Tag: PM Post

  • ಪ್ರಧಾನಿ ಹುದ್ದೆಗೆ ಬೆಂಬಲಿಸುವ ಆಫರ್‌ ಬಂದಿತ್ತು, ನಾನೇ ತಿರಸ್ಕರಿಸಿದೆ: ನಿತಿನ್‌ ಗಡ್ಕರಿ

    ಪ್ರಧಾನಿ ಹುದ್ದೆಗೆ ಬೆಂಬಲಿಸುವ ಆಫರ್‌ ಬಂದಿತ್ತು, ನಾನೇ ತಿರಸ್ಕರಿಸಿದೆ: ನಿತಿನ್‌ ಗಡ್ಕರಿ

    ನವದೆಹಲಿ: 2024ರ ಲೋಕಸಭಾ ಚುನಾವಣೆ (2024 Lok Sabha elections) ಸಂದರ್ಭದಲ್ಲಿ ರಾಜಕೀಯ ನಾಯಕರೊಬ್ಬರು ನನ್ನನ್ನು ಪ್ರಧಾನಿಹುದ್ದೆಗೆ ಬೆಂಬಲಿಸುವ ಭರವಸೆ ನೀಡಿದ್ದರು. ಆದರೆ ನಾನು ಆ ಆಫರ್‌ ತಿರಸ್ಕರಿದೆ ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ (Nitin Gadkari) ಬಹಿರಂಗಪಡಿಸಿದ್ದಾರೆ.

    ನಾಗ್ಪುರದ ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತಾ, ನನಗೆ ಈಗಲೂ ಒಂದು ಘಟನೆ ನೆನಪಿದೆ. ನಾನು ಯಾರ ಹೆಸರನ್ನೂ ಉಲ್ಲೇಖಿಸಲ್ಲ. ಆದ್ರೆ ಆ ವ್ಯಕ್ತಿ ʻನೀವು ಪ್ರಧಾನಿಯಾಗಲು (PM Post) ಬಯಸಿದ್ರೆ, ನಾವು ನಿಮ್ಮನ್ನು ಬೆಂಬಲಿಸುತ್ತೇವೆʼ ಎಂದು ಹೇಳಿದ್ದರು. ನಾನು ಆ ಪ್ರಸ್ತಾವನೆಯನ್ನು ತಿರಸ್ಕರಿಸಿದೆ. ಅಂತಹ ಮಹತ್ವಾಕಾಂಕ್ಷೆಯನ್ನು ಹೊಂದಿಲ್ಲವೆಂದೂ ಹೇಳಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಭಾರೀ ಮಳೆ; ತಾಜ್‌ಮಹಲ್‌ನ ಮುಖ್ಯ ಗುಂಬಜ್‌ನಲ್ಲಿ ಸೋರಿಕೆ – ವೀಡಿಯೋ ವೈರಲ್‌

    ಬಳಿಕ ನೀವು ನನ್ನನ್ನು ಏಕೆ ಬೆಂಬಲಿಸಬೇಕು? ನಾನು ನಿಮ್ಮ ಬೆಂಬಲವನ್ನು ಏಕೆ ಸ್ವೀಕರಿಸಬೇಕು? ಎಂದು ಕೇಳಿದೆ. ಪ್ರಧಾನಿಯಾಗುವುದು ನನ್ನ ಜೀವನದ ಗುರಿಯಲ್ಲ, ನಾನು ನನ್ನ ನಂಬಿಕೆಗಳಿಗೆ ಮತ್ತು ನನ್ನ ಸಂಘಟನೆಗೆ ನಿಷ್ಠನಾಗಿದ್ದೇನೆ. ಯಾವುದೇ ಹುದ್ದೆಗಾಗಿ ನನ್ನ ತತ್ವಗಳಲ್ಲಿ ರಾಜೀ ಮಾಡಿಕೊಳ್ಳುವ ಪ್ರಶ್ನೆಯೇ ಇಲ್ಲವೆಂದು ಪ್ರತಿಕ್ರಿಯೆ ನೀಡಿದ್ದಾಗಿ ಸ್ಪಷ್ಟಪಡಿಸಿದ್ದಾರೆ.

    2019 ಮತ್ತು 2024ರ ಲೋಕಸಭಾ ಚುನಾವಣೆ ವೇಳೆ ಸಂಭಾವ್ಯ ಪ್ರಧಾನಿ ಅಭ್ಯರ್ಥಿಯಾಗಿ ನಿತಿನ್‌ ಗಡ್ಕರಿ ಅವರ ಹೆಸರು ಮುನ್ನೆಲೆಗೆ ಬಂದಿತ್ತು. ಮೋದಿ ನಂತರ ಪ್ರಧಾನಿಯಾಗಲು ಅಮಿತ್‌ ಶಾ, ಯೋಗಿ ಆದಿತ್ಯನಾಥ್‌ (Yogi Adityanath) ನಂತರ ಗಡ್ಕರಿ ಅವರೇ 3ನೇ ಸ್ಥಾನದಲ್ಲಿದ್ದಾರೆ ಎಂದು ಸಮೀಕ್ಷೆಯೊಂದು ಬಹಿರಂಗಪಡಿಸಿತ್ತು. ಇದೀಗ ಇದಕ್ಕೆಲ್ಲಾ ನಿತಿನ್‌ ಗಡ್ಕರಿ ಅವರೇ ಫುಲ್‌ಸ್ಟಾಪ್‌ ಹಾಕಿದ್ದಾರೆ. ಇದನ್ನೂ ಓದಿ: ಪರ ಪುರುಷನ ಜೊತೆ ಹಾಸಿಗೆ ಹಂಚಿಕೊಳ್ಳುವಂತೆ ಕಿರುಕುಳ – ನಿರಾಕರಿಸಿದ್ದಕ್ಕೆ ಪತ್ನಿ ಕೊಂದ ಪತಿ

    ನಾಗ್ಪುರ ಲೋಕಸಭಾ ಕ್ಷೇತ್ರದಿಂದ 3 ಬಾರಿ ಗೆದ್ದಿರುವ ಗಡ್ಕರಿ ಅವರು ಬಿಜೆಪಿಯ ಪ್ರಮುಖ ನಾಯಕರಾಗಿ ಗುರುತಿಸಿಕೊಂಡಿದ್ದಾರೆ. ಆರ್‌ಎಸ್‌ಎಸ್‌ ನಾಯಕರಿಂದಲೂ ಅಪಾರ ಬೆಂಬಲ ಹೊಂದಿದ್ದಾರೆ. ಅವರು ಪ್ರಸ್ತುತ ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳಿಗೆ ಕೇಂದ್ರ ಸಚಿವರಾಗಿ ದೀರ್ಘಕಾಲ ಸೇವೆ ಸಲ್ಲಿಸುತ್ತಿದ್ದಾರೆ. ಈ ಹಿಂದೆ 2009ರಿಂದ 2013ರ ವರೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು. ಇದನ್ನೂ ಓದಿ: ನಿಗಿ ನಿಗಿ ಕೆಂಡವಾಗಿದ್ದ ನಾಗಮಂಗಲ ಶಾಂತ – ಸಚಿವ ಚಲುವರಾಯಸ್ವಾಮಿ ಶಾಂತಿಸಭೆ ಸಕ್ಸಸ್

  • ಮೋದಿ ಮತ್ತೆ ಪ್ರಧಾನಿ – ಉಚಿತ ಬಸ್ ಸೇವೆ ನೀಡಿ ಅಭಿಮಾನಿಗಳಿಂದ ಸಂಭ್ರಮ

    ಮೋದಿ ಮತ್ತೆ ಪ್ರಧಾನಿ – ಉಚಿತ ಬಸ್ ಸೇವೆ ನೀಡಿ ಅಭಿಮಾನಿಗಳಿಂದ ಸಂಭ್ರಮ

    ಮಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಎರಡನೇ ಬಾರಿಗೆ ಪ್ರಧಾನಿ ಪಟ್ಟಕ್ಕೇರುತ್ತಿರುವ ಹಿನ್ನೆಲೆಯಲ್ಲಿ ಉಚಿತ ಬಸ್ ಸೇವೆ ನೀಡಿ ಮೋದಿ ಅಭಿಮಾನಿಗಳು ಸಂಭ್ರಮಿಸಿದ್ದಾರೆ.

    ಇಂದು ಸಂಜೆ ಮೋದಿ ಮತ್ತೊಮ್ಮೆ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸುತ್ತಿದ್ದಾರೆ. ಹೀಗಾಗಿ ಮಂಗಳೂರಿನ ಕಿನ್ನಿಗೋಳಿಯ ಮೋದಿ ಅಭಿಮಾನಿಗಳು ಸಾರ್ವಜನಿಕರಿಗೆ ಉಚಿತ ಬಸ್ಸಿನ ವ್ಯವಸ್ಥೆ ಮಾಡಿದ್ದಾರೆ. ಕಿನ್ನಿಗೋಳಿ, ಮೂಡಬಿದ್ರೆ ಹಾಗೂ ಮಂಗಳೂರು ನಗರಕ್ಕೆ ಆಗಮಿಸುವ ಬಸ್ಸನ್ನು ಉಚಿತವಾಗಿ ಓಡಿಸಲು ಬುಕ್ ಮಾಡಿದ್ದಾರೆ.

    ಈ ಬಸ್ಸಿನ ಹೊರಗಡೆ ‘ಉಚಿತ ಬಸ್ ವ್ಯವಸ್ಥೆ’ಯೆಂದು ಬೋರ್ಡ್ ಹಾಕಲಾಗಿದೆ. ಈ ಮೂಲಕ ಮೋದಿ ಅಧಿಕಾರ ಸ್ವೀಕಾರದ ಹೆಸರಲ್ಲಿ ಜನಸಾಮಾನ್ಯರಿಗೆ ಉಚಿತದ ಕೊಡುಗೆ ನೀಡುತ್ತಿರುವ ಅಭಿಮಾನಿಗಳ ಕಾರ್ಯಕ್ಕೆ ಸ್ಥಳೀಯರು ಹಾಗೂ ಪ್ರಯಾಣಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

  • 26 ಕಿ.ಮೀ ದೀರ್ಘದಂಡ ನಮಸ್ಕಾರದ ಹರಕೆ ತೀರಿಸುತ್ತಿರುವ ‘ನಮೋ’ ಭಕ್ತ

    26 ಕಿ.ಮೀ ದೀರ್ಘದಂಡ ನಮಸ್ಕಾರದ ಹರಕೆ ತೀರಿಸುತ್ತಿರುವ ‘ನಮೋ’ ಭಕ್ತ

    ಬಳ್ಳಾರಿ: ಪ್ರಧಾನಿ ನರೇಂದ್ರ ಮೋದಿ ಲೋಕಸಭಾ ಚುನಾವಣೆಯಲ್ಲಿ ಗೆದ್ದ ಹಿನ್ನೆಲೆ 26 ಕಿಲೋಮೀಟರ್ ದೀರ್ಘ ದಂಡ ನಮಸ್ಕಾರ ಮಾಡುವ ಹರಕೆ ಹೊತ್ತುಕೊಂಡಿದ್ದ ನಮೋ ಅಭಿಮಾನಿಯೊಬ್ಬರು ಶ್ರದ್ಧೆಯಿಂದ ಹರಕೆ ತೀರಿಸುತ್ತಿದ್ದಾರೆ.

    ಬಳ್ಳಾರಿಯ ಹಗರಿಬೊಮ್ಮನಹಳ್ಳಿ ತಾಲೂಕಿನ ಹನಸಿ ಗ್ರಾಮದ ನಿವಾಸಿ ರಾಜಣ್ಣ ಮೋದಿ ಮತ್ತೆ ಪ್ರಧಾನಿಯಾಗಲಿ ಎಂದು ಹರಕೆ ಕಟ್ಟಿಕೊಂಡಿದ್ದರಂತೆ. ಕೊಟ್ಟೂರಿನ ಶ್ರೀಗುರುಕೊಟ್ಟೂರೇಶ್ವ ದೇವರಿಗೆ ಮತ್ತೆ ಮೋದಿ ಪ್ರಧಾನಿಯಾದರೆ ದೀರ್ಘ ದಂಡ ನಮಸ್ಕಾರ ಮಾಡುತ್ತೇನೆ ಎಂದು ಹರಕೆ ಹೊತ್ತುಕೊಂಡಿದ್ದರು. ಲೋಕಸಮರದಲ್ಲಿ ಸ್ಪಷ್ಟ ಬಹುಮತ ಪಡೆದು ಮತ್ತೆ ಪ್ರಧಾನಿ ಪಟ್ಟವನ್ನು ಮೋದಿ ಅಲಂಕರಿಸುತ್ತಿರುವ ಹಿನ್ನೆಲೆ ಇಂದು 26 ಕಿಲೋಮೀಟರ್ ವರೆಗೂ ದೀರ್ಘ ದಂಡ ನಮಸ್ಕಾರ ಮಾಡುವ ಹರಕೆಯನ್ನು ನಮೋ ಭಕ್ತ ತೀರಿಸುತ್ತಿದ್ದಾರೆ. ಇದನ್ನೂ ಓದಿ:ಪ್ರಧಾನಿಯಾಗಿ ಮೋದಿ ಪ್ರಮಾಣ ವಚನ – ರಂಗೋಲಿಯಲ್ಲಿ ಅರಳಿದ ಕಮಲ, ಮೋದಿ

    ರಾಜಣ್ಣ ಅವರಿಗೆ ಗ್ರಾಮಸ್ಥರು ಸಾಥ್ ನೀಡುತ್ತಿದ್ದಾರೆ. ಹನಸಿ ಗ್ರಾಮದಿಂದ ಕೊಟ್ಟೂರಿನ ಶ್ರೀಗುರುಕೊಟ್ಟೂರೇಶ್ವ ದೇವಸ್ಥಾನದವರೆಗೆ ಅಂದರೆ ಸುಮಾರು 26 ಕಿ.ಮೀ ದೀರ್ಘ ದಂಡ ನಮಸ್ಕಾರವನ್ನು ರಾಜಣ್ಣ ಮಾಡಿ ಹರಕೆ ತೀರಿಸಲು ಮುಂದಾಗಿದ್ದಾರೆ. ಇಂದು ಬೆಳಗ್ಗೆ 6 ಗಂಟೆಗೆ ದೇವರಿಗೆ ವಿಶೇಷ ಪೂಜೆ ಸಲ್ಲಿಸಿ ನಂತರ ದೀರ್ಘದಂಡ ನಮಸ್ಕಾರ ಮಾಡುತ್ತ ಶ್ರೀಗುರುಕೊಟ್ಟೂರೇಶ್ವರ ದೇವಸ್ಥಾನದತ್ತ ರಾಜಣ್ಣ ಸಾಗುತ್ತಿದ್ದಾರೆ. ಇದನ್ನೂ ಓದಿ:2ನೇ ಬಾರಿಗೆ ಮೋದಿ ಪ್ರಮಾಣ ವಚನ- ಅಭಿಮಾನಿಯಿಂದ ಪ್ರತಿಮೆ ವಿತರಣೆ

    ಲೋಕಸಮರದಲ್ಲಿ ಜಯಭೇರಿ ಬಾರಿಸಿ ಮತ್ತೆ ನರೇಂದ್ರ ಮೋದಿ ಅವರು ಇಂದು ಎರಡನೇ ಬಾರಿ ಪ್ರಧಾನಿ ಪಟ್ಟವನ್ನ ಅಲಂಕರಿಸಲಿದ್ದಾರೆ. ರಾಷ್ಟ್ರಪತಿ ಭವನದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಸುಮಾರು 6,500 ಮಂದಿ ಭಾಗಿಯಾಗುವ ನಿರೀಕ್ಷೆಗಳಿದ್ದು, ಕಾರ್ಯಕ್ರಮಕ್ಕೆ ಬೇಕಾದ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ. ರಾಪ್ಟ್ರಪತಿ ಹಾಗೂ ಪ್ರಧಾನಿ ತೀರ್ಮಾನದ ಹಿನ್ನೆಲೆಯಲ್ಲಿ ಸರಳವಾಗಿ ಕಾರ್ಯಕ್ರಮ ಆಯೋಜಿಸಲಾಗುತ್ತಿದೆ.

    ಪ್ರಮುಖವಾಗಿ ಕಾರ್ಯಕ್ರಮಕ್ಕೆ ಬಂಗಾಳ ಇನಿಷಿಯೇಟಿವ್ ಫಾರ್ ಮಲ್ಟಿ ಸೆಕ್ಟರಲ್ ಟೆಕ್ನಿಕಲ್ ಅಂಡ್ ಎಕನಾಮಿಕ್ ಕೋ ಆಪರೇಷನ್ (ಬಿಮ್‍ಸ್ಟಿಕ್) ಸದಸ್ಯ ರಾಷ್ಟ್ರಗಳಿಗೆ ಆಹ್ವಾನ ನೀಡಲಾಗಿದೆ. ಬಾಂಗ್ಲಾದೇಶ, ಶ್ರೀಲಂಕಾ, ಮಾಯನ್ಮಾರ, ನೇಪಾಳ, ಭೂತಾನ್, ಥೈಲ್ಯಾಂಡ್ ರಾಷ್ಟ್ರಗಳ ಗಣ್ಯರು ಸೇರಿದಂತೆ ಶಾಂಘೈ ಕೋ ಆಪರೇಷನ್ ರಾಷ್ಟ್ರಗಳ ಸದಸ್ಯರು ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.

  • ಅಧಿಕಾರದಲ್ಲಿ ಮುಂದುವರಿದಿದ್ದರೆ ಕಾಶ್ಮೀರ ಸಮಸ್ಯೆ ಎಚ್‍ಡಿಡಿಯಿಂದ ಪರಿಹಾರ ಆಗ್ತಿತ್ತು: ಪೇಜಾವರ ಶ್ರೀ

    ಅಧಿಕಾರದಲ್ಲಿ ಮುಂದುವರಿದಿದ್ದರೆ ಕಾಶ್ಮೀರ ಸಮಸ್ಯೆ ಎಚ್‍ಡಿಡಿಯಿಂದ ಪರಿಹಾರ ಆಗ್ತಿತ್ತು: ಪೇಜಾವರ ಶ್ರೀ

    ಉಡುಪಿ: ಸದಾ ಬಿಜೆಪಿ ಪರ ಮಾತನಾಡ್ತಾರೆ ಎಂದು ಟೀಕೆಗೆ ಒಳಪಡುವ ಉಡುಪಿ ಪೇಜಾವರ ಮಠದ ವಿಶ್ವೇಶತೀರ್ಥ ಸ್ವಾಮೀಜಿ ಮಾಜಿ ಪ್ರಧಾನಿ ದೇವೇಗೌಡರನ್ನು ಹಾಡಿ ಹೊಗಳಿದ್ದಾರೆ. ಕಾಶ್ಮೀರ ಸಮಸ್ಯೆ ದೊಡ್ಡ ಗೌಡರಿಂದ ಪರಿಹಾರ ಆಗುತ್ತಿತ್ತು ಎಂದು ಹೇಳಿದ್ದಾರೆ.

    ಪೇಜಾವರ ಶ್ರೀಗಳ 88ನೇ ಜನ್ಮ ನಕ್ಷತ್ರ ಕಾರ್ಯಕ್ರಮದಲ್ಲಿ ಸ್ವಾಮೀಜಿಗಳು ಮಾಜಿ ಪ್ರಧಾನಿ ದೇವೇಗೌಡರನ್ನು ಭೇಟಿಯಾಗಿದ್ದರು. ಈ ವೇಳೆ ಪರಸ್ಪರ ಆರೋಗ್ಯ ವಿಚಾರಿಸಿಕೊಂಡು, ಗೌರವಾರ್ಪಣೆ ಮಾಡಿದರು. ನಂತರ ಮಾಧ್ಯಮಗಳ ಜೊತೆ ಮಾತನಾಡಿದ ಶ್ರೀಗಳು, ರಾಷ್ಟ್ರ ರಾಜಕಾರಣದಲ್ಲಿ ದೇವೇಗೌಡರು ಅತ್ಯಂತ ಹಿರಿಯರು. ಪ್ರಧಾನ ಮಂತ್ರಿಯಾಗಿ ಉತ್ತಮ ಕೆಲಸ ಮಾಡಿದ್ದರು. ದೇವೇಗೌಡರೇ ಪ್ರಧಾನಿಯಾಗಿದ್ದರೆ ಕಾಶ್ಮೀರ ಸಮಸ್ಯೆ ಬಗೆಹರಿಯಲು ಅವಕಾಶ ಇತ್ತು ಎಂದು ಹಾಡಿ ಹೊಗಳಿದರು.

    ದೇವೇಗೌಡರಿಗೆ ಆಶೀರ್ವಾದ ಮಾಡಿದ್ದೇನೆ. ದೇವೇಗೌಡರಿಗೆ ಪ್ರಧಾನಿಯಾಗಿ ಅಧಿಕಾರ ನಡೆಸಲು ಕಡಿಮೆ ಅವಧಿ ಸಿಕ್ಕಿತ್ತು. ಆದರೆ ಗೌಡರ ಕುಟುಂಬದಿಂದ ಹೆಚ್ಚಿನ ರಾಷ್ಟ್ರಸೇವೆ ಆಗಲಿ. ನಾವಿಬ್ಬರೂ ರಾಜಕೀಯ ವಿಚಾರ ಮಾತನಾಡಿಲ್ಲ. ಗೌಡರು ಬನ್ನಂಜೆ ಗೋವಿಂದಾಚಾರ್ಯರ, ಮಧ್ವಾಚಾರ್ಯರ ಚರಿತ್ರೆ ಕುರಿತ ಪುಸ್ತಕ ಓದುತ್ತಿದ್ದಾರೆ ಎಂದು ತಿಳಿಸಿದರು.

    ಗೌಡರ ಪತ್ನಿ ಚೆನ್ನಮ್ಮ ಅತ್ಯಂತ ಸರಳಜೀವಿ ಮಹಾನ್ ದೈವಭಕ್ತೆ. ಇಬ್ಬರಿಗೂ ಯಾವ ಶ್ರೀಮಂತಿಕೆ, ಆಡಂಭರ ಇಲ್ಲ. ಅಂದೂ ಇಂದೂ ಅದೇ ತರದ ಬಟ್ಟೆ ಧರಿಸುತ್ತಾರೆ ಎಂದು ಪೇಜಾವರ ಸ್ವಾಮೀಜಿ ಭಾರೀ ಪ್ರಶಂಸೆ ವ್ಯಕ್ತಗೊಳಿಸಿದರು. ಅಲ್ಲದೆ ತುರ್ತು ಪರಿಸ್ಥಿತಿ ಕಾಲದಲ್ಲಿ ಬಹಳ ಚರ್ಚೆ ಮಾಡಿದ್ದೆವು ಎಂದು ಗೌಡರ ಜೊತೆಗಿನ ಹಳೆಯ ನೆನಪುಗಳನ್ನು ಮೆಲುಕು ಹಾಕಿದರು.

    ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ದೇವೇಗೌಡರು, ಸ್ವಾಮೀಜಿಯ ಆಶೀರ್ವಾದ ಪಡೆದಿದ್ದೇನೆ, ಅವರಿಗೆ ಶುಭ ಹಾರೈಸಿದ್ದೇನೆ. ಮೂಳೂರಲ್ಲಿ ಪಂಚಕರ್ಮ ಚಿಕಿತ್ಸೆ ಪಡೆಯುತ್ತಿದ್ದೇನೆ. ರಾಜಕೀಯವಾಗಿ ಮಾತಾಡಲ್ಲ ಎಂದು ಹೇಳಿ ತೆರಳಿದರು. ಅಲ್ಲಿಂದ ಪತ್ನಿ ಸಮೇತರಾಗಿ ಕೃಷ್ಣಮಠಕ್ಕೆ ತೆರಳಿ ಕೃಷ್ಣ ಮುಖ್ಯಪ್ರಾಣ ದೇವರ ದರ್ಶನ ಮಾಡಿ, ಪರ್ಯಾಯ ಪಲಿಮಾರು ಸ್ವಾಮೀಜಿ ಅವರನ್ನು ಭೇಟಿ ಮಾಡಿದರು.

  • ದೇಶದ ಪ್ರಧಾನಿ ಹುದ್ದೆಗೆ ರಾಹುಲ್ ಸಿದ್ಧರಾಗಿಲ್ಲ : ಕಾಂಗ್ರೆಸ್ ಮಾಜಿ ಸಚಿವ

    ದೇಶದ ಪ್ರಧಾನಿ ಹುದ್ದೆಗೆ ರಾಹುಲ್ ಸಿದ್ಧರಾಗಿಲ್ಲ : ಕಾಂಗ್ರೆಸ್ ಮಾಜಿ ಸಚಿವ

    ಕಲಬುರಗಿ: ಭಾರತದ ಪ್ರಧಾನಿಯಾಗಲು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಸೂಕ್ತವಲ್ಲ. ಅವರು ಇನ್ನೂ ಪ್ರಧಾನಿಯಾಗುವ ಮಟ್ಟಿಗೆ ಸಿದ್ಧವಾಗಿಲ್ಲ ಎಂದು ಕಾಂಗ್ರೆಸ್ ಮಾಜಿ ಸಚಿವ ಮಾಲಕರೆಡ್ಡಿ ನೀಡಿದ್ದಾರೆ.

    ಬಿಜೆಪಿ ಸೇರ್ಪಡೆ ವದಂತಿ ವಿಚಾರಕ್ಕೆ ಪ್ರತಿಕ್ರಿಯಿಸಿದ ಮಾಲಕರೆಡ್ಡಿ, ನಾನು ಕಾಂಗ್ರೆಸ್ ಬಿಡುವುದಿಲ್ಲ. ಅನಾರೋಗ್ಯದ ಕಾರಣದಿಂದ ಚುನಾವಣೆ ವಿಚಾರದಲ್ಲಿ ದೂರವಿದ್ದೇನೆ. ದೇಶದ ಪ್ರಧಾನಿ ಹುದ್ದೆಗೆ ರಾಹುಲ್ ಸೂಕ್ತವಲ್ಲ. ಅವರು ಪ್ರಧಾನಿ ಹುದ್ದೆ ನಿರ್ವಹಿಸಲು ಸಿದ್ಧರಾಗಿಲ್ಲ. ದೇಶದ ರಕ್ಷಣೆ ಮುಖ್ಯ, ಸದ್ಯ ಇರುವ ಪರಿಸ್ಥತಿಯಲ್ಲಿ ಮೋದಿ ಅವರು ದೇಶದ ರಕ್ಷಣಾ ವಿಚಾರದಲ್ಲಿ ಉತ್ತಮವಾಗಿ ಕೆಲಸ ಮಾಡಿದ್ದಾರೆ. ಈ ವಿಷಯದಲ್ಲಿ ನಾನು ಪ್ರಧಾನಿ ಮೋದಿಯನ್ನು ಬೆಂಬಲಿಸುತ್ತೆನೆ. ರಾಷ್ಟ್ರ ಮಟ್ಟದಲ್ಲಿ ರಾಜಕಾರಣ ಮಾಡಿ ಅನುಭವವಿರುವ ನಾಯಕರೇ ಮೋದಿ ನಾಯಕತ್ವವನ್ನು ಒಪ್ಪಿದ್ದಾರೆ ಎಂದು ಹೇಳಿದರು.

    ಸೋನಿಯಾ ಗಾಂಧಿ ಅವರಿಗೆ ರಾಜಕೀಯದ ಮೇಲಿದ್ದ ಜಾಣ್ಮೆ ರಾಹುಲ್ ಅವರಲ್ಲಿ ನಾನು ಕಂಡಿಲ್ಲ. ಅವರು ಇನ್ನೂ ರಾಜಕೀಯದಲ್ಲಿರುವ ಅನುಭವ ಸಾಲದು. ನಾನು ಪಕ್ಷ ಬಿಡುವ ಆಲೋಚನೆ ಮಾಡಿಲ್ಲ. ನನಗೆ ಯಾವುದೇ ಅಸಮಾಧಾನ ಇಲ್ಲ. ನಾನು ಖರ್ಗೆ ಪರ ಪ್ರಚಾರ ಮಾಡಲ್ಲ, ಪಕ್ಷದ ಪರವಾಗಿ ಪ್ರಚಾರ ಮಾಡುತ್ತೆನೆ. ಯಾಕೆಂದರೆ ಇತ್ತೀಚಿಗೆ ಕ್ಷೇತ್ರದಲ್ಲಿ ಖರ್ಗೆಯವರ ವರ್ಚಸ್ಸು ಕಡಿಮೆ ಆಗಿದೆ. ಅದಕ್ಕಾಗಿ ಖರ್ಗೆ ಆಪ್ತರು ಅವರನ್ನು ಬಿಟ್ಟು ಹೋಗುತ್ತಿದ್ದಾರೆ. ನಾನು ಖರ್ಗೆಯ ನಾಯಕತ್ವ ಸಹ ಒಪ್ಪಲ್ಲ ಎಂದು ಹೇಳುವ ಮೂಲಕ ಸ್ಥಳೀಯ ನಾಯಕತ್ವದ ಬಗ್ಗೆ ಬೇಸರ ವ್ಯಕ್ತಪಡಿಸಿದರು.