Tag: Police Lathi Charge

  • Bihar | ಮರುಪರೀಕ್ಷೆಗೆ ಆಗ್ರಹ – ಪ್ರತಿಭಟನಾ ನಿರತ ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್, ಜಲಫಿರಂಗಿ ಪ್ರಯೋಗ

    Bihar | ಮರುಪರೀಕ್ಷೆಗೆ ಆಗ್ರಹ – ಪ್ರತಿಭಟನಾ ನಿರತ ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್, ಜಲಫಿರಂಗಿ ಪ್ರಯೋಗ

    ಪಾಟ್ನಾ: 70ನೇ ಸಂಯೋಜಿತ ಸ್ಪರ್ಧಾತ್ಮಕ ಪರೀಕ್ಷೆಯ (CCE) ಮರುಪರೀಕ್ಷೆಗೆ ಒತ್ತಾಯಿಸಿ ಬಿಹಾರ ಲೋಕಸೇವಾ ಆಯೋಗದ (BPSC) ಆಕಾಂಕ್ಷಿಗಳು ನಡೆಸುತ್ತಿರುವ ಪ್ರತಿಭಟನೆ ಭಾನುವಾರ ಹಿಂಸಾತ್ಮಕ ರೂಪ ಪಡೆದುಕೊಂಡಿತು. ಪಾಟ್ನಾದಲ್ಲಿ ಪ್ರತಿಭಟನಾ ನಿರತ ವಿದ್ಯಾರ್ಥಿಗಳ ಮೇಲೆ ಪೊಲೀಸರು ಜಲಫಿರಂಗಿ ಬಳಸಿದರಲ್ಲದೇ ಲಾಠಿ ಚಾರ್ಜ್‌ (Police Lathi Charge) ಸಹ ನಡೆಸಿದರು.

    ಕಳೆದ ಕೆಲ ದಿನಗಳಿಂದ ತಮ್ಮ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಅಭ್ಯರ್ಥಿಗಳು ಪ್ರತಿಭಟನೆ ನಡೆಸುತ್ತಿದ್ದರು. ಭಾನುವಾರ ಮುಖ್ಯಮಂತ್ರಿ ನಿತೀಶ್‌ ಕುಮಾರ್‌ ಅವರೊಂದಿಗೆ ಮಾತುಕತೆಗಾಗಿ ಅವರ ನಿವಾಸಕ್ಕೆ ತೆರಳಲು ಗಾಂಧಿ ಮೈದಾನದಲ್ಲಿ ಜಮಾಯಿಸಿದ್ದರು. ನಿತೀಶ್‌ ಕುಮಾರ್‌ ಭೇಟಿ ಸಾಧ್ಯವಿಲ್ಲ ಎಂದು ಪೊಲೀಸರು ಹೇಳಿದರು. ಆದ್ರೆ ವಿದ್ಯಾರ್ಥಿಗಳು ಸಿಎಂ ಭೇಟಿ ಮಾಡಲೇಬೇಕೆಂದು ಪಟ್ಟು ಹಿಡಿದರು. ಈ ವೇಳೆ ಬ್ಯಾರಿಕೇಡ್‌ಗಳನ್ನಿಟ್ಟು ವಿದ್ಯಾರ್ಥಿಗಳನ್ನ ತಡೆಯಲು ಮುಂದಾದರು.

    ವಿದ್ಯಾರ್ಥಿಗಳು ಬ್ಯಾರಿಕೇಡ್‌ ಕಿತ್ತೆಸೆದು ನಿತೀಶ್‌ ಕುಮಾರ್‌ ನಿವಾಸಕ್ಕೆ ತೆರಳಲು ಮುಂದಾಗಿದ್ದರಿಂದ ಪೊಲೀಸರು ಬಲಪ್ರಯೋಗ ಮಾಡಿದರು. ಜಲಫಿರಂಗಿಗಳನ್ನು ಬಳಸಿದರಲ್ಲೇ, ವಿದ್ಯಾರ್ಥಿಗಳ ಮೇಲೆ ಲಾಠಿ ಚಾರ್ಜ್‌ ಮಾಡಿದರು. ಈ ಕುರಿತ ವಿಡಿಯೋಗಳು ಜಾಲತಾಣದಲ್ಲಿ ಸದ್ದು ಮಾಡುತ್ತಿದ್ದಂತೆ ಸರ್ಕಾರದ ವಿರುದ್ಧ ಭಾರೀ ಆಕ್ರೋಶ ವ್ಯಕ್ತವಾಗುತ್ತಿದೆ. ಪೊಲೀಸರ ಲಾಠಿ ಚಾರ್ಜ್‌ನಲ್ಲಿ ಹಲವು ಅಭ್ಯರ್ಥಿಗಳು ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಹೇಳಲಾಗುತ್ತಿದೆ.

    ಜನ್ ಸೂರಜ್ ಸಂಸ್ಥಾಪಕ ಪ್ರಶಾಂತ್ ಕಿಶೋರ್ ಪ್ರತಿಭಟನೆಯಲ್ಲಿ ಪಾಲ್ಗೊಂಡು ವಿದ್ಯಾರ್ಥಿಗಳಿಗೆ ಸಂಪೂರ್ಣ ಬೆಂಬಲ ವ್ಯಕ್ತಪಡಿಸಿದರು. ಅಲ್ಲದೇ ಐವರು ಸದಸ್ಯರ ವಿದ್ಯಾರ್ಥಿ ನಿಯೋಗದೊಂದಿಗೆ ಸರ್ಕಾರದ ಮುಖ್ಯಕಾರ್ಯದರ್ಶಿಗಳನ್ನ ಭೇಟಿ ಮಾಡುವುದಾಗಿ ಘೋಷಣೆ ಮಾಡಿದರು. ಸರ್ಕಾರ ಯಾವುದೇ ನಿರ್ಧಾರಕ್ಕೆ ಬರದಿದ್ದರೆ, ಮರುದಿನ ಮತ್ತೆ ಪ್ರತಿಭಟನೆ ಆರಂಭಿಸುವುದಾಗಿ ಪ್ರಶಾಂತ್‌ ಕಿಶೋರ್‌ ಎಚ್ಚರಿಕೆ ನೀಡಿದರು.

    ಬಿಹಾರ ಬಂದ್‌ಗೆ ಕರೆ:
    AISA ಡಿಸೆಂಬರ್ 30 ರಂದು BPSC ಮರು ಪರೀಕ್ಷೆಗೆ ಸಂಬಂಧಿಸಿದಂತೆ ಬಿಹಾರ ಬಂದ್ ಮತ್ತು ಚಕ್ಕಾ ಜಾಮ್ ಅನ್ನು ಘೋಷಿಸಿದೆ. ಸಿಪಿಐ ಕೂಡ ಈ ಆಂದೋಲನಕ್ಕೆ ಬೆಂಬಲ ಘೋಷಿಸಿದೆ. ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರನ್ನು ಭೇಟಿ ಮಾಡಲು ಯಾವಾಗ ಮೆರವಣಿಗೆ ನಡೆಸಬೇಕು ಎಂಬುದನ್ನು ವಿದ್ಯಾರ್ಥಿಗಳೇ ನಿರ್ಧರಿಸಬೇಕು ಎಂದು ಪ್ರಶಾಂತ್ ಕಿಶೋರ್ ಹೇಳಿದ್ದಾರೆ.

  • ಅರ್ಜುನನ ಅಂತ್ಯಸಂಸ್ಕಾರಕ್ಕೆ ಅಡ್ಡಿ – ಪೊಲೀಸರಿಂದ ಲಾಠಿ ಪ್ರಹಾರ, ದಿಕ್ಕಾಪಾಲಾಗಿ ಓಡಿದ ಜನ

    ಅರ್ಜುನನ ಅಂತ್ಯಸಂಸ್ಕಾರಕ್ಕೆ ಅಡ್ಡಿ – ಪೊಲೀಸರಿಂದ ಲಾಠಿ ಪ್ರಹಾರ, ದಿಕ್ಕಾಪಾಲಾಗಿ ಓಡಿದ ಜನ

    ಹಾಸನ: ಪುಂಡಾನೆ ಸೆರೆ ಕಾರ್ಯಾಚರಣೆ ವೇಳೆ ವೀರಮರಣವನ್ನಪ್ಪಿದ ಕ್ಯಾಪ್ಟನ್ ಅರ್ಜುನನ ಅಂತ್ಯಸಂಸ್ಕಾರಕ್ಕೆ ಅಡ್ಡಿಪಡಿಸಿದ ವೇಳೆ ಲಘು ಲಾಠಿ ಪ್ರಹಾರ ನಡೆದಿದೆ.

    ಹಾಸನ ಜಿಲ್ಲೆ, ಸಕಲೇಶಪುರ ತಾಲೂಕಿನ, ಯಸಳೂರು, ಬಾಳೆಕೆರೆ ಅರಣ್ಯದಲ್ಲಿ ಪುಂಡಾನೆ ಸೆರೆ ಕಾರ್ಯಾಚರಣೆ ವೇಳೆ ಅರ್ಜುನ ವೀರಮರಣವನ್ನಪ್ಪಿತು. ಅರ್ಜುನನ ಕಳೇಬರವನ್ನು ಮೈಸೂರಿಗೆ ಕರೆತರುವಂತೆ ಕೆಲ ಸಂಘಟನೆಯ ಪ್ರಮುಖರು ಒತ್ತಾಯಿಸಿದ್ದರು. ಆದ್ರೆ ಅರಣ್ಯ ಇಲಾಖೆ ಅಧಿಕಾರಿಗಳು ಮೃತಪಟ್ಟ ಸ್ಥಳದಲ್ಲೇ ಅಂತ್ಯಕ್ರಿಯೆ ನೆರವೇರಿಸಲು ಮುಂದಾದರು.

    ಅರ್ಜುನನ ಅಂತ್ಯ ಸಂಸ್ಕಾರಕ್ಕೆ ಗುಂಡಿ ತೆಗೆಯುತ್ತಿದ್ದ ವೇಳೆ ಕೆಲ ಸಂಘಟನೆಯ ಕಾರ್ಯಕರ್ತರು ಅಡ್ಡಿಪಡಿಸಿದರು. ಇದರಿಂದ ಪೊಲೀಸರು ಲಘು ಲಾಠಿ ಪ್ರಹಾರ ನಡೆಸಬೇಕಾಯಿತು. ಪೊಲೀಸರು ಲಾಠಿ ಚಾರ್ಜ್ಗೆ ಮುಂದಾಗುತ್ತಿದ್ದಂತೆ ಸ್ಥಳದಲ್ಲಿದ್ದ ಜನ ದಿಕ್ಕಾಪಾಲಾಗಿ ಓಡಿದರು. ಓಡುವ ಬರದಲ್ಲಿ ಕೆಲವರು ಬಿದ್ದು ಕೈಕಾಲಿಗೆ ಪೆಟ್ಟಾಗಿಸಿಕೊಂಡಿದ್ದಾರೆ. ಇದನ್ನೂ ಓದಿ: ಮೈಸೂರಿಗೆ ಕಳುಹಿಸಿಕೊಡಿ ಇಲ್ಲವೇ ಅರ್ಜುನನ ಜೊತೆ ನಮ್ಮನ್ನೂ ಮಣ್ಣು ಮಾಡಿ: ಗೋಳಾಡಿದ ಮಾವುತ

    ವೀರಮರಣವನ್ನಪ್ಪಿದ ಕ್ಯಾಪ್ಟನ್ ಅರ್ಜುನ ಅಂತ್ಯಕ್ರಿಯೆಗೂ ಮುನ್ನ ಮೂರು ಸುತ್ತು ಕುಶಾಲತೋಪು ಹಾರಿಸಿ, ಸಕಲ ಪೊಲೀಸ್ ಗೌರವವನ್ನೂ ಸಲ್ಲಿಸಲಾಯಿತು. ರಾಜಮನೆತನದ ಪುರೋಹಿತ ಪ್ರಹ್ಲಾದ್ ತಂಡದಿಂದ ಪೂಜಾ ವಿಧಿವಿಧಾನ ನೇರವೇರಿಸಲಾಯಿತು. ಇದನ್ನೂ ಓದಿ:  ತನ್ನ ಪ್ರಾಣ ತ್ಯಾಗ ಮಾಡಿ ಹಲವರ ಜೀವ ಉಳಿಸಿದ ಅರ್ಜುನ – ನಡೆದಿದ್ದೇನು?

    ರಾಜಮನೆತನದ ಪುರೋಹಿತ ಪ್ರಹ್ಲಾದ್ ಅರ್ಜುನನಿಗೆ ಅಂತಿಮ ವಿಧಿವಿಧಾನ ನೇರವೇರಿಸಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದರು. ನಮ್ಮ ದುರದೃಷ್ಟ ಇವತ್ತು ಅರ್ಜುನನ್ನು ಕಳೆದುಕೊಂಡಿದ್ದೇವೆ. ಹುಟ್ಟು ಸಹಜ, ಸಾವು ಖಚಿತ, ಕಾಡಾನೆ ಸೆರೆ ಕಾರ್ಯಾಚರಣೆ ವೇಳೆ ಅರ್ಜುನ ಮೃತಪಟ್ಟಿದ್ದಾನೆ. ಅರಮನೆಗೆ ಬಂದಾಗಿನಿಂದ ನಾನೇ ಪೂಜೆ ಮಾಡುತ್ತಿದ್ದೆ. ನನ್ನ ಒಬ್ಬ ಸಹೋದರನನ್ನು ಕಳೆದುಕೊಂಡಂತಾಗಿದೆ. ರಾಷ್ಟ್ರಪತಿಗೆ ಕೊಡುವ ಗೌರವ ಕೊಟ್ಟು ದಸಾರೆಯಲ್ಲಿ ಭಾಗಿಯಾಗುತ್ತಿದ್ದ ಸಾಕಾನೆಗಳನ್ನು ಅರಮೆನೆ ಒಳಗೆ ಕರೆದುಕೊಳ್ಳುತ್ತಿದ್ದೆವು. ರಾಜ ಗಾಂಭಿರ್ಯದಿಂದ ಅಂಬಾರಿ ಹೊತ್ತುಕೊಂಡು ಹೋಗಬೇಕಾದರೆ ನೋಡುವುದೇ ಒಂದು ಸಂತೋಷ. ಆದರೀಗ ಅರ್ಜುನನನ್ನು ಕಳೆದುಕೊಂಡಿರುವುದು ಅತೀವ ನೋವು ತಂದಿದೆ ಎಂದರು.

    ಅಲ್ಲದೇ ಅರ್ಜುನ ಇಲ್ಲಿಯೇ ಮೃತಪಟ್ಟಿದ್ದಾನೆ, ಇದೇ ಜಾಗದಲ್ಲಿ ಅಂತ್ಯಸಂಸ್ಕಾರವಾಗಲಿ, ಆನಂತರ ಇಲ್ಲಿ ಸ್ಮಾರಕ ಭವನ ನಿರ್ಮಾಣ ಮಾಡಲಿ ಎಂದು ಮನವಿ ಮಾಡಿದರು. ಇದನ್ನೂ ಓದಿ: ನಡೆದು ಹೋಯ್ತಾ ಮಹಾ ಪ್ರಮಾದ – ಗುರಿ ತಪ್ಪಿ ಬಿದ್ದ ಗುಂಡೇಟಿನಿಂದ ಅರ್ಜುನ ಸಾವು?