Tag: Police Security

  • ಜುಲೈ 3ರಿಂದ ಅಮರನಾಥ ಯಾತ್ರೆ ಆರಂಭ – ಹೆಜ್ಜೆ ಹೆಜ್ಜೆಗೂ ಪೊಲೀಸರ ನಿಗಾ

    ಜುಲೈ 3ರಿಂದ ಅಮರನಾಥ ಯಾತ್ರೆ ಆರಂಭ – ಹೆಜ್ಜೆ ಹೆಜ್ಜೆಗೂ ಪೊಲೀಸರ ನಿಗಾ

    ಶ್ರೀನಗರ: ಜುಲೈ 3ರಿಂದ ಅಮರನಾಥ ಯಾತ್ರೆ (Amarnath Yatra) ಪ್ರಾರಂಭವಾಗಲಿದ್ದು, ಜಮ್ಮು ಕಾಶ್ಮೀರದಲ್ಲಿ ಪೊಲೀಸರು ಬಿಗಿ ಭದ್ರತೆ ಕೈಗೊಂಡಿದ್ದಾರೆ. ತಪಾಸಣೆ ನಡೆಸಲು ಹೆಚ್ಚುವರಿ ಚೆಕ್ ಪೋಸ್ಟ್‌ಗಳನ್ನು ನಿರ್ಮಿಸಲಾಗಿದೆ.

    ಪಹಲ್ಗಾಮ್ ಉಗ್ರರ ದಾಳಿ ಬಳಿಕ, ಯಾತ್ರಾರ್ಥಿಗಳ (Pilgrims) ಸುರಕ್ಷತೆ, ಭದ್ರತೆ ದೃಷ್ಟಿಯಿಂದ ಜಮ್ಮುವಿನಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಅರೆಸೇನಾ ಪಡೆಗಳು ಚೆಕ್ ಪೋಸ್ಟ್‌ಗಳನ್ನು ನಿರ್ಮಿಸಿದ್ದು, ಯಾತ್ರಾರ್ಥಿಗಳಿಗೆ ಸುಗಮ ಯಾತ್ರೆಯ ಅನುಭವ ಒದಗಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗಿದೆ. ಇದನ್ನೂ ಓದಿ: ಚಾರ್‌ಧಾಮ್ ಯಾತ್ರೆಗಿದ್ದ ನಿರ್ಬಂಧ ತೆರವು

    ರಾಷ್ಟ್ರೀಯ ಹೆದ್ದಾರಿಗಳು, ನಗರದ ಹೊರವಲಯ, ಮೂಲ ಶಿಬಿರ ಭಗವತಿ ನಗರಕ್ಕೆ ಹೋಗುವ ಮಾರ್ಗಗಳು ಸೇರಿದಂತೆ ಸೂಕ್ಷ್ಮ ವಲಯಗಳಲ್ಲಿ ಚೆಕ್ ಪೋಸ್ಟ್‌ಗಳನ್ನು ನಿರ್ಮಿಸಿದ್ದು, ದಿನದ 24 ಘಂಟೆಗಳ ಕಾಲ ನಿಗಾ ವಹಿಸಲಿದ್ದಾರೆ. ಇನ್ನೂ ಹೋಟೆಲ್, ಗೆಸ್ಟ್ ಹೌಸ್‌ಗಳ ಮೇಲೆಯೂ ನಿಗಾ ವಹಿಸಲಾಗಿದೆ. ಇದನ್ನೂ ಓದಿ: ಕಸದ ಲಾರಿಯಲ್ಲಿ ಶವ ಪತ್ತೆ | ದಿನಾ ಕುಡಿದು ಬಂದು ರಂಪಾಟ ಮಾಡಿದ್ದಕ್ಕೆ ಮಹಿಳೆಯ ಕೊಲೆ!

    ಅಮರನಾಥ ಯಾತ್ರೆಗೆ 50 ಸಾವಿರ ಯಾತ್ರಾರ್ಥಿಗಳಿಗೆ ವಸತಿ ಸೌಲಭ್ಯ ಮಾಡಿರುವುದಾಗಿ ಜಮ್ಮು ಕಾಶ್ಮೀರ ಆಡಳಿತ ಮಂಡಳಿ ತಿಳಿಸಿದೆ. ಪಹಲ್ಗಾಮ್ ದಾಳಿಯ ಬಳಿಕ ಅಮರನಾಥ ಯಾತ್ರೆಗೆ ನೋಂದಾಯಿಸಿಕೊಳ್ಳುವ ಭಕ್ತರ ಸಂಖ್ಯೆ 10%ನಷ್ಟು ಇಳಿಕೆಯಾಗಿದೆ ಎಂದು ಜಮ್ಮು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ತಿಳಿಸಿದ್ದಾರೆ. ಇದನ್ನೂ ಓದಿ: ಗಮನಿಸಿ, ಇನ್ನು ಮುಂದೆ ರೈಲು ಹೊರಡುವ 8 ಗಂಟೆಯ ಮೊದಲು ರಿಸರ್ವೇಷನ್‌ ಲಿಸ್ಟ್‌ ಔಟ್‌

  • ಪೊಲೀಸರ ಸರ್ಪಗಾವಲಿನಲ್ಲಿ ಬೆಳಗಾವಿ ಅಧಿವೇಶನ – ಭದ್ರತೆಗೆ 5,000 ಸಿಬ್ಬಂದಿ ನಿಯೋಜನೆ

    ಪೊಲೀಸರ ಸರ್ಪಗಾವಲಿನಲ್ಲಿ ಬೆಳಗಾವಿ ಅಧಿವೇಶನ – ಭದ್ರತೆಗೆ 5,000 ಸಿಬ್ಬಂದಿ ನಿಯೋಜನೆ

    ಬೆಳಗಾವಿ: ಇಲ್ಲಿನ ಸುವರ್ಣಸೌಧದಲ್ಲಿ (Suvarna Soudha) ಚಳಿಗಾಲದ ಅಧಿವೇಶನ (Belagavi Session) ಸೋಮವಾರ (ಡಿ.4)ದಿಂದ ಆರಂಭವಾಗುತ್ತಿದ್ದು, ಬಿಗಿ ಭದ್ರತೆಗೆ 5 ಸಾವಿರ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.

    ಅಧಿವೇಶನದಲ್ಲಿ ಪಾಲ್ಗೊಳ್ಳಲು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಬೆಳಗಾವಿ ಆಗಮಿಸುತ್ತಿದ್ದಂತೆ ಮೇಯರ್ ಶೋಭಾ ಸೋಮನ್ನಾಚೆ, ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ, ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್, ಶಾಸಕ ಆಸೀಫ್ ಸೇಠ್ ಸೇರಿ ಹಲವರು ಸ್ವಾಗತ ಕೋರಿದ್ದಾರೆ. ಇದನ್ನೂ ಓದಿ: Cyclone Michaung- ನೆಲ್ಲೂರಿನಲ್ಲಿ ಬಿರುಗಾಳಿ ಸಹಿತ ಭಾರೀ ಮಳೆಗೆ ಬಾಲಕ ದುರ್ಮರಣ

    ಬೆಳಗಾವಿ ಜಿಲ್ಲೆಯಲ್ಲಿ ಸಾಲು ಸಾಲು ಪ್ರತಿಭಟನೆಗಳು ಹಮ್ಮಿಕೊಂಡಿರುವುದರಿಂದ ಭದ್ರತೆಗೆ 5 ಸಾವಿರ ಪೊಲೀಸ್ ಸಿಬ್ಬಂದಿಯನ್ನು (Belagavi Police) ನಿಯೋಜಿಸಲಾಗಿದೆ. ನಗರ ಪೊಲೀಸ್ ಆಯುಕ್ತ ಎಸ್.ಎನ್ ಸಿದ್ದರಾಮಪ್ಪ ನೇತೃತ್ವದಲ್ಲಿ ಭದ್ರತಾ ತಂಡವನ್ನು ನಿಯೋಜಿಸಲಾಗಿದೆ.

    ಒಟ್ಟು 9 IPS ದರ್ಜೆ, 12 ಹೆಚ್ಚುವರಿ SP, 37 DYSP, 92 PI, 219 ಪಿಎಸ್‌ಐ, 366 ಎಎಸ್‌ಐ, 3 ಸಾವಿರ ಪೊಲೀಸ್ ಕಾನ್ಸ್ಟೇಬಲ್, 200 ಹೋಮ್ ಗಾರ್ಡ್ಸ್, 35 ಕೆಎಸ್‌ಆರ್‌ಪಿ ತುಕಡಿಗಳನ್ನು ಭದ್ರತೆಗೆ ನಿಯೋಜಿಸಲಾಗಿದೆ. 2 ಸಾವಿರ ಪೊಲೀಸ್ ಸಿಬ್ಬಂದಿ ವಾಸ್ತವ್ಯಕ್ಕೆ ಸುವರ್ಣ ಸೌಧ ಸಮೀಪದಲ್ಲೇ ಜರ್ಮನ್ ಟೆಂಟ್ ನಿರ್ಮಾಣ ಮಾಡಲಾಗಿದ್ದು, ಕಾಟ್, ಬೆಡ್, ತಲೆದಿಂಬು, ಚಾರ್ಜಿಂಗ್ ಪಾಯಿಂಟ್, ಬಿಸಿ ನೀರು ವ್ಯವಸ್ಥೆಗಳನ್ನೂ ಕಲ್ಪಿಸಲಾಗಿದೆ.

    ಇನ್ನೂ ಚಳಿಗಾಲದ ಅಧಿವೇಶನಕ್ಕೆ ಪ್ರತಿಯಾಗಿ ಅನುಮತಿ ನಿರಾಕರಣೆ ನಡುವೆಯೂ ಮಹಾಮೇಳಾವ್ ನಡೆಸಲು ಉದ್ದೇಶಿಸಿದ್ದ ಬೆಳಗಾವಿ ನಗರ ಪೊಲೀಸರು ಶಾಕ್ ಕೊಟ್ಟಿದ್ದಾರೆ. ಮಹಾಮೇಳಾವ್ ನಡೆಸಲು ನಿಗಧಿಯಾಗಿದ್ದ ಲೇಲೆ ಮೈದಾನದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿದ್ದಾರೆ.

    ಈ ಹಿನ್ನೆಲೆಯಲ್ಲಿ ಬೆಳಗಾವಿ ನಗರದಿಂದ 18 ಕಿಮೀ ದೂರದಲ್ಲಿರುವ ಮಹಾರಾಷ್ಟ್ರದ ಶಿನ್ನೋಳ್ಳಿ ಗ್ರಾಮದಲ್ಲಿ ಮಹಾಮೇಳಾವ್ ನಡೆಸಲು ಎಂಇಎಸ್ ನಿರ್ಧರಿಸಿದೆ. ಮಹಾರಾಷ್ಟ್ರದ ಶಿವಸೇನೆ, ಎನ್‌ಸಿಪಿ ಮುಖಂಡರು ಮಹಾಮೇಳಾವ್‌ದಲ್ಲಿ ಭಾಗಿಯಾಗುವ ಸಾಧ್ಯತೆಗಳಿವೆ ಎಂದು ಹೇಳಲಾಗಿದೆ. ಇದನ್ನೂ ಓದಿ: ಸರ್ಕಾರಿ ಸಂಸ್ಥೆಗಳಿಂದಲೇ ಸಾವಿರಾರು ಕೋಟಿ ಕರೆಂಟ್ ಬಿಲ್ ಬಾಕಿ – BBMP ಮೇಲೆ ಬೆಸ್ಕಾಂ ಅಧಿಕಾರಿಗಳು ಗರಂ

  • ವಿಜಯೇಂದ್ರಗೆ ಬೆಂಗಾವಲು ವಾಹನ, ಪೊಲೀಸ್‌ ಭದ್ರತೆ ಕಲ್ಪಿಸಿದ ಸರ್ಕಾರ

    ವಿಜಯೇಂದ್ರಗೆ ಬೆಂಗಾವಲು ವಾಹನ, ಪೊಲೀಸ್‌ ಭದ್ರತೆ ಕಲ್ಪಿಸಿದ ಸರ್ಕಾರ

    ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷರಾಗಿ (BJP President) ಆಯ್ಕೆಯಾಗಿರುವ ಶಿಕಾರಿಪುರದ ಶಾಸಕ, ಮಾಜಿ ಸಿಎಂ ಬಿಎಸ್‌ ಯಡಿಯೂರಪ್ಪ ಅವರ ಪುತ್ರ ವಿಜಯೇಂದ್ರಗೆ (BY Vijayendra) ರಾಜ್ಯ ಸರ್ಕಾರ ಬೆಂಗಾವಲು ವಾಹನ ಮತ್ತು ಪೊಲೀಸ್ ಭದ್ರತೆ (Police Security) ಒದಗಿಸಿದೆ.

    ಭಾನುವಾರದಿಂದ ಮೂವರು ಪೊಲೀಸ್ ಸಿಬ್ಬಂದಿ ಇರುವ ಬೆಂಗಾವಲು ವಾಹನ ಸೌಲಭ್ಯವನ್ನು ಸರ್ಕಾರ ಕಲ್ಪಿಸಿದೆ. ಪದಗ್ರಹಣ ಬಳಿಕ ಅಧಿಕೃತವಾಗಿ ಸಿಬ್ಬಂದಿ ಸಹಿತ ಬೆಂಗಾವಲು ವಾಹನವನ್ನು ಸರ್ಕಾರ ಒದಗಿಸಲಿದೆ. ಬುಧವಾರ ಪಕ್ಷದ ಕಚೇರಿಯಲ್ಲಿ ವಿಜಯೇಂದ್ರ ಪದಗ್ರಹಣ ಕಾರ್ಯಕ್ರಮ ನಡೆಯಲಿದೆ.  ಇದನ್ನೂ ಓದಿ: ನಿನ್ನ ನೇತೃತ್ವದಲ್ಲಿ ಪಕ್ಷಕ್ಕೆ ಶಕ್ತಿ ತುಂಬೋಣ – ಬೊಮ್ಮಾಯಿ ಆಶೀರ್ವಾದ ಪಡೆದ ವಿಜಯೇಂದ್ರ

    ಅಧ್ಯಕ್ಷರಾಗಿ ಆಯ್ಕೆಯಾದ ಬಳಿಕ ಸ್ವಾಮೀಜಿಗಳ ಆಶೀರ್ವಾದ ಪಡೆದಿದ್ದ ವಿಜಯೇಂದ್ರ ಇಂದು ಬೆಳಗ್ಗೆ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಬಳಿ ಹೋಗಿ ಆಶೀರ್ವಾದ ಪಡೆದರು. ನಂತರ ಮಾಜಿ ಪ್ರಧಾನಿ ಹೆಚ್‌ಡಿ ದೇವೇಗೌಡರ ನಿವಾಸಕ್ಕೆ ತೆರಳಿ ಆಶೀರ್ವಾದ ಪಡೆದರು.

  • ಬೆದರಿಕೆ ಕರೆ ಹಿನ್ನೆಲೆ ರಾಜ್ಯದ ಆರ್‌ಎಸ್‌ಎಸ್ ಕಚೇರಿಗಳಿಗೂ ಹೆಚ್ಚಿನ ಭದ್ರತೆ

    ಬೆದರಿಕೆ ಕರೆ ಹಿನ್ನೆಲೆ ರಾಜ್ಯದ ಆರ್‌ಎಸ್‌ಎಸ್ ಕಚೇರಿಗಳಿಗೂ ಹೆಚ್ಚಿನ ಭದ್ರತೆ

    ಬೆಂಗಳೂರು: ರಾಜ್ಯದ ಆರ್‌ಎಸ್‌ಎಸ್ ಕಚೇರಿಗಳ ಮೇಲೆ ದಾಳಿ ಬೆದರಿಕೆ ಸಂದೇಶ ಬಂದಿರುವ ಹಿನ್ನೆಲೆಯಲ್ಲಿ ಎಲ್ಲಾ ಆರ್‌ಎಸ್‌ಎಸ್ ಕಚೇರಿಗಳಿಗೆ ಸೂಕ್ತ ಪೊಲೀಸ್ ರಕ್ಷಣೆ ಒದಗಿಸಲಾಗುವುದು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.

    ಮಂಗಳವಾರ ಮಾಧ್ಯಮ ಪ್ರಕಟಣೆ ಹೊರಡಿಸಿರುವ ಗೃಹ ಸಚಿವ, ಆಯಾಯ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಇರುವ ಆರ್‌ಎಸ್‌ಎಸ್ ಕಚೇರಿಗಳಿಗೆ ಸೂಕ್ತ ಭದ್ರತೆ ನೀಡುವಂತೆ ರಾಜ್ಯ ಪೊಲೀಸ್ ವಿಭಾಗಕ್ಕೆ ತುರ್ತು ನಿರ್ದೇಶನ ನೀಡಲಾಗಿದೆ ಎಂದಿದ್ದಾರೆ.

    ಉತ್ತರ ಪ್ರದೇಶದ 2 ಹಾಗೂ ಕರ್ನಾಟಕದ 4 ಆರ್‌ಎಸ್‌ಎಸ್ ಕಚೇರಿಗಳನ್ನು ಧ್ವಂಸಗೊಳಿಸುವುದಾಗಿ ವಾಟ್ಸಪ್ ಸಂದೇಶವನ್ನು ತಮಿಳು ನಾಡಿನಿಂದ ವ್ಯಕ್ತಿಯೊಬ್ಬ ಉತ್ತರ ಪ್ರದೇಶದ ವ್ಯಕ್ತಿಗೆ ಕಳುಹಿಸಿದ್ದಾನೆ. ಇದಕ್ಕೆ ಸಂಬಂಧಿಸಿದಂತೆ ಮೊಕದ್ದಮೆ ದಾಖಲು ಮಾಡಲಾಗಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: PUC ಪಠ್ಯ ಪರಿಷ್ಕರಣೆ – ಚಕ್ರತೀರ್ಥ ಸಮಿತಿಯಿಂದ ವರದಿ ಪಡೆಯದಿರಲು ಶಿಕ್ಷಣ ಇಲಾಖೆ ತೀರ್ಮಾನ

    ವಾಟ್ಸಪ್ ಸಂದೇಶ ಕಳುಹಿಸಿದ ವ್ಯಕ್ತಿಯನ್ನು ಈಗಾಗಲೇ ಗುರುತಿಸಲಾಗಿದೆ. ಆರೋಪಿ ಸೆಂಥಿಲ್‌ನನ್ನು ತಮಿಳು ನಾಡಿನಲ್ಲಿ ಬಂಧಿಸಲಾಗಿದೆ. ಈ ರೀತಿಯಾಗಿ ಬೆದರಿಕೆ ಕರೆ ಅಥವಾ ಸಂದೇಶಗಳನ್ನು ಕಳುಹಿಸುವ ದುಷ್ಕರ್ಮಿಗಳ ವಿರುದ್ಧ ಕಠಿಣ ಕಾನೂನು ಕ್ರಮ ತೆಗೆದುಕೊಳ್ಳಲಾಗುವುದು ಎಂದು ಸಚಿವ ಆರಗ ಜ್ಞಾನೇಂದ್ರ ಮಾಧ್ಯಮ ಪ್ರಕಟಣೆಯಲ್ಲಿ ಎಚ್ಚರಿಕೆ ನೀಡಿದ್ದಾರೆ.

    ಶಂಕಿತ ಉಗ್ರನ ಬಂಧನ:
    ಭಯೋತ್ಪದನೆ ಚಟುವಟಿಕೆಗಳಲ್ಲಿ ತೊಡಗಿದ್ದ ಎನ್ನಲಾದ ಜಮ್ಮು ಕಾಶ್ಮೀರದ ನಿವಾಸಿಯನ್ನು ಬೆಂಗಳೂರಿನಲ್ಲಿ ಬಂಧಿಸಲಾಗಿದೆ. ರಾಜ್ಯದ ಪೊಲೀಸರೂ ಈ ಕುರಿತು ತನಿಖೆ ಆರಂಭಿಸಿದ್ದಾರೆ ಎಂದಿದ್ದಾರೆ.

    ನಗರದಲ್ಲಿ ನೆಲೆಸಿದ್ದ ಶಂಕಿತ ಉಗ್ರರಿಗೆ ಆಶ್ರಯ ನೀಡಿದ್ದ ವ್ಯಕ್ತಿಗಳು ಹಾಗೂ ಸಂಸ್ಥೆಗಳ ಬಗ್ಗೆ ತನಿಖೆ ನಡೆಯುತ್ತಿದ್ದು, ಕರ್ನಾಟಕ ರಾಜ್ಯ ಪೊಲೀಸರು ಜಮ್ಮು ಕಾಶ್ಮೀರ ರಾಜ್ಯದ ಪೋಲೀಸರ ಜತೆ ಸಮನ್ವಯ ಸಾಧಿಸಿ ತನಿಖೆಯನ್ನು ತೀವ್ರಗೊಳಿಸಿದ್ದಾರೆ. ಬಂಧಿಸಲಾದ ಶಂಕಿತ ಉಗ್ರನಿಗೆ ನೆಲೆಸಲು ಅವಕಾಶ ಮಾಡಿಕೊಟ್ಟಿದ್ದಲ್ಲದೆ ಮೊಬೈಲ್ ಫೋನ್ ಪಡೆಯಲು ಹಾಗೂ ಇತರ ದಾಖಲೆಗಳನ್ನು ಪಡೆಯಲು ಸ್ಥಳೀಯರೂ ಸಹಾಯ ಮಾಡಿದ್ದಾರೆ ಎಂಬುದರ ಬಗ್ಗೆಯೂ ತನಿಖೆ ನಡೆಯುತ್ತಿದೆ. ತಪ್ಪಿತಸ್ಥರ ವಿರುದ್ಧ ಮೊಕದ್ದಮೆ ದಾಖಲಿಸಿ ಸೂಕ್ತ ಕಾನೂನು ಕ್ರಮ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಮಾಜಿ ಸಿಎಂ ಪುಂಡ, ಪೋಕರಿಯಂತೆ ಮಾತನಾಡುತ್ತಿದ್ದಾರೆ: ಸಿದ್ದು ವಿರುದ್ಧ ಶೆಟ್ಟರ್ ವಾಗ್ದಾಳಿ

    ಜಮ್ಮು ಕಾಶ್ಮೀರದ ಉಗ್ರನನ್ನು ಪತ್ತೆ ಹಚ್ಚಲು ರಾಜ್ಯದ ಪೊಲೀಸರು ಸಕರಿಸಿದ್ದು, ಹೆಚ್ಚಿನ ವಿಚಾರಣೆಗಾಗಿ ರಾಜ್ಯದ ಪೊಲೀಸರು ಜಮ್ಮು ಕಾಶ್ಮೀರದ ಪೊಲೀಸರೊಂದಿಗೆ ಸಂಪರ್ಕ ಹೊಂದಿದ್ದರು. ಈ ಬಗ್ಗೆ ತನಿಖೆ ಮುಂದುವರಿದಿದೆ ಎಂದು ಮಾಧ್ಯಮ ಪ್ರಕಟಣೆಯಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.

  • ನಾಳೆ ಚಿಕ್ಕಬಳ್ಳಾಪುರಕ್ಕೆ ಅಮಿತ್ ಶಾ ಭೇಟಿ – ಪೊಲೀಸರಿಂದ ಬಿಗಿ ಬಂದೋಬಸ್ತ್

    ನಾಳೆ ಚಿಕ್ಕಬಳ್ಳಾಪುರಕ್ಕೆ ಅಮಿತ್ ಶಾ ಭೇಟಿ – ಪೊಲೀಸರಿಂದ ಬಿಗಿ ಬಂದೋಬಸ್ತ್

    ಚಿಕ್ಕಬಳ್ಳಾಪುರ: ಇಂದು ರಾಜ್ಯಕ್ಕೆ ಆಗಮಿಸಲಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಏಪ್ರಿಲ್ 1ರಂದು ನಾಳೆ ಚಿಕ್ಕಬಳ್ಳಾಪುರ ತಾಲೂಕಿನ ಮುದ್ದೇನಹಳ್ಳಿ ಬಳಿಯ ಶ್ರೀ ಸತ್ಯಸಾಯಿ ಲೋಕಸೇವಾ ಶಿಕ್ಷಣ ಸಂಸ್ಥೆಗಳ ಸತ್ಯಸಾಯಿ ಗ್ರಾಮಕ್ಕೆ ಭೇಟಿ ನೀಡಿಲಿದ್ದು, ಅಮಿತ್ ಶಾ ಆಗಮನಕ್ಕಾಗಿ ಸಕಲ ಸಿದ್ದತೆಗಳನ್ನು ಮಾಡಿಕೊಳ್ಳಲಾಗುತ್ತಿದೆ.

    ಸತ್ಯಸಾಯಿ ಗ್ರಾಮದ ಸರಳ ಮೆಮೋರಿಯಲ್ ಆಸ್ಪತ್ರೆಯ ಪಕ್ಕದಲ್ಲಿಯೇ 400 ಹಾಸಿಗೆಗಳ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯ ಕಟ್ಟಡ ಹಾಗೂ ಉಚಿತ ವೈದ್ಯಕೀಯ ಶಿಕ್ಷಣಕ್ಕೆ ನೆರವಾಗುವ ನೂತನ ಕಟ್ಟಡ ನಿರ್ಮಾಣಕ್ಕೆ ಅಮಿತ್ ಶಾ ಶಂಕುಸ್ಥಾಪನೆ ನೇರವೇರಿಸಲಿದ್ದಾರೆ. ಇದನ್ನೂ ಓದಿ: ಕೇಜ್ರಿವಾಲ್ ತಪ್ಪಿಸಿಕೊಳ್ಳಲು ಇರುವ ಒಂದೇ ಮಾರ್ಗ ಬಲಿಪಶು: ಗಂಭೀರ್

    ತುಮಕೂರು ಸಿದ್ದಗಂಗಾ ಮಠದಲ್ಲಿ ಕಾರ್ಯಕ್ರಮ ಮುಗಿಸಿ ಶ್ರೀ ಸತ್ಯಸಾಯಿ ಗ್ರಾಮದ ಕ್ರೀಡಾಂಗಣಕ್ಕೆ ವಿಶೇಷ ಹೆಲಿಕಾಪ್ಟರ್ ಮೂಲಕ 2 ಗಂಟೆ 15 ನಿಮಿಷಕ್ಕೆ ಅಮಿತ್ ಶಾ ಅವರು ಆಗಮಿಸಲಿದ್ದು, ಸತ್ಯಸಾಯಿ ಸಂಸ್ಥೆಗಳ ಸದ್ಗುರು ಮಧುಸೂದನ್ ಸಾಯಿಯವರೊಡನೆ 400 ಹಾಸಿಗೆಗಳ ಆಸ್ಪತ್ರೆಗೆ ಭೂಮಿ ಪೂಜೆ ನೇರವೇರಿಸಲಿದ್ದಾರೆ. ಕಾರ್ಯಕ್ರಮ ಮುಗಿದ ನಂತರ 3.15 ನಿಮಿಷಕ್ಕೆ ಹೆಲಿಕಾಪ್ಟರ್ ಮೂಲಕ ಬೆಂಗಳೂರಿಗೆ ವಾಪಸ್ಸಾಗಲಿದ್ದಾರೆ.

    ಅಮಿತ್ ಶಾ ರವರಿಗೆ ಜೆಡ್ ಪ್ಲಸ್ ಭದ್ರತೆ ಹಿನ್ನೆಲೆ ಕೇಂದ್ರ ಹಾಗೂ ರಾಜ್ಯ ಗೃಹ ಇಲಾಖೆಯಿಂದ ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಿಕೊಳ್ಳಲಾಗುತ್ತಿದೆ. ಕಳೆದ 2-3 ದಿನಗಳಿಂದ ಕಾರ್ಯಕ್ರಮದ ವೇದಿಕೆ ಸೇರಿದಂತೆ ಸತ್ಯಸಾಯಿ ಗ್ರಾಮದಲ್ಲಿ ಪೊಲೀಸರ ಪಹರೆ ಮಾಡುತ್ತಿದ್ದು, ಭದ್ರತಾ ಕ್ರಮಗಳ ಬಗ್ಗೆ ಸಭೆಗಳನ್ನು ನಡೆಸಲಾಗಿದೆ. ಕೇಂದ್ರ ವಲಯ ಐಜಿಪಿ ಚಂದ್ರಶೇಖರ್ ಸೇರಿದಂತೆ ಗುಪ್ತಚರ ಇಲಾಖೆಯ ಎಡಿಜಿಪಿ ಶರತ್ ಚಂದ್ರ ಹಾಗೂ ಗೃಹ ಇಲಾಖೆಯ ಹಿರಿಯ ಅಧಿಕಾರಿಗಳು ಸೇರಿದಂತೆ ಕೇಂದ್ರ ಗೃಹ ಇಲಾಖೆಯ ತಂಡಗಳು ಸಹ ಭದ್ರತಾ ಕ್ರಮಗಳ ಬಗ್ಗೆ ಸಭೆ ನಡೆಸಿ ಬಂದೋಬಸ್ತ್ ವ್ಯವಸ್ಥೆಗಳನ್ನು ಮಾಡಿಕೊಳ್ಳುವಲ್ಲಿ ನಿರತರಾಗಿದ್ದಾರೆ. ಅಮಿತ್ ಶಾಗೆ ಸಿಎಂ ಸೇರಿ ಬಿಜೆಪಿ ನಾಯಕರು ಸಾಥ್ ನೀಡಲಿದ್ದಾರೆ.

    ಮುದ್ದೇನಹಳ್ಳಿ ಬಳಿಯ ಸತ್ಯಸಾಯಿ ಗ್ರಾಮದ ಖಾಸಗಿ ಕಾರ್ಯಕ್ರಮಕ್ಕೆ ಆಗಮಿಸಲಿರುವ ಅಮಿತ್ ಷಾ ಗೆ ಸಿಎಂ ಬಸವರಾಜ ಬೊಮ್ಮಾಯಿ ಸೇರಿಂತೆ ಬಿಜೆಪಿ ಪಕ್ಷದ ರಾಜ್ಯಾಧ್ಯಾಕ್ಷ ನಳೀನ್ ಕುಮಾರ್ ಕಟೀಲ್, ಚಿಕ್ಕಬಳ್ಳಾಪುರ ಜಿಲ್ಲಾ ಉಸ್ತುವಾರಿ ಸಚಿವರಾದ ಎಂಟಿಬಿ ನಾಗರಾಜ್, ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ಸೇರಿದಂತೆ ಪ್ರಹ್ಲಾದ್ ಜೋಶಿ ಸೇರಿದಂತೆ ಹಲವು ನಾಯಕರು ಸಾಥ್ ನೀಡಲಿದ್ದಾರೆ ಎನ್ನಲಾಗಿದೆ.  ಇದನ್ನೂ ಓದಿ: ಸಿದ್ದರಾಮಯ್ಯ, ಡಿಕೆಶಿ ರಾಜ್ಯ ಕಾಂಗ್ರೆಸ್‍ನ ಪವರ್ ಪಾಯಿಂಟ್‍ಗಳಲ್ಲ: ಎಂ.ಬಿ.ಪಾಟೀಲ್

  • ಯಡಿಯೂರಪ್ಪ ರಾಜೀನಾಮೆ – ಡಾಲರ್ಸ್ ಕಾಲೋನಿ ನಿವಾಸಕ್ಕೆ ಹೆಚ್ಚಿದ ಭದ್ರತೆ

    ಯಡಿಯೂರಪ್ಪ ರಾಜೀನಾಮೆ – ಡಾಲರ್ಸ್ ಕಾಲೋನಿ ನಿವಾಸಕ್ಕೆ ಹೆಚ್ಚಿದ ಭದ್ರತೆ

    ಬೆಂಗಳೂರು: ರಾಜಾಹುಲಿಯ ರಾಜ್ಯಾಡಳಿತ ಇಂದಿಗೆ ಕೊನೆಯಾಗಿದ್ದು, ಯಡಿಯೂರಪ್ಪ ತಮ್ಮ ಸಿಎಂ ಸ್ಥಾನಕ್ಕೆ ರಾಜೀನಾಮೆ ಘೋಷಣೆ ಮಾಡಿದ್ದಾರೆ.

    ರಾಜೀನಾಮೆ ಬೆನ್ನಲ್ಲೇ ಯಡಿಯೂರಪ್ಪನವರ ಡಾಲರ್ಸ್ ಕಾಲೋನಿ ನಿವಾಸ ಖಾಲಿ ಖಾಲಿ ಹೊಡೆಯುತ್ತಿದೆ. ಜೊತೆಗೆ ಡಾಲರ್ಸ್ ಕಾಲೋನಿಯ ನಿವಾಸಕ್ಕೆ ಹೆಚ್ಚಿನ ಭದ್ರತೆ ನೀಡಲಾಗುತ್ತಿದೆ. ಐವತ್ತಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿ ಭದ್ರತೆ ನೀಡುತ್ತಿದ್ದಾರೆ. ಸಿಎಂ ನಿವಾಸದ ಎರಡು ಕಡೆ ರಸ್ತೆಗೆ ಮೂವತ್ತಕ್ಕೂ ಹೆಚ್ಚು ಬ್ಯಾರಿಕೇಡ್ ಅಳವಡಿಸಲಾಗಿದೆ. ಸದ್ಯ ಸಿ.ಎಂ ಕುಟುಂಬಸ್ಥರು ಯಾರು ಡಾಲರ್ಸ್ ಕಾಲೋನಿ ನಿವಾಸದಲ್ಲಿಲ್ಲ. ಕೇವಲ ಅಡುಗೆ ಸಿಬ್ಬಂದಿ, ಡ್ರೈವರ್ ಗಳು ಹಾಗೂ ಮನೆ ಕೆಲಸದವರು ಮಾತ್ರ ಇದ್ದಾರೆ.

    ಎರಡು ವರ್ಷದ ಪೂರೈಸಿದ ಬಿಜೆಪಿ ಸಂಭ್ರಮಾಚರಣೆ ಕಾರ್ಯಕ್ರಮದ ವೇಳೆ ಮಾತನಾಡಿದ ಯಡಿಯೂರಪ್ಪನವರು, 75 ವರ್ಷ ವಯಸ್ಸಾಗಿದ್ರೂ ಪಕ್ಷ ನನಗೆ ಸಿಎಂ ಸ್ಥಾನ ನೀಡಿ ಸೇವೆ ಸಲ್ಲಿಸಲು ಅವಕಾಶ ನೀಡಿದೆ. ಪ್ರಧಾನಿ ಮೋದಿ, ಜೆಪಿ ನಡ್ಡಾ, ಅಮಿತ್ ಶಾ ಅವರಿಗೆ ಈ ಅವಕಾಶ ನೀಡಿದ್ದಕ್ಕೆ ಧನ್ಯವಾದ ಹೇಳುತ್ತೇನೆ. ಈ ರಾಜೀನಾಮೆಯನ್ನು ನೋವಿನಂದಲ್ಲ, ಸಂತೋಷದಿಂದ ನೀಡುತ್ತಿದ್ದೇನೆ ಎಂದು ಹೇಳಿ ರಾಜ ಭವನಕ್ಕೆ ತೆರಳಿ ರಾಜ್ಯಪಾಲರಿಗೆ ರಾಜೀನಾಮೆ ನೀಡಿದ್ದರು.

    ಇಲ್ಲಿಯವರೆಗೂ ಬಿ.ಎಸ್.ಯಡಿಯೂರಪ್ಪನವರು ನಾಲ್ಕು ಬಾರಿ ಸಿಎಂ ಆದ್ರೂ ಪೂರ್ಣವಾಧಿಯನ್ನು ಪೂರೈಸಲು ಆಗಿಲ್ಲ.

  • ಭಾರತ್ ಬಂದ್‍ಗೆ ರಾಯಚೂರಿನಲ್ಲಿ ಬಿಗಿ ಪೊಲೀಸ್ ಭದ್ರತೆ

    ಭಾರತ್ ಬಂದ್‍ಗೆ ರಾಯಚೂರಿನಲ್ಲಿ ಬಿಗಿ ಪೊಲೀಸ್ ಭದ್ರತೆ

    ರಾಯಚೂರು: ಕೇಂದ್ರ ಸರ್ಕಾರದ ಕಾರ್ಮಿಕ ವಿರೋಧ ನೀತಿಗಳು, ಮೋಟಾರು ವಾಹನ ಕಾಯ್ದೆ ತಿದ್ದುಪಡಿ ಮಸೂದೆಯಿಂದ ಸಾರಿಗೆ ನಿಯಮಗಳನ್ನು ಖಾಸಗಿಯವರಿಗೆ ವಹಿಸಿರುವ ನೀತಿಗಳ ವಿರುದ್ಧ ಹಾಗೂ ಕಾರ್ಮಿಕರ ಇನ್ನಿತರೆ ಬೇಡಿಕೆಗಳನ್ನು ಒತ್ತಾಯಿಸಿ ನಾಳೆ ನಡೆಯಲಿರುವ ಭಾರತ ಬಂದ್ ಹಿನ್ನೆಲೆ ರಾಯಚೂರಿನಲ್ಲಿ ಪೊಲೀಸ್ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದೆ.

    ಜಿಲ್ಲೆಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಸೂಕ್ತ ಬಂದೋಬಸ್ತ ಹಾಗೂ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಜಿಲ್ಲೆಯಾದ್ಯಂತ 3 ಕೆಎಸ್‌ಆರ್‌ಪಿ, 10 ಡಿಎಆರ್, 500 ಪೊಲೀಸ್ ಕಾನ್‍ಸ್ಟೇಬಲ್‍ಗಳು, ಅತಿ ಸೂಕ್ಷ್ಮ ಸ್ಥಳಗಳಲ್ಲಿ ಕ್ಯಾಮೆರಾ ಮ್ಯಾನ್‍ಗಳನ್ನು ಮತ್ತು ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ. 40 ಪಿಎಸ್‍ಐಗಳು, 20 ಸಿಪಿಐಗಳು, 04 ಡಿವೈಎಪಿಗಳು, ಹಾಗೂ ಇಬ್ಬರು ಎಸ್‍ಪಿಗಳ ನೇತೃತ್ವದಲ್ಲಿ ಬಂದೋಬಸ್ತ್ ನಡೆಯಲಿದೆ.

    ಬಂದ್ ಸಮಯದಲ್ಲಿ ಅಂಗಡಿ ಮುಗ್ಗಟ್ಟುಗಳನ್ನು ಬಲವಂತವಾಗಿ ಮುಚ್ಚಿಸುವ ಪ್ರಕರಣ ನಡೆದಲ್ಲಿ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು. ರಸ್ತೆ ಮೇಲೆ ಟೈಯರ್‍ಗಳನ್ನು ಸುಟ್ಟು ಸಂಚಾರಕ್ಕೆ ಅಡ್ಡಿ ಪಡಿಸುವವರ ವಿರುದ್ಧ ಪ್ರಕರಣ ದಾಖಲಿಸಿ ಕಾನೂನು ಕ್ರಮ ಕೈಗೊಳ್ಳಲಾಗುವುದು. ಜಿಲ್ಲಾದ್ಯಾಂತ ಚೆಕ್ ಪೋಸ್ಟ್‍ಗಳನ್ನು ನಿರ್ಮಿಸಿ ಅನುಮಾನಾಸ್ಪದ ವಾಹನಗಳನ್ನು ಪರಿಶೀಲಿಸಲಾಗುವುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸಿ.ಬಿ ವೇಧಮೂರ್ತಿ ಹೇಳಿದರು.

    ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿಯಲ್ಲಿನ ಸಿಐಟಿಯು, ಎಐಟಿಯುಸಿ, ಬಿಎಸ್‍ಎನ್‍ಎಲ್‍ಇಯು, ಎಐಯುಟಿಯುಸಿ ಸೇರಿ 10ಕ್ಕೂ ಹೆಚ್ಚು ಸಂಘಟನೆಗಳು ಬಂದ್‍ಗೆ ಬೆಂಬಲ ಸೂಚಿಸಿದ್ದು, ಬೆಳಗ್ಗೆ 10 ಗಂಟೆಯಿಂದ 12ರವರೆಗೆ ಅಂಬೇಡ್ಕರ್ ವೃತ್ತದಲ್ಲಿ ಸಮಾವೇಶ ನಡೆಸಲಿವೆ. ಬಳಿಕ ಜಿಲ್ಲಾಧಿಕಾರಿ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಲಿವೆ.

    ಬುಧವಾರ ಎಂದಿನಂತೆ ಬಸ್ ಸಂಚಾರ, ಶಾಲಾ ಕಾಲೇಜುಗಳು ನಡೆಯಲಿದ್ದು, ಸ್ವಯಂ ಪ್ರೇರಿತರಾಗಿ ವ್ಯಾಪಾರಿಗಳು ಅಂಗಡಿ ಮುಗ್ಗಟ್ಟು ಬಂದ್ ಮಾಡುವ ಸಾಧ್ಯತಯಿದೆ. ವಿದ್ಯಾರ್ಥಿ ಸಂಘಟನೆಗಳು ಹೋರಾಟಕ್ಕೆ ಬೆಂಬಲಿಸಿರುವುದರಿಂದ ಖಾಸಗಿ ಶಾಲಾ ಕಾಲೇಜುಗಳು ರಜೆ ಘೋಷಿಸುವ ಸಾಧ್ಯತೆಯಿದೆ. ಬ್ಯಾಂಕ್ ನೌಕರರು ಮುಷ್ಕರದಲ್ಲಿ ಭಾಗವಹಿಸುತ್ತಿರುವುದರಿಂದ ಬ್ಯಾಂಕ್ ವಹಿವಾಟು ಸ್ಥಗಿತಗೊಳ್ಳಲಿದೆ.

  • ಉಕ್ಕಿ ಹರಿಯುತ್ತಿದೆ ಕೃಷ್ಣಾ ನದಿ – ಪೊಲೀಸ್ ಭದ್ರತೆ

    ಉಕ್ಕಿ ಹರಿಯುತ್ತಿದೆ ಕೃಷ್ಣಾ ನದಿ – ಪೊಲೀಸ್ ಭದ್ರತೆ

    ಯಾದಗಿರಿ: ಜಿಲ್ಲೆಯ ಬಸವಸಾಗರ ಜಲಾಶಯದಿಂದ ಕೃಷ್ಣಾ ನದಿಗೆ ಭಾರೀ ಪ್ರಮಾಣದ ನೀರು ಹರಿಬಿಡಲಾಗುತ್ತಿದ್ದು, ಇದರಿಂದ ಜಿಲ್ಲೆಯಲ್ಲಿ ಕೃಷ್ಣಾ ನದಿ ಉಕ್ಕಿ ಹರಿಯುತ್ತಿದೆ.

    ದಿನದಿಂದ ದಿನಕ್ಕೆ ನದಿಯ ನೀರಿನ ಪ್ರಮಾಣ ಹೆಚ್ಚಾಗುತ್ತಿದ್ದು, ನದಿ ದಡಕ್ಕೆ ಹೊಂದಿಕೊಂಡಿರುವ ಕೊಳ್ಳೂರು, ಗೂಗಲ್ ಮತ್ತು ನೀಲಕಂಠರಾಯನ ಗಡ್ಡಿಗೆ ಸಂಪರ್ಕ ಕಲ್ಪಿಸುವ ಸೇತುವೆಗಳು ಅಪಾಯದ ಮಟ್ಟ ತಲುಪಿವೆ. ಕೊಳ್ಳೂರು ಸೇತುವೆ ಮುಳಗಡೆಯಾಗಲು ಇನ್ನೂ ಕೇವಲ 2 ಅಡಿ ಮಾತ್ರ ಬಾಕಿದೆ. ಹೀಗಾಗಿ ಮುನ್ನೆಚ್ಚರಿಕಾ ಕ್ರಮವಾಗಿ ಸೇತುವೆಗಳ ಬಳಿ ಪೊಲೀಸ್ ಇಲಾಖೆಯಿಂದ ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.

    ನದಿ ದಡದ ಅಕ್ಕ-ಪಕ್ಕದ ಜಮೀನುಗಳು ಸಂಪೂರ್ಣ ಜಲಾವೃತವಾಗಿದ್ದು, ಅಪಾರ ಪ್ರಮಾಣದ ಬೆಳೆ ನಾಶವಾಗಿದೆ. ಒಟ್ಟು 33 tmcಯ ಜಲಾಶಯ ಇದಾಗಿದ್ದು, ಸದ್ಯ 27 tmc ನೀರು ಡ್ಯಾಂನಲ್ಲಿ ಸಂಗ್ರಹವಾಗಿದೆ. ಆಲಮಟ್ಟಿ ಡ್ಯಾಮಿನಿಂದ 2,15,350 ಕ್ಯೂಸೆಕ್ ನೀರನ್ನು ಬಸವಸಾಗರ ಜಲಾಶಯಕ್ಕೆ ಹರಿಬಿಡಲಾಗುತ್ತಿದೆ.

    ಜಲಾಶಯ ಸಂಪೂರ್ಣ ಭರ್ತಿಯಾಗಿ ಅಪಾಯದ ಮಟ್ಟ ತಲುಪಿದೆ. ಹೀಗಾಗಿ ಜಲಾಶಯದ ಒಟ್ಟು 24 ಗೇಟ್‍ಗಳ ಪೈಕಿ 20 ಗೇಟ್ ತೆರೆದು ಕೃಷ್ಣಾ ನದಿಗೆ 2,25,000 ಕ್ಯೂಸೆಕ್ ನೀರು ಹರಿಸಲಾಗುತ್ತಿದೆ. ಮಹಾರಾಷ್ಟ್ರದಲ್ಲಿ ಭಾರೀ ಪ್ರಮಾಣದ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ನದಿಗೆ ನೀರು ಹರಿಸುವ ಪ್ರಮಾಣ ಜಾಸ್ತಿಯಾಗುವ ಸಾಧ್ಯತೆಯಿದೆ.

  • ಸುಮಲತಾ ಬಗ್ಗೆ ಹೇಳಿಕೆ ಕೊಟ್ಟಿದ್ದ ಕೆ.ಟಿ. ಶ್ರೀಕಂಠೇಗೌಡ ಮನೆ ಬಳಿ ಪೊಲೀಸ್ ಬಂದೋಬಸ್ತ್

    ಸುಮಲತಾ ಬಗ್ಗೆ ಹೇಳಿಕೆ ಕೊಟ್ಟಿದ್ದ ಕೆ.ಟಿ. ಶ್ರೀಕಂಠೇಗೌಡ ಮನೆ ಬಳಿ ಪೊಲೀಸ್ ಬಂದೋಬಸ್ತ್

    ಮಂಡ್ಯ: ‘ಸುಮಲತಾ ಮಂಡ್ಯ ಗೌಡ್ತಿ ಅಲ್ಲ’ ಎಂಬ ಹೇಳಿಕೆ ನೀಡಿದ್ದ ವಿಧಾನ ಪರಿಷತ್ ಸದಸ್ಯ ಕೆ.ಟಿ. ಶ್ರೀಕಂಠೇಗೌಡ ಮನೆ ಬಳಿ ಪೊಲೀಸ್ ಬಂದೋಬಸ್ತ್ ನಿಯೋಜನೆ ಮಾಡಲಾಗಿದೆ.

    ಹಿರಿಯ ನಟನ ಅಂಬರೀಶ್ ಅಭಿಮಾನಿಗಳು ಮತ್ತು ಕಾಂಗ್ರೆಸ್ ಕಾರ್ಯಕರ್ತರು ಹೇಳಿಕೆ ಖಂಡಿಸಿ ಕೆ.ಟಿ.ಶ್ರೀಕಂಠೇಗೌಡ ವಿರುದ್ಧ ಹರಿಹಾಯ್ದಿದಿದ್ದು, ಸಾಮಾಜಿಕ ಜಾಲತಾಣದಲ್ಲೂ ವ್ಯಾಪಕ ಟೀಕೆ ವ್ಯಕ್ತವಾಗಿತ್ತು. ಅಷ್ಟೇ ಅಲ್ಲದೇ ಶ್ರೀಕಂಠೇಗೌಡ ಮನೆಗೆ ಮುತ್ತಿಗೆ ಹಾಕುವ ಬೆದರಿಕೆ ಕೂಡ ಹಾಕಲಾಗಿತ್ತು. ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಮಂಡ್ಯದಲ್ಲಿರುವ ಕೆ.ಟಿ.ಶ್ರೀಕಂಠೇಗೌಡ ನಿವಾಸಕ್ಕೆ ಪೊಲೀಸ್ ಭದ್ರತೆ ನೀಡಲಾಗಿದೆ. ಇದನ್ನೂ ಓದಿ: ಸುಮಲತಾ ಎಂದೂ ಕೂಡ ಮಂಡ್ಯದ ಗೌಡ್ತಿ ಅಲ್ಲ: ಕೆ.ಟಿ.ಶ್ರೀಕಂಠೇಗೌಡ

    ಶ್ರೀಕಂಠೇಗೌಡ ಮನೆ ಬಳಿ ಬ್ಯಾರಿಕೇಡ್ ಹಾಕಿ ಪೊಲೀಸರ ಬಂದೋಬಸ್ತ್ ನೀಡಲಾಗಿದೆ. ಮಂಡ್ಯ ಎಸ್‍ಪಿ ಶಿವಪ್ರಕಾಶ್ ದೇವರಾಜ್ ಕೆ.ಟಿ.ಶ್ರೀಕಂಠೇಗೌಡ ಮನೆಗೆ ಭೇಟಿ ನೀಡಿ ಭದ್ರತೆಯನ್ನು ಪರಿಶೀಲನೆ ಮಾಡಿದ್ದಾರೆ. ಇತ್ತ ಶ್ರೀಕಂಠೇಗೌಡ ಅವರ ಭಾವಚಿತ್ರಕ್ಕೆ ಚಪ್ಪಲಿಯಲ್ಲಿ ಹೊಡೆದು, ಕಾಲಲ್ಲಿ ತುಳಿದು, ಚಿತ್ರಕ್ಕೆ ಬೆಂಕಿ ಹಾಕಿ ಕಾಂಗ್ರೆಸ್ ಕಾರ್ಯಕರ್ತರು ಮತ್ತು ಅಂಬಿ ಅಭಿಮಾನಿಗಳು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

    ನಟಿ ಸುಮಲತಾ ಅವರು ಚುನಾವಣೆಯಲ್ಲಿ ಸ್ಪರ್ಧಿಸುವ ವಿಚಾರವಾಗಿ ಪ್ರತಿಕ್ರಿಯಿಸಿದ್ದ ಜೆಡಿಎಸ್ ಎಂಎಲ್‍ಸಿ ಕೆ.ಟಿ.ಶ್ರೀಕಂಠೇಗೌಡ, ಸುಮಲತಾ ಎಂದೂ ಕೂಡ ಮಂಡ್ಯದ ಗೌಡ್ತಿ ಅಲ್ಲ. ಮೂಲತಃ ಆಂಧ್ರದವರಾದ ಅವರು ಮಂಡ್ಯದಿಂದ ಹೇಗೆ ಚುನಾವಣೆಯಲ್ಲಿ ಗೆಲ್ಲಲು ಸಾಧ್ಯ. ರೆಬೆಲ್ ಸ್ಟಾರ್ ಅಂಬರೀಶ್ ಅವರು ಬದುಕಿದ್ದಾಗ ರಾಜಕಾರಣ ನನಗೆ ಸಾಕು. ನನ್ನ ಮನೆಗೆ ರಾಜಕಾರಣ ಬೇಡ ಅಂತ ಸ್ಪಷ್ಟವಾಗಿ ಹೇಳಿದ್ದರು. ಈ ಹಿಂದೆ ಮಂಡ್ಯ ಕ್ಷೇತ್ರದಿಂದ ನಟಿ ರಮ್ಯಾರನ್ನು ಕಣಕ್ಕಿಳಿಸಿ ಅವರ ಕೆಲಸ ನೋಡಿ ಆಗಿದೆ. ಎಷ್ಟರ ಮಟ್ಟಕ್ಕೆ ನಮ್ಮ ಕೆಲಸ ಮಾಡಿಕೊಟ್ಟರು ಅಂತ ಗೊತ್ತು ಎಂದು ವ್ಯಂಗ್ಯವಾಡಿದ್ದರು. ನಟಿ ಸುಮಲತಾ ಎಂದೂ ಕೂಡ ಮಂಡ್ಯದ ಗೌಡ್ತಿ ಅಲ್ಲ, ಅವರ ಮೂಲ ಆಂಧ್ರಪ್ರದೇಶ ಎಂದು ವ್ಯಂಗ್ಯವಾಡಿದ್ದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv 

  • ಬೆಂಗ್ಳೂರಲ್ಲಿ ನಟಿ ದೀಪಿಕಾ ಪಡುಕೋಣೆ ಕುಟುಂಬಕ್ಕೆ ಬಿಗಿ ಪೊಲೀಸ್ ಭದ್ರತೆ

    ಬೆಂಗ್ಳೂರಲ್ಲಿ ನಟಿ ದೀಪಿಕಾ ಪಡುಕೋಣೆ ಕುಟುಂಬಕ್ಕೆ ಬಿಗಿ ಪೊಲೀಸ್ ಭದ್ರತೆ

    ಬೆಂಗಳೂರು: ನಗರದಲ್ಲಿ ಬಾಲಿವುಡ್ ದೀಪಿಕಾ ಪಡುಕೋಣೆ ಕುಟುಂಬಸ್ಥರಿಗೆ ಭಾರೀ ಪೊಲೀಸ್ ಬಿಗಿ ಭದ್ರತೆಯನ್ನು ಒದಗಿಸಲಾಗಿದೆ. ದೀಪಿಕಾ ಅಭಿನಯದ `ಪದ್ಮಾವತಿ’ ಸಿನಿಮಾ ವಿವಾದಗಳಿಂದಾಗಿ ದೀಪಿಕಾ ಮನೆಗೆ ಭದ್ರತೆ ನೀಡಲಾಗಿದೆ.

    ಹರಿಯಾಣ ಬಿಜೆಪಿ ಮುಖಂಡ ದೀಪಿಕಾರ ಶಿರಚ್ಛೇದ ಮಾಡಿದ್ರೆ 10 ಕೋಟಿ ರೂ. ಬಹುಮಾನ ನೀಡುವುದಾಗಿ ಹೇಳಿಕೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಗೃಹ ಸಚಿವರು ಪೊಲೀಸ್ ಅಧಿಕಾರಿಗಳಿಗೆ ದೀಪಿಕಾ ಮನೆಗೆ ಭದ್ರತೆ ನೀಡುವಂತೆ ಆದೇಶ ನೀಡಿದ್ದಾರೆ. ಜೆ.ಸಿನಗರದ ನಂದಿದುರ್ಗ ಬಳಿ ಇರುವ ವುಡ್ಸ್ ವೇಲ್ ಅಪಾರ್ಟ್ ಮೆಂಟ್ ನಲ್ಲಿ ದೀಪಿಕಾ ಪೋಷಕರು ವಾಸವಾಗಿದ್ದಾರೆ. ಕಮಿಷನರ್ ಆದೇಶದಂತೆ ಅಪಾರ್ಟ್ ಮೆಂಟ್ ಬಳಿ 4 ಕಾನ್ಸ್ ಟೇಬಲ್, ಇನ್ಸ್ ಪೆಕ್ಟರ್ ನೇತೃತ್ವದಲ್ಲಿ ಭದ್ರತೆ ನೀಡಿದೆ.

    ವುಡ್ಸ್ ವೇಲ್ ಅಪಾರ್ಟ್ ಮೆಂಟ್ ನಲ್ಲಿ ದೀಪಿಕಾರ ತಂದೆ, ತಾಯಿ ಮತ್ತು ಸಹೋದರಿ ವಾಸವಾಗಿದ್ದಾರೆ. ಇತ್ತ ಮಲ್ಲೇಶ್ವರಂನ 18ನೇ ಕ್ರಾಸ್ ನಲ್ಲಿರುವ ದೀಪಿಕಾರ ಅಜ್ಜಿ ಮನೆಗೂ ಸ್ಥಳೀಯ ಪೊಲೀಸ್ ಭದ್ರತೆ ಒದಗಿಸಲಾಗಿದೆ.

    ಹರಿಯಾಣದ ಬಿಜೆಪಿ ಮಾಧ್ಯಮ ಘಟಕದ ಮುಖ್ಯಸ್ಥ ಸೂರಜ್ ಪಾಲ್ ಅಮು, ನಟಿ ದೀಪಿಕಾ ಹಾಗೂ ನಿರ್ದೇಶಕ ಬನ್ಸಾಲಿ ಅವರ ಶಿರಚ್ಛೇದ ಮಾಡಿದವರಿಗೆ 10 ಕೋಟಿ ರೂ. ಹೇಳಿಕೆ ನೀಡಿದ್ದಾರೆ. ಅಷ್ಟೇ ಅಲ್ಲದೇ ಚಿತ್ರದಲ್ಲಿ ಅಲ್ಲಾವುದ್ದೀನ್ ಖಿಲ್ಜಿ ಪಾತ್ರವನ್ನು ಮಾಡಿರುವ ರಣವೀರ್ ಸಿಂಗ್ ನ ಕಾಲುಗಳನ್ನು ಮುರಿಯುತ್ತೇವೆ ಎಂದು ಬೆದರಿಕೆ ಹಾಕಿದ್ದಾರೆ.

    ಇದನ್ನೂ ಓದಿ: ದೀಪಿಕಾ ಪಡುಕೋಣೆ, ಪದ್ಮಾವತಿ ನಿರ್ದೇಶಕರ ಶಿರಚ್ಛೇದ ಮಾಡಿದ್ರೆ 10 ಕೋಟಿ ರೂ.- ಬಿಜೆಪಿ ನಾಯಕ

    ದೀಪಿಕಾ ಪಡುಕೋಣೆ ಪರವಾದ ಟ್ವೀಟ್ ವಿಚಾರಕ್ಕೆ ಸಂಬಂಧಿಸಿದಂತೆ ಬೆಳಗಾವಿ ಸುವರ್ಣಸೌಧದಲ್ಲಿ ಪ್ರತಿಕ್ರಿಯಿಸಿದ ಸಚಿವ ಡಿ ಕೆ ಶಿವಕುಮಾರ್, ಆಕೆ ನಮ್ಮ ನೆಲದ ಹೆಣ್ಣು ಮಗಳು. ಅವರ ತಂದೆ ಅಂತರಾಷ್ಷ್ರೀಯ ಕ್ರೀಡಾಪಟು ನಮ್ಮ ರಾಜ್ಯದವರು. ಅಂತಹ ಹೆಣ್ಣು ಮಗಳನ್ನು ಕೊಲ್ಲುವ ಮಾತನಾಡಿದ್ದಾರೆ. ಇದು ಅಕ್ಷಮ್ಯ ಅಪರಾಧ. ಭೂಮಿಯನ್ನೆ ತಾಯಿ ಅನ್ನೋ ಸಂಸ್ಕಾರ ನಮ್ಮದು. ಇವರು ತಲೆ ಕಡಿರಿ ಮೂಗು ಕುಯ್ರಿ ಎನ್ನುತ್ತಿದ್ದಾರೆ. ಕೂಡಲೆ ಕೇಂದ್ರ ಸರ್ಕಾರ ಸ್ವಯಂ ಪ್ರೇರಿತವಾಗಿ ದೂರು ದಾಖಲಿಸಬೇಕು. ಈ ಕುರಿತು ರಾಜ್ಯದಲ್ಲಿ ಸಿಎಂ ಹಾಗೂ ಗೃಹ ಸಚುವರಿಗೂ ಮನವಿ ಮಾಡಿದ್ದೇನೆ ಅಂತಾ ಅಂದಿದ್ದರು.

    ಇದನ್ನೂ ಓದಿ: ವಿವಾದಗಳ ನಡುವೆ ಪದ್ಮಾವತಿ ರಿಲೀಸ್ ದಿನಾಂಕ ಬದಲಾಯ್ತು-ಸೆನ್ಸಾರ್ ಮಂಡಳಿಯಲ್ಲಿ ಅರ್ಜಿ ರಿಜೆಕ್ಟ್

    ನಟಿ ದೀಪಿಕಾ ಪಡುಕೋಣೆಗೆ ರಕ್ಷಣೆ ನೀಡುವಂತೆ ಕೋರಿ ಇಂಧನ ಸಚಿವ ಡಿ.ಕೆ.ಶಿವಕುಮಾರ್ ಸಿಎಂ ಸಿದ್ದರಾಮಯ್ಯಗೆ ಪತ್ರ ಬರೆದಿದ್ದರು. ಇದರ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಕೂಡ ದೀಪಿಕಾ ಪಡುಕೋಣೆ ಪರ ಬ್ಯಾಟಿಂಗ್ ಮಾಡಿದ್ದರು. ಹರಿಯಾಣ ಸಿಎಂ ಮನೋಹರಲಾಲ್ ಖಟ್ಟರ್ ಅವರಿಗೆ ದೂರವಾಣಿ ಕರೆ ಮಾಡಿದ ಸಿಎಂ ಸಿದ್ದರಾಮಯ್ಯ ದೀಪಿಕಾ ಪಡುಕೋಣೆಗೆ ರಕ್ಷಣೆ ನೀಡುವಂತೆ ಕೋರಿದ್ದಾರೆ. ದೀಪಿಕಾ ಕನ್ನಡದ ಮನೆಮಗಳು. ಅಂತರರಾಷ್ಟ್ರೀಯ ಮಟ್ಟದಲ್ಲಿ ಖ್ಯಾತಿ ಗಳಿಸಿರುವ ನಟಿಯಾಗಿದ್ದಾರೆ. ದೀಪಿಕಾ ಜೊತೆ ಇಡೀ ಕರ್ನಾಟಕವೇ ಜೊತೆಗಿದೆ ಅಂತ ಸಿಎಂ ಬ್ಯಾಟಿಂಗ್ ಮಾಡಿದ್ದರು.

    ಇದನ್ನೂ ಓದಿ: ಪದ್ಮಾವತಿ ಫಿಲ್ಮ ರಿಲೀಸ್ ಆದ್ರೆ, ದೀಪಿಕಾ ಮೂಗನ್ನು ಕಟ್ ಮಾಡ್ತೀವಿ