Tag: police

  • ಕೊಪ್ಪಳ: ಟಿಪ್ಪು ಸುಲ್ತಾನ್ ಭಾವಚಿತ್ರಕ್ಕೆ ಮಸಿ, ಅಭಿಮಾನಿಗಳ ಪ್ರತಿಭಟನೆ

    ಕೊಪ್ಪಳ: ಟಿಪ್ಪು ಸುಲ್ತಾನ್ ಭಾವಚಿತ್ರಕ್ಕೆ ಮಸಿ, ಅಭಿಮಾನಿಗಳ ಪ್ರತಿಭಟನೆ

    ಕೊಪ್ಪಳ: ಟಿಪ್ಪು ಸುಲ್ತಾನ್ ಭಾವಚಿತ್ರಕ್ಕೆ ಮಸಿ ಬಳಿದು ಅವಮಾನ ಮಾಡಿರುವ ಘಟನೆ ಜಿಲ್ಲೆಯ ಯಲಬುರ್ಗಾ ಪಟ್ಟಣದಲ್ಲಿ ನಡೆದಿದೆ. ಇದರಿಂದ ಆಕ್ರೋಶಗೊಂಡ ಅಭಿಮಾನಿಗಳು ಪ್ರತಿಭಟನೆ ನಡೆಸುತ್ತಿದ್ದಾರೆ.

    ಯಲಬುರ್ಗಾ ಪಟ್ಟಣದ ಕುಷ್ಟಗಿ ರಸ್ತೆಯಲ್ಲಿರುವ ಟಿಪ್ಪು ಸುಲ್ತಾನ್‍ರ ಕಟೌಟ್‍ಗೆ ಕೆಲ ಕಿಡಿಗೇಡಿಗಳು ಮಸಿ ಬಳಿದಿದ್ದಾರೆ. ಆಕ್ರೋಶಗೊಂಡ ಜನರು ಟಿಪ್ಪು ಸುಲ್ತಾನ ವೃತ್ತದಿಂದ ತಹಶೀಲ್ದಾರ್ ಕಚೇರಿಯ ವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಲು ಮುಂದಾಗಿದ್ದರು. ಆದರೆ ಪ್ರತಿಭಟನಾ ಮೆರವಣಿಗೆ ನಡೆಸಲು ಪೊಲೀಸರು ಒಪ್ಪಿಗೆ ನೀಡದಕ್ಕೆ ಪ್ರತಿಭಟನಾಕಾರರು ಮತ್ತು ಪೊಲೀಸರ ಮಧ್ಯ ಕಲೆ ಸಮಯ ಮಾತಿನ ಚಕಮಕಿ ಸಹ ನಡೆಯಿತು.

    ಪ್ರತಿಭಟನೆಗೆ ಅವಕಾಶ ನೀಡುವಂತೆ ಒತ್ತಾಯಿಸಿ ಸ್ಥಳದಲ್ಲಿ ಟಿಪ್ಪುಸುಲ್ತಾನ ಅಭಿಮಾನಿಗಳು ಧರಣಿ ನಡೆಸುತ್ತಿದ್ದಾರೆ. ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡದಂತಾಗಿದ್ದು, ಸ್ಥಳದಲ್ಲಿ ಬಿಗಿ ಪೊಲೀಸ್ ವ್ಯವಸ್ಥೆ ಮಾಡಲಾಗಿದೆ.

     

  • ಸಹಾಯಕ ಸಬ್ ಇನ್ಸ್ ಪೆಕ್ಟರ್‍ಗೆ ನಡುರಸ್ತೆಯಲ್ಲೇ ಮಹಿಳೆಯಿಂದ ಕಪಾಳಮೋಕ್ಷ!- ವೈರಲ್ ವಿಡಿಯೋ

    ಸಹಾಯಕ ಸಬ್ ಇನ್ಸ್ ಪೆಕ್ಟರ್‍ಗೆ ನಡುರಸ್ತೆಯಲ್ಲೇ ಮಹಿಳೆಯಿಂದ ಕಪಾಳಮೋಕ್ಷ!- ವೈರಲ್ ವಿಡಿಯೋ

    ಅಹಮದಾಬಾದ್: ಮಹಿಳೆಯೊಬ್ಬರು ಸಹಾಯಕ ಸಬ್ ಇನ್ಸ್ ಪೆಕ್ಟರ್‍ಗೆ ನಡರಸ್ತೆಯಲ್ಲೇ ಎಲ್ಲರೆದುರು ಥಳಿಸಿರುವ ಘಟನೆ ಗುಜರಾತ್‍ನ ಅಹಮದಾಬಾದ್‍ನಲ್ಲಿ ನಡೆದಿದ್ದು ಇದರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡ್ತಿದೆ.

    ಇಲ್ಲಿನ ಒಧಾವ್ ಪೊಲಿಸ್ ಠಾಣೆಯ ಸಹಾಯಕ ಸಬ್ ಇನ್ಸ್ ಪೆಕ್ಟರ್ ಅಮೃತ್‍ಜೀ ಕುಡಿದ ಮತ್ತಿನಲ್ಲಿ ತರಕಾರಿ ಮಾರುವ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿದ್ದು ಆಕೆಯಿಂದ ಹಿಗ್ಗಾಮುಗ್ಗಾ ಏಟು ತಿಂದಿದ್ದಾರೆ. ಮಹಿಳೆ ಸಮವಸ್ತ್ರದಲ್ಲಿದ್ದ ಪೊಲೀಸ್‍ಗೆ ಬಾರಿಸುತ್ತಿದ್ರೆ ಸ್ಥಳದಲ್ಲಿದ್ದವರು ಕೂಡ ಪೊಲೀಸ್‍ಗೆ ಛೀಮಾರಿ ಹಾಕಿ, ಮಹಿಳೆಯನ್ನು ಬೆಂಬಲಿಸಿದ್ದಾರೆ.

    ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಎಚ್ಚೆತ್ತ ನಗರದ ಪೊಲೀಸರು, ಸೋಮವಾರ ಸಂಜೆ ಅಮೃತ್‍ಜೀಯನ್ನ ಬಂಧಿಸಿದ್ದಾರೆ. ಅಮೃತ್‍ಜೀಯನ್ನು ಸದ್ಯಕ್ಕೆ ಅಮಾನತು ಮಾಡಲಾಗಿದ್ದು, ವೀಡಿಯೋದಲ್ಲಿರುವ ಮಹಿಳೆಯಿಂದ ದೂರು ಪಡೆಯಲು ಆಕೆಗಾಗಿ ಹುಡುಕಾಟ ನಡೆಸಲಾಗುತ್ತಿದೆ ಎಂದು ವಗೇಲಾದ ಪೊಲೀಸ್ ಜಂಟಿ ಆಯುಕ್ತರು ಪತ್ರಿಕೆಯೊಂದಕ್ಕೆ ತಿಳಿಸಿದ್ದಾರೆ.

    https://www.youtube.com/watch?v=b1XTBE8gQrA

  • ರಾಜಾರೋಷವಾಗಿ ಓಡಾಡುತ್ತಿರುವ ವ್ಯಕ್ತಿ ಬೆಂಗಳೂರು ಪೊಲೀಸರಿಗೆ ನಾಪತ್ತೆಯಾಗಿರುವ ಆರೋಪಿ!

    ರಾಜಾರೋಷವಾಗಿ ಓಡಾಡುತ್ತಿರುವ ವ್ಯಕ್ತಿ ಬೆಂಗಳೂರು ಪೊಲೀಸರಿಗೆ ನಾಪತ್ತೆಯಾಗಿರುವ ಆರೋಪಿ!

    ಬೆಂಗಳೂರು: ಆರಂಭದಲ್ಲಿ ದೂರು ಸ್ವೀಕರಿಸಲು ಹಿಂದೇಟು. ಬಳಿಕ ಸಾಕಷ್ಟು ಹೋರಾಟ ಬಳಿಕ ದೂರು ದಾಖಲು. ವ್ಯಕ್ತಿ ರಾಜರೋಷವಾಗಿ ಓಡಾಡುತ್ತಿದ್ದರೂ ಅಂತಿಮವಾಗಿ ಚಾರ್ಜ್ ಶೀಟ್ ಸಲ್ಲಿಕೆಯ ವೇಳೆ ಆರೋಪಿ ನಾಪತ್ತೆ ಎಂದು ಉಲ್ಲೇಖ. ಇದು ಬೆಂಗಳೂರು ಜನತೆ ರಕ್ಷಣೆ ನೀಡುತ್ತಿರುವ ಪೊಲೀಸರ ಕಾರ್ಯವೈಖರಿ.

    ದಿನಬೆಳಗಾದ್ರೇ ಮೌರ್ಯ ಸರ್ಕಲ್‍ನಲ್ಲಿ ಬಿಜೆಪಿ ವಿರುದ್ಧ ಧಿಕ್ಕಾರ ಕೂಗಿ ರಾಜಕೀಯದ ಮೈನ್‍ಸ್ಟ್ರೀಮ್‍ಗೆ ಬಂದ ಮನೋಹರ್ ಸದ್ಯ ವಿದ್ಯುತ್ ಕಾರ್ಖಾನೆ ನಿಗಮ ಮಂಡಳಿಯ ಅಧ್ಯಕ್ಷರಾಗಿದ್ದಾರೆ. ವಿಚಿತ್ರ ಅಂದ್ರೆ ಇವರ ಮೇಲೆ ಎಫ್‍ಐಆರ್ ಆಗಿದ್ರೂ ನಿಗಮಮಂಡಳಿ ಅಧ್ಯಕ್ಷರಾಗಿದ್ದಾರೆ. ಅಷ್ಟೇ ಅಲ್ಲ ರಾಜಾರೋಷವಾಗಿ ಸಾರ್ವಜನಿಕ ಜೀವನದಲ್ಲಿ ಓಡಾಡುತ್ತಿದ್ದಾರೆ. ಆದರೆ ಈ ವ್ಯಕ್ತಿ ನಮ್ಮ ಬೆಂಗಳೂರು ಪೊಲೀಸರ ಪಾಲಿಗೆ ನಾಪತ್ತೆಯಾಗಿರುವ ಆರೋಪಿ.

    ಏನಿದು ಪ್ರಕರಣ: 2014 ರಲ್ಲಿ ನಿಗಮ ಮಂಡಳಿ ಸ್ಥಾನ ಗಿಟ್ಟಿಸಲು ಓಡಾಡಿಕೊಂಡಿದ್ದ, ಆಗಿನ್ನೂ ಯೂತ್ ಕಾಂಗ್ರೆಸ್ ಮುಖಂಡರಾಗಿದ್ದ ಮನೋಹರ್ ಸಿದ್ದು ಸರ್ಕಾರಕ್ಕೆ ಕಪ್ಪ ಕೊಡಬೇಕು, 1 ಕೋಟಿ ರೂ. ಸಾಲ ಕೊಡಿ ಅಂತಾ ಸ್ನೇಹಿತ ಜ್ಞಾನೇಶ್ ಹಾಗೂ ಆತನ ತಾಯಿಯ ಬೆನ್ನುಬಿದ್ದಿದ್ರು. ಇದಕ್ಕೆ ಜ್ಞಾನೇಶ್ ತಮ್ಮಂದಿರಾದ ಪ್ರಮೋದ್ ಶಂಕರ್ ಹಾಗೂ ಪ್ರದೀಪ್, ಮನೋಹರ್‍ಗೆ ಕುಮ್ಮುಕ್ಕು ಕೊಡ್ತಾ ಇದ್ರು. ಸಾಲ ಕೊಡೋದಕ್ಕೆ ಆಗಲ್ಲ ಅಂತಾ ಹೇಳಿದಾಗ ಮನೋಹರ್ ಅಸಲಿ ಮುಖ ತೋರಿಸಿ ಜ್ಞಾನೇಶ್ ಮನೆಗೆ ನುಗ್ಗಿ ತಾಯಿಯ ಮೇಲೆ ಹಲ್ಲೆ ಮಾಡಿದ್ದರು.

    ಮನೋಹರ್ ಕಾಟಕ್ಕೆ ಬೇಸತ್ತು ಜ್ಞಾನೇಶ್ ಹಾಗೂ ಅವರ ತಾಯಿ ಡೆತ್‍ನೋಟ್ ಬರೆದು ಆತ್ಮಹತ್ಯಗೆ ಶರಣಾಗೋದಕ್ಕೆ ಪ್ರಯತ್ನಿಸಿದ್ರು. ಜ್ಞಾನೇಶ್‍ನನ್ನು ಸಂಬಂಧಿಕರು ಆಸ್ಪತ್ರೆಗೆ ಸೇರಿಸಿ ಬದುಕಿಸಿದ್ರೂ ಅವರ ತಾಯಿಯನ್ನು ಬದುಕಿಸೋದಕ್ಕೆ ಸಾಧ್ಯವಾಗಲಿಲ್ಲ. ಈಗ ತಾಯಿ ಸಾವಿನ ನ್ಯಾಯಕ್ಕಾಗಿ ಜ್ಞಾನೇಶ್ ಪೊಲೀಸ್ ಠಾಣೆ ಮೆಟ್ಟಿಲೇರಿದ್ದರು. ಆದ್ರೆ ದೂರು ದಾಖಲಿಸಿಕೊಳ್ಳಲು ಪೊಲೀಸರು ಸಾಕಷ್ಟು ಕಸರತ್ತು ಮಾಡಿದ್ದಾರೆ. ಕೊನೆಗೆ ಜನವರಿ 16ರಂದು ಜಾರ್ಜ್‍ಶೀಟ್ ಸಲ್ಲಿಕೆ ಮಾಡಿರುವ ಕೆಪಿ ಅಗ್ರಹಾರ ಪೊಲೀಸರು ಆರೋಪಿ ಮನೋಹರ್ ನಾಪತ್ತೆಯಾಗಿದ್ದಾರೆ ಅಂತಾ ಚಾರ್ಜ್‍ಶೀಟ್ ಸಲ್ಲಿಕೆ ಮಾಡಿ ಎಡವಟ್ಟು ಮಾಡಿದ್ದಾರೆ.

    ಆರೋಪಿ ಸ್ಥಾನದಲ್ಲಿರುವವರನ್ನು ನಿಗಮಮಂಡಳಿ ಅಧ್ಯಕ್ಷರನ್ನಾಗಿ ಮಾಡಿದ್ದೇ ತಪ್ಪು. ಹೀಗಿರುವಾಗ ಚಾರ್ಜ್‍ಶೀಟ್‍ನಲ್ಲಿ ಪೊಲೀಸರು ನಾಪತ್ತೆ ಅಂತಾ ಉಲ್ಲೇಖ ಮಾಡಿದ್ದು ಆರೋಪಿಯ ರಕ್ಷಣೆಗೆ ನಿಂತಿದ್ದಾರೆ. ನನ್ನ ತಾಯಿಯ ಹತ್ಯೆಗೈದವರನ್ನು ಸಿದ್ದರಾಮಯ್ಯ ಸರ್ಕಾರ ರಕ್ಷಿಸುತ್ತಿದೆ ಅಂತಾ ಜ್ಞಾನೇಶ್ ಅಳಲು ತೋಡಿಕೊಂಡಿದ್ದಾರೆ.

  • ಮಂಗಳೂರಿನಲ್ಲಿ ಕೊಲೆ, ಶ್ರೀಮಂತರ ದರೋಡೆಗೆ ಸಂಚು ರೂಪಿಸಿದ್ದ 7 ಮಂದಿ ಸೆರೆ

    ಮಂಗಳೂರಿನಲ್ಲಿ ಕೊಲೆ, ಶ್ರೀಮಂತರ ದರೋಡೆಗೆ ಸಂಚು ರೂಪಿಸಿದ್ದ 7 ಮಂದಿ ಸೆರೆ

    ಮಂಗಳೂರು: ನಗರದ ಪಣಂಬೂರು ಠಾಣಾ ವ್ಯಾಪ್ತಿಯಲ್ಲಿ ವ್ಯಕ್ತಿಯೊಬ್ಬರ ಕೊಲೆಗೆ ಹಾಗೂ ಶ್ರೀಮಂತ ವ್ಯಕ್ತಿಗಳ ದರೋಡೆಗಾಗಿ ಸಂಚು ರೂಪಿಸುತ್ತಿದ್ದ ಕುಖ್ಯಾತ ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ 2 ಪಿಸ್ತೂಲ್, ಸಜೀವ ಗುಂಡುಗಳು, ಚೂರಿ ಹಾಗೂ ಕೃತ್ಯಕ್ಕೆ ಉಪಯೋಗಿಸಿದ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ.

    ಮಂಗಳೂರು ನಗರದ ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯ ತಣ್ಣೀರುಬಾವಿ ಬೀಚ್ ರಸ್ತೆಯಲ್ಲಿ ಮಾರುತಿ ಸ್ವಿಫ್ಟ್ ಕಾರು ಹಾಗೂ ರಿಕ್ಷಾವೊಂದರಲ್ಲಿ ಈ ಹಿಂದೆ ಹಲವು ಪ್ರಕರಣಗಳಲ್ಲಿ ಭಾಗಿಯಾಗಿ ಜೈಲಿನಿಂದ ಇತ್ತೀಚೆಗೆ ಬಿಡುಗಡೆಗೊಂಡಿದ್ದವರು ವ್ಯಕ್ತಿಯೊಬ್ಬರ ಕೊಲೆಗೆ ಸಂಚು ರೂಪಿಸುತ್ತಿದ್ದರು. ಈ ಬಗ್ಗೆ ಖಚಿತ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಪೊಲೀಸರು ಸುರತ್ಕಲ್‍ನ ಸಫ್ವಾನ್, ಹುಸೈನ್, ಮೊಹಮ್ಮದ್ ಫೈಸಲ್, ಎಮ್ಮೆಕೆರೆಯ ಅಬ್ದುಲ್ ನಾಸಿರ್, ಮುಕ್ಕ ಸುರತ್ಕಲ್‍ನ ಸಂಶುದ್ದೀನ್, ಉಳ್ಳಾಲದ ಹಳೆಕೋಟೆಯ ಉಮ್ಮರ್ ಫಾರೂಕ್ ಹಾಗೂ ಮೊಹಮ್ಮದ್ ಅನ್ಸಾರ್ ಎಂಬುವವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಬಂಧಿತರಿಂದ 2 ಪಿಸ್ತೂಲ್‍ಗಳು, 7 ಸಜೀವ ಮದ್ದುಗುಂಡುಗಳು, 2 ಚೂರಿಗಳು, 3 ಮೊಬೈಲ್ ಫೋನ್  ಕೆಎ-19-ಎಂಇ-4009 ಮಾರುತಿ ಸ್ವಿಫ್ಟ್ ಕಾರು, ಕೆಎ-19-ಎಬಿ-6123 ಬಜಾಜ್ ಆಟೋ ರಿಕ್ಷಾವನ್ನು ವಶಪಡಿಸಿಕೊಳ್ಳಲಾಗಿದೆ.

    ಈ ಆರೋಪಿಗಳ ಪೈಕಿ ಸಫ್ವಾನ್ ಹುಸೈನ್ ಎಂಬಾತನ ವಿರುದ್ಧ ಈ ಹಿಂದೆ ಕೊಲೆ, ಕೊಲೆಗೆ ಪ್ರಯತ್ನ, ಅಪಹರಣ, ದರೋಡೆ, ಕರ್ತವ್ಯನಿರತ ಪೆÇಲೀಸರ ಹಲ್ಲೆ ಮುಂತಾದ ಒಟ್ಟು 23 ಪ್ರಕರಣಗಳು ದಾಖಲಾಗಿದ್ದುದಲ್ಲದೇ ಗೂಂಡಾ ಕಾಯ್ದೆಯಡಿಯಲ್ಲಿ ಕೂಡಾ ಪ್ರಕರಣ ದಾಖಲಾಗಿತ್ತು. ಈ ಪ್ರಕರಣಗಳಲ್ಲಿ ಜಾಮೀನು ಪಡೆದು ಈತ 2 ತಿಂಗಳ ಹಿಂದೆ ಬಿಡುಗಡೆಗೊಂಡಿದ್ದ.

    ಮೊಹಮ್ಮದ್ ಫೈಸಲ್ ಇಬ್ರಾಹಿಂ ಶೇಖ್ ವಿರುದ್ಧ ಕೊಲೆಗೆ ಯತ್ನ, ದರೋಡೆ, ಜೈಲಿನಲ್ಲಿ ಗಲಾಟೆ ಮುಂತಾದ ಒಟ್ಟು 8 ಪ್ರಕರಣಗಳು ದಾಖಲಾಗಿದ್ದು, ಇತ್ತೀಚೆಗೆ ಜೈಲ್ ನಿಂದ ಬಿಡುಗಡೆಗೊಂಡಿದ್ದ. ಸಂಶುದ್ದೀನ್ ಎಂಬಾತನ ವಿರುದ್ಧ ಕೊಲೆ, ಕೊಲೆಗೆ ಯತ್ನ, ಅಪಹರಣ, ದರೋಡೆ, ಜೈಲಿನಲ್ಲಿ ಗಲಾಟೆ ಮುಂತಾದ ಒಟ್ಟು 8 ಪ್ರಕರಣಗಳು ದಾಖಲಾಗಿದ್ದು, ಸುಮಾರು 8 ತಿಂಗಳ ಹಿಂದೆ ಜೈಲಿನಿಂದ ಬಿಡುಗಡೆಗೊಂಡಿದ್ದ.

    ಅಬ್ದುಲ್ ನಾಸಿರ್ ಯಾನೆ ಡಾನ್ ನಾಸೀರ್ ಎಂಬಾತನ ವಿರುದ್ಧ ಕೊಲೆಯತ್ನ, ಅಪಹರಣ, ದರೋಡೆ, ಕೋಮು ಗಲಭೆ ಮುಂತಾದ ಒಟ್ಟು 9 ಪ್ರಕರಣಗಳು ದಾಖಲಾಗಿದೆ.

    ಉಮರ್ ಫಾರೂಕ್ ಯಾನೆ ಮಾನಾ ಫಾರೂಕ್ ವಿರುದ್ದ ಮೂರು ಪ್ರಕರಣಗಳು ದಾಖಲಾಗಿದೆ. ಅವುಗಳ ಪೈಕಿ ಒಂದು ಕೊಲೆ ಯತ್ನ, ದರೋಡೆ ಯತ್ನ ಹಾಗೂ ಹಲ್ಲೆ ಪ್ರಕರಣವೂ ಇದೆ. ಮೊಹಮ್ಮದ್ ಅನ್ಸಾರ್ ನ ಮೇಲೆ ಯಾವುದೇ ಪ್ರಕರಣಗಳು ದಾಖಲಾಗಿಲ್ಲ. ಆರೋಪಿಗಳನ್ನು ಹಾಗೂ ವಶಪಡಿಸಿಕೊಂಡ ವಸ್ತುಗಳನ್ನು ಪಣಂಬೂರು ಪೊಲೀಸ್ ಠಾಣೆಗೆ ಹಸ್ತಾಂತರಿಸಲಾಗಿದೆ.

     

  • ಕುಡಿತ, ಗಾಂಜಾ ಮತ್ತಿನಲ್ಲಿ ಸ್ನೇಹಿತನನ್ನೇ ಕೊಚ್ಚಿ ಕೊಂದ್ರು!

    ಕುಡಿತ, ಗಾಂಜಾ ಮತ್ತಿನಲ್ಲಿ ಸ್ನೇಹಿತನನ್ನೇ ಕೊಚ್ಚಿ ಕೊಂದ್ರು!

    ಮಂಗಳೂರು: ಕುಡಿತ ಹಾಗೂ ಗಾಂಜಾ ಮತ್ತಿನಲ್ಲಿ ಸ್ನೇಹಿತನನ್ನೇ ಮಾರಕಾಸ್ತ್ರದಿಂದ ಕೊಚ್ಚಿ ಕೊಲೆ ಮಾಡಿದ ಘಟನೆ ಭಾನುವಾರ ಮಧ್ಯರಾತ್ರಿ ಮಂಗಳೂರು ನಗರದ ಮರೋಳಿಯಲ್ಲಿ ನಡೆದಿದೆ.

    ಹಿಂದೂ ಜಾಗರಣಾ ವೇದಿಕೆಯ ಕಾರ್ಯಕರ್ತ ಸರಪಲ್ಲ ನಿವಾಸಿ ಪ್ರತಾಪ್ ಕೊಲೆಗೀಡಾದ ಯುವಕ. ಗಾಂಜಾ ಸೇವನೆ ಹಾಗೂ ಮದ್ಯಪಾನ ಮಾಡಿ ತಡರಾತ್ರಿ ಸ್ನೇಹಿತರ ನಡುವೆ ನಡೆದ ಜಗಳ ಪ್ರತಾಪ್ ಕೊಲೆಯಲ್ಲಿ ಅಂತ್ಯವಾಗಿದೆ.

    ಹೋಂ ಸ್ಟೇ ದಾಳಿ ಪ್ರಕರಣದ ಆರೋಪಿ ಮಿಥುನ್ ಮತ್ತು ಸಹಚರರು ತಡರಾತ್ರಿ ಕೊಲೆ ಮಾಡಿ ಪರಾರಿಯಾಗಿದ್ದಾರೆ. ಮಿಥುನ್ ಮತ್ತು ಸಹಚರರು ತಡರಾತ್ರಿ ಪ್ರತಾಪ್ ನನ್ನು ಕೊಲೆ ಮಾಡಿ ಪರಾರಿಯಾಗಿದ್ದಾರೆ. ಪಡೀಲ್ ಎಂಬಲ್ಲಿ ಗ್ಯಾಂಗ್ ಕಟ್ಟಿ ಕೊಂಡಿದ್ದ ಮಿಥುನ್ ತಂಡದಲ್ಲಿ ಕೊಲೆಯಾದ ಪ್ರತಾಪ್ ಕೂಡಾ ಸಕ್ರಿಯನಾಗಿದ್ದ.

    ಸುಮಾರು ಎಂಟು ಮಂದಿ ಕೊಲೆ ಮಾಡಿರುವ ಶಂಕೆಯಿದ್ದು, ಪರಾರಿಯಾಗಿರುವ ಆರೋಪಿಗಳ ಪತ್ತೆಗೆ ಬಲೆ ಬೀಸಲಾಗಿದೆ. ಈ ಬಗ್ಗೆ ಕಂಕನಾಡಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳ ಪತ್ತೆಗೆ ಮಂಗಳೂರು ಕಮೀಷನರ್ ಎಂ.ಚಂದ್ರಶೇಖರ್ ನೇತೃತ್ವದಲ್ಲಿ ವಿಶೇಷ ತಂಡ ರಚಿಸಲಾಗಿದೆ.

  • ಬೆಂಗ್ಳೂರಲ್ಲಿ ಪೊಲೀಸ್ರಿಗೂ ರಕ್ಷಣೆಯಿಲ್ಲ- ಖಾಕಿ ಮೇಲೆ ಹಲ್ಲೆ ಮಾಡಿ ಗನ್ ಹೊತ್ತೊಯ್ದ ದುಷ್ಕರ್ಮಿಗಳು

    ಬೆಂಗ್ಳೂರಲ್ಲಿ ಪೊಲೀಸ್ರಿಗೂ ರಕ್ಷಣೆಯಿಲ್ಲ- ಖಾಕಿ ಮೇಲೆ ಹಲ್ಲೆ ಮಾಡಿ ಗನ್ ಹೊತ್ತೊಯ್ದ ದುಷ್ಕರ್ಮಿಗಳು

    ಬೆಂಗಳೂರು: ರಾಜ್ಯದ ಜನರನ್ನು ರಕ್ಷಿಸುವ ಪೊಲೀಸರ ಮೇಲೆ ಆಗಾಗ್ಗೆ ಹಲ್ಲೆಗಳು ನಡೆಯುತ್ತಲೇ ಇರುತ್ತದೆ. ಶುಕ್ರವಾರವೂ ಕೂಡ ರಾಜಧಾನಿ ಬೆಂಗಳೂರಲ್ಲಿ ಎಂಎಲ್‍ಸಿಯೊಬ್ಬರ ಗನ್ ಮ್ಯಾನ್ ಮೇಲೆ ಹಲ್ಲೆ ನಡೆದಿದೆ.

    ಎಂ ಎಲ್ ಸಿ ಮನೋಹರ್ ಅವರ ಗನ್ ಮ್ಯಾನ್ ಆಗಿರೋ ಪುರುಷೋತ್ತಮ್ ಮೇಲೆ ಕಿಡಿಗೇಡಿಗಳು ಹಲ್ಲೆ ನಡೆಸಿದ್ದಾರೆ. ನಗರದ ಮೈಸೂರು ರಸ್ತೆಯ ವಿನಾಯಕ ಥಿಯೇಟರ್ ಬಳಿ ಶುಕ್ರವಾರ ರಾತ್ರಿ ಮೂರು ಜನ ಯುವಕರು ಗನ್ ಮ್ಯಾನ್ ಮೇಲೆ ಹಲ್ಲೆ ನಡೆಸಿ ಬಳಿಕ ಅವರ ಬಳಿ ಇದ್ದ ಗನ್ ಕಿತ್ಕೊಂಡು ಪರಾರಿಯಾಗಿದ್ದಾರೆ.

    ಪುರುಷೋತ್ತಮ್ ನಿನ್ನೆ ರಾತ್ರಿ ಡ್ಯೂಟಿ ಮುಗಿಸಿ ಮನೆಗೆ ಹೋಗ್ತಿದ್ದ ಸಂದರ್ಭದಲ್ಲಿ ವಿನಾಯಕ ಥಿಯೇಟರ್ ಬಳಿ ಇರೋ ಗಣೇಶನ ದೇವಸ್ಥಾನದ ಬದಿಯಲ್ಲೇ ಮೂವರು ಯುವಕರು ಮೂತ್ರ ವಿಸರ್ಜನೆ ಮಾಡ್ತಿದ್ರು. ಇದನ್ನ ಪ್ರಶ್ನಿಸಿದ ಗನ್ ಮ್ಯಾನ್ ಪುರುಷೋತ್ತಮ್ ಮೇಲೆ ಕಂಠಪೂರ್ತಿ ಕುಡಿದಿದ್ದ ಆ ಪುಂಡರು ಕ್ಯಾತೆ ತೆಗೆದಿದ್ದಾರೆ. ಮಾತಿಗೆ ಮಾತು ಬೆಳೆದ ಈ ಗಲಾಟೆಯಲ್ಲಿ ಪುಂಡರು ಕಲ್ಲಿನಿಂದ ಪುರುಷೋತ್ತಮ್ ಮುಖ ಮತ್ತು ತಲೆ ಭಾಗವನ್ನ ಜಜ್ಜಿದ್ದಾರೆ. ಇನ್ನು ಗಲಾಟೆ ನೋಡಿ ಅಕ್ಕ ಪಕ್ಕದವರು ಬರುತ್ತಿದ್ದಂತೆ ಕಿಡಿಗೇಡಿಗಳು, ಗಾಯಗೊಂಡು ಕೆಳಗೆ ಬಿದ್ದಿದ್ದ ಪುರುಷೋತ್ತಮ್ ಬಳಿ ಇರೋ ಗನ್ ನ್ನ ಕಿತ್ತುಕೊಂಡು ಪರಾರಿಯಾಗಿದ್ದಾರೆ.

    ಬಳಿಕ ಸ್ಥಳೀಯರು ಪುರುಷೋತ್ತಮ್‍ರನ್ನು ವಿಕ್ಟೋರಿಯೋ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ. ಈ ಸಂಬಂಧ ಕಾಟನ್‍ಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹಲ್ಲೆ ಮಾಡಿ ಪರಾರಿಯಾದ ಕಿಡಿಗೆಡಿಗಳಿಗೆ ಪೊಲೀಸರು ಹುಡುಕಾಟ ಆರಂಭಿಸಿದ್ದಾರೆ ಅಂತಾ ದಕ್ಷಿಣ ವಿಭಾಗ ಡಿಸಿಪಿ ಡಾ .ಶರಣಪ್ಪ  ಹೇಳಿದ್ದಾರೆ.

  • ನಾನು ಕಳ್ಳಿಯಲ್ಲ, ಕ್ರಿಮಿನಲ್‍ಗಳಂತೆ ಜೀಪ್‍ನಲ್ಲಿ ಕರೆದುಕೊಂಡು ಹೋಗ್ತೀರಾ: ಪೊಲೀಸರ ಮುಂದೆ ಶಶಿಕಲಾ ಡೈಲಾಗ್

    ನಾನು ಕಳ್ಳಿಯಲ್ಲ, ಕ್ರಿಮಿನಲ್‍ಗಳಂತೆ ಜೀಪ್‍ನಲ್ಲಿ ಕರೆದುಕೊಂಡು ಹೋಗ್ತೀರಾ: ಪೊಲೀಸರ ಮುಂದೆ ಶಶಿಕಲಾ ಡೈಲಾಗ್

    ಬೆಂಗಳೂರು: ನಾನೇನು ಕಳ್ಳಿಯಲ್ಲ. ಕ್ರಿಮಿನಲ್‍ಗಳ ಥರ ನನ್ನ ಜೀಪಲ್ಲಿ ಕರೆದುಕೊಂಡು ಹೋಗ್ತೀರಾ.. ನಾನು ಜೀಪು ಹತ್ತಲ್ಲ. ಜೈಲಿಗೆ ಎಷ್ಟು ದೂರು ಇದ್ರೂ ನಡೆದುಕೊಂಡೇ ಹೋಗ್ತೇನೆ.. ಹೀಗಂತ, ಪೊಲೀಸರ ಮುಂದೆ ಶಶಿಕಲಾ ನಟರಾಜನ್ ಹೇಳಿದ್ದಾರೆ.

    ಬುಧವಾರ ಪರಪ್ಪನ ಅಗ್ರಹಾರಕ್ಕೆ ಬಂದಾಗ ಶಶಿಕಲಾರನ್ನ ಪೊಲೀಸರು ಜೈಲಿನ ಆವರಣದಿಂದ ಬಂಧಿಖಾನೆಗೆ ಕರೆದುಕೊಂಡು ಹೋಗಲು ಜೀಪು ಹತ್ತುವಂತೆ ಹೇಳಿದ್ರು. ಆದ್ರೆ, ಜೀಪಲ್ಲಿ ಹೋಗೋಕೆ ನಾನೇನು ಜುಜುಬಿ ಕಳ್ಳಿಯಲ್ಲ ಎಂದು ಹೇಳಿರುವ ವಿಚಾರವನ್ನು ಪೊಲೀಸ್ ಮೂಲಗಳು ತಿಳಿಸಿವೆ.

    ಶುಕ್ರವಾರ ಬೆಳಗ್ಗೆ ಜೈಲಿನಲ್ಲಿ ವ್ಯಾಯಾಮ ಮಾಡಿದ ಬಳಿಕ ಚಿನ್ನಮ್ಮ, ಟೊಮೆಟೋ ಬಾತ್ ಸೇವಿಸಿದ್ದಾರೆ. ಅಲ್ಲದೆ, ಸಿಎಂ ಪಳನಿಸ್ವಾಮಿ ಜೈಲಿಗೆ ಭೇಟಿ ನೀಡಿದಾಗ ಸೂಕ್ಷ್ಮ ವಿಚಾರಗಳನ್ನ ಮಾತಾಡಲು ಪ್ರತ್ಯೇಕ ಕೋಣೆ ಕಲ್ಪಿಸುವಂತೆ ಜೈಲಾಧಿಕಾರಿಗೆ ಮನವಿ ಮಾಡಿದ್ದಾರೆ.

    ಶನಿವಾರ ಪಳನಿಸ್ವಾಮಿ ವಿಶ್ವಾಸ ಮತ ಗೆದ್ದರೆ ಭಾನುವಾರ ಅಥವಾ ಸೋಮವಾರ ಪರಪ್ಪನ ಅಗ್ರಹಾರಕ್ಕೆ ಭೇಟಿ ನೀಡೋ ಸಾಧ್ಯತೆಯಿದೆ ಅಂತ ಎಐಎಡಿಎಂಕೆ ರಾಜ್ಯ ಘಟಕದ ಅಧ್ಯಕ್ಷ ಪುಗಳೇಂದಿ ಪಬ್ಲಿಕ್ ಟಿವಿಗೆ ತಿಳಿಸಿದ್ದಾರೆ.

  • 500, 1000 ರೂ. ನೋಟು ವಿನಿಮಯ: ರಾಯಚೂರಿನಲ್ಲಿ ಮೂವರ ಬಂಧನ

    500, 1000 ರೂ. ನೋಟು ವಿನಿಮಯ: ರಾಯಚೂರಿನಲ್ಲಿ ಮೂವರ ಬಂಧನ

    – 16.70 ಲಕ್ಷ ರೂಪಾಯಿ ಹಳೆಯ ನೋಟು, ಒಂದು ಕಾರು ಜಪ್ತಿ

    ರಾಯಚೂರು: ರದ್ದಾಗಿರುವ 500, 1000 ಮುಖಬೆಲೆಯ ನೋಟುಗಳ ವಿನಿಮಯ ಮಾಡುತ್ತಿದ್ದ ಮೂವರು ದಂಧೆಕೋರರನ್ನು ರಾಯಚೂರು ಪೊಲೀಸರು ಬಂಧಿಸಿದ್ದಾರೆ.

    ನಗರದ ಪಶ್ಚಿಮ ಠಾಣೆ ಪೊಲೀಸರ ಕಾರ್ಯಾಚರಣೆಯಲ್ಲಿ ಮೂರು ಜನ ಆರೋಪಿಗಳು ಸಿಕ್ಕಿಬಿದ್ದಿದ್ದಾರೆ. ಧಾರವಾಡ ಮೂಲದ ರವಿಕುಮಾರ್, ರಾಯಚೂರಿನ ಅನ್ವರ್, ಮಾನ್ವಿಯ ಪರಶುರಾಮ ನೋಟು ವಿನಿಮಯ ವೇಳೆ ಸಿಕ್ಕಿಬಿದ್ದ ಆರೋಪಿಗಳು. ಬಂಧಿತರಿಂದ ಒಟ್ಟು 16 ಲಕ್ಷ 70 ಸಾವಿರ ರೂಪಾಯಿ ಹಳೆಯ ನೋಟುಗಳನ್ನ ಜಪ್ತಿ ಮಾಡಲಾಗಿದೆ. ಇದರಲ್ಲಿ 3 ಲಕ್ಷ 82 ಸಾವಿರ ರೂಪಾಯಿ ಸಾವಿರ ರೂಪಾಯಿ ಮುಖಬೆಲೆಯ ನೋಟು, 12 ಲಕ್ಷ 88 ಸಾವಿರ ರೂಪಾಯಿ 500 ರೂಪಾಯಿ ಮುಖಬೆಲೆಯ ನೋಟುಗಳಾಗಿವೆ.

    ರಾಯಚೂರಿನ ಮಂತ್ರಾಲಯ ರಸ್ತೆಯ ಅತಿಥಿ ಹೋಟೆಲ್ ಎದುರು ಆರೋಪಿಗಳು ಹಣ ವಿನಿಮಯಕ್ಕೆ ಮುಂದಾಗಿದ್ದರು. ದಾಳಿ ವೇಳೆ ಪೊಲೀಸರು ಆರೋಪಿಗಳ ಕಾರನ್ನೂ ಜಪ್ತಿ ಮಾಡಿದ್ದಾರೆ. ಪಶ್ಚಿಮ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ಮುಂದುವರೆದಿದೆ.

     

  • 2 ವರ್ಷದ ಪುಟ್ಟ ಕಂದನನ್ನು ಬಿಟ್ಟು ನೇಣಿಗೆ ಶರಣಾದ ಗೃಹಿಣಿ

    2 ವರ್ಷದ ಪುಟ್ಟ ಕಂದನನ್ನು ಬಿಟ್ಟು ನೇಣಿಗೆ ಶರಣಾದ ಗೃಹಿಣಿ

    ಚಿಕ್ಕಬಳ್ಳಾಪುರ: ಗೃಹಿಣಿಯೊಬ್ಬರು ತಮ್ಮ ಎರಡು ವರ್ಷದ ಹೆಣ್ಣು ಮಗುವನ್ನು ಬಿಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಚಿಂತಾಮಣಿ ಪಟ್ಟಣದ ಮೆಹಬೂಬ್ ನಗರದಲ್ಲಿ ಮಂಗಳವಾರ ತಡರಾತ್ರಿ ನಡೆದಿದೆ.

    ತೌಸಿಯಾ ಅಜುಂ (21) ನೇಣಿಗೆ ಶರಣಾದ ಗೃಹಿಣಿ. ತೌಸಿಯಾ ಅವರ ಗಂಡ ನವೀದ್ ವರದಕ್ಷಿಣೆ ತರುವಂತೆ ಪೀಡಿಸುತ್ತಿದ್ದ. ಗಂಡ ಮತ್ತು ಆತನ ಮನೆಯವರ ವರದಕ್ಷಿಣೆ ಕಿರುಕುಳ ತಾಳಲಾರದೆ ತೌಸಿಯಾ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತೌಸಿಯಾ ಸಂಬಂಧಿಕರು ಹೇಳುತ್ತಿದ್ದಾರೆ.

    ನವೀದ್ ಪಾಷಾ

    ಮೂರು ವರ್ಷಗಳ ಹಿಂದೆ ಕೋಲಾರದ ತೌಸಿಯಾ ಅಜುಂರನ್ನು ಚಿಂತಾಮಣಿ ನಗರದ ನವೀದ್ ಪಾಷಾಗೆ ಮದುವೆ ಮಾಡಿಕೊಡಲಾಗಿತ್ತು. ಮೊದ ಮೊದಲು ಚೆನ್ನಾಗಿ ನೋಡಿಕೊಂಡಿದ್ದ ನವೀದ್ 2 ಲಕ್ಷ ರೂ. ಹಣ ಹಾಗೂ ನಿವೇಶನ ಕೊಡಿಸುವಂತೆ ಒತ್ತಾಯ ಮಾಡಿದ್ದನು ಎಂದು ತೌಸಿಯಾ ಪೋಷಕರು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

    ನವೀದ್ ಪಾಷಾ

    ಈ ಕುರಿತು ಚಿಂತಾಮಣಿ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪೊಲೀಸರು ನವೀದ್ ಸೇರಿದಂತೆ 6 ಜನರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

     

  • ಕಾಸರಗೋಡಿನ ನಟೋರಿಯಸ್ ರೌಡಿಯನ್ನು ಅಟ್ಟಾಡಿಸಿ ಕೊಂದ ದುಷ್ಕರ್ಮಿಗಳು

    ಕಾಸರಗೋಡಿನ ನಟೋರಿಯಸ್ ರೌಡಿಯನ್ನು ಅಟ್ಟಾಡಿಸಿ ಕೊಂದ ದುಷ್ಕರ್ಮಿಗಳು

    ಮಂಗಳೂರು: ಕಾಸರಗೋಡಿನ ನಟೋರಿಯಸ್ ರೌಡಿ ಕಾಲಿಯಾ ರಫೀಕ್‍ನ್ನು ಸಿನಿಮೀಯ ಶೈಲಿಯಲ್ಲಿ ಅಟ್ಟಾಡಿಸಿ ದುಷ್ಕರ್ಮಿಗಳು ಹತ್ಯೆಗೈದಿರುವ ಘಟನೆ ಮಂಗಳೂರಿನ ಹೊರವಲಯದ ಉಳ್ಳಾಲದ ಕೋಟೆಕಾರು ಪೆಟ್ರೋಲ್ ಬಂಕ್ ಬಳಿ ಮಂಗಳವಾರ ತಡರಾತ್ರಿ ನಡೆದಿದೆ.

    ಕೇರಳ ಹಾಗೂ ಕರ್ನಾಟಕ ರಾಜ್ಯಗಳಲ್ಲಿ 45 ಕ್ಕೂ ಹೆಚ್ಚು ಪ್ರಕರಣಗಳಲ್ಲಿ ಕಾಲಿಯಾ ರಫೀಕ್ ಆರೋಪಿಯಾಗಿದ್ದು, ಮೂಲತಃ ಕೇರಳದ ಕಾಸರಗೋಡಿನ ಉಪ್ಪಳ ಗ್ರಾಮದ ನಿವಾಸಿ.

    ತಡರಾತ್ರಿ ಸ್ನೇಹಿತರ ಜೊತೆ ಕಾರಿನಲ್ಲಿ ಮಂಗಳೂರಿಗೆ ಬರುತ್ತಿದ್ದ ವೇಳೆ ರಫೀಕ್ ಕಾರಿಗೆ ಟಿಪ್ಪರ್‍ನಲ್ಲಿ ಡಿಕ್ಕಿ ಹೊಡೆದು, ಬಳಿಕ ತಲ್ವಾರ್‍ಗಳಿಂದ ಮನಬಂದಂತೆ ಕೊಚ್ಚಿ ಕೊಲೆ ಮಾಡಿದ್ದಾರೆ. ಈ ವೇಳೆ ಪರಾರಿಯಾಗಲು ಯತ್ನಿಸಿದ ರಫೀಕ್ ಮೇಲೆ ಫೈರಿಂಗ್ ಮಾಡಿದ್ದಾರೆ.

    ರಫೀಕ್ ಜೊತೆಯಿದ್ದ ಸ್ನೇಹಿತರ ಮೇಲೆಯೂ ತಲ್ವಾರಗಳಿಂದ ಮಾರಣಾಂತಿಕ ದಾಳಿ ನಡೆಸಿದ್ದಾರೆ. ಹಲ್ಲೆಗೊಳಗಾದ ರಫೀಕ್ ಸ್ನೇಹಿತರು ಬೆರಳಕಟ್ಟೆ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನಿಬ್ಬರು ಸ್ನೇಹಿತರು ಪರಾರಿಯಾಗಿದ್ದಾರೆ. ಹಳೆ ದ್ವೇಷದ ಹಿನ್ನೆಲೆಯಲ್ಲಿ ಉಪ್ಪಳದ ನೂರ್ ಅಲಿ ಹಾಗೂ ಐವರ ತಂಡ ಕೃತ್ಯ ನಡೆಸಿದೆ ಎನ್ನಲಾಗುತ್ತಿದೆ.

    ಸ್ಥಳಕ್ಕೆ ಎಸಿಪಿ ಶೃತಿ, ಉಳ್ಳಾಲ ಇನ್ಸ್ ಪೆಕ್ಟರ್ ಗೋಪಿಕೃಷ್ಣ, ಮಂಗಳೂರು ಸಿಸಿಬಿ ಪೊಲೀಸ್, ಮಂಜೇಶ್ವರ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.