Tag: PM Naredra Modi

  • ವಿಶ್ವದ ನಂ.1 ಚೆಸ್ ಆಟಗಾರನ ವಿರುದ್ಧ ಗೆಲುವು – ಮೋದಿಯಿಂದ ಪ್ರಜ್ಞಾನಂದನಿಗೆ ಅಭಿನಂದನೆ

    ವಿಶ್ವದ ನಂ.1 ಚೆಸ್ ಆಟಗಾರನ ವಿರುದ್ಧ ಗೆಲುವು – ಮೋದಿಯಿಂದ ಪ್ರಜ್ಞಾನಂದನಿಗೆ ಅಭಿನಂದನೆ

    ನವದೆಹಲಿ: ವಿಶ್ವ ಚಾಂಪಿಯನ್ ಮ್ಯಾಗ್ನಸ್ ಕಾರ್ಲ್‍ಸೆನ್ ವಿರುದ್ಧ ಗೆದ್ದ 16 ವರ್ಷದ ಆರ್ ಪ್ರಜ್ಞಾನಂದನನ್ನು ಪ್ರಧಾನಿ ಮೋದಿ ಅಭಿನಂದಿಸಿದ್ದಾರೆ.

    ಯುವ ಪ್ರತಿಭೆ ಆರ್ ಪ್ರಜ್ಞಾನಂದ ಅವರ ಯಶಸ್ಸಿನ ಬಗ್ಗೆ ನಾವೆಲ್ಲರೂ ಸಂತೋಷಪಡುತ್ತಿದ್ದೇವೆ. ಹೆಸರಾಂತ ಚಾಂಪಿಯನ್ ಮ್ಯಾಗ್ನಸ್ ಕಾರ್ಲ್‍ಸೆನ್ ವಿರುದ್ಧ ಜಯಗಳಿಸಿದ ಅವರ ಸಾಧನೆಯ ಬಗ್ಗೆ ಹೆಮ್ಮೆಯಿದೆ. ಪ್ರತಿಭಾವಂತ ಪ್ರಜ್ಞಾನಂದ ಅವರ ಭವಿಷ್ಯದ ಪ್ರಯತ್ನಗಳಿಗೆ ನಾನು ಶುಭ ಹಾರೈಸುತ್ತೇನೆ ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ. ಇದನ್ನೂ ಓದಿ: ವಿಶ್ವದ ನಂ.1 ಚೆಸ್ ಆಟಗಾರನಿಗೆ ಶಾಕ್ ಕೊಟ್ಟ 16ರ ಭಾರತೀಯ ಬಾಲಕ

    16 ವರ್ಷ ವಯಸ್ಸಿನ ಭಾರತೀಯ ಗ್ರ್ಯಾಂಡ್‍ಮಾಸ್ಟರ್ ಆರ್ ಪ್ರಜ್ಞಾನಂದ ಅವರು ಆನ್‍ಲೈನ್ ಮೂಲಕ ನಡೆಯುತ್ತಿರುವ ಚೆಸ್ ರ್ಯಾಪಿಡ್ ಪಂದ್ಯಾವಳಿಯ ಏರ್‍ಥಿಂಗ್ಸ್ ಮಾಸ್ಟರ್ಸ್‍ನಲ್ಲಿ ನಾಕೌಟ್‍ಗೆ ಅರ್ಹತೆ ಪಡೆಯುವಲ್ಲಿ ವಿಫಲರಾಗಿದ್ದಾರೆ. ಅವರು ಅಂಕಪಟ್ಟಿಯಲ್ಲಿ 11 ನೇ ಸ್ಥಾನದಲ್ಲಿದ್ದು, ರೌಂಡ್-ರಾಬಿನ್ ಹಂತದಿಂದ ಕೇವಲ ಎಂಟು ಮಂದಿ ಮಾತ್ರ ನಾಕೌಟ್‍ಗೆ ಅರ್ಹತೆ ಪಡೆದಿದ್ದಾರೆ. ಇದನ್ನೂ ಓದಿ: ಆರ್​ಸಿಬಿಯಲ್ಲಿ K.G.F ಸ್ಟಾರ್ಸ್

    ಕಾರ್ಲಸೆನ್‍ರ ಸತತ ಮೂರು ಗೆಲುವಿನ ಓಟವನ್ನು ನಿಲ್ಲಿಸಲು ಸೋಮವಾರದ ಆರಂಭದಲ್ಲಿ ನಡೆದ ಟಾರ್ರಾಸ್ಚ್ ವಿಭಾಗದ 8ನೇ ಸುತ್ತಿನ ಆಟದಲ್ಲಿ ಪ್ರಜ್ಞಾನಂದ ಅವರು 39 ನಡೆಗಳಲ್ಲಿ ಕಪ್ಪು ಕಾಯಿಗಳೊಂದಿಗೆ ಗೆದ್ದಿದ್ದರು.

    ಪ್ರಜ್ಞಾನಂದ ಅವರು ಪಂದ್ಯಾವಳಿಯ 10 ಮತ್ತು 12ರ ಸುತ್ತುಗಳಲ್ಲಿ ಆಂಡ್ರೆ ಎಸಿಪೆಂಕೊ ಮತ್ತು ಅಲೆಕ್ಸಾಂಡ್ರಾ ಕೊಸ್ಟೆನಿಯುಕ್ ವಿರುದ್ಧ ಇನ್ನೂ ಎರಡು ವಿಜಯಗಳನ್ನು ದಾಖಲಿಸಿದರು. ಆದರೆ ಮಂಗಳವಾರ ಅವರು ನೋಡಿರ್ಬೆಕ್ ಅಬ್ದುಸತ್ತೊರೊವ್ ವಿರುದ್ಧದ ಪಂದ್ಯವನ್ನು ಡ್ರಾ ಮಾಡಿಕೊಳ್ಳುವ ಮೂಲಕ ಟೂರ್ನಿಯಿಂದ ಹೊರಬಿದ್ದಿದ್ದಾರೆ.

  • 71ನೇ ಗಣರಾಜ್ಯೋತ್ಸವ- ರಾಷ್ಟ್ರಪತಿಯಿಂದ ಧ್ವಜಾರೋಹಣ

    71ನೇ ಗಣರಾಜ್ಯೋತ್ಸವ- ರಾಷ್ಟ್ರಪತಿಯಿಂದ ಧ್ವಜಾರೋಹಣ

    ನವದೆಹಲಿ: 71ನೇ ಗಣರಾಜ್ಯೋತ್ಸವದ ಅಂಗವಾಗಿ ದೆಹಲಿಯ ರಾಜ್‍ಪಥ್‍ನಲ್ಲಿ ಇಂದು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಧ್ವಜಾರೋಹಣ ನೆರವೇರಿಸಿದರು. ಈ ಬಾರಿಯ ಗಣತಂತ್ರ ಹಬ್ಬಕ್ಕೆ ಬ್ರೆಜಿಲ್‍ನ ಅಧ್ಯಕ್ಷ ಜೈರ್ ಬೋಲ್ಸೋನಾರೊ ಮುಖ್ಯ ಅತಿಥಿಯಾಗಿ ಆಗಮಿಸಿದ್ದಾರೆ.

    ಅಮರ್ ಜವಾನ್ ಜ್ಯೋತಿ ಬಳಿ ಭಾರತದ ಹೆಮ್ಮೆಯಾಗಿರುವ ಮೂರು ಸೇನಾ ಪಡೆಗಳ ಮುಖ್ಯಸ್ಥರ ಉಪಸ್ಥಿತಿ ಇದ್ದು, ಮೊದಲ ಬಾರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಇಂಡಿಯಾ ಗೇಟ್ ಬಳಿ ಇರುವ ‘ಯುದ್ಧ ಸ್ಮಾರಕ’ಕ್ಕೆ ದೇಶಕ್ಕಾಗಿ ಜೀವವನ್ನೇ ಮುಡಿಪಾಗಿಟ್ಟ ಯೋಧರಿಗೆ ಪುಷ್ಪ ನಮನ ಸಲ್ಲಿಸಿ, ಎರಡು ನಿಮಿಷ ಹುತಾತ್ಮರಾಗಿರುವರ ಆತ್ಮಕ್ಕೆ ಶಾಂತಿ ದೊರಕಲೆಂದು ಮೌನಾಚರಣೆ ಮಾಡಿದರು. ಹಾಗೆಯೇ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಕೂಡ ಅಮರರಾದ ಭಾರತದ ಯೋಧರಿಗೆ ನಮನ ಸಲ್ಲಿಸಿದರು.

    ರಾಜ್‍ಪಥ್‍ಗೆ ಆಗಮಿಸಿದ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಹಾಗೂ ಮುಖ್ಯ ಅತಿಥಿ ಬ್ರೆಜಿಲ್‍ನ ಅಧ್ಯಕ್ಷ ಜೈರ್ ಬೋಲ್ಸೋನಾರೊ ಅವರನ್ನು ಪ್ರಧಾನ ಮಂತ್ರಿಯವರು ಸ್ವಾಗತಿಸಿದರು. ಬಳಿಕ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಧ್ವಜಾರೋಹಣ ನೆರವೇರಿಸಿದರು. ಈ ವೇಳೆ 21 ಕುಶಾಲತೋಪು ಸಿಡಿಸಿ ರಾಷ್ಟ್ರ ಧ್ವಜಕ್ಕೆ ಹಾಗೂ ಭಾರತಾಂಭೆಗೆ ಸೇನಾ ಗೌರವ ಸಲ್ಲಿಸಲಾಯಿತು.

    ಲೆಫ್ಟಿನೆಂಟ್ ಜನರಲ್ ಅಸಿತ್ ಮಿಸ್ತ್ರಿ ಅವರ ನೇತೃತ್ವದಲ್ಲಿ ಪಥಸಂಚಲನ ನಡೆಯಿತು. ಇದೇ ವೇಳೆ ಮಿಗ್ 17 ಹೆಲಿಕಾಪ್ಟರ್ ಗಳು ಧ್ವಜವಂಧನೆ ಸಲ್ಲಿಸಲಾಯಿತು. ಈ ಪಥಸಂಚಲದಲ್ಲಿ ಸೇನಾ ಚಕ್ರ ಪಡೆದಿರುವ ಯೋಧರ ಶಿಸ್ತಿನ ಪರೇಡ್ ಬಳಿಕ ಅಶ್ವದಳ, ಒಂಟೆದಳ ಪಥಸಂಚಲನ ನಡೆಯಿತು. ನಂತರ ಅರ್ಜುನ್ ಟಿ-90 ಭೀಷ್ಮ ಟ್ಯಾಂಕ್, ಗಡಿಪ್ರತಿರೋಧಿ ವಾಹನ ಪ್ರದರ್ಶಿಸಲಾಯಿತು. ಹಾಗೆಯೇ ಕೆ-9 ವಜ್ರ ಟ್ಯಾಂಕ್, ಧನುಷ್ ಗನ್ ವ್ಯವಸ್ಥೆಯ ಪ್ರದರ್ಶನ, ಅಲ್ಪಾವಧಿಯ ಸೇತುವೆ ವ್ಯವಸ್ಥೆಯ ಪ್ರದರ್ಶನ, ಕೊಂಡೊಯ್ಯಬಹುದಾದ ಸ್ಯಾಟಲೈಟ್ ಟರ್ಮಿನಲ್, ಆಕಾಶ್ ಕ್ಷಿಪಣಿ ವ್ಯವಸ್ಥೆ ಪಥಸಂಚಲದಲ್ಲಿ ಪ್ರದರ್ಶನಗೊಂಡಿತು.

  • ಪ್ರಧಾನಿ ಮೋದಿಗೆ ಲೋಕಸಭೆ ಅಧಿವೇಶನದಲ್ಲೇ ಉತ್ತರ ಕೊಡ್ತೀನಿ: ಎಚ್‍ಡಿಡಿ

    ಪ್ರಧಾನಿ ಮೋದಿಗೆ ಲೋಕಸಭೆ ಅಧಿವೇಶನದಲ್ಲೇ ಉತ್ತರ ಕೊಡ್ತೀನಿ: ಎಚ್‍ಡಿಡಿ

    ಬೆಂಗಳೂರು: ಮಣ್ಣಿನ ಮಗ ಏನು ಮಾಡಿದ್ದಾರೆಂದು ಪ್ರಶ್ನಿಸಿರುವ ಪ್ರಧಾನಿ ಮೋದಿ ಅವರಿಗೆ ಲೋಕಸಭಾ ಅಧಿವೇಶನದಲ್ಲಿಯೇ ಉತ್ತರ ಕೊಡುತ್ತೇನೆ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಹೇಳಿದ್ದಾರೆ.

    ಪದ್ಮನಾಭನಗರದ ನಿವಾಸದ ಬಳಿ ಮಾತನಾಡಿದ ಅವರು, ನನ್ನ ಬಗ್ಗೆ ಪ್ರಧಾನಿ ಮೋದಿ ಲಘುವಾಗಿ ಮಾತಾಡಿದ್ದಾರೆ. ಇದಕ್ಕೆ ಉತ್ತರ ಕೊಡುವುದಕ್ಕಾಗಿಯೇ ನಾನು ದೆಹಲಿಗೆ ಹೋಗುತ್ತಿರುವೆ. ನಾನು 50 ವರ್ಷ ಏನ್ ಮಾಡಿದ್ದೇನೆ ಎನ್ನುವುದನ್ನು ಸಂಸತ್‍ನಲ್ಲಿ ವಿವರಿಸುತ್ತೇನೆ. ಅಧಿವೇಶನ ಮುಗಿದ ಮೇಲೆ ರಾಜ್ಯದಲ್ಲೇ ಇರುತ್ತೇನೆ ಅಂತ ತಿಳಿಸಿದರು.  ಇದನ್ನು ಓದಿ: ಲೋಕಸಭೆಯಲ್ಲಿ ಇದು ನನ್ನ ಕೊನೆ ಭಾಷಣವೂ ಆಗಬಹುದು: ಎಚ್.ಡಿ.ದೇವೇಗೌಡ

    ಆಡಿಯೋ ಬಗ್ಗೆ ತಪ್ಪು ಒಪ್ಪಿಕೊಂಡ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹೇಳಿಕೆಗೆ ಪ್ರತಿಕ್ರಿಯೆ ನೀಡಲು ಮಾಜಿ ಪ್ರಧಾನಿ ದೇವೇಗೌಡ ನಿರಾಕರಿಸಿದರು. ಆಡಿಯೋ ಬಗ್ಗೆ ನಾನು ಯಾವುದೇ ರಿಯಾಕ್ಷನ್ ಕೊಡುವುದಿಲ್ಲ. ಆಡಿಯೋ ಮಾಡಿರುವವರು ಯಾರು, ಅದಕ್ಕೆ ಯಾರು ಕಾರಣ ಇದೆಲ್ಲ ನನಗೆ ಸಂಬಂಧವಿಲ್ಲ. ನಾನು ಪ್ರತಿಕ್ರಿಯೆ ಕೊಡುವುದು ಯೋಗ್ಯವಲ್ಲ ಎಂದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv