Tag: police

  • ಮೂತ್ರ ವಿಸರ್ಜನೆ ವಿಷಯದಲ್ಲಿ ಜಗಳ: ಯುವಕರ ನಡುವೆ ಮಾರಾಮಾರಿ

    ಗದಗ: ಮೂತ್ರ ವಿಸರ್ಜನೆ ವಿಷಯದಲ್ಲಿ ಜಗಳ ವಿಕೋಪಕ್ಕೆ ತಿರುಗಿ ಇಬ್ಬರು ಯುವಕರ ನಡುವೆ ಮಾರಾಮಾರಿ ನಡೆದಿರುವ ಘಟನೆ ಗದಗ ನಗರದ ಮುಳಗುಂದದ ನಾಕಾ ಬಳಿ ಶುಕ್ರವಾರ ರಾತ್ರಿ ನಡೆದಿದೆ.

    ಸಂತೋಷ್ ರೊಖಡೆ ಮತ್ತು ಮುಸ್ತಾಕ್ ಛಬ್ಬಿ ನಡುವೆ ಮೂತ್ರ ವಿಸರ್ಜನೆಯ ವಿಷಯವಾಗಿ ಜಗಳ ನಡೆದಿದೆ. ಮುಸ್ತಾಕ್ ವ್ಯಾಪಾರ ಮಾಡುವ ಸ್ಥಳದಲ್ಲಿ ಸಂತೋಷ್ ಮೂತ್ರ ವಿಸರ್ಜನೆ ಮಾಡಿದ್ದಾನೆ. ಇದರಿಂದ ಆಕ್ರೋಶಗೊಂಡ ಮುಸ್ತಾಕ್, ಸಂತೋಷ್‍ನನ್ನು ಪ್ರಶ್ನೆ ಮಾಡಿದ್ದಾನೆ. ಈ ಸಂದರ್ಭ ಜಗಳ ವಿಕೋಪಕ್ಕೆ ತಿರುಗಿ ಇಬ್ಬರು ಪರಸ್ಪರ ಎದೆ, ಬೆನ್ನು, ಹೊಟ್ಟೆಗೆ ಇರಿದು ಹಲ್ಲೆ ಮಾಡಿದ್ದಾರೆ.

    ಸಂತೋಷ್ ರೊಖಡೆ

    ಮುಸ್ತಾಕ್ ಮತ್ತು ಸಂತೋಷ್ ಇಬ್ಬರೂ ಗಂಭೀರವಾಗಿ ಗಾಯಗೊಂಡಿದ್ದು, ಮುಸ್ತಾಕ್‍ರನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ಹಾಗೂ ಸಂತೋಷ್‍ನನ್ನು ಧಾರವಾಡದ ಎಸ್.ಡಿ.ಎಂ. ಆಸ್ಪತ್ರೆಗೆ ದಾಖಲಿಸಿದ್ದಾರೆ. ಈ ಸಂಬಂಧ ಗದಗ ಶಹರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

     

  • ನದಿಗೆ ಉರುಳಿದ ಬಿಎಂಟಿಸಿ ಬಸ್- ಗರ್ಭಿಣಿ ಸೇರಿ ಹಲವು ಪ್ರಯಾಣಿಕರಿಗೆ ಗಾಯ

    ಬೆಂಗಳೂರು: ಬಿಎಂಟಿಸಿ ಬಸ್ಸೊಂದು ಸೇತುವೆಗೆ ಡಿಕ್ಕಿ ಹೊಡೆದು 10 ಅಡಿ ಆಳದ ನದಿಗೆ ಬಿದ್ದ ಪರಿಣಾಮ ಮೂವರು ಪ್ರಯಾಣಿಕರಿಗೆ ಗಂಭೀರ ಗಾಯಗಳಾದ ಘಟನೆ ಬೆಂಗಳೂರು ದಕ್ಷಿಣ ತಾಲೂಕಿನ ತಾವರೆಕೆರೆ ಬಳಿ ಇಂದು ನಡೆದಿದೆ.

    30 ಮಂದಿ ಪ್ರಯಾಣಿಕರನ್ನೊಳಗೊಂಡ 374ಎಂ ರೂಟ್‍ನ ಬಿಎಂಟಿಸಿ ಬಸ್ ಕೆಂಗೆರಿಯಿಂದ ನೆಲಮಂಗಲ ಕಡೆ ತೆರಳುತ್ತಿದ್ದ ವೇಳೆ ಈ ಘಟನೆ ನಡೆದಿದೆ. ವೇಗವಾಗಿ ಬಂದ ಬಸ್ ಅರ್ಕಾವತಿ ನದಿಯ ಸೇತುವೆಯ ತಡೆಗೋಡೆಗೆ ಡಿಕ್ಕಿ ಹೊಡೆದು ಉರುಳಿ ಬಿದ್ದಿದೆ. ತಾವರೆಕೆರೆ ಬಳಿ ಚಾಲಕನ ನಿಯಂತ್ರಣ ತಪ್ಪಿ ನದಿಗೆ ಉರುಳಿದೆ. ಘಟನೆಯಿಂದ ಚಾಲಕ ವೆಂಕಟೇಶ್, ನಿರ್ವಾಹಕಿ ಸೇರಿ ಮೂವರಿಗೆ ಗಂಭೀರ ಗಾಯಗಳಾಗಿದ್ದು, ಸ್ಥಿತಿ ಚಿಂತಾಜನಕವಾಗಿದೆ. ಅಲ್ಲದೆ ಹಲವರಿಗೆ ಸಣ್ಣಪುಟ್ಟ ಗಾಯಗಳಾಗಿವೆ.

    ಕುಟುಂಬವೊಂದು ಕೂಲಿ ಕೆಲಸಕ್ಕೆ ಯಾದಗಿರಿಯಿಂದ ಬಂದಿದ್ದು, ಇದರಲ್ಲಿದ್ದ ಗರ್ಭಿಣಿಯೊಬ್ಬರಿಗೆ ಗಾಯಗಳಾಗಿವೆ. ಘಟನೆ ನಡೆದ ತಕ್ಷಣ ಆಂಬುಲೆನ್ಸ್ ಬಾರದೆ ಕೆಲಕಾಲ ಗರ್ಭಿಣಿ ಪರದಾಡುವಂತಹ ಸ್ಥಿತಿ ಎದುರಾಯಿತು. ಇನ್ನು ಗಂಭೀರವಾಗಿ ಗಾಯಗೊಂಡವರನ್ನು ತಾವರೆಕೆರೆ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ತಾವರೆಕೆರೆ ಪೊಲೀಸ್ರು ಸ್ಥಳಕ್ಕೆ ಭೇಟಿ, ಪರಿಶೀಲನೆ ನಡೆಸಿದ್ದಾರೆ.

  • ದೇಶದ ಪ್ರತಿಷ್ಠಿತ ಶಾಲೆಯಲ್ಲೇ ಪ್ರಿನ್ಸಿಪಾಲ್‍ನಿಂದ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ!

    ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ಲೈಂಗಿಕ ದೌರ್ಜನ್ಯ ಪ್ರಕರಣಗಳು ಬೆಳಕಿಗೆ ಬರುತ್ತಿದ್ದಂತೆಯೇ ಇದೀಗ ಸಿಲಿಕಾನ್ ಸಿಟಿಯಲ್ಲಿ ಮತ್ತೊಂದು ನಡೆಯಬಾರದ ಘಟನೆ ನಡೆದು ಹೋಗಿದೆ. ದೇಶದ ನಂಬರ್ 1 ಶಾಲೆಯೊಂದರ ಕಾಮುಕ ಶಿಕ್ಷಕನಿಗೆ ಪೊಲೀಸರೇ ಬೆನ್ನುಲುಬಾಗಿ ನಿಂತು ರಕ್ಷಿಸಿರುವ ಕುರಿತು ದಾಖಲೆ ಸಮೇತ ಪಬ್ಲಿಕ್ ಟಿವಿಗೆ ಮಾಹಿತಿ ಸಿಕ್ಕಿದೆ.

    ಪಾಠ ಹೇಳಿಕೊಡುವ ಪ್ರಿನ್ಸಿಪಾಲ್ ಮಕ್ಕಳಿಗೆ ಲೈಂಗಿಕ ಕಿರುಕುಳ ಕೊಟ್ಟಿದ್ದು ಬೆಂಗಳೂರಿನ ಸದಾಶಿವನಗರದಲ್ಲಿರುವ ಕೇಂದ್ರೀಯ ವಿದ್ಯಾಲಯದಲ್ಲಿ ಅಂದ್ರೆ ನೀವು ನಂಬಲೇ ಬೇಕು. ಹೌದು. ಈ ಶಾಲೆಯ ಪ್ರಿನ್ಸಿಪಾಲ್ ಕುಮಾರ್ ಠಾಕೂರ್ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿರೋದು ಬಹಿರಂಗವಾಗಿದೆ. ಈತನ ರಕ್ಷಣೆಗೆ ಬೆನ್ನ ಹಿಂದೆ ನಿಂತಿದ್ದು ನಗರ ಪೊಲೀಸ್ ಆಯುಕ್ತ ಪ್ರವೀಣ್ ಸೂದ್!.

    ಏನಿದು ಪ್ರಕರಣ: ಜನವರಿ 14ರಂದು ಬೆಂಗಳೂರಿನ ನೋಡಲ್ ಚೈಲ್ಡ್ ಲೈನ್‍ಗೆ ಒಂದು ಫೋನ್ ಬಂತು. ಕೇಂದ್ರಿಯ ವಿದ್ಯಾಲಯದ ಶಿಕ್ಷಕರೇ ಮಾಡಿದ ಫೋನ್ ಅದಾಗಿತ್ತು. ಕಳೆದ ಮೂರು ವರ್ಷಗಳಿಂದ ಪ್ರಿನ್ಸಿಪಾಲ್ ಕುಮಾರ್ ಠಾಕೂರ್ ವಿದ್ಯಾರ್ಥಿಗಳಿಗೆ ಲೈಂಗಿಕವಾಗಿ ಕಿರುಕುಳ ಕೊಡ್ತಿದ್ದಾರೆ. ನಮ್ಮ ಕೈಯಲ್ಲಿ ಏನು ಮಾಡೋಕೆ ಆಗ್ತಿಲ್ಲ. ದಯವಿಟ್ಟು ಮಕ್ಕಳ ಜೀವ, ಜೀವನ ಎರಡನ್ನೂ ಉಳಿಸಿ ಅಂತ ಕರೆಯಲ್ಲಿ ತಿಳಿಸಿದ್ರು. ತಕ್ಷಣ ಚೈಲ್ಡ್‍ಲೈನ್ ಅಧಿಕಾರಿಗಳು ಸಂಬಂಧಪಟ್ಟ ಅಧಿಕಾರಿಗಳಿಗೆ ವಿಷಯ ತಿಳಿಸಿ ತನಿಖೆ ನಡೆಸಲು ಸೂಚಿಸಿದ್ರು.

    ಪ್ರಕರಣವನ್ನ ಸೂಕ್ಷ್ಮವಾಗಿ ಬೆನ್ನುಹತ್ತಿದ ಬೆಂಗಳೂರು ಪೊಲೀಸರು ದೂರು ಕೊಟ್ಟ ಶಿಕ್ಷಕರನ್ನ ವಿಚಾರಣೆ ನಡೆಸಿದ್ರು. ಲೈಂಗಿಕ ದೌರ್ಜನ್ಯಕ್ಕೆ ಒಳಗಾದ ಏಳು ವಿದ್ಯಾರ್ಥಿನಿಯರಿಂದ ಮಾಹಿತಿ ಪಡೆದ್ರು. ಆಗ ಲೈಂಗಿಕ ಕಿರುಕುಳ ನೀಡಿರೋದು ಸಾಬೀತಾಯ್ತು. ತಕ್ಷಣ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರಿಗೆ ವಿಷಯ ಮುಟ್ಟಿಸಿದ್ರು. ಆದ್ರೆ ಆ ಪೊಲೀಸ್ ಅಧಿಕಾರಿ ಟಿವಿಯವರಿಗೆ ಮಾಹಿತಿ ನೀಡದಂತೆ ಗೌಪ್ಯವಾಗಿ ಇಡಲು ಆದೇಶ ಮಾಡಿದ್ರು.

    ಹೌದು ನಂಬೋದಕ್ಕೆ ಕಷ್ಟವಾದ್ರೂ ಇದು ಸತ್ಯ. ಜನವರಿ 25ರಂದು ಕುಮಾರ್ ಠಾಕೂರ್ ಮೇಲೆ ಎಫ್‍ಐಆರ್ ಹಾಕಿ 6 ದಿನ ಆದ್ಮೇಲೆ ಅವ್ರನ್ನ ಅರೆಸ್ಟ್ ಮಾಡಿದ್ರು. ಆದ್ರೆ ಎರಡೇ ದಿನದಲ್ಲಿ ಅವರಿಗೆ ಬೇಲ್ ಸಿಗುವಂತೆಯೂ ಮಾಡಿ ಫೆಬ್ರವರಿ 1ರಂದು ಕುಮಾರ್ ಠಾಕೂರ್‍ಗೆ ಜಾಮೀನು ಕೂಡ ಸಿಕ್ಕಿದೆ. ಆದ್ರೆ ಇದೀಗ ಮಾಧ್ಯಮಗಳಿಗೆ ಈ ಮಾಹಿತಿ ಲಭಿಸಿದ್ದು, ಸುದ್ದಿ ಪ್ರಸಾರವಾಗುತ್ತಿದ್ದಂತೆಯೇ ಆರೋಪಿ ಹಾಗೂ ಪೊಲೀಸರ ಮೇಲೆ ಸರ್ಕಾರ ಕ್ರಮ ಕೈಗೊಳ್ಳುತ್ತಾ ಅಂತಾ ಕಾದುನೋಡಬೇಕು.

  • 5 ಸಾವಿರ ಸಾಲ ಹಿಂದಿರುಗಿಸದ್ದಕ್ಕೆ ಗೆಳಯನನ್ನೆ ಕೊಂದ!

    ಧಾರವಾಡ: ಕೇವಲ 5 ಸಾವಿರ ಸಾಲ ವಾಪಸ್ ಮಾಡಲಿಲ್ಲ ಎಂದು ತನ್ನ ಗೆಳೆಯನಿಗೆ ಇನ್ನಿಬ್ಬರು ಗೆಳೆಯರು ಸೇರಿ ದೊಣ್ಣೆಯಿಂದ ಹೊಡೆದು ಕೊಲೆ ಮಾಡಿರುವ ಘಟನೆ ಬುಧವಾರ ಮಧ್ಯರಾತ್ರಿ ಧಾರವಾಡ ತಾಲೂಕಿನ ನರೇಂದ್ರ ಗ್ರಾಮದಲ್ಲಿ ನಡೆದಿದೆ.

    ಬಸವರಾಜ್ ಹೊಸಕೇರಿ (28) ತನ್ನ ಗೆಳೆಯರಿಂದ ಕೊಲೆಯಾದ ವ್ಯಕ್ತಿ. ಅಲ್ತಾಫ್ ನದಾಫ್ ಮತ್ತು ಶಂಕರಪ್ಪ ಇಬ್ಬರೂ ಸೇರಿ ಬಸವರಾಜ್‍ನ ಕೊಲೆ ಮಾಡಿರುವ ಆರೋಪಿಗಳು. ಬುಧವಾರ ರಾತ್ರಿ ಬಸವರಾಜ್ ಹಾಗೂ ಅಲ್ತಾಫ್ ನದಾಫ್ ಮತ್ತು ಶಂಕ್ರಪ್ಪ ಸೇರಿ ಮದ್ಯವನ್ನ ಕುಡಿದಿದ್ದಾರೆ.

    ಆರೋಪಿ ಅಲ್ತಾಫ್‍

    ಬಾರ್‍ವೊಂದರಲ್ಲಿ ಮದ್ಯ ಕುಡಿದು ಬಸವರಾಜನ ಮನೆಗೆ ಬಂದು ಅಲ್ಲಿ ಕುಡಿದಿದ್ದಾರೆ. ಈ ವೇಳೆ ಅಲ್ತಾಫ್, ಗೆಳೆಯ ಬಸವರಾಜನಿಗೆ ತನ್ನ 5 ಸಾವಿರ ರೂಪಾಯಿ ಸಾಲ ವಾಪಸ್ ನೀಡಲು ಒತ್ತಾಯಿಸಿದ್ದಾನೆ. ಹಣದ ವಿಚಾರವಾಗಿ ಅಲ್ತಾಫ್ ಮತ್ತು ಬಸವರಾಜನ ನಡುವೆ ಮಾತಿಗೆ ಮಾತು ಬೆಳೆದು ಗಲಾಟೆ ಆರಂಭವಾಗುತ್ತಿದ್ದಂತೆಯೇ ಶಂಕ್ರಪ್ಪ ಬಸವರಾಜನ ಕೈಗಳನ್ನ ಹಿಡಿದುಕೊಂಡಿದ್ದಾನೆ. ಈ ವೇಳೆ ಅಲ್ತಾಫ್ ದೊಣ್ಣೆಯಿಂದ ಹೊಡೆದು ಬಸವರಾಜನನ್ನು ಕೊಲೆ ಮಾಡಿದ್ದಾನೆ.

    ಬಸವರಾಜ್ ಹೊಸಕೇರಿ

    ಧಾರವಾಡ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳಾದ ಅಲ್ತಾಫ್‍ ಮತ್ತು ಶಂಕ್ರಪ್ಪನನ್ನು ಪೊಲೀಸರು ಬಂಧಿಸಿದ್ದಾರೆ.

  • ಒಂದೇ ಕಲ್ಲಿನಲ್ಲಿ ಎರಡು ಪ್ರಕರಣಗಳನ್ನು ಹೊಡೆದುರುಳಿಸಿದ ಉಡುಪಿ ಪೊಲೀಸ್

    ಉಡುಪಿ: ಒಂದೇ ರಾತ್ರಿ ನಡೆದ ಎರಡು ಪ್ರಕರಣಗಳನ್ನು ಒಂದೇ ಕಲ್ಲಿನಲ್ಲಿ ಪೊಲೀಸರು ಹೊಡೆದು ಉರುಳಿಸಿದ್ದಾರೆ. ಕೋಮು ಸೂಕ್ಷ್ಮ ಪ್ರಕರಣವನ್ನು ಎರಡು ದಿನಗಳ ಒಳಗೆ ಭೇದಿಸಿ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಉಡುಪಿಯ ಹನೀಫ್ ಮರ್ಡರ್ ಮತ್ತು ಆದಿ ಉಡುಪಿ ಮಸೀದಿ ಕಲ್ಲೆಸೆದ ಪ್ರಕರಣಗಳಿಗೆ ತಾರ್ಕಿಕ ಅಂತ್ಯ ಸಿಕ್ಕಿದೆ.

    ಜನವರಿ 29 ರಂದು ಆದಿ ಉಡುಪಿಯ ನೂರಾಲ್ ಮಸೀದಿಗೆ ರಾತ್ರಿ 12 ಗಂಟೆಯ ನಂತರ ಕಲ್ಲು ಬಿದ್ದಿತ್ತು. ದುಷ್ಕರ್ಮಿಯೊಬ್ಬ ಮಸೀದಿಗೆ ಕಲ್ಲೆಸೆದು ಪರಾರಿಯಾಗಿದ್ದ. ಇದಾಗಿ ಮುಕ್ಕಾಲು ಗಂಟೆಯೊಳಗೆ ಕರಾವಳಿ ಬೈಪಾಸಿನಲ್ಲಿ ಒಂದು ಕೊಲೆಯಾಗಿತ್ತು. ಮತ್ತೊಂದು ಕೊಲೆಯತ್ನ ನಡೆದಿತ್ತು. ಎರಡೂ ಘಟನೆಗಳು ನಡೆದದ್ದು ಜನವರಿ 29ರಂದು. ಎರಡೂ ಪ್ರಕರಣದಲ್ಲಿ ಆರೋಪಿ ಪರಾರಿಯಾಗಿದ್ದ.

    ಆರೋಪಿ ಅಂಕಿತ್ ಕುಂಪಲ

    ಹೈವೇ ಗಲಾಟೆಯಲ್ಲಿ ಆಟೋ ಚಾಲಕ ಹನೀಫ್ ಸ್ಥಳದಲ್ಲೇ ಸಾವನ್ನಪ್ಪಿದ್ದ. ಎರಡೂ ಘಟನೆಗಳು ಕೋಮು ಸೂಕ್ಷ್ಮವಾಗಿದ್ದರಿಂದ ಪೊಲೀಸರು ರಾತ್ರೋ ರಾತ್ರಿ ಕಾರ್ಯಪ್ರವೃತ್ತರಾಗಿದ್ದರು. ಘಟನೆ ನಡೆದು 48 ಗಂಟೆಗಳ ಒಳಗೆ ಎರಡೂ ಪ್ರಕರಣದ ಆರೋಪಿಯನ್ನು ಬಂಧಿಸಿದ್ದಾರೆ. ಆರೋಪಿ ಅಂಕಿತ್ ಕುಂಪಲ ಎಂಬತನನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಮೊದಲು ಮಸೀದಿಗೆ ಕಲ್ಲೆಸೆದು ನಂತರ ಆರೋ ಚಾಲಕನ ಜೊತೆ ಜಗಳವಾಡಿ ತನ್ನ ಜೊತೆಯಲ್ಲಿದ್ದ ಚಾಕುವಿನಿಂದ ಇರಿದಿರುವುದನ್ನು ಒಪ್ಪಿಕೊಂಡಿದ್ದಾನೆ. ಈ ಬಗ್ಗೆ ಉಡುಪಿಯಲ್ಲಿ ಎಎಸ್‍ಪಿ ವಿಷ್ಣುವರ್ಧನ್ ಪ್ರೆಸ್ ಮೀಟ್ ಮಾಡಿದರು.

    ಮೊದಲು ಮಸೀದಿಗೆ ಕಲ್ಲೆಸೆದು ಅಂಕಿತ್ ತನ್ನ ಸ್ಟಾರ್ ಸಿಟಿ ಬೈಕ್‍ನಲ್ಲಿ ಪರಾರಿಯಾಗಿದ್ದ. ಅಲ್ಲಿಂದ ಹೈವೇಗೆ ಬಂದಾಗ ಅಲ್ಲಿ ಆಟೋ ವನ್ ವೇಯಲ್ಲಿ ಬಂದಿದೆ. ಬೈಕ್ ಅಡ್ಡಗಟ್ಟಿ ಚಾಲಕನ ಜೊತೆ ಜಗಳವಾಗಿದೆ. ಮಾತಿಗೆ ಮಾತು ಬೆಳೆದು ಅಂಕಿತ್ ಹನೀಫ್‍ಗೆ ಇರಿದಿದ್ದ. ಜಗಳ ಬಿಡಿಸಲು ಬಂದ ಹನೀಫ್ ಸಂಬಂಧಿ ಶಬ್ಬೀರ್‍ಗೂ ಚೂರಿ ಅಂಕಿತ್ ಇರಿದು ಪರಾರಿಯಾಗಿದ್ದ.

    ಆರೋಪಿ ಅಂಕಿತ್ ಕುಂಪಲ

    ಎರಡೂ ಪ್ರಕರಣಗಳಿಗೆ ತಲಾ ನಾಲ್ಕು ತಂಡಗಳನ್ನು ಪೊಲೀಸರು ರಚನೆ ಮಾಡಿದ್ದರು. ಪ್ರಕರಣದ ಜಾಡು ಹಿಡಿದ ಪೊಲೀಸರಿಗೆ ಮಾಹಿತಿಗಳು ಸಿಗಲಾರಂಬಿಸಿತು. ಅಂಕಿತ್ ಮೇಲೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಾಲ್ಕು ಕೇಸುಗಳಿವೆ. ಉಳ್ಳಾಲದಲ್ಲಿ ಮಸೀದಿಗೆ ಕಲ್ಲೆಸೆತ, ಗುಂಪು ಘರ್ಷಣೆಯಲ್ಲಿ ಅಂಕಿತ್ ಫೇಮಸ್ ಆಗಿದ್ದನಂತೆ. ಗುಂಪು ಗಲಾಟೆಗಳು ಜಾಸ್ತಿಯಾದಾಗ ತನ್ನ ಮನೆಯಿಂದ ದೊಡ್ಡಮ್ಮನ ಉಡುಪಿಯ ಮನೆಗೆ ಬಂದಿದ್ದ ಎನ್ನಲಾಗಿದೆ. ಇಲ್ಲೂ ತನ್ನ ಕೂಟವನ್ನು ಬೆಳೆಸಿಕೊಂಡಿದ್ದ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

    ಮಸೀದಿಗೆ ಕಲ್ಲೆಸೆದ ಪ್ರಕರಣವನ್ನು ಬೆನ್ನಟ್ಟಿದ ಪೊಲೀಸರಿಗೆ ಮರ್ಡರ್ ಆರೋಪಿಯೂ ಸಿಕ್ಕಿಬಿದ್ದ. ಈ ಮೂಲಕ ಪ್ರಕರಣ ಕೋಮುಸೂಕ್ಷ್ಮತೆಯತ್ತ ವಾಲುವ ಮೊದಲೇ ಆರೋಪಿಯನ್ನು ಬಂಧಿಸಲಾಗಿದೆ. ಆರೋಪಿಯ ಪತ್ತೆಯ ಜವಾಬ್ದಾರಿಯನ್ನು ಉಡುಪಿ ಡಿವೈಎಸ್‍ಪಿ ಕುಮಾರಸ್ವಾಮಿ ಮತ್ತು ಟೀಂ ಹೊತ್ತಿತ್ತು. ಉಡುಪಿ ನಗರ, ಬ್ರಹ್ಮಾವರ ಡಿಸಿಐಬಿ, ಮಣಿಪಾಲ ಪೊಲೀಸರು ಸಾಥ್ ಕೊಟ್ಟಿದ್ದಾಗಿ ಎಎಸ್‍ಪಿ ವಿಷ್ಣುವರ್ಧನ್ ಹೇಳಿದರು.

  • 5000 ರೂ.ಗೆ ಓಕೆ ಆಗಿತ್ತು, 10 ಸಾವಿರ ಕೇಳಿದ್ದಕ್ಕೆ ಕೊಂದೆ ಬಿಟ್ಟ!

    ಬೆಂಗಳೂರು: ನಗರದ ಕೊತ್ತನೂರಿನ ತಿಮ್ಮೇಗೌಡ ಲೇಔಟ್‍ನಲ್ಲಿ ವಿದೇಶಿ ಮಹಿಳೆಯನ್ನು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಬುಧವಾರ ಮಧ್ಯರಾತ್ರಿ ಗಂಟೆಗೆ ನಡೆದಿದೆ.

    ಹಿಮಾಚಲ ಪ್ರದೇಶದ ಮೂಲದ ಇಶಾನ್ ಕೊಲೆಗೈದ ಆರೋಪಿಯಾಗಿದ್ದು, ನಕಾಯಕಿ ಪ್ಲೋರೆನ್ಸ್ (25) ಕೊಲೆಯಾದ ಉಗಾಂಡ ಮೂಲದ ಮಹಿಳೆ.

    ಏನಿದು ಪ್ರಕರಣ?: ನಕಾಯಕಿ ವಿದ್ಯಾಭ್ಯಾಸಕ್ಕಾಗಿ ಬೆಂಗಳೂರಿಗೆ ಬಂದಿದ್ದಳು. ಪ್ಲೋರೆನ್ಸ್ ನಗರದ ತಿಮ್ಮೇಗೌಡ ಲೇಔಟ್‍ನಲ್ಲಿ ವನಜಮ್ಮ ಎಂಬುವರ ಬಾಡಿಗೆ ಮನೆಯಲ್ಲಿ ವಾಸವಾಗಿದ್ದಳು. ಇಶಾನ್ ಕೂಡ ಉದ್ಯೋಗ ಅರಸಿ ಬೆಂಗಳೂರಿಗೆ ಬಂದಿದ್ದ.

    ಇಶಾನ್ ಬುಧವಾರ ರಾತ್ರಿ ನಕಾಯಕಿ ಪ್ಲೋರೆನ್ಸ್‍ಳನ್ನು 5000 ರೂ. ಒಪ್ಪಂದ ಮಾಡಿಕೊಂಡು ಎಂಜಿ ರೋಡ್‍ನಿಂದ ಪಿಕ್ ಮಾಡಿದ್ದಾನೆ. ಒಪ್ಪಂದಂತೆ ಇಬ್ರೂ ಪ್ಲೋರೆನ್ಸ್ ವಾಸವಿದ್ದ ಮನೆಗೆ ಬಂದಿದ್ದಾರೆ. ಈ ವೇಳೆಯಲ್ಲಿ ನಕಾಯಕಿ 10 ಸಾವಿರ ನೀಡುವಂತೆ ಬೇಡಿಕೆ ಇಟ್ಟಿದ್ದಾಳೆ. ಇಶಾನ್ ಹಣ ಕೊಡದೇ ಇದ್ದಾಗ ಚಾಕುವಿನಿಂದ ಅವನ ಹಲ್ಲೆ ನಡೆಸಿದ್ದಾಳೆ. ಒಬ್ಬರ ಮೇಲೆ ಒಬ್ಬರು ಹಲ್ಲೆಗೆ ಪ್ರತಿ ಹಲ್ಲೆ ನಡೆಸುವಾಗ ಗಾಬರಿಗೊಂಡ ಇಶಾನ್ ಅದೇ ಚಾಕುವಿನಿಂದ ಪ್ಲೋರೆನ್ಸ್ ಳನ್ನು ಕೊಲೆ ಮಾಡಿದ್ದಾನೆ.

    ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಇಶಾನ್‍ನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಸ್ಥಳಕ್ಕೆ ಬೆರಳಚ್ಚು ತಂತ್ರಜ್ಞರು ಮತ್ತು ಶ್ವಾನದಳ ಭೇಟಿ ನೀಡಿದ್ದು ಪರಿಶೀಲನೆ ನಡೆಸಿದ್ದಾರೆ. ಕೊತ್ತನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಕೊಲೆ ಪ್ರಕರಣ ಹಿನ್ನೆಲೆಯಲ್ಲಿ ತನಿಖೆಗೆ ತೆರಳಿದ್ದ ಇನ್ಸ್ ಪೆಕ್ಟರ್ ಅಂಜನ್ ಕುಮಾರ್ ಮೇಲೆ ಉಗಾಂಡ ಮೂಲದ ಜನರು ಹಲ್ಲೆ ನಡೆಸಿದ್ದಾರೆಂದು ತಿಳಿದುಬಂದಿದೆ.

  • ಪೊಲೀಸ್ ಇನ್ಸ್ ಪೆಕ್ಟರ್‍ಗೆ ನ್ಯಾಯಾಂಗ ಬಂಧನ: ಧಾರವಾಡ ಸಂಚಾರಿ ಹೈಕೋರ್ಟ್ ಪೀಠ ಆದೇಶ

    – ಕೋರ್ಟ್ ನಿಂದ ಜಾಮೀನು ಮಂಜೂರು

    ಬಳ್ಳಾರಿ: ಕಳ್ಳರನ್ನು ಜೈಲಿಗೆ ಕಳುಹಿಸೋದು ಪೊಲೀಸರ ಕೆಲಸ. ಆದ್ರೆ ಪೊಲೀಸ್ ಇನ್ಸ್ ಪೆಕ್ಟರ್ ಒಬ್ಬರನ್ನು ಧಾರವಾಡ ಸಂಚಾರಿ ಹೈಕೋರ್ಟ್ ಪೀಠ ನ್ಯಾಯಾಂಗ ವಶಕ್ಕೆ ನೀಡಿದ ಘಟನೆ ನಡೆದಿದೆ.

    ಬಳ್ಳಾರಿಯ ಕೌಲ್‍ಬಜಾರ ಠಾಣೆಯ ಪೊಲೀಸ್ ಇನ್ಸ್ ಪೆಕ್ಟರ್ ಶಫಿವುಲ್ಲಾ ಆರೋಪಿಯೊಬ್ಬರಿಗೆ ವಾರೆಂಟ್ ಜಾರಿ ಮಾಡದ ಪರಿಣಾಮ ನ್ಯಾಯಾಲಯ ಪೊಲೀಸ್ ಇನ್ಸ್ ಪೆಕ್ಟರ್ ಅವರನ್ನೆ ನ್ಯಾಯಾಂಗ ವಶಕ್ಕೆ ನೀಡಿ ಆದೇಶಿಸಿತ್ತು.

    ಏನಿದು ಪ್ರಕರಣ?:
    ನಗರದ ಕೌಲ್‍ಬಜಾರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ 36/2010 ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯ ಪ್ರಸಾದ್ ಎನ್ನುವವರಿಗೆ ವಾರೆಂಟ್ ಜಾರಿ ಮಾಡಿತ್ತು. ಅಲ್ಲದೇ ಪ್ರಕರಣ ಆರೋಪಿಯಾಗಿರುವ ದಾದಾಪೀರ್ ಎಂಬುವರನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸುವಂತೆ ಆದೇಶ ನೀಡಿತ್ತು. ಆದರೆ ಪೊಲೀಸ್ ಇನ್ಸ್ ಪೆಕ್ಟರ್ ಶಫಿವುಲ್ಲಾ ಕಳೆದ ತಿಂಗಳು ಕಾನ್ ಸ್ಟೇಬಲ್ ಒಬ್ಬರನ್ನು ಕಳಹಿಸಿ ನ್ಯಾಯಾಲಯದ ಸೂಚನೆಯನ್ನು ನಿರ್ಲಕ್ಷಿಸಿದ್ದರು.

    ಬುಧವಾರ ನ್ಯಾಯಾಲಯದ ಮುಂದೆ ಶಫಿವುಲ್ಲಾ ಹಾಜರಾಗಿದ್ದರು. ಈ ವೇಳೆಯಲ್ಲಿ ಆರೋಪಿಗೆ ವಾರೆಂಟ್ ಜಾರಿ ಮಾಡದ ಪರಿಣಾಮ ಶಫಿವುಲ್ಲಾಗೆ ಛೀಮಾರಿ ಹಾಕಿದ ನ್ಯಾಯಾಧೀಶರು ಪಿಐಗೆ ನ್ಯಾಯಾಂಗ ಬಂಧನ ವಿಧಿಸುವಂತೆ ಆದೇಶ ಮಾಡಿದೆ. ಅಲ್ಲದೇ ಎಸ್‍ಪಿ ಆರ್.ಚೇತನ್ ಅವರಿಗೂ ಸಹ ನೋಟಿಸ್ ಜಾರಿ ಮಾಡಿ ವಿವರಣೆ ಕೋರಿದೆ.

    ನ್ಯಾಯಾಂಗ ವಶಕ್ಕೆ ನೀಡುತ್ತಿದಂತೆ ಶಫಿವುಲ್ಲಾ ಅನಾರೋಗ್ಯದ ಕಾರಣ ನೀಡಿ ಆಸ್ಪತ್ರೆಗೆ ದಾಖಲಾಗಿ, ಜಾಮೀನು ಅರ್ಜಿ ಸಲ್ಲಿಕೆ ಮಾಡಿದ್ದರು. ಇಂದು ಕೋರ್ಟ್ ಷರತ್ತು ಬದ್ದ ಜಾಮೀನು ನೀಡಿದೆ.

     

  • ರಕ್ತದ ಮಡುವಿನಲ್ಲಿ ಬಿದ್ದು ಒದ್ದಾಡಿದ್ರೂ ಯುವಕನಿಗೆ ಯಾರೂ ಸಹಾಯ ಮಾಡಲಿಲ್ಲ!

    ಕೊಪ್ಪಳ: ಯುವಕನ ಮೇಲೆ ಬಸ್ ಹರಿದ ನಂತ್ರ ಗಾಯಗೊಂಡ ಯುವಕ ಸಹಾಯಕ್ಕೆ ಅಂಗಲಾಚಿದ್ರೂ ಯಾವ ಸ್ಥಳೀಯರು ಸಹಾಯ ಮಾಡದ ಅಮಾನವೀಯ ಘಟನೆ ಕೊಪ್ಪಳ ನಗರದ ಪಬ್ಲಿಕ್ ಗ್ರೌಂಡ್ ಬಳಿ ಇಂದು ಬೆಳಗ್ಗೆ 09:30ರ ವೇಳೆಯಲ್ಲಿ ನಡೆದಿದೆ.

    ಅನ್ವರ್ ಶಾಬುದ್ದೀನ್ (17) ಅಪಘಾತಕ್ಕೊಳಗಾದ ಯುವಕ. ಅನ್ವರ್ ಮೇಲೆ ಹೊಸಪೇಟೆದಿಂದ ಹುಬ್ಬಳ್ಳಿಗೆ ಹೋಗುತ್ತಿದ್ದ ಸರ್ಕಾರಿ ಬಸ್ ಹಾಯ್ದು ಹೋಗಿತ್ತು. ಅನ್ವರ್ ರಕ್ತದ ಮಡುವಿನಲ್ಲಿ ಒದ್ದಾಡಿದರೂ ಯಾರೊಬ್ಬರೂ ಅವನ ಸಹಾಯಕ್ಕೆ ಮುಂದಾಗದೇ ಜನರು ಫೋಟೋ ತೆಗೆಯುತ್ತಾ ನಿಂತಿದ್ದರು.

    ಕೊನೆಗೆ ಅನ್ವರ್‍ನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿದತ್ತಾದ್ರೂ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾನೆ. ಕೊಪ್ಪಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಬಸ್ ಚಾಲಕನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.

    https://youtu.be/6l37Sc58xw0

     

  • ಅವ್ರು ಮಾಡಿದ ತಪ್ಪಿಗೆ ನನ್ನ ಹೆಸ್ರು ಹೇಳಿ ಸರ್ ಕೈಲಿ ಹೊಡೆಸ್ತಾರೆ: ಕ್ಲಾಸ್‍ಮೇಟ್ಸ್ ಹೆಸರು ಬರೆದಿಟ್ಟು ಬಾಲಕ ಆತ್ಮಹತ್ಯೆ

    ಬೆಂಗಳೂರು: 14 ವರ್ಷದ ಬಾಲಕನೊಬ್ಬ ಡೆತ್‍ನೋಟ್‍ನಲ್ಲಿ ತನ್ನ ಸಹಪಠಿಗಳ ಹೆಸರು ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿರೋ ಘಟನೆ ನಗರದ ಹೊರವಲಯ ನೆಲಮಂಗಲದ ದಾಸನಪುರ ಗ್ರಾಮದಲ್ಲಿ ನಡೆದಿದೆ.

    ವಿಕಾಸ್ ಆತ್ಮಹತ್ಯೆಗೆ ಶರಣಾದ ಬಾಲಕ. ವಿಕಾಸ್ ಆಚಾರ್ಯ ಗುರುಪರಂಪರ ಶಾಲೆಯಲ್ಲಿ 7ನೆ ತರಗತಿ ವ್ಯಾಸಂಗ ಮಾಡುತ್ತಿದ್ದ. ಅವರು ಮಾಡಿದ ತಪ್ಪಿಗೆ ನನ್ನ ಹೆಸರು ಹೇಳಿ ಶಿಕ್ಷಕರಿಂದ ಹೊಡೆಸುತ್ತಾರೆ ಎಂದು ವಿಕಾಸ್ ಡೆತ್‍ನೋಟ್‍ನಲ್ಲಿ ತನ್ನ ಸಹಪಾಠಿಗಳ ಹೆಸರು ಬರೆದಿಟ್ಟು ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

    ಡೆತ್‍ನೋಟ್‍ನಲ್ಲಿ ಏನಿದೆ: ಅಮ್ಮ..ನೀವು ಎಲ್ಲರೂ ಹೋಗು ಹೋಗು ಅಂತಾ ಹೇಳುತ್ತಿದ್ದೀರಿ. ಡೈರೆಕ್ಟಾಗಿ ಮೇಲಕ್ಕೆ ಹೋಗಿದ್ದಿನಿ. ನಿಮಗೆ ಸಮಧಾನ ಆಯಿತು. ನಮ್ಮ ಸ್ಕೂಲ್‍ನಲ್ಲಿ ನಾನು ಏನು ಮಾಡದಿದ್ರು ಅವರು ಮಾಡಿದ ತಪ್ಪಿಗೆ ನನ್ನ ಹೆಸರು ಸೇರಿಸಿ ಸರ್ ಕೈಯಲ್ಲಿ ಹೊಡೆಸ್ತಾರೆ. ನನ್ನ ಸಾವಿಗೆ ಹರಿಣಿ, ಚೇತನ್ ಜಿ.ಟಿ, ಶಶಾಂಕ್, ಭಾರತಿ ಸಿ., ಇವರೆಲ್ಲ ಕಾರಣ
    ಇಂತಿ ನಿಮ್ಮ,
    ವಿಕಾಸ್

    ಘಟನೆಯ ಸಂಬಂಧ ಮಾದನಾಯಕನಹಳ್ಳಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.