Tag: pole

  • ಪತಿಯೂ ಬೇಕು, ಪ್ರೇಮಿಯೂ ಬೇಕೆಂದು ವಿದ್ಯುತ್‌ ಕಂಬವೇರಿ ಮಹಿಳೆ ಪ್ರತಿಭಟನೆ

    ಪತಿಯೂ ಬೇಕು, ಪ್ರೇಮಿಯೂ ಬೇಕೆಂದು ವಿದ್ಯುತ್‌ ಕಂಬವೇರಿ ಮಹಿಳೆ ಪ್ರತಿಭಟನೆ

    ಲಕ್ನೋ: ತೀವ್ರ ಹಣದ ಕೊರತೆ, 7 ವರ್ಷಗಳ ವಿವಾಹೇತರ ಸಂಬಂಧ ಮತ್ತು ವಿದ್ಯುತ್ ಕಂಬದ (woman Climbs Pole In Protest) ಮೇಲೆ ಕುಳಿತ ಮಹಿಳೆ. ಈ ದೃಶ್ಯ ಕಂಡುಬಂದಿದ್ದು ಉತ್ತರ ಪ್ರದೇಶದ (Uttarpradesh) ಪಟ್ಟಣವೊಂದರಲ್ಲಿ.

    ಹೌದು. ಗೋರಖ್‌ಪುರದ ಪಿಪ್ರೈಚ್‌ನಲ್ಲಿ 34 ವರ್ಷದ ಮೂರು ಮಕ್ಕಳ ತಾಯಿಯೊಬ್ಬಳು ತನ್ನ ವಿವಾಹೇತರ ಸಂಬಂಧದ ಬಗ್ಗೆ ಪತಿಗೆ ತಿಳಿದ ನಂತರ ವಿದ್ಯುತ್ ಕಂಬವನ್ನು ಹತ್ತುವ ಮೂಲಕ ರಾದ್ದಾಂತ ಸೃಷ್ಟಿಸಿದ್ದಾಳೆ. ಇದರ ವೀಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ (Social Media) ಸಖತ್‌ ವೈರಲ್‌ ಆಗುತ್ತಿದೆ.

    ಏನಿದು ಪ್ರಕರಣ?: ಮಹಿಳೆ ತನ್ನ ಪತಿ ಹಾಗೂ ಮೂವರು ಮಕ್ಕಳೊಂದಿಗೆ ವಾಸವಾಗಿದ್ದಳು. ಆದರೆ ಕ್ರಮೇಣ ಆಕೆಗೆ ಪಕ್ಕದ ಗ್ರಾಮದ ವ್ಯಕ್ತಿಯೊಬ್ಬರ ಪರಿಚಯವಾಗಿದೆ. ಈ ಪರಿಚಯ ಪ್ರೇಮಕ್ಕೆ ತಿರುಗಿದ್ದು, ಕಳೆದ 7 ವರ್ಷಗಳಿಂದ ಪತಿಗೆ ತಿಳಿಯದಂತೆ ಇವರಿಬ್ಬರ ಪ್ರೇಮ ಪುರಾಣ ನಡೆಯುತ್ತಿತ್ತು. ಇದನ್ನೂ ಓದಿ: ನಾಮಪತ್ರ ಸಲ್ಲಿಸಿದ ಡಾ.ಮಂಜುನಾಥ್ – ಡಿಕೆಸು ನೋಡಿ ಮೋದಿ ಘೋಷಣೆ ಕೂಗಿದ ಕಾರ್ಯಕರ್ತರು

    ಮಹಿಳೆಯ ಪತಿ ರಾಮ್ ಗೋವಿಂದ್ ಕೂಲಿ ಕೆಲಸ ಮಾಡುತ್ತಾ ಜೀವನ ನಡೆಸುತ್ತಿದ್ದರು. ಆದರೆ ಇತ್ತೀಚೆಗೆ ಇವರಿಬ್ಬರ ಪ್ರೀತಿ ವಿಚಾರ ಪತಿಯ ಗಮನಕ್ಕೆ ಬಂದಿದೆ. ಹೀಗಾಗಿ ದಂಪತಿ ನಡುವೆ ವಾಗ್ವಾದ ನಡೆಯಿತು. ಅಲ್ಲದೇ ಪ್ರಿಯತಮನಿಗೂ ಮನೆಯಲ್ಲಿ ಇರಲು ಅವಕಾಶ ಕಲ್ಪಿಸಬೇಕು ಮತ್ತು ಮನೆಯ ಆರ್ಥಿಕತೆಗೆ ಸಹಾಯ ಮಾಡಬೇಕೆಂದು ಒತ್ತಾಯಿಸಿದಳು. ಪತ್ನಿಯ ಮಾತಿನಿಂದ ರಾಮ್ ಗೋವಿಂದ್ ಪಿತ್ತ ನೆತ್ತಿಗೇರಿತು. ಕೂಡಲೇ ಮನೆಯಿಂದಲೇ ಹೊರ ನಡೆದನು.

    ಪತಿ ಮನೆಯಿಂದ ಹೊರ ನಡೆಯುತ್ತಿದ್ದಂತೆಯೇ ಪತಿ ಹಾಗೂ ಪ್ರಿಯತಮ ಇಬ್ಬರೂ ನನಗೆ ಬೇಕು ಎಂದು ಹೇಳಿ ಮನೆಯ ಪಕ್ಕದಲ್ಲೇ ಇರುವ ವಿದ್ಯುತ್‌ ಕಂಬವೇರಿ ಮಹಿಳೆ ಪ್ರತಿಭಟನೆ ನಡೆಸಿದ್ದಾಳೆ. ಮಹಿಳೆಯು ವಿದ್ಯುತ್ ಕಂಬವನ್ನು ಏರುತ್ತಿರುವುದು ನೋಡುಗರನ್ನು ದಿಗ್ಭ್ರಮೆಗೊಳಿಸಿತು. ಕೂಡಲೇ ಸ್ಥಳೀಯರು ಆಕೆಯನ್ನು ಕೆಳಗೆ ಇಳಿಯುವಂತೆ ಕೇಳಿಕೊಂಡಿದ್ದಾರೆ. ಹೈ-ಟೆನ್ಷನ್ ತಂತಿಗಳಿರುವ ಕಂಬವೇರಿ ಮಹಿಳೆ ಅಪಾಯಕಾರಿಯಾಗಿ ಕುಳಿತಿದ್ದನ್ನು ಕಂಡು ಜನ ಕೂಡ ಭಯಭೀತರಾಗಿದ್ದಾರೆ.

    ಎಷ್ಟು ಮನವಿ ಮಾಡಿಕೊಂಡರೂ ಮಹಿಳೆ ಕಂಬದಿಂದ ಕೆಳಗೆ ಇಳಿಯದಿದ್ದರಿಂದ ಸ್ಥಳೀಯರು ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಅಂತೆಯೇ ಸ್ಥಳಕ್ಕೆ ದೌಡಾಯಿಸಿದ ಪೊಲೀಸ್ ಮತ್ತು ವಿದ್ಯುತ್ ಇಲಾಖೆಗಳ ತಂಡವು ಮುಂಜಾಗ್ರತಾ ಕ್ರಮವಾಗಿ ವಿದ್ಯುಚ್ಛಕ್ತಿ ಸರಬರಾಜನ್ನು ಸ್ಥಗಿತಗೊಳಿಸಿದರು. ಬಳಿಕ ಕಂಬದಿಂದ ಕೆಳಗಿಳಿಯುವಂತೆ ಮಹಿಳೆಯನ್ನು ಮನವೊಲಿಸುವಲ್ಲಿ ಯಶಸ್ವಿಯಾದರು.

  • ಗ್ರಾಮಸ್ಥರ ಕೈಗೆ ಸಿಕ್ಕಿಬಿದ್ದ ಕೋಳಿ ಕಳ್ಳ – ಕಂಬಕ್ಕೆ ಕಟ್ಟಿ ಧರ್ಮದೇಟು ಕೊಟ್ರು

    ಗ್ರಾಮಸ್ಥರ ಕೈಗೆ ಸಿಕ್ಕಿಬಿದ್ದ ಕೋಳಿ ಕಳ್ಳ – ಕಂಬಕ್ಕೆ ಕಟ್ಟಿ ಧರ್ಮದೇಟು ಕೊಟ್ರು

    ರಾಯಚೂರು: ದೇವದುರ್ಗ ತಾಲೂಕಿನ ಆಲ್ಕೋಡ ಗ್ರಾಮದಲ್ಲಿ ಕೋಳಿಗಳನ್ನ ಕದಿಯಲು ಬಂದಿದ್ದ ಕಳ್ಳನೊಬ್ಬ ಗ್ರಾಮಸ್ಥರ ಕೈಗೆ ಸಿಕ್ಕಿಬಿದ್ದು ಪಜೀತಿ ಅನುಭವಿಸಿದ್ದಾನೆ. ಕೋಳಿ ಕದಿಯುವ ವೇಳೆ ರೆಡ್ ಹ್ಯಾಂಡಾಗಿ ಸಿಕ್ಕ ಕಳ್ಳನನ್ನು ಗ್ರಾಮಸ್ಥರು ಕಂಬಕ್ಕೆ ಕಟ್ಟಿ ಹಾಕಿ ಧರ್ಮದೇಟು ನೀಡಿದ್ದಾರೆ.

    ಕೋಳಿ ಅಂದರೆ ಯಾರಿಗೆ ಇಷ್ಟವಿಲ್ಲ ಹೇಳಿ, ಅದರಲ್ಲಿಯೂ ಕದ್ದು ತಿನ್ನುವ ಕೋಳಿಯ ರುಚಿಯೇ ಬೇರೆ ಎಂಬ ಭಾವನೆ ಕೆಲವರಲ್ಲಿದೆ. ಸಿಟಿಗಿಂತಲೂ ಹಳ್ಳಿ ಕಡೆಗಳಲ್ಲಿ ಕೋಳಿಯನ್ನು ಕದ್ದು ಅಡುಗೆ ಮಾಡಿ ತಿನ್ನುವ ಖದೀಮರು ಬಹಳಷ್ಟು ಜನ ಇದ್ದಾರೆ. ಇನ್ನೂ ಕೆಲವು ಖದೀಮರು ಹಣಕ್ಕಾಗಿ ಕೋಳಿಯನ್ನು ಕದ್ದು, ಮಾರಾಟ ಮಾಡುತ್ತಾರೆ. ಸದ್ಯ ಇಂತಹದ್ದೇ ಪ್ರಯತ್ನಕ್ಕೆ ಕೈ ಹಾಕಿದ ವ್ಯಕ್ತಿಗೆ ಗ್ರಾಮಸ್ಥರು ಹಿಗ್ಗಾಮುಗ್ಗ ಥಳಿಸಿದ್ದಾರೆ.  ಇದನ್ನೂ ಓದಿ: ಶಿವ ಭಕ್ತರ ಮೇಲೆ ಹೂಮಳೆ ಸುರಿಸುತ್ತೀರಿ, ಮುಸ್ಲಿಮರ ಮನೆಗಳಿಗೆ ಬುಲ್ಡೋಜರ್‌ ಬಿಡ್ತೀರಿ: ಯುಪಿ ಸರ್ಕಾರದ ವಿರುದ್ಧ ಓವೈಸಿ ಕಿಡಿ

    ರಾಜಾಸಾಬ್ ಅವರ ಮನೆಯಲ್ಲಿ ಕೋಳಿ ಕಳ್ಳತನ ಮಾಡಿದ್ದ ವ್ಯಕ್ತಿ. ಸುಮಾರು 10 ಕೋಳಿಗಳನ್ನು ಕಳ್ಳತನ ಮಾಡಿ ಪರಾರಿಯಾಗುತ್ತಿದ್ದ ವೇಳೆ ಸಿಕ್ಕಿಬಿದ್ದಿದ್ದಾನೆ. ಗ್ರಾಮಸ್ಥರ ಕೈಗೆ ಸಿಕ್ಕಿಬಿದ್ದು ಒದೆ ತಿಂದಿದ್ದಾನೆ. ಮೂವರು ಕಳ್ಳರಲ್ಲಿ ಒಬ್ಬ ಮಾತ್ರ ಸಿಕ್ಕಿಬಿದ್ದಿದ್ದು ಇನ್ನಿಬ್ಬರು ಅಲ್ಲಿಂದ ಪರಾರಿಯಾಗಿದ್ದಾರೆ. ದೇವದುರ್ಗ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಇದನ್ನೂ ಓದಿ: ಕೊಲೆಗೆ ಕೊಲೆ ಪ್ರತಿಕಾರವಲ್ಲ – ಸರ್ಕಾರ ಹೆಣದ ರಾಜಕೀಯ ಬಿಟ್ಟು ಕಾನೂನು ಸುವ್ಯವಸ್ಥೆ ಬಿಗಿಗೊಳಿಸಲಿ: ಕಾಂಗ್ರೆಸ್

    Live Tv
    [brid partner=56869869 player=32851 video=960834 autoplay=true]

  • ಕಂಬಕ್ಕೆ ಸ್ಪೈಸ್‌ಜೆಟ್ ವಿಮಾನ ಡಿಕ್ಕಿ – ತಪ್ಪಿದ ಅನಾಹುತ

    ನವದೆಹಲಿ: ಸ್ಪೈಸ್‌ಜೆಟ್ ವಿಮಾನ ಕಂಬಕ್ಕೆ ಡಿಕ್ಕಿ ಹೊಡೆದಿರುವ ಘಟನೆ ದೆಹಲಿಯ ವಿಮಾನ ನಿಲ್ದಾಣದಲ್ಲಿ ಸೋಮವಾರ ನಡೆದಿದೆ. ಡಿಕ್ಕಿಯ ಪರಿಣಾಮ ವಿಮಾನದ ರೆಕ್ಕೆ ಹಾಗೂ ಕಂಬಕ್ಕೆ ಹಾನಿಯಾಗಿದೆ.

    ದೆಹಲಿಯಿಂದ ಜಮ್ಮುವಿಗೆ ಸಂಚರಿಸಲಿದ್ದ ವಿಮಾನ ಟರ್ಮಿನಲ್‌ನಿಂದ ರನ್‌ವೇಗೆ ತೆರಳುತ್ತಿದ್ದಾಗ ಘಟನೆ ನಡೆದಿದೆ. ಇದನ್ನೂ ಓದಿ: ಮೂರು ದಿನಕ್ಕೆ 500 ಕೋಟಿ ಬಾಚಿದ ಆರ್.ಆರ್.ಆರ್: ಬಾಕ್ಸ್ ಆಫೀಸ್ ಚಿಂದಿಚಿತ್ರಾನ್ನ

    ಸೋಮವಾರ ಸ್ಪಯಸ್‌ಜೆಟ್ ಏಳು ವಿಮಾನಗಳನ್ನು ಪ್ರಾರಂಭಿಸುವುದಾಗಿ ಘೋಷಿಸಿತ್ತು. ಅವುಗಳಲ್ಲಿ ಗೋರಖ್‌ಪುರ-ವಾರಣಾಸಿಗೆ ಸಂಚರಿಸಲಿದ್ದ ವಿಮಾನವನ್ನು ಕೇಂದ್ರ ನಾಗರಿಕ ವಿಮಾನಯಾನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಮತ್ತು ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಭಾನುವಾರ ಚಾಲನೆ ನೀಡಿದ್ದರು. ಇದನ್ನೂ ಓದಿ: ಚಂಡೀಗಢದ ಮೇಲಿನ ಹಕ್ಕಿಗಾಗಿ ಪಂಜಾಬ್ ವಿಲ್ ಫೈಟ್: ಭಗವಂತ್ ಮಾನ್

    ಗೋರಖ್‌ಪುರ-ವಾರಣಾಸಿ ವಿಮಾನದ ಹೊರತಾಗಿ ಪ್ರಾದೇಶಿಕ ಸಂಪರ್ಕ ಯೋಜನೆಯ ಉಡಾನ್(UDAN) ಅಡಿಯಲ್ಲಿ ಹೈದರಾಬಾದ್-ಪುದುಚೇರಿ-ಹೈದರಾಬಾದ್, ವಾರಣಾಸಿ-ಕಾನ್ಪುರ್-ವಾರಣಾಸಿ ಹಾಗೂ ವಾರಣಾಸಿ-ಪಾಟ್ನಾ ವಿಮಾನಗಳನ್ನು ಪ್ರಾರಂಭಿಸುವುದಾಗಿ ಸ್ಪೈಸ್‌ಜೆಟ್ ಘೋಷಿಸಿತ್ತು.

  • ರಸ್ತೆ ಬದಿ ಕಂಬಕ್ಕೆ ನೇಣು ಬಿಗಿದುಕೊಂಡ – ಡೆತ್‍ನೋಟ್ ನಲ್ಲಿತ್ತು ಪತ್ನಿ ರಹಸ್ಯ

    ರಸ್ತೆ ಬದಿ ಕಂಬಕ್ಕೆ ನೇಣು ಬಿಗಿದುಕೊಂಡ – ಡೆತ್‍ನೋಟ್ ನಲ್ಲಿತ್ತು ಪತ್ನಿ ರಹಸ್ಯ

    ಜೈಪುರ: ರಾಜಸ್ಥಾನದ ಶ್ರೀಗಂಗಾ ನಗರ ಜಿಲ್ಲೆಯ ಅನೂಪಗಢದಲ್ಲಿ ವ್ಯಕ್ತಿಯೋರ್ವ ರಸ್ತೆ ಬದಿ ಕಂಬಕ್ಕೆ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ.

    35 ವರ್ಷದ ಸುಖ್‍ದೇವ್ ಬಾಜೀಗರ್ ಆತ್ಮಹತ್ಯೆಗೆ ಶರಣಾದ ವ್ಯಕ್ತಿ. ಇಂದು ಬೆಳಗ್ಗೆ ಸುಖ್‍ದೇವ್ ಶವ ಅನೂಪಗಢ ಬಳಿಯ ಹೆದ್ದಾರಿ ಪಕ್ಕದ ಕಂಬದಲ್ಲಿ ನೇತಾಡುತ್ತಿತ್ತು. ಶವ ನೋಡಿದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸುಖ್‍ದೇವ್ ಜೇಬಿನಲ್ಲಿ ಡೆತ್ ನೋಟ್ ಲಭ್ಯವಾಗಿದೆ.

    ಶವದ ಬಳಿ ಡೆತ್‍ನೋಟ್ ಲಭ್ಯವಾಗಿದ್ದು, ಮೃತ ವ್ಯಕ್ತಿ ಪತ್ನಿಯ ಅಕ್ರಮ ಸಂಬಂಧದ ಬಗ್ಗೆ ಬರೆಯಲಾಗಿದೆ. ಸುಖ್‍ದೇವ್ ಪತ್ನಿ ಜೊತೆ ವಾರ್ಡ್-28ರಲ್ಲಿ ವಾಸವಾಗಿದ್ದನು. ಘಟನೆ ಸಂಬಂಧ ಸುಖ್‍ದೇಬ್ ಕುಟುಂಬಸ್ಥರಿಂದ ಮಾಹಿತಿ ಕಲೆ ಹಾಕಲಾಗುತ್ತಿದ್ದು, ಮರಣೋತ್ತರ ಶವ ಪರೀಕ್ಷೆ ಬಳಿಕ ಮೃತದೇಹ ಕುಟುಂಬಕ್ಕೆ ಹಸ್ತಾಂತರಿಸಲಾಗುವುದು ಎಂದು ಪೊಲೀಸರು ಹೇಳಿದ್ದಾರೆ.

  • ಮಳೆಯ ಆರ್ಭಟವನ್ನೂ ಲೆಕ್ಕಿಸದೇ ಕಂಬವನ್ನು ಹೊತ್ತೊಯ್ದು ಗ್ರಾಮಕ್ಕೆ ಬೆಳಕು ತಂದ ಗ್ರಾಮಸ್ಥರು!

    ಮಳೆಯ ಆರ್ಭಟವನ್ನೂ ಲೆಕ್ಕಿಸದೇ ಕಂಬವನ್ನು ಹೊತ್ತೊಯ್ದು ಗ್ರಾಮಕ್ಕೆ ಬೆಳಕು ತಂದ ಗ್ರಾಮಸ್ಥರು!

    ಕಾರವಾರ: ಹಳ್ಳದಲ್ಲಿ ಎದೆ ಮಟ್ಟದ ನೀರು ಹರಿಯುತ್ತಿದ್ದರೂ, ಊರಿನ ಕತ್ತಲು ಓಡಿಸಲು ಮಳೆಯ ಆರ್ಭಟವನ್ನೂ ಲೆಕ್ಕಿಸದೇ ಗ್ರಾಮಸ್ಥರು ಜೀವದ ಹಂಗು ತೊರೆದು ತುಂಬಿ ಹರಿಯುತ್ತಿದ್ದ ಹೊಳೆಯ ನೀರಿನಲ್ಲೇ ಕಂಬವನ್ನು ಹೊತ್ತೊಯ್ದು ಗ್ರಾಮಕ್ಕೆ ಬೆಳಕು ತಂದ ಘಟನೆ ಉತ್ತರ ಕನ್ನಡ ಜಿಲ್ಲೆಯ ಅಂಕೋಲ ತಾಲೂಕಿನಲ್ಲಿ ನಡೆದಿದೆ.

    ಅಂಕೋಲ ತಾಲೂಕಿನ ಕಟ್ಟಿನಕಲು ಗ್ರಾಮದ ಕೋಟೇಪಾಲ್, ಕುಣಬೇರಕೇರಿ, ಬೇರೂಳ್ಳಿ, ಮತಿನಮತ್ತಿಯ ಸುತ್ತಮುತ್ತಲ ಗ್ರಾಮದಲ್ಲಿ ಕಳೆದ 8 ದಿನಗಳಿಂದ ಮಳೆಗೆ ಕಂಬದ ಮೇಲೆ ಮರ ಉರುಳಿ ವಿದ್ಯುತ್ ವ್ಯತ್ಯಯವಾಗಿತ್ತು. ಹೆಸ್ಕಾಂಗೆ ಈ ಬಗ್ಗೆ ದೂರು ನೀಡಿದರೂ ಅಧಿಕಾರಿಗಳು ಮಾತ್ರ ಸ್ಪಂದಿಸಲಿಲ್ಲ.

    8 ದಿನಗಳಿಂದ ಕತ್ತಲಲ್ಲಿದ್ದ ಜನರು ಹೆಸ್ಕಾಂ ಅಧಿಕಾರಿಗಳ ಧೋರಣೆಗೆ ಬೇಸತ್ತು ಊರ ಜನರೇ ಮುರಿದು ಹೋದ ಕಂಬಗಳನ್ನು ಹೊಸದಾಗಿ ಹಾಕುವ ಕೆಲಸಕ್ಕೆ ಕೈ ಹಾಕಿದ್ದಾರೆ. ರಭಸವಾಗಿ ಎದೆ ಮಟ್ಟಕ್ಕೆ ಹರಿಯುತಿದ್ದ ಹಳ್ಳದಲ್ಲಿಯೇ ರಾಷ್ಟ್ರೀಯ ಹೆದ್ದಾರಿ 63 ರಿಂದ ಮೂರು ಕಿ.ಮೀ ದೂರವಿರುವ ಹಿರಿಹಳ್ಳದ ಮೂಲಕ ಕಂಬಗಳನ್ನು ತಮ್ಮ ಗ್ರಾಮಕ್ಕೆ ಹೊತ್ತೂಯ್ದಿದಾರೆ.

    ಕಂಬಗಳು ಮುರಿದ ಜಾಗದಲ್ಲಿ ನೆಟ್ಟು ತಮ್ಮ ಗ್ರಾಮಗಳಿಗೆ ಬೆಳಕು ತಂದಿದ್ದಾರೆ. ಕಳೆದ ಹಲವು ವರ್ಷಗಳಿಂದ ಮಳೆಗಾಲದಲ್ಲಿ ಈ ಗ್ರಾಮ ಹಿರಿಹಳ್ಳದಿಂದಾಗಿ ದ್ವೀಪದಂತಾಗುತ್ತದೆ. ಹೀಗಾಗಿ ಈ ಗ್ರಾಮಕ್ಕೆ ಹಲವು ವರ್ಷಗಳಿಂದ ಸೇತುವೆ ಇಲ್ಲದೇ ಹಳ್ಳದಲ್ಲೇ ನಡೆದುಕೊಂಡು ಹೋಗುವ ಸ್ಥಿತಿಯಿದ್ದು ತಮಗೊಂದು ಸೇತುವೆಯಾಗಬೇಕೆಂಬುದು ಊರಿನ ಜನರು ಬಹಳ ವರ್ಷಗಳಿಂದ ಬೇಡಿಕೆ ಇಟ್ಟಿದ್ದಾರೆ. ಆದರೆ ಈ ಬೇಡಿಕೆ ಇನ್ನೂ ಈಡೇರದ ಹಿನ್ನೆಲೆಯಲ್ಲಿ ಗ್ರಾಮಸ್ಥರು ಅಧಿಕಾರಿಗಳು ಮತ್ತು ಜನ ಪ್ರತಿನಿಧಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ವಿದ್ಯುತ್ ಕಂಬ ಸಾಗಣೆ ವೇಳೆ ಟ್ರ್ಯಾಕ್ಟರ್ ಪಲ್ಟಿ – ನಾಲ್ವರ ದುರ್ಮರಣ

    ವಿದ್ಯುತ್ ಕಂಬ ಸಾಗಣೆ ವೇಳೆ ಟ್ರ್ಯಾಕ್ಟರ್ ಪಲ್ಟಿ – ನಾಲ್ವರ ದುರ್ಮರಣ

    ರಾಯಚೂರು: ವಿದ್ಯುತ್ ಕಂಬ ಸಾಗಣೆ ವೇಳೆ ಟ್ರ್ಯಾಕ್ಟರ್ ಪಲ್ಟಿಯಾಗಿ ನಾಲ್ವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಜಿಲ್ಲೆಯ ಸಿಂಧನೂರಿನ ಶ್ರೀಪುರಂ ಜಂಕ್ಷನ್‍ನಲ್ಲಿ ನಡೆದಿದೆ.

    ನಾಗರಾಜ್ (35), ರಮೇಶ್(25), ಶರಣಪ್ಪ(19) ಸ್ಥಳದಲ್ಲೇ ಸಾವನ್ನಪ್ಪಿದ್ದರೆ, ಅಪಘಾತದಲ್ಲಿ ಗಾಯಗೊಂಡಿದ್ದ ಮಲ್ಲಿಕಾರ್ಜನ್ (30) ಎಂಬವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಮೂವರು ತೀವ್ರವಾಗಿ ಗಾಯಗೊಂಡಿದ್ದು ಚಿಕಿತ್ಸೆಗಾಗಿ ಸಿಂಧನೂರಿನ ಸರ್ಕಾರಿ ಆಸ್ಪತೆಗೆ ದಾಖಲಿಸಲಾಗಿದೆ.

    ವಿದ್ಯುತ್ ಕಂಬ ಸಾಗಿಸುತ್ತಿದ್ದ ಟ್ರ್ಯಾಕ್ಟರ್ ನ ಟ್ರಾಲಿ ಪಲ್ಟಿ ಹೊಡೆದು ಕಾರಣ ವಿದ್ಯುತ್ ಕಂಬಗಳು ಕಾರ್ಮಿಕರ ಮೇಲೆ ಬಿದ್ದು ಈ ಅನಾಹುತ ಸಂಭವಿಸಿದೆ. ಮೃತರು ಕೊಪ್ಪಳದ ಸುಳೆಕಲ್ ಮೂಲದವರು ಎನ್ನಲಾಗಿದ್ದು. ಸಾಸಲಮರಿ ಕ್ಯಾಂಪ್‍ನಿಂದ ಸಿಂಧನೂರು ಮಧ್ಯೆ ವಿದ್ಯುತ್ ಕಂಬ ಅಳವಡಿಕೆ ಕಾರ್ಯಕ್ಕೆ ಸಾಗಾಣೆ ಮಾಡಲಾಗುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ. ಸಿಂಧನೂರು ಸಂಚಾರಿ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.