಿತಿ ಪಬ್ಲಿಕ್ ಟಿವಿಗೆ ಉನ್ನತ ಮೂಲಗಳಿಂದ ತಿಳಿದುಬಂದಿದೆ. ಇದನ್ನೂ ಓದಿ: ಯಾವುದೇ ಕಾರಣಕ್ಕೂ ಕ್ಷಮಿಸಲ್ಲ-ರಮೇಶ್ ಜಾರಕಿಹೊಳಿ ವಿರುದ್ಧ ಡಿಕೆಶಿ ಕೆಂಡಾಮಂಡಲ!


    ಎಷ್ಟೇ ಎದುರಾಳಿಗಳು ಬಂದ್ರೂ ಕೂಡ ಮೆಟ್ಟಿ ನಿಂತಾಗ ಮಾತ್ರ ನಾಯಕರಾಗಲು ಸಾಧ್ಯ ಅಂತ ಬೆಳಗಾವಿ ಜಾರಕಿಹೊಳಿ ಬ್ರದರ್ಸ್ ವಿರುದ್ಧ ಕಾಂಗ್ರೆಸ್ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಗುಡುಗಿದ್ದಾರೆ. ರಾಜಕೀಯದಲ್ಲಿ ಇದೆಲ್ಲಾ ಸಹಜ, ಕಷ್ಟ ಬಂದಾಗ ಹೋರಾಟ ಮಾಡ್ಬೇಕು. ಒಂದೇ ಒಂದು ಹೆಜ್ಜೆ ಹಿಂದೆ ಇಡಲ್ಲ. ಏನೇ ಪರಿಸ್ಥಿತಿ ಬರಲಿ ಏನು ಬೇಕಾದ್ರೂ ಆಗ್ಲಿ. ಸಮಾಜದಲ್ಲಿ ಶಿಕ್ಷಕರಿಗೆ ಹೆದರಿದಷ್ಟು ಬೇರೆ ಯಾರಿಗೂ ಹೆದರಿಲ್ಲ. ಶಿಕ್ಷಕರ ಎದುರು ನಾನು ನಡುಗುತ್ತಿದ್ದೆ. ಇಂದು ಇಡೀ ಸಭಾಂಗಣವನ್ನೇ ನಡುಗಿಸುತ್ತೇನೆ. ನನಗೆ ಬೆಂಬಲ ಇದೆ. ಗೆಲುವು ನನ್ನದೇ ಅಂತ ಹೆಬ್ಬಾಳ್ಕರ್ ಹೇಳಿದ್ದಾರೆ. ಇದನ್ನೂ ಓದಿ: ಲಕ್ಷ್ಮೀ ಹೆಬ್ಬಾಳ್ಕರ್ ನ ಹದ್ದು ಬಸ್ತುನಲ್ಲಿ ಇಡದಿದ್ದರೇ, ಉಗ್ರ ಕ್ರಮ ಕೈಗೊಳ್ತೀವಿ: ರಮೇಶ್ ಜಾರಕಿಹೊಳಿ

    ಲಕ್ಷ್ಮೀ ಹೆಬ್ಬಾಳ್ಕರ್ ಹಾಗೂ ಜಾರಕಿಹೊಳಿ ಬ್ರದರ್ಸ್ ಬಣದಲ್ಲಿ ಯಾರ್ಯಾರು ಇದ್ದಾರೆ?
    ಲಕ್ಷ್ಮಿ ಹೆಬ್ಬಾಳ್ಕರ್ ಬಣ
    1. ಮಹಾಂತೇಶ ಪಾಟೀಲ್
    2. ಮುಷಪ್ಪ ಹಟ್ಟಿ
    3. ಬಾಪುಸಾಹೇಬ್ ಜಮಾದಾರ್
    4. ಚಿದಂಬರ ಕುಡಚಿ
    5. ಬಾಪುಗೌಡ ಪಾಟೀಲ್
    6. ಪರುಶರಾಮ ಪಾಟೀಲ್
    7. ಮಹಾದೇವ ಪಾಟೀಲ್
    8. ರೇಖಾ ಕುತ್ರೆ
    9. ಗೀತಾ ಪಿಂಗಟ್

    ಸತೀಶ ಜಾರಕಿಹೊಳಿ ಬಣ
    1. ರಾಮಪ್ಪ ಗೋಳಿ
    2. ಪ್ರಸಾದ ಪಾಟೀಲ
    3. ಸಚಿನ್ ಕೋಲಾರ
    4. ಶಂಕರ್ ನಾವಗೇಕರ್
    5. ಮಹಾಂತೇಶ್ ಉಳ್ಳಾಗಡ್ಡಿ

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಲಕ್ಷ್ಮಿ ಹೆಬ್ಬಾಳ್ಕರ್ – ಜಾರಕಿಹೊಳಿ ಕಗ್ಗಂಟು ಬಿಡಿಸಲು ಕಾಂಗ್ರೆಸ್ ಹೈಕಮಾಂಡ್ ಎಂಟ್ರಿ!

    ಲಕ್ಷ್ಮಿ ಹೆಬ್ಬಾಳ್ಕರ್ – ಜಾರಕಿಹೊಳಿ ಕಗ್ಗಂಟು ಬಿಡಿಸಲು ಕಾಂಗ್ರೆಸ್ ಹೈಕಮಾಂಡ್ ಎಂಟ್ರಿ!

    ಬೆಂಗಳೂರು: ಬೆಳಗಾವಿ ಕೈ ನಾಯಕರ ನಡುವಿನ ಸಮರಕ್ಕೆ ಕಾರಣವಾದ ಪಿಎಲ್‍ಡಿ ಚುನಾವಣೆ ಸಮಸ್ಯೆ ಬಗೆಹರಿಸಲು ಕಾಂಗ್ರೆಸ್ ಹೈಕಮಾಂಡ್ ಕಣಕ್ಕೆ ಇಳಿದಿದ್ದು, ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಹೆಗಲಿಗೆ ಜವಾಬ್ದಾರಿ ನೀಡಿದೆ.

    ಬೆಳಗಾವಿ ಪಿಎಲ್‍ಡಿ ಬ್ಯಾಂಕ್ ಚುನಾವಣೆ ಕಾಂಗ್ರೆಸ್‍ನ ಎರಡು ಬಣಗಳ ನಡುವೆ ಪ್ರತಿಷ್ಠೆಯ ಸಮಸ್ಯೆಯಾಗಿ ಪರಿವರ್ತನೆಯಾಗಿದ್ದು, ಈ ಕುರಿತು ಮಾಹಿತಿ ಪಡೆದಿರುವ ಹೈಕಮಾಂಡ್ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಅವರನ್ನು ಬೆಳಗಾವಿಗೆ ಭೇಟಿ ನೀಡಲು ತಿಳಿಸಿದೆ. ಅಲ್ಲದೇ ಶುಕ್ರವಾರ ನಡೆಯಲಿರುವ ಪಿಎಲ್‍ಡಿ ಬ್ಯಾಂಕ್ ಅಧ್ಯಕ್ಷರ ಆಯ್ಕೆ ಸಂದರ್ಭದಲ್ಲಿ ಸ್ವತಃ ಈಶ್ವರ್ ಖಂಡ್ರೆ ಬೆಳಗಾವಿಯಲ್ಲಿ ಇರಲಿದ್ದಾರೆ.

    ಚುನಾವಣೆಯ ಬಳಿಕ ಜಾರಕಿಹೊಳಿ ಸಹೋದರರು ಹಾಗೂ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಬಣಗಳ ನಡುವೆ ಈಶ್ವರ್ ಖಂಡ್ರೆ ಮಾತುಕತೆ ನಡೆಸಲಿದ್ದಾರೆ. ಇನ್ನು ರಾಜ್ಯ ರಾಜಕಾರಣದಲ್ಲಿ ಭಾರೀ ಚರ್ಚೆಗೆ ಕಾರಣವಾಗಿರುವ ಈ ಚುನಾವಣೆ ಸಮ್ಮಿಶ್ರ ಸರ್ಕಾರದ ಅಳಿವು ಉಳಿವಿನ ಮೇಲೆ ಪ್ರಭಾವ ಬೀರಲಿದೆ ಎಂದೇ ಬಿಂಬಿತವಾಗುತ್ತಿದೆ.

    ಬೆಳಗಾವಿ ನಗರದ ಮಾಧವಾ ರಸ್ತೆಯಲ್ಲಿರುವ ಬೆಳಗಾವಿ ತಾಲೂಕು ಪ್ರಾಥಮಿಕ ಸಹಕಾರಿ ಹಾಗೂ ಗ್ರಾಮೀಣಾಭಿವೃದ್ಧಿ ಬ್ಯಾಂಕ್ ಚುನಾವಣೆಗೆ ತಾಲೂಕು ಆಡಳಿತ ಸಕಲ ಸಿದ್ಧತೆಗಳನ್ನು ಪೂರ್ಣಗೊಳಿಸಿದೆ. ಶುಕ್ರವಾರ ಬೆಳಿಗ್ಗೆ 10 ಗಂಟೆಗೆ ಬ್ಯಾಂಕಿನ ಸದಸ್ಯರು ಬ್ಯಾಂಕ್ ಕಚೇರಿಗೆ ಆಗಮಿಸಲಿದ್ದು, ಬಳಿಕ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಹುದ್ದೆಗೆ ನಾಮಪತ್ರ ಸಲ್ಲಿಕೆ ಆಗಲಿದೆ. ನಾಮಪತ್ರ ಸಲ್ಲಿಕೆಯಾದ 2 ಗಂಟೆ ಬಳಿಕ ಪರಿಶೀಲನೆ ನಡೆಯಲಿದ್ದು ಅಲ್ಲಿವರೆಗೂ ನಾಮಪತ್ರ ಹಿಂಪಡೆಯಲು ಕಾಲಾವಕಾಶ ನೀಡಲಾಗುತ್ತದೆ. ಇದನ್ನೂ ಓದಿ: ಯಾವುದೇ ಕಾರಣಕ್ಕೂ ಕ್ಷಮಿಸಲ್ಲ-ರಮೇಶ್ ಜಾರಕಿಹೊಳಿ ವಿರುದ್ಧ ಡಿಕೆಶಿ ಕೆಂಡಾಮಂಡಲ!

    ಮಧ್ಯಾಹ್ನ 1 ಗಂಟೆಗೆ ಚುನಾವಣೆ ನಡೆಯಲಿದ್ದು, 2 ಗಂಟೆ ಸುಮಾರಿಗೆ ಚುನಾವಣಾ ಫಲಿತಾಂಶ ಹೊರಬೀಳಲಿದೆ. ಚುನಾವಣೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಸಿಸಿಟಿವಿ ಅಳವಡಿಕೆ ಹಾಗೂ ಪೊಲೀಸರ ನಿಯೋಜನೆಯನ್ನು ಕೂಡ ಮಾಡಲಾಗಿದೆ.

    ಸದ್ಯ ಇಡೀ ರಾಜ್ಯದ ಚಿತ್ತ ಬೆಳಗಾವಿ ಪಿಎಲ್‍ಡಿ ಬ್ಯಾಂಕ್ ಚುನಾವಣೆ ಮೇಲೆ ನೆಟ್ಟಿದ್ದು, ನಾಳೆ ಮಧ್ಯಾಹ್ನ ಜಾರಕಿಹೊಳಿ ಸಹೋದರರ ಬಣಕ್ಕೆ ಜಯ ಲಭಿಸುತ್ತಾ ಅಥವಾ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ವಿಜಯ ಮಾಲೆ ಸಿಗುತ್ತಾ ಎಂಬ ಕೂತುಹಲಕ್ಕೆ ತೆರೆ ಬೀಳಲಿದೆ.  ಇದನ್ನೂ ಓದಿ: ಲಕ್ಷ್ಮೀ ಹೆಬ್ಬಾಳ್ಕರ್ ನ ಹದ್ದು ಬಸ್ತುನಲ್ಲಿ ಇಡದಿದ್ದರೇ, ಉಗ್ರ ಕ್ರಮ ಕೈಗೊಳ್ತೀವಿ: ರಮೇಶ್ ಜಾರಕಿಹೊಳಿ

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಪಿಎಲ್‍ಡಿ ಬ್ಯಾಂಕ್ ಚುನಾವಣೆ: ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಜಾರಕಿಹೊಳಿ ಸಹೋದರರು ಗರಂ

    ಪಿಎಲ್‍ಡಿ ಬ್ಯಾಂಕ್ ಚುನಾವಣೆ: ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಜಾರಕಿಹೊಳಿ ಸಹೋದರರು ಗರಂ

    ಬೆಳಗಾವಿ: 20 ವರ್ಷಗಳಿಂದ ಲಕ್ಷ್ಮಿ ಹೆಬ್ಬಾಳ್ಕರ್ ಅವರನ್ನು ಜಾರಕಿಹೊಳಿ ಕುಟುಂಬ ಬೆಳೆಸಿದೆ. ಶಾಸಕರಾದ ಮೇಲೆ ಜಾತಿ ನೆಪ ಹೇಳುವುದು ಸರಿಯಲ್ಲ. ಸಂಖ್ಯೆ ಬಹಳಷ್ಟು ದಿನ ಉಳಿಯಲ್ಲ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಕೆಲಸ ಮಾಡಬೇಕು ಎಂದು ಮಾಜಿ ಸಚಿವ ಸತೀಶ್ ಜಾರಕಿಹೊಳಿ, ಲಕ್ಷ್ಮಿ ಹೆಬ್ಬಾಳ್ಕರ್ ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

    ಪಿಎಲ್‍ಡಿ ಬ್ಯಾಂಕಿನ ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆ ಹಿನ್ನಲೆ ಅಹೋರಾತ್ರಿ ಪ್ರತಿಭಟನೆ ಕೈಗೊಂಡಿದ್ದ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ವಾಗ್ದಾಳಿ ನಡೆಸಿದ ಮಾಜಿ ಸಚಿವರು, ಪಿಎಲ್‍ಡಿ ಬ್ಯಾಂಕಿಗೆ 20 ವರ್ಷದಿಂದ ರಾಜಕೀಯ ಮುಕ್ತ ಚುನಾವಣೆ ನಡೆಯುತ್ತಿತ್ತು. ಸಚಿವರು, ಶಾಸಕರು ಯಾರೊಬ್ಬರು ಪಾಲ್ಗೊಂಡಿರಲಿಲ್ಲ. ಆದರೆ ಲಕ್ಷ್ಮಿ ಹೆಬ್ಬಾಳ್ಕರ್ ನಿರ್ದೇಶಕರಿಗೆ ಆಮಿಷವೊಡ್ಡಿದ್ದಾರೆ ಹಾಗೂ ಗುಂಪುಗಾರಿಕೆ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

    ಈ ಹಿಂದಿನ ಪದ್ಧತಿಯಲ್ಲಿ ಚುನಾವಣೆ ನಡೆಸಲು ನಮ್ಮದು ಸಲಹೆ ಇದೆ. ಅವಿರೋಧವಾಗಿ ಆಯ್ಕೆ ಆಗಿರುವವರು ಶಾಸಕಿ ಹೆಬ್ಬಾಳ್ಕರ್ ಜೊತೆಗೆ ಹೋಗಿದ್ದಾರೆ. ಎಲ್ಲರೂ ಸೇರಿ ಕೆಲಸ ಮಾಡುವ ನಿರೀಕ್ಷೆ ಹೊಂದಿದ್ದೇವು. ಆದರೆ ಇದು ಹುಸಿಯಾಗಿದೆ. ಚುನಾವಣೆ ಮುಂದೂಡಿಕೆ ಚುನಾವಣಾ ಅಧಿಕಾರಿಗೆ ಅಧಿಕಾರವಿದೆ. ಪ್ರತಿಭಟನೆಯಿಂದ ಯಾವುದೇ ಪ್ರಯೋಜವಿಲ್ಲ ಎಂದ ಅವರು, ಒಂದೇ ಪಕ್ಷದಲ್ಲಿ ಇದ್ದರೂ ಗುಂಪುಗಾರಿಕೆ ಮಾಡುವುದು ಸಹಜವಾಗಿದೆ. ಈಗಲೂ ಕಾಲ ಮಿಂಚಿಲ್ಲ ಎಲ್ಲರನ್ನೂ ಒಮ್ಮತದಿಂದ ಕರೆದುಕೊಂಡು ಹೋದರೆ ಸ್ವಾಗತ ಎಂದು ಎಚ್ಚರಿಕೆ ನೀಡಿದರು. ಇದನ್ನು ಓದಿ: ಬೆಳಗಾವಿಯಲ್ಲಿ ಮಿಡ್‍ನೈಟ್ ಹೈಡ್ರಾಮಾ – ಪಿಎಲ್‍ಡಿ ಬ್ಯಾಂಕ್ ಎಲೆಕ್ಷನ್ ಮುಂದೂಡಿಕೆ ರಾಜಕೀಯ

    ಮೊದಲ ಭಾರಿ ಗೆದ್ದು, ಈಗ ಮೆರೆಯುತ್ತಿರುವುದು ಸರಿಯಲ್ಲ ಎಂದು ಪೌರಾಡಳಿತ ಸಚಿವ ರಮೇಶ್ ಜಾರಕಿಹೊಳಿ, ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಗೆ ಎಚ್ಚರಿಕೆ ನೀಡಿದ್ದಾರೆ. ಪಿಎಲ್‍ಡಿ ಬ್ಯಾಂಕ್ ಚುನಾವಣೆ ವಿಚಾರದಲ್ಲಿ ರಾಜಕೀಯ ಸರಿಯಲ್ಲ. ಅಧಿಕಾರಿಗಳ ಸಭೆ ನಡೆಸಿ ಮುಂದಿನ ತೀರ್ಮಾನ ತೆಗೆದುಕೊಳ್ಳುತ್ತೇನೆ ಎಂದು ಸ್ಪಷ್ಟನೆ ನೀಡಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv