Tag: Police Constable

  • ಅನಾಥ ಮಗುವಿಗೆ ಎದೆ ಹಾಲುಣಿಸಿದ ಪೊಲೀಸ್ ಪೇದೆ

    ಅನಾಥ ಮಗುವಿಗೆ ಎದೆ ಹಾಲುಣಿಸಿದ ಪೊಲೀಸ್ ಪೇದೆ

    ಬೆಂಗಳೂರು: ಅನಾಥ ಮಗುವಿಗೆ ಎದೆ ಹಾಲುಣಿಸಿ ಮಹಿಳಾ ಪೊಲೀಸ್ ಪೇದೆಯೊಬ್ಬರು ತಾಯ್ತನ ಮೆರೆದಿದ್ದಾರೆ.

    ಯಲಹಂಕ ಠಾಣೆಯ ಸಂಗೀತ ಹಳಿಮನಿ ಮಗುವಿಗೆ ಹಾಲುಣಿಸಿದ ಪೇದೆ. ಬುಧವಾರ ಜಿಕೆವಿಕೆ ಉದ್ಯಾನವನದ ಬಳಿ ಅನಾಥ ಹೆಣ್ಣು ಮಗುವೊಂದು ಕಾಣಿಸಿಕೊಂಡಿತ್ತು. ಕೂಡಲೇ ಅಲ್ಲಿಯೇ ಇದ್ದ ಸಿವಿಲ್ ಡಿಫೆನ್ಸ್ ಮಂದಿ ಮಗುವನ್ನು ಸರ್ಕಾರಿ ಆಸ್ಪತ್ರೆಗೆ ಕೊಂಡೊಯ್ದಿದ್ದಾರೆ.

    ಹಾಲು ಹಾಗೂ ಗ್ಲೂಕೋಸ್ ಇಲ್ಲದೇ ಹೆಣ್ಣು ಮಗು ಬಳಲುತ್ತಿತ್ತು. ಸ್ಥಳದಲ್ಲಿಯೇ ಇದ್ದ ಸಂಗೀತ ಕೂಡಲೇ ಮಗುವಿಗೆ ಹಾಲು ಉಣಿಸಿ ಸಾರ್ಥಕತೆ ಮೆರೆದಿದ್ದಾರೆ. ಸಂಗೀತಾ ಅವರ ಕಾರ್ಯಕ್ಕೆ ಎಲ್ಲಿಲ್ಲದ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಸದ್ಯ ಮಗುವಿನ ಸ್ಥಿತಿ ಆರೋಗ್ಯವಾಗಿದ್ದು, ವಾಣಿ ವಿಲಾಸ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಮಗುವಿನ ಸ್ಥಿತಿ ಗತಿ ತಿಳಿದುಕೊಂಡ ಬಳಿಕ ವೈದ್ಯರು ಮಕ್ಕಳ ಕಲ್ಯಾಣ ಇಲಾಖೆಗೆ ಮಗುವನ್ನು ಹಸ್ತಾಂತರಿಸಲಿದ್ದಾರೆ.

    ಕಳೆದ ವರ್ಷ ತಾಯಿಯೊಬ್ಬಳು ತನ್ನ ಮಗುವನ್ನು ಪೊದೆಯೊಂದರ ಬಳಿ ಎಸೆದು ಹೋಗಿದ್ದಳು. ರಸ್ತೆಯಲ್ಲಿ ಓಡಾಡೋ ಜನ ಮಗುವಿನ ಅಳುವಿನ ಶಬ್ಧ ಕೇಳಿ ಮಗುವನ್ನು ರಕ್ಷಿಸಿ ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ ಪೊಲೀಸರಿಗೆ ಒಪ್ಪಿಸಿದ್ದರು. ಹೊಟ್ಟೆ ಹಸಿವಿನಿಂದ ಅಳುತ್ತಿದ್ದ ಮಗುವಿನ ಕೂಗಿಗೆ ಕೆಲವು ದಿನಗಳ ಹಿಂದಷ್ಟೇ ಬಾಣಂತನ ಮುಗಿಸಿ ಕೆಲಸಕ್ಕೆ ಬಂದಿದ್ದ ಮಹಿಳಾ ಪೇದೆ ಅರ್ಚನಾ ಎಂಬವರು ಹಿಂದು-ಮುಂದು ನೋಡದೇ ಹಾಲುಣಿಸಿ ಮಗುವನ್ನು ಬಾಲವಿಹಾರಕ್ಕೆ ಕಳುಹಿಸಿದ್ದರು. ಆದರೆ ಬಾಲವಿಹಾರದಲ್ಲಿ ಮಗು ಅನಾರೋಗ್ಯದಿಂದ ಮೃತಪಟ್ಟಿತ್ತು.

    ಹೊಟ್ಟೆ ಹಸಿವಿನಿಂದ ಅಳುತ್ತಿದ್ದ ಮಗುವಿಗೆ ಹಾಲುಣಿಸಿದಕ್ಕೆ ಅರ್ಚನಾ ಅವರಿಗೆ ಬಿಬಿಎಂಪಿ ವತಿಯಿಂದ ಸನ್ಮಾನ ಮಾಡಿ ಸೀರೆ ಹಾಗೂ ಕೆಂಪೇಗೌಡ ಪದಕ ನೀಡಲಾಗಿತ್ತು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • 2 ವರ್ಷದ ಮಗನ ಕೊಂದು ಪೇದೆ ಪತ್ನಿ ಆತ್ಮಹತ್ಯೆಗೆ ಶರಣು!

    2 ವರ್ಷದ ಮಗನ ಕೊಂದು ಪೇದೆ ಪತ್ನಿ ಆತ್ಮಹತ್ಯೆಗೆ ಶರಣು!

    ಪುಣೆ: ಪೊಲೀಸ್ ಪೇದೆಯೊಬ್ಬರ ಪತ್ನಿ ತನ್ನ 2 ವರ್ಷದ ಪುಟ್ಟ ಕಂದಮ್ಮನನ್ನು ಕೊಲೆಗೈದು ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಂಡ ಘಟನೆ ಇಲ್ಲಿನ ಹದಪ್ಸರ್‍ನಲ್ಲಿ ನಡೆದಿದೆ.

    ಆತ್ಮಹತ್ಯೆಗೆ ಶರಣಾದ ಮಹಿಳೆಯನ್ನು 22 ವರ್ಷದ ಪೂನಂ ಅಲಿಯಾಸ್ ಜಾನಕಿ ಎಂದು ಗುರುತಿಸಲಾಗಿದೆ. ಈಕೆ ತನ್ನ ಮಗ ಶಿವಾನ್ಶ್‍ನನ್ನು ಕೊಲೆಗೈದು ಬಳಿಕ ತಾನೂ ಸಾವಿಗೆ ಶರಣಾಗಿದ್ದಾಳೆ. ಇವರು ಪುಣೆಯ ಹದಾಪ್ಸರ್‍ನ ತಿಲೆಕರ್ ವಸ್ಟಿ ನಿವಾಸಿಗಳಾಗಿದ್ದಾರೆ.

    ಶನಿವಾರ ಬೆಳಗ್ಗೆ 5 ಗಂಟೆ ಸುಮಾರಿಗೆ 27 ವರ್ಷದ ಅಮಿತ್ ದತ್ತಾತ್ರೆಯ್ ಕಂಬ್ಲೆ ಕೆಲಸ ಮುಗಿಸಿ ಮನೆಗೆ ವಾಪಸ್ಸಾಗಿದ್ದ ಸಂದರ್ಭದಲ್ಲಿ ಪತ್ನಿ ಫ್ಯಾನ್ ಗೆ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವುದು ಬೆಳಕಿಗೆ ಬಂದಿದೆ.

    ಅಮಿತ್ ಮನೆಗೆ ತೆರಳಿ ಡೋರ್ ಬೆಲ್ ಮಾಡಿದ್ದಾರೆ. ಆದ್ರೆ ಮನೆಯೊಳಗಿಂದ ಪತ್ನಿ ಯಾವುದೇ ಪ್ರತಿಕ್ರಿಯೆ ನೀಡಿರಲಿಲ್ಲ. ಹೀಗಾಗಿ ಅವರು ಕಿಟಕಿಯ ಮೂಲಕ ಮನೆಯೊಳಗೆ ಇಣುಕಿ ನೋಡಿದ್ದು, ಪತ್ನಿ ಫ್ಯಾನ್ ಗೆ ನೇಣು ಬಿಗಿದುಕೊಂಡಿರುವುದು ಕಂಡುಬಂದಿದೆ. ಅಲ್ಲದೇ ಮತ್ತೆ ಇಣುಕಿದಾಗ ಪುಟ್ಟ ಮಗನೂ ಅರೆ ಪ್ರಜ್ಞಾವಸ್ಥೆಯಲ್ಲಿ ಬಿದ್ದಿರುವುದು ಕಂಡಿದೆ. ಪತ್ನಿ ಹಾಗೂ ಮಗನ ಸ್ಥಿತಿಯನ್ನು ಕಣ್ಣಾರೆ ಕಂಡ ಅಮಿತ್ ಸ್ಥಳದಲ್ಲೇ ಕುಸಿದುಬಿದ್ದಿದ್ದಾರೆ ಎಂದು ಹದಪ್ಸರ್ ಠಾಣೆಯ ಪೊಲೀಸ್ ಅಧಿಕಾರಿ ಸುನೀಲ್ ತಂಬೆ ತಿಳಿಸಿದ್ದಾರೆ.

    ತಾಯಿ-ಮಗ ಇಬ್ಬರೂ ಮೃತಪಟ್ಟಿದ್ದಾರೆ. ಮೇಲ್ನೋಟಕ್ಕೆ ಪೂನಂ ಮೊದಲು ಮಗನನ್ನು ಹಿಡಿದು ಆತನ ಮುಖಕ್ಕೆ ದಿಂಬಿನಿಂದ ಅದುಮಿ ಕೊಲೆ ಮಾಡಿದ್ದಾರೆ ಅಂತ ಪೊಲೀಸ್ ಅಧಿಕಾರಿ ಪ್ರಸಾದ್ ಲೋನಾರೆ ಹೇಳಿದ್ದಾರೆ.

    ಕಳೆದ 4 ವರ್ಷಗಳಿಂದ ನನ್ನ ಮಗಳು ಮಾನಸಿಕವಾಗಿ ನೊಂದಿದ್ದಳು. ಆಕೆಗೆ ನಾವು ಕೌನ್ಸಿಲಿಂಗ್ ಕೊಡಿಸಿ ಗಂಡನ ಮನೆಗೆ ಕಳುಹಿಸಿದ್ದೆವು. ಆದ್ರೆ ಇದೀಗ ಅವರು ನನ್ನ ಮಗಳ ಜೀವನವನ್ನೇ ನಾಶ ಮಾಡಿದ್ರು ಅಂತ ಪೂನಂ ತಂದೆ ಸುರೇಶ್ ಕಣ್ಣೀರು ಹಾಕಿದ್ದಾರೆ.

    ಆತ್ಮಹತ್ಯೆಗೂ ಮುನ್ನ ಪೂನಂ ಡೆತ್ ನೋಟ್ ಬರೆದಿಟ್ಟಿದ್ದು, ಅದರಲ್ಲಿ “ಮನೆಯಲ್ಲಿ ಪತಿ ಇಲ್ಲದಿರುವುದಾಗಿ ಆತನ ತಾಯಿ ಸುಜಾತ ತನಗೆ ಕಿರುಕುಳ ನೀಡುತ್ತಿದ್ದರು” ಅಂತ ಬರೆದುಕೊಂಡಿದ್ದಾರೆ.

    ಆತ್ಮಹತ್ಯೆಗೆ ಪ್ರಚೋದನೆ ನೀಡಿರುವ ಆರೋಪದ ಮೇಲೆ ಅತ್ತೆಯ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಎಸ್‍ಪಿ ನಿವಾಸದ ಎದುರೇ ಗುಂಡು ಹಾರಿಸಿಕೊಂಡು ಪೇದೆ ಆತ್ಮಹತ್ಯೆ

    ಎಸ್‍ಪಿ ನಿವಾಸದ ಎದುರೇ ಗುಂಡು ಹಾರಿಸಿಕೊಂಡು ಪೇದೆ ಆತ್ಮಹತ್ಯೆ

    ಬಾಗಲಕೋಟೆ: ಜಿಲ್ಲೆಯ ಎಸ್‍ಪಿ ನಿವಾಸಕ್ಕೆ ಭದ್ರತಾ ಸಿಬ್ಬಂದಿ ಆಗಿದ್ದ ಪೊಲೀಸ್ ಪೇದೆಯೊಬ್ಬರು ಅವರ ಮನೆ ಎದುರೇ ತೆಲೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

    ಮಂಜುನಾಥ್ ಹರಿಜನ(28) ಆತ್ಮಹತ್ಯೆಗೆ ಶರಣಾದ ಪೇದೆ. ಮಂಜುನಾಥ್ ಅವರು ಮೂಲತಃ ಕೊಪ್ಪಳ ಜಿಲ್ಲೆ ಕುಷ್ಟಗಿ ತಾಲೂಕಿನ ಮಿಟ್ಟಲಕೋಡ ಗ್ರಾಮದ ನಿವಾಸಿ. ಕಳೆದ ಒಂದೂವರೆ ವರ್ಷದಿಂದ ಬಾಗಲಕೋಟೆಯಲ್ಲಿ ಸೇವೆ ಸಲ್ಲಿಸುತ್ತಿದ್ದರು. ಬಾಗಲಕೋಟೆಯ ಎಸ್‍ಪಿ ಸಿ.ಬಿ ರಿಷ್ಯಂತ್ ನಿವಾಸಕ್ಕೆ ಭದ್ರತಾ ಸಿಬ್ಬಂದಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಇಂದು ಎಸ್‍ಪಿ ಮನೆ ಎದುರೇ ಕರ್ತವ್ಯಕ್ಕೆಂದು ನೀಡಲಾಗಿದ್ದ ರೈಫಲ್ 303ಯಿಂದ ತೆಲೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

    ಮಂಜುನಾಥ್ ಹರಿಜನ ಅವರು 2012 ರಂದು ಪೊಲೀಸ್ ಇಲಾಖೆಗೆ ಪೇದೆಯಾಗಿ ನೇಮಕವಾಗಿದ್ದರು. ಮಂಜುನಾಥ್ ಆತ್ಮಹತ್ಯೆ ಮಾಡಿಕೊಳ್ಳಲು ಕಾರಣವೇನು ಎಂಬುದು ತಿಳಿದುಬಂದಿಲ್ಲ. ಪೇದೆ ಆತ್ಮಹತ್ಯೆ ಹಿನ್ನೆಲೆ ಪೊಲೀಸರು ಶ್ವಾನದಳದೊಂದಿಗೆ ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದು, ಪರಿಶಿಲನೆ ನಡೆಸುತ್ತಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live  ವೀಕ್ಷಿಸಲು  ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್  ಮಾಡಿ: play.google.com/publictv

  • ಪ್ರಶ್ನೆ ಪತ್ರಿಕೆ ಸೋರಿಕೆ – ಭಾನುವಾರದ ಪೊಲೀಸ್ ಪೇದೆ ನೇಮಕಾತಿ ಪರೀಕ್ಷೆ ಮುಂದೂಡಿಕೆ

    ಪ್ರಶ್ನೆ ಪತ್ರಿಕೆ ಸೋರಿಕೆ – ಭಾನುವಾರದ ಪೊಲೀಸ್ ಪೇದೆ ನೇಮಕಾತಿ ಪರೀಕ್ಷೆ ಮುಂದೂಡಿಕೆ

    – 116 ಅಭ್ಯರ್ಥಿಗಳು ವಶಕ್ಕೆ, ಪರೀಕ್ಷೆ ಮುಂದೂಡಿ ಎಡಿಜಿಪಿಯಿಂದ ಆದೇಶ

    ಹಾಸನ: ಪೊಲೀಸ್ ಪೇದೆ ನೇಮಕಾತಿ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ನೀಡುವುದಾಗಿ ಆಮಿಷವೊಡ್ಡಿ ಹಣ ವಸೂಲಿ ಮಾಡುತ್ತಿದ್ದ ಜಾಲವನ್ನು ಜಿಲ್ಲೆಯ ಪೋಲಿಸರು ಭೇದಿಸಿದ್ದಾರೆ.

    ಪೊಲೀಸ್ ಪೇದೆ ನೇಮಕಾತಿ ಪ್ರವೇಶ ಪರೀಕ್ಷೆ ಭಾನುವಾರ ನಿಗದಿಯಾಗಿತ್ತು. ಹೀಗಾಗಿ ಅಭ್ಯರ್ಥಿಗಳನ್ನು ಕುಳ್ಳಿರಿಸಿ ಪ್ರಶ್ನೆ ಪತ್ರಿಕೆ ಹಂಚಲು ಸಿದ್ಧತೆ ನಡೆಸುತ್ತಿದ್ದಾಗ ರೆಡ್ ಹ್ಯಾಂಡಾಗಿ ಸಿಕ್ಕಿಬಿದ್ದಿದ್ದಾರೆ. ಪ್ರಕರಣದ ಕಿಂಗ್‍ಪಿನ್ ಶಿವಕುಮಾರ್ ಸ್ವಾಮಿಯನ್ನು ಬಂಧಿಸಲಾಗಿದೆ.

    ಪ್ರಶ್ನೆ ಪತ್ರಿಕೆ ಸೋರಿಕೆಯಾದ ಹಿನ್ನೆಲೆಯಲ್ಲಿ ನೇಮಕಾತಿ ವಿಭಾಗದ ಎಡಿಜಿಪಿ ಅವರು ಪರೀಕ್ಷೆಯನ್ನು ರದ್ದು ಮಾಡಿ ಆದೇಶ ಹೊರಡಿಸಿದ್ದಾರೆ. ಮುಂದಿನ ದಿನಾಂಕವನ್ನು ತಿಳಿಸಲಾಗುವುದು ಎಂದು ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿ ತಿಳಿಸಿದ್ದಾರೆ.

    ಏನಿದು ಪ್ರಕರಣ?:
    ಆರೋಪಿ ಶಿವಕುಮಾರ್ ಸ್ವಾಮಿ ಈ ಹಿಂದೆ ಪಿಯುಸಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದಲ್ಲಿ ಸಿಕ್ಕಿ ಬಿದ್ದಿದ್ದ. ಈ ಬೆನ್ನಲ್ಲೇ ಈಗ ಪೊಲೀಸ್ ಪೇದೆ ಪ್ರವೇಶ ಪರೀಕ್ಷೆ ಪ್ರಶ್ನೆ ಪತ್ರಿಕೆ ನೀಡುವುದಾಗಿ ಆಮಿಷವೊಡ್ಡಿ ಹಣ ವಸೂಲಿ ಮಾಡುತ್ತಿದ್ದ. ನಾಳೆ ಪರೀಕ್ಷಾರ್ಥಿಗಳನ್ನು ನೇರವಾಗಿ ಪರೀಕ್ಷಾ ಕೊಠಡಿಗೆ ಕಳುಹಿಸುವ ವ್ಯವಸ್ಥೆ ಮಾಡಿದ್ದ.

    ಪೊಲೀಸ್ ಪೇದೆ ಪರೀಕ್ಷೆಗೆ ಸಂಬಂಧಿಸಿದ ಪ್ರಶ್ನೆ ಪತ್ರಿಕೆ ಈ ಜಾಲದ ಬಗ್ಗೆ ಖಚಿತ ಮಾಹಿತಿ ಸಿಸಿಬಿಗೆ ಸಿಕ್ಕಿತ್ತು. ರಾಜ್ಯದ ವಿವಿಧ ಭಾಗಗಳಿಂದ ವಿಶೇಷವಾಗಿ ಉತ್ತರ ಕರ್ನಾಟಕದಿಂದ ಸುಮಾರು 116 ಅಭ್ಯರ್ಥಿಗಳನ್ನು ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಶನಿವಾರ ಸಂತೆಯ ಕಲ್ಲಮಠದ ಶ್ರೀನಂಜುಂಡೇಶ್ವರ ವಿದ್ಯಾಮಂದಿರ ಕೊಠಡಿಯೊಂದರಲ್ಲಿ ಸೇರಿಸಲಾಗಿತ್ತು. ಅಭ್ಯರ್ಥಿಗಳಿಗೆ ಪ್ರಶ್ನೆಪತ್ರಿಕೆ ಹಾಗೂ ಅವುಗಳಿಗೆ ಉತ್ತರ ನೀಡಲು ಶಿವಕುಮಾರ್, ಬಸವರಾಜು ಒಳ ಸಂಚು ರೂಪಿಸಿದ್ದರು.

    ಆರೋಪಿಗಳಿಗೆ ಬಲೆ ಬಿಸಿದ್ದ ಸಿಸಿಬಿಯ ಹಿರಿಯ ಪೊಲೀಸ್ ಅಧಿಕಾರಿ ಬಿ.ಆರ್.ವೇಣುಗೋಪಾಲ್ ಮತ್ತು ಬಿ.ಬಾಲರಾಜು ರವರ ನೇತೃತ್ವದ 2 ವಿಶೇಷ ತಂಡಗಳನ್ನು ರಚಿಸಿ, ಹಲವು ಸ್ಪಷ್ಟ ಸೂಚನೆಗಳನ್ನು ನೀಡಿದ್ದರು. ಈ ತಂಡವು ಇಂದು ಬೆಳಗ್ಗೆ ದಾಳಿ ನಡೆಸಿದೆ. ಈ ಜಾಲದ ಪ್ರಮುಖ ರುವಾರಿಯಾಗಿದ್ದ ಶಿವಕುಮಾರ್ ನನ್ನು ಪ್ರಶ್ನೆಪತ್ರಿಕೆ ಸಮೇತ ವಶಕ್ಕೆ ತೆಗೆದುಕೊಳ್ಳಲಾಗಿದೆ. ಅಕ್ರಮವಾಗಿ ಗುಂಪು ಸೇರಿಸಿದ್ದ ಸುಮಾರು 116 ಅಭ್ಯರ್ಥಿಗಳು, 7 ಜನ ಚಾಲಕರು, ಕ್ಲೀನರ್ಸ್ ಹಾಗೂ 4 ಮಿನಿ ಬಸ್, 1 ಇನ್ನೋವಾ ಕಾರ್ ವಾಹನಗಳನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ.

    ಪ್ರತಿ ಅಭ್ಯರ್ಥಿಯಿಂದ 6 ರಿಂದ 8 ಲಕ್ಷ ರೂ. ಹಣ ಪಡೆಯಲಾಗಿತ್ತು ಎಂದು ತನಿಖೆಯಿಂದ ತಿಳಿದು ಬಂದಿದೆ. ಈ ಕೃತ್ಯವನ್ನು ಎಸಗಲು ಬೇರೆ ಬೇರೆ ಆಸಾಮಿಗಳ ಹೆಸರಿನ ದಾಖಲಾತಿಗಳನ್ನು ಬಳಸಿ, ಮೊಬೈಲ್ ಸಿಮ್ ಕಾರ್ಡ್‍ಗಳನ್ನು ಪಡೆದಿರುವುದಾಗಿಯೂ ಮತ್ತು ಇದಕ್ಕಾಗಿ ಸಾಮಾಜಿಕ ಜಾಲತಾಣದಲ್ಲಿ ನಕಲಿ ಖಾತೆಗಳನ್ನು ಸೃಷ್ಟಿಸಿರುವುದು ತಿಳಿದು ಬಂದಿದೆ. ದಾಳಿ ವೇಳೆ ಬಸವರಾಜು ಎಂಬ ಮತ್ತೋರ್ವ ಆರೋಪಿ ತಲೆಮರೆಸಿಕೊಂಡಿದ್ದು, ಈತನ ಪತ್ತೆ ಕಾರ್ಯ ಮುಂದುವರಿದಿರುತ್ತದೆ. ಈ ಸಂಬಂಧ ಬೆಂಗಳೂರು ನಗರ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಐಪಿಸಿ ಮತ್ತು ಐಟಿ ಕಾಯ್ದೆ ಅಡಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live  ವೀಕ್ಷಿಸಲು  ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್  ಮಾಡಿ: play.google.com/publictv

  • ಮುಖ್ಯಪೇದೆಯಿಂದ್ಲೇ ಮಹಿಳಾ ಹೋಮ್ ಗಾರ್ಡ್ ಮೇಲೆ ಅತ್ಯಾಚಾರ

    ಮುಖ್ಯಪೇದೆಯಿಂದ್ಲೇ ಮಹಿಳಾ ಹೋಮ್ ಗಾರ್ಡ್ ಮೇಲೆ ಅತ್ಯಾಚಾರ

    -ರವಿ ಚನ್ನಣ್ಣನವರ್ ನಿಂದ ರಿವಾರ್ಡ್ ಪಡೆದಿದ್ದ ಪೇದೆಯಿಂದ ಕೃತ್ಯ

    ಬೆಂಗಳೂರು: ಖಡಕ್ ಪೊಲೀಸ್ ಅಧಿಕಾರಿ ರವಿ ಚನ್ನಣ್ಣನವರ್ ಅವರಿಂದ ರಿವಾರ್ಡ್ ಪಡೆದಿದ್ದ ಮುಖ್ಯಪೇದೆಯೊಬ್ಬ ಮಹಿಳಾ ಹೋಮ್ ಗಾರ್ಡ್ ಮೇಲೆ ಅತ್ಯಾಚಾರ ಎಸಗಿದ ಅಮಾನವೀಯ ಘಟನೆ ನಗರದ ನಂದಿನಿ ಲೇಔಟ್ ಠಾಣೆಯಲ್ಲಿ ನಡೆದಿದೆ.

    ಜ್ಞಾನ ಭಾರತಿ ಪೊಲೀಸ್ ಠಾಣೆಯ ಚಂದ್ರಶೇಖರ್ ಅತ್ಯಾಚಾರ ಎಸಗಿದ ಮುಖ್ಯಪೇದೆ. ಅತ್ಯಾಚಾರಕ್ಕೆ ಒಳಗಾದ ಮಹಿಳೆಯು ಜ್ಞಾನ ಭಾರತಿ ವಿಶ್ವವಿದ್ಯಾಲಯಲ್ಲಿ ಹೋಮ್ ಗಾರ್ಡ್ ಆಗಿ ಕೆಲಸ ಮಾಡುತ್ತಿದ್ದಳು. ಆರೋಪಿ ಚಂದ್ರಶೇಖರ್ ಸೋಮವಾರ ಮನೆಗೆ ನುಗ್ಗಿ ಮಹಿಳೆಯ ಅತ್ಯಾಚಾರ ಎಸಗಿದ್ದಾನೆ. ಹಳೇ ವೈಷಮ್ಯಕ್ಕಾಗಿ ಈ ಕೃತ್ಯ ಎಸಗಿದ್ದಾನೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

    ಏನಿದು ಪ್ರಕರಣ?:
    ಕುಖ್ಯಾತ ಸರಗಳ್ಳ ಅಚ್ಯುತ್ ಗಣಿಯನ್ನು ಮುಖ್ಯಪೇದೆ ಚಂದ್ರಶೇಖರ್ ಹಿಡಿದಿದ್ದನು. ಹೀಗಾಗಿ ಡಿಸಿಪಿ ರವಿ ಚನ್ನಣ್ಣನವರ ಅವರಿಂದ ರಿವಾರ್ಡ್ ಪಡೆದಿದ್ದ. ಆದರೆ ನಾನು ಕಾರ್ಯನಿರ್ವಹಿಸುತ್ತಿದ್ದ ಠಾಣೆ ವ್ಯಾಪ್ತಿಯ ಜ್ಞಾನ ಭಾರತಿ ವಿಶ್ವವಿದ್ಯಾಲಯದ ಮಹಿಳಾ ಹೋಮ್ ಗಾರ್ಡ್ ಗೆ ಡ್ರಾಪ್ ಕೊಡುವ ನೆಪದಲ್ಲಿ ಚಂದ್ರಶೇಖರ್ ಪರಿಚಯವಾಗಿದ್ದ. ಕೆಲ ದಿನಗಳ ನಂತರ ಕೆಲಸದ ನೆಪದಲ್ಲಿ ಆಕೆಗೆ ಅನೇಕ ಬಾರಿ ಲೈಂಗಿಕ ಕಿರುಕಳ ನೀಡಿದ್ದನು.

    ಅಷ್ಟಕ್ಕೆ ಸುಮ್ಮನಾಗದ ಚಂದ್ರಶೇಖರ್ ಡ್ಯೂಟಿ ಮೇಲಿದ್ದ ಮಹಿಳೆಯನ್ನು ನವೆಂಬರ್ 16ರಂದು ತಬ್ಬಿಕೊಂಡು, ಸೊಂಟದ ಮೇಲೆ ಕೈ ಹಾಕಿದ್ದನು. ಚಂದ್ರಶೇಖರ್ ವರ್ತನೆಯಿಂದ ಎಚ್ಚೆತ್ತುಕೊಂಡ ಮಹಿಳೆ, ಉಸ್ತುವಾರಿ ಅಧಿಕಾರಿ ಹರೀಶ್ ಎಂಬವರ ಗಮನಕ್ಕೆ ತಂದಿದ್ದದು. ಈ ಕರಿತು ಮಾಹಿತಿ ತಿಳಿಯುತ್ತಿದ್ದಂತೆ ಜ್ಞಾನ ಭಾರತಿ ಪೊಲೀಸ್ ಠಾಣಾ ಅಧಿಕಾರಿಗಳು ಚಂದ್ರಶೇಖರ್ ನನ್ನು ಕರೆಸಿಕೊಂಡು, ಫುಲ್ ಕ್ಲಾಸ್ ತೆಗೆದುಕೊಂಡಿದ್ದರು.

    ಇದಾದ ಬಳಿಕ ಮಹಿಳೆಯ ವಿರುದ್ಧ ವೈಷಮ್ಯ ಸಾಧಿಸುತ್ತಿದ್ದ ಚಂದ್ರಶೇಖರ್ ಆಕೆಯ ಮನೆಯಲ್ಲಿ ಯಾರು ಇಲ್ಲದಿರುವುದನ್ನು ಖಚಿತಪಡಿಸಿಕೊಂಡು ನುಗ್ಗಿದ್ದಾನೆ. ಈ ವೇಳೆ ಮಹಿಳೆ ಸ್ನಾನ ಮಾಡುತ್ತಿದ್ದು, ಬಾಗಿಲು ಬಡಿದ ಶಬ್ಧ ಕೇಳಿ ಪತಿ ಬಂದಿದ್ದಾನೆ ಎಂದು ಭಾವಿಸಿ ಬಾಗಿಲು ತೆರೆದಿದ್ದಾಳೆ. ಆಕೆಯನ್ನು ಒಳಗೆ ದೂಡಿದ ಚಂದ್ರಶೇಖರ್ ಬಾಗಿಲು ಹಾಕಿ ಅತ್ಯಾಚಾರ ಎಸಗಿ ಪರಾರಿಯಾಗಿದ್ದಾನೆ ಎಂಬುದಾಗಿ ಪೊಲೀಸರು ತಿಳಿಸಿದ್ದಾರೆ.

    ಈ ಕುರಿತು ಸಂತ್ರಸ್ತ ಮಹಿಳೆ ದೂರು ನೀಡುತ್ತಿದ್ದಂತೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ವಿಚಾರಣೆ ನಡೆಸಿ ಕೋರ್ಟ್‍ಗೆ ಹಾಜರುಪಡಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
    ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
    ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
    ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
    ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews

  • ಪೊಲೀಸ್ ಪೇದೆಯಿಂದ ಡೆಂಟಲ್ ವೈದ್ಯೆಗೆ ಲೈಂಗಿಕ ಕಿರುಕುಳ

    ಪೊಲೀಸ್ ಪೇದೆಯಿಂದ ಡೆಂಟಲ್ ವೈದ್ಯೆಗೆ ಲೈಂಗಿಕ ಕಿರುಕುಳ

    ಬೆಂಗಳೂರು: ಪೊಲೀಸ್ ಪೇದೆ ಲೈಂಗಿಕ ಕಿರುಕುಳ ನೀಡುತ್ತಿದ್ದಾನೆ ಎಂದು ಡೆಂಟಲ್ ವೈದ್ಯೆಯೊಬ್ಬರು ಪೊಲೀಸ್ ಠಾಣೆಗೆ ಹೋಗಿ ದೂರು ಕೊಟ್ಟಿದ್ದಾರೆ.

    ಜ್ಞಾನ ಭಾರತಿ ಪೊಲೀಸ್ ಠಾಣೆಯಲ್ಲಿ ವೈದ್ಯೆ ಗಿರಿನಗರ ಠಾಣೆಯ ಪೇದೆ ಸುದರ್ಶನ್ ಆಸ್ಕಿನ್ ಮೇಲೆ ದೂರು ದಾಖಲಿಸಿದ್ದಾರೆ. ಪೇದೆ ಸುದರ್ಶನ್ ಆಸ್ಕಿನ್ ಲೈಂಗಿಕ ಕಿರುಕುಳ ಹಾಗೂ ಜೀವ ಬೆದರಿಕೆ ನೀಡುತ್ತಿರುವುದಾಗಿ ವೈದ್ಯೆ ದೂರಿನಲ್ಲಿ ತಿಳಿಸಿದ್ದಾರೆ.

    ದೂರಿನಲ್ಲಿ ಏನಿದೆ?
    2013ರಲ್ಲಿ ಸುದರ್ಶನ್ ಹಲ್ಲಿನ ಚಿಕಿತ್ಸೆಗೆಂದು ಬಂದಿದ್ದನು. ಈ ವೇಳೆ ನನ್ನ ಫೋನ್ ನಂಬರ್ ಇಟ್ಟುಕೊಂಡು ಚಿಕಿತ್ಸೆ ನೆಪ ಹೇಳಿಕೊಂಡು ಮಾತನಾಡುತ್ತಿದ್ದನು. ಮೊದಲಿಗೆ ಮಾಮೂಲಿಯಾಗಿದ್ದ ಸುದರ್ಶನ್ ನಂತರ ಫೋನಿನಲ್ಲಿ ಅಸಭ್ಯವಾಗಿ ವರ್ತನೆ ಮಾಡಲು ಶುರುಮಾಡಿದನು. ಮತ್ತೆ ಮತ್ತೆ ಫೋನ್ ಮಾಡಿ ಹಿಂಸೆ ಕೊಡುತ್ತಿದ್ದನು. ನಾನು ಫೋನ್ ರಿಸೀವ್ ಮಾಡುತ್ತಿರಲಿಲ್ಲ. ಬಳಿಕ ಅವನು ನೇರವಾಗಿ ಕ್ಲಿನಿಕ್ ಗೆ ಬಂದು ನಾನು ಏನು ತೊಂದರೆ ಕೊಡುವುದಿಲ್ಲ ನನ್ನ ಬಳಿ ಮಾತನಾಡು ಎಂದು ಹೇಳುತ್ತಿದ್ದನು.

     

    ಅವರ ಕಾಟ ಸಹಿಸಲಾಗದೇ ನಂತರ ನಾನು ಮನೆ ಬದಲಾಯಿಸಿದ್ದೆ. ಆದರೆ ಆತ ಮನೆ ಬದಲಾಯಿಸಿದರೂ ಫೋನ್ ಮಾಡುವುದನ್ನು ಬಿಡಲಿಲ್ಲ. ಹಿಂಬಾಲಿಸಿ ಕೊಂಡು ಮಾತನಾಡುತ್ತಿದ್ದನು. ಸಲುಗೆಯಿಂದ ವರ್ತಿಸಲಿಲ್ಲ ಎಂದರೆ ಕೊಲೆ ಮಾಡುವುದಾಗಿ ಬೆದರಿಸುತ್ತಿದ್ದನು. ಬಳಿಕ ನಾನು ಜ್ಞಾನ ಭಾರತಿ ಠಾಣೆಯಲ್ಲಿ ದೂರು ನೀಡಿದ್ದೆ. ಅಲ್ಲಿ ಅಧಿಕಾರಿಗಳು ಸುದರ್ಶನ್ ಕರೆಸಿ ಮಾತನಾಡಿ ಅವರಿನಿಂದ ಮುಚ್ಚಳಿಕೆ ಬರೆಯಿಸಿಕೊಂಡು ರಾಜಿ ಸಂಧಾನ ಮಾಡಲಾಗಿತ್ತು. ಪೊಲೀಸರು ರಾಜಿ ಸಂಧಾನ ಮಾಡಿಸಿದರೂ ಸುದರ್ಶನ್ ಪುನಃ ಕರೆ ಮಾಡಿ ಬೆದರಿಕೆ ಹಾಕುತ್ತಿದ್ದಾನೆ ಎಂದು ಸಂತ್ರಸ್ತೆ ವೈದ್ಯೆ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

    ಸದ್ಯಕ್ಕೆ ಸುದರ್ಶನ್ ನಡೆಯಿಂದ ಬೆಸರಗೊಂಡ ವೈದ್ಯೆ ಮತ್ತೆ ದೂರು ದಾಖಲು ಮಾಡಿದ್ದಾರೆ. ಈಗ ಜ್ಞಾನ ಭಾರತಿ ಠಾಣೆಯಲ್ಲಿ ಸೆಕ್ಷನ್ 354, 506 ಆಡಿಯಲ್ಲಿ ಪ್ರಕರಣ ದಾಖಲಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಮಗುವಿನ ಜೊತೆ ಪರೀಕ್ಷೆಗೆ ತೆರಳಿದ ತಾಯಿ- ಅಮ್ಮನಾದ ಪೇದೆಯ ಫೋಟೋ ವೈರಲ್

    ಮಗುವಿನ ಜೊತೆ ಪರೀಕ್ಷೆಗೆ ತೆರಳಿದ ತಾಯಿ- ಅಮ್ಮನಾದ ಪೇದೆಯ ಫೋಟೋ ವೈರಲ್

    ಹೈದಾರಬಾದ್: ಮೂಸಾಪೇಟ್‍ನ ಪೊಲೀಸ್ ಪೇದೆಯೊಬ್ಬರು ಪರೀಕ್ಷೆ ಬರೆಯಲು ಬಂದಿದ್ದ ತಾಯಿಯ ಕಂದಮ್ಮನಿಗೆ ಅಮ್ಮನಾಗಿ ಸಾಂತ್ವನ ಮಾಡಿರುವ ಘಟನೆ ತೆಲಂಗಾಣದಲ್ಲಿ ನಡೆದಿದೆ.

    ನಾಲ್ಕು ತಿಂಗಳ ಮಗುವಿನ ತಾಯಿ ಪರೀಕ್ಷೆ ಬರೆಯಲು ಬಂದಿರುತ್ತಾರೆ. ಆ ತಾಯಿಗೆ ತೆಲಂಗಾಣ ಪೊಲೀಸ್ ಪೇದೆ ಮಗುವನ್ನು ನೋಡಿಕೊಳ್ಳುವ ಮೂಲಕ ಸಹಾಯ ಮಾಡಿದ್ದಾರೆ. ಪರೀಕ್ಷೆ ಕೇಂದ್ರದ ಹೊರಗೆ ಅಳುತ್ತಿದ್ದ ಮಗುವಿಗೆ ಸಾಂತ್ವನ ಮಾಡಲು ಯತ್ನಿಸುತ್ತಿದ್ದ ಛಾಯಾಚಿತ್ರವನ್ನು ಟ್ವಿಟರ್‌ನಲ್ಲಿ ಅಪ್ಲೋಡ್ ಮಾಡುವ ಮೂಲಕ ಪೊಲೀಸ್ ಪೇದೆಗೆ ಹೃತ್ಪೂರ್ವಕ ವಂದನೆಗಳು ಎಂದು ಐಪಿಎಸ್ ಅಧಿಕಾರಿ ರೆಮಾ ರಾಜೇಶ್ವರಿ ಹಂಚಿಕೊಂಡಿದ್ದಾರೆ. ಇದೀಗ ಆ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗಿದೆ.

    ಪೊಲೀಸ್ ಪೇದೆ ಮುಜಿಬ್ ಉರ್ ರಹಮಾನ್ ಅವರು ತೆಲಂಗಾಣದ ಮೆಹಬೂಬ್ ನಗರ ಜಿಲ್ಲೆಯ ಮೂಸಾಪೇಟ್ ಪೊಲೀಸ್ ಠಾಣೆಯಲ್ಲಿ ಕಾರ್ಯನಿರ್ವಹಿಸುತ್ತಾರೆ. ರಹಮಾನ್ ಅವರನ್ನು ಬಾಬುಸ್ ಜೂನಿಯರ್ ಕಾಲೇಜಿನಲ್ಲಿ ನಡೆಯುವ ಪರೀಕ್ಷಾ ಕೇಂದ್ರಕ್ಕೆ ಭದ್ರತಾ ವ್ಯವಸ್ಥೆಗಾಗಿ ನಿಯೋಜಿಸಲಾಗಿತ್ತು.

    ಮಗುವಿನ ತಾಯಿ ಸ್ನಾತಕೋತ್ತರ ಪದವೀಧರೆಯಾಗಿದ್ದು, ಯೋಗ್ಯ ಕೆಲಸವಿರಲಿಲ್ಲ. ಅಷ್ಟೇ ಅಲ್ಲದೇ ಮಗುವಿನ ತಾಯಿ ಪೊಲೀಸ್ ಪೇದೆಯಾಗುವ ಆಸೆಯನ್ನು ಹೊಂದಿದ್ದಳು. ಹೀಗಾಗಿ ತಾಯಿ ಪರೀಕ್ಷೆ ಬರೆಯಲು ಬಂದಿದ್ದು, ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆದೊಯ್ದರು. 14 ವರ್ಷದ ಹುಡುಗಿಯನ್ನು ಪರೀಕ್ಷಾ ಕೇಂದ್ರದಲ್ಲಿ ಉಸ್ತುವಾರಿಯಾಗಿ ಮಾಡಲಾಗಿತ್ತು. ಈ ವೇಳೆ ಮಗು ಅಳುತ್ತಿದ್ದದ್ದನ್ನು ಕಂಡು ಕರೆದುಕೊಂಡು ಬಂದು ನಾನು ಸಾಂತ್ವನ ಮಾಡಿದೆ ಎಂದು ರಹಮಾನ್ ಹೇಳಿದರು.

    ರಹಮಾನ್ ಅವರಿಗೆ ಇಬ್ಬರು ಮಕ್ಕಳಿದ್ದು, ಮಗ ಚೀನಾದಲ್ಲಿ ಮೆಡಿಕಲ್ ಓದುತ್ತಿದ್ದಾನೆ. ಮಗಳು ಮುಂದಿನ ವರ್ಷ ಶಾಲೆಯನ್ನು ಮುಗಿಸುತ್ತಿದ್ದಾರೆ.

    https://twitter.com/rama_rajeswari/status/1046456562825539585

    https://twitter.com/rama_rajeswari/status/1046298641273577472

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictvnews

  • ಕರ್ತವ್ಯದ ನಡುವೆ ಗರ್ಭಿಣಿಗೆ ಪೇದೆಯಿಂದ ರಕ್ತದಾನ!

    ಕರ್ತವ್ಯದ ನಡುವೆ ಗರ್ಭಿಣಿಗೆ ಪೇದೆಯಿಂದ ರಕ್ತದಾನ!

    ಹಾವೇರಿ: ಕರ್ತವ್ಯದ ನಡುವೆಯೂ ಟ್ರಾಫಿಕ್ ಪೊಲೀಸ್ ಪೇದೆಯೊರ್ವರು ಗರ್ಭಿಣಿಗೆ ರಕ್ತದಾನ ಮಾಡುವ ಮೂಲಕ ಮಾನವೀಯತೆ ಮೆರೆದಿದ್ದಾರೆ.

    ಆಟೋ ಚಾಲಕ ನಾಗರಾಜ ಅವರ ಸಂಬಂಧಿ ಲಕ್ಷ್ಮಿ ಬರಡಿ ಅವರಿಗೆ ಹೆರಿಗೆ ನೋವು ಕಾಣಿಸಿಕೊಂಡಿತ್ತು. ಹೀಗಾಗಿ ಅವರನ್ನು ಹೆರಿಗೆಗೆಂದು ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದರು. ಹೆರಿಗೆ ವೇಳೆ ಲಕ್ಷ್ಮಿಗೆ ರಕ್ತಸ್ರಾವವಾಗಿ ಬಿ ಪಾಸಿಟಿವ್ ಗುಂಪಿನ ರಕ್ತ ಬೇಕಾಗಿತ್ತು. ಈ ವೇಳೆ ಕರ್ತವ್ಯ ನಿರ್ವಹಿಸುತ್ತಿದ್ದ ಸಂಚಾರಿ ಪೊಲೀಸ್ ಪೇದೆ ಮನೋಜ್ ದೇಸಾಯಿ, ವಿಷಯ ತಿಳಿದು ತಾವೇ ಸ್ವಯಂಪ್ರೇರಿತವಾಗಿ ರಕ್ತದಾನ ಮಾಡಿದರು.

    ಹಾವೇರಿ ರಕ್ತಭಂಡಾರ ಸಂಸ್ಥೆ ಲಕ್ಷ್ಮಿಗೆ ಬಿ ಪಾಸಿಟಿವ್ ರಕ್ತ ಒದಗಿಸಿದೆ. ಬಳಿಕ ಸಂಸ್ಥೆಯಲ್ಲಿ ರಕ್ತ ಸ್ಟಾಕ್ ಇಲ್ಲದ ವೇಳೆ ಪೇದೆ ಮನೋಜ್ ರಕ್ತದಾನದ ಮಾಡುವ ಮೂಲಕ ಬಾಣಂತಿ ಜೀವ ಉಳಿಸಿದ್ದಾರೆ. ಇವರ ಈ ಕಾರ್ಯಕ್ಕೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಈ ಹಿಂದೆ ದಾವಣಗೆರೆಯ ಹರಪ್ಪನಹಳ್ಳಿ ಸಿಪಿಐ ಅಪಘಾತವಾಗಿ ರಸ್ತೆಯಲ್ಲಿ ಬಿದ್ದಿದ್ದ ಗಾಯಾಳುಗಳನ್ನು ನೋಡಿ ತಮ್ಮ ವಾಹನದಲ್ಲೇ ಕರೆದುಕೊಂಡು ಹೋಗಿ ಆಸ್ಪತ್ರೆಗೆ ದಾಖಲಿಸಿ ಮಾನವೀಯತೆ ಮೆರೆದಿದ್ದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಮದ್ವೆಯಾಗಿ 14 ತಿಂಗಳಿಗೆ ಪತ್ನಿಯನ್ನು ಮನೆಯಿಂದ ಹೊರದಬ್ಬಿದ ಪೊಲೀಸ್ ಪತಿ

    ಮದ್ವೆಯಾಗಿ 14 ತಿಂಗಳಿಗೆ ಪತ್ನಿಯನ್ನು ಮನೆಯಿಂದ ಹೊರದಬ್ಬಿದ ಪೊಲೀಸ್ ಪತಿ

    ಬಳ್ಳಾರಿ: ಪೊಲೀಸ್ ಪೇದೆ ವರ್ಷಕ್ಕೊಂದು ಮದುವೆಯಾಗುವುದ್ದಕ್ಕೆ, ಮದುವೆಯಾಗಿ 14ನೇ ತಿಂಗಳಿಗೆ ತನ್ನ ಮೊದಲ ಗರ್ಭಿಣಿ ಪತ್ನಿಗೆ ಕೊಡಬಾರದ ಕಾಟ ಕೊಟ್ಟು ಈಗ ವರದಕ್ಷಿಣೆ ತೆಗದುಕೊಂಡು ಬಾ ಎಂದು ಮನೆಯಿಂದ ಹೊರಹಾಕಿದ ಪ್ರಕರಣವೊಂದು ಬಳ್ಳಾರಿಯಲ್ಲಿ ಬೆಳಕಿಗೆ ಬಂದಿದೆ.

    ಬಳ್ಳಾರಿಯ ಕೌಲಬಜಾರ ಪೊಲೀಸ್ ಠಾಣೆಯಲ್ಲಿ ಕ್ರೈಂ ಪೇದೆಯಾಗಿರುವ ಮೆಹಬೂಬ್ ಬಾಷಾ ಕಳೆದ 14 ತಿಂಗಳ ತಿಂದೆಯಷ್ಟೇ ನಸೀಮಾ ಅವರನ್ನು ಮದುವೆಯಾಗಿದ್ದ. ಆದರೆ ಮದುವೆಯಾದ ನಂತರ ಕೇವಲ 2 ತಿಂಗಳು ಮಾತ್ರ ಪತ್ನಿಯೊಂದಿಗೆ ಸಂಸಾರ ಮಾಡಿದ್ದಾನೆ. ಆದರೆ ಇದೀಗ ಪತ್ನಿಗೆ ಕೊಡಬಾರದ ಕಾಟ ಕೊಟ್ಟು ವರದಕ್ಷಿಣೆ ತರುವಂತೆ ಗರ್ಭಿಣಿ ಪತ್ನಿಯನ್ನು ಮನೆಯಿಂದ ಹೊರಹಾಕಿದ್ದಾನೆ.

    ಪೇದೆ ಮೆಹಬೂಬ್ ಬಾಷಾ ಮದುವೆಯ ವೇಳೆ 3 ಲಕ್ಷ ಹಣ ಹಾಗೂ ಬಂಗಾರವನ್ನು ವರದಕ್ಷಿಣೆಯಾಗಿ ಪಡೆದಿದ್ದ. ಇದೀಗ ಮತ್ತೆ 2 ಲಕ್ಷ ವರದಕ್ಷಿಣೆ ತರುವಂತೆ ಪೀಡಿಸುತ್ತಿದ್ದಾನೆ. ಪೇದೆ ಮೆಹಬೂಬ್ ಬಾಷಾರ ತಾಯಿ ಹಾಗೂ ಅವರ ಸೋದರ ಮಾವ ಸಹ ವರದಕ್ಷಿಣೆ ತರುವಂತೆ ಪೀಡಿಸುತ್ತಾ ಹಲ್ಲೆ ಮಾಡಿದ್ದಾರೆ. ಪತಿ ಈಗ ಮೂರು ತಿಂಗಳ ಗರ್ಭಿಣಿಯಾಗಿರುವ ನನ್ನನ್ನು ಮನೆಯಿಂದಲೇ ಹೊರಹಾಕಿ ವರದಕ್ಷಿಣೆಗಾಗಿ ಮತ್ತೊಂದು ಮದುವೆಯಾಗಲು ಸಜ್ಜಾಗಿದ್ದಾನೆ ಎಂದು ನಸೀಮಾ ಆರೋಪಿಸಿದ್ದಾರೆ.

    ಪೇದೆಯ ಕಿರುಕುಳಕ್ಕೆ ಬೇಸತ್ತ ನಸೀಮಾ ಇದೀಗ ಬಳ್ಳಾರಿಯ ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾಳೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv 

  • ದೂರು ನೀಡಲು ಬಂದವನ ಬಳಿ ಲಂಚ ಪಡೆದ ಪೊಲೀಸ್ ಪೇದೆ! -ವಿಡಿಯೋ ನೋಡಿ

    ದೂರು ನೀಡಲು ಬಂದವನ ಬಳಿ ಲಂಚ ಪಡೆದ ಪೊಲೀಸ್ ಪೇದೆ! -ವಿಡಿಯೋ ನೋಡಿ

    ವಿಜಯಪುರ: ಠಾಣೆಗೆ ದೂರು ನೀಡಲು ಆಗಮಿಸಿದ್ದ ದೂರುದಾರನಿಂದಲೇ ಮುಖ್ಯ ಪೊಲೀಸ್ ಪೇದೆಯೋರ್ವ ಲಂಚ ವಸೂಲಿ ಮಾಡಿದ್ದು ಇದೀಗ ಆ ವಿಡಿಯೋ ವೈರಲ್ ಆಗಿದೆ.

    ಬಸವನಬಾಗೇವಾಡಿ ಪೊಲೀಸ್ ಠಾಣೆಯ ಪೇದೆ ಪರಶುರಾಮ್ ಕಟಬರ್ ವಾಹನ ಬಾಡಿಗೆಗೆ ಎಂದು ಹೇಳಿ ಲಂಚವನ್ನು ಪಡೆದಿದ್ದಾನೆ.

    ಕೆಲ ದಿನಗಳ ಹಿಂದೆ ತಳೇವಾಡ ಗ್ರಾಮದ ಅಶೋಕ ಎಂಬುವವರು ಗುತ್ತಿಗೆದಾರನೋರ್ವನ ಮೇಲೆ ದೂರು ನೀಡಲು ಆಗಮಿಸಿದ್ದರು. ದೂರನ್ನು ಸ್ವೀಕರಿಸಿದ ನಂತರ ಆರೋಪಿಯನ್ನು ಬಂಧಿಸಿ ಕರೆ ತಂದು ವಿಚಾರಣೆ ಮಾಡಲು ವಾಹನ ತೆಗೆದುಕೊಂಡು ಹೋಗಬೇಕು. ಹೀಗಾಗಿ ಮುಖ್ಯ ಪೇದೆ ಪರಶುರಾಮ್ ವಾಹನದ ಬಾಡಿಗೆಗೆ ಹಣ ನೀಡಬೇಕೆಂದು ಸಪೀಡಿಸಿದ್ದಾನೆ. ಇಲ್ಲವಾದರೆ ತನಿಖೆ ವಿಳಂಬವಾಗುತ್ತದೆ. ನಾವು ಕೈಯಿಂದ ಹಣ ಹಾಕಿ ವಾಹನ ಬಾಡಿಗೆ ಮಾಡಿಕೊಂಡು ಹೋಗಿ ಆರೋಪಿಯನ್ನು ಕರೆ ತರಲು ಆಗುವುದಿಲ್ಲವೆಂದು ಬೆದರಿಸಿ ಹಣ ಪಡೆದಿದ್ದಾನೆ.

    ಗುತ್ತಿಗೆದಾರನ ಕಾಮಗಾರಿಯ ವಾಹನಗಳನ್ನು ತನ್ನ ಜಮೀನಿನಲ್ಲಿ ಹೋಗಲು ಅಶೋಕ ಅನುಮತಿ ನೀಡಿದ್ದರು. ಆದರೆ ಗುತ್ತಿಗೆದಾರ ಕಾಮಗಾರಿ ಮುಗಿದ ಬಳಿಕ ಪರಿಹಾರದ ಹಣ ನೀಡದೇ ಸತಾಯಿಸಿದ್ದನು. ಇದನ್ನು ಪ್ರಶ್ನಿಸಿ ಗುತ್ತಿಗೆದಾರನ ಮೇಲೆ ದೂರು ನೀಡಲು ಆಗಮಿಸಿದ್ದ ವೇಳೆ ಮುಖ್ಯ ಪೇದೆಯ ಧನದಾಹ ಬಯಲಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

    https://www.youtube.com/watch?v=Tw2RFpT6AJk