Tag: poaching

  • ಅರಣ್ಯ ಇಲಾಖೆ ಮಾಹಿತಿದಾರನೇ ಬೇಟೆಗಾರ: ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದ ಆರೋಪಿ

    ಅರಣ್ಯ ಇಲಾಖೆ ಮಾಹಿತಿದಾರನೇ ಬೇಟೆಗಾರ: ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದ ಆರೋಪಿ

    – ಜಿಂಕೆ ಕೊಂದು ಚರ್ಮ ಸುಲಿಯುತ್ತಿದ್ದ ವೇಳೆ ಬಂಧನ

    ಚಾಮರಾಜನಗರ: ಅರಣ್ಯ ಇಲಾಖೆ ಮಾಹಿತಿದಾರನೇ ಕಳ್ಳ ಬೇಟೆಗಾರನಾಗಿ ಪ್ರಾಣಿಗಳನ್ನು ವಧೆ ಮಾಡುತ್ತಿದ್ದ ಆರೋಪಿಯನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿದ್ದಾರೆ.

    ಜಿಲ್ಲೆಯ ಬಿಳಿಗಿರಿರಂಗನ ಬೆಟ್ಟ ಹುಲಿ ಸಂರಕ್ಷಿತ ಪ್ರದೇಶದ ಅರೇಪಾಳ್ಯದಲ್ಲಿ ಘಟನೆ ನಡೆದಿದ್ದು, ನಾಗೇಗೌಡ ಬಂಧಿತ ಬೇಟೆಗಾರ. ಈತ ಅರಣ್ಯ ಇಲಾಖೆಯ ಮಾಹಿತಿದಾರನಾಗಿದ್ದ ಎಂದು ತಿಳಿದುಬಂದಿದ್ದು, ಕಳ್ಳಬೇಟೆಯ ಕುರಿತು ಆಗಾಗ್ಗೆ ಮಾಹಿತಿ ನೀಡುತ್ತಿದ್ದನಂತೆ. ಆದರೆ ಅರಣ್ಯ ಇಲಾಖೆಯ ಮತ್ತೊಬ್ಬ ಮಾಹಿತಿದಾರನಿಂದ ಈತನ ಕುಕೃತ್ಯ ಬೆಳಕಿಗೆ ಬಂದಿದೆ. ಜಿಂಕೆಯೊಂದನ್ನು ಕೊಂದು ಅದರ ಚರ್ಮ ಸುಲಿಯುತ್ತಿದ್ದ ಖಚಿತ ಮಾಹಿತಿ ಮೇಲೆ ಆರ್‍ಎಫ್‍ಒ ಮಹಾದೇವಯ್ಯ ನೇತೃತ್ವದ ತಂಡ ದಾಳಿ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ.

    ಕೊಂದ ಜಿಂಕೆ, ಕತ್ತಿಯನ್ನು ವಶಪಡಿಸಿಕೊಳ್ಳಲಾಗಿದ್ದು, ಆರೋಪಿಯನ್ನು ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ.

  • ದಾವಣಗೆರೆಯಲ್ಲಿ ನವಿಲು ಬೇಟೆಯಾಡಿದ ಇಬ್ಬರ ಬಂಧನ

    ದಾವಣಗೆರೆಯಲ್ಲಿ ನವಿಲು ಬೇಟೆಯಾಡಿದ ಇಬ್ಬರ ಬಂಧನ

    ದಾವಣಗೆರೆ: ರಾಷ್ಟ್ರ ಪಕ್ಷಿ ನವಿಲನ್ನು ಬೇಟೆಯಾಡಿದ ಆರೋಪದ ಮೇಲೆ ಹರಿಹರ ಪೆÇಲೀಸರು ಇಬ್ಬರನ್ನು ಬಂಧಿಸಿದ್ದಾರೆ.

    ದಾವಣಗೆರೆ ನಗರದ ಎಸ್‍ಎಸ್ ಲೇಔಟ್ ನಿವಾಸಿ ಮೆಹಬೂಬ್ ಬಾಷಾ (55), ಟಿಪ್ಪು ನಗರದ ನಿವಾಸಿ ಇಕ್ಬಾಲ್ (28) ಬಂಧಿತ ಆರೋಪಿಗಳು. ಜಿಲ್ಲೆಯ ಹರಿಹರ ತಾಲೂಕಿನ ರಾಜನಹಳ್ಳಿ ಬಳಿ ಶುಕ್ರವಾರ ತಡ ರಾತ್ರಿ ನವಿಲನ್ನು ಬೇಟೆಯಾಡಲಾಗಿದ್ದು, ಹೆಣ್ಣು ನವಿಲನ್ನು ಗುಂಡಿಟ್ಟು ಕೊಲ್ಲಾಗಿದೆ.

    ಬಂಧಿತರಿಂದ ಲೈಸ್ಸನ್ಡ್ ಎಸ್‍ಬಿಬಿಎಲ್ ಗನ್ (ಸಿಂಗಲ್ ಬ್ಯಾರಲ್ ಬ್ರೀಚ್ ಲೋಡಿಂಗ್ ರೈಫಲ್) ವಶಪಡಿಸಿಕೊಳ್ಳಲಾಗಿದೆ. ಈ ಇಬ್ಬರು ನವಿಲು ಮಾಂಸ ಮಾರಾಟಕ್ಕಾಗಿ ಬೇಟೆಗೆ ಇಳಿದಿದ್ದು, ಹರಿಹರ ಸಿಪಿಐ ಜಯಣ್ಣ ಎಸ್.ನೇಮಗೌಡ ಹಾಗೂ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನ ಬಂಧಿಸಿದ್ದಾರೆ.

    ಈ ಬಗ್ಗೆ ಹರಿಹರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.