Tag: PM

  • ಪ್ರಧಾನಿ ಮೋದಿಗೆ ದಿಗ್ವಿಜಯ್ ಸಿಂಗ್ ಚಾಲೆಂಜ್

    ಪ್ರಧಾನಿ ಮೋದಿಗೆ ದಿಗ್ವಿಜಯ್ ಸಿಂಗ್ ಚಾಲೆಂಜ್

    ನವದೆಹಲಿ: ನಿಮಗೆ ಅಷ್ಟೊಂದು ಧೈರ್ಯವಿದ್ದರೆ, ದಯವಿಟ್ಟು ನನ್ನ ವಿರುದ್ಧ ಕೇಸ್ ಹಾಕಿ ಎಂದು ಕಾಂಗ್ರೆಸ್ ಹಿರಿಯ ನಾಯಕ ದಿಗ್ವಿಜಯ್ ಸಿಂಗ್ ಅವರು ಪ್ರಧಾನಿ ನರೇಂದ್ರ ಮೋದಿಯವರಿಗೆ ಸವಾಲೆಸೆದಿದ್ದಾರೆ.

    ಈ ಬಗ್ಗೆ ಟ್ವೀಟ್ ಮಾಡಿರುವ ಸಿಂಗ್, ನೀವು ಹಾಗೂ ನಿಮ್ಮ ಸಚಿವರು ನನ್ನನ್ನು ಪಾಕಿಸ್ತಾನಕ್ಕೆ ಬೆಂಬಲಿಸುವವ ಹಾಗೂ ದೇಶದ್ರೋಹಿ ಎಂದು ಹೇಳಿದ್ದೀರಿ. ನಾನು ಆ ಟ್ವೀಟನ್ನು ದೆಹಲಿಯಿಂದಲೇ ಮಾಡಿದ್ದೆ. ಹೀಗಾಗಿ ದೆಹಲಿಯಲ್ಲಿರುವ ಪೊಲೀಸರು ಕೇಂದ್ರ ಸರ್ಕಾರದ ಅಧೀನದಲ್ಲಿ ಬರುತ್ತಾರಲ್ಲವೇ..? ಹೀಗಾಗಿ ನಿಮಗೆ ಧೈರ್ಯವಿದ್ದರೆ ನನ್ನ ವಿರುದ್ಧ ಕೇಸ್ ದಾಖಲಿಸಿ ಎಂದು ಚಾಲೆಂಜ್ ಹಾಕಿದ್ದಾರೆ.

    ಸಿಂಗ್ ಮಾಡಿದ್ದ ಟ್ವೀಟ್ ನಲ್ಲೇನಿತ್ತು..?
    ದಿಗ್ವಿಜಯ ಸಿಂಗ್ ಅವರು ಮಂಗಳವಾರ ಏರ್ ಸ್ಟ್ರೈಕ್ ನಡೆಸಿರುವ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದರು. ಅಲ್ಲದೆ ಪುಲ್ವಾಮಾ ದಾಳಿ ಒಂದು ಘಟನೆ ಆಕ್ಸಿಡೆಂಟ್ ಮಾತ್ರ ಎಂದು ಶಂಕೆ ವ್ಯಕ್ತಪಡಿಸಿ ಟ್ವೀಟ್ ಮಾಡಿದ್ದರು. ಪುಲ್ವಾಮಾ ದುರ್ಘಟನೆಯ ನಂತರ ಭಾರತೀಯ ವಾಯುಪಡೆ ನಡೆಸಿದ ದಾಳಿಯಿಂದ ಪಾಕಿಸ್ತಾನದಲ್ಲಿರುವ ಉಗ್ರಗಾಮಿ ಶಿಬಿರಗಳು ನಾಶವಾಗಿರುವ ಬಗ್ಗೆ ವಿದೇಶಿ ಮಾಧ್ಯಮಗಳು ಅನುಮಾನ ವ್ಯಕ್ತಪಡಿಸಿವೆ. ಇದು ಸರ್ಕಾರ ನೀಡುತ್ತಿರುವ ವಿಶ್ವಾಸಾರ್ಹತೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ ಎಂದು ಕೂಡ ಅವರು ಹೇಳಿದ್ದರು.

    ಈ ಹೇಳಿಕೆಗೆ ವಿಕೆ ಸಿಂಗ್ ತಿರುಗೇಟು ನೀಡಿ ದಿಗ್ವಿಜಯ್ ಸಿಂಗ್ ಸೇರಿದಂತೆ ಏರ್ ಸ್ಟ್ರೈಕ್ ಬಗ್ಗೆ ಅನುಮಾನ ವ್ಯಕ್ತಪಡಿಸಿರುವ ಬಗ್ಗೆ ಕಿಡಿಕಾರಿದ್ದರು. ನಾನು ದಿಗ್ವಿಜಯ್ ಸಿಂಗ್‍ರನ್ನು ಗೌರವದಿಂದ ಪ್ರಶ್ನೆ ಮಾಡುತ್ತಿದ್ದೇನೆ. ರಾಜೀವ್ ಗಾಂಧಿ ಅವರ ಹತ್ಯೆ ಅಪಘಾತವೇ ಅಥವಾ ಉಗ್ರರ ದಾಳಿಯೇ ಎಂದು ಪ್ರಶ್ನಿಸಿದ್ದರು.

    ಏರ್ ಸ್ಟ್ರೈಕ್ ನಲ್ಲಿ ಎಷ್ಟು ಮಂದಿ ಸಾವನ್ನಪ್ಪಿದ್ದಾರೆ ಎನ್ನುವ ಪ್ರಶ್ನೆಗೆ ವಾಯುಸೇನೆ ಉತ್ತರ ನೀಡಿರಲಿಲ್ಲ. ಏರ್ ಚೀಫ್ ಮಾರ್ಷಲ್ ಧನೋವಾ ಅವರು ಸತ್ತವರ ಹೆಣವನ್ನು ಲೆಕ್ಕಹಾಕುವುದು ನಮ್ಮ ಕೆಲಸವಲ್ಲ. ನಮಗೆ ಏನು ಗುರಿಯನ್ನು ನೀಡಲಾಗಿತ್ತೋ ಆ ಗುರಿಯನ್ನು ಯಶಸ್ವಿಯಾಗಿ ಹೊಡೆದು ಹಾಕಿದ್ದೇವೆ ಎಂದು ಹೇಳಿದ್ದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಬುದ್ಧಿಮಾಂದ್ಯರಿಗೆ ಮೋದಿ ಅವಮಾನ ಮಾಡಿಲ್ಲ- ಸಂಸದ ಪ್ರಹ್ಲಾದ್ ಜೋಶಿ

    ಬುದ್ಧಿಮಾಂದ್ಯರಿಗೆ ಮೋದಿ ಅವಮಾನ ಮಾಡಿಲ್ಲ- ಸಂಸದ ಪ್ರಹ್ಲಾದ್ ಜೋಶಿ

    ಧಾರವಾಡ: ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಬುದ್ಧಿ ಮತ್ತೆ ಯಾವ ರೀತಿ ಇದೆ ಅನ್ನೋದರ ಬಗ್ಗೆ ಮೋದಿ ಹೇಳಿದ್ದಾರೆ. ಆದ್ರೆ ಬುದ್ಧಿಮಾಂದ್ಯರಿಗೆ ಅವರು ಅವಮಾನ ಮಾಡುವ ವಿಚಾರ ಹೇಳಿಲ್ಲ ಎಂದು ಸಂಸದ ಪ್ರಹ್ಲಾದ್ ಜೋಶಿ ಸಮಜಾಯಿಷಿ ನೀಡಿದ್ದಾರೆ.

    ರಾಹುಲ್ ಗಾಂಧಿಯನ್ನು ಟೀಕಿಸುವ ಭರದಲ್ಲಿ ಪ್ರಧಾನಿ ಮೋದಿ ಬುದ್ಧಿಮಾಂದ್ಯರಿಗೆ ಅವಹೇಳನ ಮಾಡಿರುವ ವಿಚಾರವಾಗಿ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಧಾನಿ ಸಮುದಾಯದ ಬಗ್ಗೆ ಟೀಕೆ ಮಾಡಿಲ್ಲ. ಯಾವ ರೀತಿ ಬುದ್ಧಿ ಮತ್ತೆ ಇರುತ್ತೆ ಎಂದು ಪ್ರಧಾನಿ ಹೇಳಿದ್ದಾರೆ ಅಷ್ಟೆ ಅಂದ್ರು.

    ಬರ ಪರಿಹಾರಕ್ಕೆ ಕೇಂದ್ರದಿಂದ ಕಡಿಮೆ ಹಣ ಮಂಜೂರು ಮಾಡಿದ ವಿಚಾರವಾಗಿ ಮಾತನಾಡಿ, ಐದು ವರ್ಷದಲ್ಲಿ ಕೇಂದ್ರ 12 ಸಾವಿರ ಕೋಟಿ ಕೊಟ್ಟಿದೆ. ಉಮೇಶ್ ಜಾಧವ್ ರಾಜೀನಾಮೆ ಕೊಟ್ಟಿದ್ದಾರೆ. ಈಗ ಅವರ ಬಗ್ಗೆ ಕಾಂಗ್ರೆಸ್ ಕೈಗೆಟುಕದ ದ್ರಾಕ್ಷಿ, ಹುಳಿ ಅನ್ನುವಂತೆ ಮಾಡುತ್ತಿದೆ ಎಂದ ಜೋಶಿ, ಕಾಂಗ್ರೆಸ್ ತನ್ನ ಮನೆ ಮೊದಲು ಚೆನ್ನಾಗಿ ಇಟ್ಟುಕೊಳ್ಳಲಿ. ಕಾಂಗ್ರೆಸ್ ಬೌದ್ಧಿಕವಾಗಿ ದಿವಾಳಿಯಾಗಿದೆ ಎಂದು ಟಿಕಿಸಿದರು.

    ವಾಯುದಾಳಿ ಬಗ್ಗೆ ಸಾಕ್ಷಿ ಕೇಳೋದಾದ್ರೆ ಪಾಕಿಸ್ತಾನಕ್ಕೆ ಹೋಗಿ ನೋಡಕೊಂಡು ಬರಲಿ ಎಂದ ಅವರು, ಕುಟುಂಬ ರಾಜಕಾರಣ ವಿಚಾರವಾಗಿ ಶೆಟ್ಟರ್ ಮತ್ತು ಯಡಿಯೂರಪ್ಪ ಮಕ್ಕಳು ದಶಕಗಳ ನಂತರ ತಾವು ತಾವಾಗಿಯೇ ರಾಜಕೀಯಕ್ಕೆ ಬಂದಿದ್ದಾರೆ. ಜೆಡಿಎಸ್-ಕಾಂಗ್ರೆಸ್ ಹಾಗೆ ಮಾಡುತ್ತಿಲ್ಲ ಹೀಗಾಗಿ ಅವರ ಕುಟುಂಬ ರಾಜಕಾರಣಕ್ಕೂ ನಮಗೂ ಹೋಲಿಕೆ ಸರಿಯಲ್ಲ ಎಂದು ಹೇಳಿದರು.

    ಇದೇ ವೇಳೆ ಎಲ್ಲದರಲ್ಲಿ ರಾಜಕಾರಣ ಮಾಡಲ್ಲ ಎಂದ ಜೋಶಿಗೆ ಯಡಿಯೂರಪ್ಪ ಸೈನಿಕರ ದಾಳಿಯ ನಂತರ ಬಿಜೆಪಿಗೆ ಚುನಾವಣಾ ಲಾಭ ಆಗುವ ಪ್ರಶ್ನೆಗೆ ಕೇಳಿದ್ದಕ್ಕೆ, ಬಿಎಸ್‍ವೈ ಹೇಳಿಕೆಗೆ ಈಗಾಗಲೇ ವಿವರಣೆ ನೀಡಲಾಗಿದೆ ಎಂದು ಹೇಳಿ ಹೊರಟು ಹೋದರು.

    https://www.youtube.com/watch?v=DElJEJanlxc

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಭಾಯಿ ಔರ್ ಬೆಹನೋ ಈಗ ಬಿಜೆಪಿ ವೆಬ್‍ಸೈಟ್ ನೋಡಿ ಎಂದ ರಮ್ಯಾ

    ಭಾಯಿ ಔರ್ ಬೆಹನೋ ಈಗ ಬಿಜೆಪಿ ವೆಬ್‍ಸೈಟ್ ನೋಡಿ ಎಂದ ರಮ್ಯಾ

    ಬೆಂಗಳೂರು: ಭಾರತೀಯ ಜನತಾ ಪಕ್ಷ ಅಧಿಕೃತ ವೆಬ್‍ಸೈಟ್ ಹ್ಯಾಕ್ ಆಗಿದೆ. ಹ್ಯಾಕ್ ಆದ ವಿಚಾರವನ್ನು ಟ್ವಿಟ್ಟರ್ ನಲ್ಲಿ ಕಾಂಗ್ರೆಸ್ ಸೋಶಿಯಲ್ ಮೀಡಿಯಾ ಮುಖ್ಯಸ್ಥೆ, ಮಾಜಿ ಸಂಸದೆ ರಮ್ಯಾ ಪ್ರಸ್ತಾಪಿಸಿ ಕಾಲೆಳೆದಿದ್ದಾರೆ.

    ಭಾಯಿ ಔರ್ ಬೆಹನೋ.. ಈಗ ಬಿಜೆಪಿ ವೆಬ್ ಸೈಟನ್ನು ಒಂದು ಬಾರಿ ನೋಡಿ ಎಂದು ಹೇಳಿ ಕಾಲೆಳೆದಿದ್ದಾರೆ. ಆ ಕೂಡಲೇ ಪ್ರತಿಕ್ರಿಯಿಸಿದ ಬಿಜೆಪಿ, ಕೆಲವೇ ಕ್ಷಣಗಳಲ್ಲಿ ಬಿಜೆಪಿ ವೆಬ್ ಸೈಟ್ ಸರಿಹೋಗಲಿದೆ ಎಂದು ಸ್ಪಷ್ಟಪಡಿಸಿದೆ.

    ಮೋದಿ ಪ್ರಶ್ನಿಸಿದ್ದ ರಮ್ಯಾ:
    ಈ ಮೊದಲು ರಮ್ಯಾ ಅವರು ಪ್ರಧಾನಿ ನರೇಂದ್ರ ಮೋದಿಯವರನ್ನು ಪ್ರಶ್ನಿಸಿದ್ದರು. ಹಿಂದೆ ನಡೆದ ಸರ್ಕಾರ ಉಗ್ರರ ವಿರುದ್ಧ ಯಾವುದೇ ಕ್ರಮ ಕೈಗೊಂಡಿರಲಿಲ್ಲ. ಆದರೆ ನಮ್ಮ ಸರ್ಕಾರ ಕಠಿಣ ಕ್ರಮ ಕೈಗೊಂಡಿದೆ. ಇದು ಹೊಸ ಭಾರತ ಎಂದು ಮೋದಿ ಗುಜರಾತಿನಲ್ಲಿ ಭಾಷಣ ಮಾಡಿದ ವಿಡಿಯೋ ಪ್ರಧಾನ ಮಂತ್ರಿಗಳ ಟ್ವಿಟ್ಟರ್ ಖಾತೆಯಿಂದ ಅಪ್ಲೋಡ್ ಆಗಿತ್ತು. ಈ ಟ್ವೀಟ್ ಗೆ ರಮ್ಯಾ, 2014ರಲ್ಲಿ ನೀವು ಇದನ್ನೇ ಹೇಳಿ ನಂತರ ಪಾಕಿಸ್ತಾನಕ್ಕೆ ತೆರಳಿ ನವಾಜ್ ಷರೀಫ್ ಜೊತೆ ಬಿರಿಯಾನಿ ತಿಂದು ಮರಳಿದ್ದೀರಿ. ಹೀಗಾಗಿ ಈ ಸಮಯದಲ್ಲಿ ನಾವು ನಿಮ್ಮನ್ನು ನಂಬುವುದು ಹೇಗೆ? ನೋಟು ನಿಷೇಧ ಮಾಡಿದರೆ ಭಯೋತ್ಪಾದನೆ ನಿಲ್ಲುತ್ತದೆ ಎಂದು ಹೇಳಿದ್ದೀರಿ. ಆದರೆ ಇದು ಕಾರ್ಯಗತವಾಗಲಿಲ್ಲ. ನನ್ನ ಪ್ರಕಾರ ಸ್ಟ್ರೈಕ್ ಎಲ್ಲರನ್ನು ಹತ್ಯೆ ಮಾಡಿರಬಹುದು ಅಲ್ಲವೇ ಎಂದು ಪ್ರಶ್ನಿಸಿ ಮೋದಿ ಅವರನ್ನು ತರಾಟೆಗೆ ತೆಗೆದುಕೊಂಡಿದ್ದರು. ರಮ್ಯಾ ಟ್ವೀಟ್ ಗೆ ನೆಟ್ಟಿಗರು ಖಾರವಾಗಿ ಟ್ವೀಟ್ ಮಾಡುತ್ತಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ರಾಷ್ಟ್ರ, ಸ್ವಾತಂತ್ರ್ಯಕ್ಕಾಗಿ ಸರ್ವಸ್ವವನ್ನು ತ್ಯಾಗ ಮಾಡಿದ ಪರಿವಾರದ ಬಗ್ಗೆ ಮೋದಿ ಹೇಳಿಕೆ ಖಂಡನೀಯ- ಈಶ್ವರ ಖಂಡ್ರೆ

    ರಾಷ್ಟ್ರ, ಸ್ವಾತಂತ್ರ್ಯಕ್ಕಾಗಿ ಸರ್ವಸ್ವವನ್ನು ತ್ಯಾಗ ಮಾಡಿದ ಪರಿವಾರದ ಬಗ್ಗೆ ಮೋದಿ ಹೇಳಿಕೆ ಖಂಡನೀಯ- ಈಶ್ವರ ಖಂಡ್ರೆ

    ಬೆಂಗಳೂರು: ಯಾವ ಪರಿವಾರ ಈ ರಾಷ್ಟ್ರಕ್ಕಾಗಿ, ಸ್ವಾತಂತ್ರ್ಯಕ್ಕಾಗಿ ತಮ್ಮ ಸರ್ವಸ್ವವನ್ನು ತ್ಯಾಗ ಮಾಡಿದೆಯೋ, ಆ ಮನೆತನದ ಬಗ್ಗೆ ಪ್ರಧಾನಿ ನರೇಂದ್ರ ಮೋದಿಯವರು ನೀಡಿದ ಹೇಳಿಕೆಯನ್ನು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಖಂಡಿಸಿದ್ದಾರೆ.

    ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಗಾಂಧಿ ಕುಟುಂಬವನ್ನು ಟಾರ್ಗೆಟ್ ಮಾಡುತ್ತಿದ್ದಾರೆ. ಯಾವ ಪರಿವಾರ ಈ ದೇಶಕ್ಕಾಗಿ ರಕ್ತ, ಬಲಿದಾನ ಕೊಟ್ಟಿದೆ. ಹೀಗಾಗಿ ಆ ಪರಿವಾರದ ಬಗ್ಗೆ ಮೋದಿ ಇಂತಹ ಹೇಳಿಕೆಗಳನ್ನು ನೀಡಬಾರದು ಎಂದು ವಾಗ್ದಾಳಿ ನಡೆಸಿದ್ದಾರೆ.


    ಗಾಂಧಿ ಪರಿವಾರ ಈ ರಾಷ್ಟ್ರಕ್ಕಾಗಿ, ಸ್ವಾತಂತ್ರ್ಯಕ್ಕಾಗಿ ತಮ್ಮ ಸರ್ವಸ್ವವನ್ನು ತ್ಯಾಗ ಮಾಡಿದೆ. ಅವರು ಮನೆಯನ್ನು ಇಂದು ದೇಶಕ್ಕಾಗಿ ಹರಾಜು ಮಾಡಿಕೊಂಡಿದ್ದಾರೆ. ಅಂತಹ ಪರಿವಾರ, ನಾಯಕರ ಬಗ್ಗೆ ಇವತ್ತು ಒಬ್ಬ ಪ್ರಧಾನ ಮಂತ್ರಿಯಾಗಿ ಇಂತಹ ಹೇಳಿಕೆಗಳನ್ನು ಕೊಡುವುದು ಅವರ ಸ್ಥಾನಕ್ಕೆ ಶೋಭೆ ತರುವುದಿಲ್ಲ. ಹೀಗಾಗಿ ಅವರ ಮಾತನ್ನು ಖಂಡಿಸುತ್ತೇನೆ ಎಂದು ಮೋದಿ ವಿರುದ್ಧ ಕಿಡಿಕಾರಿದ್ದಾರೆ.

    ಮೋದಿ ಹೇಳಿದ್ದೇನು?
    ಶನಿವಾರ ರಾತ್ರಿ ಸ್ಮಾರ್ಟ್ ಇಂಡಿಯಾ ಹ್ಯಾಕಥಾನ್‍ನಲ್ಲಿ ಪ್ರಧಾನಿ ಜೊತೆಗಿನ ಸಂವಾದದ ವೇಳೆ ಡೆಹ್ರಾಡೂನ್‍ನ ವಿದ್ಯಾರ್ಥಿನಿಯೊಬ್ಬಳು ಡೈಲೆಕ್ಸಿಕ್ ಸಮಸ್ಯೆಯಿಂದ ಬಳಲುತ್ತಿರುವ ಮಕ್ಕಳು ಅಂದರೆ ಓದು-ಬರಹದ ಕಲಿಕೆ ನಿಧಾನಗತಿಯಲ್ಲಿರುವ ಮಕ್ಕಳಿಗೆ ಸಹಾಯ ಮಾಡಲು ನಿರ್ಧರಿಸಿದ್ದೇವೆ. ತಾರೇ ಜಮೀನ್ ಪರ್ ಸಿನಿಮಾದಲ್ಲಿ ನೋಡಿದಂತೆ ಈ ಮಕ್ಕಳು ಅತ್ಯಂತ ಬುದ್ಧಿವಂತರು ಮತ್ತು ಸೃಜನಶೀಲರು ಆಗಿರುತ್ತಾರೆ ಎಂದು ಹೇಳಿದಳು.

    ಈ ವೇಳೆ ಮಧ್ಯಪ್ರವೇಶಿಸಿದ ಪ್ರಧಾನಿ ಮೋದಿ 40-50 ವರ್ಷದ ಮಕ್ಕಳಿಗೂ ಈ ಕಾರ್ಯಕ್ರಮ ಉಪಯೋಗ ಆಗುತ್ತಾ ಎಂದು ಪರೋಕ್ಷವಾಗಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರ ಕಾಲೆಳೆದರು. ಮೋದಿ ಅವರ ಈ ಉತ್ತರ ಕೇಳಿ ಅಲ್ಲಿ ಕುಳಿತ್ತಿದ್ದ ವಿದ್ಯಾರ್ಥಿಗಳು ಚಪ್ಪಾಳೆ ತಟ್ಟಿದರು. ಬಳಿಕ “ಆಗುತ್ತೆ ಸರ್” ಎಂದು ವಿದ್ಯಾರ್ಥಿನಿ ಮೋದಿ ಅವರಿಗೆ ಉತ್ತರಿಸಿದ್ದಳು. ವಿದ್ಯಾರ್ಥಿನಿಯಿಂದ ಈ ಉತ್ತರ ಬಂದ ಕೂಡಲೇ “ಅಂಥ ಮಕ್ಕಳ ತಾಯಂದಿರು ತುಂಬಾ ಖುಷಿ ಆಗಬಹುದು” ಎಂದು ಹೇಳಿದರು. ಮಕ್ಕಳ ಕಲಿಕೆಯ ಸಮಸ್ಯೆಯನ್ನೂ ರಾಜಕೀಯಕ್ಕಾಗಿ ತಮಾಷೆ ಮಾಡಿದ ಮೋದಿ ಎಷ್ಟು ಸರಿ ಎಂದು ಪ್ರಶ್ನಿಸಿ ನೆಟ್ಟಿಗರು ಈಗ ಪ್ರಧಾನಿಯನ್ನು ತರಾಟೆಗೆ ತೆಗೆದುಕೊಳ್ಳುತ್ತಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಏರ್ ಸ್ಟ್ರೈಕ್ – ಕೇಂದ್ರ, ಮೋದಿ ವಿರುದ್ಧ ರಮೇಶ್ ಕುಮಾರ್ ಪರೋಕ್ಷ ಟಾಂಗ್

    ಏರ್ ಸ್ಟ್ರೈಕ್ – ಕೇಂದ್ರ, ಮೋದಿ ವಿರುದ್ಧ ರಮೇಶ್ ಕುಮಾರ್ ಪರೋಕ್ಷ ಟಾಂಗ್

    ಕೋಲಾರ: ದೇಶಭಕ್ತಿ ಹಾಗೂ ದೇಶ ಕಾಯುವ ಸೈನ್ಯದ ಹೆಸರಿನಲ್ಲಿ ರಾಜಕೀಯ ಮಾಡಬಾರದು ಅದು ಶುದ್ಧ ಅವಿವೇಕಿತನ ಎಂದು ಕೇಂದ್ರ ಸರ್ಕಾರ ಹಾಗೂ ಮೋದಿಗೆ ಸ್ಪೀಕರ್ ರಮೇಶ್ ಕುಮಾರ್ ಕೋಲಾರದಲ್ಲಿ ಪರೋಕ್ಷವಾಗಿ ಟಾಂಗ್ ನೀಡಿದ್ರು.

    ನಗರದ ಪತ್ರಕರ್ತರ ಭವನದಲ್ಲಿ ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ರಮಕ್ಕೆ ಆಗಮಿಸಿದ್ದ ವೇಳೆ ಭಾರತೀಯ ಸೈನಿಕರಿಂದ ಉಗ್ರರ ಮೇಲೆ ನಡೆದ ಏರ್ ಸ್ಟ್ರೈಕ್‍ಗೆ ಸಂಬಂಧಿಸಿದಂತೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ವೀರ ಯೋಧರಿಗೆ ಇಡೀ ದೇಶ ಗೌರವ ಸಮರ್ಪಣೆ ಮಾಡಬೇಕು. ಅವರ ಕುಟುಂಬಗಳಿಗೆ ನಾವೆಲ್ಲ ಋಣ ಹೊಂದಿದ್ದೇವೆ. ಸೈನಿಕರು ಮಾಡಿರುವಂತಹ ಒಳ್ಳೆಯ ಕೆಲಸವನ್ನ ನಾವೇ ಮಾಡಿದಂತೆ ತೋರಿಸುವುದು ಸರಿಯಲ್ಲ. ಅವರು ದೇಶ ಕಾಯೋ ಸೈನಿಕರು, ನಾವು ಓಟು ಕೇಳುವವವರು ಹೀಗಾಗಿ ಅವರ ಹೆಸರಿನಲ್ಲಿ ರಾಜಕೀಯ ಮಾಡಬಾರದು ಎಂದರು.

    ಫೈಟ್ ಮಾಡುವವರು ಯೋಧರು, ವೋಟು ಕೇಳುವವರು ನಾವು. ಅವರು ಅಲ್ಲಿ ಪ್ರಾಣ ಬಿಟ್ಟು ಫೈಟ್ ಮಾಡುವುದಕ್ಕೆ ನಾವು ಇಲ್ಲಿ ಅದನ್ನು ವೋಟ್ ಗೆ ಉಪಯೋಗಿಸಿಕೊಳ್ಳಬಾರದು. ಅದನ್ನು ಯಾರು ಮಾಡಿದರೂ ಅಪರಾಧ. ವೀರ ಯೋಧರಿಗೆ ಇಡೀ ದೇಶ ನಮನ ಅರ್ಪಣೆ ಮಾಡಬೇಕು. ಯೋಧರ ಕುಟುಂಬಗಳಿಗೆ ನಾವೆಲ್ಲರೂ ತಲೆಬಾಗಿ ಅಭಿನಂದನೆ ಸಲ್ಲಿಸಬೇಕು. ಅವರು ಪ್ರಾಣದ ಮೇಲೆ ಆಸೆ ಬಿಟ್ಟು ಬಂದೂಕು ಇಟ್ಟುಕೊಂಡು ಬಾರ್ಡರ್ ನಲ್ಲಿ ನಿಂತುಕೊಂಡಿದ್ದರೆ ನಮ್ಮ ಬೇಳೆ-ಕಾಳು ಬೇಯಿಸಿಕೊಳ್ಳುವುದಕ್ಕೆ ಹೋಗಬಾರದು. ಅದು ಶುದ್ಧ ಅವಿವೇಕಿತನ ಎಂದು ಅವರು ತಿಳಿಸಿದ್ರು.

    ಯಾರೇ ಆಗಲಿ, ಎಷ್ಟು ದೊಡ್ಡವರೇ ಆಗಲಿ. ವೀರ ಯೋಧರು ದೇಶಪ್ರೇಮಕ್ಕಾಗಿ ಪ್ರಾಣದ ಮೇಲೆ ಆಸೆ ತೊರೆದು ಅಲ್ಲಿ ನಿಂತು ಹೋರಾಟ ಮಾಡುತ್ತಿದ್ದಾರೆ. ಅದು ನಾವಿದ್ದರೂ ಮಾಡುತ್ತಾರೆ. ನೀವಿದ್ದರೂ ಅಥವಾ ಇನ್ನೊಬ್ಬರು ಇದ್ರೂ ಮಾಡ್ತಾರೆ. ಅದಕ್ಕೆ ನಾನು ಅಲ್ಲಿಗೆ ಹೋಗಿ ಬಟ್ಟೆ ಬಿಚ್ಚಿ ಫೈಟ್ ಮಾಡುತ್ತೇನೆ ಎಂದು ಹೇಳಿ ವೋಟ್ ಕೇಳುವ ಪ್ರಯತ್ನ ಮಾಡೋದು ತಪ್ಪು ಎಂದು ಗರಂ ಆದ್ರು.

     

    ದೇಶ ಕಾಯುತ್ತಿರುವವರಿಗೆ ಎಲ್ಲವನ್ನೂ ತ್ಯಾಗ ಮಾಡಬೇಕು. ಯೋಧರಿಗೆ ನೈತಿಕ ಬೆಂಬಲ ಕೊಡಬೇಕು. ಅವರ ವಿಚಾರದಲ್ಲಿ ಹಗುರವಾದ ರಾಜಕಾರಣ ಮಾಡಬಾರದು ಎಂದು ರಮೇಶ್ ಕುಮಾರ್ ಹೇಳಿದ್ರು.

    https://www.youtube.com/watch?v=3hPj01mD1og

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ರೈತರಲ್ಲಿ ಆಸೆ ಹೆಚ್ಚಿಸಿದ ಕಿಸಾನ್ ಸಮ್ಮಾನ್ – ಯಾವ ಜಿಲ್ಲೆಯ ರೈತರಿಗೆ ಸಿಕ್ತು ಮೊದಲ 2 ಸಾವಿರ..?

    ರೈತರಲ್ಲಿ ಆಸೆ ಹೆಚ್ಚಿಸಿದ ಕಿಸಾನ್ ಸಮ್ಮಾನ್ – ಯಾವ ಜಿಲ್ಲೆಯ ರೈತರಿಗೆ ಸಿಕ್ತು ಮೊದಲ 2 ಸಾವಿರ..?

    ರಾಯಚೂರು: ಪ್ರಧಾನಿ ನರೇಂದ್ರ ಮೋದಿ ಭಾನುವಾರ ಚಾಲನೆ ನೀಡಿರುವ ಕಿಸಾನ್ ಸಮ್ಮಾನ್ ನಿಧಿ ಯೋಜನೆ ಬಗ್ಗೆ ರಾಜ್ಯದ ರೈತರು ಕುತೂಹಲ ಹೊಂದಿದ್ದಾರೆ. ಯಾರ ಖಾತೆಗೆ ಎರಡು ಸಾವಿರ ರೂಪಾಯಿ ಬಂದಿದೆ ಅಂತ ರೈತರು ಖಾತೆಗಳನ್ನ ಪರಿಶೀಲಿಸಿಕೊಳ್ಳುತ್ತಿದ್ದಾರೆ. ರಾಯಚೂರಿನ ರೈತರು ಸಹ ಸಹಾಯ ಧನದ ನಿರೀಕ್ಷೆಯಲ್ಲಿದ್ದು, ರಾಜ್ಯ ಸರ್ಕಾರ ಘೋಷಿಸಿದ ಸಾಲಮನ್ನಾಕ್ಕೆ ಕೇಳಿದಂತೆ ನಾನಾ ದಾಖಲೆಗಳನ್ನ ಕೇಳದೆ ಸುಲಭವಾಗಿ ಹಣ ನೀಡಬೇಕು ಅಂತ ಒತ್ತಾಯಿಸಿದ್ದಾರೆ.

    ಕೇಂದ್ರ ಸರ್ಕಾರ ಬಜೆಟ್ ನಲ್ಲಿ ಘೋಷಿಸಿದಂತೆ ದೇಶದ ಸಣ್ಣ ಮತ್ತು ಅತಿ ಸಣ್ಣ ಕೃಷಿಕರ ಬ್ಯಾಂಕ್ ಖಾತೆಗೆ ವಾರ್ಷಿಕ 6 ಸಾವಿರ ರೂಪಾಯಿ ವರ್ಗಾಯಿಸುವ ಕಿಸಾನ್ ಸಮ್ಮಾನ್ ನಿಧಿ ಯೋಜನೆಗೆ ಚಾಲನೆ ಸಿಕ್ಕಿದೆ. ಪ್ರಧಾನಿ ನರೇಂದ್ರ ಮೋದಿ 75 ಸಾವಿರ ಕೋಟಿ ಮೊತ್ತದ ಯೋಜನೆಗೆ ಉತ್ತರ ಪ್ರದೇಶದ ಗೋರಖ್‍ಪುರದಲ್ಲಿ ಚಾಲನೆ ನೀಡಿದ್ದಾರೆ. ಮೂರು ಕಂತುಗಳ ಪೈಕಿ ಮೊದಲ ಕಂತಿನಲ್ಲಿ 1 ಕೋಟಿ ರೈತರ ಬ್ಯಾಂಕ್ ಖಾತೆಗೆ 2 ಸಾವಿರ ರೂಪಾಯಿ ವರ್ಗಾವಣೆ ಆಗಿದೆ. ಮಾರ್ಚ್ ಅಂತ್ಯದೊಳಗೆ ಬಾಕಿ ರೈತರ ಖಾತೆಗೆ ಮೊದಲ ಕಂತು ಜಮಾ ಆಗಲಿದೆ. ಹಾಗಾದ್ರೆ ರಾಜ್ಯದ ಯಾವ್ಯಾವ ಜಿಲ್ಲೆಯ ಎಷ್ಟು ಜನ ರೈತರಿಗೆ ಕಿಸಾನ್ ಸಮ್ಮಾನ ನಿಧಿ ಸಿಕ್ಕಿದೆ ಅನ್ನೋದು ಇನ್ನೂ ಸ್ಪಷ್ಟವಾಗಬೇಕಿದೆ.

    ಯಾವ ಜಿಲ್ಲೆಯಲ್ಲಿ ರೈತರಿಗೆ ಸಿಕ್ಕಿದೆ..?
    ಬಾಗಲಕೋಟೆ ಜಿಲ್ಲೆಯಲ್ಲಿ 67,064 ಜನ ಸಣ್ಣ ಹಾಗೂ ಅತಿ ಸಣ್ಣ ರೈತರಿದ್ದು ಇದೂವರೆಗೆ 6,645 ಜನ ನೋಂದಣಿಯಾಗಿದ್ದಾರೆ. ಹಾವೇರಿ ಜಿಲ್ಲೆಯಲ್ಲಿ 25 ಸಾವಿರ ರೈತರ ನೋಂದಣಿ ಮಾಡಲಾಗಿದೆ. ಧಾರವಾಡದಲ್ಲಿ 10 ಸಾವಿರ, ಚಿತ್ರದುರ್ಗ ಜಿಲ್ಲೆಯ ಆರು ಸಾವಿರ ರೈತರು ನೋಂದಣಿಯಾಗಿದ್ದಾರೆ. ಕಲಬುರಗಿ ಜಿಲ್ಲೆಯಲ್ಲಿ ಇದುವರೆಗೆ 13 ಸಾವಿರ ರೈತರ ಖಾತೆಗಳು ನೋಂದಣಿಯಾಗಿದ್ದು 3850 ರೈತರ ಖಾತೆಗೆ ಹಣ ಜಮಾ ಆಗಿದೆ. ರಾಯಚೂರು ಜಿಲ್ಲೆಯಲ್ಲಿ 6480 ರೈತರ ಖಾತೆಗಳು ನೋಂದಣಿಯಾಗಿದೆ. ಮಾರ್ಚ್ ಅಂತ್ಯದೊಳಗೆ ಎಲ್ಲಾ ರೈತರ ಖಾತೆಗೆ ಮೊದಲ ಕಂತು ಸೇರಬೇಕಿದೆ. ಹೀಗಾಗಿ ಯಾವುದೇ ಗೊಂದಲಗಳು ಇಲ್ಲದೆ ಅಧಿಕಾರಿಗಳು ಹಣ ಜಮಾ ಮಾಡಬೇಕು ಅಂತ ರಾಯಚೂರಿನಲ್ಲಿ ರೈತರು ಒತ್ತಾಯಿಸಿದ್ದಾರೆ.

    ಇಂದಿನಿಂದ ರೈತರ ಸಂಪರ್ಕ ಕೇಂದ್ರ, ಬಾಪುಜಿ ಸೇವಾ ಕೇಂದ್ರ, ಅಟಲ್ ಜೀ ಜನಸ್ನೇಹಿ ಕೇಂದ್ರಗಳಲ್ಲಿ ಸಣ್ಣ ಮತ್ತು ಅತಿ ಸಣ್ಣ ರೈತರು ಉಚಿತವಾಗಿ ನೋಂದಣಿ ಮಾಡಿಕೊಳ್ಳಬಹುದಾಗಿದೆ. ಪಹಣಿ, ಆಧಾರ್ ಕಾರ್ಡ್, ಬ್ಯಾಂಕ್ ಪಾಸ್ ಪುಸ್ತಕ ನೀಡಿ ನೋಂದಣಿ ಮಾಡಿಕೊಳ್ಳಬೇಕು. ಬಜೆಟ್ ನಲ್ಲಿ ಘೋಷಿಸಿದಂತೆ ಮೋದಿ ಯೋಜನೆ ಜಾರಿಗೆ ಮಾಡಿದ್ದಾರೆ. ಆದ್ರೆ ಇನ್ನೂ ಯಾವೆಲ್ಲ ಗೊಂದಲಗಳಿವೆಯೋ ಅಂತ ರೈತರು ಯೋಚಿಸುತ್ತಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಶೇ.90ರಷ್ಟು ಮುಸ್ಲಿಮರು ಮತ ಹಾಕಿದ್ರೆ ರಾಹುಲ್ ಗಾಂಧಿಯೇ ಪ್ರಧಾನಿ: ಜಮೀರ್

    ಶೇ.90ರಷ್ಟು ಮುಸ್ಲಿಮರು ಮತ ಹಾಕಿದ್ರೆ ರಾಹುಲ್ ಗಾಂಧಿಯೇ ಪ್ರಧಾನಿ: ಜಮೀರ್

    ಚಿಕ್ಕಬಳ್ಳಾಪುರ: ದೇಶದಲ್ಲಿನ ಶೇ.90ರಷ್ಟು ಮುಸ್ಲಿಮ್ ಬಾಂಧವರು ಮತದಾನ ಮಾಡಿದರೆ ರಾಹುಲ್ ಗಾಂಧಿಯೇ ಮುಂದಿನ ಪ್ರಧಾನಿ ಆಗಲಿದ್ದಾರೆ. ಅದನ್ನ ತಡೆಯಲು ಯಾರಿಂದಲೂ ಸಾಧ್ಯವಿಲ್ಲ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಖಾತೆಯ ಸಚಿವ ಜಮೀರ್ ಅಹಮದ್ ಭವಿಷ್ಯ ನುಡಿದಿದ್ದಾರೆ.

    ಜಿಲ್ಲೆಯ ಬಾಗೇಪಲ್ಲಿ ಪಟ್ಟಣದಲ್ಲಿ ನೂತನ ಶಾದಿಮಹಲ್ ಕಟ್ಟಡ ಲೋಕಾರ್ಪಣೆ ಮಾಡಿ ಮಾತನಾಡಿದ ಅವರು, ಈಗ ಶೇ.50ರಷ್ಟು ಮುಸ್ಲಿಮ್ ಬಾಂಧವರು ಮಾತ್ರ ಮತದಾನ ಮಾಡುತ್ತಿದ್ದಾರೆ. ಉಳಿದ ಶೇ.50 ರಷ್ಟು ಮಂದಿ ಮತದಾನ ಮಾಡುವುದಿಲ್ಲ. ಹೀಗಾಗಿಯೇ ಕಳೆದ ಬಾರಿ ಮೋದಿ ಈ ದೇಶದ ಪ್ರಧಾನಿಯಾಗಿ ಆಯ್ಕೆ ಆಗಿದ್ದಾರೆ ಎಂದು ಹೇಳಿದರು.

    ಈ ಬಾರಿ ಶೇ.90ರಷ್ಟು ಮುಸ್ಲಿಂ ಬಾಂಧವರು ಮತದಾನ ಮಾಡಿದರೆ ಈ ದೇಶದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವುದಲ್ಲದೇ ರಾಹುಲ್ ಗಾಂಧಿಯೇ ಮುಂದಿನ ಪ್ರಧಾನಿ ಆಗಲಿದ್ದಾರೆ ಎಂದು ಭವಿಷ್ಯ ನುಡಿದರು.

    ಮುಂದಿನ ಲೋಕಸಭಾ ಚುನಾವಣೆಗೆ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಿಂದ ಮತ್ತೆ ಕಣಕ್ಕಿಳಿಯಲು ತಯಾರಾಗಿರುವ ಸಂಸದ ವೀರಪ್ಪ ಮೊಯ್ಲಿಗೆ ಅವರಿಗೆ ಮತ ನೀಡುವಂತೆ ಜಮೀರ್ ಅವರು ಚುನಾವಣಾ ಪ್ರಚಾರ ನಡೆಸಿದರು. ಈ ವೇಳೆ ಈ ಜಮೀರ್ ಅಹಮದ್‍ಗೆ ಏನೂ ಗೊತ್ತಿಲ್ಲ ಅಂತ ಕೆಲವರು ಹೇಳುತ್ತಾರೆ. ಹೌದು ನನಗೆ ಏನೂ ಗೊತ್ತಿಲ್ಲ, ನಾನೊಬ್ಬ ಹೆಬ್ಬೆಟ್ಟು ಎಂದರು.

    ಪುಲ್ವಾಮಾ ಉಗ್ರರ ದಾಳಿಯನ್ನು ಖಂಡಿಸಿದ ಜಮೀರ್ ಅಹಮದ್, ಮೃತಪಟ್ಟವರಲ್ಲಿ ಮುಸ್ಲಿಂ ಇದ್ದಾರಾ? ಹಿಂದೂಗಳು ಇದ್ದಾರಾ? ಕ್ರಿಶ್ಚಿಯನ್, ಸಿಖ್ ಇದ್ದರಾ? ಅಂತ ನೋಡಿದ್ರ ಇಲ್ಲವಲ್ಲ. ಹುತಾತ್ಮ ಯೋಧರಲ್ಲಿ ಓರ್ವ ಮುಸ್ಲಿಂ ಯೋಧನೂ ಸಹ ಇದ್ದ. ಹೀಗಾಗಿ ನಾವೆಲ್ಲರೂ ಹಿಂದೂಸ್ತಾನದವರು ಎಂದು ಸಂದೇಶ ಸಾರಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಮೋದಿ ಬಂದು ಕರ್ನಾಟಕದಲ್ಲಿ ಸ್ಪರ್ಧೆ ಮಾಡಲಿ – ಸಿದ್ದರಾಮಯ್ಯ ಸವಾಲು

    ಮೋದಿ ಬಂದು ಕರ್ನಾಟಕದಲ್ಲಿ ಸ್ಪರ್ಧೆ ಮಾಡಲಿ – ಸಿದ್ದರಾಮಯ್ಯ ಸವಾಲು

    – ಯಡಿಯೂರಪ್ಪ ಸಾರ್ವಜನಿಕ ಜೀವನದಲ್ಲಿರಲು ನಾಲಾಯಕ್

    ಹುಬ್ಬಳ್ಳಿ: ಪ್ರಧಾನಿ ನರೇಂದ್ರ ಮೋದಿಯವರು ಕರ್ನಾಟಕಕ್ಕೆ ಬಂದು ಚುನಾವಣೆಯಲ್ಲಿ ಸ್ಪರ್ಧೆ ಮಾಡಲಿ. ಆವಾಗ ಗೊತ್ತಾಗುತ್ತೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸವಾಲೆಸೆದಿದ್ದಾರೆ.

    ಲೋಕಸಭಾ ಚುನಾವಣೆಯಲ್ಲಿ ರಾಜ್ಯದ 22 ಕ್ಷೇತ್ರಗಳಲ್ಲಿ ಗೆಲ್ಲುತ್ತೇವೆ ಎಂದು ಬಿಜೆಪಿ ನಾಯಕರ ಹೇಳಿಕೆ ವಿಚಾರದ ಕುರಿತು ನಗರದಲ್ಲಿ ಪ್ರತಿಕ್ರಿಯಿಸಿದ ಅವರು ಈ ಚಾಲೆಂಜ್ ಹಾಕಿದ್ದಾರೆ. ಅಲ್ಲದೆ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಸಾರ್ವಜನಿಕ ಜೀವನದಲ್ಲಿರಲು ನಾಲಾಯಕ್ ಎಂದು ಲೇವಡಿ ಮಾಡಿದ್ದಾರೆ.

    ಪ್ರಧಾನಿ ಮೋದಿಯವರು ಬರೀ ಸುಳ್ಳು ಹೇಳುತ್ತಾರೆ. ಭಾನುವಾರ ರಫೇಲ್ ಬಗ್ಗೆ ದೇಶದ ಚೌಕಿದಾರ ಮಾತಾಡಿಲ್ಲ. ರೈತರ ಸಾಲವನ್ನು ಅವರೇಕೆ ಮನ್ನಾ ಮಾಡಿಲ್ಲ ಎಂದು ಇದೇ ವೇಳೆ ಪ್ರಶ್ನಸಿದ ಸಿದ್ದರಾಮಯ್ಯ, ರೈತರ ಸಾಲಮನ್ನಾ ಮಾಡುವಂತೆ ಎರಡು ಬಾರಿ ನಿಯೋಗ ಹೋಗಿದ್ದೆ. ಅವರು ಇದೂವರೆಗೂ ರೈತರ ಸಾಲಮನ್ನಾ ಮಾಡಿಲ್ಲ. ನಾವು ಈ ವರ್ಷದ ಬಜೆಟ್‍ನಲ್ಲಿ ಸಾಲಮನ್ನಾಕ್ಕೆ ಹಣ ಇಟ್ಟಿದ್ದೇವೆ. ಮೋದಿಯವರಿಗೆ ಸುಳ್ಳು ಹೇಳುವುದು ಬಿಟ್ಟು ಬೇರೇನು ಗೊತ್ತಿಲ್ಲ ಎಂದು ಪ್ರಧಾನಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

    ಯಡಿಯೂರಪ್ಪ ಸಾರ್ವಜನಿಕ ಜೀವನದಲ್ಲಿ ಇರಲು ನಾಲಾಯಕ್. ಸಿಎಂ ಆಗಿದ್ದವರು ದುಡ್ಡು ಕೊಟ್ಟು ಶಾಸಕರ ಖರೀದಿಗೆ ಯತ್ನಿಸ್ತಿದ್ದಾರೆ. ನನ್ನದೇ ಧ್ವನಿ ಆಗಿದ್ದರೆ ರಾಜೀನಾಮೆ ಕೊಡ್ತೀನಿ ಎಂದು ಹೇಳಿದ್ದರು. ಈಗ ನನ್ನದೇ ಧ್ವನಿ ಅಂತ ಒಪ್ಪಿಕೊಂಡಿದ್ದಾರೆ, ರಾಜೀನಾಮೆ ಕೊಡ್ತಾರಾ ಎಂದು ಬಿಎಸ್‍ವೈ ಅವರನ್ನು ಪ್ರಶ್ನಿಸಿದ್ರು.

    ಶರಣಗೌಡ ಅವರಿಗೆ ಬಿಎಸ್ ವೈ ಏನು ಹೇಳಿದ್ದಾರೆ ಹೇಳ್ಲಾ ಎಂದ ಮಾಜಿ ಸಿಎಂ, ಹತ್ತು ಕೋಟಿ ನಿಮ್ಮಪ್ಪನಿಗೆ ಕೊಡ್ತೀವಿ, ಮಂತ್ರಿ ಮಾಡ್ತೀವಿ. ನಿಂಗೆ ಟಿಕೆಟ್ ಕೊಡ್ತೀವಿ ಅಂದಿದ್ದಾರೆ. ಅದು ಕುದುರೆ ವ್ಯಾಪಾರ ಅಲ್ವಾ. ಸಿಎಂ ಆಗಿದ್ದವರು ಶಾಸಕರನ್ನು ಕೊಂಡುಕೊಳ್ಳಲು ಹೊರಟಿದ್ದಾರೆ. ಹೀಗಾಗಿ ಅವರು ಇವರು ಸಾರ್ವಜನಿಕ ಜೀವನದಲ್ಲಿ ಇರಲು ನಾಲಾಯಕ್ ಎಂದು ಸಿದ್ದರಾಮಯ್ಯ ಅವರು ಲೇವಡಿ ಮಾಡಿದ್ದಾರೆ.

    ಅಧಿವೇಶನಕ್ಕೆ ನಾಲ್ಕು ಕಾಂಗ್ರೆಸ್ ಶಾಸಕರು ಬಂದಿಲ್ಲ. ಅವರನ್ನು ಡಿಸ್ಕ್ವಾಲಿಫೈ ಮಾಡಲು ಸ್ಪೀಕರ್‍ಗೆ ಮನವಿ ಮಾಡುತ್ತೇವೆ. ಯಡಿಯೂರಪ್ಪ ಕೂಡಲೆ ರಾಜಿನಾಮೆ ಕೊಡಬೇಕು. ಅವರಿಗೆ ಸಾರ್ವಜನಿಕ ಜೀವನದಲ್ಲಿರಲು ನೈತಿಕತೆಯಿಲ್ಲ. ಮೊದಲು ಮಿಮಿಕ್ರಿ ಮಾಡಲಾಗಿದೆ, ಸಾಬೀತುಪಡಿಸಿದ್ರೆ ರಾಜೀನಾಮೆ ಕೊಡ್ತೀನಿ ಅಂದಿದ್ರು. ಈಗ ನಂದೇ ವಾಯ್ಸ್ ಅಂದಿದ್ದಾರೆ. ಹೀಗಾಗಿ ರಾಜೀನಾಮೆ ಕೊಡಲಿ ಎಂದು ಆಗ್ರಹಿಸಿದ್ರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಪ್ರಧಾನಿ ಮೋದಿ ವಿರುದ್ಧ ಎಚ್‍ಡಿಡಿ ಗರಂ..!

    ಪ್ರಧಾನಿ ಮೋದಿ ವಿರುದ್ಧ ಎಚ್‍ಡಿಡಿ ಗರಂ..!

    ಬೆಂಗಳೂರು: ಮಣ್ಣಿನ ಮಗ ಏನು ಮಾಡಿದ್ದಾರೆ ಅಂತ ಪ್ರಶ್ನೆ ಮಾಡಿದ ಪ್ರಧಾನಿ ಮೋದಿ ಅವ್ರಿಗೆ ಉತ್ತರ ಕೊಡ್ತೀನಿ ಅಂತ ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ದೇವೇಗೌಡ ಗರಂ ಆಗಿದ್ದಾರೆ.

    ತಮ್ಮ ನಿವಾಸದ ಬಳಿ ಮಾತನಾಡಿದ ಅವರು, ಮಣ್ಣಿನ ಮಗ ದೇಶಕ್ಕೆ ಏನು ಮಾಡಿದ್ದಾರೆ ಅಂತ ಮೋದಿ ಲಘುವಾಗಿ ಮಾತಾಡಿದ್ದಾರೆ. ನಾನು ದೆಹಲಿಗೆ ಹೋಗುತ್ತಾ ಇದ್ದೇನೆ. ಮಣ್ಣಿನ ಮಗ ಏನ್ ಮಾಡಿದ್ದಾರೆ ಅಂತ ಕೇಳಿದ್ದಾರೆ. ಇದಕ್ಕೆ ಉತ್ತರ ಕೊಡುತ್ತೇನೆ ಎಂದು ತಿಳಿಸಿದ್ದಾರೆ.

    ಸಂಸತ್ ನಲ್ಲಿ ಸಮಯ ಸಿಕ್ಕರೆ ಈ ಬಗ್ಗೆ ನಾನು ಮಾತಾಡ್ತೀನಿ. 50 ವರ್ಷ ನಾನು ಏನ್ ಮಾಡಿದ್ದೀನಿ ಅಂತ ಸಂಸತ್ ನಲ್ಲಿ ಉತ್ತರ ಕೊಡ್ತೀನಿ ಅಂತ ಮೋದಿ ವಿರುದ್ಧ ಕಿಡಿಕಾರಿದ್ರು. ಅಧಿವೇಶನ ಮುಗಿದ ಮೇಲೆ ರಾಜ್ಯದಲ್ಲೆ ಇರುತ್ತೇನೆ ಅವರು ನುಡಿದ್ರು.

    ಆಡಿಯೋ ಬಗ್ಗೆ ತಪ್ಪು ಒಪ್ಪಿಕೊಂಡ ಯಡಿಯೂರಪ್ಪ ಹೇಳಿಕೆಗೆ ಪ್ರತಿಕ್ರಿಯೆ ನೀಡಲು ಮಾಜಿ ಪ್ರಧಾನಿ ನಿರಾಕರಿಸಿದ್ದಾರೆ. ಆಡಿಯೋ ಬಗ್ಗೆ ನಾನು ಯಾವುದೇ ರಿಯಾಕ್ಷನ್ ಕೊಡೋದಿಲ್ಲ. ಆಡಿಯೋ ಮಾಡಿರೋರು ಯಾರು, ಅದಕ್ಕೆ ಯಾರು ಕಾರಣ ಇದೆಲ್ಲ ನನಗೆ ಸಂಬಂಧ ಇಲ್ಲ. ನಾನು ಪ್ರತಿಕ್ರಿಯೆ ಕೊಡೋದು ಯೋಗ್ಯ ಅಲ್ಲ. ಅದಕ್ಕೆ ನಾನು ರಿಯಾಕ್ಷನ್ ಕೊಡೊಲ್ಲ ಅಂತ ನಿರಾಕರಣೆ ಮಾಡಿದ್ರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಮೋದಿ ದೇಶಕ್ಕೆ ಶನಿ ಇದ್ದಂತೆ- ಮಾಜಿ ಸಚಿವ ಜನಾರ್ದನ ಪೂಜಾರಿ

    ಮೋದಿ ದೇಶಕ್ಕೆ ಶನಿ ಇದ್ದಂತೆ- ಮಾಜಿ ಸಚಿವ ಜನಾರ್ದನ ಪೂಜಾರಿ

    ಮಂಗಳೂರು: ದೇಶದಲ್ಲಿ ಯಾರಿಗೂ ರಕ್ಷಣೆ ಸಿಗುತ್ತಿಲ್ಲ. ಪ್ರಧಾನಿ ಮೋದಿ ಈ ದೇಶಕ್ಕೆ ಶನಿಯಾಗಿದ್ದಾರೆ. ಇನ್ನಾದ್ರೂ ಮೋದಿಯವರು ಜನರ ಅಭಿಪ್ರಾಯಕ್ಕೆ ಮನ್ನಣೆ ಕೊಡಬೇಕು ಎಂದು ಮಾಜಿ ಕೇಂದ್ರ ಸಚಿವ ಜನಾರ್ದನ ಪೂಜಾರಿ ಹೇಳಿದ್ದಾರೆ.

    ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಮೋದಿ ಸರ್ಕಾರದ ವಿರುದ್ಧ ಸಮರ ಸಾರಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗೆ ಮಾಜಿ ಕೇಂದ್ರ ಸಚಿವ ಜನಾರ್ದನ ಪೂಜಾರಿ ಬೆಂಬಲ ಸೂಚಿಸಿದ್ದಾರೆ.

    ಪಶ್ಚಿಮ ಬಂಗಾಳದಲ್ಲಿ ರಕ್ತಪಾತವಾಗುತ್ತಿದೆ. ಮಮತಾ ಬ್ಯಾನರ್ಜಿ ನಿನ್ನೆಯಿಂದ ಉಪವಾಸ ಸತ್ಯಾಗ್ರಹ ಮಾಡುತ್ತಿದ್ದಾರೆ. ನನಗೆ ಬದುಕಬೇಕೆಂಬ ಆಸೆ ಇಲ್ಲ. ರಾಜ್ಯದ ಜನರಿಗೋಸ್ಕರ ನಾನು ಜನರಿಗೋಸ್ಕರ ಸಾಯುತ್ತೇನೆ. ಮೋದಿಯವರು ನನ್ನ ಬಂಗಾಳದ ಜನರನ್ನು ಸಂಪೂರ್ಣವಾಗಿ ನಾಶ ಮಾಡಲು ಹೊರಟಿದ್ದಾರೆ. ಈ ಪ್ರಜಾಪ್ರಭುತ್ವವನ್ನು ನಾಶ ಮಾಡುತ್ತಿದ್ದಾರೆ. ದೇಶದಲ್ಲಿ ಯಾರಿಗೂ ರಕ್ಷಣೆ ಸಿಗುತ್ತಿಲ್ಲ. ಪ್ರಧಾನಿ ಮೋದಿ ಈ ದೇಶಕ್ಕೆ ಶನಿಯಾಗಿದ್ದಾರೆ. ಇನ್ನಾದ್ರೂ ಮೋದಿಯವರು ಜನರ ಅಭಿಪ್ರಾಯಕ್ಕೆ ಮನ್ನಣೆ ಕೊಡಬೇಕು. ಸುಪ್ರೀಂ ಕೋರ್ಟ್ ನಲ್ಲಿ ಪ್ರಕರಣದ ತ್ವರಿತ ವಿಚಾರಣೆ ನಡೆಸಬೇಕೆಂದು ಮೋದಿ ವಿರುದ್ಧ ಕಿಡಿಕಾರಿದ್ದಾರೆ. ಇದನ್ನೂ ಓದಿ: ಸಿಬಿಐ Vs ಮಮತಾ: ಮಂಗಳವಾರಕ್ಕೆ ಅರ್ಜಿ ಮುಂದೂಡಿಕೆ: ಸುಪ್ರೀಂನಲ್ಲಿ ಇಂದು ಏನಾಯ್ತು?

    ಮಮತಾಗೆ ಬೆಂಬಲ ಸೂಚಿಸಿ ತಾನೂ ಕುದ್ರೋಳಿ ದೇವಸ್ಥಾನದಲ್ಲಿ ಉಪವಾಸ ಕೂರೋದಾಗಿ ಮೊದಲು ಹೇಳಿದ ಜನಾರ್ದನ ಪೂಜಾರಿ ನಂತರ ದಿಢೀರ್ ತಮ್ಮ ನಿರ್ಧಾರವನ್ನು ಬದಲಿಸಿದ್ದಾರೆ. ನಾಳೆ ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಉಪವಾಸದ ನಿರ್ಧಾರ ಕೈಗೊಳ್ಳೋದಾಗಿ ಸ್ಪಷ್ಟಪಡಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv