Tag: police dog

  • 5 ಪದಕ ಗೆದ್ದ ಪೃಥ್ವಿ ಇನ್ನಿಲ್ಲ – ಕಂಬನಿ ಮಿಡಿದ ಕೊಡಗಿನ ಪೊಲೀಸರು

    5 ಪದಕ ಗೆದ್ದ ಪೃಥ್ವಿ ಇನ್ನಿಲ್ಲ – ಕಂಬನಿ ಮಿಡಿದ ಕೊಡಗಿನ ಪೊಲೀಸರು

    – ಗೋವಾ, ಪಾಂಡಿಚೇರಿ, ಲಕ್ಷದ್ವೀಪಕ್ಕೂ ಹೋಗಿತ್ತು ಶ್ವಾನ

    ಮಡಿಕೇರಿ: ಅಪರಾಧ ಪತ್ತೆ ಕಾರ್ಯಾಚರಣೆಯಲ್ಲಿ ಪೊಲೀಸ್ ಇಲಾಖೆಯೊಂದಿಗೆ 9 ವರ್ಷ ಸೇವೆ ಸಲ್ಲಿಸಿದ್ದ ಗಂಡು ಶ್ವಾನ (Police Dog) ಪೃಥ್ವಿ ಹೃದಯಾಘಾತದಿಂದ ಸಾವನ್ನಪ್ಪಿದೆ.

    ತನ್ನ ಕರ್ತವ್ಯನಿಷ್ಠೆಗೆ ಒಟ್ಟು 5 ಪದಕ ಪಡೆದಿದ್ದ ಪೃಥ್ವಿ, ಶ್ವಾನದಳ ಸಿಬ್ಬಂದಿ ಶಿವ ಎಂ.ಆರ್ ಗರಡಿಯಲ್ಲಿ ಪಳಗಿತ್ತು. ಪೃಥ್ವಿ ಅಗಲಿಕೆಗೆ ಪೊಲೀಸ್ ಸಿಬ್ಬಂದಿ ಕಂಬನಿ ಮಿಡಿದಿದ್ದು, ಮಡಿಕೇರಿ ಡಿಆರ್ ಪೊಲೀಸ್ ಆವರಣದಲ್ಲಿ ಸಕಲ ಗೌರವದೊಂದಿಗೆ ಅಂತ್ಯಕ್ರಿಯೆ ಮಾಡಲಾಗಿದೆ. ಇದನ್ನೂ ಓದಿ: ಮತ್ತೆ ಬೆಳ್ಳಿಪರದೆಯಲ್ಲಿ ಮಿಂಚಲು ಸಜ್ಜಾದ ದೀಪಿಕಾ ಪಡುಕೋಣೆ

    ಕೊಡಗಿನ (Kodagu) ಅಪರಾಧ ಪ್ರಕರಣದಲ್ಲಿ ಮಿಂಚಿನ ಕಾರ್ಯಾಚರಣೆಗಳಲ್ಲಿ ಪಾಲ್ಗೊಂಡು ಹಲವಾರು ಪ್ರಕರಣಗಳನ್ನು ಭೇದಿಸಿ 9 ವರ್ಷಗಳ ನಿರಂತರ ಸೇವೆಯನ್ನು ಮಾಡಿ ಹಲವು ಪದಕಗಳನ್ನು ಮುಡಿಗೇರಿಸಿಕೊಂಡ ಪೃಥ್ವಿ ಇನ್ನು ನೆನಪು ಮಾತ್ರ. 2017ರಲ್ಲಿ ಕೊಡಗು ಜಿಲ್ಲಾ ಶ್ವಾನದಳ ಘಟಕಕ್ಕೆ ಸೇರ್ಪಡೆಗೊಂಡ ಪೃಥ್ವಿ ಕೊಡಗು ಜಿಲ್ಲಾ ಶ್ವಾನದಳ ಘಟಕದ ಹ್ಯಾಂಡ್ಲರ್ ಶಿವ ಎಂ.ಆರ್ ಅವರಿಂದ ತರಬೇತಿ ಪಡೆದು ಅಪರಾಧ ಕೃತ್ಯ ನಡೆಸಿದವರನ್ನು ಪತ್ತೆ ಹಚ್ಚುವ ಮೂಲಕ ಹಲವಾರು ಪ್ರಕರಣಗಳನ್ನು ಭೇದಿಸಲು ಪೊಲೀಸ್ ಇಲಾಖೆಗೆ (Police Department) ಸಹಕಾರಿಯಾಗಿತ್ತು. ಇದನ್ನೂ ಓದಿ: ಚಿಕ್ಕಬಳ್ಳಾಪುರ ಪೊಲೀಸರ ಭರ್ಜರಿ ಬೇಟೆ – ಕೋಟಿ ಕೋಟಿ ಮೌಲ್ಯದ 5,140 ಮೊಬೈಲ್‌ ಕದ್ದಿದ್ದ ಖದೀಮರ ಬಂಧನ

    ಪೃಥ್ವಿ ಒಟ್ಟು ನೂರಾರು ಅಪರಾಧ ಪ್ರಕರಣ ಪತ್ತೆ ಕಾರ್ಯದಲ್ಲಿ ಭಾಗಿಯಾಗಿತ್ತು. ಚೆಕ್ ಪೋಸ್ಟ್ ಸ್ಫೋಟಕ ಪತ್ತೆ,ವಿವಿಐಪಿ, ವಿಐಪಿ ಭೇಟಿ ಸಂದರ್ಭ ಸ್ಫೋಟಕ ವಸ್ತುಗಳ ಪತ್ತೆ ಮತ್ತು ರಾಷ್ಟ್ರಪತಿಗಳು ಕೊಡಗಿಗೆ ಭೇಟಿ ನೀಡಿದ ಸಂದರ್ಭ ಭದ್ರತಾ ಕರ್ತವ್ಯ ಮಾಡಿತ್ತು. ಕೇಂದ್ರಾಡಳಿತ ಪ್ರದೇಶಗಳಾದ ಗೋವಾ, ಪಾಂಡಿಚೇರಿ, ಲಕ್ಷದ್ವೀಪದಲ್ಲಿ ಪ್ರಧಾನ ಮಂತ್ರಿಗಳ ಭೇಟಿ ಸಂದರ್ಭ

    ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಮರಾಜನ್, ಪೃಥ್ವಿಯ ಕರ್ತವ್ಯದ ಅವಧಿಯಲ್ಲಿನ ಅತ್ಯುತ್ತಮ ಸೇವೆಯನ್ನು ಎಲ್ಲಾ ಅಧಿಕಾರಿಗಳ ಹಾಗೂ ಸಿಬ್ಬಂದಿಗಳ ಪರವಾಗಿ ಶಾಂತಿಯನ್ನು ಕೋರಿ ಗೌರವ ವಂದನೆಯನ್ನು ಸಲ್ಲಿಸಿದರು. ಪೃಥ್ವಿ ಇನ್ನು ಕೊಡಗು ಜಿಲ್ಲಾ ಶ್ವಾನ ಘಟಕದಲ್ಲಿ ನೆನಪು ಮಾತ್ರ. ಆದರೆ ಪೃಥ್ವಿಯ ಸೇವೆ ಮಾತ್ರ ಅವಿಸ್ಮರಣೀಯ.

  • ತೊಗರಿ ಹೊಟ್ಟಿನಲ್ಲಿ ಬಚ್ಚಿಟ್ಟಿದ್ದ 7 ಲಕ್ಷಕ್ಕೂ ಅಧಿಕ ಮೌಲ್ಯದ ಗಾಂಜಾ ಪತ್ತೆ ಹಚ್ಚಿದ ಶ್ವಾನ

    ತೊಗರಿ ಹೊಟ್ಟಿನಲ್ಲಿ ಬಚ್ಚಿಟ್ಟಿದ್ದ 7 ಲಕ್ಷಕ್ಕೂ ಅಧಿಕ ಮೌಲ್ಯದ ಗಾಂಜಾ ಪತ್ತೆ ಹಚ್ಚಿದ ಶ್ವಾನ

    ಬೀದರ್: ಜಿಲ್ಲೆಯ ಔರಾದ್ (Aurad) ತಾಲೂಕಿನ ವಿಜಯನಗರ ತಾಂಡಾದಲ್ಲಿ ಅಕ್ರಮವಾಗಿ ಮಾರಾಟ ಮಾಡಲು ತೊಗರಿ ಹೊಟ್ಟಿನಲ್ಲಿ ಬಚ್ಚಿಟ್ಟಿದ್ದ 7 ಲಕ್ಷಕ್ಕೂ ಅಧಿಕ ಮೌಲ್ಯದ ಗಾಂಜಾವನ್ನು ಪೊಲೀಸ್ ಇಲಾಖೆಗೆ ಸೇರಿದ ಶ್ವಾನ ಪತ್ತೆ ಹಚ್ಚಿದೆ.

    ಪೊಲೀಸ್ ಇಲಾಖೆಗೆ ಸೇರಿದ, ಮಾದಕ ದ್ರವ್ಯ ಪತ್ತೆ ಮಾಡುವ ಪರಿಣಿತಿ ಹೊಂದಿರುವ ಡಾಬರ್ ಮ್ಯಾನ್ ತಳಿಯ ದೀಪಾ ಎನ್ನುವ ಶ್ವಾನ ಗಾಂಜಾವನ್ನು ಪತ್ತೆ ಹಚ್ಚಿದೆ. ಗಾಂಜಾಕೋರರು ಬಚ್ಚಿಟ್ಟಿದ್ದ 7 ಲಕ್ಷಕ್ಕೂ ಅಧಿಕ ಮೌಲ್ಯದ ಗಾಂಜಾವನ್ನು ಪತ್ತೆ ಹಚ್ಚಿದ್ದು, ಓರ್ವ ಆರೋಪಿಯನ್ನು ಬಂಧಿಸಲಾಗಿದೆ.ಇದನ್ನೂ ಓದಿ: ‘ನಿನ್ನ ಪ್ರತಿಯೊಂದು ಹೆಜ್ಜೆಯಲ್ಲೂ ನನ್ನ ಪಾಲಿರಲಿ’ ಎನ್ನುತ್ತಿದ್ದಾರೆ ಸಪ್ತಮಿ ಗೌಡ

    ಔರಾದ್ ತಾಲೂಕಿನಲ್ಲಿ ಅಕ್ರಮವಾಗಿ ಗಾಂಜಾ ಮಾರಾಟ ನಡೆಯುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ ಪೊಲೀಸರು ಹಾಗೂ ತಹಶೀಲ್ದಾರ್ ದಾಳಿ ನಡೆಸಿದ್ದರೂ ಕೂಡ ಗಾಂಜಾ ಪತ್ತೆಯಾಗಿರಲಿಲ್ಲ. ಹೀಗಾಗಿ ತೆಲಂಗಾಣದಿಂದ ಕರೆತಂದಿದ್ದ ಶ್ವಾನವು, ತೊಗರಿ ಹೊಟ್ಟಿನಲ್ಲಿ ಬಚ್ಚಿಟ್ಟಿದ್ದ ಗಾಂಜಾ ಪತ್ತೆ ಹಚ್ಚಿದೆ.

    ಶ್ವಾನದ ಕಾರ್ಯಕ್ಕೆ ಎಸ್‌ಪಿ ಪ್ರದೀಪ್ ಗುಂಟಿ ಮೆಚ್ಚುಗೆ ವ್ಯಕ್ತಪಡಿಸಿದ್ದು, ಈ ಕುರಿತು ಸಂತಪೂರ್ (Santapur) ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಇದನ್ನೂ ಓದಿ: ಪೈಲಟ್‌ಗಳಿಲ್ಲದ ವಿಮಾನಕ್ಕೆ ಏಕೆ ಹತ್ತಿಸುತ್ತೀರಿ – ಏರ್‌ ಇಂಡಿಯಾ ವಿರುದ್ಧ ಡೇವಿಡ್‌ ವಾರ್ನರ್‌ ಗರಂ!

  • ಶಿರೂರು ಗುಡ್ಡ ಕುಸಿತದಲ್ಲಿ ಮಾಲೀಕನನ್ನ ಕಳೆದುಕೊಂಡು ಅನಾಥವಾಗಿದ್ದ ಶ್ವಾನ ಪೊಲೀಸ್‌ ಇಲಾಖೆ ಸೇರ್ಪಡೆ

    ಶಿರೂರು ಗುಡ್ಡ ಕುಸಿತದಲ್ಲಿ ಮಾಲೀಕನನ್ನ ಕಳೆದುಕೊಂಡು ಅನಾಥವಾಗಿದ್ದ ಶ್ವಾನ ಪೊಲೀಸ್‌ ಇಲಾಖೆ ಸೇರ್ಪಡೆ

    – ಮ್ಯಾರಥಾನ್‌ ಓಟದಲ್ಲಿ ಬೆಳ್ಳಿ ಪದಕ

    ಕಾರವಾರ: ಶಿರೂರು ಗುಡ್ಡ ಕುಸಿತದಲ್ಲಿ (Shirur landslide) ತನ್ನ ಮಾಲೀಕನನ್ನು ಕಳೆದುಕೊಂಡು ಅನಾಥವಾಗಿದ್ದ ಶ್ವಾನ ಇದೀಗ ಪೊಲೀಸ್ ಇಲಾಖೆ (Police Department) ಸೇರಿದೆ.

    ಉತ್ತರ ಕನ್ನಡ ಜಿಲ್ಲೆಯ ಪೊಲೀಸ್ ವರಿಷ್ಟಾಧಿಕಾರಿ ಎಂ. ನಾರಾಯಣ್ ಇದನ್ನು ದತ್ತು ಪಡೆದು ಪಳಗಿಸಿದ್ದು, ಇಂದು ಮಾದಕ ದ್ರವ್ಯ ಹಾಗೂ ಸೈಬರ್ ಅಪರಾಧ ಮುಕ್ತ ಕರ್ನಾಟಕ ಜಾಗೃತಿ ಮೂಡಿಸಲು ನಡೆದ 5 ಕಿಮೀ ಮ್ಯಾರಾಥಾನ್‌ (Marathon) ಓಟದಲ್ಲಿ ಈ ಶ್ವಾನ ಬೆಳ್ಳಿ ಪದಕ ಪಡೆದಿದೆ. ಇದನ್ನೂ ಓದಿ: ಮ್ಯಾರಥಾನ್‌ನಲ್ಲಿ ಕುಸಿದು ಬಿದ್ದ ವ್ಯಕ್ತಿ – ಆಸ್ಪತ್ರೆಗೆ ಸೇರಿಸಿ ಮಾನವೀಯತೆ ಮೆರೆದ ಶಾಸಕ ಸತೀಶ್ ಸೈಲ್

    ಹೌದು.. ಶಿರೂರಿನ ಗುಡ್ಡ ಕುಸಿತ ಪ್ರಕರಣ ಇಡೀ ರಾಜ್ಯದಲ್ಲಿಯೇ ಸದ್ದು ಮಾಡಿತ್ತು. ಕಳೆದ 2024ರ ಜುಲೈ 16 ರಂದು ಧಾರಾಕಾರವಾಗಿ ಸುರಿದ ಮಳೆಯಿಂದ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಗುಡ್ಡ ಕುಸಿತವಾಗಿ 11 ಜನ ಮೃತಪಟ್ಟಿದ್ದರು. ಹೆದ್ದಾರಿ ಪಕ್ಕದಲ್ಲೇ ಲಕ್ಷ್ಮಣ್ ನಾಯ್ಕ ಎನ್ನುವವರು ಹೋಟೆಲ್ ನಡೆಸುತ್ತಿದ್ದು ಗುಡ್ಡ ಕುಸಿದು ಮಣ್ಣು ಹೋಟೆಲ್ ಮೇಲೆ ಬಿದ್ದ ಪರಿಣಾಮ ಆತ, ಆತನ ಪತ್ನಿ ಹಾಗೂ ಇಬ್ಬರು ಮಕ್ಕಳು ಮಣ್ಣಿನಡಿ ಸಿಲುಕಿ ಮೃತಪಟ್ಟಿದ್ದರು. ಈ ಘಟನೆಯಲ್ಲಿ ಲಕ್ಷ್ಮಣ್ ನಾಯ್ಕ ಕುಟುಂಬದವರು ಪ್ರೀತಿಯಿಂದ ಸಾಕಿದ್ದ ಶ್ವಾನವೊಂದು ಅನಾಥವಾಗಿತ್ತು. ಕಾರ್ಯಾಚರಣೆ ವೇಳೆ ಪ್ರತಿದಿನ ಬಂದು ಮಾಲೀಕನ ಬರುವಿಕೆಗಾಗಿ ಶ್ವಾನ ಕಾಯುತ್ತಾ ಕುಳಿತಿರುವುದು ಸಾಕಷ್ಟು ಗಮನ ಸೆಳೆದಿತ್ತು.

    ಇದನ್ನು ಗಮನಿಸಿದ ಉತ್ತರ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಎಂ. ನಾರಾಯಣ್, ಶ್ವಾನವನ್ನ ದತ್ತು ಪಡೆದು ಸಲುಹಿದರು. ಜಿಲ್ಲಾ ಪೊಲೀಸ್ ಶ್ವಾನದಳದಲ್ಲಿ ಇದೇ ಶ್ವಾನಕ್ಕೆ ತರಬೇತಿ ನೀಡಿದ್ದರು. ಸದ್ಯ ಜಿಲ್ಲಾ ಪೊಲೀಸ್ ಇಲಾಖೆಯಲ್ಲಿ ಈ ಶ್ವಾನ ಎಲ್ಲರ ಗಮನ ಸೆಳೆದಿದೆ. ಇಂದು ಪೊಲೀಸ್ ಇಲಾಖೆಯಿಂದ ನಡೆದ ಮಾದಕ ದ್ರವ್ಯ ಹಾಗೂ ಸೈಬರ್ ಅಪರಾಧ ಮುಕ್ತ ಕರ್ನಾಟಕ ಜಾಗೃತಿ ಮೂಡಿಸಲು ನಡೆದ ಮ್ಯಾರಾಥಾನ್‌ ಓಟಲ್ಲಿ ಈ ಶ್ವಾನ 5 ಕಿಲೋ ಮೀಟರ್ ಸಂಚರಿಸಿ ಬೆಳ್ಳಿ ಪದಕ ಪಡೆದಿದ್ದು ಕಾರವಾರದ ಶಾಸಕ ಸತೀಶ್ ಸೈಲ್ ಶ್ವಾನಕ್ಕೆ ಪದಕ ತೊಡಿಸಿದರು.

    ಇನ್ನು ಶ್ವಾನಕ್ಕೆ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಎಂ.ನಾರಾಯಣ್ ತನ್ನ ಮನೆಯಲ್ಲಿಯೇ ಇಟ್ಟುಕೊಂಡು ತರಬೇತಿಯನ್ನ ನೀಡಿದ್ದು ಬೇರೆ ಶ್ವಾನಗಳಂತೆ ಈ ಶ್ವಾನ ಸಹ ಸಾಕಷ್ಟು ಚುರುಕಿನಿಂದ ಕೆಲಸ ಮಾಡುತ್ತಿದೆ. ಅಲ್ಲದೇ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿಗಳ ನೆಚ್ಚಿನ ಶ್ವಾನವಾಗಿದ್ದು ಪ್ರತಿನಿತ್ಯ ಬೆಳಿಗ್ಗೆ ಕೆಲಸಕ್ಕೆ ಹೊಗಬೇಕಾದರೆ ಸಲ್ಯೂಟ್ ಮಾಡಿಯೇ ಕಳಿಸುತ್ತದೆ. ಮನೆಗೆ ವಾಪಾಸ್ ಬರುವ ವೇಳೆಯಲ್ಲಿ ಗೇಟ್ ಬಳಿಯೇ ಕಾಯುತ್ತಾ ಕುಳಿತಿರುತ್ತದೆ. ಈ ಶ್ವಾನ ತನ್ನ ಮನೆಯ ಸದಸ್ಯನಂತಾಗಿದೆ ಎನ್ನುತ್ತಾರೆ ಪೊಲೀಸ್ ವರಿಷ್ಟಾಧಿಕಾರಿ ಎಂ.ನಾರಾಯಣ್. ಇದನ್ನೂ ಓದಿ: ನಾನು ನಿಮ್ಮ ಹಾಗೆ ಆಗಬೇಕು ಎಂದ ವಿದ್ಯಾರ್ಥಿನಿಯನ್ನು ತಮ್ಮ ಕುರ್ಚಿಯಲ್ಲಿ ಕೂರಿಸಿದ ಉ.ಕನ್ನಡ ಜಿಲ್ಲಾಧಿಕಾರಿ

  • ಮೋದಿಗೆ ಬಂದೋಬಸ್ತ್ ನೀಡಿದ್ದ ಏಂಜಲ್‍ಗೆ ಅದ್ದೂರಿ ಸೆಂಡಾಫ್

    ಮೋದಿಗೆ ಬಂದೋಬಸ್ತ್ ನೀಡಿದ್ದ ಏಂಜಲ್‍ಗೆ ಅದ್ದೂರಿ ಸೆಂಡಾಫ್

    ಕೋಲಾರ: ಪೊಲೀಸ್ ಇಲಾಖೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ ಶ್ವಾನಕ್ಕೆ (Police Dog) ಕೆಜಿಎಫ್ ಠಾಣೆ ಪೊಲೀಸ್ (KGF Police Station) ಅಧಿಕಾರಿಗಳು ಸನ್ಮಾನಿಸಿ ಅದ್ದೂರಿಯಾಗಿ ಸೋಮವಾರ ಬೀಳ್ಕೊಡಿಗೆ (Farewell) ನೀಡಿದ್ದಾರೆ.

    ಕೊನೆಯದಾಗಿ ಭಾನುವಾರ ನಡೆದ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ (Narendra Modi) ಕಾರ್ಯಕ್ರಮದಲ್ಲಿ ಏಂಜಲ್ ಭದ್ರತಾ ಕಾರ್ಯನಿರ್ವಹಿಸಿತ್ತು. ಅಲ್ಲದೆ ಹಲವಾರು ಗಣ್ಯ ವ್ಯಕ್ತಿಗಳು ಜಿಲ್ಲೆಗೆ ಭೇಟಿ ನೀಡಿದ್ದಾಗ ಏಂಜಲ್ ಕಾರ್ಯ ನಿರ್ವಹಿಸಿತ್ತು. ಪೊಲೀಸ್ ಇಲಾಖೆಯ ಏಂಜಲ್‍ಗೆ ಈಗ ಕೆಜಿಎಫ್ ಎಸ್ಪಿ ಧರಣಿದೇವಿಯವರು ಅದ್ದೂರಿಯಾಗಿ ಸನ್ಮಾನ ಮಾಡಿ ಬೀಳ್ಕೊಡುಗೆ ನೀಡಿದ್ದಾರೆ. ಇದನ್ನೂ ಓದಿ: ಪಬ್‍ಜಿಗೆ ಬ್ರೇಕ್ ಹಾಕಿದ್ದ ತಾಯಿಯ ಕೊಲೆ – ಅಪ್ರಾಪ್ತ ಆರೋಪಿಗೆ ಜಾಮೀನು

    2015ರಲ್ಲಿ ಸೇವೆಗೆ ಸೇರಿದ್ದ ಏಂಜಲ್, ಲ್ಯಾಬ್ರಡರ್ ತಳಿಯ ಹೆಣ್ಣು ಶ್ವಾನ. ಬಾಂಬ್ ಸೇರಿದಂತೆ ಸ್ಫೋಟಕ ಪತ್ತೆಯಲ್ಲಿ ಪರಿಣಿತಿ ಹೊಂದಿತ್ತು. ಕಳೆದ ಎಂಟು ವರ್ಷಗಳ ಕಾಲ ಪೊಲೀಸ್ ಶ್ವಾನದಳದಲ್ಲಿ ಸೇವೆ ಸಲ್ಲಿಸಿತ್ತು.

    ಭಾರತದ ರಾಷ್ಟ್ರಪತಿ, ಪ್ರಧಾನ ಮಂತ್ರಿ, ಉಪರಾಷ್ಟ್ರಪತಿ, ಕೇಂದ್ರದ ಮಂತ್ರಿಗಳು, ಗಣ್ಯ ವ್ಯಕ್ತಿಗಳ ಕಾರ್ಯಕ್ರಮದಲ್ಲಿ ಕಾರ್ಯ ನಿರ್ವಹಿಸಿದ್ದ ಏಂಜಲ್ ಅತ್ಯುನ್ನತ ಸೇವೆ ಸಲ್ಲಿಸಿ ಇಲಾಖೆಯ ಅಧಿಕಾರಿಗಳ ಮೆಚ್ಚುಗೆಗೆ ಪಾತ್ರವಾಗಿತ್ತು. ಇದನ್ನೂ ಓದಿ: ಉಗ್ರರ ಸಂಪರ್ಕಕ್ಕೆ ಮೊಬೈಲ್ ಆಪ್ ಬಳಕೆ – 14 ಅಪ್ಲಿಕೇಷನ್ ನಿಷೇಧಿಸಿದ ಕೇಂದ್ರ

  • 2 ಗಂಟೆಯಲ್ಲಿ 12ಕಿಮೀ ಓಡಿ ಕೊಲೆ ಆರೋಪಿಯನ್ನು ಹಿಡಿದ ಪೊಲೀಸ್ ಶ್ವಾನ

    2 ಗಂಟೆಯಲ್ಲಿ 12ಕಿಮೀ ಓಡಿ ಕೊಲೆ ಆರೋಪಿಯನ್ನು ಹಿಡಿದ ಪೊಲೀಸ್ ಶ್ವಾನ

    – ಧೈರ್ಯಶಾಲಿ ತುಂಗಾಗೆ ಪೊಲೀಸರಿಂದ ಸನ್ಮಾನ
    – ಓಡಿಕೊಂಡು ಹೋಗಿ ಕೊಲೆ ಆರೋಪಿ ಮನೆ ಮುಂದೆ ನಿಂತ ನಾಯಿ

    ದಾವಣಗೆರೆ: ಎರಡು ಗಂಟೆ ಸತತವಾಗಿ 12 ಕಿಲೋಮೀಟರ್ ಓಡಿ ದಾವಣಗೆರೆಯ ಪೊಲೀಸ್ ಶ್ವಾನವೊಂದು ಕೊಲೆ ಆರೋಪಿಯನ್ನು ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿದೆ.

    ಪೊಲೀಸ್ ಟ್ರೈನಿಂಗ್ ಪಡೆದ ಡಾಬರ್ ಮ್ಯಾನ್ ಜಾತಿಯ 9 ವರ್ಷದ ತುಂಗಾ ಹೆಸರಿನ ಶ್ವಾನ ಕೊಲೆಯಾದ ಕೆಲವೇ ಗಂಟೆಗಳಲ್ಲಿ ಆರೋಪಿಯನ್ನು ಪೊಲೀಸರಿಗೆ ಹಿಡಿದುಕೊಟ್ಟಿದೆ. ಕೊಲೆ ನಡೆದ ಸ್ಥಳದಲ್ಲಿ ಕೆಲ ಕಾಲ ಸುತ್ತಿದ ತುಂಗಾ ನಂತರ ಓಡಲು ಶುರು ಮಾಡಿದೆ. ಸತತ ಎರಡು ಗಂಟೆ ಓಡಿ ನೇರವಾಗಿ ಆರೋಪಿಯ ಮನೆಯ ಮುಂದೆ ನಿಂತು ಆರೋಪಿಯನ್ನು ಪೊಲೀಸರಿಗೆ ಹಿಡಿದುಕೊಟ್ಟಿದೆ.

    ಕಳೆದ ಕೆಲ ದಿನಗಳ ಹಿಂದೆ ಆರೋಪಿ ಚೇತನ್, ಚಂದ್ರ ನಾಯಕ್ ಮತ್ತು ಅವರ ಸ್ನೇಹಿತರು ಸೇರಿಕೊಂಡು ಧಾರವಾರ ಜಿಲ್ಲೆಯ ಮನೆಯೊಂದರಲ್ಲಿ ಕಳ್ಳತನ ಮಾಡಿದ್ದು, ಆ ಮನೆಯಲ್ಲಿ ಪಿಸ್ತೂಲ್ ಮತ್ತು ಚಿನ್ನಾಭರಣ ಸೇರಿ ಬೆಲೆ ಬಾಳುವ ವಸ್ತುಗಳನ್ನು ಕದ್ದಿದ್ದಾರೆ. ಈ ವೇಳೆ ಇದ್ದನ್ನು ಹಂಚಿಕೊಳ್ಳುವ ವಿಚಾರದಲ್ಲಿ ಚಂದ್ರ ಮತ್ತು ಚೇತನ್ ನಡುವೆ ಜಗಳವಾಗಿದೆ. ಆಗ ಚಂದ್ರನನ್ನು ಚಾನೆಲ್‍ವೊಂದರ ಬಳಿಗೆ ಕರೆಯಿಸಿಕೊಂಡ ಚೇತನ್ ಕದ್ದ ಪಿಸ್ತೂಲ್‍ನಿಂದ ಚಂದ್ರನನ್ನು ಶೂಟ್ ಮಾಡಿ ಕೊಲೆ ಮಾಡಿ ಅಲ್ಲಿಂದ ಎಸ್ಕೇಪ್ ಆಗಿದ್ದಾನೆ.

    ಈ ಕೊಲೆಯಾದ ಸ್ಥಳಕ್ಕೆ ತುಂಗಾಳನ್ನು ನೋಡಿಕೊಳ್ಳುತ್ತಿದ್ದ ಮುಖ್ಯ ಪೇದೆ ಶ್ವಾನವನ್ನು ಬೆಳಗ್ಗೆ 9.30ಕ್ಕೆ ಕರೆದುಕೊಂಡು ಬಂದಿದ್ದಾರೆ. ಈ ವೇಳೆ ಘಟನೆಯ ಸ್ಥಳದಲ್ಲಿ ವಾಸನೆಯನ್ನು ತೆಗೆದುಕೊಂಡ ತುಂಗಾ ತಕ್ಷಣ ಅಲ್ಲಿಂದ ಓಡಲು ಶುರು ಮಾಡಿದ್ದಾಳೆ. ನಮಗೆ ಸುಳಿವೇ ಸಿಗಲಿಲ್ಲ. ಆದರೆ ತುಂಗಾ ಘಟನಾ ಸ್ಥಳದಿಂದ 12 ಕಿಮೀ ಓಡಿದ್ದಾಳೆ. ಮೊದಲು ಕಾಶಿಪುರ ತಂಡಾಗೆ ಬಂದಳು. ನಂತರ ಅಲ್ಲಿಂದ ಒಂದು ವೈನ್‍ಶಾಪ್‍ಗೆ ಹೋದಳು. ಅಲ್ಲಿಂದ ಒಂದು ಮನೆಯ ಬಳಿ ನಿಂತುಕೊಂಡಳು. ಅಲ್ಲಿ ಆರೋಪಿ ಚೇತನ್ ಫೋನಿನಲ್ಲಿ ಮಾತನಾಡುತ್ತಿದ್ದ. ಆತನನ್ನು ನಾವು ವಶಕ್ಕೆ ಪಡೆದಿದ್ದೇವೆ ಎಂದು ಚೆನ್ನಗಿರಿ ವಿಭಾಗ ಉಪ ಪೊಲೀಸ್ ವರಿಷ್ಠಾಧಿಕಾರಿ ಪ್ರಶಾಂತ್ ಮುನ್ನೊಲ್ಲಿ ಹೇಳಿದ್ದಾರೆ.

    ಸದ್ಯ ಆರೋಪಿ ಚೇತನ್‍ನನ್ನು ಪೊಲೀಸರು ಠಾಣೆಗೆ ಕರೆತಂದು ವಿಚಾರಣೆ ಮಾಡಿದ್ದು, ನಾನೇ ಕೊಲೆ ಮಾಡಿದ್ದು ಎಂದು ಆತ ಒಪ್ಪಿಕೊಂಡಿದ್ದಾನೆ. ಜೊತೆಗೆ ಕೊಲೆ ನಡೆದ ಕೆಲವೇ ಗಂಟೆಗಳಲ್ಲಿ ಆರೋಪಿಯನ್ನು ಹಿಡಿದು ಕೊಟ್ಟ ತುಂಗಾಗೆ ದಾವಣಗೆರೆ ಪೊಲೀಸರು ಸನ್ಮಾನ ಮಾಡಿದ್ದಾರೆ. ಈ ವಿಚಾರವಾಗಿ ಟ್ವೀಟ್ ಮಾಡಿರುವ ದಾವಣಗೆರೆ ಎಸ್‍ಪಿ, ಇಂದು ಶ್ರೀ ಅಮರ್ ಕುಮಾರ್ ಪಾಂಡೆ ಐಪಿಎಸ್, ಮಾನ್ಯ ಎಡಿಜಿಪಿಯವರು ದಾವಣಗೆರೆ ಜಿಲ್ಲಾ ಪೊಲೀಸ್ ಕಛೇರಿಗೆ ಭೇಟಿ ನೀಡಿದ್ದು, ಇತ್ತೀಚಿಗೆ ಸೂಳೇಕೆರೆ ಬಳಿ ನಡೆದ ಕೊಲೆ ಪತ್ತೆ ಪ್ರಕರಣದಲ್ಲಿ ಮಹತ್ತರ ಪಾತ್ರವಹಿಸಿದ್ದ ಶ್ವಾನದಳದ ಕ್ರೈಮ್ ವಿಭಾಗದ ಶ್ವಾನ ‘ತುಂಗಾ’ಗೆ ಹೂವಿನ ಹಾರ ಹಾಕುವ ಮೂಲಕ ಗೌರವಿಸಿದ್ದಾರೆ ಎಂದು ಬರೆದುಕೊಂಡಿದ್ದಾರೆ.

    ತುಂಗಾನ ಬಗ್ಗೆ ಮೆಚ್ಚುಗೆ ಮಾತುಗಳನ್ನಾಡಿರುವ ಅದರ ಟ್ರೈನರ್, ಈಕೆ ನಿಜವಾಗಿಯೂ ಬೆಸ್ಟ್ ಡಾಗ್. ಆಕೆ ಇನ್ನೂ ಪೊಲೀಸ್ ವಿಭಾಗಕ್ಕಾಗಿ 15 ವರ್ಷ ಕೆಲಸ ಮಾಡುವ ಶಕ್ತಿಯನ್ನು ಹೊಂದಿದ್ದಾಳೆ. ನಾನು ಹಲವಾರು ಶ್ವಾನಗಳಿಗೆ ಟ್ರೈನಿಂಗ್ ಮಾಡಿದ್ದೇನೆ. ಯಾವುದೇ ಶ್ವಾನವಾಗಲಿ ಕ್ರೈಮ್ ನಡೆದ ಸ್ಥಳದಿಂದ ವಾಸನೆ ಹಿಡಿದು ಕೇವಲ 3-4 ಕಿಲೋಮೀಟರ್ ಹೋಗುತ್ತವೆ. ಆದರೆ ತುಂಗಾ ಮಾತ್ರ 12 ಕಿಮೀವರೆಗೆ ಹೋಗಿ ಆರೋಪಿಯನ್ನು ಹಿಡಿದುಕೊಟ್ಟಿದ್ದಾಳೆ ಎಂದಿದ್ದಾರೆ.

  • ಪೊಲೀಸ್ ಶ್ವಾನ ಸಾವು-ಸರ್ಕಾರಿ ಗೌರವದೊಂದಿಗೆ ಅಂತ್ಯಸಂಸ್ಕಾರ

    ಪೊಲೀಸ್ ಶ್ವಾನ ಸಾವು-ಸರ್ಕಾರಿ ಗೌರವದೊಂದಿಗೆ ಅಂತ್ಯಸಂಸ್ಕಾರ

    -ಎರಡು ಬಾರಿ ಐಪಿಎಲ್ ಬಂದೋಬಸ್ತ್ ನಲ್ಲಿ ಭಾಗಿ

    ಚಿಕ್ಕಮಗಳೂರು: ರಾಜ್ಯ ಮಟ್ಟದ ಶ್ವಾನ ಸ್ಪರ್ಧೆಯಲ್ಲಿ ಭಾಗವಹಿಸಿ, ರಾಷ್ಟ್ರಪತಿ, ಪ್ರಧಾನಿ ಸೇರಿದಂತೆ ಸಿಎಂ ಭದ್ರತೆಯಲ್ಲೂ ಭಾಗಿಯಾಗಿದ್ದ ಜಿಲ್ಲೆಯ ಪೊಲೀಸ್ ಡಾಗ್ ಸಾವನ್ನಪ್ಪಿದೆ. 12 ವರ್ಷದ ಹನಿ ಮೃತ ಪೊಲೀಸ್ ಶ್ವಾನ.

    ವಯೋಸಹಜವಾಗಿ ಸಾವನ್ನಪ್ಪಿರೋ ಹನಿ ಆರೋಗ್ಯ ಸಮಸ್ಯೆಯಿಂದ ಕಳೆದೊಂದು ವಾರದಿಂದ ಅನ್ನ-ಆಹಾರ ಬಿಟ್ಟಿತ್ತು. ತೀವ್ರ ಅಸ್ವಸ್ಥಗೊಂಡಿದ್ದ ಹನಿ ಇಂದು ಬೆಳಗ್ಗೆ ನಿಧನ ಹೊಂದಿದೆ. ಸ್ಫೋಟಕ ಪ್ರಕರಣ ಸೇರಿದಂತೆ ಹಲವು ಕೇಸ್ ಪತ್ತೆ ಹಚ್ಚುವಲ್ಲಿ ಹನಿ ಸಾಕ್ಷಿಯಾಗಿತ್ತು. ಹನಿ ಹೆಚ್ಚಾಗಿ ಸ್ಫೋಟಕಗಳನ್ನ ಪತ್ತೆ ಹಚ್ಚುವ ಕಾರ್ಯದಲ್ಲಿ ನಿರತವಾಗಿತ್ತು. ಭದ್ರತೆಗೆಂದು ರಾಜ್ಯದ ಬಹುತೇಕ ಜಿಲ್ಲೆಗಳಿಗೆ ಹನಿ ಸಂಚರಿಸಿದೆ. ಅಷ್ಟೆ ಅಲ್ಲದೆ, ಎಡಪಂಥೀಯ ಉಗ್ರಗಾಮಿಗಳ ವಿರುದ್ಧದ ಕಾರ್ಯಚರಣೆಯಲ್ಲೂ ಭಾಗಿಯಾಗಿದೆ.

    ಎರಡು ಬಾರಿ ಬೆಂಗಳೂರಿನಲ್ಲಿ ನಡೆದು ಐಪಿಎಲ್ ಪಂದ್ಯಾವಳಿಯ ಭದ್ರತೆಯಲ್ಲೂ ಭಾಗಿಯಾಗಿತ್ತು. ವಲಯ ಮಟ್ಟದ ಕ್ರೀಡಾಕೂಟದಲ್ಲಿ ಎರಡು ಬಾರಿ ಚಿನ್ನದ ಪದಕ ಗಳಿಸಿದ್ರೆ, ಒಂದು ಬಾರಿ ರಾಜ್ಯ ಮಟ್ಟದ ಕ್ರೀಡಾಕೂಟದಲ್ಲಿ ಬೆಳ್ಳಿ ಪದಕ ಗೆಲ್ಲೋದರ ಜೊತೆ ಅಖಿಲ ಭಾರತ ರಾಜ್ಯ ಮಟ್ಟದ ಪೊಲೀಸ್ ಕರ್ತವ್ಯ ಕೂಟಕ್ಕೆ ಆಯ್ಕೆಯಾಗಿತ್ತು.

    ಇಂದು ಬೆಳಗ್ಗೆ ಸಾವನ್ನಪ್ಪಿದ ಹನಿಗೆ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯ ಸಂಸ್ಕಾರ ನೆರವೇರಿಸಲಾಗಿದೆ. ನಗರದ ರಾಮನಹಳ್ಳಿಯಲ್ಲಿರುವ ಜಿಲ್ಲಾ ರಿಸರ್ವ್ ಪೊಲೀಸ್ ಗ್ರೌಂಡ್‍ನಲ್ಲಿ ಪೊಲೀಸ್ ಡಾಗ್ ಹನಿಯ ಅಂತಿಮ ದರ್ಶನದ ಬಳಿಕ ಅಂತ್ಯ ಸಂಸ್ಕಾರ ನಡೆದಿದೆ. ಇಲಾಖೆಯಲ್ಲಿ ಸೇವೆ ಸಲ್ಲಿಸಿದ ಹನಿಗೆ ಎಸ್.ಪಿ. ಹರೀಶ್ ಪಾಂಡೆ, ಎ.ಎಸ್.ಪಿ. ಶೃತಿ ಸೇರಿದಂತೆ ಸಿಬ್ಬಂದಿ ಅಂತಿಮ ದರ್ಶನ ಪಡೆದಿದ್ದಾರೆ. ರಾಮನಹಳ್ಳಿಯ ಡಿ.ಆರ್.ಗ್ರೌಂಡ್‍ನಲ್ಲಿ ಮೃತ ಹನಿಯ ಅಂತ್ಯಕ್ರಿಯೆ ಮಾಡಲಾಗಿದೆ.

  • ರಾಜ್ಯಮಟ್ಟದ ಪೊಲೀಸ್ ಕರ್ತವ್ಯ ಕೂಟದಲ್ಲಿ ಶ್ವಾನ ‘ಸಿರಿ’ಗೆ ಪ್ರಥಮ ಸ್ಥಾನ

    ರಾಜ್ಯಮಟ್ಟದ ಪೊಲೀಸ್ ಕರ್ತವ್ಯ ಕೂಟದಲ್ಲಿ ಶ್ವಾನ ‘ಸಿರಿ’ಗೆ ಪ್ರಥಮ ಸ್ಥಾನ

    ರಾಯಚೂರು: ಬೆಂಗಳೂರಿನ ಯಲಹಂಕದಲ್ಲಿ ಇತ್ತೀಚಿಗೆ ನಡೆದ ರಾಜ್ಯಮಟ್ಟದ ಪೊಲೀಸ್ ಕರ್ತವ್ಯ ಕೂಟದಲ್ಲಿ ಉತ್ತಮ ಪ್ರದರ್ಶನ ತೋರಿದ ರಾಯಚೂರಿನ ಜಿಲ್ಲಾ ಪೊಲೀಸ್ ಅಪರಾಧ ಪತ್ತೆ ವಿಭಾಗದ ಶ್ವಾನದಳದ ‘ಸಿರಿ’ ಹೆಸರಿನ ಶ್ವಾನ ಪ್ರಥಮ ಸ್ಥಾನ ಪಡೆದು ಚಿನ್ನದ ಪದಕ ಮುಡಿಗೇರಿಸಿಕೊಂಡಿದೆ.

    ಈ ಶ್ವಾನ ಅಪರಾಧ ಪತ್ತೆ ಹಚ್ಚುವಲ್ಲಿ ಚಾಣಾಕ್ಷತೆ ಮೆರದು ಪ್ರಥಮ ಸ್ಥಾನಗಳಿಸಿದೆ. ಬೆಂಗಳೂರಿನ ಆಡುಗೋಡಿ ತರಬೇತಿ ಶಾಲೆಯಲ್ಲಿ 9 ತಿಂಗಳ ಕಾಲ ಕಠಿಣ ತರಬೇತಿಯನ್ನು ಪಡೆದಿರುವ ಸಿರಿ ರಾಷ್ಟ್ರದ ಕ್ರೀಡಾಕೂಟದಲ್ಲಿ ಭಾಗವಹಿಸಲು ಆಯ್ಕೆಯಾಗಿದೆ.

    ಸಿರಿ ಶ್ವಾನವನ್ನು ನಿರ್ವಹಣೆ ಮಾಡುವ ಪೊಲೀಸ್ ಪೇದೆಗಳಾದ ಜಯಕುಮಾರ್ ಹಾಗೂ ಶರಣಬಸವ ಕೆಲಸಕ್ಕೆ ಪ್ರಶಂಸೆ ನೀಡಲಾಗಿದೆ. ಇದೇ ವೇಳೆ ರಾಯಚೂರಿನ 12 ಜನ ಪೊಲೀಸರು ಸಹ ರಾಜ್ಯಮಟ್ಟದ ಕ್ರೀಡಾಕೂಟದಲ್ಲಿ ಬಹುಮಾನ ಪಡೆದಿದ್ದಾರೆ. ಕ್ರೀಡಾಕೂಟದಲ್ಲಿ ಬಹುಮಾನ ಪಡೆದ ಪೊಲೀಸ್ ಸಿಬ್ಬಂದಿಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸಿ.ಬಿ.ವೇದಮೂರ್ತಿ ಹಾಗೂ ಹಿರಿಯ ಅಧಿಕಾರಿಗಳು ಇಂದು ಸನ್ಮಾನಿಸಿದರು.

  • 246 ಪ್ರಕರಣಗಳಲ್ಲಿ ಭಾಗವಹಿಸಿದ್ದ ರೂಬಿ ಇನ್ನಿಲ್ಲ – ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ

    246 ಪ್ರಕರಣಗಳಲ್ಲಿ ಭಾಗವಹಿಸಿದ್ದ ರೂಬಿ ಇನ್ನಿಲ್ಲ – ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ

    ರಾಯಚೂರು: ಜಿಲ್ಲಾ ಪೊಲೀಸ್ ಶ್ವಾನದಳದಲ್ಲಿ 13 ವರ್ಷ ಕಾಲ ಸೇವೆ ಸಲ್ಲಿಸಿ ಸಾವನ್ನಪ್ಪಿರುವ ಶ್ವಾನ ರೂಬಿಗೆ ಸಕಲ ಸರ್ಕಾರಿ ಗೌರವ ವಂದನೆಗಳೊಂದಿಗೆ ಅಂತ್ಯಸಂಸ್ಕಾರ ಮಾಡಲಾಗಿದೆ.

    ನಗರದ ಪೊಲೀಸ್ ಪರೇಡ್ ಮೈದಾನದಲ್ಲಿ ಗೌರವ ವಂದನೆ ಸಲ್ಲಿಸಲಾಯಿತು. ಸ್ವತಃ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಸಿ.ಬಿ ವೇದಮೂರ್ತಿ ಅಂತಿಮ ಸಂಸ್ಕಾರ ನೆರವೇರಿಸಿದರು. ಗಾಳಿಯಲ್ಲಿ ಮೂರು ಸುತ್ತು ಗುಂಡು ಹಾರಿಸುವ ಮೂಲಕ ಗೌರವ ವಂದನೆ ಸಲ್ಲಿಸಲಾಯಿತು.

    ಬೆಂಗಳೂರಿನ ಆಡಗೋಡಿಯಲ್ಲಿ ತರಬೇತಿ ಪಡೆದ ಡಾಬರಮನ್ ತಳಿಯ ರೂಬಿ ಮೂರು ತಿಂಗಳು ಇದ್ದಾಗಿನಿಂದ ರಾಯಚೂರು ಜಿಲ್ಲಾ ಶ್ವಾನದಳದಲ್ಲಿ ಸೇವೆ ಸಲ್ಲಿಸುತ್ತಾ ಬಂದಿದೆ. 2006ರಿಂದ ಇದುವರೆಗೆ 13 ವರ್ಷಗಳ ಸೇವಾ ಅವಧಿಯಲ್ಲಿ 246 ಪ್ರಕರಣಗಳಲ್ಲಿ ಕೆಲಸ ಮಾಡಿದ ರೂಬಿ 18 ಪ್ರಕರಣಗಳಲ್ಲಿ ಆರೋಪಿಗಳನ್ನ ಸ್ವತಃ ಪತ್ತೆ ಹಚ್ಚಿದೆ.

    ಪೊಲೀಸ್ ಇಲಾಖೆಗೆ ತಲೆ ನೋವಾಗಿದ್ದ ಶಕ್ತಿನಗರದ ಇಂಜಿನಿಯರ್ ಕೊಲೆ ಪ್ರಕರಣವನ್ನು ರೂಬಿ ಭೇದಿಸಿತ್ತು. ಅನಾರೋಗ್ಯದಿಂದ ರೂಬಿ ಸಾವನ್ನಪ್ಪಿರುವುದು ಜಿಲ್ಲಾ ಪೊಲೀಸ್ ಇಲಾಖೆ ಹಾಗೂ ಶ್ವಾನದಳ ಘಟಕಕ್ಕೆ ತುಂಬಲಾರದ ನಷ್ಟವಾಗಿದೆ. ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದ ರೂಬಿ ಅಗಲಿಕೆ ನೋವನ್ನ ತಂದಿದೆ ಅಂತ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸಿ.ಬಿ ವೇದಮೂರ್ತಿ ಹೇಳಿದ್ದಾರೆ.

  • ನಾಯಿ ವರ್ಕೌಟ್ ಮಾಡೋದನ್ನ ಎಲ್ಲಾದ್ರೂ ನೋಡಿದ್ದೀರಾ?- ಈ ವೈರಲ್ ವಿಡಿಯೋ ನೋಡಿ

    ನಾಯಿ ವರ್ಕೌಟ್ ಮಾಡೋದನ್ನ ಎಲ್ಲಾದ್ರೂ ನೋಡಿದ್ದೀರಾ?- ಈ ವೈರಲ್ ವಿಡಿಯೋ ನೋಡಿ

    ವಾಷಿಂಗ್ಟನ್: ಸಾಮಾನ್ಯವಾಗಿ ನಾಯಿಗಳು ಮಾಲೀಕರು ಹೇಳಿದಂತೆ ಕೈ ಮುಗಿಯೋದು, ಕೇಳಿದ ವಸ್ತುಗಳನ್ನ ತೆಗೆದುಕೊಡೋದು ಹೀಗೆ ಮುಂತಾದ ಕೆಲಸಗಳನ್ನ ಮಾಡೋದನ್ನ ನೋಡಿರ್ತೀರ. ಆದ್ರೆ ಎಲ್ಲಾದ್ರೂ ನಾಯಿ ವರ್ಕೌಟ್ ಮಾಡೋದನ್ನ ನೋಡಿದ್ದೀರಾ?

    ಹಾಗಿದ್ರೆ ಇಲ್ನೋಡಿ. ಪೊಲೀಸ್ ನಾಯಿಯೊಂದು ಅಧಿಕಾರಿಗಳ ಜೊತೆಗೂಡಿ ಪುಶ್ ಅಪ್ಸ್ ಮಾಡಿದ್ದು, ಈ ವಿಡಿಯೋ ಈಗ ಸಖತ್ ವೈರಲ್ ಆಗಿದೆ. ಇಬ್ಬರು ಅಧಿಕಾರಿಗಳು ಪುಶ್ ಅಪ್ಸ್ ಮಾಡ್ತಿದ್ರೆ ನಾಯಿ ಕೂಡ ಅವರ ಮಧ್ಯೆ ಕುಳಿತು ಪುಶ್ ಅಪ್ಸ್ ಮಾಡಿದೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಈಗ ಸಖತ್ ಹಿಟ್ ಆಗಿದೆ.

    ಸ್ಥಳೀಯ ಮಾಧ್ಯಮವೊಂದರ ವರದಿಯ ಪ್ರಕಾರ ಈ ನಾಯಿಯ ಹೆಸರು ನಿತ್ರೋ. 2 ವರ್ಷದ ಈ ಡಚ್ ಶೆಫರ್ಡ್ ನಾಯಿ ಇದೇ ವರ್ಷ ಅಲಬಾಮಾದ ಗಲ್ಫ್ ಶೋರ್ಸ್ ಪೊಲೀಸ್ ಇಲಾಖೆಯ ಶ್ವಾನದಳಕ್ಕೆ ಸೇರ್ಪಡೆಯಾಗಿದೆ.

    ಅಧಿಕಾರಿ ಕೋವನ್ ಹಾಗೂ ಹ್ಯಾನ್‍ಕಾಕ್ ಅವರೊಂದಿಗೆ ಕೆ9 ನಿತ್ರೋ ಕೂಡ ಕಾನೂನು ಉಲ್ಲಂಘಿಸೋ ಕಿಡಿಗೇಡಿಗಳನ್ನ ಮಟ್ಟ ಹಾಕಲು ರೆಡಿಯಾಗ್ತಿದೆ ಅಂತ ಪೊಲೀಸ್ ಇಲಾಖೆ ಫೇಸ್‍ಬುಕ್‍ನಲ್ಲಿ ಪೋಸ್ಟ್ ಮಾಡಿ ಈ ವಿಡಿಯೋವನ್ನ ಹಂಚಿಕೊಂಡಿದೆ.

    ಭಾನುವಾರದಂದು ಈ ವಿಡಿಯೋವನ್ನ ಹಂಚಿಕೊಳ್ಳಲಾಗಿದ್ದು ಈವರೆಗೆ 9 ಲಕ್ಷಕ್ಕೂ ಹೆಚ್ಚು ಬಾರಿ ವೀಕ್ಷಣೆಯಾಗಿದೆ. 31 ಸಾವಿರಕ್ಕೂ ಹೆಚ್ಚು ಬಾರಿ ಶೇರ್ ಆಗಿದೆ. ವಿಡಿಯೋ ನೋಡಿದವರು ನಾಯಿಯ ವರ್ಕೌಟ್ ಕಂಡು ಹುಬ್ಬೇರಿಸಿದ್ದಾರೆ. ಅಧಿಕಾರಿಗಳೇ ನೀವಿನ್ನೂ ಇಂಪ್ರೂವ್ ಆಗ್ಬೇಕು. ನಾಯಿ ಚಲಿಸುತ್ತಾ ಪುಶ್ ಅಪ್ಸ್ ಮಾಡ್ತಿರೋದು ಕಾಣ್ತಿಲ್ವಾ ಅಂತ ತಮಾಷೆಯಾಗಿ ಕಮೆಂಟ್ ಮಾಡಿದ್ದಾರೆ.

    https://www.facebook.com/gulfshorespolice/videos/1725293160814732/

  • ಬಳ್ಳಾರಿಯಲ್ಲಿ 42 ಡಿಗ್ರಿ ತಲುಪಿದ ಉಷ್ಣಾಂಶ: ಪೊಲೀಸ್ ನಾಯಿಗಳಿಗೆ ವಿಶೇಷ ವ್ಯವಸ್ಥೆ- ಏನದು? ಈ ಸುದ್ದಿ ಓದಿ

    ಬಳ್ಳಾರಿಯಲ್ಲಿ 42 ಡಿಗ್ರಿ ತಲುಪಿದ ಉಷ್ಣಾಂಶ: ಪೊಲೀಸ್ ನಾಯಿಗಳಿಗೆ ವಿಶೇಷ ವ್ಯವಸ್ಥೆ- ಏನದು? ಈ ಸುದ್ದಿ ಓದಿ

    ಬಳ್ಳಾರಿ: ಗಡಿನಾಡು ಬಳ್ಳಾರಿ ಅಂದ್ರೆ ಸಾಕು ಸುಡುಬಿಸಿಲು ನೆನಪಾಗೋದು ಸಹಜ. ಈ ಬಾರಿಯ ಬಿಸಿಲಿನ ರುದ್ರನರ್ತನಕ್ಕೆ ಜನರು ಸುಸ್ತಾಗಿ ಹೋಗಿದ್ದಾರೆ. ಬೇಸಿಗೆಯ ಆರಂಭದ ದಿನಗಳಲ್ಲೇ ಗಣಿ ನಾಡಿನ ತಾಪಮಾನ 42 ಡಿಗ್ರಿ ತಲುಪಿದೆ. ಹೀಗಾಗಿ ಪ್ರಾಣಿ ಪಕ್ಷಿಗಳ ಸ್ಥಿತಿ ಹೇಳತೀರದಾಗಿದೆ. ಆದ್ರೆ ಬಳ್ಳಾರಿ ಪೊಲೀಸ್ ಇಲಾಖೆ ತಾಪಮಾನ ಹೆಚ್ಚಾಗುತ್ತಿದ್ದಂತೆ ಇಲಾಖೆಯ ಶ್ವಾನಗಳಿಗೆ ವಿಶೇಷ ವ್ಯವಸ್ಥೆ ಮಾಡಲಾಗಿದೆ.

    ಬಳ್ಳಾರಿಯಲ್ಲೀಗ ಉಷ್ಣಾಂಶ 42 ಡಿಗ್ರಿಯಿಂದ 45 ಡಿಗ್ರಿ ತಲುಪುತ್ತಿದ್ದಂತೆ ಜನರು, ಪ್ರಾಣಿಗಳು ಬಿರುಬಿಸಿಲಿನ ತಾಪಕ್ಕೆ ಸುಸ್ತಾಗಿ ಹೋಗುತ್ತಿವೆ. ಹೀಗಾಗಿ ಬಳ್ಳಾರಿಯ ಪೊಲೀಸ್ ಇಲಾಖೆಯ ಶ್ವಾನಗಳಿಗೆ ಇದೀಗ ಎಸಿ, ಏರ್‍ಕೂಲರ್ ವ್ಯವಸ್ಥೆ ಕಲ್ಪಿಸಲಾಗಿದೆ. ಅಲ್ಲದೆ ಎಳನೀರು, ಹೆಚ್ಚುವರಿ ತಣ್ಣೀರು ಹಾಗೂ ದ್ರವರೂಪದ ಆಹಾರ ನೀಡಲಾಗ್ತಿದೆ.

    ಜಿಲ್ಲೆಯಲ್ಲಿ ಅತಿ ಹೆಚ್ಚಿನ ಪ್ರಮಾಣದಲ್ಲಿ ಉಷ್ಣಾಂಶ ದಾಖಲಾಗುತ್ತಿರುವುದರಿಂದ ಜನರು ಮನೆಯಿಂದ ಹೊರಬರಲು ಹಿಂಜರಿಯುತ್ತಿದ್ದಾರೆ. ಹೀಗಾಗಿ ಪೊಲೀಸ್ ಇಲಾಖೆಯಲ್ಲಿ ಪೊಲೀಸರ ಕರ್ತವ್ಯದ ಜೊತೆ ಕೈ ಜೋಡಿಸಿ ಕೆಲಸ ಮಾಡುವ ಶ್ವಾನಗಳಿಗೆ ಬೇಸಿಗೆಯ ಬಿಸಿಲಿನ ತಾಪ ತಟ್ಟದಂತೆ ವಿಶೇಷ ವ್ಯವಸ್ಥೆ ಮಾಡಲಾಗಿದೆ. ಕೆನಡಾ, ಜರ್ಮನ್ ಮೂಲದ ತಳಿಯ 5 ಶ್ವಾನಗಳ ರೂಂಗಳಿಗೆ ಕೂಲರ್ ಅಳವಡಿಸಿ, ದಿನದ 24 ಗಂಟೆಯ ಕಾಲ ತಂಪಾದ ವ್ಯವಸ್ಥೆ ಮಾಡಲಾಗಿದೆ.